Murder Case | ಪತ್ನಿಯ ಪ್ರೀತಿ, ಪ್ರಣಯಕ್ಕೆ ಚೆಲ್ಲಿತು ನೆತ್ತರು; ಆ್ಯಕ್ಸಿಡೆಂಟ್‌ ಎಂದವಳು ಈಗ ಕಂಬಿ ಹಿಂದೆ! - Vistara News

ಕರ್ನಾಟಕ

Murder Case | ಪತ್ನಿಯ ಪ್ರೀತಿ, ಪ್ರಣಯಕ್ಕೆ ಚೆಲ್ಲಿತು ನೆತ್ತರು; ಆ್ಯಕ್ಸಿಡೆಂಟ್‌ ಎಂದವಳು ಈಗ ಕಂಬಿ ಹಿಂದೆ!

ಗೃಹಿಣಿಯೊಬ್ಬಳು ಹಳೇ ಗೆಳೆಯನ ಬಿಡಲಾಗದೆ ಪ್ರೀತಿ-ಪ್ರಣಯಕ್ಕೆ ಅಡ್ಡಿಯಾಗಿದ್ದ ಪತಿಯನ್ನು ಪ್ರಿಯಕರನೊಂದಿಗೆ ಸೇರಿ ಕೊಲೆ (Murder Case) ಮಾಡಿರುವ ಘಟನೆ ಬೆಳಕಿಗೆ ಬಂದಿದೆ.

VISTARANEWS.COM


on

ಪೊಲೀಸ್‌ ವಶದಲ್ಲಿರುವ ಆರೋಪಿಗಳು
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಯಲಹಂಕದಲ್ಲಿ ನಾಲ್ಕು ದಿನದ ಹಿಂದಷ್ಟೇ ವ್ಯಕ್ತಿಯೊಬ್ಬನ ತಲೆ, ಮರ್ಮಾಂಗ ಸೇರಿದಂತೆ ದೇಹದ ಮೇಲೆ ಮನಬಂದಂತೆ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ (Murder Case) ಮಾಡಿದ್ದರು. ಮೊದಮೊದಲು ಇದು ದ್ವೇಷಕ್ಕೆ ನಡೆದಿರುವ ಕೊಲೆ ಎಂದೇ ಭಾವಿಸಲಾಗಿತ್ತು. ಅಲ್ಲದೆ, ಇದು ಆ್ಯಕ್ಸಿಡೆಂಟ್‌ ಎಂದೂ ಪತ್ನಿ ಕತೆ ಕಟ್ಟಿದ್ದಳು. ಆದರೆ, ತನಿಖೆಗಿಳಿದ ಪೊಲೀಸರಿಗೆ ಇದೊಂದು ಪ್ರೇಮ ಪುರಾಣಕ್ಕೆ ನಡೆದ ಕೊಲೆ ಎಂದು ತಿಳಿದು ಬಂದಿದೆ.

ಇಲ್ಲಿನ ಯಲಹಂಕದಲ್ಲಿ ಅಕ್ಟೋಬರ್‌ 22ರಂದು ಮನೆಯ ಟೆರೇಸ್​ ಮೇಲೆ ರಕ್ತದ ಮಡುವಿನಲ್ಲಿ ಚಂದ್ರಶೇಖರ್‌ ಎಂಬುವವರು ನರಳಾಡುತ್ತಿದ್ದರು. ಗಂಡನನ್ನು ಹುಡುಕುತ್ತಾ ಬಂದ ಪತ್ನಿಗೆ ಹಲ್ಲೆಯಾಗಿರುವುದು ಕಂಡು ಬಂದಿದೆ. ತಕ್ಷಣವೇ ಆಕೆ ತನ್ನ ಪತಿಯನ್ನು ಆಸ್ಪತ್ರೆಗೆ ಸೇರಿಸಿದ್ದಳು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಪತಿ ಮೃತಪಟ್ಟಿದ್ದ. ಆದರೆ, ಪ್ರಕರಣವನ್ನು ದಾಖಲಿಸಿಕೊಂಡ ಪೊಲೀಸರಿಗೆ ತನಿಖೆ ವೇಳೆ ಟ್ವಿಸ್ಟ್‌ ಸಿಕ್ಕಿದ್ದು, ಕೊಲೆಗೆ ಪತ್ನಿಯ ಪ್ರೀತಿಯೇ ಕಾರಣ ಎಂದು ತಿಳಿದು ಬಂದಿದೆ.

ಅಶ್ಲೀಲ ಮೆಸೇಜ್​ ಕಳಿಸಿದವನಿಗೆ ಚಪ್ಪಲಿಯಲ್ಲಿ ಹೊಡೆದಿದ್ದ ಶ್ವೇತಾ
ಹಿಂದೂಪುರ ಬಳಿಯ ಹಳ್ಳಿಯೊಂದರಲ್ಲಿ ವಾಸವಿದ್ದ ಚಂದ್ರಶೇಖರ್​ ಹಾಗೂ ಶ್ವೇತಾ ಕೆಲ ಸಮಯದ ಹಿಂದಷ್ಟೆ ಯಲಹಂಕಕ್ಕೆ ಬಂದಿದ್ದರು. ವಿವಾಹಕ್ಕೂ ಮೊದಲು ಪ್ರೀತಿಸುತ್ತಿದ್ದ ಲೋಕೇಶ್, ಶ್ವೇತಾ ಮದುವೆಯಾದ ನಂತರವೂ ಪ್ರೀತಿಯನ್ನು ಮುಂದುವರಿಸಿದ್ದ. ಅಲ್ಲದೆ, ಶ್ವೇತಾ ಇದ್ದ ಊರಿನಲ್ಲಿ ಆಕೆಗೆ ಕೆಲವರು ಅಸಭ್ಯ ಮೆಸೇಜ್​ಗಳನ್ನು ಕಳುಹಿಸುತ್ತಿದ್ದರು ಎಂಬ ಕಾರಣಕ್ಕಾಗಿ ಸ್ಥಳ ಬದಲಾವಣೆ ಮಾಡಿದ್ದರು.

ಮದುವೆಯಾದ ನಂತರವೂ ಶ್ವೇತಾಗೆ ಪ್ರೈವೇಟ್​ ನಂಬರ್​ನಿಂದ ಕೆಟ್ಟದಾಗಿ ಮೆಸೇಜ್​ ಮಾಡುತ್ತಿದ್ದ ಎಂದು ಹೇಳಲಾಗಿದೆ. ಈ ಕಾರಣದಿಂದಲೇ ಶ್ವೇತಾ, ಲೋಕೇಶ್​ ಎಂಬಾತನ ವಿರುದ್ಧ ಹಿಂದೂಪುರದಲ್ಲಿ ದೂರು ದಾಖಲಿಸಿದ್ದಳು. ಈ ವೇಳೆ ಠಾಣೆಯಲ್ಲಿ ನಡೆದಿದ್ದ ಮಾತಿನ ಚಕಮಕಿಯಲ್ಲಿ ಲೋಕೇಶ್‌ಗೆ ಶ್ವೇತಾ ಚಪ್ಪಲಿಯಿಂದ ಹೊಡೆದಿದ್ದಳು. ಈ ಕಾರಣದಿಂದಲೇ ಶ್ವೇತಾ ತನ್ನ ಗಂಡನ ಜತೆ ಊರು ಬಿಟ್ಟು ಯಲಹಂಕಕ್ಕೆ ಬಂದು ನೆಲೆಸಿದ್ದಳು. ಇನ್ನು ಚಪ್ಪಲಿಯಿಂದ ಏಟು ತಿಂದಾತನೇ ಆ ಸಿಟ್ಟಿನಿಂದಾಗಿ ಕೊಲೆ ಮಾಡಿರಬೇಕು ಎಂದು ಕುಟುಂಬಸ್ಥರು ಆರೋಪಿಸಿದ್ದರು.

ಇದನ್ನೂ ಓದಿ | Murder Case | ಬೀದಿ ಹೆಣವಾದ ರೌಡಿಶೀಟರ್‌; ಅನುಮಾನಾಸ್ಪದ ಸಾವು

Murder Case
ಮೃತ ಚಂದ್ರಶೇಖರ್‌ ಪತ್ನಿ ಶ್ವೇತಾ ಪೊಲೀಸರ ಅತಿಥಿ

ಇಬ್ಬರಿಗೂ ಇಷ್ಟವಿರದ ಮದುವೆ
ಅಂದಹಾಗೆ, ಚಂದ್ರಶೇಖರ್‌ ಅವರ ಸ್ವಂತ ಅಕ್ಕನ ಮಗಳೇ ಶ್ವೇತಾ. ಇಬ್ಬರ ನಡುವೆ ೧೬ ವರ್ಷಗಳ ಅಂತರ ಇರುವ ಕಾರಣಕ್ಕೆ ಇಬ್ಬರಿಗೂ ಮದುವೆ ಆಗಲು ಇಷ್ಟವಿರಲಿಲ್ಲ. ಆದರೆ, ಕುಟುಂಬದವರು ಶ್ವೇತಾ ಓದುತ್ತಿರುವಾಗಲೇ ಒಪ್ಪಿಸಿ ಮದುವೆ ಮಾಡಿಸಿದ್ದರು. ಇದಕ್ಕೆ ಇಬ್ಬರೂ ವಿರೋಧ ವ್ಯಕ್ತಪಡಿಸಲು ಆಗದ ಸ್ಥಿತಿಯಲ್ಲಿದ್ದರು.

ಕಾಲೇಜಿನಲ್ಲಿ ಪ್ರೇಮ ಪಾಶಕ್ಕೆ ಸಿಲುಕಿದ್ದ ಶ್ವೇತಾ
ಕಾಲೇಜಿನಲ್ಲಿ ಇರುವಾಗಲೇ ಲೋಕೇಶ್‌ನನ್ನು ಶ್ವೇತಾ ಪ್ರೀತಿಸುತ್ತಿದ್ದಳು. ಆದರೆ, ಈ ಮಧ್ಯೆ ಮನೆಯವರು ಚಂದ್ರಶೇಖರ್‌ನೊಂದಿಗೆ ಮದುವೆ ಮಾಡಿಸಿದರು. ಮದುವೆಯಾದ ಬಳಿಕ ಶ್ವೇತಾ ವಿದ್ಯಾಭ್ಯಾಸ ಮಾಡಲು ಇಚ್ಛಿಸಿದಾಗ, ಪತಿ ಚಂದ್ರಶೇಖರ್‌ ಅನುಮತಿ ನೀಡಿದ್ದರು. ಮತ್ತೆ ಕಾಲೇಜಿಗೆ ಬರಲಾಂಭಿಸಿದ ಶ್ವೇತಾಳಿಗೆ ಲೋಕೇಶ್‌ ಮತ್ತೆ ಹತ್ತಿರವಾಗಿದ್ದಾನೆ. ಹೀಗಾಗಿ ಇಬ್ಬರ ನಡುವಿನ ಪ್ರೀತಿ ಹಾಗೇ ಮುಂದುವರಿದಿತ್ತು.

ಪತ್ನಿಯ ಪ್ರೇಮ ವಿಚಾರ ಚಂದ್ರಶೇಖರ್‌ಗೆ ತಿಳಿದಾಗ ಮನೆಯಲ್ಲಿ ಗಲಾಟೆ ನಡೆದಿತ್ತು. ನಂತರ ಹಿಂದೂಪುರ ಪೊಲೀಸ್ ಠಾಣೆಯಲ್ಲಿ ತನ್ನ ಪತ್ನಿಯಿಂದಲೇ ಲೋಕೇಶ್‌ ವಿರುದ್ಧ ದೂರು ಕೊಡಿಸಿದ್ದರು. ಆಗ ಲೋಕೇಶ್‌ ಗಲಾಟೆ ಮಾಡಿದ್ದ ಎಂಬ ಕಾರಣಕ್ಕೆ ಎಲ್ಲರೆದುರೇ ಪೊಲೀಸ್ ಠಾಣೆಯಲ್ಲಿ ಲೋಕೇಶ್‌ನಿಗೆ ಶ್ವೇತಾ ಚಪ್ಪಲಿಯಲ್ಲಿ ಹೊಡೆದಿದ್ದಳು. ಹೀಗಾಗಿ ಪತ್ನಿ ಬದಲಾದಳೆಂಬ ಖುಷಿಯಲ್ಲಿದ್ದ ಚಂದ್ರಶೇಖರ್‌ ಬೆಂಗಳೂರಿಗೆ ಕೆಲಸಕ್ಕೆ ಸೇರಲು ನಿರ್ಧರಿಸಿದರು. ಮತ್ತೆ ಪತ್ನಿಯ ವಿದ್ಯಾಭ್ಯಾಸದ ಹಿತದೃಷ್ಟಿಯಿಂದ ಹಿಂದೂಪುರದಲ್ಲಿಯೇ ಆಕೆಯನ್ನು ಬಿಟ್ಟು ಯಲಹಂಕದ ತನ್ನ ಅಣ್ಣನ ಮನೆಯಲ್ಲಿ ವಾಸವಿದ್ದರು.

ಶ್ವೇತಾಳ ಖಾಸಗಿ ವಿಡಿಯೊ ರೆಕಾರ್ಡ್‌ ಮಾಡಿಕೊಂಡಿದ್ದ ಲೋಕೇಶ್‌
ಈ ಮಧ್ಯೆ ಮನೆಯಲ್ಲಿ ಗಲಾಟೆಯಾಗುತ್ತದೆ ಎಂದು ಲೋಕೇಶ್ ಸಹವಾಸ ಬೇಡ ಎಂದಿದ್ದವಳು, ಮತ್ತೆ ಬಲವಂತವಾಗಿ ಪ್ರೇಮ ಮುಂದುವರಿಸಿದ್ದಳು. ಇದಕ್ಕೆ ಕಾರಣ ಈ ಹಿಂದೆ ಶ್ವೇತಾಳ ಜತೆಗೆ ಇದ್ದಾಗ ಖಾಸಗಿ ವಿಡಿಯೊವನ್ನು ಲೋಕೇಶ್‌ ಇಟ್ಟುಕೊಂಡಿದ್ದ. ಇದನ್ನು ತೋರಿಸಿ ಬೆದರಿಸಿ ಮತ್ತೆ ಬಲವಂತವಾಗಿ ತನ್ನತ್ತ ಸೆಳೆದುಕೊಂಡಿದ್ದ.

ಇದನ್ನೂ ಓದಿ | Murder Case | ರೌಡಿಶೀಟರ್ ದಿವಾಕರ್ @ ಡಿಚ್ಚಿ ದಿವಾ ಭೀಕರ ಕೊಲೆ; ಮಾರಕಾಸ್ತ್ರಗಳಿಂದ ಕೊಚ್ಚಿ ಕೊಂದರು!

ವಿಚಾರ ತಿಳಿದು ಹಲ್ಲೆ ನಡೆಸಿದ್ದ ಚಂದ್ರಶೇಖರ್‌
ಲೋಕೇಶ್‌ನ ಬೆದರಿಕೆ ವಿಚಾರ ತಿಳಿದ ಚಂದ್ರಶೇಖರ್‌ ಆತನನ್ನು ಯಲಹಂಕಕ್ಕೆ ಕರೆಸಿಕೊಂಡು ಹಲ್ಲೆ ನಡೆಸಿದ್ದ. ಈ ವಿಚಾರವನ್ನು ಲೋಕೇಶ್ ತನ್ನ ಸಂಬಂಧಿ ಸತೀಶ್‌ಗೆ ತಿಳಿಸಿ ಒಳಗೊಳಗೆ ದ್ವೇಷ ಕಾರುತ್ತಿದ್ದ. ಈ ಮಧ್ಯೆ ಶ್ವೇತಾ ಯಲಹಂಕದ ಮನೆ ಮಾಲೀಕನ ಮಗ ಭರತ್ ಜತೆ ಸಲುಗೆ ಬೆಳೆಸಿಕೊಂಡಿದ್ದಳು. ಶ್ವೇತಾ, ಲೋಕೇಶ್ ಇಬ್ಬರ ಪ್ರೇಮದ ಬಗ್ಗೆ ತಿಳಿದುಕೊಂಡಿದ್ದ ಭರತ್, ಲೋಕೇಶ್‌ನ ಕಾಂಟ್ಯಾಕ್ಟ್ ಮಾಡಿಸುವ ನೆಪದಲ್ಲಿ ಶ್ವೇತಾಳಿಗೆ ಹತ್ತಿರವಾಗಿ ತಾನು ಪ್ರೀತಿಸಲು ಮುಂದಾಗಿದ್ದ ಎಂದು ತಿಳಿದು ಬಂದಿದೆ.

ಗಂಡ ನನಗೆ ಹೊಡೆಯುತ್ತಿದ್ದಾನೆ
ಈ ಮಧ್ಯೆ ಭರತ್‌ ಮೊಬೈಲ್‌ ಬಳಸುತ್ತಿದ್ದ ಶ್ವೇತಾ, ಅದರ ಮೂಲಕ ಲೋಕೇಶ್‌ ಜತೆಗೆ ಮೆಸೇಜ್‌ ಮಾಡಿ ಮಾತುಕತೆ ನಡೆಸುತ್ತಿದ್ದಳು. ಇಬ್ಬರು ಚಾಟಿಂಗ್‌ ಮಾಡುವಾಗ ಪತಿ ಚಂದ್ರಶೇಖರ್‌ ನನ್ನ ಮೇಲೆ ಹಲ್ಲೆ ಮಾಡುತ್ತಿದ್ದಾನೆ ಎಂದು ಲೋಕೇಶ್‌ಗೆ ತಿಳಿಸಿದ್ದಳು. ಶ್ವೇತಾಳಿಗೆ ಚಂದ್ರಶೇಖರ್‌ ಟಾರ್ಚರ್ ಕೊಡುತ್ತಿದ್ದಾನೆಂದು ಕೇಳಿ ಕೆರಳಿದ ಲೋಕೇಶ್‌ ಆತನನ್ನು ಕೊಲೆ ಮಾಡುವ ಪ್ಲ್ಯಾನ್‌ ಮಾಡಿದ್ದಾನೆ. ಈ ವಿಷಯವನ್ನು ಮೊದಲು ಶ್ವೇತಾಳಿಗೆ ತಿಳಿಸಿದ್ದಾನೆ. ಅವಳ ಒಪ್ಪಿಗೆ ಪಡೆದ ಬಳಿಕ ಲೋಕೇಶ್ ತನ್ನ ಸಂಬಂಧಿ ಸುರೇಶ್ ಜತೆ ಸೇರಿಕೊಂಡು ಚಂದ್ರಶೇಖರ್‌ ಮನೆಗೆ ನುಗ್ಗಿ ಟೆರೇಸ್‌ಗೆ ಕರೆದೊಯ್ದು ಮಾರಕಾಸ್ತ್ರದಿಂದ ಕೊಚ್ಚಿ ಕೊಲೆ ಮಾಡಿ ಪರಾರಿಯಾಗಿದ್ದರು.

ಕ್ಷಣಕ್ಕೊಂದು ಹೇಳಿಕೆ ಕೊಟ್ಟು ಸಿಕ್ಕಿಬಿದ್ದ ಶ್ವೇತಾ
ಕೊಲೆಯಾದ ದಿನ ಶ್ವೇತಾಳ ಜತೆ ಲೋಕೇಶ್ ವಿಚಾರವಾಗಿ ಚಂದ್ರಶೇಖರ್‌ ಜಗಳವಾಡಿದ್ದ. ಆ ಬಳಿಕ ಯಲಹಂಕದ ಮನೆಯಲ್ಲಿ ಆರೋಪಿಗಳು ಕೊಚ್ಚಿ ಕೊಲೆ ಮಾಡಿದರು. ಈ ವೇಳೆ ಕ್ಷಣಕ್ಕೊಂದು ಹೇಳಿಕೆ ನೀಡುತ್ತಾ ಶ್ವೇತಾ ನಾಟಕವಾಡಿದ್ದಳು. ರಕ್ತಮಯವಾಗಿ ಬಿದ್ದಿದ್ದ ಚಂದ್ರಶೇಖರ್‌ನನ್ನು ಆಸ್ಪತ್ರೆಗೆ ಕರೆ ತಂದ ಶ್ವೇತಾ ಆ್ಯಕ್ಸಿಡೆಂಟ್ ಆಗಿದೆ ಎಂದು ಹೇಳಿದ್ದಳು. ಆದರೆ, ಮಾರಕಾಸ್ತ್ರಗಳಿಂದ ಆದ ಹಲ್ಲೆ ಎಂದು ಗಮನಿಸಿ ಆಸ್ಪತ್ರೆ ಸಿಬ್ಬಂದಿ ಪೊಲೀಸರಿಗೆ ವಿಚಾರ ಮುಟ್ಟಿಸಿದ್ದರು.

ಈ ವೇಳೆ ಶ್ವೇತಾ, ಪೊಲೀಸರ ಮುಂದೆ ಯಾರೋ ಕೆಲವರು ಮಾರಕಾಸ್ತ್ರದಿಂದ ಮನೆಗೆ ನುಗ್ಗಿ ಹಲ್ಲೆ ಮಾಡಿದ್ದಾರೆಂದು ಹೇಳಿಕೆ ನೀಡಿದ್ದಳು. ಪತಿಯ ಹತ್ಯೆಯಲ್ಲಿ ಪತ್ನಿಯ ಕೈವಾಡ ಇರುವುದರ ಬಗ್ಗೆ ಪೊಲೀಸರು ತನಿಖೆ ನಡೆಸಿದಾಗ ಲೋಕೇಶ್‌, ಸುರೇಶ್‌ ಕೊಲೆ ಮಾಡಿರುವುದು ಬೆಳಕಿಗೆ ಬಂದಿದೆ. ಸದ್ಯ, ಶ್ವೇತಾ ಹಾಗೂ ಸುರೇಶ್‌ನನ್ನು ಪೊಲೀಸರು ಬಂಧಿಸಿದ್ದು, ಪರಾರಿಯಾಗಿರುವ ಮುಖ್ಯ ಆರೋಪಿ ಲೋಕೇಶ್‌ಗಾಗಿ ತೀವ್ರ ಹುಡುಕಾಟವನ್ನು ಯಲಹಂಕ ಪೊಲೀಸರು ನಡೆಸುತ್ತಿದ್ದಾರೆ.

ಇದನ್ನೂ ಓದಿ | Murder | ಶಿವಮೊಗ್ಗದ ಕೊಲೆ ಆರೋಪಿ ಕಾಲಿಗೆ ಗುಂಡು, ಸ್ಥಳ ಮಹಜರು ವೇಳೆ ಹಲ್ಲೆಗೆ ಯತ್ನಿಸಿದವನಿಗೆ ತಕ್ಕ ಪಾಠ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೈಂ

Police Firing: ಪುರಸಭೆ ಸದಸ್ಯನ ಕೊಲೆ ಮಾಡಿದ್ದ ರೌಡಿ ಕಾಲಿಗೆ ಗುಂಡು ನುಗ್ಗಿಸಿ ಬಂಧಿಸಿದ ಪೊಲೀಸರು

Police Firing: ಆನೇಕಲ್ ತಾಲ್ಲೂಕಿನ ಮೈಸೂರಮ್ಮನ ದೊಡ್ಡಿ ಬಳಿ ಫೈರಿಂಗ್ ನಡೆದಿದೆ. ಆನೇಕಲ್ ಭಾಗದ ಕುಖ್ಯಾತ ರೌಡಿ ಶೀಟರ್ ಆಗಿರುವ ಜೆಕೆ, ಮೈಸೂರಮ್ಮನ ದೊಡ್ಡಿಯಲ್ಲಿ ಅವಿತು ಕುಳಿತಿದ್ದ. ಪೊಲೀಸರು ಖಚಿತ ಮಾಹಿತಿ ಮೇರೆಗೆ ಆರೋಪಿ ಬಂಧನಕ್ಕೆ ತೆರಳಿದ್ದರು.

VISTARANEWS.COM


on

anekal JK police firing
ರೌಡಿಶೀಟರ್‌ ಜೆಕೆ, ಇನ್‌ಸ್ಪೆಕ್ಟರ್‌ ತಿಪ್ಪೇಸ್ವಾಮಿ
Koo

ಆನೇಕಲ್: ಪುರಸಭೆ ಸದಸ್ಯನನ್ನು ಕೊಂದಿದ್ದ ಕುಖ್ಯಾತ ರೌಡಿ ಶೀಟರ್‌ನನ್ನು (Rowdy Sheeter) ಪೊಲೀಸರು ಬಂಧಿಸಿದ್ದಾರೆ. ಬಂಧಿಸಲು ಹೋದಾಗ ಪೊಲೀಸರ ಮೇಲೆ ಹಲ್ಲೆ ನಡೆಸಲು (Assault) ಯತ್ನಿಸಿದ ಈತನ ಕಾಲಿಗೆ ಗುಂಡು ಹಾರಿಸಿ (Police Firing) ಬಂಧಿಸಲಾಗಿದೆ. ರೌಡಿ ಶೀಟರ್ ಕಾರ್ತಿಕ್ ಅಲಿಯಾಸ್ ಜೆಕೆ ಬಂಧಿತ ಕೊಲೆ ಆರೋಪಿ (Murder Culprit).

ಆನೇಕಲ್ ತಾಲ್ಲೂಕಿನ ಮೈಸೂರಮ್ಮನ ದೊಡ್ಡಿ ಬಳಿ ಫೈರಿಂಗ್ ನಡೆದಿದೆ. ಆನೇಕಲ್ ಭಾಗದ ಕುಖ್ಯಾತ ರೌಡಿ ಶೀಟರ್ ಆಗಿರುವ ಜೆಕೆ, ಮೈಸೂರಮ್ಮನ ದೊಡ್ಡಿಯಲ್ಲಿ ಅವಿತು ಕುಳಿತಿದ್ದ. ಪೊಲೀಸರು ಖಚಿತ ಮಾಹಿತಿ ಮೇರೆಗೆ ಆರೋಪಿ ಬಂಧನಕ್ಕೆ ತೆರಳಿದ್ದರು. ಸೆರೆಯಾಗುವಂತೆ ಆದೇಶಿಸಿ ಆನೇಕಲ್ ಇನ್‌ಸ್ಪೆಕ್ಟರ್ ತಿಪ್ಪೇಸ್ವಾಮಿ ಎರಡು ಸುತ್ತು ಗಾಳಿಯಲ್ಲಿ ಗುಂಡು ಹಾರಿಸಿದ್ದಾರೆ. ಆಗ ಜೆಕೆ ಪೊಲೀಸ್ ಸಿಬ್ಬಂದಿ ಸುರೇಶ್ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆಗೆ ಯತ್ನಿಸಿದ್ದಾನೆ. ಇನ್‌ಸ್ಪೆಕ್ಟರ್ ತಿಪ್ಪೇಸ್ವಾಮಿ ಆರೋಪಿ ಕಾಲಿಗೆ ಗುಂಡು ಹಾರಿಸಿ ಸೆರೆಹಿಡಿದಿದ್ದಾರೆ.

ಈತ ಪುರಸಭಾ ಸದಸ್ಯ ಸ್ಕ್ರಾಪ್ ರವಿಯನ್ನು ಬರ್ಬರವಾಗಿ ಹತ್ಯೆ ಮಾಡಿದ್ದ. ಕಳೆದ 24ನೇ ತಾರೀಕು ಬುಧವಾರ ಕೊಲೆ ನಡೆದಿತ್ತು. ಸ್ಕ್ರಾಪ್ ರವಿ ಕಚೇರಿಯಲ್ಲಿದ್ದಾಗ ರೌಡಿ ಶೀಟರ್ ಕಾರ್ತಿಕ್ ಅಲಿಯಾಸ್ ಜೆಕೆ ಗ್ಯಾಂಗ್ ಕಚೇರಿಗೆ ನುಗ್ಗಿ ಕೊಲೆ ಮಾಡಿತ್ತು. ಕಾರ್ತಿಕ್ ಅಲಿಯಾಸ್ ಜೆಕೆ, ಹರೀಶ್ ಅಲಿಯಾಸ್ ಹಂದಿ ಹರೀಶ್, ವಿನಯ್ ಅಲಿಯಾಸ್ ವಿನಿ ಕೊಲೆ ಮಾಡಿ ತಲೆಮರೆಸಿಕೊಂಡಿದ್ದ ಆರೋಪಿಗಳು.

ಆರೋಪಿಗಳ ಬಂಧನಕ್ಕೆ ಪೊಲೀಸರ ಎರಡು ತಂಡ ರಚಿಸಲಾಗಿತ್ತು. ಆನೇಕಲ್ ಉಪವಿಭಾಗದ ಡಿವೈಎಸ್ಪಿ ಮೋಹನ್ ಅವರ ನೇತೃತ್ವದಲ್ಲಿ ಕಾರ್ಯಾಚರಣೆ ನಡೆದಿದ್ದು, ಕೊಲೆ ಆರೋಪಿಗಳ ಪೈಕಿ ಹರೀಶ್ ಮತ್ತು ವಿನಯ್ ಕೋರ್ಟಿಗೆ ಶರಣಾಗಿದ್ದಾರೆ. ಪ್ರಮುಖ ಆರೋಪಿ ರೌಡಿ ಶೀಟರ್ ಜೆಕೆ ಕಾರ್ತಿಕ್ ತಲೆಮರೆಸಿಕೊಂಡಿದ್ದ.

ಮಹಿಳೆ ಮೇಲೆ ಅತ್ಯಾಚಾರ ಎಸಗಿದ ಅರ್ಚಕ ಬಂಧನ

ಬೆಂಗಳೂರು: ಮಹಿಳೆ ಮೇಲೆ ಅತ್ಯಾಚಾರ (Physical abuse) ಆರೋಪದಡಿ ಹಾಸನದ ಪ್ರಸಿದ್ಧ ದೇವಾಲಯದ ಪೂಜಾರಿಯನ್ನು ಪೊಲೀಸರು ಬಂಧಿಸಿದ್ದಾರೆ. ಹಾಸನ ಜಿಲ್ಲೆಯ ಅರಸೀಕೆರೆಯ ಪುರದಮ್ಮ ದೇವಾಲಯದ ಪೂಜಾರಿ ದಯಾನಂದ್ (39) ಬಂಧಿತ ವ್ಯಕ್ತಿ.

ಬಾಗಲುಗುಂಟೆ ಠಾಣೆ ಪೊಲೀಸರಿಂದ ಆರೋಪಿ ಬಂಧನವಾಗಿದೆ. ಕೆಲ ದಿನಗಳ ಹಿಂದೆ ಮಹಿಳೆ ನೀಡಿದ ದೂರಿನನ್ವಯ ಬಾಗಲುಗುಂಟೆ ಠಾಣೆಯಲ್ಲಿ ಆತ್ಯಾಚಾರ ಪ್ರಕರಣ ದಾಖಲಾಗಿತ್ತು. ಈ ಸಂಬಂಧ ಆರೋಪಿ ದಯಾನಂದ್‌ನ ಪೊಲೀಸರು ಬಂಧಿಸಿದ್ದಾರೆ. ದೋಷ ನಿವಾರಣೆಗಾಗಿ ಪೂಜೆ ಮಾಡುತ್ತೇನೆಂದು ಹಣ ಪಡೆದಿದ್ದ ಪೂಜಾರಿ, ಬಳಿಕ ಮಹಿಳೆಯನ್ನು ಕರೆಸಿಕೊಂಡು ಆತ್ಯಾಚಾರ ಮಾಡಿರುವ ಆರೋಪ ಕೇಳಿಬಂದಿದೆ. ಹೀಗಾಗಿ ಪೊಲೀಸರು ಬಂಧಿಸಿದ್ದಾರೆ.

ಆರೋಪಿ ದಯಾನಂದ್ ಅರಸೀಕೆರೆ ಬಳಿಯ ಗೊಲ್ಲರಹಳ್ಳಿ ಕುರುಗುಂದ ಗ್ರಾಮ ಪಂಚಾಯಿತಿಯ ಸದಸ್ಯನಾಗಿದ್ದಾನೆ. ಮಹಿಳೆ ಪುರದಮ್ಮ ದೇವಸ್ಥಾನಕ್ಕೆ ಹೋಗಿದ್ದಾಗ ಪರಿಚಯ ಮಾಡಿಕೊಂಡಿದ್ದ. ಶಾಸ್ತ್ರ ಹೇಳುತ್ತಿದ್ದ ಪೂಜಾರಿ ದಯಾನಂದ್‌ಗೆ ಮದುವೆಯಾಗಿ ಎರಡು ಮಕ್ಕಳಿದ್ದಾರೆ. ಮಹಿಳೆಗೆ ಕಂಟಕವಿದೆ‌ ಹೇಳಿ ಆಗಾಗ ಹಣ ಪಡೆಯುತ್ತಿದ್ದ ಎನ್ನಲಾಗಿದೆ. ಒಂದು‌ ಲಕ್ಷಕ್ಕಿಂತ ಹೆಚ್ಚು ಹಣ ಮಹಿಳೆಯಿಂದ ಪಡೆದಿದ್ದ ಎನ್ನಲಾಗಿದೆ.

ಇದನ್ನೂ ಓದಿ | Brutal Murder: ಎದೆ, ಗುಪ್ತಾಂಗಕ್ಕೆ ಚಾಕು ಇರಿದು ಹತ್ಯೆ; ಬೀದಿಯಲ್ಲಿ ಬಿದ್ದಿದ್ದ ಯುವತಿಯ ಶವವನ್ನುಕಚ್ಚಿ ಎಳೆದಾಡಿದ ಶ್ವಾನಗಳು; ಕರ್ನಾಟಕ ಮೂಲದ ದಾವೂದ್‌ ಎಸ್ಕೇಪ್‌

Continue Reading

ಪ್ರಮುಖ ಸುದ್ದಿ

Wayanad Landslide: ವೈನಾಡ್‌ ಭೂಕುಸಿತದಲ್ಲಿ 13 ಕನ್ನಡಿಗರು ನಾಪತ್ತೆ; ನಾಲ್ವರ ಶವ ಪತ್ತೆ, ಇನ್ನುಳಿದವರಿಗಾಗಿ ಶೋಧ

Wayanad Landslide: ವೈನಾಡಿನಲ್ಲಿ ಕರ್ನಾಟಕ‌ ಮೂಲದ ನಾಪತ್ತೆಯಾದವರಿಗಾಗಿ ಅಧಿಕಾರಿಗಳು ಸ್ಥಳದಲ್ಲೇ ಇದ್ದು ಮಾಹಿತಿ ಸಂಗ್ರಹಿಸುತ್ತಿದ್ದಾರೆ. ಗುಂಡ್ಲುಪೇಟೆ ತಹಸೀಲ್ದಾರ್ ರಮೇಶ್ ಬಾಬು ನೇತೃತ್ವದಲ್ಲಿ ನಾಪತ್ತೆಯಾದವರ ಪತ್ತೆಗಾಗಿ ಶೋಧ ನಡೆದಿದೆ.

VISTARANEWS.COM


on

wayanad lanslide
Koo

ಚಾಮರಾಜನಗರ: ಕೇರಳದ ವಯನಾಡಿನಲ್ಲಿ ನಡೆದ ಭೀಕರ ಭೂಕುಸಿತ (wayanad landslide, kerala landslide) ಪ್ರಕರಣದಲ್ಲಿ ಕರ್ನಾಟಕದ (Karnataka) ಹತ್ತಾರು ಮಂದಿ ಕಣ್ಮರೆ (missing) ಆಗಿದ್ದಾರೆ. ಒಟ್ಟು 13 ಮಂದಿ ನಾಪತ್ತೆಯಾಗಿದ್ದಾರೆ ಎಂಬ ಅಂದಾಜು ಲೆಕ್ಕ ಇದುವರೆಗೆ ಸಿಕ್ಕಿದೆ. ಇವರಲ್ಲಿ ನಾಲ್ಕು ಮಂದಿಯ ಶವ ಸಿಕ್ಕಿದ್ದು, ಇನ್ನುಳಿದವರಿಗಾಗಿ ತೀವ್ರ ಶೋಧ (Rescue operation) ನಡೆಯುತ್ತಿದೆ.

ವೈನಾಡಿನಲ್ಲಿ ಕರ್ನಾಟಕ‌ ಮೂಲದ ನಾಪತ್ತೆಯಾದವರಿಗಾಗಿ ಅಧಿಕಾರಿಗಳು ಸ್ಥಳದಲ್ಲೇ ಇದ್ದು ಮಾಹಿತಿ ಸಂಗ್ರಹಿಸುತ್ತಿದ್ದಾರೆ. ಗುಂಡ್ಲುಪೇಟೆ ತಹಸೀಲ್ದಾರ್ ರಮೇಶ್ ಬಾಬು ನೇತೃತ್ವದಲ್ಲಿ ನಾಪತ್ತೆಯಾದವರ ಪತ್ತೆಗಾಗಿ ಶೋಧ ನಡೆದಿದೆ. ಈವರೆಗೆ ಗೊತ್ತಾಗಿರುವ, ನಾಪತ್ತೆಯಾಗಿರುವ ರಾಜ್ಯದ 10 ಮಂದಿಯ ಹೆಸರುಗಳು ಹೀಗಿವೆ:

ಗುರುಮಲ್ಲನ್(10)
ಸಾವಿತ್ರಿ (54)
ಸಬಿತಾ (43)
ಶಿವಣ್ಣನ್ (50)
ಅಪ್ಪಣ್ಣನ್(39)
ಅಶ್ವಿನ್ (13)
ಜೀತು (11)
ದಿವ್ಯಾ (35)
ರತ್ನಾ(48)

ಈವರೆಗೆ ರಾಜೇಂದ್ರ (50), ರತ್ನಮ್ಮ(45), ಪುಟ್ಟಸಿದ್ದಶೆಟ್ಟಿ (62), ರಾಣಿ (50) ಎಂಬವರ ಶವರಗಳನ್ನು ರಕ್ಷಣಾ ಪಡೆಗಳು ಹೊರತೆಗೆದಿವೆ.

ಚಾಮರಾಜನಗರ ಮೂಲದ ಇಬ್ಬರ ಸಾವು ಧೃಡ

ಮೆಪ್ಪಾಡಿಯಲ್ಲಿ ವಾಸವಿದ್ದ ಚಾಮರಾಜನಗರದ ಪುಟ್ಟ ಸಿದ್ದಿ(62) ಹಾಗು ರಾಣಿ ಎಂಬವರ ತಾಯಿ ಸಾವಿಗೀಡಾಗಿದ್ದಾರೆ. ಚಾಮರಾಜನಗರ ತಾಲೋಕು ಇರಸವಾಡಿ ಮೂಲದ ರಾಜನ್ ಹಾಗು ರಜನಿ ನಾಪತ್ತೆಯಾಗಿದ್ದಾರೆ. ಕಳೆದ ಮೂವತ್ತು ವರ್ಷಗಳಿಂದ ಕೇರಳದ ಚೂರಲ್ಲಾದಲ್ಲಿ ವಾಸವಿದ್ದ ರಾಜನ್ ಹಾಗು ರಜನಿ(55) ವಾಸವಿದ್ದರು. ರಾಜನ್, ರಜನಿಗಾಗಿ ಶೋಧಕಾರ್ಯ ನಡೆದಿದೆ.

ಚಾಮರಾಜನಗರ ಜಿಲ್ಲೆಯ ರಾಜೇಂದ್ರ(50), ರತ್ನಮ್ಮ(45), ಪುಟ್ಟಸಿದ್ದಶೆಟ್ಟಿ(62), ರಾಣಿ(50) ಇವರ ಶವಗಳು ದೊರೆತಿವೆ. ತ್ರಯಂಬಕಪುರದ ಸ್ವಾಮಿಶೆಟ್ಟಿ ಎಂಬವರಿಗೆ ಗಾಯಗಳಾಗಿವೆ. ರಾಜೇಂದ್ರ, ರತ್ನಮ್ಮ ಚಾಮರಾಜನಗರ ತಾಲೂಕಿನ ಇರಸವಾಡಿ ಗ್ರಾಮದವರು. ಇಬ್ಬರ ಶವ ಇನ್ನೂ ಪತ್ತೆಯಾಗಿಲ್ಲ. ವೈನಾಡು ಜಿಲ್ಲೆಯ ಮೆಪ್ಪಾಡಿಯ ವೈತ್ರಿ ತಾಲೂಕು ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆದಿದೆ. ಗುಂಡ್ಲುಪೇಟೆ ತಹಸೀಲ್ದಾರ್ ರಮೇಶ್‌ ಬಾಬು ನೇತೃತ್ವದಲ್ಲಿ ರಕ್ಷಣಾ ಕಾರ್ಯ ನಡೆದಿದ್ದು, ತಹಸೀಲ್ದಾರ್ ನೇತೃತ್ವದ ತಂಡ ಮೃತರ ಕುಟುಂಬಸ್ಥರೊಂದಿಗೆ ಸಂಪರ್ಕದಲ್ಲಿದೆ.

ಮಂಡ್ಯದ ಕುಟುಂಬಕ್ಕೆ ಸಂಕಷ್ಟ

ಮಂಡ್ಯ ಜಿಲ್ಲೆ ಕೆ.ಆರ್.ಪೇಟೆ ತಾಲೂಕಿನ ಕತ್ತರಘಟ್ಟ ಗ್ರಾಮದ ಝಾನ್ಸಿ, ಝಾನ್ಸಿ ಪುತ್ರ ನಿಹಾಲ್, ಅತ್ತೆ ಲೀಲಾವತಿ ನಾಪತ್ತೆಯಾಗಿದ್ದಾರೆ. ಮೈಸೂರಿನ ಸರಗೂರಿನ ಅನಿಲ್ ಕುಮಾರ್ ಎಂಬುವವರಿಗೆ ಝಾನ್ಸಿರಾಣಿಯನ್ನು ಕುಟುಂಬ ಮದುವೆ ಮಾಡಿಕೊಟ್ಟಿತ್ತು. ಕೇರಳದ ಮುಂಡಕೈಯಲ್ಲಿ ಅನಿಲ್, ಪತ್ನಿ ಝಾನ್ಸಿ, ಪುತ್ರ ನಿಹಾಲ್ ಹಾಗೂ ತಂದೆ-ತಾಯಿ ನೆಲೆಸಿದ್ದರು. ಮುಂಡಕೈ ಗುಡ್ಡ ಕುಸಿತದಲ್ಲಿ ಅನಿಲ್ ತಾಯಿ ಲೀಲಾವತಿ(55), ಪುತ್ರ ನಿಹಾಲ್(2.5). ನಾಪತ್ತೆಯಾಗಿದ್ದು, ಮಣ್ಣಿನಡಿ ಸಿಲುಕಿರುವ ಶಂಕೆ ಇದೆ. ಅನಿಲ್ ಹಾಗೂ ಅವರ ಪತ್ನಿ ಝಾನ್ಸಿ, ತಂದೆ ದೇವರಾಜು ಗಂಭೀರವಾಗಿ ಗಾಯಗೊಂಡಿದ್ದಾರೆ. ಮೂವರೂ ಸಾವು-ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾರೆ. ಮೂವರಿಗೆ ಕೇರಳದ ಮಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿದೆ. ಕುಟುಂಬಸ್ಥರನ್ನು ಕಾಣಲು ಝಾನ್ಸಿರಾಣಿ ಕುಟುಂಬಸ್ಥರು ಕೇರಳಕ್ಕೆ ತೆರಳಿದ್ದಾರೆ.

ಹನಿಮೂನ್‌ಗೆ ಬಂದವರು ಹೆಣವಾದರು

ಬೆಂಗಳೂರಿನಿಂದ ಹನಿಮೂನ್‌ಗೆ ಬಂದಿದ್ದ 4 ಪೈಕಿ ಇಬ್ಬರು ನಾಪತ್ತೆಯಾಗಿದ್ದಾರೆ. ಒರಿಸ್ಸಾ ಮೂಲದ ಎರಡು ನವ ಜೋಡಿಗಳು ಬಂದು ತಂಗಿದ್ದ ರೆಸಾರ್ಟ್‌ ಇವರು ಮಲಗಿದ್ದಲ್ಲೇ ಕೊಚ್ಚಿ ಹೋಗಿದೆ. ರೆಸಾರ್ಟ್‌ನಿಂದ 300 ಮೀಟರ್ ದೂರದಲ್ಲಿ ಕಾರಿನಲ್ಲಿ ಮಲಗಿದ್ದ ಹಾವೇರಿ ಮೂಲದ ಡ್ರೈವರ್ ಮಂಜುನಾಥ್ ಪಾರಾಗಿದ್ದಾರೆ. ಇವರು ದುರಂತದಲ್ಲಿ ಬದುಕುಳಿದಿದ್ದೇ ಅಚ್ಚರಿ. ಇಬ್ಬರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವುದಾಗಿ ಮಂಜುನಾಥ್ ಮಾಹಿತಿ ನೀಡಿದ್ದಾರೆ.

ಕಾರಿನಲ್ಲಿ ಮಲಗಿದ್ದಕ್ಕೆ ಪ್ರಾಣ ಉಳಿಯಿತು. ರೆಸಾರ್ಟ್‌ನಲ್ಲಿ ಮಲಗಿದ್ರೆ ನಾನು ಬದುಕುತ್ತಿರಲಿಲ್ಲ. ಎತ್ತರದ ಪ್ರದೇಶದಲ್ಲಿ ಕಾರ್ ನಿಲ್ಲಿಸಿದ್ದರಿಂದ ಬಚಾವ್ ಆಗಿದ್ದೇನೆ. ನನ್ನ ಕಾರು ಕೂಡ ಅಲ್ಲೇ ಇದೆ ಎಂದು ಕೇರಳದ ವಯನಾಡಿನಲ್ಲಿ ಕ್ಯಾಬ್ ಡ್ರೈವರ್ ಮಂಜುನಾಥ್ ಹೇಳಿಕೆ ನೀಡಿದ್ದಾರೆ.

ಜಿಲ್ಲಾಡಳಿತ ಸಹಾಯವಾಣಿ

ಸಂತ್ರಸ್ತರಿಗಾಗಿ ಮೈಸೂರು ಜಿಲ್ಲಾಡಳಿತ ಸಹಾಯವಾಣಿ ತೆರೆದಿದೆ. ಜಿಲ್ಲಾ ವಿಪತ್ತು ನಿರ್ವಹಣಾ ಕೊಠಡಿಗೆ ಮಾಹಿತಿ ನೀಡುವಂತೆ ಮನವಿ ಮಾಡಲಾಗಿದೆ. 0821-2423800 ಅಥವಾ 1077 ದೂರವಾಣಿಗೆ ಕರೆ ಮಾಡುವಂತೆ ಜಿಲ್ಲಾಧಿಕಾರಿ ಲಕ್ಷ್ಮಿಕಾಂತ ರೆಡ್ಡಿ ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: Wayanad Landslide Explainer: ಪ್ರಕೃತಿ ಮೇಲೆ ಮಾನವನ ವಿಕೃತಿ; ವಯನಾಡು ಭೂಕುಸಿತಕ್ಕೆ ಇಲ್ಲಿದೆ ಕಾರಣಗಳ ಪಟ್ಟಿ

Continue Reading

ಮಳೆ

Karnataka Weather : ಭಯಂಕರ ಮಳೆ ಮುನ್ಸೂಚನೆ; ಕರಾವಳಿ, ಮಲೆನಾಡು ಭಾಗಕ್ಕೆ ರೆಡ್‌ ಅಲರ್ಟ್‌

Karnataka Weather Forecast: ಕರಾವಳಿ-ಮಲೆನಾಡು ಭಾಗದಲ್ಲಿ ಭರ್ಜರಿ (Rain News) ಮಳೆಯಾಗಲಿದ್ದು, 9 ಜಿಲ್ಲೆಗಳಿಗೆ ರೆಡ್‌ ಅಲರ್ಟ್‌ (Red Alert) ಘೋಷಣೆ ಮಾಡಲಾಗಿದೆ.

VISTARANEWS.COM


on

By

karnataka weather Forecast
ಸಾಂದರ್ಭಿಕ ಚಿತ್ರ
Koo

ಬೆಂಗಳೂರು: ರಾಜ್ಯದ ಹಲವೆಡೆ (Karnataka Weather Forecast) ವ್ಯಾಪಕ ಮಳೆಯಾಗುತ್ತಿದ್ದು, ಜನರ ನಿದ್ದೆಗೆಡಿಸಿದೆ. ಈ ದಿನ ಕರ್ನಾಟಕದ ಕರಾವಳಿಯಲ್ಲಿ ಸಾಧಾರಣದಿಂದ ಅತಿ ಹೆಚ್ಚು ಮಳೆಯಾಗುವ (Heavy Rain) ಸಾಧ್ಯತೆಯಿದೆ. ಮಲೆನಾಡು ಸುತ್ತಮುತ್ತ ಚದುರಿದಂತೆ ಭಾರಿ ಮಳೆಯಾಗುವ ನಿರೀಕ್ಷೆಯಿದೆ. ದಕ್ಷಿಣ ಒಳನಾಡಿನಲ್ಲಿ ಮಧ್ಯಮ ಮಳೆಯಾದರೆ, ಉತ್ತರ ಒಳನಾಡಿನಲ್ಲಿ ಚದುರಿದಂತೆ ಹಗುರದಿಂದ ಕೂಡಿದ ಮಳೆಯಾಗುವ ಸಾಧ್ಯತೆ ಇದೆ.

ಮೈಸೂರು, ಚಿಕ್ಕಬಳ್ಳಾಪುರ ಭಾರಿ ಮಳೆ

ದಕ್ಷಿಣಒಳನಾಡಿ ಜಿಲ್ಲೆಗಳಲ್ಲಿ ಚದುರಿದಂತೆ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಮೈಸೂರು ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಪ್ರತ್ಯೇಕವಾಗಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಉಳಿದಂತೆ ತುಮಕೂರು, ರಾಮನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಬಳ್ಳಾರಿ, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು ಸೇರಿದಂತೆ ವಿಜಯನಗರದಲ್ಲಿ ಸಣ್ಣ ಪ್ರಮಾಣದಲ್ಲಿ ಮಳೆಯಾಗಲಿದೆ.

ಇದನ್ನೂ ಓದಿ: Karnataka rain : ಭದ್ರಾ ನದಿಯಲ್ಲಿ ಕೊಚ್ಚಿ ಹೋದ ಹಸು; ಬೈಂದೂರಿನಲ್ಲಿ ಬೃಹತ್ ಗಾತ್ರದ ಮೊಸಳೆ ಪ್ರತ್ಯಕ್ಷ

ಬೆಳಗಾವಿಯಲ್ಲಿ ಮಧ್ಯಮ ಮಳೆ

ಉತ್ತರ ಒಳನಾಡಿನಲ್ಲಿ ಚದುರಿದಂತೆ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಬೆಳಗಾವಿ ಜಿಲ್ಲೆಯಲ್ಲಿ ಪ್ರತ್ಯೇಕವಾಗಿ ಮಧ್ಯಮದಿಂದ ಭಾರಿ ಮಳೆಯಾಗಲಿದೆ. ಬೀದರ್, ಕಲಬುರಗಿ, ಧಾರವಾಡ ಮತ್ತು ಹಾವೇರಿ, ವಿಜಯಪುರ, ಗದಗ, ಕೊಪ್ಪಳ, ರಾಯಚೂರು, ಯಾದಗಿರಿ, ಬಾಗಲಕೋಟೆಯಲ್ಲಿ ಮಧ್ಯಮ ಮಳೆಯಾಗಲಿದೆ.

ಮಲೆನಾಡಿನ ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಕೊಡಗಿನ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿಯಲ್ಲಿ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ಸಾಧಾರಣದಿಂದ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ.

ಬೆಂಗಳೂರಿನಲ್ಲೂ ಹಗುರ ಮಳೆ

ಬೆಂಗಳೂರು ಸುತ್ತಮುತ್ತ ವ್ಯಾಪಕವಾಗಿ ಹಗುರದಿಂದ ಕೂಡಿದ ಮಳೆಯಾಗುವ ಸಾಧ್ಯತೆಯಿದೆ. ಕೆಲವೊಮ್ಮೆ ಮೋಡ ಕವಿದ ವಾತಾವರಣ ಇರಲಿದೆ. ಗರಿಷ್ಠ ಉಷ್ಣಾಂಶ 28 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 21 ಡಿಗ್ರಿ ಸೆಲ್ಸಿಯಸ್ ಇರಲಿದೆ.

ಈ ಜಿಲ್ಲೆಗಳಲ್ಲಿ ವಿಪರೀತ ಮಳೆ

ಗುಡುಗು ಸಹಿತ ಭಾರಿ ಮಳೆಯಾಗಲಿದ್ದು, ಗಾಳಿ ವೇಗವು 30-40 ಕಿ.ಮೀ ಬೀಸಲಿದೆ. ಹೀಗಾಗಿ ದಕ್ಷಿಣ ಕನ್ನಡ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಉಡುಪಿ ಮತ್ತು ಹಾಸನ ಜಿಲ್ಲೆಗೆ ಆರೆಂಜ್ ಅಲರ್ಟ್ ನೀಡಲಾಗಿದೆ. ಉತ್ತರ ಕನ್ನಡ, ಬೆಳಗಾವಿ, ಮೈಸೂರು ಜಿಲ್ಲೆಗಳಲ್ಲಿ ವ್ಯಾಪಕ ಮಳೆಯೊಂದಿಗೆ ಗಾಳಿಯು 40-50 ಕಿ.ಮೀ ಇರಲಿದೆ. ಹೀಗಾಗಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕರ್ನಾಟಕ

CM Siddaramaiah: ಸರ್ಕಾರವನ್ನು ಅಸ್ಥಿರಗೊಳಿಸುವ ಬಿಜೆಪಿ ಪ್ರಯತ್ನ ಫೇಲ್; ಖರ್ಗೆ ಭೇಟಿ ಬಳಿಕ ಸಿದ್ದರಾಮಯ್ಯ ಹೇಳಿಕೆ

CM Siddaramaiah: ಕರ್ನಾಟಕದಲ್ಲಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರವನ್ನು ಹಗರಣಗಳನ್ನು ಉಲ್ಲೇಖಿಸಿ ಬಿಜೆಪಿ ಹಾಗೂ ಜೆಡಿಎಸ್‌ ಇಕ್ಕಟ್ಟಿಗೆ ಸಿಲುಕಿಸಿವೆ. ಇದರ ಬೆನ್ನಲ್ಲೇ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೈಕಮಾಂಡ್‌ ನಾಯಕರನ್ನು ಭೇಟಿಯಾಗಿ ಪ್ರಕರಣಗಳ ಕುರಿತು ವಿವರ ನೀಡಿದ್ದಾರೆ.

VISTARANEWS.COM


on

CM Siddaramaiah
Koo

ನವದೆಹಲಿ/ಬೆಂಗಳೂರು: ಕರ್ನಾಟಕದಲ್ಲಿ ವಾಲ್ಮೀಕಿ ಮಹರ್ಷಿ ಅಭಿವೃದ್ಧಿ ನಿಗಮ, ಮುಡಾ ಹಗರಣಗಳನ್ನು (MUDA Scam) ಇಟ್ಟುಕೊಂಡು ರಾಜ್ಯ ಸರ್ಕಾರವನ್ನು (Karnataka Government) ಬಿಜೆಪಿ ಹಾಗೂ ಜೆಡಿಎಸ್‌ ಇಕ್ಕಟ್ಟಿಗೆ ಸಿಲುಕಿಸಿವೆ. ಇದರ ಬೆನ್ನಲ್ಲೇ, ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರು ದೆಹಲಿಗೆ ತೆರಳಿ, ಪಕ್ಷದ ಹೈಕಮಾಂಡ್‌ ನಾಯಕರನ್ನು ಭೇಟಿಯಾಗಿದ್ದಾರೆ. ಇದಾದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, “ಕರ್ನಾಟಕದಲ್ಲಿ ರಾಜ್ಯ ಸರ್ಕಾರವನ್ನು ಅಸ್ಥಿರಗೊಳಿಸುವ ಬಿಜೆಪಿಯ ಪ್ರಯತ್ನವು ಫಲ ನೀಡುವುದಿಲ್ಲ” ಎಂದು ಹೇಳಿದರು.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನಿವಾಸದಲ್ಲಿ ಮಲ್ಲಿಕಾರ್ಜುನ ಖರ್ಗೆ, ಪ್ರತಿಪಕ್ಷ ನಾಯಕ ರಾಹುಲ್‌ ಗಾಂಧಿ ಸೇರಿ ಹಲವು ನಾಯಕರನ್ನು ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್‌ ಭೇಟಿಯಾದರು. ಇದಾದ ಬಳಿಕ ಸಿದ್ದರಾಮಯ್ಯ ಅವರು ಮಾಧ್ಯಮಗಳೊಂದಿಗೆ ಮಾತನಾಡಿದರು. “ವಾಲ್ಮೀಕಿ ಹಗರಣದಲ್ಲಿ ಸರ್ಕಾರದ ಪಾತ್ರ ಇಲ್ಲ. ಹಣಕಾಸು ಇಲಾಖೆಯ ಪಾತ್ರ ಕೂಡ ಇಲ್ಲ . ಮುಡಾ ವಿಚಾರದಲ್ಲೂ ಕಾನೂನುಬಾಹಿರವಾಗಿ ಏನೂ ನಡೆದಿಲ್ಲ. ಎಲ್ಲವೂ ಕಾನೂನುಬದ್ದವಾಗಿ, ನಿಯಮಗಳ ಪ್ರಕಾರವೇ ನಡೆದಿದೆ ಎನ್ನುವುದನ್ನು ಪಕ್ಷದ ವರಿಷ್ಠರಿಗೆ ಮನವರಿಕೆ ಮಾಡಿಸಿದ್ದೇವೆ” ಎಂದು ತಿಳಿಸಿದರು.

“ಪರಿಶಿಷ್ಟ ಪಂಗಡಕ್ಕೆ ಸೇರಿದ ಹಣ ದುರುಪಯೋಗ ಆಗಿಲ್ಲ. ವಾಲ್ಮೀಕಿ ಹಗರಣದಲ್ಲಿ ಇದುವರೆಗೆ ಹಣ ವಶಪಡಿಸಿಕೊಳ್ಳಲಾಗುತ್ತಿದೆ. ಪ್ರಕರಣದ ತನಿಖೆ ನಡೆಯುತ್ತಿದೆ ಎನ್ನುವುದನ್ನೂ ಅರ್ಥ ಮಾಡಿಸಿದ್ದೇವೆ. ಬಿಜೆಪಿಯ ಸೇಡಿನ ಮತ್ತು ಅಸೂಯೆಯ ರಾಜಕಾರಣ ಹೈಕಮಾಂಡ್ ಅವರಿಗೂ ಮನವರಿಕೆಯಾಗಿದೆ. ಬಿಜೆಪಿಯ ಪಾದಯಾತ್ರೆಗೆ ಪ್ರತಿಯಾಗಿ ಏನು ಮಾಡಬೇಕು ಎನ್ನುವುದನ್ನು ಬೆಂಗಳೂರಿಗೆ ತೆರಳಿದ ಬಳಿಕ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಜತೆ ಚರ್ಚಿಸಿ ತೀರ್ಮಾನ ತೆಗೆದುಕೊಳ್ಳುತ್ತೇವೆ” ಎಂದು ಹೇಳಿದರು.

“ಕೇಂದ್ರ ಬಜೆಟ್‌ನಲ್ಲಿ ರಾಜ್ಯಕ್ಕೆ ಅನ್ಯಾಯವಾಗಿದೆ. ಬಜೆಟ್ ಪೂರ್ವ ಸಭೆಯಲ್ಲಿ ರಾಜ್ಯದಿಂದ ಇಟ್ಟಿದ್ದ ಯಾವ ಬೇಡಿಕೆಗಳನ್ನೂ ಈಡೇರಿಸಲಾಗಿಲ್ಲ. ಹೀಗಾಗಿ ನಿರ್ಮಲಾ ಸೀತಾರಾಮನ್ ಅವರು ರಾಜ್ಯಕ್ಕೆ ಅನ್ಯಾಯ ಮಾಡಿದ್ದಾರೆ ಎನ್ನುವ ಕುರಿತೂ ಸಭೆಯಲ್ಲಿ ಚರ್ಚಿಸಲಾಯಿತು. ಇನ್ನು, ರಾಜ್ಯ ಸರ್ಕಾರವನ್ನು ಅಸ್ಥಿರಗೊಳಿಸುವುದು ಬಿಜೆಪಿಯ ಹುನ್ನಾರ. ಆದರೆ ಇದರಲ್ಲಿ ಅವರಿಗೆ ಯಶಸ್ಸು ಸಿಗುವುದಿಲ್ಲ” ಎಂದು ಸಿದ್ದರಾಮಯ್ಯ ಸ್ಪಷ್ಟವಾಗಿ ಹೇಳಿದರು.

ಇದನ್ನೂ ಓದಿ: Wayanad Landslide: ಕೇರಳದಲ್ಲಿ ರಕ್ಷಣೆ, ಪರಿಹಾರ ಕಾರ್ಯಾಚರಣೆಗೆ ಇಬ್ಬರು IAS ಅಧಿಕಾರಿಗಳನ್ನು ನಿಯೋಜಿಸಿದ ಸಿಎಂ ಸಿದ್ದರಾಮಯ್ಯ

Continue Reading
Advertisement
anekal JK police firing
ಕ್ರೈಂ14 mins ago

Police Firing: ಪುರಸಭೆ ಸದಸ್ಯನ ಕೊಲೆ ಮಾಡಿದ್ದ ರೌಡಿ ಕಾಲಿಗೆ ಗುಂಡು ನುಗ್ಗಿಸಿ ಬಂಧಿಸಿದ ಪೊಲೀಸರು

wayanad lanslide
ಪ್ರಮುಖ ಸುದ್ದಿ41 mins ago

Wayanad Landslide: ವೈನಾಡ್‌ ಭೂಕುಸಿತದಲ್ಲಿ 13 ಕನ್ನಡಿಗರು ನಾಪತ್ತೆ; ನಾಲ್ವರ ಶವ ಪತ್ತೆ, ಇನ್ನುಳಿದವರಿಗಾಗಿ ಶೋಧ

Tips for Monsoon
ಲೈಫ್‌ಸ್ಟೈಲ್50 mins ago

Tips for Monsoon: ಮಳೆಗಾಲದಲ್ಲಿ ಬಟ್ಟೆಗಳನ್ನು ಗರಿಗರಿಯಾಗಿ ಇರಿಸುವುದು ಹೇಗೆ?

Ear Infections during Monsoon
ಆರೋಗ್ಯ2 hours ago

Ear Infections During Monsoon: ಮಳೆಗಾಲದಲ್ಲಿ ಕಾಡುವ ಕಿವಿನೋವಿನಿಂದ ಮುಕ್ತರಾಗಲು ಸರಳ ಉಪಾಯ ಇಲ್ಲಿದೆ

karnataka weather Forecast
ಮಳೆ2 hours ago

Karnataka Weather : ಭಯಂಕರ ಮಳೆ ಮುನ್ಸೂಚನೆ; ಕರಾವಳಿ, ಮಲೆನಾಡು ಭಾಗಕ್ಕೆ ರೆಡ್‌ ಅಲರ್ಟ್‌

Paris Olympics 2024
ಪ್ರಮುಖ ಸುದ್ದಿ2 hours ago

Paris Olympics 2024: ಪ್ಯಾರಿಸ್​ ಒಲಿಂಪಿಕ್ಸ್​; ಇಂದು ಭಾರತೀಯ ಸ್ಪರ್ಧಿಗಳ ವೇಳಾಪಟ್ಟಿ ಹೀಗಿದೆ

Dina Bhavishya
ಭವಿಷ್ಯ3 hours ago

Dina Bhavishya : ಈ ರಾಶಿಯ ಪ್ರೇಮಿಗಳಿಗೆ ಸಿಗಲಿದೆ ಶುಭ ಸೂಚನೆ

IND vs SL
ಪ್ರಮುಖ ಸುದ್ದಿ8 hours ago

IND vs SL : ಲಂಕಾ ವಿರುದ್ಧದ 3ನೇ ಟಿ20 ಪಂದ್ಯದಲ್ಲೂ ಭಾರತಕ್ಕೆ ಜಯ, ಸರಣಿ ಕ್ಲೀನ್ ಸ್ವೀಪ್ ಮಾಡಿದ ಸೂರ್ಯಕುಮಾರ್ ಪಡೆ

CM Siddaramaiah
ಕರ್ನಾಟಕ8 hours ago

CM Siddaramaiah: ಸರ್ಕಾರವನ್ನು ಅಸ್ಥಿರಗೊಳಿಸುವ ಬಿಜೆಪಿ ಪ್ರಯತ್ನ ಫೇಲ್; ಖರ್ಗೆ ಭೇಟಿ ಬಳಿಕ ಸಿದ್ದರಾಮಯ್ಯ ಹೇಳಿಕೆ

Rashid Khan
ಪ್ರಮುಖ ಸುದ್ದಿ8 hours ago

Rashid Khan : ಟಿ20 ಕ್ರಿಕೆಟ್​ನಲ್ಲಿ ವಿಕೆಟ್​ಗಳ ಹೊಸ ಮೈಲುಗಲ್ಲು ಸೃಷ್ಟಿಸಿದ ಅಫಘಾನಿಸ್ತಾನ ಬೌಲರ್ ರಶೀದ್ ಖಾನ್​

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Rain
ಮಳೆ14 hours ago

Karnataka rain : ಭದ್ರಾ ನದಿಯಲ್ಲಿ ಕೊಚ್ಚಿ ಹೋದ ಹಸು; ಬೈಂದೂರಿನಲ್ಲಿ ಬೃಹತ್ ಗಾತ್ರದ ಮೊಸಳೆ ಪ್ರತ್ಯಕ್ಷ

Karnataka Rain
ಮಳೆ18 hours ago

Karnataka Rain : ಭಾರಿ ಮಳೆಗೆ ಬಾಳೆಹೊನ್ನೂರು ಮುಳುಗಡೆ; ನೆರೆಗೆ ಬೋಟ್‌ ಮೊರೆ ಹೋದ ಜನರು

Bharachukki falls
ಚಾಮರಾಜನಗರ19 hours ago

Bharachukki Falls : ಭರಚುಕ್ಕಿ ಜಲಪಾತಕ್ಕೆ ಕಳ್ಳ ಮಾರ್ಗದಿಂದ ಹೋದೋರಿಗೆ ಬಸ್ಕಿ ಹೊಡೆಸಿದ ಪೊಲೀಸರು!

karnataka Rain
ಮಳೆ2 days ago

Karnataka Rain: ಮತ್ತೆ ಶುರು ಮಳೆ ಅಬ್ಬರ; ಗಾಳಿಗೆ ಹಾರಿ ಹೋದ ಮನೆಗಳ ಚಾವಣಿ, ಶಿರಾಡಿಘಾಟ್‌ನಲ್ಲಿ ಮತ್ತೆ ಭೂ ಕುಸಿತ

Elephant combing Makna elephant captured near Bannerghatta
ಬೆಂಗಳೂರು ಗ್ರಾಮಾಂತರ2 days ago

Elephant combing: ಭೀಮ, ಮಹೇಂದ್ರರ ಮುಂದೆ ಮಂಡಿಯೂರಿದ ಮಕ್ನಾ ಆನೆ; ಹೇಗಿತ್ತು ಗೊತ್ತಾ ಕಾರ್ಯಾಚರಣೆ

karnataka rain
ಮಳೆ2 days ago

Karnataka rain: ಪ್ರವಾಹದ ಭೀಕರತೆ; ಹಳ್ಳದಲ್ಲಿ ತೇಲಿಬಂದ ಎಮ್ಮೆಗಳ ಕಳೇಬರ

Tungabhadra Dam
ಕೊಪ್ಪಳ3 days ago

Tungabhadra Dam: ಕಾಲುವೆಯಲ್ಲಿ ಬಾಲಕರ ಈಜಾಟ; ಅಧಿಕಾರಿಗಳಿಗೆ ಪೀಕಲಾಟ!

Elephant attack
ಮಳೆ3 days ago

Elephant attack : ಮಳೆ ಮಧ್ಯೆ ಮಲೆನಾಡಿನಲ್ಲಿ ಕಾಡಾನೆಗಳ ಕಾಟ; ಪ್ರವಾಹಕ್ಕೆ ಸಿಲುಕಿದ ಪಟಗುಂದಿ ಗ್ರಾಮ

karnataka Rain
ಮಳೆ3 days ago

Karnataka Rain : ಮಳೆ ನಿಂತರೂ ಕಡಿಮೆಯಾಗದ ಅನಾಹುತ; ಮಾದಪುರ ಟೌನ್ ಸಮೀಪ ಗುಡ್ಡ ಕುಸಿತ

karnataka Rain
ಮಳೆ3 days ago

Karnataka Rain : ರಭಸವಾಗಿ ಬೀಸಿದ ಗಾಳಿಗೆ ಮನೆ ಮೇಲೆ ಬಿದ್ದ ತೆಂಗಿನ ಮರ; ನದಿ ನೀರು ಸೇವಿಸದಂತೆ ಸೂಚನೆ

ಟ್ರೆಂಡಿಂಗ್‌