Puneeth Rajkumar | ʻಗಂಧದ ಗುಡಿʼ ಬಿಡುಗಡೆ ಹಿನ್ನೆಲೆ: ಹಲವೆಡೆ ಚಿತ್ರಮಂದಿರಗಳಿಗೆ ಸಿಂಗಾರ, ಅಪ್ಪು ಎಂದು ಜೈಕಾರ! - Vistara News

ಕರ್ನಾಟಕ

Puneeth Rajkumar | ʻಗಂಧದ ಗುಡಿʼ ಬಿಡುಗಡೆ ಹಿನ್ನೆಲೆ: ಹಲವೆಡೆ ಚಿತ್ರಮಂದಿರಗಳಿಗೆ ಸಿಂಗಾರ, ಅಪ್ಪು ಎಂದು ಜೈಕಾರ!

ʻಗಂಧದ ಗುಡಿʼ ಬಿಡುಗಡೆ ಹಿನ್ನೆಲೆಯಲ್ಲಿ (Puneeth Rajkumar ) ಅಪ್ಪು ಅಪ್ಪು ಎಂದು ಘೋಷಣೆ ಕೂಗಿ ಅಭಿಮಾನಿಗಳು ಅಭಿಮಾನ ವ್ಯಕ್ತಪಡಿಸಿದ್ದಾರೆ.

VISTARANEWS.COM


on

Puneeth Rajkumar
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಅಕ್ಟೋಬರ್‌ 28ರಂದು ʻಗಂಧದ ಗುಡಿʼ ಸಿನಿಮಾ ಬಿಡುಗಡೆ ಹಿನ್ನೆಲೆಯಲ್ಲಿ ಪರಮಾತ್ಮನ ಅಭಿಮಾನಿಗಳು (Puneeth Rajkumar) ಸ್ವಾಗತಕ್ಕೆ ಸಜ್ಜಾಗಿದ್ದಾರೆ. ಹಾಸನದಲ್ಲಿ 40ಕ್ಕೂ ಹೆಚ್ಚು ಆಟೋಗಳಿಂದ ಅಪ್ಪು ಅಭಿನಯದ ಸಿನಿಮಾಗಳ ಪೋಸ್ಟರ್‌ಗಳೊಂದಿಗೆ ಮೆರವಣಿಗೆ ಆಗಿದೆ. ಅಪ್ಪು ಅಪ್ಪು ಎಂದು ಘೋಷಣೆ ಕೂಗಿ ಅಭಿಮಾನಿಗಳು ಅಭಿಮಾನ ವ್ಯಕ್ತಪಡಿಸಿದ್ದಾರೆ.

ಹುಬ್ಬಳ್ಳಿಯ ಸುಧಾ ಚಿತ್ರಮಂದಿರದಲ್ಲಿ ಪುನೀತ್‌ ರಾಜ್‌ಕುಮಾರ್ ಅಭಿನಯದ ಗಂಧದ ಗುಡಿ ಸಾಕ್ಷ್ಯಚಿತ್ರ ಬಿಡುಗಡೆ ಹಿನ್ನೆಲೆಯಲ್ಲಿ ಪುನೀತ್ ರಾಜ್‌ಕುಮಾರ್ ಅಭಿಮಾನಿಗಳಿಂದ ಥಿಯೇಟರ್‌ಗೆ ಸಿಂಗಾರ ಮಾಡಲಾಗಿದೆ. ಚಿತ್ರಮಂದಿರದ ಆವರಣದಲ್ಲಿ ಅಪ್ಪು ಭಾವಚಿತ್ರಗಳನ್ನು ಅಭಿಮಾನಿಗಳು ಹಾಕಿದ್ದಾರೆ.

ಶಿವಮೊಗ್ಗದ ಭರತ್ ಸಿನಿಮಾಸ್‌ನಲ್ಲಿ ಗಂಧದಗುಡಿ ಪ್ರೀಮಿಯರ್‌ ಶೋ ಮುಕ್ತಾಯಗೊಂಡಿದ್ದು, ಭಾವೋದ್ವೇಗಕ್ಕೊಳಗಾಗಿ ಪ್ರೇಕ್ಷಕರು ಹೊರ ಬಂದಿದ್ದಾರೆ. ಅಪ್ಪು ಭಾವಚಿತ್ರಕ್ಕೆ ಹೂವಿನ ಹಾರ ಹಾಕಿ ಅಪ್ಪು ಪರ ಅಭಿಮಾನಿಗಳು ಘೋಷಣೆ ಕೂಗಿದ್ದಾರೆ. ಅಪ್ಪು ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಪುಷ್ಪ ನಮನ ಸಲ್ಲಿಸಿದ್ದಾರೆ. ಮಹಿಳೆಯೊಬ್ಬರು ಬಿಕ್ಜಿ ಬಿಕ್ಕಿ ಅತ್ತಿದ್ದಾರೆ. ಅಪ್ಪು ಅಭಿಮಾನಿಗಳು ಅಪ್ಪು ತೆರೆ ಮೇಲೆ ಅಪ್ಪಳಿಸುತಿದ್ದಂತೆ ಕುಣಿದು ಕುಪ್ಪಳಿಸಿದ್ದಾರೆ.

ಇದನ್ನೂ ಓದಿ | Puneeth Rajkumar | ಅಪ್ಪು ಮೇಲೆ ಅಭಿಮಾನ, ಧಾರವಾಡದಿಂದ ಬೆಂಗಳೂರಿಗೆ ಕಂದಮ್ಮನ ಜತೆ ಮಹಿಳೆ ಪಾದಯಾತ್ರೆ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Tungabhadra Dam : ಅಬ್ಬರದ ಮಳೆ; ವಿಶ್ವ ವಿಖ್ಯಾತಿಯ ತುಂಗಭದ್ರಾ ಡ್ಯಾಮ್​​ನಲ್ಲಿ​ ಹೆಚ್ಚಿದ ಒಳ ಹರಿವು

Tungabhadra Dam : ಉತ್ತಮ ಮಳೆ ಆಗಿದ್ದರಿಂದ ಸದ್ಯ ಜಲಾಶಯದಲ್ಲಿ ಆರು ಟಿಎಂಸಿಗೂ ಅಧಿಕ ನೀರು ಸಂಗ್ರಹವಾಗುತ್ತಿದೆ. ಈ ಜಲಾಶಯದ ನೀರನ್ನು ನಂಬಿಕೊಂಡು ಈ ಪ್ರದೇಶದ ಕೋಟ್ಯಂತರ ಜನರು ಜೀವನ ಸಾಗಿಸ್ತಿದ್ದಾರೆ. ಅವರ ಮುಖದಲ್ಲಿ ಇದೀಗ ನಗು ಮೂಡಿದೆ.

VISTARANEWS.COM


on

Tungabhadra Dam
Koo

ವಿಜಯನಗರ: ಜಿಲ್ಲೆಯಲ್ಲಿ ಕಳೆದೊಂದು ವಾರದಿಂದ ನಿರಂತರ ಮಳೆ ಸುರಿಯುತ್ತಿದ್ದು ಬರಗಾಲದ ಭಯದಿಂದ ಜನ ಪಾರಾಗಿದ್ದಾರೆ. ಇದೇ ವೇಳೆ ಇಲ್ಲಿನ ವಿಶ್ವ ಪ್ರಸಿದ್ಧ ತುಂಗಭದ್ರಾ ಜಲಾಶಯಕ್ಕೆ (Tungabhadra Dam) ನೀರಿನ ಒಳ ಹರಿವು ಹೆಚ್ಚಾಗಿದೆ. ಒಂದು ವಾರದಲ್ಲಿ ಮೂರು ಟಿಎಂಸಿ ನೀರು ಹರಿದು ಬಂದಿದ್ದು ಜೀವ ಜಲ ನಳನಳಿಸಲು ಆರಂಭಿಸಿದೆ. ಕಳೆದ ವರ್ಷ ಕಳೆ ಕಡಿಮೆಯಾಗಿದ್ದ ಕಾರಣ ಜಲಾಶಯ ಸಂಪೂರ್ಣವಾಗಿ ಬತ್ತಿ ಹೋಗಿತ್ತು. ಡೆಡ್​ ಸ್ಟೋರೇಜ್ ನೀರು ಮಾತ್ರ ಉಳಿದಿತ್ತು. ಇದೀಗ ಮತ್ತೆ ಡ್ಯಾಮ್​ನಲ್ಲಿ ನಿಧಾನವಾಗಿ ನೀರು ತುಂಬಿಕೊಳ್ಳುವುದಕ್ಕೆ ಆರಂಭಿಸಿದೆ.

ಬೇಸಿಗೆ ಕೊನೆಯಲ್ಲಿ ಮಳೆ ಬಂದಿದ್ದ ಕಾರಣ ವಾರದ ಹಿಂದೆ ಕೇವಲ ಮೂರು ಟಿಎಂಸಿ ನೀರು ಮಾತ್ರ ಸಂಗ್ರಹವಾಗಿತ್ತು. ಉತ್ತಮ ಮಳೆ ಆಗಿದ್ದರಿಂದ ಸದ್ಯ ಜಲಾಶಯದಲ್ಲಿ ಆರು ಟಿಎಂಸಿಗೂ ಅಧಿಕ ನೀರು ಸಂಗ್ರಹವಾಗುತ್ತಿದೆ. ಈ ಜಲಾಶಯದ ನೀರನ್ನು ನಂಬಿಕೊಂಡು ಈ ಪ್ರದೇಶದ ಕೋಟ್ಯಂತರ ಜನರು ಜೀವನ ಸಾಗಿಸ್ತಿದ್ದಾರೆ. ಅವರ ಮುಖದಲ್ಲಿ ಇದೀಗ ನಗು ಮೂಡಿದೆ.

ಈ ಡ್ಯಾಮ್​ನಿಂದ ಲಕ್ಷಾಂತರ ಎಕರೆ ಕೃಷಿ ಪ್ರದೇಶಕ್ಕೆ ನೀರು ಹೋಗುತ್ತದೆ. ಅಷ್ಟೇ ಅಲ್ಲದೇ ತುಂಗಭದ್ರಾ ಜಲಾಶಯದಿಂದ ಆಂಧ್ರಪ್ರದೇಶದ, ತೆಲಂಗಾಣ ಎರಡು ರಾಜ್ಯಕ್ಕೂ ನೀರು ಹರಿಯುತ್ತದೆ. ಕಳೆದ ವರ್ಷ ಮಳೆ ಕಡಿಮೆಯಾಗಿದ್ದ ಕಾರಣ ಕೇವಲ 90 ಟಿಎಂಸಿ ನೀರು ಮಾತ್ರ ಜಲಾಶಯದಲ್ಲಿ ಸಂಗ್ರಹಣೆ ಆಗಿತ್ತು. ಈ ಜಲಾಶಯದಲ್ಲಿ 105 ಟಿಎಂಸಿ ಸಂಗ್ರಹಣಾ ಸಾಮರ್ಥ್ಯವಿದೆ. ಹೀಗಾಗಿ ಕಳೆದ ವರ್ಷ ಡ್ಯಾಮ್ ತುಂಬಿರಲಿಲ್ಲ. ಭೀಕರ ಬರಗಾಲದಿಂದ ಕುಡಿಯೋ ನೀರಿಗೂ ಭಾರೀ ಹಾಹಾಕಾರ ಶುರು ಆಗಿತ್ತು. ಆದರೆ, ಈ ಬಾರಿ ಬೇಗ ಮಳೆ ಬಂದ ಕಾರಣ ಸಮಸ್ಯೆ ಸರಿಯಾಗುವ ಲಕ್ಷಣ ಕಂಡು ಬಂದಿದೆ. 100 ಟಿಎಂಸಿ ನೀರು ತುಂಬಿದರೆ ಹೊರಕ್ಕೆ ಹರಿಯಬಿಡಲಾಗುತ್ತದೆ

ಇಂದು ಕರಾವಳಿ ಭಾಗ, ಬೆಳಗಾವಿ, ಬಾಗಲಕೋಟೆ ಸೇರಿ ವಿವಿಧೆಡೆ ಗುಡುಗು ಸಹಿತ ಭಾರಿ ಮಳೆ!

ಬೆಂಗಳೂರು: ಕರ್ನಾಟಕದ ಒಳನಾಡಿನ ಜಿಲ್ಲೆಗಳ ಹಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಅಥವಾ ಗುಡುಗು ಸಹತ ಮಳೆಯಾಗುವ (Karnataka Weather) ಸಾಧ್ಯತೆಯಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆ, ಬೆಳಗಾವಿ, ಬಾಗಲಕೋಟೆ, ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಬಿರುಗಾಳಿ, ಗುಡುಗು ಸಹಿತ ಭಾರಿ ಮಳೆ ಬೀಳುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇದನ್ನೂ ಓದಿ: Polluted Water : ಕಲುಷಿತ ನೀರು ಕುಡಿದು ಒಂದೇ ಗ್ರಾಮದ ನಾಲ್ವರ ಸಾವು, ಇಬ್ಬರ ಸ್ಥಿತಿ ಗಂಭೀರ

ಇನ್ನು ಜೂನ್‌ 14ರಂದು ದಕ್ಷಿಣ ಒಳನಾಡಿನ ಜಿಲ್ಲೆಗಳ ಮೇಲೆ ಹಲವು ಸ್ಥಳಗಳಲ್ಲಿ ಮತ್ತು ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಇದೇ ರೀತಿಯ ಪರಿಸ್ಥಿತಿ ಜೂನ್‌ 16ರವರೆಗೆ ಇರಲಿದೆ ಎಂದು ಮಾಹಿತಿ ನೀಡಿದೆ.

ಮೀನುಗಾರರಿಗೆ ಎಚ್ಚರಿಕೆ

ಚಂಡಮಾರುತದ ಹವಾಮಾನವು ಗಂಟೆಗೆ 35 ಕಿ.ಮೀ ನಿಂದ 45 ಕಿ.ಮೀ ವೇಗದಲ್ಲಿ 55 ಕಿ.ಮೀ ವರೆಗೆ ಬೀಸುವ ಗಾಳಿಯೊಂದಿಗೆ ಕರ್ನಾಟಕ ಕರಾವಳಿಯ ಉದ್ದಕ್ಕೂ ಮತ್ತು ಹೊರಗೆ ಮೇಲುಗೈ ಸಾಧಿಸುವ ಸಾಧ್ಯತೆಯಿದೆ. ಹೀಗಾಗಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ.

ದಕ್ಷಿಣ ಕನ್ನಡ: ಮೂಲ್ಕಿಯಿಂದ ಮಂಗಳೂರಿನವರೆಗೆ ದಕ್ಷಿಣ ಕನ್ನಡ, ಕರ್ನಾಟಕ ಕರಾವಳಿಗೆ ಹೈ ವೇವ್ ಅಲರ್ಟ್‌ ಇದೆ. . ಜೂನ್ 12‌ರಿಂದ 13ರ ಬೆಳಗ್ಗೆ 11:30 ಗಂಟೆಗಳವರೆಗೆ 1.9 – 2.0 ಮೀಟರ್ ವ್ಯಾಪ್ತಿಯಲ್ಲಿ ಎತ್ತರದ ಅಲೆಗಳನ್ನು ಮುನ್ಸೂಚಿಸಲಾಗಿದೆ.

ಉಡುಪಿ: ಬೈಂದೂರಿನಿಂದ ಕಾಪುವರೆಗಿನ ಉಡುಪಿ, ಕರ್ನಾಟಕ ಕರಾವಳಿಯಲ್ಲಿ ಹೈ ವೇವ್ ಅಲರ್ಟ್‌ ಇದೆ. ಜೂನ್‌ 12ರಿಂದ 13ರ ಬೆಳಗ್ಗೆ 11:30ರವರೆಗೆ 1.9- 2.1 ಮೀಟರ್ ವ್ಯಾಪ್ತಿಯಲ್ಲಿ ಎತ್ತರದ ಅಲೆಗಳನ್ನು ಮುನ್ಸೂಚಿಸಲಾಗಿದೆ.

ಉತ್ತರ ಕನ್ನಡ: ಉತ್ತರ ಕನ್ನಡ, ಕರ್ನಾಟಕ ಕರಾವಳಿಯ ಮಾಜಾಳಿಯಿಂದ ಭಟ್ಕಳದವರೆಗೆ ಹೈ ವೇವ್ ಅಲರ್ಟ್‌ ನೀಡಲಾಗಿದೆ. ಜೂನ್‌ 12ರಿಂದ 13ರ ರಾತ್ರಿ 11.30ರವರೆ 2.0 – 2.1 ಮೀಟರ್ ವ್ಯಾಪ್ತಿಯಲ್ಲಿ ಎತ್ತರದ ಅಲೆಗಳನ್ನು ಮುನ್ಸೂಚಿಸಲಾಗಿದೆ. ತಕ್ಷಣ ಕ್ರಮ ಕೈಗೊಳ್ಳುವ ಅಗತ್ಯವಿಲ್ಲ ಎಂದು ಸಲಹೆ ನೀಡಲಾಗಿದೆ.

ಮುಂದಿನ 48 ಗಂಟೆಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ಅಕಾಶ. ಹಗುರದಿಂದ ಸಾಧಾರಣ ಮಳೆ, ಗುಡುಗು ಸಹಿತ ಮಳೆಯಾಗುವ ಸಂಭವವಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 29ನೇC ಮತ್ತು 21c ಆಗಿರಬಹುದು.

Continue Reading

ಧಾರವಾಡ

Dharwad News: ಜ್ಯೋತಿರ್ವಿಜ್ಞಾನ ಕಲಿಕೆಯಲ್ಲಿ ವಿದೇಶಿಯರ ಆಸಕ್ತಿ ಹೆಚ್ಚಳ: ಡಾ. ನವೀನಶಾಸ್ತ್ರಿ ಪುರಾಣಿಕ

Dharwad News: ಜ್ಯೋತಿಷ್ಯಶಾಸ್ತ್ರ ಒಂದು ವಿಜ್ಞಾನ ಎಂಬುದನ್ನು ಅರ್ಥ ಮಾಡಿಕೊಂಡಿರುವ ವಿದೇಶಿಯರು ಉತ್ಸಾಹದಿಂದ ಕಲಿಯುತ್ತಿದ್ದಾರೆ. ವಿದೇಶಿ ಜ್ಯೋತಿಷಿಗಳು ನಮ್ಮ ಭವಿಷ್ಯ ಹೇಳಿದರೂ ಅಚ್ಚರಿಪಡಬೇಕಿಲ್ಲ ಎಂದು ವಿದ್ವಾನ್ ಡಾ. ನವೀನಶಾಸ್ತ್ರಿ ಪುರಾಣಿಕ ತಿಳಿಸಿದ್ದಾರೆ.

VISTARANEWS.COM


on

Increasing interest of foreigners in learning astrology says Dr Navinashastri Puranika
Koo

ಧಾರವಾಡ: ಜ್ಯೋತಿಷ್ಯ ಜನರನ್ನು ಹೆದರಿಸುವ ಶಾಸ್ತ್ರವಲ್ಲ, ಮಾನವನನ್ನು ಉನ್ನತಿಯೆಡೆಗೆ ಕರೆದೊಯ್ಯುವುದು ಜ್ಯೋತಿಷ್ಯಶಾಸ್ತ್ರದ ಉದ್ದೇಶ ಎಂದು ವಿದ್ವಾನ್ ಡಾ. ನವೀನಶಾಸ್ತ್ರಿ ಪುರಾಣಿಕ (Dharwad News) ತಿಳಿಸಿದರು.

ಧಾರವಾಡದ ಕರ್ನಾಟಕ ವಿದ್ಯಾವರ್ಧಕ ಸಂಘದ ರಾ.ಹ. ದೇಶಪಾಂಡೆ ಸಭಾಭವನದಲ್ಲಿ ಆಯೋಜಿಸಿದ್ದ ಎನ್.ಕೆ. ಜೋಗಳೇಕರ ಸ್ಮರಣಾರ್ಥ ದತ್ತಿ ಕಾರ್ಯಕ್ರಮದಲ್ಲಿ “ಜ್ಯೋತಿಷ್ಯಶಾಸ್ತ್ರ ಮತ್ತು ವೈಜ್ಞಾನಿಕ ಚಿಂತನೆಗಳು’ ಕುರಿತು ಉಪನ್ಯಾಸ ನೀಡಿ, ಅವರು ಮಾತನಾಡಿದರು.

ವ್ಯಕ್ತಿಯ ಹಿಂದಿನ ಮೂರು ತಲೆಮಾರು ಹಾಗೂ ಮುಂದಿನ ಮೂರು ತಲೆಮಾರು ಜ್ಯೋತಿಷ್ಯ ಹೇಳುವ ಜ್ಯೋತಿಷಿಗಳು ಪ್ರಸ್ತುತ ನಮ್ಮ ಸಮಾಜದಲ್ಲಿದ್ದಾರೆ. ಆದರೆ ಅವರನ್ನು ನಾವು ಗುರುತಿಸುತ್ತಿಲ್ಲ. ರೋಗಗಳ ಬಗ್ಗೆ ಮುನ್ನೆಚ್ಚರಿಕೆ ನೀಡುವ ಜ್ಯೋತಿಷ್ಯದಲ್ಲಿ ರೋಗಗಳಿಗೂ ಚಿಕಿತ್ಸೆ ತಿಳಿಸಲಾಗಿದೆ. ಆಯುಷ್ಯ ವೃದ್ಧಿ ಹಾಗೂ ಮನಸನ್ನು ಸ್ಥಿರವಾಗಿಡಲು ಜ್ಯೋತಿಷ್ಯ ನಮಗೆ ಅಗತ್ಯವಾಗಿದೆ ಎಂದರು.

ಇದನ್ನೂ ಓದಿ: Ballari News: ಭಕ್ತಿ ಭಾವದಿಂದ ನಡೆದ ಚೇಳ್ಳಗುರ್ಕಿ ಶ್ರೀ ಎರ‍್ರಿತಾತ ಮಹಾರಥೋತ್ಸವ

ಜ್ಯೋತಿಷ್ಯಶಾಸ್ತ್ರ ಒಂದು ವಿಜ್ಞಾನ ಎಂಬುದನ್ನು ಅರ್ಥ ಮಾಡಿಕೊಂಡಿರುವ ವಿದೇಶಿಯರು ಉತ್ಸಾಹದಿಂದ ಕಲಿಯುತ್ತಿದ್ದಾರೆ. ವಿದೇಶಿ ಜ್ಯೋತಿಷಿಗಳು ನಮ್ಮ ಭವಿಷ್ಯ ಹೇಳಿದರೂ ಅಚ್ಚರಿಪಡಬೇಕಿಲ್ಲ. ಕೆಲ ದಿನಗಳಲ್ಲಿ ಕೃತಕ ಬುದ್ಧಿಮತ್ತೆ ಆಧಾರಿತ ಜ್ಯೋತಿಷ್ಯ ಕೂಡ ಬರಲಿದೆ ಎಂದರು.

ಜ್ಯೋತಿಷ್ಯಶಾಸ್ತ್ರ ಕಾಲ ಗಣನೆ ಮಾಡಿ ಹೇಳುವ ಶಾಸ್ತ್ರ, ಇದು ಗಣಿತ, ಖಗೋಳಶಾಸ್ತ್ರ ಎಂಬುದನ್ನು ಒಪ್ಪಿಕೊಂಡ ಪಾಶ್ಚಾತ್ಯರು ಜ್ಯೋತಿಷ್ಯ ಕಲಿಯುವುದರೊಂದಿಗೆ ಅದಕ್ಕನುಗುಣವಾಗಿ ಜೀವನ ಕ್ರಮ ರೂಪಿಸಿಕೊಳ್ಳುತ್ತಿದ್ದಾರೆ ತಿಳಿಸಿದರು.

ಸಹಸ್ರಾರು ವರ್ಷಗಳ ಇತಿಹಾಸ ಹೊಂದಿರುವ ಜ್ಯೋತಿಷ್ಯಶಾಸ್ತ್ರದ ಜ್ಞಾನ, ಪೀಳಿಗೆಯಿಂದ ಪೀಳಿಗೆಗೆ ವರ್ಗಾವಣೆಯಾಗದಿರುವುದು ಬೇಸರದ ಸಂಗತಿ. ಜ್ಯೋತಿಷ್ಯವು ಮೂಢನಂಬಿಕೆ ಎಂದು ಹೇಳುವ ವಿಶ್ವವಿದ್ಯಾಲಯದ ಪ್ರಾಧ್ಯಾಪಕರು ಕೂಡ ಭವಿಷ್ಯಕ್ಕಾಗಿ ಜ್ಯೋತಿಷಿಗಳ ಮನೆ ಮುಂದೆ ಸರದಿಯಲ್ಲಿ ನಿಲ್ಲುತ್ತಾರೆ ಎಂದ ಅವರು, ನಿರಂತರ ಕಲಿಕೆ ಇದ್ದರೆ ಮಾತ್ರ ಜ್ಯೋತಿಷ್ಯಶಾಸ್ತ್ರದಲ್ಲಿ ಪ್ರಾವಿಣ್ಯ ಗಳಿಸಿಕೊಳ್ಳಲು ಸಾಧ್ಯ ಎಂದು ಹೇಳಿದರು.

ಮಾನಸಿಕ ಆರೋಗ್ಯ ತಜ್ಞ ಡಾ. ಆನಂದ ಹಂದಿಗೋಳ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.

ಇದನ್ನೂ ಓದಿ: Tata Motors: ಟಾಟಾ ಮೋಟಾರ್ಸ್‌ನಿಂದ ʼಆಲ್ಟ್ರೋಜ್ ರೇಸರ್ʼ ಬಿಡುಗಡೆ; ದರ ಎಷ್ಟು?

ಈ ಸಂದರ್ಭದಲ್ಲಿ ದತ್ತಿದಾನಿ ಸುಹಾಸ ಜೋಗಳೇಕರ ಹಾಗೂ ಇತರರು ಉಪಸ್ಥಿತರಿದ್ದರು. ಗುರು ಹಿರೇಮಠ ಪ್ರಾಸ್ತಾವಿಕವಾಗಿ ಮಾತನಾಡಿದರು. ಡಾ. ಜಿನದತ್ತ ಹಡಗಲಿ ನಿರೂಪಿಸಿದರು.

Continue Reading

ಪ್ರಮುಖ ಸುದ್ದಿ

Actor Darshan Arrested : ಪದೇ ಪದೆ ಕ್ರಿಮಿನಲ್ ಚಟುವಟಿಕೆ; ನಟ ದರ್ಶನ್​ ರೌಡಿ ಪಟ್ಟಿಗೆ ಸೇರ್ಪಡೆ?

VISTARANEWS.COM


on

Actor Darshan Arrested
Koo

ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಾ ಸ್ವಾಮಿ ಎಂಬುವರನ್ನು ಹೊಡೆದು ಕೊಂದ ಆರೋಪದ ಮೇಲೆ ಪೊಲೀಸ್​ ವಶದಲ್ಲಿರುವ ನಟ ದರ್ಶನ್ ವಿರುದ್ಧ (Actor Darshan Arrested) ರೌಡಿ ಪಟ್ಟಿ ತೆರೆಯಲು ಬೆಂಗಳೂರು ನಗರ ಪೊಲೀಸರು ಸಿದ್ದ ರಾಗಿದ್ದಾರೆ ಎಂಬುದಾಗಿ ವರದಿಯಾಗಿದೆ. ಪದೇ ಪದೆ ಕ್ರಿಮಿನಲ್ ಚಟುವಟಿಕೆಗಳಲ್ಲಿ ಭಾಗಿಯಾಗುತ್ತಿರುವ ಅವರ ಮೇಲೆ ಕಾನೂನಿನ ಹಿಡಿತ ಸ್ಥಾಪಿಸಲು ರೌಡಿ ಪಟ್ಟಿ ಅನಿವಾರ್ಯ ಎಂಬ ಅಭಿಪ್ರಾಯ ಹಿರಿಯ ಅಧಿಕಾರಿಗಳು ವ್ಯಕ್ತಪಡಿಸಿದ್ದಾರೆ. ಕೊಲೆ ಪ್ರಕರಣವೊಂದರಲ್ಲಿ ಭಾಗಿಯಾದ ಆರೋಪಿ ಮೇಲೆ ರೌಡಿ ಪಟ್ಟಿಯನ್ನು ತೆರೆಯಲಾಗುತ್ತದೆ. ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲೂ ದರ್ಶನ್​ ಪ್ರಮುಖ ಆರೋಪಿ. ಹೀಗಾಗಿ ಅವರ ಮೇಲೆಯೂ ರೌಡಿ ಶೀಟರ್​ ಓಪನ್ ಮಾಡಬೇಕು ಎಂಬ ಅಭಿಪ್ರಾಯಗಳು ಕೇಳಿ ಬಂದಿದೆ.

ದರ್ಶನ್​ ಈ ಹಿಂದೆಯೂ ಹಲವಾರು ಬಾರಿ ಕ್ರಿಮಿನಲ್ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದರು. ಬೆದರಿಕೆ, ನಿಂದನೆ ಸೇರಿದಂತೆ ನಾನಾ ರೀತಿಯಲ್ಲಿ ಅವರು ಕಾನೂನು ಕ್ರಮವನ್ನು ಎದುರಿಸಿದ್ದರು. ಹೀಗಾಗಿ ಅವರನ್ನು ರೌಡಿ ಪಟ್ಟಿಯೊಳಗೆ ಸೇರಿಸಿ ನಿಯಂತ್ರಣದಲ್ಲಿ ಇಟ್ಟುಕೊಳ್ಳುವುದು ಪೊಲೀಸ್​ ಇಲಾಖೆಯ ಆಲೋಚನೆಯಾಗಿದೆ.

ಇದನ್ನೂ ಓದಿ: Actor Darshan Arrested: ರೇಣುಕಾಸ್ವಾಮಿಗೆ ದರ್ಶನ್‌ ಗ್ಯಾಂಗ್‌ನಿಂದ ಕ್ರೂರ ಹಿಂಸೆ; ಪೋಸ್ಟ್‌ಮಾರ್ಟಂ ವರದಿಯಲ್ಲಿದೆ ಭಯಾನಕ ಡಿಟೇಲ್ಸ್‌

ರೇಣುಕಾ ಸ್ವಾಮಿ ಅವರನ್ನು ಕೊಲೆ ಮಾಡುವ ಉದ್ದೇಶವಿಲ್ಲದೆ ಅಪಹರಣ ಮಾಡಿದ್ದರು. ಗಂಭೀರ ರೂಪದಲ್ಲಿ ಹಲ್ಲೆ ಮಾಡಿ ಕೊಲೆ ಮಾಡಿದ್ದಾರೆ. ಅಷ್ಟೇ ಅಲ್ಲದೇ ಕೊಲೆ ಮಾಡಿ ಶವ ಮುಚ್ಚಿಡುವ ಹಾಗೂ ಸಾಕ್ಷಿನಾಶ ಪಡಿಸುವ ಯತ್ನ ಮಾಡಿದ್ದಾರೆ. ಇವೆಲ್ಲವೂ ಅಪಾಯಕಾರಿ ಕ್ರಿಮಿನಲ್ ಚಟುವಟಿಕೆಗಳಾಗಿವೆ.

ರೌಡಿಶೀಟ್ ಓಪನ್ ಆದ್ರೆ ಏನಾಗುತ್ತೆ.?

ಇಷ್ಟು ವರ್ಷಗಳ ಕಾಲ ಸೆಲೆಬ್ರಿಟಿಯಾಗಿ ಕಾಣಿಸಿಕೊಂಡಿದ್ದ ಹಾಗೂ ಅಪಾರ ಗೌರವ ಗಳಿಸಿಕೊಂಡಿದ್ದ ನಟ ದರ್ಶನ್ ರೌಡಿಶೀಟರ್ ಅನ್ನೋ ಕಳಂಕ ಹೊತ್ತುಕೊಳ್ಳಬೇಕಾಗುತ್ತದೆ. ಶಾಂತಿಸುವ್ಯವಸ್ಥೆಗೆ ಭಂಗ ತರುವ ಆರೋಪದ ಮೇಲೆ ಆಗಾಗ ಸಿಆರ್ಪಿಸಿ 110 ಅಡಿಯಲ್ಲಿ ಕೇಸ್ ದಾಖಲಾಗುತ್ತದೆ. ಪದೇ ಪದೆ ಪೊಲೀಸ್ ಠಾಣೆಯ ಮೆಟ್ಟಿಲನ್ನು ಏರಬೇಕಾಗುತ್ತದೆ.

ಚುನಾವಣೆ ಹಾಗೂ ಇನ್ಯಾವುದಾದರೂ ತುರ್ತು ಸಂಧರ್ಭದಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಅವರ ಮನೆಯ ಮೇಲೆ ಪೊಲೀಸರು ದಾಳಿ ಮಾಡುತ್ತಾರೆ. ಯಾವುದೇ ಅನುಮತಿ ಇಲ್ಲದೆ ಪರಿಶೀಲನೆ ನಡೆಸುತ್ತಾರೆ. ರೌಡಿಚಟುವಟಿಕೆ ಸಕ್ರಿಯರಾಗಿದ್ದಾರೆ ಎಂಬ ಕಾರಣದಲ್ಲಿ ಅವರ ಮೇಲೆ ನಿಗಾ ಇಡುತ್ತಾರೆ. ಖಾಸಗಿತನ ನಷ್ಟವಾಗುತ್ತದೆ.

ತುರ್ತು ಸಂದರ್ಭದಲ್ಲಿ ತಹಸೀಲ್ದಾರರ ಮುಂದೆ ಹಾಜರಾಗಿ ಬಾಂಡ್ ಸಲ್ಲಿಸಬೇಕಾದ ಪರಿಸ್ಥಿತಿ ಎದುರಾಗುತ್ತದೆ. ಪೊ ಲೀಸರು ನಡೆಸುವ ರೌಡಿ ಪೆರೇಡ್ ನಲ್ಲಿ ಇತರೆ ರೌಡಿಗಳಂತೆ ನಿಲ್ಲಬೇಕಾದ ಪರಿಸ್ಥಿತಿ ಎದುರಾಗಲಿದೆ. ಅವರ ಟೀಕೆಗಳನ್ನು ಕೇಳಬೇಕಾಗುತ್ತದೆ.

ಕೊಲೆ ಆರೋಪಿ ದರ್ಶನ್‌ಗೆ ಪತ್ನಿ ವಿಜಯಲಕ್ಷ್ಮಿ ಡಿವೋರ್ಸ್‌?

ಬೆಂಗಳೂರು: ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್​ ಅರೆಸ್ಟ್ (Actor Darshan Arrested) ಆಗಿದ್ದರೂ ಅವರ ಪತ್ನಿ ವಿಜಯಲಕ್ಷ್ಮಿ ಇದುವರೆಗೆ ಒಂದೇ ಒಂದು ಪ್ರತಿಕ್ರಿಯೆ ನೀಡಿಲ್ಲ. ಪವಿತ್ರಾ ಗೌಡ ವಿಚಾರದಲ್ಲಿ ಆಗಾಗ ಸೋಶಿಯಲ್ ಮೀಡಿಯಾಗಳ ಮೂಲಕ ಯುದ್ಧ ಸಾರುತ್ತಿದ್ದ ವಿಜಯಲಕ್ಷ್ಮಿ ಅವರು ಈ ಬಾರಿ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಹೀಗಿರುವಾಗಲೇ ವಿಜಯಲಕ್ಷ್ಮಿ ಅವರು ದರ್ಶನ್‌ ಜತೆಗಿದ್ದ ಇನ್​ಸ್ಟಾಗ್ರಾಮ್​ ಪ್ರೊಫೈಲ್‌​ ಫೋಟೊ ಡಿಲೀಟ್ ಮಾಡಿದ್ದಾರೆ. ಇಷ್ಟೇ ಅಲ್ಲ ನಟ ದರ್ಶನ್ ಅವರನ್ನು ಅನ್​ಫಾಲೋ ಮಾಡಿದ್ದಾರೆ. ಇದೀಗ ವಿಜಯಲಕ್ಷ್ಮಿ ವಿಚ್ಛೇದನ ಪಡೆಯುವ ಬಗ್ಗೆ ಗಂಭೀರವಾಗಿ ಚಿಂತಿಸುತ್ತಿದ್ದಾರೆ ಎನ್ನಲಾಗುತ್ತಿದೆ.

ಕೌಟುಂಬಿಕ ಕಲಹದಲ್ಲಿ ʼದಾಸʼ

ದರ್ಶನ್‌ ವಿರುದ್ಧ ಹಲವು ಆರೋಪಗಳು ಕೇಳಿ ಬಂದಿದ್ದವು. ಇನ್ನು ಕೌಟುಂಬಿಕ ಕಲಹದಲ್ಲಿಯೂ 28 ದಿನಗಳ ಕಾಲ ಜೈಲಿನಲ್ಲಿ ಇದ್ದು ಬಂದಿದ್ದರು. 2011ರಲ್ಲಿ ವಿಜಯಲಕ್ಷ್ಮಿ ಮೇಲೆ ದರ್ಶನ್ ಮಾರಣಾಂತಿಕ ಹಲ್ಲೆ ಮಾಡಿದ್ದರು. 2016ರಲ್ಲಿ ಮತ್ತೊಮ್ಮೆ ದರ್ಶನ್ ವಿರುದ್ಧ ವಿಜಯಲಕ್ಷ್ಮಿ ದೂರು ನೀಡಿದ್ದ ಘಟನೆಯೂ ನಡೆದಿತ್ತು. ಮಗನನ್ನು ಹತ್ಯೆ ಮಾಡುವುದಾಗಿಯೂ ದರ್ಶನ್‌ ಬೆದರಿಸುವುದಾಗಿ ಕೇಳಿ ಬಂದಿತ್ತು. ಮಾತ್ರವಲ್ಲ ವಿಜಯಲಕ್ಷ್ಮಿ ಅವರಿಗೆ ಸಿಗರೇಟ್‌ನಿಂದ ಸುಟ್ಟು ಗಾಯಗೊಳಿಸಿದ್ದರು. ಅಂಬರೀಶ್ ಮಧ್ಯಪ್ರವೇಶದಿಂದ ವಿಜಯಲಕ್ಷ್ಮಿ ಎಲ್ಲವನ್ನೂ ಮರೆತು ರಾಜಿ ಸಂಧಾನಕ್ಕೆ ಒಪ್ಪಿದ್ದರು.

Continue Reading

ಪ್ರಮುಖ ಸುದ್ದಿ

Polluted Water : ಕಲುಷಿತ ನೀರು ಕುಡಿದು ಒಂದೇ ಗ್ರಾಮದ ನಾಲ್ವರ ಸಾವು, ಇಬ್ಬರ ಸ್ಥಿತಿ ಗಂಭೀರ

Polluted Water : ಕಲುಷಿತ ನೀರು ಸೇವನೆಯಿಂದ ಅಸ್ವಸ್ಥಗೊಂಡಿರುವ ವರಲಕ್ಷ್ಮೀ ಎಂಬುವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅದೇ ರಿತಿ ವಾಂತಿ, ಭೇದಿಯಿಂದ ಇಬ್ಬರು ಗ್ರಾಮಸ್ಥರು. ಆಸ್ಪತ್ರೆಗೆ ದಾಖಲಾಗಿದ್ದಾರೆ. ಚಿಂತಾಮಣಿ ಸಾರ್ವಜನಿಕ ಆಸ್ಪತ್ರೆಯಲ್ಲಿ ವರಲಕ್ಷ್ಮಿ ಲಕ್ಷ್ಮೀದೇವಮ್ಮ ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ.

VISTARANEWS.COM


on

Polluted Water
Koo

ಚಿಕ್ಕಬಳ್ಳಾಪುರ : ಕಲುಷಿತ ನೀರು (Polluted Water ) ಸೇವಿಸಿದ್ದರಿಂದ ಉಂಟಾದ ಅಸ್ವಸ್ಥೆಯಿಂದ ಒಂದೇ ಗ್ರಾಮದಲ್ಲಿ ನಾಲ್ವರು ಮೃತಪಟ್ಟಿದ್ದಾರೆ. ಇಲ್ಲಿನ ವೀರಪ್ಪಲ್ಲಿ ಗ್ರಾಮದಲ್ಲಿ ಕಲುಷಿತ ನೀರು ಸೇವನೆ ಪ್ರಕರಣದಿಂದ ಈ ನಾಲ್ವರು ಮೃತಪಟ್ಟಿದ್ದಾರೆ. ಅದೇ ರೀತಿ ವೀರಾಪುರ ಗ್ರಾಮದಲ್ಲಿಯೂ ‌ಇಬ್ಬರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ಮೂಲಗಳು ತಿಳಿಸಿವೆ. ಗ್ರಾಮದಲ್ಲಿ ಗಂಗಮ್ಮ (70) ಮುನಿನಾರಾಯಣಮ್ಮ (74), ಲಕ್ಷ್ಮಮ್ಮ (70). ನರಸಿಂಹಪ್ಪ (75) ಎಂಬುವರು ಮೃತಪಟ್ಟಿದ್ದರು.

ಕಲುಷಿತ ನೀರು ಸೇವನೆಯಿಂದ ಅಸ್ವಸ್ಥಗೊಂಡಿರುವ ವರಲಕ್ಷ್ಮೀ ಎಂಬುವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅದೇ ರಿತಿ ವಾಂತಿ, ಭೇದಿಯಿಂದ ಇಬ್ಬರು ಗ್ರಾಮಸ್ಥರು. ಆಸ್ಪತ್ರೆಗೆ ದಾಖಲಾಗಿದ್ದಾರೆ. ಚಿಂತಾಮಣಿ ಸಾರ್ವಜನಿಕ ಆಸ್ಪತ್ರೆಯಲ್ಲಿ ವರಲಕ್ಷ್ಮಿ ಲಕ್ಷ್ಮೀದೇವಮ್ಮ ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ.

ಗ್ರಾಮ ಪಂಚಾಯ್ತಿ ವತಿಯಿಂದ ಪೂರೈಸಿದ್ದ ನೀರು ಕಲುಷಿತ ಗೊಂಡಿದ್ದ ಕಾರಣ ಆರೋಗ್ಯ ಸಮಸ್ಯೆ ಉಂಟಾಗಿದೆ. ನೀರು ಸರಬರಾಜು ಮಾಡಿರುವ ಕೋಟಗಲ್ ಗ್ರಾಮಪಂಚಾಯಿತಿ ವಿರುದ್ಧ ಗ್ರಾಮಸ್ಥರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಒಂದೇ ವಾರದಲ್ಲಿ ಗ್ರಾಮದಲ್ಲಿ ನಾಲ್ಕು ಸರಣಿ ಸಾವಾದರೂ ಎಚ್ಚೆತ್ತುಕೊಳ್ಳದ ಪಿಡಿಒ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.

ಇದನ್ನೂ ಓದಿ: HSRP Number Plate : ಎಚ್​ಎಸ್​ಆರ್​ಪಿ ನಂಬರ್​ ಪ್ಲೇಟ್​ ಅಳವಡಿಕೆ ಗಡುವು ಜುಲೈ 4 ರವರೆಗೆ ವಿಸ್ತರಣೆ; ವಾಹನ ಮಾಲೀಕರಿಗೆ ನೆಮ್ಮದಿ

ಗ್ರಾಮದಲ್ಲಿ ಚರಂಡಿಗಳು ಕಟ್ಟಿಕೊಂಡು ವಾಸನೆ ಬರುತ್ತಿವೆ. ಅದನ್ನೆಲ್ಲ ರಿಪೇರಿ ಮಾಡದ ಕಾರಣ ಕುಡಿಯುವ ನೀರಿನೊಂದಿಗೆ ಮಿಶ್ರಣಗೊಳ್ಳುತ್ತಿದೆ. ಅದರಿಂದಾಗಿಯೇ ಸಮಸ್ಯೆ ಎದುರಾಗಿದೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.

ಮಳೆಗಾಲದಲ್ಲಿ ರೋಗನಿರೋಧಕ ಶಕ್ತಿ ಹೆಚ್ಚಿಸಿಕೊಳ್ಳುವುದು ಹೇಗೆ?

ಮುಂಗಾರು ಚುರುಕಾಗುತ್ತಿದೆ. ಮಳೆಗಾಲವನ್ನು ಸಿಕ್ಕಾಪಟ್ಟೆ ಪ್ರೀತಿಸುವವರು ಇದ್ದಷ್ಟೇ ಮುಖ ಹಿಂಡುವವರೂ ಇದ್ದಾರೆ. ಇದಕ್ಕೆ ಕಾರಣಗಳು ಬಹಳಷ್ಟಿದ್ದರೂ, ಈ ಒದ್ದೆ-ಥಂಡಿ-ಶೀತದ ದಿನಗಳಲ್ಲಿ ಕಾಡುವ ಸೋಂಕುಗಳು ಅವುಗಳಲ್ಲಿ ಒಂದು ಪ್ರಮುಖ ಕಾರಣ. ಹೊರಗೆ ಮೋಡ ಕಟ್ಟಿದಂತೆಯೇ ಒಳಗೆ ಮೂಗು ಕಟ್ಟಿ, ಹೊರಗಿನಂತೆ ಒಳಗೂ ಧಾರಾಕಾರ ಹರಿದು, ಗುಡುಗು-ಸಿಡಿಲಿನಂತೆ ಕೆಮ್ಮು ಪ್ರಾರಂಭವಾದರೆ- ಮಳೆಯನ್ನು ಪ್ರೀತಿಸಲು ಹೇಗೆ ಸಾಧ್ಯ? ರೋಗಾಣುಗಳನ್ನು ತಡೆಯಲು ಸಾಧ್ಯವಿಲ್ಲದಿದ್ದರೂ, ನಮ್ಮ ದೇಹವನ್ನು ಸದೃಢವಾಗಿ ಇರಿಸಿಕೊಳ್ಳಬಹುದಲ್ಲ. ರೋಗ ನಿರೋಧಕ ಶಕ್ತಿಗೆ ಬಲ ಬರುವುದೇ ನಮ್ಮ ಆಹಾರದಿಂದ. ಸೋಂಕು ದೂರ ಇರಿಸುವುದಕ್ಕೆ (Tips For Rainy Season) ಎಂಥ ಆಹಾರ ಒಳ್ಳೆಯದು?

ವಿಟಮಿನ್‌ ಸಿ ಆಹಾರಗಳು

ದೇಹದ ರೋಗ ನಿರೋಧಕ ಶಕ್ತಿಯನ್ನು ಉದ್ದೀಪಿಸುವಲ್ಲಿ ಸಿ ಜೀವಸತ್ವ ಪ್ರಧಾನವಾಗಿ ಬೇಕು. ಅದರಲ್ಲೂ ನೆಗಡಿ, ಕೆಮ್ಮು, ಜ್ವರದಂಥ ಮಳೆಗಾಲದ ಸೋಂಕು ರೋಗಗಳನ್ನು ದೂರ ಇಡುವುದಕ್ಕೆ ವಿಟಮಿನ್‌ ಸಿ ಅಗತ್ಯವಾಗಿ ಬೇಕು. ಹಾಗಾಗಿ ಕಿತ್ತಳೆ, ನಿಂಬೆ, ದಾಳಿಂಬೆ, ಪಪ್ಪಾಯ, ಪೇರಳೆ, ಬ್ರೊಕೊಲಿ, ದಪ್ಪಮೆಣಸು, ಮೊಳಕೆ ಕಟ್ಟಿದ ಕಾಳುಗಳನ್ನು ತಪ್ಪದೆ ಆಹಾರದಲ್ಲಿ ಸೇರಿಸಿಕೊಳ್ಳಬೇಕು.

ginger

ಶುಂಠಿ

ಇದಕ್ಕೆ ಹಲವಾರು ಔಷಧೀಯ ಗುಣಗಳಿವೆ. ಅದರಲ್ಲೂ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುವ, ಬ್ಯಾಕ್ಟೀರಿಯ ನಿರೋಧಕ ಮತ್ತು ಉರಿಯೂತ ಶಾಮಕ ಗುಣಗಳು ಇದರಲ್ಲಿ ಧಾರಾಳವಾಗಿವೆ. ಕೆಮ್ಮು, ನೆಗಡಿ, ಕಫದಂಥ ಸಮಸ್ಯೆಗಳಿಗೆ ಶುಂಠಿ ಚಹಾ, ಶುಂಠಿ ಕಷಾಯಗಳು ಉಪಶಮನ ನೀಡಬಲ್ಲವು. ಗಂಟಲು ಕಟ್ಟಿದ್ದರೆ, ಗಂ

Continue Reading
Advertisement
WI vs NZ
ಕ್ರೀಡೆ20 seconds ago

WI vs NZ: ಕಿವೀಸ್​ ಕಿವಿ ಹಿಂಡಿ ಸೂಪರ್​-8ಗೆ ಪ್ರವೇಶಿಸಿದ ವೆಸ್ಟ್​ ಇಂಡೀಸ್​

Pushpa 2 Allu Arjun postponed
ಟಾಲಿವುಡ್2 mins ago

Pushpa 2: ಅಗಸ್ಟ್ 15 ರಂದು ರಿಲೀಸ್‌ ಆಗ್ತಿಲ್ಲ ಪುಷ್ಪ 2; ಮತ್ತೆ ಶುರುವಾಯ್ತು ಚರ್ಚೆ!

Anushka Sharma
ಕ್ರೀಡೆ38 mins ago

Anushka Sharma: ಕೊಹ್ಲಿಯಂತೆ ತಾಳ್ಮೆ ಕಳೆದುಕೊಂಡ ಪತ್ನಿ ಅನುಷ್ಕಾ; ವಿಡಿಯೊ ವೈರಲ್​

Kannada New Movie Fire Fly Sheetal Shetty
ಸ್ಯಾಂಡಲ್ ವುಡ್42 mins ago

Kannada New Movie: ನಿವೇದಿತಾ ಶಿವರಾಜ್ ಕುಮಾರ್ ನಿರ್ಮಾಣದ ಸಿನಿಮಾದಲ್ಲಿ ಖ್ಯಾತ ಆ್ಯಂಕರ್​ ನಟನೆ!

Kangana Ranaut says work in the film industry is easier than politics
ಸಿನಿಮಾ1 hour ago

Kangana Ranaut: ರಾಜಕೀಯಕ್ಕಿಂತ ಸಿನಿಮಾ ಬೆಸ್ಟ್​ ಎಂದ ಕಂಗನಾ! ಪೊಲಿಟಿಕಲ್​ ಜರ್ನಿ ವಿವರಿಸಿದ ನಟಿ

suryakumar yadav
ಕ್ರೀಡೆ1 hour ago

Suryakumar Yadav: ಅರ್ಧಶತಕ ಬಾರಿಸಿದರೂ ಅನಗತ್ಯ ದಾಖಲೆ ಬರೆದ ಸೂರ್ಯಕುಮಾರ್​ ಯಾದವ್​

Tungabhadra Dam
ಪ್ರಮುಖ ಸುದ್ದಿ1 hour ago

Tungabhadra Dam : ಅಬ್ಬರದ ಮಳೆ; ವಿಶ್ವ ವಿಖ್ಯಾತಿಯ ತುಂಗಭದ್ರಾ ಡ್ಯಾಮ್​​ನಲ್ಲಿ​ ಹೆಚ್ಚಿದ ಒಳ ಹರಿವು

Doda Terror Attacks
ದೇಶ1 hour ago

Doda Terror Attacks: ಶಂಕಿತ ನಾಲ್ವರು ಭಯೋತ್ಪಾದಕರ ರೇಖಾಚಿತ್ರ ಬಿಡುಗಡೆ; ಸುಳಿವು ನೀಡಿದವರಿಗೆ 20 ಲಕ್ಷ ರೂ. ಬಹುಮಾನ

Increasing interest of foreigners in learning astrology says Dr Navinashastri Puranika
ಧಾರವಾಡ2 hours ago

Dharwad News: ಜ್ಯೋತಿರ್ವಿಜ್ಞಾನ ಕಲಿಕೆಯಲ್ಲಿ ವಿದೇಶಿಯರ ಆಸಕ್ತಿ ಹೆಚ್ಚಳ: ಡಾ. ನವೀನಶಾಸ್ತ್ರಿ ಪುರಾಣಿಕ

Bhubaneswar Tour
Latest2 hours ago

Bhubaneswar Tour: ಭುವನೇಶ್ವರಕ್ಕೆ ಪ್ರವಾಸ ಮಾಡಿದಾಗ ಏನೆಲ್ಲ ನೋಡಬಹುದು?

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka weather Forecast
ಮಳೆ2 days ago

Karnataka Weather : ಭಾರಿ ಮಳೆಗೆ ಗುಡ್ಡದಿಂದ ಉರುಳಿ ಬಿದ್ದ ಬಂಡೆಗಲ್ಲು; ಬೆಂಗಳೂರಲ್ಲೂ ಸಂಜೆ ವರ್ಷಧಾರೆ

actor Darshan
ಚಿತ್ರದುರ್ಗ2 days ago

Actor Darshan: ರೇಣುಕಾ ಸ್ವಾಮಿ ಕೊಲೆ ಕೇಸ್‌ನಲ್ಲಿ ದರ್ಶನ್‌ ಅರೆಸ್ಟ್‌; ಪ್ರಕರಣವನ್ನು ಸಿಬಿಐಗೆ ವಹಿಸಲು ಒತ್ತಾಯ

Actor Darshan gets a series of questions from the police
ಸಿನಿಮಾ2 days ago

Actor Darshan : ಪವಿತ್ರಗೌಡ ಬಗ್ಗೆ ಪೋಸ್ಟ್‌ ಮಾಡಿದ್ರೆ ನಿಮಗ್ಯಾಕೆ ಕೋಪ? ದರ್ಶನ್‌ಗೆ ಪೊಲೀಸರ ಪ್ರಶ್ನೆಗಳ ಸುರಿಮಳೆ

Actor Darshan
ಸಿನಿಮಾ2 days ago

Actor Darshan : ದರ್ಶನ್‌ ಜೈಲಿಗೆ ಹೋಗುತ್ತಿರುವುದು ಇದೇ ಮೊದಲಲ್ಲ; ನಟನ ಮೇಲಿವೆ ಹತ್ತಾರು ಕೇಸ್‌ಗಳು!

Saptami Gowda
ಸಿನಿಮಾ2 days ago

Saptami Gowda : ಯುವ ಪತ್ನಿ ಶ್ರೀದೇವಿ ವಿರುದ್ಧ ಮಾನಹಾನಿ ಕೇಸ್; ಕಾನೂನು ಹೋರಾಟಕ್ಕೆ ಮುಂದಾದ ನಟಿ ಸಪ್ತಮಿ ಗೌಡ!

Karnataka weather Forecast
ಮಳೆ3 days ago

Karnataka Weather : ಭಾರಿ ಮಳೆಗೆ ಮನೆ ಗೋಡೆ ಕುಸಿದು ಎಮ್ಮೆಗಳು ಸಾವು; ಆಕಳಿನ ಜೀವ ತೆಗೆದ ವಿದ್ಯುತ್‌ ತಂತಿ

Karnataka weather Forecast
ಮಳೆ6 days ago

Karnataka weather : ಮಳೆಯಲ್ಲೆ ತಪಸ್ಸಿಗೆ ಕುಳಿತ ವೃದ್ಧ; ಇನ್ನೊಂದು ವಾರ ನಾನ್‌ ಸ್ಟಾಪ್‌ ವರುಣನ ಅಬ್ಬರ

Sigandur launch
ಶಿವಮೊಗ್ಗ6 days ago

Sigandur launch: ಸಿಗಂದೂರು ಲಾಂಚ್‌ನಲ್ಲಿ ಭಾರಿ ವಾಹನಗಳಿಗೆ ನಿರ್ಬಂಧ

Karnataka Rain
ಮಳೆ7 days ago

Karnataka Rain : ಭಾರಿ ಮಳೆಗೆ ಮರ ಬಿದ್ದು ಮೇಕೆಗಳು ಸಾವು; ಸಿಡಿಲಿಗೆ ಎಲೆಕ್ಟ್ರಿಕ್‌ ಅಂಗಡಿ ಸುಟ್ಟು ಭಸ್ಮ

Lok Sabha Election Result 2024 Live
ದೇಶ1 week ago

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶದ ಲೈವ್‌ ಇಲ್ಲಿ ವೀಕ್ಷಿಸಿ

ಟ್ರೆಂಡಿಂಗ್‌