Kantara Movie | ಬೆಂಗಳೂರಿನಲ್ಲಿ ಕಾಂತಾರ ಸಿನಿಮಾ ವೀಕ್ಷಿಸಿದ ಕೇಂದ್ರ ಸಚಿವೆ ನಿರ್ಮಲಾ‌ ಸೀತಾರಾಮನ್‌ - Vistara News

ಸಿನಿಮಾ

Kantara Movie | ಬೆಂಗಳೂರಿನಲ್ಲಿ ಕಾಂತಾರ ಸಿನಿಮಾ ವೀಕ್ಷಿಸಿದ ಕೇಂದ್ರ ಸಚಿವೆ ನಿರ್ಮಲಾ‌ ಸೀತಾರಾಮನ್‌

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ‌ (Kantara Movie) ಸೀತಾರಾಮನ್‌ ಬೆಂಗಳೂರಿನ ಗರುಡ ಮಾಲ್‌ನಲ್ಲಿ ಸಿನಿಮಾ ವೀಕ್ಷಿಸಿದ್ದಾರೆ.

VISTARANEWS.COM


on

Kantara Movie
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ರಿಷಬ್‌ ಶೆಟ್ಟಿ ನಿರ್ದೇಶನ ಹಾಗೂ ನಟನೆಯ ಕಾಂತಾರ (Kantara Movie) ಸಿನಿಮಾವನ್ನು ದಕ್ಷಿಣ ಭಾರತದ ಖ್ಯಾತ ನಟರು ಹಾಗೂ ಗಣ್ಯ ವ್ಯಕ್ತಿಗಳು ವೀಕ್ಷಿಸಿ ಮೆಚ್ಚುಗೆ ಸೂಚಿಸಿದ್ದಾರೆ. ಇದರ ಬೆನ್ನಲ್ಲೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ‌ ಸೀತಾರಾಮನ್‌ ಬೆಂಗಳೂರಿನ ಗರುಡ ಮಾಲ್‌ನಲ್ಲಿ ನವೆಂಬರ್‌ 2ರಂದು ಸಿನಿಮಾ ವೀಕ್ಷಿಸಿದ್ದಾರೆ. ವಿಶ್ವದೆಲ್ಲೆಡೆ ಸಿನಿಮಾಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಕೇಂದ್ರ ವಾಣಿಜ್ಯ ಸಚಿವ ಪಿಯೂಷ್‌ ಗೋಯಲ್‌ ಕಾಂತಾರ ಸಿನಿಮಾವನ್ನು ಈ ಹಿಂದೆ ಹೊಗಳಿದ್ದರು. ʻಭಾರತದ ಜನಪದ ಸಂಸ್ಕೃತಿಯನ್ನು ಬಿಂಬಿಸಿರುವ ಕಾಂತಾರ ಸಿನಿಮಾ ಕೇವಲ 8-10 ಕೋಟಿ ರೂ. ಬಂಡವಾಳ ಹೂಡಿ ತೆಗೆದ ಸಿನಿಮಾವಾದರೂ, 200 ಕೋಟಿ ರೂ.ಗೂ ಹೆಚ್ಚು ಗಳಿಸಿದೆ. ಇದು ಸೃಜನಶೀಲತೆಯ ಆವಿಷ್ಕಾರವಾಗಿದೆ. ಇಲ್ಲಿನವರು ಎಷ್ಟು ಪ್ರತಿಭಾವಂತರು ಎಂಬುದನ್ನು ಜಗತ್ತಿಗೆ ತೋರಿಸಿದೆʼʼ ಎಂದು ಪ್ರಶಂಸಿಸಿದ್ದರು.

ಇದನ್ನೂ ಓದಿ | Kantara Movie | ಕಾಂತಾರ ಹಿಂದಿ ರಿಮೇಕ್‌ ಬಗ್ಗೆ ರಿಷಬ್‌ ಶೆಟ್ಟಿ ಹೇಳಿದ್ದೇನು?

ಹಿಂದಿಯಲ್ಲಿ ಕಾಂತಾರ ಸಿನಿಮಾ 50ಕೋಟಿ ರೂ.ಗೂ ಹೆಚ್ಚು ಕಲೆಕ್ಷನ್‌ ಮಾಡಿದೆ ಎನ್ನಲಾಗುತ್ತಿದೆ. ಹೊರ ರಾಜ್ಯಗಳಲ್ಲಿಯೂ 100ಕೋಟಿ ರೂ. ಬಾಕ್ಸ್‌ ಆಫೀಸ್‌ ಕಲೆಕ್ಷನ್‌ ಮಾಡಿ ಮುನ್ನುಗ್ಗುತ್ತಿದೆ ಎಂದು ತಿಳಿದುಬಂದಿದೆ. ಹಿಂದಿ ವರ್ಷನ್‌ನಲ್ಲಿ ಅಕ್ಟೋಬರ್‌ 29ರಂದು ಕಾಂತಾರ ಸಿನಿಮಾ 4 ಕೋಟಿ ರೂ. ಗಳಿಕೆ ಕಂಡಿದೆ ಎಂದು ವರದಿಯಾಗಿದೆ.

ಇದನ್ನೂ ಓದಿ | Kantara Movie | ಥಿಯೇಟರ್‌ನಲ್ಲಿ ಕಾಂತಾರ ಸಿನಿಮಾ ನೋಡುವಾಗಲೇ ʼಮೈ ಮೇಲೆ ಬಂದ ದೇವರುʼ!

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಬಾಲಿವುಡ್

Bharti Singh: ಬಾಲಿವುಡ್‌ ಖ್ಯಾತ ನಿರೂಪಕಿ ಆಸ್ಪತ್ರೆಗೆ ದಾಖಲು

Bharti Singh: ಭಾರತಿ ಸಿಂಗ್ ಅವರಿದ್ದ ಎತ್ತರಕ್ಕೆ ಹೋಲಿಸಿ ನೋಡಿದರೆ ಅತಿಯಾದ ತೂಕ ಹೊಂದಿದ್ದರು. ಹೀಗಾಗಿ ಅವರ 15 ಕೆಜಿ ತೂಕ ಇಳಿಸಿಕೊಂಡ ನಂತರದಲ್ಲಿ ಗರ್ಭಿಣಿಯಾಗಿದ್ದರು. ಈಗಾಗಲೇ ಸಾಕಷ್ಟು ರಿಯಾಲಿಟಿ ಶೋ, ಪ್ರಶಸ್ತಿ ಸಮಾರಂಭಗಳನ್ನು ಭಾರತಿ ನಿರೂಪಣೆ ಮಾಡಿದ್ದಾರೆ. ಮೊದಲಿಗೆ ಗ್ಯಾಸ್ಟ್ರಿಕ್ ಸಮಸ್ಯೆ ಇದೆ ಎಂದು ಭಾವಿಸಿ ಆಸ್ಪತ್ರೆಗೆ ಹೋಗಲಿಲ್ಲವಂತೆ. ಆದರೆ ನೋವು ಕಡಿಮೆಯಾಗದಿದ್ದಾಗ ಆಸ್ಪತ್ರೆಗೆ ತೆರಳಬೇಕಾಯಿತು ಎಂದು ಹೇಳಿದ್ದಾರೆ.

VISTARANEWS.COM


on

Bharti Singh admitted to hospital
Koo

ಬೆಂಗಳೂರು: ಬಾಲಿವುಡ್‌ನ ಖ್ಯಾತ ನಿರೂಪಕಿ, ಹಾಸ್ಯ ನಟಿ ಭಾರತಿ ಸಿಂಗ್‌ (Bharti Singh) ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ವರದಿಯಾಗಿದೆ. ತಮ್ಮ ದೈನಂದಿನ ವ್ಲಾಗ್‌ಗಳ ಮೂಲಕ ಯೂಟ್ಯೂಬ್‌ನಲ್ಲಿ ಹೆಚ್ಚು ಫಾಲೋವರ್ಸ್‌ ಹೊಂಸಿರುವ ಭಾರತಿ ಸಿಂಗ್‌ ಆಗಾಗ ಅಪ್‌ಡೇಟ್‌ (Bharti Singh admitted) ಹಂಚಿಕೊಳ್ಳುತ್ತಲೇ ಇರುತ್ತಾರೆ. ಇತ್ತೀಚೆಗೆ ನಟಿ ತಮ್ಮ ವ್ಲಾಗ್‌ನಲ್ಲಿ ತೀವ್ರವಾದ ಹೊಟ್ಟೆ ನೋವಿನ ಬಳಿಕ ಆಸ್ಪತ್ರೆಗೆ ದಾಖಲಾಗಿರುವುದನ್ನು ಬಹಿರಂಗಪಡಿಸಿದ್ದಾರೆ. ಇದೀಗ ಈ ವಿಡಿಯೊಗಳು ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿದ್ದು, ಅವರ ಫ್ಯಾನ್ಸ್‌ ಚಿಂತೆಗೀಡಾಗಿದ್ದಾರೆ.

ಕೋಕಿಲಾಬೆನ್ ಆಸ್ಪತ್ರೆಯಲ್ಲಿ ನಟಿ ದಾಖಲಾಗಿದ್ದು ಡ್ರಿಪ್‌ಗಳನ್ನು ನೀಡಲಾಗಿದೆ. ಕಳೆದ ಕೆಲವು ದಿನಗಳಿಂದ ತೀವ್ರ ಹೊಟ್ಟೆ ನೋವಿನಿಂದ ಬಳಲುತ್ತಿದ್ದೇನೆ ಎಂದು ಹೇಳಿಕೊಂಡಿದ್ದಾರೆ. ಮೊದಲಿಗೆ ಗ್ಯಾಸ್ಟ್ರಿಕ್ ಸಮಸ್ಯೆ ಇದೆ ಎಂದು ಭಾವಿಸಿ ಆಸ್ಪತ್ರೆಗೆ ಹೋಗಲಿಲ್ಲವಂತೆ. ಆದರೆ ನೋವು ಕಡಿಮೆಯಾಗದಿದ್ದಾಗ ಆಸ್ಪತ್ರೆಗೆ ತೆರಳಬೇಕಾಯಿತು ಎಂದು ಹೇಳಿದ್ದಾರೆ. ಭಾರತಿ ಸಿಂಗ್ ಅವರು ಪಿತ್ತಕೋಶದ ಕಲ್ಲಿನ ಸಮಸ್ಯೆಯಿಂದ ಬಳಲುತ್ತಿದ್ದಾರೆ. ವ್ಲಾಗ್‌ನಲ್ಲಿ ಭಾರತಿ ಭಾವುಕರಾಗಿರುವುದನ್ನು ಕಾಣಬಹುದು.

ವ್ಲಾಗ್‌ನಲ್ಲಿ ಭಾರತಿ ಮಾತನಾಡಿ ʻʻನನಗೆ ನೋವು ಸಹಿಸಲು ಸಾಧ್ಯವಾಗುತ್ತಿರಲಿಲ್ಲ. ಪಿತ್ತಕೋಶದಲ್ಲಿ ಕಲ್ಲು ಇದೆ ಎಂದು ಆನಂತರ ಗೊತ್ತಾಯಿತು. ಪರಿಣಾಮವಾಗಿ, ನಾನು ಏನನ್ನೂ ತಿನ್ನಲು ಸಾಧ್ಯವಾಗಲಿಲ್ಲ. ವಾಂತಿ ಕೂಡ ಆಗಿತ್ತುʼʼಎಂದು ಹೇಳಿಕೊಂಡಿದ್ದಾರೆ.

ಇದನ್ನೂ ಓದಿ: Kareena Kapoor:‌ ರಾಕಿಂಗ್‌ ಸ್ಟಾರ್ ಯಶ್‌ ಸಿನಿಮಾದಿಂದ ಕರೀನಾ ಕಪೂರ್‌ ಔಟ್?

ಭಾರತಿ ಸಿಂಗ್‌ ಅಭಿಮಾನಿಗಳು ಇದೀಗ ಕಮೆಂಟ್‌ ಮೂಲಕ ಬೇಗ ಗುಣಮುಖರಾಗಿ ಎಂದು ಪ್ರಾರ್ಥಿಸುತ್ತಿದ್ದಾರೆ. ಒಬ್ಬರು ʻʻಈ ವಿಡಿಯೊ ನೋಡಿ ನನಗೆ ಅಳು ಬಂತು. ಬೇಗ ಗುಣಮುಖರಾಗಿ. ದುರ್ಗಾ ಮಾತೆ ಆಶೀರ್ವದಿಸುತ್ತಾಳೆ.”ಎಂದು ಬರೆದುಕೊಂಡಿದ್ದಾರೆ. ಮತ್ತೊಬ್ಬರು ʻʻನೀವು ಮೊದಲ ಬಾರಿಗೆ ಕ್ಯಾಮೆರಾ ಮುಂದೆ ಅತ್ತಿದ್ದು ನೋಡಿದೆ. ನನಗೂ ಅಳು ಬಂತುʼʼಎಂದು ಕಮೆಂಟ್‌ ಮಾಡಿದ್ದಾರೆ.

ಭಾರತಿ ಸಿಂಗ್ ಅವರಿದ್ದ ಎತ್ತರಕ್ಕೆ ಹೋಲಿಸಿ ನೋಡಿದರೆ ಅತಿಯಾದ ತೂಕ ಹೊಂದಿದ್ದರು. ಹೀಗಾಗಿ ಅವರ 15 ಕೆಜಿ ತೂಕ ಇಳಿಸಿಕೊಂಡ ನಂತರದಲ್ಲಿ ಗರ್ಭಿಣಿಯಾಗಿದ್ದರು. ಈಗಾಗಲೇ ಸಾಕಷ್ಟು ರಿಯಾಲಿಟಿ ಶೋ, ಪ್ರಶಸ್ತಿ ಸಮಾರಂಭಗಳನ್ನು ಭಾರತಿ ನಿರೂಪಣೆ ಮಾಡಿದ್ದಾರೆ.

Continue Reading

ಬಾಲಿವುಡ್

Kareena Kapoor:‌ ರಾಕಿಂಗ್‌ ಸ್ಟಾರ್ ಯಶ್‌ ಸಿನಿಮಾದಿಂದ ಕರೀನಾ ಕಪೂರ್‌ ಔಟ್?

Kareena Kapoor: ಚಿತ್ರದಲ್ಲಿ ಕರೀನಾ ಕಪೂರ್ ಅವರದ್ದು ಅತಿಥಿ ಪಾತ್ರವಲ್ಲ. ಟಾಕ್ಸಿಕ್‌ ಸಿನಿಮಾದಲ್ಲಿ ಯಶ್‌ ಸಹೋದರಿಯಾಗಿ ಕರೀನಾ ನಟಿಸಬೇಕಿತ್ತು. ಅದಕ್ಕಾಗಿ ಶೂಟಿಂಗ್‌ ಮಾಡಲು ಹಲವು ದಿನಗಳೇ ಬೇಕಿತ್ತು. ಆದರೆ ಕರೀನಾ ಅವರ ಕೈಯಲ್ಲಿ ಹಲವು ಸಿನಿಮಾಗಳು ಇವೆ. ವರದಿಯ ಪ್ರಕಾರ ಕರೀನಾ ಅವರು ಟಾಕ್ಸಿಕ್‌ ಸಿನಿಮಾದಿಂದ ಔಟ್‌ ಆಗಿದ್ದಾರೆ ಎನ್ನಲಾಗಿದೆ.

VISTARANEWS.COM


on

kareena kapoor out from yash starrer toxic
Koo

ಬೆಂಗಳೂರು: ʼಕೆಜಿಎಫ್‌ʼ ಚಿತ್ರದ ಮೂಲಕ ದೇಶಾದ್ಯಂತ ಸಂಚಲನ ಮೂಡಿಸಿದ ರಾಕಿಂಗ್‌ ಸ್ಟಾರ್‌ ಯಶ್‌ (Yash) ಅವರ ಮುಂದಿನ ಚಿತ್ರದ ಬಗ್ಗೆ ಅಭಿಮಾನಿಗಳಲ್ಲಿ ಕುತೂಹಲ ಮೂಡಿದೆ. ಸುಮಾರು ಒಂದೂವರೆ ವರ್ಷದ ಬಳಿಕ ಯಶ್‌ ಅಭಿನಯದ ʼಟಾಕ್ಸಿಕ್‌ʼ (Toxic) ಸಿನಿಮಾ ಘೋಷಣೆಯಾಗಿದೆ. ಮಲಯಾಳಂ ಮೂಲದ ನಟಿ, ನಿರ್ದೇಶಕಿ ಗೀತು ಮೋಹನ್‌ದಾಸ್‌ ಈ ಚಿತ್ರಕ್ಕೆ ಆ್ಯಕ್ಷನ್‌ ಕಟ್‌ ಹೇಳುತ್ತಿದ್ದಾರೆ. ಬಾಲಿವುಡ್‌ ಖ್ಯಾತ ನಟಿ ಕರೀನಾ ಕಪೂರ್‌ (Kareena Kapoor) ಈ ಚಿತ್ರದ ಮೂಲಕ ಸ್ಯಾಂಡಲ್‌ವುಡ್‌ಗೆ ಕಾಲಿಡುತ್ತಿದ್ದಾರೆ  ಎಂದು ಫ್ಯಾನ್ಸ್‌ ಸಂತದಲ್ಲಿ ಇದ್ದಿದ್ದರು. ಆದರೀಗ ವರದಿಯ ಪ್ರಕಾರ ಕರೀನಾ ಅವರು ಟಾಕ್ಸಿಕ್‌ ಸಿನಿಮಾದಿಂದ ಔಟ್‌ ಆಗಿದ್ದಾರೆ ಎನ್ನಲಾಗಿದೆ.

ಚಿತ್ರದಲ್ಲಿ ಕರೀನಾ ಕಪೂರ್ ಅವರದ್ದು ಅತಿಥಿ ಪಾತ್ರವಲ್ಲ. ಟಾಕ್ಸಿಕ್‌ ಸಿನಿಮಾದಲ್ಲಿ ಯಶ್‌ ಸಹೋದರಿಯಾಗಿ ಕರೀನಾ ನಟಿಸಬೇಕಿತ್ತು. ಅದಕ್ಕಾಗಿ ಶೂಟಿಂಗ್‌ ಮಾಡಲು ಹಲವು ದಿನಗಳೇ ಬೇಕಿತ್ತು. ಆದರೆ ಕರೀನಾ ಅವರ ಕೈಯಲ್ಲಿ ಹಲವು ಸಿನಿಮಾಗಳು ಇವೆ. ಡೇಟ್‌ ಹೊಂದಾಣಿಕೆ ಸಮಸ್ಯೆ ಬಂದ ಕಾರಣ ಕರೀನಾ ಅವರು ಈ ಸಿನಿಮಾದಿಂದ ಹೊರ ಬಂದಿದ್ದಾರೆ ಎಂದು ವರದಿಯಾಗಿದೆ. ಮೂಲಗಳ ಪ್ರಕಾರ ಚಿತ್ರತಂಡ ಇನ್ನೊಬ್ಬ ನಟಿಯನ್ನು ಹುಡುಕುತ್ತಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: Crime News: ಪತ್ನಿಯ ಪ್ರಿಯಕರನ ದ್ವೇಷಕ್ಕೆ ಬಲಿಯಾಯ್ತು ಎರಡು ಜೀವ; ಪಾರ್ಸಲ್‌ ಬಾಂಬ್‌ ಸ್ಫೋಟಕ್ಕೆ ಅಪ್ಪ-ಮಗಳು ಸಾವು

ಪ್ರಶಾಂತ್‌ ನೀಲ್‌ ನಿರ್ದೇಶನದ ʼಕೆಜಿಎಫ್‌ 2ʼ ಚಿತ್ರದಲ್ಲಿ ಬಾಲಿವುಡ್‌ ತಾರೆಯರಾದ ಸಂಜಯ್‌ ದತ್‌ ಮತ್ತು ರವೀನಾ ಟಂಡನ್‌ ಕಾಣಿಸಿಕೊಂಡಿದ್ದರು. ಯಶ್‌ ಜತೆ ಇವರ ಪಾತ್ರಗಳೂ ಮೆಚ್ಚುಗೆ ಪಡೆದಿದ್ದವು. ಕೆವಿಎನ್ ಪ್ರೊಡಕ್ಷನ್ಸ್ ಅಡಿಯಲ್ಲಿ ವೆಂಕಟ್ ಕೆ. ನಾರಾಯಣ ʼಟಾಕ್ಸಿಕ್‌ʼ ಚಿತ್ರವನ್ನು ನಿರ್ಮಿಸಲಿದ್ದಾರೆ.

ಕಳೆದ ತಿಂಗಳು ಭಾರತ, ಮಲೇಶಿಯಾ, ಜಪಾನ್, ನ್ಯೂಜಿಲ್ಯಾಂಡ್, ಆಫ್ರಿಕಾ, ಆಸ್ಟ್ರೇಲಿಯಾ, ರಷ್ಯಾ, ಇಂಗ್ಲೆಂಡ್‌, ಯೂರೋಪ್ ಸೇರಿದಂತೆ ಹಲವೆಡೆ ʼಟಾಕ್ಸಿಕ್‌ʼ ಟೈಟಲ್ ಅದ್ಧೂರಿಯಾಗಿ ರಿವೀಲ್ ಆಗಿತ್ತು. ಇದುವರೆಗೂ ಕನ್ನಡ ಯಾವ ಸಿನಿಮಾದ ಟೈಟಲ್ ಕೂಡ ವಿಶ್ವದಾದ್ಯಂತ ಈ ರೀತಿ ರಿಲೀಸ್ ಆಗಿಲ್ಲ. ಈ ಮೂಲಕ ಹಾಲಿವುಡ್ ರೇಂಜ್‌ನಲ್ಲಿ ಸಿನಿಮಾ ರಿಲೀಸ್‌ ಆಗುತ್ತಿದೆ ಎನ್ನುವುದು ಇದರಿಂದ ಕನ್ಫರ್ಮ್ ಆಗಿದೆ.

Continue Reading

ಕಿರುತೆರೆ

Shrirasthu Shubhamasthu: ಅಂತ್ಯ ಹಾಡಲಿದೆಯಾ ‘ಶ್ರೀರಸ್ತು ಶುಭಮಸ್ತು’? ಶಾರ್ವರಿ ರಹಸ್ಯ ಬಯಲಾಗೇ ಬಿಡ್ತಾ?

Shrirasthu Shubhamasthu: ಪ್ರತಿ ಧಾರಾವಾಹಿಯಲ್ಲಿಯೂ ಕಥೆಯಲ್ಲಿ ಯಾವುದಾದರೂ ಮುಖ್ಯ ರಹಸ್ಯವನ್ನು ಗುಟ್ಟಾಗಿಯೇ ಇಡುತ್ತಾರೆ. ಆ ಗುಟ್ಟು ರಟ್ಟಾದರೆ ಧಾರಾವಾಹಿಯೇ ಅಂತ್ಯಗೊಂಡಂತೆ. ಆದರೀಗ ಶಾವರ್ರಿ ಪಾತ್ರಧಾರಿ ತಾನು ಇಷ್ಟೂ ದಿನ ಸೇಡು ತೀರಿಸಿಕೊಳ್ಳಲು ಕಾರಣ ಏನು ಎಂಬುದುನ್ನು ಹೇಳ ಹೊರಟ್ಟಿದ್ದಾಳೆ. ಶ್ರೀರಸ್ತು ಶುಭಮಸ್ತು’ ಧಾರಾವಾಹಿಯು ಮರಾಠಿಯ ‘ಅಗ್ಗಾಬಾಯಿ ಸಾಸುಭಾಯಿ’ಯ ರಿಮೇಕ್ ಆಗಿದೆ. ‘ಶ್ರೀರಸ್ತು ಶುಭಮಸ್ತು’ 100 ಕ್ಕೂ ಹೆಚ್ಚು ಸಂಚಿಕೆಗಳನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದೆ. ʻ

VISTARANEWS.COM


on

Shrirasthu Shubhamasthu serial will be end
Koo

ಬೆಂಗಳೂರು:  ಕನ್ನಡ ಕಿರುತೆರೆಯ ಜನಪ್ರಿಯ ಧಾರಾವಾಹಿಗಳಲ್ಲಿ ‘ಶ್ರೀರಸ್ತು ಶುಭಮಸ್ತು’ (Shrirasthu Shubhamasthu) ಕೂಡ ಒಂದು. ಟಿಆರ್‌ಪಿಯಲ್ಲಿ ಮೊದ ಮೊದಲು ಒಳ್ಳೆಯ ಟಿಆರ್‌ಪಿ ಪಡೆದ ಧಾರಾವಾಹಿ ಬರಬರುತ್ತಾ ಟಾಪ್‌ 5ನಲ್ಲೇ ಇಲ್ಲವಾಗಿತ್ತು. ಆದರೀಗ ಧಾರಾವಾಹಿ ಮುಕ್ತಾಯಗೊಳ್ಳಲಿದೆ ಎಂದು ಗಾಸಿಪ್‌ಗಳು ಹರಿದಾಡುತ್ತಿವೆ. ಏಕೆಂದರೆ ಜೀ ಕನ್ನಡ ಹೊಸ ಪ್ರೋಮೊ ಹಂಚಿಕೊಂಡಿದೆ.

ಪ್ರತಿ ಧಾರಾವಾಹಿಯಲ್ಲಿಯೂ ಕಥೆಯಲ್ಲಿ ಯಾವುದಾದರೂ ಮುಖ್ಯ ರಹಸ್ಯವನ್ನು ಗುಟ್ಟಾಗಿಯೇ ಇಡುತ್ತಾರೆ. ಆ ಗುಟ್ಟು ರಟ್ಟಾದರೆ ಧಾರಾವಾಹಿಯೇ ಅಂತ್ಯಗೊಂಡಂತೆ. ಆದರೀಗ ಶಾವರ್ರಿ ಪಾತ್ರಧಾರಿ ತಾನು ಇಷ್ಟೂ ದಿನ ಸೇಡು ತೀರಿಸಿಕೊಳ್ಳಲು ಕಾರಣ ಏನು ಎಂಬುದುನ್ನು ಹೇಳ ಹೊರಟ್ಟಿದ್ದಾಳೆ. ಶಾರ್ವರಿ ತನ್ನ ಗಂಡನ ಅಣ್ಣ ಮಾಧವ್​,ಮತ್ತು ಅವರ ಪತ್ನಿ, ಮಕ್ಕಳನ್ನು ಮುಗಿಸಿಲೆಂದು ಹೊಂಚು ಹಾಕಿ ಆ್ಯಕ್ಸಿಡೆಂಟ್​ ಮಾಡಿಸಿರುತ್ತಾಳೆ. ಆಗ ಮಾಧವನ ಪತ್ನಿ ತೀರಿಕೊಳ್ಳುತ್ತಾರೆ. ಇದಾದ ಬಳಿಕ ಮಾಧವನ ಮಕ್ಕಳು ತಮ್ಮ ಅಪ್ಪನನ್ನು ತಾಯಿ ಕೊಲ್ಲಲು ತಂದೆಯೇ ಕಾರಣವೆಂದು ಅಪ್ಪನನ್ನು ಕೀಳಾಗಿ ನೋಡಿಕೊಂಡು ಬರುತ್ತಿರುತ್ತಾರೆ. ಇನ್ನು ಶಾರ್ವರಿ ಅನ್ನು ದೇವರಂತೆ ಪೂಜೆ ಮಾಡುತ್ತಿರುತ್ತಾರೆ ಮಾಧವನ ಮಕ್ಕಳು. ಇದೀಗ ಶಾರ್ವರಿ ಗಂಡ ಮಹೇಶನಿಗೆ ಶಾರ್ವರಿಯೇ ಆಕ್ಸೆಡೆಂಟ್‌ ಮಾಡಿಸಿದ್ದು ಎಂದು ಗೊತ್ತಾಗಿದೆ. ಶಾರ್ವರಿಯ ಗುಟ್ಟು ರಟ್ಟಾದರೆ ಅಲ್ಲಿ ಕಥೆ ಮುಗಿದಂತೆ. ಆದರೀಗ ಬಿಡುಗಡೆಯಾಗಿರುವ ಪ್ರೊಮೋದಲ್ಲಿ ತುಳಸಿ ಪೂಜೆ ಮುಗಿಸುತ್ತಿದ್ದಂತೆಯೇ ಸಂಪೂರ್ಣ ಸತ್ಯವನ್ನು ಒಪ್ಪಿಕೊಳ್ಳುವಂತೆ ಮಹೇಶ್‌ ಪತ್ನಿ ಶಾರ್ವರಿಗೆ ಹೇಳಿದ್ದಾನೆ.

ಶಾರ್ವರಿ ಅಪಘಾತ ಮಾಡಿಸಲು ಕಾರಣವೂ ಇದೆ. ಮಾಧವ್​ ಪತ್ನಿ ಸುಮತಿಗೆ ಮನೆಯಲ್ಲಿ ಎಲ್ಲರೂ ಗೌರವ ಕೊಡುತ್ತಿರುತ್ತಾರೆ. ಅವಳ ಮುಂದೆಯೇ ತಲೆಬಾಗಿ ಎಲ್ಲರೂ ಮರ್ಯಾದೆ ಕೊಡುತ್ತಾರೆ, ನಾನೂ ಆ ಮನೆಯ ಸೊಸೆ. ಆದರೆ ನನಗೆ ಯಾರೂ ಮರ್ಯಾದೆ ಕೊಡುತ್ತಿರಲಿಲ್ಲ. ಅದಕ್ಕಾಗಿ ಕೊಲೆ ಮಾಡಿಸಿದೆ ಎಂದು ಎಷ್ಟು ಸಲೀಸಾಗಿ ಹಿಂದೆ ಒಪ್ಪಿಕೊಂಡಿದ್ದಳು ಶಾರ್ವರಿ. ಆದರೆ ಈಗ ಮಾಧವನಿಗೆ ಎರಡನೇ ಹೆಂಡತಿಯಾಗಿ ತುಳಸಿ ಬಂದಿರುತ್ತಾಳೆ. ತುಳಸಿಗೂ ಅದೇ ಗೌರ ಸಿಕ್ಕಿರುವುದನ್ನು ಸಹಿಸಲು ಆಗುತ್ತಿಲ್ಲ ಶಾರ್ವರಿಗೆ. ಈಗ ಮಹೇಶ ಆಜ್ಞೆಯಂತೆ ಮನೆಯವರ ಮುಂದೆ ಎಲ್ಲ ಸತ್ಯವನ್ನು ಒಪ್ಪಿಕೊಳ್ಳಬೇಕಿದೆ.

ಇದನ್ನೂ ಓದಿ: Shrirasthu Shubhamasthu Serial: ʻಶ್ರೀರಸ್ತು ಶುಭಮಸ್ತುʼ ಧಾರಾವಾಹಿಯ ಮಾಧವ್‌ ಕಿರುತೆರೆಗೆ ಹೊಸಬರಲ್ಲ!

ಪೂಜೆ ಮುಗಿಯುತ್ತಿದ್ದಂತೆಯೇ ಶಾರ್ವರಿ ನಾನು ಸತ್ಯವನ್ನು ಹೇಳಬೇಕಿದೆ. ಎಲ್ಲರ ಎದುರು ಸತ್ಯ ಹೇಳುತ್ತಿದ್ದೇನೆ ಎಂದು ಹೇಳಿದ್ದಾಳೆ. ಅದರ ಪ್ರೊಮೋ ಅನ್ನು ಜೀ ಕನ್ನಡ ವಾಹಿನಿ ಬಿಡುಗಡೆ ಮಾಡಿದೆ. ಶಾರ್ವರಿ ನಿಜಕ್ಕೂ ಸತ್ಯ ನುಡಿದರೆ ಸೀರಿಯಲ್‌ ಮುಗಿದಂತೆಯೇ ಎಂದು ಪ್ರೇಕ್ಷಕರು ಕಮೆಂಟ್‌ ಮಾಡಿದ್ದಾರೆ. ಇನ್ನು ಕೆಲವರು ಹೇಳುವ ಭರದಲ್ಲಿ ಬೇರೆ ಏನಾದರೂ ಶಾರ್ವರಿ ಹೇಳಬಹುದು ಎಂದು ನೋಡುಗರು ಕಮೆಂಟ್‌ ಮಾಡಿದ್ದಾರೆ.

ಇದನ್ನೂ ಓದಿ: Shrirasthu Shubhamasthu | ದುಡಿದು, ದಣಿವ ಅಮ್ಮಂದಿರ ದನಿಯಾಗಿ ಬರುತ್ತಿದೆ ಹೊಸ ಕಥೆ: ಶ್ರೀರಸ್ತು ಶುಭಮಸ್ತು!

 ‘ಶ್ರೀರಸ್ತು ಶುಭಮಸ್ತು’ ಧಾರಾವಾಹಿಯು ಮರಾಠಿಯ ‘ಅಗ್ಗಾಬಾಯಿ ಸಾಸುಭಾಯಿ’ಯ ರಿಮೇಕ್ ಆಗಿದೆ. ‘ಶ್ರೀರಸ್ತು ಶುಭಮಸ್ತು’ 100 ಕ್ಕೂ ಹೆಚ್ಚು ಸಂಚಿಕೆಗಳನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದೆ. ʻಶ್ರೀರಸ್ತು ಶುಭಮಸ್ತುʼ ಧಾರಾವಾಹಿಯಲ್ಲಿ ನಟಿ ಸುಧಾರಾಣಿ ಸೊಸೆಯ ಪಾತ್ರ ನಿರ್ವಹಿಸುತ್ತಿದ್ದಾರೆ. ಈ ಧಾರಾವಾಹಿಯಲ್ಲಿ ಮಧ್ಯ ವಯಸ್ಕನ ಪಾತ್ರವನ್ನು ಅಜಿತ್‌ ನಿರ್ವಹಿಸುತ್ತಿದ್ದಾರೆ.

Continue Reading

ಕಿರುತೆರೆ

Kannada Serials TRP: ಈ ವಾರ ಟಿಆರ್‌ಪಿಯಲ್ಲಿʻ ಪುಟ್ಟಕ್ಕನ ಮಕ್ಕಳುʼ ಟಾಪ್‌ 1: ಕಲರ್ಸ್‌ನಲ್ಲಿ ‘ರಾಮಾಚಾರಿ’ಗೆ ಮೊದಲ ಸ್ಥಾನ!

Kannada Serials TRP: ಜೀ ಕನ್ನಡದ ಜನಪ್ರಿಯ ಧಾರಾವಾಹಿ ‘ಪುಟ್ಟಕ್ಕನ ಮಕ್ಕಳು’ ಟಿಆರ್‌ಪಿ ಪಟ್ಟಿಯಲ್ಲಿ ನಂಬರ್ ಒನ್ ಸ್ಥಾನದಲ್ಲಿದೆ. ಜೀ ಕನ್ನಡದಲ್ಲಿ ಹೊಸ ಧಾರಾವಾಹಿ ‘ಲಕ್ಷ್ಮಿ ನಿವಾಸ’ ಆರಂಭ ಆದ ಕೆಲವು ದಿನಗಳಲ್ಲೇ ‘ಪುಟ್ಟಕ್ಕನ ಮಕ್ಕಳು’ ನಂಬರ್ ಒನ್ ಸ್ಥಾನದಿಂದ ಕೆಳಗೆ ಇಳಿದಿತ್ತು.ಸೀತಾ ರಾಮ’ ಧಾರಾವಾಹಿಗೆ ಮೂರನೇ ಸ್ಥಾನ ಸಿಕ್ಕಿದೆ. ಈ ಧಾರಾವಾಹಿ ಟಿಆರ್​ಪಿಯಲ್ಲಿ ಮುನ್ನಡೆ ಸಾಧಿಸಿದೆ. ಧಾರಾವಾಹಿ ಜೀ ವಾಹಿನಿಯಲ್ಲಿ ಪ್ರಸಾರ ಕಾಣುತ್ತಿದೆ.

VISTARANEWS.COM


on

Kannada Serials TRP puttakkana makkalu top the list
Koo

ಬೆಂಗಳೂರು:  ಪ್ರತಿ ಬಾರಿ ಜೀ ಕನ್ನಡ ವಾಹಿನಿ ಧಾರಾವಾಹಿಯ (Kannada Serials TRP) ʻಲಕ್ಷ್ಮೀ ನಿವಾಸʼ ಟಿಆರ್‌ಪಿಯಲ್ಲಿ ಮೊದಲ ಸ್ಥಾನ ಪಡೆದುಕೊಳ್ಳುತ್ತಿತ್ತು. ಆದರೆ ಈ ವಾರ ʻಪುಟ್ಟಕನ ಮಕ್ಕಳುʼ ಧಾರಾವಾಹಿ ಮೊದಲ ಸ್ಥಾನ ಪಡೆದುಕೊಂಡಿದೆ. ಕಲರ್ಸ್‌ ಕನ್ನಡದ ʻರಾಮಾಚಾರಿʼ ಸಿನಿಮಾ ಕೂಡ ಟಾಪ್‌ 5ನಲ್ಲಿ ಇದೆ. ಮೇ 3ರಂದು ಕಳೆದ ವಾರದ ಟಿಆರ್‌ಪಿ ಲಿಸ್ಟ್ ಹೊರಬಿದ್ದಿದೆ.ಜೀ ಕನ್ನಡದ ಜನಪ್ರಿಯ ಧಾರಾವಾಹಿ ‘ಪುಟ್ಟಕ್ಕನ ಮಕ್ಕಳು’ ಟಿಆರ್‌ಪಿ ಪಟ್ಟಿಯಲ್ಲಿ ನಂಬರ್ ಒನ್ ಸ್ಥಾನದಲ್ಲಿದೆ. ಜೀ ಕನ್ನಡದಲ್ಲಿ ಹೊಸ ಧಾರಾವಾಹಿ ‘ಲಕ್ಷ್ಮಿ ನಿವಾಸ’ ಆರಂಭ ಆದ ಕೆಲವು ದಿನಗಳಲ್ಲೇ ‘ಪುಟ್ಟಕ್ಕನ ಮಕ್ಕಳು’ ನಂಬರ್ ಒನ್ ಸ್ಥಾನದಿಂದ ಕೆಳಗೆ ಇಳಿದಿತ್ತು.

‘ಪುಟ್ಟಕ್ಕನ ಮಕ್ಕಳು’

ಈ ವಾರ ಪುಟ್ಟಕ್ಕನ ಮಕ್ಕಳು ಧಾರಾವಾಹಿ ಮೊದಲ ಸ್ಥಾನ ಪಡೆದುಕೊಂಡಿದೆ. ಈ ಧಾರಾವಾಹಿ ಈ ಮೊದಲು ಎರಡಂಕಿ ಟಿಆರ್​ಪಿ ಪಡೆಯುತ್ತಿತ್ತು. ಆದರೆ, ಇತ್ತೀಚೆಗೆ ಟಿಆರ್​ಪಿ ಕುಸಿಯುತ್ತಿತ್ತು. ಪಾಯಿಂಟ್ ಒಂದು ಅಂಕಗಳ ಅಂತರದಲ್ಲಿ ಈ ಧಾರಾವಾಹಿ ಮೊದಲ ಸ್ಥಾನ ಪಡೆದುಕೊಂಡಿದೆ. ಸಹನಾ ದಾಂಪತ್ಯ ಕಲಹದಿಂದಾಗಿ ಇದೀಗ ಟಿಆರ್‌ಪಿ ಜಾಸ್ತಿ ಆದಂತಾಗಿದೆ. ಪ್ರೇಕ್ಷಕರು ಕೂಡ ಧಾರಾವಾಹಿಯನ್ನು ಮೆಚ್ಚಿಕೊಂಡಿದ್ದಾರೆ. ‘ಪುಟ್ಟಕ್ಕನ ಮಕ್ಕಳು’ ಧಾರಾವಾಹಿ (puttakkana makkalu Serial) ಶುರುವಾಗಿ ಎರಡು ವರ್ಷಗಳು ಸಂದಿವೆ. ಉಮಾಶ್ರೀ, ಸಂಜನಾ ಬುರ್ಲಿ, ಧನುಷ್ ಎನ್​ಎಸ್ ಮೊದಲಾದವರು ಈ ಧಾರಾವಾಹಿಯಲ್ಲಿ ನಟಿಸುತ್ತಿದ್ದಾರೆ. ಜೀ ವಾಹಿನಿಯಲ್ಲಿ ಪ್ರಸಾರ ಕಾಣುತ್ತಿದೆ.

ಇದನ್ನೂ ಓದಿ: Kannada Serials TRP: ಈ ವಾರ ಟಿಆರ್‌ಪಿಯಲ್ಲಿ ʻಲಕ್ಷ್ಮೀ ನಿವಾಸʼಕ್ಕೆ ಎರಡನೇ ಸ್ಥಾನ: ಟಾಪ್‌ 5ನಲ್ಲಿ ʻಅಮೃತಧಾರೆʼ!

ಲಕ್ಷ್ಮೀ ನಿವಾಸ

ಸಾಯಿ ನಿರ್ಮಲ ಪ್ರೊಡಕ್ಷನ್‌ ಸಂಸ್ಥೆಯ ನಿರ್ಮಾಣ, ಆದರ್ಶ್ ಉಮೇಶ್ ಹೆಗಡೆ ನಿರ್ದೇಶನ ಈ ಧಾರಾವಾಹಿಗೆ (lakshmi nivasa kannada serial) ಇದೆ. ಕಿರುತೆರೆಯಲ್ಲಿ ಈ ಹಿಂದೆ ಹೀರೊ ಹೀರೋಯಿನ್‌ಗಳಾಗಿ‌ ಮಿಂಚಿದ್ದ ಹಲವು ಅನುಭವಿ ಕಲಾವಿದರು ಈ ಧಾರಾವಾಹಿಯ ಮುಖ್ಯಭೂಮಿಕೆಯಲ್ಲಿದ್ದಾರೆ. ಇಬ್ಬರು ಹೆಣ್ಣು ಮಕ್ಕಳ ಮದುವೆ ಮಾಡಬೇಕು ಎಂದು ಕಷ್ಟಪಡುವ ತಂದೆಯ ಕಥೆ-ವ್ಯಥೆಯ ಜೊತೆ ಸಾಕಷ್ಟು ಭಾವನಾತ್ಮಕ ವಿಚಾರಗಳನ್ನು ಈ ಧಾರಾವಾಹಿಯಲ್ಲಿ (Kannada Serials TRP) ತೋರಿಸಲಾಗಿದೆ. ಸದ್ಯ ಜಯಂತ್‌ನ ಅಸಲಿ ಮುಖ ಜಾಹ್ನವಿ ತಿಳಿಯಬೇಕಿದೆ. ಈ ಧಾರಾವಾಹಿ ಟಿಆರ್​ಪಿಯಲ್ಲಿ ಮೊದಲ ಸ್ಥಾನ ಪಡೆದುಕೊಂಡಿದೆ. ಅದ್ಧೂರಿ ಬಜೆಟ್​ನಲ್ಲಿ ಈ ಧಾರಾವಾಹಿ ಸಿದ್ಧವಾಗಿದೆ. ಜೀ ವಾಹಿನಿಯಲ್ಲಿ ಪ್ರಸಾರ ಕಾಣುತ್ತಿದೆ.ಎರಡನೇ ಸ್ಥಾನದಲ್ಲಿ ಈ ಬಾರಿ ‘ಲಕ್ಷ್ಮೀ ನಿವಾಸ’ ಧಾರಾವಾಹಿ ಇದೆ.

ಸೀತಾ ರಾಮ

‘ಸೀತಾ ರಾಮ’ ಧಾರಾವಾಹಿಗೆ ಮೂರನೇ ಸ್ಥಾನ ಸಿಕ್ಕಿದೆ. ಈ ಧಾರಾವಾಹಿ ಟಿಆರ್​ಪಿಯಲ್ಲಿ ಮುನ್ನಡೆ ಸಾಧಿಸಿದೆ. ಧಾರಾವಾಹಿ ಜೀ ವಾಹಿನಿಯಲ್ಲಿ ಪ್ರಸಾರ ಕಾಣುತ್ತಿದೆ.

‘ರಾಮಾಚಾರಿ’

ಕಲರ್ಸ್ ಕನ್ನಡದ ಧಾರಾವಾಹಿ ‘ರಾಮಾಚಾರಿ’ (Ramachari Serila Kannada) ನಾಲ್ಕನೇ ಸ್ಥಾನ ಪಡೆದುಕೊಂಡಿದೆ. ಮೌನ, ರುತ್ವಿಕ್ ಕೃಪಾಕರ್ ಮೊದಲಾದವರು ಈ ಧಾರಾವಾಹಿಯಲ್ಲಿ ನಟಿಸುತ್ತಿದ್ದಾರೆ. ಕಿಟ್ಟಿಯ ಪಾತ್ರ ಕೂಡ ಜನ ಮೆಚ್ಚಿದ್ದಾರೆ. ಈ ಧಾರಾವಾಹಿಯ ಟಿಆರ್​ಪಿಯಲ್ಲಿ ಏರಿಳಿತ ಆಗುತ್ತಲೇ ಇದೆ. ಇದು ಕಲರ್ಸ್‌ ಕನ್ನಡದಲ್ಲಿ ಪ್ರಸಾರ ಕಾಣುತ್ತಿದೆ.’ರಾಮಾಚಾರಿ’ ಧಾರಾವಾಹಿ ಕಲರ್ಸ್ ಕನ್ನಡದ ಟಾಪ್ ಸ್ಥಾನದಲ್ಲಿದೆ. 4.6 ಅಂಕಗಳೊಂದಿಗೆ ನಂಬರ್ ಒನ್ ಸ್ಥಾನದಲ್ಲಿದೆ.

ಇನ್ನು ಕಲರ್ಸ್‌ಕನ್ನಡದಲ್ಲಿ ರಾಮಾಚಾರಿ ಟಾಪ್‌ 1 ಆದರೆ, ‘ಭಾಗ್ಯಲಕ್ಷ್ಮಿ’ ಧಾರಾವಾಹಿ 4.3 ಅಂಕಗಳೊಂದಿಗೆ ಎರಡನೇ ಸ್ಥಾನದಲ್ಲಿದೆ. ಹಾಗೇ ‘ಲಕ್ಷ್ಮಿ ಬಾರಮ್ಮ’ 3.6 ಅಂಕಗಳೊಂದಿಗೆ ಮೂರನೇ ಸ್ಥಾನದಲ್ಲಿದೆ.

ಇದನ್ನೂ ಓದಿ: Kannada Serials TRP: ಐಪಿಎಲ್​ ಎಫೆಕ್ಟ್‌: ಯಾವ ಧಾರಾವಾಹಿ ಈ ವಾರ ಟಾಪ್‌?

ಸ್ಟಾರ್‌ ಸುವರ್ಣದಲ್ಲಿ ಕೂಡ ಧಾರಾವಾಹಿಗಳು ಒಳ್ಳೆಯ ಟಿಆರ್‌ಪಿ ಪಡೆದುಕೊಳ್ಳುತ್ತಿದೆ. ‘ಉಧೋ ಉಧೋ ಶ್ರೀ ರೇಣುಕಾ ಯಲ್ಲಮ್ಮ : 3.7 ಅಂಕಗಳೊಂದಿಗೆ ಟಾಪ್‌ ಸ್ಥಾನದಲ್ಲಿದೆ. ‘ಯಡಿಯೂರು ಸಿದ್ಧಲಿಂಗೇಶ್ವರ’ 3.5 ಅಂಕಗಳೊಂದಿಗೆ ಎರಡನೇ ಸ್ಥಾನದಲ್ಲಿದೆ. ‘ನೀನಾದೆ ನಾ’ 3 ಅಂಕಗಳೊಂದಿಗೆ ಮೂರನೇ ಸ್ಥಾನದಲ್ಲಿದೆ.

ಕನ್ನಡ ಟಾಪ್ 3 ಮನರಂಜನಾ ವಾಹಿನಿಗಳಲ್ಲಿ ಜೀ ಕನ್ನಡ, ಕಲರ್ಸ್ ಕನ್ನಡ ಹಾಗೂ ಸ್ಟಾರ್ ಸುವರ್ಣವಿದೆ. ಎಂದಿನಂತೆ ಮೂರೂ ವಾಹಿನಿಗಳು ಕಾಂಪಿಟೇಷನ್‌ಗೆ ಬಿದ್ದು, ಧಾರಾವಾಹಿ ಹಾಗೂ ರಿಯಾಲಿಟಿ ಶೋಗಳನ್ನು ಪ್ರಸಾರ ಮಾಡುತ್ತಿದೆ.

Continue Reading
Advertisement
Prajwal Revanna Case
ಕರ್ನಾಟಕ13 mins ago

Prajwal Revanna Case: ರೇವಣ್ಣ ಮನೆ ಕೆಲಸದ ಮಹಿಳೆ ಕಿಡ್ನ್ಯಾಪ್‌ ಕೇಸ್; 2ನೇ ಆರೋಪಿಗೆ 14 ದಿನ ನ್ಯಾಯಾಂಗ ಬಂಧನ

Summer Fashion
ಫ್ಯಾಷನ್29 mins ago

Summer Fashion: ಬೇಸಿಗೆಯಲ್ಲಿ ಹುಡುಗಿಯರನ್ನು ಸವಾರಿ ಮಾಡುತ್ತಿರುವ 5 ಶೈಲಿಯ ಗ್ಲಾಮರಸ್‌ ಟಾಪ್‌ಗಳಿವು

Summer Tour
ಪ್ರವಾಸ47 mins ago

Summer Tour: ಕಾಶ್ಮೀರ ಪ್ರವಾಸ ಮಾಡಲೊಂದು ಚಾನ್ಸ್! ಐ ಆರ್ ಸಿ ಟಿ ಸಿಯಿಂದ ವಿಶೇಷ ಪ್ಯಾಕೇಜ್

IPL 2024
ಕ್ರೀಡೆ51 mins ago

IPL 2024 : ಐಪಿಎಲ್​ಗೆ ಅರ್ಧದಲ್ಲೇ ವಿದಾಯ ಹೇಳಿದ ಮುಸ್ತಾಫಿಜುರ್​ಗೆ ಸಹಿ ಹಾಕಿದ ಜೆರ್ಸಿ ನೀಡಿದ ಧೋನಿ

Tips for bedroom corner
ಲೈಫ್‌ಸ್ಟೈಲ್53 mins ago

Tips for Bedroom Corner: ಮಲಗುವ ಕೋಣೆಯ ಮೂಲೆಗಳನ್ನು ಆಕರ್ಷಕವಾಗಿಸಲು ಕೆಲವು ಟಿಪ್ಸ್

Viral Video
ವೈರಲ್ ನ್ಯೂಸ್56 mins ago

Viral Video: ಪ್ರಿನ್ಸಿಪಾಲ್ ಆದರೇನು, ಟೀಚರ್ ಆದರೇನು? ಹೆಂಗಸರ ಬಡಿದಾಟ ಇರೋದೇ ಹೀಗೆ! ವಿಡಿಯೊ ನೋಡಿ

Rohit Sharma
ಪ್ರಮುಖ ಸುದ್ದಿ1 hour ago

Rohit Sharma : ರೋಹಿತ್ ಶರ್ಮಾ ದೌರ್ಬಲ್ಯವನ್ನು ಬೊಟ್ಟು ಮಾಡಿ ತೋರಿಸಿದ ವಾಸಿಮ್​ ಜಾಫರ್​

Prajwal Revanna Case face not visible in videos says HD Kumaraswamy
ಕ್ರೈಂ1 hour ago

Prajwal Revanna Case: ವಿಡಿಯೊದಲ್ಲಿ ಪ್ರಜ್ವಲ್‌ ಮುಖ ಕಾಣಲ್ಲ; ಗಂಡಸ್ತನವಿದ್ದರೆ ರಾಹುಲ್‌ ಗಾಂಧಿಗೆ ನೋಟಿಸ್‌ ಕೊಡಿ: ಸಿಎಂಗೆ ಎಚ್‌ಡಿಕೆ ಸವಾಲು

Covishield Vaccine
ಪ್ರಮುಖ ಸುದ್ದಿ1 hour ago

Covishield Vaccine: ಕೋವಿಶೀಲ್ಡ್ ಪಡೆದವರು ಫ್ರಿಡ್ಜ್ ನೀರು, ಐಸ್ ಕ್ರೀಂ, ಕೂಲ್‌ ಡ್ರಿಂಕ್ಸ್‌ ಸೇವಿಸಬಾರದು: ತಪ್ಪು ಮಾಹಿತಿ ಕೊಟ್ಟ ಕಾಲೇಜುಗಳಿಗೆ ನೋಟಿಸ್

T20 World Cup
ಪ್ರಮುಖ ಸುದ್ದಿ1 hour ago

T20 World Cup : ವಿಶ್ವ ಕಪ್​​ ಟೂರ್ನಿಗೆ ಭಾರತದ ಇಬ್ಬರು ಅಂಪೈರ್​ಗಳು ಆಯ್ಕೆ; ಯಾರೆಲ್ಲ ಅವರು?

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Bengaluru Rains
ಮಳೆ3 hours ago

Bengaluru Rains:‌ ಅಬ್ಬಾಬ್ಬ ಲಾಟ್ರಿ.. ಕಂಗ್ರಾಜುಲೇಷನ್ ಬ್ರದರ್.. ಬೆಂಗಳೂರು ಮಳೆಗೆ ನೆಟ್ಟಿಗರ ವಿಷ್‌, ಫುಲ್ ಖುಷ್‌

Dina Bhavishya
ಭವಿಷ್ಯ14 hours ago

Dina Bhavishya: ಈ ರಾಶಿಯ ವಿವಾಹ ಅಪೇಕ್ಷಿತರಿಗೆ ಸಿಗಲಿದೆ ಗುಡ್‌ ನ್ಯೂಸ್‌

Prajwal Revanna Case Another victim gives statement before judge Will Revanna get anticipatory bail
ಕ್ರೈಂ24 hours ago

Prajwal Revanna Case: ನ್ಯಾಯಾಧೀಶರ ಮುಂದೆ 2 ಗಂಟೆ ಹೇಳಿಕೆ ನೀಡಿದ ಮತ್ತೊಬ್ಬ ಸಂತ್ರಸ್ತೆ; ರೇವಣ್ಣಗೆ ಸಿಗುತ್ತಾ ನಿರೀಕ್ಷಣಾ ಜಾಮೀನು?

Dina Bhavishya
ಭವಿಷ್ಯ2 days ago

Dina Bhavishya : ದಿನದ ಕೊನೆಯಲ್ಲಿ ಈ ರಾಶಿಯವರು ಯಾವುದಾದರೂ ಶುಭ ಸುದ್ದಿ ಕೇಳುವಿರಿ

dina bhavishya read your daily horoscope predictions for April 30 2024
ಭವಿಷ್ಯ4 days ago

Dina Bhavishya: ಈ ರಾಶಿಗಳ ಉದ್ಯೋಗಿಗಳಿಗೆ ಇಂದು ಒತ್ತಡ ಹೆಚ್ಚಲಿದೆ!

PM Narendra modi in Bagalakote and Attack on Congress
Lok Sabha Election 20244 days ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 20244 days ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ5 days ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Vote Jihad
Lok Sabha Election 20245 days ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

PM Narendra Modi in Sirsi
Lok Sabha Election 20245 days ago

PM Narendra Modi: ಕಾಂಗ್ರೆಸ್ ರಾಮ ವಿರೋಧಿ; ಮನೆಗೆ ಹೋಗಿ ಕರೆದರೂ ಮಂದಿರ ಉದ್ಘಾಟನೆಗೆ ಬರಲಿಲ್ಲ: ಮೋದಿ ಟೀಕೆ

ಟ್ರೆಂಡಿಂಗ್‌