Puneeth Parva | ಅಪ್ಪು ಸ್ಮರಣಾರ್ಥ ರಾಜ್ಯದ 25 ಜಿಲ್ಲೆಗಳಿಗೆ ಆಂಬ್ಯುಲೆನ್ಸ್‌, ಯಶ್‌ ಮಹತ್ವದ ಘೋಷಣೆ - Vistara News

ಪುನೀತ ಪರ್ವ

Puneeth Parva | ಅಪ್ಪು ಸ್ಮರಣಾರ್ಥ ರಾಜ್ಯದ 25 ಜಿಲ್ಲೆಗಳಿಗೆ ಆಂಬ್ಯುಲೆನ್ಸ್‌, ಯಶ್‌ ಮಹತ್ವದ ಘೋಷಣೆ

ಪುನೀತ ಪರ್ವ (Puneeth Parva) ಕಾರ್ಯಕ್ರಮದಲ್ಲಿ ಮಾತನಾಡಿದ ಯಶ್‌, ಅಪ್ಪು ಅವರ ಸ್ಮರಣಾರ್ಥ ರಾಜ್ಯದ ಜಿಲ್ಲೆಗಳಿಗೆ ತಲಾ ಒಂದರಂತೆ ನೀಡಲು 25 ಆಂಬ್ಯುಲೆನ್ಸ್‌ಗಳನ್ನು ನೀಡುತ್ತೇನೆ ಎಂದು ಘೋಷಿಸಿದ್ದಾರೆ.

VISTARANEWS.COM


on

Surya Yash
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ರಾಕಿಂಗ್‌ ಸ್ಟಾರ್‌ ಯಶ್‌ ಅವರು ಪುನೀತ್‌ ರಾಜಕುಮಾರ್‌ (Puneeth Parva) ಅಭಿಮಾನಿ ಎಂಬುದು ಎಲ್ಲರಿಗೂ ಗೊತ್ತು. ಹಾಗೆಯೇ, ಪುನೀತ್‌ ಅವರಂತೆ ಯಶ್‌ ಸಹ ಹತ್ತಾರು ಸಮಾಜ ಸೇವೆಯಲ್ಲಿ ತೊಡಗಿದ್ದಾರೆ. ಈಗ ಪುನೀತ್‌ ರಾಜಕುಮಾರ್‌ ಅವರ ಸ್ಮರಣಾರ್ಥ ರಾಜ್ಯದ 25 ಜಿಲ್ಲೆಗಳಿಗೆ ತಲಾ ಒಂದು ಆಂಬ್ಯುಲೆನ್ಸ್‌ ನೀಡುತ್ತೇನೆ ಎಂದು ಯಶ್‌ ಘೋಷಿಸಿದ್ದಾರೆ.

ಬಹುಭಾಷಾ ನಟ ಪ್ರಕಾಶ್‌ ರೈ ಅವರು ಪುನೀತ್‌ ರಾಜಕುಮಾರ್‌ ಅವರ ಸ್ಮರಣಾರ್ಥ ರಾಜ್ಯದ ಪ್ರತಿಯೊಂದು ಜಿಲ್ಲೆಗಳಿಗೂ ಒಂದು ಆಂಬ್ಯುಲೆನ್ಸ್‌ ನೀಡುತ್ತಿದ್ದಾರೆ. ಅವರಿಗೆ ಶಿವರಾಜ್‌ ಕುಮಾರ್‌, ತಮಿಳು ನಟ ಸೂರ್ಯ, ತೆಲುಗು ನಟ ಚಿರಂಜೀವಿ ಅವರು ತಲಾ ಒಂದು ಆಂಬ್ಯುಲೆನ್ಸ್‌ ನೀಡುತ್ತಿದ್ದಾರೆ. ಇದನ್ನು ಪ್ರಕಾಶ್‌ ರೈ ಅವರು ಪುನೀತ ಪರ್ವದಲ್ಲಿ ಹೇಳಿದ್ದರು.

ಇದೇ ವೇಳೆ ಮಾತನಾಡಿದ ಯಶ್‌, “ಯಾರೂ ತಪ್ಪಾಗಿ ಭಾವಿಸಬಾರದು. ಪುನೀತ್‌ ರಾಜಕುಮಾರ್‌ ಅವರ ಹೆಸರಿನಲ್ಲಿ ರಾಜ್ಯಾದ್ಯಂತ ಉಳಿದ ಜಿಲ್ಲೆಗಳಿಗೆ ಎಷ್ಟು ಆಂಬ್ಯುಲೆನ್ಸ್‌ ಕೊಡಬೇಕೋ, ಅವುಗಳನ್ನು ನನ್ನ ಯಶೋಮಾರ್ಗದಿಂದ ನೀಡುತ್ತೇನೆ. ಇದನ್ನು ಯಾರೂ ಅನ್ಯಥಾ ಭಾವಿಸಬಾರದು” ಎಂದರು. ಇದೇ ವೇಳೆ, ಕರ್ನಾಟಕದಾದ್ಯಂತ ನೀಡಲು ಇನ್ನೂ 25 ಆಂಬ್ಯುಲೆನ್ಸ್‌ ಬೇಕು ಅಂದಾಗ, ” ಅಷ್ಟನ್ನೂ ನಾವೇ ಕೊಡುತ್ತೇವೆ” ಎಂದು ಯಶ್‌ ಘೋಷಿಸಿದರು.

ಇದನ್ನೂ ಓದಿ | Puneeth Parva | ಗಂಧದಗುಡಿ ಎಲ್ಲ ರೆಕಾರ್ಡ್‌ ಬ್ರೇಕ್‌ ಮಾಡಲಿ, ಅಪ್ಪು ಚಿರಸ್ಥಾಯಿಯಾಗಲಿ ಎಂದು ಆಶಿಸಿದ ಯಶ್‌

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Puneeth Rajkumar: ಪೋಸ್ಟರ್‌ಗೆ ಸೀಮಿತವಾಯಿತು ಸಿಎಂ ಬಸವರಾಜ ಬೊಮ್ಮಾಯಿ ಘೋಷಿಸಿದ ಸ್ಫೂರ್ತಿ ದಿನ

ಪುನೀತ್‌ ರಾಜಕುಮಾರ್‌ (Puneeth Rajkumar) ತೆರೆಯ ಮೇಲೆ ಸಾಮಾಜಿಕ ಸಂದೇಶಗಳನ್ನು ನೀಡುವುದರ ಜತೆಗೆ ನಿಜ ಜೀವನದಲ್ಲೂ ಸೇವೆ ಮಾಡುತ್ತಿದ್ದರು.

VISTARANEWS.COM


on

puneeth rajkumar inspiration day
Koo

ಬೆಂಗಳೂರು: ಚಲನಚಿತ್ರಗಳಲ್ಲಿ ಸಾಮಾಜಿಕ ಸಂದೇಶಗಳ ಮೂಲಕ ಹಾಗೂ ನಿಜ ಜೀವನದಲ್ಲಿ ಸಾಮಾಜಿಕ ಕಾರ್ಯಗಳ ಮೂಲಕ ಯುವಕರಿಗೆ ಸ್ಫೂರ್ತಿಯಾಗಿದ್ದವರು ಕರ್ನಾಟಕ ರತ್ನ ಪುನೀತ್‌ ರಾಜಕುಮಾರ್‌(Puneeth Rajkumar). ಅವರ ಜನ್ಮದಿನವನ್ನು ಸ್ಫೂರ್ತಿ ದಿನವನ್ನಾಗಿ ಆಚರಿಸಲಾಗುತ್ತದೆ ಎಂದು ಕಳೆದ ವರ್ಷ ಸಿಎಂ ಬಸವರಾಜ ಬೊಮ್ಮಾಯಿ ಘೋಷಣೆ ಮಾಡಿದ್ದರು.

ಪುನೀತ್‌ ರಾಜಕುಮಾರ್‌ ಅವರಿಗೆ ಕರ್ನಾಟಕ ರತ್ನ ಪ್ರದಾನ ಮಾಡಿ ಗೌರವಿಸಲಾಯಿತು. ಅವರ ಕಾರ್ಯಗಳು ಯುವಕರಿಗೆ ಸ್ಫೂರ್ತಿ ಎಂದು ತಿಳಿಸಿದ್ದ ಸಿಎಂ ಬಸವರಾಜ ಬೊಮ್ಮಾಯಿ, ಸ್ಫೂರ್ತಿ ದಿನವನ್ನಾಗಿ ಆಚರಿಸಬೇಕು ಎಂದು ತಿಳಿಸಿದ್ದರು.

ಇದೀಗ ಚುನಾವಣೆಗಳು ಹತ್ತಿರವಾಗಿದ್ದು, ಯಾವುದೇ ಕಾರ್ಯಕ್ರಮಗಳನ್ನು ನಡೆಸಲು ಸರ್ಕಾರದಲ್ಲಿ ಆಸಕ್ತಿ ಉಳಿದಿಲ್ಲ. ಇನ್ನು ಕೇವಲ ಏಳೆಂಟು ದಿನದಲ್ಲೆ ಚುನಾವಣೆ ನೀತಿ ಸಂಹಿತೆ ಘೋಷಣೆ ಆಗಲಿದೆ. ನಂತರ ಟಿಕೆಟ್‌ ಘೊಷಣೆ ಪ್ರಕ್ರಿಯೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಕಾರ್ಯಕ್ರಮಗಳನ್ನು ನಡೆಸುವಂತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಗಾಗಲಿ, ಯುವಜನ ಸಬಲೀಕರಣ ಇಲಾಖೆಗಾಗಲಿ ಸಿಎಂ ಸೂಚನೆ ನೀಡಿಲ್ಲ.

ಸ್ವತಃ ಸಿಎಂ ಬಸವರಾಜ ಬೊಮ್ಮಾಯಿ ಶುಕ್ರವಾರ ಶಿವಮೊಗ್ಗ ಪ್ರವಾಸದಲ್ಲಿದ್ದಾರೆ. ಅವರ ಸಾಮಾಜಿಕ ಜಾಲತಾಣದಲ್ಲಿ ಪುನೀತ್‌ ರಾಜಕುಮಾರ್‌ ಜನ್ಮದಿನದಂದು ಶುಭಾಶಯ ಕೋರಿದ್ದಾರೆ. “ಅತಿ ಚಿಕ್ಕ ವಯಸ್ಸಿನಲ್ಲಿಯೇ ಅಗಾಧವಾದ ಸಾಧನೆಗೈದು, ಎಲ್ಲರಿಗೂ ಮಾದರಿಯಾಗಿರುವ ಪ್ರೀತಿಯ ಅಪ್ಪು, ಕರ್ನಾಟಕ ರತ್ನ ಪುನೀತ್ ರಾಜಕುಮಾರ್ ಅವರ ಜನ್ಮಸ್ಮರಣೆಯಂದು ಗೌರವಪೂರ್ವಕ ನಮನಗಳು. ಅಪ್ಪು ಸದಾ ಅಜರಾಮರ” ಎಂದಿದ್ದಾರೆ.

ಶುಭಾಶಯ ಕೋರುವ ಪೋಸ್ಟರ್‌ನಲ್ಲಿ ಸ್ಫೂರ್ತಿ ದಿನ ಎಂದು ನಮೂದಿಸಲಾಗಿದೆ. ಅದನ್ನು ಹೊರತುಪಡಿಸಿ ಸ್ಫೂರ್ತಿ ದಿನಕ್ಕೆ ಯಾವುದೇ ಕಾರ್ಯಕ್ರಮಗಳು ನಡೆದಿಲ್ಲ.

ಇದನ್ನೂ ಓದಿ: Puneeth Rajkumar: ಅಪ್ಪು ಸಮಾಧಿ ದರ್ಶನಕ್ಕೆ ಬಂದ 80ರ ವೃದ್ಧ, 19 ದಿನಗಳ ನವಜಾತ ಶಿಶು ಜತೆ ಬಂದ ತಾಯಿ!

Continue Reading

ಕರ್ನಾಟಕ

Gandhada gudi | ಶಿವಮೊಗ್ಗದಲ್ಲಿ ಗಂಧದ ಗುಡಿ ವೀಕ್ಷಿಸಿದ ಬಿಎಸ್‌ವೈ: ಮಗುವಿಗೆ ಶೇಕ್‌ಹ್ಯಾಂಡ್‌, ಸೆಲ್ಫಿಗೆ ಮುತ್ತಿಗೆ!

ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರು ಗುರುವಾರ ಶಿವಮೊಗ್ಗದಲ್ಲಿ ಗಂಧದ ಗುಡಿ ಸಿನಿಮಾ ವೀಕ್ಷಿಸಿದರು. ಅವರಿಗೆ ಪುತ್ರ ರಾಘವೇಂದ್ರ ಮತ್ತು ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್. ಷಡಾಕ್ಷರಿ ಸಾಥ್‌ ನೀಡಿದ್ದರು.

VISTARANEWS.COM


on

BSY gandhada gudi
ಮಾಜಿ ಸಿಎಂ ಬಿಎಸ್‌ ಯಡಿಯೂರಪ್ಪ ಅವರು ಗಂಧದ ಗುಡಿ ಸಿನಿಮಾ ನೋಡಲು ಮಾಲ್‌ಗೆ ಆಗಮಿಸಿದಾಗ ಪುಟ್ಟ ಮಗುವಿನ ಕೈಕುಲುಕಿದರು
Koo

ಶಿವಮೊಗ್ಗ: ಮಾಜಿ ಮುಖ್ಯಮಂತ್ರಿ, ಬಿಜೆಪಿ ರಾಷ್ಟ್ರೀಯ ಸಲಹಾ ಮಂಡಳಿ ಸದಸ್ಯ ಬಿ.ಎಸ್‌. ಯಡಿಯೂರಪ್ಪ ಅವರು ಗುರುವಾರ ಶಿವಮೊಗ್ಗದಲ್ಲಿ ಪುನೀತ್‌ ರಾಜ್‌ ಕುಮಾರ್‌ ಅಭಿನಯದ ʻಗಂಧದ ಗುಡಿʼ ಚಿತ್ರವನ್ನು ವೀಕ್ಷಿಸಿದರು.

ನಗರದಲ್ಲಿರುವ ಶಿವಪ್ಪ ನಾಯಕ ಮಾಲ್‌ಗೆ ಭೇಟಿ ನೀಡಿದ ಅವರು ಚಿತ್ರವನ್ನು ವೀಕ್ಷಿಸಿದರು. ಅವರಿಗೆ ಪುತ್ರ, ಸಂಸದ ಬಿ.ವೈ. ರಾಘವೇಂದ್ರ, ಅವರ ಪತ್ನಿ ತೇಜಸ್ವಿನಿ, ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್. ಷಡಾಕ್ಷರಿ, ಸೂಡಾ ಮಾಜಿ ಅಧ್ಯಕ್ಷ ಜ್ಯೋತಿಪ್ರಕಾಶ, ಡಿಸಿಸಿ ಅಧ್ಯಕ್ಷ ಎಂ ಬಿ ಚನ್ನವೀರಪ್ಪ ಮತ್ತಿತರರು ಸಾಥ್‌ ನೀಡಿದರು.

ಯಡಿಯೂರಪ್ಪ ಅವರು ಮಾಲ್‌ಗೆ ಬರುತ್ತಿದ್ದಂತೆಯೇ ಎದುರು ಸಿಕ್ಕ ಪುಟ್ಟ ಮಗುವಿನ ಕೈ ಹಿಡಿದು ಶೇಕ್‌ ಹ್ಯಾಂಡ್‌ ಮಾಡಿ ಖುಷಿಪಟ್ಟರು. ಹಲವಾರು ಮಂದಿ ಬಿಎಸ್‌ವೈ ಅವರ ಜತೆ ಸೆಲ್ಫಿಗೆ ತೆಗೆಸಿಕೊಳ್ಳಲು ಮುಗಿಬಿದ್ದರು. ಫೋಟೊ ತೆಗೆಸಿಕೊಳ್ಳಲು ಮುಂದಾದ ಪ್ರತಿಯೊಬ್ಬರಿಗೂ ಬಿಎಸ್‌ವೈ ಚೆನ್ನಾಗಿ ಸಹಕರಿಸಿದರು. ಭಾರತ್‌ ಮಲ್ಟಿಪ್ಲೆಕ್ಸ್‌ನಲ್ಲಿ ಅವರು ಚಿತ್ರ ವೀಕ್ಷಿಸಿದರು.

ಪುನೀತ್‌ ರಾಜ್‌ ಕುಮಾರ್‌ ಅವರ ಅಭಿನಯದ ಕೊನೆಯ ಚಿತ್ರ ಇದಾಗಿದ್ದು, ಕರ್ನಾಟಕದ ವನ್ಯ ಸಂಪತ್ತನ್ನು ಅಪೂರ್ವವಾಗಿ ತೋರಿಸಲಾಗಿದೆ. ಪುನೀತ್‌ ಬಗ್ಗೆ ಅಭಿಮಾನ ಹೊಂದಿರುವ ಬಿಎಸ್‌ವೈ ಅವರು ಎರಡೂ ಕಾರಣಕ್ಕಾಗಿ ಚಿತ್ರದ ವೀಕ್ಷಣೆಗೆ ತೆರಳಿದ್ದಾರೆ.

ಬಿಎಸ್‌ವೈ ಅವರಿಗೆ ಸಿನಿಮಾ ನೋಡುವಲ್ಲಿ ಸಾಕಷ್ಟು ಆಸಕ್ತಿ ಇದ್ದು, ಇತ್ತೀಚೆಗಷ್ಟೇ ಶರಣ್‌ ಅಭಿನಯದ ಗುರುಶಿಷ್ಯರು ಎಂಬ ಸಿನಿಮಾ ನೋಡಿದ್ದರು. ತನುಜಾ ಎಂಬ ಸಿನಿಮಾದಲ್ಲಿ ಅವರು ಮುಖ್ಯಮಂತ್ರಿ ಪಾತ್ರದಲ್ಲೇ ನಟಿಸಿದ್ದರು.

ಇದನ್ನೂ ಓದಿ | Guru Shishyaru | ಶರಣ್‌ ಅಭಿನಯದ ಗುರು ಶಿಷ್ಯರು ಸಿನಿಮಾ ವೀಕ್ಷಿಸಿದ ಯಡಿಯೂರಪ್ಪ, ಅಶೋಕ್‌

Continue Reading

ಕನ್ನಡ ರಾಜ್ಯೋತ್ಸವ

Appu Namana | ಅಪ್ಪುಗಾಗಿ 336 ಕಿ.ಮೀ. ನಡೆದೇ ಬೆಂಗಳೂರಿಗೆ ಬಂದ ಅಭಿಮಾನಿ; ಹುಕ್ಕೇರಿಯಲ್ಲಿ ಅಪ್ಪು ಹೆಸರಲ್ಲಿ ಬಾವುಟ ಹಂಚಿಕೆ

ಅಪ್ಪು ಎಂದರೆ ಅಭಿಮಾನಿಗಳಿಗೆ ಅಚ್ಚುಮೆಚ್ಚು. ಪುನೀತ್‌ ಅಗಲಿ 1 ವರ್ಷವಾದರೂ ಅವರ ಮೇಲಿನ ಅಭಿಮಾನ ಕಿಂಚಿತ್ತೂ ಕಡಿಮೆ ಆಗಿಲ್ಲ. ಪುನೀತ್‌ ಅವರಿಗೆ ಕೊಡಮಾಡಲಾದ ಕರ್ನಾಟಕ ರತ್ನ ಪ್ರಶಸ್ತಿ ಹಿನ್ನೆಲೆಯಲ್ಲಿ ರಾಜ್ಯದ ವಿವಿಧ ಕಡೆಗಳಲ್ಲಿ ಅಪ್ಪು ಅಭಿಮಾನಿಗಳು ವಿಭಿನ್ನ ರೀತಿಯಲ್ಲಿ ಸಂಭ್ರಮಿಸುತ್ತಿದ್ದಾರೆ.

VISTARANEWS.COM


on

By

Appu namana
Koo

ಬೆಂಗಳೂರು: ರಾಜ್ಯ ಸರ್ಕಾರದ ವತಿಯಿಂದ ಕನ್ನಡ ರಾಜ್ಯೋತ್ಸವ ಮತ್ತು ದಿ| ಪುನೀತ್ ರಾಜಕುಮಾರ್ (Appu Namana) ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಹಿನ್ನೆಲೆಯಲ್ಲಿ ಅಪ್ಪುವಿಗಾಗಿ ದೂರದ ಹಾವೇರಿಯಿಂದ ಅಭಿಮಾನಿಯೊಬ್ಬ ಪಾದಯಾತ್ರೆ ಮಾಡಿದ್ದಾರೆ.

ಕೈಯಲ್ಲಿ ಅಪ್ಪು ಫೋಟೊ ಹಿಡಿದು ಹಾವೇರಿಯಿಂದ ಉದ್ಯಾನನಗರಿ ಬೆಂಗಳೂರಿಗೆ ಶಾಂತಯ್ಯ ಮಳೀಮಠ್ ಎಂಬುವವರು ನಡೆದುಕೊಂಡೇ ಬಂದಿದ್ದಾರೆ. ಅಕ್ಟೋಬರ್ 22ಕ್ಕೆ ಹಾವೇರಿಯಿಂದ ಹೊರಟ ಶಾಂತಯ್ಯ ಅಕ್ಟೋಬರ್ 31ಕ್ಕೆ ಬೆಂಗಳೂರು ತಲುಪಿದ್ದಾರೆ.

Appu Namana

ಪುನೀತ್ ರಾಜಕುಮಾರ್‌ಗಾಗಿ 10 ದಿನಗಳ ಏಕಾಂಗಿ ನಡಿಗೆ ನಡೆಸಿರುವ ಶಾಂತಯ್ಯ 336 ಕಿ.ಮೀ ಕ್ರಮಿಸಿದ್ದಾರೆ. ಅಲ್ಲಿಂದ ಇಲ್ಲಿವರೆಗೂ ಬರೀ ಕಾಲಲ್ಲಿ ನಡೆದ ಪರಿಣಾಮ ಕಾಲಿನಲ್ಲಿ ಬೊಬ್ಬೆಯಾಗಿದೆ. ಆದರೂ ಅದರ ನಡುವೆಯೇ ಸೋಮವಾರ ಅಪ್ಪು ಮನೆಗೆ ಹೋಗಿ, ಅಶ್ವಿನಿ ಪುನೀತ್‌ ರಾಜಕುಮಾರ್‌ರನ್ನು ಭೇಟಿ ಮಾಡಿದರು. ಇವರ ಈ ಪ್ರಯತ್ನಕ್ಕೆ ಅಶ್ವಿನಿ ಅವರು ಧನ್ಯವಾದವನ್ನು ತಿಳಿಸಿದ್ದಾರೆ. ಮಂಗಳವಾರ ನಟ ಶಿವರಾಜಕುಮಾರ್‌ ಅವರನ್ನು ಭೇಟಿ ಮಾಡಿ ಮಾತನಾಡಿಸಿ ಹೋಗುತ್ತೇನೆ ಎಂದಿದ್ದಾರೆ.

ಒಂದಿಡೀ ಊರಿಗೆ ಅಪ್ಪು ಹೆಸರಲ್ಲಿ ಬಾವುಟ ಹಂಚಿಕೆ
ಕರ್ನಾಟಕ ರಾಜ್ಯೋತ್ಸವ ಹಾಗೂ ದಿವಂಗತ ಡಾ.‌ಪುನೀತ್ ರಾಜಕುಮಾರ ಅವರಿಗೆ ಕರ್ನಾಟಕ ರತ್ನ‌ ಪ್ರಶಸ್ತಿ ನೀಡಿ ಗೌರವಿಸುತ್ತಿರುವ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಗ್ರಾಮ ಪಂಚಾಯಿತಿ ಸದಸ್ಯರು ಹಾಗೂ ನೌಕರರೆಲ್ಲ ಸೇರಿ ಪ್ರತಿ ಮನೆಗೆ ಕನ್ನಡ ಧ್ವಜ‌ ನೀಡಿ ಪುನೀತ್ ರಾಜಕುಮಾರ್ ಅವರಿಗೆ ಗೌರವ ಸಲ್ಲಿಸಿದ್ದಾರೆ.

Appu Namana

ಗ್ರಾಮದ ಪ್ರತಿ ಮನೆಗಳಿಗೂ ಕನ್ನಡದ ಧ್ವಜ ನೀಡಿ ಧ್ವಜಾರೋಹಣ ಮಾಡುವ ಕಾರ್ಯವನ್ನು ನೇರಲಿ ಗ್ರಾಮ ಪಂಚಾಯಿತಿ ವತಿಯಿಂದ ಮಾಡಲಾಗಿದೆ. ರಾಜ್ಯೋತ್ಸವ ದಿನದಂದು ನೇರಲಿ ಗ್ರಾಮದ ಪ್ರತಿ ಮನೆ ಮನೆಗಳಲ್ಲೂ ಕನ್ನಡ ಬಾವುಟ ರಾರಾಜಿಸುತ್ತಿತ್ತು. ಪವರ್ ಸ್ಟಾರ್ ಪುನೀತ್‌ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿ ದೊರಕಿದ್ದು ಸಂತಸ ತಂದಿದೆ ಎಂದು ಗ್ರಾಮ‌ ಪಂಚಾಯಿತಿ ಅಧಿಕಾರಿಗಳು ಖುಷಿ ಹಂಚಿಕೊಂಡಿದ್ದಾರೆ.

Appu Namana

ಕರ್ನಾಟಕ ರಾಜ್ಯೋತ್ಸವದಲ್ಲೂ ಅಪ್ಪು ಸ್ಮರಣೆ
ವಿಜಯಪುರದ ಗುಮ್ಮಟನಗರಿಯ ದರ್ಗಾ ಪ್ರದೇಶದಲ್ಲಿ ಕರ್ನಾಟಕ ರಾಜ್ಯೋತ್ಸವವನ್ನು ಅದ್ಧೂರಿಯಾಗಿ ಆಚರಿಸಲಾಗಿದ್ದು, ಈ ವೇಳೆ ಪುನೀತ್‌ರನ್ನು ಸ್ಮರಿಸಲಾಯಿತು. ದರ್ಗಾ ಪ್ರದೇಶದ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಹಾಗೂ ಸ್ಥಳೀಯರು, ಅಪ್ಪು ಭಾವಚಿತ್ರ ಇರಿಸಿ, ಅದಕ್ಕೆ ಪೂಜೆ ಸಲ್ಲಿಸಿ ಧ್ವಜಾರೋಹಣ ನೆರವೇರಿಸಿದರು.

ಇದನ್ನೂ ಓದಿ | ಕನ್ನಡ ರಾಜ್ಯೋತ್ಸವ | ಇಂದು ಪುನೀತ್‌ಗೆ ಕರ್ನಾಟಕ ರತ್ನ ಪ್ರದಾನ, ರಜನಿಕಾಂತ್‌, ಜ್ಯೂ.ಎನ್‌ಟಿಆರ್‌ ಭಾಗಿ

Continue Reading

ಕನ್ನಡ ರಾಜ್ಯೋತ್ಸವ

Appu Namana | ʼಕಲಿಯುಗದ ಮಾರ್ಕಂಡೇಯ, ಪ್ರಹ್ಲಾದ, ನಚಿಕೇತʼ: ಅಪ್ಪು ಕುರಿತು ರಜನಿ ಭಾವುಕ ನುಡಿ

ಕಾರ್ಯಕ್ರಮ ಆರಂಭಕ್ಕೂ ಮುನ್ನವೇ ಶುರುವಾದ ಜಿಟಿಜಿಟಿ ಮಳೆಯ ನಡುವೆಯೇ ಗಣ್ಯರೆಲ್ಲರೂ ತ್ವರಿತ ಗತಿಯಲ್ಲಿ ಮಾತು ಮುಗಿಸಿ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಮಾಡಿದರು.

VISTARANEWS.COM


on

rajanikanth karnataka rathna
Koo

ಬೆಂಗಳೂರು: ಒಂದೊಂದು ಯುಗದಲ್ಲಿ ಭೂಮಿಯಲ್ಲಿ ಜನಿಸಿ ನಮ್ಮೊಂದಿಗಿದ್ದು ಸಂತೋಷ ನೀಡಿ ಮತ್ತೆ ದೇವರ ಬಳಿಗೆ ಸಾಗುವ ದೇವರ ಮಗನಾಗಿ ಕಲಿಯುಗದಲ್ಲಿ ಪುನೀತ್‌ ರಾಜಕುಮಾರ್‌ ಜನಿಸಿದ್ದರು ಎಂದು ಸೂಪರ್‌ ಸ್ಟಾರ್‌ ರಜನಿಕಾಂತ್‌ ಭಾವುಕವಾಗಿ ನುಡಿದಿದ್ದಾರೆ.

ವಿಧಾನಸೌಧದ ಮಹಾ ಮೆಟ್ಟಿಲುಗಳ ಮೇಲೆ ಪುನೀತ್‌ ರಾಜಕುಮಾರ್‌ ಅವರಿಗೆ ಮರಣೋತ್ತರ ʼಕರ್ನಾಟಕ ರತ್ನʼ ಪ್ರಶಸ್ತಿ ನೀಡಿದ ಸಮಾರಂಭದಲ್ಲಿ ಮಾತನಾಡಿದರು.

ಕಾರ್ಯಕ್ರಮ ಆರಂಭಕ್ಕೂ ಮುನ್ನವೇ ಆರಂಭವಾದ ಜಿಟಿಜಿಟಿ ಮಳೆಯ ನಡುವೆಯೇ ಮಾತನಾಡಿದ ರಜನಿಕಾಂತ್‌, ಕರ್ನಾಟಕದ ಎಲ್ಲರೂ ಸಹೋದರರಾಗಿ ಇರಬೇಕೆಂದು ರಾಜರಾಜೇಶ್ವರಿ, ಅಲ್ಲಾಹ್‌, ಜೀಸಸ್‌ನಲ್ಲಿ ಕೇಳಿಕೊಳ್ಳುತ್ತೇನೆ. ಅಪ್ಪು ಅವರು ಮಾರ್ಕಂಡೇಯ, ಪ್ರಹ್ಲಾದ, ನಚಿಕೇತನ ರೀತಿ ಕಲಿಯುಗದಲ್ಲಿ ಅಪ್ಪು ಜನಿಸಿದ್ದಾರೆ. ಅಪ್ಪು ದೇವರ ಮಗು. ನಮ್ಮಲ್ಲಿ ಸ್ವಲ್ಪ ದಿನ ಇದ್ದು ಮತ್ತೆ ದೇವರ ಬಳಿ ಸೇರಿದೆ. ಆ ಮಗುವಿನ ಆತ್ಮ ನಮ್ಮ ಸುತ್ತಲೇ ಇದೆ ಎಂದರು.

ಶಬರಿ ಮಲೆ ಯಾತ್ರೆಯೊಂದರ ಸಂದರ್ಭವನ್ನು ನೆನೆದ ರಜನಿಕಾಂತ್‌, ಶಬರಿ ಮಲೆ ಯಾತ್ರೆಯಲ್ಲಿ ಘೋಷಣೆಗಳನ್ನು ವೀರಮಣಿ ಎಂಬ ದೊಡ್ಡ ಗಾಯಕರು ಹೇಳುತ್ತಿದ್ದಾರೆ. 1979ರಲ್ಲಿ ಒಂದು ಚಿಕ್ಕ ಮಗು ಸ್ವಾಮಿಯೇ ಶರಣಂ ಅಯ್ಯಪ್ಪ ಎಂದು ಕೂಗಿತು. ಎಲ್ಲರಿಗೂ ಇದನ್ನು ಕೇಳಿ ರೋಮಾಂಚನ ಆಯಿತು.

ಆಗ ರಾಜಕುಮಾರ್‌ ಮಡಿಲಲ್ಲಿ ಅಪ್ಪು ಎಂಬ ಮಗು ಚಂದ್ರನಂತಹ ಕಳೆ, ನಕ್ಷತ್ರದಂತಹ ಕಣ್ಗಳಿಂದ ಕುಳಿತಿತ್ತು. ಆ ಮಗುವನ್ನು ಅಣ್ಣಾವ್ರು ಹೆಗಲ ಮೇಲೆ ಕೂರಿಸಿಕೊಂಡು ನಡೆದರು. ನಾನು ನೋಡಿದ ಆ ಮಗು ಬೆಳೆಯಿತು. ಅಪ್ಪು ಸಿನಿಮಾ ಬಂದಿದೆ, ನೋಡುತ್ತೀರ ಎಂದು ಅಣ್ಣಾವ್ರು ಕೇಳಿದರು. ಅಪ್ಪು ಸಿನಿಮಾದಲ್ಲಿ ಅವರ ಡ್ಯಾನ್ಸ್‌, ಫೈಟ್‌ ನೋಡಿದೆ. 100 ದಿನ ಈ ಚಿತ್ರ ಸಾಗಿದರೆ ನೀವೇ ಶೀಲ್ಡ್‌ ಕೊಡಬೇಕು ಎಂದು ಅಣ್ಣಾವ್ರು ಹೇಳಿದ್ದರು. ಸಿನಿಮಾ 100 ದಿನ ಆದ ನಂತರ ಅಂಬೇಡ್ಕರ್‌ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ನಾನೇ ಶೀಲ್ಡ್‌ ನೀಡಿದೆ ಎಂದರು.

ಆ ಸಮಾರಂಭ ಅಪ್ಪುಗೆ ಸೇರಿದ್ದು. ಈ ಸಮಾರಂಭವೂ ಅಪ್ಪು ಸಮಾರಂಭ, ಅವನೇ ನಾಯಕ. ಅವನು ನಮ್ಮೊಂದಿಗೆ ಇಲ್ಲ ಎಂದು ಜೀರ್ಣ ಮಾಡಿಕೊಳ್ಳಲು ಸಾಧ್ಯವಾಗುತ್ತಿಲ್ಲ. ಅಪ್ಪು ನಿಧನವಾದಾಗ ನಾನು ಶಸ್ತ್ರಚಿಕಿತ್ಸೆಗೆ ಒಳಗಾಗಿ ಐಸಿಯುನಲ್ಲಿದ್ದೆ. ಆಗ ನನಗೆ ಯಾರೂ ವಿಷಯ ಹೇಳಿರಲಿಲ್ಲ. ಇದನ್ನು ಕೇಳಿದ ನಂತರ ನನಗೆ ನಂಬಲು ಆಗಲೇ ಇಲ್ಲ. ಈ ಕಷ್ಟವನ್ನು ಪುನೀತ್‌ ಪತ್ನಿ ಅಶ್ವಿನಿ ಹೇಗೆ ತಡೆದುಕೊಂಡಿದ್ದಾರೆ ಗೊತ್ತಾಗುತ್ತಿಲ್ಲ ಎಂದು ಹೇಳಿದರು.

ಅಪ್ಪು ನಿಧನರಾದಾಗ ಅಷ್ಟು ಜನರು ಏಕೆ ಬಂದರು? ಆತನ ಮನುಷ್ಯತ್ವಕ್ಕೆ, ದಾನ ಮಾಡುವ ಗುಣಕ್ಕೆ ಆಗಮಿಸಿದರು. ಒಂದು ಕೈಯಲ್ಲಿ ಮಾಡಿದ ದಾನ ಇನ್ನೊಂದು ಕೈಗೆ ಗೊತ್ತಾಗಬಾರದು ಎಂದು ಅಪ್ಪು ದಾನ ಮಾಡಿದ್ದರು. ನಟ ನಿಜ ಜೀವನದಲ್ಲಿ ಹೇಗೆ ಬಾಳುತ್ತಾನೆ ಎನ್ನುವುದರ ಆಧಾರದಲ್ಲಿ ಆತ ಜನರ ಮನಸ್ಸಿನಲ್ಲಿ ಉಳಿಯುತ್ತಾನೆ ಎಂದು ತಮಿಳುನಾಡಿನ ಎಂಜಿಆರ್‌ ಹೇಳಿದ್ದರು. ಅದೇ ರೀತಿ ಅಪ್ಪು ನಡೆದುಕೊಂಡರು. ಅದೇ ರೀತಿ ಎನ್‌ಟಿಆರ್‌ ಬಾಳಿದರು. ಅದೇ ರೀತಿ ಡಾ. ರಾಜಕುಮಾರ್‌ ಸಹ ಜನರ ಆರಾಧ್ಯ ದೈವವಾಗಿದ್ದರು. ಅವರೆಲ್ಲರೂ ಅರವತ್ತು-ಎಪ್ಪತ್ತು ವರ್ಷದಲ್ಲಿ ಮಾಡಿದ ಸಾಧನೆಯನ್ನು ಕೇವಲ 21 ವರ್ಷದಲ್ಲಿ ಮಾಡಿ ಹೋಗಿದ್ದಾನೆ. ಅಪ್ಪು ಯಾವಾಗಲೂ ನಮ್ಮ ಜತೆಯಲ್ಲೇ ಇರುತ್ತಾನೆ. ಕರ್ನಾಟಕ ರತ್ನ ಪ್ರಶಸ್ತಿಯನ್ನು ಇದೇ ವೇದಿಕೆಯಲ್ಲಿ ರಾಜಕುಮಾರ್‌ ಅವರಿಗೆ ನೀಡಲಾಗಿತ್ತು. ಅಂದಿನ ದಿನವೂ ಮಳೆ ಬಂದಿತ್ತು ಎಂದು ಕೇಳಲ್ಪಟ್ಟಿದ್ದೇನೆ. ಇಂದು ಮಳೆ ಆಗಮಿಸುತ್ತಿದೆ. ಈ ಪ್ರಶಸ್ತಿ ನೀಡಿದ ಕರ್ನಾಟಕಕ್ಕೆ ಧನ್ಯವಾದ ಸಲ್ಲಿಸುತ್ತೇನೆ ಎಂದರು.

ಪುನೀತ್‌ ರಾಜ್‌ ಕುಮಾರ್‌ ಅವರೇ ಕರ್ನಾಟಕ ರತ್ನ
ಜೂನಿಯರ್‌ ಎನ್‌ಟಿಆರ್‌ ಮಾತನಾಡಿ, ಇಡೀ ಕರ್ನಾಟಕ ರಾಜ್ಯಕ್ಕೆ ಹಾಗೂ ಪ್ರಪಂಚಾದ್ಯಂತ ಇರುವ ಎಲ್ಲ ಕನ್ನಡ ಜನರಿಗೆ ರಾಜ್ಯೋತ್ಸವ ಶುಭಾಶಯಗಳು. ಪರಂಪರೆ ಹಾಗೂ ಉಪನಾಮ ಹಿರಿಯರಿಂದ ಬರುತ್ತದೆ, ಆದರೆ ವ್ಯಕ್ತಿತ್ವ ಎನ್ನುವುದು ವ್ಯಕ್ತಿಯ ಸ್ವಂತ ಸಂಪಾದನೆ. ಅಹಂಕಾರ, ಅಹಂ ಇಲ್ಲದೆ ತಮ್ಮ ನಗುವಿನಿಂದ ಒಂದು ರಾಜ್ಯವನ್ನೇ ಗೆದ್ದ ರಾಜಕುಮಾರ ಇದ್ದರೆ ಅದು ಪುನೀತ್‌ ರಾಜಕುಮಾರ್‌ ಮಾತ್ರ.

ಕರ್ನಾಟಕದ ಸೂಪರ್‌ ಸ್ಟಾರ್‌, ಉತ್ತಮ ಪತಿ, ನಟ, ಸ್ನೇಹಿತ ಹಾಗೂ ಮಾನವೀಯ ವ್ಯಕ್ತಿತ್ವ ಅಪ್ಪುವಿನದ್ದು. ಅವರ ನಗುವಿನಲ್ಲಿದ್ದ ಶ್ರೀಮಂತಿಕೆಯನ್ನು ಎಲ್ಲಿಯೂ ನೋಡಲು ಸಿಗುವುದಿಲ್ಲ. ಕರ್ನಾಟಕ ರತ್ನ ಪ್ರಶಸ್ತಿಯನ್ನು ಅವರಿಗೆ ನೀಡುವುದಲ್ಲ, ಕರ್ನಾಟಕ ರತ್ನದ ಅರ್ಥವೇ ಪುನೀತ್‌ ರಾಜಕುಮಾರ್‌. ಈ ಗೌರವ ನೀಡಿದ ಕರ್ನಾಟಕ ಸರ್ಕಾರಕ್ಕೆ ಧನ್ಯವಾದಗಳು. ನನ್ನನ್ನು ತಮ್ಮ ಕುಟುಂಬದಂತೆ ಭಾವಿಸಿದ್ದಕ್ಕೆ ಧನ್ಯವಾದಗಳು ಎಂದರು.

ಸಿಎಂ ಬಸವರಾಜ ಬೊಮ್ಮಾಯಿ ಮಾತನಾಡಿ, ದೇವರು ಮಳೆಯ ರೂಪದಲ್ಲಿ ದೊಡ್ಡ ಪ್ರಮಾಣದಲ್ಲಿ ಆಶೀರ್ವಾದ ಮಾಡುತ್ತಿದ್ದಾನೆ. ಅಪ್ಪುಗೆ ಇಡೀ ಕರ್ನಾಟಕದಲ್ಲಿ, ಪ್ರತಿ ಗ್ರಾಮದಲ್ಲಿ ಆಚರಣೆ ಆಗುತ್ತಿದೆ. ಪ್ರಶಸ್ತಿ ನೀಡುತ್ತಿರುವುದು ನನ್ನ, ಸರ್ಕಾರದ ಪುಣ್ಯ ಭಾಗ್ಯ. ಇಂತಹ ಸೌಭಾಗ್ಯ ನಮಗೆ ಸಿಕ್ಕಿದೆ. ಪುನೀತ್‌ ಕೆಳಗೆ ಬಂದು ನೋಡಿ, ಜನರು ಎಷ್ಟು ಅಭಿಮಾನಿಗಳು ಬಂದಿದ್ದಾರೆ. ಇಲ್ಲಿ ಮತ್ತೊಮ್ಮೆ ಕನ್ನಡ ನಾಡಿನಲ್ಲಿ ಹುಟ್ಟಿ ಬಾ ಎಂದು ಆಶಿಸುತ್ತೇವೆ. ಅಪ್ಪು ಎಲ್ಲರ ಮನದಲ್ಲಿ ನೆಲೆಸಿದ್ದಾರೆ ಎಂದು ಭಾವುಕವಾಗಿ ನುಡಿದರು.

ಇದನ್ನೂ ಓದಿ | Appu Namana | ಕರ್ನಾಟಕ ರತ್ನ ಕಾರ್ಯಕ್ರಮಕ್ಕೆ ಜನಸಾಗರ, ಮೋಡಿ ಮಾಡಿದ ವಿಜಯಪ್ರಕಾಶ್‌ ಗಾಯನ

Continue Reading
Advertisement
Rohit Sharma Birthday
ಕ್ರೀಡೆ25 mins ago

Rohit Sharma Birthday: ಹಿಟ್​ಮ್ಯಾನ್​ ಖ್ಯಾತಿಯ ರೋಹಿತ್​ಗೆ 37ನೇ ವರ್ಷದ ಹುಟ್ಟು ಹಬ್ಬದ ಸಂಭ್ರಮ

road accident anekal
ಬೆಂಗಳೂರು ಗ್ರಾಮಾಂತರ31 mins ago

Road Accident: ಪಂಚರ್‌ ಹಾಕುತ್ತಿದ್ದ ಲಾರಿ ಚಾಲಕ ಬೈಕ್‌ ಡಿಕ್ಕಿಯಾಗಿ ಸಾವು, ಹಿಟ್‌ ಆ್ಯಂಡ್‌ ರನ್‌ನಲ್ಲಿ ಯುವಕ ಮೃತ

Baba Ramdev
ದೇಶ36 mins ago

Patanjali Case: ಪತಂಜಲಿಗೆ ಮತ್ತೆ ಸಂಕಷ್ಟ; ಬ್ಯಾನ್‌ ಆಗುತ್ತಾ ಈ ಉತ್ಪನ್ನಗಳು?

CET exam 2024
ಪ್ರಮುಖ ಸುದ್ದಿ56 mins ago

CET Exam: ಸಿಇಟಿ ಕೀ ಉತ್ತರಗಳು ಪ್ರಕಟ, ಪಠ್ಯೇತರ ಪ್ರಶ್ನೆಗಳ ಬಗ್ಗೆ ತಲೆಕೆಡಿಸಿಕೊಳ್ಳಬೇಡಿ

Covishield Vaccine
ಪ್ರಮುಖ ಸುದ್ದಿ1 hour ago

Covishield Vaccine: ಕೋವಿಶೀಲ್ಡ್‌ನಿಂದ ಅಡ್ಡ ಪರಿಣಾಮವಿದೆ ಎಂದು ಕೊನೆಗೂ ಒಪ್ಪಿಕೊಂಡ ತಯಾರಿಕೆ ಕಂಪನಿ ಅಸ್ಟ್ರಾಜೆನೆಕಾ

ದೇಶ1 hour ago

Viral Video: ಆರಾಮಾಗಿ ಆಟವಾಡ್ತಿದ್ದ ಬಾಲಕಿ ಮೇಲೆ ಜರ್ಮನ್‌ ಶೆಫರ್ಡ್‌ ಡೆಡ್ಲಿ ಅಟ್ಯಾಕ್‌!

Ayushman Bharat Diwas
ಆರೋಗ್ಯ2 hours ago

Ayushman Bharat Diwas: ಇಂದು ಆಯುಷ್ಮಾನ್ ಭಾರತ್ ದಿನ; ಏನಿದರ ಮಹತ್ವ?

Onion Benefits
ಆರೋಗ್ಯ2 hours ago

Onion Benefits: ಬೇಸಿಗೆಯಲ್ಲಿ ಆಗಾಗ ಹಸಿ ಈರುಳ್ಳಿ ತಿನ್ನಲೇಬೇಕು ಯಾಕೆ ಗೊತ್ತೆ?

rajamarga column srikant bolla
ಅಂಕಣ2 hours ago

ರಾಜಮಾರ್ಗ ಅಂಕಣ: ಕಣ್ಣಿಲ್ಲದೆ ಉದ್ಯಮ ಸಾಮ್ರಾಜ್ಯವನ್ನು ಕಟ್ಟಿದ ಶ್ರೀಕಾಂತ್ ಬೊಳ್ಳಾ

Karnataka weather
ಕರ್ನಾಟಕ3 hours ago

Karnataka Weather: ಮನೆಯಿಂದ ಹೊರ ಹೋಗುವ ಮುನ್ನ ಎಚ್ಚರ; ಮೇ 3ರವರೆಗೆ ಹೆಚ್ಚಿರಲಿದೆ ಶಾಖದ ಅಲೆಗಳ ತೀವ್ರತೆ!

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

dina bhavishya read your daily horoscope predictions for April 30 2024
ಭವಿಷ್ಯ4 hours ago

Dina Bhavishya: ಈ ರಾಶಿಗಳ ಉದ್ಯೋಗಿಗಳಿಗೆ ಇಂದು ಒತ್ತಡ ಹೆಚ್ಚಲಿದೆ!

PM Narendra modi in Bagalakote and Attack on Congress
Lok Sabha Election 202420 hours ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 202421 hours ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ1 day ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Narendra Modi
Lok Sabha Election 20242 days ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

PM Narendra Modi in Sirsi
Lok Sabha Election 20242 days ago

PM Narendra Modi: ಕಾಂಗ್ರೆಸ್ ರಾಮ ವಿರೋಧಿ; ಮನೆಗೆ ಹೋಗಿ ಕರೆದರೂ ಮಂದಿರ ಉದ್ಘಾಟನೆಗೆ ಬರಲಿಲ್ಲ: ಮೋದಿ ಟೀಕೆ

If Congress comes to power all your assets will belong to Government says PM Narendra Modi
Lok Sabha Election 20242 days ago

Narendra Modi: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀವು ಕಷ್ಟಪಟ್ಟು ಸಂಪಾದಿಸಿದ ಆಸ್ತಿಯೆಲ್ಲ ಅನ್ಯರ ಪಾಲು: ಮೋದಿ ಎಚ್ಚರಿಕೆ

Congress ties with Aurangzeb supporters and Girls killed under his rule says Narendra Modi
Lok Sabha Election 20242 days ago

Narendra Modi: ಔರಂಗಜೇಬ್ ಬೆಂಬಲಿಗರ ಜತೆ ಕಾಂಗ್ರೆಸ್ ದೋಸ್ತಿ; ಇವರ ಆಡಳಿತದಲ್ಲಿ ಹೆಣ್ಣು ಮಕ್ಕಳ ಹತ್ಯೆ: ಮೋದಿ ವಾಗ್ದಾಳಿ

Modi in Karnataka stay in Belagavi tomorrow and Huge gatherings at five places
Latest2 days ago

Narendra Modi Live : ಪ್ರಧಾನಿ ಮೋದಿಯ ಬೆಳಗಾವಿ ಪ್ರಚಾರ ಸಭೆಯ ನೇರ ಪ್ರಸಾರವನ್ನು ಇಲ್ಲಿ ವೀಕ್ಷಿಸಿ…

Dina Bhavishya
ಭವಿಷ್ಯ2 days ago

Dina Bhavishya : ಈ ರಾಶಿಯವರಿಗೆ ದಿನದ ಮಟ್ಟಿಗೆ ಖರ್ಚು ಹೆಚ್ಚು

ಟ್ರೆಂಡಿಂಗ್‌