ಒಕ್ಕಲಿಗರ ಸಂಘಕ್ಕೆ ನಿವೇಶನ ಒದಗಿಸುವ ಭರವಸೆ ನೀಡಿದ ಭೈರತಿ ಬಸವರಾಜ್‌ - Vistara News

ಕರ್ನಾಟಕ

ಒಕ್ಕಲಿಗರ ಸಂಘಕ್ಕೆ ನಿವೇಶನ ಒದಗಿಸುವ ಭರವಸೆ ನೀಡಿದ ಭೈರತಿ ಬಸವರಾಜ್‌

ಒಕ್ಕಲಿಗರ ಸಂಘ ಸ್ಥಾಪನೆಯಾಗಿ ಎರಡು ವರ್ಷ ಕಳೆದರೂ ಸಂಘದ ಚಟುವಟಿಕೆಗಳಿಗೆ ಸ್ವಂತ ನಿವೇಶನವಿಲ್ಲದಿರುವ ಬಗ್ಗೆ ಸಂಘದ ವತಿಯಿಂದ ಬೇಡಿಕೆ ಸಲ್ಲಿಸಿದಾಗ ಸಚಿವರು ಕೂಡಲೇ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ.

VISTARANEWS.COM


on

Okkaliga
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಒಕ್ಕಲಿಗರ ಸಂಘಕ್ಕೆ ನಿವೇಶನ ಹಾಗೂ ಸಮುದಾಯದಲ್ಲಿ ಆರ್ಥಿಕವಾಗಿ ಹಿಂದುಳಿದವರಿಗೆ ನೆರವು ಒದಗಿಸಲಾಗುವುದು ಎಂದು ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ್‌ ಭರವಸೆ ನೀಡಿದರು. ರಾಮಮೂರ್ತಿ ನಗರದ ಕಲ್ಕೆರೆ ಮುಖ್ಯ ರಸ್ತೆಯಲ್ಲಿರುವ ಕೃಷ್ಣ ಫ್ಲವರ್‌ ಪಾರ್ಟಿ ಹಾಲ್‌ನಲ್ಲಿ ಹಮ್ಮಿಕೊಂಡಿದ್ದ ಒಕ್ಕಲಿಗರ ಸಂಘದ ವಾರ್ಷಿಕೋತ್ಸವದಲ್ಲಿ ಅವರು ಭರವಸೆ ನೀಡಿದರು.

ಸಂಘ ಸ್ಥಾಪನೆಯಾಗಿ ಎರಡು ವರ್ಷ ಕಳೆದರೂ ಸಂಘದ ಚಟುವಟಿಕೆಗಳಿಗೆ ಸ್ವಂತ ನಿವೇಶನವಿಲ್ಲದಿರುವ ಬಗ್ಗೆ ಸಂಘದ ವತಿಯಿಂದ ಬೇಡಿಕೆ ಸಲ್ಲಿಸಿದಾಗ ಸಚಿವರು ಕೂಡಲೇ ಸಕಾರಾತ್ಮಕವಾಗಿ ಸ್ಪಂದಿಸಿದರು. ಜಾಗ ಗುರುತಿಸಿದರೆ ನಿವೇಶನ ಒದಗಿಸುವುದಾಗಿ ಭರವಸೆ ನೀಡಿದರು. ಇದೇ ವೇಳೆ, ಮುಂಬರುವ ಬಿಬಿಎಂಪಿ ಚುನಾವಣೆಯಲ್ಲಿ ಸ್ಪರ್ಧಿಸಲು ಒಕ್ಕಲಿಗ ಸಂಘದ ಅಧ್ಯಕ್ಷರು ಹಾಗೂ ಸಮಾಜ ಸೇವಕರಾದ ಶಿವಣ್ಣವರಿಗೆ ೮೪ನೇ ವಾರ್ಡ್‌ನಿಂದ ಟಿಕೆಟ್‌ ದೊರಕಿಸಿಕೊಡುವಂತೆ ಸಂಘದ ವತಿಯಿಂದ ಮನವಿ ಸಲ್ಲಿಸಲಾಯಿತು.

ಇದಕ್ಕೂ ಮೊದಲು ಒಕ್ಕಲಿಗ ಸಂಘದ ಸದಸ್ಯತ್ವ ಪಡೆದ ಹಲವರಿಗೆ ಗುರುತಿನ ಚೀಟಿ ವಿತರಿಸಲಾಯಿತು. ಸದಸ್ಯತ್ವ ಪಡೆಯ ಬಯಸುವವರಿಗೆ ಸ್ಥಳದಲ್ಲೇ ನೋಂದಣಿಯ ಮಾಡುವ ವ್ಯವಸ್ಥೆ ಮಾಡಲಾಗಿತ್ತು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶಿವಣ್ಣ, ಒಕ್ಕಲಿಗ ಸಮುದಾಯದ ಏಳಿಗೆಗೆ ಶ್ರಮಿಸುವುದಾಗಿ ತಿಳಿಸಿದರು. ಉಪಾಧ್ಯಕ್ಷೆ ವಿನುತಾ ಗೌಡ, ಕಾರ್ಯದರ್ಶಿ ರಾಜೇಗೌಡ, ಪದಾಧಿಕಾರಿಗಳಾದ ನಾಗೇಶ್‌ ಗೌಡ, ಮಧು ಗೌಡ, ನಂಜಪ್ಪ, ನಂಜೇಗೌಡ, ಶಂಭುಲಿಂಗ ಗೌಡ, ಶಿವಲಿಂಗೇ ಗೌಡ, ರವಿಕುಮಾರ್‌, ವಾಸಣ್ಣ, ಸ್ವಾತಿ ವೆಂಕಟೇಶ್‌, ಶ್ರೀಧರ್‌, ಕೇಬಲ್‌ ಟಿವಿ ಆನಂದ್‌ ಉಪಸ್ಥಿತರಿದ್ದರು.

ಇದನ್ನೂ ಓದಿ | SCST ಮೀಸಲು| ಒಕ್ಕಲಿಗರಿಂದಲೂ ಮೀಸಲು ಹೆಚ್ಚಳ ಬೇಡಿಕೆ: 4%ನಿಂದ 12ಕ್ಕೆ ಏರಿಸಿ ಎಂದ ನಿರ್ಮಲಾನಂದನಾಥ ಶ್ರೀ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದಾವಣಗೆರೆ

Wild Animals : ರಸ್ತೆಗೆ ಅಡ್ಡಲಾಗಿ ಮಲಗಿಕೊಂಡ ಚಿರತೆ; ಕಾಡಿನಿಂದ ಹಸು ಜತೆಗೆ ಓಡೋಡಿ ಬಂದ ಜಿಂಕೆ

Wild Animals : ಆಹಾರ ಅರಸಿ ಕಾಡು ಪ್ರಾಣಿಗಳು ನಾಡಿಗೆ ಬರುತ್ತಿವೆ. ಸದ್ಯ ದಾವಣಗೆರೆಯಲ್ಲಿ ಚಿರತೆಯೊಂದು ರಸ್ತೆಗೆ ಅಡ್ಡಲಾಗಿ ಕುಳಿತು ಆತಂಕ ಮೂಡಿಸಿದರೆ, ಶಿವಮೊಗ್ಗದಲ್ಲಿ ಜಿಂಕೆಯೊಂದು ಕಾಡಿನಿಂದ ಓಡಿ ಬಂದಿದೆ.

VISTARANEWS.COM


on

By

Wild Animals
Koo

ದಾವಣಗೆರೆಯ ಕೊಂಡಜ್ಜಿ ಸಮೀಪ ಚಿರತೆಯೊಂದು ಪ್ರತ್ಯಕ್ಷಗೊಂಡು ಆತಂಕವನ್ನು (Wild Animals) ಸೃಷ್ಟಿಸಿತ್ತು. ಶಂಕ್ರನಹಳ್ಳಿ ರಸ್ತೆ ಮಧ್ಯೆ ಕಾಣಿಸಿಕೊಂಡ ಚಿರತೆಯು ಬಳಿಕ ರಸ್ತೆಗೆ ಅಡ್ಡಲಾಗಿ ಮಲಗಿಕೊಂಡಿತ್ತು. ರಸ್ತೆಯಲ್ಲಿ ಓಡಾಡಲು ಜನರು, ವಾಹನ ಸವಾರರು ಪರದಾಡಬೇಕಾಯಿತು. ಕಾರಿನೊಳಗೆ ಕುಳಿತು ಚಿರತೆ ಓಡಾಟವನ್ನು ಯುವಕರು ಸೆರೆ ಹಿಡಿದಿದ್ದಾರೆ. ಗ್ರಾಮಸ್ಥರು ಚಿರತೆ ಹಿಡಿಯುವಂತೆ ಅರಣ್ಯ ಇಲಾಖೆಗೆ ಮನವಿ ಮಾಡಿದ್ದಾರೆ.

ಕಾಡಿನಿಂದ ಓಡಿ ಬಂದ ಜಿಂಕೆ

ಕಾಡಿನಿಂದ ಗೋವಿನ ಜತೆಗೆ ಜಿಂಕೆಯೊಂದು ನಾಡಿಗೆ ಬಂದಿದೆ. ಶಿವಮೊಗ್ಗದ ಹೊಸನಗರ ಪಟ್ಟಣಕ್ಕೆ ಮಳೆಗಾಲದ ವಿಶೇಷ ಅತಿಥಿಯಾಗಿ ಜಿಂಕೆ ಆಗಮಿಸಿದಂತೆ ಭಾಸವಾಗಿತ್ತು. ಹೊಸನಗರ ಪಟ್ಟಣದ ಶಿವಪ್ಪನಾಯಕ ರಸ್ತೆಯಲ್ಲಿ ಗೋವಿನ ಜತೆಗೆ ಓಡೋಡಿ ಬಂದಿದೆ. ಜಿಂಕೆ ಓಡಾಟವನ್ನು ಸ್ಥಳೀಯರು ಮೊಬೈಲ್‌ನಲ್ಲಿ ಸೆರೆ ಹಿಡಿದಿದ್ದಾರೆ. ಇನ್ನೂ ಸಾಮಾಜಿಕ ಜಾಲತಾಣದಲ್ಲಿ ವಿಡಿಯೊ ಹರಿಬಿಟ್ಟಿದ್ದನ್ನು ಗಮನಿಸಿದ ಅರಣ್ಯಾಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.

ಇದನ್ನೂ ಓದಿ: Assault Case : ಹೆಲ್ಮೆಟ್‌ ಇಲ್ಲದೇ ಚಲಿಸುತ್ತಿದ್ದ ಬೈಕ್ ಸವಾರನ ಕಾಲರ್ ಪಟ್ಟಿ ಹಿಡಿದು ಎಳೆದ ಟ್ರಾಫಿಕ್‌ ಪೊಲೀಸ್‌!

ಬಾಲಕನ ಮೇಲೆ ದಾಳಿ ಮಾಡಿದ ಬೀದಿ ನಾಯಿಗಳು

ಬೀದಿ ನಾಯಿಗಳು ದಾಳಿ ಮಾಡಿದ್ದು, ಬಾಲಕನೊಬ್ಬ ಗಂಭೀರವಾಗಿ ಗಾಯಗೊಂಡಿದ್ದಾನೆ. ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ವೆಂಕಟೇಶ್ವರಪುರ ಗ್ರಾಮದಲ್ಲಿ ಘಟನೆ ನಡೆದಿದೆ. ಗ್ರಾಮದ ಬಾಲಾಜಿ ನಾಯ್ಕ್ ನಾಯಿ ದಾಳಿಗೆ ಒಳಗಾದ ಬಾಲಕ.

ಶಾಲೆಗೆ ಹೋಗಲು ರೆಡಿಯಾಗಿ ಮನೆಯಿಂದ ಹೊರ ಬಂದಿದ್ದ ಬಾಲಾಜಿ ನಾಯ್ಕ್ ಮೇಲೆ ಏಕಾಏಕಿ ನಾಲ್ಕಕ್ಕೂ ಹೆಚ್ಚು ನಾಯಿಗಳು ದಾಳಿ ಮಾಡಿದೆ. ಬಾಲಾಜಿ ಕಿರುಚಾಡುವುದನ್ನು ನೋಡಿ ಜನರು ಓಡಿ ಬಂದಿದ್ದಾರೆ. ಬಳಿಕ ನಾಯಿಗಳನ್ನು ಓಡಿಸಿದ್ದಾರೆ. ಬಾಲಾಜಿ ನಾಯ್ಕ್ ಬೆನ್ನು ಹಾಗೂ ಕಾಲಿಗೆ ನಾಯಿಗಳು ಕಚ್ಚಿ ಗಂಭೀರ ಗಾಯಗೊಳಿಸಿದೆ.

ಗಾಯಾಳನ್ನು ಕೂಡಲೇ ತಾಲೂಕಾಸ್ಪತ್ರೆಗೆ ಚಿಕಿತ್ಸೆಗಾಗಿ ರವಾನೆ ಮಾಡಿದ್ದಾರೆ. ಬೀದಿನಾಯಿಗಳ ಹಾವಳಿ ಹೆಚ್ಚಾಗುತ್ತಿದ್ದು, ಕೂಡಲೇ ನಿಯಂತ್ರಣ ‌ಮಾಡುವಂತೆ ಗ್ರಾಮಪಂಚಾಯತಿ ಅಧಿಕಾರಿಗೆ ಈ ಹಿಂದೆಯೇ ಗ್ರಾಮಸ್ಥರು ಮನವಿ ಮಾಡಿದ್ದರು. ಗ್ರಾಮ‌ಪಂಚಾಯತಿ ಅಧಿಕಾರಿಗಳ‌ ನಿರ್ಲಕ್ಷ್ಯದಿಂದ ಈ ರೀತಿ ಘಟನೆ ನಡೆದಿದೆ ಎಂದು ಕಿಡಿಕಾರಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಬಳ್ಳಾರಿ

Poison Food: ವಿಷಕಾರಿ ಬೀಜ ತಿಂದು 8 ಮಕ್ಕಳು ಅಸ್ವಸ್ಥ

Poison Food: ತೆಕ್ಕಲಕೋಟೆಯ ವಾಲ್ಮೀಕಿ ನಗರದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಮಕ್ಕಳು ಬೀಜ ಸೇವನೆ ಬಳಿಕ ಅಸ್ವಸ್ಥಗೊಂಡಿದ್ದಾರೆ. ಎಂಟು ಮಕ್ಕಳಲ್ಲಿ ವಿಷಕಾರಿ ಬೀಜ ಸೇವನೆ ಬಳಿಕ ವಾಂತಿ ಭೇದಿ ಕಾಣಿಸಿಕೊಂಡಿದೆ.

VISTARANEWS.COM


on

poison food bellary news
Koo

ಬಳ್ಳಾರಿ: ವಿಷಕಾರಿ ಬೀಜ ತಿಂದು (Poison Food) ಎಂಟು ಮಕ್ಕಳು (Children sick) ಅಸ್ವಸ್ಥರಾಗಿದ್ದಾರೆ. ಬಳ್ಳಾರಿ (Bellary news) ಜಿಲ್ಲೆ ಸಿರುಗುಪ್ಪ ತಾಲೂಕಿನ ತೆಕ್ಕಲಕೋಟೆ ಗ್ರಾಮದಲ್ಲಿ ಶಾಲಾ ವಿರಾಮದ ಸಮಯದಲ್ಲಿ ಮಕ್ಕಳು ವಿಷಕಾರಿ ಬೀಜವಿರುವ (poisonous seeds) ಕಾಡುಹಣ್ಣು ಸೇವಿಸಿದ್ದಾರೆ.

ತೆಕ್ಕಲಕೋಟೆಯ ವಾಲ್ಮೀಕಿ ನಗರದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಮಕ್ಕಳು ಬೀಜ ಸೇವನೆ ಬಳಿಕ ಅಸ್ವಸ್ಥಗೊಂಡಿದ್ದಾರೆ. ಎಂಟು ಮಕ್ಕಳಲ್ಲಿ ವಿಷಕಾರಿ ಬೀಜ ಸೇವನೆ ಬಳಿಕ ವಾಂತಿ ಭೇದಿ ಕಾಣಿಸಿಕೊಂಡಿದೆ. ಕೂಡಲೇ ಸ್ಥಳೀಯ ಸರ್ಕಾರಿ ಆಸ್ಪತ್ರೆಗೆ ಸೇರಿಸಿ ಮಕ್ಕಳಿಗೆ ಪ್ರಾಥಮಿಕ ಚಿಕಿತ್ಸೆ ಕೊಡಿಸಲಾಗಿದೆ. ಬಳಿಕ ಬಳ್ಳಾರಿಯ ವಿಮ್ಸ್ ಆಸ್ಪತ್ರೆಗೆ ರವಾನಿಸಲಾಗಿದ್ದು, ವಿಮ್ಸ್‌ನಲ್ಲಿ ಎಲ್ಲ ಮಕ್ಕಳನ್ನು ದಾಖಲಿಸಿಕೊಂಡು ಚಿಕಿತ್ಸೆ ನೀಡಲಾಗಿದೆ.

ಒಂದು ಮಗುವಿನ ಪರಿಸ್ಥಿತಿ ಗಂಭೀರವಾಗಿದ್ದು, ಇನ್ನುಳಿದ ಮಕ್ಕಳು ಚಿಕಿತ್ಸೆ ಬಳಿಕ ಅಪಾಯದಿಂದ ಪಾರಾಗಿದ್ದಾರೆ. ಇಂದು ಪೂರ್ಣ ಚಿಕಿತ್ಸೆ ಹಾಗೂ ಅಬ್ಸರ್ವೇಷನ್ ಮಾಡಿ ಡಿಸ್ಚಾರ್ಜ್ ಮಾಡಲಾಗುವುದು ಎಂದು ವಿಮ್ಸ್ ನಿರ್ದೇಶಕ ಡಾ. ಗಂಗಾಧರ ಗೌಡ ಅವರು ಮಾಹಿತಿ ನೀಡಿದ್ದಾರೆ.

ನದಿಗೆ ಹಾರಿ ವ್ಯಕ್ತಿ ಆತ್ಮಹತ್ಯೆ

ಚಿಕ್ಕೋಡಿ: ಉಕ್ಕಿ ಹರಿಯುತ್ತಿರುವ ಕೃಷ್ಣಾ ನದಿಗೆ ಹಾರಿ ವ್ಯಕ್ತಿಯೊಬ್ಬರು ಆತ್ಮಹತ್ಯೆಗೆ (Self Harming) ಶರಣಾಗಿದ್ದಾರೆ. ಅಂಕಲಿ – ನಸಲಾಪೂರ ಗ್ರಾಮದ ಮಧ್ಯದ ಸೇತುವೆ ಬಳಿ ಆತ್ಮಹತ್ಯೆ (Krishna Riverಮಾಡಿಕೊಂಡಿದ್ದಾರೆ. ರಾಯಬಾಗ ತಾಲೂಕಿನ ಬಾವನಸೌಂದತ್ತಿ ಗ್ರಾಮದ ಬಾಬುರಾವ ಸಂಭಾಜಿ ಭಾಸ್ಕರ (40) ಆತ್ಮಹತ್ಯೆಗೆ ಶರಣಾದವರು.

ಅಂಕಲಿ ಹಾಗೂ ನಸಲಾಪೂರ ಗ್ರಾಮಗಳ ಮಧ್ಯೆ ನಿರ್ಮಿಸಲಾಗಿರುವಂತಹ ಸೇತುವೆ ಮೇಲೆ ನಿಂತು ನದಿಗೆ ಹಾರಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಈಗಾಗಲೇ ಅಂಕಲಿ ಪೋಲಿಸರು ಮೃತ ದೇಹವನ್ನು ಹೊರ ತೆಗೆದಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಅಂಕಲಿ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ಪೆನ್ನು ಕದ್ದ ಬಾಲಕನನ್ನು ಕತ್ತಲೆ ಕೋಣೆಯಲ್ಲಿ ಕೂಡಿಟ್ಟ; ಮನಸೋ ಇಚ್ಛೆ ಥಳಿಸಿದ ರಾಮಕೃಷ್ಣ ಆಶ್ರಮದ ಗುರೂಜಿ!

ರಾಯಚೂರು: ರಾಯಚೂರಿನ ರಾಮಕೃಷ್ಣ ಆಶ್ರಮದಲ್ಲಿ (Ramakrishna Ashram) ಅಮಾನವೀಯ ಘಟನೆಯೊಂದು ನಡೆದಿದೆ. ಬಾಲಕನೊಬ್ಬ ಪೆನ್ನು ಕದ್ದಿದ್ದಕ್ಕೆ ಆಶ್ರಮದ ಗುರೂಜಿ ಮನಬಂದಂತೆ ಹಲ್ಲೆ (Assault Case) ನಡೆಸಿದ್ದಾರೆ. ಮೂರು ದಿನಗಳ ಕಾಲ ಕತ್ತಲೆ ಕೋಣೆಯಲ್ಲಿ ಕೂಡಿಟ್ಟು ವಿದ್ಯಾರ್ಥಿಯ ಕಣ್ಣುಗಳು ಬಾವು ಬರುವಂತೆ ಮನಸೋ ಇಚ್ಛೆ ಹಲ್ಲೆ ನಡೆಸಿದ್ದಾರೆ.

ವಿದ್ಯಾರ್ಥಿ ಶ್ರವಣ್ ಕುಮಾರ್ ಹಲ್ಲೆಗೊಳಗಾದ ಬಾಲಕನಾಗಿದ್ದಾನೆ. ಸರ್ಕಾರಿ ಶಾಲೆಯಲ್ಲಿ ಓದುತ್ತಿದ್ದ ಶ್ರವಣ ಬಡತನದ ಕಾರಣ ಆಶ್ರಮದಲ್ಲಿದ್ದ. ಸಹಪಾಠಿಗಳ ಜತೆ ಆಟವಾಡುತ್ತಾ ಪೆನ್ನು ಕದ್ದಿದ್ದ. ಶ್ರವಣಕುಮಾರ್ ವಿರುದ್ಧ ಸಹಪಾಠಿಗಳು ದೂರೂ ನೀಡಿದ್ದರು. ದೂರಿನ್ವಯ ರಾಮಕೃಷ್ಣ ಮಠದ ಗುರೂಜಿ ವೇಣುಗೋಪಾಲ ಎಂಬಾತ ಶ್ರವಣಗೆ ಮನಬಂದಂತೆ ಥಳಿಸಿದ್ದಾರೆ. ಚಿಕ್ಕ ಹುಡುಗ ಎಂಬುದನ್ನು ಪರಿಗಣಿಸಿದೇ ಮೂರು ದಿನಗಳು ಕತ್ತಲೇ ಕೋಣೆಯಲ್ಲಿ ಕೂಡಿ ಹಾಕಿದ್ದಾರೆ.

ರಾಯಚೂರು ನಗರದ ಸ್ಟೇಷನ್ ರಸ್ತೆಯಲ್ಲಿರು ರಾಮಕೃಷ್ಣ ಆಶ್ರಮಕ್ಕೆ ಆಕಸ್ಮಿಕವಾಗಿ ಶ್ರವಣ ತಾಯಿ ಭೇಟಿ ನೀಡಿದಾಗ ವಿಷಯ ಬಹಿರಂಗವಾಗಿದೆ. ಸದ್ಯ ಶ್ರವಣಕುಮಾರ್‌ಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ. ಮೈಕೈ ತುಂಬಾ ಗಾಯಗಳಾಗಿದ್ದು, ಕಣ್ಣು ಪೂರ್ತಿ ಬಾವು ಬಂದಿದೆ. ರಾಯಚೂರು ಪಶ್ಚಿಮ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಪುಟ್ಟ ಬಾಲಕನ ಸ್ಥಿತಿಗೆ ಪೋಷಕರು ಕಣ್ಣೀರು ಹಾಕಿದ್ದಾರೆ.

ಇದನ್ನೂ ಓದಿ: Wayanad Landslide: ವಯನಾಡು ದುರಂತದಲ್ಲಿ ಮೃತರ ಸಂಖ್ಯೆ 344ಕ್ಕೆ ಏರಿಕೆ; ರಾಡಾರ್‌ಗೆ ಸಿಕ್ಕ ನಿಗೂಢ ಉಸಿರಾಟ ಯಾರದ್ದು?

Continue Reading

ಕರ್ನಾಟಕ

PSI Parshuram Death Case: ಪಿಎಸ್ಐ ಪರಶುರಾಮ ಸಾವು ಪ್ರಕರಣ; ಯಾದಗಿರಿ ಕೈ ಶಾಸಕ, ಪುತ್ರನ ವಿರುದ್ಧ ಎಫ್‌ಐಆರ್‌

PSI Parshuram death Case: ಪಿಎಸ್‌ಐ ಪರಶುರಾಮ ಸಾವು ಪ್ರಕರಣದಲ್ಲಿ ಕೇಸ್ ದಾಖಲಾಗುತ್ತಿದ್ದಂತೆ ಶಾಸಕ ಚನ್ನಾರೆಡ್ಡಿ ಪಾಟೀಲ ತುನ್ನೂರು ಹಾಗೂ ಅವರ ಪುತ್ರ ಪಂಪಣ್ಣಗೌಡ ಅವರ ಮೊಬೈಲ್ ಸ್ವಿಚ್ ಆಫ್ ಆಗಿದೆ. ಕೇಸ್ ದಾಖಲಾಗಿದ್ದರಿಂದ ಅಪ್ಪ-ಮಗ ತಲೆ ಮರೆಸಿಕೊಂಡಿದ್ದು, ಬೆಂಗಳೂರಿಗೆ ತೆರಳಿರುವ ಶಂಕೆ ವ್ಯಕ್ತವಾಗಿದೆ.

VISTARANEWS.COM


on

PSI Parshuram death Case
Koo

ಯಾದಗಿರಿ: ಪಿಎಸ್ಐ ಪರಶುರಾಮ ಸಾವು ಪ್ರಕರಣಕ್ಕೆ (PSI Parshuram Death Case) ಸಂಬಂಧಿಸಿದಂತೆ ಘಟನೆ ನಡೆದ 17 ಗಂಟೆ ಬಳಿಕ ಕೇಸ್‌ ದಾಖಲಾಗಿದೆ. ಮೃತ ಪಿಎಸ್ಐ ಪತ್ನಿ ಶ್ವೇತಾ ಕೊಟ್ಟ ದೂರಿನನ್ವಯ ಯಾದಗಿರಿ ಕಾಂಗ್ರೆಸ್‌ ಶಾಸಕ ಚನ್ನಾರೆಡ್ಡಿ ಪಾಟೀಲ್ ತುನ್ನೂರ್ ಹಾಗೂ ಪುತ್ರ ಪಂಪಣ್ಣಗೌಡ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ.

ಬಿಎನ್ಎಸ್ ಸೆಕ್ಷನ್ 108 ಅಡಿ ಪ್ರಕರಣ ದಾಖಲಾಗಿದ್ದು, ಕೇಸ್‌ನಲ್ಲಿ ಎ1 ಶಾಸಕ ಚನ್ನಾರೆಡ್ಡಿ ಪಾಟೀಲ್ ತುನ್ನೂರ್, ಎ2 ಪುತ್ರ ಪಂಪನಗೌಡ ಹೆಸರು ಉಲ್ಲೇಖಿಸಲಾಗಿದೆ. ಸತತ ಪ್ರತಿಭಟನೆಗೆ ಮಣಿದ ಪೊಲೀಸ್ ಇಲಾಖೆ, ಕೊನೆಗೂ ಎಫ್ಐಆರ್ ದಾಖಲಿಸಿಕೊಂಡಿದೆ.

ಕೇಸ್ ದಾಖಲಾಗುತ್ತಿದ್ದಂತೆ ಶಾಸಕನ ಮೊಬೈಲ್ ಸ್ವಿಚ್ ಆಫ್

ಪಿಎಸ್‌ಐ ಪರಶುರಾಮ ಸಾವು ಪ್ರಕರಣದಲ್ಲಿ ಕೇಸ್ ದಾಖಲಾಗುತ್ತಿದ್ದಂತೆ ಶಾಸಕ ಚನ್ನಾರೆಡ್ಡಿ ಪಾಟೀಲ ತುನ್ನೂರು ಹಾಗೂ ಅವರ ಪುತ್ರ ಪಂಪಣ್ಣಗೌಡ ಅವರ ಮೊಬೈಲ್ ಸ್ವಿಚ್ ಆಫ್ ಆಗಿದೆ. ಕೇಸ್ ದಾಖಲಾಗಿದ್ದರಿಂದ ಅಪ್ಪ-ಮಗ ತಲೆ ಮರೆಸಿಕೊಂಡಿದ್ದು, ಬೆಂಗಳೂರಿಗೆ ತೆರಳಿರುವ ಶಂಕೆ ವ್ಯಕ್ತವಾಗಿದೆ.

ಏನಿದು ಪ್ರಕರಣ?

ಯಾದಗಿರಿ ನಗರ ಠಾಣೆಯಲ್ಲಿ ಪಿಎಸ್ಐ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಪರಶುರಾಮ (34) ಅವರು ಹೃದಯಾಘಾತದಿಂದ ಶುಕ್ರವಾರ(ಆ.2) ನಿಧನರಾಗಿದ್ದರು. ಇತ್ತೀಚೆಗೆ ಸೈಬರ್ ಕ್ರೈಮ್ (Cyber Crime) ಪಿಎಸ್ಐ ಆಗಿ ವರ್ಗಾವಣೆಗೊಂಡಿದ್ದ ಪರಶುರಾಮ, ಮೊನ್ನೆಯಷ್ಟೇ ನಗರ ಠಾಣೆಯಲ್ಲಿ ಅಭಿಮಾನದ ಬೀಳ್ಕೊಡುಗೆ ಪಡೆದಿದ್ದರು. ಪೊಲೀಸ್ ಕ್ವಾರ್ಟರ್ಸ್‌ ನಿವಾಸದಲ್ಲಿ ಶುಕ್ರವಾರ ಹಠಾತ್ ಹೃದಯಾಘಾತದಿಂದ ಸಾವಿಗೀಡಾಗಿದ್ದರು.

ಸ್ಥಳೀಯ ಶಾಸಕ ಚನ್ನಾರೆಡ್ಡಿ ಪಾಟೀಲ್ ತುನ್ನೂರು ಲಂಚದ ಹಣಕ್ಕಾಗಿ ಹೇರುತ್ತಿದ್ದ ಒತ್ತಡದಿಂದಲೇ ಪತಿಗೆ ಹೃದಯಾಘಾತ ಉಂಟಾಗಿದೆ ಎಂದು ಪಿಎಸ್‌ಐ ಪತ್ನಿ ಶ್ವೇತಾ ಗಂಭೀರ ಆರೋಪ ಮಾಡಿ, ಸ್ಥಳೀಯ ದಲಿತ ಸಂಘಟನೆಗಳೊಂದಿಗೆ ಪ್ರತಿಭಟನೆ ನಡೆಸಿ ಶಾಸಕ, ಪುತ್ರನ ವಿರುದ್ಧ ದೂರು ನೀಡಿದ್ದರು.

PSI Death: ನಿನ್ನೆ ಬೀಳ್ಕೊಡುಗೆ ಪಡೆದ ಪಿಎಸ್‌ಐ ಇಂದು ಹೃದಯಾಘಾತದಿಂದ ಸಾವು; 30 ಲಕ್ಷ ರೂ. ಲಂಚಕ್ಕೆ ಶಾಸಕ ಒತ್ತಡ ಹಾಕಿದ್ದರಿಂದ ಖಿನ್ನತೆ?

ಯಾದಗಿರಿ ನಗರ ಠಾಣೆಯಲ್ಲಿ ಉಳಿದುಕೊಳ್ಳಲು ಶಾಸಕ ಚನ್ನಾರೆಡ್ಡಿ ಪಾಟೀಲ ಅವರು 30 ಲಕ್ಷ ರೂ. ಹಣ ಲಂಚ ನೀಡುವಂತೆ ಒತ್ತಾಯಿಸಿದ್ದರು. ಕಳೆದ ಏಳು ತಿಂಗಳ ಹಿಂದಷ್ಟೇ 30 ಲಕ್ಷ ರೂ. ಹಣ ನೀಡಿ ನಗರ ಠಾಣೆಗೆ ಪೋಸ್ಟಿಂಗ್ ಪಡೆದುಕೊಂಡಿದ್ದರು. ಇದರಿಂದ ಸಾಲದ ಸುಳಿಗೆ ಸಿಲುಕಿದ್ದರು. ಇದೀಗ ‌ಮತ್ತೆ ನಿಯಮಬಾಹಿರವಾಗಿ ವರ್ಗಾವಣೆ ಮಾಡಲಾಗಿದೆ. ಒಂದು ವರ್ಷ ಪೂರೈಸುವ ಮೊದಲೇ ವರ್ಗಾವಣೆ ಮಾಡಿದ್ದರಿಂದ ಒತ್ತಡಕ್ಕೆ ಒಳಗಾಗಿ ಪತಿ ಪರಶುರಾಮ ಮೃತಪಟ್ಟಿದ್ದಾರೆ ಎಂದು ಶ್ವೇತಾ ಆರೋಪಿಸಿದ್ದರು. ಹೀಗಾಗಿ ಶಾಸಕ ಹಾಗೂ ಪುತ್ರನ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ.

ಶಾಸಕ, ಪುತ್ರನ ಬಂಧನಕ್ಕೆ ಆಗ್ರಹ

ಪಿಎಸ್ಐ ಪರಶುರಾಮ್ ಸಾವಿಗೆ ಕಾರಣರಾದ ಯಾದಗಿರಿ ಶಾಸಕ ಹಾಗೂ ಪುತ್ರನ ವಿರುದ್ಧ ಕಠಿಣ ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿ ಮೃತ ಪಿಎಸ್ಐ ಪತ್ನಿ ಸೇರಿ ಕುಟುಂಬಸ್ಥರು ಹಾಗೂ ವಿವಿಧ ಸಂಘಟನೆಗಳ ಮುಖಂಡರು ಯಿಮ್ಸ್‌ ಆಸ್ಪತ್ರೆ ಎದುರು ಪ್ರತಿಭಟನೆ ನಡೆಸಿದರು.

ಕ್ಷೇತ್ರದ ಪಕ್ಷೇತರ ಪರಾಜಿತ ಅಭ್ಯರ್ಥಿ ಹಣಮೇಗೌಡ ಬೀರನಕಲ್ ಮಾತನಾಡಿ, ಶಾಸಕ ಚನ್ನಾರೆಡ್ಡಿ ಪಾಟೀಲ ತುನ್ನೂರು ಕಂಡಲ್ಲಿ ಕಲ್ಲು ಹೊಡೆಯಬೇಕು. ವೋಟ್ ಹಾಕಿ ಗೆಲ್ಲಿಸಿದ್ದೀರಿ, ಈಗ ಕಂಡರೇ ಕಲ್ಲು ತೆಗೆದುಕೊಂಡು ಹೊಡೆಯಿರಿ. ಶಾಸಕ ಭೃಷ್ಟಚಾರದಲ್ಲಿ ಭಾಗಿಯಾಗಿದ್ದು, ಲಕ್ಷಾಂತರ ರೂಪಾಯಿ ಹಣ ವಸೂಲಿ ಮಾಡುತ್ತಾರೆ. ಹೀಗಾಗಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಒತ್ತಾಯಿಸಿದರು.

Continue Reading

ಚಿಕ್ಕಮಗಳೂರು

Assault Case : ಹೆಲ್ಮೆಟ್‌ ಇಲ್ಲದೇ ಚಲಿಸುತ್ತಿದ್ದ ಬೈಕ್ ಸವಾರನ ಕಾಲರ್ ಪಟ್ಟಿ ಹಿಡಿದು ಎಳೆದ ಟ್ರಾಫಿಕ್‌ ಪೊಲೀಸ್‌!

Assault Case : ಚಿಕ್ಕಮಗಳೂರಿನಲ್ಲಿ ಟ್ರಾಫಿಕ್‌ ಪೊಲೀಸ್‌ವೊಬ್ಬರ ನಡೆಗೆ ಸಾರ್ವಜನಿಕರು ಕಿಡಿಕಾರಿದ್ದಾರೆ. ಬೈಕ್‌ ಸವಾರ ಹೆಲ್ಮೆಟ್‌ ಧರಿಸದ್ದಕ್ಕೆ ಆತನ ಕಾಲರ್‌ ಪಟ್ಟಿ ಹಿಡಿದು ಎಳೆದಿದ್ದಾರೆ. ಈ ವೇಳೆ ನಿಯಂತ್ರಣ ತಪ್ಪಿ ಬಿದ್ದ ಸವಾರ ಆಸ್ಪತ್ರೆ ಪಾಲಾಗಿದ್ದಾನೆ.

VISTARANEWS.COM


on

By

assault case
Koo

ಚಿಕ್ಕಮಗಳೂರು: ಟ್ರಾಫಿಕ್‌ ಪೊಲೀಸ್‌ವೊಬ್ಬರು ಚಲಿಸುತ್ತಿದ್ದ ಬೈಕ್ ಸವಾರನ ಕಾಲರ್ ಪಟ್ಟಿ ಹಿಡಿದು (Assault Case) ಎಳೆದಿದ್ದಾರೆ. ಪರಿಣಾಮ ಸವಾರ ಬೈಕ್‌ನಿಂದ ಕೆಳಗೆ ಬಿದ್ದು ಗಾಯಗೊಂಡಿದ್ದಾನೆ. ಚಿಕ್ಕಮಗಳೂರು ನಗರದ ಎಐಟಿ ವೃತ್ತದಲ್ಲಿ ಘಟನೆ ನಡೆದಿದೆ.

ಹೆಲ್ಮೆಟ್ ಹಾಕದಿದ್ದಕ್ಕೆ ಫೈನ್ ಹಾಕುವ ಬದಲು ಟ್ರಾಫಿಕ್ ಪೊಲೀಸ್ ದೌರ್ಜನ್ಯ ಮೆರೆದಿದ್ದಾರೆ ಅಂತ ಸ್ಥಳೀಯರು ಆಕ್ರೋಶ ಹೊರಹಾಕಿದ್ದಾರೆ. ಟ್ರಾಫಿಕ್ ಸಬ್ ಇನ್‌ಸ್ಪೆಕ್ಟರ್‌ ಧನಂಜಯ್ ವರ್ತನೆಗೆ ಕಿಡಿಕಾರಿದ್ದಾರೆ. ಘಟನೆಯ ದೃಶ್ಯ ರಸ್ತೆ ಬದಿಯ‌ ಸಿ ಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಕಾಲರ್ ಪಟ್ಟಿ ಹಿಡಿದು ಎಳೆದಾಕ್ಷಣ ಬೈಕ್‌ ಸವಾರ ನಿಯಂತ್ರಣ ತಪ್ಪಿ ಬಿದ್ದಿದ್ದಾನೆ. ಯುವಕನ ಕೈ-ಕಾಲುಗಳಿಗೆ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಟ್ರಾಫಿಕ್ ಪಿಎಸ್ಐ ಧನಂಜಯ್ ವರ್ತನೆಗೆ ‌ಸ್ಥಳದಲ್ಲೇ ಹಲವರು ಕ್ಲಾಸ್ ತೆಗೆದುಕೊಂಡಿದ್ದಾರೆ.

ಇದನ್ನೂ ಓದಿ: Self Harming : ಉಕ್ಕಿ ಹರಿಯುವ ಕೃಷ್ಣಾ ನದಿಗೆ ಹಾರಿ ವ್ಯಕ್ತಿ ಆತ್ಮಹತ್ಯೆಗೆ ಶರಣು

ಆಟೋ ಚಾಲಕರ ಹೊಡಿಬಡಿ

ಉಡುಪಿ ನಗರದಲ್ಲಿ ಬಾಡಿಗೆ ಮಾಡುವ ವಿಚಾರ ರಿಕ್ಷಾ ಚಾಲಕನ ಮೇಲೆ ಹಲ್ಲೆ ನಡೆಸಲಾಗಿದೆ. ಪ್ರತಾಪ್ ಚಂದ್ರ ಎಂಬಾತ ಆಟೋ ಚಾಲಕರಿಂದಲೇ ಹಲ್ಲೆಗೊಳಗಾದವರು. ಉಡುಪಿ ನಗರದ ಸಿಟಿ ಬಸ್ ಸ್ಟಾಂಡ್ ಬಳಿ ಘಟನೆ ನಡೆದಿದೆ.

ನಗರ ವ್ಯಾಪ್ತಿಯಲ್ಲಿ ರಿಕ್ಷಾ ಬಾಡಿಗೆ ಮಾಡುತ್ತಿರುವಾಗ ಒಂದು ತಂಡದಿಂದ ಹಲ್ಲೆ ನಡೆದಿದೆ. ಬಾಡಿಗೆ ಮಾಡಲು ನನಗೆ ಅನುಮತಿ ಇದೆ ಎಂದಾಗ ಕೋಪಗೊಂಡ ನಗರದ ರಿಕ್ಷಾ ಚಾಲಕರು ಪ್ರತಾಪ್ ಚಂದ್ರ ಅವರಿಗೆ ಹಲ್ಲೆ ನಡೆಸಿದ್ದಾರೆ. ಉಡುಪಿ ನಗರದ ವ್ಯಾಪ್ತಿಯಲ್ಲಿರುವ ರಿಕ್ಷಾ ಸ್ಟ್ಯಾಂಡ್‌ಗಳಲ್ಲಿ ಎಲ್ಲಿಯೂ ರಿಕ್ಷಾ ನಿಲ್ಲಿಸದಂತೆ ತಾಕೀತು ಮಾಡಿದ್ದಾರೆ. ಸದ್ಯ ಉಡುಪಿ ಅಜ್ಜರಕಾಡು ಜಿಲ್ಲಾಸ್ಪತ್ರೆಯಲ್ಲಿ ಆಟೋ ಚಾಲಕ ಚಿಕಿತ್ಸೆ ಪಡೆಯುತ್ತಿದ್ದಾರೆ.

ತಲೆಮರೆಸಿಕೊಂಡಿದ್ದ ಆರೋಪಿ ಅರೆಸ್ಟ್‌

ಹನ್ನೆರಡು ವರ್ಷಗಳಿಂದ ತಲೆಮರಿಸಿಕೊಂಡಿದ್ದ ಆರೋಪಿಯ ಬಂಧನವಾಗಿದೆ. ಸಿಸಿಬಿಯ OCW ವಿಭಾಗದ ಅಧಿಕಾರಿಗಳು ವಿವೇಕ್ ಎಂಬಾತನನ್ನು ಬಂಧಿಸಿದ್ದಾರೆ. 2012 ರಲ್ಲಿ ಆರ್ ಟಿ ನಗರದ ಆರ್ಮ್ಸ್ ಆಯ್ಟ್ ಮತ್ತು ದರೋಡೆ ಯತ್ನ ಕೇಸ್‌ನಲ್ಲಿ ವಿವೇಕ್‌ ಅರೆಸ್ಟ್ ಆಗಿದ್ದ. ನಂತರ ಪೊಲೀಸರ ಕೈಗೂ ಸಿಗದೆ, ನ್ಯಾಯಾಲಯಕ್ಕೂ ಹಾಜರಾಗದೆ ಎಸ್ಕೇಪ್ ಆಗಿದ್ದ. ಮೈಸೂರಿನಲ್ಲಿ ತಲೆಮರೆಸಿಕೊಂಡಿದ್ದ ವಿವೇಕ್‌ನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Wild Animals
ದಾವಣಗೆರೆ3 mins ago

Wild Animals : ರಸ್ತೆಗೆ ಅಡ್ಡಲಾಗಿ ಮಲಗಿಕೊಂಡ ಚಿರತೆ; ಕಾಡಿನಿಂದ ಹಸು ಜತೆಗೆ ಓಡೋಡಿ ಬಂದ ಜಿಂಕೆ

Friendship Band Trend
ಫ್ಯಾಷನ್4 mins ago

Friendship Band Trend: ಹೊಸ ಜನರೇಷನ್‌‌ಗೆ ಪ್ರಿಯವಾದ 4 ವಿನ್ಯಾಸದ ಫ್ರೆಂಡ್‌ ಶಿಪ್‌ ಬ್ಯಾಂಡ್‌‌ಗಳಿವು

ಕ್ರೀಡೆ7 mins ago

Paris Olympics: 40 ಎ.ಸಿ. ಕಳುಹಿಸಿದ ಕ್ರೀಡಾ ಸಚಿವಾಲಯಕ್ಕೆ ಧನ್ಯವಾದ ತಿಳಿಸಿದ ಅಥ್ಲೀಟ್​ಗಳು

Post Office GDS Recruitment 2024
ಉದ್ಯೋಗ7 mins ago

Post Office GDS Recruitment 2024: ಪೋಸ್ಟ್‌ ಆಫೀಸ್‌ನ 44,228 ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಆ. 5 ಕೊನೆಯ ದಿನ

Anchor Shalini reveals her paycheck per day for paapa pandu tv serial
ಕಿರುತೆರೆ22 mins ago

Anchor Shalini: ಅವತ್ತಿನ ಕಾಲಕ್ಕೆ ‘ಪಾಪ ಪಾಂಡು’ ಖ್ಯಾತಿಯ ಶಾಲಿನಿ ಪಡೆಯುತ್ತಿದ್ದ ಸಂಭಾವನೆ ಏಷ್ಟು?

Ayodhya Rape Case
ದೇಶ23 mins ago

ಅಯೋಧ್ಯೆಯಲ್ಲಿ ಬಾಲಕಿ ಮೇಲೆ ಅತ್ಯಾಚಾರ; ಎಸ್‌ಪಿ ನಾಯಕ ಮೊಯೀದ್‌ ಖಾನ್‌ ಬೇಕರಿ ಧ್ವಂಸ! Video ಇದೆ

poison food bellary news
ಬಳ್ಳಾರಿ43 mins ago

Poison Food: ವಿಷಕಾರಿ ಬೀಜ ತಿಂದು 8 ಮಕ್ಕಳು ಅಸ್ವಸ್ಥ

Wayanad Landslide
ದೇಶ45 mins ago

Wayanad Landslide: ವಯನಾಡು ಭೂಕುಸಿತ: ದುರಂತದ ಮಧ್ಯೆಯೂ ಭರವಸೆಯ ಕಿರಣ; ಸಂತ್ರಸ್ತರ ರಕ್ಷಣೆಯೇ ರೋಚಕ

Paris Olympics
ಕ್ರೀಡೆ59 mins ago

Paris Olympics Archery: ಕ್ವಾರ್ಟರ್​ ಫೈನಲ್​ಗೆ ಲಗ್ಗೆಯಿಟ್ಟ ದೀಪಿಕಾ; ಭಜನ್ ಕೌರ್​ಗೆ ಸೋಲು

Viral Video
Latest1 hour ago

Viral Video: ಮೈಗೆ ಟವೆಲ್ ಸುತ್ತಿಕೊಂಡು ಬೀದಿ ತುಂಬಾ ಓಡಾಡಿದ ಯುವತಿ; ನೋಡಿದ ಜನ ಸುಸ್ತು!

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

karnataka rain
ಮಳೆ3 hours ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ2 days ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ2 days ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ2 days ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

karnataka Rain
ಮಳೆ4 days ago

Karnataka rain : ಭದ್ರಾ ನದಿಯಲ್ಲಿ ಕೊಚ್ಚಿ ಹೋದ ಹಸು; ಬೈಂದೂರಿನಲ್ಲಿ ಬೃಹತ್ ಗಾತ್ರದ ಮೊಸಳೆ ಪ್ರತ್ಯಕ್ಷ

Karnataka Rain
ಮಳೆ4 days ago

Karnataka Rain : ಭಾರಿ ಮಳೆಗೆ ಬಾಳೆಹೊನ್ನೂರು ಮುಳುಗಡೆ; ನೆರೆಗೆ ಬೋಟ್‌ ಮೊರೆ ಹೋದ ಜನರು

Bharachukki falls
ಚಾಮರಾಜನಗರ4 days ago

Bharachukki Falls : ಭರಚುಕ್ಕಿ ಜಲಪಾತಕ್ಕೆ ಕಳ್ಳ ಮಾರ್ಗದಿಂದ ಹೋದೋರಿಗೆ ಬಸ್ಕಿ ಹೊಡೆಸಿದ ಪೊಲೀಸರು!

karnataka Rain
ಮಳೆ5 days ago

Karnataka Rain: ಮತ್ತೆ ಶುರು ಮಳೆ ಅಬ್ಬರ; ಗಾಳಿಗೆ ಹಾರಿ ಹೋದ ಮನೆಗಳ ಚಾವಣಿ, ಶಿರಾಡಿಘಾಟ್‌ನಲ್ಲಿ ಮತ್ತೆ ಭೂ ಕುಸಿತ

Elephant combing Makna elephant captured near Bannerghatta
ಬೆಂಗಳೂರು ಗ್ರಾಮಾಂತರ5 days ago

Elephant combing: ಭೀಮ, ಮಹೇಂದ್ರರ ಮುಂದೆ ಮಂಡಿಯೂರಿದ ಮಕ್ನಾ ಆನೆ; ಹೇಗಿತ್ತು ಗೊತ್ತಾ ಕಾರ್ಯಾಚರಣೆ

karnataka rain
ಮಳೆ5 days ago

Karnataka rain: ಪ್ರವಾಹದ ಭೀಕರತೆ; ಹಳ್ಳದಲ್ಲಿ ತೇಲಿಬಂದ ಎಮ್ಮೆಗಳ ಕಳೇಬರ

ಟ್ರೆಂಡಿಂಗ್‌