Boy electricuted | ಮನೆಯ ಹೊರಗೆ ಹೋದ 7 ವರ್ಷದ ಬಾಲಕನಿಗೆ ವಿದ್ಯುತ್‌ ಸ್ಪರ್ಶ: ಸ್ಥಳದಲ್ಲೇ ಮೃತ್ಯು - Vistara News

ಕರ್ನಾಟಕ

Boy electricuted | ಮನೆಯ ಹೊರಗೆ ಹೋದ 7 ವರ್ಷದ ಬಾಲಕನಿಗೆ ವಿದ್ಯುತ್‌ ಸ್ಪರ್ಶ: ಸ್ಥಳದಲ್ಲೇ ಮೃತ್ಯು

ಮನೆಯ ಹೊರಗಡೆ ಹೋದ ಬಾಲಕನೊಬ್ಬ ವಿದ್ಯುತ್‌ ತಂತಿ ತಗುಲಿ ಮೃತಪಟ್ಟಿದ್ದಾನೆ. ಇದರ ವಿರುದ್ಧ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

VISTARANEWS.COM


on

Hescom boy death
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಳಗಾವಿ: ಹೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯದ ಕೆಲಸದಿಂದಾಗಿ ಏಳು ವರ್ಷದ ಪುಟ್ಟ ಬಾಲಕನೊಬ್ಬ ಪ್ರಾಣ ಕಳೆದುಕೊಂಡಿದ್ದಾರೆ. ಬೆಳಗಾವಿ ಜಿಲ್ಲೆ ಖಾನಾಪುರ ತಾಲೂಕಿನ ಕಾಮಸಿನಕೊಪ್ಪ ಗ್ರಾಮದಲ್ಲಿ ನಡೆದ ಘಟನೆಯಲ್ಲಿ ಮೃತಪಟ್ಟ ಬಾಲಕನ ಹೆಸರು ಬಸಪ್ಪ ಕೊಲಕಾರ್.

ಏನಾಗಿದೆ?
ಬುಧವಾರ ಬೆಳಗ್ಗೆ ಈ ಬಾಲಕ ಮನೆಯ ಹೊರಗಡೆ ಶೌಚಕ್ಕೆ ಹೋದ ಸಂದರ್ಭದಲ್ಲಿ ಅವಘಡ ಸಂಭವಿಸಿದೆ. ವಿದ್ಯುತ್‌ ಕಂಬದ ಬದಲು ಮರಕ್ಕೆ ತಂತಿ ಎಳೆದು ವಿದ್ಯುತ್‌ ಸಂಪರ್ಕ ನೀಡಲಾಗಿತ್ತು. ಬಾಲಕ ಈ ವಿದ್ಯುತ್‌ ತಂತಿಯನ್ನು ಸ್ಪರ್ಶಿಸಿದ್ದರಿಂದ ಮೃತ್ಯು ಸಂಭವಿಸಿದೆ ಎಂದು ತಿಳಿದುಬಂದಿದೆ.

ಮನೆಗೆ ಸಂಪರ್ಕ ನೀಡಿದ ವಿದ್ಯುತ್‌ ತಂತಿ ಎಷ್ಟು ಕೆಳಮಟ್ಟದಲ್ಲಿತ್ತು ಎನ್ನುವುದನ್ನು ಗಮನಿಸಿ..

ಮಗುವನ್ನು ಕಳೆದುಕೊಂಡ ಹೆತ್ತವರ ಕಣ್ಣೀರು, ಗ್ರಾಮಸ್ಥರು ಅಧಿಕಾರಿಗಳ ವಿರುದ್ಧ ಕೆರಳಿ ನಿಂತಿದ್ದಾರೆ. ಇಲ್ಲಿ ವಿದ್ಯುತ್‌ ಸಂಪರ್ಕ ನೀಡುವಾಗ ಸರಿಯಾದ ಕ್ರಮಗಳನ್ನು ಅನುಸರಿಸದೆ ಜೀವ ಬಲಿ ಪಡೆಯಲಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ತಾಲೂಕಿನಲ್ಲಿ ಒಂದೇ ತಿಂಗಳಲ್ಲಿ ಮೂವರು ಪ್ರಾಣ ಕಳೆದುಕೊಂಡಿದ್ದಾರೆ ಎಂದು ಗ್ರಾಮಸ್ಥರು ಹೇಳಿದ್ದಾರೆ. ಖಾನಾಪುರ ಪೋಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ಪ್ರಕರಣ ದಾಖಲಾಗಿದೆ.

ವಿದ್ಯುತ್ ತಂತಿ ತಗುಲಿ ಎತ್ತು ಸಾವು
ಬೀದರ್‌ ಜಿಲ್ಲೆಯ ಶ್ರೀಮಂಡಲ್‌ ಗ್ರಾಮದಲ್ಲಿ ವಿದ್ಯುತ್ ತಂತಿ ಸ್ಪರ್ಶದಿಂದ ಎತ್ತೊಂದು ಪ್ರಾಣ ಕಳೆದುಕೊಂಡಿದೆ. ಅದರ ಜತೆಗಿದ್ದ ವ್ಯಕ್ತಿಗೆ ವಿದ್ಯುತ್‌ ತಗುಲಿದರೂ ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ರಾಮು ಡೋಣೆ ಎಂಬಾತನಿಗೆ ಕೈ ಕಾಲಿಗೆ ಸಣ್ಣ ಪುಟ್ಟ ಗಾಯಗಳಾಗಿವೆ.

ಜಮಿನಿನಲ್ಲಿ ಕೈ ನಿಲುಕುವಷ್ಟು ಎತ್ತರದಲ್ಲಿ ವಿದ್ಯುತ್ ತಂತಿಗಳು ನೇತಾಡುತ್ತಿರುವ ಬಗ್ಗೆ ಹಿಂದಿನಿಂದಲೇ ದೂರುಗಳಿವೆ. ಈಗ ಸಾವೂ ಸಂಭವಿಸಿರುವುದರಿಂದ ಅಧಿಕಾರಿಗಳ ವಿರುದ್ಧ ಗ್ರಾಮಸ್ಥರ ಆಕ್ರೋಶ ಜೋರಾಗಿದೆ. ಇಷ್ಟಾದರೂ ಘಟನಾ ಸ್ಥಳಕ್ಕೆ ಅಧಿಕಾರಿಗಳು ಬಾರದೆ ಇರುವುದು ಇನ್ನಷ್ಟು ಸಿಟ್ಟು ಹೆಚ್ಚಿಸಿದೆ.

ಇದನ್ನೂ ಓದಿ | Electric shock | ನಾಮಫಲಕ ಅಳವಡಿಸುವಾಗ ವಿದ್ಯುತ್‌ ಸ್ಪರ್ಶ: ಇಬ್ಬರು ಛಾಯಾಗ್ರಾಹಕರ ದುರ್ಮರಣ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Prajwal Revanna case : ಪ್ರಜ್ವಲ್​ನ ಪುರುಷತ್ವ ಸಾಮರ್ಥ್ಯ ಪರೀಕ್ಷೆ ನಡೆಸಲು ಕೋರ್ಟ್​ ಸಮ್ಮತಿ

Prajwal Revanna case : ಜ್ವಲ್ ಅವರ ಎಸ್​ಐಟಿ ಕಸ್ಟಡಿ ಅವಧಿ ಶುಕ್ರವಾರಕ್ಕೆ ಮುಕ್ತಾಯಗೊಳ್ಳಲಿದೆ. ಹೀಗಾಗಿ ಒಂದು ದಿನ ಮುಂಚಿತವಾಗಿ ಅಧಿಕಾರಿಗಳು ಪರಿಕ್ಷೆ ನಡೆಸಿದ್ದಾರೆ. ಇದೇ ವೇಳೆ ಹಾಸನ ಹಾಗು ಬಸವನಗುಡಿಯ ಮನೆಗೆ ಕರೆದೊಯ್ದು ಸ್ಪಾಟ್ ಮಹಜರ್ ನಡೆಸಲು ಅಧಿಕಾರಿಗಳು ಮುಂದಾಗಿದ್ದಾರೆ.

VISTARANEWS.COM


on

Prajwal Revanna
Koo

ಬೆಂಗಳೂರು: ಹಾಸನದ ಮಾಜಿ ಸಂಸದ ಪ್ರಜ್ವಲ್​ ರೇವಣ್ಣ (Prajwal Revanna case ) ಅತ್ಯಾಚಾರ ಮಾಡಲು ಸಮರ್ಥರೇ ಅಥವಾ ಇಲ್ಲವೇ ಎಂಬುದನ್ನು ತನಿಖೆಯಲ್ಲಿ ಪತ್ತೆ ಹಚ್ಚಲು ಪ್ರಮುಖ ವೈದ್ಯಕೀಯ ವಿಧಾನವಾಗಿರುವ ಪುರುಷತ್ವ ಪರೀಕ್ಷೆಗೆ ಕೋರ್ಟ್​ ಒಪ್ಪಿಗೆ ನೀಡಿದೆ. ಹೀಗಾಗಿ ಎಸ್​ಐಟಿ ಅಧಿಕಾರಿಗಳು ಅವರನ್ನು ಬೌರಿಂಗ್ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪುರುಷತ್ವ ಪರೀಕ್ಷೆ ನಡೆಸುತ್ತಿದ್ದಾರೆ.

ಸಾವಿರಾರು ಹೆಣ್ಣು ಮಕ್ಕಳನ್ನು ವಯಸ್ಸಿನ ಭೇದವಿಲ್ಲದೇ ಅತ್ಯಾಚಾರ ಮಾಡಿರುವುದಲ್ಲದೇ ದೌರ್ಜನ್ಯ ಎಸಗಿರುವ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ ಅವರನ್ನು ಎಸ್​ಐಟಿ ಪೊಲೀಸರು ಮೇ 31ರಂದು ರಾತ್ರಿ ಬಂಧಿಸಿದ್ದರು. ಆದರೆ ಚುನಾವಣಾ ಫಲಿತಾಂಶ ಬರುವ ತನಕ ಕಾದಿದ್ದ ಅಧಿಕಾರಿಗಳು ಕೋರ್ಟ್ ಅನುಮತಿ ಪಡೆದು ಪುರುಷತ್ವ ಪರೀಕ್ಷೆ ನಡೆಸುತ್ತಿದ್ದಾರೆ.

ಪೊಲೀಸರ ವಶದಲ್ಲಿದ್ದ ಪ್ರಜ್ವಲ್ ರೇವಣ್ಣ ತಾನು ಸಂಸದ ಎಂಬ ಅಹಂನಲ್ಲಿ ತನಿಖೆಗೆ ಅಸಹಾಕಾರ ನೀಡುತ್ತಿದ್ದ. ಹೀಗಾಗಿ ತನಿಖೆಯಲ್ಲಿ ಹೆಚ್ಚಿನ ಪ್ರಗತಿ ನಡೆಯುತ್ತಿರಲಿಲ್ಲ. ಮಂಗಳವಾರ ಲೋಕ ಸಭಾ ಚುನಾವಣೆಯ ಫಲಿತಾಂಶ ಪ್ರಕಟಗೊಂಡಿದ್ದು ಪ್ರಜ್ವಲ್​ಗೆ ಹಾಸನದ ಜನರು ತಕ್ಕ ಶಿಕ್ಷೆ ಕೊಟ್ಟಿದ್ದಾರೆ. ಅದೇ ರೀತಿ ಪ್ರಜ್ವಲ್ ಅವರ ಎಸ್​ಐಟಿ ಕಸ್ಟಡಿ ಅವಧಿ ಶುಕ್ರವಾರಕ್ಕೆ ಮುಕ್ತಾಯಗೊಳ್ಳಲಿದೆ. ಹೀಗಾಗಿ ಒಂದು ದಿನ ಮುಂಚಿತವಾಗಿ ಅಧಿಕಾರಿಗಳು ಪರಿಕ್ಷೆ ನಡೆಸಿದ್ದಾರೆ. ಇದೇ ವೇಳೆ ಹಾಸನ ಹಾಗು ಬಸವನಗುಡಿಯ ಮನೆಗೆ ಕರೆದೊಯ್ದು ಸ್ಪಾಟ್ ಮಹಜರ್ ನಡೆಸಲು ಅಧಿಕಾರಿಗಳು ಮುಂದಾಗಿದ್ದಾರೆ.

ಇದನ್ನೂ ಓದಿ: Valmiki Corporation Scam : ವಾಲ್ಮಿಕಿ ನಿಗಮ ಹಗರಣ; ಆಂಧ್ರದ ಫಸ್ಟ್​​ ಬ್ಯಾಂಕ್ ಅಧ್ಯಕ್ಷ . ಸಚಿವ ನಾಗೇಂದ್ರ ಆಪ್ತರ ಬಂಧನ

ಹಾಗಿದ್ರೆ ಹೇಗೆ ನಡೆಯುತ್ತೆ ಪುರುಷತ್ವ ಪರೀಕ್ಷೆ?

ಇದು ಲೈಂಗಿಕ ಸಾಮರ್ಥ್ಯ ಸಾಬೀತು ಪಡಿಸುವ ಪರೀಕ್ಷೆ. ಲೈಂಗಿಕ ಕಿರುಕುಳ, ಅತ್ಯಾಚಾರ ಮುಂತಾದ ದೂರುಗಳು ಕೇಳಿ ಬಂದಾಗ ಆರೋಪಿ ಪುರುಷತ್ವ ಪರೀಕ್ಷೆ ನಡೆಸಲಾಗುತ್ತೆ. ಪ್ರಾಥಮಿಕ ಹಂತದಲ್ಲಿ ಮೂರು ರೀತಿ ಪರೀಕ್ಷೆ ನಡೆಸಲಾಗುತ್ತದೆ.

1) ಪುರುಷರ ಜನನಾಂಗ ನಿಮಿರುವಿಕೆ, ವೀರ್ಯ ವಿಶ್ಲೇಷಣೆ, ಶಿಶ್ನಕ್ಕೆ ಪೂರೈಕೆಯಾಗುವ ರಕ್ತನಾಳಗಳ ಪರೀಕ್ಷೆಯನ್ನು ಮುಖ್ಯವಾಗಿ ನಡೆಸಲಾಗುತ್ತದೆ. ಆಂಡ್ರೋಲಜಿಸ್ಟ್ ಸೇರಿದಂತೆ ನಾಲ್ವರು ತಜ್ಞ ವೈದ್ಯರ ತಂಡ ಈ ಪರೀಕ್ಷೆ ನಡೆಸುತ್ತಾರೆ.

2) ನಂತರ ವೀರ್ಯ ವಿಶ್ಲೇಷಣೆ (A Semen Analysis) ನಡೆಯುತ್ತದೆ. ಪುರುಷನ ವೀರ್ಯ ಮತ್ತು ವೀರ್ಯಾಣುಗಳ ಗುಣಲಕ್ಷಣಗಳ ಮೌಲ್ಯಮಾಪನ ನಡೆಸುವ ಪರೀಕ್ಷೆ ಇದು.

3) ಡಾಪ್ಲರ್ ಅಲ್ಟ್ರಾಸೌಂಡ್ ಪರೀಕ್ಷೆ (Penile Doppler Ultrasound) ನಡೆಯಲಿದೆ. ಆರೋಪಿಯ ಖಾಸಗಿ ಅಂಗಕ್ಕೆ ಸರಿಯಾಗಿ ರಕ್ತ ಪೂರೈಕೆಯಾಗುತ್ತಿದೆಯೆ? ಕ್ತದ ಪ್ರಮಾಣ ಎಷ್ಟಿದೆ? ಎಂಬುದು ತಿಳಿಯುವ ಟೆಸ್ಟ್. ವಯಾಗ್ರಾದಂಥ ಮೆಡಿಸಿನ್ ಸೇವಿಸಿದರೂ ಕೂಡ ಈ ಪರೀಕ್ಷೆಯಲ್ಲಿ ಗೊತ್ತಾಗುತ್ತೆ.

4) Nocturnal Penile Tumescence (NPT) Test. ಆಸ್ಪತ್ರೆಯ ನಿದ್ರಾ ಪ್ರಯೋಗಶಾಲೆಯಲ್ಲಿ ನಡೆಯುವ ಪರೀಕ್ಷೆ ಇದು. ಆರೋಪಿಯ ಖಾಸಗಿ ಅಂಗ ರಾತ್ರಿ ನಿದ್ರೆಯಲ್ಲಿ ಯಾವ ರೀತಿ ಪ್ರತಿಕ್ರಿಯಿಸುತ್ತೆ ಎಂದು ಎನ್‌ಪಿಟಿ ಪರೀಕ್ಷೆಯಲ್ಲಿ ಪರಿಶೀಲನೆ ನಡೆಸಲಾಗುತ್ತದೆ. ಈ ಪರೀಕ್ಷೆ ಸಾಮಾನ್ಯವಾಗಿ ಆಸ್ಪತ್ರೆಯ ನಿದ್ರಾ ಪ್ರಯೋಗಶಾಲೆಯಲ್ಲಿ ನಡೆಯುತ್ತದೆ. ಆರೋಪಿಯ ಅರಿವಿಗೆ ಬಾರದಂತೆ ನಡೆಯುವ ಪರೀಕ್ಷೆ ಇದು. ಈ ಮೂರು ಟೆಸ್ಟ್ ಮೂಲಕ ಆರೋಪಿಯ ಪುರುಷತ್ವ ಪರೀಕ್ಷೆ ನಡೆಯುತ್ತವೆ. ಈ ಟೆಸ್ಟ್‌ನ ರಿಪೋರ್ಟ್‌ಗಳು ಅತ್ಯಾಚಾರ ಪ್ರಕರಣದಲ್ಲಿ ಬಹಳ ಮುಖ್ಯವಾಗುತ್ತವೆ.

Continue Reading

ಪ್ರಮುಖ ಸುದ್ದಿ

Election results 2024: ಎನ್‌ಡಿಎ ಸರಕಾರದಲ್ಲಿ ರಾಜ್ಯದಿಂದ 4 ಮಂದಿಗೆ ಸಚಿವ ಸ್ಥಾನ ಫಿಕ್ಸ್?‌

Election results 2024: ಇಂದು ಸಂಜೆ ನಾಲ್ಕು ಗಂಟೆಗೆ ಎನ್‌ಡಿಎ ಮೈತ್ರಿಕೂಟದ ಸಭೆ ನಡೆಯಲಿದ್ದು, ಎನ್‌ಡಿಎ ಸರ್ಕಾರ ರಚನೆ ಕುರಿತು ಮಿತ್ರ ಪಕ್ಷಗಳ ಜೊತೆಗೆ ಪ್ರಧಾನಿ ನರೇಂದ್ರ ಮೋದಿ ಸಭೆ ಕರೆದಿದ್ದಾರೆ. ಇಲ್ಲಿ ಸರ್ಕಾರ ರಚನೆಗೆ ಪಕ್ಷಗಳು ತಮ್ಮ ಬೆಂಬಲದ ಪತ್ರ ನೀಡಲಿದ್ದು, ಇದಾದ ಬಳಿಕ ಸರ್ಕಾರ ರಚನೆಗೆ ಅವಕಾಶ ಕೋರಿ ರಾಷ್ಟ್ರಪತಿಗಳನ್ನು ಎನ್‌ಡಿಎ ಭೇಟಿಯಾಗಲಿದೆ.

VISTARANEWS.COM


on

election results 2024 joshi hdk cnm bommai
Koo

ಬೆಂಗಳೂರು: ಲೋಕಸಭೆ ಚುನಾವಣೆ (Lok Sabha Election 2024) ಫಲಿತಾಂಶದ (Election results 2024) ಬಳಿಕ ಎನ್‌ಡಿಎ (NDA) ಒಕ್ಕೂಟ ಸರಕಾರ ರಚನೆಯ ಹಾದಿಯಲ್ಲಿದೆ. ಈ ಸಂದರ್ಭದಲ್ಲಿ ರಾಜ್ಯದಿಂದ ಆರಿಸಿ ಬಂದಿರುವ ಸಂಸದರಲ್ಲಿ ನಾಲ್ವರಿಗೆ ಸಚಿವ ಸ್ಥಾನ ಫಿಕ್ಸ್‌ ಎಂಬ ಮಾತುಗಳು ಕೇಳಿಬರುತ್ತಿವೆ. ರಾಜ್ಯದಲ್ಲಿ ಬ್ರಾಹ್ಮಣ, ಲಿಂಗಾಯತ, ಒಕ್ಕಲಿಗ, ದಲಿತ ಸಮುದಾಯಗಳಿಗೆ ಪ್ರಾತಿನಿಧ್ಯ ನೀಡಲು ಎನ್‌ಡಿಎ ಬಯಸಿದೆ ಎನ್ನಲಾಗಿದೆ.

ಪ್ರಹ್ಲಾದ ಜೋಶಿ (Prahlad Joshi) ಅವರು ಎನ್‌ಡಿಎ ಮೂರನೆಯ ಅವಧಿಯಲ್ಲೂ ಸಚಿವರಾಗುವುದು ಬಹುತೇಕ ಖಚಿತವಾಗಿದೆ. ಹಿಂದಿ ಹಾಗೂ ಇಂಗ್ಲಿಷ್‌ನಲ್ಲಿ ನಿರರ್ಗಳತೆ ಹೊಂದಿರುವ ಪ್ರಹ್ಲಾದ್‌ ಜೋಶಿ, ಉತ್ತರ ಕರ್ನಾಟಕ ಭಾಗದಲ್ಲಿ ಹೆಚ್ಚಿನ ಪ್ರಭಾವ ಹೊಂದಿದ್ದಾರೆ. ನಾಲ್ಕನೇ ಬಾರಿಗೆ ಹುಬ್ಬಳ್ಳಿ- ಧಾರವಾಡದ ಸಂಸದರಾಗಿ ಆಯ್ಕೆಯಾಗಿರುವ ಜೋಶಿ, ಬ್ರಾಹ್ಮಣ ಕೋಟಾವನ್ನು ತುಂಬಲಿದ್ದಾರೆ.

ಮಾಜಿ ಸಿಎಂ ಬಸವರಾಜ ಬೊಮ್ಮಾಯಿ (Basavaraja Bommai) ಅವರಿಗೂ ಸಚಿವ ಸ್ಥಾನ ಬಹುತೇಕ ಖಚಿತವಾಗಿದೆ. ಮಾಜಿ ಸಿಎಂ ಆಗಿ ಅನುಭವ, ಇಂಗ್ಲಿಷ್ ಹಾಗೂ ಹಿಂದಿ ಭಾಷೆಯಲ್ಲಿ ಮಾತುಗಾರಿಕೆ, ಆರ್ಥಿಕತೆಯ ವಿಚಾರಗಳಲ್ಲಿ ವಿಶೇಷ ಜ್ಞಾನ ಹೊಂದಿರುವಿಕೆಯ ಜೊತೆಗೆ ಲಿಂಗಾಯತ ಕೋಟಾ ಕೂಡ ಬೊಮ್ಮಾಯಿ ಅವರಿಗೆ ನೆರವಾಗಲಿದೆ.

ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಗೆದ್ದ ʼಹೃದಯವಂತʼ ಡಾಕ್ಟರ್ ಸಿ.ಎನ್‌ ಮಂಜುನಾಥ್‌ (Dr CN Manjunath) ಅವರೂ ಸಚಿವ ಸ್ಥಾನ ಪಡೆಯಬಲ್ಲವರ ಯಾದಿಯಲ್ಲಿ ಇದ್ದಾರೆ ಎನ್ನಲಾಗಿದೆ. ಮಂಜುನಾಥ್‌ ಅವರ ಹಿರಿತನ, ಆರೋಗ್ಯ ಕ್ಷೇತ್ರದ ಅನುಭವ ಸರಕಾರದಲ್ಲಿ ನೆರವಾಗಲಿದೆ ಎಂಬ ಮುಂದಾಲೋಚನೆ. ಜೊತೆಗೆ, ಹಲವು ಬಾರಿಯ ಸಂಸದರಾಗಿರುವ, ಕಾಂಗ್ರೆಸ್‌ನ ಹೆಬ್ಬಂಡೆ ಡಿ.ಕೆ ಸುರೇಶ್‌ (DK Suresh) ಅವರನ್ನು ದೊಡ್ಡ ಅಂತರದಲ್ಲಿ ಸೋಲಿಸಿ ಮಣ್ಣು ಮುಕ್ಕಿಸಿ ಕಾಂಗ್ರೆಸ್‌ಗೆ ದೊಡ್ಡ ಹೊಡೆತ ನೀಡಿದ ಹೆಗ್ಗಳಿಕೆ ಜೊತೆಗಿದೆ.

ಮಾಜಿ ಸಿಎಂ, ಜೆಡಿಎಸ್‌ ಮುಖಂಡ ಎಚ್.ಡಿ ಕುಮಾರಸ್ವಾಮಿ (HD Kumaraswamy) ಅವರಿಗೆ ಮೈತ್ರಿ ಖೋಟಾದಲ್ಲಿ ಸಚಿವ ಸ್ಥಾನ ಫಿಕ್ಸ್ ಆಗಿದೆ ಎನ್ನಲಾಗಿದೆ. ಜೆಡಿಎಸ್‌ ಎರಡು ಸ್ಥಾನಗಳ ಬೆಂಬಲ ಈಗ ಎನ್‌ಡಿಎಗೆ ಮಹತ್ವದ್ದಾಗಿದೆ. ಮಾಜಿ ಪ್ರಧಾನಿ ದೇವೇಗೌಡರ ಹಾಗೂ ಜೆಡಿಎಸ್‌ ಮೈತ್ರಿಯನ್ನು ಬೆಂಬಲಿಸುವುದು ಎನ್‌ಡಿಗೆ ಮೈತ್ರಿ ಧರ್ಮವಾಗಿದೆ ಎನ್ನಲಾಗಿದೆ. ಜೊತೆಗೆ ಒಕ್ಕಲಿಗ ಕೋಟಾ ಕೂಡ ತುಂಬಲಿದೆ.

ಈ ಬಾರಿ ಎನ್‌ಡಿಎ ಸರ್ಕಾರದಲ್ಲಿ ಮೈತ್ರಿ ಪಕ್ಷಗಳಿಗೂ ಸಚಿವ ಸ್ಥಾನ ಕೊಡಬೇಕಿರುವುದರಿಂದ ರಾಜ್ಯದಿಂದ ಮೂವರಿಗೆ ಮಾತ್ರ ಬಿಜೆಪಿಯಲ್ಲಿ ಅವಕಾಶ ಸಿಗುವ ಸಾಧ್ಯತೆ ಇದೆ. ಎಚ್‌ಡಿಕೆ ಅವರನ್ನೂ ಸೇರಿಸಿದರೆ ನಾಲ್ಕಾಗುತ್ತದೆ. ಕೊನೆಯ ಗಳಿಗೆಯಲ್ಲಿ ಅದೃಷ್ಟ ಕುದುರಿದರೆ ರಮೇಶ್ ಜಿಗಜಿಣಗಿ ಇಲ್ಲವೇ ಗೋವಿಂದ ಕಾರಜೋಳಗೆ ರಾಜ್ಯ ಖಾತೆ ಸಚಿವ ಸ್ಥಾನ ಕೊಡಬಹುದು. ಆದರೆ ಶೋಭಾ ಕರಂದ್ಲಾಜೆಗೆ ಸಚಿವ ಸ್ಥಾನದ ಲಭ್ಯತೆ ಬಗ್ಗೆ ಅನುಮಾನವಿದೆ.

ದೆಹಲಿಗೆ ಹೊರಟ ಕುಮಾರಸ್ವಾಮಿ

ಮಾಜಿ ಸಿಎಂ, ನೂತನ ಸಂಸದ ಎಚ್‌.ಡಿ ಕುಮಾರಸ್ವಾಮಿ ಅವರು ಈಗಾಗಲೇ ಅಮಿತ್ ಶಾ ಕರೆ ಮೇರೆಗೆ ದೆಹಲಿಗೆ ತೆರಳಿದ್ದಾರೆ. ಕೆಂಪೇಗೌಡ ಏರ್ಪೋರ್ಟ್ ಮೂಲಕ ದೆಹಲಿಯತ್ತ ಏರ್ ಇಂಡಿಯಾ ವಿಮಾನದಲ್ಲಿ ಪಯಣ ಬೆಳೆಸಿದ್ದಾರೆ. ನೂತನವಾಗಿ ಆಯ್ಕೆ ಆಗಿರುವ ಮಿತ್ರ ಪಕ್ಷಗಳ ಸಂಸದರನ್ನು ಅಮಿತ್‌ ಶಾ ಅವರು ದೆಹಲಿಗೆ ಆಹ್ವಾನಿಸಿದ್ದು, ದೆಹಲಿಯಲ್ಲಿ ಅಮಿತ್ ಶಾ ಮತ್ತು ನಡ್ಡಾ ಅವರನ್ನು ಎಚ್‌ಡಿಕೆ ಭೇಟಿ ಆಗಲಿದ್ದಾರೆ.

ಇಂದು ಸಂಜೆ ನಾಲ್ಕು ಗಂಟೆಗೆ ಎನ್‌ಡಿಎ ಮೈತ್ರಿಕೂಟದ ಸಭೆ ನಡೆಯಲಿದ್ದು, ಎನ್‌ಡಿಎ ಸರ್ಕಾರ ರಚನೆ ಕುರಿತು ಮಿತ್ರ ಪಕ್ಷಗಳ ಜೊತೆಗೆ ಪ್ರಧಾನಿ ನರೇಂದ್ರ ಮೋದಿ ಸಭೆ ಕರೆದಿದ್ದಾರೆ. ಇಲ್ಲಿ ಸರ್ಕಾರ ರಚನೆಗೆ ಪಕ್ಷಗಳು ತಮ್ಮ ಬೆಂಬಲದ ಪತ್ರ ನೀಡಲಿದ್ದು, ಇದಾದ ಬಳಿಕ ಸರ್ಕಾರ ರಚನೆಗೆ ಅವಕಾಶ ಕೋರಿ ರಾಷ್ಟ್ರಪತಿಗಳನ್ನು ಎನ್‌ಡಿಎ ಭೇಟಿಯಾಗಲಿದೆ. ಜೆಡಿಯು ಮತ್ತು ಟಿಡಿಪಿ ಪಕ್ಷಗಳು ಕೂಡ ಬೆಂಬಲವನ್ನು ಘೋಷಿಸಬೇಕಿವೆ. ಈ ಹಿನ್ನೆಲೆಯಲ್ಲಿ ನಿತೀಶ್‌ ಕುಮಾರ್‌ (Nitish kumar) ನಡೆ ಏನು ಎಂಬ ಕುತೂಹಲ ಇನ್ನೂ ಇದೆ.

ಇದನ್ನೂ ಓದಿ: Election Results 2024: ನಿತೀಶ್‌ ಕುಮಾರ್‌ರಿಂದ ಪ್ರಧಾನಿ ಸ್ಥಾನಕ್ಕೆ ಬೇಡಿಕೆ, ಇಂಡಿಯಾ ಸೇರ್ಪಡೆ? ಸುಳಿವು ನೀಡಿದ ಎರಡು ಬೆಳವಣಿಗೆ!

Continue Reading

ಪ್ರಮುಖ ಸುದ್ದಿ

Valmiki Corporation Scam : ವಾಲ್ಮಿಕಿ ನಿಗಮ ಹಗರಣ; ಆಂಧ್ರದ ಫಸ್ಟ್​​ ಬ್ಯಾಂಕ್ ಅಧ್ಯಕ್ಷ . ಸಚಿವ ನಾಗೇಂದ್ರ ಆಪ್ತರ ಬಂಧನ

Valmiki Corporation Scam : ಮಹರ್ಷಿ ವಾಲ್ಮೀಕಿ ನಿಗಮ ಮಂಡಳಿಯ ಅಧಿಕೃತ ಬ್ಯಾಂಕ್ ಖಾತೆಯಿಂದ ಆಂಧ್ರದ ಬ್ಯಾಂಕ್ ಖಾತೆಗೆ ಹಣ ವರ್ಗಾವಣೆಯಾಗಿತ್ತು. ಇದು ಅಕ್ರಮದ ಹಣ ಎಂಬ ಆರೋಪದ ಹಿನ್ನೆಲೆಯಲ್ಲಿ ಆಂಧ್ರದ ಫಸ್ಟ್ ಬ್ಯಾಂಕ್ ಅಧ್ಯಕ್ಷ ಸತ್ಯನಾರಾಯಣ ಹಿಟ್ಕಾರ್ ಅವರನ್ನು ಬಂಧಿಸಲಾಗಿದೆ.

VISTARANEWS.COM


on

Valmiki Corporation Scam
Koo

ಬೆಂಗಳೂರು: ಮಹರ್ಷಿ ವಾಲ್ಮೀಕಿ ನಿಗಮ (Valmiki development corporation) ಅಧೀಕ್ಷಕ ಚಂದ್ರಶೇಖರ್ ಆತ್ಮಹತ್ಯೆ (Officer self Harming) ಪ್ರಕರಣದ (Valmiki corporation Scam) ತನಿಖೆಯನ್ನು ಕೈಗೆತ್ತಿಕೊಂಡಿರುವ ಎಸ್ಐಟಿ (SIT) ಅಧಿಕಾರಿಗಳು ಹಣ ವರ್ಗಾವಣೆಯಾಗಿದೆ ಎನ್ನಲಾದ ಆಂಧ್ರಪ್ರದೇಶ ಬ್ಯಾಂಕ್ ಅಧ್ಯಕ್ಷ ಸತ್ಯನಾರಾಯಣ ಹಿಟ್ಕಾರ್ ಅವರನ್ನು ಬಂಧಿಸಿದ್ದಾರೆ. ಇದೇ ವೇಳೆ ಸಚಿವ ನಾಗೇಂದ್ರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದ ನಾಗರಾಜ್ ನೆಕ್ಕಂಟಿ ಮತ್ತು ನಾಗೆಶ್ ಎಂಬುವನ್ನೂ ವಶಕ್ಕೆ ಪಡೆದುಕೊಂಡಿದ್ದಾರೆ.

ಮಹರ್ಷಿ ವಾಲ್ಮೀಕಿ ನಿಗಮ ಮಂಡಳಿಯ ಅಧಿಕೃತ ಬ್ಯಾಂಕ್ ಖಾತೆಯಿಂದ ಆಂಧ್ರದ ಬ್ಯಾಂಕ್ ಖಾತೆಗೆ ಹಣ ವರ್ಗಾವಣೆಯಾಗಿತ್ತು. ಇದು ಅಕ್ರಮದ ಹಣ ಎಂಬ ಆರೋಪದ ಹಿನ್ನೆಲೆಯಲ್ಲಿ ಆಂಧ್ರದ ಫಸ್ಟ್ ಬ್ಯಾಂಕ್ ಅಧ್ಯಕ್ಷ ಸತ್ಯನಾರಾಯಣ ಹಿಟ್ಕಾರ್ ಅವರನ್ನು ಬಂಧಿಸಲಾಗಿದೆ. ಈ ಹಣ ನಾಗರಾಜ್ ನೆಕ್ಕಂಟಿ ಮತ್ತು ನಾಗೇಶ ಅಣತಿ ಮೇರೆಗೆ ಹಣ ವರ್ಗಾವಣೆಯಾಗಿರುವ ಅನುಮಾನ ಮೇರೆಗೆ ಅವರನ್ನೂ ವಶಕ್ಕೆ ಪಡೆದಿದ್ದಾರೆ.

ಇದನ್ನೂ ಓದಿ: Suicide Attempt : ಕಾಮಗಾರಿ ನಡೆಸಿದ 9 ಕೋಟಿ ರೂಪಾಯಿ ಬಿಲ್​ಬಾಕಿ , ಗುತ್ತಿಗೆದಾರನಿಂದ ಆತ್ಮಹತ್ಯೆ ಯತ್ನ

ಚುನಾವಣಾ ಹಿನ್ನೆಲೆಯಲ್ಲಿ ಕರ್ನಾಟಕದ ಬೊಕ್ಕಸದಿಂದ ಆಂಧ್ರ ಹಣ ವರ್ಗಾವಣೆಯಾಗಿತ್ತಾ ಎಂಬ ಅನುಮಾನ ಮೂಡಿದ್ದ ಹಿನ್ನೆಲೆಯಲ್ಲಿ ತನಿಖೆ ನಡೆಸಲಾಗುತ್ತಿದೆ. ಸದ್ಯ ಅದೇ ಆಯಾಮದಲ್ಲಿ ಎಸ್ ಐಟಿ ತನಿಖೆ ನಡೆಸುತ್ತಿದೆ.

ವಾಲ್ಮೀಕಿ ನಿಗಮ ಹಗರಣ; ವರ್ಗಾವಣೆಯಾದ ಹಣ ಹಿಂಪಡೆಯಲು ಸರ್ಕಾರ ಕಸರತ್ತು

ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಅಕ್ರಮ ಪ್ರಕರಣ (Valmiki Corporation Scam) ಬೆಳಕಿಗೆ ಬಂದ ಹಿನ್ನೆಲೆಯಲ್ಲಿ ನಿಗಮದಿಂದ ಅಕ್ರಮವಾಗಿ ವರ್ಗಾವಣೆ ಆಗಿದೆ ಎನ್ನಲಾದ 87 ಕೋಟಿ ರೂ.ಗಳನ್ನು ರಾಜ್ಯ ಸರ್ಕಾರ ವಾಪಸ್‌ ಪಡೆಯಲು ಕಸರತ್ತು ನಡೆಸುತ್ತಿದೆ. ಮೊದಲ ಕಂತಿನಲ್ಲಿ 26 ಕೋಟಿ ವಾಪಸ್ ಆಗಿದೆ ಎಂದು ಸಚಿವ ಬಿ ನಾಗೇಂದ್ರ ಹೇಳಿದ್ದರು. ಎರಡನೇ ಕಂತಿನಲ್ಲಿ 42 ಕೋಟಿ ವಾಪಸ್ ಆಗಿದೆ ಎಂದು ಸಚಿವರ ಆಪ್ತ ವಲಯದ ಅಧಿಕಾರಿಗಳು ತಿಳಿಸಿದ್ದರು. ಆದರೆ, ಇದೀಗ ಇಷ್ಟು ಮೊತ್ತ ನಿಗಮಕ್ಕೆ ವಾಪಸ್‌ ಆಗಿಯೇ ಇಲ್ಲ ಎನ್ನಲಾಗುತ್ತಿದೆ.

87 ಕೋಟಿ ಅಕ್ರಮದಲ್ಲಿ ಸರ್ಕಾರಕ್ಕೆ ವಾಪಸ್ ಆಗಿದ್ದು ಕೇವಲ 5 ಕೋಟಿ. ಈವರೆಗೂ ಕೇವಲ 5 ಕೋಟಿ ಮಾತ್ರ ವಾಪಸ್ ಆಗಿದೆ ಎಂಬ ಮಾಹಿತಿ ಸರ್ಕಾರ ಉನ್ನತ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ. ನಿರೀಕ್ಷಿತ ಹಣ ವಾಪಸ್ ಆಗದೆ, ಸಚಿವರು 26 ಕೋಟಿ ಬಂದಿದೆ ಎಂದಿದ್ದು ಯಾಕೆ ಎಂಬ ಅನುಮಾನಗಳು ಮೂಡಿವೆ. ಈ ಎಲ್ಲಾ ಬೆಳವಣಿಗೆಗಳ ನಡುವೆ ಬಿಜೆಪಿಯಿಂದ ಸರ್ಕಾರಕ್ಕೆ ಗಡುವು ನೀಡಿದ್ದು, ಹೀಗಾಗಿ ಸಚಿವ ತಲೆದಂಡ ಬಹುತೇಕ ಫಿಕ್ಸ್ ಎನ್ನಲಾಗಿದೆ.

ಸಚಿವ ಬಿ‌ ನಾಗೇಂದ್ರ ರಾಜೀನಾಮೆಗೆ ಬಿಜೆಪಿ ಬಿಗಿ ಪಟ್ಟು

ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಅಕ್ರಮ ಪ್ರಕರಣ ಹಿನ್ನೆಲೆಯಲ್ಲಿ ಸಚಿವ ಬಿ‌.ನಾಗೇಂದ್ರ ರಾಜೀನಾಮೆಗೆ ಬಿಜೆಪಿ ಪಟ್ಟುಹಿಡಿದಿದೆ. ಸಚಿವರ ರಾಜೀನಾಮೆ ಪಡೆಯಲು ಜೂನ್ 6ರವರೆಗೂ ಗಡುವು ನೀಡಿರುವ ಬಿಜೆಪಿ, ಒಂದು ವೇಳೆ ಕ್ರಮ ಕೈಗೊಳ್ಳದಿದ್ದರೆ ರಾಜ್ಯವ್ಯಾಪಿ ಬೃಹತ್‌ ಹೋರಾಟ ನಡೆಸುವುದಾಗಿ ಎಚ್ಚರಿಕೆ ನೀಡಿದೆ.

ಮತ್ತೊಂದೆಡೆ ಬಿಜೆಪಿ ಕಾಲದ ಹಗರಣಗಳನ್ನು ಪ್ರಸ್ತಾಪ ಮಾಡಲು ನಾಗೇಂದ್ರ ಮುಂದಾಗಿದ್ದಾರೆ. ಪ್ರಕರಣದಲ್ಲಿ ತನಿಖೆಗೆ ಸಿಬಿಐ ಎಂಟ್ರಿ ತಪ್ಪಿಸಲು ಹೊಸ ದಾಳ ಪ್ರಯೋಗಕ್ಕೆ ನಾಗೇಂದ್ರ ಚಿಂತನೆ ನಡೆಸುತ್ತಿದ್ದಾರೆ ಎನ್ನಲಾಗಿದೆ. ಬಿಜೆಪಿ ಕಾಲದಲ್ಲಿ ಮಂಡ್ಯ, ರಾಮನಗರ ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ನಡೆದ ಹಗರಣ ಕುರಿತು ಪ್ರಸ್ತಾಪ ಮಾಡಲು ಸಚಿವ ಪ್ಲ್ಯಾನ್‌ ಮಾಡಿದ್ದಾರೆ.

Continue Reading

ಪ್ರಮುಖ ಸುದ್ದಿ

Suicide Attempt : ಕಾಮಗಾರಿ ನಡೆಸಿದ 9 ಕೋಟಿ ರೂಪಾಯಿ ಬಿಲ್​ಬಾಕಿ , ಗುತ್ತಿಗೆದಾರನಿಂದ ಆತ್ಮಹತ್ಯೆ ಯತ್ನ

Suicide Attempt :ಪ್ರಥಮ ದರ್ಜೆ ಗುತ್ತಿಗೆದಾರ ಸುಜಿತ್​ ಸರ್ಕಾರದ ವಿರುದ್ಧ ಆರೋಪ ಮಾಡಿರುವವರು. ವಿಶ್ವೇಶ್ವರಯ್ಯ ಜಲ ನಿಗಮ ಮಂಡಳಿಯ ಎಂ.ಡಿ ವಿರುದ್ಧ ಗಂಭೀರ ಆರೋಪ ಮಾಡುವ ವಿಡಿಯೊವನ್ನು ಚಿತ್ರೀಕರಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಸದ್ಯ ಗುತ್ತಿಗೆದಾರ ಮಾಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

VISTARANEWS.COM


on

Suicide attempt
Koo

ತುಮಕೂರು : ರಾಜ್ಯ ಸರ್ಕಾರದ ವಿವಿಧ ಇಲಾಖೆ ಹಾಗೂ ಮಂಡಳಿಗಳ ಕಾಮಗಾರಿ ನಡೆಸಿದ ಗುತ್ತಿಗೆದಾದರಿಗೆ ಸೂಕ್ತ ಸಮಯಕ್ಕೆ ಬಿಲ್​ ನೀಡುತ್ತಿಲ್ಲ ಎಂಬ ಆರೋಪಕ್ಕೆ ಮತ್ತೊಂದು ಬಾರಿ ಪುಷ್ಟಿ ಸಿಕ್ಕಿದೆ. ವಿಶ್ವೇಶ್ವರಯ್ಯ ಜಲ ನಿಗಮ ಮಂಡಳಿಯ ಮಹಾ ನಿರ್ದೇಶಕರೊಬ್ಬರು ಕಾಮಗಾರಿ ನಡೆಸಿದ 8 ಕೋಟಿ ರೂಪಾಯಿ ಬಿಡುಗಡೆ ಮಾಡದೇ ಕಿರುಕುಳ ನೀಡುತ್ತಿಲ್ಲ ಎಂದು ಆರೋಪಿಸಿ ಗುತ್ತಿಗೆದಾರರೊಬ್ಬರು ಆತ್ಮಹತ್ಯೆ (Suicide Attempt) ಮಾಡಲು ಯತ್ನಿಸಿದ ಘಟನೆ ಪಾವಗಡದಲ್ಲಿ ನಡೆದಿದೆ. ಕೆಲಸ ಮುಗಿದು ವರ್ಷಗಳೇ ಕಳೆದರೂ ಹಣ ಬಿಡುಗಡೆ ಮಾಡದೇ ಅನಗತ್ಯ ರಿಪೋರ್ಟ್​ ಬರೆದು ಹಾಕಲಾಗುತ್ತಿದೆ ಎಂದು ಅವರು ಆರೋಪಿಸಿದ್ದಾರೆ.

ಪ್ರಥಮ ದರ್ಜೆ ಗುತ್ತಿಗೆದಾರ ಸುಜಿತ್​ ಸರ್ಕಾರದ ವಿರುದ್ಧ ಆರೋಪ ಮಾಡಿರುವವರು. ವಿಶ್ವೇಶ್ವರಯ್ಯ ಜಲ ನಿಗಮ ಮಂಡಳಿಯ ಎಂ.ಡಿ ವಿರುದ್ಧ ಗಂಭೀರ ಆರೋಪ ಮಾಡುವ ವಿಡಿಯೊವನ್ನು ಚಿತ್ರೀಕರಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಸದ್ಯ ಗುತ್ತಿಗೆದಾರ ಮಾಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ವಿಶ್ವೇಶ್ವರಯ್ಯ ಜಲ ನಿಗಮ ಮಂಡಳಿಯ ಎಂ.ಡಿ ಸಣ್ಣಚಿತ್ತಪ್ಪ ವಿರುದ್ಧ ಆರೋಪ ಮಾಡಿರು ಸುಜಿತ್ ಅವರ ಕಿರುಕುಳದಿಂದಾಗಿ ಸಮಸ್ಯೆಯಾಗಿದೆ ಎಂದು ಆರೋಪಿಸಿದ್ದಾರೆ.

ಪಾವಗಡ ತಾಲೂಕು ಕಾಂಗ್ರೆಸ್ ಮುಖಂಡ ಹಾಗೂ ಪ್ರಥಮ ದರ್ಜೆ ಗುತ್ತಿಗೆದಾರ‌ನಾಗಿರುವ ಸುಜಿತ್ ಅವರು ತಾಲೂಕಿನಲ್ಲಿ ಹಲವು ಕಾಮಗಾರಿ‌ ಮಾಡಿಸಿದ್ದೇನೆ ಎಂದು ಹೇಳಿದ್ದಾರೆ. ಕಾಮಗಾರಿ‌ ಮುಗಿದರೂ ಹಣ ಬಿಡುಗಡೆ ಮಾಡದೇ ನಷ್ಟ ಉಂಟು ಮಾಡುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ಎಸ್.ಸಿ.ಪಿ ಅಡಿ ಕಾಮಗಾರಿ ಮಾಡಿದ್ದೇನೆ. ಆದರೆ, ಕಾಮಗಾರಿ ಸರಿಯಿಲ್ಲ ಎಂದು ತನಿಖೆ ಮಾಡುವ ನೆಪದಲ್ಲಿ ಎಂ. ಡಿ ಸಣ್ಣಚಿತ್ತಪ್ಪ ಅವರು ಹಣ ಬಿಡುಗಡೆ ಮಾಡುತ್ತಿಲ್ಲ ಎಂದು ಅವರು ಆರೋಪಿಸಿದ್ದಾರೆ.

ಇದನ್ನೂ ಓದಿ: Murder News : ಹಾಸನದಲ್ಲಿ ನಟೋರಿಯಸ್​ ರೌಡಿ ಚೈಲ್ಡ್​ ರವಿ ಬರ್ಬರ ಕೊಲೆ

ತನಿಖೆ ನೆಪದಲ್ಲಿ ಮುಕ್ತಾಯಗೊಂಡ ಕಾಮಗಾರಿಯ ಬಿಲ್ ನೀಡುತ್ತಿಲ್ಲ. ಸುಮಾರು 9 ಕೋಟಿ ಹಣ ಬಿಡುಗಡೆ ಆಡಬೇಕಾಗಿದೆ. ಕಾಮಗಾರಿ ಮುಗಿದು ವರ್ಷಗಳೇ ಕಳೆದರೂ ಹಣ ಬಿಡುಗಡೆ ಮಾಡಿಲ್ಲ ಎಂದು ಸುಜಿತ್ ಆರೋಪಿಸಿದ್ದಾರೆ.

ಮಂಡಳಿಯ ಅಡಿಯಲ್ಲಿ ರಸ್ತೆ ಹಾಗೂ ಚೆಕ್ ಡ್ಯಾಮ್ ಗಳನ್ನು ಮಾಡಿಸಿದ್ದೇನೆ. ಆದರೆ, ರಾಜಕೀಯ ದುರುದ್ದೇಶದಿಂದಾಗಿ ನನ್ನ ಬಿಲ್ ಬಿಡುಗಡೆ ಮಾಡುತ್ತಿಲ್ಲ ಎಂದು ಸುಜಿತ್ ಆರೋಪಿಸಿದ್ದಾರೆ.

ಮೂಲತಃ ಪಾವಗಡದವರೇ ಆಗಿರುವ ಎಂಡಿ ಸಣ್ಣಚಿತ್ತಪ್ಪ ಅವರು ರಾಜಕೀಯ ದುರುದ್ದೇಶದಿಂದ ಹಣ ಬಿಡುಗಡೆ ಮಾಡುತ್ತಿಲ್ಲ. ನಷ್ಟ ತಾಳಿಕೊಳ್ಳಲು ಆಗುತ್ತಿಲ್ಲ. ಹೀಗಾಗಿ ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಸುಜಿತ್ ವಿಡಿಯೊ ಮಾಡಿದ್ದಾರೆ. ನನ್ನ ಸಾವಿಗೆ ಕಾರಣ ಎಂ.ಡಿ ಸಣ್ಣ ಚಿತ್ತಪ್ಪ ಅವರೇ ಕಾರಣ ಎಂದು ಹೇಳಿರುವ ವಿಡಿಯೊ ವೈರಲ್ ಆಗಿದೆ. ಪರಿಶಿಷ್ಟ ಜಾತಿ ಸಮುದಾಯಕ್ಕೆ ಸೇರಿರುವ ನನ್ನ ಮೇಲೆ ದೌರ್ಜನ್ಯ ನಡೆಸಲಾಗುತ್ತಿದೆ ಎಂದು ಸುಜಿತ್ ಆರೋಪಿಸಿದ್ದಾರೆ.

ಆತ್ಮಹತ್ಯೆ ಯತ್ನ ನಡೆಸಿ ಅಸ್ವಸ್ಥಗೊಂಡಿರುವ ಸುಜಿತ್ ಅವರು ಸದ್ಯ ಬೆಂಗಳೂರಿನ ವಿಕ್ಟೋರಿಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Continue Reading
Advertisement
Stock Market
ದೇಶ3 mins ago

Stock Market: ಮೋದಿ ಪ್ರಧಾನಿ ಆಗುವುದು ಖಾತರಿ ಆಗುತ್ತಿದ್ದಂತೆ ಮತ್ತೆ ಪುಟಿದೆದ್ದ ಷೇರು ಮಾರುಕಟ್ಟೆ!

Gold Rate Today
ಚಿನ್ನದ ದರ3 mins ago

Gold Rate Today: ಮತ್ತೆ ಇಳಿದ ಚಿನ್ನದ ದರ; ಇಂದಿನ ಬೆಲೆ ಗಮನಿಸಿ

Prajwal Revanna
ಪ್ರಮುಖ ಸುದ್ದಿ9 mins ago

Prajwal Revanna case : ಪ್ರಜ್ವಲ್​ನ ಪುರುಷತ್ವ ಸಾಮರ್ಥ್ಯ ಪರೀಕ್ಷೆ ನಡೆಸಲು ಕೋರ್ಟ್​ ಸಮ್ಮತಿ

election results 2024 joshi hdk cnm bommai
ಪ್ರಮುಖ ಸುದ್ದಿ11 mins ago

Election results 2024: ಎನ್‌ಡಿಎ ಸರಕಾರದಲ್ಲಿ ರಾಜ್ಯದಿಂದ 4 ಮಂದಿಗೆ ಸಚಿವ ಸ್ಥಾನ ಫಿಕ್ಸ್?‌

Election Results 2024
Lok Sabha Election 202439 mins ago

Election Results 2024: ಮೂರನೇ ಬಾರಿ ಸರ್ಕಾರ ರಚಿಸಲು ಎನ್‌ಡಿಎ ತಯಾರಿ; ಕೇಂದ್ರ ಸಚಿವ ಸಂಪುಟ ಸಭೆ

Valmiki Corporation Scam
ಪ್ರಮುಖ ಸುದ್ದಿ43 mins ago

Valmiki Corporation Scam : ವಾಲ್ಮಿಕಿ ನಿಗಮ ಹಗರಣ; ಆಂಧ್ರದ ಫಸ್ಟ್​​ ಬ್ಯಾಂಕ್ ಅಧ್ಯಕ್ಷ . ಸಚಿವ ನಾಗೇಂದ್ರ ಆಪ್ತರ ಬಂಧನ

Election Results 2024
Lok Sabha Election 20241 hour ago

Election Results 2024: ಸರ್ಕಾರ ರಚನೆಯ ಕಸರತ್ತು; ಒಂದೇ ವಿಮಾನದಲ್ಲಿ ದೆಹಲಿಗೆ ಹಾರಿದ ನಿತೀಶ್ ಕುಮಾರ್, ತೇಜಸ್ವಿ ಯಾದವ್

Nitish Kumar election results 2024
ಪ್ರಮುಖ ಸುದ್ದಿ1 hour ago

Election Results 2024: ನಿತೀಶ್‌ ಕುಮಾರ್‌ರಿಂದ ಪ್ರಧಾನಿ ಸ್ಥಾನಕ್ಕೆ ಬೇಡಿಕೆ, ಇಂಡಿಯಾ ಸೇರ್ಪಡೆ? ಸುಳಿವು ನೀಡಿದ ಎರಡು ಬೆಳವಣಿಗೆ!

Suicide attempt
ಪ್ರಮುಖ ಸುದ್ದಿ1 hour ago

Suicide Attempt : ಕಾಮಗಾರಿ ನಡೆಸಿದ 9 ಕೋಟಿ ರೂಪಾಯಿ ಬಿಲ್​ಬಾಕಿ , ಗುತ್ತಿಗೆದಾರನಿಂದ ಆತ್ಮಹತ್ಯೆ ಯತ್ನ

Murder Case
ಪ್ರಮುಖ ಸುದ್ದಿ2 hours ago

Murder News : ಹಾಸನದಲ್ಲಿ ನಟೋರಿಯಸ್​ ರೌಡಿ ಚೈಲ್ಡ್​ ರವಿ ಬರ್ಬರ ಕೊಲೆ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Lok Sabha Election Result 2024 Live
ದೇಶ1 day ago

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶದ ಲೈವ್‌ ಇಲ್ಲಿ ವೀಕ್ಷಿಸಿ

Karnataka Rain
ಮಳೆ2 days ago

Karnataka Rain : 133 ವರ್ಷದ ರೆಕಾರ್ಡ್ ಬ್ರೇಕ್ ಮಾಡಿದ ʻಬೆಂಗಳೂರು ಮಳೆʼ

Snake Rescue Snakes spotted in heavy rain
ಮಳೆ2 days ago

Snake Rescue: ಮಳೆ ನೀರಿನಲ್ಲಿ ಹರಿದು ಬಂದು ಬೈಕ್‌ನಲ್ಲಿ ಸೇರಿಕೊಂಡ ಹಾವು; ಮನೆಗಳಲ್ಲೂ ಪ್ರತ್ಯಕ್ಷ

Karnataka Rain
ಮಳೆ3 days ago

Karnataka Rain : ವೀಕೆಂಡ್‌ ಮೋಜಿಗೆ ವರುಣ ಅಡ್ಡಿ; ಭಾನುವಾರ ಸಂಜೆಗೆ ಮಳೆ ಕಾಟ

Liquor ban
ಬೆಂಗಳೂರು4 days ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

Assault Case in Shivamogga
ಕ್ರೈಂ6 days ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ1 week ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು1 week ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ1 week ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ1 week ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

ಟ್ರೆಂಡಿಂಗ್‌