Morbi Bridge Collapse | ಮೃತರ ಸಂಖ್ಯೆ 141ಕ್ಕೆ ಏರಿಕೆ, ಪರಿಹಾರ ಕಾರ್ಯಾಚರಣೆ ತೀವ್ರ - Vistara News

ದೇಶ

Morbi Bridge Collapse | ಮೃತರ ಸಂಖ್ಯೆ 141ಕ್ಕೆ ಏರಿಕೆ, ಪರಿಹಾರ ಕಾರ್ಯಾಚರಣೆ ತೀವ್ರ

ಭಾನುವಾರ ಸಂಭವಿಸಿದ ಮೋರ್ಬಿ ಸೇತುವೆ ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 141ಕ್ಕೆ ಏರಿಕೆಯಾಗಿದೆ. ಇದರಲ್ಲಿ 40 ಮಕ್ಕಳಿದ್ದಾರೆ ಎಂದು ತಿಳಿದು ಬಂದಿದೆ.

VISTARANEWS.COM


on

Morbi
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವದೆಹಲಿ: ಭಾನುವಾರ ಸಂಜೆ ಸಂಭವಿಸಿದ ಮೋರ್ಬಿ ಸೇತುವೆ ದುರಂತದಲ್ಲಿ (Morbi Bridge Collapse) ಮೃತಪಟ್ಟವರ ಸಂಖ್ಯೆ 141ಕ್ಕೆ ಏರಿಕೆಯಾಗಿದೆ. ಸಾವಿಗೀಡಾದವರು ಈ ಪೈಕಿ 40 ಮಕ್ಕಳಿದ್ದಾರೆ ಎಂದು ತಿಳಿದು ಬಂದಿದೆ. ಗಾಯಗೊಂಡಿರುವ ನೂರಕ್ಕೂ ಅಧಿಕ ಜನರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಸೇತುವೆ ಕುಸಿದ ಪರಿಣಾಮ ಒಟ್ಟು 350 ಮಂದಿ ನದಿಯಲ್ಲಿ ಮುಳುಗಿದ್ದರು.

ರಕ್ಷಣಾ ಕಾರ್ಯಾಚರಣೆ ಭರದಿಂದ ಸಾಗಿದೆ. ಎನ್‌ಡಿಆರ್‌ಎಫ್, ಎಸ್‌ಡಿಆರ್‌ಎಫ್ ತಂಡಗಳು ಪರಿಹಾರ ಕಾರ್ಯಾಚರಣೆಯಲ್ಲಿ ತೊಡಗಿಸಿಕೊಂಡಿವೆ. ಜೊತೆಗೆ, ವಾಯಪಡೆ ಮತ್ತು ನೌಕಾ ಪಡೆಗಳ ತಂಡವನ್ನು ನಿಯೋಜಿಸಲಾಗಿದೆ. ಗಾಯಾಳಗಳನ್ನು ಏರ್‌ಲಿಫ್ಟ್ ಮಾಡಲಾಗುತ್ತಿದೆ. ಏತನ್ಮಧ್ಯೆ, ಇಡೀ ಘಟನೆ ಕುರಿತು ಹೈಕೋರ್ಟ್‌ನ ನಿವೃತ ನ್ಯಾಯಮೂರ್ತಿ ನೇತೃತ್ವದಲ್ಲಿ ತನಿಖೆ ಕೈಗೊಳ್ಳಬೇಕೆಂದು ಕಾಂಗ್ರೆಸ್ ಆಗ್ರಹಿಸಿದೆ.

ಈ ದುರ್ಘಟನೆಯಲ್ಲಿ ರಾಜ್‌ಕೋಟ್‌ನ ಬಿಜೆಪಿ ಸಂಸದರ ತಮ್ಮ ಕುಟುಂಬದ 12 ಸದಸ್ಯರನ್ನು ಕಳೆದುಕೊಂಡಿದ್ದಾರೆ. ಚುನಾವಣೆ ನಡೆಯಲಿರುವ ಗುಜರಾತ್‌ನಲ್ಲಿ ರಾಜಕೀಯ ಚಟುವಟಿಕೆಗಳು ಜೋರುಗೊಂಡಿದ್ದವು. ಈ ದುರ್ಘಟನೆಯಲ್ಲಿ ಎಲ್ಲ ಪಕ್ಷಗಳು ತಮ್ಮ ಪ್ರಚಾರ ಸಭೆ, ಮೆರವಣಿಗೆ, ರೋಡ್‌ ಶೋಗಳನ್ನು ಕ್ಯಾನ್ಸಲ್ ಮಾಡಿವೆ. ಆದಮಪುರದಲ್ಲಿ ನಡೆಯಬೇಕಿದ್ದ ಆಪ್‌ ರೋಡ್ ಶೋವನ್ನು ಅರವಿಂದ್ ಕೇಜ್ರಿವಾಲ್ ರದ್ದು ಮಾಡಿದ್ದಾರೆ.

ಇದನ್ನು ಓದಿ | Morbi Bridge Collapse | ಮೋರ್ಬಿ ದುರ್ಘಟನೆಯಲ್ಲಿ ಬಿಜೆಪಿ ಸಂಸದ ಕುಟುಂಬದ 12 ಮಂದಿ ಸಾವು

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೈಂ

Physical Abuse: ಮಧ್ಯಪ್ರದೇಶದಲ್ಲೂ ಬುಲ್ಡೋಜರ್‌ ಅಸ್ತ್ರ; ವಿದ್ಯಾರ್ಥಿನಿ ಅತ್ಯಾಚಾರ ಆರೋಪಿಯ ಮನೆ ನೆಲಸಮ

ಮಧ್ಯಪ್ರದೇಶದ ಭೋಪಾಲ್ ನ ಸಿಧಿಯಲ್ಲಿ ಒಟ್ಟು ಏಳು ಮಂದಿ ವಿದ್ಯಾರ್ಥಿನಿಯರ ಮೇಲೆ ಅತ್ಯಾಚಾರ ನಡೆಸಲಾಗಿದ್ದು (Physical Abuse), ಪ್ರಕರಣಕ್ಕೆ ಸಂಬಂಧಿಸಿ ಮೂವರನ್ನು ಬಂಧಿಸಲಾಗಿದೆ. ಪ್ರಮುಖ ಆರೋಪಿಯ ಮನೆಯನ್ನು ಜಿಲ್ಲಾಡಳಿತ ನೆಲಸಮಗೊಳಿಸಿದೆ.

VISTARANEWS.COM


on

By

physical abuse
Koo

ಮಧ್ಯಪ್ರದೇಶ: ವಾಯ್ಸ್ ಮಾಡ್ಯುಲೇಷನ್ ಆ್ಯಪ್ (voice modulation app) ಬಳಸಿ ಮಧ್ಯಪ್ರದೇಶದ (madhyapradesh) ಭೋಪಾಲ್ ನ (bhopal) ಸಿಧಿಯಲ್ಲಿ ನಾಲ್ವರು ಅಪ್ರಾಪ್ತ ಬಾಲಕಿಯರು ಸೇರಿದಂತೆ ಏಳು ಕಾಲೇಜು ವಿದ್ಯಾರ್ಥಿನಿಯರ ಮೇಲೆ ನಡೆದ ಅತ್ಯಾಚಾರ ಪ್ರಕರಣಕ್ಕೆ (Physical Abuse) ಸಂಬಂಧಿಸಿ ವಿಶೇಷ ತನಿಖಾ ತಂಡ (Special Investigation Team- SIT)) ರಚನೆಗೆ ಮುಖ್ಯಮಂತ್ರಿ (Chief Minister) ಮೋಹನ್ ಯಾದವ್ (Mohan Yadav ) ಆದೇಶಿಸಿದ್ದಾರೆ.

ಈ ಬಳಿಕ ಸಿಧಿ ಜಿಲ್ಲಾಡಳಿತವು ಪೊಲೀಸರ ಜಂಟಿ ಕಾರ್ಯಾಚರಣೆಯಲ್ಲಿ ಆರೋಪಿಗಳಲ್ಲಿ ಒಬ್ಬನಾದ ಬ್ರಿಜೇಶ್ ಪ್ರಜಾಪತಿಯ ಮನೆಯನ್ನು ನೆಲಸಮಗೊಳಿಸಿದೆ. ರೇವಾ ವ್ಯಾಪ್ತಿಯ ಐಜಿ ಮಹೇಂದ್ರ ಸಿಕರ್ವಾರ್ ಅವರು ಎಲ್ಲಾ ಮೂವರು ಆರೋಪಿಗಳನ್ನು ಬಂಧಿಸಿರುವುದಾಗಿ ಘೋಷಿಸಿದರು. ತನಿಖೆಗಾಗಿ ಒಂಬತ್ತು ಸದಸ್ಯರ ಎಸ್‌ಐಟಿಯನ್ನು ರಚಿಸಲಾಗಿದೆ. ಸಿಧಿಯ ಉಪ ವಿಭಾಗೀಯ ಪೊಲೀಸ್ ಅಧಿಕಾರಿ (SDOP) ರೋಶ್ನಿ ಸಿಂಗ್ ಠಾಕೂರ್ ಅವರು ಇದರ ಮುಖ್ಯಸ್ಥರಾಗಿದ್ದಾರೆ ಎಂದು ತಿಳಿಸಿದರು.

ಪ್ರಮುಖ ಆರೋಪಿಗಳು ವಿದ್ಯಾರ್ಥಿಗಳನ್ನು ಗುರಿಯಾಗಿಸಿಕೊಂಡು ಯೋಜನೆ ರೂಪಿಸಿದ್ದು, ವಿದ್ಯಾರ್ಥಿ ವೇತನ ನೀಡುವ ನೆಪದಲ್ಲಿ ಈ ದುಷ್ಕೃತ್ಯ ಎಸಗುತ್ತಿದ್ದರು ಎಂದು ಮಹೇಂದ್ರ ಸಿಕರ್ವಾರ್ ಹೇಳಿದರು. ಪ್ರಕರಣಕ್ಕೆ ಸಂಬಂಧಿಸಿ ಪ್ರಮುಖ ಆರೋಪಿಯನ್ನು ಬ್ರಿಜೇಶ್ ಪ್ರಜಾಪತಿ (30) ಎಂದು ಗುರುತಿಸಲಾಗಿದೆ. ಆತನ ಇಬ್ಬರು ಸಹಚರರನ್ನು ಸಿಧಿ ನಿವಾಸಿಗಳಾದ ರಾಹುಲ್ ಪ್ರಜಾಪತಿ ಮತ್ತು ಸಂದೀಪ್ ಪ್ರಜಾಪತಿ ಎಂದು ಗುರುತಿಸಲಾಗಿದೆ.


ಘಟನೆಯ ಹಿನ್ನೆಲೆ ಏನು?

ಘಟನೆಯ ಕುರಿತು ವಿವರಿಸಿದ ಐಜಿ ಮಹೇಂದ್ರ ಸಿಕರ್ವಾರ್, ಬ್ರಿಜೇಶ್ ಪ್ರಜಾಪತಿ ಮೂರು ವರ್ಷಗಳ ಹಿಂದೆ ಜಬಲ್‌ಪುರದ ಉಕ್ಕಿನ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದ. ಕಾರ್ಖಾನೆಯಲ್ಲಿ ಸಂಭವಿಸಿದ ಸ್ಫೋಟದಲ್ಲಿ ಆತನ ಕೈ ಮತ್ತು ಕಾಲುಗಳು ಸುಟ್ಟುಹೋಗಿವೆ ಎಂದು ಪ್ರಜಾಪತಿ ತನಿಖೆ ವೇಳೆ ಹೇಳಿಕೊಂಡಿದ್ದಾನೆ. ಸ್ವಲ್ಪ ಸಮಯದ ಅನಂತರ ಆತ ಗುಜರಾತ್‌ಗೆ ಹೋಗಿದ್ದು, ಅಲ್ಲಿಂದ ಹಿಂದಿರುಗಿದ ಬಳಿಕ ಅಪರಾಧ ಚಟುವಟಿಕೆಗಳಲ್ಲಿ ತೊಡಗಿಕೊಂಡಿದ್ದ ಎಂದು ತಿಳಿಸಿದರು.

ಮಹಿಳಾ ಕಾಲೇಜು ಉದ್ಯೋಗಿಯ ಧ್ವನಿಯನ್ನು ಅನುಕರಿಸಲು ವಾಯ್ಸ್ ಮಾಡ್ಯುಲೇಶನ್ ಅಪ್ಲಿಕೇಶನ್ ಅನ್ನು ಬಳಸಿರಿವ ಪ್ರಜಾಪತಿ ಉದ್ದೇಶಿತ ಮಹಿಳೆಯರನ್ನು ನಿರ್ಜನ ಪ್ರದೇಶಕ್ಕೆ ಕರೆದು ಹೇಯ ಕೃತ್ಯ ಎಸಗುತ್ತಿದ್ದ. ಪೊಲೀಸರಿಂದ ತಪ್ಪಿಸಿಕೊಳ್ಳಲು ಸಂತ್ರಸ್ತರ ಮೊಬೈಲ್ ಫೋನ್ ಗಳನ್ನು ಕಸಿದುಕೊಳ್ಳುತ್ತಿದ್ದರು ಎಂದು ಐಜಿ ತಿಳಿಸಿದರು.

ಇದನ್ನೂ ಓದಿ: Swati Maliwal case: ಕೋರ್ಟ್‌ ವಿಚಾರಣೆ ವೇಳೆ ಕಣ್ಣೀರಿಟ್ಟ ಸ್ವಾತಿ ಮಲಿವಾಲ್‌!

ಪ್ರಜಾಪತಿ ಕತ್ತಲೆಯ ಸಮಯದಲ್ಲಿ ಅಪರಾಧ ಎಸಗುತ್ತಿದ್ದ. ಆತ ಗುರಿಯಾಗಿಸಿದ ಮಹಿಳೆಯನ್ನು ಬೈಕ್‌ನಲ್ಲಿ ಎತ್ತಿಕೊಂಡು ಹೋಗುತ್ತಿದ್ದರು ಮತ್ತು ತಮ್ಮ ಗುರುತನ್ನು ಮರೆಮಾಚಲು ಹೆಲ್ಮೆಟ್ ಮತ್ತು ಕೈಗವಸುಗಳನ್ನು ಧರಿಸುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಆತನ ಸಹಚರರಾದ ರಾಹುಲ್ ಮತ್ತು ಸಂದೀಪ್ ಅವರ ಸಹಾಯದಿಂದ ಸಂತ್ರಸ್ತರ ಮೊಬೈಲ್ ಮಾರಾಟ ಮಾಡುತ್ತಿದ್ದ. ಬಂಧಿತ ಆರೋಪಿಯಿಂದ ಒಟ್ಟು 16 ಮೊಬೈಲ್ ಫೋನ್ ಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Continue Reading

ದೇಶ

Swati Maliwal case: ಕೋರ್ಟ್‌ ವಿಚಾರಣೆ ವೇಳೆ ಕಣ್ಣೀರಿಟ್ಟ ಸ್ವಾತಿ ಮಲಿವಾಲ್‌!

Swati Maliwal case:ಬಿಭವ್‌ ಕುಮಾರ್‌ ಪರ ವಾದ ಮಂಡಿಸಿದ ಹಿರಿಯ ವಕೀಲ ಎನ್‌. ಹರಿಹರನ್‌, ಸ್ವಾತಿ ಮಲಿವಾಲ್‌ ಸಿಎಂ ನಿವಾಸಕ್ಕೆ ಅನುಮತಿ ಇಲ್ಲದೇ ನುಗ್ಗಲು ಯತ್ನಿಸಿದ್ದಾರೆ. ಆ ಸಂದರ್ಭದಲ್ಲಿ ಅಲ್ಲಿ ಬಿಭವ್‌ ಕುಮಾರ್‌ ಇರಲೇ ಇಲ್ಲ. ಪೂರ್ವಾನುಮತಿ ಇಲ್ಲದೇ ಯಾರಾದರೂ ಸಿಎಂ ನಿವಾಸಕ್ಕೆ ಈ ರೀತಿಯಾಗಿ ಪ್ರವೇಶಿಸಲು ಹೇಗೆ ಸಾಧ್ಯ? ಹೀಗಾಗಿ ಆಕೆಯನ್ನು ಭದ್ರತಾ ಸಿಬ್ಬಂದಿ ತಡೆದು ಬಿಭವ್‌ ಕುಮಾರ್‌ ಜೊತೆ ಮಾತನಾಡುವಂತೆ ಹೇಳಿದ್ದಾರೆ. ಸಿಎಂ ನಿವಾಸದಲ್ಲಿ ಇಂತಹದ ಘಟನೆ ನಡೆಯಲು ಸಾಧ್ಯವೇ ಎಂದು ಪ್ರಶ್ನಿಸಿದ್ದಾರೆ.

VISTARANEWS.COM


on

Swati Maliwal Case
Koo

ನವದೆಹಲಿ: ದಿಲ್ಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ (Arvind Kejriwal) ಆಪ್ತ ಕಾರ್ಯದರ್ಶಿ ಬಿಭವ್‌ ಕುಮಾರ್‌ (Bibhav Kumar)ಯಿಂದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋರ್ಟ್‌ ವಿಚಾರಣೆ ವೇಳೆ ಆಮ್‌ ಆದ್ಮಿ ಪಕ್ಷದ (Aam Admi Party) ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್‌ (Swati Maliwal case) ಕಣ್ಣೀರಿಟ್ಟಿದ್ದಾರೆ. ಸೋಮವಾರ ತೀಸ್‌ ಹಜಾರಿ ಕೋರ್ಟ್‌ನಲ್ಲಿ ಬಿಭವ್‌ ಕುಮಾರ್‌ ಅವರ ಜಾಮೀನು ಅರ್ಜಿ ವಿಚಾರಣೆ ವೇಳೆ ವಾದ ಪ್ರತಿವಾದ ನಡೆಯುತ್ತಿದ್ದಂತೆ ಸ್ವಾತಿ ಮಲಿವಾಲ್‌ ಭಾವುಕರಾದರು. ಅಲ್ಲದೇ ಬಿಭವ್‌ ಕುಮಾರ್‌ ಅವರಿಗೆ ಜಾಮೀನು ನೀಡದಂತೆ ಮನವಿ ಮಾಡಿದ್ದಾರೆ.

ಬಿಭವ್‌ ಕುಮಾರ್‌ ಪರ ವಾದ ಮಂಡಿಸಿದ ಹಿರಿಯ ವಕೀಲ ಎನ್‌. ಹರಿಹರನ್‌, ಸ್ವಾತಿ ಮಲಿವಾಲ್‌ ಸಿಎಂ ನಿವಾಸಕ್ಕೆ ಅನುಮತಿ ಇಲ್ಲದೇ ನುಗ್ಗಲು ಯತ್ನಿಸಿದ್ದಾರೆ. ಆ ಸಂದರ್ಭದಲ್ಲಿ ಅಲ್ಲಿ ಬಿಭವ್‌ ಕುಮಾರ್‌ ಇರಲೇ ಇಲ್ಲ. ಪೂರ್ವಾನುಮತಿ ಇಲ್ಲದೇ ಯಾರಾದರೂ ಸಿಎಂ ನಿವಾಸಕ್ಕೆ ಈ ರೀತಿಯಾಗಿ ಪ್ರವೇಶಿಸಲು ಹೇಗೆ ಸಾಧ್ಯ? ಹೀಗಾಗಿ ಆಕೆಯನ್ನು ಭದ್ರತಾ ಸಿಬ್ಬಂದಿ ತಡೆದು ಬಿಭವ್‌ ಕುಮಾರ್‌ ಜೊತೆ ಮಾತನಾಡುವಂತೆ ಹೇಳಿದ್ದಾರೆ. ಸಿಎಂ ನಿವಾಸದಲ್ಲಿ ಇಂತಹದ ಘಟನೆ ನಡೆಯಲು ಸಾಧ್ಯವೇ ಎಂದು ಪ್ರಶ್ನಿಸಿದ್ದಾರೆ.

ಘಟನೆಯಲ್ಲಿ ಸ್ವಾತಿ ಅವರಿಗೆ ಯಾವುದೇ ಗಂಭೀರ ಗಾಯಗಳಾಗಿಲ್ಲ. ಹೀಗಿರುವಾಗ ಇದು ಹೇಗೆ ಕೊಲೆ ಯತ್ನ ಆಗುತ್ತದೆ. ಬಿಭವ್‌ ಕುಮಾರ್‌ ವಿರುದ್ಧದ ಆರೋಪ ಸಂಪೂರ್ಣವಾಗಿ ನಿರಾಧಾರವಾದುದು. ಹೀಗಾಗಿ ಸದ್ಯ ಅವರಿಗೆ ಜಾಮೀನು ನೀಡಬೇಕೆಂದು ಕೋರ್ಟ್‌ಗೆ ಮನವಿ ಮಾಡುತ್ತಿರುವುದಾಗಿ ಹೇಳಿದ್ದಾರೆ.

ಕೆಲವು ದಿನಗಳ ಹಿಂದೆ ಸ್ವಾತಿ ಮಲಿವಾಲ್‌ ಮೇಲೆ ಸಿಎಂ ಕೇಜ್ರಿವಾಲ್‌ ನಿವಾಸದಲ್ಲೇ ಬಿಭವ್‌ ಕುಮಾರ್‌ ಹಲ್ಲೆ ನಡೆಸಿದ್ದ. ಇದಾದ ನಾಲ್ಕು ದಿನಗಳ ಬಳಿಕ ಸ್ವಾತಿ ಪೊಲೀಸರಿಗೆ ದೂರು ನೀಡಿದ್ದರು., ಸ್ವಾತಿ ಪೊಲೀಸರಿಗೆ ನೀಡಿದ ಹೇಳಿಕೆಯಲ್ಲಿ, ‘ನಾನು ಮುಖ್ಯಮಂತ್ರಿ ಅವರ ಭೇಟಿಗೆ ಹೋಗಿದ್ದಾಗ ಬಿಭವ್‌ ಅಡ್ಡಿಪಡಿಸಿದ್ದರು. ನನ್ನ ಜೊತೆ ಅನುಚಿತವಾಗಿ ವರ್ತಿಸಲು ಆರಂಭಿಸಿದ್ದರು. ಪ್ರತಿರೋಧವೊಡ್ಡಿದಾಗ ಮುಖ, ಹೊಟ್ಟೆ, ಎದೆ ಮತ್ತು ದೇಹದ ಸೂಕ್ಷ್ಮ ಭಾಗಗಳ ಮೇಲೆ ಹಲವು ಬಾರಿ ತೀವ್ರ ಹಲ್ಲೆ ನಡೆಸಿದರು. ಈ ವೇಳೆ ಅವರ ಬಳಿ ನಾನು ಗೋಗರೆದು ತಪ್ಪಿಸಿಕೊಂಡು ಬಂದು ಪೊಲೀಸ್‌ ಠಾಣೆಗೆ ಕರೆ ಮಾಡಿ ಮಾಹಿತಿ ನೀಡಿದ್ದೆ’ ಎಂದು ಸ್ವಾತಿ ಹೇಳಿದ್ದಾರೆ. ಈ ಆಧಾರದ ಮೇಲೆ ಪೊಲೀಸರು ಬಿಭವ್‌ ಮೇಲೆ ಮಹಿಳೆಯ ಅತ್ಯಾಚಾರಕ್ಕೆ ಯತ್ನ, ಕ್ರಿಮಿನಲ್‌ ಉದ್ದೇಶ, ಉದ್ದೇಶಪೂರ್ವಕ ಹಲ್ಲೆ ಯತ್ನದ ಪ್ರಕರಣ ದಾಖಲಿಸಿದ್ದಾರೆ.

ಸ್ವಾತಿ ತಮ್ಮ ದೂರಿನಲ್ಲಿ ತಾವು ಆ ದಿನ ಅನುಭವಿಸಿದ ನೋವಿನ ಬಗ್ಗೆ ದಾಖಲಿಸಿದ್ದಾರೆ. ಬಿಭವ್‌ ಕುಮಾರ್‌ 7-8ರಿಂದ ಎಂಟು ಬಾರಿ ಕಪಾಳಕ್ಕೆ ಬಾರಿಸಿದ್ದಾನೆ. ನಾನು ನೆಲಕ್ಕೆ ಬಿದ್ದಾಗ ನಿರಂತರವಾಗಿ ನನ್ನ ಹೊಟ್ಟೆ, ಎದೆ, ಬೆನ್ನಿಗೆ ಒದ್ದಿದ್ದಾನೆ. ಅಲ್ಲದೇ ನನ್ನನ್ನು ಕಾಲುಗಳನ್ನು ಹಿಡಿದು ನೆಲದಲ್ಲಿ ಎಳೆದಾಡಿದ್ದು, ಬಟ್ಟೆಯನ್ನ ಎಳೆದಾಡಿದ್ದಾನೆ. ನಾನು ಅವತ್ತು ಋತುಮತಿಯಾಗಿದ್ದೆ. ಹೊಟ್ಟೆ ಬಹಳ ನೋಯುತ್ತಿದೆ ದಯವಿಟ್ಟು ಬಿಟ್ಟು ಬಿಡು ಎಂದರೂ ಕೇಳದೇ ನನ್ನ ಹೊಟ್ಟೆ ಕಾಲುಗಳಿಂದ ಒದ್ದಿದ್ದಾನೆ ಎಂದು ಸ್ವಾತಿ ಹೇಳಿದ್ದರು. ಇದಾದ ಬಳಿಕ ಕಳೆದ ವಾರ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಭವ್‌ ಕುಮಾರ್‌ನನ್ನು ಅರೆಸ್ಟ್‌ ಮಾಡಲಾಗಿದ್ದು, ಸದ್ಯ ಆತನನ್ನು ಪೊಲೀಸ್‌ ಕಸ್ಟಡಿಗೆ ಒಪ್ಪಿಸಲಾಗಿತ್ತು.

ಇದನ್ನೂ ಓದಿ:Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

Continue Reading

ದೇಶ

Arvind Kejriwal: ಕೇಜ್ರಿವಾಲ್‌ಗೆ ಕ್ಯಾನ್ಸರ್? ಸ್ಫೋಟಕ ಮಾಹಿತಿ ನೀಡಿದ ಆತಿಶಿ, ಜೈಲಿಗೆ ಹೋಗಲ್ವಾ?

Arvind Kejriwal: ಅರವಿಂದ್‌ ಕೇಜ್ರಿವಾಲ್‌ ಅವರ ಆರೋಗ್ಯ ತಪಾಸಣೆ ಮಾಡಿಸಲಾಗಿದ್ದು, ಅವರ ಕೇಟೊನ್‌ ಪ್ರಮಾಣವು ಜಾಸ್ತಿಯಾಗಿದೆ. ಏಕಾಏಕಿ ತೂಕ ಕಡಿಮೆಯಾಗುವುದು, ಜಾಸ್ತಿಯಾಗುವುದನ್ನು ನೋಡಿದರೆ ಅವರಿಗೆ ಗಂಭೀರ ಕಾಯಿಲೆ ಇರುವ ಸಾಧ್ಯತೆ ಇದೆ. ಕಿಡ್ನಿ ಸಮಸ್ಯೆ ಅಥವಾ ಕ್ಯಾನ್ಸರ್‌ ಸೇರಿ ಯಾವುದೇ ಗಂಭೀರ ಕಾಯಿಲೆ ಇರಬಹುದು ಎಂದು ಆಪ್‌ ತಿಳಿಸಿದೆ. ಹಾಗಾಗಿ, ಜೂನ್‌ 2ರಂದು ಕೇಜ್ರಿವಾಲ್‌ ಅವರು ಜೈಲಿಗೆ ಹೋಗುವ ಸಾಧ್ಯತೆ ತೀರಾ ಕಡಿಮೆ ಎನ್ನಲಾಗಿದೆ.

VISTARANEWS.COM


on

Arvind Kejriwal
Koo

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಅಬಕಾರಿ ನೀತಿ ಜಾರಿ (Delhi Excise Policy Case) ವೇಳೆ ನೂರಾರು ಕೋಟಿ ರೂ. ಹಗರಣ ನಡೆದಿದೆ ಎನ್ನಲಾದ ಪ್ರಕರಣದಲ್ಲಿ ಮಧ್ಯಂತರ ಜಾಮೀನು ಪಡೆದಿರುವ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ (Arvind Kejriwal) ಅವರಿಗೆ ಕ್ಯಾನ್ಸರ್‌ ಇದೇಯೇ ಎಂಬ ಪ್ರಶ್ನೆ ಮೂಡಿದೆ. ದೆಹಲಿ ಸಚಿವೆ ಆತಿಶಿ (Atishi) ಅವರು ಅರವಿಂದ್‌ ಕೇಜ್ರಿವಾಲ್‌ ಅವರ ಆರೋಗ್ಯದ ಕುರಿತು ನೀಡಿರುವ ಹೊಸ ಮಾಹಿತಿಯು ಇಂಥದ್ದೊಂದು ಪ್ರಶ್ನೆ ಮೂಡುವಂತಾಗಿದೆ. ಹಾಗಾಗಿ, ಜೂನ್‌ 2ರಂದು ದೆಹಲಿ ಸಿಎಂ ಮತ್ತೆ ಜೈಲಿಗೆ ಹೋಗುವುದಿಲ್ಲ ಎಂದು ಹೇಳಲಾಗುತ್ತಿದೆ.

“ಅರವಿಂದ್‌ ಕೇಜ್ರಿವಾಲ್‌ ಅವರ ಆರೋಗ್ಯ ತಪಾಸಣೆ ಮಾಡಿಸಲಾಗಿದ್ದು, ಅವರ ಕೇಟೊನ್‌ ಪ್ರಮಾಣವು ಜಾಸ್ತಿಯಾಗಿದೆ. ಏಕಾಏಕಿ ತೂಕ ಕಡಿಮೆಯಾಗುವುದು, ಜಾಸ್ತಿಯಾಗುವುದನ್ನು ನೋಡಿದರೆ ಅವರಿಗೆ ಗಂಭೀರ ಕಾಯಿಲೆ ಇರುವ ಸಾಧ್ಯತೆ ಇದೆ. ಕಿಡ್ನಿ ಸಮಸ್ಯೆ ಅಥವಾ ಕ್ಯಾನ್ಸರ್‌ ಸೇರಿ ಯಾವುದೇ ಗಂಭೀರ ಕಾಯಿಲೆ ಇರಬಹುದು. ಹಾಗಾಗಿ, ಅರವಿಂದ್‌ ಕೇಜ್ರಿವಾಲ್‌ ಅವರು ಜೂನ್‌ 2ರಂದು ಜೈಲಿಗೆ ಹೋಗುವ ಬದಲು ಜೂನ್‌ 9ರಂದು ತೆರಳುವ ಕುರಿತು ನ್ಯಾಯಾಲಯಕ್ಕೆ ಮನವಿ ಮಾಡಿದೆ. ಅವರ ಜಾಮೀನು ಅವಧಿಯನ್ನು ವಿಸ್ತರಣೆ ಮಾಡುವಂತೆ ಕೋರಲಾಗಿದೆ” ಎಂಬುದಾಗಿ ಆತಿಶಿ ತಿಳಿಸಿದ್ದಾರೆ. ಮಧ್ಯಂತರ ಜಾಮೀನು ಪಡೆದಿರುವ ಅರವಿಂದ್‌ ಕೇಜ್ರಿವಾಲ್‌ ಅವರು ಜೂನ್‌ 2ರಂದು ಜೈಲಧಿಕಾರಿಗಳಿಗೆ ಶರಣಾಗಬೇಕಿದೆ. ಇದಕ್ಕೂ ಮೊದಲು ಕೂಡ ಕೇಜ್ರಿವಾಲ್‌ ಅವರ ಆರೋಗ್ಯದ ಬಗ್ಗೆ ಆಪ್‌ ನಾಯಕರು ಕಳವಳ ವ್ಯಕ್ತಪಡಿಸಿದ್ದರು.

ಅಬಕಾರಿ ನೀತಿ ಪ್ರಕರಣವೇನು?

ಈ ಪ್ರಕರಣವು 2021-22ರ ದೆಹಲಿ ಸರ್ಕಾರದ ಅಬಕಾರಿ ನೀತಿಯನ್ನು ರೂಪಿಸುವಲ್ಲಿ ಮತ್ತು ಕಾರ್ಯಗತಗೊಳಿಸುವಲ್ಲಿ ಭ್ರಷ್ಟಾಚಾರ ಮತ್ತು ಅಕ್ರಮ ಹಣ ವರ್ಗಾವಣೆಗೆ ಸಂಬಂಧಿಸಿದೆ. ದೆಹಲಿ ಸರ್ಕಾರವು ನಗರದ ಪ್ರಮುಖ ಮದ್ಯದ ವ್ಯಾಪಾರವನ್ನು ಪರಿಷ್ಕರಿಸುವ ನೀತಿಯನ್ನು ರೂಪಿಸಿದ್ದು, ವ್ಯಾಪಾರಿಗಳಿಗೆ ಪರವಾನಗಿ ಶುಲ್ಕದ ಬದಲಾವಣೆ ಸೇರಿದಂತೆ ಹಲವು ಬದಲಾವಣೆ ಮಾಡಿತ್ತು. ಆದರೆ ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿಕೆ ಸಕ್ಸೇನಾ ಅವರು ಇದರಲ್ಲಿ ಅಕ್ರಮಗಳನ್ನು ಆರೋಪಿಸಿ ನೀತಿಯ ಬಗ್ಗೆ ಸಿಬಿಐ ತನಿಖೆಗೆ ಕೋರಿದ್ದರು. ನಂತರ ನೀತಿಯನ್ನು ರದ್ದುಗೊಳಿಸಲಾಯಿತು.

ಸಿಬಿಐ ಮತ್ತು ಇಡಿ ಪ್ರಕಾರ, ಎಎಪಿ ನಾಯಕರು ಅಬಕಾರಿ ನೀತಿಯ ಅಡಿಯಲ್ಲಿ ಪರವಾನಗಿ ನೀಡಲು ರಾಜಕಾರಣಿಗಳು ಮತ್ತು ಮದ್ಯದ ಉದ್ಯಮಿಗಳ ಗುಂಪಿನಿಂದ ₹ 100 ಕೋಟಿ ಕಿಕ್‌ಬ್ಯಾಕ್‌ಗಳನ್ನು ಸ್ವೀಕರಿಸಿದ್ದಾರೆ. ಆರೋಪಪಟ್ಟಿಯಲ್ಲಿ ಅರವಿಂದ್ ಕೇಜ್ರಿವಾಲ್ ಅವರ ಹೆಸರನ್ನೂ ಉಲ್ಲೇಖಿಸಲಾಗಿದ್ದು, ಅಬಕಾರಿ ನೀತಿ ಪ್ರಕರಣದ ಎಲ್ಲಾ ಆರೋಪಿಗಳು ಅಬಕಾರಿ ನೀತಿಯನ್ನು ರೂಪಿಸಲು ದೆಹಲಿ ಸಿಎಂ ಜೊತೆ ಸಂಪರ್ಕದಲ್ಲಿದ್ದಾರೆ ಎಂದು ಹೇಳಲಾಗಿತ್ತು. ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಅರವಿಂದ್ ಕೇಜ್ರಿವಾಲ್ ಜೊತೆಗೆ ಭಾರತ್ ರಾಷ್ಟ್ರ ಸಮಿತಿ (BRS) ನಾಯಕಿ ಕೆ. ಕವಿತಾ ಮತ್ತು ಆಮ್ ಆದ್ಮಿ ಪಕ್ಷದ ಗೋವಾ ಚುನಾವಣೆ ನಿಧಿ ವ್ಯವಸ್ಥಾಪಕ ಚನ್‌ಪ್ರೀತ್ ಸಿಂಗ್ ಅವರನ್ನು ಬಂಧಿಸಲಾಗಿದೆ.

ಇದನ್ನೂ ಓದಿ: Arvind Kejriwal: “ತಾಕತ್‌ ಇದ್ರೆ ಅರೆಸ್ಟ್‌ ಮಾಡಿ…”; ಪ್ರಧಾನಿ ಮೋದಿಗೆ ಕೇಜ್ರಿವಾಲ್‌ ಓಪನ್‌ ಚಾಲೆಂಜ್‌

Continue Reading

ದೇಶ

Asaduddin Owaisi: ಓವೈಸಿ ಪಕ್ಷದ ನಾಯಕನ ಮೇಲೆ ಗುಂಡಿನ ದಾಳಿ

Asaduddin Owaisi: ಅಬ್ದುಲ್ ಮಲಿಕ್ ಮೊಹಮ್ಮದ್ ಅವರ ದೇಹಕ್ಕೆ ಮೂರು ಕಡೆ ಗುಂಡುಗಳು ಬಿದ್ದಿವೆ. ಎದೆಯ ಎಡಭಾಗದಲ್ಲಿ, ಎಡ ತೊಡೆ ಮತ್ತು ಬಲಗೈಗೆ ಗಾಯಗಳಾಗಿವೆ. ಗಾಯಗಳು ತೀವ್ರವಾಗಿರುವ ಕಾರಣ, ಎಐಎಂಐಎಂ ನಾಯಕನನ್ನು ನಾಸಿಕ್‌ನ ಆಸ್ಪತ್ರೆಗೆ ವರ್ಗಾಯಿಸಲಾಯಿತು.

VISTARANEWS.COM


on

Asaduddin Owaisi Party Leader
Koo

ನಾಸಿಕ್: ಅಸಾದುದ್ದೀನ್ ಓವೈಸಿ (Asaduddin Owaisi) ಯವರ ಆಲ್ ಇಂಡಿಯಾ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್ (All India Majlis-e-Ittehadul Muslimeen – AIMIM – ಎಐಎಂಐಎಂ) ಪಕ್ಷದ ನಾಯಕ, ಮಹಾರಾಷ್ಟ್ರದ ಮಾಲೆಗಾಂವ್‌ನ ಮಾಜಿ ಮೇಯರ್ (Ex Malegaon Mayor) ಅಬ್ದುಲ್ ಮಲಿಕ್ ಮೊಹಮ್ಮದ್ ಯೂನಸ್ ಇಸಾ ಎಂಬಾತನ ಮೇಲೆ ಇಂದು ಬೆಳಗ್ಗೆ ಅಪರಿಚಿತ ದಾಳಿಕೋರರು ಗುಂಡಿನ ದಾಳಿ (Firing) ನಡೆಸಿದ್ದಾರೆ.

ಅಬ್ದುಲ್ ಮಲಿಕ್ ಮೊಹಮ್ಮದ್ ಅವರ ದೇಹಕ್ಕೆ ಮೂರು ಕಡೆ ಗುಂಡುಗಳು ಬಿದ್ದಿವೆ. ಎದೆಯ ಎಡಭಾಗದಲ್ಲಿ, ಎಡ ತೊಡೆ ಮತ್ತು ಬಲಗೈಗೆ ಗಾಯಗಳಾಗಿವೆ. ಗಾಯಗಳು ತೀವ್ರವಾಗಿರುವ ಕಾರಣ, ಎಐಎಂಐಎಂ ನಾಯಕನನ್ನು ನಾಸಿಕ್‌ನ ಆಸ್ಪತ್ರೆಗೆ ವರ್ಗಾಯಿಸಲಾಯಿತು.

ಮಾಲೆಗಾಂವ್ ನಗರ ಪೊಲೀಸ್ ಅಧಿಕಾರಿಯ ಪ್ರಕಾರ, ಓಲ್ಡ್ ಆಗ್ರಾ ರಸ್ತೆಯಲ್ಲಿರುವ ಅಂಗಡಿಯೊಂದರ ಹೊರಗೆ ಮಲಿಕ್ ಕುಳಿತಿದ್ದಾಗ 1:20ಕ್ಕೆ ಈ ಘಟನೆ ಸಂಭವಿಸಿದೆ. ಸ್ಥಳೀಯ ಪೊಲೀಸರು ವ್ಯಾಪಕ ತನಿಖೆಯನ್ನು ಪ್ರಾರಂಭಿಸಿದ್ದಾರೆ, ಆದರೆ ಇದುವರೆಗೆ ಯಾರನ್ನೂ ಬಂಧಿಸಲಾಗಿಲ್ಲ. ಅಬ್ದುಲ್ ಮಲಿಕ್ ಮೊಹಮ್ಮದ್ ಯೂನಸ್ ಇಸಾ, ಅಸಾದುದ್ದೀನ್‌ ಓವೈಸಿಯ ಆಪ್ತನಾಗಿದ್ದು, ಮಾಲೆಗಾಂವ್‌ನ ಮೇಯರ್‌ ಆಗಿದ್ದ.

ಅಯೋಧ್ಯೆಯಲ್ಲಿ ರಾಮಮಂದಿರವೇ ಇರ್ಲಿಲ್ಲ: ಅಸಾದುದ್ದೀನ್‌ ಓವೈಸಿ ವಿವಾದ!

ಕಲಬುರಗಿ: ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್‌ ಓವೈಸಿ ಅವರು (Asaduddin Owaisi), “ಅಯೋಧ್ಯೆಯಲ್ಲಿ ರಾಮಮಂದಿರವೇ ಇರಲಿಲ್ಲ” ಎಂದು ಹೇಳಿಕೆ ನೀಡಿರುವುದು ವಿವಾದಕ್ಕೆ ಕಾರಣವಾಗಿದೆ.

ಕಲಬುರಗಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “500 ವರ್ಷಗಳಿಂದ ಬಾಬರಿ ಮಸೀದಿಯಲ್ಲಿ ಮುಸ್ಲಿಮರು ಪ್ರಾರ್ಥನೆ ಸಲ್ಲಿಸುತ್ತಿದ್ದರು. ಅಯೋಧ್ಯೆಯಲ್ಲಿ ರಾಮಮಂದಿರವೇ ಇರಲಿಲ್ಲ. ಆದರೆ, ಷಡ್ಯಂತ್ರದ ಮೂಲದ ಮುಸ್ಲಿಮರಿಂದ ರಾಮಮಂದಿರವನ್ನು ಕಸಿದುಕೊಳ್ಳಲಾಯಿತು. ಕಾಂಗ್ರೆಸ್‌ನ ಜಿ.ಬಿ. ಪಂತ್‌ ಅವರು ಉತ್ತರ ಪ್ರದೇಶ ಮುಖ್ಯಮಂತ್ರಿಯಾಗಿದ್ದಾಗ ಮಸೀದಿಯಲ್ಲಿ ರಾಮನ ಮೂರ್ತಿಗಳನ್ನು ಇರಿಸಲಾಯಿತು. ಆಗ, ನಾಯರ್‌ ಅವರು ಅಯೋಧ್ಯೆ ಜಿಲ್ಲಾಧಿಕಾರಿಯಾಗಿದ್ದರು. ಇದಾದ ಬಳಿಕ ರಾಮನ ಮೂರ್ತಿಗಳನ್ನು ಮಸೀದಿಯಿಂದ ತೆಗೆಯಲೇ ಇಲ್ಲ” ಎಂದು ತಿಳಿಸಿದ್ದಾರೆ.

“ರಾಮಮಂದಿರದ ಕುರಿತು ಮಹಾತ್ಮ ಗಾಂಧೀಜಿ ಅವರು ಎಂದಿಗೂ ಪ್ರಸ್ತಾಪ ಮಾಡಿಲ್ಲ. ವಿಶ್ವ ಹಿಂದು ಪರಿಷತ್‌ ಹುಟ್ಟುವ ಮೊದಲೇ ಮಸೀದಿ ಇತ್ತು. ಜಿ.ಬಿ. ಪಂತ್‌ ಅವರು ಮಸೀದಿಯಿಂದ ರಾಮನ ಮೂರ್ತಿಗಳನ್ನು ವಾಪಸ್‌ ತೆಗೆದುಕೊಂಡಿದ್ದರೆ 1992ರಲ್ಲಿ ಮಸೀದಿಯನ್ನು ನೆಲಸಮಗೊಳಿಸಲು ಆಗುತ್ತಿರಲಿಲ್ಲ. ತುಂಬ ವ್ಯವಸ್ಥಿತವಾಗಿ ಮಸೀದಿಯನ್ನು ಮುಸ್ಲಿಮರಿಂದ ಕಿತ್ತುಕೊಳ್ಳಲಾಯಿತು. ಇಂಡಿಯಾ ಒಕ್ಕೂಟದ ಸದಸ್ಯರಾಗಿರುವ ಅರವಿಂದ್‌ ಕೇಜ್ರಿವಾಲ್‌ ಅವರೂ ಈಗ ಹನುಮಾನ್‌ ಚಾಲೀಸಾ ಪಠಣ ಆಯೋಜಿಸಲು ಮುಂದಾಗಿದ್ದಾರೆ. ಎಲ್ಲರಿಗೂ ಬಹುಸಂಖ್ಯಾತರ ಮತಗಳೇ ಮುಖ್ಯವಾಗಿವೆ” ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: Ram Mandir: ಅಮೆಜಾನ್‌ನಲ್ಲಿ ರಾಮಮಂದಿರ ಪ್ರಸಾದ ಸಿಗುತ್ತದೆಯೇ? ಕೇಂದ್ರ ಕೆಂಡವಾಗಿದ್ದೇಕೆ?

Continue Reading
Advertisement
Karnataka Weather Forecast
ಮಳೆ5 mins ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

HairStyle Craze
ಫ್ಯಾಷನ್14 mins ago

Hairstyle Craze: ಸೋಷಿಯಲ್‌ ಮೀಡಿಯಾದಲ್ಲಿ ರಂಗೇರಿದ ಹೇರ್‌ ಸ್ಟೈಲ್ಸ್

Lok Sabha Election 2024
ಕರ್ನಾಟಕ28 mins ago

Lok Sabha Election 2024: ಲೋಕಸಭೆ ಚುನಾವಣೆ ಮತ ಎಣಿಕೆ; ಜೂ. 4ರಂದು ಬೆಂಗಳೂರಿನಲ್ಲಿ ನಿಷೇಧಾಜ್ಞೆ

Prajwal Revanna Video
ಕರ್ನಾಟಕ39 mins ago

Prajwal Revanna Video: ಪ್ರಜ್ವಲ್‌ ಪ್ರತ್ಯಕ್ಷನಾಗಿದ್ದಕ್ಕೆ ಸಮಾಧಾನ ಆಯ್ತು ಎಂದ ಎಚ್‌ಡಿಕೆ; ಫಸ್ಟ್‌ ರಿಯಾಕ್ಷನ್‌ ಹೀಗಿದೆ

Mouthwashes
ಆರೋಗ್ಯ44 mins ago

Mouthwashes: ಬಾಯಿಯ ಎಲ್ಲ ಸಮಸ್ಯೆಗಳಿಗೂ ಮೌತ್‌ವಾಷ್‌ ಪರಿಹಾರವೆ? ಇದರ ಇತಿಮಿತಿ ಬಗ್ಗೆಯೂ ತಿಳಿದಿರಲಿ

Surya Prakash Maayi director dies
ಕಾಲಿವುಡ್1 hour ago

Surya Prakash: ʻಮಾಯಿʼ ಸಿನಿಮಾ ಖ್ಯಾತಿಯ ತಮಿಳು ನಿರ್ದೇಶಕ ಸೂರ್ಯ ಪ್ರಕಾಶ್ ಇನ್ನಿಲ್ಲ

Prajwal Revanna Video
ಕರ್ನಾಟಕ1 hour ago

Prajwal Revanna Video: ನಾನು ‘ಅಮಾಯಕ’ ಎನ್ನುವ ಪ್ರಜ್ವಲ್‌ಗೆ ‘ವಿಸ್ತಾರ ನ್ಯೂಸ್‌’ 10 ಪ್ರಶ್ನೆಗಳು

physical abuse
ಕ್ರೈಂ1 hour ago

Physical Abuse: ಮಧ್ಯಪ್ರದೇಶದಲ್ಲೂ ಬುಲ್ಡೋಜರ್‌ ಅಸ್ತ್ರ; ವಿದ್ಯಾರ್ಥಿನಿ ಅತ್ಯಾಚಾರ ಆರೋಪಿಯ ಮನೆ ನೆಲಸಮ

Constable Death commits suicide by hanging himself from train
ಹುಬ್ಬಳ್ಳಿ1 hour ago

Constable Death : ಹುಬ್ಬಳ್ಳಿಯಲ್ಲಿ ರೈಲಿಗೆ ತಲೆ ಕೊಟ್ಟ ಕಾನ್ಸ್‌ಟೇಬಲ್‌; ಆತ್ಮಹತ್ಯೆಗೆ ಕಾರಣ ಇನ್ನೂ ನಿಗೂಢ

DCM DK Shivakumar latest statement in Bengaluru
ಕರ್ನಾಟಕ1 hour ago

DK Shivakumar: ಪೊಲೀಸ್‌ ಠಾಣೆ ಮೇಲೆ ದಾಳಿ ಮಾಡಿದವರ ಮೇಲೆ ಕಠಿಣ ಕ್ರಮ; ಡಿ.ಕೆ.ಶಿವಕುಮಾರ್

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Weather Forecast
ಮಳೆ5 mins ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ1 day ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು1 day ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

Karnataka Rain
ಮಳೆ2 days ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ5 days ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ5 days ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ6 days ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು6 days ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

Contaminated Water
ಮೈಸೂರು6 days ago

Contaminated Water : ಡಿ ಸಾಲುಂಡಿಯಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದ ಯುವಕ ಸಾವು

Karnataka Rain
ಮಳೆ1 week ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

ಟ್ರೆಂಡಿಂಗ್‌