Elephant attack | ಹಾಸನದಲ್ಲಿ ಆನೆ ದಾಳಿ: ದೇವರ ದರ್ಶನ ಮಾಡಿ ಬರುತ್ತಿದ್ದ ಯುವಕ ದಾರುಣ ಮೃತ್ಯು - Vistara News

ಕರ್ನಾಟಕ

Elephant attack | ಹಾಸನದಲ್ಲಿ ಆನೆ ದಾಳಿ: ದೇವರ ದರ್ಶನ ಮಾಡಿ ಬರುತ್ತಿದ್ದ ಯುವಕ ದಾರುಣ ಮೃತ್ಯು

ಹಾಸನದಲ್ಲಿ ಆನೆಗಳ ದಾಳಿ ಮುಂದುವರಿದಿದೆ (Elephant attack). ಸಕಲೇಶಪುರ ತಾಲೂಕಿನ ಹೆಬ್ಬನಹಳ್ಳಿಯಲ್ಲಿ ಯುವಕನೊಬ್ಬ ಪ್ರಾಣ ಕಳೆದುಕೊಂಡಿದ್ದಾನೆ. ನಿರಂತರ ಆನೆ ದಾಳಿಗೆ ಜನ ಸಿಟ್ಟಿಗೆದ್ದಿದ್ದಾರೆ.

VISTARANEWS.COM


on

ane dali
ಸಕಲೇಶಪುರ ತಾಲೂಕಿನ ಹೆಬ್ಬನಹಳ್ಳಿಯಲ್ಲಿ ಆನೆ ದಾಳಿ ನಡೆದ ಜಾಗದಲ್ಲಿ ಜನ ಸೇರಿರುವುದು.
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಹಾಸನ: ಹಾಸನ ಜಿಲ್ಲೆಯಲ್ಲಿ ಆನೆಗಳ ಮಾರಣಾಂತಿಕ ದಾಳಿ (Elephant attack) ಮುಂದುವರಿದಿದೆ. ಮಂಗಳವಾರ ಮುಂಜಾನೆ ಆನೆಯೊಂದರ ದಾಳಿಗೆ ಯುವಕ ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾನೆ. ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಹೆಬ್ಬನಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದ್ದು, ಮೃತಪಟ್ಟ ಯುವಕನನ್ನು ಮನು (34) ಎಂದು ಗುರುತಿಸಲಾಗಿದೆ.

ಮಂಗಳವಾರ ಬೆಳಗ್ಗೆ ದೇವಾಲಯದಲ್ಲಿ ಪೂಜೆ ಮುಗಿಸಿ ವಾಪಸಾಗುವ ವೇಳೆ ಈ ದಾರಿ ಮಧ್ಯೆ ಆನೆ ದಾಳಿ ಮಾಡಿದ್ದು, ಯಾವ ಕಡೆಗೂ ಓಡಿ ಹೋಗಲು ಸಾಧ್ಯವಾಗದೆ ನಡು ರಸ್ತೆಯಲ್ಲಿ ಬಿದ್ದಿದ್ದಾನೆ. ಆನೆ ಯುವಕನ ತಲೆಗೇ ಕಾಲಿಟ್ಟು ಕೊಂದು ಹಾಕಿದಂತೆ ಮೇಲ್ನೋಟಕ್ಕೆ ಕಾಣಿಸುತ್ತಿದೆ.

ಗ್ರಾಮಸ್ಥರ ಆಕ್ರೋಶ
ಹೆಬ್ಬನಹಳ್ಳಿ ಗ್ರಾಮಕ್ಕೆ ಆನೆಗಳ ದಾಳಿ ನಿರಂತರವಾಗಿದ್ದು, ಈ ಗ್ರಾಮದಲ್ಲಿ ಇದುವರೆಗೆ ೮೭ ಮಂದಿ ಪ್ರಾಣ ಕಳೆದುಕೊಂಡಿದ್ದಾರೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ. ಸರಕಾರ ಮತ್ತು ಅಧಿಕಾರಿಗಳ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಅವರು ಮುಖ್ಯಮಂತ್ರಿಗಳು, ಜಿಲ್ಲಾ ಉಸ್ತುವಾರಿ ಸಚಿವರು ಸ್ಥಳಕ್ಕೆ ಬಾರದೆ ಮೃತದೇಹ ಎತ್ತುವುದಿಲ್ಲ ಎಂದು ಘೋಷಿಸಿದ್ದಾರೆ.

ನಾವು ಕಾಡಿನಲ್ಲಿ ಮನೆ ಮಾಡಿಕೊಂಡಿಲ್ಲ. ಕಾಡಿನಲ್ಲಿ ನಡೆದಿರುವ ಘಟನೆಯೂ ಇದಲ್ಲ. ನಮ್ಮ ಹಿಡುವಳಿ ಭೂಮಿಗೆ ನುಗ್ಗಿ ಈ ಕೃತ್ಯ ನಡೆಸಿದೆ. ನಮಗೆ ರಕ್ಷಣೆ ಕೊಡಬೇಕು ಎಂದು ಅವರು ಆಗ್ರಹಿಸಿದ್ದಾರೆ. ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ದೌಡಾಯಿಸಿದ್ದಾರೆ.

ನಿನ್ನೆ ಚಿರತೆ ದಾಳಿಗೆ ಯುವಕ ಬಲಿ
ಮೈಸೂರು ಜಿಲ್ಲೆಯ ತಿ.ನರಸೀಪುರ ತಾಲೂಕಿನ ಉಕ್ಕಲಗೆರೆ ಗ್ರಾಮದಲ್ಲಿ ಸೋಮವಾರ ಚಿರತೆ ದಾಳಿಗೆ ಮಂಜುನಾಥ್ (20) ಎಂಬ ವಿದ್ಯಾರ್ಥಿ ಪ್ರಾಣ ಕಳೆದುಕೊಂಡಿದ್ದ. ಮೈಸೂರಿನ ವಿದ್ಯಾವರ್ಧಕ ಕಾಲೇಜಿನಲ್ಲಿ ಪದವಿ ವ್ಯಾಸಂಗ ಮಾಡುತ್ತಿದ್ದ ಮಂಜುನಾಥ್ ಕಾರ್ತಿಕ ಸೋಮವಾರದ ಹಿನ್ನೆಲೆಯಲ್ಲಿ ಮಲ್ಲಿಕಾರ್ಜುನ ಸ್ವಾಮಿ ದೇವಸ್ಥಾನಕ್ಕೆ ಹೋಗಿದ್ದ. ಹೋಗುವಾಗಲೋ, ಬರುವಾಗಲೋ ಚಿರತೆ ಅವನ ಮೇಲೆ ದಾಳಿ ಮಾಡಿದ್ದು, ಯುವಕ ಸ್ಥಳದಲ್ಲೇ ಪ್ರಾಣ ಬಿಟ್ಟಿದ್ದಾನೆ.

ಇದನ್ನೂ ಓದಿ | Leopard attack | ದೇವಸ್ಥಾನಕ್ಕೆ ಹೋಗಿದ್ದ ಪದವಿ ವಿದ್ಯಾರ್ಥಿ ಮೇಲೆ ಚಿರತೆ ದಾಳಿ, ಯುವಕ ಸ್ಥಳದಲ್ಲೇ ಬಲಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಉತ್ತರ ಕನ್ನಡ

Lokayukta Raid: ಹೊನ್ನಾವರ ಪ.ಪಂ ʼಲಂಚ ಪ್ರವೀಣʼ ಮುಖ್ಯ ಕಾರ್ಯನಿರ್ವಾಹಕ ಎಂಜಿನಿಯರ್ ಲೋಕಾಯುಕ್ತ ಬಲೆಗೆ

Lokayukta Raid: ಹೊನ್ನಾವರದ ಪಟ್ಟಣ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಎಂಜಿನಿಯರ್ ಪ್ರವೀಣ ಕುಮಾರ್‌, ಖಾತಾ ಬದಲಾವಣೆಗಾಗಿ ವ್ಯಕ್ತಿಯೊಬ್ಬರಿಂದ 60 ಸಾವಿರ ರೂ. ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದಿದ್ದಾರೆ. ಹೊನ್ನಾವರ ಪಟ್ಟಣ ಪಂಚಾಯಿತಿಯಲ್ಲಿ ಭಾರೀ ಪ್ರಮಾಣದ ಲಂಚದ ಹಾವಳಿ ನಡೆಯುತ್ತಿರುವ ಬಗ್ಗೆ ಸ್ಥಳೀಯ ಜನ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

VISTARANEWS.COM


on

Lokayukta Raid Honnavara Pattana Panchayat Chief Executive Engineer caught by lokayukta while recieving money
ಹೊನ್ನಾವರದ ಪಟ್ಟಣ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಎಂಜಿನಿಯರ್ ಪ್ರವೀಣ ಕುಮಾರ್‌.
Koo

ಕಾರವಾರ: ಹೊನ್ನಾವರದ ಪಟ್ಟಣ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಎಂಜಿನಿಯರ್ ಖಾತಾ ಬದಲಾವಣೆಗಾಗಿ ವ್ಯಕ್ತಿಯೊಬ್ಬರಿಂದ 60 ಸಾವಿರ ರೂ. ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಅಧಿಕಾರಿಗಳ (Lokayukta Raid) ಬಲೆಗೆ ಬಿದ್ದಿದ್ದಾರೆ.

ಇದನ್ನೂ ಓದಿ: Rain News: ಚಿಕ್ಕಮಗಳೂರು, ಕೊಡಗಿನಲ್ಲಿ ಮಳೆ ಅಬ್ಬರ; ವಿದ್ಯುತ್‌ ಕಣ್ಣಾಮುಚ್ಚಾಲೆಯಿಂದ ಜನ ಪರದಾಟ

ಪ್ರವೀಣ ಕುಮಾರ್‌ ಲಂಚ ಪಡೆಯುತ್ತಿದ್ದ ವೇಳೆ ಸಿಕ್ಕಿಬಿದ್ದ ಅಧಿಕಾರಿ. ಪ್ರವೀಣ ಕುಮಾರ್‌ ಅವರು ಚಂದ್ರಹಾಸ ಎಂಬುವವರ ಬಳಿ ಜಮೀನಿಗೆ ಸಂಬಂಧಿಸಿ A ಖಾತಾ ಬದಲಾವಣೆಗಾಗಿ 2 ಲಕ್ಷಕ್ಕೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ. ಮೊದಲ ಹಂತವಾಗಿ ಚಂದ್ರಹಾಸ ಅವರು ಇಂದು 60 ಸಾವಿರ ರೂ. ನಗದು ಕೊಡುತ್ತಿದ್ದ ವೇಳೆ, ಲೋಕಾಯುಕ್ತ ಎಸ್‌ಪಿ ಕುಮಾರ ಚಂದ್ ನೇತೃತ್ವದಲ್ಲಿ ನಡೆದ ದಾಳಿಯಲ್ಲಿ ಸಿಕ್ಕಿಬಿದ್ದಿದ್ದಾರೆ. ಹೊನ್ನಾವರ ಪಟ್ಟಣ ಪಂಚಾಯಿತಿಯಲ್ಲಿ ಈ ಸಂಬಂಧ ಅಧಿಕಾರಿಗಳು ದಾಖಲೆಗಳ‌ ಪರಿಶೀಲನೆ ನಡೆಸಿದ್ದಾರೆ.

ಇದನ್ನೂ ಓದಿ: Bridge Collapse: ಬಿಹಾರದಲ್ಲಿ ಮತ್ತೆರಡು ಸೇತುವೆ ಕುಸಿತ; 15 ದಿನಗಳಲ್ಲಿ ಇದು 7ನೇ ಪ್ರಕರಣ!

ಕಾರವಾರ ಲೋಕಾಯುಕ್ತ ಎಸ್ಪಿ ಅವರ ಮಾರ್ಗದರ್ಶನದಲ್ಲಿ ಡಿವೈಎಸ್ಪಿ ವಿನಾಯಕ ಬಿಲ್ಲವ ಹಾಗೂ ಸಿಬ್ಬಂದಿ ತಂಡ ದಾಳಿ ನಡೆಸಿ ವಿಚಾರಣೆ ನಡೆಸುತ್ತಿದ್ದಾರೆ.

Continue Reading

ಪ್ರಮುಖ ಸುದ್ದಿ

CM Siddaramaiah: ಪ್ರಧಾನಮಂತ್ರಿ ಆವಾಸ್‌ ಯೋಜನೆ; ಅಪೂರ್ಣ ಮನೆಗಳ ಕಾಮಗಾರಿ ಪೂರ್ಣಗೊಳಿಸಲು ಸಿಎಂ ಸೂಚನೆ

CM Siddaramaiah: ಪ್ರಧಾನಮಂತ್ರಿ ಆವಾಸ್‌ ಯೋಜನೆ ಅಡಿ ಈಗಾಗಲೇ ಪ್ರಾರಂಭವಾಗಿರುವ ಮನೆಗಳ ಕಾಮಗಾರಿಯನ್ನು ಆದ್ಯತೆಯ ಮೇರೆಗೆ ಪೂರ್ಣಗೊಳಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದ್ದಾರೆ. ಕೊಳಚೆ ನಿರ್ಮೂಲನೆ ಮಂಡಳಿ ಅಡಿಯಲ್ಲಿ 82 ಸಾವಿರ ಮನೆಗಳು, ರಾಜೀವ್‌ ಗಾಂಧಿ ವಸತಿ ನಿಗಮ ಅಡಿಯಲ್ಲಿ 47800 ಮನೆಗಳು ಒಟ್ಟು 1.30 ಲಕ್ಷ ಮನೆಗಳು ನಿರ್ಮಾಣದ ವಿವಿಧ ಹಂತಗಳಲ್ಲಿದ್ದು, ಅವುಗಳ ನಿರ್ಮಾಣ ಕಾರ್ಯವನ್ನು ಹಂತ ಹಂತವಾಗಿ ಪೂರ್ಣಗೊಳಿಸಲು ಆದ್ಯತೆ ನೀಡುವಂತೆ ತಿಳಿಸಿದ್ದಾರೆ.

VISTARANEWS.COM


on

Pradhan Mantri Awas Yojana CM Siddaramaiah instructs to complete work on incomplete houses on priority
Koo

ಬೆಂಗಳೂರು: ಪ್ರಧಾನಮಂತ್ರಿ ಆವಾಸ್‌ ಯೋಜನೆ ಅಡಿ ಈಗಾಗಲೇ ಪ್ರಾರಂಭವಾಗಿರುವ ಮನೆಗಳ ಕಾಮಗಾರಿಯನ್ನು ಆದ್ಯತೆಯ ಮೇರೆಗೆ ಪೂರ್ಣಗೊಳಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಸೂಚಿಸಿದ್ದಾರೆ.

ಕೃಷ್ಣಾದಲ್ಲಿ ಬುಧವಾರ ವಸತಿ ಇಲಾಖೆಯ ವಿವಿಧ ಯೋಜನೆಗಳ ಪ್ರಗತಿ ಪರಿಶೀಲನೆ ನಡೆಸಿದ ಅವರು, ಕೊಳಚೆ ನಿರ್ಮೂಲನೆ ಮಂಡಳಿ ಅಡಿಯಲ್ಲಿ 82 ಸಾವಿರ ಮನೆಗಳು, ರಾಜೀವ್‌ ಗಾಂಧಿ ವಸತಿ ನಿಗಮ ಅಡಿಯಲ್ಲಿ 47800 ಮನೆಗಳು ಒಟ್ಟು 1.30 ಲಕ್ಷ ಮನೆಗಳು ನಿರ್ಮಾಣದ ವಿವಿಧ ಹಂತಗಳಲ್ಲಿದ್ದು, ಅವುಗಳ ನಿರ್ಮಾಣ ಕಾರ್ಯವನ್ನು ಹಂತ ಹಂತವಾಗಿ ಪೂರ್ಣಗೊಳಿಸಲು ಆದ್ಯತೆ ನೀಡುವಂತೆ ಮುಖ್ಯಮಂತ್ರಿಗಳು ತಿಳಿಸಿದರು.

ಪ್ರತಿ ಮನೆಯ ನಿರ್ಮಾಣದ ಘಟಕ ವೆಚ್ಚ 6 ರಿಂದ 7.5 ಲಕ್ಷಗಳಾಗಿದ್ದು ಕೇಂದ್ರ ಮತ್ತು ರಾಜ್ಯ ಸರ್ಕಾರದ ಸಹಾಯಧನವನ್ನು ಹೊರತುಪಡಿಸಿ, ಬಾಕಿ ಸುಮಾರು 4 ರಿಂದ 5 ಲಕ್ಷ ರೂಪಾಯಿಗಳ ವಂತಿಕೆ ಮೊತ್ತವನ್ನು ಫಲಾನುಭವಿಗಳೇ ಭರಿಸಬೇಕಾಗಿತ್ತು. ಈ ಮೊತ್ತವನ್ನು ಆರ್ಥಿಕವಾಗಿ ಆಶಕ್ತರಾಗಿರುವ ಕೊಳಗೇರಿ ನಿವಾಸಿಗಳು ಪಾವತಿಸಲು ಕಷ್ಟಕರವಾಗಿ ಮನೆಗಳ ಕಾಮಗಾರಿಗಳು ಅರ್ಧಕ್ಕೆ ನಿಂತಿದ್ದವು. ಆದುದರಿಂದ, ಫಲಾನುಭವಿಗಳ ಮೇಲಿನ ವಂತಿಕೆ ಹೊರೆಯನ್ನು ಕಡಿಮೆ ಮಾಡಿ, ಒಂದು ಲಕ್ಷಕ್ಕೆ ನಿಗದಿಗೊಳಿಸಿ, ಪ್ರತಿ ಫಲಾನುಭವಿಗೆ ಬಾಕಿ ರೂ. 4.00 ಲಕ್ಷಗಳಂತೆ ಸರ್ಕಾರದಿಂದಲೇ ಭರಿಸಲು ಅನುಮೋದನೆ ನೀಡಲಾಗಿದ್ದು, ಪ್ರಥಮ ಹಂತದಲ್ಲಿ 500 ಕೋಟಿ ರೂ. ಮಂಜೂರು ಮಾಡಲಾಗಿದೆ. ಹೆಚ್ಚುವರಿ ಅನುದಾನ ಬಗ್ಗೆ ಹಣಕಾಸು ಇಲಾಖೆಯೊಂದಿಗೆ ಚರ್ಚಿಸಿ ಕ್ರಮ ಕೈಗೊಳ್ಳಲು ಸೂಚನೆ ನೀಡಿದರು.

ಇದನ್ನೂ ಓದಿ: Rain News: ಚಿಕ್ಕಮಗಳೂರು, ಕೊಡಗಿನಲ್ಲಿ ಮಳೆ ಅಬ್ಬರ; ವಿದ್ಯುತ್‌ ಕಣ್ಣಾಮುಚ್ಚಾಲೆಯಿಂದ ಜನ ಪರದಾಟ

ಫಲಾನುಭವಿಗಳ ಪಾಲಿನ ಒಂದು ಲಕ್ಷ ರೂ. ವಂತಿಕೆ ಮೊತ್ತವನ್ನು ಸಂಗ್ರಹಿಸುವ ಮೂಲಕ ನಿರ್ಮಾಣ ಕಾರ್ಯವನ್ನು ಚುರುಕುಗೊಳಿಸಬೇಕು ಎಂದು ಸಿಎಂ ಸೂಚಿಸಿದರು. ಕಲ್ಯಾಣ ಕರ್ನಾಟಕ ಜಿಲ್ಲೆಗಳಲ್ಲಿ 592 ಕೊಳೆಗೇರಿಗಳ ಅಭಿವೃದ್ಧಿಗೆ ಕೂಡಲೇ ಪ್ರಸ್ತಾವನೆ ಸಲ್ಲಿಸುವಂತೆ ಮುಖ್ಯಮಂತ್ರಿಗಳು ಸೂಚಿಸಿದರು. ಕರ್ನಾಟಕ ಗೃಹ ಮಂಡಳಿಯಲ್ಲಿ ಭೂಸ್ವಾಧೀನ ಮಾಡಿಕೊಂಡ ಜಮೀನಿನಲ್ಲಿ ತ್ವರಿತವಾಗಿ ಕಾಮಗಾರಿ ಕೈಗೊಳ್ಳಬಹುದು. ಆದರೆ 50:50 ಅನುಪಾತದ ಹಂಚಿಕೆ ಆಧಾರದಲ್ಲಿ ಜಮೀನು ಪಡೆದುಕೊಂಡರೆ, ರೈತರಿಗೆ ಮರುಹಂಚಿಕೆ ಮಾಡುವ ಭೂಮಿಯ ಪರಿವರ್ತನೆಯಲ್ಲಿ ವಿಳಂಬವಾಗುತ್ತಿದ್ದು,ಈ ಬಗ್ಗೆ ನೋಂದಣಿ ಮತ್ತು ಮುದ್ರಾಂಕ, ಕಂದಾಯ ಹಾಗೂ ಗ್ರಾಮೀಣಾಭಿವೃದ್ಧಿ ಇಲಾಖೆಯವರೊಂದಿಗೆ ಚರ್ಚಿಸಿ, ಕ್ರಮ ಕೈಗೊಳ್ಳುವಂತೆ ಹೇಳಿದರು.

ಇದನ್ನೂ ಓದಿ: Sirsi News: ವಿಶ್ವಶಾಂತಿಗೆ ಯಕ್ಷ ನೃತ್ಯ ಕೊಡುಗೆ; ವಿಶ್ವದಾಖಲೆ ಪಟ್ಟಿಗೆ ತುಳಸಿ ಹೆಗಡೆ ಸೇರ್ಪಡೆ

ಸಭೆಯಲ್ಲಿ ವಸತಿ ಸಚಿವ ಜಮೀರ್‌ ಅಹ್ಮದ್‌ ಖಾನ್‌, ಕರ್ನಾಟಕ ಗೃಹ ಮಂಡಳಿ ಅಧ್ಯಕ್ಷ ಶಿವಲಿಂಗೇಗೌಡ, ಕರ್ನಾಟಕ ಕೊಳೆಗೇರಿ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಪ್ರಸಾದ್‌ ಅಬ್ಬಯ್ಯ, ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ನಸೀರ್‌ ಅಹ್ಮದ್‌, ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ಎಲ್. ಕೆ. ಅತೀಕ್‌, ವಸತಿ ಇಲಾಖೆ ಕಾರ್ಯದರ್ಶಿ ನವೀನ್‌ ರಾಜ್‌ ಸಿಂಗ್‌, ಆರ್ಥಿಕ ಇಲಾಖೆ ಕಾರ್ಯದರ್ಶಿ ಎಂ.ಟಿ. ರೇಜು ಹಾಗೂ ಇತರರು ಪಾಲ್ಗೊಂಡಿದ್ದರು.

Continue Reading

ಬೆಂಗಳೂರು

Toyota Kirloskar Motor: ಮೊಬಿಲಿಟಿ ಎಂಜಿನಿಯರಿಂಗ್ ಲ್ಯಾಬ್ ಸ್ಥಾಪಿಸಲು ಐಐಎಸ್‌ಸಿಯೊಂದಿಗೆ ಕೈಜೋಡಿಸಿದ ಟಿಕೆಎಂ

Toyota Kirloskar Motor: ಸಾಮರ್ಥ್ಯ ವರ್ಧನೆಯನ್ನು ಉತ್ತೇಜಿಸುವ ಪ್ರಯತ್ನಗಳ ಮುಂದುವರಿದ ಭಾಗವಾಗಿ ಟೊಯೊಟಾ ಕಿರ್ಲೋಸ್ಕರ್ ಮೋಟಾರ್ (ಟಿಕೆಎಂ) ಮೊಬಿಲಿಟಿ ಎಂಜಿನಿಯರಿಂಗ್ ಲ್ಯಾಬೊರೇಟರಿ ಸ್ಥಾಪನೆಗೆ ಬೆಂಬಲ ನೀಡಲು ಭಾರತೀಯ ವಿಜ್ಞಾನ ಸಂಸ್ಥೆ (ಐಐಎಸ್‌ಸಿ) ಯೊಂದಿಗೆ ಕೈಜೋಡಿಸಿದೆ.

VISTARANEWS.COM


on

Toyota Kirloskar Motor has joined hands with the IISC to support the establishment of a Mobility Engineering Laboratory
Koo

ಬೆಂಗಳೂರು: ಸಾಮರ್ಥ್ಯ ವರ್ಧನೆಯನ್ನು ಉತ್ತೇಜಿಸುವ ಪ್ರಯತ್ನಗಳ ಮುಂದುವರಿದ ಭಾಗವಾಗಿ ಟೊಯೊಟಾ ಕಿರ್ಲೋಸ್ಕರ್ ಮೋಟಾರ್ (ಟಿಕೆಎಂ) (Toyota Kirloskar Motor) ಮೊಬಿಲಿಟಿ ಎಂಜಿನಿಯರಿಂಗ್ ಲ್ಯಾಬೊರೇಟರಿ ಸ್ಥಾಪನೆಗೆ ಬೆಂಬಲ ನೀಡಲು ಭಾರತೀಯ ವಿಜ್ಞಾನ ಸಂಸ್ಥೆ (ಐಐಎಸ್‌ಸಿ) ಯೊಂದಿಗೆ ಕೈಜೋಡಿಸಿದೆ.

ಭವಿಷ್ಯದ ಸಾಮರ್ಥ್ಯವನ್ನು ಪೂರೈಸಬಹುದಾದ ಅಪೇಕ್ಷಿತ ಪರಿಸರ ವ್ಯವಸ್ಥೆಯನ್ನು ರಚಿಸಲು ಉದ್ಯಮ ಮತ್ತು ಶಿಕ್ಷಣ ಸಂಸ್ಥೆಗಳು ಒಗ್ಗೂಡುವ ಅಗತ್ಯವನ್ನು ಗುರುತಿಸಿ, ಐಐಎಸ್‌ಸಿ, ಈ ಪ್ರವರ್ತಕ ಕಾರ್ಯಕ್ರಮವನ್ನು ಕಲಿಕೆಯ ಕ್ಷೇತ್ರದಲ್ಲಿ ಟಿಕೆಎಂ ಬೆಂಬಲಿಸುತ್ತದೆ. ಸುಧಾರಿತ ಅತ್ಯಾಧುನಿಕ ತಂತ್ರಜ್ಞಾನಗಳಲ್ಲಿ ಬೋಧನೆಯನ್ನು ಸಕ್ರಿಯಗೊಳಿಸುವ ಗುರಿಯನ್ನು ಹೊಂದುವ ಜೊತೆಗೆ ಉನ್ನತ ಮಟ್ಟದ ಸಂಶೋಧನೆ ಮತ್ತು ಅಭಿವೃದ್ಧಿಯನ್ನು ಸಕ್ರಿಯಗೊಳಿಸುವ ಗುರಿಯನ್ನು ಹೊಂದಿದೆ ಎಂದು ತಿಳಿಸಿದೆ.

ಚಲನಶೀಲತೆ ವಲಯವು ಹವಾಮಾನ ಬದಲಾವಣೆಯಿಂದ ಪ್ರೇರಿತವಾದ ಮಾದರಿ ಬದಲಾವಣೆಯನ್ನು ಅನುಭವಿಸುತ್ತಿದೆ. ಇದು ಪಳೆಯುಳಿಕೆ ಇಂಧನಗಳಿಂದ ದೂರ ಸರಿಯುವ ಅಗತ್ಯವನ್ನು ಪ್ರೇರೇಪಿಸುತ್ತದೆ. ಭಾರತದಲ್ಲಿ ಆಟೋಮೋಟಿವ್ ಉದ್ಯಮವು ಹಸಿರು ತಂತ್ರಜ್ಞಾನಗಳಿಗೆ ವೇಗವಾಗಿ ಬದಲಾಗುವ ಮತ್ತು ಜಾಗತಿಕವಾಗಿ ನಡೆಯುತ್ತಿರುವ ಇಂಧನ ಪರಿವರ್ತನೆಯನ್ನು ಸ್ವೀಕರಿಸುವ ಸವಾಲುಗಳನ್ನು ಎದುರಿಸುತ್ತಿದೆ. ಅದೇ ಸಮಯದಲ್ಲಿ ಅದರ ಸ್ಪರ್ಧಾತ್ಮಕತೆಯನ್ನು ಉಳಿಸಿಕೊಳ್ಳುತ್ತದೆ.

ಇದನ್ನೂ ಓದಿ: Sirsi News: ವಿಶ್ವಶಾಂತಿಗೆ ಯಕ್ಷ ನೃತ್ಯ ಕೊಡುಗೆ; ವಿಶ್ವದಾಖಲೆ ಪಟ್ಟಿಗೆ ತುಳಸಿ ಹೆಗಡೆ ಸೇರ್ಪಡೆ

ಐಐಎಸ್‌ಸಿ ತನ್ನ ಬಲವಾದ ಉದ್ಯಮ ಸಂಪರ್ಕಗಳು ಮತ್ತು ಉತ್ಕೃಷ್ಟತೆಯ ಬದ್ಧತೆಯೊಂದಿಗೆ ಮೊಬಿಲಿಟಿ ಎಂಜಿನಿಯರಿಂಗ್ ಲ್ಯಾಬೊರೇಟರಿಯನ್ನು ಬಳಸಿಕೊಳ್ಳಲು ಸೂಕ್ತ ಸ್ಥಾನದಲ್ಲಿದೆ. ಈ ಸೌಲಭ್ಯವು ಮುಂದಿನ ಪೀಳಿಗೆಯ ಎಂಜಿನಿಯರ್‌ಗಳನ್ನು ಸುಧಾರಿತ ಚಲನಶೀಲತೆ ಪರಿಹಾರಗಳನ್ನು ಅಭಿವೃದ್ಧಿಪಡಿಸಲು ಅಗತ್ಯವಾದ ಬಹುಶಿಸ್ತೀಯ ಕೌಶಲ್ಯಗಳೊಂದಿಗೆ ಸಜ್ಜುಗೊಳಿಸಲು ಸಹಾಯ ಮಾಡುತ್ತದೆ. ಸಮಗ್ರ ಪರೀಕ್ಷೆ ಮತ್ತು ಅಭಿವೃದ್ಧಿಗಾಗಿ ಹಾರ್ಡ್‌ವೇರ್-ಇನ್-ಲೂಪ್ (ಎಚ್‌ಐಎಲ್) ಸಿಮ್ಯುಲೇಶನ್ ಅನ್ನು ಬಳಸಿಕೊಂಡು ಪ್ರಯೋಗಾಲಯವು ವಿದ್ಯುದ್ದೀಕೃತ ವಾಹನ ಪವರ್ ಟ್ರೇನ್ ತಂತ್ರಜ್ಞಾನಗಳ ಮೇಲೆ ಕೇಂದ್ರೀಕರಿಸುತ್ತದೆ.

ಹಣಕಾಸು ವರ್ಷ 2024 ರಿಂದ 2027 ರವರೆಗೆ, ಟಿಕೆಎಂ ಮೊಬಿಲಿಟಿ ಎಂಜಿನಿಯರಿಂಗ್ ಪ್ರಯೋಗಾಲಯದ ಸ್ಥಾಪನೆ ಮತ್ತು ಹೈಸ್ಪೀಡ್ ಡೈನಮೋಮೀಟರ್, ಬ್ಯಾಟರಿ ಎಮ್ಯುಲೇಟರ್, ಆಟೋಮೇಷನ್ ಮತ್ತು ನಿಯಂತ್ರಣ ವ್ಯವಸ್ಥೆಗಳು, ವಾಹನ ಸಿಮ್ಯುಲೇಶನ್ ಸಾಫ್ಟ್‌ವೇರ್ ಮತ್ತು ಮೋಟರ್ಸ್ ಮತ್ತು ಎಂಜಿನ್‌ಗಾಗಿ ಮೌಂಟಿಂಗ್ ಹಾರ್ಡ್‌ವೇರ್‌ನಂತಹ ಅಗತ್ಯ ಉಪಕರಣಗಳು ಮತ್ತು ಮೂಲಸೌಕರ್ಯಗಳ ಖರೀದಿಗೆ ಬೆಂಬಲ ನೀಡುತ್ತದೆ. ಈ ಪ್ರಯೋಗಾಲಯವು ಮೆಕ್ಯಾನಿಕಲ್ ಎಂಜಿನಿಯರಿಂಗ್ ಮತ್ತು ಎಲೆಕ್ಟ್ರಿಕಲ್ ಎಂಜಿನಿಯರಿಂಗ್ ಸೇರಿದಂತೆ ವಿವಿಧ ವಿಭಾಗಗಳಲ್ಲಿ ಸಂಶೋಧನೆಗೆ ಬೆಂಬಲ ನೀಡಲಿದೆ.

ಮೊಬಿಲಿಟಿ ಎಂಜಿನಿಯರಿಂಗ್ ಲ್ಯಾಬೊರೇಟರಿಯ ಗಮನಾರ್ಹ ಲಕ್ಷಣವೆಂದರೆ ವಿದ್ಯುದ್ದೀಕೃತ ವಾಹನ ಪವರ್ ಟ್ರೇನ್‌ಗಳ ಸಂಶೋಧನೆ ಮತ್ತು ಅಭಿವೃದ್ಧಿಗಾಗಿ ಹಾರ್ಡ್‌ವೇರ್-ಇನ್-ಲೂಪ್ (ಎಚ್ ಐಎಲ್) ಪರೀಕ್ಷಾ ಸೌಲಭ್ಯ. ಎಚ್ಐಎಲ್ ಸಿಮ್ಯುಲೇಶನ್ ರಿಯಲ್-ವರ್ಲ್ಡ್ ಮಾಪನಗಳನ್ನು ಸಿಮ್ಯುಲೇಶನ್‌ಗಳೊಂದಿಗೆ ಸಂಯೋಜಿಸುತ್ತದೆ. ಇದು ಪುನರುತ್ಪಾದಕ, ವೇಗದ ಮತ್ತು ವೆಚ್ಚ-ಪರಿಣಾಮಕಾರಿ ಪರೀಕ್ಷೆಗೆ ಅನುವು ಮಾಡಿಕೊಡುತ್ತದೆ. ಇದು ವಾಹನ ಅಭಿವೃದ್ಧಿಗೆ ನಿರ್ಣಾಯಕವಾಗಿದೆ, ಸಿಮ್ಯುಲೇಟೆಡ್ ರಿಯಲ್-ವರ್ಲ್ಡ್ ಚಾಲನಾ ಪರಿಸ್ಥಿತಿಗಳಲ್ಲಿ ಎಂಜಿನ್‌ಗಳು, ಮೋಟರ್‌ಗಳು ಮತ್ತು ಬ್ಯಾಟರಿಗಳಂತಹ ವೈಯಕ್ತಿಕ ಘಟಕಗಳ ಪರೀಕ್ಷೆಯನ್ನು ಸಕ್ರಿಯಗೊಳಿಸುತ್ತದೆ.

ಇದನ್ನೂ ಓದಿ: Kannada New Movie: ಸಿನಿಪ್ರಿಯರ ಗಮನ ಸೆಳೆಯುತ್ತಿದೆ ‘ಫ್ಯಾಮಿಲಿ ಡ್ರಾಮ’ ಸಿನಿಮಾದ ಸಾಂಗ್!

ಈ ಪ್ರಯೋಗಾಲಯವು ವಾಹನ ಡ್ರೈವ್ ಟ್ರೇನ್ ಸಂರಚನೆಗಳು ಮತ್ತು ನಿಯಂತ್ರಣ ತಂತ್ರಗಳ ವಿನ್ಯಾಸ ಮತ್ತು ಅಭಿವೃದ್ಧಿಗೆ ಅನುಕೂಲ ಮಾಡಿಕೊಡುತ್ತದೆ. ಭೌತಿಕ ಮೂಲಮಾದರಿಗಳಿಗೆ ಸಂಬಂಧಿಸಿದ ವೆಚ್ಚಗಳು ಮತ್ತು ಅಭಿವೃದ್ಧಿ ಸಮಯವನ್ನು ಕಡಿಮೆ ಮಾಡುವಾಗ ಸುರಕ್ಷತೆ ಮತ್ತು ಕಾರ್ಯಕ್ಷಮತೆಯನ್ನು ಖಚಿತಪಡಿಸುತ್ತದೆ.

ಈ ಬಗ್ಗೆ ಐಐಎಸ್‌ಸಿ ನಿರ್ದೇಶಕ ಪ್ರೊ.ಜಿ.ರಂಗರಾಜನ್ ಮಾತನಾಡಿ, ಮೊಬಿಲಿಟಿ ಎಂಜಿನಿಯರಿಂಗ್ ಲ್ಯಾಬೊರೇಟರಿ ಸ್ಥಾಪಿಸಲು ಟಿಕೆಎಂನೊಂದಿಗೆ ಕೈಜೋಡಿಸಲು ನಾವು ಸಂತೋಷಪಡುತ್ತೇವೆ. ಈ ಸೌಲಭ್ಯವು ನಮ್ಮ ವಿದ್ಯಾರ್ಥಿಗಳು ಮತ್ತು ಸಂಶೋಧಕರಿಗೆ ಎಮಿಷನ್ ಕಡಿತ ಮತ್ತು ಇಂಧನ ದಕ್ಷತೆ ಸೇರಿದಂತೆ ವಾಹನ ಉದ್ಯಮದಲ್ಲಿನ ನಿರ್ಣಾಯಕ ಸವಾಲುಗಳನ್ನು ಎದುರಿಸಲು ಅತ್ಯಾಧುನಿಕ ಉಪಕರಣಗಳು ಮತ್ತು ಮೂಲಸೌಕರ್ಯಗಳನ್ನು ಒದಗಿಸುತ್ತದೆ.

ಟಿಕೆಎಂನೊಂದಿಗಿನ ಸಹಯೋಗವು ಶೈಕ್ಷಣಿಕ ಮತ್ತು ಉದ್ಯಮದ ಅತ್ಯುತ್ತಮ ಮನಸ್ಸುಗಳನ್ನು ಒಟ್ಟುಗೂಡಿಸುವ ಜತೆಗೆ ನಾವೀನ್ಯತೆ ಮತ್ತು ಉತ್ಕೃಷ್ಟತೆಯ ಸಂಸ್ಕೃತಿಯನ್ನು ಬೆಳೆಸುತ್ತದೆ. ವಿಶೇಷವಾಗಿ ವಿದ್ಯುದೀಕೃತ ವಾಹನ ಪವರ್ ಟ್ರೇನ್ ತಂತ್ರಜ್ಞಾನಗಳ ಕ್ಷೇತ್ರಗಳಲ್ಲಿ ಈ ಸಹಯೋಗದ ಪರಿಣಾಮವಾಗಿ ನಾವು ಅನೇಕ ಗಮನಾರ್ಹ ಪ್ರಗತಿಗಳನ್ನು ನಿರೀಕ್ಷಿಸುತ್ತೇವೆ. ಮೊಬಿಲಿಟಿ ಎಂಜಿನಿಯರಿಂಗ್‌ನಲ್ಲಿ ನಾವು ಹೊಸದಾಗಿ ಪ್ರಾರಂಭಿಸಿದ ಎಂಟೆಕ್ ಕಾರ್ಯಕ್ರಮವನ್ನು ಬೆಂಬಲಿಸುವಲ್ಲಿ ಪ್ರಯೋಗಾಲಯವು ನಿರ್ಣಾಯಕ ಪಾತ್ರ ವಹಿಸುತ್ತದೆ. ನಾವು ಮುಂದಿನ ಪೀಳಿಗೆಯ ಎಂಜಿನಿಯರ್‌ಗಳನ್ನು ಆಟೋಮೋಟಿವ್ ಉದ್ಯಮದ ರೂಪಾಂತರವನ್ನು ಮುನ್ನಡೆಸಲು ಅಗತ್ಯವಿರುವ ಕೌಶಲ್ಯ ಮತ್ತು ಜ್ಞಾನದೊಂದಿಗೆ ಸಜ್ಜುಗೊಳಿಸುತ್ತೇವೆ ಎಂದು ತಿಳಿಸಿದ್ದಾರೆ.

ಈ ಕುರಿತು ಟೊಯೊಟಾ ಕಿರ್ಲೋಸ್ಕರ್ ಮೋಟಾರ್‌ನ ಹಿರಿಯ ಉಪಾಧ್ಯಕ್ಷ ಮತ್ತು ಮುಖ್ಯ ಸಂವಹನ ಅಧಿಕಾರಿ ಸುದೀಪ್ ದಾಲ್ವಿ ಮಾತನಾಡಿ, ಶೈಕ್ಷಣಿಕ ಮತ್ತು ಸಂಶೋಧನಾ ಉತ್ಕೃಷ್ಟತೆಗೆ ಸಮಾನಾರ್ಥಕವಾಗಿರುವ ಐಐಎಸ್‌ಸಿಯೊಂದಿಗೆ ಪಾಲುದಾರರಾಗಲು ನಮಗೆ ಗೌರವವಿದೆ. ಈ ತಿಳಿವಳಿಕೆ ಒಪ್ಪಂದವು ಚಲನಶೀಲತೆ ಎಂಜಿನಿಯರಿಂಗ್‌ನಲ್ಲಿ ನಾವೀನ್ಯತೆಯನ್ನು ಉತ್ತೇಜಿಸುವ ನಮ್ಮ ಪ್ರಯತ್ನಗಳಲ್ಲಿ ಮಹತ್ವದ ಮೈಲಿಗಲ್ಲಾಗಿದೆ. ತಾಂತ್ರಿಕ ಪ್ರಗತಿ ಮತ್ತು ಕೌಶಲ್ಯ ಅಭಿವೃದ್ಧಿಯನ್ನು ಹೆಚ್ಚಿಸಲು ಸಹಯೋಗದ ಶಕ್ತಿಯನ್ನು ನಾವು ನಂಬುತ್ತೇವೆ.

ಇದನ್ನೂ ಓದಿ: Rain News: ಚಿಕ್ಕಮಗಳೂರು, ಕೊಡಗಿನಲ್ಲಿ ಮಳೆ ಅಬ್ಬರ; ವಿದ್ಯುತ್‌ ಕಣ್ಣಾಮುಚ್ಚಾಲೆಯಿಂದ ಜನ ಪರದಾಟ

ಮೊಬಿಲಿಟಿ ಎಂಜಿನಿಯರಿಂಗ್ ಲ್ಯಾಬೊರೇಟರಿ ಸ್ಥಾಪನೆಯನ್ನು ಬೆಂಬಲಿಸುವ ಮೂಲಕ ನಾವು ಸಂಶೋಧನಾ ಮೂಲಸೌಕರ್ಯವನ್ನು ಹೆಚ್ಚಿಸಲು ಮಾತ್ರವಲ್ಲದೆ ಸುಸ್ಥಿರ ಚಲನಶೀಲತೆಯ ಭವಿಷ್ಯದಲ್ಲಿ ಮತ್ತು ಭಾರತದಲ್ಲಿ ನುರಿತ ಎಂಜಿನಿಯರ್‌ಗಳ ಅಭಿವೃದ್ಧಿಗೆ ಬೆಂಬಲ ನೀಡುತ್ತಿದ್ದೇವೆ. ಈ ಪ್ರಯೋಗಾಲಯವು ಪ್ರವರ್ತಕ ಸಂಶೋಧನೆಗೆ ಒಂದು ಕ್ರೂಸಿಬಲ್ ಆಗಿ ಕಾರ್ಯನಿರ್ವಹಿಸುತ್ತದೆ. ಹವಾಮಾನ ಬದಲಾವಣೆ ಮತ್ತು ಸ್ವಚ್ಛ, ಹೆಚ್ಚು ಪರಿಣಾಮಕಾರಿ ಸಾರಿಗೆ ಪರಿಹಾರಗಳ ಅಗತ್ಯದಂತಹ ನಮ್ಮ ಕಾಲದ ಒತ್ತಡದ ಸವಾಲುಗಳನ್ನು ಪರಿಹರಿಸುವ ಹೊಸ ತಂತ್ರಜ್ಞಾನಗಳ ಅಭಿವೃದ್ಧಿಗೆ ಅನುವು ಮಾಡಿಕೊಡುತ್ತದೆ. ಈ ಕಾರ್ಯಕ್ರಮವು ಅದ್ಭುತ ಸಂಶೋಧನೆಯನ್ನು ವೇಗ ವರ್ಧಿಸುತ್ತದೆ ಎಂದು ನಮಗೆ ವಿಶ್ವಾಸವಿದ್ದು, ಸುಸ್ಥಿರ ಚಲನಶೀಲತೆಯ ಭವಿಷ್ಯವನ್ನು ಮುನ್ನಡೆಸುವ ಮುಂದಿನ ಪೀಳಿಗೆಯ ಎಂಜಿನಿಯರ್‌ಗಳನ್ನು ಇದು ಪೋಷಿಸುತ್ತದೆ ಎಂದು ತಿಳಿಸಿದ್ದಾರೆ.

Continue Reading

ಕರ್ನಾಟಕ

Mangalore News: ಫಲಿಸದ ಸತತ 6-7 ಗಂಟೆ ಕಾರ್ಯಾಚರಣೆ; ಮಣ್ಣಿನಡಿ ಸಿಲುಕಿದ್ದ ಕಾರ್ಮಿಕ ಸಾವು

Mangalore News: ಮಂಗಳೂರಿನ ಬಲ್ಮಠ ರೋಡ್ ಸಮೀಪದ ರೋಹನ್ ಕಾರ್ಪೋರೇಶನ್‌ಗೆ ಸೇರಿದ ಕಟ್ಟಡ ನಿರ್ಮಾಣದ ವೇಳೆ ಮಣ್ಣು ಕುಸಿದು, ಇಬ್ಬರು ಕಾರ್ಮಿಕರು ಸಿಲುಕಿದ್ದರು. ಈ ಪೈಕಿ ಒಬ್ಬ ಕಾರ್ಮಿಕ ಮೃತಪಟ್ಟಿದ್ದಾನೆ.

VISTARANEWS.COM


on

Mangalore News
Koo

ಮಂಗಳೂರು: ನಗರದಲ್ಲಿ ಕಟ್ಟಡ ಕಾಮಗಾರಿ ವೇಳೆ ಮಣ್ಣು ಕುಸಿತ ಪ್ರಕರಣದಲ್ಲಿ (Mangalore News) ಮಣ್ಣಿನಡಿ ಸಿಲುಕಿದ್ದ ಒಬ್ಬ ಕಾರ್ಮಿಕ ಮೃತಪಟ್ಟಿದ್ದಾನೆ. ಮಣ್ಣಿನಡಿ ಸಿಲುಕಿದ್ದ ಇಬ್ಬರ ಪೈಕಿ ಒಬ್ಬ ಕಾರ್ಮಿಕನನ್ನು ಬುಧವಾರ ಸಂಜೆ ರಕ್ಷಣೆ ಮಾಡಲಾಗಿತ್ತು. ಆದರೆ, ಮತ್ತೊಬ್ಬ ಕಾರ್ಮಿಕನ ರಕ್ಷಣೆಗಾಗಿ ಸತತ 6-7 ಗಂಟೆ ನಡೆದ ಕಾರ್ಯಾಚರಣೆ ಫಲ ನೀಡಲಿಲ್ಲ.

ಬಿಹಾರ ಮೂಲದ 30 ವರ್ಷದ ಚಂದನ್ ಮೃತ ಪಟ್ಟಿದ್ದಾನೆ. ಸತತ 6-7 ಗಂಟೆ ಕಾರ್ಯಾಚರಣೆ ನಡೆಸಿ ಕಾರ್ಮಿಕನನ್ನು ರಕ್ಷಿಸಲು ಎನ್‌ಡಿಆರ್‌ಎಫ್, ಎಸ್‌ಡಿಆರ್‌ಎಫ್, ಅಗ್ನಿ ಶಾಮಕ ದಳ ಸಿಬ್ಬಂದಿ ತೀವ್ರ ಪ್ರಯತ್ನಪಟ್ಟರೂ ಸಾಧ್ಯವಾಗಲಿಲ್ಲ.

ಮಂಗಳೂರಿನ ಬಲ್ಮಠ ರೋಡ್ ಸಮೀಪದ ರೋಹನ್ ಕಾರ್ಪೋರೇಶನ್‌ಗೆ ಸೇರಿದ ಕಟ್ಟಡ ಕಾಮಗಾರಿ ವೇಳೆ ಮಣ್ಣು ಕುಸಿದು ಬಿಹಾರ ಮೂಲದ ಚಂದನ್ ಮತ್ತು ರಾಜಕುಮಾರ್ ಸಿಲುಕಿದ್ದರು. ಕಾರ್ಯಾಚರಣೆಯಲ್ಲಿ ಮೊದಲಿಗೆ ರಾಜಕುಮಾರ್‌ನ ರಕ್ಷಣೆ ಮಾಡಿ ಆಸ್ಪತ್ರೆಗೆ ದಾಖಲಿಸಲಾಯಿತು. ಬಳಿಕ ಚಂದನ್‌ ರಕ್ಷಣೆಗಾಗಿ ಕಾರ್ಯಾಚರಣೆ ಮುಂದುವರಿದಿತ್ತು. ಸತತ ಕಾರ್ಯಾಚರಣೆ ಬಳಿಕ ಮಣ್ಣಿನಡಿ ಸಿಲುಕಿ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಚಂದನ್‌ನನ್ನು ಹೊರತೆಗೆದು ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ, ಚಿಕಿತ್ಸೆ ಫಲಿಸದೆ ಕಾರ್ಮಿಕ ಕೊನೆಯುಸಿರೆಳೆದಿದ್ದಾನೆ.

ಎಲ್ಲ ಕಟ್ಟಡ ಕಾಮಗಾರಿಗಳ ಸ್ಥಗಿತಕ್ಕೆ ಪಾಲಿಕೆ ಆದೇಶ

ಮಣ್ಣು ಕುಸಿತ ಪ್ರಕರಣದ ಬೆನ್ನಲ್ಲೇ ಎಚ್ಚೆತ್ತ ಮಂಗಳೂರು ಮಹಾನಗರ ಪಾಲಿಕೆ ನಗರದಾದ್ಯಂತ ಕಟ್ಟಡ ಕಾಮಗಾರಿ ಸ್ಥಗಿತಕ್ಕೆ ಆದೇಶ ಹೊರಡಿಸಿದೆ. ಮಳೆಗಾಲ ಮುಕ್ತಾಯವಾಗುವವರೆಗೆ ಎಲ್ಲಾ ಕಟ್ಟಡದ ಕಾಮಗಾರಿ ಸ್ಥಗಿತ ಮಾಡಲು ಸೂಚಿಸಲಾಗಿದೆ.

ಯಾವುದೇ ಕಟ್ಟಡದ ಕಾಮಗಾರಿಯನ್ನು ನಡೆಸದಂತೆ ಹಾಗೂ ಈಗಾಗಲೇ ಪ್ರಾರಂಭಿಸಿರುವ ಕಟ್ಟಡ ನಿರ್ಮಾಣ ಕಾಮಗಾರಿಗಳನ್ನು ನಿಲ್ಲಿಸುವಂತೆ ಸೂಚಿಸಲಾಗಿದ್ದು, ಅಗತ್ಯ ಮುನ್ನೆಚ್ಚರಿಕೆ ಕ್ರಮವನ್ನು ಅಳವಡಿಸಿಕೊಂಡು ಕಾಮಗಾರಿಯನ್ನು ಸ್ಥಗಿತಗೊಳಿಸಲು ಸೂಚನೆ ನೀಡಲಾಗಿದೆ.

ಇದನ್ನೂ ಓದಿ | Mangalore News: ಕಟ್ಟಡ ಕಾಮಗಾರಿ ವೇಳೆ ಮಣ್ಣು ಕುಸಿತ; ಮಣ್ಣಿನಡಿ ಸಿಲುಕಿದ ಇಬ್ಬರು ಕಾರ್ಮಿಕರು

ಅವೈಜ್ಞಾನಿಕ ಭೂ ಅಗೆತ ಹಾಗೂ ಕಟ್ಟಡ ನಿರ್ಮಾಣ ಕಾಮಗಾರಿ ಹಿನ್ನೆಲೆಯಲ್ಲಿ ಸಾರ್ವಜನಿಕ ಹಿತದೃಷ್ಟಿಯಿಂದ ಪಾಲಿಕೆ ಕಮಿಷನರ್ ಆದೇಶ ಹೊರಡಿಸಿದ್ದಾರೆ. ನಿಯಮ ಉಲ್ಲಂಘನೆ ಕಂಡುಬಂದಲ್ಲಿ ವಿಪತ್ತು ನಿರ್ವಹಣಾ ಕಾಯ್ದೆಯಡಿ ಕ್ರಮದ ಎಚ್ಚರಿಕೆಯನ್ನು ಕಮಿಷನರ್‌ ನೀಡಿದ್ದಾರೆ.

Continue Reading
Advertisement
Team India
ಕ್ರಿಕೆಟ್4 hours ago

Team India: ಟಿ-20 ವಿಶ್ವಕಪ್‌ ಗೆದ್ದು ಭಾರತದತ್ತ ಟೀಮ್‌ ಇಂಡಿಯಾ; ಫ್ಲೈಟ್‌ ಟ್ರ್ಯಾಕರ್‌ನಲ್ಲಿ ಹೊಸ ದಾಖಲೆ

LK Advani
ದೇಶ4 hours ago

LK Advani: ಎಲ್‌ ಕೆ ಅಡ್ವಾಣಿ ಆರೋಗ್ಯದಲ್ಲಿ ಮತ್ತೆ ಏರುಪೇರು; ಆಸ್ಪತ್ರೆಗೆ ದಾಖಲು

Ashika Ranganath
ಸ್ಯಾಂಡಲ್ ವುಡ್5 hours ago

Ashika Ranganath: ಪುಷ್ಪ 2 ಹಾಡಿಗೆ ದಿಲ್‌ ಖುಷ್‌ ಆಗಿ ಕುಣಿದ ಆಶಿಕಾ ರಂಗನಾಥ್;‌ Video ಇದೆ ನೋಡಿ

Lokayukta Raid Honnavara Pattana Panchayat Chief Executive Engineer caught by lokayukta while recieving money
ಉತ್ತರ ಕನ್ನಡ5 hours ago

Lokayukta Raid: ಹೊನ್ನಾವರ ಪ.ಪಂ ʼಲಂಚ ಪ್ರವೀಣʼ ಮುಖ್ಯ ಕಾರ್ಯನಿರ್ವಾಹಕ ಎಂಜಿನಿಯರ್ ಲೋಕಾಯುಕ್ತ ಬಲೆಗೆ

Viral Video
ವೈರಲ್ ನ್ಯೂಸ್5 hours ago

Viral Video: ಸರ್ಕಾರಿ ಕಚೇರಿಯಲ್ಲಿ ಡ್ಯಾನ್ಸ್‌ ಮಾಡಿ ರೀಲ್ಸ್; 8 ನೌಕರರಿಗೆ ನೋಟಿಸ್‌ ಬಿಸಿ!

Pradhan Mantri Awas Yojana CM Siddaramaiah instructs to complete work on incomplete houses on priority
ಪ್ರಮುಖ ಸುದ್ದಿ6 hours ago

CM Siddaramaiah: ಪ್ರಧಾನಮಂತ್ರಿ ಆವಾಸ್‌ ಯೋಜನೆ; ಅಪೂರ್ಣ ಮನೆಗಳ ಕಾಮಗಾರಿ ಪೂರ್ಣಗೊಳಿಸಲು ಸಿಎಂ ಸೂಚನೆ

Toyota Kirloskar Motor has joined hands with the IISC to support the establishment of a Mobility Engineering Laboratory
ಬೆಂಗಳೂರು6 hours ago

Toyota Kirloskar Motor: ಮೊಬಿಲಿಟಿ ಎಂಜಿನಿಯರಿಂಗ್ ಲ್ಯಾಬ್ ಸ್ಥಾಪಿಸಲು ಐಐಎಸ್‌ಸಿಯೊಂದಿಗೆ ಕೈಜೋಡಿಸಿದ ಟಿಕೆಎಂ

BJP Muslim Candidate
ಪ್ರಮುಖ ಸುದ್ದಿ6 hours ago

BJP Muslim Candidate: ಉತ್ತರ ಪ್ರದೇಶದಲ್ಲಿ ಮೊದಲ ಬಾರಿಗೆ ಮುಸ್ಲಿಂ ಅಭ್ಯರ್ಥಿಗೆ ಬಿಜೆಪಿ ಟಿಕೆಟ್? ಏನಿದರ ಗುಟ್ಟು?

Uttar pradesh Politics
ದೇಶ6 hours ago

Uttar Pradesh Politics: ಉತ್ತರಪ್ರದೇಶದಲ್ಲಿ ಬಿಜೆಪಿಗೆ ಹೀನಾಯ ಸೋಲು; ಟಾಸ್ಕ್‌ಫೋರ್ಸ್‌ ವರದಿಯಲ್ಲಿ ಗಂಭೀರ ಅಂಶಗಳು ಬಯಲು

Mangalore News
ಕರ್ನಾಟಕ7 hours ago

Mangalore News: ಫಲಿಸದ ಸತತ 6-7 ಗಂಟೆ ಕಾರ್ಯಾಚರಣೆ; ಮಣ್ಣಿನಡಿ ಸಿಲುಕಿದ್ದ ಕಾರ್ಮಿಕ ಸಾವು

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka weather Forecast
ಮಳೆ1 day ago

Karnataka Weather : ಮಳೆ ಅಬ್ಬರಕ್ಕೆ ಹೆಚ್ಚಾದ ಗುಡ್ಡ ಕುಸಿತ; ಬಂಗ್ರ ಕೂಳೂರಿನಲ್ಲಿ ರಸ್ತೆ ಬಂದ್‌

karnataka Weather Forecast
ಮಳೆ2 days ago

Karnataka Weather : ಕೊಡಗು, ದಾವಣಗೆರೆಯಲ್ಲಿ ಮಳೆಯಾಟ; ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ

karnataka Weather Forecast
ಮಳೆ3 days ago

Karnataka Weather : ಬೆಂಗಳೂರು, ಕಲಬುರಗಿ ಸೇರಿದಂತೆ ಹಲವೆಡೆ ವರ್ಷಧಾರೆ; ನಾಳೆಗೂ ಮಳೆ ಅಲರ್ಟ್‌

Actor Darshan
ಬೆಂಗಳೂರು4 days ago

Actor Darshan : ಖೈದಿ ನಂ.6106ಕ್ಕೆ ಡಿಮ್ಯಾಂಡ್‌! ದರ್ಶನ್‌ ಫ್ಯಾನ್ಸ್‌ಗೆ ಕಾನೂನು ಕಂಟಕ, ರೂಲ್ಸ್‌ ಬ್ರೇಕ್‌ ಮಾಡಿದ್ರೆ ಬೀಳುತ್ತೆ ಕೇಸ್‌‌!

karnataka weather Forecast
ಮಳೆ4 days ago

Karnataka Weather : ಮಳೆಗೆ ಸ್ಕಿಡ್‌ ಆಗಿ ಹೇಮಾವತಿ ನದಿಗೆ ಹಾರಿದ ಕಾರು; ಕರಾವಳಿಗೆ ಎಚ್ಚರಿಕೆ ಕೊಟ್ಟ ತಜ್ಞರು

karnataka Rain
ಮಳೆ5 days ago

Karnataka Rain: ಭಾರಿ ಮಳೆಗೆ ಮನೆಗಳ ಗೋಡೆ ಕುಸಿತ; ಕೂದಲೆಳೆ ಅಂತರದಲ್ಲಿ ವೃದ್ಧ ಪಾರು

karnataka Weather Forecast
ಮಳೆ5 days ago

Karnataka Weather : ಅಬ್ಬಬ್ಬಾ.. ಮುಲ್ಕಿಯಲ್ಲಿ 30 ಸೆಂ.ಮೀ ಮಳೆ ದಾಖಲು; ವಾರಾಂತ್ಯದಲ್ಲೂ ಭಾರಿ ವರ್ಷಧಾರೆ

karnataka Rain
ಮಳೆ6 days ago

Karnataka Rain : ಭಾರಿ ಮಳೆಗೆ ಪಾತಾಳ ಸೇರಿದ ಬಾವಿ; ಅಲೆಗಳ ಹೊಡೆತಕ್ಕೆ ಸಮುದ್ರಪಾಲಾದ ಮನೆ

Karnataka Weather Forecast
ಮಳೆ6 days ago

Karnataka Weather : ಭಾರಿ ಮಳೆ ಹಿನ್ನೆಲೆ ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್; ಶುಕ್ರವಾರವೂ ಶಾಲೆಗಳಿಗೆ ರಜೆ ಘೋಷಣೆ

karnataka Weather Forecast
ಮಳೆ6 days ago

Karnataka Weather : ಭಾರಿ ಮಳೆಗೆ ಸೇತುವೆಯಿಂದ ಹೊಳೆಗೆ ಬಿದ್ದ ಕಾರು; ಮರ ಹಿಡಿದು ಪ್ರಾಣ ಉಳಿಸಿಕೊಂಡ ಸವಾರರು

ಟ್ರೆಂಡಿಂಗ್‌