ವಿಸ್ತಾರ Explainer | ಹಾಲು, ಬ್ರೆಡ್‌, ಚಿಪ್ಸ್‌, ಬಿಸ್ಕತ್‌, ಚಹಾ ದರ ಕೂಡ ಗಗನಕ್ಕೆ, ಆರ್ಥಿಕ ಬಿಕ್ಕಟ್ಟಿಗೆ ಬ್ರಿಟನ್‌ ತತ್ತರ - Vistara News

EXPLAINER

ವಿಸ್ತಾರ Explainer | ಹಾಲು, ಬ್ರೆಡ್‌, ಚಿಪ್ಸ್‌, ಬಿಸ್ಕತ್‌, ಚಹಾ ದರ ಕೂಡ ಗಗನಕ್ಕೆ, ಆರ್ಥಿಕ ಬಿಕ್ಕಟ್ಟಿಗೆ ಬ್ರಿಟನ್‌ ತತ್ತರ

ಕೋವಿಡ್‌ ಬಿಕ್ಕಟ್ಟು, ರಷ್ಯಾ-ಉಕ್ರೇನ್‌ ಸಂಘರ್ಷ, ಬ್ರೆಕ್ಸಿಟ್‌ ನಂತರದ ಪ್ರತಿಕೂಲ ಸನ್ನಿವೇಶದ ಪರಿಣಾಮ ಬ್ರಿಟನ್‌ ತೀವ್ರ ಆರ್ಥಿಕ ಬಿಕ್ಕಟ್ಟಿಗೆ ಸಿಲುಕಿದೆ. ನೂತನ ಪ್ರಧಾನಿ ರಿಷಿ ಸುನಕ್‌ ಮುಂದಿರುವ ಸವಾಲುಗಳು ಹಲವು. (ವಿಸ್ತಾರ Explainer ) ವಿವರ ಇಲ್ಲಿದೆ.

VISTARANEWS.COM


on

food
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಭಾರತದಲ್ಲಿ ಈರುಳ್ಳಿ, ಟೊಮೆಟೊ, ಅಕ್ಕಿ, ಗೋಧಿ, ಪೆಟ್ರೋಲ್‌ ದರ ಏರಿಕೆಯಾದಾಗ ಹೇಗೆ ಸುದ್ದಿಯಾಗುತ್ತದೆಯೇ, ಅದೇ ರೀತಿ ಬ್ರಿಟನ್‌ನಲ್ಲಿ ಪಾಸ್ಟಾ, ಚಹಾ, ಅಡುಗೆ ಎಣ್ಣೆ ದರಗಳು ಗಗನಕ್ಕೇರಿದೆ. ದರ ಸ್ಫೋಟಕ್ಕೆ ಜನ ಕಂಗಾಲಾಗಿದ್ದಾರೆ. ಸಮೀಕ್ಷೆಗಳ ಪ್ರಕಾರ, ಲಕ್ಷಾಂತರ ಜನ ಒಪ್ಪೊತ್ತಿನ ಊಟಕ್ಕೂ ದಿಕ್ಕು ತೋಚದೆ ಪರದಾಡುತ್ತಿದ್ದಾರೆ. ಅನೇಕ ಮಕ್ಕಳಲ್ಲಿ ಅಪೌಷ್ಟಿಕತೆಯ ಸಮಸ್ಯೆ (ವಿಸ್ತಾರ Explainer) ಉಂಟಾಗಿದೆ.

ಬಿಬಿಸಿಯ ಇತ್ತೀಚಿನ ವರದಿಯ ಪ್ರಕಾರ, ಒಂದು ವರ್ಷದಲ್ಲಿ ಪಾಸ್ಟಾ, ಚಹಾ, ಚಿಪ್ಸ್‌, ಅಡುಗೆ ಎಣ್ಣೆ ದರದಲ್ಲಿ 65% ದರ ಹೆಚ್ಚಳವಾಗಿದೆ. ಅಡುಗೆ ಎಣ್ಣೆ 65%, ಪಾಸ್ಟಾ 60%, ಚಹಾ 50%, ಬ್ರೆಡ್‌ ದರದಲ್ಲಿ 37% ಹೆಚ್ಚಳವಾಗಿದೆ. ದಿನ ನಿತ್ಯ ಬಳಸುವ ಬಿಸ್ಕತ್‌, ಹಾಲಿನ ದರ ಕೂಡ ಜಿಗಿದಿದೆ. ಅಲ್ಲಿನ ರಾಷ್ಟ್ರೀಯ ಅಂಕಿ ಅಂಶಗಳ ಅಂಕಿ ಅಂಶಗಳನ್ನು ವರದಿಯಲ್ಲಿ ಉಲ್ಲೇಖಿಸಲಾಗಿದೆ. ಮನೆ ಬಾಡಿಗೆಯಲ್ಲಿ 30% ಹೆಚ್ಚಳವಾಗಿದೆ. ಅಷ್ಟೇ ಅಲ್ಲ, ಇನ್ನೂ ಆತಂಕಕಾರಿ ವರದಿಗಳು ಹೊರಜಗತ್ತನ್ನೇ ಬೆಚ್ಚಿಬೀಳಿಸುವಂತಿದೆ. ಹಾಗಾದರೆ ಅಲ್ಲಿ ಆಗಿದ್ದೇನು?!

ಬ್ರಿಟನ್‌ನ ನೂತನ ಪ್ರಧಾನಿ ರಿಷಿ ಸುನಕ್‌ ಅವರು ದೇಶದ ಆರ್ಥಿಕ ಬಿಕ್ಕಟ್ಟನ್ನು ಬಗೆಹರಿಸುವುದು ತಮ್ಮ ಆದ್ಯತೆ ಎಂದು ಘೋಷಿಸಿದ್ದಾರೆ. ಗಂಭೀರ ಸ್ವರೂಪದ ಆರ್ಥಿಕ ಸಮಸ್ಯೆ ಇರುವುದನ್ನೂ ಅವರು ಒಪ್ಪಿಕೊಂಡಿದ್ದಾರೆ.

ಕೆಲ ವರದಿಗಳ ಪ್ರಕಾರ ಈ ಸಲದ ಚಳಿಗಾಲದಲ್ಲಿ ಬ್ರಿಟನ್‌ನಲ್ಲಿ ಆಹಾರ ಅಭಾವವೂ ಕಾಣಿಸುವ ಆತಂಕ ಇದೆ. ಬರ, ಅನಿಲದ ದರ ಏರಿಕೆ, ಎರಡಂಕಿ ದಾಟಿದ ಹಣದುಬ್ಬರ, ಬಡ್ಡಿ ದರ ಏರಿಕೆ, ಕೈಗಾರಿಕಾ ಉತ್ಪಾದನೆಯ ಕೊರತೆ ಸೇರಿದಂತೆ ಹಲವಾರು ಸಮಸ್ಯೆಗಳಿಂದ ಬ್ರಿಟನ್‌ ಕಂಗಾಲಾಗಿದೆ.

20 ಲಕ್ಷ ಜನರಿಗೆ ಒಪ್ಪೊತ್ತಿನ ಊಟಕ್ಕೂ ಪರದಾಟ

ಬ್ರಿಟನ್‌ನಲ್ಲಿ ಸುಮಾರು 20 ಲಕ್ಷ ಜನರಿಗೆ ಪ್ರತಿ ದಿನ ಒಂದು ಹೊತ್ತಿನ ಊಟಕ್ಕೂ ಪರದಾಡುವ ಸನ್ನಿವೇಶ ಸೃಷ್ಟಿಯಾಗಿದೆ ಎಂದು ಸಮೀಕ್ಷೆಗಳು ತಿಳಿಸಿವೆ. ಕಳೆದ ಜನವರಿಯಿಂದ ದಿನೇದಿನೆ ಪರಿಸ್ಥಿತಿ ಬಿಗಡಾಯಿಸುತ್ತಿದೆ. ಪ್ರತಿ ಏಳು ಮಂದಿ ವಯಸ್ಕರ ಪೈಕಿ ಒಬ್ಬರು ಆಹಾರ ಅಭದ್ರತೆಯಿಂದ ಬಳಲುತ್ತಿದ್ದಾರೆ ಎಂದು ಫುಡ್‌ ಫೌಂಡೇಷನ್‌ ಚಾರಿಟಿಯ ಸಮೀಕ್ಷೆ ತಿಳಿಸಿದೆ. ಕೋವಿಡ್‌-19 ಮತ್ತು ರಷ್ಯಾ-ಉಕ್ರೇನ್‌ ಸಂಘರ್ಷದ ಬಳಿಕ ಪರಿಸ್ಥಿತಿ ವಿಷಮ ಸ್ಥಿತಿಗೆ ತಲುಪಿದೆ.

ಬ್ರಿಟನ್‌ನಲ್ಲಿ ಕಳೆದ ಸೆಪ್ಟೆಂಬರ್‌ನಲ್ಲಿ ಗ್ರಾಹಕ ದರ ಆಧರಿತ ಹಣದುಬ್ಬರ ಸೂಚ್ಯಂಕ 10.1%ಕ್ಕೆ ಏರಿತ್ತು. ಆಗಸ್ಟ್‌ನಲ್ಲಿ 9.9% ಇತ್ತು. ಇದು ಕಳೆದ 40 ವರ್ಷಗಳಲ್ಲಿಯೇ ಗರಿಷ್ಠ ಮಟ್ಟದ ಹಣದುಬ್ಬರವಾಗಿದೆ.

ರಾಜಕೀಯ ಅಸ್ಥಿರತೆ ಮತ್ತು ಆರ್ಥಿಕ ಬಿಕ್ಕಟ್ಟು

ಬ್ರಿಟನ್‌ನಲ್ಲಿ ಕಳೆದ 6 ವರ್ಷಗಳಲ್ಲಿ 5 ಪ್ರಧಾನಿಗಳನ್ನು ಕಂಡಿದೆ. ಕಳೆದ ಎಂಟು ವಾರಗಳಲ್ಲಿ ಮೂರನೇ ಪ್ರಧಾನಿಯನ್ನು ದೇಶ ಕಾಣುವಂತಾಗಿದೆ. ಈ ರಾಜಕೀಯ ಅನಿಶ್ಚಿತತೆಗೂ ಆರ್ಥಿಕ ಬಿಕ್ಕಟ್ಟಿಗೂ ನಂಟಿದೆ. ಲಿಜ್‌ ಟ್ರಸ್‌ ಕೇವಲ 45 ದಿನಗಳಲ್ಲಿ ರಾಜೀನಾಮೆ ನೀಡುವಂಥ ಪರಿಸ್ಥಿತಿಗೆ ಕೂಡ ಆರ್ಥಿಕ ಸವಾಲುಗಳೇ ಕಾರಣವಾಗಿತ್ತು. ಕಳೆದ ಸೆಪ್ಟೆಂಬರ್‌ನಲ್ಲಿ ಲಿಜ್‌ ಟ್ರಸ್‌ ಸರ್ಕಾರ ಮಂಡಿಸಿದ್ದ ಮಿನಿ ಬಜೆಟ್‌ನಲ್ಲಿ ಘೋಷಿಸಿದ ತೆರಿಗೆ ಕಡಿತದ ಯೋಜನೆಯ ಜಾರಿಗೆ ಸಮರ್ಪಕವಾದ ಹಣಕಾಸು ವ್ಯವಸ್ಥೆಯೇ ಇದ್ದಿರಲಿಲ್ಲ. ಬದಲಿಗೆ ಭಾರಿ ಸಾಲದ ಹೊರೆಯನ್ನು ಮಾಡಲು ನಿರ್ಧರಿಸಲಾಗಿತ್ತು. ಇಂಧನ ಸಬ್ಸಿಡಿ ಯೋಜನೆಯಿಂದ ಬ್ರಿಟನ್ನಿನ ಸಿರಿವಂತರಿಗೆ ಲಾಭವಾಗುವ ಹಾಗೂ ಮಧ್ಯಮ ವರ್ಗದ ಜನತೆಗೆ ಯಾವುದೇ ಪ್ರಯೋಜನ ಆಗುವಂತಿರಲಿಲ್ಲ. ಈ ಎಲ್ಲ ಲೋಪದೋಷಗಳ ಪರಿಣಾಮ ಲಿಜ್‌ ಟ್ರಸ್‌ ಕೈಚೆಲ್ಲಿ ರಾಜೀನಾಮೆ ನೀಡಿದರು.

ಬಡ್ಡಿ ದರ ಏರಿಕೆಯ ಬರ: ಹೆಚ್ಚುತ್ತಿರುವ ಹಣದುಬ್ಬರ ಅಥವಾ ಬೆಲೆ ಏರಿಕೆಯನ್ನು ನಿಯಂತ್ರಿಸಲು ಜಗತ್ತಿನಾದ್ಯಂತ ಬಡ್ಡಿ ದರ ಏರಿಸುವ ಟ್ರೆಂಡ್‌ ಚಾಲ್ತಿಯಲ್ಲಿದೆ. ಬ್ರಿಟನ್‌ ಕೂಡ ಹೊರತಾಗಿಲ್ಲ. ಬ್ಯಾಂಕ್‌ ಆಫ್‌ ಇಂಗ್ಲೆಂಡ್‌ ತನ್ನ ಬಡ್ಡಿ ದರವನ್ನು 2.25%ಕ್ಕೆ ಏರಿಸಿದೆ. ಇದು 2008ರಿಂದಲೇ ಈ ತನಕದ ಗರಿಷ್ಠ ಬಡ್ಡಿಯಾಗಿದೆ. ಸತತ ಏಳನೇ ಸಲ ಬಡ್ಡಿ ದರವನ್ನು ಏರಿಸಲಾಗಿದೆ. ಬ್ರಿಟಿಷ್‌ ಚೇಂಬರ್ಸ್‌ ಆಫ್‌ ಕಾಮರ್ಸ್‌ ಪ್ರಕಾರ, ಬ್ರಿಟನ್‌ ಈಗಾಗಲೇ ಆರ್ಥಿಕ ಹಿಂಜರಿತದಲ್ಲಿದೆ.

ಇಂಧನ ದರ ಸ್ಫೋಟ:

ಹಲವಾರು ದೇಶಗಳು ಇಂಧನ ಬಿಕ್ಕಟ್ಟು ಎದುರಿಸುತ್ತಿವೆ. ಆದರೆ ಬ್ರಿಟನ್‌ ನಲ್ಲಿ ಹಲವು ಕಾರಣಗಳಿಂದ ಇಂಧನ ಬೆಲೆ ಏರಿಕೆ ಕಾಡುತ್ತಿದೆ. ಮೊದಲನೆಯದಾಗಿ 85% ಕುಟುಂಬಗಳು ತಮ್ಮ ಮನೆಗಳನ್ನು ಬೆಚ್ಚಗಿರಿಸಲು ಗ್ಯಾಸ್‌ ಬಾಯ್ಲರ್‌ಗಳನ್ನು ಬಳಸುತ್ತಿವೆ. ಅನಿಲ ಆಧರಿತ ವಿದ್ಯುತ್‌ ಸ್ಟೇಷನ್‌ಗಳಲ್ಲಿ 40% ವಿದ್ಯುತ್‌ ತಯಾರಾಗುತ್ತಿದೆ. ಎರಡನೆಯದಾಗಿ ಐರೋಪ್ಯ ಒಕ್ಕೂಟದ ಇತರ ರಾಷ್ಟ್ರಗಳಿಗೆ ಹೋಲಿಸಿದರೆ ಬ್ರಿಟನ್‌ ಹೆಚ್ಚು ಅನಿಲ ಆಧರಿತ ವಿದ್ಯುತ್‌ ಬಳಸುತ್ತದೆ.

ಕಳೆದ ವರ್ಷ ಚಳಿಗಾಲದಲ್ಲಿ ಪ್ರತಿ ಮನೆಗೆ ವಾರ್ಷಿಕ ಸರಾಸರಿ 1,000 ಪೌಂಡ್‌ ಇಂಧನ ಬಿಲ್‌ ಬರುತ್ತಿತ್ತು. 2022ರ ಅಕ್ಟೋಬರ್‌ ವೇಳೆಗೆ 3,500 ಪೌಂಡ್‌ಗೆ ಏರಿತ್ತು. 2023ರಲ್ಲಿ 5,000 ಪೌಂಡ್‌ಗೆ ಏರಿಕೆಯಾಗುವ ಸಾಧ್ಯತೆ ಇದೆ. ಕಳೆದ ಕೆಲ ವರ್ಷಗಳಿಂದ ಆದಾಯ ಏರಿಕೆಯಾಗದೆ ಅನೇಕ ಕುಟುಂಬಗಳು ಸಂಕಷ್ಟದಲ್ಲಿದ್ದು, ಇದೀಗ ಇಂಧನ ಬಿಲ್‌ ಭಾರಿ ಹೊರೆಯಾಗಿ ಪರಿಣಮಿಸಿದೆ. ಬ್ರಿಟನ್‌ನ ಹಣದುಬ್ಬರ ಹೆಚ್ಚಳಕ್ಕೆ ಇದುವೇ ಪ್ರಮುಖ ಕಾರಣ. ಹಣದುಬ್ಬರ ಏರಿಕೆಯ ಪರಿಣಾಮ ಜನತೆಯ ಆದಾಯದಲ್ಲಿ ಇಳಿಕೆಯಾಗುತ್ತಿದೆ. ಖರ್ಚು ಹೆಚ್ಚುತ್ತಿದೆ.

ರಷ್ಯಾದಿಂದ ಅನಿಲ ಪೂರೈಕೆ ಅಸ್ತವ್ಯಸ್ತ: ಕಳೆದ ಫೆಬ್ರವರಿಯಲ್ಲಿ ರಷ್ಯಾವು ಉಕ್ರೇನ್‌ ವಿರುದ್ಧ ದಾಳಿ ನಡೆಸಿದ ಬಳಿಕ ಬ್ರಿಟನ್‌ ಪಾಶ್ಚಿಮಾತ್ಯ ದೇಶಗಳೊಡನೆ ಕೈಜೋಡಿಸಿ ರಷ್ಯಾ ವಿರುದ್ಧ ನಿರ್ಬಂಧಗಳನ್ನು ಹೇರಿತು. ಇದಾದ ಬಳಿಕ ರಷ್ಯಾದಿಂದ ಬ್ರಿಟನ್‌ಗೆ ತೈಲ ಮತ್ತು ಅನಿಲ ಪೂರೈಕೆ ಅಸ್ತವ್ಯಸ್ತವಾಗಿದೆ. ಚಳಿಗಾಲದ ಅವಧಿಯಲ್ಲಿ ಬ್ರಿಟನ್‌ಗೆ ಇದು ಬಹು ದೊಡ್ಡ ಸವಾಲಾಗಿ ಪರಿಣಮಿಸಿದೆ. ದುಬಾರಿ ಇಂಧನ ಬಿಲ್‌ ಇಡೀ ಎಕಾನಮಿಗೆ ಹೊಡೆತ ಕೊಟ್ಟಿದೆ.

ಮಿನಿ ಬಜೆಟ್‌ನಲ್ಲಿ ಯಡವಟ್ಟು: ಲಿಜ್‌ ಟ್ರಸ್‌ ನೇತೃತ್ವದ ಸರ್ಕಾರ ಜನತೆಯ ಆದಾಯವನ್ನು ಲೆಕ್ಕಿಸದೆ ಎಲ್ಲರಿಗೂ ಒಂದೇ ರೀತಿಯಲ್ಲಿ ಎನರ್ಜಿ ಬಿಲ್‌ ಒದಗಿಸಲು ನಿರ್ಧರಿಸಿತು. ಇಂಧನ ಬಿಲ್‌ ವಾರ್ಷಿಕ 2,500 ಪೌಂಡ್‌ ( 2.38 ಲಕ್ಷ ರೂ.) ಮೀರಬಾರದು. ಹಾಗೂ ಮಿಕ್ಕದ್ದನ್ನು ಸರ್ಕಾರವೇ ಸಬ್ಸಿಡಿ ಮೂಲಕ ಭರಿಸುವುದಾಗಿ ನಿರ್ಧರಿಸಲಾಯಿತು. ಆದರೆ ಇದರಿಂದ ಸಿರಿವಂತರಿಗೆ ಅನುಕೂಲವಾಗಬಹುದೇ ಹೊರತು ಬಡವರಿಗೆ, ಮಧ್ಯಮ ವರ್ಗದವರಿಗೆ ಪ್ರಯೋಜನವಾಗುವ ಯಾವುದೇ ಸಾಧ್ಯತೆ ಇರಲಿಲ್ಲ. ಕೊನೆಗೆ ಈ ವಿವಾದಾತ್ಮಕ ನಿರ್ಧಾರನ್ನು ಹಿಂತೆಗೆದುಕೊಳ್ಳಲಾಯಿತು.

ಪ್ರಧಾನಿ ರಿಷಿ ಸುನಕ್‌ ಮುಂದಿರುವ ಸವಾಲುಗಳೇನು?

Rishi Sunak

ಐರೋಪ್ಯ ಒಕ್ಕೂಟದಿಂದ ಹೊರಬಂದಿರುವ ಬ್ರಿಟನ್‌, ಸ್ವಂತ ಆರ್ಥಿಕ ಚೈತನ್ಯವನ್ನು ದಿನೇದಿನೆ ಕಳೆದುಕೊಳ್ಳುತ್ತಿದೆ. ಆರ್ಥಿಕತೆಯ ಮೂಲಭೂತ ತಳಹದಿ ದುರ್ಬಲವಾಗುತ್ತಿರುವುದು ಇದಕ್ಕೆ ಪ್ರಮುಖ ಕಾರಣ. ಐರೋಪ್ಯ ಒಕ್ಕೂಟದ ಜತೆಗೆ ಯುರೋಪಿನ ಇತರ ದೇಶಗಳ ಜತೆಗೆ ಲೀಲಾಜಾಲವಾಗಿ, ಯಾವುದೇ ಸರಹದ್ದಿನ ಹಂಗು ಇಲ್ಲದೆ ಮುಕ್ತ ವ್ಯಾಪಾರವನ್ನು ನಡೆಸುತ್ತಿದ್ದ ಬ್ರಿಟನ್‌ನ ಉದ್ದಿಮೆದಾರರಿಗೆ ಈಗ ಸಂಕಷ್ಟ ತಲೆದೋರಿದೆ. ಹಿಂದಿನಂತೆ ಮುಕ್ತವಾಗಿ ವ್ಯಾಪಾರ ಮಾಡಲು ಸಾಧ್ಯವಾಗುತ್ತಿಲ್ಲ. ಹಲವು ಉದ್ದಿಮೆಗಳಿಗೆ ಉದ್ಯೋಗಿಗಳ ಕೊರತೆ ಕಾಡುತ್ತಿದೆ. ಕೌಶಲವಿರುವ ಉದ್ಯೋಗಿಗಳ ಅಭಾವವೂ ಉಂಟಾಗಿದೆ.

ಆರ್ಥಿಕತೆ ಸರಿಪಡಿಸುವ ಸವಾಲು: ಹಳಿ ತಪ್ಪಿರುವ ಆರ್ಥಿಕತೆಯ ಬುನಾದಿಯನ್ನು ಬಲಪಡಿಸಬೇಕಾದ ಜವಾಬ್ದಾರಿ ರಿಷಿ ಸುನಕ್‌ ಅವರ ಮುಂದಿದೆ. ಐರೋಪ್ಯ ಒಕ್ಕೂಟದಿಂದ ಕಳೆದು ಹೋಗಿರುವ ವ್ಯಾಪಾರವನ್ನು ಸರಿದೂಗಿಸಲು ಜಗತ್ತಿನ ಇತರ ದೇಶಗಳ ಜತೆಗೆ ವ್ಯಾಪಾರವನ್ನು ಹೆಚ್ಚಿಸಿಕೊಳ್ಳಬೇಕಾಗಿದೆ. ಹೆಚ್ಚುತ್ತಿರುವ ಹಣದುಬ್ಬರ ಹಾಗೂ ಇಂಧನ ದರ ಸ್ಫೋಟವನ್ನು ಸುನಕ್‌ ತಗ್ಗಿಸಬೇಕಾಗಿದೆ. ಈ ಸವಾಲನ್ನು ಅವರು ಹೇಗೆ ನಿರ್ವಹಿಸಲಿದ್ದಾರೆ ಎಂಬುದು ಕುತೂಹಲ ಮೂಡಿಸಿದೆ. ತೆರಿಗೆ ಸಂಗ್ರಹವನ್ನು ಹೊರೆಯಾಗದಂತೆ ಹೆಚ್ಚಿಸಿ, ಸರ್ಕಾರದ ಬೊಕ್ಕಸವನ್ನು ತುಂಬುವುದರ ಜತೆಗೆ ಅಭಿವೃದ್ಧಿಗೆ ಚಾಲನೆ ನೀಡಬೇಕಾಗಿದೆ.

ಪಕ್ಷದಲ್ಲಿ ಒಗ್ಗಟ್ಟು: ಕನ್ಸರ್ವೇಟಿವ್‌ ಪಕ್ಷದಲ್ಲೂ ಒಗ್ಗಟ್ಟು ಮೂಡಿಸಬೇಕಾದ ಜವಾಬ್ದಾರಿ ಮತ್ತು ಸವಾಲು ರಿಷಿ ಸುನಕ್‌ ಮುಂದಿದೆ. ಸಂಭವನೀಯ ಬಂಡಾಯವನ್ನು ಉಪಶಮನಗೊಳಿಸಬೇಕಾಗಿದೆ.

ವಲಸೆ ನಿಯಂತ್ರಣ: ಬ್ರಿಟನ್‌ಗೆ ಹೆಚ್ಚುತ್ತಿರುವ ವಲಸೆಯನ್ನು ನಿಯಂತ್ರಿಸಬೇಕಾದ ಸವಾಲು ರಿಷಿ ಸುನಕ್‌ ಎದುರಿದೆ. ವಲಸೆ ನೀತಿಯನ್ನು ಬಿಗಿಗೊಳಿಸಬೇಕು ಎಂದು ಈ ಹಿಂದೆ ಸುನಕ್‌ ಹೇಳಿದ್ದರು. ಈ ವರ್ಷವೊಂದರಲ್ಲಿಯೇ ಇದುವರೆಗೆ 30,000ಕ್ಕೂ ಹೆಚ್ಚು ಮಂದಿ ಸಣ್ಣ ದೋಣಿಗಳ ಮೂಲಕ ಬ್ರಿಟನ್‌ಗೆ ಅಕ್ರಮವಾಗಿ ನುಸುಳಿದ್ದರು.

ಮುಷ್ಕರದ ಎಚ್ಚರಿಕೆ: ಕೈಗಾರಿಕಾ ವಲಯದಲ್ಲಿ ನವೆಂಬರ್‌ನಲ್ಲಿ ಯೂನಿಯನ್‌ಗಳು ಈ ವರ್ಷ ಮುಷ್ಕರ ನಡೆಸುವುದಾಗಿ ಎಚ್ಚರಿಸಿವೆ. ರೈಲ್ವೆ ಕಾರ್ಮಿಕರ ಒಕ್ಕೂಟ ಮುಷ್ಕರಕ್ಕೆ ಸಜ್ಜಾಗಿದೆ. ವೇತನ ಏರಿಕೆ, ಉದ್ಯೋಗ ಭದ್ರತೆಗೆ ಒತ್ತಾಯಿಸುತ್ತಿವೆ.

ರಕ್ಷಣಾ ವೆಚ್ಚ ಹೆಚ್ಚಳ: ತಾವು ಪ್ರಧಾನಿಯಾದರೆ ರಕ್ಷಣಾ ವೆಚ್ಚವನ್ನು ಹೆಚ್ಚಿಸುವುದಾಗಿ ರಿಷಿ ಸುನಕ್‌ ಈ ಹಿಂದೆ ಹೇಳಿದ್ದರು. ಜತೆಗೆ ಉಕ್ರೇನ್‌ಗೂ ಹೆಚ್ಚಿನ ನೆರವು ನೀಡುವುದಾಗಿ ತಿಳಿಸಿದ್ದರು. ಈ ಭರವಸೆಯನ್ನು ಇನ್ನು ಈಡೇರಿಸಬೇಕಾಗಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Rahul Gandhi: ರಾಹುಲ್‌ ಗಾಂಧಿ ಈಗ ಪ್ರತಿಪಕ್ಷ ನಾಯಕ; ಅವರಿಗಿರುವ ಅಧಿಕಾರ ಯಾವವು? ಸಂಬಳ ಎಷ್ಟು?

Rahul Gandhi: 10 ವರ್ಷಗಳ ಬಳಿಕ ಲೋಕಸಭೆಯಲ್ಲಿ ಪ್ರತಿಪಕ್ಷ ಸ್ಥಾನವು ಕಾಂಗ್ರೆಸ್‌ಗೆ ಲಭಿಸಿದ್ದು, ರಾಹುಲ್‌ ಗಾಂಧಿ ಅವರು ಪ್ರತಿಪಕ್ಷ ನಾಯಕರಾಗಿದ್ದಾರೆ. ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರಕ್ಕೆ ಸೆಡ್ಡು ಹೊಡೆಯಲು ರಾಹುಲ್‌ ಗಾಂಧಿ ಅವರು ಸಜ್ಜಾಗಿದ್ದಾರೆ. ಇನ್ನು ಪ್ರತಿಪಕ್ಷ ನಾಯಕನಾಗಿರುವ ರಾಹುಲ್‌ ಗಾಂಧಿ ಅವರಿಗೆ ಸಿಗುವ ಸಂಬಳ ಎಷ್ಟು? ಅವರಿಗೆ ಇರುವ ವಿಶೇಷ ಅಧಿಕಾರಗಳು ಯಾವವು? ಸವಲತ್ತುಗಳು ಏನೇನು ಎಂಬುದರ ಮಾಹಿತಿ ಇಲ್ಲಿದೆ.

VISTARANEWS.COM


on

Rahul Gandhi
Koo

ನವದೆಹಲಿ: ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ (Rahul Gandhi) ಅವರು ಲೋಕಸಭೆಯಲ್ಲಿ ಪ್ರತಿಪಕ್ಷ ನಾಯಕರಾಗಿ (Leader Of The Opposition) ಆಯ್ಕೆಯಾಗಿದ್ದಾರೆ. ಕಳೆದ ಎರಡು (2014, 2019) ಲೋಕಸಭೆ ಚುನಾವಣೆಯಲ್ಲಿ ಯಾವ ಪಕ್ಷವೂ ಪ್ರತಿಪಕ್ಷವಾಗುವಷ್ಟು ಸೀಟುಗಳನ್ನು ಗೆದ್ದಿರದ ಕಾರಣ ಪ್ರತಿಪಕ್ಷ ನಾಯಕರೇ ಇರಲಿಲ್ಲ. ಆದರೆ, ಕಳೆದ ಚುನಾವಣೆಯಲ್ಲಿ (Lok Sabha Election 2024) ಕಾಂಗ್ರೆಸ್‌ 99 ಕ್ಷೇತ್ರಗಳನ್ನು ಗೆದ್ದಿದ್ದು, ಈಗ ರಾಹುಲ್‌ ಗಾಂಧಿ ಅವರು ಪ್ರತಿಪಕ್ಷ ನಾಯಕರಾಗಿ ಆಯ್ಕೆಯಾಗಿದ್ದಾರೆ. ಇವರು ಆಡಳಿತಾರೂಢ ಪಕ್ಷಕ್ಕೆ ಸೆಡ್ಡು ಹೊಡೆಯುವ ಜತೆಗೆ ಹಲವು ಅಧಿಕಾರಗಳು ಹಾಗೂ ಸವಲತ್ತುಗಳನ್ನು ಪಡೆಯಲಿದ್ದಾರೆ. ಅವುಗಳ ಕುರಿತ ಮಾಹಿತಿ ಹೀಗಿದೆ…

ರಾಹುಲ್‌ ಗಾಂಧಿ ಸಂಬಳ ಎಷ್ಟು?

ರಾಹುಲ್‌ ಗಾಂಧಿ ಅವರು ಸಂಸದನಾಗಿ ಪಡೆಯುವ ಸಂಬಳದ ಜತೆಗೆ ಪ್ರತಿಪಕ್ಷ ನಾಯಕರೂ ಆಗಿರುವ ಕಾರಣ ಅವರಿಗೆ ಮಾಸಿಕ 3.3 ಲಕ್ಷ ರೂ. ಸಂಬಳ ಸಿಗಲಿದೆ. ಅಲ್ಲದೆ, ಕ್ಯಾಬಿನೆಟ್‌ ದರ್ಜೆಯ ಸಚಿವರಿಗೆ ಸಿಗುವ ಸವಲತ್ತುಗಳು, ಭದ್ರತೆ (ಝಡ್‌ ಪ್ಲಸ್‌) ಸಿಗಲಿದೆ. ಕ್ಯಾಬಿನೆಟ್‌ ಸಚಿವರೊಬ್ಬರಿಗೆ ಸಿಗುವ ಬಂಗಲೆಯೇ ರಾಹುಲ್‌ ಗಾಂಧಿ ಅವರಿಗೂ ನೀಡಲಾಗುತ್ತದೆ. ಇದರ ಜತೆಗೆ ಹಲವು ಭತ್ಯೆಗಳು ಕೂಡ ರಾಹುಲ್‌ ಗಾಂಧಿ ಅವರಿಗೆ ಸಿಗಲಿವೆ.

Rahul Gandhi

ಅವರ ಅಧಿಕಾರ ವ್ಯಾಪ್ತಿ ಹೇಗಿರಲಿದೆ?

ರಾಹುಲ್‌ ಗಾಂಧಿ ಅವರು ಪ್ರತಿಪಕ್ಷ ನಾಯಕನಾಗಿ ಹಲವು ಸಂಸದೀಯ ಸಮಿತಿಗಳ ಸದಸ್ಯರೂ ಆಗಿರುತ್ತಾರೆ. ಜಂಟಿ ಸಂಸದೀಯ ಸಮಿತಿಗಳು, ಪಬ್ಲಿಕ್‌ ಅಕೌಂಟ್ಸ್‌ ಸಮಿತಿ ಸದಸ್ಯರಾಗಿರುತ್ತಾರೆ. ಹಾಗೆಯೇ, ಸಿಬಿಐ ನಿರ್ದೇಶಕ, ಮುಖ್ಯ ಚುನಾವಣಾ ಆಯುಕ್ತರು, ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷ, ಚೀಫ್‌ ವಿಜಿಲನ್ಸ್‌ ಕಮಿಷನರ್‌, ಕೇಂದ್ರೀಯ ಮಾಹಿತಿ ಆಯೋಗದ ಅಧ್ಯಕ್ಷರನ್ನು ನೇಮಕ ಮಾಡುವಾಗ ರಾಹುಲ್‌ ಗಾಂಧಿ ಅವರು ಕೂಡ ಅಭಿಪ್ರಾಯ ವ್ಯಕ್ತಪಡಿಸಲಿದ್ದಾರೆ.

ರಾಹುಲ್‌ ಗಾಂಧಿ ಅವರು ಪ್ರತಿಪಕ್ಷ ನಾಯಕನಾಗಿ ಸದನದ ಮುಂದಿನ ಸಾಲಿನಲ್ಲಿರುವ ಆಸನದಲ್ಲಿ ಕುಳಿತುಕೊಳ್ಳಲಿದ್ದಾರೆ. ಹಾಗೆಯೇ, ಸಂಸತ್ತಿನ ಉಭಯ ಸದನಗಳನ್ನು ಉದ್ದೇಶಿಸಿ ರಾಷ್ಟ್ರಪತಿಯವರು ಮಾತನಾಡುವಾಗ ಕೂಡ ಅವರಿಗೆ ಮುಂದಿನ ಸಾಲಿನಲ್ಲಿಯೇ ಆಸನದ ವ್ಯವಸ್ಥೆ ಮಾಡಲಾಗುತ್ತದೆ.

ಲೋಕಸಭೆಯ ಒಟ್ಟು ಕ್ಷೇತ್ರಗಳ ಶೇ.10ರಷ್ಟು ಅಂದರೆ 55 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ ಪಕ್ಷವು ಅಧಿಕೃತ ಪ್ರತಿಪಕ್ಷ ಸ್ಥಾನವನ್ನು ಪಡೆಯುತ್ತದೆ. ಆ ಪಕ್ಷದ ನಾಯಕ ಪ್ರತಿಪಕ್ಷ ನಾಯಕರಾಗುತ್ತಾರೆ. ಆದರೆ, 2014ರ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ 44 ಹಾಗೂ 2019ರ ಲೋಕಸಭೆ ಚುನಾವಣೆಯಲ್ಲಿ 52 ಕ್ಷೇತ್ರ ಗೆದ್ದ ಕಾರಣ ಪ್ರತಿಪಕ್ಷ ನಾಯಕನ ಸ್ಥಾನ ಖಾಲಿ ಇತ್ತು. ಈ ಬಾರಿ 99 ಕ್ಷೇತ್ರಗಳನ್ನು ಗೆದ್ದಿರುವ ಕಾರಣ ಪ್ರತಿಪಕ್ಷ ನಾಯಕನ ಸ್ಥಾನ ನೀಡಲಾಗಿದೆ.

ಇದನ್ನೂ ಓದಿ: Rahul Gandhi: ಸಂಸತ್ತಲ್ಲಿ ನೀಟ್‌ ಕುರಿತು ರಾಹುಲ್‌ ಗಾಂಧಿ ಮಾತಾಡುವಾಗ ಮೈಕ್‌ ಆಫ್;‌ ಸ್ಪೀಕರ್‌ ಮಾಡಿದ್ರಾ?

Continue Reading

ಕರ್ನಾಟಕ

CM Siddaramaiah: ₹2000 ಕೊಟ್ಟು ₹4740 ಕಿತ್ತುಕೊಳ್ಳುತ್ತಿರುವ ರಾಜ್ಯ ಸರಕಾರ! ನಿಮ್ಮ ಜೇಬಿಗೆ ಕತ್ತರಿ ಬೀಳುತ್ತಿರುವುದರ ಲೆಕ್ಕ ಇಲ್ಲಿದೆ ನೋಡಿ!

CM Siddaramaiah: ‘ಗ್ಯಾರಂಟಿ’ ಹೆಸರಲ್ಲಿ ನಮಗೆ ಗೊತ್ತಿಲ್ಲದಂತೆಯೇ ಜೇಬು ಖಾಲಿ ಆಗುತ್ತಿದೆ. ಇತ್ತೀಚೆಗೆ ಸರಕಾರ ಮಾಡುತ್ತಿರುವ ಬೆಲೆ ಏರಿಕೆಗಳನ್ನು, ಇಷ್ಟರಲ್ಲಿಯೇ ಮಾಡಲಿರುವ ಬೆಲೆಯೇರಿಕೆಗಳನ್ನು ಗಮನಿಸಿ ಈ ಮಾತು ಆಡಲಾಗುತ್ತಿದೆ. ಒಂದು ಕಡೆಯಿಂದ ಕೊಟ್ಟಂತೆ ನಟಿಸುತ್ತಿರುವ ಸರಕಾರ, ಇನ್ನೊಂದು ಕಡೆಯಿಂದ ಅದರ ದುಪ್ಪಟ್ಟು ಹಣ ನಮ್ಮ ಕಿಸೆಯಿಂದ ಪೀಕುತ್ತಿದೆ!

VISTARANEWS.COM


on

cm siddaramaiah price hikes
Koo

ಬೆಂಗಳೂರು: ಸಿಎಂ ಸಿದ್ದರಾಮಯ್ಯ (CM Siddaramaiah) ನೇತೃತ್ವದ ಕಾಂಗ್ರೆಸ್‌ ಸರಕಾರ (Congress government) ರಾಜ್ಯದಲ್ಲಿ ಬಂದ ಕೂಡಲೇ ಚುನಾವಣೆ (Assembly Election) ಸಂದರ್ಭದಲ್ಲಿ ನೀಡಿದ ʼಗ್ಯಾರಂಟಿ ಯೋಜನೆʼಗಳನ್ನು (Guarantee schemes) ಜಾರಿ ಮಾಡಿತು. ಇದಕ್ಕಾಗಿ ಮುಂದೆ ಯಾವ ಬೆಲೆ ತೆರಬೇಕಾಗಲಿದೆಯೋ ಎಂಬ ಆತಂಕ ಆಗಲೇ ರಾಜ್ಯದ ಜನತೆಯನ್ನು ಕಾಡಿತ್ತು. ಅದು ಈ ನಿಜವಾಗುತ್ತಿದೆ. ಒಂದು ಕಡೆಯಿಂದ ಕೊಟ್ಟಂತೆ ನಟಿಸುತ್ತಿರುವ ಸರಕಾರ, ಇನ್ನೊಂದು ಕಡೆಯಿಂದ ಅದರ ದುಪ್ಪಟ್ಟು ಹಣ ನಮ್ಮ ಕಿಸೆಯಿಂದ ಪೀಕುತ್ತಿದೆ!

ಹೌದು, ಈ ಲೆಕ್ಕಾಚಾರ ನೋಡಿದರೆ ನೀವು ಖಂಡಿತಾ ಬಾಯಿ ಬಾಯಿ ಬಡಿದುಕೊಳ್ಳುತ್ತೀರಿ. ‘ಗ್ಯಾರಂಟಿ’ ಹೆಸರಲ್ಲಿ ನಮಗೆ ಗೊತ್ತಿಲ್ಲದಂತೆಯೇ ಜೇಬು ಖಾಲಿ ಆಗುತ್ತಿದೆ. ಇತ್ತೀಚೆಗೆ ಸರಕಾರ ಮಾಡುತ್ತಿರುವ ಬೆಲೆ ಏರಿಕೆಗಳನ್ನು, ಇಷ್ಟರಲ್ಲಿಯೇ ಮಾಡಲಿರುವ ಬೆಲೆಯೇರಿಕೆಗಳನ್ನು ಗಮನಿಸಿ ಈ ಮಾತು ಆಡಲಾಗುತ್ತಿದೆ. ಪೆಟ್ರೋಲ್‌, ಡೀಸೆಲ್‌ ಬೆಲೆ (Petrol price hike) ಏರಿಸಲಾಗಿದೆ; ಹಾಲು ದರವೂ (milk price hike) ಹೆಚ್ಚಿತು. ಮುಂದೆ ಕುಡಿಯವ ಕಾವೇರಿ ನೀರು (Kaveri Water Price hike) ಮತ್ತು ಆಲ್ಕೋಹಾಲ್‌ ದರಕ್ಕೂ (Liquor rates) ಸರಕಾರ ಕೈಹಾಕಲಿದೆ. ಶೀಘ್ರದಲ್ಲೇ ಟೀ- ಕಾಫಿ ರೇಟ್‌ ಏರಿಕೆಯೂ ಆಗಬಹುದು. ಮೆಡಿಕಲ್‌ ಸೀಟು ಶುಲ್ಕಗಳು ಹೆಚ್ಚಲಿವೆ, ಆಟೋ ದರ (Auto Fare) ಅಧಿಕವಾಗಲಿದೆ.

ಈಗ ಲೆಕ್ಕಾಚಾರ ತುಸು ನೋಡೋಣ. ಮೊದಲಿಗೆ ಸರಕಾರ ಏನು ಕೊಟ್ಟಿದೆ ಎಂಬ ಲೆಕ್ಕ.

ಗ್ಯಾರಂಟಿ ಯೋಜನೆಗಳು

ಗೃಹಲಕ್ಷ್ಮೀ – 2,000 ರೂ.
ಯುವನಿಧಿ – ಡಿಪ್ಲೊಮಾ 1500/- ಪದವೀಧರರಿಗೆ 3000/-
ಶಕ್ತಿಯೋಜನೆ – ಮಹಿಳೆಯರಿಗೆ ಸರ್ಕಾರಿ ಬಸ್​​ನಲ್ಲಿ ಉಚಿತ ಪ್ರಯಾಣ
ಅನ್ನಭಾಗ್ಯ – 5ಕೆಜಿ ಅಕ್ಕಿ & 170 ರೂಪಾಯಿ
ಗೃಹಜ್ಯೋತಿ – 200 ಯೂನಿಟ್​​ವರೆಗೆ ಉಚಿತ ವಿದ್ಯುತ್​​

ಇನ್ನು ಬೆಲೆ ಏರಿಕೆಗಳು

ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ

ಪೆಟ್ರೋಲ್ – 3 ರೂಪಾಯಿ ಏರಿಕೆ
ಡೀಸೆಲ್ – 3.50 ರೂ. ಏರಿಕೆ
ಪೆಟ್ರೋಲ್ ಸದ್ಯದ ದರ – 103 ರೂ.
ಡೀಸೆಲ್ ಸದ್ಯದ ದರ – 89.20 ರೂ.
1 ದ್ವಿಚಕ್ರ ವಾಹನ – ದಿನಕ್ಕೆ 1 ಲೀಟರ್ ಬಳಕೆ
ತಿಂಗಳಿಗೆ ​ಬಳಕೆ ಸರಾಸರಿ ಹೆಚ್ಚಳ 30 ಲೀಟರ್​​ – ತಿಂಗಳಿಗೆ 100 ರೂ. ಹೆಚ್ಚಳ

ಹಾಲಿನ ದರ ಹೆಚ್ಚಳ

ಹಾಲಿನ ದರ – ವರ್ಷದಲ್ಲಿ 2 ಬಾರಿ ಏರಿಕೆ
ಮೊದಲು ಲೀಟರ್​​ಗೆ ಹೆಚ್ಚಾಗಿದ್ದು – 3 ರೂಪಾಯಿ
ಇದೀಗ ಲೀಟರ್​ಗೆ ಹೆಚ್ಚಾಗಿದ್ದು – 2 ರೂಪಾಯಿ
ಲೀಟರ್ ಹಾಲಿನ ಸದ್ಯದ ದರ – 44 ರೂ. (ನೀಲಿ ಪ್ಯಾಕೆಟ್)
1 ಕುಟುಂಬದಿಂದ ಹಾಲು ಬಳಕೆ – 1 ಲೀಟರ್
ತಿಂಗಳಿಗೆ ಕುಟುಂಬದಿಂದ ಬಳಕೆ – 30 ಲೀಟರ್
ಹಾಲಿನ ದರ ಹೆಚ್ಚಳದಿಂದ ಹೊರೆ – 150 ರೂ.

ತರಕಾರಿ ದರ ಏರಿಕೆ

ಹಣ್ಣು, ತರಕಾರಿ, ಸೊಪ್ಪು ಬೆಲೆ ನಿರಂತರ ಏರಿಕೆ
ಹಣ್ಣು, ತರಕಾರಿ ಏರಿಕೆಯಿಂದ ಹೆಚ್ಚುವರಿ ಹೊರೆ
ಟ್ರಾನ್ಸ್​ಪೋರ್ಟ್ ಚಾರ್ಜಸ್ ಸೇರಿ ವಿವಿಧ ಚಾರ್ಜಸ್
ಪ್ರತಿ ತಿಂಗಳಿಗೆ ಜನರಿಗೆ ಅಂದಾಜು 500 ರೂ. ಹೊರೆ

ದಿನಸಿ ವಸ್ತುಗಳ ಬೆಲೆ ಏರಿಕೆ

ದಿನಸಿ ವಸ್ತುಗಳು, ದಿನಬಳಕೆ ವಸ್ತುಗಳ ಬೆಲೆ ಏರಿಕೆ
ಅಕ್ಕಿ, ಬೇಳೆ, ಡಿಟರ್ಜೆಂಟ್​​ ಸೇರಿ ವಸ್ತುಗಳ ಬೆಲೆ ಗಗನಕ್ಕೆ
ದಿನಸಿ ವಸ್ತುಗಳ ಬೆಲೆ ಏರಿಕೆಯಿಂದ ಜನಸಾಮಾನ್ಯರಿಗೆ ಹೊರೆ
ತಿಂಗಳಿಗೆ ಅಂದಾಜು 700 ರೂಪಾಯಿಯಷ್ಟು ಜನರಿಗೆ ಹೊರೆ

ಮಾಂಸಪ್ರಿಯರಿಗೂ ಶಾಕ್

ರಾಜ್ಯದಲ್ಲಿ ಮಾಂಸದ ಬೆಲೆಯಲ್ಲೂ ಹೆಚ್ಚಳ
ಮಾಂಸದ ಬೆಲೆ ಹೆಚ್ಚಳದಿಂದ ಹೆಚ್ಚುವರಿ ಹೊರೆ
ಜನರಿಗೆ ತಿಂಗಳಿಗೆ ಅಂದಾಜು 300 ರೂಪಾಯಿ ಹೆಚ್ಚಳ

ಮದ್ಯಪ್ರಿಯರಿಗೆ ಬಿಗ್ ಶಾಕ್

2023ರ ಜುಲೈನಲ್ಲಿ ಬಿಯರ್ 10%, ಮದ್ಯ 20% ಏರಿಕೆ
3 ತಿಂಗಳ ಹಿಂದೆ ಬಿಯರ್ 10%, ಮದ್ಯ 25% ದರ ಹೆಚ್ಚಳ
ಜುಲೈ 1ರಿಂದ ಮತ್ತೆ ಅಬಕಾರಿ ದರ ಹೆಚ್ಚಳಕ್ಕೆ ನಿರ್ಧಾರ?

ವಾಣಿಜ್ಯ ವಿದ್ಯುತ್ ಬಳಕೆದಾರರಿಗೆ ಶಾಕ್!?

ಉಚಿತ ವಿದ್ಯುತ್​ ಮಧ್ಯೆಯೂ ವಾಣಿಜ್ಯ ಬಳಕೆ ವಿದ್ಯುತ್​ ದರ ಏರಿಕೆ
ಕೈಗಾರಿಕೆ ಸೇರಿ ವಾಣಿಜ್ಯ ಬಳಕೆಯ ವಿದ್ಯುತ್​ ದರ ಹೆಚ್ಚಳ
ವಿದ್ಯುತ್ ದರ ಹೆಚ್ಚಳದಿಂದ ವಸ್ತುಗಳ ಮೇಲೆ ಪರಿಣಾಮ
ಅಂದಾಜು 300 ರೂಪಾಯಿಯಷ್ಟು ಹೊರೆ ಬೀಳುವ ಸಾಧ್ಯತೆ

ಬಸ್ ಪ್ರಯಾಣಿಕರಿಗೆ ಬಿಗ್ ಶಾಕ್?

ಉಚಿತ ಪ್ರಯಾಣದ ನಡುವೆ ಬಸ್ ಟಿಕೆಟ್ ದರ ಏರಿಕೆ ಚಿಂತನೆ
ಗಂಡಸರ ಪ್ರಯಾಣದ ದರ ಹೆಚ್ಚಿಸಲು ಸರ್ಕಾರದ ಚಿಂತನೆ
ಶೀಘ್ರದಲ್ಲೇ ಸರ್ಕಾರಿ ಬಸ್​ಗಳ ಪ್ರಯಾಣದ ದರ ಏರಿಕೆ ಸಾಧ್ಯತೆ
ಖಾಸಗಿ ಬಸ್‌ಗಳ ದರವೂ ದುಬಾರಿಯಾಗುವ ಸಾಧ್ಯತೆ
ಟಿಕೆಟ್ ದರ ಏರಿಕೆಯಿಂದ ಪ್ರತಿ ಕುಟುಂಬಕ್ಕೂ ಹೆಚ್ಚುವರಿ ಹೊರೆ
1 ಕುಟುಂಬಕ್ಕೆ ಅಂದಾಜು 200 ರೂಪಾಯಿಯಷ್ಟು ಹೆಚ್ಚು ಹೊರೆ

ಜನರಿಗೆ ಜಲ‘ಶಾಕ್’!
ರಾಜ್ಯದ ಹಲವು ಕಡೆ ಕುಡಿಯುವ ನೀರಿನ ಸಮಸ್ಯೆ
ಹೆಚ್ಚು ಟ್ಯಾಂಕರ್ ನೀರು ಅವಲಂಬಿಸಿರುವ ಜನರು
ಟ್ಯಾಂಕರ್​ ಮೂಲಕ ನೀರು ತರಿಸಿಕೊಳ್ತಿರುವ ಜನರು
ಒಂದು ಟ್ಯಾಂಕರ್​​ ನೀರಿನ ಬೆಲೆ ಸುಮಾರು ₹2000

ತಿಂಗಳಿಗೆ 1 ಕುಟುಂಬಕ್ಕೆ ಅಂದಾಜು ಹೊರೆ

ಹಾಲು 30 ಲೀಟರ್ ಬಳಕೆ – 150 ರೂ.
ಪೆಟ್ರೋಲ್, ಡೀಸೆಲ್ 30 ಲೀ. – 90 ರೂ.
ತರಕಾರಿ – 500 ರೂಪಾಯಿ
ಮದ್ಯ – 500 ರೂಪಾಯಿ
ವಿದ್ಯುತ್ ವಾಣಿಜ್ಯ ಬಳಕೆ – 300 ರೂ.
ಬಸ್ ಟಿಕೆಟ್ ದರ – 200 ರೂ.
ದಿನಸಿ – 700 ರೂ.
ಮಾಂಸ – 300 ರೂ.
ಟ್ಯಾಂಕರ್ ನೀರು – 2,000 ರೂ.
ಒಟ್ಟು ಅಂದಾಜು ಹೊರೆ – 4740

ವರ್ಷಕ್ಕೆ ಎಷ್ಟು ಹೊರೆ?

ಪ್ರತಿ 1 ಕುಟುಂಬಕ್ಕೆ ತಿಂಗಳಿಗೆ 4740 ರೂ. ಅಧಿಕ ಹೊರೆ
ಪ್ರತಿ 1 ಕುಟುಂಬಕ್ಕೆ ವರ್ಷಕ್ಕೆ 56,880 ರೂ. ಅಧಿಕ ಹೊರೆ

ವರ್ಷಕ್ಕೆ ಎಷ್ಟು ಹೆಚ್ಚುವರಿ ಹೊರೆ?

ಕುಟುಂಬಕ್ಕೆ ಸರ್ಕಾರ ಕೊಡೋದು ವರ್ಷಕ್ಕೆ 24 ಸಾವಿರಕ್ಕೂ ಹೆಚ್ಚು
ಆದರೆ ಪ್ರತಿ 1 ಕುಟುಂಬಕ್ಕೆ ವರ್ಷಕ್ಕೆ 56,880 ರೂ. ಹೊರೆ
ಸರ್ಕಾರ ಕೊಟ್ಟ 24 ಸಾವಿರ ಬಿಟ್ಟರೆ 32,880 ರೂ. ಹೆಚ್ಚುವರಿ ಹೊರೆ
ಪ್ರತಿ 1 ಕುಟುಂಬಕ್ಕೆ ತಿಂಗಳಿಗೆ 4740 ರೂ. ಅಧಿಕ ಹೊರೆ
ಸರ್ಕಾರ ಕೊಡುವ 2 ಸಾವಿರ ಹೊರತುಪಡಿಸಿದರೆ 2740 ರೂ. ಹೆಚ್ಚುವರಿ ಹೊರೆ

ಇದನ್ನೂ ಓದಿ: CM Siddaramaiah: ತೈಲ, ಹಾಲು ಆಯ್ತು; ಮುಂದಿನ ಸರದಿಯಲ್ಲಿ ನೀರು, ಆಟೋ, ಬಸ್‌ ಟಿಕೆಟ್‌ ದರ ಏರಿಕೆ ಗ್ಯಾರಂಟಿ

Continue Reading

Latest

Members of Parliament: ಸಂಸದರು ಪ್ರಮಾಣ ವಚನ ಸ್ವೀಕರಿಸದಿದ್ದರೆ ಏನಾಗುತ್ತದೆ? ಜೈಲಿನಲ್ಲಿದ್ದವರ ಕತೆಯೇನು?

ಲೋಕ ಸಭಾ ಚುನಾವಣೆ ಬಳಿಕ ಸಂಸದರಾಗಿ (Members of Parliament) ಆಯ್ಕೆಯಾಗುವವರು ಯಾವ ರೀತಿ ಪ್ರಮಾಣ ವಚನ ಸ್ವೀಕರಿಸಬೇಕು ಎಂಬುದನ್ನು ಸಂವಿಧಾನದಲ್ಲಿ ಸ್ಪಷ್ಟವಾಗಿ ನಿರ್ದಿಷ್ಟಪಡಿಸದಿದ್ದರೂ ಸಂಸದೀಯ ಪಾತ್ರವನ್ನು ಪೂರೈಸುವಲ್ಲಿ ಪ್ರಮಾಣ ವಚನ ಸ್ವೀಕಾರವು ಮೊದಲ ಮತ್ತು ಪ್ರಮುಖ ಹೆಜ್ಜೆಯಾಗಿದೆ. ಆದರೂ ಕೆಲವು ಸಂಸದರು ಪ್ರಮಾಣ ವಚನ ಸ್ವೀಕರಿಸಲು ಸಾಧ್ಯವಾಗದೇ ಇದ್ದರೆ ಮುಂದಿನ ನಡೆ ಹೇಗಿರುತ್ತದೆ ಎಂಬಿತ್ಯಾದಿ ಸಂಪೂರ್ಣ ವಿವರ ಇಲ್ಲಿದೆ.

VISTARANEWS.COM


on

By

Members of Parliament
Koo

18ನೇ ಲೋಕಸಭೆಯ (loksabha election) ಮೊದಲ ಅಧಿವೇಶನ ಪ್ರಾರಂಭವಾಗುತ್ತಿದ್ದಂತೆ ಹೊಸದಾಗಿ ಚುನಾಯಿತರಾದ ಸಂಸತ್ ಸದಸ್ಯರು (Members of Parliament) ಸೋಮವಾರದಿಂದ ಪ್ರಮಾಣ ವಚನ (taking oath) ಸ್ವೀಕರಿಸಲು ಆರಂಭಿಸಿದ್ದಾರೆ. ಎರಡು ದಿನಗಳಲ್ಲಿ ಕೆಳಮನೆಯ (lower house) 543 ಸಂಸದರು ಪ್ರಮಾಣ ವಚನ ಸ್ವೀಕರಿಸಿದರು. ಜೂನ್ 26ರಂದು ನೂತನ ಲೋಕಸಭಾ ಸ್ಪೀಕರ್ (Speaker) ಆಯ್ಕೆ ನಡೆಯಲಿದೆ.

ಪ್ರಮಾಣ ವಚನ ಬೋಧಿಸುವವರು ಯಾರು?

ಸಂಸದೀಯ ಪದ್ಧತಿಗಳ ಪ್ರಕಾರ ಪ್ರತಿ ಸಾರ್ವತ್ರಿಕ ಚುನಾವಣೆಯ ಅನಂತರ ಲೋಕಸಭೆಗೆ ಹೊಸದಾಗಿ ಚುನಾಯಿತರಾದ ಸದಸ್ಯರಿಗೆ ಹಂಗಾಮಿ ಸ್ಪೀಕರ್ ಪ್ರಮಾಣ ವಚನ ಸ್ವೀಕರಿಸುವ ಹೊಣೆ ನಿರ್ವಹಿಸುತ್ತಾರೆ. ಲೋಕಸಭೆಯ ನೂತನ ಸ್ಪೀಕರ್ ಆಯ್ಕೆಯನ್ನು ನಡೆಸುವ ಜವಾಬ್ದಾರಿ ಕೂಡ ಈ ಹಂಗಾಮಿ ಸ್ಪೀಕರ್‌ದೇ ಆಗಿರುತ್ತದೆ.

ಸಂವಿಧಾನದಲ್ಲಿ ಸ್ಪಷ್ಟವಾಗಿ ನಿರ್ದಿಷ್ಟಪಡಿಸದಿದ್ದರೂ ಸಂಸದೀಯ ಪಾತ್ರವನ್ನು ಪೂರೈಸುವಲ್ಲಿ ಪ್ರಮಾಣ ವಚನ ಸ್ವೀಕಾರವು ಮೊದಲ ಹೆಜ್ಜೆಯಾಗಿದೆ. ಆದರೂ ಕೆಲವು ಸಂಸದರು ಅನಾರೋಗ್ಯದ ಕಾರಣ ಅಥವಾ ಅವರ ಸ್ಥಳದಿಂದ ತೆರಳಲು ಸಾಧ್ಯವಾಗದ ಕಾರಣ ಪ್ರಮಾಣ ವಚನ ಸ್ವೀಕರಿಸದಿರುವ ಸಾಧ್ಯತೆಯಿದೆ.

ಸಂಸದರು ಪ್ರಮಾಣ ವಚನ ಸ್ವೀಕರಿಸದಿದ್ದರೆ ಏನಾಗುತ್ತದೆ?

1. ಮೊದಲ ದಿನ ಪ್ರಮಾಣ ವಚನ ಅಥವಾ ದೃಢೀಕರಣವನ್ನು ಮಾಡದ ಚುನಾಯಿತ ಸಂಸದರು ಸದನದ ಅಧಿವೇಶನದ ಪ್ರಾರಂಭದಲ್ಲಿ ಅದೇ ಅಧಿವೇಶನದಲ್ಲಿ ಅಥವಾ ಅನಂತರದ ಅಧಿವೇಶನದಲ್ಲಿ ಯಾವುದೇ ನಂತರದ ದಿನದಲ್ಲಿ ಪ್ರಮಾಣ ವಚನ ಸ್ವೀಕರಿಸಬಹುದು.

2. ಸಂಸದರ ಕೋರಿಕೆಯ ಮೇರೆಗೆ ಸಭಾಧ್ಯಕ್ಷರ ಚೇಂಬರ್‌ನಲ್ಲಿ ಮಧ್ಯಂತರ ಅವಧಿಯಲ್ಲಿ ಪ್ರಮಾಣ ವಚನ ಸ್ವೀಕರಿಸಲು ಅವಕಾಶ ನೀಡಲಾಗುತ್ತದೆ.

3. ಅನಾರೋಗ್ಯದಿಂದ ಬಳಲುತ್ತಿರುವವರು, ಸದನಕ್ಕೆ ಬರಲು ಸಾಧ್ಯವಾಗದ ಸಂದರ್ಭದಲ್ಲಿ ಅವರು ಬಯಸಿದಲ್ಲಿ ಪ್ರಮಾಣ ಅಥವಾ ದೃಢೀಕರಣವನ್ನು ಮಾಡಬಹುದು. ಈ ಸಂದರ್ಭದಲ್ಲಿ ಸಂಬಂಧಿತ ಅಧಿಕಾರಿಯು ಸದಸ್ಯರಿಗೆ ಸಂಬಂಧಿತ ಪ್ರಮಾಣ ಅಥವಾ ದೃಢೀಕರಣ ಕಾರ್ಡ್ ಅನ್ನು ನೀಡುತ್ತಾರೆ.

4. ಸಂವಿಧಾನದ ಪ್ರಕಾರ ಚುನಾಯಿತ ಸಂಸದರು 60 ದಿನಗಳವರೆಗೆ ಸಂಸತ್ತಿಗೆ ಹಾಜರಾಗದಿದ್ದರೆ ಅವರ ಸ್ಥಾನವನ್ನು ಖಾಲಿ ಎಂದು ಘೋಷಿಸಬಹುದು. ಇದೇ ಆಧಾರದಲ್ಲಿ ನ್ಯಾಯಾಲಯಗಳು ಜೈಲಿನಲ್ಲಿರುವ ಸಂಸದರಿಗೆ ಪ್ರಮಾಣ ವಚನ ಸ್ವೀಕರಿಸುವುದಕ್ಕಾಗಿ ಸಂಸತ್‌ಗೆ ಬರಲು ಅವಕಾಶ ನೀಡಬಹುದು. ಆದರೆ ಪ್ರಮಾಣ ವಚನ ಸ್ವೀಕರಿಸಿದ ಅನಂತರ ಅವರು ಮತ್ತೆ ಜೈಲಿಗೆ ಮರಳಬೇಕಾಗುತ್ತದೆ.

5. ದೃಷ್ಟಿ ಸಮಸ್ಯೆಯಿಂದ ಸದಸ್ಯರಿಗೆ ಸಹಿ ಮಾಡಲು, ಪ್ರಮಾಣ ಪತ್ರ ಓದಲು ಸಾಧ್ಯವಾಗದೇ ಇದ್ದರೆ ಇನ್ನೊಬ್ಬ ಸದಸ್ಯರು ಇವರಿಗೆ ಓದಿ ಹೇಳಬಹುದಾಗಿದೆ.

6. ನ್ಯಾಯಾಲಯದ ಆದೇಶದ ಪರಿಣಾಮವಾಗಿ ಒಬ್ಬ ವ್ಯಕ್ತಿಯು ಸದಸ್ಯರಾಗುವುದನ್ನು ತಡೆದರೆ ಮತ್ತು ಅವರ ಸ್ಥಾನದಲ್ಲಿ ಇನ್ನೊಬ್ಬರು ಚುನಾಯಿತರೆಂದು ಘೋಷಿಸಲ್ಪಟ್ಟರೆ ಮತ್ತೆ ಹೊಸದಾಗಿ ಪ್ರಮಾಣವಚನ ಅಥವಾ ದೃಢೀಕರಣವನ್ನು ಮಾಡಬೇಕು.

7. ಮೊದಲ ಸುತ್ತಿನಲ್ಲಿ ಪ್ರಮಾಣವಚನಕ್ಕೆ ಹಾಜರಾಗದ ಸದಸ್ಯರ ಹೆಸರನ್ನು ಕೊನೆಯಲ್ಲಿ ಮತ್ತೆ ಕರೆಯಲಾಗುತ್ತದೆ.

ಯಾವ ಪ್ರಮಾಣ ವಚನ ಸ್ವೀಕರಿಸುತ್ತಾರೆ?

ಸಂವಿಧಾನದ ಮೂರನೇ ಶೆಡ್ಯೂಲ್ ಸಂಸತ್ತಿನ ಪ್ರಮಾಣ ವಚನದ ಪಠ್ಯವನ್ನು ಒಳಗೊಂಡಿದೆ. ಅದು ಹೀಗೆ ಹೇಳುತ್ತದೆ: ನಾನು…. ಚುನಾಯಿತನಾದ ಅಥವಾ ನಾಮನಿರ್ದೇಶನಗೊಂಡ ಸದಸ್ಯರ ಸಂಸತ್‌ ಸದಸ್ಯನಾಗಿ ದೇವರ ಹೆಸರಿನಲ್ಲಿ ಪ್ರಮಾಣ ಮಾಡುತ್ತೇನೆ. ನಾನು ಕಾನೂನಿನ ಮೂಲಕ ಸ್ಥಾಪಿಸಿದಂತೆ ಭಾರತದ ಸಂವಿಧಾನಕ್ಕೆ ನಿಜವಾದ ನಂಬಿಕೆ ಮತ್ತು ನಿಷ್ಠೆಯನ್ನು ಹೊಂದುತ್ತೇನೆ ಎಂದು ಸ್ಪಷ್ಟವಾಗಿ ದೃಢಪಡಿಸುತ್ತೇನೆ. ನಾನು ಭಾರತದ ಸಾರ್ವಭೌಮತ್ವ ಮತ್ತು ಸಮಗ್ರತೆಯನ್ನು ಎತ್ತಿಹಿಡಿಯುತ್ತೇನೆ. ನನ್ನ ಕರ್ತವ್ಯವನ್ನು ನಿಷ್ಠೆಯಿಂದ ನಿರ್ವಹಿಸುತ್ತೇನೆ.

ಪ್ರಮಾಣ ವಚನ ಏಕೆ ಮಹತ್ವದ್ದಾಗಿದೆ?

ಲೋಕಸಭೆಯಲ್ಲಿ ಚರ್ಚೆ ಮತ್ತು ಮತ ಚಲಾಯಿಸುವ ಅಧಿಕಾರವನ್ನು ಪಡೆಯಲು ಸಂವಿಧಾನದಲ್ಲಿ (ಆರ್ಟಿಕಲ್ 99) ಸೂಚಿಸಿದಂತೆ ಸಂಸದರು ಪ್ರಮಾಣ ವಚನ ಸ್ವೀಕರಿಸಬೇಕು.

ಕೇವಲ ಚುನಾವಣೆಯಲ್ಲಿ ಗೆದ್ದು ಅವಧಿಯನ್ನು ಪ್ರಾರಂಭಿಸುವುದರಿಂದ ಅವರು ಸದನದ ಕಲಾಪಗಳಲ್ಲಿ ಭಾಗವಹಿಸಲು ಸ್ವಯಂಚಾಲಿತವಾಗಿ ಸಾಧ್ಯವಾಗುವುದಿಲ್ಲ.

ಹೇಗೆ ಪ್ರಮಾಣ ವಚನ ಸ್ವೀಕರಿಸುತ್ತಾರೆ?

ಸಂಸದರು ಮೊದಲು ತಮ್ಮ ಚುನಾವಣಾ ಪ್ರಮಾಣಪತ್ರವನ್ನು ಲೋಕಸಭೆಯ ಸಿಬ್ಬಂದಿಗೆ ಸಲ್ಲಿಸಬೇಕಾಗುತ್ತದೆ. 1957ರಲ್ಲಿ ನಡೆದ ಘಟನೆಯ ಅನಂತರ ಸಂಸತ್ತು ಈ ಸುರಕ್ಷತೆಯನ್ನು ಸೇರಿಸಿತು. ಮಾನಸಿಕವಾಗಿ ಅಸ್ವಸ್ಥ ವ್ಯಕ್ತಿಯೊಬ್ಬರು ಸಂಸದರೆಂದು ಪೋಸ್ ನೀಡಿ ಸದನದಲ್ಲಿ ಪ್ರಮಾಣ ವಚನ ಸ್ವೀಕರಿಸಿದ್ದರು!

ಪ್ರಮಾಣಪತ್ರದ ಜೊತೆಗೆ ಸಂಸದರು ಪ್ರಮಾಣ ವಚನ ಅಥವಾ ದೃಢೀಕರಣವನ್ನು ಮಾಡಲು ಬಯಸಿದ ಭಾಷೆಯನ್ನು ಸಹ ನಮೂದಿಸಬೇಕು.

ಸದಸ್ಯರು ಪ್ರಮಾಣ ವಚನ ಮಾಡುವಾಗ ಹಂಗಾಮಿ ಸ್ಪೀಕರ್ ಜೊತೆ ಹಸ್ತಲಾಘವ ಮಾಡುತ್ತಾರೆ. ಅನಂತರ ಅವರು ಸದನದಲ್ಲಿ ತಮ್ಮ ಆಸನದಲ್ಲಿ ಕುಳಿತುಕೊಳ್ಳಲು ಸದಸ್ಯರಿಗೆ ಸ್ಪೀಕರ್‌ ಅನುಮತಿ ನೀಡುತ್ತಾರೆ. ಸದಸ್ಯರು ದಾಖಲಾತಿ ಪುಸ್ತಕದಲ್ಲಿ ಸಹಿ ಮಾಡುತ್ತಾರೆ.

ಯಾವ ಭಾಷೆಗಳಲ್ಲಿ ಪ್ರಮಾಣ ವಚನ ಸ್ವೀಕರಿಸಬಹುದು?

ಸಂಸದರು ಇಂಗ್ಲಿಷ್ ಅಥವಾ ಅಸ್ಸಾಮಿ, ಬೆಂಗಾಲಿ, ಬೋಡೋ, ಡೋಗ್ರಿ, ಗುಜರಾತಿ, ಹಿಂದಿ, ಕನ್ನಡ, ಕಾಶ್ಮೀರಿ, ಕೊಂಕಣಿ, ಮೈಥಿಲಿ, ಮಲಯಾಳಂ, ಮಣಿಪುರಿ, ಮರಾಠಿ, ನೇಪಾಳಿ, ಒಡಿಯಾ, ಪಂಜಾಬಿ, ಸಂಸ್ಕೃತ, ಸಂತಾಲಿ, ಸಿಂಧಿ, ತಮಿಳು, ತೆಲುಗು ಮತ್ತು ಉರ್ದು.. ಹೀಗೆ 22 ಭಾಷೆಗಳಲ್ಲಿ ಪ್ರಮಾಣವಚನವನ್ನು ಸ್ವೀಕರಿಸಬಹುದು.

ಅರ್ಧದಷ್ಟು ಸಂಸದರು ಹಿಂದಿ ಅಥವಾ ಇಂಗ್ಲಿಷ್‌ನಲ್ಲಿ ಪ್ರಮಾಣ ವಚನ ಸ್ವೀಕರಿಸುತ್ತಾರೆ. ಹಿಂದಿನ ಎರಡು ಲೋಕಸಭೆಯಲ್ಲಿ ಸಂಸ್ಕೃತವು ಜನಪ್ರಿಯ ಭಾಷೆಯಾಗಿ ಮಾರ್ಪಟ್ಟಿದ್ದು, ಹಲವು ಸಂಸದರು ಪ್ರಮಾಣ ವಚನ ಸ್ವೀಕರಿಸಿದ್ದಾರೆ.

ಇದನ್ನೂ ಓದಿ: Bansuri Swaraj: ಸಂಸ್ಕೃತದಲ್ಲಿ ಪ್ರಮಾಣವಚನ ಸ್ವೀಕರಿಸಿ ಸುಷ್ಮಾ ಸ್ವರಾಜ್‌ರನ್ನು ನೆನಪಿಸಿದ ಮಗಳು! ವಿಡಿಯೊ ನೋಡಿ

ಯಾವಾಗ ಸದನದ ಸದಸ್ಯರಾಗುತ್ತಾರೆ?

ಒಬ್ಬ ವ್ಯಕ್ತಿಯು ಚುನಾವಣಾ ಅಧಿಕಾರಿಯಿಂದ ಚುನಾಯಿತರೆಂದು ಘೋಷಿಸಲ್ಪಟ್ಟ ದಿನಾಂಕದಿಂದ ಸದನದ ಸದಸ್ಯರಾಗುತ್ತಾರೆ. ಸದನವನ್ನು ರಚಿಸುವ ಚುನಾವಣಾ ಆಯೋಗದ ಅಧಿಸೂಚನೆಯನ್ನು ಪ್ರಕಟಿಸಿದ ದಿನಾಂಕದಿಂದ ಅವರು ಸಂಸದರಾಗಿ ಸಂಬಳವನ್ನು ಸ್ವೀಕರಿಸಲು ಪ್ರಾರಂಭಿಸುತ್ತಾರೆ. ಸಂಸದರು ಸದನದ ಅಧಿವೇಶನಗಳಿಗೆ ಗೈರುಹಾಜರಿಯನ್ನು ಕೇಳಬಹುದಾಗಿದೆ.

Continue Reading

ದೇಶ

Rushikonda Palace: 500 ಕೋಟಿಯ ಋಷಿಕೊಂಡ ಅರಮನೆ; 12 ಬೆಡ್‌ರೂಮ್‌, ವಾಶ್‌ರೂಮ್‌ ಒಂದು ಮನೆಯಷ್ಟು!

ವಿಶಾಖಪಟ್ಟಣದ ಋಷಿಕೊಂಡ ಬೆಟ್ಟದ ಬಳಿ ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ನೇತೃತ್ವದ ಸರ್ಕಾರ 500 ಕೋಟಿ ರೂ. ವೆಚ್ಚದಲ್ಲಿ ಅರಮನೆಯನ್ನು (Rushikonda Palace Issue) ನಿರ್ಮಿಸಿರುವುದು ಭಾರೀ ಟೀಕೆಗೆ ಗುರಿಯಾಗಿದೆ. ವೈಎಸ್‌ಆರ್‌ಸಿ ಆಡಳಿತದಲ್ಲಿ ನಿರ್ಮಿಸಿರುವ ಈ ಯೋಜನೆಯ ಬಗ್ಗೆ ತನಿಖೆ ನಡೆಸುವುದಾಗಿ ಈಗಿನ ಸರ್ಕಾರ ಹೇಳಿದೆ. ಏನಿದು ವಿವಾದ? ಇಲ್ಲಿದೆ ವಿಸ್ತೃತ ಮಾಹಿತಿ.

VISTARANEWS.COM


on

By

Rushikonda Palace Issue
Koo

ಆಂಧ್ರಪ್ರದೇಶದ ಋಷಿಕೊಂಡ ಬೆಟ್ಟದ ಬಳಿ (andrapradesh) ಈ ಹಿಂದೆ ಮುಖ್ಯಮಂತ್ರಿಯಾಗಿದ್ದ (former CM) ಜಗನ್ ಮೋಹನ್ ರೆಡ್ಡಿ (Y.S. Jagan Mohan Reddy) 500 ಕೋಟಿ ರೂ. ವೆಚ್ಚದಲ್ಲಿ ʼರಾಜಾ ಮಹಲ್‌ʼ ಹೆಸರಿನಲ್ಲಿ ಅರಮನೆಯನ್ನು (Rushikonda Palace) ನಿರ್ಮಿಸಿದ್ದರು. ಈಗ ಜಗನ್‌ ಸರ್ಕಾರ ಅಧಿಕಾರ ಕಳೆದುಕೊಂಡು ಟಿಡಿಪಿಯ ಎನ್‌ ಚಂದ್ರಬಾಬು ನಾಯ್ಡು ಅವರ ಸರ್ಕಾರ ಅಧಿಕಾರಕ್ಕೆ ಬಂದಿದೆ. ಇದೀಗ ಈ ಅರಮನೆ ಭಾರೀ ಟೀಕೆ ಮತ್ತು ವಿವಾದಕ್ಕೆ ಗುರಿಯಾಗಿದೆ.

ಭಾರಿ ಭ್ರಷ್ಟಾಚಾರದ ಮೂಲಕ ರಾಜ್ಯ ಸರ್ಕಾರದ ಹಣವನ್ನು ಈ ಹಿಂದಿನ ಮುಖ್ಯಮಂತ್ರಿ ಜಗನ್‌ ರೆಡ್ಡಿ ದುರುಪಯೋಗಪಡಿಸಿಕೊಂಡಿದ್ದಾರೆ ಎಂದು ಆರೋಪಿಸಿರುವ ತೆಲುಗು ದೇಶಂ ಪಕ್ಷ (TDP), ವಿಶಾಖಪಟ್ಟಣಂನ (Vishakhapatnam) ಋಷಿಕೊಂಡದ ಮೇಲೆ ನಿರ್ಮಿಸಲಾದ ಕಟ್ಟಡಗಳ ಡ್ರೋನ್ ದೃಶ್ಯಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದೆ. ಈ ಮೂಲಕ ಇದನ್ನು ಸಾರ್ವಜನಿಕರ ಗಮನಕ್ಕೆ ತಂದಿದೆ.

ಹಿಂದಿನ ವೈಎಸ್‌ಆರ್‌ಸಿ ಆಡಳಿತದಲ್ಲಿ ಋಷಿಕೊಂಡ ಮೇಲೆ ನಿರ್ಮಿಸಲಾದ ಕಟ್ಟಡಗಳಿಗೆ ಭೀಮಿಲಿ ಶಾಸಕ ಗಂಟಾ ಶ್ರೀನಿವಾಸ ರಾವ್ ಭೇಟಿ ನೀಡಿದಾಗ ಋಷಿಕೊಂಡ ಅರಮನೆ ವಿವಾದ ಭುಗಿಲೆದ್ದಿತು. ಟಿಡಿಪಿ ನಾಯಕರು ಈ ಯೋಜನೆಯ ಸ್ವರೂಪ ಮತ್ತು ಪ್ರಕೃತಿಯ ಮೇಲೆ ಇದರ ಪರಿಣಾಮದ ಬಗ್ಗೆ ಕಳವಳ ವ್ಯಕ್ತಪಡಿಸಲು ಆರಂಭಿಸಿದ್ದಾರೆ. ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ವೈ.ಎಸ್. ಜಗನ್ ಮೋಹನ್ ರೆಡ್ಡಿ ವಿರುದ್ಧ ಗಂಭೀರ ಆರೋಪ ಮಾಡಿರುವ ಟಿಡಿಪಿ ನಾಯಕರು, ‘ಋಷಿಕೊಂಡ ಅರಮನೆ’ ಎಂದು ಕರೆಯಲ್ಪಡುವ ಈ ಅರಮನೆಯನ್ನು ಅಕ್ರಮವಾಗಿ ಮತ್ತು ರಹಸ್ಯವಾಗಿ ನಿರ್ಮಿಸಲಾಗಿದೆ ಎಂದು ದೂರಿದ್ದಾರೆ. ಭೀಮಿಲಿ ಶಾಸಕ ಗಂಟಾ ಶ್ರೀನಿವಾಸ ರಾವ್ ಅವರು ಹಿಂದಿನ ವೈಎಸ್‌ಆರ್ ಕಾಂಗ್ರೆಸ್ (ವೈಎಸ್‌ಆರ್‌ಸಿ) ಆಡಳಿತದಿಂದ ಋಷಿಕೊಂಡದ ಮೇಲೆ ನಿರ್ಮಿಸಲಾದ ಕಟ್ಟಡಗಳಿಗೆ ಭೇಟಿ ನೀಡಿದ ಈ ವಿಷಯ ಹೆಚ್ಚು ಚರ್ಚೆಗೆ ಕಾರಣವಾಯಿತು. ಈ ಕಟ್ಟಡಗಳನ್ನು ‘ರಾಜ ಮಹಲ್’ ಎಂದು ಬಣ್ಣಿಸಿರುವ ಟಿಡಿಪಿ ನಾಯಕ ನಾರಾ ಲೋಕೇಶ್, ಸಾರ್ವಜನಿಕ ನಿಧಿಯ ದುರುಪಯೋಗದ ಬಗ್ಗೆ ದನಿ ಎತ್ತಿದ್ದಾರೆ.

ಋಷಿಕೊಂಡ ನಿರ್ಮಾಣ

ಸಚಿವ ನಾರಾ ಲೋಕೇಶ್ ಅವರು ಸಾಮಾಜಿಕ ಜಾಲತಾಣಗಳಲ್ಲಿ ಗುರುವಾರ ತಮ್ಮ ಕಳವಳವನ್ನು ವ್ಯಕ್ತಪಡಿಸಿ, “ಬಡವರು ತಮ್ಮ ಮಕ್ಕಳ ತಲೆಯ ಮೇಲೆ ಸೂರು ನಿರ್ಮಿಸಲು ಹೆಣಗಾಡುತ್ತಿದ್ದರೆ, ಅವರ ಹಣದಲ್ಲಿ ಜಗನ್‌ ಅರಮನೆಯನ್ನು ನಿರ್ಮಿಸಿದ್ದಾರೆ. ಈ ಬಗ್ಗೆ ತನಿಖೆ ಮಾಡಲಾಗುವುದುʼʼ ಎಂದಿದ್ದಾರೆ. 9.88 ಎಕರೆ ಜಮೀನಿನಲ್ಲಿ ಕಟ್ಟಡವು 5 ಎಕರೆಯಲ್ಲಿ ಇರಬೇಕು, ಉಳಿದ ಪ್ರದೇಶವು ಭೂದೃಶ್ಯ ಮತ್ತು ಪಾರ್ಕಿಂಗ್ ಪ್ರದೇಶವಾಗಿರಬೇಕು ಎಂದು ಹೇಳಲಾಗಿತ್ತು. ಆದರೆ ಬೆಟ್ಟವನ್ನು 15 ಎಕರೆ ಹೆಚ್ಚುವರಿಯಾಗಿ ಅಗೆದಿರುವುದು ದೊಡ್ಡ ಉಲ್ಲಂಘನೆಯಾಗಿದೆ ಎಂದವರು ತಿಳಿಸಿದ್ದಾರೆ.


ಇದನ್ನೂ ಓದಿ: UGC-NET: ಯುದ್ಧವನ್ನೇ ನಿಲ್ಲಿಸುವ ಸಾಮರ್ಥ್ಯವಿರುವ ಮೋದಿ ಪ್ರಶ್ನೆ ಪತ್ರಿಕೆ ಸೋರಿಕೆ ಯಾಕೆ ತಡೆಯುತ್ತಿಲ್ಲ? ರಾಹುಲ್‌ ಗಾಂಧಿ ವ್ಯಂಗ್ಯ

ಜಗನ್‌ ಪಕ್ಷದ ಪ್ರತಿಪಾದನೆ ಏನು?

ವಿಶಾಖಪಟ್ಟಣಂನಲ್ಲಿ ಪ್ರವಾಸೋದ್ಯಮವನ್ನು ಉತ್ತೇಜಿಸುವ ಉದ್ದೇಶವನ್ನು ಈ ಪುನರಾಭಿವೃದ್ಧಿ ಯೋಜನೆ ಹೊಂದಿದೆ ಎಂದು ಜಗನ್ ನೇತೃತ್ವದ ಪಕ್ಷವು ಪ್ರತಿಪಾದಿಸಿದೆ. ಈ ಆಸ್ತಿ ಸರ್ಕಾರಿ ಸ್ವಾಮ್ಯದಲ್ಲಿದೆ, ಖಾಸಗಿಯಲ್ಲ ಎಂದು ಹೇಳಿರುವ ಪಕ್ಷದ ಪ್ರಮುಖರು, ರಾಷ್ಟ್ರಪತಿ ಅಥವಾ ಪ್ರಧಾನಮಂತ್ರಿ ವಿಶಾಖಪಟ್ಟಣಕ್ಕೆ ಭೇಟಿ ನೀಡಿದಾಗ ಇದನ್ನು ಬಳಸಿಕೊಳ್ಳಬಹುದು ಎಂದು ತಿಳಿಸಿದ್ದಾರೆ. ಈ ನಡುವೆಯೇ ಯೋಜನೆಯು ಕರಾವಳಿ ನಿಯಂತ್ರಣ ವಲಯದ (CRZ) ನಿಯಮಗಳನ್ನು ಉಲ್ಲಂಘಿಸಿದ ಕಾರಣದಿಂದ ಪರಿಸರವಾದಿಗಳಿಂದಲೂ ವ್ಯಾಪಕ ವಿರೋಧವನ್ನು ಎದುರಿಸುತ್ತಿದೆ.

ಹೇಗಿದೆ ಈ ಅರಮನೆ?

9.88 ಎಕರೆ ಸಮುದ್ರಾಭಿಮುಖ ಸೈಟ್‌ನಲ್ಲಿ ಹರಡಿರುವ ಋಷಿಕೊಂಡ ಅರಮನೆಯು ಒಟ್ಟು 1,41,433 ಚದರ ಮೀಟರ್‌ಗಳ ನಿರ್ಮಾಣ ಪ್ರದೇಶದೊಂದಿಗೆ 12 ಬೆಡ್‌ ರೂಮ್‌ಗಳನ್ನು ಹೊಂದಿದೆ. ಮೂರು ಮಹಲುಗಳನ್ನು ರಚಿಸಲು ರಮಣೀಯವಾದ ಋಶಿಕೊಂಡ ಬೆಟ್ಟಗಳನ್ನು ಧ್ವಂಸಪಡಿಸಲಾಗಿದೆ. ಕೆಲವು ವಾಶ್‌ರೂಮ್‌ಗಳಂತೂ 480 ಚದರ ಅಡಿ ದೊಡ್ಡದಾಗಿದೆ. ಮೀಟಿಂಗ್ ಹಾಲ್‌ಗಳು 7,266 ಚದರ ಮೀಟರ್‌ ವ್ಯಾಪಿಸಿದೆ!

ಆಮದು ಮಾಡಿದ ದುಬಾರಿ ಮಾರ್ಬಲ್‌ಗಳನ್ನು ಬಳಸಿದ್ದು, ವಿಶಾಲವಾದ ಕಾರಿಡಾರ್‌ಗಳನ್ನು ಒಳಗೊಂಡಿದೆ. ವಾಲ್-ಟು-ವಾಲ್ ಸ್ಕ್ರೀನ್ ಹೊಂದಿರುವ ಹೋಮ್ ಥಿಯೇಟರ್ ಬ್ಲಾಕ್‌ ಇದರ ಮತ್ತೊಂದು ಪ್ರಮುಖ ಅಂಶವಾಗಿದೆ. ಸರ್ಕಾರವು ಲ್ಯಾಂಡ್‌ಸ್ಕೇಪಿಂಗ್‌ನಲ್ಲಿ 50 ಕೋಟಿ ರೂ. ಮತ್ತು ಒಳಾಂಗಣ ಅಲಂಕಾರಕ್ಕಾಗಿ 33 ಕೋಟಿ ರೂ. ವೆಚ್ಚ ಮಾಡಿದೆ ಎನ್ನಲಾಗಿದೆ. ರೆಸ್ಟ್ ರೂಮ್ಗ‌ಳನ್ನು ಒಳಗೊಂಡಂತೆ ಸಂಪೂರ್ಣ ಸಂಕೀರ್ಣದ ಉದ್ದಕ್ಕೂ ಸೆಂಟ್ರಲ್‌ ಹವಾನಿಯಂತ್ರಣವಿದೆ. ಸಮುದ್ರದ ನೋಟವನ್ನು ಹೊಂದಿರುವ ಡೈನಿಂಗ್ ಹಾಲ್, ಪ್ರತಿ ಮಲಗುವ ಕೋಣೆಯಲ್ಲಿ 12 ಹಾಸಿಗೆಗಳಿವೆ. ಸ್ಪಾ ಸೇವೆಗಳೊಂದಿಗೆ ಸ್ನಾನಗೃಹಗಳು ವಿಶೇಷ ವೈಶಿಷ್ಟ್ಯಗಳಿಂದ ಕೂಡಿದೆ.

Continue Reading
Advertisement
Rain Tragedy
ಪ್ರಮುಖ ಸುದ್ದಿ3 hours ago

Rain Tragedy: ಪ್ರವಾಸಿಗರ ಕಣ್ಣಮುಂದೆಯೇ ಜಲಪಾತದಲ್ಲಿ ಕೊಚ್ಚಿ ಹೋದ ಒಂದೇ ಕುಟುಂಬದ 7 ಮಂದಿ; ಇಲ್ಲಿದೆ ವಿಡಿಯೊ

T20 World Cup 2024
ಪ್ರಮುಖ ಸುದ್ದಿ3 hours ago

T20 World Cup 2024 : ವೆಸ್ಟ್​ ಇಂಡೀಸ್​ನಲ್ಲಿ ಅಪಾಯಕಾರಿ ಚಂಡಮಾರುತದಲ್ಲಿ ಸಿಲುಕಿಕೊಂಡ ಚಾಂಪಿಯನ್ ಭಾರತ ತಂಡ

Rohit Sharma
ಪ್ರಮುಖ ಸುದ್ದಿ5 hours ago

Rohit Sharma : ತಲೆ ಪಕ್ಕದಲ್ಲೇ ಟ್ರೋಫಿ ಇಟ್ಟುಕೊಂಡು ನಿದ್ದೆ ಮಾಡಿದ ರೋಹಿತ್ ಶರ್ಮಾ

VSK Media Awards 2024
ಬೆಂಗಳೂರು5 hours ago

VSK Media Awards 2024: ಲೋಕಹಿತಕ್ಕಾಗಿ ಪತ್ರಿಕೋದ್ಯಮ ಶ್ರಮಿಸಬೇಕು: ಪ್ರಫುಲ್ಲ ಕೇತ್ಕರ್

NIA Raid
ದೇಶ5 hours ago

NIA Raid: ಹಿಜ್ಬು-ಉತ್‌-ತಹ್ರೀರ್‌ ಉಗ್ರ ಸಂಘಟನೆ ಜೊತೆ ನಂಟು-10 ಕಡೆಗಳಲ್ಲಿ NIA ರೇಡ್‌; ಶಂಕಿತ ಉಗ್ರರು ಅರೆಸ್ಟ್‌

Basavakalyan News
ಬೀದರ್‌6 hours ago

Basavakalyan News: ರಾತ್ರಿ ಮಣ್ಣಲ್ಲಿ ಹೂತಿದ್ದ ಮಗು ಬೆಳಗ್ಗೆ ಜೋಕಾಲಿಯಲ್ಲಿ ಪ್ರತ್ಯಕ್ಷ!

T20 World Cup
ಪ್ರಮುಖ ಸುದ್ದಿ6 hours ago

T20 World Cup 2024 : ವಿಶ್ವ ಚಾಂಪಿಯನ್ ಭಾರತ ತಂಡಕ್ಕೆ ಸಿಗಲಿದೆ ಪ್ರಧಾನಿ ಮೋದಿಯ ಭರ್ಜರಿ ಆತಿಥ್ಯ

Goldman of Bihar
ವೈರಲ್ ನ್ಯೂಸ್6 hours ago

Goldman of Bihar: ಈತ ಬಂಗಾರದ ಮನುಷ್ಯ! ಕೊರಳಲ್ಲಿದೆ 5 ಕೆಜಿ ಚಿನ್ನ! ಬೈಕ್‌ನಲ್ಲೂ ಇದೆ ಬಂಗಾರ!

Lacchi Poojarthi
ಕರ್ನಾಟಕ6 hours ago

Lacchi Poojarthi: ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರ ತಾಯಿ ನಿಧನ

T20 World Cup 2024
ಪ್ರಮುಖ ಸುದ್ದಿ6 hours ago

T20 World Cup 2024 : ವಿಶ್ವ ಕಪ್​ ಗೆದ್ದ ಭಾರತ ತಂಡಕ್ಕೆ ಬರೋಬ್ಬರಿ 125 ಕೋಟಿ ರೂ. ಬಹುಮಾನ ಘೋಷಿಸಿದ ಬಿಸಿಸಿಐ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Weather Forecast
ಮಳೆ8 hours ago

Karnataka Weather : ಬೆಂಗಳೂರು, ಕಲಬುರಗಿ ಸೇರಿದಂತೆ ಹಲವೆಡೆ ವರ್ಷಧಾರೆ; ನಾಳೆಗೂ ಮಳೆ ಅಲರ್ಟ್‌

Actor Darshan
ಬೆಂಗಳೂರು14 hours ago

Actor Darshan : ಖೈದಿ ನಂ.6106ಕ್ಕೆ ಡಿಮ್ಯಾಂಡ್‌! ದರ್ಶನ್‌ ಫ್ಯಾನ್ಸ್‌ಗೆ ಕಾನೂನು ಕಂಟಕ, ರೂಲ್ಸ್‌ ಬ್ರೇಕ್‌ ಮಾಡಿದ್ರೆ ಬೀಳುತ್ತೆ ಕೇಸ್‌‌!

karnataka weather Forecast
ಮಳೆ1 day ago

Karnataka Weather : ಮಳೆಗೆ ಸ್ಕಿಡ್‌ ಆಗಿ ಹೇಮಾವತಿ ನದಿಗೆ ಹಾರಿದ ಕಾರು; ಕರಾವಳಿಗೆ ಎಚ್ಚರಿಕೆ ಕೊಟ್ಟ ತಜ್ಞರು

karnataka Rain
ಮಳೆ2 days ago

Karnataka Rain: ಭಾರಿ ಮಳೆಗೆ ಮನೆಗಳ ಗೋಡೆ ಕುಸಿತ; ಕೂದಲೆಳೆ ಅಂತರದಲ್ಲಿ ವೃದ್ಧ ಪಾರು

karnataka Weather Forecast
ಮಳೆ2 days ago

Karnataka Weather : ಅಬ್ಬಬ್ಬಾ.. ಮುಲ್ಕಿಯಲ್ಲಿ 30 ಸೆಂ.ಮೀ ಮಳೆ ದಾಖಲು; ವಾರಾಂತ್ಯದಲ್ಲೂ ಭಾರಿ ವರ್ಷಧಾರೆ

karnataka Rain
ಮಳೆ3 days ago

Karnataka Rain : ಭಾರಿ ಮಳೆಗೆ ಪಾತಾಳ ಸೇರಿದ ಬಾವಿ; ಅಲೆಗಳ ಹೊಡೆತಕ್ಕೆ ಸಮುದ್ರಪಾಲಾದ ಮನೆ

Karnataka Weather Forecast
ಮಳೆ3 days ago

Karnataka Weather : ಭಾರಿ ಮಳೆ ಹಿನ್ನೆಲೆ ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್; ಶುಕ್ರವಾರವೂ ಶಾಲೆಗಳಿಗೆ ರಜೆ ಘೋಷಣೆ

karnataka Weather Forecast
ಮಳೆ3 days ago

Karnataka Weather : ಭಾರಿ ಮಳೆಗೆ ಸೇತುವೆಯಿಂದ ಹೊಳೆಗೆ ಬಿದ್ದ ಕಾರು; ಮರ ಹಿಡಿದು ಪ್ರಾಣ ಉಳಿಸಿಕೊಂಡ ಸವಾರರು

Heart Attack
ಕೊಡಗು3 days ago

Heart Attack : ಕೊಡಗಿನಲ್ಲಿ ಹೃದಯಾಘಾತಕ್ಕೆ ಯುವತಿ ಬಲಿ; ಹೆಚ್ಚಾಯ್ತು ಅಲ್ಪಾಯುಷ್ಯದ ಭಯ

karnataka Rains Effected
ಮಳೆ4 days ago

Karnataka Rain : ಧಾರಾಕಾರ ಮಳೆಗೆ ಸಡಿಲಗೊಂಡ ಗುಡ್ಡಗಳು; ಧರೆ ಕುಸಿದು ಮಣ್ಣಿನಡಿ ಸಿಲುಕಿದ ಇಬ್ಬರು ಮಕ್ಕಳು

ಟ್ರೆಂಡಿಂಗ್‌