ವಿಸ್ತಾರ TOP 10 NEWS | 10 ಲಕ್ಷ ಉದ್ಯೋಗದ ಮೊದಲ ಕಂತಿನಿಂದ ಸರ್ಕಾರಿ ಶಾಲೆ ತಿಂಗಳ ಕಂತಿನ ಸುತ್ತೋಲೆ ವಾಪಸ್‌ವರೆಗೆ ಪ್ರಮುಖ ಸುದ್ದಿ - Vistara News

ಕರ್ನಾಟಕ

ವಿಸ್ತಾರ TOP 10 NEWS | 10 ಲಕ್ಷ ಉದ್ಯೋಗದ ಮೊದಲ ಕಂತಿನಿಂದ ಸರ್ಕಾರಿ ಶಾಲೆ ತಿಂಗಳ ಕಂತಿನ ಸುತ್ತೋಲೆ ವಾಪಸ್‌ವರೆಗೆ ಪ್ರಮುಖ ಸುದ್ದಿ

ವಿಸ್ತಾರ ಟಾಪ್‌ 10 NEWS ದೇಶದಲ್ಲಿ ಉದ್ಯೋಗ ಪರ್ವದಿಂದ ಆರಂಭವಾಗಿ ಪುನೀತ್‌ ಪರ್ವದ ಸಂಭ್ರಮದ ನಡುವೆ ಅಭಿಯಾನಿಯ ಸಾವಿನವರೆಗೆ ದಿನದ ಪ್ರಮುಖ ಸುದ್ದಿಗಳು.

VISTARANEWS.COM


on

vistara top 10
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಕೇಂದ್ರ ಸರ್ಕಾರಿ ಕಚೇರಿಗಳಲ್ಲಿ ಖಾಲಿ ಇರುವ ೧೦ ಲಕ್ಷ ಹುದ್ದೆಗಳನ್ನು ತುಂಬುವ ಮೂಲಕ ಯುವಜನರಿಗೆ ಉದ್ಯೋಗ ನೀಡುವ ಮಹತ್ವಾಕಾಂಕ್ಷಿ ರೋಜ್‌ಗಾರ್‌ ಮೇಳಕ್ಕೆ ಪ್ರಧಾನಿ ಮೋದಿ ಚಾಲನೆ ನೀಡಿದ್ದಾರೆ. ಮೊದಲ ಕಂತಿನಲ್ಲಿ ದೇಶಾದ್ಯಂತ ೭೫ ಸಾವಿರ ಜನರಿಗೆ ನೇಮಕಾತಿ ಪತ್ರ ನೀಡಲಾಗಿದೆ. ಈ ನಡುವೆ, ಸರಕಾರಿ ಶಾಲೆಗಳ ಅಭಿವೃದ್ಧಿಯನ್ನು ಪೋಷಕರ ಕೈಗೆ ದಾಟಿಸಲು ಮುಂದಾಗಿದ್ದ ರಾಜ್ಯ ಶಿಕ್ಷಣ ಇಲಾಖೆ ತನ್ನ ಸುತ್ತೋಲೆ ವಾಪಸ್‌ ಪಡೆದಿದೆ. ಟಿ೨೦ ವಿಶ್ವಕಪ್‌ ಕದನದಲ್ಲಿ ಭಾರತ-ಪಾಕಿಸ್ತಾನ ಮುಖಾಮುಖಿಯ ರೋಚಕತೆ, ನಾಳೆ ನಭಕ್ಕೇರಲಿರುವ ೩೬ ಉಪಗ್ರಹಗಳ ಕುತುಹೂಲಕಾರಿ ಮಾಹಿತಿಗಳೂ ಸೇರಿದಂತೆ ದಿನದ ಪ್ರಮುಖ ಸುದ್ದಿಗಳ ಗುಚ್ಛ ವಿಸ್ತಾರ TOP 10 NEWS.

Blank Blue

1. Rojgar Mela | 10 ಲಕ್ಷ ಸರ್ಕಾರಿ ಉದ್ಯೋಗ ನೀಡುವ ಯೋಜನೆಗೆ ಚಾಲನೆ, ಮೊದಲ ಮೇಳದಲ್ಲೇ 75 ಮಂದಿಗೆ ನೇಮಕಾತಿ ಪತ್ರ

ಕೇಂದ್ರ ಸರ್ಕಾರದ ನಾನಾ ಇಲಾಖೆಗಳಲ್ಲಿ ಖಾಲಿ ಇರುವ 10 ಲಕ್ಷ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳುವ ರೋಜ್‌ಗಾರ್‌ ಮೇಳವನ್ನು ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಉದ್ಘಾಟಿಸಿದರು. ಮೊದಲ ರೋಜ್‌ಗಾರ್‌ ಮೇಳದಲ್ಲೇ ದೇಶಾದ್ಯಂತ ೭೫ ಸಾವಿರ ಮಂದಿಗೆ ಉದ್ಯೋಗ ನೇಮಕಾತಿ ಪತ್ರ ವಿತರಿಸಲಾಯಿತು. ದೇಶದ ೫೦ ಕಡೆಗಳಲ್ಲಿ ನಡೆದ ಈ ರೋಜ್‌ಗಾರ್‌ ಮೇಳಗಳನ್ನು ಉದ್ದೇಶಿಸಿ ಆನ್‌ಲೈನ್‌ನಲ್ಲಿ ಮಾತನಾಡಿದ ನರೇಂದ್ರ ಮೋದಿ ಅವರು ಈಗ ಯಾರಿಗೆ ನೇಮಕಾತಿ ಪತ್ರ ದೊರೆತಿದೆಯೋ ಅವರೆಲ್ಲರೂ ಜನರ ಸೇವೆಯಲ್ಲಿ ತೊಡಗಿಸಿಕೊಳ್ಳಬೇಕು. ಈ ಸಂಗತಿಯನ್ನು ಮರೆಯಬಾರದು ಎಂದು ಕಿವಿಮಾತು ಹೇಳಿದರು. ಕರ್ನಾಟಕದಲ್ಲೂ ಒಂದು ಸಾವಿರ ಮಂದಿಗೆ ನೇಮಕಾತಿ ಪತ್ರ ನೀಡಲಾಯಿತು. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ

2. Rozgar Melaದಡಿ ಕೇಂದ್ರ ಸರ್ಕಾರಿ ಹುದ್ದೆ ಪಡೆಯುವುದು ಹೇಗೆ?; ಇಲ್ಲಿದೆ ಸಂಪೂರ್ಣ ಮಾಹಿತಿ

ಕೇಂದ್ರ ಸರ್ಕಾರ ರೋಜ್‌ಗಾರ್‌ ಮೇಳಗಳ ಮೂಲಕ ೧೦ ಲಕ್ಷ ಉದ್ಯೋಗ ನೀಡಲಿದೆ. ಸುಮಾರು 39 ಇಲಾಖೆ, ಸೇನೆ, ಅರೆಸೇನಾಪಡೆ, ನಿಗಮ, ಸಂಸ್ಥೆ, ನಿಯಮಿತ ಹಾಗೂ ಇನ್ನಿತರ ಸಂಸ್ಥೆಗಳಲ್ಲಿನ ಖಾಲಿ ಹುದ್ದೆಗಳಿಗೆ ಸದ್ಯವೇ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಖಾಲಿ ಹುದ್ದೆಗಳನ್ನು ಈಗಾಗಲೇ ಪಟ್ಟಿ ಮಾಡಲಾಗುತ್ತಿದ್ದು, ಇವುಗಳಿಗೆ ಮುಂದಿನ ಒಂದು ವರ್ಷದಲ್ಲಿ ನೇಮಕ ಮಾಡಿಕೊಳ್ಳಲಾಗುತ್ತಿದೆ. ಹಾಗಿದ್ದರೆ, ಈ ಉದ್ಯೋಗಗಳನ್ನು ನಮ್ಮ ಯುವಜನರು ಪಡೆದುಕೊಳ್ಳಲು ಏನು ಮಾಡಬೇಕು? ವಿವರ ಇಲ್ಲಿದೆ. ಪೂರ್ಣ ವರದಿಗೆ ಇಲ್ಲಿ ಕ್ಲಿಕ್‌ ಮಾಡಿ

3. ಸರ್ಕಾರಿ ಶಾಲೆಗೆ ಪೋಷಕರಿಂದ ₹100 ವಂತಿಗೆ ಸುತ್ತೋಲೆ ವಾಪಸ್‌; ವಿರೋಧಕ್ಕೆ ಮಣಿದ ಸರ್ಕಾರ

‌ಬೆಂಗಳೂರು: ಸರ್ಕಾರಿ ಶಾಲೆಯಲ್ಲಿ ಪೋಷಕರು ಮಾಸಿಕವಾಗಿ ೧೦೦ ರೂಪಾಯಿ ವಂತಿಗೆ ನೀಡಬೇಕೆಂಬ ನಿಟ್ಟಿನಲ್ಲಿ ಶಿಕ್ಷಣ ಇಲಾಖೆ ಆಯುಕ್ತರು ಹೊರಡಿಸಿರುವ ಸುತ್ತೋಲೆಯನ್ನು ಶನಿವಾರ (ಅ.೨೨) ಸರ್ಕಾರ ವಾಪಸ್‌ ಪಡೆದುಕೊಂಡಿದೆ. ಶಿಕ್ಷಣ ತಜ್ಞರು ಹಾಗೂ ಪ್ರತಿಪಕ್ಷಗಳಿಂದ ವ್ಯಾಪಕ ಟೀಕೆ, ವಿರೋಧಗಳು ವ್ಯಕ್ತವಾದ ಹಿನ್ನೆಲೆಯಲ್ಲಿ ಸರ್ಕಾರ ಈ ನಿರ್ಧಾರಕ್ಕೆ ಬಂದಿದೆ. ಶನಿವಾರ ಬೆಳಗ್ಗೆಯಷ್ಟೇ ಈ ಆದೇಶಕ್ಕೂ ತಮಗೆ ಮತ್ತೆ ಮುಖ್ಯಮಂತ್ರಿಗೆ ಸಂಬಂಧವೇ ಇಲ್ಲ ಎಂದು ಹೇಳಿಕೆ ಕೊಟ್ಟಿದ್ದ ಶಿಕ್ಷಣ ಸಚಿವ ಬಿ.ಸಿ. ನಾಗೇಶ್‌ ಸಂಜೆ ವೇಳೆಗೆ ಯೂ ಟರ್ನ್‌ ಹೊಡೆದರು. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್‌ ಮಾಡಿ.

Blank Blue

4. ದ್ವೇಷ ಭಾಷಣ | ಕ್ರಮ ತೆಗೆದುಕೊಳ್ಳಿ, ಇಲ್ಲ ನ್ಯಾಯಾಂಗ ನಿಂದನೆ ಎದುರಿಸಿ ಎಂದ ಸುಪ್ರೀಂ

ದೇಶದಲ್ಲಿ ದಿನೇದಿನೆ ದ್ವೇಷ ಭಾಷಣ ಹೆಚ್ಚುತ್ತಿರುವುದು ಹಾಗೂ ದ್ವೇಷ ಭಾಷಣ ಕುರಿತು ದಾಖಲಾಗುತ್ತಿರುವ ಕುರಿತು ಸುಪ್ರೀಂ ಕೋರ್ಟ್‌ ಅಸಮಾಧಾನ ವ್ಯಕ್ತಪಡಿಸಿದೆ. “ದ್ವೇಷ ಭಾಷಣ ಕುರಿತು ದಾಖಲಾದ ಕೇಸ್‌ಗಳ ಸಮಗ್ರ ತನಿಖೆ ನಡೆಸಿ, ಕಠಿಣ ಕ್ರಮ ಕೈಗೊಳ್ಳಿ. ಇಲ್ಲದಿದ್ದರೆ, ನ್ಯಾಯಾಂಗ ನಿಂದನೆ ಎದುರಿಸಿ” ಎಂದು ದೇಶದ ಅಧಿಕಾರಿಗಳಿಗೆ ಖಡಕ್‌ ಎಚ್ಚರಿಕೆ ನೀಡಿದೆ. ಪೂರ್ಣ ವರದಿಗೆ ಇಲ್ಲಿ ಕ್ಲಿಕ್‌ ಮಾಡಿ

5. IND vs PAK | ಭಾರತ-ಪಾಕ್‌ ಕ್ರಿಕೆಟ್‌ ಜ್ವರ;
ರೋಚಕ ಹಣಾಹಣಿಗೆ ಮೆಲ್ಬೋರ್ನ್‌ ಅಂಗಣ ರೆಡಿ

ಮೆಲ್ಬೋರ್ನ್‌: ಟಿ೨೦ ವಿಶ್ವಕಪ್‌ ೨೦೨೨ನಲ್ಲಿ ಭಾರತ ಮತ್ತು ಪಾಕಿಸ್ತಾನ ತಂಡಗಳು (IND vs PAK) ಭಾನುವಾರ ಮೆಲ್ಬೋರ್ನ್‌ ಕ್ರಿಕೆಟ್‌ ಸ್ಟೇಡಿಯಮ್‌ನಲ್ಲಿ ಎದುರಾಗಲಿದ್ದು, ಭಾರಿ ರೋಚಕತೆ ಸೃಷ್ಟಿಯಾಗಿದೆ. ಟಿ ೨೦ ಕ್ರಿಕೆಟ್‌ ವಿಶ್ವಕಪ್‌ ಇತಿಹಾಸದಲ್ಲಿ ಭಾರತ ಮತ್ತು ಪಾಕಿಸ್ತಾನ ಆರು ಬಾರಿ ಮುಖಾಮುಖಿಯಾಗಿದ್ದು, ಐದು ಬಾರಿ ಭಾರತ ಗೆದ್ದಿದೆ. ಹೀಗಾಗಿ ಈ ಬಾರಿಯೂ ಗೆಲುವು ನಮ್ಮದೇ ಎನ್ನುವ ಉತ್ಸಾಹದಲ್ಲಿ ಭಾರತ ತಂಡವಿದೆ. ಇದೊಂದು ಹೈವೋಲ್ಟೇಜ್‌ ಮ್ಯಾಚ್‌ ಆಗಿರುವುದರಿಂದ ಕೋಟ್ಯಂತರ ಪ್ರೇಕ್ಷಕರು ತುದಿಗಾಲಲ್ಲಿ ನಿಂತು ಕಾಯುತ್ತಿದ್ದಾರೆ. ಪೂರ್ಣ ವರದಿಗೆ ಇಲ್ಲಿ ಕ್ಲಿಕ್‌ ಮಾಡಿ

6. ಸವಿಸ್ತಾರ ಅಂಕಣ | ಗೊಂದಲದ ಮಾತಿನ ಮೂಲಕ ʼಭಾರತ ಭಂಜನೆʼ ಮಾಡುವಿರೇಕೆ?

ಒಳಗಿದ್ದು ಟೀಕಿಸಿದವರನ್ನು, ದೋಷ ಸರಿಪಡಿಸುವ ಚಿಕಿತ್ಸಕ ದೃಷ್ಟಿಯಿಂದ ತೆಗಳಿದವರನ್ನೂ ಹಿಂದು ಧರ್ಮ ಗೌರವಿಸಿದೆ. ಆದರೆ, ಭೂತ ಕೋಲ ಹಿಂದು ಧರ್ಮಕ್ಕೆ ಸಂಬಂಧಿಸಿದ್ದಲ್ಲ ಎನ್ನುವಂಥ ಹೊಣೆಗೇಡಿಗಳನ್ನು ಈ ಧರ್ಮ ಎಂದಿಗೂ ಒಪ್ಪುವುದಿಲ್ಲ ಎನ್ನುತ್ತಾರೆ ವಿಸ್ತಾರ ನ್ಯೂಸ್‌ನ ಪ್ರಧಾನ ಸಂಪಾದಕರಾದ ಹರಿಪ್ರಕಾಶ್‌ ಕೋಣೆಮನೆ ತಮ್ಮ ಸವಿಸ್ತಾರ ಅಂಕಣದಲ್ಲಿ. ಪೂರ್ಣ ಲೇಖನಕ್ಕೆ ಈ ಲಿಂಕ್‌ ಕ್ಲಿಕ್‌ ಮಾಡಿ

7. ವಿಸ್ತಾರ Explainer | ರಷ್ಯಾದ ನಷ್ಟ ಭಾರತಕ್ಕೆ ಲಾಭ! ನಾಳೆ ವನ್‌ವೆಬ್ ಉಪಗ್ರಹಗಳ ಉಡಾವಣೆ

ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ (ISRO) ಎಲ್‌ವಿಎಂ3 ಉಡ್ಡಯನ ವಾಹನ ಬ್ರಿಟಿಷ್ ಸಂಸ್ಥೆಯಾದ ವನ್‌ವೆಬ್‌(One Web)ನ ಉಪಗ್ರಹಗಳನ್ನು ಅಕ್ಟೋಬರ್ 23ರಂದು ಉಡಾವಣೆಗೊಳಿಸಲಿದೆ. ಎಲ್‌ವಿಎಂ3 ರಾಕೆಟ್ ವನ್‌ವೆಬ್ ಸಂಸ್ಥೆಯ 36 ಉಪಗ್ರಹಗಳನ್ನು ಹೊತ್ತು ಬಾಹ್ಯಾಕಾಶಕ್ಕೆ ಚಿಮ್ಮಲಿದೆ. ಈ ಉಪಗ್ರಹಗಳು ಅತ್ಯಂತ ವೇಗದ, ಕನಿಷ್ಠ ಸುಪ್ತತೆಯ ಜಾಗತಿಕ ಸಂಪರ್ಕ ಸೇವೆಯನ್ನು ಒದಗಿಸಲಿವೆ ಎಂದು ವನ್‌ವೆಬ್ ತನ್ನ ಹೇಳಿಕೆಯಲ್ಲಿ ತಿಳಿಸಿದೆ. ಈ ಉಡಾವಣೆ ಮತ್ತು ಉಪಗ್ರಹಗಳ ವಿಶೇಷತೆಗಳ ಬಗ್ಗೆ ವಿಸ್ತಾರ Explainer ನಲ್ಲಿ ವಿವರ ನೀಡಿದ್ದಾರೆ ಬಾಹ್ಯಾಕಾಶ ಮತ್ತು ರಕ್ಷಣಾ ವಿಶ್ಲೇಷಕ ಗಿರೀಶ್ ಲಿಂಗಣ್ಣ. ವಿವರಕ್ಕೆ ಲಿಂಕ್‌ ಕ್ಲಿಕ್‌ ಮಾಡಿ

Blank Blue

8. ಉತ್ತರ ಪ್ರದೇಶ: 5 ವರ್ಷದಲ್ಲಿ 166 ಕ್ರಿಮಿನಲ್ಸ್ ​ಹತ್ಯೆ;‌ ಜೈಲಲ್ಲಿರ್ಬೇಕು, ಇಲ್ಲ ಸಾಯ್ಬೇಕೆಂದ ಯೋಗಿ

ಉತ್ತರ ಪ್ರದೇಶದಲ್ಲಿ ಕಳೆದ ಐದು ವರ್ಷಗಳಲ್ಲಿ ಪೊಲೀಸ್ ಶೂಟೌಟ್​​ನಿಂದ 166 ಕ್ರಿಮಿನಲ್​ಗಳು ಮೃತಪಟ್ಟಿದ್ದಾರೆ ಮತ್ತು 4453 ಕ್ರಿಮಿನಲ್​​ಗಳು ಗಾಯಗೊಂಡಿದ್ದಾರೆ. ಯೋಗಿ ನೇತೃತ್ವದ ಸರ್ಕಾರ ಆಡಳಿತಕ್ಕೆ ಬಂದಾಗಿನಿಂದಲೂ ಕ್ರಿಮಿನಲ್​​ಗಳ ವಿರುದ್ಧ ಮುಲಾಜಿಲ್ಲದೆ ಕಠಿಣ ಕ್ರಮ ಕೈಗೊಳ್ಳಲಾಗುತ್ತಿದೆ. ಕ್ರಿಮಿನಲ್‌ಗಳು ಒಂದೋ ಜೈಲಿನಲ್ಲಿರಬೇಕು, ಇಲ್ಲವೇ ಸಾಯಬೇಕು ಎನ್ನುವುದು ಯೋಗಿ ಪಾಲಿಸಿ. ಪೂರ್ಣ ವರದಿಗೆ ಕ್ಲಿಕ್‌ ಮಾಡಿ

9. Britain PM | ರಿಷಿ ಸುನಕ್‌ಗೆ 100 ಸಂಸದರ ಬೆಂಬಲ, ಸಮೀಕ್ಷೆಯಲ್ಲೂ ನಂ.1, ಹಾಗಿದ್ರೆ ಗೆಲ್ತಾರಾ?

ಲಿಜ್ ಟ್ರಸ್ ರಾಜೀನಾಮೆಯಿಂದ ತೆರವಾಗಿರುವ ಬ್ರಿಟನ್ ಪ್ರಧಾನಿ ಹುದ್ದೆಗಾಗಿ ಕನ್ಸರ್ವೇಟಿವ್ ಪಕ್ಷದ ನಾಯಕತ್ವಕ್ಕೆ ನಡೆಯುತ್ತಿರುವ ಚುನಾವಣೆ ಪ್ರಕ್ರಿಯೆಯಲ್ಲಿ ಭಾರತೀಯ ಮೂಲದ ಮಾಜಿ ವಿತ್ತ ಸಚಿವ ರಿಷಿ ಸುನಕ್ (Rishi Sunak) ಅವರು ಆರಂಭಿಕ ಮೇಲುಗೈ ಸಾಧಿಸಿದ್ದಾರೆ. ಕನ್ಸರ್ವೇಟಿವ್ ಪಕ್ಷದ ಕನಿಷ್ಠ 100 ಸಂಸದರ ಬೆಂಬಲ ಪಡೆದಿರುವ ಅವರು ಮುಂದಿನ ವಾರ ಅಧಿಕೃತವಾಗಿ ಪಿಎಂ ಹುದ್ದೆಗೆ ತಮ್ಮ ಉಮೇದುವಾರಿಕೆಯನ್ನು ಪ್ರಕಟಿಸಲಿದ್ದಾರೆ. ಈ ಹಿಂದೆ ಮೂರನೇ ಸ್ಥಾನಗಳಿಸಿದ್ದ ಪೆನ್ನಿ ಮೋರ್ಡಾಂಟ್ ಅವರು ಅಧಿಕೃತವಾಗಿಯೇ ಟೋರಿ ಪಕ್ಷದ ನಾಯಕತ್ವದ ರೇಸಿನಲ್ಲಿದ್ದಾರೆ. ಜತೆಗೆ ಮಾಜಿ ಪ್ರಧಾನಿ ಬೋರಿಸ್ ಜಾನ್ಸನ್ ಕೂಡ ಈ ಸ್ಪರ್ಧೆಗೆ ಇಳಿಯುವ ಸಾಧ್ಯತೆ ಇದೆ. ಹಾಗಿದ್ರೆ ಯಾರು ಗೆಲ್ಲಬಹುದು? ಪೂರ್ಣ ವರದಿಗೆ ಈ ಲಿಂಕ್‌ ಕ್ಲಿಕ್‌ ಮಾಡಿ

10. ಪುನೀತ ಪರ್ವ ವೀಕ್ಷಿಸುತ್ತಲೇ ಅಸುನೀಗಿದ ಅಭಿಮಾನಿ; ಛೆ, ಇಂಥ ಮನುಷ್ಯ ಬೇಗ ಹೋಗಬಾರದಿತ್ತು ಎಂದವನೂ ಬಾರದ ಲೋಕಕ್ಕೆ

ಬೆಂಗಳೂರು: ನಟ ಪುನೀತ್‌ ರಾಜಕುಮಾರ್‌ ಅವರ ಸ್ಮರಣಾರ್ಥ ಹಾಗೂ ಅವರ ಅಭಿನಯದ ಕೊನೇ ಚಿತ್ರ ಗಂಧದ ಗುಡಿ ಸಿನಿಮಾದ ಪ್ರೀ ರಿಲೀಸ್‌ ಇವೆಂಟ್‌ನ ಭಾಗವಾಗಿ ಏರ್ಪಡಿಸಲಾಗಿದ್ದ ಪುನೀತ ಪರ್ವ ಕಾರ್ಯಕ್ರಮವನ್ನು ಟಿವಿಯಲ್ಲಿ ವೀಕ್ಷಣೆ ಮಾಡುತ್ತಿರುವ ಸಂದರ್ಭದಲ್ಲಿಯೇ ಅಭಿಮಾನಿಯೊಬ್ಬ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಮಲ್ಲೇಶ್ವರ ನಿವಾಸಿಯಾಗಿರುವ ಗಿರಿರಾಜ್‌ ಮೃತ ದುರ್ದೈವಿ. ಛೆ.. ಇಂಥ ಮನುಷ್ಯ ನಮ್ಮನ್ನು ಬಿಟ್ಟು ಹೋಗಬಾರದಿತ್ತು ಎಂದು ಹೇಳುತ್ತಲೇ ಇದ್ದ ಗಿರಿರಾಜ್‌ ಕಾರ್ಯಕ್ರಮ ವೀಕ್ಷಣೆಯ ನಡುವೆ ಬಾತ್‌ರೂಂಗೆ ಹೋದವರು ಅಲ್ಲೇ ಕುಸಿದುಬಿದ್ದು ಪ್ರಾಣ ಕಳೆದುಕೊಂಡಿದ್ದಾರೆ. ಪೂರ್ಣ ವರದಿಗೆ ಈ ಲಿಂಕ್‌ ಕ್ಲಿಕ್‌ ಮಾಡಿ

ಮತ್ತಷ್ಟು ಪ್ರಮುಖ ಸುದ್ದಿಗಳು

೧. ವಾರದ ವ್ಯಕ್ತಿಚಿತ್ರ | ಹಲವು ಹಿರಿಮೆಗಳನ್ನು ಮುಡಿಗೇರಿಸಿಕೊಂಡ ಕನ್ನಡಿಗ ರೋಜರ್ ಬಿನ್ನಿ ಹೊಸ ಇನಿಂಗ್ಸ್‌ ಶುರು
೨. PayCM | ಕಾಂಗ್ರೆಸ್‌ ಸೋಷಿಯಲ್‌ ಮೀಡಿಯಾ ಸೆಲ್‌ ಮುಖ್ಯಸ್ಥ, ಮೂವರಿಗೆ ನೋಟಿಸ್‌; 25ಕ್ಕೆ ಹಾಜರಿ ಕಡ್ಡಾಯ
೩. Salman Khan | ನಟ ಸಲ್ಮಾನ್​ ಖಾನ್​ಗೆ ಡೆಂಗ್ಯೂ; ಬಿಗ್​ಬಾಸ್​, ಸಿನಿಮಾ ಚಿತ್ರೀಕರಣದಿಂದ ದೂರ
೪. ಈ ರಾಜ್ಯದಲ್ಲಿ ಏಳು ದಿನ ಟ್ರಾಫಿಕ್​ ನಿಯಮ ಉಲ್ಲಂಘನೆಗೆ ಇಲ್ಲ ದಂಡ; ಇದು ಸವಾರರಿಗೆ ದೀಪಾವಳಿ ಗಿಫ್ಟ್ ​​!
೫. Kantara | ಚೇತನ್‌ ಹೇಳಿಕೆ ಚೀಪ್‌ ಪಬ್ಲಿಸಿಟಿ ಅಷ್ಟೆ: ಹಿಂದುತ್ವ, ಬ್ರಾಹ್ಮಣತ್ವ ಒಂದೇ ಎಂದ ಪೇಜಾವರ ಶ್ರೀಗಳು
೬. AIIMS UTurn | ಹಾಲಿ ಸಂಸದರಿಗೆ ವಿಶೇಷ ಸೌಲಭ್ಯ, ಚಿಕಿತ್ಸೆ! ಆದೇಶ ವಾಪಸ್ ಪಡೆದ ಏಮ್ಸ್
7. Bus Accident | ಮಧ್ಯಪ್ರದೇಶದಲ್ಲಿ ಬಸ್​ ಪಲ್ಟಿ; 14 ಪ್ರಯಾಣಿಕರು ಸಾವು, 40 ಮಂದಿಗೆ ಗಾಯ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ವೈರಲ್ ನ್ಯೂಸ್

Viral Video: ರಸ್ತೆ ಜಗಳದಿಂದ ತಪ್ಪಿಸಿಕೊಳ್ಳುವುದು ಹೇಗೆ? ಬೆಂಗಳೂರು ಪೊಲೀಸರ ವಿಡಿಯೊ ಪಾಠ ಇಲ್ಲಿದೆ!

ಬೆಂಗಳೂರು ರಸ್ತೆಗಳಲ್ಲಿ ಗುಂಡಿಗಳು ಸಾಮಾನ್ಯ, ಅಂತೆಯೇ ಜಗಳಗಳು. ಇದು ಕೆಲವೊಮ್ಮೆ ಕೈಕೈ ಮಿಲಾಯಿಸುವ ಹಂತಕ್ಕೂ ಹೋಗುವುದಿದೆ. ಇದನ್ನು ತಪ್ಪಿಸಲು ಬೆಂಗಳೂರು ಪೊಲೀಸರು ಕೆಲವೊಂದು ಸಲಹೆಗಳನ್ನು ನೀಡಿದ್ದು, ಇದು ಸಾಮಾಜಿಕ ಜಾಲತಾಣದಲ್ಲಿ (Viral Video) ಭಾರೀ ವೈರಲ್ ಆಗಿದೆ.

VISTARANEWS.COM


on

By

Viral Video
Koo

ಸಣ್ಣಪುಟ್ಟ ಘಟನೆಗಳು ರಸ್ತೆಯಲ್ಲಿ (road) ಕೆಲವೊಮ್ಮೆ ವಾಹನ (vehicle) ಸವಾರರ ನಡುವೆ ಜಗಳಕ್ಕೆ ಕಾರಣವಾಗುತ್ತಿದೆ. ಇತ್ತೀಚೆಗೆ ಇಂತಹ ಮಾತಿನ ಚಕಮಕಿಯ ಘಟನೆಗಳು ಸಾಮಾನ್ಯವಾಗಿದೆ. ಕೆಲವೊಮ್ಮೆ ಇಂತಹ ಘಟನೆಗಳು ಮಾರಾಮಾರಿಗೂ (physical fights) ಕಾರಣವಾಗಿ, ವಾಹನಗಳಿಗೆ ಹಾನಿ, ವ್ಯಕ್ತಿಗಳಿಗೆ ಗಾಯವನ್ನು ಉಂಟು ಮಾಡುತ್ತದೆ. ಕೊಲೆ ನಡೆದಿದ್ದೂ ಇದೆ.

ಹೆಚ್ಚುತ್ತಿರುವ ಇಂತಹ ಪ್ರಕರಣಗಳ ನಡುವೆ ಬೆಂಗಳೂರು ಪೊಲೀಸರು (bengaluru police) ಈ ರೀತಿಯ ಘಟನೆಗಳನ್ನು ಹೇಗೆ ಎದುರಿಸಬೇಕು ಎಂದು ಸಾಮಾಜಿಕ ಜಾಲತಾಣದ (Viral Video) ಮೂಲಕ ಸಾರ್ವಜನಿಕರಿಗೆ ಉಪಯುಕ್ತ ಸಲಹೆ ಮಾಡಿದ್ದಾರೆ.

ಇನ್‌ಸ್ಟಾಗ್ರಾಮ್‌ನಲ್ಲಿ ಪೊಲೀಸ್ ಇಲಾಖೆ ಜಾಗೃತಿ ವಿಡಿಯೋವನ್ನು ಹಂಚಿಕೊಂಡಿದ್ದು, ಈ ರೀತಿಯ ಸಂದರ್ಭಗಳನ್ನು ಎದುರಿಸುವಾಗ ನಾವು ಶಾಂತವಾಗಿರುವುದು ಬಹಳ ಮುಖ್ಯ ಎಂದಿದ್ದಾರೆ. ಈ ವಿಡಿಯೋ ಕ್ಲಿಪ್ ಪ್ರಯಾಣಿಕರ ನಡುವಿನ ಜಗಳದಿಂದ ಪ್ರಾರಂಭವಾಗುತ್ತದೆ. ಇದು ಹಲವಾರು ಅಂಶಗಳನ್ನು ಒಳಗೊಂಡಿದೆ. ಇದೇ ರೀತಿಯ ಸಂದರ್ಭಗಳು ಬಂದರೆ ಪ್ರಯಾಣಿಕರು ಏನು ಮಾಡಬೇಕೆಂಬ ಕುರಿತು ಮಾರ್ಗದರ್ಶನ ನೀಡುತ್ತದೆ.

ರಸ್ತೆಯಲ್ಲಿ ವಾಹನ ಓಡಿಸುವಾಗ ಸುರಕ್ಷತೆ ಮೊದಲನೆಯದು. ಕೆಲವೊಂದು ಘಟನೆಗಳು ನಮಗೆ ಸಿಟ್ಟು ತರಿಸಬಹುದು. ಆದರೆ ಪರಿಸ್ಥಿತಿಗಳನ್ನು ಹೇಗೆ ಸುರಕ್ಷಿತವಾಗಿ ನಿರ್ವಹಿಸುವುದು ಎಂಬುದರ ಕುರಿತು ಪ್ರಾಯೋಗಿಕ ಸಲಹೆಗಳಿಗಾಗಿ ನಮ್ಮ ಇತ್ತೀಚಿನ ವಿಡಿಯೋವನ್ನು ಪರಿಶೀಲಿಸಿ. ಮಾಹಿತಿಯಲ್ಲಿರಿ, ಸುರಕ್ಷಿತವಾಗಿರಿ ಎಂದು ವಿಡಿಯೋವನ್ನು ಹಂಚಿಕೊಳ್ಳುವಾಗ ಬೆಂಗಳೂರು ಪೊಲೀಸರು ಬರೆದಿದ್ದಾರೆ.

ಶಾಂತವಾಗಿರಿ ಜಗಳ ತಪ್ಪಿಸಿ

ಪ್ರಯಾಣಿಕರೇ ಶಾಂತವಾಗಿರಿ, ಇತರ ವ್ಯಕ್ತಿಗಳೊಂದಿಗೆ ಜಗಳವಾಡುವುದನ್ನು ತಪ್ಪಿಸಿ, ಅದನ್ನು ನೀವೇ ಪರಿಹರಿಸಲು ಪ್ರಯತ್ನಿಸಬೇಡಿ. ವಾಹನದ ವಿವರಗಳನ್ನು ಗಮನಿಸಿ, ತುರ್ತು ಸಹಾಯವಾಣಿ ಸಂಖ್ಯೆಯನ್ನು ಸಂಪರ್ಕಿಸಿ ಮತ್ತು ಘಟನೆಯ ಬಗ್ಗೆ ತಕ್ಷಣ ಮಾಹಿತಿ ನೀಡಿ ಎಂದು ಬೆಂಗಳೂರು ಪೊಲೀಸ್ ಇಲಾಖೆ ಪ್ರಯಾಣಿಕರಲ್ಲಿ ಮನವಿ ಮಾಡಿದೆ.

ಟ್ರಾಫಿಕ್ ಅಡಚಣೆಯನ್ನು ತಪ್ಪಿಸಲು ಮತ್ತು ಘಟನೆ ಅಥವಾ ವಾಹನದ ಫೋಟೋಗಳನ್ನು ತೆಗೆದುಕೊಳ್ಳುವಂತೆ ಅಧಿಕಾರಿಗಳು ವೀಕ್ಷಕರಿಗೆ ಹೇಳಿದ್ದಾರೆ. ಪೊಲೀಸರು ಬಂದಾಗ ಏನಾಯಿತು ಎಂಬುದರ ಕುರಿತು ನಿಮ್ಮ ಸಂಪೂರ್ಣ ಮಾಹಿತಿಯನ್ನು ಒದಗಿಸಿ ಮತ್ತು ಇತರ ವ್ಯಕ್ತಿಗಳಿಗೆ ಅವರ ಅನಿಸಿಕೆ ಹಂಚಿಕೊಳ್ಳಲು ಅವಕಾಶ ಮಾಡಿಕೊಡಿ. ಕೊನೆಯದಾಗಿ ಪೊಲೀಸರಿಗೆ ಕಾನೂನು ಕ್ರಮ ಕೈಗೊಳ್ಳಲು ಅವಕಾಶ ನೀಡಿ ಎಂದು ಹೇಳಿದ್ದಾರೆ.

4 ಲಕ್ಷಕ್ಕೂ ಹೆಚ್ಚು ವೀಕ್ಷಣೆ

ಬೆಂಗಳೂರು ಪೊಲೀಸರು ಕೆಲವೇ ಗಂಟೆಗಳ ಹಿಂದೆ ಹಂಚಿಕೊಂಡಿರುವ ಈ ವಿಡಿಯೋ ಪೋಸ್ಟ್ ಇನ್ ಸ್ಟಾಗ್ರಾಮ್ ನಲ್ಲಿ 4,05,000 ಕ್ಕೂ ಹೆಚ್ಚು ಮಂದಿ ವೀಕ್ಷಿಸಿದ್ದಾರೆ. ಈ ಕ್ಲಿಪ್ ಅನ್ನು ಎಕ್ಸ್ ನಲ್ಲೂ ಹಂಚಿಕೊಳ್ಳಲಾಗಿದೆ. ಹಲವಾರು ಬಳಕೆದಾರರು ಈ ಜಾಗೃತಿ ವಿಡಿಯೋ ಗೆ ಪೊಲೀಸರಿಗೆ ಮೆಚ್ಚುಗೆ ಸೂಚಿಸಿದ್ದಾರೆ. ಆದರೂ ಇಂತಹ ಘಟನೆಗಳು ಸಂಭವಿಸಿದಾಗ ಇಲಾಖೆಯು ಏನನ್ನೂ ಮಾಡುತ್ತಿಲ್ಲ ಎಂದು ಕೆಲವರು ಆರೋಪಿಸಿದರು.

ಇದನ್ನೂ ಓದಿ: IndiGo Flight: ಇಂಡಿಗೊ ವಿಮಾನದಲ್ಲಿ ಮತ್ತೊಂದು ಎಡವಟ್ಟು; ನಿಂತುಕೊಂಡೇ ಪ್ರಯಾಣಿಸಲು ಮುಂದಾದ ಪ್ಯಾಸೆಂಜರ್‌!

ರಸ್ತೆ ಸುರಕ್ಷತೆಯ ಕುರಿತು ಬೆಂಗಳೂರು ಪೊಲೀಸರು ನೀಡಿರುವ ಸಾರ್ವಜನಿಕರಿಗೆ ಶಿಕ್ಷಣವನ್ನು ನಾನು ಇಷ್ಟಪಟ್ಟಿದ್ದೇನೆ. ಪೊಲೀಸ್ ಸಿಬ್ಬಂದಿ ಸೇರಿದಂತೆ ಪ್ರತಿಯೊಬ್ಬರಿಗೂ ಕಾನೂನಿನ ಬಗ್ಗೆ ಇನ್ನೂ ಸ್ಪಷ್ಟ ಮಾಹಿತಿ ಇಲ್ಲ ಎಂದೊಬ್ಬರು ತಮ್ಮ ಅನಿಸಿಕೆ ಬರೆದಿದ್ದಾರೆ.

Continue Reading

ಚಿನ್ನದ ದರ

Gold Rate Today: ಬಂಗಾರದ ಬೆಲೆಯಲ್ಲಿ ಯಥಾಸ್ಥಿತಿ; ಇಂದಿನ ದರಗಳನ್ನು ಇಲ್ಲಿಯೇ ನೋಡಿ

ರಾಜ್ಯದ ಚಿನ್ನದ ಮಾರುಕಟ್ಟೆಯಲ್ಲಿ ಬುಧವಾರ 22 ಕ್ಯಾರಟ್‌ ಮತ್ತು 24 ಕ್ಯಾರಟ್‌ ಬಂಗಾರದ ಧಾರಣೆ (Gold Rate Today) ಏನೂ ವ್ಯತ್ಯಾಸ ಕಂಡಿಲ್ಲ. ಇಂದಿನ ಬೆಂಗಳೂರು ಸುವರ್ಣ ಮಾರುಕಟ್ಟೆಯ ದರಗಳು ಹೀಗಿವೆ.

VISTARANEWS.COM


on

gold rate today beauty
Koo

ಬೆಂಗಳೂರು: ರಾಜ್ಯದ ಚಿನ್ನದ ಮಾರುಕಟ್ಟೆಯಲ್ಲಿ ಬುಧವಾರ 22 ಕ್ಯಾರಟ್‌ ಮತ್ತು 24 ಕ್ಯಾರಟ್‌ ಬಂಗಾರದ ಧಾರಣೆ (Gold Rate Today) ಏನೂ ವ್ಯತ್ಯಾಸ ಕಂಡಿಲ್ಲ. ನಿನ್ನೆ 10 ಗ್ರಾಂ 22 ಕ್ಯಾರಟ್‌ ಮತ್ತು 24 ಕ್ಯಾರಟ್‌ ಚಿನ್ನದ ಬೆಲೆ ಕ್ರಮವಾಗಿ ₹600 ಹಾಗೂ ₹650 ಇಳಿಕೆಯಾಗಿತ್ತು. ಇಂದಿನ ಬೆಂಗಳೂರು ಸುವರ್ಣ ಮಾರುಕಟ್ಟೆಯ ದರಗಳು ಹೀಗಿವೆ.

ಇಂದು ನೀವು ಬೆಂಗಳೂರಿನಲ್ಲಿ ಒಂದು ಗ್ರಾಂ 22 ಕ್ಯಾರಟ್‌ ಚಿನ್ನವನ್ನು ₹6,830ಕ್ಕೆ ಖರೀದಿಸಬಹುದು. ಎಂಟು ಗ್ರಾಂ ಬೆಲೆ ₹54,640 ಇದೆ. 10 ಗ್ರಾಂ ಮತ್ತು 100 ಗ್ರಾಂನ 22 ಕ್ಯಾರಟ್‌ ಚಿನ್ನವನ್ನು ₹68,300 ಮತ್ತು ₹6,83,000 ದರದಲ್ಲಿ ಖರೀದಿಸಬಹುದು. ಒಂದು ಗ್ರಾಂ 24 ಕ್ಯಾರಟ್‌ ಚಿನ್ನದ ಬೆಲೆ ₹7,451 ಆಗಿದ್ದರೆ, ಎಂಟು ಗ್ರಾಂ ಬೆಲೆ ₹59,608 ಆಗಿದೆ. 10 ಗ್ರಾಂ ಮತ್ತು 100 ಗ್ರಾಂ 24 ಕ್ಯಾರಟ್‌ ಚಿನ್ನವನ್ನು ಖರೀದಿಸಲು ಕ್ರಮವಾಗಿ ₹74,510 ಮತ್ತು ₹7,45,100 ವೆಚ್ಚವಾಗಲಿದೆ.

ಒಂದು ಗ್ರಾಂ ಬೆಳ್ಳಿಯ ಬೆಲೆ (Silver rate today) ₹92.50, ಎಂಟು ಗ್ರಾಂ ₹740 ಮತ್ತು 10 ಗ್ರಾಂ ₹925ರಷ್ಟಿದೆ. 100 ಗ್ರಾಂಗೆ ಗ್ರಾಹಕರು ₹9,250 ಮತ್ತು 1 ಕಿಲೋಗ್ರಾಂಗೆ ₹92,500 ಪಾವತಿಸಬೇಕಿದೆ. ಇಲ್ಲಿ ನೀಡಲಾದ ದರಗಳು GST, TCS ಮತ್ತು ಇತರ ಲೆವಿಗಳನ್ನು ಒಳಗೊಂಡಿಲ್ಲ.

ನಗರ22 ಕ್ಯಾರಟ್24 ಕ್ಯಾರಟ್
ದಿಲ್ಲಿ68,45074,660
ಮುಂಬಯಿ68,30074,510
ಬೆಂಗಳೂರು68,30074,510
ಚೆನ್ನೈ68,60074,840

ಮೊದಲ ಬಾರಿಗೆ ಚಿನ್ನದ ಆಭರಣವನ್ನು ಖರೀದಿಸುವಾಗ ಏನು ತಿಳಿದಿರಬೇಕು?

ನೀವು ಚಿನ್ನಕ್ಕಾಗಿ ಹಣವನ್ನು ಖರ್ಚು ಮಾಡಲು ಮುಂದಾಗುವ ಮೊದಲು ಅದರ ಬಗ್ಗೆ ಜ್ಞಾನವನ್ನು ಹೊಂದಿರುವುದು ಉತ್ತಮ. ಚಿನ್ನದಂತಹ ಅಮೂಲ್ಯ ವಸ್ತು ಹಾಗೂ ಹೂಡಿಕೆಗೆ ಸಂಬಂಧಿಸಿದ ವಸ್ತುವನ್ನು ಖರೀದಿಸುವ ಮೊದಲು ನೀವು ಪರಿಶೀಲಿಸಬೇಕಾದ ವಿಷಯಗಳು ಇಲ್ಲಿವೆ.

1) ಮೊದಲನೆಯದು ಶುದ್ಧತೆ. ಬೆಂಗಳೂರಿನಲ್ಲಿ ಸಾಮಾನ್ಯವಾಗಿ ಮಾರಾಟವಾಗುವ ಆಭರಣಗಳು 22 ಕ್ಯಾರೆಟ್ ಚಿನ್ನದ ಆಭರಣ. ಬೆಂಗಳೂರಿನಲ್ಲಿ ಆ ದಿನದ ಚಿನ್ನದ ದರ ಎಷ್ಟಿದೆ ಎಂಬುದನ್ನು ಮೊದಲು ಗಮನದಲ್ಲಿಟ್ಟುಕೊಳ್ಳಬೇಕು. ಬೆಂಗಳೂರಿನಲ್ಲಿ ಚಿನ್ನದ ದರಗಳು ಪ್ರತಿದಿನ ಬದಲಾಗುತ್ತಿರುತ್ತವೆ. ನಿಖರವಾದ ಮಾಹಿತಿ ನೀಡುವ ವೆಬ್‌ಸೈಟ್ ಅನ್ನು ಅವಲಂಬಿಸುವುದು ಉತ್ತಮ.

2) ನೀವು ಖರೀದಿಸುವ ಆಭರಣಗಳ ಮೇಲಿರುವ ಬಿಐಎಸ್ ಹಾಲ್ಮಾರ್ಕ್ ಅನ್ನು ಪರಿಶೀಲಿಸುವುದು ಬಹಳ ಮುಖ್ಯ. ಚಿನ್ನಾಭರಣ ಖರೀದಿಸುವಾಗ BIS ಹಾಲ್‌ಮಾರ್ಕ್ ಅನ್ನು ಪಡೆಯಲಾಗಿದೆ ಎಂದು ಖಚಿತಪಡಿಸಿಕೊಳ್ಳಬೇಕು. ಭಾರತ ಸರ್ಕಾರವು ಚಿನ್ನವು ಅದರ ಮೇಲೆ ನಮೂದಿಸಲಾದ ಕ್ಯಾರಟ್‌ಗಳಷ್ಟೇ ಶುದ್ಧವಾಗಿದೆ ಎಂದು ಆ ಮೂಲಕ ಪ್ರಮಾಣೀಕರಿಸುತ್ತದೆ.

3) ಚಿನ್ನಾಭರಣಕ್ಕೆ ಮೇಕಿಂಗ್ ಚಾರ್ಜ್ ಮತ್ತು ವೇಸ್ಟೇಜ್ ಚಾರ್ಜ್ ಎಂದು ಇರುತ್ತದೆ. ಇದನ್ನು ಪ್ರತಿ ಆಭರಣ ವ್ಯಾಪಾರಿಯೂ ವಿಧಿಸುತ್ತಾರೆ. ನೀವು ಆಭರಣ ವ್ಯಾಪಾರಿಯನ್ನು ಈ ಬಗ್ಗೆ ಕೇಳಿ ಪರಿಶೀಲಿಸುವುದು ಉತ್ತಮ. ಎಲ್ಲಾ ಆಭರಣಗಳಿಗೆ ಮೇಕಿಂಗ್ ಅಥವಾ ವೇಸ್ಟೇಜ್ ಶುಲ್ಕಗಳು ಒಂದೇ ಆಗಿರುತ್ತವೆ ಎಂಬುದನ್ನು ಗಮನಿಸಿ. ಎಷ್ಟು ಶುಲ್ಕ ವಿಧಿಸಲಾಗಿದೆ ಎಂಬುದನ್ನು ದಯವಿಟ್ಟು ಖಚಿತಪಡಿಸಿಕೊಳ್ಳಿ.

4) ನೀವು ದುಬಾರಿ ವಹಿವಾಟು ಮಾಡುತ್ತಿರುವುದರಿಂದ ಚಿನ್ನಾಭರಣದ ಅಸಲಿತನ ಖಚಿತಪಡಿಸಿಕೊಳ್ಳುವುದು ಉತ್ತಮ. ಯಾಕೆಂದರೆ ನೀವು ಖರೀದಿಸುತ್ತಿರುವುದು ಬಹುಕಾಲ ಉಳಿಯುವ, ಹೂಡಿಕೆ ಎಂದು ಪರಿಗಣಿಸಬಹುದಾದ ವಸ್ತು. ಎಲ್ಲೇ ಆಗಲಿ ಚಿನ್ನ ಖರೀದಿಸುವ ಮುನ್ನ ಗುಣಮಟ್ಟದ ಬಗ್ಗೆ ಗಮನ ಹರಿಸಬೇಕು. ಕೆಲವು ದಶಕಗಳ ಹಿಂದೆ, ಚಿನ್ನವನ್ನು ಖರೀದಿಸುವಾಗ ಸುಲಭವಾಗಿ ಮೋಸ ಹೋಗಬಹುದಾಗಿತ್ತು. ಆದರೆ ಇಂದು ಹೆಚ್ಚಿನ ಚಿನ್ನವು ಹಾಲ್ಮಾರ್ಕ್ ಆಗಿದೆ. ಪ್ರತಿಷ್ಠಿತ ಅಂಗಡಿಗಳಲ್ಲಿ ಈ ಬಗ್ಗೆ ಹೆಚ್ಚಿನ ಎಚ್ಚರ ಇರುತ್ತದೆ.

ಇದನ್ನೂ ಓದಿ: Gold Rate Today: ಬಂಗಾರದ ಬೆಲೆ ಇನ್ನೂ ಇಳಿಕೆ; ಇಂದಿನ ಮಾರುಕಟ್ಟೆ ದರಗಳನ್ನು ಇಲ್ಲಿ ಗಮನಿಸಿಕೊಳ್ಳಿ

Continue Reading

ವೈರಲ್ ನ್ಯೂಸ್

CP Yogeshwara: “ಹೊಡೀತಾರೆ, ಭಿಕ್ಷೆ ಬೇಡು ಅನ್ತಾರೆ….ʼʼ ಯೋಗೇಶ್ವರ್‌ ವಿರುದ್ಧ ಕಣ್ಣೀರು ಹಾಕುತ್ತಾ ರೆಬೆಲ್‌ ಆದ ಮಗಳು

CP Yogeshwara: ನಿಶಾ ಯೋಗೇಶ್ವರ್‌ ತಮ್ಮ ತಂದೆಯಿಂದ ದೂರವಾಗಿದ್ದು, ಕಾಂಗ್ರೆಸ್‌ ಸೇರ್ಪಡೆಗೆ ಯತ್ನಿಸುತ್ತಿದ್ದಾರೆ ಎಂದು ಈ ಹಿಂದೆಯೇ ಸುದ್ದಿಯಾಗಿತ್ತು. ಆದರೆ ತಂದೆಯೇ ತಮ್ಮನ್ನು ದೂರವಿಟ್ಟಿದ್ದು, ಕಡೆಗಣಿಸುತ್ತಿದ್ದಾರೆ ಎಂದು ನಿಶಾ ಆರೋಪಿಸಿದ್ದಾರೆ. ಕುಟುಂಬದಿಂದ ತಮ್ಮನ್ನು ತಂದೆಯೇ ದೂರ ಮಾಡಿದ್ದಲ್ಲದೆ, ಕಿರಿಕಿರಿ ನೀಡುತ್ತಿದ್ದಾರೆ ಎಂದು ಆರೋಪಿಸಿ ಸೋಶಿಯಲ್ ಮೀಡಿಯಾದಲ್ಲಿ ವಿಡಿಯೋ ಅಪ್ಲೋಡ್ ಮಾಡಿದ್ದಾರೆ.

VISTARANEWS.COM


on

nisha cp yogeshwara
Koo

ರಾಮನಗರ: ಮಾಜಿ ಸಚಿವ, ಬಿಜೆಪಿ ಮುಖಂಡ ಸಿ.ಪಿ ಯೋಗೇಶ್ವರ್‌ (CP Yogeshwara) ಪುತ್ರಿ ನಿಶಾ (Nisha Yogeshwara) ಅವರು ತಮ್ಮ ತಂದೆಯ ವಿರುದ್ಧ ರೊಚ್ಚಿಗೆದ್ದಿದ್ದು, ಹಲವಾರು ವಿಡಿಯೋಗಳ ಮೂಲಕ ಇನ್‌ಸ್ಟಗ್ರಾಂನಲ್ಲಿ (Social media) ಸಾರ್ವಜನಿಕವಾಗಿ ತಮ್ಮ ಅಳಲು ತೋಡಿಕೊಂಡಿದ್ದಾರೆ. ತಂದೆ ತಮ್ಮ ಮೇಲೆ ಹಲ್ಲೆ (Assault) ಮಾಡುತ್ತಾರೆ, ತಮ್ಮ ಕುಟುಂಬವನ್ನು, ತನ್ನನ್ನು ಕಡೆಗಣಿಸುತ್ತಿದ್ದಾರೆ ಎಂದು ನಿಶಾ (ಈ ಪೋಸ್ಟ್‌ಗಳಲ್ಲಿ ಆರೋಪಿಸಿದ್ದಾರೆ. ಅವರ ಈ ಪೋಸ್ಟ್‌ಗಳು ವೈರಲ್‌ (viral video) ಆಗಿವೆ.

ನಿಶಾ ಯೋಗೇಶ್ವರ್‌ ತಮ್ಮ ತಂದೆಯಿಂದ ದೂರವಾಗಿದ್ದು, ಕಾಂಗ್ರೆಸ್‌ ಸೇರ್ಪಡೆಗೆ ಯತ್ನಿಸುತ್ತಿದ್ದಾರೆ ಎಂದು ಈ ಹಿಂದೆಯೇ ಸುದ್ದಿಯಾಗಿತ್ತು. ಆದರೆ ತಂದೆಯೇ ತಮ್ಮನ್ನು ದೂರವಿಟ್ಟಿದ್ದು, ಕಡೆಗಣಿಸುತ್ತಿದ್ದಾರೆ ಎಂದು ನಿಶಾ ಆರೋಪಿಸಿದ್ದಾರೆ. ಕುಟುಂಬದಿಂದ ತಮ್ಮನ್ನು ತಂದೆಯೇ ದೂರ ಮಾಡಿದ್ದಲ್ಲದೆ, ಕಿರಿಕಿರಿ ನೀಡುತ್ತಿದ್ದಾರೆ ಎಂದು ಆರೋಪಿಸಿ ಸೋಶಿಯಲ್ ಮೀಡಿಯಾದಲ್ಲಿ ವಿಡಿಯೋ ಅಪ್ಲೋಡ್ ಮಾಡಿದ್ದಾರೆ.

ಯೋಗೇಶ್ವರ್ ಮಕ್ಕಳಾದ ತಮ್ಮನ್ನು ದೂರ ಮಾಡಿದ್ದಾರೆ. ಮನೆಗೆ ಹೋದರೆ ತಮ್ಮ ಮೇಲೆ ಹಲ್ಲೆ ಮಾಡ್ತಾರೆ. ಅವರನ್ನು ಮಾತನಾಡಿಸಲು ಹೋದರೆ ರಪರಪ ಎಂದು ಹೊಡೆಯುತ್ತಾರೆ. ಏನಾರೂ ಕೇಳಿದರೆ, ನಮ್ಮ ಬಳಿ ಬರಬೇಡ, ಬೇಕಾದರೆ ಭಿಕ್ಷೆ ಮಾಡಿಕೊಂಡು ಜೀವನ ಮಾಡು ಎನ್ನುತ್ತಾರೆ. ನಮಗೆ ತಂದೆಯ ಪ್ರೀತಿ ಸಿಗಲಿಲ್ಲ, ಅವರು ಆದರ್ಶ ಅಪ್ಪನಾಗಲಿಲ್ಲ ಎಂದು ಕಣ್ಣೀರು ಹಾಕಿದ್ದಾರೆ. ರಾಮಾಯಣದ ಕಥೆ ಹೇಳಿ, ಕುಟುಂಬದಲ್ಲಿರುವ ಜಗಳವನ್ನು ಎಳೆ ಎಳೆಯಾಗಿ ವಿವರಿಸಿದ್ದಾರೆ.

ʼನಿಶಾ ಯೋಗೇಶ್ವರ್‌ʼ ಎಂದು ಬಳಸುತ್ತಿರುವ ತನ್ನ ಹೆಸರಿನಲ್ಲಿ ʼಯೋಗೇಶ್ವರ್ʼ ಹೆಸರು ಬಳಸದಂತೆ ಸೋಶಿಯಲ್ ಮೀಡಿಯಾದಲ್ಲಿ ಕೆಲವರು ಧಮಕಿ ಹಾಕುತ್ತಿದ್ದಾರೆ. ತನ್ನ ತಾಯಿ ಯೋಗೇಶ್ವರ್‌ ಅವರ ಚುನಾವಣೆ ಪ್ರಚಾರಕ್ಕಾಗಿ ತೆರಳಿದ್ದರು. ಆದರೆ ತಂದೆ, ತಾಯಿಗೆ ಕಪಾಳಮೋಕ್ಷ ಮಾಡಿದರು. ತನ್ನ ತಮ್ಮನಿಗೂ ಥಳಿಸಿದ್ದಾರೆ. ಮೊದಲ ಪತ್ನಿ ಹಾಗೂ ಮಕ್ಕಳನ್ನು ಯೋಗೇಶ್ವರ್‌ ಕಡೆಗಣಿಸುತ್ತಿದ್ದಾರೆ ಎಂದು ನಿಶಾ ಅಳಲು ತೋಡಿಕೊಂಡಿದ್ದಾಎ.

20 ವರ್ಷ ಹಿಂದೆ ನಮಗೆ ಹೇಳದೆ ಕೇಳದೆ ತಂದೆ ಬೇರೆ ಸಂಸಾರ ಕಟ್ಟಿಕೊಂಡರು. ಆದರ್ಶ ಮಗಳಾಗು ಎಂದು ನನಗೆ ಹೇಳುತ್ತಾರೆ. ಅವರು ಆದರ್ಶ ತಂದೆಯಾಗಬೇಕಲ್ಲವೇ? ಮೊದಲನೇ ಮದುವೆಯ ಮಕ್ಕಳನ್ನು ಬೆಳೆಸಬೇಕಲ್ಲವೇ? ಇಂಥ ತಂದೆಯ ಜೊತೆಗೆ ಹೇಗಿರಲಿ? ಎಂದು ಯೋಗೇಶ್ವರ್ ಎರಡನೇ ಪತ್ನಿ, ಮಕ್ಕಳ ಬಗ್ಗೆ ಪ್ರಸ್ತಾಪ ಮಾಡಿ ಆಕ್ಷೇಪಿಸಿದ್ದಾರೆ.

ಇದನ್ನೂ ಓದಿ: Viral Video:‌ ಅಬ್ಬಾ..ಇದೆಂಥಾ ಹುಚ್ಚಾಟ; ಸ್ವಲ್ಪ ಮಿಸ್‌ ಆದ್ರೂ ಸಾವು ಗ್ಯಾರಂಟಿ-ಶಾಕಿಂಗ್‌ ವಿಡಿಯೋ ವೈರಲ್

Continue Reading

ರಾಜಕೀಯ

Nandini Milk: ಹಾಲು ಉತ್ಪಾದಿಸಿದ ರೈತರಿಗಿಲ್ಲ ಹಣ; ವಿದೇಶಿ ಕ್ರಿಕೆಟ್‌ ಟೀಂಗೆ ಪ್ರಾಯೋಜಕತ್ವ: ಸರ್ಕಾರದ ವಿರುದ್ಧ ಅಶೋಕ್‌ ಗರಂ

Nandini Milk: ಸರ್ಕಾರದ ಕಾರ್ಯವೈಖರಿ ವಿರುದ್ಧ ಅಸಮಾಧಾನವನ್ನು ಹೊರಹಾಕಿದ್ದಾರೆ. ಈಗಾಗಲೇ ಸರ್ಕಾರದ ಮೇಲೆ ಮುಗಿಬಿದ್ದಿರುವ ಪ್ರತಿಪಕ್ಷಗಳು, ಈಗ ಮತ್ತಷ್ಟು ಸಮಸ್ಯೆಗಳನ್ನು ಹೊತ್ತು ಜನರ ಮುಂದಿಡಲು ಪ್ರಯತ್ನ ಮಾಡುತ್ತಿವೆ. ಇದರ ಭಾಗವಾಗಿ ಈಗ ಅಂತಾರಾಷ್ಟ್ರೀಯ ಕ್ರಿಕೆಟ್‌ ಪ್ರಾಯೋಜಕತ್ವಕ್ಕೆ ಹಣ ಹಾಕಿರುವ ಬಗ್ಗೆ ಆರ್.‌ ಅಶೋಕ್‌ ಪ್ರಶ್ನೆ ಮಾಡಿದ್ದಾರೆ. ರಾಜ್ಯದ ವಿವಿಧ ಹಾಲು ಒಕ್ಕೂಟಗಳಿಗೆ ಹಾಲು ಸರಬರಾಜು ಮಾಡುವ 26 ಲಕ್ಷಕ್ಕೂ ಹೆಚ್ಚು ರೈತರಿಗೆ ಸಲ್ಲಬೇಕಾದ 703 ಕೋಟಿ ರೂಪಾಯಿ ಪ್ರೋತ್ಸಾಹ ಧನವನ್ನು ಕಳೆದ 8 ತಿಂಗಳಿನಿಂದ ಬಾಕಿ ಉಳಿಸಿಕೊಂಡಿದೆ ಈ ರೈತ ವಿರೋಧಿ ಕಾಂಗ್ರೆಸ್‌ ಸರ್ಕಾರ ಎಂದು ಟೀಕಿಸಿದ್ದಾರೆ.

VISTARANEWS.COM


on

Nandini Milk No incentives for milk producers Ashok slams govt for sponsoring foreign cricket team
Koo

ಬೆಂಗಳೂರು: ಹಾಲು ಉತ್ಪಾದಕರಿಗೆ ಪ್ರೋತ್ಸಾಹ ಧನ ಕೊಡದ ಸರ್ಕಾರದ ವಿರುದ್ಧ ವಿಪಕ್ಷ ನಾಯಕ ಆರ್. ಅಶೋಕ್ ಗರಂ ಆಗಿದ್ದಾರೆ. ಒಂದು ಕಡೆ 26 ಲಕ್ಷಕ್ಕೂ ಹೆಚ್ಚು ರೈತರಿಗೆ ಸಲ್ಲಬೇಕಾದ 703 ಕೋಟಿ ರೂಪಾಯಿ ಪ್ರೋತ್ಸಾಹ ಧನವನ್ನು ಬಾಕಿ ಉಳಿಸಿಕೊಂಡು ಮತ್ತೊಂದು ಕಡೆ ಕೆಎಂಎಫ್‌ ಸಂಸ್ಥೆಯ ನಂದಿನಿ ಹಾಲು (Nandini Milk) ಉತ್ಪಾದನೆಯಿಂದ ಬಂದ ಲಾಭದಲ್ಲಿ ಕೋಟ್ಯಂತರ ರೂಪಾಯಿ ಹಣ ಬಳಸಿಕೊಂಡು ಅಂತಾರಾಷ್ಟ್ರೀಯ ಕ್ರಿಕೆಟ್ ಪಂದ್ಯಗಳ ಪ್ರಾಯೋಜಕತ್ವವನ್ನು ಪಡೆದುಕೊಳ್ಳಲಾಗಿದೆ ಎಂದು ತೀವ್ರವಾಗಿ ತರಾಟೆಗೆ ತೆಗೆದುಕೊಂಡರು.

ಈ ಸಂಬಂಧ ಸೋಷಿಯಲ್‌ ಮೀಡಿಯಾ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಆರ್.‌ ಅಶೋಕ್‌, ಸರ್ಕಾರದ ಕಾರ್ಯವೈಖರಿ ವಿರುದ್ಧ ಅಸಮಾಧಾನವನ್ನು ಹೊರಹಾಕಿದ್ದಾರೆ. ಈಗಾಗಲೇ ಸರ್ಕಾರದ ಮೇಲೆ ಮುಗಿಬಿದ್ದಿರುವ ಪ್ರತಿಪಕ್ಷಗಳು, ಈಗ ಮತ್ತಷ್ಟು ಸಮಸ್ಯೆಗಳನ್ನು ಹೊತ್ತು ಜನರ ಮುಂದಿಡಲು ಪ್ರಯತ್ನ ಮಾಡುತ್ತಿವೆ. ಇದರ ಭಾಗವಾಗಿ ಈಗ ಅಂತಾರಾಷ್ಟ್ರೀಯ ಕ್ರಿಕೆಟ್‌ ಪ್ರಾಯೋಜಕತ್ವಕ್ಕೆ ಹಣ ಹಾಕಿರುವ ಬಗ್ಗೆ ಪ್ರಶ್ನೆ ಮಾಡಿದ್ದಾರೆ.

ಇದನ್ನೂ ಓದಿ: Phone tapping: ಗೃಹ ಸಚಿವರಿಗೆ ಅಶೋಕ್‌ ರೈಟಿಂಗ್‌ನಲ್ಲಿ ಕಂಪ್ಲೇಂಟ್‌ ಕೊಡಲಿ; ಫೋನ್‌ ಕದ್ದಾಲಿಕೆ ಆರೋಪಕ್ಕೆ ಡಿಕೆಶಿ ತಿರುಗೇಟು

ಆರ್.‌ ಅಶೋಕ್‌ ಪೋಸ್ಟ್‌ನಲ್ಲೇನಿದೆ?

“ರಾಜ್ಯದ ವಿವಿಧ ಹಾಲು ಒಕ್ಕೂಟಗಳಿಗೆ ಹಾಲು ಸರಬರಾಜು ಮಾಡುವ 26 ಲಕ್ಷಕ್ಕೂ ಹೆಚ್ಚು ರೈತರಿಗೆ ಸಲ್ಲಬೇಕಾದ 703 ಕೋಟಿ ರೂಪಾಯಿ ಪ್ರೋತ್ಸಾಹ ಧನವನ್ನು ಕಳೆದ 8 ತಿಂಗಳಿನಿಂದ ಬಾಕಿ ಉಳಿಸಿಕೊಂಡಿದೆ ಈ ರೈತ ವಿರೋಧಿ ಕಾಂಗ್ರೆಸ್‌ ಸರ್ಕಾರ.

ಸಿಎಂ ಸಿದ್ದರಾಮಯ್ಯ ಅವರೇ, ಚುನಾವಣೆ ಸಂದರ್ಭದಲ್ಲಿ ನಂದಿನಿ ಹೆಸರಲ್ಲಿ ರಾಜಕೀಯ ಮಾಡಿ ಈಗ ಅಮೃತದಂತಹ ಹಾಲು ಕೊಡುವ ರೈತರ ಬಾಳಲ್ಲಿ ವಿಷ ಹಿಂಡುವ ಪಾಪದ ಕೆಲಸ ಮಾಡುತ್ತಿದ್ದೀರಲ್ಲ, ಇದೇನಾ ನೀವು ನಮ್ಮ ನಂದಿನಿ ಬ್ರ್ಯಾಂಡ್ ಉಳಿಸುವ ಪರಿ?

ಇದನ್ನೂ ಓದಿ: Phone tapping: ಸಿಬಿಐಗೆ ಫೋನ್‌ ಕದ್ದಾಲಿಕೆ ಪ್ರಕರಣ ವಹಿಸಲಿ: ಸರ್ಕಾರಕ್ಕೆ ಅಶೋಕ್‌ ಸವಾಲು ಏನು?

ನಂದಿನಿ ಸಂಸ್ಥೆಯ ಕೋಟ್ಯಂತರ ರೂಪಾಯಿ ಹಣ ಬಳಸಿಕೊಂಡು ಅಂತಾರಾಷ್ಟ್ರೀಯ ಕ್ರಿಕೆಟ್ ಪಂದ್ಯಗಳ ಪ್ರಾಯೋಜಕತ್ವ ಪಡೆಯಲು ನಿಮ್ಮ ಸರ್ಕಾರದ ಬಳಿ ಇದೆ. ಆದರೆ, ನಂದಿನಿ ಬ್ರ್ಯಾಂಡ್ ಅನ್ನ ಕಟ್ಟಿ, ಬೆಳೆಸಿ, ಪೋಷಿಸುತ್ತಿರುವ ಹೈನುಗಾರರಿಗೆ ಸಮಯಕ್ಕೆ ಸರಿಯಾಗಿ ಪ್ರೋತ್ಸಾಹ ಧನ ನೀಡಲು ತಮ್ಮ ಬಳಿ ಹಣವಿಲ್ಲ ಅಲ್ಲವೇ ಸಿದ್ದರಾಮಯ್ಯನವರೇ? ನಾಡಿನ ರೈತರ ಶಾಪ ತಮಗೆ ತಟ್ಟದೇ ಇರದು” ಎಂದು ಆರ್.‌ ಅಶೋಕ್‌ ರೈತರ ಸಮಸ್ಯೆಗಳ ಬಗ್ಗೆ ವಿವರಿಸಿದ್ದಾರೆ.

Continue Reading
Advertisement
List of Movies Releasing From may 24
ಟಾಲಿವುಡ್13 mins ago

List of Movies Releasing: ಈ ವಾರ ಬಿಡುಗಡೆಗೆ ಸಜ್ಜಾಗಿವೆ ಈ ಸಾಲು ಸಾಲು ಸಿನಿಮಾಗಳು!

Prashant Kishor
ದೇಶ27 mins ago

Prashant Kishor: 3ನೇ ಅವಧಿಯ ಮೋದಿ ಸರ್ಕಾರದಿಂದ ಈ 4 ಕ್ರಾಂತಿಕಾರಕ ಬದಲಾವಣೆ; ಪ್ರಶಾಂತ್‌ ಕಿಶೋರ್‌ ಭವಿಷ್ಯ

Viral Video
ವೈರಲ್ ನ್ಯೂಸ್38 mins ago

Viral Video: ರಸ್ತೆ ಜಗಳದಿಂದ ತಪ್ಪಿಸಿಕೊಳ್ಳುವುದು ಹೇಗೆ? ಬೆಂಗಳೂರು ಪೊಲೀಸರ ವಿಡಿಯೊ ಪಾಠ ಇಲ್ಲಿದೆ!

Diabetes Management Tips
Latest41 mins ago

Diabetes Management Tips: ಈ ಏಳು ಪಾನೀಯಗಳನ್ನು ಸೇವಿಸಿ, ಮಧುಮೇಹ ನಿಯಂತ್ರಿಸಿ

gold rate today beauty
ಚಿನ್ನದ ದರ41 mins ago

Gold Rate Today: ಬಂಗಾರದ ಬೆಲೆಯಲ್ಲಿ ಯಥಾಸ್ಥಿತಿ; ಇಂದಿನ ದರಗಳನ್ನು ಇಲ್ಲಿಯೇ ನೋಡಿ

Viral News
ವೈರಲ್ ನ್ಯೂಸ್45 mins ago

Viral News: ಸಿಂಹದ ಹಿಂಡನ್ನೇ ಹಿಮ್ಮೆಟ್ಟಿಸಿದ ಕಾಡುಕೋಣಗಳು; ರೋಮಾಂಚನಕಾರಿ ವಿಡಿಯೊ ನೀವೂ ನೋಡಿ

Rishab shetty family visit Hariharpur Narasimhaswamy
ಸ್ಯಾಂಡಲ್ ವುಡ್1 hour ago

Rishab shetty: ಹರಿಹರಪುರ ಕ್ಷೇತ್ರಕ್ಕೆ ರಿಷಬ್ ಶೆಟ್ಟಿ ಕುಟುಂಬದ ಭೇಟಿ: ನರಸಿಂಹಸ್ವಾಮಿಯ ದರ್ಶನ ಪಡೆದ ಡಿವೈನ್‌ ಸ್ಟಾರ್‌!

nisha cp yogeshwara
ವೈರಲ್ ನ್ಯೂಸ್1 hour ago

CP Yogeshwara: “ಹೊಡೀತಾರೆ, ಭಿಕ್ಷೆ ಬೇಡು ಅನ್ತಾರೆ….ʼʼ ಯೋಗೇಶ್ವರ್‌ ವಿರುದ್ಧ ಕಣ್ಣೀರು ಹಾಕುತ್ತಾ ರೆಬೆಲ್‌ ಆದ ಮಗಳು

Nandini Milk No incentives for milk producers Ashok slams govt for sponsoring foreign cricket team
ರಾಜಕೀಯ1 hour ago

Nandini Milk: ಹಾಲು ಉತ್ಪಾದಿಸಿದ ರೈತರಿಗಿಲ್ಲ ಹಣ; ವಿದೇಶಿ ಕ್ರಿಕೆಟ್‌ ಟೀಂಗೆ ಪ್ರಾಯೋಜಕತ್ವ: ಸರ್ಕಾರದ ವಿರುದ್ಧ ಅಶೋಕ್‌ ಗರಂ

Viral video
ವೈರಲ್ ನ್ಯೂಸ್1 hour ago

Viral Video:‌ ಅಬ್ಬಾ..ಇದೆಂಥಾ ಹುಚ್ಚಾಟ; ಸ್ವಲ್ಪ ಮಿಸ್‌ ಆದ್ರೂ ಸಾವು ಗ್ಯಾರಂಟಿ-ಶಾಕಿಂಗ್‌ ವಿಡಿಯೋ ವೈರಲ್

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Weather Forecast
ಮಳೆ7 hours ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ20 hours ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು1 day ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

Contaminated Water
ಮೈಸೂರು1 day ago

Contaminated Water : ಡಿ ಸಾಲುಂಡಿಯಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದ ಯುವಕ ಸಾವು

Karnataka Rain
ಮಳೆ2 days ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Rain
ಮಳೆ3 days ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ3 days ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ3 days ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

Prajwal Revanna Case JDS calls CD Shivakumar pen drive gang
ರಾಜಕೀಯ5 days ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

Karnataka weather Forecast
ಮಳೆ5 days ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

ಟ್ರೆಂಡಿಂಗ್‌