Rishi Sunak | ರಿಷಿ ಸುನಕ್‌ಗೆ 100 ಸಂಸದರ ಬೆಂಬಲ, ಸಮೀಕ್ಷೆಯಲ್ಲೂ ನಂ.1 - Vistara News

ಪ್ರಮುಖ ಸುದ್ದಿ

Rishi Sunak | ರಿಷಿ ಸುನಕ್‌ಗೆ 100 ಸಂಸದರ ಬೆಂಬಲ, ಸಮೀಕ್ಷೆಯಲ್ಲೂ ನಂ.1

ಬ್ರಿಟನ್ ಪಿಎಂ ಆಕಾಂಕ್ಷಿ ರಿಷಿ ಸುನಕ್ (Rishi Sunak) ಅವರಿಗೆ ಕನ್ಸರ್ವೇಟಿವ್ ಪಕ್ಷದ 100 ಸಂಸದರು ಬೆಂಬಲ ವ್ಯಕ್ತಪಡಿಸಿದ್ದಾರೆ.

VISTARANEWS.COM


on

Rishi Sunak
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಲಂಡನ್: ಲಿಜ್ ಟ್ರಸ್ ರಾಜೀನಾಮೆಯಿಂದ ತೆರವಾಗಿರುವ ಬ್ರಿಟನ್ ಪ್ರಧಾನಿ ಹುದ್ದೆಗಾಗಿ ಕನ್ಸರ್ವೇಟಿವ್ ಪಕ್ಷದ ನಾಯಕತ್ವಕ್ಕೆ ನಡೆಯುತ್ತಿರುವ ಚುನಾವಣೆ ಪ್ರಕ್ರಿಯೆಯಲ್ಲಿ ಭಾರತೀಯ ಮೂಲದ ಮಾಜಿ ವಿತ್ತ ಸಚಿವ ರಿಷಿ ಸುನಕ್ (Rishi Sunak) ಅವರು ಆರಂಭಿಕ ಮೇಲುಗೈ ಸಾಧಿಸಿದ್ದಾರೆ. ಮತ್ತೊಂದೆಡೆ, ಮಾಜಿ ಪ್ರಧಾನಿ ಬೋರಿಸ್ ಜಾನ್ಸನ್ ಅವರು ಇಂಗ್ಲೆಂಡ್‌ ಅನ್ನು ಆರ್ಥಿಕ ದುಃಸ್ಥಿತಿಯಿಂದ ಪಾರು ಮಾಡಲು ಸ್ಪರ್ಧೆಯಿಂದ ಹಿಂದೆ ಸರಿಯಬೇಕು ಎಂದು ಹೇಳಿರುವುದು ಚರ್ಚೆಗೆ ಕಾರಣವಾಗಿದೆ.

ಆರಂಭಿಕ ಮೇಲಗೈ ಪಡೆದುಕೊಂಡಿರುವ ರಿಷಿ ಸುನಕ್ ಅವರಿಗೆ ಕನ್ಸರ್ವೇಟಿವ್ ಪಕ್ಷದ ಕನಿಷ್ಠ 100 ಸಂಸದರ ಬೆಂಬಲ ವ್ಯಕ್ತವಾಗಿದೆ. ಹಾಗಾಗಿ, ಮುಂದಿನ ವಾರ ಅಧಿಕೃತವಾಗಿ ಪಿಎಂ ಹುದ್ದೆಗೆ ತಮ್ಮ ಉಮೇದುವಾರಿಕೆಯನ್ನು ಪ್ರಕಟಿಸಲಿದ್ದಾರೆ. ಈ ವರೆಗಿನ ಮಾಹಿತಿಯ ಪ್ರಕಾರ, ಈ ಹಿಂದೆ ಮೂರನೇ ಸ್ಥಾನಗಳಿಸಿದ್ದ ಪೆನ್ನಿ ಮೋರ್ಡಾಂಟ್ ಅವರು ಅಧಿಕೃತವಾಗಿಯೇ ಟೋರಿ ಪಕ್ಷದ ನಾಯಕತ್ವದ ರೇಸಿನಲ್ಲಿದ್ದಾರೆ. ಆದರೆ, ಕೆಲವು ಪತ್ರಿಕೆಗಳ ವರದಿಗಳ ಪ್ರಕಾರ, ಮಾಜಿ ಪ್ರಧಾನಿ ಬೋರಿಸ್ ಜಾನ್ಸನ್ ಕೂಡ ಈ ಸ್ಪರ್ಧೆಗೆ ಇಳಿಯುವ ಸಾಧ್ಯತೆ ಇದೆ. ಆದರೆ, ಈ ಬಗ್ಗೆ ಯಾವುದೇ ಅಧಿಕೃತ ಮಾಹಿತಿಗಳು ಇನ್ನೂ ಲಭ್ಯವಾಗಿಲ್ಲ.

ಸಮೀಕ್ಷೆಯಲ್ಲಿ ಸುನಕ್‌ಗೆ ಬಂಬಲ
ರಿಷಿ ಸುನಕ್ ಪರವಾಗಿ ಇಂಗ್ಲೆಂಡ್ ಮತದಾರರು ತಮ್ಮ ಒಲವನ್ನು ವ್ಯಕ್ತಪಡಿಸಿದ್ದಾರೆ. ಓಪಿನಿಮಯ್ ಕೈಗೊಂಡಿದ್ದ ಸಮೀಕ್ಷೆಯಲ್ಲಿ ಬ್ರಿಟನ್ ಮುಂದಿನ ಪ್ರಧಾನಿಯಾಗಿ ಸುನಕ್ ಅವರನ್ನು ಶೇ.44 ಮತದಾರರು ಇಷ್ಟಪಟ್ಟಿದ್ದಾರೆ. ಶೇ.31ರಷ್ಟು ಮತದಾರರು ಬೋರಿಸ್ ಜಾನ್ಸನ್ ಪರವಾಗಿದ್ದಾರೆ.

ಇದನ್ನೂ ಓದಿ | Britain PM | ಬ್ರಿಟನ್ ಪಿಎಂ ಯಾರು? ಸುನಕ್, ಬೋರಿಸ್, ಪೆನ್ನಿ- ಯಾರು ಹಿತವರು ಈ ಮೂವರೊಳಗೆ!

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Indo China Border : ಸಿಕ್ಕಿಂನಿಂದ 150 ಕಿ.ಮೀ ದೂರದಲ್ಲಿ ಚೀನಾದಿಂದ ಅತ್ಯಾಧುನಿಕ ಯುದ್ಧ ವಿಮಾನ ನಿಯೋಜನೆ

indo china border :ಜೆ -20 ಸ್ಟೆಲ್ತ್ ಫೈಟರ್ ಇಲ್ಲಿಯವರೆಗೆ ಚೀನಾದ ಅತ್ಯಂತ ಸುಧಾರಿತ ಕಾರ್ಯಾಚರಣೆಯ ಯುದ್ಧ ವಿಮಾನ. ಈ ವಿಮಾನಗಳು ಮುಖ್ಯವಾಗಿ ಚೀನಾದ ಪೂರ್ವ ಪ್ರಾಂತ್ಯಗಳಲ್ಲಿ ನೆಲೆಗೊಳಿಸಲಾಗಿದೆ ಎಂದು ಆಲ್ ಸೋರ್ಸ್ ಅನಾಲಿಸಿಸ್​ನ ತಂತ್ರಜ್ಞಾನ ಮತ್ತು ವಿಶ್ಲೇಷಣೆಯ ಉಪಾಧ್ಯಕ್ಷ ಹೇಳಿದ್ದಾರೆ.

VISTARANEWS.COM


on

indo Chaina border
Koo

ನವದೆಹಲಿ: ಸಿಕ್ಕಿಂಗಿಂತ 150 ಕಿಲೋಮೀಟರ್​ ದೂರದಲ್ಲಿರುವ ವಿಮಾನ ನಿಲ್ದಾಣದಲ್ಲಿ ಚೀನಾ ತನ್ನ ಅತ್ಯಾಧುನಿಕ ಜೆ -20 ಸ್ಟೆಲ್ತ್ ಫೈಟರ್ ಜೆಟ್ ಗಳನ್ನು ನಿಯೋಜಿಸಿರುವುದು ಮೇ 27 ರಂದು ಸಂಗ್ರಹಿಸಿದ ಉಪಗ್ರಹ ಚಿತ್ರಗಳ ಮೂಲಕ ಕಂಡು ಬಂದಿದೆ. ಈ ಚಿತ್ರವನ್ನು ಜಿಯೋಸ್ಪೇಷಿಯಲ್ ಇಂಟೆಲಿಜೆನ್ಸ್ ಅನ್ನು ನೋಡುವ ಸಂಸ್ಥೆಯಾದ ಆಲ್ ಸೋರ್ಸ್ ಅನಾಲಿಸಿಸ್​​ನ ಅನುಮತಿಯೊಂದಿ ಅಭಿವೃದ್ಧಿ ಮಾಡಲಾಗಿದೆ. ಈ ಮೂಲಕ ಚೀನಾ, ಭಾರತ ಗಡಿಯಲ್ಲಿ (Indo China Border) ಅತ್ಯಂತ ಅಪಾಯಕಾರಿ ವಿಮಾನವನ್ನು ನಿಯೋಜಿಸುವ ಮೂಲಕ ಆತಂಕ ಸೃಷ್ಟಿಸುತ್ತಿದೆ.

ಟಿಬೆಟ್​​ನ ಎರಡನೇ ಅತಿದೊಡ್ಡ ನಗರವಾದ ಶಿಗಾಟ್ಸೆಗೆ ಸೇವೆ ಸಲ್ಲಿಸುವ ಮಿ ಮತ್ತು ನಾಗರಿಕ ವಿಮಾನ ನಿಲ್ದಾಣ ಇದಾಗಿದ್ದು ಆರು ಚೀನೀ ವಾಯುಪಡೆಯ ಜೆ -20 ಸ್ಟೆಲ್ತ್ ಫೈಟರ್​​ ವಿಮಾನಗಳು ಅಲ್ಲಿ ಕಂಡು ಬಂದಿದೆ. ಈ ವಿಮಾನ ನಿಲ್ದಾಣವು 12,408 ಅಡಿ ಎತ್ತರದಲ್ಲಿದೆ, ಇದು ವಿಶ್ವದ ಅತಿ ಎತ್ತರದ ವಿಮಾನ ನಿಲ್ದಾಣಗಳಲ್ಲಿ ಒಂದು. ಜೆ -20 ಯುದ್ಧ ವಿಮಾನಗಳ ನಿಯೋಜನೆಯ ಬಗ್ಗೆ ತಿಳಿದಿರುವ ಭಾರತೀಯ ವಾಯುಪಡೆ (ಐಎಎಫ್) ಈ ಸಮಯದಲ್ಲಿ ಅವುಗಳ ಬಗ್ಗೆ ಪ್ರತಿಕ್ರಿಯಿಸಲು ನಿರಾಕರಿಸಿದೆ.

ಜೆ -20 ಸ್ಟೆಲ್ತ್ ಫೈಟರ್ ಇಲ್ಲಿಯವರೆಗೆ ಚೀನಾದ ಅತ್ಯಂತ ಸುಧಾರಿತ ಕಾರ್ಯಾಚರಣೆಯ ಯುದ್ಧ ವಿಮಾನ. ಈ ವಿಮಾನಗಳು ಮುಖ್ಯವಾಗಿ ಚೀನಾದ ಪೂರ್ವ ಪ್ರಾಂತ್ಯಗಳಲ್ಲಿ ನೆಲೆಗೊಳಿಸಲಾಗಿದೆ ಎಂದು ಆಲ್ ಸೋರ್ಸ್ ಅನಾಲಿಸಿಸ್​ನ ತಂತ್ರಜ್ಞಾನ ಮತ್ತು ವಿಶ್ಲೇಷಣೆಯ ಉಪಾಧ್ಯಕ್ಷ ಹೇಳಿದ್ದಾರೆ. “ಈ ವಿಮಾನಗಳು ಟಿಬೆಟ್​ನ ಶಿಗಾಟ್ಸೆಯಲ್ಲಿ ಕಾಣಿಸಿಕೊಂಡಿರುವುದು ವಿಷೇಷ. ಯಾಕೆಂದರೆ ಅವುಗಳನ್ನು ತಮ್ಮ ಸಾಮಾನ್ಯ ಕಾರ್ಯಾಚರಣೆಯ ಪ್ರದೇಶಗಳ ಹೊರಗೆ ಮತ್ತು ಭಾರತೀಯ ಗಡಿಯ ಸಮೀಪದಲ್ಲಿ ನಿಯೋಜಿಸಿರುವುದು ಅಚ್ಚರಿಯಾಗಿದೆ.

ಭಾರತವು ತನ್ನ 36 ಫ್ರೆಂಚ್ ನಿರ್ಮಿತ ರಫೇಲ್ ಯುದ್ಧ ವಿಮಾನಗಳೊಂದಿಗೆ ಜೆ -20 ಅನ್ನು ಎದುರಿಸಬೇಕಾಗುತ್ತದೆ. ಅವುಗಳಲ್ಲಿ ಎಂಟು ಪ್ರಸ್ತುತ ಯುನೈಟೆಡ್ ಸ್ಟೇಟ್ಸ್ ಏರ್ ಫೋರ್ಸ್ ನ (ಯುಎಸ್ಎಎಫ್) ಸುಧಾರಿತ ವಾಯು ಯುದ್ಧ ರಿಹರ್ಸಲ್​​ಗಾಗಿ ಅಲಾಸ್ಕಾಕ್ಕೆ ಹಾರಿವೆ. ಗಮನಾರ್ಹವಾಗಿ, ಚೀನಾದ ಜೆ -20 ಪತ್ತೆಯಾದ ಶಿಗಾಟ್ಸೆ ಪಶ್ಚಿಮ ಬಂಗಾಳದ ಹಸಿಮಾರಾದಿಂದ (ಕೆಳಗೆ) 290 ಕಿ.ಮೀ ಗಿಂತ ಕಡಿಮೆ ದೂರದಲ್ಲಿದೆ. ಅಲ್ಲಿ ಭಾರತವು ತನ್ನ 16 ರಾಫೆಲ್​ ಎರಡನೇ ಸ್ಕ್ವಾಡ್ರನ್ ಅನ್ನು ನೆಲೆಗೊಳಿಸಲಾಗುತ್ತದೆ.

ಇದನ್ನೂ ಓದಿ: Azam Khan : ಸಮಾಜವಾದಿ ಪಕ್ಷದ ನಾಯಕ ಅಜಂ ಖಾನ್ ಗೆ 10 ವರ್ಷ ಜೈಲು, 14 ಲಕ್ಷ ದಂಡ

ಟಿಬೆನಲ್ಲಿ ಜೆ – 20 ವಿಮಾನವನ್ನು ಅನ್ನು ನಿಯೋಜಿಸುತ್ತಿರುವುದು ಇದೇ ಮೊದಲಲ್ಲ. 2020 ಮತ್ತು 2023 ರ ನಡುವೆ ಚೀನಾದ ಹೋಟಾನ್ ಪ್ರಾಂತ್ಯದ ಕ್ಸಿನ್ಜಿಯಾಂಗ್ನಲ್ಲಿ ಜೆಟ್​ಗಳನ್ನು ಇಡಲಾಗಿತ್ತು. ಆದಾಗ್ಯೂ, ಇದು ಜೆ -20ನ ವಿಚಾರದಲ್ಲಿ ಅತ್ಯಂತ ಸೂಕ್ಷ್ಮ ನಿಯೋಜನೆ ಎಂದು ನಂಬಲಾಗಿದೆ.

2017ರಿಂದ ಚೀನಾ ವಾಯುಸೇನೆ ಸೇರಿದ ಜೆ 20

ಮೈಟಿ ಡ್ರ್ಯಾಗನ್ ಎಂದೂ ಕರೆಯಲ್ಪಡುವ ಚೆಂಗ್ಡು ಜೆ -20 ಅವಳಿ ಎಂಜಿನ್ ಸ್ಟೆಲ್ತ್ ಫೈಟರ್ ಆಗಿದ್ದು, ಇದನ್ನು 2017 ರಲ್ಲಿ ಸೇವೆಗೆ ಪರಿಚಯಿಸಲಾಯಿತು. ಕೆಲವು ವರದಿಗಳು ಚೀನಾ ಈಗಾಗಲೇ 250 ಸ್ಟೆಲ್ತ್ ಫೈಟರ್​ಗಳನ್ನು ನಿಯೋಜಿಸಿದೆ. ಇದು ಅತಿ ವೇಗದ ವಿಮಾನವಾಗಿದ್ದ ರಾಡಾರ್​ ಮೂಲಕ ಗಮನಿಸುವುದು ಕಷ್ಟ.

ಯುದ್ಧ ವಿಮಾನದ ಸೇರ್ಪಡೆಯೊಂದಿಗೆ, ಚೀನಾ ಸ್ಟೆಲ್ತ್ ಫೈಟರ್ಗಳನ್ನು ಕಾರ್ಯಾಚರಣೆಯಲ್ಲಿ ನಿಯೋಜಿಸಿದ ವಿಶ್ವದ ಮೂರನೇ ದೇಶವಾಗಿ ಹೊರಹೊಮ್ಮಿತು. ಈ ಜೆಟ್ ಅನ್ನು ನಿರಂತರವಾಗಿ ಅಭಿವೃದ್ಧಿ ಮಾಡಲಾಗುತ್ತಿದೆ. ಇದರ ಪ್ರಾಥಮಿಕ ಜವಾಬ್ದಾರಿ ಯುದ್ಧ. ಇದು 300 ಕಿ.ಮೀ ದೂರದಲ್ಲಿರುವ ವೈಮಾನಿಕ ಗುರಿಗಳನ್ನು ಹೊಡೆಯುವ ಸಾಮರ್ಥ್ಯವನ್ನು ಹೊಂದಿದೆ ಎಂದು ನಂಬಲಾಗಿದೆ.

ಕಳೆದ ಐದು ವರ್ಷಗಳಲ್ಲಿ ಚೀನಾ ಟಿಬೆಟ್ ಮತ್ತು ಭಾರತ ಗಡಿಯ ಬಳಿಯ ಇತರ ಪ್ರದೇಶಗಳಲ್ಲಿ ತನ್ನ ವಾಯು ಶಕ್ತಿ ಸಾಮರ್ಥ್ಯವನ್ನು ಸ್ಥಿರವಾಗಿ ಹೆಚ್ಚಿಸಿದೆ. ಇದು ಪ್ರಾಥಮಿಕವಾಗಿ ಹೊಸ ವಾಯುನೆಲೆಗಳ ನಿರ್ಮಾಣ ಮತ್ತು ಅಸ್ತಿತ್ವದಲ್ಲಿರುವ ವಾಯುನೆಲೆಗಳಲ್ಲಿ ಮೂಲಸೌಕರ್ಯಗಳನ್ನು ಮೇಲ್ದರ್ಜೆಗೇರಿಸುವುದನ್ನು ಸೇರಿಕೊಂಡಿದೆ ಚೀನಾ ಜೆ -20 ಮತ್ತು ಅದರ ಎಚ್ -6 ಪರಮಾಣು ಸಾಮರ್ಥ್ಯದ ಬಾಂಬರ್ ಗಳಂತಹ ವಿಮಾನಗಳನ್ನು ಈ ಗಡಿ ಪ್ರದೇಶಗಳಲ್ಲಿ ನಿಯೋಜಿಸುತ್ತಿದೆ.

Continue Reading

ಕರ್ನಾಟಕ

Prajwal Revanna Case: ಜರ್ಮನಿಯಿಂದ ಬೆಂಗಳೂರಿನತ್ತ ಹೊರಟ ಪ್ರಜ್ವಲ್;‌ ಬಂದ ತಕ್ಷಣ ಏನಾಗತ್ತೆ? ಇಲ್ಲಿದೆ ಕಂಪ್ಲೀಟ್‌ ರಿಪೋರ್ಟ್

Prajwal Revanna Case: ಪ್ರಜ್ವಲ್‌ ರೇವಣ್ಣ ಬೆಂಗಳೂರಿಗೆ ಆಗಮಿಸುತ್ತಲೇ ಮಹಿಳೆಯರ ಪ್ರತಿಭಟನೆ, ಬೆಂಬಲಿಗರ ಘೋಷಣೆ, ಪತ್ರಕರ್ತರು ಹಾಗೂ ವಕೀಲರ ಕಣ್ತಪ್ಪಿಸಿ ಕರೆದುಕೊಂಡು ಹೋಗಲು ಎಸ್‌ಐಟಿ 4 ಪ್ಲಾನ್‌ ಮಾಡಿದೆ ಎಂದು ತಿಳಿದುಬಂದಿದೆ. ಬೆಂಗಳೂರು ವಿಮಾನ ನಿಲ್ದಾಣಕ್ಕೆ ಈಗಾಗಲೇ ಎಸ್‌ಐಟಿ ಅಧಿಕಾರಿಗಳು ತೆರಳಿದ್ದಾರೆ. ಇಮಿಗ್ರೇಷನ್‌ ಡೆಸ್ಕ್‌ ಬಳಿ ಎಸ್‌ಐಟಿ ಅಧಿಕಾರಿಗಳು ತೆರಳಿದ್ದಾರೆ.

VISTARANEWS.COM


on

Prajwal Revanna Case
Koo

ಬೆಂಗಳೂರು: ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ವಿದೇಶಕ್ಕೆ ಪರಾರಿಯಾಗಿದ್ದ ಹಾಸನ ಸಂಸದ ಪ್ರಜ್ವಲ್‌ ರೇವಣ್ಣ (Prajwal Revanna Case) ಒಂದು ತಿಂಗಳ ಬಳಿಕ ಕೊನೆಗೂ ಬೆಂಗಳೂರಿನತ್ತ ಆಗಮಿಸುತ್ತಿದ್ದಾರೆ. ಜರ್ಮನಿಯ ಮ್ಯೂನಿಕ್‌ ವಿಮಾನ ನಿಲ್ದಾಣದಲ್ಲಿ (Munich Airport) ವಿಮಾನ ಹತ್ತಿರುವ ಪ್ರಜ್ವಲ್‌ ರೇವಣ್ಣ ಇಂದು ರಾತ್ರಿ (ಮೇ 31) 12.30ಕ್ಕೆ ಬೆಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ. ಬೆಂಗಳೂರಿಗೆ ಆಗಮಿಸುತ್ತಲೇ ಅವರನ್ನು ಎಸ್‌ಐಟಿ ಅಧಿಕಾರಿಗಳು ವಶಪಡಿಸಿಕೊಳ್ಳಲಾಗುತ್ತದೆ ಎಂದು ತಿಳಿದುಬಂದಿದೆ.

ಏರ್‌ಪೋರ್ಟ್‌ಗೆ ಎಸ್‌ಐಟಿ ಅಧಿಕಾರಿಗಳ ಲಗ್ಗೆ

ಬೆಂಗಳೂರು ವಿಮಾನ ನಿಲ್ದಾಣಕ್ಕೆ ಈಗಾಗಲೇ ಎಸ್‌ಐಟಿ ಅಧಿಕಾರಿಗಳು ತೆರಳಿದ್ದಾರೆ. ಇಮಿಗ್ರೇಷನ್‌ ಡೆಸ್ಕ್‌ ಬಳಿ ಎಸ್‌ಐಟಿ ಅಧಿಕಾರಿಗಳು ತೆರಳಿದ್ದಾರೆ. ವಿಮಾನ ಲ್ಯಾಂಡಿಂಗ್‌ ಕುರಿತು, ವಿಮಾನದಲ್ಲಿ ಯಾರಿದ್ದಾರೆ ಎಂಬುದು ಸೇರಿ ವಿವಿಧ ಮಾಹಿತಿಯನ್ನು ಎಸ್‌ಐಟಿ ಅಧಿಕಾರಿಗಳು ಪಡೆಯುತ್ತಿದ್ದಾರೆ. ಪ್ರಜ್ವಲ್‌ ರೇವಣ್ಣ ವಿಮಾನ ನಿಲ್ದಾಣಕ್ಕೆ ಆಗಮಿಸುತ್ತಲೇ ಅವರ ಡಿಪ್ಲೋಮ್ಯಾಟಿಕ್‌ ಪಾಸ್‌ಪೋರ್ಟ್‌ಗೆ ಇಮಿಗ್ರೇಷನ್‌ ಅಧಿಕಾರಿಗಳು ಸ್ಟ್ಯಾಂಪ್‌ ಹಾಕುತ್ತಾರೆ. ಸ್ಟ್ಯಾಂಪ್‌ ಹಾಕಿ, ಪರಿಶೀಲನೆ ಮುಗಿದ ಬಳಿಕವೇ ಎಸ್‌ಐಟಿ ಅಧಿಕಾರಿಗಳು ಪ್ರಜ್ವಲ್‌ ರೇವಣ್ಣ ಅವರನ್ನು ವಶಕ್ಕೆ ಪಡೆಯಲಿದ್ದಾರೆ ಎಂದು ತಿಳಿದುಬಂದಿದೆ.

ಪ್ರಜ್ವಲ್‌ ಕರೆದೊಯ್ಯಲು ಎಸ್‌ಐಟಿ 4 ಪ್ಲಾನ್‌

ಪ್ರಜ್ವಲ್‌ ರೇವಣ್ಣ ಬೆಂಗಳೂರಿಗೆ ಆಗಮಿಸುತ್ತಲೇ ಮಹಿಳೆಯರ ಪ್ರತಿಭಟನೆ, ಬೆಂಬಲಿಗರ ಘೋಷಣೆ, ಪತ್ರಕರ್ತರು ಹಾಗೂ ವಕೀಲರ ಕಣ್ತಪ್ಪಿಸಿ ಕರೆದುಕೊಂಡು ಹೋಗಲು ಎಸ್‌ಐಟಿ 4 ಪ್ಲಾನ್‌ ಮಾಡಿದೆ ಎಂದು ತಿಳಿದುಬಂದಿದೆ. ಟರ್ಮಿನಲ್‌ 2 ಆಗಮನದ ಗೇಟ್‌, ಟರ್ಮಿನಲ್‌ 2 ವಿಐಪಿ ಎಕ್ಸಿಟ್‌ ಗೇಟ್‌, ಟರ್ಮಿನಲ್‌ 2 ಒಳಭಾಗದಿಂದ ಟರ್ಮಿನಲ್‌ 1ರ ಮೂಲಕ ಹೊರತರುವುದು ಇಲ್ಲವೇ ಟರ್ಮಿನಲ್‌ 1 ಬಳಿಯ ಆಲ್ಫಾ ಗೇಟ್‌ನಿಂದ ಪ್ರಜ್ವಲ್‌ ರೇವಣ್ಣ ಅವರನ್ನು ಕರೆದುಕೊಂಡು ಹೋಗಲು ಎಸ್‌ಐಟಿ ಯೋಜನೆ ರೂಪಿಸಿದೆ ಎಂದು ಮೂಲಗಳು ತಿಳಿಸಿವೆ.

ನಾಳೆ ಜಾಮೀನು ಅರ್ಜಿ ವಿಚಾರಣೆ

ಲೈಂಗಿಕ ದೌರ್ಜನ್ಯ, ಸಂತ್ರಸ್ತೆಯ ಅಪಹರಣ ಸೇರಿ ಎಫ್‌ಐಆರ್‌ ದಾಖಲಾಗಿರುವ ಮೂರು ಪ್ರಕರಣಗಳಲ್ಲಿ ನಿರೀಕ್ಷಣಾ ಜಾಮೀನು ನೀಡಬೇಕು ಎಂಬುದಾಗಿ ಪ್ರಜ್ವಲ್‌ ರೇವಣ್ಣ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಮೇ 31ರಂದು ಅರ್ಜಿಯ ವಿಚಾರಣೆ ನಡೆಯಲಿದೆ. ಇನ್ನು, ಭವಾನಿ ರೇವಣ್ಣ ಸಲ್ಲಿಸಿರುವ ನಿರೀಕ್ಷಣಾ ಜಾಮೀನು ಅರ್ಜಿಯ ಕುರಿತ ತೀರ್ಪು ಕೂಡ ಶುಕ್ರವಾರವೇ ಹೊರಬೀಳಲಿದೆ. ಇದರಿಂದಾಗಿ ಶುಕ್ರವಾರವು ಎಚ್‌.ಡಿ.ರೇವಣ್ಣ ಕುಟುಂಬಕ್ಕೆ ಬಿಗ್‌ ಡೇ ಆಗಿದೆ.

ಇದನ್ನೂ ಓದಿ: Prajwal Revanna Case: ಪ್ರಜ್ವಲ್‌ ರೇವಣ್ಣ ಬಂಧಿಸಲು ಆಗ್ರಹಿಸಿ ಹಾಸನದಲ್ಲಿ ಬೃಹತ್‌ ಪ್ರತಿಭಟನೆ

Continue Reading

ದೇಶ

Azam Khan : ಸಮಾಜವಾದಿ ಪಕ್ಷದ ನಾಯಕ ಅಜಂ ಖಾನ್ ಗೆ 10 ವರ್ಷ ಜೈಲು, 14 ಲಕ್ಷ ದಂಡ

Azam Khan: ಜಿಲ್ಲಾ ಸರ್ಕಾರಿ ವಕೀಲರಾದ ಸೀಮಾ ಸಿಂಗ್ ರಾಣಾ ಮಾತನಾಡಿ, “ಅಜಂ ಖಾನ್ ಅವರನ್ನು ನಿನ್ನೆ ಪ್ರಕರಣವೊಂದರಲ್ಲಿ ದೋಷಿ ಎಂದು ಘೋಷಿಸಲಾಯಿತು. ಶಿಕ್ಷೆಯ ಪ್ರಮಾಣವನ್ನು ಇಂದು ಘೋಷಿಸಲಾಗಿದೆ. ಆತನಿಗೆ 10 ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗಿದೆ. ಅವರಿಗೆ ಒಟ್ಟು 14 ಲಕ್ಷ ರೂ.ಗಳ ದಂಡವನ್ನೂ ವಿಧಿಸಲಾಗಿದೆ ಎಂದು ಹೇಳಿದ್ದಾರೆ.

VISTARANEWS.COM


on

Azam Khan
Koo

ಲಖನೌ: ಬಲವಂತವಾಗಿ ವ್ಯಕ್ತಿಯೊಬ್ಬರ ಮನೆ ತೆರವು ಮಾಡಿದ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ಹಿರಿಯ ನಾಯಕ ಅಜಂ ಖಾನ್ ಗೆ (Azam Khan) 10 ವರ್ಷಗಳ ಜೈಲು ಶಿಕ್ಷೆ ಘೋಷಣೆಯಾಗಿದೆ. ಅದೇ ರೀತಿ 14 ಲಕ್ಷ ರೂಪಾಯಿ ದಂಡವನ್ನೂ ವಿಧಿಸಲಾಗಿದೆ. ಎಂಟು ವರ್ಷಗಳ ಹಳೆಯ ಪ್ರಕರಣ ಇದಾಗಿದ್ದು, ಮನೆಯನ್ನು ಬಲವಂತವಾಗಿ ಖಾಲಿ ಮಾಡಿ ಮಾಲೀಕರನ್ನು ಥಳಿಸಿದ್ದ ಪ್ರಕರಣ ಇದಾಗಿದೆ. ಪ್ರಕರಣದಲ್ಲಿ ಉತ್ತರ ಪ್ರದೇಶದ ರಾಂಪುರದ ನ್ಯಾಯಾಲಯವು ಮೊಹಮ್ಮದ್ ಅಜಂ ಖಾನ್ ಅವರನ್ನು ದೋಷಿ ಎಂದು ಬುಧವಾರ ತೀರ್ಪು ನೀಡಿತ್ತು.

ಜಿಲ್ಲಾ ಸರ್ಕಾರಿ ವಕೀಲರಾದ ಸೀಮಾ ಸಿಂಗ್ ರಾಣಾ ಮಾತನಾಡಿ, “ಅಜಂ ಖಾನ್ ಅವರನ್ನು ನಿನ್ನೆ ಪ್ರಕರಣವೊಂದರಲ್ಲಿ ದೋಷಿ ಎಂದು ಘೋಷಿಸಲಾಯಿತು. ಶಿಕ್ಷೆಯ ಪ್ರಮಾಣವನ್ನು ಇಂದು ಘೋಷಿಸಲಾಗಿದೆ. ಆತನಿಗೆ 10 ವರ್ಷಗಳ ಜೈಲು ಶಿಕ್ಷೆ ವಿಧಿಸಲಾಗಿದೆ. ಅವರಿಗೆ ಒಟ್ಟು 14 ಲಕ್ಷ ರೂ.ಗಳ ದಂಡವನ್ನೂ ವಿಧಿಸಲಾಗಿದೆ ಎಂದು ಹೇಳಿದ್ದಾರೆ.

ಈ ವಿಷಯವು ರಾಂಪುರದ ಡುಂಗರಪುರ ಬಸ್ತಿಗೆ ಸಂಬಂಧಿಸಿದ್ದಾಗಿದೆ. ದೂರುದಾರ ಅಬ್ರಾರ್ ಅವರು 2019 ರಲ್ಲಿ ಅಜಂ ಖಾನ್ ವಿರುದ್ಧ ದೂರು ನೀಡಿದ್ದರು. 2019 ರಲ್ಲಿ ಅವರ ಮನೆಗೆ ಬಲವಂತವಾಗಿ ಪ್ರವೇಶಿಸಿ, ಲೂಟಿ ಮಾಡಿದ್ದರು. ಜೀವ ಬೆದರಿಕೆಗಳ ಹಾಕಿ ಬುಲ್ಡೋಜರ್ ಬಳಸಿ ಮನೆಯನ್ನು ನೆಲಸಮಗೊಳಿಸಿದ್ದರು ಎಂದು ಆರೋಪಿಸಿ ದೂರು ದಾಖಲಿಸಿದ್ದರು. ಪ್ರಕರಣದ ಎರಡನೇ ಅರೋಪಿ ಬರ್ಕತ್ ಅಲಿಗೆ ಏಳು ವರ್ಷಗಳ ಜೈಲು ಶಿಕ್ಷೆ ಮತ್ತು ಒಟ್ಟು 6 ಲಕ್ಷ ರೂ. ದಂಡ ವಿಧಿಸಲಾಗಿದೆ ಎಂಬುದಾಗಿಯೂ ವಕೀಲರು ಹೇಳಿದ್ದಾರೆ. ಈ ಪ್ರಕರಣದಲ್ಲಿ ಖಾನ್ ವಿರುದ್ಧ ಪಿತೂರಿಯ ಆರೋಪವಿದೆ.ಅಲಿ ಈ ದಂಡವನ್ನು ಪಾವತಿಸಲು ವಿಫಲವಾದರೆ, ಅವರು 18 ತಿಂಗಳ ಕಠಿಣ ಜೈಲು ಶಿಕ್ಷೆಯನ್ನು ಅನುಭವಿಸಬೇಕಾಗುತ್ತದೆ ಎಂದು ನ್ಯಾಯಾಲಯ ಹೇಳಿದೆ.

ಇದನ್ನೂ ಓದಿ: ಕಾಶ್ಮೀರ ಗಡಿಯಲ್ಲಿ ರಕ್ಷಣಾ ಬಲ ಹೆಚ್ಚಿಸಿಕೊಳ್ಳಲು ಕಂತ್ರಿ ಪಾಕಿಸ್ತಾನಕ್ಕೆ ಕುತಂತ್ರಿ ಚೀನಾ ನೆರವು; ಸ್ಫೋಟಕ ವರದಿ ಇಲ್ಲಿದೆ

ಅಲಿಗೆ ಸೆಕ್ಷನ್ 392 ರ ಅಡಿಯಲ್ಲಿ ಏಳು ವರ್ಷ ಜೈಲು ಶಿಕ್ಷೆ ಮತ್ತು 3 ಲಕ್ಷ ರೂ., ಸೆಕ್ಷನ್ 452 ರ ಅಡಿಯಲ್ಲಿ ಆರು ವರ್ಷ ಜೈಲು ಶಿಕ್ಷೆ ಮತ್ತು 2 ಲಕ್ಷ ರೂ.ಗಳ ದಂಡ, ಸೆಕ್ಷನ್ 504 ರ ಅಡಿಯಲ್ಲಿ ಎರಡು ವರ್ಷ ಜೈಲು ಶಿಕ್ಷೆ ಮತ್ತು 50,000 ರೂ. ದಂಡ ವಿಧಿಸಲಾಗಿದೆ.

ವಿವಿಧ ಪ್ರಕರಣಗಳಲ್ಲಿ ಶಿಕ್ಷೆಗೊಳಗಾದ ನಂತರ ಎಸ್ಪಿ ನಾಯಕ ಖಾನ್ ಪ್ರಸ್ತುತ ಸೀತಾಪುರ ಜೈಲಿನಲ್ಲಿದ್ದಾರೆ. 2022 ರಲ್ಲಿ, ದ್ವೇಷ ಭಾಷಣ ಪ್ರಕರಣದಲ್ಲಿ ಶಿಕ್ಷೆಗೊಳಗಾದ ನಂತರ ಅವರು ಮೂರು ವರ್ಷಗಳ ಕಾಲ ಉತ್ತರ ಪ್ರದೇಶ ವಿಧಾನಸಭಾ ಸದಸ್ಯತ್ವ ಕಳೆದುಕೊಂಡಿದ್ದರು.

Continue Reading

ಪ್ರಮುಖ ಸುದ್ದಿ

ಕಾಶ್ಮೀರ ಗಡಿಯಲ್ಲಿ ರಕ್ಷಣಾ ಬಲ ಹೆಚ್ಚಿಸಿಕೊಳ್ಳಲು ಕಂತ್ರಿ ಪಾಕಿಸ್ತಾನಕ್ಕೆ ಕುತಂತ್ರಿ ಚೀನಾ ನೆರವು; ಸ್ಫೋಟಕ ವರದಿ ಇಲ್ಲಿದೆ

ಜಮ್ಮು-ಕಾಶ್ಮೀರ ಗಡಿಯಲ್ಲಿ ಪಾಕಿಸ್ತಾನವು ಕಮ್ಯುನಿಕೇಷನ್‌ ಟವರ್‌ ನಿರ್ಮಾಣ, ಸುರಂಗಗಳಲ್ಲಿ ಕೇಬಲ್‌ಗಳ ಅಳವಡಿಕೆ ಸೇರಿ ಹಲವು ರೀತಿಯಲ್ಲಿ ರಕ್ಷಣಾ ಬಲ ಹೆಚ್ಚಿಸಿಕೊಳ್ಳುತ್ತಿದೆ. ಆರ್ಥಿಕವಾಗಿ ದಿವಾಳಿಯಾಗಿರುವ, ಆಂತರಿಕ ಗಲಭೆಗಳಿಗೆ ಕಾರಣವಾಗಿರುವ ಪರಿಸ್ಥಿತಿಯಲ್ಲೂ ಚೀನಾದ ನೆರವಿನಿಂದ ಪಾಕಿಸ್ತಾನವು ಗಡಿಯಲ್ಲಿ ರಕ್ಷಣಾ ಬಲ ಹೆಚ್ಚಿಸಿಕೊಂಡಿದೆ ಎಂದು ತಿಳಿದುಬಂದಿದೆ.

VISTARANEWS.COM


on

Border
Koo

ನವದೆಹಲಿ: ಲಡಾಕ್‌ ಗಡಿಯಲ್ಲಿ ಹೆಚ್ಚುವರಿ ಸೈನಿಕರನ್ನು ನಿಯೋಜಿಸಿ ಉಪಟಳ ಮಾಡುವ ಚೀನಾದ ಮತ್ತೊಂದು ನರಿ ಬುದ್ಧಿ ಬಯಲಾಗಿದೆ. ಜಮ್ಮು-ಕಾಶ್ಮೀರ (Jammu Kashmir) ಗಡಿಯಲ್ಲಿ ಪಾಕಿಸ್ತಾನವು ತನ್ನ ರಕ್ಷಣಾ ಬಲವನ್ನು ಹೆಚ್ಚಿಸಿಕೊಳ್ಳಲು ಚೀನಾ (China) ಹಣಕಾಸು ನೆರವು ನೀಡಿದೆ ಎಂಬ ಸ್ಫೋಟಕ ವರದಿ ಬಯಲಾಗಿದೆ. ಪಾಕಿಸ್ತಾನದಲ್ಲಿ (Pakistan) ಉಗ್ರವಾದದ ಪೋಷಣೆಗೆ ಕಮ್ಯುನಿಸ್ಟ್‌ ರಾಷ್ಟ್ರದ ನೆರವಿದೆ. ಭಾರತದ (India) ವಿರುದ್ಧ ಮಾಲ್ಡೀವ್ಸ್‌ ಅಧ್ಯಕ್ಷ ಮೊಹಮ್ಮದ್‌ ಮುಯಿಜು ಅವರನ್ನು ಎತ್ತಿಕಟ್ಟುತ್ತದೆ. ಇದರ ಬೆನ್ನಲ್ಲೇ, ಕಾಶ್ಮೀರ ಗಡಿಯಲ್ಲಿ ಚೀನಾದ ಮತ್ತೊಂದು ಉದ್ಧಟತನ ಬೆಳಕಿಗೆ ಬಂದಿದೆ.

ಹೌದು, ಜಮ್ಮು-ಕಾಶ್ಮೀರದ ಗಡಿ ನಿಯಂತ್ರಣ ರೇಖೆ (LoC) ಬಳಿ ಪಾಕಿಸ್ತಾನವು ಬಂಕರ್‌ಗಳು, ಮಾನವಸಹಿತ ಹಾಗೂ ಪ್ರತಿದಾಳಿ ಮಾಡುವ ಏರಿಯಲ್‌ ವೆಹಿಕಲ್‌ಗಳ (ಡ್ರೋನ್‌ಗಳು) ನಿಯೋಜನೆ, ಅತ್ಯಾಧುನಿಕ ಕಮ್ಯುನಿಕೇಷನ್‌ ಟವರ್‌ಗಳ ನಿರ್ಮಾಣ, ಸುರಂಗ ಮಾರ್ಗಗಳಲ್ಲಿ ಫೈಬರ್‌ ಕೇಬಲ್‌ಗಳ ಅಳವಡಿಕೆ ಸೇರಿ ಹಲವು ರೀತಿಯಲ್ಲಿ ಪಾಕಿಸ್ತಾನದ ರಕ್ಷಣಾ ಬಲ ಹೆಚ್ಚಾಗಲು ಚೀನಾ ಕಳೆದ ಮೂರು ವರ್ಷಗಳಿಂದ ನೆರವು ನೀಡುತ್ತಿದೆ ಎಂಬುದಾಗಿ ತಿಳಿದುಬಂದಿದೆ.

Terrorists Killed

ರೇಡಾರ್‌ಗಳ ನೆರವು

ಮಧ್ಯಮ ಹಾಗೂ ಕಡಿಮೆ ಎತ್ತರದಲ್ಲಿ ಒದಗಿರುವ ಅಪಾಯವನ್ನು ನಿಗ್ರಹಿಸಲು ಚೀನಾ ತಾರಿಸಿದ ಜೆವೈ ಹಾಗೂ ಎಚ್‌ಜಿಆರ್‌ ಸರಣಿಯ ರೇಡಾರ್‌ಗಳನ್ನು ಕೂಡ ಚೀನಾ ನೀಡಿದೆ. ಇದರಿಂದ ಭಾರತೀಯ ಸೇನೆಯ ಚಟುವಟಿಕೆ, ಕಾರ್ಯಾಚರಣೆಗಳ ಮೇಲೆ ನಿಗಾ ಇಡಲು ಪಾಕಿಸ್ತಾನಕ್ಕೆ ನೆರವಾಗಿದೆ. ಇವುಗಳ ಜತೆಗೆ 155 ಎಂಎಂ ಹೌವಿಟ್ಜರ್‌ ಗನ್‌ಗಳನ್ನೂ ಚೀನಾ ನೀಡಿದೆ. ಜಮ್ಮು-ಕಾಶ್ಮೀರ ಗಡಿಯಲ್ಲಿ ಹಲವು ಕಡೆ ಇವುಗಳನ್ನು ನಿಯೋಜಿಸಲಾಗಿದೆ ಎಂದು ವರದಿಯೊಂದು ತಿಳಿಸಿದೆ.

2016ರಲ್ಲಿ ಉರಿ ದಾಳಿಗೆ ಭಾರತೀಯ ಸೇನೆಯು ಸರ್ಜಿಕಲ್‌ ಸ್ಟ್ರೈಕ್‌ ಮೂಲಕ ತಿರುಗೇಟು ನೀಡಿದೆ. 2019ರಲ್ಲಿ ಪುಲ್ವಾಮ ದಾಳಿಗೆ ಬಾಲಾಕೋಟ್‌ ವಾಯುದಾಳಿ ಮೂಲಕ ಎದುರೇಟು ಕೊಟ್ಟಿದೆ. ಜಮ್ಮು-ಕಾಶ್ಮೀರದಲ್ಲಿ ಸೇನೆಗೆ ಹೆಚ್ಚಿನ ಅಧಿಕಾರ ನೀಡುವ, 370ನೇ ವಿಧಿ ರದ್ದುಗೊಳಿಸುವ ಮೂಲಕ ಉಗ್ರರು, ಕಲ್ಲುತೂರಾಟಗಾರರನ್ನು ನಿಗ್ರಹಿಸಲಾಗಿದೆ. ಇದರ ಪರಿಣಾಮವಾಗಿ, ಗಡಿಯ ಹೊರತಾಗಿ ಭಾರತದಲ್ಲಿ ಯಾವುದೇ ಉಪಟಳ ಮಾಡಲು ಪಾಕಿಸ್ತಾನಕ್ಕೆ ಸಾಧ್ಯವಾಗುತ್ತಿಲ್ಲ. ಮತ್ತೊಂದೆಡೆ ಪಾಕಿಸ್ತಾನವು ಹಣಕಾಸು ವಿಚಾರದಲ್ಲಿ ದಿವಾಳಿಯಾಗಿದೆ. ಇದೇ ಕಾರಣಕ್ಕೆ ಮತ್ತೆ ಚೀನಾದ ಹಣದಿಂದ ಗಡಿಯಲ್ಲಿ ರಕ್ಷಣಾ ಬಲ ಹೆಚ್ಚಿಸಿಕೊಳ್ಳುತ್ತಿದೆ ಎಂದು ಹೇಳಲಾಗುತ್ತಿದೆ.

ಇದನ್ನೂ ಓದಿ: RBI Balance Sheet: ಪಾಕಿಸ್ತಾನದ ಜಿಡಿಪಿಗಿಂತ ಆರ್‌ಬಿಐ ಬ್ಯಾಲೆನ್ಸ್‌ ಶೀಟ್‌ ಎರಡೂವರೆ ಪಟ್ಟು ಹೆಚ್ಚು; ಹೀಗಿದೆ ವರದಿ

Continue Reading
Advertisement
Star Fashion
ಫ್ಯಾಷನ್22 mins ago

Star Fashion: ಪಂಚೆ ಜೊತೆ ಟ್ರೋಫಿ ಜಾಕೆಟ್‌ ಧರಿಸಿದ ನಟಿ ತಮನ್ನಾಳ ಯೂನಿಕ್‌ ಫ್ಯಾಷನ್‌!

Health Insurance
ಮನಿ-ಗೈಡ್36 mins ago

Health Insurance: ಕ್ಯಾಶ್​ಲೆಸ್​ ಕ್ಲೈಮ್‌ ಗಳಿಗೆ ಆಸ್ಪತ್ರೆಯಲ್ಲಿ ಇನ್ನು ಹೆಚ್ಚು ಹೊತ್ತು ಕಾಯಬೇಕಿಲ್ಲ; ಇಲ್ಲಿದೆ ಹೊಸ ನಿಯಮ

First successful TAVR surgery in the state at Fortis Hospital
ಬೆಂಗಳೂರು38 mins ago

Fortis Hospital: ರಾಜ್ಯದಲ್ಲೇ ಮೊದಲ ಬಾರಿಗೆ ಅಪರೂಪದ ಶಸ್ತ್ರಚಿಕಿತ್ಸೆ

MLA Belur Gopalakrishna election campaign for Congress candidates at ripponpete
ರಾಜಕೀಯ46 mins ago

MLC Election: ವಿಧಾನಪರಿಷತ್ ಚುನಾವಣೆ; ಕಾಂಗ್ರೆಸ್ ಅಭ್ಯರ್ಥಿಗಳ ಪರ ಶಾಸಕ ಬೇಳೂರು ಗೋಪಾಲಕೃಷ್ಣ ಮತಯಾಚನೆ

Vijayanagara News Distribute good quality sowing seeds and fertilizers says Tehsildar Amaresh G K
ವಿಜಯನಗರ47 mins ago

Vijayanagara News: ಉತ್ತಮ ಗುಣಮಟ್ಟದ ಬಿತ್ತನೆ ಬೀಜ, ರಸಗೊಬ್ಬರ ವಿತರಿಸಿ: ತಹಸೀಲ್ದಾರ್‌ ಅಮರೇಶ್

Vishwadarshan Education Institute President Hariprakash konemane spoke in Training Workshop for Vishwadarshan Central School Teachers at Yallapura
ಉತ್ತರ ಕನ್ನಡ49 mins ago

Uttara Kannada News: ಸಂಸ್ಕಾರಯುತ, ಗುಣಾತ್ಮಕ ಶಿಕ್ಷಣ ನೀಡುವಲ್ಲಿ ವಿಶ್ವದರ್ಶನ ಶಿಕ್ಷಣ ಸಂಸ್ಥೆ ಮುಂಚೂಣಿ: ಹರಿಪ್ರಕಾಶ್‌ ಕೋಣೆಮನೆ

indo Chaina border
ದೇಶ49 mins ago

Indo China Border : ಸಿಕ್ಕಿಂನಿಂದ 150 ಕಿ.ಮೀ ದೂರದಲ್ಲಿ ಚೀನಾದಿಂದ ಅತ್ಯಾಧುನಿಕ ಯುದ್ಧ ವಿಮಾನ ನಿಯೋಜನೆ

Prevention Of Obesity
ಆರೋಗ್ಯ52 mins ago

Prevention Of Obesity: ಆರೋಗ್ಯಪೂರ್ಣ ಜೀರ್ಣಕ್ರಿಯೆ ಮೂಲಕ ಬೊಜ್ಜು ನಿವಾರಣೆ ಸಾಧ್ಯ

Karnataka Weather Forecast
ಮಳೆ54 mins ago

Karnataka Weather : ರಾಜ್ಯಾದ್ಯಂತ ಜೂನ್‌ ಮೊದಲ ವಾರ ಅಬ್ಬರಿಸಲಿದ್ಯಾ ಮಳೆ; ಕುಸಿಯಲಿದೆ ತಾಪಮಾನ

Union Minister Pralhad Joshi Statement
ಕರ್ನಾಟಕ1 hour ago

Pralhad Joshi: ಕನ್ನಡಿಗರ ತೆರಿಗೆಯಲ್ಲಿ ಕೇರಳಿಗರನ್ನು ಸಾಕುತ್ತಿದ್ದಾರೆ ಸಿದ್ದರಾಮಯ್ಯ: ಜೋಶಿ ಆರೋಪ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Assault Case in Shivamogga
ಕ್ರೈಂ6 hours ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ2 days ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು2 days ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ3 days ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ4 days ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು4 days ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

Karnataka Rain
ಮಳೆ5 days ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ1 week ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ1 week ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ1 week ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

ಟ್ರೆಂಡಿಂಗ್‌