World stroke day | ಪಾರ್ಶ್ವವಾಯು ಬಗೆಗೆ ಇರಲಿ ಜಾಗೃತಿ: ಸಮಯ ಅಮೂಲ್ಯ - Vistara News

ಆರೋಗ್ಯ

World stroke day | ಪಾರ್ಶ್ವವಾಯು ಬಗೆಗೆ ಇರಲಿ ಜಾಗೃತಿ: ಸಮಯ ಅಮೂಲ್ಯ

ಪಾರ್ಶ್ವವಾಯು ಸಂಭವಿಸಿದ ನಂತರದ ಕೆಲ ಸಮಯ ಅಮೂಲ್ಯ. ಸೂಕ್ತ ಸಮಯಕ್ಕೆ ಸರಿಯಾದ ಚಿಕಿತ್ಸೆಯನ್ನು ರೋಗಿಗೆ ನೀಡಿದಲ್ಲಿ ಜೀವ ಉಳಿಸುವುದು ಮಾತ್ರವಲ್ಲ, ದೇಹದ ಅಂಗಾಂಗಗಳಿಗೆ ಆಗಬಹುದಾದ ಶಾಶ್ವತ ಹಾನಿಯನ್ನು ತಪ್ಪಿಸಬಹುದು.

VISTARANEWS.COM


on

world stroke day
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಇಂದು ಪಾರ್ಶ್ವವಾಯು ಜಾಗೃತಿ ದಿನ. ಈ ಅಪಾಯಕಾರಿ ಸಮಸ್ಯೆಯ ತಡೆ ಮತ್ತು ತ್ವರಿತ ಚಿಕಿತ್ಸೆಯ ಬಗ್ಗೆ ಜನರಲ್ಲಿ ಅರಿವು ಮೂಡಿಸುವ ಉದ್ದೇಶದಿಂದ ಅಕ್ಟೋಬರ್‌ ತಿಂಗಳ ೨೯ನೇ ದಿನವನ್ನು ಜಾಗೃತಿ ದಿನವನ್ನಾಗಿ ಆಚರಿಸಲಾಗುತ್ತದೆ. ಆರೋಗ್ಯಕರ ಜೀವನಶೈಲಿಯಿಂದ ಇಂಥ ಆರೋಗ್ಯ ಹಾನಿಯನ್ನು ತಪ್ಪಿಸಬಹುದು ಎಂಬುದು ಸಹ ಜಾಗೃತಿಯ ಭಾಗವಾಗಿ ಅರಿವಿಗೆ ಬರಬೇಕಿದೆ.

ಪಾರ್ಶ್ವವಾಯುವನ್ನು ಲಕ್ವ ಹೊಡೆಯುವುದು, ಗಾಳಿ ಹೊಡೆಯುವುದು ಮುಂತಾದ ಹೆಸರಿನಿಂದ ಕರೆಯಲಾಗುತ್ತದೆ. ಮೆದುಳಿಗೆ ಪೂರೈಕೆಯಾಗುವ ರಕ್ತಕ್ಕೆ ಸ್ವಲ್ಪ ಅಥವಾ ಪೂರ್ಣ ಪ್ರಮಾಣದಲ್ಲಿ ತಡೆಯಾದರೆ, ಮೆದುಳಿನ ಕೋಶಗಳಿಗೆ ಆಗುವ ತಾತ್ಕಾಲಿಕ ಅಥವಾ ಶಾಶ್ವತ ಹಾನಿಯಿಂದ ಸಂಭವಿಸುವ ಆರೋಗ್ಯ ಸಮಸ್ಯೆಯಿದು. ಇದರಿಂದ ಆಗುವ ಪರಿಣಾಮ ಕೆಲವೊಮ್ಮೆ ಜೀವಘಾತುಕವೂ ಇರಬಹುದು.

ಈ ವರ್ಷದ ಅರಿವಿನ ದಿನದ ಧ್ಯೇಯ ʻಸಮಯ ಅಮೂಲ್ಯʼ ಎಂಬುದು. ಪಾರ್ಶ್ವವಾಯು ಸಂಭವಿಸಿದಲ್ಲಿ, ತಡಮಾಡದೆ ರೋಗಿಗೆ ಚಿಕಿತ್ಸೆ ನೀಡಿದಲ್ಲಿ ಜೀವವನ್ನು ಉಳಿಸಬಹುದು ಎಂಬ ಉದ್ದೇಶವನ್ನು ಈ ಧ್ಯೇಯ ವಾಕ್ಯ ವಿಸ್ತರಿಸುತ್ತದೆ. ಪಾರ್ಶ್ವವಾಯು ಸಂಭವಿಸಿದ ನಂತರದ ಕೆಲ ಸಮಯ ಅಮೂಲ್ಯ. ಸೂಕ್ತ ಸಮಯಕ್ಕೆ ಸರಿಯಾದ ಚಿಕಿತ್ಸೆಯನ್ನು ರೋಗಿಗೆ ನೀಡಿದಲ್ಲಿ ಜೀವ ಉಳಿಸುವುದು ಮಾತ್ರವಲ್ಲ, ದೇಹದ ಅಂಗಾಂಗಗಳಿಗೆ ಆಗಬಹುದಾದ ಶಾಶ್ವತ ಹಾನಿಯನ್ನು ತಪ್ಪಿಸಬಹುದು.

ಇದನ್ನೂ ಓದಿ | Blood Type | ಈ ರಕ್ತದ ಗುಂಪಿನ ಮಂದಿಗೆ ಸಣ್ಣ ಪ್ರಾಯದಲ್ಲೇ ಲಕ್ವ ಹೊಡೆವ ಸಾಧ್ಯತೆ ಹೆಚ್ಚಂತೆ!

ಲಕ್ಷಣಗಳು: ಪಾರ್ಶ್ವವಾಯುವಿನ ಲಕ್ಷಣಗಳನ್ನು ಗುರುತಿಸುವುದು ಅತಿ ಮುಖ್ಯ. ಆಗ ಮಾತ್ರ ರೋಗಿಯ ಜೊತೆಗಿದ್ದವರು ಸೂಕ್ತ ರೀತಿಯಲ್ಲಿ, ತ್ವರಿತವಾಗಿ ಸ್ಪಂದಿಸುವುದಕ್ಕೆ ಸಾಧ್ಯ. ಇದ್ದಕ್ಕಿದ್ದಂತೆ ಮುಖ, ಕೈ, ಕಾಲು ಅಥವಾ ದೇಹದ ಒಂದು ಪಕ್ಕಕ್ಕೆ ಜೋಮು ಹಿಡಿದಂತೆ ಅಥವಾ ವಶ ತಪ್ಪಿದಂತೆ ಆಗಬಹುದು. ಮಾತಾಡುವುದಕ್ಕೆ, ಮಾತಾಡಿದ್ದನ್ನು ಕೇಳಿ ಸ್ಪಂದಿಸುವುದಕ್ಕೆ ಆಗದಿರಬಹುದು, ಮರೆವು, ಗೊಂದಲ ಕಾಣಿಸಬಹುದು. ಒಂದು ಅಥವಾ ಎರಡೂ ಕಣ್ಣುಗಳಲ್ಲಿ ದೃಷ್ಟಿ ಅಸ್ಪಷ್ಟವಾಗಬಹುದು. ದೇಹದ ಸಮತೋಲನ ತಪ್ಪಿದಂತಾಗಿ ನಡೆಯುವುದಕ್ಕೆ ಆಗದೆ, ತಲೆ ಸುತ್ತಿದಂತೆ ಬೀಳಬಹುದು. ಯಾವುದೇ ಕಾರಣವಿಲ್ಲದೆ ಅತೀತ ತಲೆನೋವು ಕಾಣಿಸಬಹುದು. ಇಂಥ ಲಕ್ಷಣಗಳು ಕಂಡರೆ ರೋಗಿಯನ್ನು ತ್ವರಿತವಾಗಿ ವೈದ್ಯರಲ್ಲಿ ಕರೆದೊಯ್ಯಬೇಕಾಗುತ್ತದೆ. ಮೊದಲ ಒಂದೆರಡು ಗಂಟೆಗಳಲ್ಲಿ ಚಿಕಿತ್ಸೆ ದೊರೆಯುವುದು ಅತಿ ಮುಖ್ಯ.

ಇದನ್ನೂ ಓದಿ | Diabetes Diet | ಮಧುಮೇಹ ನಿಯಂತ್ರಣಕ್ಕೆ ಇದೊಂದು ಸೂತ್ರ ನೆನಪಿಟ್ಟುಕೊಳ್ಳಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಆರೋಗ್ಯ

Nosebleeds In Summer: ಬೇಸಿಗೆಯ ತಾಪಕ್ಕೆ ಮೂಗಿನಲ್ಲಿ ರಕ್ತಸ್ರಾವವೇ? ತಡೆಯಲು ಇಲ್ಲಿವೆ ಸರಳ ಉಪಾಯ

ಬೇಸಿಗೆಯಲ್ಲಿ ಕಾಡುವ ಹಲವು ರೀತಿಯ ಆರೋಗ್ಯ ಸಮಸ್ಯೆಗಳ ಪೈಕಿ ಮೂಗಿನಲ್ಲಿ ರಕ್ತ ಸೋರುವುದೂ ಒಂದು. ಅತಿ ಬಿಸಿಯಾದ ಮತ್ತು ಶುಷ್ಕ ವಾತಾವರಣವಿದ್ದಾಗ ಈ ಸಮಸ್ಯೆ ಕಾಡುವುದು ಹೆಚ್ಚು. ಅತಿಯಾದ ಚಳಿಯ ಜೊತೆಗಿನ ಒಣ ಹವೆ ಇದ್ದರೂ ಈ ತೊಂದರೆ ಕಾಡಬಹುದು. ಆದರೆ ಹೆಚ್ಚಿನ ಜನ ಬೇಸಿಗೆಯಲ್ಲಿ ಈ ಸಮಸ್ಯೆಯನ್ನು ಎದುರಿಸುತ್ತಾರೆ. ಅಲ್ಪಸ್ವಲ್ಪ ರಕ್ತ ಸೋರುತ್ತಿದ್ದರೆ ಇದನ್ನು ತಡೆಯುವುದಕ್ಕೆ ಕೆಲವು ಮನೆಮದ್ದುಗಳು ಸಹಾಯ ಮಾಡಬಹುದು. ಆದರೆ ಮೂಗಿನಲ್ಲಿ ಹೆಚ್ಚು ರಕ್ತಸ್ರಾವ (Nosebleeds In Summer) ಆಗುತ್ತಿದ್ದರೆ ವೈದ್ಯರನ್ನು ಕಾಣಬೇಕಾದೀತು.

VISTARANEWS.COM


on

Nosebleeds In Summer
Koo

ಚಳಿಗಾಲದಲ್ಲಿ ಮಾತ್ರವಲ್ಲ, ಬೇಸಿಗೆಯಲ್ಲೂ ಮೂಗಿನಲ್ಲಿ ರಕ್ತಸ್ರಾವ ಆಗುವುದು ಸಾಮಾನ್ಯ. ಆದರೆ ಹಾಗೇಕಾಗುತ್ತದೆ? ಹಾಗೆ ಆಗದಂತೆ ತಡೆಯುವುದಕ್ಕೆ ಸಾಧ್ಯವಿಲ್ಲವೇ- ಈ ಎಲ್ಲ ಮಾಹಿತಿಗಳ ಜೊತೆಗೆ ಅದನ್ನು ತಡೆಯುವ ಸರಳ (Nosebleeds In Summer) ಉಪಾಯಗಳು ಇಲ್ಲಿವೆ. ಬೇಸಿಗೆಯಲ್ಲಿ ಕಾಡುವ ಹಲವು ರೀತಿಯ ಆರೋಗ್ಯ ಸಮಸ್ಯೆಗಳ ಪೈಕಿ ಮೂಗಿನಲ್ಲಿ ರಕ್ತ ಸೋರುವುದೂ ಒಂದು. ಅತಿ ಬಿಸಿಯಾದ ಮತ್ತು ಶುಷ್ಕ ವಾತಾವರಣವಿದ್ದಾಗ ಈ ಸಮಸ್ಯೆ ಕಾಡುವುದು ಹೆಚ್ಚು. ಅತಿಯಾದ ಚಳಿಯ ಜೊತೆಗಿನ ಒಣ ಹವೆ ಇದ್ದರೂ ಈ ತೊಂದರೆ ಕಾಡಬಹುದು. ಆದರೆ ಹೆಚ್ಚಿನ ಜನ ಬೇಸಿಗೆಯಲ್ಲಿ ಈ ಸಮಸ್ಯೆಯನ್ನು ಎದುರಿಸುತ್ತಾರೆ. ಅಲ್ಪಸ್ವಲ್ಪ ರಕ್ತ ಸೋರುತ್ತಿದ್ದರೆ ಇದನ್ನು ತಡೆಯುವುದಕ್ಕೆ ಕೆಲವು ಮನೆಮದ್ದುಗಳು ಸಹಾಯ ಮಾಡಬಹುದು. ಆದರೆ ಮೂಗಿನಲ್ಲಿ ಹೆಚ್ಚು ರಕ್ತಸ್ರಾವ ಆಗುತ್ತಿದ್ದರೆ ವೈದ್ಯರನ್ನು ಕಾಣಬೇಕಾದೀತು. ಮೂಗಿನಲ್ಲಿ ರಕ್ತ ಸೋರುವುದಕ್ಕೆ ಕಾರಣಗಳನ್ನು ಮೊದಲು ಅರ್ಥ ಮಾಡಿಕೊಳ್ಳೋಣ. ಒಣಗಿದ ಬಿಸಿ ಹವೆಯಿಂದಾಗಿ ಮೂಗಿನ ಒಳ ಭಾಗದಲ್ಲಿರುವ ಸೂಕ್ಷ್ಮ ರಕ್ತನಾಳಗಳು ಒಡೆದಾಗ ಉಂಟಾಗುವ ಸಮಸ್ಯೆಯಿದು. ಕೆಲವೊಮ್ಮೆ ಸೋಂಕಿನಿಂದಲೂ ಈ ಸಮಸ್ಯೆ ಕಾಣಬಹುದು. ಅತಿಯಾಗಿ ರಕ್ತಸ್ರಾವ ಆಗುತ್ತಿದ್ದರೆ, ಬೇರೆಯದೇ ಸಮಸ್ಯೆಯನ್ನಿದು ಸೂಚಿಸಬಹುದು. ಆದರೆ ಬೇಸಿಗೆಯ ಕಾರಣದಿಂದಲೇ ಮೂಗಿನಲ್ಲಿ ರಕ್ತ ಸೋರುತ್ತಿದ್ದರೆ, ಕೆಲವು ಮನೆಮದ್ದುಗಳು ಇದಕ್ಕೆ ಉಪಶಮನ ನೀಡುತ್ತವೆ.

drink Water night

ನೀರು ಕುಡಿಯಿರಿ

ಇದಕ್ಕಿರುವ ಅತ್ಯಂತ ಸರಳವಾದ ಮದ್ದೆಂದರೆ ನೀರು ಕುಡಿಯುವುದು. ಹೆಚ್ಚಿನ ನೀರು ದೇಹ ಸೇರಿದಂತೆ ಕೋಶಗಳಲ್ಲಿರುವ ಶುಷ್ಕತೆ ಕಡಿಮೆಯಾಗುತ್ತದೆ. ಇದರಿಂದ ಮೂಗಿನಲ್ಲಿರುವ ಮ್ಯೂಕಸ್‌ ಕೋಶಗಳು ಸಹ ತಮ್ಮ ತೇವವನ್ನು ಕಾಪಿಟ್ಟುಕೊಳ್ಳುವುದಕ್ಕೆ ಸಹಾಯವಾಗುತ್ತದೆ. ಅಂದರೆ, ಒಣ ಹವೆಯ ಪ್ರತಿಕೂಲ ಪರಿಣಾಮ ಬೀರದಂತೆ ತಡೆಯುವುದಕ್ಕೆ ಇದು ಸುಲಭದ ಉಪಾಯ.

ಹ್ಯುಮಿಡಿಫಯರ್‌

ಬೇಸಿಗೆಯ ನೆವದಿಂದ ಎಷ್ಟೋ ಬಾರಿ ಅತಿಯಾಗಿ ಫ್ಯಾನ್‌ ಅಥವಾ ಎಸಿ ಬಳಸುತ್ತೇವೆ. ಇದರಿಂದ ಮನೆಯ ಅಥವಾ ಕಚೇರಿಯ ವಾತಾವರಣದಲ್ಲಿ ಶುಷ್ಕತೆ ಹೆಚ್ಚಾಗುತ್ತದೆ. ನೈಸರ್ಗಿಕವಾದ ಬಿಸಿ ಗಾಳಿಯ ಜೊತೆಗೆ ಇದೂ ಸಹ ಸಮಸ್ಯೆಗಳನ್ನು ಹೆಚ್ಚಿಸಬಹುದು. ಹಾಗಾಗಿ ವಾತಾವರಣದ ತೇವಾಂಶವನ್ನು ಹೆಚ್ಚಿಸುವಂಥ ಹ್ಯುಮಿಡಿಫಯರ್‌ ಬಳಸುವುದು ಇನ್ನೊಂದು ಮಾರ್ಗ. ಇದರಿಂದ ಮೂಗಿನ ಅಂಗಾಂಶಗಳು ಹಾನಿಗೊಳ್ಳುವುದನ್ನು ತಡೆಯಬಹುದು.

Moisturizer

ಮಾಯಿಶ್ಚರೈಸರ್‌ ಬಳಕೆ

ಮೂಗಿನ ಒಳ ಭಾಗ ಒಣಗಿ ಬಿರಿಯದಂತೆ ತಡೆಯಲು ಮಾಯಿಶ್ಚರೈಸರ್‌ ಬಳಕೆ ಮಾಡುವುದು ಉಪಯುಕ್ತ. ಇದಕ್ಕಾಗಿ ಇರುವ ಜೆಲ್‌ ಇಲ್ಲವೇ ಸ್ಟ್ರೇ ಬಳಸಬಹುದು. ಸಾಲೈನ್‌ ಸ್ಪ್ರೇ ಬಳಕೆಯೂ ಉಪಯುಕ್ತವಾದೀತು. ಇವನ್ನೆಲ್ಲ ಹೊಸದಾಗಿ ಖರೀದಿಸಿ ತರುವಷ್ಟು ವ್ಯವಧಾನ ಇಲ್ಲದಿದ್ದರೆ, ಸರಳವಾಗಿ ಕೊಬ್ಬರಿ ಎಣ್ಣೆಯನ್ನು ಮೂಗಿನ ಒಳಭಾಗದ ಅಂಗಾಂಶಗಳಿಗೆ ಹೆಚ್ಚಿ. ಇದು ಪರಿಣಾಮಕಾರಿಯಾಗಿ ತೇವವನ್ನು ಹಿಡಿದಿಡುತ್ತದೆ.

ಮುಚ್ಚಿಕೊಳ್ಳಿ

ತೀವ್ರ ತಾಪದ ಹೊತ್ತಿನಲ್ಲಿ ಮನೆಯಿಂದ ಹೊರಗೆ ಹೋಗುವಾಗ ಮುಖಕ್ಕೆ ಮಾಸ್ಕ್‌ ಹಾಕುವುದು ಸಹಾಯಕ. ಇದರಿಂದ ಒಣ ಹವೆಯನ್ನು ಉಸಿರಾಡುವುದು ಸ್ವಲ್ಪ ಮಟ್ಟಿಗಾದರೂ ತಪ್ಪಿಸಬಹುದು. ತಿಳಿ ಬಣ್ಣದ ದೊಡ್ಡ ಹ್ಯಾಟ್‌ ಧರಿಸುವುದರಿಂದ ಮುಖದ ಮೇಲೆ ಬಿಸಿಲು ನೇರವಾಗಿ ಬೀಳದಂತೆ ಮಾಡಬಹುದು. ಈ ಕ್ರಮಗಳೆಲ್ಲ ಸಣ್ಣವೇ ಆದರೂ, ಒಟ್ಟಾರೆಯಾಗಿ ಸಮಸ್ಯೆಯನ್ನು ದೂರ ಮಾಡುವಲ್ಲಿ ನೆರವಾಗುತ್ತವೆ.

ಇದನ್ನೂ ಓದಿ: Mango For Diabetes: ಮಧುಮೇಹಿಗಳೂ ಮಾವಿನಹಣ್ಣಿನ ರುಚಿ ಸವಿಯಬಹುದೇ? ಇಲ್ಲಿದೆ ಉತ್ತರ!

ಮಾಡಬೇಡಿ

ಮೂಗನ್ನು ಶುಚಿಗೊಳಿಸುವ ನೆವದಲ್ಲಿ ನಾಸಿಕದ ಮೇಲೆ ಯಾವುದೇ ರೀತಿಯಲ್ಲೂ ತೀರಾ ಒತ್ತಡ ಹಾಕಬೇಡಿ. ಈಗಾಗಲೇ ಮೂಗಿನಲ್ಲಿ ರಕ್ತ ಸೋರುತ್ತಿದ್ದರಂತೂ ಈ ಬಗ್ಗೆ ಹೆಚ್ಚಿನ ಎಚ್ಚರ ವಹಿಸಿ. ಮೂಗಿನ ಮೇಲೆ ಒತ್ತಡ ಹಾಕಿದರೆ ಬಿರಿದ ಕೋಶಗಳು ದುರಸ್ತಿಯಾಗುವುದು ನಿಧಾನವಾಗುತ್ತದೆ ಅಥವಾ ಇನ್ನಷ್ಟು ಬಿರಿದು ಸಮಸ್ಯೆಯನ್ನೇ ಸೃಷ್ಟಿಸುತ್ತವೆ. ಅಲರ್ಜಿಗಳನ್ನು ಹತ್ತಿಕ್ಕಿ. ದಿನವಿಡೀ ಜೋರಾಗಿ ಸೀನುತ್ತಲೇ ಇದ್ದರೆ, ಮೂಗು ಸೋರುವಾಗ ರಕ್ತಸ್ರಾವ ಆಗುವುದು ಖಚಿತ.

Winter transitions to summer

ಆಹಾರ

ಆರೋಗ್ಯಕರವಾದ ಆಹಾರವನ್ನು ಕಡ್ಡಾಯವಾಗಿ ಪಾಲಿಸಿ. ಸೆಕೆಯ ನೆವವೊಡ್ಡಿ ಅತಿಯಾದ ತಣ್ಣಗಿನ ಪೇಯಗಳನ್ನು ಕುಡಿಯುವುದು, ಐಸ್‌ಕ್ರೀಮ್‌ ಮೆಲ್ಲುವುದು- ಇವೆಲ್ಲ ಮೂಗಿನ ಸಮಸ್ಯೆಗಳನ್ನು ಹೆಚ್ಚಿಸಬಹುದು; ಗಂಟಲಿನ ಸೋಂಕಿಗೆ, ಶೀತ-ನೆಗಡಿಗೆ ಕಾರಣವಾಗಬಹುದು. ವಿಟಮಿನ್‌ ಸಿ ಹೆಚ್ಚಿರುವ ಆಹಾರವನ್ನು ವಿಫುಲವಾಗಿ ಸೇವಿಸುವ ಮೂಲಕ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಿಕೊಳ್ಳಿ.

Continue Reading

ಆರೋಗ್ಯ

Hair Growth Tips: ಕೂದಲು ಉದುರುವುದಕ್ಕೆ ಬೀಟಾ ಕ್ಯಾರೊಟಿನ್‌ ಮದ್ದು!

ಕೂದಲು ಉದುರುವ ಸಮಸ್ಯೆ ಈಗ ಯಾರಿಗಿಲ್ಲ ಹೇಳಿ? ಹಾಗೆಂದು ಇದಕ್ಕೆ ಮದ್ದೇ ಇಲ್ಲ ಎಂದು ಹೇಳಲೂ ಆಗದು. ಬೀಟಾ ಕ್ಯಾರೊಟಿನ್‌ನಂಥ ಉತ್ಕರ್ಷಣ ನಿರೋಧಕಗಳು ಕೂದಲಿನ ಆರೋಗ್ಯ ವರ್ಧನೆಯಲ್ಲಿ ಮಹತ್ವದ ಕೆಲಸ ಮಾಡಬಲ್ಲವು. ಈ ಬಗೆಗಿನ (Hair Growth Tips) ವಿವರಗಳು ಇಲ್ಲಿವೆ.

VISTARANEWS.COM


on

Hair Growth Tips
Koo

ದೇಹದ ಆರೋಗ್ಯ ರಕ್ಷಣೆಯಲ್ಲಿ ಉತ್ಕರ್ಷಣ ನಿರೋಧಕಗಳ ಪಾತ್ರ ಹಿರಿದು. ರೋಗಗಳನ್ನು ದೂರ ಇರಿಸುವುದು ಮಾತ್ರವಲ್ಲ, ಹಲವು ವಿಷಯಗಳು ಏರುಪೇರಾಗದಂತೆ ನಿರ್ವಹಿಸಲು ಸಹಾಯವನ್ನೂ ಮಾಡುತ್ತದೆ. ಉದಾಹರಣೆಗೆ ಹೇಳುವುದಾದರೆ, ಕೂದಲು ಉದುರದಂತೆ ಕಾಪಾಡಿಕೊಳ್ಳಲು ನಮಗೆ ಬೀಟಾ ಕ್ಯಾರೊಟಿನ್‌ ಎಂಬ ಉತ್ಕರ್ಷಣ ನಿರೋಧಕ ಸಹಾಯ ಮಾಡುತ್ತದೆ. ಆದರೆ ಆ ಸತ್ವ ನಮಗೆ ದೊರೆಯುವುದು ಹೇಗೆ? ಯಾವ ಆಹಾರಗಳಿಂದ ಅದು ದೊರೆಯುತ್ತದೆಂದು ತಿಳಿದರೆ, ಕೂದಲು ಉದುರುವ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಬಹುದು. ಕೂದಲಿನ ಸಮಸ್ಯೆಗೆ ಬೀಟಾ ಕ್ಯಾರೊಟಿನ್‌ ಹೇಗೆ ನೆರವಾಗುತ್ತದೆ ಎಂಬುದನ್ನು ಮೊದಲು ಅರ್ಥ ಮಾಡಿಕೊಳ್ಳೋಣ. ಈ ಸತ್ವವನ್ನು ವಿಟಮಿನ್‌ ಎ ಆಗಿ ದೇಹ ಪರಿವರ್ತಿಸಿಕೊಳ್ಳುತ್ತದೆ. ಎ ಜೀವಸತ್ವವು ತಲೆಯ ಚರ್ಮದ ತೇವವನ್ನು ಕಾಪಾಡಿಕೊಂಡು, ಕೂದಲಿನ ಬುಡವನ್ನು ಸುದೃಢಗೊಳಿಸುತ್ತದೆ. ಬೇರು ಭದ್ರವಾಗಿದ್ದಾಗ ಸತ್ವಗಳನ್ನು ಪಡೆಯುವುದು ಕಷ್ಟವಲ್ಲ. ಹೀಗೆ ಕೂದಲು ಉದುರುವುದು ಕಡಿಮೆಯಾಗಿ, ನಯವಾದ, ಹೊಳಪಿನ ಕೂದಲನ್ನು ಪಡೆಯಬಹುದು. ಇದಕ್ಕೆ ಬೇಕಾದ (Hair Growth Tips) ಆಹಾರಗಳು ಯಾವುವು?

Sweet potatoes have the ability to control diabetes and prevent cancer

ಗೆಣಸು

ವಿಟಮಿನ್‌ ಎ ಆಗಿ ಪರಿವರ್ತನೆ ಆಗಬಲ್ಲಂಥ ಬೀಟಾ ಕ್ಯಾರೊಟಿನ್‌ಗಳು ಇದರಲ್ಲಿ ಹೇರಳವಾಗಿವೆ. ಜೊತೆಗೆ, ಪ್ರೊಟೀನ್‌, ಕಬ್ಬಿಣ, ವಿಟಮಿನ್‌ ಸಿಯಂಥ ಸತ್ವಗಳು ಇದರಲ್ಲಿ ತುಂಬಿವೆ. ಇದರಿಂದ ತಲೆಯ ಚರ್ಮದ ಆರೋಗ್ಯವನ್ನು ಸುಧಾರಿಸುವುದು ಮಾತ್ರವಲ್ಲ, ಕೂದಲು ದುರ್ಬಲವಾಗಿ ತುಂಡಾಗದಂತೆಯೂ ತಡೆಯಬಹುದು. ಹೀಗಾಗಿ ಕೂದಲು ಉದುರುವುದು ನಿಂತು, ಗಾತ್ರದಲ್ಲೂ ಸುಧಾರಣೆ ಆಗುತ್ತದೆ.

Yellow capsicum

ದಪ್ಪ ಮೆಣಸು

ಇವುಗಳಲ್ಲಿ ಕೆಂಪು ಬಣ್ಣದವುಗಳಲ್ಲಿ ಉತ್ಕರ್ಷಣ ನಿರೋಧಕಗಳು ಹೆಚ್ಚು. ಇದಲ್ಲಿರುವ ಬೀಟಾ ಕ್ಯಾರೊಟಿನ್‌ ಮತ್ತು ವಿಟಮಿನ್‌ ಸಿ ಅಂಶಗಳು ಹೆಚ್ಚಿನ ಪ್ರಮಾಣದ ಕೊಲಾಜಿನ್‌ ಉತ್ಪಾದನೆಗೆ ನೆರವಾಗುತ್ತವೆ. ಕೊಲಾಜಿನ್‌ ಹೆಚ್ಚು ಉತ್ಪಾದನೆ ಆದಷ್ಟಕ್ಕೂ ಕೂದಲಿನ ಬಲವರ್ಧನೆಯಾಗುತ್ತದೆ. ಈ ಮೂಲಕ ಉದುರುವುದನ್ನು ಕಡಿಮೆ ಮಾಡಬಹುದು.

Spinach

ಪಾಲಕ್‌ ಸೊಪ್ಪು

ಕೇವಲ ಪಾಲಕ್‌ ಮಾತ್ರವಲ್ಲ, ಯಾವುದೇ ಹಸಿರು ಸೊಪ್ಪುಗಳ ಸೇವನೆ ಕೂದಲಿನ ಆರೋಗ್ಯದಲ್ಲಿ ಸುಧಾರಣೆಯನ್ನು ತರಬಲ್ಲದು. ಇದರಲ್ಲಿರುವ ವಿಟಮಿನ್‌ ಸಿ, ಇ, ಕಬ್ಬಿಣದ ಸತ್ವಗಳು ಕೂದಲಿನ ಒಟ್ಟಾರೆ ಆರೋಗ್ಯಕ್ಕೆ ಬಹಳಷ್ಟು ಒಳಿತು ಮಾಡುತ್ತವೆ. ಕೂಲಿನ ಬುಡವನ್ನು ಭದ್ರಮಾಡಿ, ತುಂಡಾಗದಂತೆ ನೋಡಿಕೊಂಡು, ಬೆಳವಣಿಗೆಗೆ ಪ್ರೋತ್ಸಾಹ ನೀಡುತ್ತವೆ. ಹಾಗಾಗಿ ಪಾಲಕ್‌ ಸೇರಿದಂತೆ ಯಾವುದೇ ಹಸಿರು ಸೊಪ್ಪುಗಳ ಸೇವನೆ ಕೂದಲಿನ ಬೆಳವಣಿಗೆಗೆ ಉಪಯುಕ್ತ.

Carrot

ಕ್ಯಾರೆಟ್‌

ಬೀಟಾ ಕ್ಯಾರೊಟಿನ್‌ ಸಾಂದ್ರತೆಯ ವಿಷಯದಲ್ಲಿ ಗಜ್ಜರಿ ಸಾಕಷ್ಟು ಹೆಸರಾಗಿದೆ. ಇದು ಕೂದಲಿನ ಬೆಳವಣಿಗೆಗೆ ಮಾತ್ರವಲ್ಲ, ತಲೆಯ ಚರ್ಮದ ಆರೋಗ್ಯ ಸುಧಾರಣೆಯಲ್ಲೂ ಮಹತ್ವದ ಕೊಡುಗೆ ನೀಡುತ್ತದೆ. ಕೂದಲಿನ ಬಲ ವೃದ್ಧಿಸಿ, ಗಾತ್ರವನ್ನು ಹೆಚ್ಚಿಸುತ್ತದೆ.

Melons

ಮೆಲನ್‌ಗಳು

ಈ ಹಣ್ಣುಗಳಲ್ಲಿ ವಿಟಮಿನ್‌ ಸಿ, ಬೀಟಾ ಕ್ಯಾರೊಟಿನ್‌ ಸೇರಿದಂತೆ ಹಲವು ರೀತಿಯ ಉತ್ಕರ್ಷಣ ನಿರೋಧಕಗಳು ಇವೆ. ಕೂದಲಿನ ಬುಡದ ತೇವವನ್ನು ಕಾಪಾಡಲು ಇವು ಸಹಕಾರಿ. ಅಂದರೆ ಇವೆಲ್ಲ ನೈಸರ್ಗಿಕ ಕಂಡೀಶನರ್‌ಗಳಂತೆ ಕೆಲಸ ಮಾಡುತ್ತವೆ. ಇದರಿಂದ ಕೂದಲಿನ ಕೋಶಗಳು ಆರೋಗ್ಯಯುತವಾಗಿದ್ದು, ಕೇಶರಾಶಿ ನಳನಳಿಸುತ್ತದೆ.

ಇದನ್ನೂ ಓದಿ: Mango For Diabetes: ಮಧುಮೇಹಿಗಳೂ ಮಾವಿನಹಣ್ಣಿನ ರುಚಿ ಸವಿಯಬಹುದೇ? ಇಲ್ಲಿದೆ ಉತ್ತರ!

ವಿಟಮಿನ್‌ ಸಿ ಆಹಾರಗಳು

ಬೆರ್ರಿಗಳು ಮತ್ತು ಸಿಟ್ರಸ್‌ ಹಣ್ಣುಗಳು ಈ ಪಟ್ಟಿಯಲ್ಲಿ ಮೊದಲು ನಿಲ್ಲುತ್ತವೆ. ಇವುಗಳಲ್ಲಿ ವಿಟಮಿನ್‌ ಎ ಮಾತ್ರವಲ್ಲ, ಹಲವು ರೀತಿಯ ಖನಿಜಗಳು, ಫ್ಲೆವನಾಯ್ಡ್‌ಗಳು ವಿಫುಲವಾಗಿವೆ. ಇವೆಲ್ಲವೂ ಕೊಲಾಜಿನ್‌ ಉತ್ಪಾದನೆಗೆ ನೆರವಾಗಿ, ಕೂದಲಿನ ಆಯಸ್ಸನ್ನೂ ಹೆಚ್ಚಿಸುತ್ತವೆ. ಇಂಥವುಗಳನ್ನು ಆಹಾರದಲ್ಲಿ ಸೇರಿಸಿಕೊಳ್ಳುವುದರಿಂದ ಕೂದಲಿನ ಆರೋಗ್ಯಕ್ಕೆ ಮಾತ್ರವೇ ಅಲ್ಲ, ದೇಹದ ಒಟ್ಟಾರೆ ಆರೋಗ್ಯ ಸುಧಾರಣೆಯನ್ನೂ ಸಾಧಿಸಬಹುದು.

Continue Reading

ಆರೋಗ್ಯ

Tamarind Fruit Benefits: ಜೀರ್ಣಶಕ್ತಿ ಹೆಚ್ಚಿಸಿ ತೂಕ ಇಳಿಸಲು ಹುಣಸೇ ಹಣ್ಣು ಸುಲಭದ ಉಪಾಯ!

ಜೀವನಶೈಲಿ, ಕೆಲಸದ ಒತ್ತಡ, ಹೊರಗೆ ತಿನ್ನುವ ಅಭ್ಯಾಸ, ಚಟುವಟಿಕೆಗಳಿಲ್ಲದ ಕೆಲಸ, ಹಾರ್ಮೋನ್‌ ಸಮಸ್ಯೆ, ರಾತ್ರಿಪಾಳಿ ಸೇರಿದಂತೆ ಅನೇಕ ವಿಚಾರಗಳು ಇಂದು ತೂಕ ಏರಿಕೆಗೆ ಕಾರಣವಾಗುತ್ತದೆ. ಆದರೆ ಇಳಿಸುವ ಬಗ್ಗೆ ಪ್ರಯತ್ನಕ್ಕೆ ತಕ್ಕ ಫಲ ದೊರೆಯುವುದು ಕಡಿಮೆ. ಎಲ್ಲರ ಸಮಸ್ಯೆಯೂ ಇದೇ. ವ್ಯಾಯಾಮ, ಜಾಗಿಂಗ್‌, ಯೋಗ ಇತ್ಯಾದಿ ಮಾಡಿದರೂ ತೂಕ ಮಾತ್ರ ಇಳಿಯುವುದಿಲ್ಲ ಎಂಬುದು. ಏನೆಲ್ಲ ಪ್ರಯತ್ನಿಸಿ ನೋಡಿದ ನೀವು ಹುಣಸೆ ಹಣ್ಣನ್ನೂ (Tamarind Fruit Benefits) ಯಾಕೆ ಒಮ್ಮೆ ಪ್ರಯತ್ನಿಸಿ ನೋಡಬಾರದು?

VISTARANEWS.COM


on

Tamarind Fruit Benefits
Koo

ತೂಕ ಇಳಿಸುವುದು ಹೇಗೆ ಎಂಬುದು ಸದ್ಯ ಎಲ್ಲರ ನಡುವೆ ಚರ್ಚೆಯಾಗುವ ಅತ್ಯಂತ ಸಾಮಾನ್ಯ ವಿಷಯ. ಜೀವನಶೈಲಿ, ಕೆಲಸದ ಒತ್ತಡ, ಹೊರಗೆ ತಿನ್ನುವ ಅಭ್ಯಾಸ, ಚಟುವಟಿಕೆಗಳಿಲ್ಲದ ಕೆಲಸ, ಹಾರ್ಮೋನ್‌ ಸಮಸ್ಯೆ, ರಾತ್ರಿಪಾಳಿ ಸೇರಿದಂತೆ ಅನೇಕ ವಿಚಾರಗಳು ಇಂದು ತೂಕ ಏರಿಕೆಗೆ ಕಾರಣವಾಗುತ್ತದೆ. ಆದರೆ ಇಳಿಸುವ ಬಗ್ಗೆ ಪ್ರಯತ್ನಕ್ಕೆ ತಕ್ಕ ಫಲ ದೊರೆಯುವುದು ಕಡಿಮೆ. ಎಲ್ಲರ ಸಮಸ್ಯೆಯೂ ಇದೇ. ವ್ಯಾಯಾಮ, ಜಾಗಿಂಗ್‌, ಯೋಗ ಇತ್ಯಾದಿ ಮಾಡಿದರೂ ತೂಕ ಮಾತ್ರ ಇಳಿಯುವುದಿಲ್ಲ ಎಂಬುದು. ಏನೆಲ್ಲ ಪ್ರಯತ್ನಿಸಿ ನೋಡಿದ ನೀವು ಹುಣಸೆ ಹಣ್ಣನ್ನೂ ಯಾಕೆ ಒಮ್ಮೆ ಪ್ರಯತ್ನಿಸಿ ನೋಡಬಾರದು? ಹುಣಸೆಹಣ್ಣಿಗೂ ತೂಕಕ್ಕೂ ಏನು ಸಂಬಂಧ ಅಂತೀರಾ? ಸಂಬಂಧ ಇದೆ. ಹುಳಿಯಾದ ಹುಣಸೇಹಣ್ಣನ್ನು ನೀವು ಚಿಕ್ಕವರಿದ್ದಾಗ ಚಪ್ಪರಿಸಿ ತಿಂದಿರಬಹುದು, ಈಗ ಕ್ಯಾಂಡಿಗಳ ರೂಪದಲ್ಲೋ, ಚಟ್ನಿ ರೂಪದಲ್ಲೋ, ಅಥವಾ ಅಡುಗೆಗೆ ಬಳಸುವ ಮೂಲಕ ಮಾತ್ರ ಹುಣಸೆ ಹಣ್ಣನ್ನು ಬಳಸುತ್ತಿರಬಹುದು. ಆದರೆ ಹುಣಸೆ ಹಣ್ಣಿನ (Tamarind Fruit Benefits) ನೀರನ್ನು ತೂಕ ಇಳಿಕೆಗೆ ನೀವು ಬಳಸಿಲ್ಲವಾದರೆ ಒಮ್ಮೆ ಬಳಸಿ ನೋಡಿ. ಇದೂ ಕೂಡಾ ತೂಕ ಇಳಿಸಲು ನೆರವಾಗುತ್ತದೆ.

Tamarind Fruit

ಕಡಿಮೆ ಕ್ಯಾಲರಿಯಿದೆ

ಹುಣಸೆ ಹಣ್ಣಿನ ನೀರು ಅತ್ಯಂತ ಕಡಿಮೆ ಕ್ಯಾಲರಿಯನ್ನು ಹೊಂದಿದೆ. ಒಂದು ಹುಣಸೆಹಣ್ಣಿನಲ್ಲಿ ಕೇವಲ ಐದರಿಂದ ಆರು ಕ್ಯಾಲರಿ ಇರುತ್ತದಂತೆ. ಹಾಗಾಗಿ ಇದರ ಮೂಲಕ ಕ್ಯಾಲರಿ ಹೆಚ್ಚು ತೆಗೆದುಕೊಂಡ ಭಯವಿಲ್ಲ. ಇದಕ್ಕೆ ಸಿಹಿ ಹಾಗೂ ಮಸಾಲೆಗಳನ್ನು ಸೇರಿಸಿದರೆ ಖಂಡಿತವಾಗಿಯೂ ಕ್ಯಾಲರಿ ಬದಲಾವಣೆಯಾಗುತ್ತದೆ.

healthy internal organs of human digestive system

ಜೀರ್ಣಕ್ರಿಯೆಗೆ ಒಳ್ಳೆಯದು

ತೂಕ ಇಳಿಕೆಯ ಹಾದಿಯಲ್ಲಿ ಜೀರ್ಣಕ್ರಿಯೆಯ ಸಮಸ್ಯೆ ಯಾವತ್ತಿಗೂ ಇರಬಾರದು. ಆಹಾರ ಚೆನ್ನಾಗಿ ಜೀರ್ಣವಾಗಬೇಕು. ನಿಮ್ಮ ಜೀರ್ಣಕ್ರಿಯೆಯ ಆರೋಗ್ಯವನ್ನು ಹೆಚ್ಚಿಸಬೇಕಾದರೆ, ಬಹುಬೇಗನೆ ಸರಿಯಾಗಿ ಆಹಾರ ಜೀರ್ಣವಾಗಬೇಕೆಂದರೆ ಈ ಹುಣಸೇ ಹಣ್ಣಿನ ನೀರು ಸಹಾಯ ಮಾಡುತ್ತದೆ. ಇದು ಪಚನಕ್ರಿಯೆಯನ್ನು ಚುರುಕಾಗಿಸುವ ಮೂಲಕ ತೂಕ ಇಳಿಕೆಗೆ ಸಹಾಯ ಮಾಡುತ್ತದೆ.

ನಾರಿನಂಶವಿದೆ

ಹುಣಸೇಹಣ್ಣಿನಲ್ಲಿ ಸಾಕಷ್ಟು ನಾರಿನಂಶ ಇದೆ. ನಾರಿನಂಶವು ಜೀರ್ಣಕ್ರಿಯೆಗೆ ಒಳ್ಳೆಯದು. ಅಷ್ಟೇ ಅಲ್ಲ, ಇದು ತೂಕವನ್ನೂ ಇಳಿಸುತ್ತದೆ. ಹೊಟ್ಟೆ ತುಂಬಿರುವ ಫೀಲ್‌ ನೀಡುವುದರಿಂದ ಬೇರೆ ತಿನ್ನುವ ಬಯಕೆಯಾಗುವುದಿಲ್ಲ.

ಇದನ್ನೂ ಓದಿ: Mint Leaf Water: ಪುದಿನ ಎಲೆಗಳ ನೀರನ್ನು ನಿತ್ಯವೂ ಕುಡಿಯಿರಿ, ಈ ಲಾಭಗಳನ್ನು ಪಡೆಯಿರಿ!

ಆಂಟಿಆಕ್ಸಿಡೆಂಟ್‌ಗಳಿಂದ ಸಮೃದ್ಧವಾಗಿದೆ

ಹುಣಸೇ ಹಣ್ಣಿನ ನೀರನ್ನು ಯಾಕೆ ಕುಡಿಯಬೇಕು ಎಂದರೆ ಹುಣಸೇಹಣ್ಣಿನಲ್ಲಿ ಆಂಟಿ ಆಕ್ಸಿಡೆಂಟ್‌ಗಳು ಸಮೃದ್ಧವಾಗಿವೆ. ಹುಣಸೆಯಲ್ಲಿ ಟಾರ್ಟಾರಿಕ್‌ ಆಸಿಡ್‌ ಎಂಬ ಶಕ್ತಿಯುತವಾದ ಆಂಟಿ ಆಕ್ಸಿಡೆಂಟ್‌ ಇದ್ದು ಇದು ಫ್ರೀ ರ್ಯಾಡಿಕಲ್‌ಗಳ ಬೆಳವಣಿಗೆಯನ್ನು ಕುಂಠಿತಗೊಳಿಸುತ್ತದೆ. ಆಂಟಿ ಆಕ್ಸಿಡೆಂಟ್‌ನಿಂದ ಸಮೃದ್ಧವಾಗಿರುವ ಆಹಾರವು ಆರೋಗ್ಯವನ್ನು ಹೆಚ್ಚಿಸಿ, ರೋಗ ನಿರೋಧಕ ಶಕ್ತಿಯನ್ನೂ ಹೆಚ್ಚು ಮಾಡಿ ತೂಕವನ್ನು ಇಳಿಸುತ್ತದೆ. ಹಾಗಾದರೆ, ಹುಣಸೆ ಹಣ್ಣಿನ ನೀರನ್ನು ಮಾಡುವುದು ಹೇಗೆ ಅಂತೀರಾ? ಇದೇನೂ ಬ್ರಹ್ಮವಿದ್ಯೆಯಲ್ಲ. ಹುಣಸೆ ಹಣ್ಣಿನ ಒಂದು ಸಣ್ಣ ತುಂಡನ್ನು ಬಿಸಿನೀರಿನಲ್ಲಿ ಹದಿನೈದರಿಂದ ಇಪ್ಪತ್ತು ನಿಮಿಷಗಳ ಕಾಲ ನೆನೆಸಿಡಿ. ಇದು ಮೆತ್ತಗಾದ ಮೇಲೆ ಇದನ್ನು ಸ್ವಲ್ಪ ಕಿವುಚಿ ರಸ ಹಿಂಡಿ. ಹಿಂಡಿದ ಮೇಲೆ ಉಳಿದ ರಸಹೀನ ಹುಣಸೇ ಹಣ್ಣನ್ನು ಎಸೆಯಿರಿ. ನಂತರ ಈ ಹುಣಸೇ ಹಣ್ಣಿನ ನೀರಿಗೆ ನಿಮಗೆ ಬೇಕಾದಷ್ಟು ರುಚಿಗೆ ತಕ್ಕಂತೆ ನೀರು ಸೇರಿಸಿ ಕುಡಿಯಿರಿ. ರುಚಿಯಾಗಿ ಕುಡಿಯಬೇಕೆಂಬ ಬಯಕೆಯಿದ್ದರೆ, ಬೆಲ್ಲದ ಪುಡಿ, ಕಾಳು ಮೆಣಸಿನ ಪುಡಿ ಅಥವಾ ಚಾಟ್‌ ಮಸಾಲಾ ಹಾಕಿಯೂ ಕುಡಿಯಬಹುದು. ಆದರೆ ಇದು ನಿಮ್ಮ ರುಚಿಗೆ ಬಿಟ್ಟದ್ದು. ಹೀಗೆ ಮಾಡಿದಾಗ ಖಂಡಿತವಾಗಿ ನೀವು ಸೇವಿಸುವ ಕ್ಯಾಲರಿಯಲ್ಲಿ ವ್ಯತ್ಯಾಸವಾಗುತ್ತದೆ. ತೂಕ ಇಳಿಕೆಯ ಲಾಭ ಪಡೆಯಬೇಕೆಂದಿದ್ದರೆ ಬೆಳಗ್ಗಿನ ಹೊತ್ತು, ಇದಕ್ಕೆ ಸಿಹಿ, ಮಸಾಲೆ ಸೇರಿಸದೆ ಹಾಗೆಯೇ ಕುಡಿಯಿರಿ

Continue Reading

ಆರೋಗ್ಯ

World Digestive Health Day: ಜೀರ್ಣಕ್ರಿಯೆಯಲ್ಲಿ ತೊಡಕು ಅನಾರೋಗ್ಯಕ್ಕೆ ದಾರಿ; ಈ ಸಲಹೆ ಪಾಲಿಸಿ

ದೇಹದ ಸ್ವಾಸ್ಥ್ಯ ಹೆಚ್ಚಿಸಿಕೊಳ್ಳುವ ದಾರಿಯಲ್ಲಿ ಜೀರ್ಣಾಂಗಗಳ ಆರೋಗ್ಯ ರಕ್ಷಣೆ ಎಷ್ಟು ಮಹತ್ವದ್ದು ಎಂಬುದನ್ನು ಜನರಿಗೆ ಮನದಟ್ಟು ಮಾಡಿಸುವುದು ವಿಶ್ವ ಜೀರ್ಣಾಂಗಗಳ ಆರೋಗ್ಯ ದಿನದ ಉದ್ದೇಶ. ಪ್ರತಿ ವರ್ಷ ಮೇ ತಿಂಗಳ 29ನೇ (World Digestive Health Day) ದಿನವನ್ನು ಇದಕ್ಕಾಗಿ ಮೀಸಲಿಡಲಾಗಿದೆ. ಜೀರ್ಣಾಂಗ ಆರೋಗ್ಯ ಕುರಿತ ಉಪಯುಕ್ತ ಮಾಹಿತಿ ಇಲ್ಲಿದೆ.

VISTARANEWS.COM


on

World Digestive Health Day
Koo

ಸರ್ವ ರೋಗಕ್ಕೂ ಹೊಟ್ಟೆಯೇ ಮೂಲ (Gut is the butt of every problem) ಎಂಬ ಮಾತೊಂದಿದೆ. ಈ ಮಾತು ಸುಳ್ಳೇನಲ್ಲ, ದೇಹದ ಹಲವು ಸಮಸ್ಯೆಗಳಿಗೆ ನಮ್ಮ ಆಹಾರ ಪದ್ಧತಿಗಳು, ಜೀರ್ಣಾಂಗದ ಏರುಪೇರುಗಳು ಕಾರಣವಾಗುತ್ತವೆ. ಬೊಜ್ಜು, ಮಧುಮೇಹದಂಥ ಸಮಸ್ಯೆಗಳಿಂದ ಹಿಡಿದು ಎಷ್ಟೋ ಸಮಸ್ಯೆಗಳು ಕಾಡುವುದು ದೇಹದ ಚಯಾಪಚಯ ಸರಿಯಿಲ್ಲದ ಸಂದರ್ಭಗಳಲ್ಲೇ. ದೇಹದ ಸ್ವಾಸ್ಥ್ಯ ಹೆಚ್ಚಿಸಿಕೊಳ್ಳುವ ದಾರಿಯಲ್ಲಿ ಜೀರ್ಣಾಂಗಗಳ ಆರೋಗ್ಯ ರಕ್ಷಣೆ ಎಷ್ಟು ಮಹತ್ವದ್ದು ಎಂಬುದನ್ನು ಜನರಿಗೆ ಮನದಟ್ಟು ಮಾಡಿಸುವುದು ವಿಶ್ವ ಜೀರ್ಣಾಂಗಗಳ ಆರೋಗ್ಯ ದಿನದ ಉದ್ದೇಶ. ಪ್ರತಿ ವರ್ಷ ಮೇ ತಿಂಗಳ 29ನೇ ದಿನವನ್ನು (World Digestive Health Day) ಇದಕ್ಕಾಗಿ ಮೀಸಲಿಡಲಾಗಿದೆ. ಎಲ್ಲರ ಕರುಳಿನಲ್ಲೂ ಅಸಂಖ್ಯಾತ ಬ್ಯಾಕ್ಟೀರಿಯಗಳಿರುತ್ತವೆ. ಇವುಗಳನ್ನು ಒಳ್ಳೆಯವು ಮತ್ತು ಕೆಟ್ಟವೆಂದು ವಿಂಗಡಿಸಲಾಗಿದೆ. ಜೀರ್ಣಾಂಗಗಳಲ್ಲಿ ಒಳ್ಳೆಯ ಬ್ಯಾಕ್ಟೀರಿಯಗಳ ಸಂಖ್ಯೆ ಹೆಚ್ಚಿದಷ್ಟೂ ದೇಹ ಸ್ವಾಸ್ಥ್ಯ ಚೆನ್ನಾಗಿರುತ್ತದೆ. ಕೆಟ್ಟ ಬ್ಯಾಕ್ಟೀರಿಯಗಳ ಪ್ರಮಾಣ ಹೆಚ್ಚಿದಷ್ಟೂ ದೇಹ ರೋಗಗಳ ಗೂಡಾಗುತ್ತದೆ. ಜೀರ್ಣಾಂಗಗಳ ಆರೋಗ್ಯ ಚೆನ್ನಾಗಿದ್ದರೆ ತೂಕ ನಿರ್ವಹಣೆ, ಸತ್ವಗಳನ್ನು ಹೀರಿಕೊಳ್ಳುವುದು, ಚೋದಕಗಳ ನಿರ್ವಹಣೆ, ಉರಿಯೂತ ನಿವಾರಣೆ, ಚಯಾಪಚಯ ಸರಿಪಡಿಸುವಂಥ ಕೆಲಸಗಳು ಕಷ್ಟವಿಲ್ಲದೆ ನೆರವೇರುತ್ತವೆ. ಹಾಗಾದರೆ ಜೀರ್ಣಾಂಗಗಳ ಆರೋಗ್ಯ ನಿರ್ವಹಣೆಗೆ ಏನು ಮಾಡಬೇಕು? ಯಾವ ಕ್ರಮಗಳನ್ನು ಅನುಸರಿಸಬೇಕು?

Vegetables and Fruits

ವೈವಿಧ್ಯಮವಾಗಿರಲಿ

ಋತುಮಾನಕ್ಕೆ ಸರಿಯಾದ ಹಣ್ಣು-ತರಕಾರಿಗಳು, ಕಾಯಿ-ಬೀಜಗಳು, ಕಾಳು-ಬೇಳೆಗಳು, ಇಡೀ ಧಾನ್ಯಗಳು, ಡೇರು ಉತ್ಪನ್ನಗಳಿಂದ ಆಹಾರ ಸಮೃದ್ಧವಾಗಿರಬೇಕು. ಇದರಿಂದ ಕರುಳಿನ ಒಳ್ಳೆಯ ಬ್ಯಾಕ್ಟೀರಿಯಗಳಿಗೆ ಬೇಕಾದ ಆಹಾರ ದೊರೆತು ಅವುಗಳ ಸಂಖ್ಯೆ ಹೆಚ್ಚುತ್ತದೆ. ಅಷ್ಟೇ ಅಲ್ಲ, ಕರುಳಿನಲ್ಲಿರುವ ಒಳ್ಳೆಯ ಸೂಕ್ಷ್ಮಾಣುಗಳೂ ವೈವಿಧ್ಯಮಯವಾಗುತ್ತವೆ. ಇದರಿಂದ ಬಗೆಬಗೆಯ ಪ್ರಯೋಜನಗಳಿವೆ.

ಪ್ರಿಬಯಾಟಿಕ್‌, ಪ್ರೊಬಯಾಟಿಕ್

ಜೀರ್ಣಾಂಗಗಳ ಆರೋಗ್ಯ ನಿರ್ವಹಣೆಗೆ ಇದು ಪ್ರಧಾನ ಪಾತ್ರ ವಹಿಸುತ್ತದೆ. ಹುದುಗು ಬಂದಿರುವಂಥ ಮೊಸರು, ಮಜ್ಜಿಗೆಯಂಥ ಆಹಾರಗಳು, ಹಸಿಯಾದ ಮೊಳಕೆ ಕಾಳುಗಳಂಥ ಆಹಾರಗಳು ಅಗತ್ಯವಾದ ಪ್ರಿಬಯಾಟಿಕ್‌ ಮತ್ತು ಪ್ರೊಬಯಾಟಿಕ್‌ ಅಂಶಗಳನ್ನು ಒದಗಿಸುತ್ತವೆ. ಕರುಳಿನ ಸೂಕ್ಷ್ಮಾಣುಗಳ ಸಮತೋಲನಕ್ಕೆ ಇದು ಅತಿ ಮುಖ್ಯ.

ನೀರು-ನಾರು-ನಿದ್ದೆ

ಇವೆಲ್ಲವೂ ಸಾಕಷ್ಟು ಬೇಕು. ದಿನಕ್ಕೆ ಮೂರು ಲೀ. ನೀರು ಜೀರ್ಣಾಂಗಗಳನ್ನು ಸುಸ್ಥಿತಿಯಲ್ಲಿ ಇರಿಸಬಲ್ಲದು. ಇದರೊಂದಿಗೆ ನಾರಿನಂಶವೂ ಸಾಕಷ್ಟು ಸೇರಿದರೆ ಅಜೀರ್ಣ, ಮಲಬದ್ಧತೆಯಂಥ ತೊಂದರೆಗಳು ಮಾಯವಾಗುತ್ತವೆ. ರೆಸ್ಟ್‌-ಡೈಜೆಸ್ಟ್‌ ಎಂಬುದು ದೇಹಕ್ಕೆ ಚೆನ್ನಾಗಿ ಅರ್ಥವಾಗುವ ವಿಚಾರ. ಹಾಗಾಗಿ ದಿನಕ್ಕೆ ಏಳೆಂಟು ತಾಸಿನಷ್ಟು ನಿದ್ದೆ ಮಾಡಿದರೆ ಜೀರ್ಣಾಂಗಗಳ ರಿಪೇರಿ ಕೆಲಸ ಸಾಂಗವಾಗಿ ನೆರವೇರುತ್ತದೆ.

Best Food To Eat At Night

ಮುಕ್ಕಬೇಡಿ

ಆಹಾರ ಸೇವನೆಗೊಂದು ಕ್ರಮವಿದೆ. ಈಗಿನ ದರ್ಶಿನಿ ಸಂಸ್ಕೃತಿಯಲ್ಲ ತಿನ್ನುವಾಗ ಬೇಕಿರುವುದು. ಅಂದರೆ ಗಡಿಬಿಡಿಯಲ್ಲಿ ಒಂದಿಷ್ಟು ಮುಕ್ಕಿ ಓಡುವುದಲ್ಲ. ನೆಮ್ಮದಿಯಿಂದ ಕುಳಿತು, ಚೆನ್ನಾಗಿ ಅಗಿದು ತಿನ್ನಿ. ಇದರಿಂದ ಅತಿಯಾಗಿ ತಿನ್ನುವುದು, ಅಗತ್ಯಕ್ಕಿಂತ ಹೆಚ್ಚು ತಿನ್ನುವುದನ್ನೆಲ್ಲ ಕಡಿಮೆ ಮಾಡಬಹುದು. ಜೊತೆಗೆ, ಆಹಾರ ತಿಂದ ತೃಪ್ತಿಯೂ ದೊರೆಯುತ್ತದೆ.

Cooking Oils

ಆರೋಗ್ಯಕರ ಎಣ್ಣೆ

ಗಾಣದ ಎಣ್ಣೆಗಳು ಅಥವಾ ಕೋಲ್ಡ್‌ ಪ್ರೆಸ್‌ ಮಾಡಿದ ಎಣ್ಣೆಗಳು ಬಳಕೆಗೆ ಹೆಚ್ಚು ಸುರಕ್ಷಿತ. ರಿಫೈನ್‌ ಮಾಡಿದ ಎಣ್ಣೆಗಳು, ಮರು ಬಳಕೆಯ ಎಣ್ಣೆಗಳು ಸೂಕ್ತವಲ್ಲ. ಇಂಥವುಗಳಿಂದ ದೇಹದಲ್ಲಿ ಉರಿಯೂತ ಹೆಚ್ಚುತ್ತದೆ. ಹಾಗಾಗಿ ತಾಜಾ ಮತ್ತು ಆರೋಗ್ಯಕರ ಎಣ್ಣೆಗಳನ್ನೇ ಅಡುಗೆಗೆ ಬಳಸಿ. ಪಚನಾಂಗಗಳ ಆರೋಗ್ಯ ರಕ್ಷಣೆಗೆ ಇವೂ ಮುಖ್ಯವಾದವು.

stress

ಒತ್ತಡ

ಮಾನಸಿನ ಒತ್ತಡ ಹೆಚ್ಚಿದಷ್ಟೂ ಜೀರ್ಣಾಂಗಗಳ ಏರುಪೇರು ಹೆಚ್ಚುತ್ತದೆ. ಇವೆರಡರ ನಡುವೆ ನೇರ ಸಂಬಂಧವಿದೆ. ಹಾಗಾಗಿ ಮಾನಸಿನ ಒತ್ತಡ ನಿರ್ವಹಣೆಗೆ ಧ್ಯಾನ, ಯೋಗ, ಪ್ರಾಣಾಯಾಮ, ಆರೋಗ್ಯ ಹವ್ಯಾಸಗಳನ್ನು ರೂಢಿಸಿಕೊಳ್ಳುವಂಥ ಕೆಲಸಗಳು ಒಳ್ಳೆಯ ಪರಿಣಾಮ ಬೀರುತ್ತವೆ. ಇಂಥ ಕ್ರಮಗಳಿಂದಲೂ ಕರುಳಿನ ಆರೋಗ್ಯ ಸುಧಾರಿಸಬಹುದು.

ಇದನ್ನೂ ಓದಿ: AC Side Effects: ಅತಿಯಾದ ಎಸಿ ಬಳಕೆಯಿಂದ ಏನಾಗುತ್ತದೆ ಎಂಬ ಅರಿವಿರಲಿ

ಇವುಗಳು ಬೇಡ

ಪ್ರತಿ ದಿನ ಒಂದೇ ರೀತಿಯ ಆಹಾರವನ್ನು ಸೇವಿಸಬೇಡಿ. ಆರೋಗ್ಯಕರವಾದ ವೈವಿಧ್ಯಮಯ ಆಹಾರಗಳು ಜೀರ್ಣಾಂಗಗಳ ಸ್ಥಿತಿಯನ್ನು ಸುಧಾರಿಸುತ್ತವೆ. ಸಂಸ್ಕರಿತ ಆಹಾರಗಳು ಬೇಡ. ಇದರಿಂದ ಕರುಳಿನ ಉರಿಯೂತ ಹೆಚ್ಚುತ್ತದೆ. ಗಬಗಬ ತಿನ್ನುವುದರ ಬದಲು, ಸಾವಧಾನವಾಗಿ ತಿನ್ನುವುದನ್ನು ರೂಢಿಸಿಕೊಳ್ಳಿ. ಕೃತಕ ಸಿಹಿ, ರುಚಿ, ಬಣ್ಣಗಳೆಲ್ಲ ಉರಿಯೂತ ಹೆಚ್ಚಿಸುತ್ತವೆ. ಬದಲಿಗೆ ನೈಸರ್ಗಿಕ ರುಚಿ, ಬಣ್ಣಗಳಿಗೆ ಆದ್ಯತೆ ನೀಡಿ.

Continue Reading
Advertisement
All We Imagine As Light actor rejected audition call by The Kerala Story
ಮಾಲಿವುಡ್6 mins ago

All We Imagine As Light: ʻದಿ ಕೇರಳ ಸ್ಟೋರಿʼ ಸಿನಿಮಾ ಆಡಿಷನ್‌ ರಿಜೆಕ್ಟ್‌ ಮಾಡಿದ್ರಂತೆ ಕಾನ್‌ ಪ್ರಶಸ್ತಿ ವಿಜೇತೆ!

IND vs PAK
ಕ್ರೀಡೆ7 mins ago

IND vs PAK: ಉಗ್ರರಿಂದ ‘ಒಂಟಿ ತೋಳ’ ದಾಳಿ ಬೆದರಿಕೆ; ಭಾರತ-ಪಾಕ್​ ಪಂದ್ಯಕ್ಕೆ ಭಾರೀ ಭದ್ರತಾ ವ್ಯವಸ್ಥೆ

Prajwal Revanna Case
ಪ್ರಮುಖ ಸುದ್ದಿ30 mins ago

Prajwal Revanna Case: ಪ್ರಜ್ವಲ್‌ ರೇವಣ್ಣ ಆಗಮನಕ್ಕೆ ಕೌಂಟ್‌ಡೌನ್‌, ವಿಮಾನ ಏರ್ತಾರಾ ಇಲ್ವಾ?

Viral Video
ಕ್ರೀಡೆ40 mins ago

Viral Video: ಜಡಿ ಮಳೆಗೆ ಒದ್ದೆಯಾಗುತ್ತಲೇ ಓಡೋಡಿ ಬಂದು ಕಾರು ಹತ್ತಿದ ರೋಹಿತ್​, ದ್ರಾವಿಡ್​

Lok Sabha Election
Lok Sabha Election 20241 hour ago

Lok Sabha Election: ಫಲೋಡಿ ಸಟ್ಟಾ ಬಜಾರ್ ಲೇಟೆಸ್ಟ್ ಲೆಕ್ಕಾಚಾರದ ಪ್ರಕಾರ ಕಾಂಗ್ರೆಸ್ ಒಕ್ಕೂಟಕ್ಕೆ ಬರುವ ಸೀಟೆಷ್ಟು?

Ravichandran Birthday will give surprise To Fans
ಸ್ಯಾಂಡಲ್ ವುಡ್1 hour ago

Ravichandran Birthday: ಇಂದು ಕನಸುಗಾರನ ಜನುಮದಿನ: ಫ್ಯಾನ್ಸ್‌ಗೆ ಸರ್‌ಪ್ರೈಸ್‌ ಕೊಡ್ತಾರಾ ‘ಕ್ರೇಜಿ ಸ್ಟಾರ್’?

Norway Chess
ಕ್ರೀಡೆ1 hour ago

Norway Chess: ವಿಶ್ವ ನಂ.1 ಮ್ಯಾಗ್ನಸ್‌ ಕಾರ್ಲ್‌ಸನ್​ಗೆ ಸೋಲುಣಿಸಿದ ಪ್ರಜ್ಞಾನಂದ

Viral Video
ವೈರಲ್ ನ್ಯೂಸ್1 hour ago

Viral Video: ಬಾಯ್‌ಫ್ರೆಂಡನ್ನು ಹೆದರಿಸಲು ರೈಲ್ವೇ ಟ್ರ್ಯಾಕ್‌ಗೆ ಇಳಿದಳು.. ಆಮೇಲೆ ಆಗಿದ್ದೇ ಬೇರೆ! ಶಾಕಿಂಗ್‌ ವಿಡಿಯೋ ನೋಡಿ

Viral Video
ವೈರಲ್ ನ್ಯೂಸ್2 hours ago

Viral Video: ಮುಂಬೈನ ಚಕಾಚಕ್‌ ʻರಜನೀಕಾಂತ್‌ʼ ಶೈಲಿಯ ದೋಸೆ ಈಗ ವೈರಲ್!‌

Actor Rajinikanth response to political questions is unmissable
ಕಾಲಿವುಡ್2 hours ago

Actor Rajinikanth: ಈ ಬಾರಿಯೂ ಮೋದಿ ಗೆಲ್ಲಬಹುದಾ ಎಂಬ ಪ್ರಶ್ನೆಗೆ ರಜನಿಕಾಂತ್ ಕೊಟ್ಟ ಉತ್ತರ ಏನು?

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka weather Forecast
ಮಳೆ2 days ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು2 days ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ3 days ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ4 days ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು4 days ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

Karnataka Rain
ಮಳೆ5 days ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ1 week ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ1 week ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ1 week ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು1 week ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

ಟ್ರೆಂಡಿಂಗ್‌