Virat kohli | ವಿರಾಟ್ ಕೊಹ್ಲಿಯ ಹೋಟೆಲ್ ರೂಮ್‌ಗೆ ಅನಧಿಕೃತ ಪ್ರವೇಶ, ಕ್ರಿಕೆಟಿಗ ಹಾಗೂ ಪತ್ನಿ ಕೆಂಡಾಮಂಡಲ - Vistara News

T20 ವಿಶ್ವಕಪ್

Virat kohli | ವಿರಾಟ್ ಕೊಹ್ಲಿಯ ಹೋಟೆಲ್ ರೂಮ್‌ಗೆ ಅನಧಿಕೃತ ಪ್ರವೇಶ, ಕ್ರಿಕೆಟಿಗ ಹಾಗೂ ಪತ್ನಿ ಕೆಂಡಾಮಂಡಲ

ಆಸ್ಟ್ರೇಲಿಯಾದ ಪರ್ತ್‌ನಲ್ಲಿ ವಿರಾಟ್‌ ಕೊಹ್ಲಿಯ (Virat kohli) ಕೊಠಡಿಗೆ ನುಗ್ಗಿದ ವ್ಯಕ್ತಿಯೊಬ್ಬ ವಿಡಿಯೊ ಚಿತ್ರೀಕರಣ ಮಾಡಿದ ವಿಷಯ ಚರ್ಚೆಗೆ ಕಾರಣವಾಗಿದೆ.

VISTARANEWS.COM


on

virat kohli
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಪರ್ತ್‌ : ಭಾರತ ತಂಡದ ಮಾಜಿ ನಾಯಕ ಹಾಗೂ ಸ್ಟಾರ್‌ ಬ್ಯಾಟರ್‌ ವಿರಾಟ್‌ ಕೊಹ್ಲಿಯ (Virat kohli) ಹೋಟೆಲ್‌ ಕೊಠಡಿಗೆ ನುಗ್ಗಿದ ಅಭಿಮಾನಿಯೊಬ್ಬರು ವಿಡಿಯೊ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟಿರುವ ವಿಚಾರ ಗಂಭೀರ ರೂಪ ಪಡೆಯುತ್ತಿದೆ. ಅಭಿಮಾನಿಯ ಕುಕೃತ್ಯಕ್ಕೆ ವಿರಾಟ್‌ ಕೊಹ್ಲಿಯೇ ಕ್ರೋಧ ವ್ಯಕ್ತಪಡಿಸಿದ್ದು ಅವರ ಪತ್ನಿ ಅನುಷ್ಕಾ ಶರ್ಮ ಕೂಡ ಭಯಂಕರ ಸಿಟ್ಟಿಗೆದ್ದಿದ್ದಾರೆ.

ಭಾನುವಾರ ಭಾರತ ತಂಡ ಪರ್ತ್‌ ಕ್ರಿಕೆಟ್‌ ಗ್ರೌಂಡ್‌ನಲ್ಲಿ ನಡೆದ ದಕ್ಷಿಣ ಆಫ್ರಿಕಾ ವಿರುದ್ಧದ ಪಂದ್ಯದಲ್ಲಿ ಪಾಲ್ಗೊಂಡಿತ್ತು ಈ ವೇಳೆ ಕಿಲಾಡಿಯೊಬ್ಬ ವಿರಾಟ್‌ ಕೊಹ್ಲಿಯ ಹೋಟೆಲ್‌ ರೂಮ್‌ ಅನುಮತಿ ಇಲ್ಲದೆ ನುಗ್ಗಿದ್ದಾನೆ. ಅಲ್ಲದೆ, ವಿರಾಟ್‌ ಕೊಹ್ಲಿಗೆ ಸಂಬಂಧಿಸಿದ ಎಲ್ಲ ವಸ್ತುಗಳ ವಿಡಿಯೊವನ್ನು ಮಾಡಿಕೊಂಡು ಅದನ್ನು ಸಾಮಾಜಿಕ ಜಾಲತಾಣಗಳಲ್ಲಿ ಅಪ್‌ಲೋಡ್ ಮಾಡಿದ್ದಾರೆ.

ವಿಷಯ ಗೊತ್ತಾಗುತ್ತಿದ್ದಂತೆ ವಿರಾಟ್ ಕೊಹ್ಲಿ ಬೇಸರ ವ್ಯಕ್ತಪಡಿಸಿ ಇನ್‌ಸ್ಟಾಗ್ರಾಮ್‌ನಲ್ಲಿ ಪೋಸ್ಟ್‌ ಮಾಡಿದ್ದಾರೆ. ”ಅಭಿಮಾನಿಗಳಿಗೆ ತಮ್ಮ ಮೆಚ್ಚಿನ ಕ್ರಿಕೆಟಿಗನನ್ನು ನೋಡಬೇಕು, ಮಾತನಾಡಿಸಬೇಕು ಎಂಬ ಬಯಕೆ ಸಹಜ. ಆ ಭಾವನೆ ನನಗೆ ಅರ್ಥವಾಗುತ್ತದೆ. ಅದನ್ನು ನಾನು ಗೌರವಿಸುತ್ತೇನೆ. ಆದರೆ, ನನ್ನ ಕೊಠಡಿಗೆ ನುಗ್ಗಿ ವಿಡಿಯೊ ಮಾಡುವ ಮೂಲಕ ನನ್ನ ಖಾಸಗಿತನಕ್ಕೆ ಧಕ್ಕೆ ತರಲಾಗಿದೆ. ನನ್ನ ಕೊಠಡಿಯಲ್ಲೇ ಖಾಸಗಿತನ ಎಂಬುದು ಇಲ್ಲ ಎಂದಾದರೆ, ವೈಯುಕ್ತಿಕ ಜಾಗ ಎಲ್ಲಿ ಸಿಗುತ್ತದೆ. ಈ ವಿಡಿಯೊದಿಂದ ನನಗೆ ಖುಷಿಯಾಗಿಲ್ಲ. ದಯವಿಟ್ಟು ಜನರ ವೈಯಕ್ತಿಕ ವಿಚಾರಕ್ಕೆ ಗೌರವ ನೀಡಿ. ಇದು ಮನರಂಜನೆಯ ಸಂಗತಿಯಲ್ಲ,” ಎಂಬುದಾಗಿ ಅವರು ಹೇಳಿದ್ದಾರೆ.

ವಿರಾಟ್‌ ಕೊಹ್ಲಿ ಕೊಠಡಿಗೆ ನುಗ್ಗಿ ವಿಡಿಯೊ ಮಾಡಿರುವುದಕ್ಕೆ ಅವರ ಪತ್ನಿ ಅನುಷ್ಕಾ ಶರ್ಮ ಕೆಂಡಾಮಂಡಲರಾಗಿದ್ದಾರೆ. ಕನಿಷ್ಠ ಪ್ರಜ್ಞೆ ಇರುವವರು ಈ ರೀತಿಯ ಕೃತ್ಯ ನಡೆಸುವುದಿಲ್ಲ. ನಿಮ್ಮ ಮನೆಯ ಬೆಡ್‌ರೂಮ್‌ಗೆ ಈ ರೀತಿ ನುಗ್ಗಿದರೆ ಏನು ಅನಿಸಬಹುದು,” ಎಂಬುದಾಗಿ ಪ್ರಶ್ನಿಸಿದ್ದಾರೆ.

ಆಸ್ಟ್ರೇಲಿಯಾ ತಂಡದ ಸ್ಟಾರ್ ಬ್ಯಾಟರ್‌ ಡೇವಿಡ್‌ ವಾರ್ನರ್‌ ಕೂಡ ಅಭಿಮಾನಿಯ ಕೃತ್ಯಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಬಾಲಿವುಡ್‌ ಸ್ಟಾರ್‌ಗಳನೇಕರು ಈ ಬಗ್ಗೆ ಬೇಸರ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ | Virat Kohli | ದಕ್ಷಣ ಆಫ್ರಿಕಾ ವಿರುದ್ಧ 12 ರನ್​ ಗಳಿಸಿದರೂ ವಿಶ್ವ ದಾಖಲೆ ನಿರ್ಮಿಸಿದ ವಿರಾಟ್​ ಕೊಹ್ಲಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

IND vs AUS: ಏಕದಿನ ವಿಶ್ವಕಪ್​ ಫೈನಲ್​ ಸೋಲಿಗೆ ಸೇಡು ತೀರಿಸಲಿ ಭಾರತ; ಟೂರ್ನಿಯಿಂದ ಹೊರ ಬೀಳಲಿ ಆಸ್ಟ್ರೇಲಿಯ

IND vs AUS: ಆಸ್ಟ್ರೇಲಿಯಾ ತಂಡಕ್ಕೆ ತಲೆನೋವು ಉಂಟುಮಾಡುತ್ತಿರುವುದು ನಾಯಕ ಮಿಚೆಲ್​ ಮಾರ್ಷ್​ ಅವರ ಸತತ ಬ್ಯಾಟಿಂಗ್​ ವೈಫಲ್ಯ. ಇದುವರೆಗೂ ಅವರು ನಿರೀಕ್ಷತ ಬ್ಯಾಟಿಂಗ್ ಪ್ರದರ್ಶನ ತೋರಿಲ್ಲ. ಹೆಸರಿಗೆ ಮಾತ್ರ ನಾಯಕನಂತೆ ತಂಡವನ್ನು ಮುನ್ನಡೆಸುತ್ತಿದ್ದಾರೆ

VISTARANEWS.COM


on

IND vs AUS
Koo

ಸೇಂಟ್ ಲೂಸಿಯಾ: ಕಳೆದ ವರ್ಷದ ಏಕದಿನ ವಿಶ್ವಕಪ್(T20 World Cup 2024)​ ಫೈನಲೀಸ್ಟ್​ಗಳಾದ ಭಾರತ ಮತ್ತು ಆಸ್ಟ್ರೇಲಿಯಾ(IND vs AUS) ನಾಳೆ ನಡೆಯುವ ಟಿ20 ವಿಶ್ವಕಪ್​ ಸೂಪರ್​-8 ಪಂದ್ಯದಲ್ಲಿ ಸೆಣಸಾಡಲು ಸಜ್ಜಾಗಿ ನಿಂತಿದೆ. ಸೆಮಿಫೈನಲ್​ ಆಸೆ ಜೀವಂತವಿರಿಸಿಕೊಳ್ಳಬೇಕಿದ್ದರೆ ಆಸ್ಟ್ರೇಲಿಯಾಕ್ಕೆ ಈ ಪಂದ್ಯ ಗೆಲ್ಲಲೇ ಬೇಕು. ಹೀಗಾಗಿ ಇತ್ತಂಡಗಳ ನಡುವಣ ಈ ಪಂದ್ಯವನ್ನು ಹೈವೋಲ್ಟೇಜ್​ ಎಂದು ನಿರೀಕ್ಷೆ ಮಾಡಲಾಗಿದೆ.

ತವರಿನಲ್ಲೇ ಭಾರತಕ್ಕೆ ಸೋಲುಣಿಸಿ ಏಕದಿನ ವಿಶ್ವಕಪ್​ ಕನಸಿಗೆ ಕೊಳ್ಳಿ ಇಟ್ಟಿದ್ದ ಆಸೀಸ್​ಗೆ ಇದೀಗ ಭಾರತ ನಾಳಿನ ಪಂದ್ಯದಲ್ಲಿ ಸೋಲಿಸಿ ವಿಶ್ವಕಪ್​ ಟೂರ್ನಿಯಿಂದ ಹೊರದಬ್ಬ ಬೇಕು. ಈ ಮೂಲಕ ಅಂದಿನ ಸೋಲಿಗೆ ಸೇಡು ತೀರಿಸಿಕೊಳ್ಳಬೇಕು. ಭಾರತೀಯ ಅಭಿಮಾನಿಗಳ ಆಶಯವೂ ಕೂಡ ಇದಾಗಿದೆ.

ಆಸ್ಟ್ರೇಲಿಯಾ ತಂಡ ಯಾವುದೇ ಮಹತ್ವದ ಪಂದ್ಯವಿರಲಿ ಇಲ್ಲಿ ಡಿಫರೆಂಟ್​ ಗೇಮ್​ ಆಡಿ ಗೆದ್ದು ಬರುತ್ತದೆ. ಪಿಚ್​ ಎಂತದ್ದೇ ಆಗಿರಲಿ. ಎದುರಾಳಿ ಯಾರೇ ಆಗಿರಲಿ ಅವರನ್ನು ಮಣಿಸಿ ಗೆದ್ದು ಬರುವುದು ಆಸೀಸ್​ ತಂಡದ ವಿಶೇಷತೆ. ಟಾಸ್​ ಗೆದ್ದರೆ ತಪ್ಪಿಯೂ ಆಸೀಸ್​ಗೆ ಮೊದಲು ಬ್ಯಾಟಿಂಗ್​ ನಡೆಸುವ ಅವಕಾಶ ನೀಡಬಾರದು. ಬಿರುಸಿನ ಬ್ಯಾಟಿಂಗ್​ ನಡೆಸಿ ಬೃಹತ್​ ಮೊತ್ತ ಕಲೆ ಹಾಕುವುದು ಆಸೀಸ್​ ತಂಡದ ಪ್ರಧಾನ ಗುರಿ. ಈ ಮೂಲಕ ಎದುರಾಳಿ ತಂಡದ ಮೇಲೆ ಒತ್ತಡ ಹೇರಿ ಅವರ ಆತ್ಮವಿಶ್ವಾಸ ಕುಗ್ಗಿಸುವುದು ಆಸೀಸ್​ ತಂಡದ ತಂತ್ರ. ಹೀಗಾಗಿ ರೋಹಿತ್​ ಶರ್ಮ ಟಾಸ್​ ಗೆದ್ದರೆ ಯಾವುದೇ ಕಾರಣಕ್ಕೂ ಬೌಲಿಂಗ್​ ಆಯ್ದುಕೊಳ್ಳಬಾರದು ಎನ್ನುವುದು ಅಭಿಮಾನಿಗಳ ಸಲಹೆಯಾಗಿದೆ.

ಇದನ್ನೂ ಓದಿ

ಓಪನಿಂಗ್​ ಸಮಸ್ಯೆ ಬಗೆಹರಿಯಬೇಕಿದೆ


ಭಾರತದ ಓಪನಿಂಗ್‌ ಸಮಸ್ಯೆ ಇನ್ನೂ ಬಗೆ ಹರಿದಿಲ್ಲ. ಕಳೆದ ಬಾಂಗ್ಲಾ ವಿರುದ್ಧದ ಪಂದ್ಯದಲ್ಲಿ ಸಣ್ಣ ಮಟ್ಟದಲ್ಲಿ ಕ್ಲಿಕ್‌ ಆದರೂ ಕೂಡ ಆಸ್ಟ್ರೇಲಿಯಾ ಎದುರಿನ ಪಂದ್ಯಕ್ಕೆ ಇದು ಸಾಲದು. ಹೀಗಾಗಿ ಕೊಹ್ಲಿ ಮತ್ತು ರೋಹಿತ್​ ಈ ಪಂದ್ಯದಲ್ಲಿ ರಕ್ಷಣಾತ್ಮ ಆಟಕ್ಕೆ ಒತ್ತು ನೀಡುವ ಬದಲು ಆರಂಭದಿಂದಲೇ ಬಿರುಸಿನ ಬ್ಯಾಟಿಂಗ್​ ನಡೆಸಿ ಪವರ್​ ಪ್ಲೇಯಲ್ಲಿ ದೊಡ್ಡ ಮೊತ್ತ ಪೇರಿಸಬೇಕು. ಮಧ್ಯಮ ಕ್ರಮಾಂಕದಲ್ಲಿ ಹಾರ್ದಿಕ್​ ಪಾಂಡ್ಯ ಮತ್ತು ಅಕ್ಷರ್​ ಪಟೇಲ್​ ನಿರೀಕ್ಷಿತ ಪ್ರದರ್ಶನ ತೋರುವ ಮೂಲಕ ತಂಡಕ್ಕೆ ಆಸರೆಯಾಗುತ್ತಿದ್ದಾರೆ. ಪಂತ್​ ಮತ್ತು ಸೂರ್ಯಕುಮಾರ್​ ಅವಸರ ಮಾಡದೆ ಆಡಬೇಕಿದೆ. ಬೌಲಿಂಗ್​ನಲ್ಲಿ ಯಾವುದೇ ಸಮಸ್ಯೆಯಿಲ್ಲ. ಬುಮ್ರಾ, ಕುಲ್​ದೀಪ್​, ಅರ್ಶದೀಪ್​ ಉತ್ತಮ ಲಯದಲ್ಲಿದ್ದಾರೆ.

ಇದನ್ನೂ ಓದಿ IND vs AUS Super 8: ಆಸೀಸ್​ ವಿರುದ್ಧ ಭಾರತಕ್ಕೆ ಸೋಲು ಖಚಿತ ಎಂದ ಅಭಿಮಾನಿಗಳು; ಕಾರಣವೇನು?

ಆಸ್ಟ್ರೇಲಿಯಾ ತಂಡಕ್ಕೆ ತಲೆನೋವು ಉಂಟುಮಾಡುತ್ತಿರುವುದು ನಾಯಕ ಮಿಚೆಲ್​ ಮಾರ್ಷ್​ ಅವರ ಸತತ ಬ್ಯಾಟಿಂಗ್​ ವೈಫಲ್ಯ. ಇದುವರೆಗೂ ಅವರು ನಿರೀಕ್ಷತ ಬ್ಯಾಟಿಂಗ್ ಪ್ರದರ್ಶನ ತೋರಿಲ್ಲ. ಹೆಸರಿಗೆ ಮಾತ್ರ ನಾಯಕನಂತೆ ತಂಡವನ್ನು ಮುನ್ನಡೆಸುತ್ತಿದ್ದಾರೆ. ಭಾರತೀಯ ಬೌಲರ್​ಗಳ ಪ್ರಧಾನ ಟಾರ್ಗೆಟ್​ ಟ್ರಾವಿಸ್​ ಹೆಡ್​ ಮತ್ತು ಡೇವಿಡ್​ ವಾರ್ನರ್​ ಆಗಿರಬೇಕು. ಉಭಯ ಆಟಗಾರರನ್ನು ಹೆಚ್ಚು ಹೊತ್ತು ಕ್ರೀಸ್​ನಲ್ಲಿ ಬೇರೂರದಂತೆ ನೋಡಿಕೊಳ್ಳಬೇಕು.

ಬಲಾಬಲ


ಭಾರತ ಮತ್ತು ಆಸ್ಟ್ರೇಲಿಯಾ ಇದುವರೆಗೆ ಟಿ20 ವಿಶ್ವಕಪ್​ ಟೂರ್ನಿಯಲ್ಲಿ ಒಟ್ಟು 5 ಬಾರಿ ಮುಖಾಮುಖಿಯಾಗಿವೆ. ಈ ಪೈಕಿ ಭಾರತ 3 ಪಂದ್ಯ ಗೆದ್ದರೆ, ಆಸೀಸ್​ 2 ಪಂದ್ಯದಲ್ಲಿ ಗೆಲುವು ಸಾಧಿಸಿದೆ. ಕಳೆದ 2 ಬಾರಿಯ ಮುಖಾಮುಖಿಯಲ್ಲಿಯೂ ಭಾರತವೇ ಗೆದ್ದು ಬೀಗಿದೆ. ಹೀಗಾಗಿ ಭಾರತ ಬಲಿಷ್ಠ ಎನ್ನಬಹುದು. ಒಟ್ಟಾರೆಯಾಗಿ ಟಿ20 ಕ್ರಿಕೆಟ್​ನಲ್ಲಿ ಇತ್ತಂಡಗಳು 31 ಪಂದ್ಯಗಳಲ್ಲಿ ಆಡಿವೆ. ಇದರಲ್ಲಿ ಭಾರತ 19 ಪಂದ್ಯ ಮತ್ತು ಆಸ್ಟ್ರೇಲಿಯ 17 ಪಂದ್ಯಗಳನ್ನು ಗೆದ್ದಿದೆ. ಒಂದು ಪಂದ್ಯ ಫಲಿತಾಂಶ ಕಂಡಿಲ್ಲ.

Continue Reading

ಕ್ರೀಡೆ

AFG vs AUS: ಆಸೀಸ್​ ವಿರುದ್ಧದ ಐತಿಹಾಸಿಕ ಗೆಲುವನ್ನು ಪಟಾಕಿ ಸಿಡಿಸಿ ಸಂಭ್ರಮಿಸಿದ ಆಫ್ಘನ್ನರು; ವಿಡಿಯೊ ವೈರಲ್​

AFG vs AUS: ಪಂದ್ಯ ಗೆದ್ದು ಹೋಟೆಲ್​ಗೆ ತೆರಳುವ ವೇಳೆ ಅಫಘಾನಿಸ್ತಾನ ತಂಡದ ಆಟಗಾರರು ತಮ್ಮ ಬಸ್​ನಲ್ಲಿ ಡ್ವೇನ್​ ಬ್ರಾವೊ ಹಾಡಿದ ಡೀಜೆ….ಬ್ರಾವೊ…ಚಾಂಪಿಯನ್​…ಚಾಂಪಿಯನ್​ ಹಾಡಿಗೆ ಕುಣಿದು ಕುಪ್ಪಳಿಸಿದ್ದಾರೆ. ಬ್ರಾವೊ ಕೂಡ ಆಟಗಾರರೊಂದಿಗೆ ಈ ಹಾಡಿಗೆ ಹೆಜ್ಜೆ ಹಾಕಿದ್ದಾರೆ. ಬ್ರಾವೊ ಅಫಘಾನಿಸ್ತಾನ ತಂಡ ಬೌಲಿಂಗ್​ ಕೋಚ್​ ಆಗಿದ್ದಾರೆ.

VISTARANEWS.COM


on

AFG vs AUS
Koo

ಕಿಂಗ್‌ಸ್ಟೌನ್ (ಸೇಂಟ್ ವಿನ್ಸೆಂಟ್): ಇಂದು (ಭಾನುವಾರ) ನಡೆದ ಸೂಪರ್​-8(T20 World Cup 2024) ಪಂದ್ಯದಲ್ಲಿ ಅಫಘಾನಿಸ್ತಾನ(AFG vs AUS) ಬಲಿಷ್ಠ ಆಸ್ಟ್ರೇಲಿಯಾವನ್ನು 21 ರನ್​ಗಳಿಂದ ಮಗುಚಿ ಹಾಕಿ ಐತಿಹಾಸಿಕ ಗೆಲುವು ತನ್ನದಾಗಿಸಿಕೊಂಡಿತು. ಆಸೀಸ್​ ವಿರುದ್ಧದ ಈ ಗೆಲುವನ್ನು ಆಟಗಾರರು ಮಾತ್ರವಲ್ಲದೆ ಆಫ್ಘನ್ನರು(Afghanistan) ಕೂಡ​ ಈ ಗೆಲುವನ್ನು ಸಂಭ್ರಮಿಸಿದ್ದಾರೆ. ಅಫಘಾನಿಸ್ತಾನದ ಬೀದಿ ಬೀದಿಗಳಲ್ಲಿ ಸಿಹಿ ಹಂಚಿ ಪಟಾಕಿ ಸಿಡಿಸುವ ಮೂಲಕ ಸಂಭ್ರಮಾಚರಣೆ ಮಾಡಿದ್ದಾರೆ. ಈ ವಿಡಿಯೊ ವೈರಲ್(viral video)​ ಆಗಿದೆ.

ಈ ಪಂದ್ಯದಲ್ಲಿ ಟಾಸ್​ ಸೋತು ಬ್ಯಾಟಿಂಗ್​ಗೆ ಇಳಿಸಲ್ಪಟ್ಟ ಅಫಘಾನಿಸ್ತಾನ ತಂಡ ಕಮಿನ್ಸ್​ ಅವರ ಬೌಲಿಂಗ್​ ದಾಳಿಯ ಮಧ್ಯೆಯೂ ನಿಗದಿತ 20 ಓವರ್​ಗಳಲ್ಲಿ 6 ವಿಕೆಟ್​ಗೆ 148 ರನ್​ ಬಾರಿಸಿತು. ಸ್ಪರ್ಧಾತ್ಮಕ ಮೊತ್ತವನ್ನು ಬೆನ್ನಟ್ಟಿದ ಆಸ್ಟ್ರೇಲಿಯಾ ಗ್ಲೆನ್​ ಮ್ಯಾಕ್ಸ್​ವೆಲ್​ ಅವರ ಅರ್ಧಶತಕದ ಹೊರತಾಗಿಯೂ 127 ರನ್​ಗೆ ಸರ್ವಪತನ ಕಂಡು ಸೋಲಿಗೆ ತುತ್ತಾಯಿತು. ಈ ಗೆಲುವಿನೊಂದಿಗೆ ಆಫ್ಘಾನ್​ ಕಳೆದ ವರ್ಷ ನಡೆದಿದ್ದ ಏಕದಿನ ವಿಶ್ವಕಪ್​ ಸೋಲಿಗೆ ಇಲ್ಲಿ ಸೇಡು ತೀರಿಸಿಕೊಂಡಿತು.

ಚಾಂಪಿಯನ್​ ಹಾಡಿಗೆ ಕುಣಿದು ಕುಪ್ಪಳಿಸಿದ ಆಟಗಾರರು


ಪಂದ್ಯ ಗೆದ್ದು ಹೋಟೆಲ್​ಗೆ ತೆರಳುವ ವೇಳೆ ಅಫಘಾನಿಸ್ತಾನ ತಂಡದ ಆಟಗಾರರು ತಮ್ಮ ಬಸ್​ನಲ್ಲಿ ಡ್ವೇನ್​ ಬ್ರಾವೊ ಹಾಡಿದ ಡೀಜೆ….ಬ್ರಾವೊ…ಚಾಂಪಿಯನ್​…ಚಾಂಪಿಯನ್​ ಹಾಡಿಗೆ ಕುಣಿದು ಕುಪ್ಪಳಿಸಿದ್ದಾರೆ. ಬ್ರಾವೊ ಕೂಡ ಆಟಗಾರರೊಂದಿಗೆ ಈ ಹಾಡಿಗೆ ಹೆಜ್ಜೆ ಹಾಕಿದ್ದಾರೆ. ಬ್ರಾವೊ ಅಫಘಾನಿಸ್ತಾನ ತಂಡ ಬೌಲಿಂಗ್​ ಕೋಚ್​ ಆಗಿದ್ದಾರೆ.

ಇದನ್ನೂ ಓದಿ AUS vs AFG: ಆಸ್ಟ್ರೇಲಿಯಾಕ್ಕೆ ಆಘಾತವಿಕ್ಕಿದ ಆಫ್ಘಾನ್​; 21 ರನ್​ ಸೋಲು ಕಂಡ ಆಸೀಸ್​

ಅಫಘಾನಿಸ್ತಾನ ಪರ ಘಾತಕ ಬೌಲಿಂಗ್​ ದಾಳಿ ನಡೆಸಿದ ಗುಲ್ಬದಿನ್ ನೈಬ್​ 2 ಓವರ್​ಗೆ 20 ರನ್​ ನೀಡಿ 4 ವಿಕೆಟ್​ ಕಿತ್ತರು. ಇವರಿಗೆ ಉತ್ತಮ ಸಾಥ್​ ನೀಡಿದ ನವೀನ್​ ಉಲ್​ ಹಕ್​ 4 ಓವರ್​ಗೆ 20 ರನ್​ ಬಿಟ್ಟುಕೊಟ್ಟು 3 ವಿಕೆಟ್​ ಉರುಳಿಸಿದರು. ನಾಯಕ ರಶೀದ್​ ಖಾನ್​ ಮತ್ತು ಮೊಹಮ್ಮದ್​ ನಬಿ ತಲಾ ಒಂದು ವಿಕೆಟ್​ ಪೆಡೆದರು.

ನಾಳೆ ನಡೆಯುವ ಭಾರತ ವಿರುದ್ಧದ ಪಂದ್ಯದಲ್ಲಿ ಆಸ್ಟ್ರೇಲಿಯಾ ಸೋಲು ಕಂಡು, ಅಂತಿಮ ಪಂದ್ಯದಲ್ಲಿ ಬಾಂಗ್ಲಾದೇಶ ವಿರುದ್ಧ ಅಫಘಾನಿಸ್ತಾನ ಗೆದ್ದರೆ ಸೆಮಿಫೈನಲ್​ ಪ್ರವೇಶಿಸಲಿದೆ. ಗ್ರಾಸ್​ ಐಲೆಟ್​ನಲ್ಲಿ(Saint Lucia latest weather) ನಡೆಯಲಿರುವ ಭಾರತ-ಆಸೀಸ್​(Australia vs India) ನಡುವಿನ ಹೈವೋಲ್ಟೇಜ್​ ಪಂದ್ಯಕ್ಕೆ ಭಾರೀ ಮಳೆಯಾಗಿ ಪಂದ್ಯ ರದ್ದಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಒಂದೊಮ್ಮೆ ಮಳೆಯಿಂದ ಪಂದ್ಯ ರದ್ದಾದರೆ ಇತ್ತಂಡಗಳಿಗೂ ತಲಾ ಒಂದು ಅಂಕ ನೀಡಲಾಗುತ್ತದೆ. ಪಂದ್ಯ ರದ್ದಾದರೆ ಭಾರತಕ್ಕೆ ಲಾಭವಾಗಲಿದೆ. ಆದರೆ ಆಸೀಸ್​ಗೆ ಇದು ಭಾರೀ ನಷ್ಟವಾಗಲಿದೆ. ಬಾಂಗ್ಲಾ ವಿರುದ್ಧ ಅಫಘಾನಿಸ್ತಾನ ಗೆದ್ದರೆ, ಆಸೀಸ್​ ತಂಡ ಟೂರ್ನಿಯಿಂದ ಅಧಿಕೃತವಾಗಿ ಹೊರಬೀಳಲಿದೆ.

Continue Reading

ಕ್ರೀಡೆ

Rishabh Pant: ರಿಷಭ್​ ಪಂತ್​ಗೆ ಹೊಸ ಹೆಸರಿಟ್ಟ ವಿವಿಯನ್​ ರಿಚರ್ಡ್ಸ್​

Rishabh Pant: ಸೂಪರ್​-8 ಹಂತದ 2 ಪಂದ್ಯಗಳನ್ನು ಗೆದ್ದು ಅಜೇಯವಾಗಿರುವ ಭಾರತ ತಂಡಕ್ಕೆ ರಿಚರ್ಡ್ಸ್ ಶುಭ ಹಾರೈಸಿದರು. ಜತೆಗೆ ಮುಂದಿನ ಪಂದ್ಯಗಳಲ್ಲಿಯೂ ಇದೇ ರೀತಿಯ ಪ್ರದರ್ಶನ ತೋರುವಂತೆ ಸ್ಫೂರ್ತಿಯ ಮಾತುಗಳನ್ನಾಡಿದರು.

VISTARANEWS.COM


on

Rishabh Pant
Koo

ಆ್ಯಂಡಿಗುವಾ: ಶನಿವಾರ ರಾತ್ರಿ ನಡೆದ ಸೂಪರ್​-8 ಪಂದ್ಯದಲ್ಲಿ ಭಾರತ ತಂಡ ಬಾಂಗ್ಲಾ(India vs Bangladesh) ವಿರುದ್ಧ 50 ರನ್​ಗಳ ಭರ್ಜರಿ ಗೆಲುವು ಸಾಧಿಸಿತು. ಈ ಪಂದ್ಯದ ಅತ್ಯುತ್ತಮ ಫೀಲ್ಡಿಂಗ್​ ಪ್ರಶಸ್ತಿಗೆ ನೀಡಲು ವೆಸ್ಟ್ ಇಂಡೀಸ್​ನ ಕ್ರಿಕೆಟ್ ದಂತಕಥೆ ವಿವಿಯನ್​ ರಿಚರ್ಡ್ಸ್(Viv Richards)​ ಅವರು ವಿಶೇಷ ಅತಿಥಿಯಾಗಿ ಡ್ರೆಸ್ಸಿಂಗ್ ರೂಮ್​ಗೆ ಬಂದಿದ್ದರು. ಈ ವೇಳೆ ರಿಷಭ್​ ಪಂತ್​ಗೆ ನೂತನ ಹೆಸರೊಂದನ್ನು ಇಟ್ಟಿದ್ದಾರೆ.

ಅತ್ಯತ್ತಮ ಫೀಲ್ಡಿಂಗ್​ ಅವಾರ್ಡ್​ ಪ್ರಶಸ್ತಿಯನ್ನು ಸೂರ್ಯಕುಮಾರ್​ ಯಾದವ್​ ಪಡೆದುಕೊಂಡರು. ಕಳೆದ ವರ್ಷ ನಡೆದಿದ್ದ ಏಕದಿ ವಿಶ್ವಕಪ್ ಟೂರ್ನಿಯಲ್ಲಿ ಟೀಮ್​ ಇಂಡಿಯಾ ಮ್ಯಾನೆಜ್​ಮೆಂಟ್​ ಆಟಗಾರರಲ್ಲಿ ಹೆಚ್ಚಿನ ಸ್ಫೂರ್ತಿ ತುಂಬವ ನಿಟ್ಟಿನಲ್ಲಿ, ಪಂದ್ಯವೊಂದರಲ್ಲಿ ಉತ್ತಮ ಫೀಲ್ಡಿಂಗ್(Best Fielder Award) ನಡೆಸಿದರೆ ಆತನನ್ನು ಗುರುತಿಸಿ ಚಿನ್ನದ ಪದಕ ನೀಡುವ ಕಾರ್ಯವನ್ನು ಜಾರಿಗೆ ತಂದಿತ್ತು. ಈ ಪ್ರಕ್ರಿಯೆ ಟಿ20 ವಿಶ್ವಕಪ್​ನಲ್ಲಿಯೂ ಮುಂದುವರಿದೆ. ಮೊಹಮ್ಮದ್​ ಸಿರಾಜ್​ ಅವರು ಹಾಲಿ ಆವೃತ್ತಿಯ ಟಿ20 ವಿಶ್ವಕಪ್​ನಲ್ಲಿ ಅತ್ಯತ್ತಮ ಪೀಲ್ಡಿಂಗ್​ಗಾಗಿ 2 ಚಿನ್ನದ ಪದಕ ಜಯಿಸಿದ್ದಾರೆ.

ತಂಡಕ್ಕೆ ಶುಭ ಹಾರೈಸಿದ ರಿಚರ್ಡ್ಸ್


ಸೂಪರ್​-8 ಹಂತದ 2 ಪಂದ್ಯಗಳನ್ನು ಗೆದ್ದು ಅಜೇಯವಾಗಿರುವ ಭಾರತ ತಂಡಕ್ಕೆ ರಿಚರ್ಡ್ಸ್ ಶುಭ ಹಾರೈಸಿದರು. ಜತೆಗೆ ಮುಂದಿನ ಪಂದ್ಯಗಳಲ್ಲಿಯೂ ಇದೇ ರೀತಿಯ ಪ್ರದರ್ಶನ ತೋರುವಂತೆ ಸ್ಫೂರ್ತಿಯ ಮಾತುಗಳನ್ನಾಡಿದರು. ರಿಷಭ್​ ಪಂತ್​ ಅವರನ್ನು ‘ಪಾಕೆಟ್ ರಾಕೆಟ್’ ಎಂದು ಹೊಗಳಿದರು.


ಪಂದ್ಯ ಗೆದ್ದ ಭಾರತ


ಈ ಪಂದ್ಯದಲ್ಲಿ ಟಾಸ್ ಸೋತು ಬ್ಯಾಟಿಂಗ್​ಗೆ ಇಳಿಸಲ್ಪಟ್ಟ ಭಾರತ, ಹಾರ್ದಿಕ್‌ ಪಾಂಡ್ಯ ಅವರ ಅಜೇಯ ಅರ್ಧ ಶತಕದ ನೆರವಿನಿಂದ 5 ವಿಕೆಟಿಗೆ 196 ರನ್‌ ಪೇರಿಸಿತು. ದೊಡ್ಡ ಗುರಿ ಬೆನ್ನಟ್ಟಿದ ಬಾಂಗ್ಲಾದೇಶ 20 ಓವರ್ ಗಳಲ್ಲಿ 8 ವಿಕೆಟ್ ನಷ್ಟಕ್ಕೆ 146 ರನ್ ಗಳಿಸಲಷ್ಟೇ ಶಕ್ತವಾಯಿತು. ಸತತ 2 ಸೋಲು ಕಂಡ ಬಾಂಗ್ಲಾದೇಶದ ಸೆಮಿಫೈನಲ್​ ಹಾದಿ ಬಹುತೇಕ ಅಂತ್ಯ ಕಂಡಿತು.

ಇದನ್ನೂ ಓದಿ IND vs AUS Super 8: ಆಸೀಸ್​ ವಿರುದ್ಧ ಭಾರತಕ್ಕೆ ಸೋಲು ಖಚಿತ ಎಂದ ಅಭಿಮಾನಿಗಳು; ಕಾರಣವೇನು?

ಹಾರ್ದಿಕ್‌ ಪಾಂಡ್ಯ ಬ್ಯಾಟಿಂಗ್​ ಜತೆಗೆ ಬೌಲಿಂಗ್​ನಲ್ಲಿಯೂ ಶ್ರೇಷ್ಠ ಪ್ರದರ್ಶನ ತೋರಿದರು. ಡೆತ್‌ ಓವರ್‌ಗಳಲ್ಲಿ ಸಿಡಿದು ನಿಂತ ಪಾಂಡ್ಯ 27 ಎಸೆತಗಳಲ್ಲಿ ಅರ್ಧಶತಕ ಬಾರಿಸಿದರು. ಅವರ ಈ ಬ್ಯಾಟಿಂಗ್​ ಇನಿಂಗ್ಸ್​ನಲ್ಲಿ 4 ಬೌಂಡರಿ ಹಾಗೂ 3 ಸಿಕ್ಸರ್‌ ಒಳಗೊಂಡಿತು.

ದಾಖಲೆ ಬರೆದ ಕೊಹ್ಲಿ


ಕಳೆದ ಮೂರು ಪಂದ್ಯಗಳಲ್ಲಿ ಬ್ಯಾಟಿಂಗ್​ ವೈಫಲ್ಯ ಕಂಡಿದ್ದ ಕೊಹ್ಲಿ ಬಾಂಗ್ಲಾ ವಿರುದ್ಧ ತುಸು ಚೇತರಿಕೆಯ ಬ್ಯಾಟಿಂಗ್​ ಪ್ರದರ್ಶನ ತೋರಿದರು. ಜತೆಗೆ ದಾಖಲೆಯೊಂದನ್ನು ಕೂಡ ತಮ್ಮ ಹೆಸರಿಗೆ ಬರೆದರು. 37 ರನ್‌ ಮಾಡಿದ ಕೊಹ್ಲಿ ವಿಶ್ವಕಪ್​ ಟೂರ್ನಿಯಲ್ಲಿ (ಟಿ20 ಮತ್ತು ಏಕದಿನ) 3 ಸಾವಿರ ರನ್‌ ಪೂರೈಸಿದ ಮೊದಲ ಕ್ರಿಕೆಟಿಗನೆನಿಸಿದರು. ಕಳೆದ ಹಲವು ವರ್ಷಗಳಿಂದ ವಿರಾಟ್ ಕೊಹ್ಲಿ ಐಸಿಸಿ ಪಂದ್ಯಾವಳಿಗಳಲ್ಲಿ ಭಾರತ ತಂಡಕ್ಕಾಗಿ ಅದ್ಭುತ ಪ್ರದರ್ಶನ ನೀಡಿದ್ದಾರೆ. ಅವರು ಆಟದ ಎಲ್ಲಾ ಮೂರು ಸ್ವರೂಪಗಳಲ್ಲಿ ಭಾರತ ತಂಡದ ಬೆನ್ನೆಲುಬಾಗಿದ್ದಾರೆ.

Continue Reading

ಕ್ರಿಕೆಟ್

IND vs AUS Super 8: ಆಸೀಸ್​ ವಿರುದ್ಧ ಭಾರತಕ್ಕೆ ಸೋಲು ಖಚಿತ ಎಂದ ಅಭಿಮಾನಿಗಳು; ಕಾರಣವೇನು?

IND vs AUS Super 8: ಭಾರತ ಮತ್ತು ಆಸ್ಟ್ರೇಲಿಯಾ ಇದುವರೆಗೆ ಟಿ20 ವಿಶ್ವಕಪ್​ ಟೂರ್ನಿಯಲ್ಲಿ ಒಟ್ಟು 5 ಬಾರಿ ಮುಖಾಮುಖಿಯಾಗಿವೆ. ಈ ಪೈಕಿ ಭಾರತ 3 ಪಂದ್ಯ ಗೆದ್ದರೆ, ಆಸೀಸ್​ 2 ಪಂದ್ಯದಲ್ಲಿ ಗೆಲುವು ಸಾಧಿಸಿದೆ. ಕಳೆದ 2 ಬಾರಿಯ ಮುಖಾಮುಖಿಯಲ್ಲಿಯೂ ಭಾರತವೇ ಗೆದ್ದು ಬೀಗಿದೆ.

VISTARANEWS.COM


on

IND vs AUS Super 8
Koo

ಸೇಂಟ್ ಲೂಸಿಯಾ: ಹಾಲಿ ಆವೃತ್ತಿಯ ಟಿ20 ವಿಶ್ವಕಪ್​ನಲ್ಲಿ(T20 World Cup 2024) ಟೀಮ್​ ಇಂಡಿಯಾ(Team India) ಆಡಿದ ಎಲ್ಲ ಪಂದ್ಯಗಳನ್ನು ಗೆದ್ದು ಸೆಮಿಫೈನಲ್​ ಸಮೀಪಕ್ಕೆ ಬಂದು ನಿಂತಿದೆ. ನಾಳೆ(ಸೋಮವಾರ) ನಡೆಯುವ ಅಂತಿಮ ಸೂಪರ್​-8(IND vs AUS Super 8) ಪಂದ್ಯದಲ್ಲಿ ಆಸ್ಟ್ರೇಲಿಯಾ(IND vs AUS) ವಿರುದ್ಧ ಕಣಕ್ಕಿಳಿಯಲಿದೆ. ಗೆದ್ದರೆ ಭಾರತದ ಸೆಮಿ ಫೈನಲ್​ ಟಿಕೆಟ್​ ಅಧಿಕೃತವಾಗಲಿದೆ. ಅತ್ತ ಸೆಮಿ ರೇಸ್​ ಆಸೆ ಜೀವಂತವಿರಿಸಿಕೊಳ್ಳಬೇಕಿದ್ದರೆ, ಆಸೀಸ್​ ಪಾಲಿಗೆ ಇದು ಮಾಡು ಇಲ್ಲವೇ ಮಡಿ ಪಂದ್ಯವಾಗಿದೆ. ಪಂದ್ಯಕ್ಕೂ ಮುನ್ನ ಭಾರತೀಯ ಅಭಿಮಾನಿಗಳಿಗೆ ನಡುವೊಂದು ಶುರುವಾಗಿದೆ. ಇದಕ್ಕೆ ಕಾರಣ ಈ ಪಂದ್ಯಕ್ಕೆ ಆಯ್ಕೆಯಾಗಿರುವ ಅಂಪೈರ್​.

ಭಾರತದ ಪಾಲಿಗೆ ಐರನ್ ಲೆಗ್ ಎಂದು ಕರೆಯಲ್ಪಡುವ ರಿಚರ್ಡ್‌ ಕೆಟಲ್‌ಬರೋ(Richard Kettleborough) ಈ ಪಂದ್ಯಕ್ಕೆ ಅಂಪೈರ್​ ಆಗಿ ಕಾರ್ಯ ನಿರ್ವಹಿಸಲಿದ್ದಾರೆ. ಕಳೆದ ವರ್ಷ ನಡೆದಿದ್ದ ಏಕದಿನ ವಿಶ್ವಕಪ್​ ಫೈನಲ್​ ಪಂದ್ಯಕ್ಕೆ ಕೆಟಲ್‌ಬರೋ ಅಂಪೈರ್​ ಎಂದು ತಿಳಿದಾಗಲೇ ಎಲ್ಲ ಭಾರತೀಯ ಕ್ರಿಕೆಟ್​ ಅಭಿಮಾನಿಗಳು ಕೂಡ ಈ ಬಾರಿ ಭಾರತಕ್ಕೆ ಸೋಲು ಖಚಿತ ಎಂದೇ ಹೇಳಿದ್ದರು. ಅದರಂತೆ ಈ ಭವಿಷ್ಯ ಕೂಡ ನಿಜವಾಗಿತ್ತು.

ರಿಚರ್ಡ್‌ ಕೆಟಲ್‌ಬರೋ ಕಾರ್ಯನಿರ್ವಹಿಸಿದ ಎಲ್ಲ ಮಹತ್ವದ ಪಂದ್ಯದಲ್ಲಿಯೂ ಭಾರತ ತಂಡ ಸೋಲುಕಂಡಿತ್ತು. ಕಳೆದ ಬಾರಿಯ ಏಕದಿನ ವಿಶ್ವಕಪ್​ ಫೈನಲ್​ ಪಂದ್ಯದಲ್ಲಿ ಅವರು ಅಂಪೈರ್​ ಆದಾಗ ಅಭಿಮಾನಿಗಳು ಭಾರತಕ್ಕೆ ಸೋಲು ಖಚಿತ ಎಂದು ಹೇಳಿದ್ದರು. ಈ ಭವಿಷ್ಯ ಕೂಡ ನಿಜವಾಗಿತ್ತು. ಭಾರತ ಫೈನಲ್​ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ಸೋಲು ಕಂಡಿತ್ತು. ಲೀಗ್​ನಿಂದ ಸೆಮಿಫೈನಲ್​ ತನಕ ಆಡಿದ ಎಲ್ಲ ಪಂದ್ಯಗಳಲ್ಲಿಯೂ ಭಾರತ ಸಾಧಿಸಿದ ಗೆಲುವು ಫೈನಲ್​ನಲ್ಲಿ ಸೋಲು ಕಾಣುವ ಮೂಲಕ ನೀರಲ್ಲಿ ಹೋಮವಾಗಿತ್ತು. ಇದೀಗ ಮತ್ತೆ ಭಾರದ ಪಾಲಿಗೆ ಈ ಅಂಪೈರ್​ ಅಡ್ಡಗಾಲಿಕ್ಕುವ ಸಾಧ್ಯತೆ ಕಂಡು ಬಂದಿದೆ.

ಇದನ್ನೂ ಓದಿ IND vs AUS: ನಾಳೆ ನಡೆಯುವ ಭಾರತ-ಆಸೀಸ್​ ಸೂಪರ್​-8 ಪಂದ್ಯಕ್ಕೆ ಭಾರೀ ಮಳೆ ಎಚ್ಚರಿಕೆ

ಎಲ್ಲ ಪಂದ್ಯದಲ್ಲಿಯೂ ಸೋಲು


2014 ರಿಂದ ರಿಚರ್ಡ್‌ ಕೆಟಲ್‌ಬರೋ ಅಂಪೈರಿಂಗ್‌ ಮಾಡಿದ ಎಲ್ಲ ಪ್ರಮುಖ ಪಂದ್ಯಗಳಲ್ಲಿಯೂ ಟೀಮ್‌ ಇಂಡಿಯಾ ಸೋಲು ಕಂಡಿದೆ. 2014ರ ಟಿ20 ವಿಶ್ವ ಕಪ್ ಫೈನಲ್, 2015ರ ಏಕದಿನ ವಿಶ್ವ ಕಪ್ ಸೆಮಿಫೈನಲ್, 2016ರ ಟಿ20 ವಿಶ್ವ ಕಪ್ ಸೆಮಿಫೈನಲ್, 2017ರ ಚಾಂಪಿಯನ್ಸ್ ಟ್ರೋಫಿ ಫೈನಲ್, 2019ರ ಏಕದಿನ ವಿಶ್ವ ಕಪ್ ಸೆಮಿಫೈನಲ್, 2021ರ ಟೆಸ್ಟ್ ವಿಶ್ವ ಚಾಂಪಿಯನ್‌ಶಿಪ್ ಫೈನಲ್, 2023ರ ಏಕದಿನ ವಿಶ್ವಕಪ್​ ಫೈನಲ್​ ಪಂದ್ಯದಲ್ಲಿ ಭಾರತ ಸೋತಿತ್ತು. ಇದೀಗ ನಾಳೆ ನಡೆಯುವ ಪಂದ್ಯದಲ್ಲಿಯೂ ಭಾರತ ಸೋಲು ಕಾಣುವುದು ಖಚಿತ ಎನ್ನುತ್ತಿದ್ದಾರೆ ಅಭಿಮಾನಿಗಳು.

ವಿಶ್ವಕಪ್​ ಮುಖಾಮುಖಿ


ಭಾರತ ಮತ್ತು ಆಸ್ಟ್ರೇಲಿಯಾ ಇದುವರೆಗೆ ಟಿ20 ವಿಶ್ವಕಪ್​ ಟೂರ್ನಿಯಲ್ಲಿ ಒಟ್ಟು 5 ಬಾರಿ ಮುಖಾಮುಖಿಯಾಗಿವೆ. ಈ ಪೈಕಿ ಭಾರತ 3 ಪಂದ್ಯ ಗೆದ್ದರೆ, ಆಸೀಸ್​ 2 ಪಂದ್ಯದಲ್ಲಿ ಗೆಲುವು ಸಾಧಿಸಿದೆ. ಕಳೆದ 2 ಬಾರಿಯ ಮುಖಾಮುಖಿಯಲ್ಲಿಯೂ ಭಾರತವೇ ಗೆದ್ದು ಬೀಗಿದೆ. ಹೀಗಾಗಿ ಭಾರತ ಬಲಿಷ್ಠ ಎನ್ನಬಹುದು. ಒಟ್ಟಾರೆಯಾಗಿ ಟಿ20 ಕ್ರಿಕೆಟ್​ನಲ್ಲಿ ಇತ್ತಂಡಗಳು 31 ಪಂದ್ಯಗಳಲ್ಲಿ ಆಡಿವೆ. ಇದರಲ್ಲಿ ಭಾರತ 19 ಪಂದ್ಯ ಮತ್ತು ಆಸ್ಟ್ರೇಲಿಯ 17 ಪಂದ್ಯಗಳನ್ನು ಗೆದ್ದಿದೆ. ಒಂದು ಪಂದ್ಯ ಫಲಿತಾಂಶ ಕಂಡಿಲ್ಲ.

Continue Reading
Advertisement
Surrogacy Leaves
ಪ್ರಮುಖ ಸುದ್ದಿ1 hour ago

Surrogacy Leaves: ಬಾಡಿಗೆ ತಾಯ್ತನದ ನಿಯಮ ಬದಲಿಸಿದ ಕೇಂದ್ರ; ಇನ್ನು ಸಿಗಲಿದೆ 6 ತಿಂಗಳು ರಜೆ!

T20 world Cup 2024
ಕ್ರೀಡೆ2 hours ago

T20 World Cup 2024 : ಇಂಗ್ಲೆಂಡ್ ವಿರುದ್ಧ ಯುಎಸ್​​ಎ ತಂಡಕ್ಕೆ 10 ವಿಕೆಟ್​ ಹೀನಾಯ ಸೋಲು

SBI
ದೇಶ2 hours ago

SBI: ನಿಮ್ಮೂರಿಗೂ ಬರಲಿದೆ ಎಸ್‌ಬಿಐ ಹೊಸ ಬ್ರ್ಯಾಂಚ್;‌ 400 ಶಾಖೆ ತೆರೆಯಲು ಬ್ಯಾಂಕ್‌ ನಿರ್ಧಾರ

IND vs SA
ಪ್ರಮುಖ ಸುದ್ದಿ2 hours ago

IND VS SA : ದಕ್ಷಿಣ ಆಫ್ರಿಕಾ ವಿರುದ್ಧ 3-0 ಕ್ಲೀನ್ ಸ್ವೀಪ್ ಸಾಧನೆ ಮಾಡಿದ ಭಾರತದ ವನಿತೆಯರ ಕ್ರಿಕೆಟ್ ತಂಡ

T20 world cup 2024
ಪ್ರಮುಖ ಸುದ್ದಿ3 hours ago

T20 World Cup 2024 : ಅಮೆರಿಕ ವಿರುದ್ಧವೂ ಸೋತ್ರಲ್ಲೋ… ಪಾಕ್​ ಪಾರ್ಲಿಮೆಂಟ್​ನಲ್ಲೂ ವಿಶ್ವ ಕಪ್ ಸೋಲಿನ ಚರ್ಚೆ!

Rahul Gandhi
ದೇಶ3 hours ago

Rahul Gandhi: ಎಲ್ಲರೂ ಬೈಯುವಾಗ ನೀವು ಪ್ರೀತಿ ಕೊಟ್ರಿ; ವಯನಾಡು ಜನತೆಗೆ ರಾಹುಲ್‌ ಗಾಂಧಿ ಭಾವುಕ ಪತ್ರ

Babar Azam
ಪ್ರಮುಖ ಸುದ್ದಿ4 hours ago

Babar Azam: ಮ್ಯಾಚ್​ ಫಿಕ್ಸಿಂಗ್ ಆರೋಪ ಮಾಡಿದವನ ಮೇಲೆ 1 ಕೋಟಿ ರೂ. ಮಾನನಷ್ಠ ಮೊಕದ್ದಮೆ ಹೂಡಿದ ಬಾಬರ್ ಅಜಮ್​

Abbi Falls
ಕರ್ನಾಟಕ4 hours ago

Abbi Falls: ಅಬ್ಬಿ ಫಾಲ್ಸ್ ಬಳಿ ಸೆಲ್ಫಿ ಕ್ರೇಜ್‌ಗೆ ಯುವಕ ಬಲಿ; ಕೊಡಗಿನಲ್ಲಿ ಮತ್ತೆ ಪ್ರವಾಸಿಗರ ಮೇಲೆ ಹಲ್ಲೆ

Shakib Al Hasan
ಪ್ರಮುಖ ಸುದ್ದಿ4 hours ago

Shakib Al Hasan : ನಿವೃತ್ತಿಯಾಗು ಶಕಿಬ್…, ಬಾಂಗ್ಲಾ ಮಾಜಿ ನಾಯಕನ ಮೇಲೆ ಮತ್ತೆ ಗುಡುಗಿದ ಸೆಹ್ವಾಗ್​

Vashu Bhagnani
ಸಿನಿಮಾ4 hours ago

Vashu Bhagnani: ‘ಬೆಲ್ ಬಾಟಮ್’ ಚಿತ್ರದ ನಿರ್ಮಾಪಕ ದಿವಾಳಿ; ಕಚೇರಿ ಕಟ್ಟಡ ಸೇಲ್!

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka weather Forecast
ಮಳೆ2 days ago

Karnataka Weather : ರಭಸವಾಗಿ ಹರಿಯುವ ನೀರಲ್ಲಿ ಸಿಲುಕಿದ ಬೊಲೆರೋ; ಬಿರುಗಾಳಿ ಸಹಿತ ಮಳೆ ಎಚ್ಚರಿಕೆ

International Yoga Day 2024
ಕರ್ನಾಟಕ3 days ago

International Yoga Day 2024: ಎಲ್ಲೆಲ್ಲೂ ಯೋಗಾಯೋಗ‌ಕ್ಕೆ ಮಂಡಿಯೂರಿದ ಜನತೆ

Karnataka Weather Forecast
ಮಳೆ3 days ago

Karnataka Weather : ಬಾಗಲಕೋಟೆ, ಬೆಂಗಳೂರು ಸೇರಿ ಚಿಕ್ಕಮಗಳೂರಲ್ಲಿ ಸುರಿದ ಗಾಳಿ ಸಹಿತ ಮಳೆ

Actor Darshan
ಮೈಸೂರು6 days ago

Actor Darshan : ಕೊಲೆ ಕೇಸ್‌ ಬೆನ್ನಲ್ಲೇ ನಟ ದರ್ಶನ್‌ ಸೇರಿ ಪತ್ನಿ ವಿಜಯಲಕ್ಷ್ಮಿಗೆ ಬಾರ್ ಹೆಡೆಡ್ ಗೂಸ್ ಸಂಕಷ್ಟ!

Bakrid 2024
ಬೆಂಗಳೂರು7 days ago

Bakrid 2024 : ಮತ್ತೊಂದು ಧರ್ಮವನ್ನೂ ಪ್ರೀತಿಸಿ; ಬಕ್ರೀದ್‌ ಪ್ರಾರ್ಥನೆಯಲ್ಲಿ ಸಿಎಂ ಸಿದ್ದರಾಮಯ್ಯ ಕರೆ

Renukaswamy murder case The location of the accused is complete
ಸಿನಿಮಾ1 week ago

Renuka Swamy murder : ಭೀಕರವಾಗಿ ಕೊಂದರೂ ಆರೋಪಿಗಳಿಗೆ ಕಾಡುತ್ತಿಲ್ವಾ ಪಾಪಪ್ರಜ್ಞೆ? ನಗುತ್ತಲೇ ಹೊರಬಂದ ಪವಿತ್ರಾ ಗೌಡ, ಪವನ್‌

Renuka swamy murder
ಚಿತ್ರದುರ್ಗ1 week ago

Renuka swamy Murder : ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಾಳೆಹೊನ್ನೂರು ಶ್ರೀಗಳು

Vijayanagara News
ವಿಜಯನಗರ1 week ago

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

Actor Darshan
ಯಾದಗಿರಿ1 week ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

Karnataka Weather Forecast
ಮಳೆ1 week ago

Karnataka Weather : ಕರಾವಳಿ, ಉತ್ತರ ಒಳನಾಡಿನಲ್ಲಿ ವರುಣಾರ್ಭಟ; ನಾಳೆಯು ಹಲವೆಡೆ ಸಿಕ್ಕಾಪಟ್ಟೆ ಮಳೆ

ಟ್ರೆಂಡಿಂಗ್‌