ಮುರುಘಾಶ್ರೀ ಪ್ರಕರಣ | ಚಿತ್ರದುರ್ಗದ ಸಿಡಬ್ಲ್ಯೂಸಿಯಲ್ಲಿ ಇರಲೊಪ್ಪದ ಸಂತ್ರಸ್ತ ಬಾಲಕಿಯರು - Vistara News

ಕರ್ನಾಟಕ

ಮುರುಘಾಶ್ರೀ ಪ್ರಕರಣ | ಚಿತ್ರದುರ್ಗದ ಸಿಡಬ್ಲ್ಯೂಸಿಯಲ್ಲಿ ಇರಲೊಪ್ಪದ ಸಂತ್ರಸ್ತ ಬಾಲಕಿಯರು

ಮುರುಘಾಶ್ರೀ ಪ್ರಕರಣ | ಮುರುಘಾ ಶರಣರ ಮೇಲೆ ದಾಖಲಾಗಿರುವ ಎರಡನೇ ಪೋಕ್ಸೋ ಪ್ರಕರಣ ಸಂಬಂಧ ಸಂತ್ರಸ್ತ ಬಾಲಕಿಯರಿಂದ ನ್ಯಾಯಾಲಯದಲ್ಲಿ ಹೇಳಿಕೆಯನ್ನು ದಾಖಲು ಮಾಡಿಕೊಳ್ಳಲಾಗಿದೆ. ಆದರೆ, ಮುರುಘಾ ಮಠದಲ್ಲಿ ಸ್ಥಳ ಮಹಜರು ಪ್ರಕ್ರಿಯೆ ಮಾತ್ರ ಬಾಕಿಯಾಗಿದೆ.

VISTARANEWS.COM


on

chitradurga court 2
ಸ್ಥಳ ಮಹಜರಿಗಾಗಿ ಚಿತ್ರದುರ್ಗ ಮುರುಘಾ ಮಠಕ್ಕೆ ಸಂತ್ರಸ್ತ ಬಾಲಕಿಯರನ್ನು ಕರೆತರುತ್ತಿರುವ ಪೊಲೀಸರು.
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಚಿತ್ರದುರ್ಗ: ಮುರುಘಾಮಠದ ಮುರುಘಾ ಶರಣರ ವಿರುದ್ಧ ದಾಖಲಾಗಿರುವ 2ನೇ ಪೋಕ್ಸೋ ಪ್ರಕರಣದ ಸಂತ್ರಸ್ತೆಯರು ಇಲ್ಲಿನ ಮಕ್ಕಳ ರಕ್ಷಣಾ ಸಮಿತಿಯ ಬಾಲಮಂದಿರದಲ್ಲಿ ಉಳಿಯಲು ನಿರಾಕರಿಸಿದ್ದು, ಮೈಸೂರಿನ ಒಡನಾಡಿ ಸಂಸ್ಥೆಗೆ ಹೋಗುವುದಾಗಿ ಪಟ್ಟುಹಿಡಿದಿದ್ದಾರೆ. ಈ ನಿಮಿತ್ತ ಇವರ ಮನವೊಲಿಕೆ ಕಾರ್ಯ ನಡೆದಿದೆ.

ಆಗಿಲ್ಲ ಸ್ಥಳ ಮಹಜರು
ಇದಕ್ಕೂ ಮೊದಲು ಮಂಗಳವಾರ (ಅ.೨೫) ಬೆಳಗ್ಗೆ ಪೊಲೀಸರು ಸಂತ್ರಸ್ತರನ್ನು ಜಿಲ್ಲಾ ನ್ಯಾಯಾಲಯದಲ್ಲಿ ಹಾಜರುಪಡಿಸಿದರು. ನ್ಯಾಯಾಧೀಶರ ಎದುರು 164ರ ಅಡಿ ಹೇಳಿಕೆ ದಾಖಲು ಪ್ರಕ್ರಿಯೆ ನಡೆದಿದ್ದು, ಸಂತ್ರಸ್ತ ಬಾಲಕಿಯರು ಮತ್ತು ತಾಯಿಯಿಂದ ಹೇಳಿಕೆ ದಾಖಲು ಮಾಡಿಕೊಳ್ಳಲಾಗಿದೆ. ಬಳಿಕ ಸಂತ್ರಸ್ತ ಬಾಲಕಿಯರನ್ನು ಮುರುಘಾಮಠಕ್ಕೆ ಕರೆತರಲಾಗಿದೆ.

ಪೊಲೀಸರು ವಾಪಸ್
ಮುರುಘಾ ಮಠದಲ್ಲಿ ಮುರುಘಾಶ್ರೀಗಳ ಕಚೇರಿ ಹಾಗೂ ಕೊಠಡಿಯಲ್ಲಿ ಸ್ಥಳ ಮಹಜರು ಮಾಡಬೇಕಿತ್ತು. ಆದರೆ, ಇವುಗಳಿಗೆ ಬೀಗ ಹಾಕಲಾಗಿತ್ತು. ಈ ಬೀಗದ ಕೈಗಳು ಎಸ್‌ಜೆಎಂ ವಿದ್ಯಾಪೀಠದ ಕಾರ್ಯದರ್ಶಿಯಾಗಿರುವ ನಿವೃತ್ತ ನ್ಯಾ. ಎಸ್.ಬಿ. ವಸ್ತ್ರದಮಠ ಅವರ ಸುಪರ್ದಿಯಲ್ಲಿದ್ದವು. ಆದರೆ, ಅವರು ಕಾರ್ಯನಿಮಿತ್ತ ಬೆಂಗಳೂರಿನಲ್ಲಿದ್ದರು. ಈ ಹಿನ್ನೆಲೆಯಲ್ಲಿ ಪೊಲೀಸರು ಬೇರೆ ದಾರಿ ಇಲ್ಲದೆ ಸಂತ್ರಸ್ತ ಬಾಲಕಿಯರ ಜತೆ ವಾಪಸಾಗಿದ್ದಾರೆ.

ಇದನ್ನೂ ಓದಿ | ಮುರುಘಾಶ್ರೀ ಪ್ರಕರಣ | ನೀಲಕಂಠೇಶ್ವರ ದೇಗುಲದಲ್ಲಿ ಕೊನೆಗೂ ಮುರುಘಾಶರಣರ ಫೋಟೊ ತೆರವು

ನಿವೃತ್ತ ನ್ಯಾ. ಎಸ್.ಬಿ. ವಸ್ತ್ರದಮಠ ಅವರು ಬುಧವಾರವೂ ಬೆಂಗಳೂರಿನಿಂದ ವಾಪಸಾಗದಿದ್ದರೆ ಅಂದೂ ಸಹ ಸ್ಥಳ ಮಹಜರು ನಡೆಯುವುದು ಅನುಮಾನ ಎನ್ನಲಾಗಿದೆ. ಈ ಕಾರಣಕ್ಕಾಗಿ ಸಂತ್ರಸ್ತ ಬಾಲಕಿಯರನ್ನು ಚಿತ್ರದುರ್ಗದ ಮಕ್ಕಳ ರಕ್ಷಣಾ ಸಮಿತಿಯ ಬಾಲಮಂದಿರದಲ್ಲಿ ಉಳಿಸಿಕೊಳ್ಳಲು ತೀರ್ಮಾನಿಸಲಾಗಿತ್ತು. ಆದರೆ, ಇದಕ್ಕೆ ಒಪ್ಪದ ಬಾಲಕಿಯರು ತಮ್ಮನ್ನು ಮೈಸೂರಿನ ಒಡನಾಡಿ ಸಂಸ್ಥೆಗೆ ಕಳುಹಿಸಿಕೊಡಿ ಎಂದು ಪಟ್ಟುಹಿಡಿದ್ದಾರೆ.

ನಡೆಯುತ್ತಿರುವ ಮನವೊಲಿಕೆ ಕಾರ್ಯ
ಮುರುಘಾ ಶ್ರೀಗಳ ಕಚೇರಿ ಮತ್ತು ಕೊಠಡಿಯ ಸ್ಥಳ ಮಹಜರು ಇನ್ನೂ ನಡೆಯದ ಕಾರಣ ಈ ಸಂತ್ರಸ್ತ ಬಾಲಕಿಯರನ್ನು ಚಿತ್ರದುರ್ಗದಲ್ಲಿಯೇ ಉಳಿಸಿಕೊಳ್ಳುವ ನಿಟ್ಟಿನಲ್ಲಿ ಮಕ್ಕಳ ರಕ್ಷಣಾ ಸಮಿತಿ ಅಧಿಕಾರಿಗಳು ಪ್ರಯತ್ನ ಪಡುತ್ತಿದ್ದಾರೆ. ಕಾರಣ, ಮೈಸೂರಿಗೆ ಕಳುಹಿಸಿದರೆ ಪುನಃ ಸ್ಥಳ ಮಹಜರಿಗೋಸ್ಕರ ಅವರನ್ನು ಕರೆತರಬೇಕಿದೆ.

ಮತ್ತೆ ಶ್ರೀಗಳು ಕಸ್ಟಡಿಗೆ?
ಈಗಾಗಲೇ ಒಂದು ಲೈಂಗಿಕ ಪ್ರಕರಣದಲ್ಲಿ ಮುರುಘಾಶ್ರೀಗಳು ನ್ಯಾಯಾಂಗ ಬಂಧನದಲ್ಲಿದ್ದಾರೆ. ಆದರೆ, ಅ. ೧೪ರಂದು ಮತ್ತೊಂದು ಪ್ರಕರಣ ದಾಖಲಾಗಿದ್ದರಿಂದ ಮಂಗಳವಾರ ಸಂತ್ರಸ್ತ ಬಾಲಕಿಯರ ಹೇಳಿಕೆಯನ್ನು ನ್ಯಾಯಾಲಯದಲ್ಲಿ ದಾಖಲು ಮಾಡಲಾಗಿದೆ. ಇನ್ನು ಸ್ಥಳ ಮಹಜರು ಮಾತ್ರ ಬಾಕಿ ಇದ್ದು, ಇದಾದ ಬಳಿಕ ಮುರುಘಾ ಶ್ರೀಯನ್ನು ಕಸ್ಟಡಿಗೆ ಪಡೆಯುವ ಸಾಧ್ಯತೆ ಇದೆ.

ಇದನ್ನೂ ಓದಿ | ಮುರುಘಾಶ್ರೀ ಪ್ರಕರಣ | ಚಿತ್ರದುರ್ಗ ಜಿಲ್ಲಾ ಕೋರ್ಟ್‌ನಲ್ಲಿ ಸಂತ್ರಸ್ತ ಬಾಲಕಿಯರಿಬ್ಬರ ಹೇಳಿಕೆ ದಾಖಲು

ನ್ಯಾಯಾಂಗ ಬಂಧನ ವಿಸ್ತರಣೆ
ಪ್ರಕರಣದಲ್ಲಿ ಬಂಧಿತರಾಗಿರುವ ಮುರುಘಾಶರಣರು ಜಾಮೀನು ಕೋರಿ ಚಿತ್ರದುರ್ಗ 2ನೇ ಅಪರ & ಸತ್ರ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಶುಕ್ರವಾರ ಅರ್ಜಿ ವಿಚಾರಣೆ ನಡೆಸಿದ್ದ ನ್ಯಾಯಾಲವು ನವೆಂಬರ್ 3ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶ ನೀಡಿತ್ತು. ಇನ್ನು ಈ ಪ್ರಕರಣದಲ್ಲಿ 2ನೇ ಆರೋಪಿಯಾಗಿರುವ ಮಹಿಳಾ ವಾರ್ಡನ್ ರಶ್ಮಿ ನ್ಯಾಯಾಂಗ ಬಂಧನವೂ ವಿಸ್ತರಣೆಯಾಗಿದೆ.

ಪ್ರಕರಣದ ಸಾರಾಂಶ
ಈಗಾಗಲೇ ಲೈಂಗಿಕ ದೌರ್ಜನ್ಯ ಪ್ರಕರಣವೊಂದರಲ್ಲಿ ಮುರುಘಾಶರಣರು ಜೈಲಿನಲ್ಲಿ ಇರುವ ಬೆನ್ನಲ್ಲೇ ಶುಕ್ರವಾರ (ಅ.೧೪) ಮೈಸೂರಲ್ಲಿ ಮಠದ ಅಡುಗೆ ಸಹಾಯಕಿಯೊಬ್ಬರು ತನ್ನಿಬ್ಬರು ಮಕ್ಕಳು ಸೇರಿದಂತೆ ಮತ್ತಿಬ್ಬರು ಮಕ್ಕಳ ಮೇಲೆ ಮುರುಘಾಶ್ರೀಗಳು ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ದೂರು ದಾಖಲು ಮಾಡಿದ್ದರು. ಈ ವೇಳೆ ಪೊಲೀಸರು ಹಾಗೂ ಸಿಡಬ್ಲ್ಯೂಸಿ ಅಧಿಕಾರಿಗಳು ಆಕೆಯ ಹಾಗೂ ಒಬ್ಬಳು ಮಗಳ ಹೇಳಿಕೆಯನ್ನು ಪಡೆದುಕೊಂಡಿದ್ದರು. ನಾಲ್ಕು ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ನಡೆದಿರುವ ಬಗ್ಗೆ ತಾಯಿ ಹೇಳಿದ್ದಾರೆ. “ಪತಿ ಇಲ್ಲದ ಕಾರಣ ತಾನು ಮಠದಲ್ಲಿ ಅಡುಗೆ ಕೆಲಸ ಮಾಡುತ್ತಿದ್ದೆ. ನನ್ನ ಮಕ್ಕಳು ಮಠದ ವಸತಿ ಶಾಲೆಯಲ್ಲಿ ಓದುತ್ತಿದ್ದರು. ನನ್ನ ಇಬ್ಬರು ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ನಡೆದಿದೆ. ಮುರುಘಾ ಶರಣರು ಸಾಮಾಜಿಕ, ಧಾರ್ಮಿಕ ಮತ್ತು ರಾಜಕೀಯ ಪ್ರಭಾವ ಹೊಂದಿರುವ ಕಾರಣ ತಡವಾಗಿ ದೂರು ನೀಡುತ್ತಿದ್ದೇನೆ” ಎಂದೂ ಸಹ ಸಂತ್ರಸ್ತ ಬಾಲಕಿಯರಿಬ್ಬರ ತಾಯಿ ದೂರಿನಲ್ಲಿ ಉಲ್ಲೇಖಿಸಿದ್ದರು.

ಈ ಸಂಬಂಧ ಮೈಸೂರಿ‌ನ ನಜರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದ್ದು, ಒಟ್ಟು 7 ಮಂದಿ ಮೇಲೆ ಕೇಸ್‌ ಹಾಕಲಾಗಿತ್ತು. ಸ್ವಾಮೀಜಿಯವರ ಸಹಾಯಕರಾದ ಮಹಾಲಿಂಗ, ಅಡುಗೆ ಸಹಾಯಕ ಕರಿಯಪ್ಪ ಎಂಬ ಇಬ್ಬರ ಮೇಲೆ ಹೊಸದಾಗಿ ಎಫ್‌ಐಆರ್ ದಾಖಲಾದಂತಾಗಿತ್ತು. ಶಿವಮೂರ್ತಿ ಮುರುಘಾ ಶರಣರು ಮೊದಲ ಆರೋಪಿಯಾಗಿದ್ದು, ಉಳಿದವರಾದ ಲೇಡಿ ಹಾಸ್ಟೆಲ್ ವಾರ್ಡನ್, ಮಠದ ಉತ್ತರಾಧಿಕಾರಿ, ಮಠದ ಕಾರ್ಯದರ್ಶಿ ಪರಮಶಿವಯ್ಯ, ವಕೀಲ ಗಂಗಾಧರಯ್ಯ, ಮುರುಘಾಶ್ರೀ ಸಹಾಯಕ ಮಹಾಲಿಂಗ, ಮುರುಘಾಶ್ರೀ ಅಡುಗೆಭಟ್ಟ ಕರಿಬಸಪ್ಪ ವಿರುದ್ಧ ಕ್ರಮವಾಗಿ ಕೇಸ್ ದಾಖಲಾಗಿದೆ.

ಏನಿದು ಮೊದಲ ಲೈಂಗಿಕ ಕಿರುಕುಳ ಪ್ರಕರಣ?
ಚಿತ್ರದುರ್ಗ ಜಿಲ್ಲೆಯ ಮುರುಘಾ ಮಠದ ಪ್ರೌಢಶಾಲೆಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ ಇಬ್ಬರು ವಿದ್ಯಾರ್ಥಿನಿಯರ ಮೇಲೆ ಸ್ವಾಮೀಜಿ ಲೈಂಗಿಕ ದೌರ್ಜನ್ಯ ನಡೆಸಿದ್ದಾರೆಂಬ ಆರೋಪ ಕೇಳಿಬಂದಿತ್ತು. ವಸತಿ ಶಾಲೆಯಲ್ಲಿದ್ದ ಈ ಈ ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸೆಗಿದ್ದಾರೆಂದು ದೂರು ನೀಡಲಾಗಿತ್ತು. ಅಲ್ಲದೆ, ಇದಕ್ಕೆ ಅಲ್ಲಿನ ವಾರ್ಡನ್‌ ಸೇರಿ ಹಲವರು ಸಹಕಾರ ನೀಡುತ್ತಿದ್ದಾರೆ ಎಂದು ಆಗಸ್ಟ್‌ ೨೭ರಂದು ಇಬ್ಬರು ವಿದ್ಯಾರ್ಥಿನಿಯರು ಒಡನಾಡಿ ಸಂಸ್ಥೆಯ ಮೂಲಕ ಮೈಸೂರಿನ ನಜರ್‌ಬಾದ್‌ ಪೊಲೀಸ್‌ ಠಾಣೆಗೆ ದೂರು ನೀಡಿದ್ದರು. ಒಬ್ಬಳು ವಿದ್ಯಾರ್ಥಿನಿ ಮೇಲೆ ೩ ವರ್ಷದಿಂದ ಹಾಗೂ ಇನ್ನೊಬ್ಬ ವಿದ್ಯಾರ್ಥಿನಿಯ ಮೇಲೆ ಕಳೆದ ಒಂದೂವರೆ ವರ್ಷದಿಂದ ಲೈಂಗಿಕ ದೌರ್ಜನ್ಯವನ್ನು ನಡೆಸುತ್ತಾ ಬರಲಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿತ್ತು.

ಯಾರೆಲ್ಲ ಭಾಗಿಗಳು?
ಡಾ. ಶಿವಮೂರ್ತಿ ಮುರುಘಾಶರಣರ ಮೇಲೆ ಅತ್ಯಾಚಾರ ಆರೋಪವನ್ನು ಹೊರಿಸಲಾಗಿದ್ದು, ಅವರಿಗೆ ಸಹಕಾರ ನೀಡಿದ ಆರೋಪದಡಿ ವಸತಿ ಶಾಲೆಯ ವಾರ್ಡನ್‌ ರಶ್ಮಿ, ಮಠದ ಮರಿಸ್ವಾಮಿ ಬಸವಾದಿತ್ಯ, ಕಾರ್ಯದರ್ಶಿ ಪರಮಶಿವಯ್ಯ, ವಕೀಲ ಗಂಗಾಧರ್‌ ಮೇಲೆ ದೂರು ದಾಖಲಾಗಿತ್ತು. ಈ ಇಬ್ಬರು ವಿದ್ಯಾರ್ಥಿನಿಯರನ್ನು ಒತ್ತಾಯಪೂರ್ವಕವಾಗಿ ಸ್ವಾಮೀಜಿ ಬಳಿ ಕಳುಹಿಸಲಾಗುತ್ತಿತ್ತು ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಲೈಂಗಿಕ ಕ್ರಿಯೆಗೆ ಒಪ್ಪದೇ ಇದ್ದರೆ ಹಣ್ಣು, ಸಿಹಿಯಲ್ಲಿ ಮತ್ತುಬರುವ ಔಷಧವನ್ನು ಬೆರೆಸಿ ಅತ್ಯಾಚಾರ ನಡೆಸಲಾಗುತ್ತದೆ ಎಂದೂ ಹೇಳಲಾಗಿದೆ.

ಬಂಧನದ ಬಳಿಕ
ಆಗಸ್ಟ್‌ ೨೭ರಂದು ದೂರು ದಾಖಲಾಗಿತ್ತಾದರೂ ಮುಂದಿನ ನಾಲ್ಕು ದಿನಗಳ ಕಾಲ ಕಾನೂನು ಪ್ರಕ್ರಿಯೆಯನ್ನು ತೆಗೆದುಕೊಂಡಿರಲಿಲ್ಲ. ಸೆಪ್ಟೆಂಬರ್‌ ೧ರಂದು ರಾತ್ರಿ ಸ್ವಾಮೀಜಿಯನ್ನು ಬಂಧನ ಮಾಡಲಾಯಿತು. ಎರಡನೇ ಆರೋಪಿ, ಹಾಸ್ಟೆಲ್‌ ವಾರ್ಡನ್‌ ರಶ್ಮಿಯನ್ನು ಸಹ ಬಳಿಕ ಬಂಧನ ಮಾಡಿ ಶಿವಮೊಗ್ಗದ ಜೈಲಿಗೆ ಕಳುಹಿಸಲಾಗಿದೆ. ಇದರ ಜತೆಗೆ ಉಳಿದ ಆರೋಪಿಗಳ ಪೈಕಿ ಬಸವಾದಿತ್ಯ ಮತ್ತು ಪರಮಶಿವಯ್ಯ ತಲೆಮರೆಸಿಕೊಂಡಿದ್ದು ನಿರೀಕ್ಷಣಾ ಜಾಮೀನಿಗೆ ಅರ್ಜಿ ಸಲ್ಲಿಸುತ್ತಿದ್ದಾರೆ. ಆದರೆ, ಕೋರ್ಟ್‌ ಅದನ್ನು ಪುರಸ್ಕರಿಸದೆ ವಿಚಾರಣೆಯನ್ನು ಮುಂದೂಡುತ್ತಲೇ ಬಂದಿದೆ. ಇದರ ನಡುವೆ, ವಕೀಲರಾಗಿರುವ ಗಂಗಾಧರಯ್ಯ ಅವರನ್ನು ಪೊಲೀಸರು ವಿಚಾರಣೆ ನಡೆಸಿ, ಕರೆದಾಗ ಬರುವ ಷರತ್ತಿನೊಂದಿಗೆ ಬಿಟ್ಟುಕಳುಹಿಸಲಾಗಿದೆ.

ಅಷ್ಟೂ ಹೆಣ್ಣು ಮಕ್ಕಳ ಆಪ್ತ ಸಮಾಲೋಚನೆಗೆ ಆದೇಶ
ಮುರುಘಾ ಶರಣರು ಮಠದ ಹಾಸ್ಟೆಲ್‌ನಲ್ಲಿದ್ದ ವಿದ್ಯಾರ್ಥಿನಿಯರಿಬ್ಬರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದ ಬೆನ್ನಲ್ಲೇ ಮತ್ತೆ ನಾಲ್ಕು ಮಂದಿ ವಿದ್ಯಾರ್ಥಿನಿಯರ ಮೇಲೆ ಅತ್ಯಾಚಾರ ಎಸಗಿದ್ದಾರೆಂಬ ದೂರು ಬಂದಿದ್ದ ಹಿನ್ನೆಲೆಯಲ್ಲಿ ಶ್ರೀಮಠದ ಹಾಸ್ಟೆಲ್‌ನಲ್ಲಿ ಓದುತ್ತಿದ್ದ ಎಲ್ಲ ಹೆಣ್ಣುಮಕ್ಕಳಿಗೂ ಆಪ್ತ ಸಮಾಲೋಚನೆ ನಡೆಸುವಂತೆ ಮಕ್ಕಳ ರಕ್ಷಣಾ ನಿರ್ದೇಶನಾಲಯವು ಚಿತ್ರದುರ್ಗ ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳಿಗೆ ಸೂಚಿಸಿ ಈಚೆಗೆ ಆದೇಶ ಹೊರಡಿಸಿದೆ.

ನವೆಂಬರ್‌ ೩೦ರ ಗುಡುವು
ಮಠದಿಂದ ವಿವಿಧ ಸರ್ಕಾರಿ ಹಾಸ್ಟೆಲ್, ಬಾಲಮಂದಿರಕ್ಕೆ ಸ್ಥಳಾಂತರಗೊಂಡಿರುವ ಅಥವಾ ಮನೆಗೆ ಹೋಗಿರುವ ಎಲ್ಲ ಹೆಣ್ಣುಮಕ್ಕಳ ಜತೆ ನವೆಂಬರ್ 30ರೊಳಗೆ ಆಪ್ತ ಸಮಾಲೋಚನೆ ನಡೆಸುವಂತೆ ಸೂಚನೆಯಲ್ಲಿ ತಿಳಿಸಲಾಗಿದೆ. ಈ ವೇಳೆ ಲೈಂಗಿಕ ದೌರ್ಜನ್ಯ ನಡೆದಿರುವ ಮಾಹಿತಿ ಸಿಕ್ಕಲ್ಲಿ ಹೇಳಿಕೆ ದಾಖಲಿಸಿ, ನಿಯಮಾನುಸಾರ ಮುಂದಿನ ಕ್ರಮ ಕೈಗೊಂಡು ವರದಿ ನೀಡುವಂತೆ ಸೂಚನೆಯಲ್ಲಿ ಉಲ್ಲೇಖಿಸಲಾಗಿದೆ.

ನಿರ್ಲಕ್ಷ್ಯ ವಹಿಸದಂತೆ ಕ್ರಮಕ್ಕೆ ಸೂಚನೆ
ಆಪ್ತ ಸಮಾಲೋಚನೆ ವೇಳೆ ಯಾವುದೇ ರೀತಿಯಾದಂತಹ ನಿರ್ಲಕ್ಷ್ಯ ಆಗಕೂಡದು. ಆದ್ಯತೆ ಮೇರೆಗೆ ಕ್ರಮ ವಹಿಸಬೇಕು. ಆಪ್ತ ಸಮಾಲೋಚನೆ ನಡೆಸುವಾಗ ಉಪಸ್ಥಿತರಿರುವ ಸಂಖ್ಯೆ, ಮಕ್ಕಳಿಂದ ಯಾವ ಮಾದರಿಯಲ್ಲಿ ಮಾಹಿತಿ ಸಂಗ್ರಹಣೆ ಮಾಡಲಾಗಿದೆ ಎಂಬ ಮಾಹಿತಿಯನ್ನು ನಿರ್ದೇಶನಾಲಯಕ್ಕೆ ಸಲ್ಲಿಸಬೇಕು. ಜತೆಗೆ ಈಗ ಈ ಎಲ್ಲ ಮಕ್ಕಳಿಗೆ ಯಾವ ರೀತಿಯಾಗಿ ಪುನರ್ವಸತಿ ಕಲ್ಪಿಸಲಾಗಿದೆ? ಅವರಿಗೆ ವ್ಯವಸ್ಥೆ ಹೇಗಿದೆ ಎಂಬ ಬಗ್ಗೆಯೂ ವರದಿಯಲ್ಲಿ ಉಲ್ಲೇಖಿಸುವಂತೆ ಸೂಚನೆ ನೀಡಲಾಗಿದೆ.

ಇದನ್ನೂ ಓದಿ | ಮುರುಘಾಶ್ರೀ ಪ್ರಕರಣ | ಮತ್ತೆ 14 ದಿನ ನ್ಯಾಯಾಂಗ ಬಂಧನ ವಿಸ್ತರಣೆ; ನವೆಂಬರ್‌ 3ರವರೆಗೆ ಜೈಲೇ ಗತಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Pralhad Joshi: ರಾಜ್ಯದಲ್ಲಿ ಹತ್ಯೆ, ಆತ್ಮಹತ್ಯೆಗಳೇ ಅಧಿಕ, ಅಭಿವೃದ್ಧಿ ಸಮಾಧಿ: ಪ್ರಲ್ಹಾದ್‌ ಜೋಶಿ ಟೀಕೆ

Pralhad Joshi: ಸಿಎಂ‌ ಸಿದ್ದರಾಮಯ್ಯನವರು ಹೊಣೆಗೇಡಿತನದ ಹೇಳಿಕೆ‌‌ ನೀಡಿದ್ದರ ಪರಿಣಾಮ‌ ಈಗ ಇಂಥ ಕೃತ್ಯಗಳು ಮರುಕಳಿಸುತ್ತಿವೆ ಎಂದು ಹುಬ್ಬಳ್ಳಿ ಅಂಜಲಿ ಹತ್ಯೆ ಬಗ್ಗೆ ಸಚಿವ ಪ್ರಲ್ಹಾದ್ ಜೋಶಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

VISTARANEWS.COM


on

Pralhad Joshi
Koo

ಹುಬ್ಬಳ್ಳಿ: ರಾಜ್ಯದಲ್ಲಿ ಕಾಂಗ್ರೆಸ್ ಆಡಳಿತದಲ್ಲಿ ಹತ್ಯೆ, ಆತ್ಮಹತ್ಯೆ ಕೃತ್ಯಗಳೇ ಅಧಿಕವಾಗಿದ್ದು, ಅಭಿವೃದ್ಧಿ ಸಮಾಧಿಯಾಗಿದೆ. ರಾಜ್ಯದಲ್ಲಿ ಅಪರಾಧ ಪ್ರಕರಣಗಳು ತೀವ್ರವಾಗಿವೆ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಬರೋಬ್ಬರಿ 490 ಕೊಲೆಗಳಾಗಿವೆ. 600 ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ (Pralhad Joshi) ಆಕ್ರೋಶ ವ್ಯಕ್ತಪಡಿಸಿದರು.

ಬಿಹಾರ ಪ್ರಚಾರಕ್ಕೆ ತೆರಳಿದ್ದ ಸಚಿವರು ಭಾನುವಾರ ಹುಬ್ಬಳ್ಳಿಗೆ ಬರುತ್ತಲೇ ನೇರ ಅಂಜಲಿ ಮನೆಗೆ ತೆರಳಿ ಕುಟುಂಬಕ್ಕೆ ಸಾಂತ್ವನ ಹೇಳಿ, ಸರ್ಕಾರದ ವಿರುದ್ಧ ಹರಿ ಹಾಯ್ದರು. ಹುಬ್ಬಳ್ಳಿಯಲ್ಲಿ ನೇಹಾ ಹತ್ಯೆ ಬಳಿಕ ಈಗ ಮತ್ತೊಬ್ಬ ಯುವತಿ ಭೀಕರವಾಗಿ ಕೊಲೆಯಾಗಿದ್ದಾಳೆ. ಅಂಜಲಿ ಅಜ್ಜಿ ಮತ್ತು ‌ಸಹೋದರಿಯರು‌ ಹೇಳಿದ್ದನ್ನು ಕೇಳಿದ್ರೆ ಭಯ ಹುಟ್ಟುತ್ತದೆ. ಈ ಹಿಂದೆಯೆ ಆರೋಪಿ ಬಗ್ಗೆ ದೂರು ನೀಡಿದ್ದರೂ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದಾರೆ ಎಂಬುದು ಅವರ ಆರೋಪ. ಆ ಸಂದರ್ಭ ಯಾವ ಅಧಿಕಾರಿಗಳಿದ್ದರು‌? ಅವರ ಬಗ್ಗೆಯೂ‌ ತನಿಖೆಯಾಗಬೇಕು ಎಂದು ಸಚಿವ ಜೋಶಿ ಆಗ್ರಹಿಸಿದರು.

ಇದನ್ನೂ ಓದಿ | Ebrahim Raisi: ಪತನದ ಬಳಿಕ ಹೆಲಿಕಾಪ್ಟರ್‌ ನಾಪತ್ತೆ; ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಸಾವು?

ನೇಹಾ ಹತ್ಯೆಯಾದಾಗ ಬಹುದೊಡ್ಡ ಜನಾಂದೋಲನವೇ ಆಯಿತು. ಆ ವೇಳೆ ಸಿಎಂ ಸಿದ್ದರಾಮಯ್ಯ ಹಾಗೂ ಗೃಹ ಸಚಿವ ಪರಮೇಶ್ವರ ಅವರ ಹೇಳಿಕೆ‌ ಕೃತ್ಯ ನಡೆಸುವವರಿಗೆ‌ ಪ್ರೋತ್ಸಾಹ ನೀಡಿದಂತಾಗಿದೆ. ಸಿಎಂ‌ ಸಿದ್ದರಾಮಯ್ಯನವರು ಹೊಣೆಗೇಡಿತನದ ಹೇಳಿಕೆ‌‌ ನೀಡಿದ್ದರ ಪರಿಣಾಮ‌ ಈಗ ಇಂಥ ಕೃತ್ಯಗಳು ಮರುಕಳಿಸುತ್ತಿವೆ. ರಾಜ್ಯ ಸರ್ಕಾರಕ್ಕೆ ಗಂಭೀರತೆಯೆ ಇಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ರಾಜ್ಯದಲ್ಲಿ ನಡೆದ ಅಪರಾಧ ಕೃತ್ಯಗಳ ಬಗ್ಗೆ ಪ್ರಶ್ನೆ ಮಾಡಿದರೆ, ಬಿಜೆಪಿ ಸರ್ಕಾರದ ಅವಧಿಯಲ್ಲಿ ಎಷ್ಟು ಪ್ರಕರಣಗಳಾಗಿವೆ ಎಂಬುದನ್ನು ಹುಡುಕಲು ಅಧಿಕಾರಿಗಳನ್ನು ನೇಮಿಸುತ್ತಾರೆ ಎಂದು ಕಿಡಿಕಾರಿದರು.

ಅಧಿಕಾರಿಗಳ ವರ್ಗಾವಣೆ ದಂಧೆ

ರಾಜ್ಯದಲ್ಲಿ ಅಧಿಕಾರಿಗಳ ವರ್ಗಾವಣೆಗೆ ಸಿಕ್ಕಾಪಟ್ಟೆ ಹಣ ತೆಗೆದುಕೊಳ್ತಾರೆ. ಗಾಂಜಾ‌, ಅಫೀಮು‌ ಚಟುವಟಿಕೆಗಳಿಗೆ‌ ಕಡಿವಾಣ ಹಾಕಲು ಆಗ್ತಿಲ್ಲ. ಕಾನೂನು‌ ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದೆ. ಅಭಿವೃದ್ದಿಯು ಸಮಾಧಿಯಾಗಿದೆ ಎಂದು ಸಚಿವ ಜೋಶಿ ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

ಪಾಲಕರಲ್ಲಿ ಭಯ

ರಾಜ್ಯದಲ್ಲಿ ಕಡುಬಡ‌ವರು ಹೆಣ್ಣು ಮಕ್ಕಳನ್ನು ಕಾಲೇಜಿಗೆ ಶಾಲೆಗೆ ಕಳುಹಿಸಲು ಭಯಪಡುತ್ತಿದ್ದಾರೆ. ಜನರು ಬೀದಿಗಿಳಿಯುವ ಪರಿಸ್ಥಿತಿಯನ್ನ‌ ಸರ್ಕಾರ ತಂದುಕೊಳ್ಳಬಾರದು. ಕೊಲೆ, ಹತ್ಯೆ, ಆತ್ಮಹತ್ಯೆ ಪ್ರಕರಣಗಳಲ್ಲಿ ಸರ್ಕಾರ ಗಂಭೀರ ಕ್ರಮ ತೆಗೆದುಕೊಳ್ಳಬೇಕು. ಅದು ಬಿಟ್ಟು ಯಾರೋ ಒಬ್ಬ ಅಧಿಕಾರಿ‌ಯನ್ನು ಅಮಾನತ್ತು ಮಾಡಿ ಕೈ ತೊಳೆದುಕೊಳ್ಳಬಾರದು ಎಂದು ಹೇಳಿದರು.

ಅಂಜಲಿ ಭಾವಚಿತ್ರಕ್ಕೆ ಪುಷ್ಪ ನಮನ

ದುಷ್ಕರ್ಮಿಯಿಂದ ಹತ್ಯೆಗೀಡಾದ ಹುಬ್ಬಳ್ಳಿ ವೀರಾಪುರ ಓಣಿಯ ಅಂಜಲಿ ಅಂಬಿಗೇರ ಭಾವಚಿತ್ರಕ್ಕೆ ಸಚಿವರು ಪುಷ್ಪಾರ್ಚನೆ ಮಾಡಿ ನಮನ ಸಲ್ಲಿಸಿದರು.

ಇದನ್ನೂ ಓದಿ | R Ashok: ರಾಜ್ಯದಲ್ಲಿ ಮಳೆಗಿಂತ ಹೆಚ್ಚಾಗಿ ಕೊಲೆಗಳೇ ನಡೆಯುತ್ತಿವೆ: ಆರ್‌.ಅಶೋಕ್‌ ಕಿಡಿ

ಈ‌ ಸಂದರ್ಭದಲ್ಲಿ ಮಾಜಿ ಶಾಸಕರಾದ ಅಶೋಕ‌ ಕಾಟವೆ, ಅಂಬಿಗೇರ ಸಮಾಜದ ಮುಖಂಡರಾದ ಮಾರುತಿ ಕಬ್ಬೇರ, ಪಕ್ಷದ ಪ್ರಮುಖರಾದ ಶಿವು ಮೆಣಸಿನಕಾಯಿ, ಪ್ರಭು ನವಲಗುಂದಮಠ, ಚಂದ್ರಶೇಖರ ಗೋಕಾಕ, ಬಸವರಾಜ ಅಮ್ಮಿನಬಾವಿ, ಶಶಿ ಬಿಜುವಾಡ, ಅನೂಪ್ ಬಿಜುವಾಡ, ರಾಜು ಜರ್ತಾರಘರ್, ಶಿವಯ್ಯ ಹಿರೇಮಠ ಹಾಗೂ ಪ್ರಮುಖರು ಉಪಸ್ಥಿತರಿದ್ದರು.

Continue Reading

ದಕ್ಷಿಣ ಕನ್ನಡ

Mrs India Karnataka: ಮಿಸಸ್ ಕರ್ನಾಟಕ ಮಂಗಳೂರು ಗ್ರ್ಯಾಂಡ್ ಫಿನಾಲೆ; ಸಾಂಪ್ರದಾಯಿಕ, ಮಾಡರ್ನ್ ಉಡುಗೆಯಲ್ಲಿ ಮಿಂಚಿದ ನಾರಿಯರು

Mrs India Karnataka: ಮಂಗಳೂರಿನ ಕದ್ರಿ ಪಾರ್ಕ್‌ನಲ್ಲಿ ಭಾನುವಾರ ಮಿಸಸ್ ಕರ್ನಾಟಕ ಮಂಗಳೂರು ಕಾರ್ಯಕ್ರಮ ನೆರವೇರಿತು. ಸಾಂಪ್ರದಾಯಿಕ, ಮಾಡರ್ನ್ ಉಡುಗೆ ವಿಭಾಗಗಳಲ್ಲಿ ನಡೆದ ಫ್ಯಾಷನ್‌ ಶೋ ನೆರೆದಿದ್ದ ಜನರ ಕಣ್ಮನ ಸೆಳೆಯಿತು.

VISTARANEWS.COM


on

Mrs India Karnataka
Koo

ಮಂಗಳೂರು: ಮಹಿಳೆಯರಿಗೆ ಫ್ಯಾಷನ್ ಲೋಕದಲ್ಲಿ ಅವಕಾಶವನ್ನು ಕಲ್ಪಿಸುವ ನಿಟ್ಟಿನಲ್ಲಿ ಪ್ರತಿಭಾ ಸಂಶೀಮಠ ಅವರ ನೇತೃತ್ವದಲ್ಲಿ ವಿಸ್ತಾರ ನ್ಯೂಸ್ ಸಹಯೋಗದಲ್ಲಿ ಮಿಸಸ್ ಕರ್ನಾಟಕ ಮಂಗಳೂರು (Mrs India Karnataka) ಗ್ರ್ಯಾಂಡ್ ಫಿನಾಲೆ ಮಂಗಳೂರಿನ ಕದ್ರಿ ಪಾರ್ಕ್‌ನಲ್ಲಿ ಭಾನುವಾರ ನಡೆಯಿತು.

ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು ಜಿಲ್ಲೆಯ ಸುಮಾರು 26 ಮಹಿಳೆಯರು ಸ್ಪರ್ಧೆಯಲ್ಲಿ ಭಾಗವಹಿಸಿದ್ದರು. ನಾಲ್ಕು ವರ್ಷಗಳಿಂದ ಮಿಸಸ್ ಕರ್ನಾಟಕವನ್ನು ಆಯೋಜನೆ ಮಾಡುತ್ತಿದ್ದು, ಇದೀಗಾ 5ನೇ ವರ್ಷದ ಮಿಸಸ್ ಕರ್ನಾಟಕ ಆವೃತ್ತಿ ಮಂಗಳೂರಿನಲ್ಲಿ ನಡೆಯಿತು. ಸಾಂಪ್ರದಾಯಿಕ, ಮಾಡರ್ನ್ ಉಡುಗೆ ವಿಭಾಗಗಳಲ್ಲಿ ನಡೆದ ಈ ಗ್ರ್ಯಾಂಡ್ ಫಿನಾಲೆ ನೆರೆದಿದ್ದ ಜನರ ಕಣ್ಮನ ಸೆಳೆಯಿತು.

ಇದನ್ನೂ ಓದಿ | Sequins Partywear Fashion: ಪಾರ್ಟಿಪ್ರಿಯರಿಗೆ ಬಂತು ಮಿರಮಿರ ಮಿನುಗುವ ಸಿಕ್ವೀನ್ಸ್‌ ಔಟ್‌ಫಿಟ್ಸ್‌

Continue Reading

ಕರ್ನಾಟಕ

Tourist Boat Capsizes: ತದಡಿ ಬಳಿ ಮಗುಚಿದ ಪ್ರವಾಸಿಗರ ಬೋಟ್; 40 ಪ್ರವಾಸಿಗರ ರಕ್ಷಣೆ

Tourist Boat Capsizes: ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ತದಡಿ ಗ್ರಾಮದ ಬಳಿ ಸಮುದ್ರದ ಹಿನ್ನೀರಿನಲ್ಲಿ ಘಟನೆ ನಡೆದಿದೆ. ದೋಣಿ ಸಾಮರ್ಥ್ಯಕ್ಕಿಂತ ಹೆಚ್ಚಿನ ಜನರನ್ನು ಹತ್ತಿಸಿಕೊಂಡಿದ್ದರಿಂದ ಬೋಟ್ ಮಗುಚಿದೆ.

VISTARANEWS.COM


on

Tourist boat capsizes
Koo

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ತದಡಿ ಗ್ರಾಮದ ಸಮೀಪ ಸಮುದ್ರದ ಹಿನ್ನೀರಿನಲ್ಲಿ ಪ್ರವಾಸಿಗರ ಬೋಟ್ ಮಗುಚಿದ್ದು, 40 ಪ್ರವಾಸಿಗರನ್ನು ರಕ್ಷಣೆ ಮಾಡಲಾಗಿದೆ. ಅಳಿವೆ ಸಂಗಮ ಸ್ಥಳದಿಂದ ತುಸು ದೂರದಲ್ಲಿ ಘಟನೆ (Tourist Boat Capsizes) ನಡೆದಿದ್ದು, ಕರಾವಳಿ ಕಾವಲು ಪಡೆ ಮತ್ತು ಸ್ಥಳೀಯ ರಕ್ಷಣಾ ತಂಡದಿಂದ ಪ್ರವಾಸಿಗರನ್ನು ರಕ್ಷಣೆ ಮಾಡಲಾಗಿದೆ.

ಮೂಡಂಗಿಯ ಗಣೇಶ, ರಮೇಶ ಎಂಬುವವರ ಪ್ರವಾಸಿ ಬೋಟ್ ಮಗುಚಿದ್ದು, ದೋಣಿ ಸಾಮರ್ಥ್ಯಕ್ಕಿಂತ ಹೆಚ್ಚಿನ ಜನರನ್ನು ಹತ್ತಿಸಿಕೊಂಡಿದ್ದರಿಂದ ಬೋಟ್ ಮಗುಚಿದೆ. ಸಕಾಲಕ್ಕೆ ಕರಾವಳಿ ಕಾವಲು ಪಡೆ ಆಗಮಿಸಿ ರಕ್ಷಣೆ ಮಾಡಿದ್ದರಿಂದ ದೊಡ್ಡ ದುರಂತವೊಂದು ತಪ್ಪಿದೆ.

Drown in Lake: ಮೀನು ಹಿಡಿಯಲು ಕೆರೆಗೆ ಹೋಗಿದ್ದ ಇಬ್ಬರು ನೀರು ಪಾಲು

ಉಡುಪಿ: ಮೀನು ಹಿಡಿಯಲು ಹೋಗಿದ್ದ ಇಬ್ಬರು ನೀರು ಪಾಲಾಗಿರುವ ಘಟನೆ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಶಿರ್ಲಾಲುವಿನ ಉಬ್ಬರಬೈಲಿನಲ್ಲಿ ನಡೆದಿದೆ. ಮುಡ್ಡಾಯಿಗುಡ್ಡೆ ಹರೀಶ್ ಪೂಜಾರಿ (48), ಹೃತೇಶ್ ಪೂಜಾರಿ (18) ಮೃತಪಟ್ಟವರು.

ಮೀನು ಹಿಡಿಯಲೆಂದು ಉಬ್ಬರಬೈಲು ಕೆರೆಗೆ ಹೋಗಿದ್ದಾಗ ದುರ್ಘಟನೆ ನಡೆದಿದೆ. ಮೀನಿಗೆ ಬಲೆ‌ ಹಾಕುವಾಗ ಆಯತಪ್ಪಿ ಕೆರೆಗೆ ಬಿದ್ದು ಇಬ್ಬರೂ ನೀರುಪಾಲಾಗಿದ್ದಾರೆ. ಕಾರ್ಕಳ ಅಜೆಕಾರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ | Harish Poonja: ಪೊಲೀಸರಿಗೆ ಧಮ್ಕಿ; ಬಿಜೆಪಿ ಶಾಸಕ ಹರೀಶ್ ಪೂಂಜಾ ವಿರುದ್ಧ ಎಫ್‌ಐಆರ್

ಅನಾರೋಗ್ಯದಿಂದ ತಾಯಿ ಸಾವು, ಶವದ ಜತೆ 4 ದಿನ ಕಳೆದ ಬುದ್ಧಿಮಾಂದ್ಯ ಪುತ್ರಿಯೂ ಮೃತ್ಯು!

Kundapur News

ಉಡುಪಿ: ಒಂದೆಡೆ ಅನಾರೋಗ್ಯದಿಂದ ಬಳಲುತ್ತಿದ್ದ ತಾಯಿ ಮೃತಪಟ್ಟಿದ್ದರೆ, ಆ ಬಗ್ಗೆ ಅರಿವೇ ಇಲ್ಲದ ಬುದ್ಧಿಮಾಂದ್ಯ ಪುತ್ರಿಯೂ ಕೂಡ ತೀವ್ರ ಅಸ್ವಸ್ಥಗೊಂಡು ಕೊನೆಯುಸಿರೆಳೆದಿರುವ ಮನ ಕಲಕುವ ಘಟನೆ ಜಿಲ್ಲೆಯ ಕುಂದಾಪುರ (Kundapur News) ತಾಲೂಕಿನ ಮೂಡುಗೋಪಾಡಿಯ ದಾಸನಹಾಡಿಯಲ್ಲಿ ನಡೆದಿದೆ.

ತಾಯಿ ಜಯಂತಿ ಶೆಟ್ಟಿ (62), ಮಗಳು ಪ್ರಗತಿ ಶೆಟ್ಟಿ (32) ಮೃತರು. ಅನಾರೋಗ್ಯದಿಂದ ಬಳಲುತ್ತಿದ್ದ ಜಯಂತಿ ಶೆಟ್ಟಿ ಕಳೆದ ಮೂರ್ನಾಲ್ಕು ದಿನಗಳ ಹಿಂದೆ ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ. ತಾಯಿಯ ಶವದ ಜತೆಗೆ 4 ದಿನ ಕಳೆದಿದ್ದ ಬುದ್ಧಿಮಾಂದ್ಯ ಪುತ್ರಿ, ತೀವ್ರ ಅಸ್ವಸ್ಥಗೊಂಡಿದ್ದಳು.

ಮನೆಯಿಂದ ದುರ್ವಾಸನೆ ಬರುತ್ತಿದ್ದ ಹಿನ್ನೆಲೆಯಲ್ಲಿ ಸ್ಥಳೀಯರು ಪರಿಶೀಲಿಸಿದಾಗ ಮಹಿಳೆ ಮೃತಪಟ್ಟಿರುವ ವಿಷಯ ಬೆಳಕಿಗೆ ಬಂದಿದೆ. ಈ ವೇಳೆ ತೀವ್ರ ಅಸ್ವಸ್ಥಗೊಂಡಿದ್ದ ಮಗಳನ್ನು ರಕ್ಷಿಸಿದ್ದ ಕುಂದಾಪುರ ಪೊಲೀಸರು, ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ, ಚಿಕಿತ್ಸೆ ಫಲಿಸದೆ ಯುವತಿ ಮೃತಪಟ್ಟಿದ್ದಾಳೆ.

ಇದನ್ನೂ ಓದಿ | Viral News: ಬಾಯ್‌ಫ್ರೆಂಡ್‌ನ ಗುಪ್ತಾಂಗವನ್ನೇ ಕಟ್‌ ಮಾಡಿ ಕಸದ ಬುಟ್ಟಿಗೆ ಎಸೆದ ಮಹಿಳೆ

Continue Reading

ಕರ್ನಾಟಕ

Dangerous Bike Stunt: ಯುವತಿಯನ್ನು ತೊಡೆ ಮೇಲೆ ಕೂರಿಸಿಕೊಂಡು ಬೈಕ್‌ ಓಡಿಸಿದ ಯುವಕ ಅರೆಸ್ಟ್‌

Dangerous Bike Stunt: ಬೆಂಗಳೂರಿನಲ್ಲಿ ಅಪಾಯಕಾರಿ ಬೈಕ್‌ ರೈಡಿಂಗ್ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆದ ಹಿನ್ನೆಲೆಯಲ್ಲಿ ಯುವಕನನ್ನು ಪೊಲೀಸರು ಬಂಧಿಸಿ, ಬೈಕ್‌ ವಶಕ್ಕೆ ಪಡೆದಿದ್ದಾರೆ.

VISTARANEWS.COM


on

Dangerous Bike Stunt
Koo

ಬೆಂಗಳೂರು: ನಗರದಲ್ಲಿ ಯುವತಿಯನ್ನು ತೊಡೆ ಮೇಲೆ ಕೂರಿಸಿಕೊಂಡು ಬೈಕ್‌ ರೈಡ್ (Dangerous Bike Stunt) ಮಾಡಿದ್ದ ಯುವಕನನ್ನು ಹೆಬ್ಬಾಳ ಸಂಚಾರ ಪೊಲೀಸರು ಬಂಧಿಸಿದ್ದಾರೆ. ಅಪಾಯಕಾರಿ ಬೈಕ್‌ ರೈಡಿಂಗ್ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆದ ಹಿನ್ನೆಲೆಯಲ್ಲಿ ಯುವಕನನ್ನು ಪೊಲೀಸರು ಬಂಧಿಸಿ, ಬೈಕ್‌ ವಶಕ್ಕೆ ಪಡೆದಿದ್ದಾರೆ.

ಶಾಂಪುರ ನಿವಾಸಿ ಸಿಲಂಬರಸನ್ (21) ಬಂಧಿತ ಯುವಕ. ಯುವತಿಯನ್ನು ಯುವಕ ತೊಡೆ ಮೇಲೆ ಕೂರಿಸಿಕೊಂಡು ಬೈಕ್‌ ಚಾಲನೆ ಮಾಡಿದ್ದ ವಿಡಿಯೊ ವೈರಲ್‌ ಆಗಿತ್ತು. ಇದರಿಂದ ಬೈಕ್ ನಂಬರ್ ಪ್ಲೇಟ್ ಅಧರಿಸಿ ಸಿಲಂಬರಸನ್‌ನನ್ನು ಪೊಲೀಸರು ಬಂಧಿಸಿ, ಡಿಎಲ್ ರದ್ದು ಮಾಡಲು ಆರ್‌ಟಿಒಗೆ ಮನವಿ ಮಾಡಿದ್ದಾರೆ.

ಇದನ್ನೂ ಓದಿ | Bomb Threat: ಏರ್‌ಪೋರ್ಟ್‌ನಲ್ಲಿ ಬಾಂಬ್‌ ಇದೆ ಎಂದು ತಮಾಷೆ ಮಾಡಲು ಹೋಗಿ ಜೈಲು ಪಾಲಾದ

ಬೈಕ್​ನಲ್ಲಿ ಹೋಗುತ್ತಲೇ ರೊಮ್ಯಾನ್ಸ್!

yelahanka flyover

ಇತ್ತೀಚೆಗೆ ಜೋಡಿಗಳು ಬೈಕ್​ನಲ್ಲಿ ಹೋಗುತ್ತಲೇ ರೊಮ್ಯಾನ್ಸ್ (Romance in bike riding) ಮಾಡುವ ಪ್ರಕರಣಗಳು ಹೆಚ್ಚಾಗುತ್ತಿದೆ. ಹುಚ್ಚು ಸಾಹಸವೂ, ಪ್ರೇಮದ ಉನ್ಮಾದವೋ ಗೊತ್ತಿಲ್ಲ. ಇದು ಅಪಾಯಕಾರಿ ಎಂದು ಗೊತ್ತಿದ್ದರೂ ಪರಸ್ಪರ ಎದುರುಬದುರು ಕುಳಿತುಕೊಂಡು ಮುದ್ದಾಡಿಕೊಂಡು ಹೋಗುವುದು, ಯುವತಿಯನ್ನು ತೊಡೆ ಮೇಲೆ ಕೂರಿಸಿಕೊಂಡು ಡೆಡ್ಲಿ ರೈಡಿಂಗ್‌ ಮಾಡುವುದು ಹೆಚ್ಚುತ್ತಿದೆ. ಅದೇ ರೀತಿ ಬೆಂಗಳೂರಲ್ಲಿ (Yelahanka flyover) ಜೋಡಿಯೊಂದರ ಬೈಕ್ ರೈಡಿಂಗ್ (Bike Riding ವಿಡಿಯೊ ವೈರಲ್‌ ಆಗಿತ್ತು.

ಯುವತಿಯನ್ನು ತೊಡೆಯ ಮೇಲೆ ಕೂರಿಸಿಕೊಂಡು ಯುವಕ ಸಿಲಂಬರಸನ್ ಬೈಕ್‌ ರೈಡ್ ಮಾಡಿದ್ದ. ಬೆಂಗಳೂರಿನ ಏರ್‌ಪೋರ್ಟ್ ರಸ್ತೆಯ ಯಲಹಂಕ ಫ್ಲೈ‌ಓವರ್‌ನಲ್ಲಿ ಮೇ 17ರ ರಾತ್ರಿ‌ ಈ ಘಟನೆ ನಡೆದಿತ್ತು. ಯುವ ಜೋಡಿಗಳು ಹೆಲ್ಮೆಟ್ ಧರಿಸದೇ ಅಜಾಗರೂಕತೆಯಿಂದ ಬೈಕ್ ಚಾಲನೆ ಮಾಡಿದ್ದರು. ಜೋಡಿಗಳ ಜಾಲಿ‌ ರೈಡ್‌ನ ದೃಶ್ಯ ಕಾರಿನಲ್ಲಿ ಹೋಗುತ್ತಿದ್ದ ಪ್ರಯಾಣಿಕರು ತಮ್ಮ ಮೊಬೈಲ್ ಕ್ಯಾಮೆರಾದಲ್ಲಿ ಸೆರೆಹಿಡಿದಿದ್ದರು.

ಇದನ್ನೂ ಓದಿ: Viral Video: ಐಸ್ ಕ್ರೀಮ್‌ನಲ್ಲಿ ಚಿನ್ನದ ಉಂಗುರ ಅಡಗಿಸಿಕೊಟ್ಟ ಪ್ರಿಯತಮ! ಮುಂದೇನಾಯ್ತು?

ನಂತರ ಸೋಶಿಯಲ್‌ ಮೀಡಿಯಾದಲ್ಲಿ ಈ ವಿಡಿಯೊ ವೈರಲ್‌ ಆಗಿದೆ. ಸಾರ್ವಜನಿಕ ಸುರಕ್ಷತೆ ಅಪಾಯಗಳ ಬಗ್ಗೆ ವ್ಯಾಪಕ ಕಳವಳ ಹುಟ್ಟುಹಾಕಿತ್ತು. ಹೆಲ್ಮೆಟ್ ಧರಿಸದೆ ಇರುವುದು ಜತೆಗೆ ಯುವತಿ ಪೆಟ್ರೋಲ್‌ ಟ್ಯಾಂಕ್ ಮೇಲೆ ಕುಳಿತು ತನ್ನ ಸಂಗಾತಿಯನ್ನು ಅಪ್ಪಿಕೊಂಡಿರುವುದು ವಿಡಿಯೋದಲ್ಲಿ ಕಂಡು ಬಂದಿದೆ.

ಇದನ್ನೂ ಓದಿ: Murder Case : ಕಲ್ಲಿನಿಂದ ಜಜ್ಜಿ ಯುವಕನ ಬರ್ಬರ ಹತ್ಯೆ; ಕೆಆರ್‌ ಮಾರ್ಕೆಟ್‌ನಲ್ಲಿ ಶವ ಪತ್ತೆ

ಅಜಾಗರೂಕ ಮತ್ತು ಅನುಚಿತ ವರ್ತನೆಗಾಗಿ ದಂಡ ವಿಧಿಸಿ ಎಂದು ನೆಟ್ಟಿಗರು ಕಾಮೆಂಟ್‌ ಹಾಕಿದ್ದರು. ರಸ್ತೆ ಸುರಕ್ಷತೆಯ ಬಗ್ಗೆ ಮತ್ತು ಸಂಚಾರ ನಿಯಮಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವ ಅಗತ್ಯತೆಯ ಬಗ್ಗೆ ಚರ್ಚಿಸಿದ್ದರು. ಹೀಗಾಗಿ ಯಲಹಂಕ ಸಂಚಾರ ಪೊಲೀಸ್ ಠಾಣೆ ಪೊಲೀಸರು ಯುವಕನ ವಿರುದ್ಧ ಕ್ರಮ ಕೈಗೊಂಡಿದ್ದಾರೆ.

Continue Reading
Advertisement
Pralhad Joshi
ಕರ್ನಾಟಕ4 hours ago

Pralhad Joshi: ರಾಜ್ಯದಲ್ಲಿ ಹತ್ಯೆ, ಆತ್ಮಹತ್ಯೆಗಳೇ ಅಧಿಕ, ಅಭಿವೃದ್ಧಿ ಸಮಾಧಿ: ಪ್ರಲ್ಹಾದ್‌ ಜೋಶಿ ಟೀಕೆ

Ebrahim Raisi
ವಿದೇಶ4 hours ago

Ebrahim Raisi: ಪತನದ ಬಳಿಕ ಹೆಲಿಕಾಪ್ಟರ್‌ ನಾಪತ್ತೆ; ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಸಾವು?

Mrs India Karnataka
ದಕ್ಷಿಣ ಕನ್ನಡ4 hours ago

Mrs India Karnataka: ಮಿಸಸ್ ಕರ್ನಾಟಕ ಮಂಗಳೂರು ಗ್ರ್ಯಾಂಡ್ ಫಿನಾಲೆ; ಸಾಂಪ್ರದಾಯಿಕ, ಮಾಡರ್ನ್ ಉಡುಗೆಯಲ್ಲಿ ಮಿಂಚಿದ ನಾರಿಯರು

IPL 2024 Eliminato
ಕ್ರೀಡೆ4 hours ago

IPL 2024 Eliminator: ಎಲಿಮಿನೇಟರ್​ ಪಂದ್ಯಕ್ಕೂ ಮುನ್ನ ಆರ್​ಸಿಬಿಗೆ ಆಘಾತ; ಇಬ್ಬರು ಸ್ಟಾರ್​ ಆಟಗಾರರು ಅಲಭ್ಯ!

Tourist boat capsizes
ಕರ್ನಾಟಕ5 hours ago

Tourist Boat Capsizes: ತದಡಿ ಬಳಿ ಮಗುಚಿದ ಪ್ರವಾಸಿಗರ ಬೋಟ್; 40 ಪ್ರವಾಸಿಗರ ರಕ್ಷಣೆ

RR vs KKR
ಕ್ರೀಡೆ5 hours ago

RR vs KKR: ಮಳೆಯಿಂದ​ ಪಂದ್ಯ ರದ್ದು; ಎಲಿಮಿನೇಟರ್‌ ಪಂದ್ಯದಲ್ಲಿ​ ಆರ್​ಸಿಬಿಗೆ ರಾಜಸ್ಥಾನ್​ ಎದುರಾಳಿ

Parliament Security
ದೇಶ5 hours ago

Parliament Security: ನಾಳೆಯಿಂದ ಸಂಸತ್‌ಗೆ ಸಿಆರ್‌ಪಿಎಫ್‌ ಬದಲು ಸಿಐಎಸ್‌ಎಫ್‌ ಭದ್ರತೆ; ಏಕಿಂಥ ನಿರ್ಧಾರ?

Dangerous Bike Stunt
ಕರ್ನಾಟಕ5 hours ago

Dangerous Bike Stunt: ಯುವತಿಯನ್ನು ತೊಡೆ ಮೇಲೆ ಕೂರಿಸಿಕೊಂಡು ಬೈಕ್‌ ಓಡಿಸಿದ ಯುವಕ ಅರೆಸ್ಟ್‌

Narendra Modi
ದೇಶ6 hours ago

Narendra Modi: ಮುಸ್ಲಿಮರ ವೋಟಿಗಾಗಿ ಮಮತಾ ಬ್ಯಾನರ್ಜಿ ಹಿಂದು ಸಂಘಟನೆಗಳ ವಿರುದ್ಧ ಆರೋಪ; ಮೋದಿ ಟೀಕೆ

SRH vs PBKS
ಕ್ರೀಡೆ6 hours ago

SRH vs PBKS: ಆರ್​ಸಿಬಿಯ ಸಿಕ್ಸರ್​ ದಾಖಲೆ ಮುರಿದ ಹೈದರಾಬಾದ್​

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ12 hours ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ13 hours ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ14 hours ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

Prajwal Revanna Case JDS calls CD Shivakumar pen drive gang
ರಾಜಕೀಯ2 days ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

Karnataka weather Forecast
ಮಳೆ3 days ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

Dina Bhavishya
ಭವಿಷ್ಯ3 days ago

Dina Bhavishya : ಈ ರಾಶಿಯ ಪ್ರೇಮಿಗಳಿಗೆ ಮನೆಯಿಂದ ಸಿಗುತ್ತೆ ಗ್ರೀನ್‌ ಸಿಗ್ನಲ್‌

Karnataka Weather Forecast
ಮಳೆ3 days ago

Karnataka Weather : ಭಾರಿ ಮಳೆಗೆ ಕೊಟ್ಟೂರು ಬಸ್ ಸ್ಟ್ಯಾಂಡ್‌ ಜಲಾವೃತ; ‌ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

Drowned in water
ಹಾಸನ4 days ago

Drowned in water : ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರುಪಾಲು; ಓರ್ವ ಬಾಲಕ ಪಾರು

Suspicious Case
ಬೆಂಗಳೂರು4 days ago

Suspicious Case : ಬಾತ್‌ ರೂಂನಲ್ಲಿತ್ತು ಕಾಲೇಜು ಹುಡುಗಿ ಡೆಡ್‌ ಬಾಡಿ; ಕುತ್ತಿಗೆ ಕೊಯ್ದು ಸಾಯಿಸಿದವರು ಯಾರು?

Prajwal Revanna Case
ಕರ್ನಾಟಕ5 days ago

Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

ಟ್ರೆಂಡಿಂಗ್‌