IND vs SA | ನೀರಸ ಬ್ಯಾಟಿಂಗ್‌, ಕಳಪೆ ಫೀಲ್ಡಿಂಗ್‌; ದಕ್ಷಿಣ ಆಫ್ರಿಕಾ ವಿರುದ್ಧ ಭಾರತ ತಂಡಕ್ಕೆ 5 ವಿಕೆಟ್‌ ಸೋಲು - Vistara News

T20 ವಿಶ್ವಕಪ್

IND vs SA | ನೀರಸ ಬ್ಯಾಟಿಂಗ್‌, ಕಳಪೆ ಫೀಲ್ಡಿಂಗ್‌; ದಕ್ಷಿಣ ಆಫ್ರಿಕಾ ವಿರುದ್ಧ ಭಾರತ ತಂಡಕ್ಕೆ 5 ವಿಕೆಟ್‌ ಸೋಲು

ಟಿ20 ವಿಶ್ವ ಕಪ್‌ನಲ್ಲಿ ದಕ್ಷಿಣ ಆಫ್ರಿಕಾ (IND vs SA) ವಿರುದ್ಧದ ಪಂದ್ಯದಲ್ಲಿ ಭಾರತ ತಂಡ ಪ್ರಬಲ ಪ್ರದರ್ಶನ ನೀಡಲು ವಿಫಲಗೊಂಡು ಸೋಲಿಗೆ ಒಳಗಾಯಿತು.

VISTARANEWS.COM


on

IND VS SA
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಪರ್ತ್‌: ಬ್ಯಾಟಿಂಗ್‌ ವಿಭಾಗದ ವೈಫಲ್ಯ ಹಾಗೂ ಪ್ರಮುಖ ಘಟ್ಟದಲ್ಲಿ ಕಳಪೆ ಫೀಲ್ಡಿಂಗ್‌ ಮಾಡಿದ ಭಾರತ ತಂಡ ಟಿ೨೦ ವಿಶ್ವ ಕಪ್‌ನ ಗುಂಪು ೨ರ ತನ್ನ ೩ನೇ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ (IND vs SA) ವಿರುದ್ಧ 5 ವಿಕೆಟ್‌ಗಳ ಸೋಲಿಗೆ ಒಳಗಾಯಿತು. ಈ ಮೂಲಕ ಸೂರ್ಯಕುಮಾರ್‌ ಯಾದವ್‌ ಅವರ ಏಕಾಂಗಿ ಹೋರಾಟ ವ್ಯರ್ಥಗೊಂಡಿತು. ಈ ಹಣಾಹಣಿ ಗೆದ್ದ ದಕ್ಷಿಣ ಆಫ್ರಿಕಾ ತಂಡ ಗುಂಪು ಹಂತದ ಅಂಕಪಟ್ಟಿಯಲ್ಲಿ ೫ ಅಂಕಗಳೊಂದಿಗೆ ಮೊದಲ ಸ್ಥಾನಕ್ಕೇರಿದರೆ, ಭಾರತ ೪ ಅಂಕಗಳೊಂದಿಗೆ ಅಗ್ರ ಸ್ಥಾನ ಕಳೆದುಕೊಂಡಿತು.

ಪರ್ತ್‌ ಕ್ರಿಕೆಟ್‌ ಸ್ಟೇಡಿಯಮ್‌ನಲ್ಲಿ ಭಾನುವಾರ ಸಂಜೆ (ಭಾರತೀಯ ಕಾಲಮಾನ) ನಡೆದ ಪಂದ್ಯದಲ್ಲಿ ಟಾಸ್‌ ಗೆದ್ದು ಮೊದಲು ಬ್ಯಾಟ್‌ ಮಾಡಿದ ಭಾರತ ತಂಡ ನಿಗದಿತ ೨೦ ಓವರ್‌ಗಳಲ್ಲಿ ೯ ವಿಕೆಟ್‌ ಕಳೆದುಕೊಂಡು ೧೩೩ ರನ್‌ ಬಾರಿಸಿತು. ಪ್ರತಿಯಾಗಿ ಆಡಿದ ದಕ್ಷಿಣ ಆಫ್ರಿಕಾ ಬಳಗ ೧೯.೪ ಓವರ್‌ಗಳಲ್ಲಿ ೫ ವಿಕೆಟ್‌ ಕಳೆದುಕೊಂಡು ೧೩೪ ರನ್‌ ಬಾರಿಸಿ ವಿಜಯ ಸಾಧಿಸಿತು. ದಕ್ಷಿಣ ಆಫ್ರಿಕಾ ಪರ ಏಡೆನ್‌ ಮಾರ್ಕ್ರಮ್‌ (೫೨) ಹಾಗೂ ಡೇವಿಡ್ ಮಿಲ್ಲರ್‌ (ಅಜೇಯ ೫೯) ಅರ್ಧ ಶತಕಗಳನ್ನು ಬಾರಿಸಿ ಗೆಲುವಿನ ರೂವಾರಿಗಳೆನಿಸಿಕೊಂಡರು.

ಭಾರತ ತಂಡ ಅತ್ಯಂತ ಕಳಪೆ ಫೀಲ್ಡಿಂಗ್ ಪ್ರದರ್ಶನ ನೀಡಿತು. ರೋಹಿತ್ ಶರ್ಮ ಅವರು ಸುಲಭ ರನ್‌ಔಟ್‌ ಮಾಡುವ ಅವಕಾಶ ನಷ್ಟಮಾಡಿಕೊಂಡಿದ್ದು ಸೇರಿದಂತೆ ಎದುರಾಳಿ ತಂಡದ ಬ್ಯಾಟರ್‌ಗಳು ಮೂರು ರನ್ಔಟ್‌ ಜೀವದಾನ ಪಡೆದರು. ಅಲ್ಲದೆ, ಅರ್ಧ ಶತಕ ಬಾರಿಸಿದ ಏಡೆನ್‌ ಮಾರ್ಕ್ರಮ್‌ ಅವರ ಸುಲಭ ಕ್ಯಾಚ್‌ ಅನ್ನು ವಿರಾಟ್‌ ಕೊಹ್ಲಿ ಕೈ ಚೆಲ್ಲಿದರು. ಇವೆಲ್ಲವೂ ಭಾರತದ ಸೋಲಿಗೆ ಕಾರಣಗಳಾದವು.

ಭಾರತ ನೀಡಿದ ಸಣ್ಣ ಮೊತ್ತದ ಗುರಿಯನ್ನೂ ಬೆನ್ನಟ್ಟಲು ಮುಂದಾದ ದಕ್ಷಿಣ ಆಫ್ರಿಕಾ ತಂಡದ ಆರಂಭವೂ ಉತ್ತಮವಾಗಿರಲಿಲ್ಲ. ಆರಂಭಿಕರಾದ ಕ್ವಿಂಟನ್‌ ಡಿ ಕಾಕ್‌ (೧), ತೆಂಬ ಬವುಮಾ (೧೦) ಬೇಗ ವಿಕೆಟ್‌ ಒಪ್ಪಿಸಿದರೆ, ಯುವ ಬ್ಯಾಟರ್‌ ರಿಲೀ ರೊಸ್ಸೊ ಶೂನ್ಯ ಸುತ್ತಿದರು. ಬಳಿಕ ಜತೆಯಾದ ಮಾರ್ಕ್ರಮ್‌ ಹಾಗೂ ಡೇವಿಡ್‌ ಮಿಲ್ಲರ್‌ ೭೬ ರನ್‌ಗಳ ಜತೆಯಾಟ ನೀಡಿದರು. ಭಾರತ ತಂಡದ ಬೌಲರ್‌ಗಳು ಕೊನೇ ತನಕ ಎದುರಾಳಿ ತಂಡದ ಬ್ಯಾಟರ್‌ಗಳ ನಿಯಂತ್ರಣ ಸಾಧಿಸಲು ಯತ್ನಿಸಿದರೂ ಅವರ ಪ್ರಯತ್ನಗಳು ವಿಫಲಗೊಂಡವು.

ಆರಂಭಿಕರ ವೈಫಲ್ಯ

ಅದಕ್ಕಿಂತ ಮೊದಲು ಬ್ಯಾಟ್‌ ಮಾಡಿದ ಭಾರತ ತಂಡದ ಬಹುತೇಕ ಬ್ಯಾಟರ್‌ಗಳು ಈ ಪಂದ್ಯದಲ್ಲಿ ವೈಫಲ್ಯ ಕಂಡರು. ಕೆ. ಎಲ್‌ ರಾಹುಲ್‌ (೯) ಮತ್ತೊಮ್ಮೆ ನಿರಾಶಾದಾಯಕ ಪ್ರದರ್ಶನ ನೀಡಿದರೆ, ರೋಹಿತ್ ಶರ್ಮ ೧೫ ರನ್‌ಗಳಿಗೆ ಸೀಮಿತಗೊಂಡರು. ಸ್ಟಾರ್‌ ಬ್ಯಾಟರ್‌ ವಿರಾಟ್‌ ಕೊಹ್ಲಿ ೧೨ ರನ್‌ಗಳಿಗೆ ಔಟಾಗಿ ಮರಳಿದರು. ಹಾಲಿ ವಿಶ್ವ ಕಪ್‌ನಲ್ಲಿ ಮೊದಲ ಅವಕಾಶ ಪಡೆದ ದೀಪಕ್‌ ಹೂಡ ಶೂನ್ಯ ಸುತ್ತಿದರು.

ಸತತವಾಗಿ ವಿಕೆಟ್‌ ಉರುಳಿದ ಹೊರತಾಗಿಯೂ ಸೂರ್ಯಕುಮಾರ್‌ ಯಾದವ್‌ ಎದುರಾಳಿ ತಂಡದ ಬೌಲರ್‌ಗಳನ್ನು ನಿರಂತರವಾಗಿ ದಂಡಿದರು. ೩೦ ಎಸೆತಗಳಿಗೆ ೫೦ ರನ್ ಬಾರಿಸಿದ ಅವರು ೬೮ ರನ್‌ಗಳಿಗೆ ಪಾರ್ನೆಲ್‌ ಎಸೆತದಲ್ಲಿ ಕೇಶವ್‌ ಮಹಾರಾಜಾಗೆ ಕ್ಯಾಚ್‌ ನೀಡಿ ವಿಕೆಟ್ ಒಪ್ಪಿಸಿದರು. ಹಾರ್ದಿಕ್‌ ಪಾಂಡ್ಯ (೨), ದಿನೇಶ್‌ ಕಾರ್ತಿಕ್‌ (೬), ರವಿಚಂದ್ರನ್‌ ಅಶ್ವಿನ್‌ (೭) ಕೂಡ ಹೆಚ್ಚು ಹೊತ್ತು ಕ್ರೀಸ್‌ನಲ್ಲಿ ನಿಲ್ಲುವ ಪ್ರಯತ್ನ ಮಾಡಲಿಲ್ಲ.

ಸ್ಕೋರ್‌ ವಿವರ

ಭಾರತ: ೨೦ ಓವರ್‌ಗಳಲ್ಲಿ ೯ ವಿಕೆಟ್‌ಗೆ ೧೩೩ (ಸೂರ್ಯಕುಮಾರ್‌ ಯಾದವ್‌ ೬೮, ರೋಹಿತ್‌ ಶರ್ಮ ೧೫; ಲುಂಗಿ ಎನ್‌ಗಿಡಿ ೨೯ಕ್ಕೆ೪; ವೇಯ್ನ್‌ ಪಾರ್ನೆಲ್‌ ೧೫ಕ್ಕೆ೩).

ದಕ್ಷಿಣ ಆಫ್ರಿಕಾ: ೧೯.೪ ಓವರ್‌ಗಳಲ್ಲಿ ೫ ವಿಕೆಟ್‌ಗೆ ೧೩೪ (ಏಡೆನ್‌ ಮಾರ್ಕ್ರಮ್‌ ೫೨, ಡೇವಿಡ್‌ ಮಿಲ್ಲರ್‌ ೫೯*; ಅರ್ಶ್‌ದೀಪ್‌ ಸಿಂಗ್ ೨೫ಕ್ಕೆ೨).

ಇದನ್ನೂ ಓದಿ | IND vs PAK | ಭಾರತದ ವಿರುದ್ಧದ ಸೋಲನ್ನು ಅರಗಿಸಿಕೊಳ್ಳಲು ಆಗುತ್ತಿಲ್ಲ ಎಂದ ಪಾಕ್‌ ಬ್ಯಾಟರ್‌

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

IND vs SA: ಗೆದ್ದು ಬಾ ಭಾರತ; ನಾಳೆ ಟಿ20 ವಿಶ್ವಕಪ್​ ಫೈನಲ್​

IND vs SA: ಪಂತ್​ ಪ್ರಯೋಗಾತ್ಮಕ ಶೈಲಿಯ ಬ್ಯಾಟಿಂಗ್​ ನಡೆಸುವ ಬದಲು ತಮ್ಮ ಮೂಲ ಸ್ವರೂಪದ ಶೈಲಿಯಲ್ಲೇ ಆಡಿದರೆ ಉತ್ತಮ. ಸೂರ್ಯಕುಮಾರ್​ ಮತ್ತು ಹಾರ್ದಿಕ್​ ಪಾಂಡ್ಯ ಮಧ್ಯಮ ಕ್ರಮಾಂಕದಲ್ಲಿ ಬಿರುಸಿನ ಬ್ಯಾಟಿಂಗ್​ ಮೂಲಕ ತಂಡಕ್ಕೆ ನೆರವಾಗುತ್ತಿದ್ದರೆ.

VISTARANEWS.COM


on

Koo

ಬಾರ್ಬಡೋಸ್​: ಚುಟುಕು ಮಾದರಿಯ ಫೈನಲ್(South Africa vs India Final)​ ಕಾದಾಟಕ್ಕೆ ವೇದಿಕೆ ಸಿದ್ದಗೊಂಡಿದೆ. ನಾಳೆ ನಡೆಯುವ ಫೈನಲ್(T20 World Cup 2024)​ ಪಂದ್ಯದಲ್ಲಿ ಭಾರತ ಮತ್ತು ದಕ್ಷಿಣ ಆಫ್ರಿಕಾ(IND vs SA) ಪ್ರಶಸ್ತಿಗಾಗಿ ಕಾದಾಟ ನಡೆಸಲಿದೆ. ಕೂಟದ ಅಜೇಯ ತಂಡಗಳ ನಡುವಣ ಈ ಪ್ರಶಸ್ತಿ ಸಮರ ತೀವ್ರ ಕುತೂಹಲ, ರೋಮಾಂಚನ ಸೃಷ್ಟಿಸುವುದರಲ್ಲಿ ಅನುಮಾನವಿಲ್ಲ.

ಭಯಮುಕ್ತರಾಗಿ ಆಡಬೇಕು


ಭಾರತ ತಂಡದ ದೊಡ್ಡ ಸಮಸ್ಯೆ ಎಂದರೆ ಲೀಗ್, ಸೆಮಿಫೈನಲ್​ನಲ್ಲಿ ಎಷ್ಟೇ ಉತ್ತಮ ಪ್ರದರ್ಶನ ತೋರಿದರೂ ಕೂಡ ಪ್ರಶಸ್ತಿ ಸುತ್ತಿನ ಪಂದ್ಯದಲ್ಲಿ ಸಂಪೂರ್ಣ ನರ್ವಸ್​ ಆಗಿ ಆಡುವುದು. ಒಂದು ವಿಕೆಟ್​ ಬಿದ್ದರೆ ಸಾಕು ಬಳಿಕ ಕ್ರೀಸ್​ಗಿಳಿವ ಬ್ಯಾಟರ್​ಗಳು ಭಯದಿಂದಲೇ ಆಡಲು ಮುಂದಾಗಿ ಸತತವಾಗಿ ವಿಕೆಟ್​ ಕಳೆದುಕೊಂಡು ಅಲ್ಪ ಮೊತ್ತಕ್ಕೆ ಕುಸಿಯುತ್ತಾರೆ. ಕಳೆದ ಏಕದಿನ ವಿಶ್ವಕಪ್​ ಫೈನಲ್​, ಟೆಸ್ಟ್​ ಚಾಂಪಿಯನ್​ಶಿಪ್​ ಫೈನಲ್​ ಇದಕ್ಕೆ ಉತ್ತಮ ನಿದರ್ಶನ. ಹೀಗಾಗಿ ನಾಳೆ ನಡೆಯುವ ಫೈನಲ್​ ಪಂದ್ಯದಲ್ಲಿ ಬ್ಯಾಟರ್​ಗಳು ಮತ್ತು ಬೌಲರ್​ಗಳು ವಿಚಲಿತರಾಗದೆ ಆಡಬೇಕು.

ವಿರಾಟ್​ ಕೊಹ್ಲಿ ಅವರು ಸತತವಾಗಿ ಬ್ಯಾಟಿಂಗ್​ ವೈಫಲ್ಯ ಕಂಡರೂ ಕೂಡ ಫೈನಲ್​ ಪಂದ್ಯದಲ್ಲಿ ಉತ್ತಮ ಬ್ಯಾಟಿಂಗ್​ ನಡೆಸುತ್ತಾರೆ ಎಂದು ನಾಯಕ ರೋಹಿತ್​ ಶರ್ಮ ಆತ್ಮವಿಶ್ವಾಸ ವ್ಯಕ್ತಪಡಿಸಿದ್ದಾರೆ. ಜತೆಗೆ ಕೋಚ್​ ದ್ರಾವಿಡ್​ ಕೂಡ ಕೊಹ್ಲಿಗೆ ವಿಶೇಷ ಸ್ಫೂರ್ತಿ ತುಂಬುವ ಮೂಲಕ ಫೈನಲ್ ಪಂದ್ಯಕ್ಕೆ ಸಿದ್ದಪಡಿಸಿದ್ದಾರೆ. ಶಿವಂ ದುಬೆ ಮಾತ್ರ ಬ್ಯಾಟಿಂಗ್​ ಸುಧಾರಣೆ ಕಾಣುವಂತೆ ತೋರುತ್ತಿಲ್ಲ. ಹೀಗಾಗಿ ಅವರನ್ನು ಕೈ ಬಿಟ್ಟು ಯಶಸ್ವಿ ಜೈಸ್ವಾಲ್​ ಅವರನ್ನು ಆಡಿಸಿದರೆ ಉತ್ತಮ.

ಒಂದು ಬದಲಾವಣೆ ಸಾಧ್ಯತೆ

ಆರಂಭಿಕ ಆಟಗಾರನಾಗಿರುವ ಜೈಸ್ವಾಲ್​ ಅವರು ರೋಹಿತ್ ಜತೆ ಇನಿಂಗ್ಸ್​ ಆರಂಭಿಸಿದರೆ ಕೊಹ್ಲಿ ತಮ್ಮ ಎಂದಿನ ವನ್​ಡೌನ್​ ಕ್ರಮಾಂಕದಲ್ಲಿ ಆಡಬಹುದು. ಬೌಲಿಂಗ್​ ವಿಭಾಗದಲ್ಲಿ ಯಾವುದೇ ಬದಲಾವಣೆ ಸಂಭವಿಸುವ ಸಾಧ್ಯತೆ ಇಲ್ಲ. ಮೂರು ಸ್ಪಿನ್ನರ್​ ಮತ್ತು 2 ವೇಗಿಗಳ ಕಾಂಬಿನೇಷನ್​ನಲ್ಲಿಯೇ ಆಡಬಹುದು. ಪಂತ್​ ಪ್ರಯೋಗಾತ್ಮಕ ಶೈಲಿಯ ಬ್ಯಾಟಿಂಗ್​ ನಡೆಸುವ ಬದಲು ತಮ್ಮ ಮೂಲ ಸ್ವರೂಪದ ಶೈಲಿಯಲ್ಲೇ ಆಡಿದರೆ ಉತ್ತಮ. ಸೂರ್ಯಕುಮಾರ್​ ಮತ್ತು ಹಾರ್ದಿಕ್​ ಪಾಂಡ್ಯ ಮಧ್ಯಮ ಕ್ರಮಾಂಕದಲ್ಲಿ ಬಿರುಸಿನ ಬ್ಯಾಟಿಂಗ್​ ಮೂಲಕ ತಂಡಕ್ಕೆ ನೆರವಾಗುತ್ತಿದ್ದರೆ. ಫೈನಲ್​ನಲ್ಲಿಯೂ ಈ ಪ್ರದರ್ಶನ ಕಂಡುಬಂದರೆ ಉತ್ತಮ. ಅಕ್ಷರ್​ ಪಟೇಲ್ ತಮ್ಮ ಆಲ್​ರೌಂಡರ್​ ಸ್ಥಾನಕ್ಕೆ ತಕ್ಕ ಪ್ರದರ್ಶನ ತೋರುತ್ತಿದ್ದಾರೆ. ಫೀಲ್ಡಿಂಗ್​, ಬ್ಯಾಟಿಂಗ್​ ಮತ್ತು ಬೌಲಿಂಗ್​ ಎಲ್ಲ ವಿಭಾಗದಲ್ಲಿಯೂ ನಿರೀಕ್ಷಿತ ಪ್ರದರ್ಶನ ತೋರುತ್ತಿದ್ದಾರೆ.​

ಇದನ್ನೂ ಓದಿ IND Vs SA T20 WC Final: ಫೈನಲ್​ ಪಂದ್ಯಕ್ಕೂ ಮಳೆ ಭೀತಿ; ಪಂದ್ಯ ರದ್ದಾದರೆ ವಿಜೇತರ ನಿರ್ಧಾರ ಹೇಗೆ?

ದಕ್ಷಿಣ ಆಫ್ರಿಕಾ ಕೂಡ ಬಲಿಷ್ಠ


ದಕ್ಷಿಣ ಆಫ್ರಿಕಾ ಕೂಡ ಬ್ಯಾಟಿಂಗ್​, ಬೌಲಿಂಗ್​ ಮತ್ತು ಫೀಲ್ಡಿಂಗ್​ ವಿಭಾಗದಲ್ಲಿ ವೈವಿಧ್ಯಮಯವಾಗಿದೆ. ಆದರೆ, ಲಕ್​ ಕೈ ಹಿಡಿಯುತ್ತಾ ಎನ್ನುವುದು ಇಲ್ಲಿ ಮುಖ್ಯ. ಡಿ ಕಾಕ್​, ಮಾರ್ಕ್ರಮ್​, ಕ್ಲಾಸೆನ್​, ಮಿಲ್ಲರ್​ ಸಿಡಿದು ನಿಂತರೆ ಕಷ್ಟ. ಬೌಲಿಂಗ್​ನಲ್ಲಿ ಮಾರ್ಕೊ ಜಾನ್ಸೆನ್​, ಕಗಿಸೊ ರಬಾಡ, ಶಮ್ಸಿ ಉತ್ತಮ ಬೌಲಿಂಗ್​ ಲಯದಲ್ಲಿದ್ದಾರೆ.

ಸಂಭಾವ್ಯ ತಂಡ


ದಕ್ಷಿಣ ಆಫ್ರಿಕಾ:
ಕ್ವಿಂಟನ್ ಡಿ ಕಾಕ್ (ವಿಕೀ), ರೀಜಾ ಹೆಂಡ್ರಿಕ್ಸ್, ಏಡೆನ್ ಮಾರ್ಕ್ರಮ್​ (ನಾಯಕ), ಹೆನ್ರಿಚ್ ಕ್ಲಾಸೆನ್, ಡೇವಿಡ್ ಮಿಲ್ಲರ್, ಟ್ರಿಸ್ಟಾನ್ ಸ್ಟಬ್ಸ್, ಮಾರ್ಕೊ ಜಾನ್ಸೆನ್, ಕೇಶವ್ ಮಹಾರಾಜ್, ಕಗಿಸೊ ರಬಾಡ, ಅನ್ರಿಚ್ ನಾರ್ಜೆ, ತಬ್ರೈಜ್ ಶಮ್ಸಿ

ಭಾರತ: ರೋಹಿತ್ ಶರ್ಮಾ (ನಾಯಕ), ವಿರಾಟ್ ಕೊಹ್ಲಿ, ರಿಷಭ್ ಪಂತ್ (ವಿಕೀ), ಸೂರ್ಯಕುಮಾರ್ ಯಾದವ್, ಶಿವಂ ದುಬೆ/ ಯಶಸ್ವಿ ಜೈಸ್ವಾಲ್​, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ಅರ್ಷದೀಪ್ ಸಿಂಗ್, ಜಸ್​ಪ್ರೀತ್​ ಬುಮ್ರಾ.

Continue Reading

ಕ್ರೀಡೆ

T20 World Cup Final: ಚೋಕರ್ಸ್ ಹಣೆಪಟ್ಟಿ ಕಳಚಿಕೊಳ್ಳುವುದೇ ದಕ್ಷಿಣ ಆಫ್ರಿಕಾ?; ನಾಳೆ ಫೈನಲ್​

T20 World Cup Final: ಈ ಬಾರಿಯ ವಿಶ್ವಕಪ್​ ಟೂರ್ನಿಯಲ್ಲಿ ದಕ್ಷಿಣ ಆಫ್ರಿಕಾದ ಪ್ರದರ್ಶನ ಮತ್ತು ಅದೃಷ್ಟ ನೋಡುವಾಗ ಪ್ರಶಸ್ತಿ ಗೆದ್ದು ಚೋಕರ್ಸ್ ಹಣೆಪಟ್ಟಿಯನ್ನು ಕಳಚುವ ಸಾಧ್ಯತೆಯೊಂದು ಕಂಡುಬಂದಿದೆ. ಸೋಲುವ ಪಂದ್ಯವನ್ನು ಕೂಡ ಅಚ್ಚರಿ ಎಂಬಂತೆ 1 ರನ್​ನಿಂದ ಗೆದ್ದ ನಿದರ್ಶನ ಕೂಡ ಇದೆ.

VISTARANEWS.COM


on

T20 World Cup Final
Koo

ಬಾರ್ಬಡೋಸ್​: ದಕ್ಷಿಣ ಆಫ್ರಿಕಾ ತಂಡ ತನ್ನ ಚೋಕರ್ಸ್ ಹಣೆಪಟ್ಟಿಯನ್ನು ಕಳಚಿಕೊಳ್ಳಲು ಇನ್ನೊಂದೆ ಹೆಜ್ಜೆ ಮಾತ್ರ ಬಾಕಿ ಉಳಿದಿದೆ. ನಾಳೆ ನಡೆಯುವ ಟಿ20 ವಿಶ್ವಕಪ್​ ಟೂರ್ನಿಯ ಫೈನಲ್(T20 World Cup Final)​ ಪಂದ್ಯದಲ್ಲಿ ಭಾರತದ(South Africa vs India Final) ಸವಾಲು ಎದುರಿಸಲಿದೆ. 32 ವರ್ಷಗಳ ಬಳಿಕ ಐಸಿಸಿ ಟೂರ್ನಿಯಲ್ಲಿ ಮೊದಲ ಬಾರಿಗೆ ಅಜೇಯವಾಗಿ ಫೈನಲ್ ಪ್ರವೇಶಿಸಿರುವವ ಹರಿಣ ಪಡೆಗೆ ಈ ಬಾರಿಯಾದರೂ ಕಪ್​ ಗೆಲ್ಲುವ ಭಾಗ್ಯ ಇದೆಯಾ ಎಂದು ಕಾದು ನೋಡಬೇಕಿದೆ. ಈ ಹಿಂದೆ ಆಡಿದ ಎಲ್ಲ 7(ಏಕದಿನ, ಟಿ20) ಸೆಮಿಫೈನಲ್​ ಪಂದ್ಯದಲ್ಲಿಯೂ ಸೋಲು ಕಂಡಿತ್ತು.

ದಕ್ಷಿಣ ಆಫ್ರಿಕಾ ತಂಡ(South Africa) 1992ರಲ್ಲಿ ಸಿಡ್ನಿಯಲ್ಲಿ ನಡೆದ ಏಕದಿನ ವಿಶ್ವಕಪ್​ನಲ್ಲಿ ಮೊದಲ ಬಾರಿಗೆ​ ಸೆಮಿಫೈನಲ್​ ಪ್ರವೇಶಿಸಿತ್ತು. ಇನ್ನೇನು ಪಂದ್ಯ ಗೆಲ್ಲುತ್ತದೆ ಎನ್ನುವಷ್ಟರಲ್ಲಿ ಮಳೆ ಸುರಿದು ಪಂದ್ಯ ಸ್ಥಗಿತಗೊಂಡಿತು. 13 ಎಸೆತಗಳಲ್ಲಿ ಗೆಲುವಿಗೆ 22 ರನ್ ಬೇಕಿತ್ತು.​ ಮತ್ತೆ ಆಟ ಮುಂದುವರಿದಾಗ ಮೊಟ್ಟ ಮೊದಲ ಬಾರಿಗೆ ಪರಿಚವಾಗಿದ್ದ ಡಕ್​ವರ್ತ್​ ಲೂಯಿಸ್​ ನಿಯದ ಪ್ರಕಾರ ಹರಿಣ ಪಡೆಗೆ 1 ಎಸೆತದಲ್ಲಿ 22 ರನ್​ ಗಳಿಸುವ ಗುರಿ ನೀಡಲಾಯಿತು. ಈ ಪಂದ್ಯ ಸೋತ ಬಳಿಕ 1999ರಲ್ಲಿ ಬರ್ಮಿಂಗ್‌ಹ್ಯಾಮ್​ನಲ್ಲಿ ಆಸ್ಟ್ರೇಲಿಯ ವಿರುದ್ದದ ಪಂದ್ಯ ಟೈ ಆಗಿತ್ತು. ಆ ಪಂದ್ಯದಲ್ಲಿ ಆಸ್ಟ್ರೇಲಿಯ ಲೆಕ್ಕಾಚಾರದ ಮೂಲಕ ಫೈನಲ್ ಪ್ರವೇಶಿಸಿ ಕಪ್ ಗೆದ್ದಿತ್ತು. 2007 ರಲ್ಲಿ ಆಸ್ಟ್ರೇಲಿಯ ವಿರುದ್ಧ ಗ್ರಾಸ್‌ ಐಲೆಟ್‌ ನಲ್ಲಿ 7 ವಿಕೆಟ್‌ ಸೋಲು ಅನುಭವಿಸಿ ಆಘಾತಕ್ಕೆ ಗುರಿಯಾಗಿತ್ತು. 2015 ರಲ್ಲಿ ನ್ಯೂಜಿಲ್ಯಾಂಡ್‌ ವಿರುದ್ಧ ಆಕ್ಲೆಂಡ್‌ ನಲ್ಲಿ 4 ವಿಕೆಟ್‌ ಸೋಲು ಅನುಭವಿಸಿ ಚೋಕರ್ಸ್ ಎಂದು ಮತ್ತೆ ಕರೆಸಿಕೊಳ್ಳುವ ಸ್ಥಿತಿ ಹರಿಣಗಳ ಪಾಲಿಗೆ ಬಂದೊದಗಿತ್ತು.

ಆದರೆ, ಈ ಬಾರಿಯ ವಿಶ್ವಕಪ್​ ಟೂರ್ನಿಯಲ್ಲಿ ದಕ್ಷಿಣ ಆಫ್ರಿಕಾದ ಪ್ರದರ್ಶನ ಮತ್ತು ಅದೃಷ್ಟ ನೋಡುವಾಗ ಪ್ರಶಸ್ತಿ ಗೆದ್ದು ಚೋಕರ್ಸ್ ಹಣೆಪಟ್ಟಿಯನ್ನು ಕಳಚುವ ಸಾಧ್ಯತೆಯೊಂದು ಕಂಡುಬಂದಿದೆ. ಏಕೆಂದರೆ ಪ್ರತಿ ಬಾರಿ ಮಳೆಯಿಂದ ಹಿನ್ನಡೆ ಅನುಭವಿಸುವ ದಕ್ಷಿಣ ಆಫ್ರಿಕಾ ಈ ಬಾರಿ ವರದಾನವಾಗಿಯೇ ಪರಿಣಮಿಸಿದೆ. ಜತೆಗೆ ಸೋಲುವ ಪಂದ್ಯವನ್ನು ಕೂಡ ಅಚ್ಚರಿ ಎಂಬಂತೆ 1 ರನ್​ನಿಂದ ಗೆದ್ದ ನಿದರ್ಶನ ಕೂಡ ಇದೆ. ಇದನೆಲ್ಲ ನೋಡುವಾಗ ಐಡೆನ್​ ಮಾರ್ಕ್ರಮ್​ ಐತಿಹಾಸಿಕ ಕಪ್​ ಎತ್ತಿ ಹಿಡಿಯುವ ಸಾಧ್ಯತೆಯೊಂದು ಕಂಡುಬಂದಿದೆ.

ಇದನ್ನೂ ಓದಿ IND Vs SA T20 WC Final: ಫೈನಲ್​ ಪಂದ್ಯಕ್ಕೂ ಮಳೆ ಭೀತಿ; ಪಂದ್ಯ ರದ್ದಾದರೆ ವಿಜೇತರ ನಿರ್ಧಾರ ಹೇಗೆ?

ಡಿ ಕಾಕ್​ ಹೊರತುಪಡಿಸಿ ಉಳಿದ ಯಾವುದೇ ಬ್ಯಾಟರ್​ಗಳು​ ಇದುವರೆಗೂ ನಿರೀಕ್ಷತ ಬ್ಯಾಟಿಂಗ್​ ಪ್ರದರ್ಶನ ತೋರದಿದ್ದರು. ಕೂಡ ಬೌಲಿಂಗ್​ ಮತ್ತು ಫೀಲ್ಡಿಂಗ್​ನಲ್ಲಿ ಉತ್ಕೃಷ್ಟ ಮಟ್ಟದ ಪ್ರದರ್ಶನ ತೋರುವ ಮೂಲಕ ಪಂದ್ಯವನ್ನು ಗೆದ್ದಿದ್ದಾರೆ. ಆದರೆ ಫೈನಲ್​ ಪಂದ್ಯದಲ್ಲಿ ಎಲ್ಲರು ಬ್ಯಾಟಿಂಗ್​ ನಡೆಸುವ ಅಗತ್ಯವಿದೆ. ಏಕೆಂದರೆ ಇಲ್ಲಿ ಸೋತರೆ ಮತ್ತೊಂದು ಪಂದ್ಯವಿಲ್ಲ.

Continue Reading

ಕ್ರೀಡೆ

IND Vs SA T20 WC Final: ಫೈನಲ್​ ಪಂದ್ಯಕ್ಕೂ ಮಳೆ ಭೀತಿ; ಪಂದ್ಯ ರದ್ದಾದರೆ ವಿಜೇತರ ನಿರ್ಧಾರ ಹೇಗೆ?

IND Vs SA T20 WC Final: ಇಂಗ್ಲೆಂಡ್​ ಮತ್ತು ಭಾರತ ನಡುವಣ ಸೆಮಿ ಫೈನಲ್​ ಪಂದ್ಯಕ್ಕೂ ಮಳೆ ಅಡ್ಡಿಪಡಿಸಿತ್ತು. ಇದೀಗ ಫೈನಲ್​ ಪಂದ್ಯಕ್ಕೂ ಹವಾಮಾನ ಇಲಾಖೆ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ತಿಳಿಸಿದೆ. ಶೇ.70ರಷ್ಟು ಮಳೆಯಾಗಲಿದೆ ಎಂದು ತನ್ನ ವರದಿಯಲ್ಲಿ ತಿಳಿಸಿದೆ.

VISTARANEWS.COM


on

IND Vs SA T20 WC Final
Koo

ಬಾರ್ಬಡೋಸ್: ಹಾಲಿ ಆವೃತ್ತಿಯ ಟಿ20 ವಿಶ್ವಕಪ್​ ಫೈನಲ್(IND Vs SA T20 WC Final)​ ಪಂದ್ಯಕ್ಕೆ ಕ್ಷಣಗಣನೆ ಶುರುವಾಗಿದೆ. ನಾಳೆ(ಶನಿವಾರ) ಬಾರ್ಬಡೋಸ್​ನಲ್ಲಿ(Barbados Weather Forecast) ಕೂಟದ ಅಜೇಯ ತಂಡಗಳಾದ ದಕ್ಷಿಣ ಆಫ್ರಿಕಾ ಮತ್ತು ಭಾರತ ಪ್ರಶಸ್ತಿಗಾಗಿ ಕಾದಾಟ ನಡೆಸಲಿವೆ. ಆದರೆ, ಈ ಪಂದ್ಯಕ್ಕೂ ಮಳೆ ಭೀತಿ ಎದುರಾಗಿದೆ.

ಶೇ.70ರಷ್ಟು ಮಳೆ ಸಾಧ್ಯತೆ


ಇಂಗ್ಲೆಂಡ್​ ಮತ್ತು ಭಾರತ ನಡುವಣ ಸೆಮಿ ಫೈನಲ್​ ಪಂದ್ಯಕ್ಕೂ ಮಳೆ ಅಡ್ಡಿಪಡಿಸಿತ್ತು. ಇದೀಗ ಫೈನಲ್​ ಪಂದ್ಯಕ್ಕೂ ಹವಾಮಾನ ಇಲಾಖೆ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ತಿಳಿಸಿದೆ. ಶೇ.70ರಷ್ಟು ಮಳೆಯಾಗಲಿದೆ ಎಂದು ತನ್ನ ವರದಿಯಲ್ಲಿ ತಿಳಿಸಿದೆ. ಒಂದೊಮ್ಮೆ ನಿಗದಿತ ದಿನ ಪಂದ್ಯ ನಡೆಯದೇ ಇದ್ದರೆ, ಮೀಸಲು ದಿನಕ್ಕೆ ಮುಂದುವರಿಯಲಿದೆ. ಸೂಪರ್​ 8 ಹಂತದಲ್ಲಿ ಮತ್ತು ಸೆಮಿಫೈನಲ್​ ಪಂದ್ಯ ಮಳೆಯಿಂದ ಮೀಸಲು ದಿನವೂ ಫಲಿತಾಂಶ ಕಾಣದಿದ್ದರೆ ಅಂಕಪಟ್ಟಿಯಲ್ಲಿ ಅಗ್ರಸ್ಥಾನ ಪಡೆದ ಸ್ಥಾನ ಮುಂದಿನ ಹಂತಕ್ಕೇರುತ್ತದೆ. ಆದರೆ ಫೈನಲ್​ ಪಂದ್ಯಕ್ಕೆ ಈ ನಿಯಮ ಅನ್ವಯವಾಗುವುದಿಲ್ಲ.

ಜಂಟಿ ವಿಜೇತರ ಘೋಷಣೆ


ಒಂದು ವೇಳೆ ಫೈನಲ್‌(T20 World Cup 2024) ಪಂದ್ಯ ಮೀಸಲು ದಿನದಲ್ಲಿಯೂ ನಡೆಯದೇ ಹೋದರೆ, ಆಗ ಎರಡೂ ತಂಡಗಳನ್ನು ಜಂಟಿ ವಿಜೇತರು ಎಂದು ಘೋಷಿಸಲಾಗುತ್ತದೆ. 2002ರಲ್ಲಿ ಶ್ರೀಲಂಕಾದಲ್ಲಿ ನಡೆದ ಚಾಂಪಿಯನ್ಸ್ ಟ್ರೋಫಿಯ ಫೈನಲ್ ಪಂದ್ಯ ಮಳೆಯಿಂದ ಪೂರ್ಣಗೊಳಿಸಲು ಸಾಧ್ಯವಾಗದ ಕಾರಣ ಭಾರತ ಮತ್ತು ಆತಿಥೇಯ ಶ್ರೀಲಂಕಾ ಎರಡು ತಂಡಗಳನ್ನು ಜಂಟಿ ವಿಜೇತರನ್ನಾಗಿ ಘೋಷಣೆ ಮಾಡಲಾಗಿತ್ತು.

ಇದನ್ನೂ ಓದಿ IND vs ENG Semi Final: ಇಂಗ್ಲೆಂಡ್​ ಮಣಿಸಿ 10 ವರ್ಷಗಳ ಬಳಿಕ ಫೈನಲ್​ ಪ್ರವೇಶಿಸಿದ ಭಾರತ

ಕೊಲಂಬೊದಲ್ಲಿ ನಡೆದಿದ್ದ ಆ ಫೈನಲ್‌ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್​ ನಡೆಸಿದ ಶ್ರೀಲಂಕಾ 5 ವಿಕೆಟ್​ಗೆ 244 ರನ್ ಗಳಿಸಿತು. ಭಾರತ ವಿಕೆಟ್ ನಷ್ಟವಿಲ್ಲದೆ 14 ರನ್ ಗಳಿದ ವೇಳೆ ಜೋರಾಗಿ ಮಳೆ ಸುರಿಯಿತು. ಮಳೆ ಬಿಡುವು ನೀಡದೆ ಪಂದ್ಯವನ್ನು ಅರ್ಧಕ್ಕೆ ನಿಲ್ಲಿಸಿ ಎರಡೂ ತಂಡಗಳನ್ನು ಜಂಟಿ ವಿಜೇತರು ಎಂದು ಘೋಷಿಸಲಾಯಿತು. ಇದೀಗ ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಣ ಪಂದ್ಯ ಕೂಡ ಪೂರ್ಣ ಫಲಿತಾಂಶ ಕಾಣದಿದ್ದರೆ ಇತ್ತಂಡಗಳು ಕೂಡ ಜಂಟಿ ಚಾಂಪಿಯನ್​ ಎನಿಸಿಕೊಳ್ಳಲಿದೆ. ಭಾರತ 2ನೇ ಕಪ್​ ಗೆದ್ದರೆ, ದಕ್ಷಿಣ ಆಫ್ರಿಕಾ ಚೊಚ್ಚಲ ಬಾರಿಗೆ ಚಾಂಪಿಯನ್​ ಪಟ್ಟ ಅಲಂಕರಿಸಿದಂತಾಗುತ್ತದೆ.

ಮುಖಾಮುಖಿ


ಭಾರತ ಮತ್ತು ದಕ್ಷಿಣ ಆಫ್ರಿಕಾ ತಂಡಗಳು ಇದುವರೆಗೆ 26 ಟಿ20 ಪಂದ್ಯಗಳಲ್ಲಿ ಮುಖಾಮುಖಿಯಾಗಿವೆ. ಈ ಪೈಕಿ ಭಾರತ 14 ಪಂದ್ಯ ಗೆದ್ದರೆ, ದಕ್ಷಿಣ ಆಫ್ರಿಕಾ 11 ಪಂದ್ಯಗಳನ್ನು ಗೆದ್ದಿದೆ. ಒಂದು ಪಂದ್ಯ ಫಲಿತಾಂಶ ಕಂಡಿಲ್ಲ. ಟಿ20 ವಿಶ್ವಕಪ್​ ಟೂರ್ನಿಯಲ್ಲಿ ಒಟ್ಟು 6 ಪಂದ್ಯಗಳಲ್ಲಿ ಆಡಿದ್ದು, ಭಾರತ 4 ಪಂದ್ಯ ಗೆದ್ದಿದೆ. 2 ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ಗೆಲುವು ಕಂಡಿದೆ. 2022ರಲ್ಲಿ ನಡೆದಿದ್ದ ವಿಶ್ವಕಪ್​ ಟೂರ್ನಿಯಲ್ಲಿ ರೋಹಿತ್​ ಪಡೆ ದಕ್ಷಿಣ ಆಫ್ರಿಕಾ ವಿರುದ್ಧ 5 ವಿಕೆಟ್​ ಅಂತರದ ಸೋಲು ಕಂಡಿತ್ತು.

Continue Reading

ಕ್ರಿಕೆಟ್

Virat Kohli: ಕೊಹ್ಲಿ ಕ್ಲಾಸ್ ಪ್ಲೇಯರ್, ಫೈನಲ್​ನಲ್ಲಿ ಆಡುತ್ತಾರೆ ಎಂದು ಬೆಂಬಲ ಸೂಚಿಸಿದ ನಾಯಕ ರೋಹಿತ್​

Virat Kohli: ಇಂಗ್ಲೆಂಡ್​ ವಿರುದ್ಧದ ಪಂದ್ಯದಲ್ಲಿ 9 ರನ್​ಗೆ ವಿಕೆಟ್​ ಕಳೆದುಕೊಂಡ ಕೊಹ್ಲಿ ಇದೇ ಬೇಸರದಲ್ಲಿ ಡ್ರೆಸ್ಸಿಂಗ್​ ರೂಮ್​ನಲ್ಲಿ ಕುಳಿತು ತನ್ನ ಬ್ಯಾಟಿಂಗ್​ ಬಗ್ಗೆ ಚಿಂತಿಸಿ ಕಣ್ಣೀರು ಸುರಿಸಿದರು. ಈ ವೇಳೆ ಮುಖ್ಯ ಕೋಚ್​ ರಾಹುಲ್​ ದ್ರಾವಿಡ್​ ಬಂದು ಕೊಹ್ಲಿಯನ್ನು ಸಂತೈಸಿದರು. ಈ ವಿಡಿಯೊ ವೈರಲ್​ ಆಗಿದೆ.

VISTARANEWS.COM


on

Virat Kohli
Koo

ಪ್ರೊವಿಡೆನ್ಸ್‌: ಈ ಬಾರಿಯ ಐಪಿಎಲ್‌ನಲ್ಲಿ ರನ್‌ ಪ್ರವಾಹ ಹರಿಸಿದ ವಿರಾಟ್‌ ಕೊಹ್ಲಿ(Virat Kohli) ಅವರು ಹಾಲಿ ಆವೃತ್ತಿಯ ಟಿ20 ವಿಶ್ವಕಪ್‌ನಲ್ಲಿನ್ನೂ(T20 World Cup 2024) ಗುಣಮಟ್ಟದ ಬ್ಯಾಟಿಂಗ್‌ ಪ್ರದರ್ಶಿಸಿಲ್ಲ. ಸಹಜವಾಗಿಯೇ ಇದು ಅಗ್ರ ಕ್ರಮಾಂಕದ ಮೇಲೆ ಒತ್ತಡ ತರುತ್ತಿದೆ. ಇಂಗ್ಲೆಂಡ್​ ವಿರುದ್ಧದ ಸೆಮಿ ಫೈನಲ್​ ಪಂದ್ಯದಲ್ಲಿಯೂ ಕೊಹ್ಲಿ ಒಂದಂಕಿಗೆ ಸೀಮಿತರಾಗಿ ಭಾರೀ ಟೀಕೆಗೆ ಗುರಿಯಾಗಿದ್ದಾರೆ. ಆದರೆ, ತಂಡದ ನಾಯಕ ರೋಹಿತ್​ ಶರ್ಮ(Rohit Sharma) ಅವರು ಕೊಹ್ಲಿ ಬೆಂಬಲಕ್ಕೆ ನಿಂತಿದ್ದಾರೆ.

ಪಂದ್ಯದ ಬಳಿಕ ವಿರಾಟ್​ ಕೊಹ್ಲಿಯ ಬ್ಯಾಟಿಂಗ್​ ವೈಫಲ್ಯದ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರಿಸಿದ ರೋಹಿತ್​, ಖಂಡಿತವಾಗಿಯೂ ವಿರಾಟ್ ಓರ್ವ ಕ್ಲಾಸ್ ಪ್ಲೇಯರ್, ಅವರೊಬ್ಬ ಬಿಗ್ ಮ್ಯಾಚ್ ಪ್ಲೇಯರ್. ಪ್ರತಿಯೊಬ್ಬ ಆಟಗಾರನು ತನ್ನ ವೃತ್ತಿಜೀವನದಲ್ಲಿ ಏರಿಳಿತ ಕಾಣುವುದು ಸಹಜ. ಆದರೆ, ಕೊಹ್ಲಿ ವಿಷಯದಲ್ಲಿ ಫಾರ್ಮ್ ದೊಡ್ಡ ವಿಷಯವಲ್ಲ. ಅವರು ಫೈನಲ್‌ ಪಂದ್ಯಕ್ಕಾಗಿ ಕಾಯುತ್ತಿದ್ದಾರೆ. ನನಗೆ ನಂಬಿಕೆ ಇದೆ ಫೈನಲ್​ನಲ್ಲಿ ಅವರು ಶ್ರೇಷ್ಠ ಬ್ಯಾಟಿಂಗ್​ ತೋರುವ ಮೂಲಕ ಎಲ್ಲ ಟೀಕೆಗಳಿಗೂ ಬ್ಯಾಟ್​ನಿಂದಲೇ ಉತ್ತರಿಸಲಿದ್ದಾರೆ ಎಂದು ಹೇಳುವ ಮೂಲಕ ಕೊಹ್ಲಿಗೆ ಬೆಂಬಲ ಸೂಚಿಸಿದರು.

ಇಂಗ್ಲೆಂಡ್​ ವಿರುದ್ಧದ ಪಂದ್ಯದಲ್ಲಿ 9 ರನ್​ಗೆ ವಿಕೆಟ್​ ಕಳೆದುಕೊಂಡ ಕೊಹ್ಲಿ ಇದೇ ಬೇಸರದಲ್ಲಿ ಡ್ರೆಸ್ಸಿಂಗ್​ ರೂಮ್​ನಲ್ಲಿ ಕುಳಿತು ತನ್ನ ಬ್ಯಾಟಿಂಗ್​ ಬಗ್ಗೆ ಚಿಂತಿಸಿ ಕಣ್ಣೀರು ಸುರಿಸಿದರು. ಈ ವೇಳೆ ಮುಖ್ಯ ಕೋಚ್​ ರಾಹುಲ್​ ದ್ರಾವಿಡ್​ ಬಂದು ಕೊಹ್ಲಿಯನ್ನು ಸಂತೈಸಿದರು. ಈ ವಿಡಿಯೊ ವೈರಲ್​ ಆಗಿದೆ.

ಇದನ್ನೂ ಓದಿ Rohit Sharma: ಕೊಹ್ಲಿ, ಧೋನಿ ಬಳಿಕ ನಾಯಕನಾಗಿ ವಿಶೇಷ ದಾಖಲೆ ಬರೆದ ರೋಹಿತ್​

2014, 2016, 2022ರಲ್ಲಿ ಭಾರತ ಆಡಿದ ಎಲ್ಲ ಟಿ20 ವಿಶ್ವಕಪ್​ ಸೆಮಿಫೈನಲ್​ ಪಂದ್ಯದಲ್ಲಿ ವಿರಾಟ್​ ಕೊಹ್ಲಿ ಅರ್ಥಶತಕ ಬಾರಿಸಿ ಮಿಂಚಿದ್ದರು. ಆದರೆ, ಈ ಬಾರಿ ಒಂದಂಕಿಗೆ ಸೀಮಿತರಾದರು. ಜತೆಗೆ ಈ ಬಾರಿ ಆಡಿದ ಎಲ್ಲ ಪಂದ್ಯಗಳಲ್ಲಿಯೂ ಕೊಹ್ಲಿ ಬ್ಯಾಟಿಂಗ್​ ವೈಫಲ್ಯ ಕಂಡಂತಾಯಿತು. ಇಂಗ್ಲೆಂಡ್​ ವಿರುದ್ಧ 9 ಎಸೆತಗಳಲ್ಲಿ 9 ರನ್​ ಬಾರಿಸಿ ಟಾಪ್ಲಿ ಎಸೆತಕ್ಕೆ ಕ್ಲೀನ್​ ಬೌಲ್ಡ್​ ಆದರು. ಆಡಿದ 7 ಪಂದ್ಯಗಳ ಪೈಕಿ 2 ಪಂದ್ಯದಲ್ಲಿ ಶೂನ್ಯ ಸುತ್ತಿದ್ದಾರೆ. ಒಟ್ಟಾರೆ ಅವರ ಗಳಿಕೆ 75 ರನ್​.

ಕೊಹ್ಲಿಯನ್ನು ಆರಂಭಿಕನಾಗಿ ಆಡಿಸಿದ್ದು ಕೂಡ ಅವರ ಬ್ಯಾಟಿಂಗ್​ ವೈಫಲ್ಯಕ್ಕೆ ಕಾರಣವಿರಬಹುದು. ಕೆಲ ವರ್ಷಗಳಿಂದ ಐಪಿಎಲ್​ನಲ್ಲಿ ಕೊಹ್ಲಿ ಆರಂಭಿಕನಾಗಿ ಆಡಿದ್ದರೂ ಕೂಡ ಐಸಿಸಿ ಟೂರ್ನಿಯಲ್ಲಿ ಇದುವರೆಗೂ ಆಡಿರಲಿಲ್ಲ. ಶೈನಿಂಗ್​ ಬಾಲ್​ನಲ್ಲಿ ಅವರಿಗೆ ಆಡಿದ ಅನುಭವ ಕೂಡ ಅಷ್ಟಾಗಿ ಇಲ್ಲ. ಏನಿದ್ದರೂ ಮಧ್ಯಮ ಕ್ರಮಾಂಕದಲ್ಲಿಯೇ ಅವರು ಹೆಚ್ಚು ಸಕ್ಸನ್​ ಕಂಡಿರುವುದು. ಟಿ20 ವಿಶ್ವಕಪ್​ಗೆ ತಂಡ ಪ್ರಕಟಿಸುವ ಮುನ್ನ ಅಮೆರಿಕ ಮತ್ತು ವಿಂಡೀಸ್​ ಪಿಚ್​ಗಳು ನಿಧಾನಗತಿಯದ್ದಾಗಿದ್ದು, ಕೊಹ್ಲಿಗೆ ಇದು ಸೂಕ್ತವಲ್ಲ ಎಂದು ಹೇಳಲಾಗಿತ್ತು. ಇದು ಕೂಡ ಅವರ ಬ್ಯಾಟಿಂಗ್​ ಹಿನ್ನಡೆಗೆ ಕಾಣವಾಗಿರಬಹುದು.

Continue Reading
Advertisement
UGC NET Exam
ದೇಶ1 hour ago

UGC NET Exam: ರದ್ದಾಗಿದ್ದ ಯುಜಿಸಿ ನೆಟ್‌ ಪರೀಕ್ಷೆಗೆ ಹೊಸ ದಿನಾಂಕ ಘೋಷಣೆ; ಪರೀಕ್ಷೆಗೆ ಹೊಸ ವಿಧಾನ, ಇಲ್ಲಿದೆ ವಿವರ‌

Vodafone Idea
ದೇಶ1 hour ago

Vodafone Idea: ಜಿಯೋ, ಏರ್‌ಟೆಲ್‌ ಬೆನ್ನಲ್ಲೇ ವೋಡಾಫೋನ್‌ ಐಡಿಯಾ ಪ್ಲಾನ್‌ ಬೆಲೆ ಏರಿಕೆ; ಹೀಗಿದೆ ವಿವರ

T20 World Cup 2024
ಪ್ರಮುಖ ಸುದ್ದಿ2 hours ago

T20 World Cup 2024 : ಭಾರತ ತಂಡವನ್ನು ಟೀಕಿಸಿದ ಮೈಕೆಲ್​ ವಾನ್​ಗೆ ತಿರುಗೇಟು ಕೊಟ್ಟ ಗಂಗೂಲಿ

CM SIddaramaiah
ಪ್ರಮುಖ ಸುದ್ದಿ2 hours ago

Siddaramaiah: ಅಮಿತ್‌ ಶಾ-ಸಿದ್ದರಾಮಯ್ಯ ಭೇಟಿ; ರಾಜ್ಯದ 5 ನಗರಗಳಲ್ಲಿ ಸೇಫ್‌ ಸಿಟಿ ಯೋಜನೆ ಜಾರಿಗೆ ಒತ್ತಾಯ

Religious Freedom
ದೇಶ3 hours ago

Religious Freedom: ಧಾರ್ಮಿಕ ಸ್ವಾತಂತ್ರ್ಯದ ಕುರಿತು ಅಮೆರಿಕ ಹುಸಿ ಕಳವಳ; ಭಾರತ ತಿರುಗೇಟು

Virat Kohli
ಪ್ರಮುಖ ಸುದ್ದಿ3 hours ago

Virat Kohli : ಫಾರ್ಮ್​ ಕಳೆದುಕೊಂಡಿರುವ ವಿರಾಟ್​ ಕೊಹ್ಲಿಯ ಬೆಂಬಲಕ್ಕೆ ನಿಂತ ಗಂಗೂಲಿ

Application Invitation to Join Air Wing NCC July 09 is the last day for submission of application
ಕರ್ನಾಟಕ4 hours ago

Air Wing NCC: ಏರ್ ವಿಂಗ್ ಎನ್‌ಸಿಸಿ ಸೇರಲು ಅರ್ಜಿ ಆಹ್ವಾನ; ಜುಲೈ 9 ಕೊನೆಯ ದಿನ

Tulu language
ತಂತ್ರಜ್ಞಾನ4 hours ago

Tulu Translate Google: ಗೂಗಲ್ ಟ್ರಾನ್ಸ್‌ಲೇಟ್‌ನಲ್ಲಿ ತುಳು ಭಾಷೆ ಸೇರ್ಪಡೆ

India is a secular nation because Hindus are the majority says Union Minister Pralhad Joshi
ಕರ್ನಾಟಕ4 hours ago

Pralhad Joshi: ಹಿಂದೂಗಳು ಅಲ್ಪಸಂಖ್ಯಾತರಾದ ದಿನ ಭಾರತ ಜಾತ್ಯತೀತವಾಗಿ ಉಳಿಯದು; ಪ್ರಲ್ಹಾದ್‌ ಜೋಶಿ ಆತಂಕ

IND vs SA
ಪ್ರಮುಖ ಸುದ್ದಿ4 hours ago

IND vs SA: ದಕ್ಷಿಣ ಆಫ್ರಿಕಾದ ಬೌಲಿಂಗ್​ ಶಕ್ತಿ ಭಾರತದ ಬ್ಯಾಟಿಂಗ್​ಗೆ ಲೆಕ್ಕಕ್ಕೇ ಇಲ್ಲ; ಮಾಜಿ ಆಟಗಾರನ ಭವಿಷ್ಯ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Weather Forecast
ಮಳೆ7 hours ago

Karnataka Weather : ಅಬ್ಬಬ್ಬಾ.. ಮುಲ್ಕಿಯಲ್ಲಿ 30 ಸೆಂ.ಮೀ ಮಳೆ ದಾಖಲು; ವಾರಾಂತ್ಯದಲ್ಲೂ ಭಾರಿ ವರ್ಷಧಾರೆ

karnataka Rain
ಮಳೆ14 hours ago

Karnataka Rain : ಭಾರಿ ಮಳೆಗೆ ಪಾತಾಳ ಸೇರಿದ ಬಾವಿ; ಅಲೆಗಳ ಹೊಡೆತಕ್ಕೆ ಸಮುದ್ರಪಾಲಾದ ಮನೆ

Karnataka Weather Forecast
ಮಳೆ1 day ago

Karnataka Weather : ಭಾರಿ ಮಳೆ ಹಿನ್ನೆಲೆ ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್; ಶುಕ್ರವಾರವೂ ಶಾಲೆಗಳಿಗೆ ರಜೆ ಘೋಷಣೆ

karnataka Weather Forecast
ಮಳೆ1 day ago

Karnataka Weather : ಭಾರಿ ಮಳೆಗೆ ಸೇತುವೆಯಿಂದ ಹೊಳೆಗೆ ಬಿದ್ದ ಕಾರು; ಮರ ಹಿಡಿದು ಪ್ರಾಣ ಉಳಿಸಿಕೊಂಡ ಸವಾರರು

Heart Attack
ಕೊಡಗು1 day ago

Heart Attack : ಕೊಡಗಿನಲ್ಲಿ ಹೃದಯಾಘಾತಕ್ಕೆ ಯುವತಿ ಬಲಿ; ಹೆಚ್ಚಾಯ್ತು ಅಲ್ಪಾಯುಷ್ಯದ ಭಯ

karnataka Rains Effected
ಮಳೆ2 days ago

Karnataka Rain : ಧಾರಾಕಾರ ಮಳೆಗೆ ಸಡಿಲಗೊಂಡ ಗುಡ್ಡಗಳು; ಧರೆ ಕುಸಿದು ಮಣ್ಣಿನಡಿ ಸಿಲುಕಿದ ಇಬ್ಬರು ಮಕ್ಕಳು

karnataka Weather Forecast
ಮಳೆ4 days ago

Karnataka Weather : ಕರಾವಳಿಯಲ್ಲಿ ಮುಂದುವರಿದ ವರುಣಾರ್ಭಟ; ಸಾಂಪ್ರದಾಯಿಕ ಮೀನುಗಾರಿಕೆಗೂ ಬ್ರೇಕ್

karnataka weather Forecast
ಮಳೆ1 week ago

Karnataka Weather : ರಭಸವಾಗಿ ಹರಿಯುವ ನೀರಲ್ಲಿ ಸಿಲುಕಿದ ಬೊಲೆರೋ; ಬಿರುಗಾಳಿ ಸಹಿತ ಮಳೆ ಎಚ್ಚರಿಕೆ

International Yoga Day 2024
ಕರ್ನಾಟಕ1 week ago

International Yoga Day 2024: ಎಲ್ಲೆಲ್ಲೂ ಯೋಗಾಯೋಗ‌ಕ್ಕೆ ಮಂಡಿಯೂರಿದ ಜನತೆ

Karnataka Weather Forecast
ಮಳೆ1 week ago

Karnataka Weather : ಬಾಗಲಕೋಟೆ, ಬೆಂಗಳೂರು ಸೇರಿ ಚಿಕ್ಕಮಗಳೂರಲ್ಲಿ ಸುರಿದ ಗಾಳಿ ಸಹಿತ ಮಳೆ

ಟ್ರೆಂಡಿಂಗ್‌