T20 World Cup | ನ್ಯೂಜಿಲೆಂಡ್​- ಅಫಘಾನಿಸ್ತಾನ ಪಂದ್ಯ ಮಳೆಯಿಂದ ರದ್ದು, ಉಭಯ ತಂಡಕ್ಕೂ ಅಂಕ ಹಂಚಿಕೆ - Vistara News

T20 ವಿಶ್ವಕಪ್

T20 World Cup | ನ್ಯೂಜಿಲೆಂಡ್​- ಅಫಘಾನಿಸ್ತಾನ ಪಂದ್ಯ ಮಳೆಯಿಂದ ರದ್ದು, ಉಭಯ ತಂಡಕ್ಕೂ ಅಂಕ ಹಂಚಿಕೆ

ಎಂಸಿಜಿಯಲ್ಲಿ ನಡೆಯಬೇಕಿದ್ದ ಅಫಘಾನಿಸ್ತಾನ ಮತ್ತು ನ್ಯೂಜಿಲೆಂಡ್ ತಂಡಗಳ ನಡುವಿನ ಟಿ20 ವಿಶ್ವ ಕಪ್ ಸೂಪರ್ 12 ಪಂದ್ಯ ಒಂದೂ ಎಸೆತ ಕಾಣದೆ ರದ್ದುಗೊಂಡಿದೆ.

VISTARANEWS.COM


on

t20
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮೆಲ್ಬೋರ್ನ್​: ಎಂಸಿಜಿ ಕ್ರಿಕೆಟ್ ಮೈದಾನದಲ್ಲಿ ನಡೆಯಬೇಕಿದ್ದ ಅಫಘಾನಿಸ್ತಾನ ಮತ್ತು ನ್ಯೂಜಿಲೆಂಡ್ ತಂಡಗಳ ನಡುವಿನ ಬುಧವಾರದ ಐಸಿಸಿ ಟಿ20 ವಿಶ್ವ ಕಪ್ ಸೂಪರ್ 12 ಪಂದ್ಯವು ಒಂದೂ ಎಸೆತ ಕಾಣದೆ ರದ್ದುಗೊಂಡಿದೆ. ಇನ್ನೇನು ಟಾಸ್ ಆಗಬಹುದು ಎನ್ನುವಷ್ಟರಲ್ಲಿ ಮತ್ತೆ ಕಾಡಿದ ಮಳೆಯಿಂದ ಪಂದ್ಯವನ್ನು ರದ್ದುಗೊಳಿಸಿ ಇತ್ತಂಡಕ್ಕೂ ತಲಾ ಒಂದು ಅಂಕ ನೀಡಲಾಯಿತು.

ವಿಶ್ವ ಕಪ್​ನ ಸೂಪರ್ 12 ಪಂದ್ಯದ ಮೊದಲ ಪಂದ್ಯದಲ್ಲಿ ಆತಿಥೇಯ ಆಸ್ಟ್ರೇಲಿಯಾ ತಂಡವನ್ನು 89 ರನ್‌ಗಳಿಂದ ಸೋಲಿಸಿರುವ ನ್ಯೂಜಿಲೆಂಡ್ ತಂಡ ಈ ಪಂದ್ಯದಲ್ಲಿಯೂ ಮೇಲುಗೈ ಸಾಧಿಸಿ ಗೆಲುವಿನ ಓಟ ಮುಂದುವರಿಸುವ ಲೆಕ್ಕಾಚಾರದಲ್ಲಿತ್ತು. ಆದರೆ ಮಳೆಯ ಕಾಟದಿಂದಾಗಿ 1 ಅಂಕಕ್ಕೆ ತೃಪ್ತಿ ಪಡುವಂತಾಯಿತು. ಮತ್ತೊಂದೆಡೆ ಶ್ರೀಲಂಕಾ ವಿರುದ್ಧ ಮೊದಲ ಪಂದ್ಯವನ್ನ ಸೋತಿದ್ದ ಅಫಘಾನಿಸ್ತಾನ ತಂಡ ಗೆಲುವಿನ ಖಾತೆ ತೆರೆಯುವ ಯೋಜನೆಯೂ ಮಳೆಗೆ ಕೊಚ್ಚಿ ಹೋಯಿತು. ದಿನದ ಮೊದಲ ಪಂದ್ಯಕ್ಕೂ ಮಳೆ ಅಡ್ಡಿ ಪಡಿಸಿದ ಪರಿಣಾಮ ಇಂಗ್ಲೆಂಡ್​ ತಂಡದ ವಿರುದ್ಧ ಐರ್ಲೆಂಡ್​ ತಂಡ ಡಕ್​ ವರ್ತ್​ ಲೂಯಿಸ್​ ನಿಯಮದನ್ವಯ 5 ರನ್​ ಅಂತರದ ಗೆಲುವು ಸಾಧಿಸಿತು.

ಇದನ್ನೂ ಓದಿ | T20 World Cup | ಮಳೆ ಪಂದ್ಯದಲ್ಲಿ ಮೇಲುಗೈ ಸಾಧಿಸಿದ ಐರ್ಲೆಂಡ್​; ಇಂಗ್ಲೆಂಡ್ ವಿರುದ್ಧ 5 ರನ್ ಜಯ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

BAN vs NEP: ಸ್ವಿಮ್ಮಿಂಗ್ ಪೂಲ್​ಗೆ ಜಿಗಿದು ಸಂಭ್ರಮಿಸಿದ ನೇಪಾಳ ಅಭಿಮಾನಿ; ವಿಡಿಯೊ ವೈರಲ್​

BAN vs NEP: ನೇಪಾಳ ತಂಡದ ಬೌಲಿಂಗ್​ ಇನಿಂಗ್ಸ್​ನ 5ನೇ ಓವರ್​ ನಾಯಕ ರೋಹಿತ್ ಪೌಡೆಲ್ ಎಸೆದರು. ಈ ಓವರ್​ನ 4ನೇ ಎಸೆತಕ್ಕೆ ಬಾಂಗ್ಲಾದೇಶದ ಬ್ಯಾಟರ್​ ತೌಹಿದ್ ಹೃದಯೋಯ್ ಸಿಕ್ಸರ್​ ಬಾರಿಸುವ ಯತ್ನದಲ್ಲಿ ಸಂದೀಪ್ ಲಮಿಚಾನೆಗೆ ಕ್ಯಾಚ್​ ನೀಡಿ ವಿಕೆಟ್​ ಕಳೆದುಕೊಂಡರು. ಈ ವೇಳೆ ಪ್ರೇಕ್ಷಕರ ಗ್ಯಾಲರಿಯಲ್ಲಿದ್ದ ನೇಪಾಳದ ಅಭಿಮಾನಿಯೊಬ್ಬ ಸಂತಸದಲ್ಲಿ ಸ್ಟೇಡಿಯಂನ ಮುಂದೆ ಇದ್ದ ಸ್ವಿಮ್ಮಿಂಗ್ ಪೂಲ್​ಗೆ ಜಿಗಿದ್ದಾನೆ.

VISTARANEWS.COM


on

BAN vs NEP
Koo

ಕಿಂಗ್‌ಸ್ಟನ್‌: ಸೋಮವಾರ ನಡೆದ ಟಿ20 ವಿಶ್ವಕಪ್​ನ(T20 World Cup 2024) ಲೀಗ್​ ಪಂದ್ಯದಲ್ಲಿ ನೇಪಾಳ(BAN vs NEP) ತಂಡ ಬಾಂಗ್ಲಾದೇಶ ವಿರುದ್ಧ ಸೋಲು ಕಂಡರೂ ಕೂಡ ಅಭಿಮಾನಿಯೊಬ್ಬ ನೇಪಾಳ ತಂಡಕ್ಕೆ ಬೆಂಬಲ ಸೂಚಿಸಿದ ರೀತಿ ಎಲ್ಲರ ಗಮನಸೆಳೆದಿದೆ. ಬಾಂಗ್ಲಾದೇಶದ ವಿಕೆಟ್​ ಪತನಗೊಂಡ ವೇಳೆ ಈ ಅಭಿಮಾನಿ ಸ್ಟೇಡಿಯಂನಲ್ಲಿದ್ದ ಸ್ವಿಮ್ಮಿಂಗ್ ಪೂಲ್​ಗೆ(Nepal Fan Jumps in Swimming Pool) ಜಿಗಿದು ಸಂಭ್ರಮಿಸಿದ್ದಾನೆ. ಈ ವಿಡಿಯೊವನ್ನು ಐಸಿಸಿ ತನ್ನ ಇನ್​ಸ್ಟಾಗ್ರಾಮ್​ ಖಾತೆಯಲ್ಲಿ ಹಂಚಿಕೊಂಡಿದೆ. ವಿಡಿಯೊ ಎಲ್ಲೆಡೆ ವೈರಲ್​ ಆಗಿದೆ.

ನೇಪಾಳ ತಂಡದ ಬೌಲಿಂಗ್​ ಇನಿಂಗ್ಸ್​ನ 5ನೇ ಓವರ್​ ನಾಯಕ ರೋಹಿತ್ ಪೌಡೆಲ್ ಎಸೆದರು. ಈ ಓವರ್​ನ 4ನೇ ಎಸೆತಕ್ಕೆ ಬಾಂಗ್ಲಾದೇಶದ ಬ್ಯಾಟರ್​ ತೌಹಿದ್ ಹೃದಯೋಯ್ ಸಿಕ್ಸರ್​ ಬಾರಿಸುವ ಯತ್ನದಲ್ಲಿ ಸಂದೀಪ್ ಲಮಿಚಾನೆಗೆ ಕ್ಯಾಚ್​ ನೀಡಿ ವಿಕೆಟ್​ ಕಳೆದುಕೊಂಡರು. ಈ ವೇಳೆ ಪ್ರೇಕ್ಷಕರ ಗ್ಯಾಲರಿಯಲ್ಲಿದ್ದ ನೇಪಾಳದ ಅಭಿಮಾನಿಯೊಬ್ಬ ಸಂತಸದಲ್ಲಿ ಸ್ಟೇಡಿಯಂನ ಮುಂದೆ ಇದ್ದ ಸ್ವಿಮ್ಮಿಂಗ್ ಪೂಲ್​ಗೆ ಜಿಗಿದ್ದಾನೆ. ಈ ವಿಡಿಯೊವನ್ನು ಐಸಿಸಿ ಇನ್​ಸ್ಟಾಗ್ರಾಮ್​ನಲ್ಲಿ ಹಂಚಿಕೊಳ್ಳುವುದರ ಜತೆಗೆ ಈ ದೃಶ್ಯಕ್ಕೆ ಉತ್ತಮ ಎಸೆತ, ಉತ್ತಮ ಕ್ಯಾಚ್, ಉತ್ತಮ ಪೂಲ್ ಆಚರಣೆ ಎಂದು ಇನ ಬರೆದುಕೊಂಡಿದೆ.


ಇಲ್ಲಿನ ಸೇಂಟ್ ವಿನ್ಸೆಂಟ್ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್​ ನಡೆಸಿದ ಬಾಂಗ್ಲಾದೇಶ 19.3 ಓವರ್​ಗಳಲ್ಲಿ ಕೇವಲ 106 ರನ್​ಗೆ ಕುಸಿತ ಕಂಡಿತು. ಈ ಮೊತ್ತವನ್ನು ನೋಡುವಾಗ ಬಾಂಗ್ಲಾ ಸೋಲು ಕಾಣಬಹುದೆಂದು ಊಹಿಸಲಾಯಿತು. ಆದರೆ, ಬಾಂಗ್ಲಾ ಬೌಲರ್​ಗಳು ಉತ್ಕೃಷ್ಟ ಮಟ್ಟದ ಬೌಲಿಂಗ್​ ದಾಳಿ ನಡೆಸಿ ನೇಪಾಳವನ್ನು 85 ರನ್​ಗೆ ಕಟ್ಟಿಹಾಕಿ ಅಮೋಘ ಗೆಲುವು ಸಾಧಿಸಿದರು. ಈ ಗೆಲುವಿನೊಂದಿಗೆ ಬಾಂಗ್ಲಾ ಸೂಪರ್​-8 ಹಂತಕ್ಕೂ ಪ್ರವೇಶ ಪಡೆಯಿತು. ಭಾರತ, ಆಸ್ಟ್ರೇಲಿಯಾ, ಅಫಘಾನಿಸ್ತಾನ ತಂಡದ ಜತೆ ‘ಎ’ ಗುಂಪಿನಲ್ಲಿ ಸ್ಥಾನ ಪಡೆದಿದೆ.

ಇದನ್ನೂ ಓದಿ T20 World Cup 2024: ಸೂಪರ್​-8 ಹಂತದ ವೇಳಾಪಟ್ಟಿ ಪ್ರಕಟ; 8 ತಂಡಗಳ ಮಾಹಿತಿ ಹೀಗಿದೆ

ಸಣ್ಣ ಮೊತ್ತವನ್ನು ಚೇಸಿಂಗ್​ ನಡೆಸಿದ ನೇಪಾಳ ಆರಂಭಿಕ ಆಘಾತ ಎದುರಿಸಿದರೂ ಕೂಡ ಮಧ್ಯಮ ಕ್ರಮಾಂಕದಲ್ಲಿ ಕುಶಾಲ್ ಮಲ್ಲ ಮತ್ತು ದೀಪೇಂದ್ರ ಸಿಂಗ್ ಐರಿ ಉತ್ತಮ ಜತೆಯಾಟವೊಂದನ್ನು ಸಂಘಟಿಸಿದ ಕಾರಣ ತಂಡ ಚೇತರಿಕೆಯ ಹಾದಿಗೆ ಮರಳಿ ಗೆಲುವು ಕಾಣುವ ಸ್ಥಿತಿಯಲ್ಲಿತ್ತು. ಆದರೆ, ಮುಸ್ತಫಿಜುರ್​ ರೆಹಮಾನ್​ ಅವರು ಉಭತ ಆಟಗಾರರ ವಿಕೆಟ್​ ಬೇಟೆಯಾಡಿ ಬಾಂಗ್ಲಾಗೆ ಯಶಸ್ಸು ತಂದುಕೊಟ್ಟರು. ಕುಶಾಲ್ ಮಲ್ಲ 27 ರನ್​ ಬಾರಿಸಿದರೆ, ದೀಪೇಂದ್ರ ಸಿಂಗ್ 25 ರನ್​ ಗಳಿಸಿದರು. ಇವರಿಬ್ಬರ ವಿಕೆಟ್​ ಪತನಗೊಳ್ಳುತ್ತಿದ್ದಂತೆ ನೆಪಾಳ ಸೋಲು ಕೂಡ ಖಚಿತಗೊಂಡಿತು.

ಬಾಂಗ್ಲಾದೇಶದ ಪರ ಘಾತಕ ಬೌಲಿಂಗ್​ ದಾಳಿ ನಡೆಸಿದ ತಂಜಿಮ್ ಹಸನ್ ಸಾಕಿಬ್ 4 ಓವರ್​ ಎಸೆದು 2 ಮೇಡನ್​ ಸಹಿತ ಕೇವಲ 7 ರನ್​ಗೆ 4 ವಿಕೆಟ್​ ಕಿತ್ತು. ಜೀವನಶ್ರೇಷ್ಠ ಬೌಲಿಂಗ್​ ಪ್ರದರ್ಶನ ತೋರಿದರು. ಮುಸ್ತಫಿಜುರ್ ರೆಹಮಾನ್ 7 ರನ್​ಗೆ 3 ವಿಕೆಟ್​ ಪಡೆದರು. ನಾಯಕ ಶಕೀಬ್​ 2 ವಿಕೆಟ್​ ಕಿತ್ತು ಮಿಂಚಿದರು. ಮುಂದಿನ ಪಂದ್ಯದಲ್ಲಿ ಶಕೀಬ್​ ಮೊದಲ ಎಸೆತದಲ್ಲೇ ವಿಕೆಟ್​ ಕಿತ್ತರೆ ಬ್ರೋಕನ್​ ಹ್ಯಾಟ್ರಿಕ್​ ವಿಕೆಟ್​ ಕಿತ್ತ ದಾಖಲೆ ಮಾಡಲಿದ್ದಾರೆ.

Continue Reading

ಕ್ರೀಡೆ

T20 World Cup 2024: ಸೂಪರ್​-8 ಹಂತದ ವೇಳಾಪಟ್ಟಿ ಪ್ರಕಟ; 8 ತಂಡಗಳ ಮಾಹಿತಿ ಹೀಗಿದೆ

T20 World Cup 2024: ಸೂಪರ್​ 8 ಹಂತದ ಮೊದಲ ಪಂದ್ಯ ಜೂನ್​ 19ರಿಂದ ಆರಂಭವಾಗಲಿದ್ದು, ಮೊದಲ ಪಂದ್ಯದಲ್ಲಿ ಅಮೆರಿಕ ಮತ್ತು ದಕ್ಷಿಣ ಆಫ್ರಿಕಾ ಸೆಣಸಾಟ ನಡೆಸಲಿವೆ.

VISTARANEWS.COM


on

T20 World Cup 2024
Koo

ನ್ಯೂಯಾರ್ಕ್​: ಅಮೆರಿಕ ಮತ್ತು ವೆಸ್ಟ್​ ಇಂಡೀಸ್​ ಜಂಟಿ ಆತಿಥ್ಯದಲ್ಲಿ ಸಾಗುತ್ತಿರುವ ಟಿ20 ವಿಶ್ವಕಪ್(T20 World Cup 2024) ಟೂರ್ನಿಯ ಸೂಪರ್​-8 ಹಂತದ(Super Eight stage) ತಂಡಗಳ ಪಟ್ಟಿ ಅಂತಿಮಗೊಂಡಿದೆ. ಇಂದು(ಸೋಮವಾರ) ನಡೆದ ಪಂದ್ಯದಲ್ಲಿ ಬಾಂಗ್ಲಾದೇಶ ತಂಡ ನೇಪಾಳ ವಿರುದ್ಧ ಗೆಲುವು ಸಾಧಿಸುವ ಮೂಲಕ ಈ ಪಟ್ಟಿ ಅಂತಿಮಗೊಂಡಿತು. 7 ತಂಡಗಳು ಈಗಾಗಲೇ ಈ ಹಂತಕ್ಕೇರಿತ್ತು. ಆದರೆ ಉಳಿದ ಒಂದು ಸ್ಥಾನಕ್ಕಾಗಿ ಡಿ ಗುಂಪಿನಿಂದ ಬಾಂಗ್ಲಾ ಮತ್ತು ನೆದರ್ಲೆಂಡ್ಸ್​ ತೀವ್ರ ಪೈಪೋಟಿ ಏರ್ಪಟ್ಟಿತ್ತು. ಬಾಂಗ್ಲಾ ಮೇಲುಗೈ ಸಾಧಿಸಿ ಅಂತಿಮವಾಗಿ ತೇರ್ಗಡೆಗೊಂಡಿದೆ.

ಬಾಂಗ್ಲಾದೇಶ ‘ಎ’ ಗುಂಪಿನಲ್ಲಿ ಭಾರತ, ಆಸ್ಟ್ರೇಲಿಯಾ ಮತ್ತು ಅಪಘಾನಿಸ್ತಾನದ ಜತೆ ಸ್ಥಾನ ಪಡೆದಿದೆ. ‘ಬಿ’ ಗುಂಪಿನಲ್ಲಿ ವೆಸ್ಟ್​ ಇಂಡೀಸ್​, ಅಮೆರಿಕ, ದಕ್ಷಿಣ ಆಫ್ರಿಕಾ ಮತ್ತು ಇಂಗ್ಲೆಂಡ್​ ತಂಡಗಳು ಕಾಣಿಸಿಕೊಂಡಿವೆ. ಲೀಗ್​ ಹಂತದ ಪಂದ್ಯಕ್ಕೆ ನಾಳೆ ತೆರೆ ಬೀಳಲಿದೆ. ಅಂತಿಮ ಪಂದ್ಯದಲ್ಲಿ ವಿಂಡೀಸ್​ ಮತ್ತು ಆಫ್ಘಾನ್​ ಮುಖಾಮುಖಿಯಾಗಲಿವೆ. ಸೂಪರ್​ 8 ಹಂತದ ಮೊದಲ ಪಂದ್ಯ ಜೂನ್​ 19ರಿಂದ ಆರಂಭವಾಗಲಿದ್ದು, ಮೊದಲ ಪಂದ್ಯದಲ್ಲಿ ಅಮೆರಿಕ ಮತ್ತು ದಕ್ಷಿಣ ಆಫ್ರಿಕಾ ಸೆಣಸಾಟ ನಡೆಸಲಿವೆ. ಭಾರತ ತನ್ನ ಮೊದಲ ಪಂದ್ಯವನ್ನು ಅಫಘಾನಿಸ್ತಾನ ವಿರುದ್ಧ ಆಡಲಿದೆ. ಈ ಪಂದ್ಯ ಜೂನ್​ 20ರಂದು ಬಾರ್ಬಡೋಸ್​ನಲ್ಲಿ ನಡೆಯಲಿದೆ. ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ಹೈವೋಲ್ಟೇಜ್​ ಪಂದ್ಯ ಜೂನ್​ 24 ಭಾನುವಾರದಂದು ನಡೆಯಲಿದೆ. ಟೀಮ್​ ಇಂಡಿಯಾದ ಎಲ್ಲ ಪಂದ್ಯಗಳು ಭಾರತೀಯ ಕಾಲಮಾನ ರಾತ್ರಿ 8 ಗಂಟೆಗೆ ಪ್ರಸಾರಗೊಳ್ಳಲಿದೆ.

ಇದನ್ನೂ ಓದಿ BAN vs NEP: ಸೂಪರ್​-8 ಪ್ರವೇಶಿಸಿದ ಬಾಂಗ್ಲಾದೇಶ; ನೇಪಾಳ ವಿರುದ್ಧ 21 ರನ್​ ಗೆಲುವು

ಭಾರತದ ಸೂಪರ್​-8 ಪಂದ್ಯದ ವೇಳಾಪಟ್ಟಿ

ಎದುರಾಳಿದಿನಾಂಕತಾಣಪ್ರಸಾರ
ಭಾರತ-ಅಫಘಾನಿಸ್ತಾನಜೂನ್​ 20ಬಾರ್ಬಡೋಸ್ರಾತ್ರಿ 8ಕ್ಕೆ
ಭಾರತ-ಬಾಂಗ್ಲಾದೇಶಜೂನ್​ 22ಆಂಟಿಗುವಾರಾತ್ರಿ 8ಕ್ಕೆ
ಭಾರತ-ಆಸ್ಟ್ರೇಲಿಯಾಜೂನ್​ 24ಸೇಂಟ್ ಲೂಸಿಯಾರಾತ್ರಿ 8ಕ್ಕೆ

ಬಾಂಗ್ಲಾಗೆ 21 ರನ್​ ಜಯ


ಸೋಮವಾರ ನಡೆದ ಪಂದ್ಯದಲ್ಲಿ ಬಾಂಗ್ಲಾದೇಶ ತಂಡ ನೇಪಾಳ ವಿರುದ್ಧ 21 ರನ್​ ಅಂತರದಿಂದ ಗೆದ್ದು ಸೂಪರ್​-8ಗೆ ಪ್ರವೇಶ ಪಡೆಯಿತು. ಇಲ್ಲಿನ ಸೇಂಟ್ ವಿನ್ಸೆಂಟ್ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್​ ನಡೆಸಿದ ಬಾಂಗ್ಲಾದೇಶ 19.3 ಓವರ್​ಗಳಲ್ಲಿ ಕೇವಲ 106 ರನ್​ಗೆ ಕುಸಿತ ಕಂಡಿತು. ಈ ಮೊತ್ತವನ್ನು ನೋಡುವಾಗ ಬಾಂಗ್ಲಾ ಸೋಲು ಕಾಣಬಹುದೆಂದು ಊಹಿಸಲಾಯಿತು. ಆದರೆ, ಬಾಂಗ್ಲಾ ಬೌಲರ್​ಗಳು ಉತ್ಕೃಷ್ಟ ಮಟ್ಟದ ಬೌಲಿಂಗ್​ ದಾಳಿ ನಡೆಸಿ ನೇಪಾಳವನ್ನು 85 ರನ್​ಗೆ ಕಟ್ಟಿಹಾಕಿ ಅಮೋಘ ಗೆಲುವು ಸಾಧಿಸಿದರು.

ಬಾಂಗ್ಲಾದೇಶದ ಪರ ಘಾತಕ ಬೌಲಿಂಗ್​ ದಾಳಿ ನಡೆಸಿದ ತಂಜಿಮ್ ಹಸನ್ ಸಾಕಿಬ್ 4 ಓವರ್​ ಎಸೆದು 2 ಮೇಡನ್​ ಸಹಿತ ಕೇವಲ 7 ರನ್​ಗೆ 4 ವಿಕೆಟ್​ ಕಿತ್ತು. ಜೀವನಶ್ರೇಷ್ಠ ಬೌಲಿಂಗ್​ ಪ್ರದರ್ಶನ ತೋರಿದರು. ಮುಸ್ತಫಿಜುರ್ ರೆಹಮಾನ್ 7 ರನ್​ಗೆ 3 ವಿಕೆಟ್​ ಪಡೆದರು. ನಾಯಕ ಶಕೀಬ್​ 2 ವಿಕೆಟ್​ ಕಿತ್ತು ಮಿಂಚಿದರು. ಮುಂದಿನ ಪಂದ್ಯದಲ್ಲಿ ಶಕೀಬ್​ ಮೊದಲ ಎಸೆತದಲ್ಲೇ ವಿಕೆಟ್​ ಕಿತ್ತರೆ ಬ್ರೋಕನ್​ ಹ್ಯಾಟ್ರಿಕ್​ ವಿಕೆಟ್​ ಕಿತ್ತ ದಾಖಲೆ ಮಾಡಲಿದ್ದಾರೆ.

Continue Reading

ಕ್ರೀಡೆ

BAN vs NEP: ಸೂಪರ್​-8 ಪ್ರವೇಶಿಸಿದ ಬಾಂಗ್ಲಾದೇಶ; ನೇಪಾಳ ವಿರುದ್ಧ 21 ರನ್​ ಗೆಲುವು

BAN vs NEP: ಬಾಂಗ್ಲಾದೇಶದ ಪರ ಘಾತಕ ಬೌಲಿಂಗ್​ ದಾಳಿ ನಡೆಸಿದ ತಂಜಿಮ್ ಹಸನ್ ಸಾಕಿಬ್ 4 ಓವರ್​ ಎಸೆದು 2 ಮೇಡನ್​ ಸಹಿತ ಕೇವಲ 7 ರನ್​ಗೆ 4 ವಿಕೆಟ್​ ಕಿತ್ತು. ಜೀವನಶ್ರೇಷ್ಠ ಬೌಲಿಂಗ್​ ಪ್ರದರ್ಶನ ತೋರಿದರು.

VISTARANEWS.COM


on

BAN vs NEP
Koo

ಕಿಂಗ್‌ಸ್ಟನ್‌: ತಂಜಿಮ್ ಹಸನ್ ಸಾಕಿಬ್(7ಕ್ಕೆ 4) ಅವರ ಘಾತಕ ಬೌಲಿಂಗ್​ ದಾಳಿಯ ನೆರವಿನಿಂದಾಗಿ ಸೂಪರ್​-8 ಪ್ರವೇಶಕ್ಕೆ ಗೆಲ್ಲಲೇ ಬೇಕಿದ್ದ ಪಂದ್ಯದಲ್ಲಿ ಬಾಂಗ್ಲಾದೇಶ(BAN vs NEP) ಮೇಲುಗೈ ಸಾಧಿಸಿದೆ. ನೇಪಾಳ ವಿರುದ್ಧ 21 ರನ್​ ಅಂತರದಿಂದ ಗೆದ್ದು ಸೂಪರ್​-8ಗೆ ಪ್ರವೇಶ ಪಡೆದಿದೆ. ಭಾರತ, ಆಸ್ಟ್ರೇಲಿಯಾ, ಅಫಘಾನಿಸ್ತಾನ ತಂಡದ ಜತೆ ‘ಎ’ ಗುಂಪಿನಲ್ಲಿ ಸ್ಥಾನ ಪಡೆದಿದೆ. ಬಾಂಗ್ಲಾ ಗೆಲುವಿನಿಂದ ನೆದರ್ಲೆಂಡ್ಸ್​ ತಂಡ ಟೂರ್ನಿಯಿಂದ ಹೊರಬಿದ್ದಿತು.

ಇಲ್ಲಿನ ಸೇಂಟ್ ವಿನ್ಸೆಂಟ್ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್​ ನಡೆಸಿದ ಬಾಂಗ್ಲಾದೇಶ 19.3 ಓವರ್​ಗಳಲ್ಲಿ ಕೇವಲ 106 ರನ್​ಗೆ ಕುಸಿತ ಕಂಡಿತು. ಈ ಮೊತ್ತವನ್ನು ನೋಡುವಾಗ ಬಾಂಗ್ಲಾ ಸೋಲು ಕಾಣಬಹುದೆಂದು ಊಹಿಸಲಾಯಿತು. ಆದರೆ, ಬಾಂಗ್ಲಾ ಬೌಲರ್​ಗಳು ಉತ್ಕೃಷ್ಟ ಮಟ್ಟದ ಬೌಲಿಂಗ್​ ದಾಳಿ ನಡೆಸಿ ನೇಪಾಳವನ್ನು 85 ರನ್​ಗೆ ಕಟ್ಟಿಹಾಕಿ ಅಮೋಘ ಗೆಲುವು ಸಾಧಿಸಿದರು.

ಬಾಂಗ್ಲಾದೇಶ ಈ ಪಂದ್ಯದಲ್ಲಿ ಸೋಲು ಕಾಣುತ್ತಿದ್ದರೆ, ನೆದರ್ಲೆಂಡ್ಸ್​ ತಂಡಕ್ಕೂ ಸೂಪರ್​-8 ಹಂತಕ್ಕೇರುವ ಅವಕಾಶವಿತ್ತು. ಆದರೆ ಬಾಂಗ್ಲಾ ಗೆಲುವಿನಿಂದ ನೆದರ್ಲೆಂಡ್ಸ್​ ತಂಡ ಹೊರಬಿದ್ದಿತು. ನೆದರ್ಲೆಂಡ್ಸ್​ ತಂಡ ಲಂಕಾ ವಿರುದ್ಧ 83 ರನ್​ ಅಂತರದ ಸೋಲು ಕಂಡಿತು. ಈ ಪಂದ್ಯ ಗೆದ್ದಿದ್ದರೂ ಕೂಡ ನೆದರ್ಲೆಂಡ್ಸ್​ಗೆ ಯಾವುದೇ ಲಾಭವಾಗುತ್ತಿರಲಿಲ್ಲ.

ಸಣ್ಣ ಮೊತ್ತವನ್ನು ಚೇಸಿಂಗ್​ ನಡೆಸಿದ ನೇಪಾಳ ಆರಂಭಿಕ ಆಘಾತ ಎದುರಿಸಿದರೂ ಕೂಡ ಮಧ್ಯಮ ಕ್ರಮಾಂಕದಲ್ಲಿ ಕುಶಾಲ್ ಮಲ್ಲ ಮತ್ತು ದೀಪೇಂದ್ರ ಸಿಂಗ್ ಐರಿ ಉತ್ತಮ ಜತೆಯಾಟವೊಂದನ್ನು ಸಂಘಟಿಸಿದ ಕಾರಣ ತಂಡ ಚೇತರಿಕೆಯ ಹಾದಿಗೆ ಮರಳಿ ಗೆಲುವು ಕಾಣುವ ಸ್ಥಿತಿಯಲ್ಲಿತ್ತು. ಆದರೆ, ಮುಸ್ತಫಿಜುರ್​ ರೆಹಮಾನ್​ ಅವರು ಉಭತ ಆಟಗಾರರ ವಿಕೆಟ್​ ಬೇಟೆಯಾಡಿ ಬಾಂಗ್ಲಾಗೆ ಯಶಸ್ಸು ತಂದುಕೊಟ್ಟರು. ಕುಶಾಲ್ ಮಲ್ಲ 27 ರನ್​ ಬಾರಿಸಿದರೆ, ದೀಪೇಂದ್ರ ಸಿಂಗ್ 25 ರನ್​ ಗಳಿಸಿದರು. ಇವರಿಬ್ಬರ ವಿಕೆಟ್​ ಪತನಗೊಳ್ಳುತ್ತಿದ್ದಂತೆ ನೆಪಾಳ ಸೋಲು ಕೂಡ ಖಚಿತಗೊಂಡಿತು.

ಇದನ್ನೂ ಓದಿ T20 World Cup 2024: ಭಾರತ-ಕೆನಡಾ ಪಂದ್ಯ ಮಳೆಯಿಂದ ರದ್ದು; ಅಗ್ರಸ್ಥಾನಿಯಾಗಿ ರೋಹಿತ್‌ ಪಡೆ ಸೂಪರ್‌ 8ಕ್ಕೆ ಎಂಟ್ರಿ

ಬಾಂಗ್ಲಾದೇಶದ ಪರ ಘಾತಕ ಬೌಲಿಂಗ್​ ದಾಳಿ ನಡೆಸಿದ ತಂಜಿಮ್ ಹಸನ್ ಸಾಕಿಬ್ 4 ಓವರ್​ ಎಸೆದು 2 ಮೇಡನ್​ ಸಹಿತ ಕೇವಲ 7 ರನ್​ಗೆ 4 ವಿಕೆಟ್​ ಕಿತ್ತು. ಜೀವನಶ್ರೇಷ್ಠ ಬೌಲಿಂಗ್​ ಪ್ರದರ್ಶನ ತೋರಿದರು. ಮುಸ್ತಫಿಜುರ್ ರೆಹಮಾನ್ 7 ರನ್​ಗೆ 3 ವಿಕೆಟ್​ ಪಡೆದರು. ನಾಯಕ ಶಕೀಬ್​ 2 ವಿಕೆಟ್​ ಕಿತ್ತು ಮಿಂಚಿದರು. ಮುಂದಿನ ಪಂದ್ಯದಲ್ಲಿ ಶಕೀಬ್​ ಮೊದಲ ಎಸೆತದಲ್ಲೇ ವಿಕೆಟ್​ ಕಿತ್ತರೆ ಬ್ರೋಕನ್​ ಹ್ಯಾಟ್ರಿಕ್​ ವಿಕೆಟ್​ ಕಿತ್ತ ದಾಖಲೆ ಮಾಡಲಿದ್ದಾರೆ.

ಮೊದಲು ಬ್ಯಾಟಿಂಗ್​ ನಡೆಸಿದ ಬಾಂಗ್ಲಾ ತಂಡ ಖಾತೆ ತೆರೆಯುವ ಮುನ್ನವೇ ವಿಕೆಟ್​ ಕಳೆದುಕೊಂಡಿತು. ಬಳಿಕ ಬಂದ ಆಟಗಾರರು ಕೂಡ ಸತತವಾಗಿ ವಿಕೆಟ್​ ಕಳೆದುಕೊಂಡು ಪೆವಿಲಿಯನ್​ ಪರೇಡ್​ ನಡೆಸಿದರು. ನಾಯಕ ಶಕೀಬ್​ ಅಲ್​ ಹಸನ್​ 17 ರನ್​ ಬಾರಿಸಿದ್ದೇ ತಂಡದ ಪರ ಆಟಗಾರನೊಬ್ಬ ಬಾರಿಸಿದ ಗರಿಷ್ಠ ಸ್ಕೋರ್​. ನೇಪಾಳ ಪರ ಸೋಂಪಾಲ್ ಕಾಮಿ(2), ಅತ್ಯಾಚಾರ ಆರೋಪದಲ್ಲಿ ಜೈಲು ಶಿಕ್ಷೆ ಅನುಭವಿಸಿ ಇದೀಗ ನಿರಪರಾಧಿ ಎನಿಸಿಕೊಂಡಿರುವ ಸಂದೀಪ್ ಲಮಿಚಾನೆ(2), ನಾಯಕ ರೋಹಿತ್ ಪೌಡೆಲ್(2) ಮತ್ತು ದೀಪೇಂದ್ರ ಸಿಂಗ್(2) ವಿಕೆಟ್​ ಕಿತ್ತರು.

Continue Reading

ಕ್ರಿಕೆಟ್

Pakistan Cricket Team: ಪಾಕಿಸ್ತಾನ ಕ್ರಿಕೆಟಿಗರ ವೇತನ ಕಡಿತಕ್ಕೆ ಮುಂದಾದ ಪಾಕ್​ ಕ್ರಿಕೆಟ್ ಮಂಡಳಿ

Pakistan Cricket Team: ಪಾಕ್​ ಮಾಧ್ಯಮ ವರದಿಗಳ ಪ್ರಕಾರ ಮಾಜಿ ಆಟಗಾರರು ಹಾಗೂ ಪಿಸಿಬಿ ಸದಸ್ಯರು ಆಟಗಾರರ ಸಂಬಳ ಕಡಿತಗೊಳಿಸಲು ಪಾಕ್​ ಕ್ರಿಕೆಟ್​ ಮಂಡಳಿಯ ಅಧ್ಯಕ್ಷ ಮೊಹ್ಸಿನ್​ ನಖ್ವಿಗೆ ಸಲಹೆ ನೀಡಿದ್ದಾರೆ ಎನ್ನಲಾಗಿದೆ.

VISTARANEWS.COM


on

Pakistan Cricket Team
Koo

ಇಸ್ಲಾಮಾಬಾದ್‌: ಈ ಬಾರಿಯ ಟಿ20 ವಿಶ್ವಕಪ್‌ನಲ್ಲಿ(T20 World Cup 2024) ಕಳಪೆ ಪ್ರದರ್ಶನ ತೋರುವ ಮೂಲಕ ಟೂರ್ನಿಯಿಂದ ಹೊರಬಿದ್ದು ಆಘಾತ ಕಂಡಿರುವ ಪಾಕಿಸ್ತಾನ ತಂಡದ(Pakistan Cricket Team) ಆಟಗಾರರಿಗೆ ಮತ್ತೊಂದು ಶಾಕ್​ ಎದುರಾಗಿದೆ. ಆಟಗಾರರ ವಾರ್ಷಿಕ ಸಂಭಾವನೆಯಲ್ಲಿ ಕಡಿತ ಮಾಡಲು ಪಾಕ್​ ಕ್ರಿಕೆಟ್​ ಮಂಡಳಿ(PCB) ನಿರ್ಧರಿಸಿದೆ ಎಂದು ತಿಳಿದುಬಂದಿದೆ.

ಮೂರು ಪಂದ್ಯಗಳನ್ನು ಆಡಿರುವ ಪಾಕಿಸ್ತಾನವು ಅಮೆರಿಕ ಹಾಗೂ ಭಾರತದ ವಿರುದ್ಧ ಹೀನಾಯವಾಗಿ ಸೋಲನುಭವಿಸಿದೆ. ಕೆನಡಾ ವಿರುದ್ಧ ಮಾತ್ರ ಗೆದ್ದಿರುವ ಕಾರಣ 2 ಪಾಯಿಂಟ್‌ಗಳನ್ನು ಪಡೆದಿದೆ. ಅಮೆರಿಕ ಹಾಗೂ ಐರ್ಲೆಂಡ್‌ ನಡುವಿನ ಪಂದ್ಯವು ಮಳೆಯಿಂದ ರದ್ದಾದ ಕಾರಣ ಅಮೆರಿಕದ ಅಂಕ 5ಕ್ಕೆ ಏರಿಕೆಯಾಯಿತು. ಇದರಿಂದಾಗಿ ಐರ್ಲೆಂಡ್‌ ವಿರುದ್ಧ ಪಾಕ್‌ ಗೆದ್ದರೂ ಯಾವುದೇ ಉಪಯೋಗವಿಲ್ಲದಂತಾಗಿದೆ. ಟೂರ್ನಿಯಿಂದ ಹೊರಬಿದ್ದ ಪಾಕ್​ ತಂಡದ ವಿರುದ್ಧ ಮಾಜಿ ಆಟಗಾರರು ಭಾರೀ ಟೀಕೆ ವ್ಯಕ್ತಪಡಿಸಿದ್ದಾರೆ. ಈ ರೀತಿ ಪ್ರದರ್ಶನ ತೋರುದಕ್ಕಿಂತ ಟೂರ್ನಿಯಲ್ಲಿ ಪಾಲ್ಗೊಳ್ಳದೇ ಇದ್ದಿದ್ದರೆ ಉತ್ತಮವಾಗಿರುತ್ತಿತ್ತು ಎಂದು ಆಕ್ರೋಶ ಹೊರಹಾಕಿದ್ದಾರೆ.

ಪಾಕ್​ ಮಾಧ್ಯಮ ವರದಿಗಳ ಪ್ರಕಾರ ಮಾಜಿ ಆಟಗಾರರು ಹಾಗೂ ಪಿಸಿಬಿ ಸದಸ್ಯರು ಆಟಗಾರರ ಸಂಬಳ ಕಡಿತಗೊಳಿಸಲು ಪಾಕ್​ ಕ್ರಿಕೆಟ್​ ಮಂಡಳಿಯ ಅಧ್ಯಕ್ಷ ಮೊಹ್ಸಿನ್​ ನಖ್ವಿಗೆ ಸಲಹೆ ನೀಡಿದ್ದಾರೆ ಎನ್ನಲಾಗಿದೆ. ಪಾಕ್​ ಕ್ರಿಕೆಟ್​ ಮಂಡಳಿ ಕೂಡ ಈ ವಿಚಾರವನ್ನು ಗಂಭಿರವಾಗಿ ಪರಿಗಣಿಸಿದ್ದು ಉನ್ನತ ಮಟ್ಟದ ಸಭೆ ನಡೆಸಿ ಆಟಗಾರರ ಕೇಂದ್ರೀಯ ಗುತ್ತಿಗೆಯನ್ನು ಮರು ಪರಿಶೀಲಿಸುವ ಸಾಧ್ಯತೆ ಇದೆ ಎನ್ನಲಾಗಿದೆ.

ಇದನ್ನೂ ಓದಿ Pakistan Cricket Board: ಟಿ20 ವಿಶ್ವಕಪ್​ನಿಂದ ಹೊರಬಿದ್ದ ಬೆನ್ನಲ್ಲೇ ಹೊಸ ನಿಯಮ ಜಾರಿಗೆ ತಂದ ಪಾಕ್​ ಕ್ರಿಕೆಟ್​ ಮಂಡಳಿ

ವೇತನ ಮಾತ್ರವಲ್ಲದೆ ನಿರಾಕ್ಷೇಪಣಾ ಪ್ರಮಾಣಪತ್ರ (ಎನ್‌ಒಸಿ) ನಿಯಮವನ್ನು ಜಾರಿಗೆ ತೆರಲಿದೆ ಎಂದು ತಿಳಿದುಬಂದಿದೆ. ಈ ನಿಯಮದ ಪ್ರಕಾರ ದೇಶಿ ಕ್ರಿಕೆಟ್‌ ಹಾಗೂ ಕೇಂದ್ರೀಯ ಗುತ್ತಿಗೆಗೆ ಸಹಿ ಮಾಡಿರುವ ಎಲ್ಲ ಪಾಕ್​ ಆಟಗಾರರು ವರ್ಷವೊಂದರಲ್ಲಿ ಪಾಕಿಸ್ತಾನ ಸೂಪರ್‌ ಲೀಗ್‌ (ಪಿಎಸ್‌ಎಲ್‌) ಹೊರತುಪಡಿಸಿ, ವಿದೇಶಗಳಲ್ಲಿ ನಡೆಯುವ ಎರಡು ಟಿ20 ಲೀಗ್‌ಗಳಲ್ಲಿ ಮಾತ್ರ ಭಾಗವಹಿಸಬಹುದಾಗಿದೆ.

ಪಾಕ್​ ತಂಡದ ವಿರುದ್ಧ ದೇಶದ್ರೋಹದ ಕೇಸ್‌


ನಿರಾಸದಾಯಕ ಪ್ರದರ್ಶನ ತೋರಿರುವ ಪಾಕಿಸ್ತಾನ ತಂಡದ ವಿರುದ್ಧ ಪಾಕ್‌ನ ಗುಜ್ರಾನ್ವಾಲಾ ನಗರದ ವಕೀಲರೊಬ್ಬರು ದೇಶದ್ರೋಹ ಕೇಸ್‌ ದಾಖಲಿಸಿದ್ದಾರೆ. ಈ ಬಗ್ಗೆ ಸ್ಥಳೀಯ ಮಾಧ್ಯಮಗಳು ವರದಿ ಮಾಡಿದ್ದು, ಕೇಸ್‌ನ ಬಗ್ಗೆ ಜೂನ್​ 21ಕ್ಕೆ ಮುನ್ನ ವರದಿ ಸಲ್ಲಿಸುವಂತೆ ಪೊಲೀಸರಿಗೆ ನ್ಯಾಯಾಲಯ ಸೂಚಿಸಿದೆ ಎಂದು ತಿಳಿದುಬಂದಿದೆ. ಪಾಕ್‌ ತಂಡದ ಕಳಪೆ ಪ್ರದರ್ಶನದಿಂದ ಹಣ ವ್ಯರ್ಥವಾಗುತ್ತಿದೆ ಮತ್ತು ರಾಷ್ಟ್ರದ ನಂಬಿಕೆಗೆ ದ್ರೋಹ ಉಂಟಾಗಿದೆ. ಆಟಗಾರರು ದೇಶದ ಬಗ್ಗೆ ಗೌರವಕ್ಕಿಂತ ಆರ್ಥಿಕ ಲಾಭಕ್ಕೆ ಆದ್ಯತೆ ನೀಡಿದ್ದಾರೆ ಎಂದು ಅರ್ಜಿದಾರ ತನ್ನ ದೂರಿನಲ್ಲಿ ಉಲ್ಲೇಖಿಸಿದ್ದಾಗಿ ವರದಿಯಾಗಿದೆ.

Continue Reading
Advertisement
Maoists Killed
ದೇಶ11 mins ago

Maoists Killed: ಭದ್ರತಾ ಪಡೆಗಳ ಕಾರ್ಯಾಚರಣೆ; ಮತ್ತೆ 4 ಮಾವೋವಾದಿಗಳ ಹತ್ಯೆ

petrol diesel price hike
ಪ್ರಮುಖ ಸುದ್ದಿ19 mins ago

Petrol Diesel Price: ಪೆಟ್ರೋಲ್‌ ಬೆಲೆ ಏರಿಕೆ ವಿರೋಧಿಸಿ ಇಂದು ಬಿಜೆಪಿ ಮಿಂಚಿನ ಪ್ರತಿಭಟನೆ

Shah Rukh Khan Took ₹1 As Signing Amount For 'Nayak'
ಬಾಲಿವುಡ್28 mins ago

Shah Rukh Khan: ʻನಾಯಕ್‌ʼ ಸಿನಿಮಾಗೆ ಶಾರುಖ್‌ ಹೀರೊ ಆಗಬೇಕಿತ್ತು! 1 ರೂ. ಅಡ್ವಾನ್ಸ್ ಪಡೆದಿದ್ದರು!

Encounter In Bandipora
ದೇಶ49 mins ago

Encounter In Bandipora: ಬಂಡಿಪೋರಾದಲ್ಲಿ ಎನ್‌ಕೌಂಟರ್‌; ಓರ್ವ ಉಗ್ರನನ್ನು ಹೊಡೆದುರುಳಿಸಿದ ಭದ್ರತಾ ಪಡೆ

BAN vs NEP
ಕ್ರೀಡೆ51 mins ago

BAN vs NEP: ಸ್ವಿಮ್ಮಿಂಗ್ ಪೂಲ್​ಗೆ ಜಿಗಿದು ಸಂಭ್ರಮಿಸಿದ ನೇಪಾಳ ಅಭಿಮಾನಿ; ವಿಡಿಯೊ ವೈರಲ್​

BS Yediyurappa pocso case
ಪ್ರಮುಖ ಸುದ್ದಿ1 hour ago

BS Yediyurappa: ಇಂದು ಸಿಐಡಿ ಮುಂದೆ ಹಾಜರಾಗಲಿರುವ ಮಾಜಿ ಸಿಎಂ ಬಿ.ಎಸ್‌ ಯಡಿಯೂರಪ್ಪ

Kiccha Sudeep Replies To Darshan Ban Matter Entertainment
ಸ್ಯಾಂಡಲ್ ವುಡ್1 hour ago

Kiccha Sudeep: ಜಗ್ಗೇಶ್‌ಗೆ ಹೇಗೆ ಮಾತನಾಡಬೇಕು, ಹೇಗೆ ಎಸ್ಕೇಪ್ ಆಗಬೇಕು ಅನ್ನೋದು ಗೊತ್ತು ಎಂದ ಕಿಚ್ಚ!

T20 World Cup 2024
ಕ್ರೀಡೆ1 hour ago

T20 World Cup 2024: ಸೂಪರ್​-8 ಹಂತದ ವೇಳಾಪಟ್ಟಿ ಪ್ರಕಟ; 8 ತಂಡಗಳ ಮಾಹಿತಿ ಹೀಗಿದೆ

Nikhil Gupta
ವಿದೇಶ1 hour ago

Nikhil Gupta: ಗುರುಪತ್ವಂತ್‌ ಸಿಂಗ್‌ ಪನ್ನುನ್‌ ಹತ್ಯೆಗೆ ಸಂಚು ಆರೋಪ; ಜೆಕ್‌ ಗಣರಾಜ್ಯದಿಂದ ನಿಖಿಲ್‌ ಗುಪ್ತಾ ಅಮೆರಿಕಕ್ಕೆ ಹಸ್ತಾಂತರ

BAN vs NEP
ಕ್ರೀಡೆ2 hours ago

BAN vs NEP: ಸೂಪರ್​-8 ಪ್ರವೇಶಿಸಿದ ಬಾಂಗ್ಲಾದೇಶ; ನೇಪಾಳ ವಿರುದ್ಧ 21 ರನ್​ ಗೆಲುವು

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Renukaswamy murder case The location of the accused is complete
ಸಿನಿಮಾ17 hours ago

Renuka Swamy murder : ಭೀಕರವಾಗಿ ಕೊಂದರೂ ಆರೋಪಿಗಳಿಗೆ ಕಾಡುತ್ತಿಲ್ವಾ ಪಾಪಪ್ರಜ್ಞೆ? ನಗುತ್ತಲೇ ಹೊರಬಂದ ಪವಿತ್ರಾ ಗೌಡ, ಪವನ್‌

Renuka swamy murder
ಚಿತ್ರದುರ್ಗ18 hours ago

Renuka swamy Murder : ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಾಳೆಹೊನ್ನೂರು ಶ್ರೀಗಳು

Vijayanagara News
ವಿಜಯನಗರ23 hours ago

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

Actor Darshan
ಯಾದಗಿರಿ2 days ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

Karnataka Weather Forecast
ಮಳೆ3 days ago

Karnataka Weather : ಕರಾವಳಿ, ಉತ್ತರ ಒಳನಾಡಿನಲ್ಲಿ ವರುಣಾರ್ಭಟ; ನಾಳೆಯು ಹಲವೆಡೆ ಸಿಕ್ಕಾಪಟ್ಟೆ ಮಳೆ

Actor Darshan
ಬೆಂಗಳೂರು3 days ago

Actor Darshan : ರೇಣುಕಾಸ್ವಾಮಿಯನ್ನು ಕಿಡ್ನ್ಯಾಪ್ ಮಾಡಿ ಕರೆತರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ!

actor Darshan
ಬೆಂಗಳೂರು3 days ago

Actor Darshan : ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಮತ್ತಿಬ್ಬರು ಸರೆಂಡರ್‌; ಆರೋಪಿಗಳ ಸಂಖ್ಯೆ 16ಕ್ಕೆ ಏರಿಕೆ

Actor Darshan
ಸಿನಿಮಾ3 days ago

Actor Darshan : ರೇಣುಕಾಸ್ವಾಮಿ ‌ಮೃತದೇಹ ಬಿಸಾಡಿ ಬಳಿಕ ಸಾಕ್ಷ್ಯಇದ್ದ 2 ಮೊಬೈಲ್‌ಗಳನ್ನು ಮೋರಿಗೆ ಎಸೆದ್ರಾ ಆರೋಪಿಗಳು?

karnataka weather Forecast
ಮಳೆ6 days ago

Karnataka Weather : ಭಾರಿ ಮಳೆಗೆ ಗುಡ್ಡದಿಂದ ಉರುಳಿ ಬಿದ್ದ ಬಂಡೆಗಲ್ಲು; ಬೆಂಗಳೂರಲ್ಲೂ ಸಂಜೆ ವರ್ಷಧಾರೆ

actor Darshan
ಚಿತ್ರದುರ್ಗ6 days ago

Actor Darshan: ರೇಣುಕಾ ಸ್ವಾಮಿ ಕೊಲೆ ಕೇಸ್‌ನಲ್ಲಿ ದರ್ಶನ್‌ ಅರೆಸ್ಟ್‌; ಪ್ರಕರಣವನ್ನು ಸಿಬಿಐಗೆ ವಹಿಸಲು ಒತ್ತಾಯ

ಟ್ರೆಂಡಿಂಗ್‌