Teenage | ಹದಿಹರೆಯದ ಮಕ್ಕಳ ಪೋಷಕರಿಗೆ ಎಂಟು ಗುಟ್ಟುಗಳು! - Vistara News

ಪ್ರಮುಖ ಸುದ್ದಿ

Teenage | ಹದಿಹರೆಯದ ಮಕ್ಕಳ ಪೋಷಕರಿಗೆ ಎಂಟು ಗುಟ್ಟುಗಳು!

ಹದಿಹರೆಯದ ಮಕ್ಕಳ ಮನದಲ್ಲಿ ಏನು ನಡೆಯುತ್ತಿದೆ ಎಂಬುದು ಪೋಷಕರಾಗಿ ನಿಮಗೆ ಅರಿವಿರಲಿ. ಅವರನ್ನು ಅರ್ಥ ಮಾಡಿಕೊಳ್ಳಲು ಈ 8 ಅಂಶಗಳು ನಿಮಗೆ ನೆರವಾಗಬಹುದು.

VISTARANEWS.COM


on

teenage
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಪೋಷಕರಿಗೆ ಮಕ್ಕಳ ಬೆಳವಣಿಗೆಯ ಹಾದಿಯಲ್ಲಿ ಒಂದೊಂದು ವರ್ಷವೂ ಚಾಲೆಂಜೇ. ಪುಟ್ಟ ಮಗುವನ್ನು ಸದಾ ಕಾಲ ಎತ್ತಿಕೊಳ್ಳಬೇಕಾದಾಗ, ಮಗು ನಡೆಯುವಷ್ಟು ದೊಡ್ಡದಾದರೆ ಒಳ್ಳೆಯದಿತ್ತು ಎನಿಸುತ್ತದೆ. ಅದೇ ಮಗು ನಡೆಯಲು ಶುರು ಮಾಡಿದ ಮೇಲೆ ಎತ್ತಿಕೊಳ್ಳೋದರಲ್ಲೇ ಸುಖವಿತ್ತು ಅನಿಸುತ್ತದೆ. ಪುಟ್ಟ ಮಗು ಮೊದಲ ಹೆಜ್ಜೆ ಇಡುವಾಗಿನಿಂದ ಮೊದಲ ದಿನ ಶಾಲೆಯ ಮೆಟ್ಟಿಲು ಹತ್ತುವವರೆಗೆ, ʻಅಬ್ಬ ಇನ್ನು ಚಿಂತೆಯಿಲ್ಲ, ಮಗು ಒಂದು ಹಂತಕ್ಕೆ ಬಂತುʼ ಅಂತ ನಿಟ್ಟುಸಿರು ಬಿಡುವ ಹಾಗಿಲ್ಲ. ಆಯಾ ವಯಸ್ಸಿಗೆ ತಕ್ಕಂತೆ ಮಕ್ಕಳ ವಿಷಯದಲ್ಲಿ ಸವಾಲುಗಳು ಇದ್ದೇ ಇರುತ್ತದೆ.

ಇನ್ನು ಮಕ್ಕಳು ಹದಿಹರೆಯಕ್ಕೆ ಕಾಲಿಟ್ಟರೆ ಪೋಷಕರು ಮೈಯೆಲ್ಲ ಕಣ್ಣಾಗಬೇಕಾಗುವುದೂ ನಿಜವೇ. ಇಂಥ ಸಮಯ ಮಕ್ಕಳನ್ನು ಪೋಷಕರಾಗಿ ಕಾಯುವುದಕ್ಕಿಂತಲೂ ಗೆಳೆಯರಾಗಿ ಇರುವುದು ಒಳ್ಳೆಯದು ಎಂಬುದು ಹಲವು ಅನುಭವಿಗಳ ಮಾತು. ಮನೆತುಂಬ ತಂಟೆ ಮಾಡುತ್ತಾ, ಹಿಂದೆಮುಂದೆ ಸುತ್ತಾಡುತ್ತಿದ್ದ ಮಕ್ಕಳು ಕಿಶೋರಾವಸ್ಥೆಗೆ ಕಾಲಿಟ್ಟಾಗ ಇದ್ದಕ್ಕಿದ್ದಂತೆ ಮೌನಿಗಳಾಗುವುದು, ಪೋಷಕರ ಗಮನ ಕಡಿಮೆಯಾಗುವುದು ಕೆಲವೊಮ್ಮೆ ಎಂಥ ಸಂದಿಗ್ಧಗಳನ್ನೂ ಸಮಸ್ಯೆಯನ್ನೂ ತಂದೊಡ್ಡಬಹುದು. ಹಾಗಾಗಿ ಬಹಳ ಸೂಕ್ಷ್ಮ ವಯಸ್ಸಾದ ಹದಿಹರೆಯದಲ್ಲಿ ಮಕ್ಕಳ ಜೊತೆ ಪೋಷಕರ ವರ್ತನೆ ಹೇಗಿರಬೇಕು, ಹೇಗಿರುವ ಮೂಲಕ ಮಕ್ಕಳನ್ನು ಸರಿ ಹಾದಿಯಲ್ಲೇ ನಡೆಯುವಂತೆ ಮಾಡಬಹುದು ಎಂಬ ಕೆಲವು ಸೂಕ್ಷ್ಮಗಳು ಇಲ್ಲಿವೆ.

೧. ಸಂಬಂಧ ಚೆನ್ನಾಗಿರಲಿ: ಹದಿಹರೆಯ ಒಂದು ಸೂಕ್ಷ್ಮವಾದ ಕಾಲ. ಹೀಗಾಗಿ ಮಕ್ಕಳ ಜೊತೆಗೆ ಪೋಷಕರು ಉತ್ತಮ ಸಂಬಂಧ ಕಾಯ್ದುಕೊಳ್ಳುವುದು ಬಹಳ ಮುಖ್ಯ. ಮಕ್ಕಳಿಗೆ ಯಾವುದು ಮುಖ್ಯವೋ ಆ ಬಗ್ಗೆ ಗಮನ ಕೊಡಿ. ನಿಮ್ಮ ಬಗ್ಗೆಯೂ ಮಕ್ಕಳಿಗೆ ವಿವರಿಸಿ. ಅವರಿಗೆ ವಿಷಯವನ್ನು ಮನದಟ್ಟು ಮಾಡುವ ಸಂದರ್ಭ ಅದು ಉಪದೇಶವಾಗದೆ, ನೀವು ಅನುಭವಿಸಿದ್ದನ್ನು ಮನಬಿಚ್ಚಿ ಹೇಳಿಕೊಳ್ಳಿ. ಆಗ ಮಕ್ಕಳು ತಮ್ಮ ಬಗ್ಗೆಯೂ ನಿಮ್ಮಲ್ಲಿ ಮನಬಿಚ್ಚಿ ಹೇಳಿಕೊಳ್ಳುವ ಆತ್ಮೀಯತೆ ಸಾಧ್ಯವಾಗುತ್ತದೆ. ಮಕ್ಕಳಿಗೆ ಅವರ ಅಭಿಪ್ರಾಯಗಳ, ಆಯ್ಕೆಗಳ, ಆಲೋಚನೆಗಳ ಹಾಗೂ ನಿರ್ಧಾರದ ಬಗ್ಗೆ ಹೇಳಿಕೊಳ್ಳುವ ಸ್ವಾತಂತ್ರ್ಯ ಹಾಘೂ ಸಮಯ ಎರಡನ್ನೂ ಕೊಡಿ. ನಿಮ್ಮ ಅಭಿಪ್ರಾಯಗಳನ್ನೂ ಹೇಳಿಕೊಳ್ಳಿ. ಅವರು ಚಿಕ್ಕವರಾಗಿದ್ದಾಗ ನೀವು ಅವರ ಜೊತೆ ಚೆನ್ನಾಗಿ ಬಾಂಧವ್ಯ ರೂಪುಗೊಳಿಸಿದ್ದೀರೆಂದಾದಲ್ಲಿ, ಅದನ್ನು ಕಿಶೋರಾವಸ್ಥೆಯಲ್ಲಿ ವಯಸ್ಸಿಗೆ ತಕ್ಕಂತೆ ಮುಂದುವರಿಸುವುದರಲ್ಲಿ ಕಷ್ಟವಾಗುವುದಿಲ್ಲ.

೨. ಉತ್ತಮ ಕೇಳುಗರಾಗಿ: ಮಕ್ಕಳೊಂದಿಗೆ ಮಾತನಾಡುವಾಗ ಅವರ ಮಾತುಗಳನ್ನೂ ಕೇಳಿಸಿಕೊಳ್ಳುವುದು ಬಹಳ ಮುಖ್ಯ. ಅವರ ಅಭಿಪ್ರಾಯಗಳಿಗೂ ನಿಮ್ಮದಕ್ಕೂ ವ್ಯತ್ಯಾಸವಿರಬಹುದು, ಆದರೆ, ನಿಮ್ಮ ಅಭಿಪ್ರಾಯವನ್ನು ಅವರ ಮೇಲೆ ಹೇರಲು ಹೋಗದಿರಿ. ಮೊದಲು ಅವರ ಮಾತುಗಳನ್ನು ಕೇಳಿಸಿಕೊಳ್ಳುವುದು ಬಹಳ ಮುಖ್ಯ. ಇದು ಇಬ್ಬರ ನಡುವಿನ ಬಾಂಧವ್ಯದ ಕೊಂಡಿ. ಅವರೂ ನಿಮ್ಮ ಅಭಿಪ್ರಾಯಗಳಿಗೆ ಗೌರವ ಕೊಡುವುದನ್ನು ಕಲಿತುಕೊಳ್ಳುವುದೇ ಇಲ್ಲಿಂದ ಎಂಬುದನ್ನು ನೆನಪಿಡಿ. ಇಂಥ ವಯಸ್ಸಿನಲ್ಲಿ ನೀವು ಅವರ ಮಾತಿಗೆ ಗೌರವ ಕೊಡದಿದ್ದರೆ, ಸಂಬಂಧದ ನಡುವೆ ಅಂತರ ಹೆಚ್ಚುತ್ತಾ ಹೋಗುತ್ತದೆ.

ಇದನ್ನೂ ಓದಿ | Parenting tips | ಮಕ್ಕಳನ್ನು ಕಲಿಕೆಗೆ ಪ್ರೇರೇಪಿಸಲು 6 ವೈಜ್ಞಾನಿಕ ದಾರಿಗಳು!

೩. ಸಂಪೂರ್ಣ ಗಮನವಿರಲಿ: ಮಕ್ಕಳು ಮಾತನಾಡುವಾಗ, ಅವರ ಮಾತುಗಳನ್ನು ಕೇಳಿಸಿಕೊಳ್ಳುವಾಗ ಸಂಪೂರ್ಣ ಗಮನ ಅವರಿಗೆ ನೀಡಿ. ಅಂದರೆ, ನಿಮ್ಮ ದೇಹಭಾಷೆಯೂ ಅದಕ್ಕೆ ಪೂರಕವಾಗಿರಲಿ. ಅವರ ಕಣ್ಣನ್ನು ನೋಡಿ. ಅವರಿಗೆ ನೀವು ಅವರ ಮೇಳೆ ಸಂಪೂರ್ಣ ಗಮನ ಕೊಡುತ್ತಿದ್ದೀರೆಂಬುದು ಮನವರಿಕೆಯಾಗಲಿ. ಒಂದು ಮಾತನಾಡದೆಯೂ ನೀವು ಅವರ ಮಾತುಗಳನ್ನು ಕೇಳಿಸಿಕೊಳ್ಳುತ್ತಿದ್ದೀರಿ ಎಂಬುದು ಅವರಿಗೆ ತಿಳಿಯುವಂತಿರಲಿ.

೬. ಪ್ರಶ್ನೆ ಕೇಳಿ: ಅವರ ಅಭಿಪ್ರಾಯ, ಮಾತಿನ ಸಂದರ್ಭ ಪ್ರಶ್ನೆ ಕೇಳಿ. ಅವರಿಂದ ಆ ವಿಷಯಕ್ಕೆ ಸಂಬಂಧಿಸಿ ಆಳವಾದ ಅಭಿಪ್ರಾಯ ಹೊರಬರಲಿ. ಆ ಮೂಲಕ ವಿಷಯದ ಆಳಕ್ಕೆ ಹೋಗುವುದು ಹಾಗೂ ಅದರ ಸಾಧಕ ಭಾದಕಗಳು ಅವರಿಗೇ ತಿಳಿಯಲಿ. ಅಥವಾ ಸರಿಯಾಗಿ ವಿವರಿಸಿ ಹೇಳು ಎನ್ನಬಹುದು. ಕೊನೆಗೆ ನೀನು ಹೇಳಿದ್ದು ಹೀಗೆ, ನಾನು ಅರ್ಥ ಮಾಡಿಕೊಂಡದ್ದು ಸರಿಯಾಗಿದೆಯೇ ಎಂದು ಅದನ್ನು ಮತ್ತೆ ಹೇಳಬಹುದು.

೭. ಪಾಸಿಟಿವ್‌ ಪ್ರತಿಕ್ರಿಯೆ ನೀಡಿ: ಮಕ್ಕಳು ಉತ್ತಮ ಕೆಲಸ ಮಾಡಿದಾಗ, ಅವರ ನಿರ್ಧಾರಗಳು ಸರಿಯೆನಿಸಿದಾಗ, ಶ್ರಮದಿಂದ ಸಾಧಿಸಿದಾಗ ಬೆನ್ನು ತಟ್ಟಿ. ಪುಟ್ಟದಾದರೂ ಸರಿ, ದೊಡ್ಡದಾದರೂ ಸರಿ. ಇದು ಅವರಲ್ಲಿ, ಆತ್ಮವಿಶ್ವಾಸ, ಧೈರ್ಯವನ್ನು ಹೆಚ್ಚಿಸುತ್ತದೆ.

ಇದನ್ನೂ ಓದಿ | Parenting tips: ನಿಮ್ಮ ಮಕ್ಕಳು ದೊಡ್ಡವರಾಗಿಬಿಡುವ ಮೊದಲೇ ನೀವು ಮಕ್ಕಳಾಗಿಬಿಡಿ!

೮. ಮಾತನಾಡಿ: ಮಕ್ಕಳ ಜೊತೆ ಮಾತನಾಡುವುದು ಬಹಳ ಮುಖ್ಯ. ಕೇವಲ ವಿಷಯವಿದ್ದಾಗ ಮಾತ್ರವಲ್ಲ. ಪ್ರತಿನಿತ್ಯ ಇಬ್ಬರ ನಡುವೆ ಸಂವಹನವಿರಲಿ. ಬಹಳಷ್ಟು ಸಾರಿ ಮಕ್ಕಳು ಯಾವ ವಿಷಯಕ್ಕ ಕೊರಗುತ್ತಿದ್ದಾರೆ, ಯಾವುದು ಅವರನ್ನು ಕೀಳರಿಮೆಯಾಗಿ ಕಾಡುತ್ತಿದೆ ಎಂದು ಹದಿಹರೆಯದಲ್ಲಿ ಪೋಷಕರು ಕಂಡು ಹಿಡಿವಲ್ಲಿ ಸೋಲುತ್ತಾರೆ. ಮೌನಕ್ಕೆ ಶರಣಾದ ಮಕ್ಕಳನ್ನು ಮನಬಿಚ್ಚಿ ಮಾತನಾಡಿಸಲು ಪ್ರಯತ್ನಿಸುವುದು ಬಹಳ ಕಷ್ಟ. ಇವುಗಳ ಬಗ್ಗೆ ಗಮನ ಇರಲಿ. ಅದಕ್ಕಾಗಿ ಅವರ ಜೊತೆಗೊಂದು ಶಾಂತವಾದ, ಅವರು ಹೇಳಿದ್ದನ್ನು ಶಾಂತವಾಗಿ ಕೇಳುವ ಸಂಬಂಧವನ್ನು ಬೆಳೆಸಿಕೊಳ್ಳಿ. ʻಇಬ್ಬರೂ ಸೇರಿ ಈ ಸಮಸ್ಯೆಗೆ ಪರಿಹಾರ ಹುಡುಕೋಣ, ನಾನು ನಿನ್ನೊಂದಿಗಿದ್ದೇನೆʼ ಮಾತುಗಳು ಮಕ್ಕಳಲ್ಲಿ ಧೈರ್ಯ ತುಂಬಬಹುದು. ಬಹಳ ಜಾಗರೂಕತೆ ಇಲ್ಲಿ ಮುಖ್ಯ ಎಂಬುದು ನೆನಪಿಡಿ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಉದ್ಯೋಗ

Job Alert: ಬಂಧನ್‌ ಬ್ಯಾಂಕ್‌ನಲ್ಲಿದೆ ಉದ್ಯೋಗಾವಕಾಶ; ಅಪ್ಲೈ ಮಾಡಲು ಮೇ 31 ಕೊನೆಯ ದಿನ

Job Alert: ಭಾರತದ ಪ್ರಮುಖ ಖಾಸಗಿ ವಲಯದ ಬ್ಯಾಂಕ್‌ಗಳಲ್ಲಿ ಒಂದಾದ ಬಂಧನ್‌ ಬ್ಯಾಂಕ್‌ ದೇಶಾದ್ಯಂತ ಖಾಲಿ ಇರುವ 31 ಬ್ಯಾಂಕ್ ಸಹಾಯಕ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. 12ನೇ ತರಗತಿ ತೇರ್ಗಡೆ ಹೊಂದಿದವರು ಮತ್ತು ತತ್ಸಮಾನ ವಿದ್ಯಾರ್ಹತೆ ಹೊಂದಿರುವವರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಕೆಗೆ ಮೇ 31 ಕೊನೆಯ ದಿನ. ಅಭ್ಯರ್ಥಿಗಳು ಕಂಪ್ಯೂಟರ್‌ ಜ್ಞಾನ ಹೊಂದಿರುವುದು ಕಡ್ಡಾಯ.

VISTARANEWS.COM


on

Job Alert
Koo

ಬೆಂಗಳೂರು: ಬ್ಯಾಂಕ್‌ ಉದ್ಯೋಗಕ್ಕಾಗಿ(Bank Job) ಹುಡುಕಾಟ ನಡೆಸುತ್ತಿದ್ದೀರಾ? ಹಾಗಾದರೆ ಇಲ್ಲಿದೆ ಗೋಲ್ಡನ್‌ ಚಾನ್ಸ್‌. ಭಾರತದ ಪ್ರಮುಖ ಖಾಸಗಿ ವಲಯದ ಬ್ಯಾಂಕ್‌ಗಳಲ್ಲಿ ಒಂದಾದ ಬಂಧನ್‌ ಬ್ಯಾಂಕ್‌ (Bandhan Bank) ದೇಶಾದ್ಯಂತ ಖಾಲಿ ಇರುವ 31 ಬ್ಯಾಂಕ್ ಸಹಾಯಕ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ (Bandhan Bank Assistant Notification 2024). 12ನೇ ತರಗತಿ ತೇರ್ಗಡೆ ಹೊಂದಿದವರು ಮತ್ತು ತತ್ಸಮಾನ ವಿದ್ಯಾರ್ಹತೆ ಹೊಂದಿರುವವರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಕೆಗೆ ಮೇ 31 ಕೊನೆಯ ದಿನ (Job Alert).

ವಿದ್ಯಾರ್ಹತೆ ಮತ್ತು ವಯೋಮಿತಿ

ದ್ವಿತೀಯ ಪಿಯುಸಿ ಪಾಸಾದವರು, ಪದವಿ ಪಡೆದವರು ಮತ್ತು ತತ್ಸಮಾನ ವಿದ್ಯಾರ್ಹತೆ ಹೊಂದಿದರವರು ಅರ್ಜಿ ಸಲ್ಲಿಬಹುದು. ಅಭ್ಯರ್ಥಿಗಳು ಕಂಪ್ಯೂಟರ್‌ ಜ್ಞಾನ ಹೊಂದಿರುವುದು ಕಡ್ಡಾಯ. ಅಭ್ಯರ್ಥಿಗಳ ಕನಿಷ್ಠ ವಯಸ್ಸು 18 ವರ್ಷ ಮತ್ತು ಗರಿಷ್ಠ ವಯಸ್ಸು 30 ವರ್ಷ. ಅಂದರೆ ಅಭ್ಯರ್ಥಿಗಳು 1994ರ ಏಪ್ರಿಲ್‌ 3 ಮತ್ತು 2006ರ ಏಪ್ರಿಲ್‌ 3ರೊಳಗೆ ಜನಿಸಿರಬೇಕು. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಲಭ್ಯ. ಎಸ್‌ಸಿ / ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷಗಳ ರಿಯಾಯಿತಿ ಇದೆ.

ಆಯ್ಕೆ ವಿಧಾನ ಮತ್ತು ಅರ್ಜಿ ಶುಲ್ಕ

ಸಂದರ್ಶನ, ದಾಖಲಾತಿ ಪರಿಶೀಲನೆ, ವೈದ್ಯಕೀಯ ಪರೀಕ್ಷೆ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ. ಆನ್‌ಲೈನ್‌ ಮೂಲಕ ಸಂದರ್ಶನ ನಡೆಯಲಿದೆ. ಯಾವುದೇ ಅಭ್ಯರ್ಥಿಗಳು ಅರ್ಜಿ ಶುಲ್ಕ ಪಾವತಿಸಬೇಕಾಗಿಲ್ಲ.

ಕಾರ್ಯ ವೈಖರಿ

ಆಯ್ಕೆಯಾಗುವ ಉದ್ಯೋಗಿಗಳು ಗ್ರಾಹಕರ ಖಾತೆಗಳನ್ನು ನಿರ್ವಹಿಸುವುದು, ಹಣ ವರ್ಗಾವಣೆಗಳು ಮತ್ತು ಠೇವಣಿಗಳನ್ನು ಪ್ರಕ್ರಿಯೆ ನಡೆಸುವುದು, ಡ್ರಾಫ್ಟ್‌ ಮತ್ತು ಚೆಕ್‌ ನೀಡುವುದು, ಲಾಕರ್‌ಗಳ ನಿರ್ವಹಣೆ, ಗ್ರಾಹಕರ ಪ್ರಶ್ನೆಗಳಿಗೆ ಉತ್ತರ ನೀಡುವುದು ಮತ್ತು ಸಮಸ್ಯೆಗಳನ್ನು ಪರಿಹರಿಸುವುದು, ಬ್ಯಾಂಕಿನ ನಿಯಮಗಳು ಮತ್ತು ನಿಬಂಧನೆಗಳನ್ನು ಅನುಸರಿಸುವುದು, ಕ್ಯಾಶ್ ನಿರ್ವಹಣೆ ಮುಂತಾದ ಜವಾಬ್ದಾರಿ ನಿರ್ವಹಿಸಬೇಕಾಗುತ್ತದೆ. ಉದ್ಯೋಗದ ಸ್ಥಳ: ಭಾರತಾದ್ಯಂತ.

ಬ್ಯಾಂಕ್‌ ಬಗ್ಗೆ

ಕೋಲ್ಕತ್ತಾದಲ್ಲಿ ಕೇಂದ್ರ ಕಚೇರಿ ಹೊಂದಿರುವ ಬಂಧನ್‌ ಬ್ಯಾಂಕ್‌ ದೇಶದ 34 ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಶಾಖೆಗಳನ್ನು ಹೊಂದಿದೆ. ಬ್ಯಾಂಕ್‌ಗೆ ಸುಮಾರು 2.51 ಕೋಟಿ ಗ್ರಾಹಕರಿದ್ದಾರೆ.

Bandhan Bankನ ಸಹಾಯಕ ಹುದ್ದೆಗಳ ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್‌ ಮಾಡಿ.

ಅರ್ಜಿ ಸಲ್ಲಿಸುವ ವಿಧಾನ

  • ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್‌ ಮಾಡಿ.
  • ಮೊದಲು ನಿಮ್ಮ ಹೆಸರು ನೋಂದಾಯಿಸಿ.
  • ಈಗ ಕಂಡುಬರುವ ಪಾಸ್‌ವರ್ಡ್‌ ಬಳಸಿ ಲಾಗಿನ್‌ ಆಗಿ.
  • ಅಪ್ಲಿಕೇಷನ್‌ ಫಾರಂ ಭರ್ತಿ ಮಾಡಿ.
  • ಅಗತ್ಯ ಡಾಕ್ಯುಮೆಂಟ್‌, ಸಹಿ, ಫೋಟೊ ಅಪ್‌ಲೋಡ್‌ ಮಾಡಿ.
  • ವಿವರಗಳನ್ನು ಮತ್ತೊಮ್ಮೆ ಪರಿಶೀಲಿಸಿ ಎಲ್ಲವೂ ಸರಿಯಿದ್ದರೆ Submit ಬಟನ್‌ ಕ್ಲಿಕ್‌ ಮಾಡಿ.

ಹೆಚ್ಚಿನ ವಿವರಗಳಿಗೆ ಎಚ್‌ಆರ್‌ ವಿಭಾಗದ ಫೋನ್‌ ನಂಬರ್‌: 7501496783 ಅಥವಾ ಇಮೇಲ್‌ hrraj.bankingofficial@gmail.com ಅನ್ನು ಸಂಪರ್ಕಿಸಿ.

ಇದನ್ನೂ ಓದಿ: KPTCL Recruitment: 902 ಹುದ್ದೆಗಳ ನೇಮಕಾತಿಗೆ ಕೆಪಿಟಿಸಿಎಲ್‌ ಆದೇಶ

Continue Reading

ಪ್ರಮುಖ ಸುದ್ದಿ

ವಿಸ್ತಾರ ಸಂಪಾದಕೀಯ: ಕುಡುಕ ಬಾಲಕನಿಂದ ಅಪಘಾತ ಪ್ರಕರಣ; ಪುಣೆ ಪೊಲೀಸರ ದಿಟ್ಟ ಕ್ರಮ ಶ್ಲಾಘನೀಯ

ವಿಸ್ತಾರ ಸಂಪಾದಕೀಯ: ಪೊಲೀಸ್ ವ್ಯವಸ್ಥೆಯನ್ನು ಪ್ರಾಮಾಣಿಕವಾಗಿ ಕೆಲಸ ಮಾಡಲು ಪ್ರಚೋದಿಸಿದಾಗ, ಪ್ರಭಾವ ಬಳಸಿ ಅಥವಾ ಅಧಿಕಾರ ಬಳಸಿ ದಾರಿ ತಪ್ಪಿಸಲು ಪ್ರಯತ್ನಿಸದೆ ಇದ್ದರೆ, ಸರಿಯಾಗಿಯೇ ಕೆಲಸ ಮಾಡುತ್ತಾರೆ. ಅದಕ್ಜೆ ಪುಣೆ ಪ್ರಕರಣವೇ ಉದಾಹರಣೆ.

VISTARANEWS.COM


on

Porsche car accident ವಿಸ್ತಾರ ಸಂಪಾದಕೀಯ
Koo

ಪುಣೆಯಲ್ಲಿ ಕಂಠಮಟ್ಟ ಮದ್ಯಪಾನ (Drink and drive) ಮಾಡಿ, ಅಪ್ಪ ಕೊಡಿಸಿದ ಐಷಾರಾಮಿ ಪೋರ್ಷೆ ಕಾರನ್ನು (Pune Porsche car accident) ಯದ್ವಾತದ್ವಾ ಓಡಿಸಿ ಇಬ್ಬರ ಜೀವ ತೆಗೆದ ಅಪ್ರಾಪ್ತ ವಯಸ್ಕನ (Juvenile) ಪ್ರಕರಣದಲ್ಲಿ ಹಲವು ಬೆಳವಣಿಗೆಗಳು ಆಗಿವೆ. 17 ವರ್ಷದ ವೇದಾಂತ್‌ ಅಗರ್‌ವಾಲ್‌ ಐಷಾರಾಮಿ ಪೋರ್ಷೆ ಕಾರನ್ನು ಗಂಟೆಗೆ 200 ಕಿ.ಮೀ. ವೇಗದಲ್ಲಿ ಓಡಿಸಿ ಬೈಕ್‌ಗೆ ಡಿಕ್ಕಿ ಹೊಡೆಸಿದ್ದ. ಪರಿಣಾಮ ಬೈಕ್‌ನಲ್ಲಿ ಸಂಚರಿಸುತ್ತಿದ್ದ ಮಧ್ಯಪ್ರದೇಶದ ಎಂಜಿನಿಯರ್‌ಗಳಾದ (Engineers) 24 ವರ್ಷದ ಅನೀಶ್ ಅವಧಿ ಮತ್ತು ಅಶ್ವಿನಿ ಕೊಶ್ತಾ ಸ್ಥಳದಲ್ಲಿಯೇ ಮೃತಪಟ್ಟಿದ್ದರು. ಘಟನೆಯ ದೃಶ್ಯ ಸಿಸಿ ಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿತ್ತು. ಅಪಘಾತ ಆಗುತ್ತಿದ್ದಂತೆ ಸ್ಥಳೀಯರೆಲ್ಲ ಒಟ್ಟುಗೂಡಿ ಸೆರೆ ಹಿಡಿದು ಥಳಿಸಿ ಅವನನ್ನು ಪೊಲೀಸರಿಗೆ ಒಪ್ಪಿಸಿದ್ದರು. ದುರಂತ ಎಂದರೆ ವೇದಾಂತ್‌ ಅಗರ್‌ವಾಲ್‌ನ ಬಂಧನವಾದ ಕೇವಲ 15 ಗಂಟೆಗಳಲ್ಲೇ ಬಾಲಾಪರಾಧಿ ನ್ಯಾಯ ಮಂಡಳಿ ಆತನಿಗೆ ಜಾಮೀನು ಮಂಜೂರು ಮಾಡಿತ್ತು. ಜಾಮೀನು ನಿರಾಕರಿಸುವಷ್ಟು ಅಪರಾಧವು ಗಂಭೀರವಾಗಿಲ್ಲ ಎಂದು ಅಭಿಪ್ರಾಯಪಟ್ಟ ನ್ಯಾಯಾಲಯ, ಅಪಘಾತಗಳ ಬಗ್ಗೆ 300 ಪದಗಳ ಪ್ರಬಂಧ ಬರೆಯಲು ಹೇಳಿತ್ತು. ಈ ಹಾಸ್ಯಾಸ್ಪದ ತೀರ್ಪಿಗೆ ಸಾಕಷ್ಟು ವಿರೋಧ ವ್ಯಕ್ತವಾಗಿತ್ತು.

ಈ ಪ್ರಕರಣದಲ್ಲಿ ನ್ಯಾಯಾಂಗದ ಬಗ್ಗೆ ಬಂದ ಕಟು ಟೀಕೆಯ ನಂತರ ಪೊಲೀಸರು ಹಾಗೂ ನ್ಯಾಯಾಂಗವೂ ಎಚ್ಚೆತ್ತುಕೊಂಡಂತಿದೆ. ಪೊಲೀಸರು ಚುರುಕಾಗಿ ಕಾರ್ಯಪ್ರವೃತ್ತರಾಗಿದ್ದಾರೆ. ನ್ಯಾಯಾಂಗವೂ ಈ ಜಾಮೀನನ್ನು ರದ್ದುಪಡಿಸಿದ್ದು, ಆರೋಪಿ ಬಾಲಕನನ್ನು ರಿಮ್ಯಾಂಡ್‌ ಹೋಂಗೆ ಕಳುಹಿಸಿದೆ. ಈತನನ್ನು ವಯಸ್ಕನಂತೆ ಪರಿಗಣಿಸಿ ವಿಚಾರಣೆ ಮಾಡಲಾಗುತ್ತದೆ ಎಂದಿದ್ದಾರೆ ಪೊಲೀಸರು. ಈ ಪ್ರಕರಣದಲ್ಲಿ ಲೈಸೆನ್ಸ್‌ ರಹಿತ ಅಪ್ರಾಪ್ತನಿಗೆ ಕಾರನ್ನು ಓಡಿಸಲು ಕೊಟ್ಟ ಅಪ್ಪನೂ ಅಪರಾಧಿ, ಆತ ತಪ್ಪಿಸಿಕೊಳ್ಳಲು ಅವಕಾಶ ಮಾಡಿಕೊಟ್ಟ ಅಜ್ಜನೂ ಅಪರಾಧಿಯಾಗಿದ್ದು, ಇಬ್ಬರನ್ನೂ ಬಂಧಿಸಲಾಗಿದೆ. ಅಪಘಾತವಾದಾಗ ಕಾರನ್ನು ತಾನು ಓಡಿಸುತ್ತಿದ್ದೆ ಎಂದು ಹೇಳಿಕೊಳ್ಳುವಂತೆ ಕಾರು ಚಾಲಕನನ್ನು ಬಲವಂತ ಮಾಡಿದ್ದು ಕೂಡ ಬೆಳಕಿಗೆ ಬಂದಿದ್ದು, ಅದೂ ಕೂಡ ಒಂದು ಅಪರಾಧ. ಅಪಘಾತಕ್ಕೂ ಮುನ್ನ ಅಪ್ರಾಪ್ತ ವಯಸ್ಕ ಮದ್ಯ ಸೇವಿಸಿದ ಎರಡು ಬಾರ್‌ಗಳ ಮಾಲೀಕರು ಮತ್ತು ನೌಕರರ ವಿರುದ್ಧವೂ ಕಾನೂನು ಕ್ರಮ ಕೈಗೊಳ್ಳಲಾಗಿದೆ. ಸರ್ಕಾರಿ ಆಸ್ಪತ್ರೆಯ ವೈದ್ಯರಿಬ್ಬರು ಬಾಲಾಪರಾಧಿಯ ರಕ್ತದ ಮಾದರಿಯನ್ನು ಬದಲಾಯಿಸಿ ಆರೋಪಿಯನ್ನು ಬಚಾವ್‌ ಮಾಡಲು ಯತ್ನಿಸಿರುವುದು ಬೆಳಕಿಗೆ ಬಂದಿದ್ದು, ಇಬ್ಬರನ್ನೂ ಅರೆಸ್ಟ್‌ ಮಾಡಲಾಗಿದೆ. ದುಡ್ಡಿಗಾಗಿ ರಕ್ತದ ಮಾದರಿಯನ್ನು ಡಸ್ಟ್‌ ಬಿನ್‌ಗೆ ಎಸೆದ ಲ್ಯಾಬ್‌ ಗುಮಾಸ್ತನನ್ನೂ ವಶಕ್ಕೆ ಪಡೆಯಲಾಗಿದೆ.

ಈ ಪ್ರಕರಣದಲ್ಲಿ ಪೊಲೀಸರು ಕೆಲ ಆರಂಭಿಕ ಜಡತೆಗಳ ನಂತರ, ಸಾಕಷ್ಟು ಚುರುಕಾಗಿ ಹಾಗೂ ಸಮಗ್ರವಾಗಿಯೇ ಕಾರ್ಯ ನಿರ್ವಹಿಸಿದ್ದಾರೆ ಎನ್ನಬೇಕು. ಹೀಗೆ ಒಂದು ಅಪರಾಧದ ಎಲ್ಲ ಮಗ್ಗುಲುಗಳಲ್ಲಿಯೂ ತನಿಖೆ ನಡೆಸಿ, ಸಾಕ್ಷ್ಯಗಳನ್ನು ಸಂಗ್ರಹಿಸಿ, ವಿವರವಾದ ಹಾಗೂ ಗಟ್ಟಿಯಾದ ಚಾರ್ಜ್‌ಶೀಟ್‌ ಸಲ್ಲಿಸಿದಾಗ ಮಾತ್ರ ನಿಜವಾದ ಅಪರಾಧಿಗಳಿಗೆ ಶಿಕ್ಷೆಯಾಗಲು ಸಾಧ್ಯ. ನ್ಯಾಯಾಂಗವೂ ಅಷ್ಟೆ, ಆರಂಭದಲ್ಲಿ ಪ್ರಕರಣದ ಗಂಭೀರತೆಯನ್ನು ಅರ್ಥ ಮಾಡಿಕೊಂಡಿರಲಿಲ್ಲ; ದೇಶಾದ್ಯಂತ ಅಸಮಾಧಾನ ವ್ಯಕ್ತವಾದಾಗ ಅದಕ್ಕೂ ಈ ಪ್ರಕರಣದ ಗಂಭೀರತೆ ಅರ್ಥವಾದಂತಿದೆ. ಶ್ರೀಮಂತರ ಮಕ್ಕಳು ಉದ್ದೇಶರಹಿತ ಹಾಗೂ ನಿರಂಕುಶವಾಗಿ ಬೆಳೆದಾಗ ಇಂಥ ಸನ್ನಿವೇಶ ಸೃಷ್ಟಿಯಾಗುತ್ತದೆ. ಸರಿಯಾದ ಶಿಕ್ಷಣ ಹಾಗೂ ಸಂಸ್ಕಾರ ಕೊಡಿಸದ ಪೋಷಕರೂ ಈ ಘೋರ ಅಪರಾಧದ ಹೊಣೆಯನ್ನು ಹೊರಬೇಕಾಗುತ್ತದೆ. ಇಂಥ ಅಪ್ರಾಪ್ತರನ್ನು ವಯಸ್ಕರೆಂದೇ ಪರಿಗಣಿಸಿ ಶಿಕ್ಷಿಸಬೇಕಾದ ಅಗತ್ಯವಿದೆ. ದಿಲ್ಲಿ ನಿರ್ಭಯಾ ರೇಪ್ ಮತ್ತು ಕಗ್ಗೊಲೆ ಪ್ರಕರಣದಲ್ಲಿ ಅಪ್ರಾಪ್ತ ವಯಸ್ಕ ಆರೋಪಿಯೇ ಅತಿ ಬರ್ಬರವಾಗಿ ನಡೆದುಕೊಂಡಿದ್ದ ಎಂಬುದನ್ನು ನೆನಪಿಸಿಕೊಳ್ಳಬೇಕು.

ಪೊಲೀಸ್ ವ್ಯವಸ್ಥೆಯನ್ನು ಪ್ರಾಮಾಣಿಕವಾಗಿ ಕೆಲಸ ಮಾಡಲು ಪ್ರಚೋದಿಸಿದಾಗ, ಪ್ರಭಾವ ಬಳಸಿ ಅಥವಾ ಅಧಿಕಾರ ಬಳಸಿ ದಾರಿ ತಪ್ಪಿಸಲು ಪ್ರಯತ್ನಿಸದೆ ಇದ್ದರೆ, ಸರಿಯಾಗಿಯೇ ಕೆಲಸ ಮಾಡುತ್ತಾರೆ. ಅದಕ್ಜೆ ಪುಣೆ ಪ್ರಕರಣವೇ ಉದಾಹರಣೆ. ಇನ್ನು ವಿಚಾರಣೆಯ ಹಂತದಲ್ಲಿ ಆರೋಪಿಯ ಅಪರಾಧವನ್ನು ರುಜುವಾತುಪಡಿಸುವ ಸಾಕ್ಷ್ಯಾಧಾರಗಳನ್ನು ನ್ಯಾಯಾಲಯದ ಮುಂದೆ ಸಮರ್ಪಕವಾಗಿ ಮಂಡಿಸಿ, ಪಾತಕಿಗೆ ಶಿಕ್ಷೆಯಾಗುವಂತೆ ನೋಡಿಕೊಳ್ಳಬೇಕಿದೆ.

ಇದನ್ನೂ ಓದಿ: ವಿಸ್ತಾರ ಸಂಪಾದಕೀಯ: ಗುಜರಾತ್ ಬೆಂಕಿ ದುರಂತ ನಮಗೆ ಎಚ್ಚರಿಕೆಯ ಪಾಠವಾಗಲಿ

Continue Reading

ಭವಿಷ್ಯ

Dina Bhavishya : ಈ ರಾಶಿಯವರು ಇಂದು ದೊಡ್ಡದೊಂದು ಸಮಸ್ಯೆಯಿಂದ ಹೊರ ಬರುತ್ತೀರಿ

Dina Bhavishya: ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ಉತ್ತರಾಯಣ, ವಸಂತ ಋತು, ವೈಶಾಖ ಮಾಸ, ಕೃಷ್ಣ ಪಕ್ಷದ ಪಂಚಮಿ ದಿನವಾದ ಇಂದು ದ್ವಾದಶ ರಾಶಿಗಳ ಭವಿಷ್ಯ ಹೇಗಿದೆ ಎಂಬ ಮಾಹಿತಿಯನ್ನು ಇಲ್ಲಿ ನೀಡಲಾಗಿದೆ.

VISTARANEWS.COM


on

By

Dina Bhavishya
Koo

ಚಂದ್ರನು ಮಂಗಳವಾರವೂ ಕುಂಭ ರಾಶಿಯಲ್ಲೆ ನೆಲಸಲಿದ್ದಾನೆ. ಇದರಿಂದಾಗಿ ಮೇಷ, ಕಟಕ, ಸಿಂಹ, ವೃಶ್ಚಿಕ, ಮಕರ, ಮೀನ ರಾಶಿಯವರಿಗೆ ಚಂದ್ರನ ಬಲ ದೊರೆಯಲಿದೆ. ಇಂದಿನ ದಿನ ಭವಿಷ್ಯವನ್ನು (Kannada Dina Bhavishya) ನೋಡುವುದಾದರೆ, ಮೇಷ ರಾಶಿಯವರು ನೀವು ಇಂದು ಸಾಲಗಳಿಂದ ಮುಕ್ತರಾಗಬಹುದು. ನಿಮ್ಮ ಮನಸ್ಸಿನಲ್ಲಿ ಉದ್ಭವವಾಗುವ ಹೊಸ ಹಣ ಗಳಿಕೆಯ ವಿಚಾರಗಳಿಂದ ಲಾಭ ತೆಗೆದುಕೊಳ್ಳುವ ಸಾಧ್ಯತೆ ಇದೆ. ವೃಶ್ಚಿಕ ರಾಶಿಯವರು ನೆರೆಹೊರೆಯವರೊಂದಿಗೆ ಜಗಳವಾಗುವ ಸಾಧ್ಯತೆ, ಆದಷ್ಟು ಮಾತಿನಲ್ಲಿ ಹಿಡಿತವಿರಲಿ. ಕುಟುಂಬದ ಸದಸ್ಯರೊಬ್ಬರ ಆರೋಗ್ಯ ಹದಗೆಡವ ಕಾರಣ ಆರ್ಥಿಕವಾಗಿ ಬಳಲುವ ಸಾಧ್ಯತೆ ಇದೆ. ಕೆಲಸದ ನಿಧಾನಗತಿ ಸ್ವಲ್ಪ ಒತ್ತಡ ತೆರೆದಿಡುತ್ತದೆ. ಇದೂ ಸೇರಿದಂತೆ ದ್ವಾದಶ ರಾಶಿಗಳ ಇಂದಿನ ಭವಿಷ್ಯ ಹೇಗಿದೆ? ಪಂಚಾಂಗ ಏನು ಹೇಳುತ್ತದೆ ಎಂಬುದನ್ನು ತಿಳಿಯೋಣ.

ಇಂದಿನ ಪಂಚಾಂಗ (kannada panchanga) (28-05-2024)

ಶ್ರೀ ಶಕೇ 1946, ಕ್ರೋಧಿನಾಮ ಸಂವತ್ಸರ, ಉತ್ತರಾಯಣ, ವಸಂತ ಋತು, ವೈಶಾಖ ಮಾಸ, ಕೃಷ್ಣ ಪಕ್ಷ.
ತಿಥಿ: ಪಂಚಮಿ 15:23 ವಾರ: ಮಂಗಳವಾರ
ನಕ್ಷತ್ರ: ಉತ್ತರಾಷಾಡ 09:32 ಯೋಗ: ಬ್ರಹ್ಮ 26:04
ಕರಣ: ತೈತುಲ 15:23 ಅಮೃತ ಕಾಲ: ರಾತ್ರಿ 10:38 ರಿಂದ 12:10ರವರಗೆ

ಸೂರ್ಯೋದಯ : 05:52   ಸೂರ್ಯಾಸ್ತ : 06:42

ರಾಹುಕಾಲ : ಮಧ್ಯಾಹ್ನ 3.00 ರಿಂದ 4.30
ಗುಳಿಕಕಾಲ: ಮಧ್ಯಾಹ್ನ 12 ರಿಂದ 1.30
ಯಮಗಂಡಕಾಲ: ಬೆಳಗ್ಗೆ 9.00 ರಿಂದ 10.30

ದ್ವಾದಶ ರಾಶಿ ಭವಿಷ್ಯ (Dina Bhavishya in Kannada)

Horoscope Today

ಮೇಷ: ಕೆಲವು ಮಾನಸಿಕ ಒತ್ತಡಗಳ ಹೊರತಾಗಿಯೂ ಆರೋಗ್ಯ ಚೆನ್ನಾಗಿರುತ್ತದೆ. ಆರ್ಥಿಕ ಜೀವನದಲ್ಲಿ ಇಂದು ಸಂತೋಷ ಉಳಿದಿರುತ್ತದೆ. ಇದರೊಂದಿಗೆ ನೀವು ಇಂದು ಸಾಲಗಳಿಂದ ಮುಕ್ತರಾಗಬಹುದು. ನಿಮ್ಮ ಮನಸ್ಸಿನಲ್ಲಿ ಉದ್ಭವವಾಗುವ ಹೊಸ ಹಣ ಗಳಿಕೆಯ ವಿಚಾರಗಳಿಂದ ಲಾಭ ತೆಗೆದುಕೊಳ್ಳುವ ಸಾಧ್ಯತೆ ಇದೆ. ಉದ್ಯೋಗಿಗಳಿಗೆ ಶುಭ ಫಲ. ಕೌಟುಂಬಿಕವಾಗಿ ಸಾಧಾರಣ ಫಲ. ಅದೃಷ್ಟ ಸಂಖ್ಯೆ: 7

Horoscope Today

ವೃಷಭ:ಇಂದು ನಿಮ್ಮ ಪ್ರೀತಿಯ ಜೀವನದಲ್ಲಿ ಅದ್ಭುತ ದಿನವಾಗಿದೆ. ನೀವು ದೀರ್ಘಕಾಲದ ಪ್ರಯೋಜನಗಳನ್ನು ಹೊಂದಿರುವ ಯೋಜನೆಗಳ ಮೇಲೆ ಕೆಲಸ ಮಾಡವ ಸಾಧ್ಯತೆ ಇದೆ. ಪ್ರವಾಸ ಮನರಂಜನೆ ಮತ್ತು ಸಾಮಾಜಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಸಾಧ್ಯತೆ ಇದೆ. ನಿಮ್ಮ ವೈವಾಹಿಕ ಜೀವನದಲ್ಲಿ ಅನೇಕ ಏರಿಳಿತಗಳ ನಂತರ, ಇಂದು ಪರಸ್ಪರರಿಗೆ ನಿಮ್ಮ ಪ್ರೀತಿಯನ್ನು ಆಸ್ವಾದಿಸುವ ಸುವರ್ಣ ದಿನವಿದು. ಆರೋಗ್ಯ ಮಧ್ಯಮವಾಗಿರಲಿದೆ. ಕೌಟುಂಬಿಕವಾಗಿ ಶುಭ ಫಲ ಇರಲಿದೆ. ಉದ್ಯೋಗಿಗಳಿಗೆ ಶುಭ. ಅದೃಷ್ಟ ಸಂಖ್ಯೆ: 8

Horoscope Today

ಮಿಥುನ: ಉದ್ಯೋಗಿಗಳಿಗೆ ಆಪ್ತರಿಂದ ಸಲಹೆ ಸೂಚನೆಗಳು ಸಿಗಲಿದೆ. ಕುಟುಂಬದಲ್ಲಿ ಮೂರನೇ ವ್ಯಕ್ತಿಗಳ ಹಸ್ತಕ್ಷೇಪವಾಗದಂತೆ ಎಚ್ಚರಿಕೆವಹಿಸಿ. ಶ್ರೇಷ್ಠ ಜನರೊಡನೆ ಸಂಬಂಧ ನಿಮ್ಮಲ್ಲಿ ಒಳ್ಳೆಯ ವಿಚಾರಗಳು ಮತ್ತು ಯೋಜನೆಗಳನ್ನು ತರುತ್ತದೆ. ಆರೋಗ್ಯ ಮಧ್ಯಮವಾಗಿರಲಿದೆ. ಆರ್ಥಿಕವಾಗಿ ಸಭಲತೆ ಇರಲಿದೆ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 6

Horoscope Today

ಕಟಕ: ನಿಮ್ಮ ಶ್ರಮಕ್ಕೆ ತಕ್ಕ ಪ್ರತಿಫಲ ಸಿಗಲಿದೆ. ಆರ್ಥಿಕವಾಗಿ ಸದೃಢ ಇರಲಿದೆ. ವ್ಯಾಪಾರ ವ್ಯವಹಾರಗಳಲ್ಲಿ ಅಧಿಕ ಲಾಭ ಇರಲಿದೆ. ಉದ್ಯೋಗಕ್ಕೆ ಸಂಬಂಧಿಸಿದ ಜನರು ಇಂದು ಕೆಲಸದ ಸ್ಥಳದಲ್ಲಿ ಸಮಸ್ಯೆಗಳನ್ನು ಎದುರಿಸಬೇಕಾಗಬಹುದು, ತಾಳ್ಮೆಯಿಂದ ಇರಿ. ಆರೋಗ್ಯ ಪರಿಪೂರ್ಣವಾಗಿರಲಿದೆ. ಕೌಟುಂಬಿಕವಾಗಿ ಮಿಶ್ರ ಫಲ.
ಅದೃಷ್ಟ ಸಂಖ್ಯೆ: 1

Horoscope Today

ಸಿಂಹ: ಹಣಕಾಸಿನ ವ್ಯವಹಾರಗಳಿಗೆ ಸಂಬಂಧಿಸಿದಂತೆ ಮನೆಯಲ್ಲಿ ಭಿನ್ನಾಭಿಪ್ರಾಯಗಳು ಮೂಡುವ ಸಾಧ್ಯತೆ ಇದೆ. ನಿಮ್ಮ ಸರ್ವಾಧಿಕಾರಿ ಧೋರಣೆಯಿಂದಾಗಿ ನಿಮ್ಮ ಸಹೋದ್ಯೋಗಿಗಳಿಂದ ಟೀಕೆಗೆ ಗುರಿಯಾಗುವ ಸಾಧ್ಯತೆ ಹೆಚ್ಚು. ಆರೋಗ್ಯದ ಕುರಿತು ವಿಶೇಷ ಕಾಳಜಿ ವಹಿಸಿ. ಆರ್ಥಿಕವಾಗಿ ಬಳಲುವ ಸಾಧ್ಯತೆ ಇದೆ, ಅನಗತ್ಯ ಖರ್ಚುಗಳ ಬಗ್ಗೆ ಹಿಡಿತವಿರಲಿ. ಕೌಟುಂಬಿಕವಾಗಿ ಮಿಶ್ರಫಲ.
ಅದೃಷ್ಟ ಸಂಖ್ಯೆ: 8

Horoscope Today

ಕನ್ಯಾ:ಅನಗತ್ಯ ಒತ್ತಡದಿಂದ ಹೊರಬರಲು ನಿಮ್ಮ ಪ್ರೀತಿ ಪಾತ್ರರೊಡನೆ ಸಮಯವನ್ನು ಕಳೆಯಿರಿ. ಅತಿಥಿಗಳ ಆಗಮನದಿಂದಾಗಿ ಕೊಂಚಮಟ್ಟಿಗೆ ಸಮಾಧಾನ ಸಿಗಲಿದೆ. ಕೆಲಸ ಕಾರ್ಯಗಳಲ್ಲಿ ಕೊಂಚಮಟ್ಟಿಗೆ ನಿಧಾನವಾದರೂ ಪ್ರಯತ್ನವನ್ನು ಬಿಡಬೇಡಿ. ಮುಂದೊಂದು ದಿನ ನಿಮ್ಮ ಪ್ರಯತ್ನಕ್ಕೆ ತಕ್ಕ ಪ್ರತಿಫಲ ಸಿಗಲಿದೆ. ಆರೋಗ್ಯ ಮಧ್ಯಮವಾಗಿರಲಿದೆ. ಆರ್ಥಿಕವಾಗಿ ಉತ್ತಮವಾಗಿರಲಿದೆ. ಕೌಟುಂಬಿಕವಾಗಿ ಶುಭಫಲ. ಅದೃಷ್ಟ ಸಂಖ್ಯೆ: 7

ಭವಿಷ್ಯ ಮತ್ತು ಜ್ಯೋತಿಷ್ಯಕ್ಕೆ ಸಂಬಂಧಿಸಿದ ಲೇಖನ/ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್‌ (Click Here) ಮಾಡಿ

Horoscope Today

ತುಲಾ: ಆರೋಗ್ಯ ದೃಷ್ಟಿಯಿಂದ ಉತ್ತಮವಾದ ದಿನ. ನಿಮ್ಮ ಹರ್ಷಚಿತ್ತದ ಮನಸ್ಸು ನಿಮಗೆ ಇನ್ನಷ್ಟೂ ಆತ್ಮವಿಶ್ವಾಸ ತರಲಿದೆ. ಒಬ್ಬ ಆಸಕ್ತಿದಾಯಕ ವ್ಯಕ್ತಿಯನ್ನು ಭೇಟಿ ಮಾಡುವ ಸಾಧ್ಯತೆಗಳಿವೆ. ಆರ್ಥಿಕವಾಗಿ ಸಾಧಾರಣ ಫಲ ಇರಲಿದೆ. ಉದ್ಯೋಗಿಗಳಿಗೆ ಮಿಶ್ರಫಲ. ಕೌಟುಂಬಿಕವಾಗಿ ಸಂತೋಷದ ವಾತಾವರಣ ಇರಲಿದೆ. ಅದೃಷ್ಟ ಸಂಖ್ಯೆ: 9

Horoscope Today

ವೃಶ್ಚಿಕ: ನೆರೆಹೊರೆಯವರೊಂದಿಗೆ ಜಗಳವಾಗುವ ಸಾಧ್ಯತೆ, ಆದಷ್ಟು ಮಾತಿನಲ್ಲಿ ಹಿಡಿತವಿರಲಿ. ಕುಟುಂಬದ ಸದಸ್ಯರೊಬ್ಬರ ಆರೋಗ್ಯ ಹದಗೆಡವ ಕಾರಣ ಆರ್ಥಿಕವಾಗಿ ಬಳಲುವ ಸಾಧ್ಯತೆ ಇದೆ. ಕೆಲಸದ ನಿಧಾನಗತಿ ಸ್ವಲ್ಪ ಒತ್ತಡ ತೆರೆದಿಡುತ್ತದೆ. ಉದ್ಯೋಗಿಗಳಿಗೆ ಕಿರಿಕಿರಿ ಇರಲಿದೆ. ಸಂಗಾತಿಯಿಂದ ಸಲಹೆ ಸಿಗಲಿದೆ. ಕೌಟುಂಬಿಕವಾಗಿ ಶುಭಫಲ.
ಅದೃಷ್ಟ ಸಂಖ್ಯೆ: 2

Horoscope Today

ಧನಸ್ಸು: ದೃಢ ವಿಶ್ವಾಸದ ನಿರ್ಧಾರದಿಂದಾಗಿ ಸುದೀರ್ಘವಾದ ಸಮಸ್ಯೆಗಳಿಗೆ ಪರಿಹಾರ ಸಿಗಲಿದೆ. ಸ್ನೇಹಿತರಿಂದ ಆರ್ಥಿಕ ಸಹಾಯವನ್ನು ಬೇಡುವರು ಆಲೋಚಿಸಿ ಸಹಾಯ ಮಾಡಿ. ಬಹಳ ದಿನಗಳಿಂದ ಪ್ರಯತ್ನಿಸುತ್ತಿದ್ದ ಕಾರ್ಯಗಳು ಯಶಸ್ಸನ್ನು ತಂದುಕೊಡಲಿದೆ. ದಿನದ ಮಟ್ಟಿಗೆ ಖರ್ಚು ಹೆಚ್ಚಾಗಲಿದೆ. ಉದ್ಯೋಗದ ಸ್ಥಳದಲ್ಲಿ ನಿಮಗೆ ಪ್ರಸಂಶೆ ಪ್ರೋತ್ಸಾಹ ಸಿಗಲಿದೆ. ಕೌಟುಂಬಿಕವಾಗಿ ಶುಭಫಲ. ಅದೃಷ್ಟ ಸಂಖ್ಯೆ: 8

Horoscope Today

ಮಕರ: ಇಂದು ನೀವು ಹಲವಾರು ಒತ್ತಡಗಳು ಮತ್ತು ಭಿನ್ನಾಭಿಪ್ರಾಯಗಳನ್ನು ಎದುರಿಸಬೇಕಾಗಬಹುದು, ಇದು ನಿಮಗೆ ಕಿರಿಕಿರಿ ಹಾಗೂ ಆತಂಕದ ಭಾವನೆಗಳನ್ನು ಉಂಟುಮಾಡಬಹುದು. ಕುಟುಂಬದವರ ಬೆಂಬಲ ಪ್ರೋತ್ಸಾಹದಿಂದಾಗಿ ಕೊಂಚಮಟ್ಟಿಗೆ ನಿರಾಳವಾಗುವಿರಿ. ಆರೋಗ್ಯದ ಬಗ್ಗೆ ಕಿಂಚಿತ್ತು ಕಾಳಜಿ ವಹಿಸುವುದು ಉತ್ತಮ. ಉದ್ಯೋಗದ ಸ್ಥಳದಲ್ಲಿ ಒತ್ತಡ ಹೆಚ್ಚಲಿದೆ. ಖರ್ಚಿನಲ್ಲಿ ಹಿಡಿತವಿರಲಿ. ಕೌಟುಂಬಿಕವಾಗಿವಾಗಿ ಸಾಧಾರಣ ಫಲ.
ಅದೃಷ್ಟ ಸಂಖ್ಯೆ: 8

Horoscope Today

ಕುಂಭ: ಯಾವುದೇ ದೀರ್ಘಕಾಲೀನ ಹೂಡಿಕೆಗಳನ್ನು ದಿನದ ಮಟ್ಟಿಗೆ ಮಾಡುವುದು ಬೇಡ. ಆತುರದಲ್ಲಿ ನಿರ್ಧಾರಗಳನ್ನು ತೆಗೆದುಕೊಳ್ಳುವುದು ಬೇಡ. ಸ್ನೇಹಿತರ ಜತೆ ಕೆಲವು ಆಹ್ಲಾದಕರ ಕ್ಷಣಗಳನ್ನು ಕಳೆಯುವ ಸಾಧ್ಯತೆ ಇದೆ. ವ್ಯಾಪಾರ ವ್ಯವಹಾರಗಳಲ್ಲಿ ಮಧ್ಯಮ ಲಾಭ ಇರಲಿದೆ. ಉದ್ಯೋಗಿಗಳಿಗೆ ಸ್ವಲ್ಪ ಕಿರಿಕಿರಿಯಾಗಿರಲಿದೆ. ಕೌಟುಂಬಿಕವಾಗಿ ಮಿಶ್ರಫಲ.
ಅದೃಷ್ಟ ಸಂಖ್ಯೆ: 6

Horoscope Today

ಮೀನ: ಹೂಡಿಕೆಯಲ್ಲಿ ಲಾಭಾಂಶ ಕಡಿಮೆ ಇರಲಿದೆ. ನೀವು ಯಾವುದೇ ದೊಡ್ಡ ಸಮಸ್ಯೆಯಿಂದ ಹೊರಬರಬಹುದು. ಪ್ರೀತಿ ಪಾತ್ರರೊಂದಿಗೆ ಪ್ರಯಾಣ ಬೆಳೆಸುವ ಸಾಧ್ಯತೆ ಇದೆ. ಉದ್ಯೋಗದ ಸ್ಥಳದಲ್ಲಿ ಕೊಂಚ ನೆಮ್ಮದಿ ಸಿಗಲಿದೆ. ಆರೋಗ್ಯ ಪರಿಪೂರ್ಣವಾಗಿರಲಿದೆ. ಕೌಟುಂಬಿಕವಾಗಿ ಮಿಶ್ರ ಫಲ ನೀಡಲಿದೆ. ಅದೃಷ್ಟ ಸಂಖ್ಯೆ: 3

Horoscope Today

ವಿದ್ವಾನ್ ಶ್ರೀ ನವೀನಶಾಸ್ತ್ರಿ ರಾ. ಪುರಾಣಿಕ
ಖ್ಯಾತ ಜ್ಯೋತಿಷಿ ಹಾಗೂ ಉಪನ್ಯಾಸಕರು

M: 9481854580 | pnaveenshastri@gmail.com

Continue Reading

ಪ್ರಮುಖ ಸುದ್ದಿ

Vijayapura News : ಪ್ರೀತಿಸಿದವಳನ್ನೇ ಮದುವೆಯಾಗಲು ಯುವಕನ ಹಠ; ಪರಸ್ಪರ ಪೆಟ್ರೋಲ್ ಎರಚಿ ಬೆಂಕಿ ಹಚ್ಚಿಕೊಂಡು ಆಸ್ಪತ್ರೆ ಸೇರಿದರು!

Vijayapura News: ಘಟನೆಯಲ್ಲಿ ಯಾರು ಯಾರಿಗೆ ಪೆಟ್ರೋಲ್ ಎರಚಿ ಹತ್ಯೆಗೆ ಯತ್ನಿಸಿದರು ಅನ್ನೋದು ತನಿಖೆಯಿಂದ ಹೊರಬರಬೇಕಿದೆ. ತಮ್ಮ ಪ್ರೀತಿಗೆ ಮೋಸವಾಗಿದ್ದು ರಾಹುಲ್ ಸಿಟ್ಟಿಗೆ ಕಾರಣವಾಗಿತ್ತು. ಇನ್ನೊಂದು ಕಡೆಗೆ ರಾಹುಲ್​ ಕಿರುಕುಳದಿಂದ ಯುವತಿ ಮನೆಯವರು ಬೇಸತ್ತಿದ್ದರು ಎಂದು ಪೊಲೀಸರು ಹೇಳಿದ್ದಾರೆ.

VISTARANEWS.COM


on

Vijayapura news
Koo

ವಿಜಯಪುರ : ತಮ್ಮ ಮಗಳನ್ನು ಮದುವೆಯಾಗಲು ಬಂದ ಆಕೆಯ ಪ್ರಿಯಕರನ ಮೇಲೆ ಪೋಷಕರೇ ಪೆಟ್ರೋಲ್​ ಹಾಕಿ ಸುಟ್ಟಿರುವ ಪ್ರಕರಣವೊಂದು ವಿಜಯಪುರ ಜಿಲ್ಲೆಯ (Vijayapura News) ಮುದ್ದೇಬಿಹಾಳ ಪಟ್ಟಣದಲ್ಲಿ ನಡೆದಿದೆ. ಅದರೆ, ಯುವತಿಯ ಪೋಷಕರು ಇದನ್ನು ನಿರಾಕರಿಸಿದ್ದು ಮಗಳನ್ನು ಕೊಡದಿರಲು ನಿರ್ಧರಿಸಿದ ನಮ್ಮನ್ನು ಸುಡಲು ಯುವಕ ಪೆಟ್ರೋಲ್ ತಂದಿದ್ದ ಎಂದು ಆರೋಪಿಸಿದ್ದಾರೆ. ಘಟನೆಯಲ್ಲಿ ಪ್ರಿಯಕರ ರಾಹುಲ್​ ರಾಮನಗೌಡ ಬಿರಾದಾರ ಸುಟ್ಟ ಗಾಯಗಳು ಹಾಗೂ ಮಾರಕಾಸ್ತ್ರಗಳ ಪೆಟ್ಟಿನಿಂದ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆ ಸೇರಿದ್ದಾರೆ. ಯುವತಿಯ ಮನೆಯ ನಾಲ್ವರು ಆಸ್ಪತ್ರೆ ಸೇರಿದ್ದಾರೆ. ಘಟನೆ ಬಗ್ಗೆ ಎರಡೂ ಕಡೆಯಿಂದ ದೂರು ಹಾಗೂ ಪ್ರತಿದೂರು ದಾಖಲಾಗಿದೆ.

ಆಸ್ಪತ್ರೆ ಸೇರಿರುವ ಢವಳಗಿ ಗ್ರಾಮದ ರಾಹುಲ್ ರಾಮನಗೌಡ ಬಿರಾದಾರ ಅವರ ಕುಟುಂಬಸ್ಥರು ಆತನ ಪ್ರಿಯತಮೆ ಐಶ್ವರ್ಯ ಮದರಿ ಅವರ ಚಿಕ್ಕಪ್ಪ ಮುತ್ತು ಮದರಿ, ಚಿಕ್ಕಮ್ಮ ಸೀಮಾ ಮದರಿ ಎಂಬುವರ ಮೇಲೆ ದೂರು ದಾಖಲಿಸಿದ್ದಾರೆ. ಕನ್ಯೆ ಕೇಳಲು ಹೋದ ನಮ್ಮಣ್ಣನಿಗೆ ಬೆಂಕಿ ಹಾಕಿ ಸುಟ್ಟು ರಾಡ್​ನಿಂದ ಹಲ್ಲೆ ನಡೆಸಿದ್ದಾನೆ ಎಂದು ಆರೋಪಿಸಿದ್ದಾರೆ. ಆದರೆ ಐಶ್ವರ್ಯ ಸೇರಿದಂತೆ ಅವರ ಕುಟುಂಬಸ್ಥರು ಮದುವೆಗೆ ಒಪ್ಪದ ನಮ್ಮನ್ನು ಸುಡಲು ರಾಹುಲ್ ಯತ್ನಿಸಿದ್ದಾನೆ ಎಂದು ದೂರು ನೀಡಿದ್ದಾರೆ. ಶೇಕಡಾ 70ರಷ್ಟು ಸುಟ್ಟ ಗಾಯಗಳಿಗೆ ಒಳಗಾಗಿರುವ ರಾಹುಲ್​ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಏನಿದು ಪ್ರಕರಣ?

ರಾಹುಲ್ ರಾಮನಗೌಡ ಬಿರಾದಾರ ಅವರು ಐಶ್ವರ್ಯ ಎಂಬ ಯುವತಿಯನ್ನು ಪ್ರೀತಿಸುತ್ತಿದ್ದ. ಮೂರು ವರ್ಷದಿಂದ ಪರಸ್ಪರ ಪ್ರೀತಿಯ ಬಲೆಯಲ್ಲಿ ಬಿದ್ದಿದ್ದರು. ಅಂತೆಯೇ ಅವರು ಮದುವೆಯಾಗಲು ನಿರ್ಧರಿಸಿದ್ದರು. ಇಬ್ಬರ ಪ್ರೀತಿ ವಿಚಾರ ತಿಳಿದ ಯುವತಿಯ ಪೋಷಕರು ಹುಡುಗನ ಮನೆಯವರಿಗೆ ಬರಲು ಹೇಳಿದ್ದರು. ಅವರು ಅಲ್ಲಿಗೆ ಹೋಗಿದ್ದಾಗ ಯುವತಿ ಮದುವೆ ನಿರಾಕರಿಸಿದ್ದಳು. ಆತನ ಗುಣ ಸರಿ ಇಲ್ಲ, ಹೀಗಾಗಿ ನಾನು ಮದ್ವೆಯಾಗಲ್ಲ ಎಂದು ಹೇಳಿದ್ದಳು. ಹುಡುಗಿ ಮದುವೆ ನಿರಾಕರಣೆ ಮಾಡಿದ್ದಾಳೆ ಎಂದು ರಾಹುಲ್ ಮನೆಯವರು ವಾಪಸ್ ಹೋಗಿದ್ದರು.

ಪ್ರೀತಿಸಿದ ಹುಡುಗಿಯೇ ಸಿಗಬೇಕು ಹಠ ಹಿಡಿದು ರಾಹುಲ್​ ಮತ್ತೆ ಹುಡುಗಿ ಮನೆಗೆ ಹೋಗಿದ್ದ. ಅಲ್ಲದೆ, ಮದುವೆಯಾಗದೇ ಹೋದರೆ ತಾವಿಬ್ಬರು ಜತೆಗಿದ್ದ ಫೋಟೋಗಳನ್ನು ಸೋಷಿಯಲ್ ಮೀಡಿಯಾಗಳಲ್ಲಿ ಪೋಸ್ಟ್ ಮಾಡುವುದಾಗಿ ಬೆದರಿಸಿದ್ದ. ಫೋಟೋ ಬೆದರಿಕೆಗೆ ತಣ್ಣಾಗಾದ ಯುವತಿಯ ಕುಟುಂಬಸ್ಥರು ಆಕೆ ಒಪ್ಪಿದರೆ ಲಗ್ನ ಮಾಡಿ ಕೊಡುವುದಾಗಿ ರಾಜಿ ಮಾಡಿ ಕಳುಹಿಸಿದ್ದರು. ಆ ಬಳಿಕವೂ ವಿವಾದ ಮುಂದುವರಿದಿತ್ತು. ಅಲ್ಲದೆ, ಹಲವು ಬಾರಿ ರಾಜಿ ಪಂಚಾಯತಿ ಕೂಡಾ ಮಾಡಲಾಗಿತ್ತು.

ಇದನ್ನೂ ಓದಿ: Mandya News : ಬೆಳ್ಳೂರಿನಲ್ಲಿ ಮುಸ್ಲಿಮ್ ಯುವಕರ ಗುಂಪಿನಿಂದ ಅಭಿಲಾಷ್​ ಎಂಬುವರ ಮೇಲೆ ಮಾರಕ ಹಲ್ಲೆ

ಸೋಮವಾರ ಮತ್ತೆ ರಾಹುಲ್ ಬಿರಾದಾರ ಐಶ್ವರ್ಯಾ ಮನೆಗೆ ಮತ್ತೆ ಹೋಗಿದ್ದ. ಈ ವೇಳೆ ಮತ್ತೆ ಮಾತುಕತೆ ನಡೆದಿದೆ. ಐಶ್ವರ್ಯಾ ಪೋಷಕರ ಪ್ರಕಾರ ಆತ ಮಾತುಕತೆಗೆ ಬರುವಾಗ ಪೆಟ್ರೋಲ್ ತಂದಿದ್ದ. ಅದನ್ನು ನಮ್ಮ ಮೇಲೆ ಹಾಕಿ ಸುಡಲು ಯತ್ನಿಸಿದ್ದ. ಆದರೆ, ಯುವಕನ ಪೋಷಕರು ಹೇಳುವ ಪ್ರಕಾರ ಐಶ್ವರ್ಯಾ ಅವರ ಪೋಷಕರು ರಾಹುಲ್ ಕೈಯಲ್ಲಿದ್ದ ಮೊಬೈಲ್ ಕಸಿಯಲು ಯತ್ನಿಸಿದ್ದಾರೆ. ಕೊಡದೇ ಹೋದಾಗ ರಾಡ್​ನಿಂದ ತಲೆಗೆ ಹಲ್ಲೆ ಮಾಡಿದ್ದಾರೆ. ಬಳಿಕ ಮೊದಲೇ ತಂದಿಟ್ಟಿದ್ದ ಪೆಟ್ರೋಲ್​ನಿಂದ ಸುಟ್ಟಿದ್ದಾರೆ.

ಘಟನಾ ಸ್ಥಳಕ್ಕೆ ಬಸವನ ಬಾಗೇವಾಡಿ ಡಿಎಸ್ಪಿ ಬಾಳಪ್ಪ ನಂದಗಾಂವ, ಸಿಪಿಐ ಮಲ್ಲಿಕಾರ್ಜುನ ತುಳಸೀಗೇರಿ, ಪಿಎಸೈಗಳಾದ ಸಂಜಯ್ ತಿಪ್ಪರಡ್ಡಿ, ಎಸ್.ಆರ್.ನಾಯಕ ಅವರು ಭೇಟಿ ನೀಡಿ ತನಿಖೆ ಕೈಕೊಂಡಿದ್ದಾರೆ. ವಿಜಯಪುರದಿಂದ ಆಗಮಿಸಿದ್ದ ವಿಶೇಷ ತಂಡ ಘಟನಾ ಸ್ಥಳದಲ್ಲಿನ ಬೆರಳಚ್ಚು ಸೇರಿ ಹಲವು ಸಾಕ್ಷ್ಯಗಳನ್ನು ಸಂಗ್ರಹಿಸಿದೆ.

ಘಟನೆಯಲ್ಲಿ ಯಾರು ಯಾರಿಗೆ ಪೆಟ್ರೋಲ್ ಎರಚಿ ಹತ್ಯೆಗೆ ಯತ್ನಿಸಿದರು ಅನ್ನೋದು ತನಿಖೆಯಿಂದ ಹೊರಬರಬೇಕಿದೆ. ತಮ್ಮ ಪ್ರೀತಿಗೆ ಮೋಸವಾಗಿದ್ದು ರಾಹುಲ್ ಸಿಟ್ಟಿಗೆ ಕಾರಣವಾಗಿತ್ತು. ಇನ್ನೊಂದು ಕಡೆಗೆ ರಾಹುಲ್​ ಕಿರುಕುಳದಿಂದ ಯುವತಿ ಮನೆಯವರು ಬೇಸತ್ತಿದ್ದರು ಎಂದು ಪೊಲೀಸರು ಹೇಳಿದ್ದಾರೆ.

Continue Reading
Advertisement
murder case belagavi news
ಕ್ರೈಂ30 mins ago

Murder Case: ಎಮ್ಮೆ ಮಾರಿ ಬಂದ ಕಾಸಿನಿಂದ ಕುಡಿದ; ಆಕ್ಷೇಪಿಸಿದ ಹೆಂಡತಿಯ ಕೊಂದು ನೇಣು ಹಾಕಿಕೊಂಡ

Pune Porsche Accident
ದೇಶ37 mins ago

Pune Porsche Accident: ಆರೋಪಿಯ ರಕ್ತದ ಮಾದರಿ ಬದಲಿಸಲು 3 ಲಕ್ಷ ರೂ. ಲಂಚ ಪಡೆದಿದ್ದ ವೈದ್ಯರು; ಆಸ್ಪತ್ರೆ ಜವಾನ ಅರೆಸ್ಟ್‌

Andre Russell Dance:
ಕ್ರಿಕೆಟ್39 mins ago

Andre Russell Dance: ಬಾಲಿವುಡ್ ನಟಿ ಅನನ್ಯಾ ಪಾಂಡೆ ಜತೆ ‘ಲುಟ್ ಪಟ್ ಗಯಾ’ ಹಾಡಿಗೆ ಡ್ಯಾನ್ಸ್​ ಮಾಡಿದ ಆ್ಯಂಡ್ರೆ ರಸೆಲ್​

Job Alert
ಉದ್ಯೋಗ56 mins ago

Job Alert: ಬಂಧನ್‌ ಬ್ಯಾಂಕ್‌ನಲ್ಲಿದೆ ಉದ್ಯೋಗಾವಕಾಶ; ಅಪ್ಲೈ ಮಾಡಲು ಮೇ 31 ಕೊನೆಯ ದಿನ

kalaburagi cyber crime news fraud
ಕ್ರೈಂ1 hour ago

Cyber Crime: ಸಿಬಿಐ ಅಧಿಕಾರಿಗಳ ಸೋಗಿನಲ್ಲಿ ವೈದ್ಯರಿಗೆ ವಂಚನೆ; 76 ಲಕ್ಷ ರೂ. ಸುಲಿಗೆ!

Rishabh Pant Video Calls
ಕ್ರೀಡೆ1 hour ago

Rishabh Pant Video Calls: ನ್ಯೂಯಾರ್ಕ್​ನಿಂದ ವಿಡಿಯೊ ಕಾಲ್​ ಮಾಡಿ ರಿಂಕು ಸಿಂಗ್​ಗೆ ಅಭಿನಂದಿಸಿದ ಪಂತ್​

Bomb Threat
ದೇಶ1 hour ago

Bomb Threat: ಸಾಲು ಸಾಲು ಬಾಂಬ್‌ ಥ್ರೆಟ್‌ ಪ್ರಕರಣ; ತಾಜ್‌ ಹೊಟೇಲ್‌ ಬೆನ್ನಲ್ಲೇ ಇಂಡಿಗೋ ವಿಮಾನಕ್ಕೂ ಬೆದರಿಕೆ

India Head Coach
ಕ್ರೀಡೆ2 hours ago

India Head Coach: ಗಂಭೀರ್‌ ಕೋಚ್​ ಆಗುವುದು ಬಹುತೇಕ ಖಚಿತ; ಕುತೂಹಲ ಮೂಡಿಸಿದ ಜಯ್‌ ಶಾ ಭೇಟಿ

hindalaga jail assault case
ಕ್ರೈಂ2 hours ago

Assault Case: ಹಿಂಡಲಗಾ ಜೈಲಿನಲ್ಲಿ ಕೈದಿಯಿಂದಲೇ ಮಾರಣಾಂತಿಕ ಹಲ್ಲೆ; ಭಯದಲ್ಲಿ ಬದುಕುತ್ತಿರುವ ಸಿಬ್ಬಂದಿ!

Viral Video
ವೈರಲ್ ನ್ಯೂಸ್2 hours ago

Viral Video: ನಡು ರಸ್ತೆಯಲ್ಲಿ ಪಿಸ್ತೂಲ್‌ ತೋರಿಸಿ ವ್ಯಕ್ತಿ ಮೇಲೆ ಹಲ್ಲೆ; ಅಂತಾರಾಷ್ಟ್ರೀಯ ಮಟ್ಟದ ಶೂಟರ್‌ನಿಂದ ದಾಂಧಲೆ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Weather Forecast
ಮಳೆ17 hours ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ2 days ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು2 days ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

Karnataka Rain
ಮಳೆ3 days ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ5 days ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ6 days ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ7 days ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು7 days ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

Contaminated Water
ಮೈಸೂರು7 days ago

Contaminated Water : ಡಿ ಸಾಲುಂಡಿಯಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದ ಯುವಕ ಸಾವು

Karnataka Rain
ಮಳೆ1 week ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

ಟ್ರೆಂಡಿಂಗ್‌