EPFO | ಇಪಿಎಫ್‌ಒಗೆ ಆಗಸ್ಟ್‌ನಲ್ಲಿ 9.86 ಲಕ್ಷ ಸದಸ್ಯರ ಸೇರ್ಪಡೆ, 11% ಇಳಿಕೆ - Vistara News

ಪ್ರಮುಖ ಸುದ್ದಿ

EPFO | ಇಪಿಎಫ್‌ಒಗೆ ಆಗಸ್ಟ್‌ನಲ್ಲಿ 9.86 ಲಕ್ಷ ಸದಸ್ಯರ ಸೇರ್ಪಡೆ, 11% ಇಳಿಕೆ

ಉದ್ಯೋಗಿಗಳ ಭವಿಷ್ಯನಿಧಿ ಸಂಘಟನೆ ಇಪಿಎಫ್‌ಒ (EPFO) ಕಳೆದ ಆಗಸ್ಟ್‌ನಲ್ಲಿ 9.86 ಲಕ್ಷ ಸದಸ್ಯರನ್ನು ಸೇರ್ಪಡೆಗೊಳಿಸಿದೆ. ಜುಲೈಗೆ ಹೋಲಿಸಿದರೆ 11% ಇಳಿಕೆಯಾಗಿದೆ.

VISTARANEWS.COM


on

After RBI EPFO also blocks Paytm Payments Bank
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವ ದೆಹಲಿ: ಉದ್ಯೋಗಿಗಳ ಭವಿಷ್ಯನಿಧಿ ಸಂಘಟನೆ ಇಪಿಎಫ್‌ಒ (EPFO) ಕಳೆದ ಆಗಸ್ಟ್‌ 11ರಲ್ಲಿ 986,850 ಸದಸ್ಯರನ್ನು ಸೇರಿಸಿಕೊಂಡಿದೆ. ಜುಲೈಗೆ ಹೋಲಿಸಿದರೆ 11% ಇಳಿಕೆಯಾಗಿದೆ ಎಂದು ಸರ್ಕಾರ ಬಿಡುಗಡೆಗೊಳಿಸಿರುವ ಅಧಿಕೃತ ಅಂಕಿ ಅಂಶಗಳು ತಿಳಿಸಿವೆ.

2018ರ ಏಪ್ರಿಲ್‌ನಿಂದ ಸರ್ಕಾರ ಔಪಚಾರಿಕ ವಲಯದ ಉದ್ಯೋಗ ಪರಿಸ್ಥಿತಿ ಕುರಿತ ಅಂಕಿ ಅಂಶಗಳನ್ನು ಉದ್ಯೋಗಿಗಳ ಭವಿಷ್ಯನಿಧಿ ಸಂಸ್ಥೆ ಹಾಗೂ ರಾಜ್ಯ ವಿಮೆ ಯೋಜನೆ (ಇಎಸ್‌ಐ) ಮತ್ತು ರಾಷ್ಟ್ರೀಯ ಪಿಂಚಣಿ ಯೋಜನೆ (ಎನ್‌ಪಿಎಸ್)‌ ವಿವರಗಳನ್ನು ಆಧರಿಸಿ ವರದಿಯನ್ನು ಪ್ರಕಟಿಸುತ್ತದೆ.

ಇಎಸ್‌ಐ ಅಡಿಯಲ್ಲಿ ಕಳೆದ ಆಗಸ್ಟ್‌ನಲ್ಲಿ 1,462,145 ಸದಸ್ಯರ ಸೇರ್ಪಡೆಯಾಗಿದೆ. 2017 ರ ಸೆಪ್ಟೆಂಬರ್‌ನಿಂದ 7,22,92,232 ಹೊಸ ಸದಸ್ಯರ ಸೇರ್ಪಡೆಯಾಗಿದೆ. ರಾಷ್ಟ್ರೀಯ ಪಿಂಚಣಿ ಯೋಜನೆಗೆ ಆಗಸ್ಟ್‌ನಲ್ಲಿ 37,85,101 ಸದಸ್ಯರು ಸೇರ್ಪಡೆಯಾಗಿದ್ದಾರೆ. 2022ರ ನವೆಂಬರ್‌ 25ಕ್ಕೆ ಬಿಡುಗಡೆಯಾಗಲಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

ವಿಸ್ತಾರ ಸಂಪಾದಕೀಯ: ಕಾಂಗ್ರೆಸ್ ನಾಯಕನ ‘ವರ್ಣ ವ್ಯಾಖ್ಯಾನ’ ಅವಿವೇಕತನದ್ದು

ಕಾಂಗ್ರೆಸ್ ನಾಯಕ ಪಿತ್ರೋಡಾ ಈ ರೀತಿ ಹೇಳಿಕೆ ನೀಡಿ ರಾಜಕೀಯ ಬಿರುಗಾಳಿ ಎಬ್ಬಿಸುತ್ತಿರುವುದು ಇದೇ ಮೊದಲಲ್ಲ. ಇತ್ತೀಚೆಗೆ ಅವರು ʼಅಮೆರಿಕದ ಮಾದರಿಯ ಪಿತ್ರಾರ್ಜಿತ ತೆರಿಗೆʼ ಹಾಗೂ ʼಆಸ್ತಿ ಮರುಹಂಚಿಕೆʼ ಉಲ್ಲೇಖ ಮಾಡಿದ್ದರು. ಅಮೆರಿಕದಲ್ಲಿ ಶ್ರೀಮಂತರು ಮರಣ ಹೊಂದಿದಾಗ, ಅವರ ಆಸ್ತಿಯ ಒಂದು ಭಾಗವನ್ನು ಮಾತ್ರ ಅವರ ಮಕ್ಕಳಿಗೆ ವರ್ಗಾಯಿಸಲಾಗುತ್ತದೆ. ಸರ್ಕಾರ ಗಮನಾರ್ಹ ಪಾಲನ್ನು ವಶಪಡಿಸಿಕೊಳ್ಳುತ್ತದೆ. ಭಾರತದಲ್ಲಿ ಈ ರೀತಿಯ ವಿಧಾನ ನ್ಯಾಯಯುತ ಮತ್ತು ಪ್ರಯೋಜನಕಾರಿ ಎಂದಿದ್ದರು.

VISTARANEWS.COM


on

Sam Pitroda
Koo

ಕಳೆದ ಹಲವು ಚುನಾವಣೆಗಳಲ್ಲಿ ಕಾಂಗ್ರೆಸ್‌ಗೆ ತಮ್ಮ ಹೇಳಿಕೆಗಳ ಮೂಲಕ ಹಾನಿಯೆಸಗುವ ಮಣಿಶಂಕರ ಅಯ್ಯರ್‌ ಮುಂತಾದವರ ಪರಂಪರೆಯನ್ನು ಕಾಂಗ್ರೆಸ್‌ ಪಕ್ಷದ ಭಾರತೀಯ ಸಾಗರೋತ್ತರ ವಿಭಾಗದ ಅಧ್ಯಕ್ಷ ಸ್ಯಾಮ್‌ ಪಿತ್ರೋಡಾ ಮುಂದುವರಿಸುತ್ತಿರುವಂತಿದೆ. ದೇಶದ ವೈವಿಧ್ಯತೆಯ ಬಗ್ಗೆ ಮಾತನಾಡುವಾಗ ರಾಷ್ಟ್ರದ ವಿವಿಧ ಭಾಗಗಳ ಜನತೆಯನ್ನು ಚೀನಿಯರು, ಅರಬ್ಬರು, ಬಿಳಿಯರು ಮತ್ತು ಆಫ್ರಿಕನ್ನರಿಗೆ ಹೋಲಿಸಿ ಸ್ಯಾಮ್‌ ಪಿತ್ರೋಡಾ ವಿವಾದ ಹುಟ್ಟುಹಾಕಿದ್ದಾರೆ. “ಭಾರತದಲ್ಲಿ ಪೂರ್ವದಲ್ಲಿರುವ ಜನರು ಚೀನಿಯರಂತೆ ಕಾಣುತ್ತಾರೆ. ಪಶ್ಚಿಮದಲ್ಲಿ ಜನರು ಅರಬ್ಬರಂತೆ, ಉತ್ತರದ ಜನರು ಬಹುಶಃ ಶ್ವೇತವರ್ಣೀಯರಂತೆ ಹಾಗೂ ದಕ್ಷಿಣದ ಜನರು ದಕ್ಷಿಣ ಆಫ್ರಿಕಾದವರಂತೆ ಕಾಣುತ್ತಾರೆ. ಪರವಾಗಿಲ್ಲ, ನಾವೆಲ್ಲರೂ ಸಹೋದರರು ಮತ್ತು ಸಹೋದರಿಯರು” ಎಂದು ಪಿತ್ರೋಡಾ ಹೇಳಿದ್ದಾರೆ.

ಸಹಜವಾಗಿಯೇ ಈ ಮಾತು ವಿವಾದ ಹುಟ್ಟುಹಾಕಿದೆ. ಇಂಥ ಅವಕಾಶವನ್ನು ಎಂದೂ ಕಳೆದುಕೊಳ್ಳದ ಪ್ರಧಾನಮಂತ್ರಿ ನರೇಂದ್ರ ಮೋದಿ, “ಕಪ್ಪು ಚರ್ಮ ಇರುವ ಭಾರತೀಯರು ಆಫ್ರಿಕಾದವರು ಎಂದು ಈ ʼತತ್ವಜ್ಞಾನಿ ಅಂಕಲ್‌ʼ ಹೇಳಿದ್ದಾರೆ. ಇದರರ್ಥ, ನೀವು ದೇಶದ ಹಲವಾರು ಜನರನ್ನು ಅವರ ಚರ್ಮದ ಬಣ್ಣದ ಆಧಾರದ ಮೇಲೆ ನಿಂದಿಸುತ್ತಿದ್ದೀರಿ. ಚರ್ಮದ ಬಣ್ಣದ ಆಧಾರದ ಮೇಲೆ ಭಾರತೀಯರಿಗೆ ಮಾಡುವ ಅವಮಾನವನ್ನು ಈ ದೇಶ ಸಹಿಸುವುದಿಲ್ಲ” ಎಂದು ಪಿತ್ರೋಡಾ ಮೇಲೆ ಹರಿಹಾಯ್ದಿದ್ದಾರೆ. “ಆದಿವಾಸಿ ಕುಟುಂಬದ ಮಗಳಾದ ದ್ರೌಪದಿ ಮುರ್ಮು ಅವರನ್ನು ರಾಷ್ಟ್ರಪತಿ ಪದವಿಯ ಸ್ಪರ್ಧೆಯ ವೇಳೆ ಸೋಲಿಸಲು ಕಾಂಗ್ರೆಸ್ ಏಕೆ ಶ್ರಮಿಸಿತು ಎಂದು ನಾನು ತುಂಬಾ ಯೋಚಿಸುತ್ತಿದ್ದೆ. ಇಂದು ನನಗೆ ಅದರ ಕಾರಣ ತಿಳಿಯಿತು. ಅಮೆರಿಕದಲ್ಲಿರುವ ‘ಶೆಹಜಾದಾ’ನ ಅಂಕಲ್‌ ಹಾಗೂ ಫಿಲಾಸಫಿ ಮಾರ್ಗದರ್ಶಕ (ಪಿತ್ರೋಡಾ) ಈ ‘ಶೆಹಜಾದಾ’ಗೆ ಕ್ರಿಕೆಟ್‌ನ ಮೂರನೇ ಅಂಪೈರ್‌ನಂತೆ ಸಲಹೆ ನೀಡುತ್ತಾರೆ” ಎಂದು ಕುಟುಕಿದ್ದಾರೆ. ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ಅವರು, “ಸ್ಯಾಮ್ ಭಾಯ್, ನಾನು ಈಶಾನ್ಯದಿಂದ ಬಂದವನು ಮತ್ತು ನಾನು ಭಾರತೀಯನಂತೆ ಕಾಣುತ್ತೇನೆ. ನಮ್ಮ ದೇಶದ ಬಗ್ಗೆ ಸ್ವಲ್ಪ ತಿಳಿವಳಿಕೆ ಬೆಳೆಸಿಕೊಳ್ಳಿ” ಎಂದಿದ್ದಾರೆ.

ಕಾಂಗ್ರೆಸ್ ನಾಯಕ ಪಿತ್ರೋಡಾ ಈ ರೀತಿ ಹೇಳಿಕೆ ನೀಡಿ ರಾಜಕೀಯ ಬಿರುಗಾಳಿ ಎಬ್ಬಿಸುತ್ತಿರುವುದು ಇದೇ ಮೊದಲಲ್ಲ. ಇತ್ತೀಚೆಗೆ ಅವರು ʼಅಮೆರಿಕದ ಮಾದರಿಯ ಪಿತ್ರಾರ್ಜಿತ ತೆರಿಗೆʼ ಹಾಗೂ ʼಆಸ್ತಿ ಮರುಹಂಚಿಕೆʼ ಉಲ್ಲೇಖ ಮಾಡಿದ್ದರು. ಅಮೆರಿಕದಲ್ಲಿ ಶ್ರೀಮಂತರು ಮರಣ ಹೊಂದಿದಾಗ, ಅವರ ಆಸ್ತಿಯ ಒಂದು ಭಾಗವನ್ನು ಮಾತ್ರ ಅವರ ಮಕ್ಕಳಿಗೆ ವರ್ಗಾಯಿಸಲಾಗುತ್ತದೆ. ಸರ್ಕಾರ ಗಮನಾರ್ಹ ಪಾಲನ್ನು ವಶಪಡಿಸಿಕೊಳ್ಳುತ್ತದೆ. ಭಾರತದಲ್ಲಿ ಈ ರೀತಿಯ ವಿಧಾನ ನ್ಯಾಯಯುತ ಮತ್ತು ಪ್ರಯೋಜನಕಾರಿ ಎಂದಿದ್ದರು. ಕಾಂಗ್ರೆಸ್‌ ಪಕ್ಷ ಈ ಹೇಳಿಕೆಯಿಂದ ಉಂಟಾದ ಕೋಲಾಹಲದಿಂದ ಬೆಚ್ಚಿಬಿದ್ದು, ಪಿತ್ರೋಡಾ ಹೇಳಿಕೆಯಿಂದ ಅಂತರ ಕಾಪಾಡಿಕೊಂಡಿತ್ತು.

ಪಿತ್ರೋಡಾ ಅವರು ತಮ್ಮ ಮಾತನ್ನು ವಿಶ್ಲೇಷಣೆ ಎಂದುಕೊಂಡಿರುವಂತಿದೆ. ಆದರೆ ವಿಶ್ಲೇಷಣೆಗೂ ಜನಾಂಗೀಯ ನಿಂದನೆಗೂ ಅವರು ವ್ಯತ್ಯಾಸ ಗುರುತಿಸಿಕೊಳ್ಳಬೇಕಿದೆ. ದಕ್ಷಿಣ ಭಾರತೀಯರು ತುಸು ಕಪ್ಪಗಿದ್ದಾರೆ ಸರಿ; ಅಷ್ಟಕ್ಕೇ ಅವರು ಆಫ್ರಿಕನ್ನರಿಗೆ ಸಮವೋ? ಭಾರತದಲ್ಲಿ ಅತಿ ಹೆಚ್ಚಿನ ತೆರಿಗೆ ಉತ್ಪತ್ತಿಯಾಗುವುದು, ಜಿಡಿಪಿಗೆ ಹೆಚ್ಚಿನ ಕೊಡುಗೆ ನೀಡುವವರು ದಕ್ಷಿಣ ಭಾರತೀಯರು. ಇಲ್ಲಿನ ಸಂಸ್ಕೃತಿ ಅಲ್ಲಿಗಿಂತ ವಿಭಿನ್ನ. ಪೂರ್ವಭಾಗದವರು ಚೀನೀಯರಂತೆ ಕಾಣುತ್ತಾರೆ ಎನ್ನುವ ಮೂಲಕ, ʼಅರುಣಾಚಲ ನಮ್ಮದುʼ ಎನ್ನುತ್ತಿರುವ ಚೀನಾಕ್ಕೆ ಪಿತ್ರೋಡಾ ಸಹಾಯ ಮಾಡುತ್ತಿರುವಂತಿದೆ. ಭೌಗೋಳಿಕ ಹಾಗೂ ಸಾಂಸ್ಕೃತಿಕ ಭಿನ್ನತೆಗಳು ಪ್ರತಿ ದೇಶದಲ್ಲೂ ಇದ್ದೇ ಇರುತ್ತವೆ. ಭಾರತ ವಿಶಾಲ ದೇಶವಾದುದರಿಂದ ಇಲ್ಲಿ ಹೆಚ್ಚಿನ ವೈವಿಧ್ಯವಿದೆ. ಆ ಕಾರಣಕ್ಕೇ ಇದು ಸಾಂಸ್ಕೃತಿಕವಾಗಿ ಶ್ರೀಮಂತವೂ ಆಗಿದೆ. ಇದು ಭಾರತದ ಶಕ್ತಿಯೇ ಹೊರತು, ಇನ್ನೊಂದರ ನಕಲು ಅಲ್ಲ. ನಾವು ನಮ್ಮನ್ನು ಬೇರೆ ದೇಶಗಳಿಗೆ ಚರ್ಮದ ಬಣ್ಣದಿಂದ ಹೋಲಿಸಿಕೊಳ್ಳಬೇಕಿಲ್ಲ. ಬೇಕಿದ್ದರೆ ಭೂತಾನಿನ ಆನಂದದ ಸ್ವಭಾವದ ಸೂಚ್ಯಂಕಕ್ಕೆ, ಜಪಾನಿನ ಪರಿಶ್ರಮದ ಗುಣಕ್ಕೆ, ಕೆರಿಬಿಯನ್ನರ ದೈಹಿಕ ಬಲಕ್ಕೆ ಹೋಲಿಸಿಕೊಳ್ಳೋಣ.

ಈ ಹಿಂದೆ ಮಣಿಶಂಕರ ಅಯ್ಯರ್‌ ಮುಂತಾದವರು ಹೀಗೆ ʼಸೆಲ್ಫ್‌ ಗೋಲ್‌ʼ ಅಥವಾ ʼಆತ್ಮಹತ್ಯಾ ದಾಳಿʼ ಮಾಡಿಕೊಳ್ಳುತ್ತಿದ್ದರು. ಇಂಥವರು ಸ್ವತಃ ತಮ್ಮ ಪಕ್ಷಕ್ಕೇ ತಮ್ಮ ಹೇಳಿಕೆಗಳಿಂದ ಗಂಡಾಂತರ ತಂದೊಡ್ಡುತ್ತಿರುತ್ತಾರೆ. 2017ರಲ್ಲಿ ಮಣಿಶಂಕರ ಅಯ್ಯರ್‌ ಅವರು ಮೋದಿಯವರನ್ನು ʼನೀಚʼ ಎಂದು ಕರೆದಿದ್ದರು. ಇತ್ತೀಚೆಗೆ ಅವರು ಪಾಕಿಸ್ತಾನದಲ್ಲಿ ನಿಂತು “ಭಾರತದ ಮೂರನೇ ಎರಡು ಭಾಗ ಜನ ಪಾಕ್‌ನತ್ತ ಬರಲು ಸಿದ್ಧರಿದ್ದಾರೆ” ಎಂದಿದ್ದರು. 2007ರಲ್ಲಿ ನರೇಂದ್ರ ಮೋದಿಯವರನ್ನು ಕಾಂಗ್ರೆಸ್‌ ಮುಖ್ಯಸ್ಥೆ ಸೋನಿಯಾ ಗಾಂಧಿ ʼಸಾವಿನ ಸರದಾರʼ ಎಂದು ಕರೆದಿದ್ದರು. ಇತ್ತೀಚೆಗೆ ಗುಜರಾತ್‌ ಚುನಾವಣೆ ಸಂದರ್ಭ ಮೋದಿಯವರಿಗೆ ಮಲ್ಲಿಕಾರ್ಜುನ ಖರ್ಗೆಯವರು ʼರಾವಣʼ ಎಂದಿದ್ದರು. ಆದರೆ ಇಂಥ ಹೇಳಿಕೆಗಳೆಲ್ಲ ಹೇಳಿದವರಿಗೇ ತಿರುಮಂತ್ರವಾಗಿ, ನಿಂದಿಸಲ್ಪಟ್ಟವರು ಭಾರಿ ಬಹುಮತದಿಂದ ಗೆದ್ದಿದ್ದರು. ಮತದಾರರ ಮನಶ್ಶಾಸ್ತ್ರ ಅರ್ಥ ಮಾಡಿಕೊಳ್ಳದ ಜನನಾಯಕರು ಇಂಥ ಮಾತುಗಳನ್ನು ಬಳಸುತ್ತಾರೆ. ನಂತರ ನಾಲಿಗೆ ಕಚ್ಚಿಕೊಳ್ಳುತ್ತಾರೆ. ಇದು ಅವರನ್ನೇ ಇಕ್ಕಟ್ಟಿಗೆ ಸಿಲುಕಿಸುವುದಲ್ಲದೆ, ಅವರ ಚಾರಿತ್ರ್ಯವನ್ನೂ ಹರಾಜಿಗಿಡುತ್ತದೆ.

ಇದನ್ನೂ ಓದಿ: Sam Pitroda: ಭಾರತೀಯರ ಬಣ್ಣದ ಕುರಿತು ಮಾತಾಡಿದ ಸ್ಯಾಮ್‌ ಪಿತ್ರೋಡಾ ತಲೆದಂಡ; ಕಾಂಗ್ರೆಸ್‌ ಸ್ಥಾನಕ್ಕೆ ರಾಜೀನಾಮೆ!

Continue Reading

ಪ್ರಮುಖ ಸುದ್ದಿ

Dina Bhavishya: 12 ರಾಶಿಗಳ ಇಂದಿನ ಭವಿಷ್ಯ ಏನು? ಯಾರಿಗೆ ಪ್ಲಸ್‌? ಯಾರಿಗೆ ಮೈನಸ್!?

Dina Bhavishya: ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ಉತ್ತರಾಯಣ, ವಸಂತ ಋತು, ಚೈತ್ರ ಮಾಸ, ಶುಕ್ಲ ಪಕ್ಷದ ಅಮಾವಾಸ್ಯೆ ದಿನವಾದ ಇಂದು ದ್ವಾದಶಿ ರಾಶಿಗಳ ಭವಿಷ್ಯ ಹೇಗಿದೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

VISTARANEWS.COM


on

dina bhavishya read your daily horoscope predictions for May 09 2024
Koo

ಚಂದ್ರನು ಗುರುವಾರವೂ ಮಿಥುನ ರಾಶಿಯಲ್ಲಿಯೇ ನೆಲೆಸಿರುತ್ತಾನೆ. ಇದರಿಂದಾಗಿ ವೃಷಭ, ಕಟಕ, ಸಿಂಹ, ವೃಶ್ಚಿಕ, ಧನಸ್ಸು, ಮೀನ ರಾಶಿಯವರಿಗೆ ಚಂದ್ರನ ಬಲ ಸಿಗಲಿದೆ. ಇಂದಿನ ದಿನ ಭವಿಷ್ಯವನ್ನು (Kannada Dina Bhavishya) ನೋಡುವುದಾದರೆ, ಕಟಕ ರಾಶಿಯವರಿಗೆ ಅತಿಯಾದ ಒತ್ತಡದಿಂದಾಗಿ ಆರೋಗ್ಯದ ಮೇಲೆ ಪರಿಣಾಮ ಬೀರುವ ಸಾಧ್ಯತೆ ಹೆಚ್ಚಿದೆ. ಹೀಗಾಗಿ ಕಾಳಜಿ ವಹಿಸುವುದು ಸೂಕ್ತ. ಹೂಡಿಕೆ ವ್ಯವಹಾರದ ಕುರಿತು ಎಚ್ಚರಿಕೆ ಇರಲಿ. ಆರ್ಥಿಕವಾಗಿ ಲಾಭ ಉಂಟಾಗಲಿದೆ. ಉದ್ಯೋಗಿಗಳಿಗೆ ಒತ್ತಡ ಹೆಚ್ಚಾಗಲಿದೆ. ಕುಟುಂಬದ ವಾತಾವರಣ ಕೆಡದಂತೆ ಜಾಗ್ರತೆವಹಿಸಿ. ಕನ್ಯಾ ರಾಶಿಯವರು ಹಳೆಯ ವಿಚಾರಗಳನ್ನು ಕೆದಕಿ ಮಾನಸಿಕ ಒತ್ತಡವನ್ನು ಹೆಚ್ಚು ಮಾಡಿಕೊಳ್ಳುವುದು ಬೇಡ. ಮುಂದೆ ಆಗುವ ಕಾರ್ಯಗಳ ಬಗ್ಗೆ ಗಮನ ಇರಲಿ. ಆರೋಗ್ಯದ ಕುರಿತು ಕಾಳಜಿ ಇರಲಿ. ಹಣಕಾಸು ವ್ಯವಹಾರಗಳಲ್ಲಿ ಪ್ರಗತಿ ಕಾಣುವಿರಿ. ಉದ್ಯೋಗಿಗಳಿಗೆ ಶುಭ ಫಲ ಇರಲಿದೆ. ಇವೂ ಸೇರಿದಂತೆ ದ್ವಾದಶ ರಾಶಿಗಳ ಇಂದಿನ ಭವಿಷ್ಯ ಹೇಗಿದೆ? ಪಂಚಾಂಗ ಏನು ಹೇಳುತ್ತದೆ ಎಂಬುದನ್ನು ತಿಳಿಯೋಣ.

ಇಂದಿನ ಪಂಚಾಂಗ (kannada panchanga) (09-05-2024)

ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ಉತ್ತರಾಯಣ, ವಸಂತ ಋತು, ಚೈತ್ರ ಮಾಸ, ಕೃಷ್ಣ ಪಕ್ಷ.
ತಿಥಿ: ಪಾಡ್ಯ 06:20 / ಬಿದಿಗೆ 28:17 ವಾರ: ಗುರುವಾರ
ನಕ್ಷತ್ರ: ಕೃತ್ತಿಕಾ 11:54 ಯೋಗ: ಶೋಭನ 14:39
ಕರಣ: ಭವ 06:20 ಅಮೃತಕಾಲ: ಬೆಳಗ್ಗೆ 09:41 ರಿಂದ 11:11
ದಿನದ ವಿಶೇಷ: ಬಿದಿಗೆ ಚಂದ್ರದರ್ಶನ, ಬೌದ್ಧ ಹೊಸ ವರ್ಷ

ಸೂರ್ಯೋದಯ : 05:56   ಸೂರ್ಯಾಸ್ತ : 06:36

ರಾಹುಕಾಲ : ಮಧ್ಯಾಹ್ನ 1.30 ರಿಂದ 3.00
ಗುಳಿಕಕಾಲ: ಬೆಳಗ್ಗೆ 9.00 ರಿಂದ 10.30
ಯಮಗಂಡಕಾಲ: 6.00 ರಿಂದ 7.30

ದ್ವಾದಶ ರಾಶಿ ಭವಿಷ್ಯ (Dina Bhavishya in Kannada)

Horoscope Today

ಮೇಷ: ಧಾರ್ಮಿಕ ಕಾರ್ಯಗಳಲ್ಲಿ ಭಾಗವಹಿಸುವ ಸಾಧ್ಯತೆ ಇದೆ. ಗೃಹೋಪಯೋಗಿ ವಸ್ತುಗಳಿಂದಾಗಿ ಖರ್ಚು ಹೆಚ್ಚಾಗಲಿದೆ. ಗೌಪ್ಯ ವಿಷಯಗಳನ್ನು ಹಂಚಿಕೊಳ್ಳುವ ಮುನ್ನ ಎಚ್ಚರಿಕೆ ವಹಿಸಿ. ಮನೆಯಲ್ಲಿ ಭಿನ್ನಾಭಿಪ್ರಾಯ ಮೂಡದಂತೆ ನೋಡಿಕೊಳ್ಳಿ. ಉದ್ಯೋಗಿಗಳಿಗೆ ಕಿರಿಕಿರಿ ಉಂಟಾಗಲಿದೆ. ಆರೋಗ್ಯ ಮಧ್ಯಮ ಪ್ರಮಾಣದಲ್ಲಿದೆ. ಮಾನಸಿಕ ಒತ್ತಡ ಹೆಚ್ಚಾಗಲಿದೆ. ಕೌಟುಂಬಿಕವಾಗಿ ಸಾಧಾರಣ ಫಲ ಇರಲಿದೆ.
ಅದೃಷ್ಟ ಸಂಖ್ಯೆ: 1

Horoscope Today

ವೃಷಭ: ಆತ್ಮವಿಶ್ವಾಸದಿಂದ ಕೆಲಸ ಮಾಡಿದಲ್ಲಿ ಖಂಡಿತವಾಗಿಯೂ ಯಶಸ್ಸು ಮತ್ತು ಕೀರ್ತಿ ಸಿಗುತ್ತದೆ. ಹಿರಿಯರ ಬೆಂಬಲ, ಆಶೀರ್ವಾದ ಸಿಗಲಿದೆ. ಹಣಕಾಸು ವ್ಯವಹಾರಗಳಲ್ಲಿ ಪ್ರಗತಿ ಕಾಣುವಿರಿ. ಹಳೆಯ ಸ್ನೇಹಿತರೊಂದಿಗೆ ಸಮಯ ಹಂಚಿಕೊಳ್ಳುವ ಸಾಧ್ಯತೆ ಇದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಉದ್ಯೋಗಿಗಳಿಗೆ ಕೊಂಚ ಕಿರಿಕಿರಿ ಉಂಟಾಗಲಿದೆ. ಕೌಟುಂಬಿಕವಾಗಿ ಶುಭಫಲ.
ಅದೃಷ್ಟ ಸಂಖ್ಯೆ: 9

Horoscope Today

ಮಿಥುನ: ಆರೋಗ್ಯದ ಕುರಿತು ಕಾಳಜಿ ಇರಲಿ. ಆದಷ್ಟು ತಾಳ್ಮೆಯಿಂದ ವರ್ತಿಸಿ. ಭವಿಷ್ಯದಲ್ಲಿನ ಹೂಡಿಕೆ ಯೋಜನೆ ಕುರಿತು ಆಲೋಚನೆ ಮಾಡುವಿರಿ. ಕುಟುಂಬದಲ್ಲಿ ಸಂಗಾತಿಯ ಬೆಂಬಲ, ಸಲಹೆ ಸಿಗಲಿದೆ. ದಿನದ ಮಟ್ಟಿಗೆ ಖರ್ಚು ಹೆಚ್ಚಾಗಲಿದೆ. ಉದ್ಯೋಗಿಗಳಿಗೆ ಭರವಸೆ ಮೂಡಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 7

Horoscope Today

ಕಟಕ: ಅತಿಯಾದ ಒತ್ತಡದಿಂದಾಗಿ ಆರೋಗ್ಯದ ಮೇಲೆ ಪರಿಣಾಮ ಬೀರುವ ಸಾಧ್ಯತೆ ಹೆಚ್ಚಿದೆ. ಹೀಗಾಗಿ ಕಾಳಜಿ ವಹಿಸುವುದು ಸೂಕ್ತ. ಹೂಡಿಕೆ ವ್ಯವಹಾರದ ಕುರಿತು ಎಚ್ಚರಿಕೆ ಇರಲಿ. ಆರ್ಥಿಕವಾಗಿ ಲಾಭ ಉಂಟಾಗಲಿದೆ. ಉದ್ಯೋಗಿಗಳಿಗೆ ಒತ್ತಡ ಹೆಚ್ಚಾಗಲಿದೆ. ಕುಟುಂಬದ ವಾತಾವರಣ ಕೆಡದಂತೆ ಜಾಗ್ರತೆವಹಿಸಿ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 2

Horoscope Today

ಸಿಂಹ: ನಿಮ್ಮ ಆಕರ್ಷಕ ವ್ಯಕ್ತಿತ್ವವು ಇತರರನ್ನು ಗಮನ ಸೆಳೆಯುತ್ತದೆ. ಕೆಲಸ ಕಾರ್ಯಗಳಲ್ಲಿ ಯಶಸ್ಸು ಸಾಧಿಸುವಿರಿ. ಕುಟುಂಬದಲ್ಲಿ ಭಿನ್ನಾಭಿಪ್ರಾಯ ಮೂಡುವ ಸಾಧ್ಯತೆ ಇದೆ. ಸಾಧ್ಯವಾದಷ್ಟು ಮಟ್ಟಿಗೆ ತಾಳ್ಮೆ ಇರಲಿ. ಉನ್ನತ ವ್ಯಕ್ತಿಗಳ ಸಹಾಯ ದೊರೆಯಲಿದೆ. ಉದ್ಯೋಗಿಗಳಿಗೆ ಯಶಸ್ಸು,ಕೀರ್ತಿ, ಶುಭಫಲ ಲಭಿಸಲಿದೆ. ಕೌಟುಂಬಿಕವಾಗಿ ಮಿಶ್ರಫಲ.
ಅದೃಷ್ಟ ಸಂಖ್ಯೆ: 9

Horoscope Today

ಕನ್ಯಾ: ಹಳೆಯ ವಿಚಾರಗಳನ್ನು ಕೆದಕಿ ಮಾನಸಿಕ ಒತ್ತಡವನ್ನು ಹೆಚ್ಚು ಮಾಡಿಕೊಳ್ಳುವುದು ಬೇಡ. ಮುಂದೆ ಆಗುವ ಕಾರ್ಯಗಳ ಬಗ್ಗೆ ಗಮನ ಇರಲಿ. ಆರೋಗ್ಯದ ಕುರಿತು ಕಾಳಜಿ ಇರಲಿ. ಹಣಕಾಸು ವ್ಯವಹಾರಗಳಲ್ಲಿ ಪ್ರಗತಿ ಕಾಣುವಿರಿ. ಉದ್ಯೋಗಿಗಳಿಗೆ ಶುಭ ಫಲ ಇರಲಿದೆ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 7

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

Horoscope Today

ತುಲಾ: ಹಣಕಾಸಿನ ಸಮಸ್ಯೆ ತಲೆದೋರಲಿದೆ. ಹಿರಿಯರ ಮಾರ್ಗದರ್ಶನ ಸಿಗಲಿದೆ. ಕುಟುಂಬದ ಆಪ್ತರಿಂದ ಸಮಾಧಾನದ ಮಾತುಗಳನ್ನು ಕೇಳುವಿರಿ . ಹೂಡಿಕೆ ವ್ಯವಹಾರಗಳನ್ನು ಮಾಡುವುದು ಬೇಡ. ಉದ್ಯೋಗಿಗಳಿಗೆ ಒತ್ತಡ ಹೆಚ್ಚಲಿದೆ. ಕೌಟುಂಬಿಕವಾಗಿ ಮಿಶ್ರಫಲ ಇರಲಿದೆ.
ಅದೃಷ್ಟ ಸಂಖ್ಯೆ: 1

Horoscope Today

ವೃಶ್ಚಿಕ: ಹಣಕಾಸು ವ್ಯವಹಾರಗಳಲ್ಲಿ ಪ್ರಗತಿ‌ ಕಾಣುವಿರಿ. ಆರೋಗ್ಯ ಪರಿಪೂರ್ಣವಾಗಿರಲಿದೆ. ದೀರ್ಘಕಾಲದ ಕೆಲಸ ಕಾರ್ಯಗಳಲ್ಲಿ ಯಶಸ್ಸು ಸಾಧಿಸುವಿರಿ. ಕುಟುಂಬದವರ ಸಹಕಾರ ಸಿಗಲಿದೆ. ವ್ಯಾಪಾರ – ವ್ಯವಹಾರಗಳಲ್ಲಿ ಪ್ರಗತಿ ಕಾಣುವಿರಿ. ಉದ್ಯೋಗಿಗಳಿಗೆ ಕೊಂಚಮಟ್ಟಿಗೆ ಒತ್ತಡ ಇರಲಿದೆ. ಕೌಟುಂಬಿಕವಾಗಿ ಶುಭ ಫಲ.
ಅದೃಷ್ಟ ಸಂಖ್ಯೆ: 3

Horoscope Today

ಧನಸ್ಸು: ಭವಿಷ್ಯದ ಕುರಿತಾಗಿ ಆಲೋಚನೆ ಮಾಡಲಿದ್ದೀರಿ. ಈ ವೇಳೆ ನಿಮಗೆ ಜೀವನದಲ್ಲಿ ಅಭದ್ರತೆಯು ಕಾಡಬಹುದು. ಯಾವುದನ್ನೂ ಅತಿಯಾಗಿ ಆಲೋಚಿಸಿ ಮಾನಸಿಕ ನೆಮ್ಮದಿಯನ್ನು ಹಾಳು ಮಾಡಿಕೊಳ್ಳುವುದು ಬೇಡ. ಆರೋಗ್ಯದ ಕುರಿತು ಕಾಳಜಿ ಇರಲಿ. ಹೂಡಿಕೆ, ಹಣಕಾಸು ವ್ಯವಹಾರಗಳಲ್ಲಿ ಪ್ರಗತಿ ಕಾಣುವಿರಿ. ಉದ್ಯೋಗಿಗಳಿಗೆ ಶುಭಫಲ ಇದೆ. ಕೌಟುಂಬಿಕವಾಗಿ ಶುಭಫಲ.
ಅದೃಷ್ಟ ಸಂಖ್ಯೆ: 9

Horoscope Today

ಮಕರ: ಆರ್ಥಿಕ ಪ್ರಗತಿ ಉತ್ತಮವಾಗಿರಲಿದೆ. ಆರೋಗ್ಯದಲ್ಲಿ ಕೊಂಚ ಏರು-ಪೇರಾಗಬಹುದು. ಕೆಲವು ನಿರ್ಧಾರಗಳನ್ನು ಕೈಗೊಳ್ಳುವ ಸಾಧ್ಯತೆ ಇದೆ. ಈ ಹಿಂದೆ ನೀಡಿದ ಹಣವು ಮರಳುವ ಸಾಧ್ಯತೆ ಇದೆ. ಯಾವುದಾದರೂ ಸನ್ನಿವೇಶದಿಂದ ನಿಮ್ಮ ಮೇಲೆ ಅಪವಾದ ಬರುವ ಸಾಧ್ಯತೆ ಇದ್ದು, ಈ ಬಗ್ಗೆ ಎಚ್ಚರಿಕೆ ಇರಲಿ. ಉದ್ಯೋಗಿಗಳಿಗೆ ಶುಭ ಫಲ ಇರಲಿದೆ. ಕೌಟುಂಬಿಕವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 9

Horoscope Today

ಕುಂಭ: ಉತ್ಸಾಹದಿಂದ ಕಾರ್ಯ ಸಿದ್ಧಿಯಾಗಲಿದೆ. ಅಗತ್ಯ ವಸ್ತುಗಳ ಖರೀದಿ ಸಹಿತ ಖರ್ಚು ಹೆಚ್ಚಾಗಲಿದೆ. ಅಮೂಲ್ಯ ವಸ್ತುಗಳ ಕುರಿತು ಜಾಗ್ರತೆ ಇರಲಿ. ಕುಟುಂಬದಲ್ಲಿ ಭಿನ್ನಾಭಿಪ್ರಾಯಗಳು ಮೂಡಬಹುದು. ಆರೋಗ್ಯ ಪರಿಪೂರ್ಣವಾಗಿರಲಿದೆ. ಉದ್ಯೋಗಿಗಳಿಗೆ ಒತ್ತಡ ಹೆಚ್ಚಾಗಲಿದೆ. ಕೌಟುಂಬಿಕವಾಗಿ ಮಿಶ್ರಫಲ.
ಅದೃಷ್ಟ ಸಂಖ್ಯೆ: 6

Horoscope Today

ಮೀನ: ಅನೇಕ ಮೂಲಗಳಿಂದ ಹಣಕಾಸಿನ ಹರಿವು ಹೆಚ್ಚಳ. ದೀರ್ಘಕಾಲದ ಆಲೋಚನೆಯಿಂದ ದೂರವಾಗುವ ಸಾಧ್ಯತೆ ಇದೆ. ಮಾನಸಿಕ ನೆಮ್ಮದಿ ನಿಮ್ಮದಾಗಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಉದ್ಯೋಗಿಗಳಿಗೆ ಭರವಸೆಯ ಹೊಸ ಅವಕಾಶಗಳು ಒದಗಿಬರಲಿದೆ. ಕೌಟುಂಬಿಕವಾಗಿ ಶುಭಫಲ.
ಅದೃಷ್ಟ ಸಂಖ್ಯೆ: 4

Horoscope Today

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | pnaveenshastri@gmail.com

Continue Reading

ದೇಶ

ಹಾಸ್ಟೆಲ್‌ ಬಾತ್‌ರೂಮ್‌ನಲ್ಲಿ ತೆಗೆದ ನೂರಾರು ಯುವತಿಯರ ಬೆತ್ತಲೆ ವಿಡಿಯೊಗಳನ್ನು ಬಾಯ್‌ಫ್ರೆಂಡ್‌ಗೆ ಕಳುಹಿಸಿದ ಯುವತಿ!

ಹಾಸ್ಟೆಲ್‌ ವಿದ್ಯಾರ್ಥಿನಿಯರ ಪ್ರಕಾರ, ಮತ್ತೊಬ್ಬ ವಿದ್ಯಾರ್ಥನಿಯು ಪ್ರತಿದಿನ ಹಾಸ್ಟೆಲ್‌ ಬಾತ್‌ರೂಮ್‌ನಲ್ಲಿ ಯುವತಿಯರು ಸ್ನಾನ ಮಾಡು ಫೋಟೊಗಳನ್ನು ತೆಗೆದು, ವಿಡಿಯೊಗಳನ್ನು ಮಾಡಿ, ತನ್ನ ಬಾಯ್‌ಫ್ರೆಂಡ್‌ಗೆ ಕಳುಹಿಸುತ್ತಿದ್ದಳು ಎಂದು ತಿಳಿದುಬಂದಿದೆ. ಇದಾದ ಬಳಿಕ ವಿದ್ಯಾರ್ಥಿನಿಯರು ಆಡಳಿತ ಮಂಡಳಿಗೆ ದೂರು ನೀಡಿದ್ದಾರೆ.

VISTARANEWS.COM


on

Pune
Koo

ಪುಣೆ: ಮಹಾರಾಷ್ಟ್ರದ ಪುಣೆಯಲ್ಲಿರುವ ಕಾಲೇಜ್‌ ಆಫ್‌ ಎಂಜಿನಿಯರಿಂಗ್‌ ಪುಣೆಯ (COEP) ಹಾಸ್ಟೆಲ್‌ನಲ್ಲಿ ಯುವತಿಯೊಬ್ಬಳು ಮಾಡಿದ ಭಾನಗಡಿ ಈಗ ಹಾಸ್ಟೆಲ್‌ನ ಎಲ್ಲ ವಿದ್ಯಾರ್ಥಿನಿಯರು ಆತಂಕಕ್ಕೀಡಾಗುವಂತಾಗಿದೆ. ವಿದ್ಯಾರ್ಥಿನಿಯೊಬ್ಬಳು ವಿವಿ ಹಾಸ್ಟೆಲ್‌ನ ಬಾತ್‌ರೂಮ್‌ನಲ್ಲಿ ವಿದ್ಯಾರ್ಥಿನಿಯರ ನೂರಾರು ಬೆತ್ತಲೆ ಫೋಟೊಗಳನ್ನು (Photos) ತೆಗೆದು, ವಿಡಿಯೊಗಳನ್ನು (videos) ರೆಕಾರ್ಡ್‌ ಮಾಡಿ, ಅವುಗಳನ್ನು ತನ್ನ ಬಾಯ್‌ಫ್ರೆಂಡ್‌ಗೆ ಶೇರ್‌ ಮಾಡಿದ್ದಾಳೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಯುವತಿಯ ವಿರುದ್ಧ ಕೇಸ್‌ ದಾಖಲಿಸಿದ್ದಾರೆ.

ಮೇ 5ರಂದು ಈ ಕುರಿತು ವಿದ್ಯಾರ್ಥಿಯೊಬ್ಬ ಎಕ್ಸ್‌ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿದ ಬಳಿಕ ಪ್ರಕರಣ ಬಯಲಾಗಿದೆ. “ಪ್ರತಿಷ್ಠಿತ ಸಿಒಇಪಿ ವಿಶ್ವವಿದ್ಯಾಲಯದ ಹಾಸ್ಟೆಲ್‌ನಲ್ಲಿ ವಿದ್ಯಾರ್ಥಿನಿಯೊಬ್ಬಳು ನೂರಾರು ವಿದ್ಯಾರ್ಥಿನಿಯರು ಬಾತ್‌ರೂಮ್‌ನಲ್ಲಿ ಸ್ನಾನ ಮಾಡುವಾಗ ಅವರ ಫೋಟೊಗಳನ್ನು ತೆಗೆದು, ವಿಡಿಯೊ ರೆಕಾರ್ಡ್‌ ಮಾಡಿದ್ದಾಳೆ ಎಂಬ ಭಯಾನಕ ಸಂಗತಿ ಬಯಲಾಗಿದೆ. ಇಷ್ಟಾದರೂ ವಿಶ್ವವಿದ್ಯಾಲಯವು ಪೊಲೀಸರಿಗೆ ದೂರು ನೀಡಿಲ್ಲ. ಇದರಿಂದಾಗಿ, ಗರ್ಲ್ಸ್‌ ಹಾಸ್ಟೆಲ್‌ನ ನೂರಾರು ವಿದ್ಯಾರ್ಥಿನಿಯರಿಗೆ ಆತಂಕ ಎದುರಾಗಿದೆ. ಅವರು ಹಾಸ್ಟೆಲ್‌ನಲ್ಲಿ ಇರಲು ಕೂಡ ಭಯಪಡುವಂತಾಗಿದೆ” ಎಂದು ವಿಡಿಯೊ ಪೋಸ್ಟ್ ಮಾಡಿದ್ದ. ಇದಾದ ಬಳಿಕ ಪ್ರಕರಣವು ಗಂಭೀರ ಸ್ವರೂಪ ಪಡೆದಿದೆ.

ಯಾವಾಗ ವಿದ್ಯಾರ್ಥಿನಿಯೊಬ್ಬಳು ಪ್ರಕರಣದ ಕುರಿತು ಪೋಸ್ಟ್‌ ಮಾಡಿದಳೋ, ಅದಾದ ಬಳಿಕ ಜನರಿಂದ ಭಾರಿ ಟೀಕೆಗಳು ವ್ಯಕ್ತವಾದವು. ಕೊನೆಗೆ ಎಚ್ಚೆತ್ತ ವಿಶ್ವವಿದ್ಯಾಲಯದ ಆಡಳಿತ ಮಂಡಳಿಯು ಪೊಲೀಸರಿಗೆ ದೂರು ನೀಡಿದೆ. ಹಾಗೆಯೇ, ಪ್ರಕರಣದ ಕುರಿತು ತನಿಖೆ ನಡೆಸಲು ಸಮಿತಿಯೊಂದನ್ನು ರಚಿಸಿದೆ. ಹಾಸ್ಟೆಲ್‌ನಲ್ಲಿರುವ ವಿದ್ಯಾರ್ಥಿನಿಯರ ಪೋಷಕರು ಕೂಡ ಪ್ರಕರಣದ ಕುರಿತು ಆಡಳಿತ ಮಂಡಳಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪ್ರಕರಣ ಬೆಳಕಿಗೆ ಬಂದಿದ್ದು ಹೇಗೆ?

ಹಾಸ್ಟೆಲ್‌ ವಿದ್ಯಾರ್ಥಿನಿಯರ ಪ್ರಕಾರ, ಮತ್ತೊಬ್ಬ ವಿದ್ಯಾರ್ಥನಿಯು ಪ್ರತಿದಿನ ಹಾಸ್ಟೆಲ್‌ ಬಾತ್‌ರೂಮ್‌ನಲ್ಲಿ ಯುವತಿಯರು ಸ್ನಾನ ಮಾಡು ಫೋಟೊಗಳನ್ನು ತೆಗೆದು, ವಿಡಿಯೊಗಳನ್ನು ಮಾಡಿ, ತನ್ನ ಬಾಯ್‌ಫ್ರೆಂಡ್‌ಗೆ ಕಳುಹಿಸುತ್ತಿದ್ದಳು ಎಂದು ತಿಳಿದುಬಂದಿದೆ. ಮೇ 1ರಂದು ವಿದ್ಯಾರ್ಥಿನಿಯು ಬಾತ್‌ರೂಮ್‌ನಲ್ಲಿ ವಿಡಿಯೊ ರೆಕಾರ್ಡ್‌ ಮಾಡುವ ಕುರಿತು ಕೆಲ ವಿದ್ಯಾರ್ಥಿನಿಯರಿಗೆ ಸುಳಿವು ಸಿಕ್ಕಿದೆ. ಕೂಡಲೇ ವಿಷಯವು ಎಲ್ಲೆಡೆ ಹರಡಿದೆ. ಇದಾದ ಬಳಿಕ ಅವರು ವಿವಿ ಆಡಳಿತ ಮಂಡಳಿಗೆ ದೂರು ನೀಡಿದ್ದಾರೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ: Prajwal Revanna Case: ಪ್ರಜ್ವಲ್‌ ವಿಡಿಯೊ ಲೀಕ್‌ ಹಿಂದೆ ಇರೋದು ಡಿಕೆಶಿ; ದಾಖಲೆ ತೋರಿಸಿ, ಸಿಬಿಐಗೆ ಕೇಸ್‌ ವಹಿಸಲು ದೇವರಾಜೇಗೌಡ ಆಗ್ರಹ

Continue Reading

ದೇಶ

Kulgam: ಕಾಶ್ಮೀರದಲ್ಲಿ ಸೇನೆ ಭರ್ಜರಿ ಬೇಟೆ; ಮತ್ತೊಬ್ಬ ಉಗ್ರನ ಎನ್‌ಕೌಂಟರ್‌, 2 ದಿನದಲ್ಲಿ 3ನೇ ಬಲಿ

Kulgam: ಬುಧವಾರ (ಮೇ 8) ಕುಲ್ಗಾಮ್‌ನಲ್ಲಿ ಮತ್ತೊಬ್ಬ ಉಗ್ರನನ್ನು ಹೊಡೆದುರುಳಿಸಿದ್ದಾರೆ. ಇದರೊಂದಿಗೆ ಕಳೆದ ಎರಡು ದಿನಗಳಲ್ಲಿಯೇ ಕುಲ್ಗಾಮ್‌ನಲ್ಲಿ ಮೂವರು ಉಗ್ರರನ್ನು ಹೊಡೆದುರುಳಿಸಿದಂತಾಗಿದೆ. ಮಂಗಳವಾರ ಹತರಾದ ಇಬ್ಬರು ಉಗ್ರರಲ್ಲಿ ಬಸಿತ್‌ ದರ್‌ ಎಂಬಾತನ ಹತ್ಯೆಯು ಪ್ರಾಮುಖ್ಯತೆ ಪಡೆದಿದೆ. ಈತನು ಲಷ್ಕರೆ ತಯ್ಬಾದ ದಿ ರೆಸಿಸ್ಟನ್ಸ್‌ ಫ್ರಂಟ್‌ (TRF) ಕಮಾಂಡರ್‌ ಆಗಿದ್ದು, ಸೈನಿಕರ ಪಟ್ಟಿಯಲ್ಲಿ ಎ ಗ್ರೇಡ್‌ ಉಗ್ರನಾಗಿದ್ದ.

VISTARANEWS.COM


on

Kulgam
Koo

ಶ್ರೀನಗರ: ಜಮ್ಮು-ಕಾಶ್ಮೀರದಲ್ಲಿ (Jammu Kashmir) ಭಾರತೀಯ ಸೇನೆಯು ಉಗ್ರರನ್ನು ಮಟ್ಟಹಾಕುವ ದಿಸೆಯಲ್ಲಿ ಸತತವಾಗಿ ಕಾರ್ಯಾಚರಣೆ ಕೈಗೊಳ್ಳುತ್ತಿದೆ. ಅದರಲ್ಲೂ, ಮೇ 4ರಂದು ಪೂಂಚ್‌ನಲ್ಲಿ (Poonch Terror Attack) ವಾಯುಪಡೆಯ ಬೆಂಗಾವಲು ವಾಹನಗಳ ಮೇಲೆ ಉಗ್ರರು ದಾಳಿ ನಡೆಸಿದ ಬಳಿಕ ಕಾರ್ಯಾಚರಣೆಯನ್ನು ತೀವ್ರಗೊಳಿಸಿದ್ದು, ಬುಧವಾರ (ಮೇ 8) ಕುಲ್ಗಾಮ್‌ನಲ್ಲಿ (Kulgam) ಮತ್ತೊಬ್ಬ ಉಗ್ರನನ್ನು ಹೊಡೆದುರುಳಿಸಿದ್ದಾರೆ. ಇದರೊಂದಿಗೆ ಕಳೆದ ಎರಡು ದಿನಗಳಲ್ಲಿಯೇ ಕುಲ್ಗಾಮ್‌ನಲ್ಲಿ ಮೂವರು ಉಗ್ರರನ್ನು ಹೊಡೆದುರುಳಿಸಿದಂತಾಗಿದೆ.

ಸೋಮವಾರ (ಮೇ 6) ತಡರಾತ್ರಿಯೇ ಕುಲ್ಗಾಮ್‌ನ ರೆಡ್ವಾಣಿ ಪ್ರದೇಶದಲ್ಲಿ ಉಗ್ರರು ಅಡಗಿರುವ ಕುರಿತು ಭದ್ರತಾ ಸಿಬ್ಬಂದಿಗೆ ಗುಪ್ತಚರ ಮಾಹಿತಿ ದೊರೆತಿತ್ತು. ಇದರ ಅನ್ವಯ ರಾತ್ರೋರಾತ್ರಿ ಸೈನಿಕರು ಕಾರ್ಯಾಚರಣೆ ಕೈಗೊಂಡು ಇಬ್ಬರು ಉಗ್ರರನ್ನು ಹತ್ಯೆಗೈದಿದ್ದರು. ಭಾರತದ ಸೈನಿಕರು ಕಾರ್ಯಾಚರಣೆ ಕೈಗೊಳ್ಳುತ್ತಲೇ ಉಗ್ರರು ಕೂಡ ಪ್ರತಿದಾಳಿ ನಡೆಸಿದ್ದರು. ಆದರೆ, ಕಾರ್ಯಾಚರಣೆ ವೇಳೆ ಭಾರಿ ಮುನ್ನಡೆ ಸಾಧಿಸಿದ ಯೋಧರು ಒಬ್ಬ ಕಮಾಂಡರ್‌ ಸೇರಿ ಇಬ್ಬರು ಉಗ್ರರನ್ನು ಹತ್ಯೆಗೈದಿದ್ದರು. ಈಗ ರೆಡ್ವಾಣಿ ಪ್ರದೇಶದಲ್ಲಿಯೇ ಮೂರನೇ ಉಗ್ರನನ್ನೂ ಹತ್ಯೆಗೈದಿದ್ದಾರೆ.

ಮಂಗಳವಾರ ಹತರಾದ ಇಬ್ಬರು ಉಗ್ರರಲ್ಲಿ ಬಸಿತ್‌ ದರ್‌ ಎಂಬಾತನ ಹತ್ಯೆಯು ಪ್ರಾಮುಖ್ಯತೆ ಪಡೆದಿದೆ. ಈತನು ಲಷ್ಕರೆ ತಯ್ಬಾದ ದಿ ರೆಸಿಸ್ಟನ್ಸ್‌ ಫ್ರಂಟ್‌ (TRF) ಕಮಾಂಡರ್‌ ಆಗಿದ್ದು, ಸೈನಿಕರ ಪಟ್ಟಿಯಲ್ಲಿ ಎ ಗ್ರೇಡ್‌ ಉಗ್ರನಾಗಿದ್ದ. ಈತನ ಕುರಿತು ಮಾಹಿತಿ ನೀಡಿದರೆ 10 ಲಕ್ಷ ರೂ. ಬಹುಮಾನ ನೀಡಲಾಗುವುದು ಎಂದು ಪೊಲೀಸರು ಘೋಷಿಸಿದ್ದರು. ಜಮ್ಮು-ಕಾಶ್ಮೀರದಲ್ಲಿ ಉಗ್ರ ಚಟುವಟಿಕೆ, ಪೊಲೀಸರು ಹಾಗೂ ನಾಗರಿಕರ ಹತ್ಯೆ ಸೇರಿ ಈತನ ವಿರುದ್ಧ 18 ಪ್ರಕರಣಗಳು ದಾಖಲಾಗಿದ್ದವು ಎಂದು ತಿಳಿದುಬಂದಿದೆ.

ಉಗ್ರರ ಫೋಟೊ ಬಿಡುಗಡೆ

ಜಮ್ಮು-ಕಾಶ್ಮೀರದ ಪೂಂಚ್‌ ಜಿಲ್ಲೆಯಲ್ಲಿ ಮೇ 4ರಂದು ಭಾರತೀಯ ವಾಯುಪಡೆಯ ಬೆಂಗಾವಲು ಪಡೆಯ ಎರಡು ವಾಹನಗಳ ಮೇಲೆ ದಾಳಿ ನಡೆಸಿದ ಉಗ್ರರ ಫೋಟೊಗಳು, ಅವರ ಹೆಸರು ಬಹಿರಂಗವಾಗಿದೆ. ಸಿಸಿಟಿವಿ ದೃಶ್ಯಗಳನ್ನು ಆಧರಿಸಿ ಉಗ್ರರ ಫೋಟೊಗಳನ್ನು ಬಿಡುಗಡೆ ಮಾಡಲಾಗಿದ್ದು, ಭಾರತೀಯ ಸೇನೆಯು ಇವರನ್ನು ಹೊಡೆದುರುಳಿಸಲು ಪ್ಲಾನ್‌ ರೂಪಿಸುತ್ತಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.

ವಾಯುಪಡೆ ವಾಹನಗಳ ಮೇಲೆ ದಾಳಿ ಮಾಡಿದ ಮೂವರನ್ನು ಇಲಿಯಾಸ್‌ (ಪಾಕಿಸ್ತಾನ ಸೇನೆಯ ಮಾಜಿ ಕಮಾಂಡೋ), ಲಷ್ಕರೆ ತಯ್ಬಾ ಕಮಾಂಡರ್‌ ಅಬು ಹಮ್ಜಾ ಹಾಗೂ ಹದೂನ್‌ ಎಂಬುದಾಗಿ ಗುರುತಿಸಲಾಗಿದೆ. ಇಲಿಯಾಸ್‌ನ ಕೋಡ್‌ ನೇಮ್‌ (ಗೌಪ್ಯ ಹೆಸರು) ಫೌಜಿ ಎಂಬುದಾಗಿದೆ ಎಂದು ಕೂಡ ತಿಳಿದುಬಂದಿದೆ. ಜೈಶೆ ಮೊಹಮ್ಮದ್‌ ಉಗ್ರ ಸಂಘಟನೆಯ ಪೀಪಲ್ಸ್‌ ಆ್ಯಂಟಿ-ಫ್ಯಾಸಿಸ್ಟ್‌ ಫ್ರಂಟ್‌ ಎಂಬ ಅಂಗಸಂಸ್ಥೆಯ ಪರವಾಗಿ ಉಗ್ರರು ದಾಳಿ ನಡೆಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಇದನ್ನೂ ಓದಿ: Poonch Terrorists: ಪೂಂಚ್‌ನಲ್ಲಿ ಸೇನೆ ಮೇಲೆ ದಾಳಿ ಮಾಡಿದ 3 ಉಗ್ರರ ಫೋಟೊ ರಿಲೀಸ್; ಹತ್ಯೆಗೆ ಪ್ಲಾನ್!

Continue Reading
Advertisement
Sam Pitroda
ಪ್ರಮುಖ ಸುದ್ದಿ8 mins ago

ವಿಸ್ತಾರ ಸಂಪಾದಕೀಯ: ಕಾಂಗ್ರೆಸ್ ನಾಯಕನ ‘ವರ್ಣ ವ್ಯಾಖ್ಯಾನ’ ಅವಿವೇಕತನದ್ದು

dina bhavishya read your daily horoscope predictions for May 09 2024
ಪ್ರಮುಖ ಸುದ್ದಿ1 hour ago

Dina Bhavishya: 12 ರಾಶಿಗಳ ಇಂದಿನ ಭವಿಷ್ಯ ಏನು? ಯಾರಿಗೆ ಪ್ಲಸ್‌? ಯಾರಿಗೆ ಮೈನಸ್!?

Pune
ದೇಶ6 hours ago

ಹಾಸ್ಟೆಲ್‌ ಬಾತ್‌ರೂಮ್‌ನಲ್ಲಿ ತೆಗೆದ ನೂರಾರು ಯುವತಿಯರ ಬೆತ್ತಲೆ ವಿಡಿಯೊಗಳನ್ನು ಬಾಯ್‌ಫ್ರೆಂಡ್‌ಗೆ ಕಳುಹಿಸಿದ ಯುವತಿ!

ಉತ್ತರ ಕನ್ನಡ7 hours ago

Bheemanna Naik: ಶಿರಸಿ ಶಾಸಕ ಭೀಮಣ್ಣ ನಾಯ್ಕ್‌ ಮೇಲೆ ಜೇನು ದಾಳಿ; ಆಸ್ಪತ್ರೆಗೆ ದಾಖಲು

Kulgam
ದೇಶ7 hours ago

Kulgam: ಕಾಶ್ಮೀರದಲ್ಲಿ ಸೇನೆ ಭರ್ಜರಿ ಬೇಟೆ; ಮತ್ತೊಬ್ಬ ಉಗ್ರನ ಎನ್‌ಕೌಂಟರ್‌, 2 ದಿನದಲ್ಲಿ 3ನೇ ಬಲಿ

ವಿಸ್ತಾರ ಗ್ರಾಮದನಿ Vistara Gramadaani
ಕರ್ನಾಟಕ7 hours ago

ವಿಸ್ತಾರ ಗ್ರಾಮ ದನಿ: ಗ್ರಾಮೀಣ ಪ್ರದೇಶದಲ್ಲೇ ಹೆಚ್ಚು ಮತದಾನ, SSLC ಫಲಿತಾಂಶದಂತೆ!

LSG vs SRH
ಕ್ರೀಡೆ8 hours ago

LSG vs SRH: ಹೆಡ್, ಅಭಿಷೇಕ್ ಬ್ಯಾಟಿಂಗ್​ ಸುಂಟರಗಾಳಿಗೆ ತತ್ತರಿಸಿದ ಲಕ್ನೋ; 10 ವಿಕೆಟ್​ ಹೀನಾಯ ಸೋಲು

Hindu Girl
ದೇಶ8 hours ago

Hindu Girl: ಹಿಂದು ಬಾಲಕಿಯ ಅತ್ಯಾಚಾರಗೈದು, ಇಸ್ಲಾಂ ಪಾಲಿಸುವಂತೆ ಒತ್ತಾಯ; ಇಬ್ರಾಹಿಂ ವಿರುದ್ಧ ಕೇಸ್

Monty Panesar
ಕ್ರಿಕೆಟ್8 hours ago

Monty Panesar: ರಾಜಕೀಯಕ್ಕೆ ಎಂಟ್ರಿ ಕೊಟ್ಟು ಒಂದೇ ವಾರದಲ್ಲಿ ಗುಡ್​ ಬೈ ಹೇಳಿದ ಇಂಗ್ಲೆಂಡ್​ ಸ್ಪಿನ್ನರ್

Murder Case
ಕರ್ನಾಟಕ8 hours ago

Murder Case: ಶಿವಮೊಗ್ಗದಲ್ಲಿ ಗ್ಯಾಂಗ್ ವಾರ್; ಹಾಡಹಗಲೇ ಇಬ್ಬರು ರೌಡಿಶೀಟರ್‌ಗಳ ಭೀಕರ ಹತ್ಯೆ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Dina Bhavishya
ಭವಿಷ್ಯ1 day ago

Dina Bhavishya : ಅಮಾವಾಸ್ಯೆ ದಿನ ಈ ರಾಶಿಯವರಿಗೆ ಅದೃಷ್ಟ; ಹಣ ಗಳಿಕೆಗೆ ಪುಷ್ಟಿ

Prajwal Revanna Case HD Revanna has severe chest pain Admission in Victoria
ರಾಜಕೀಯ1 day ago

Prajwal Revanna Case: ಎಚ್.ಡಿ. ರೇವಣ್ಣಗೆ ಹೆಚ್ಚಾದ ಎದೆ ನೋವು; ಸಲೈನ್‌ ಹಾಕಿ ಕಳಿಸಿದ ವೈದ್ಯರು

Karnataka Weather Forecast
ಮಳೆ2 days ago

Karnataka Weather : ಹಾಸನ, ಚಿಕ್ಕಮಗಳೂರಲ್ಲಿ ಆಲಿಕಲ್ಲು ಸಹಿತ ಭಾರಿ ಮಳೆ; ನಾಳೆ ಬಿರುಗಾಳಿ ಎಚ್ಚರಿಕೆ

Prajwal Revanna Case Government work against Revanna HD Kumaraswamy gives details of the case
ರಾಜಕೀಯ2 days ago

Prajwal Revanna Case: ರೇವಣ್ಣರಿಗೆ ಖೆಡ್ಡಾ ತೋಡಿದ್ದು ಸರ್ಕಾರ; ಎಲ್ಲೆಲ್ಲಿ ಏನೇನು ಮಾಡಲಾಯಿತೆಂಬ ಇಂಚಿಂಚು ಡಿಟೇಲ್ಸ್‌ ಕೊಟ್ಟ ಎಚ್‌ಡಿಕೆ!

Prajwal Revanna Case 2nd accused in KR Nagar victim abduction case sent to SIT custody Trouble for Revanna
ಕ್ರೈಂ2 days ago

Prajwal Revanna Case: ಕೆ.ಆರ್.‌ ನಗರ ಸಂತ್ರಸ್ತೆ ಕಿಡ್ನ್ಯಾಪ್‌ ಕೇಸ್‌ನ 2ನೇ ಆರೋಪಿ SIT ಕಸ್ಟಡಿಗೆ; ರೇವಣ್ಣಗೆ ಸಂಕಷ್ಟ?

karnataka weather forecast
ಮಳೆ2 days ago

Karnataka Weather : ಬೆಂಗಳೂರು ಸೇರಿ ಹಲವೆಡೆ ಮತ್ತೆ ಅಬ್ಬರಿಸುತ್ತಿರುವ ಮಳೆ; ಇನ್ನೊಂದು ವಾರ ಅಲರ್ಟ್‌

Prajwal Revanna Case DK Shivakumar behind Prajwal video leak Devaraje Gowda demands CBI probe
ಕ್ರೈಂ2 days ago

Prajwal Revanna Case: ಪ್ರಜ್ವಲ್‌ ವಿಡಿಯೊ ಲೀಕ್‌ ಹಿಂದೆ ಇರೋದು ಡಿಕೆಶಿ; ದಾಖಲೆ ತೋರಿಸಿ, ಸಿಬಿಐಗೆ ಕೇಸ್‌ ವಹಿಸಲು ದೇವರಾಜೇಗೌಡ ಆಗ್ರಹ

Dina bhavishya
ಭವಿಷ್ಯ3 days ago

Dina Bhavishya : ಈ ರಾಶಿಯವರಿಗೆ ಇಂದು ಹುಡುಕಿಕೊಂಡು ಬರಲಿವೆ ಹೊಸ ಅವಕಾಶಗಳು

Prajwal Revanna Case HD Revanna sent to judicial custody Shift to Parappana Agrahara
ಕ್ರೈಂ3 days ago

Prajwal Revanna Case: ಎಸ್‌ಐಟಿ ಕಸ್ಟಡಿಗೆ ಮಾಜಿ ಸಚಿವ ಎಚ್‌.ಡಿ. ರೇವಣ್ಣ; ಮತ್ತೆ ತೀವ್ರ ವಿಚಾರಣೆ

Prajwal Revanna Case No evidence against me its a conspiracy says HD Revanna
ಕರ್ನಾಟಕ3 days ago

Prajwal Revanna Case: ನನ್ನ ವಿರುದ್ಧ ಯಾವುದೇ ಸಾಕ್ಷಿಗಳಿಲ್ಲ, ಇದೊಂದು ಷಡ್ಯಂತ್ರ: ಎಚ್‌.ಡಿ. ರೇವಣ್ಣ ಫಸ್ಟ್‌ ರಿಯಾಕ್ಷನ್‌!

ಟ್ರೆಂಡಿಂಗ್‌