T20 World Cup | ಫೀಲ್ಡಿಂಗ್​ ಮಾಡುವಾಗ ಕಳಚಿತು ಜಿಂಬಾಬ್ವೆ ಆಟಗಾರನ ಪ್ಯಾಂಟ್​! - Vistara News

Latest

T20 World Cup | ಫೀಲ್ಡಿಂಗ್​ ಮಾಡುವಾಗ ಕಳಚಿತು ಜಿಂಬಾಬ್ವೆ ಆಟಗಾರನ ಪ್ಯಾಂಟ್​!

ಟಿ20 ವಿಶ್ವ ಕಪ್​(T20 World Cup)ನ ಬುಧವಾರದ ನೆದರ್ಲೆಂಡ್ಸ್​ ವಿರುದ್ಧದ ಪಂದ್ಯದಲ್ಲಿ ಫೀಲ್ಡಿಂಗ್​ ನಡೆಸುತ್ತಿದ್ದ ಜಿಂಬಾಬ್ವೆ ತಂಡದ ಆಟಗಾರ ಮಿಲ್ಟನ್​ ಶುಂಬಾ ಅವರ ಪ್ಯಾಂಟ್​ ಕಳಚಿದ ಪ್ರಸಂಗ ನಡೆದಿದೆ.

VISTARANEWS.COM


on

t20
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಅಡಿಲೇಡ್​: ಟಿ20 ವಿಶ್ವ ಕಪ್​(T20 World Cup)ನ ಬುಧವಾರದ ನೆದರ್ಲೆಂಡ್ಸ್​ ವಿರುದ್ಧದ ಪಂದ್ಯದಲ್ಲಿ ಫೀಲ್ಡಿಂಗ್​ ನಡೆಸುತ್ತಿದ್ದ ಜಿಂಬಾಬ್ವೆ ತಂಡದ ಆಟಗಾರ ಮಿಲ್ಟನ್​ ಶುಂಬಾ ಅವರ ಪ್ಯಾಂಟ್​ ಕಳಚಿದ ಪ್ರಸಂಗ ನಡೆದಿದೆ. ಬೌಂಡರಿ ರೋಪ್​ ಮೇಲೆ ಬಿದ್ದು ಜಾರಿದ ಪರಿಣಾಮ ಶುಂಬಾ ಅವರ ಪ್ಯಾಂಟ್​ ಕಳಚಿದೆ. ಈ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದೆ.

ಅಡಿಲೇಡ್​ ಓವಲ್​ ಮೈದಾನದಲ್ಲಿ ನಡೆದ ದಿನದ ಮೊದಲ ಮುಖಾಮುಖಿಯಲ್ಲಿ ಟಾಸ್​ ಗೆದ್ದು ಮೊದಲು ಬ್ಯಾಟಿಂಗ್​ ನಡೆಸಿದ ಜಿಂಬಾಬ್ವೆ ತಂಡ 19.2 ಓವರ್​ಗಳಲ್ಲಿ 117ಕ್ಕೆ ಆಲೌಟ್​ ಆಯಿತು. ಗುರಿ ಬೆನ್ನಟ್ಟಿದ ನೆದರ್ಲೆಂಡ್ಸ್​ 18 ಓವರ್​ಗಳಲ್ಲಿ 5 ವಿಕೆಟ್​ಗೆ 120 ರನ್​ ಬಾರಿಸಿ ಗೆಲುವಿನ ನಗೆ ಬೀರಿತು. ಚೇಸಿಂಗ್​ ವೇಳೆ ಮ್ಯಾಕ್ಸ್ ಒ’ಡೌಡ್(52) ಮತ್ತು ಟಾಮ್ ಕೂಪರ್ (32) ಉತ್ತಮ ಜತೆಯಾಟ ನಡೆಸುವ ಮೂಲಕ ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರವಹಿಸಿದರು.

ನೆದರ್ಲೆಂಡ್ಸ್​ ತಂಡದ ಚೇಸಿಂಗ್​ ವೇಳೆ ಮ್ಯಾಕ್ಸ್ ಒ’ಡೌಡ್ ಹೊಡೆದ ಚೆಂಡನ್ನು ಬೌಂಡರಿ ಲೈನ್​ನಲ್ಲಿ ಡೈವಿಂಗ್​ ಮೂಲಕ ಕ್ಯಾಚ್​ ಹಿಡಿಯಲು ಯತ್ನಿಸಿದ ಶುಂಬಾ ಬೌಂಡರಿ ರೋಪ್​ ಮೇಲೆ ಬಿದ್ದ ಪರಿಣಾಮ ಅವರ ಪ್ಯಾಂಡ್​ ಹಗ್ಗಕ್ಕೆ ಸಿಲುಕಿ ಜಾರಿದೆ. ಇದೇ ವಿಡಿಯೊವನ್ನು ಮುಂದಿಟ್ಟು ಕೆಲವರು ಸಾಮಾಜಿಕ ಜಾಲತಾಣದಲ್ಲಿ ಟ್ರೋಲ್​ ಮಾಡಿದ್ದಾರೆ. ಮೊದಲು ಸರಿಯಾಗಿ ಪ್ಯಾಂಟ್​ ಕಟ್ಟಿಕೊಳ್ಳಲು ಕಲಿತುಕೊಳ್ಳಿ ಬಳಿಕ ಕ್ಯಾಚ್​ ಹಿಡಿಯಲು ಪ್ರಯತ್ನ ಮಾಡಿ ಎಂದು ಟ್ರೋಲ್​ ಮಾಡಿದ್ದಾರೆ.

ಇದನ್ನೂ ಓದಿ | Indian 2 Film | ʻಇಂಡಿಯನ್‌ 2ʼ ಚಿತ್ರದಲ್ಲಿ ಬಣ್ಣ ಹಚ್ಚುತ್ತಿದ್ದಾರೆ ಖ್ಯಾತ ಕ್ರಿಕೆಟರ್‌ ತಂದೆ, ಯಾರವರು?

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ರಾಜಕೀಯ

Raksha Khadse: ಅಂದು ಪಂಚಾಯಿತಿ ಸದಸ್ಯೆ, ಇಂದು ಕೇಂದ್ರ ಸಚಿವೆ! ಯಾರು ಈ ರಕ್ಷಾ ಖಡ್ಸೆ?

ಶರದ್ ಪವಾರ್ ಬಣದ ಎನ್‌ಸಿಪಿ ನಾಯಕ ಹಾಗೂ ತಳಮಟ್ಟದಲ್ಲಿ ಜನ ಸಂಪರ್ಕಕ್ಕೆ ಹೆಸರುವಾಸಿಯಾದ ಏಕ್ನಾಥ್ ಖಡ್ಸೆ ಅವರ ಸೊಸೆಯಾಗಿರುವ ರಕ್ಷಾ ಖಡ್ಸೆ ಅವರು ಈ ಬಾರಿ ಪ್ರಧಾನಿ ನರೇಂದ್ರ ಮೋದಿಯವರ ಸಚಿವಾಲಯಕ್ಕೆ ಸೇರ್ಪಡೆಯಾಗಿದ್ದಾರೆ. ಈ ರಕ್ಷಾ ಖಡ್ಸೆ (Raksha Khadse) ಅವರು ರಾಜಕೀಯದಲ್ಲಿ ಬೆಳೆದು ಬಂದ ಹಾದಿ ಕುತೂಹಲಕರವಾಗಿದೆ. ಈ ಕುರಿತು ಇಲ್ಲಿದೆ ಮಾಹಿತಿ.

VISTARANEWS.COM


on

By

Raksha Khadse
Koo

ಪ್ರಧಾನಿ (PM) ನರೇಂದ್ರ ಮೋದಿ (Narendra Modi) ನೇತೃತ್ವದಲ್ಲಿ ರಚನೆಯಾದ 3.0 ಸರಕಾರದ ಸಚಿವಾಲಯದಲ್ಲಿ (3.0 cabinet Ministry) ಈಗ ಎಲ್ಲರ ಗಮನ ಸೆಳೆದಿರುವುದು ಬಿಜೆಪಿ (BJP) ಯುವ ಸಂಸದೆ (MP) ರಕ್ಷಾ ಖಡ್ಸೆ (Raksha Khadse). ಮಹಾರಾಷ್ಟ್ರದ (maharastra) ರೇವರ್ (Raver) ಕ್ಷೇತ್ರದಿಂದ ಮೂರು ಬಾರಿ ಆಯ್ಕೆಯಾಗಿರುವ ಬಿಜೆಪಿಯ ರಕ್ಷಾ ಖಡ್ಸೆ , 2024ರ ಲೋಕಸಭಾ ಚುನಾವಣೆಯಲ್ಲಿ ಸುಮಾರು 3 ಲಕ್ಷ ಮತಗಳ ಅಂತರದಿಂದ ವಿಜಯಿಯಾಗಿದ್ದಾರೆ.

ಶರದ್ ಪವಾರ್ ಬಣದ ಎನ್‌ಸಿಪಿ ನಾಯಕ ಹಾಗೂ ತಳಮಟ್ಟದಲ್ಲಿ ಜನ ಸಂಪರ್ಕಕ್ಕೆ ಹೆಸರುವಾಸಿಯಾದ ಏಕ್‌ನಾಥ್‌ ಖಡ್ಸೆ ಅವರ ಸೊಸೆಯಾಗಿರುವ ರಕ್ಷಾ ಅವರ ಕಠಿಣ ಪರಿಶ್ರಮ ಮತ್ತು ನಿರಂತರ ವಿಜಯಿಯಾಗಿರುವುದಕ್ಕೆ ಕೊಡುಗೆಯಾಗಿ ಅವರನ್ನು ಈ ಬಾರಿ ಪ್ರಧಾನಿ ನರೇಂದ್ರ ಮೋದಿಯವರ ಸಚಿವಾಲಯದಲ್ಲಿ ಸೇರ್ಪಡೆಗೊಳಿಸಲಾಗಿದೆ.

ಎನ್‌ಡಿಎ ಜೊತೆ ವಿವಿಧ ಪಕ್ಷಗಳ ಮೈತ್ರಿ ಬಳಿಕ ಹೊಸ ರಾಜಕೀಯ ಬೆಳವಣಿಗೆಗಳ ನಿರೀಕ್ಷೆಯ ಮಧ್ಯೆ ಮಹಾರಾಷ್ಟ್ರದ ಹಲವಾರು ಸ್ಥಾನಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಸೋಲು ಅನುಭವಿಸಿದ್ದರೂ ರಕ್ಷಾ ಖಡ್ಸೆ ತಮ್ಮ ಸ್ಥಾನವನ್ನು ಭದ್ರಪಡಿಸಿಕೊಂಡರು. ಮಹಾರಾಷ್ಟ್ರದ ರೇವರ್‌ನಲ್ಲಿ ಎರಡು ಬಾರಿ ಬಿಜೆಪಿ ಸಂಸದರಾಗಿದ್ದ ಅವರು ಈ ಬಾರಿಯ ಚುನಾವಣೆಯಲ್ಲಿ ಭಾರಿ ಮತಗಳ ಅಂತರದಿಂದ ಗೆಲುವು ದಾಖಲಿಸಿದರು. ರಕ್ಷಾ ಖಡ್ಸೆ ತಮ್ಮ ಹ್ಯಾಟ್ರಿಕ್ ಅವಧಿಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಸಚಿವಾಲಯಕ್ಕೆ ಸೇರಿದ್ದಾರೆ.


ರಾಜಕೀಯ ಪ್ರವೇಶ

2013ರಲ್ಲಿ ಪತಿ ನಿಖಿಲ್ ಖಡ್ಸೆ ನಿಧನದ ಬಳಿಕ ರಕ್ಷಾ ಖಡ್ಸೆ ಅವರು ತಮ್ಮ ವೈಯಕ್ತಿಕ ವರ್ಚಸ್ಸಿನ ಮೂಲಕವೇ ಎಲ್ಲರ ಗಮನ ಸೆಳೆದಿದ್ದಾರೆ. ಇಬ್ಬರು ಸಣ್ಣ ಮಕ್ಕಳೊಂದಿಗೆ ರಾಜಕೀಯ ಜವಾಬ್ದಾರಿ ಹೊತ್ತ ಅವರ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ಎಲ್ಲರ ಪ್ರಶಂಸೆಗೆ ಪಾತ್ರವಾಯಿತು. ಇದು ಅವರ ವೈಯಕ್ತಿಕ ಜೀವನ ಮತ್ತು ರಾಜಕೀಯ ಜವಾಬ್ದಾರಿಗಳೊಂದಿಗೆ ಸಮತೋಲನಗೊಳಿಸುವ ಸಾಮರ್ಥ್ಯವನ್ನು ಎತ್ತಿ ತೋರಿಸಿತ್ತು.

ರಕ್ಷಾ ಖಡ್ಸೆ ಮಧ್ಯಪ್ರದೇಶದ ಖೇಟಿಯಾದಲ್ಲಿ ಜನಿಸಿದರು. ಅವರ ರಾಜಕೀಯ ಜೀವನವು ತಳಮಟ್ಟದಲ್ಲಿ ಪ್ರಾರಂಭವಾಯಿತು. ಕೊಥಡಿ ಗ್ರಾಮ ಪಂಚಾಯಿತಿ ಸದಸ್ಯರಾಗಿದ್ದ ಅವರು ಬಳಿಕ ಜಲ್ಗಾಂವ್ ಜಿಲ್ಲಾ ಪರಿಷತ್ ಸದಸ್ಯರಾಗಿದ್ದರು.

ಯಶಸ್ಸಿನ ಪಯಣ

ಸ್ಥಳೀಯ ರಾಜಕಾರಣದಲ್ಲಿ ಅವರ ಆರಂಭಿಕ ಯಶಸ್ಸು 2014ರ ಲೋಕಸಭಾ ಚುನಾವಣೆಯಲ್ಲಿ ಸಂಸತ್ ಸದಸ್ಯರಾಗಿ (ಸಂಸದ) ಚುನಾವಣೆಗೆ ನಿಲ್ಲಲು ಪ್ರೇರಣೆಯಾಯಿತು. ಎನ್‌ಸಿಪಿಯ ಮನೀಶ್ ಜೈನ್‌ ಅವರನ್ನು 3,18,608 ಮತಗಳ ಅಂತರದಿಂದ ಸೋಲಿಸಿ ಲೋಕಸಭೆ ಪ್ರವೇಶಿಸಿದರು. 16ನೇ ಲೋಕಸಭೆಯ ಅತ್ಯಂತ ಕಿರಿಯ ಸಂಸದರಲ್ಲಿ ಒಬ್ಬರಾದ ಅವರಿಗೆ ಆಗ 26 ವರ್ಷ.

2019ರ ಲೋಕಸಭಾ ಚುನಾವಣೆಯಲ್ಲಿ ಖಡ್ಸೆ ಎರಡನೇ ಬಾರಿಗೆ ರೇವರ್ ಲೋಕಸಭೆಯ ಸಂಸದರಾಗಿ ಮತ್ತೆ ಆಯ್ಕೆಯಾದರು. ಆಗ ಅವರು ಕಾಂಗ್ರೆಸ್‌ನ ಉಲ್ಹಾಸ್ ಪಾಟೀಲ್ ಅವರನ್ನು 3,35,882 ಮತಗಳಿಂದ ಸೋಲಿಸಿದರು.

2024ರ ಲೋಕಸಭಾ ಚುನಾವಣೆಯಲ್ಲಿ, ಅವರು ತಮ್ಮ ರೇವರ್ ಸ್ಥಾನವನ್ನು ಉಳಿಸಿಕೊಂಡರು. ಹತ್ತಿರದ ಎನ್‌ಸಿಪಿ ಶರಾದ್ ಪವಾರ್ ಬಣದ ಅಭ್ಯರ್ಥಿಯನ್ನು 2,72,183 ಮತಗಳ ಅಂತರದಿಂದ ಸೋಲಿಸಿದರು.

ಇದನ್ನೂ ಓದಿ: ಮಾಜಿ ರಾಷ್ಟ್ರಪತಿ ಪ್ರತಿಭಾ ಪಾಟೀಲ್‌, ಮಾಜಿ ಪ್ರಧಾನಿಗಳಾದ ಮನಮೋಹನ ಸಿಂಗ್‌, ದೇವೇಗೌಡ ಅವರ ಆಶೀರ್ವಾದ ಪಡೆದ ಮೋದಿ

ಆಸಕ್ತಿ, ಉದ್ದೇಶ

ರಕ್ಷಾ ಅವರ ಎಕ್ಸ್ ಪ್ರೊಫೈಲ್ ಪ್ರಕಾರ ಅವರಿಗೆ ಮಹಿಳಾ ಸಬಲೀಕರಣ, ಮಕ್ಕಳ ಶಿಕ್ಷಣ ಮತ್ತು ರೈತರ ಕಲ್ಯಾಣದ ಬಗ್ಗೆ ಹೆಚ್ಚು ಆಸಕ್ತಿ ಹೊಂದಿದ್ದಾರೆ. ಖಡ್ಸೆ ಅವರ ರಾಜಕೀಯ ಆದ್ಯತೆಗಳು ಜಲ್ಗಾಂವ್ ಪ್ರದೇಶದಲ್ಲಿನ ನೀರಿನ ಕೊರತೆಯನ್ನು ಪರಿಹರಿಸುವುದು ಮತ್ತು ರಸ್ತೆ ಸಂಪರ್ಕವನ್ನು ಸುಧಾರಿಸುವುದು. ಮೂಲಸೌಕರ್ಯ ಮತ್ತು ಶಿಕ್ಷಣಕ್ಕೆ ಅವಶ್ಯಕವೆಂದು ಅವರು ನಂಬಿಕೆ. ರೇವರ್‌ನಲ್ಲಿ ನೀರಾವರಿ ಸ್ಥಾವರಕ್ಕೆ ಧನಸಹಾಯವನ್ನು ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.

Continue Reading

ಪ್ರಮುಖ ಸುದ್ದಿ

Ayodhya’s e-rickshaw : ಅಯೋಧ್ಯೆಯಲ್ಲಿ ಬಿಜೆಪಿಗೆ ಸೋಲು; ಪ್ರವಾಸಿಗರ ಸಂಖ್ಯೆ ಇಳಿಕೆ; ರಿಕ್ಷಾ ಚಾಲಕರಿಗೆ ಆದಾಯ ನಷ್ಟ!

Ayodhya’s e-rickshaw : ಸರ್ಕಾರದಿಂದ ಗಮನದ ಕೊರತೆಯಿಂದಾಗಿ ಸಮಸ್ಯೆಯಾಗಿದೆ. ರಸ್ತೆಗಳನ್ನು ಅಭಿವೃದ್ಧಿ ಮತ್ತು ಅಯೋಧ್ಯೆಯ ಅಭಿವೃದ್ಧಿಯಲ್ಲಿ ಕುಸಿತವೇ ಇದಕ್ಕೆ ಕಾರಣ. ಬಿಜೆಪಿ ಸೋತ ಕಾರಣ ಪರಿಸ್ಥಿತಿ ಇದೇ ರೀತಿ ಮುಂದುವರಿಯಲಿದೆ. ಹೀಗಾಗಿ ನಮ್ಮ ಸಮಸ್ಯೆಗಳು ಬಿಗಡಾಯಿಸಲಿದೆ ಎಂದು ರಿಕ್ಷಾ ಚಾಲಕರೊಬ್ಬರು ಹೇಳಿದ್ದಾರೆ.

VISTARANEWS.COM


on

Ayodhya's e-rickshaw
Koo

ಬೆಂಗಳೂರು: ರಾಮ ಜನ್ಮಭೂಮಿ ಅಯೋಧ್ಯೆಯಿರುವ ಫೈಜಾಬಾದ್​ ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿ ಸೋಲು ಕಂಡಿರುವುದು ದೇಶಕ್ಕೆ ದೇಶವೇ ಅಚ್ಚರಿ ಪಡುವ ಸಂಗತಿ. ಅಲ್ಲಿ ಸಮಾಜವಾದಿ ಪಕ್ಷದ ಅವದೇಶ ಪ್ರಸಾದ್ ಗೆಲುವು ಸಾಧಿಸಿದ್ದಾರೆ. ಇದು ಭಾರತದ ಕೋಟ್ಯಂತರ ಹಿಂದೂಗಳ ಪಾಲಿಗೆ ನೋವಿನ ಸಂಗತಿಯಾಗಿದೆ. ಇದರಿಂದಾಗಿ ಅಯೋಧ್ಯೆಗೆ ಭೇಟಿ ನೀಡುತ್ತಿರುವ ಪ್ರವಾಸಿಗರ ಸಂಖ್ಯೆ ಗಣನೀಯವಾಗಿ ಇಳಿಮುಖವಾಗಿದೆ. ಇದರ ಪರಿಣಾಮ ಅಲ್ಲಿನ ರಿಕ್ಷಾ ಚಾಲಕರಿಗೆ ತಟ್ಟಿದೆ. ದಿನಕ್ಕೆ 1000 ರೂಪಾಯಿ ದುಡಿಯುತ್ತಿದ್ದವರು 250 ರೂಪಾಯಿ ಮಾಡಲೂ ಪೇಚಾಡುತ್ತಿದ್ದಾರೆ. ರಾಮ ಮಂದಿರ ಉದ್ಘಾಟನೆಯಾದ ಕೇವಲ ನಾಲ್ಕು ತಿಂಗಳ ನಂತರ ತಮ್ಮ ವ್ಯವಹಾರಕ್ಕೆ ಹೊಡೆತ ಬಿದ್ದಿರುವುದಕ್ಕೆ ಅಯೋಧ್ಯೆಯ ಇ-ರಿಕ್ಷಾ ಚಾಲಕರು ಅಸಮಾಧಾನಗೊಂಡಿದ್ದಾರೆ. ರಾಮ ಮಂದಿರ ಉದ್ಘಾಟನೆಯ ಸಂಭ್ರಮದ ನಂತರವೂ ಬಿಜೆಪಿ ಫೈಜಾಬಾದ್ ಸ್ಥಾನವನ್ನು ಕಳೆದುಕೊಂಡಿದ್ದರ ಪರಿಣಾಮ ಅದು ಎಂಬುದು ಅವರಿಗೆ ಅರಿವಾಗಿದ್ದು ಈ ಬಗ್ಗೆ ಬೇಸರ ವ್ಯಕ್ತಪಡಿಸಿದ್ದಾರೆ.

ಸರ್ಕಾರದಿಂದ ಗಮನದ ಕೊರತೆಯಿಂದಾಗಿ ಸಮಸ್ಯೆಯಾಗಿದೆ. ರಸ್ತೆಗಳನ್ನು ಅಭಿವೃದ್ಧಿ ಮತ್ತು ಅಯೋಧ್ಯೆಯ ಅಭಿವೃದ್ಧಿಯಲ್ಲಿ ಕುಸಿತವೇ ಇದಕ್ಕೆ ಕಾರಣ. ಬಿಜೆಪಿ ಸೋತ ಕಾರಣ ಪರಿಸ್ಥಿತಿ ಇದೇ ರೀತಿ ಮುಂದುವರಿಯಲಿದೆ. ಹೀಗಾಗಿ ನಮ್ಮ ಸಮಸ್ಯೆಗಳು ಬಿಗಡಾಯಿಸಲಿದೆ ಎಂದು ರಿಕ್ಷಾ ಚಾಲಕರೊಬ್ಬರು ಹೇಳಿದ್ದಾರೆ.

ನಾವು 10 ವರ್ಷಗಳಿಂದ ಇಲ್ಲಿ ರಿಕ್ಷಾಗಳನ್ನು ಓಡಿಸುತ್ತಿದ್ದೇವೆ. ಅಯೋಧ್ಯೆಯನ್ನು ಸುಂದರ ನಗರವಾಗಿ ನಿರ್ಮಿಸುವುದನ್ನು ಮತ್ತು ಅಭಿವೃದ್ಧಿಪಡಿಸುವುದನ್ನು ನಾವು ನೋಡಿದ್ದೇವೆ. ಆದಾಗ್ಯೂ, ನಾನು ನಿಮಗೆ ಹೇಳುತ್ತೇನೆ, ಬಿಜೆಪಿ ಸರ್ಕಾರವು ಈಗ ಕೆಲವು ತೊಂದರೆಗಳನ್ನು ಎದುರಿಸುತ್ತಿದೆ. ಇಲ್ಲಿ ಅಭಿವೃದ್ಧಿಯ ಕುಸಿತವಾಗಿದೆ. ಇಲ್ಲಿ ಬಿಜೆಪಿ ಅಭ್ಯರ್ಥಿ ಜವಾಬ್ದಾರರಾಗಿದ್ದಾರೆ ಏಕೆಂದರೆ ಅವರು ನಮ್ಮ ಸಮಸ್ಯೆಗಳನ್ನು ಪರಿಹರಿಸುವುದಿಲ್ಲ. ಅವರು ಯಾರನ್ನೂ ಭೇಟಿಯಾಗುವುದಿಲ್ಲ. ಮಂತ್ರಿಗಳು ಆಗಾಗ್ಗೆ ಇಲ್ಲಿಗೆ ಬರುತ್ತಾರೆ. ಆದರೆ ಅವರು ಸಾಮಾನ್ಯ ಜನರೊಂದಿಗೆ ಸಂವಹನ ನಡೆಸುವುದಿಲ್ಲ. ಅವರು ಬರುತ್ತಾರೆ, ರ್ಯಾಲಿಗಳನ್ನು ನಡೆಸುತ್ತಾರೆ ವಾಪಸ್ ಹೋಗುತ್ತಾರೆ ಎಂದು ರಿಕ್ಷಾ ಚಾಲಕರೊಬ್ಬರು ಹೇಳಿದ್ದಾರೆ.

ಪರಿಸ್ಥಿತಿ ವಿಕೋಪಕ್ಕೆ

ಇದೇ ಪರಿಸ್ಥಿತಿ ಮುಂದುವರಿದರೆ ಅಯೋಧ್ಯೆ ಮತ್ತು ಇತರ ಅನೇಕ ಸ್ಥಳಗಳಿಗೆ ಹಿನ್ನಡೆಯಾಗುತ್ತದೆ. ನಮ್ಮ ಆದಾಯವು ಗಮನಾರ್ಹವಾಗಿ ಕುಸಿಯುತ್ತಿದೆ. ನಾವು 500-1000 ರೂ.ಗಳನ್ನು ಗಳಿಸುತ್ತಿದ್ದೆವು, ಈಗ 4 ರಂದು ಚುನಾವಣಾ ಫಲಿತಾಂಶಗಳು ಪ್ರಕಟವಾದಾಗಿನಿಂದ 250 ರೂ.ಗಳನ್ನು ಗಳಿಸುವುದು ಸಹ ಕಷ್ಟಕರವಾಗಿದೆ. ಕೇವಲ ಎರಡು ದಿನಗಳಲ್ಲಿ ಪರಿಸ್ಥಿತಿ ಹದಗೆಟ್ಟಿದೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: Anupam Kher-Rajinikanth: ಮೋದಿ ಪ್ರಮಾಣವಚನ ವೇಳೆ ರಜನಿಕಾಂತ್‌ಗೆ ಅನುಪಮ್ ಖೇರ್ ಹೇಳಿದ್ದೇನು? ವಿಡಿಯೊ ನೋಡಿ!

ಲೋಕಸಭಾ ಚುನಾವಣಾ ಫಲಿತಾಂಶಗಳು ಒಂದು ಕಾಲದಲ್ಲಿ ಅಭಿವೃದ್ಧಿ ಹೊಂದುತ್ತಿದ್ದ ಅಯೋಧ್ಯೆಯ ವ್ಯವಹಾರದ ಮೇಲೆ ಪ್ರಭಾವ ಬೀರಿದೆ. ಅಯೋಧ್ಯೆ ಇರುವ ಫೈಜಾಬಾದ್​ನ ಬಿಜೆಪಿ ಅಭ್ಯರ್ಥಿಯ ಸೋಲಿನೊಂದಿಗೆ, ನಗರದ ವಾತಾವರಣವು ಬದಲಾಗಿದೆ.

ಯಾತ್ರಾರ್ಥಿಗಳು ಮತ್ತು ಪ್ರವಾಸಿಗರ ಸಂಖ್ಯೆ ಕ್ಷೀಣಿಸುತ್ತಿದೆ. “ಜನರು ರಾಮ ಮಂದಿರ ಮತ್ತು ಹನುಮಾನ್ ಗರ್ಹಿಯಂತಹ ಸ್ಥಳಗಳಲ್ಲಿ ಕುಳಿತಿದ್ದಾರೆ, ಆದರೆ ಇದೀಗ, ಇಲ್ಲಿ ಯಾವುದೇ ಯಾತ್ರಿಕರು ಇಲ್ಲ” ಎಂದು ಹೇಳಿದ್ದಾರೆ.

ಉತ್ತರ ಪ್ರದೇಶದಲ್ಲಿ ಬಿಜೆಪಿಗೆ ಹಿನ್ನಡೆ

ಉತ್ತರ ಪ್ರದೇಶದಲ್ಲಿ ಈ ಬಾರಿ ಬಿಜೆಪಿಗೆ ಭಾರೀ ಹಿನ್ನಡೆಯಾಗಿದೆ. ಬಿಜೆಪಿ 2019ರ 62 ಸ್ಥಾನಗಳಿಂದ 33 ಸ್ಥಾನಕ್ಕೆ ಇಳಿಕೆಯಾದೆರ ಸಮಾಜವಾದಿ ಪಾರ್ಟಿ 37 ಹಾಗೂ ಕಾಂಗ್ರೆಸ್​ 6 ಸ್ಥಾನಗಳನ್ನು ಗೆಲ್ಲುವ ಮೂಲಕ ಇಂಡಿಯಾ ಒಕ್ಕೂಟ ಒಟ್ಟು 43 ಸ್ಥಾನಗಳನ್ನು ಗಳಿಸಿಕೊಂಡಿದೆ. ಇದು ಕೇಂದ್ರಲ್ಲಿ ಸರಳ ಬಹುಮತದೊಂದಿಗೆ ಸರ್ಕಾರ ರಚಿಸುವ ಮೋದಿ ನೇತೃತ್ವದ ಎನ್​ಡಿಎ ಒಕ್ಕೂಟದ ಶಕ್ತಿಯೂ ಧಕ್ಕೆ ತಂದಿದೆ.

Continue Reading

ದೇಶ

Mukesh Khanna: ಅಯೋಧ್ಯೆಯಲ್ಲಿ ಬಿಜೆಪಿ ಸೋಲಿಗೆ ಕಾರಣ ಕೊಟ್ಟ ʼಮಹಾಭಾರತʼದ ಭೀಷ್ಮ

ಭವ್ಯವಾದ ರಾಮ ಮಂದಿರವನ್ನು ಉತ್ತರ ಪ್ರದೇಶದ ಫೈಜಾಬಾದ್ ನಲ್ಲಿ ನಿರ್ಮಿಸಿದ ಬಳಿಕವೂ ಬಿಜೆಪಿಗೆ ಅಲ್ಲಿ ಸೋಲಾಗಿದೆ. ಈ ಕುರಿತು ರಾಮಾಯಣದ ಲಕ್ಷಣ ಪಾತ್ರಧಾರಿ ಈ ಹಿಂದೆ ಪ್ರತಿಕ್ರಿಯೆ ನೀಡಿ ಅಯೋಧ್ಯೆ ಜನರು ದ್ರೋಹ ಮಾಡಿದ್ದಾರೆ ಎಂದು ಹೇಳಿದ್ದರು. ಇದೀಗ ಮಹಾಭಾರತ ಖ್ಯಾತಿಯ ಭೀಷ್ಮ ಪಾತ್ರಧಾರಿ ಮುಖೇಶ್ ಖನ್ನಾ (Mukesh Khanna) ಅವರು ಬಿಜೆಪಿ ಸೋಲಿಗೆ ಕಾರಣವನ್ನು ತಿಳಿಸಿದ್ದಾರೆ.

VISTARANEWS.COM


on

By

Mukesh Khanna
Koo

ಉತ್ತರಪ್ರದೇಶದ (uttaradesh) ಆಯೋಧ್ಯೆಯಲ್ಲಿ (ayodhya) ರಾಮ ಮಂದಿರವನ್ನು (ram mandir) ನಿರ್ಮಿಸಿದ ಮೇಲೂ ಬಿಜೆಪಿಗೆ (bjp) ಲೋಕಸಭಾ ಚುನಾವಣೆಯಲ್ಲಿ (loksabha election) ಸೋಲಾಗಿರುವುದು ಹಲವರ ಅಚ್ಚರಿಗೆ ಕಾರಣವಾಗಿದೆ. ಕೆಲವು ದಿನಗಳ ಹಿಂದೆ ಈ ಕುರಿತು ಪ್ರತಿಕ್ರಿಯಿಸಿದ್ದ ರಾಮಾಯಣದ (ramayana) ಲಕ್ಷಣ ಪಾತ್ರಧಾರಿ ಅಯೋಧ್ಯೆ ಜನರು ದ್ರೋಹ ಮಾಡಿದ್ದಾರೆ ಎಂದು ಹೇಳಿದ್ದರು. ಇದೀಗ ಮಹಾಭಾರತ (mahabharatha) ಖ್ಯಾತಿಯ ಭೀಷ್ಮ ಪಾತ್ರಧಾರಿ ಮುಖೇಶ್ ಖನ್ನಾ (Mukesh Khanna) ಈ ಕುರಿತು ಪ್ರತಿಕ್ರಿಯಿಸಿದ್ದಾರೆ.

ಬಿ.ಆರ್. ಚೋಪ್ರಾ ಅವರ ನಿರ್ದೇಶನದ ಮಹಾಭಾರತದಲ್ಲಿ ಭೀಷ್ಮ ಪಾತ್ರಕ್ಕೆ ಹೆಸರುವಾಸಿಯಾದ ಮುಖೇಶ್ ಖನ್ನಾ 2024ರ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಅಯೋಧ್ಯೆಯಲ್ಲಿ ಭಾರತೀಯ ಜನತಾ ಪಕ್ಷದ (ಬಿಜೆಪಿ) ಸೋಲಿಗೆ ತಮ್ಮ ಅಭಿಪ್ರಾಯಗಳನ್ನು ತಿಳಿಸಿದರು. ಜೂನ್ 4ರಂದು ಘೋಷಿಸಲಾದ ಚುನಾವಣಾ ಫಲಿತಾಂಶದಲ್ಲಿ ಬಿಜೆಪಿ ಅಭ್ಯರ್ಥಿ ಲಲ್ಲು ಸಿಂಗ್ ಅವರು ಫೈಜಾಬಾದ್ ಕ್ಷೇತ್ರದಲ್ಲಿ ಸಮಾಜದ ಪಕ್ಷದ ಸೌಜೇಶ್ ಪ್ರಸಾದ್ ವಿರುದ್ಧ ಸೋಲು ಅನುಭವಿಸಿದ್ದರು.

ಈ ಕುರಿತು ತಮ್ಮ ಇನ್ ಸ್ಟಾಗ್ರಾಮ್ ಖಾತೆಯಲ್ಲಿ ಅಭಿಪ್ರಾಯ ಹಂಚಿಕೊಂಡ ಮುಖೇಶ್ ಖನ್ನಾ, ಅಯೋಧ್ಯೆಯಲ್ಲಿನ ಚುನಾವಣೆಯಲ್ಲಿ ಬಿಜೆಪಿಯ ಸೋಲು ಭವ್ಯವಾದ ದೇವಾಲಯದ ಜೊತೆಗೆ ಸರ್ಕಾರ ಸುತ್ತಮುತ್ತಲಿನ ಜನ ಜೀವನವನ್ನು ಸುರಕ್ಷಿತಗೊಳಿಸಲು ಪ್ರಯತ್ನಿಸಬೇಕು ಎನ್ನುವುದನ್ನು ಕಲಿಸುತ್ತದೆ. ಲಕ್ಷಾಂತರ ಜನರು ಅಲ್ಲಿ ವಾಸಿಸುತ್ತಿದ್ದಾರೆ. ಅವರು ಎದುರಿಸುತ್ತಿರುವ ಸಮಸ್ಯೆಗಳನ್ನು ಪರಿಹರಿಸಲು ಪ್ರಯತ್ನಿಸಬೇಕು. ಇಲ್ಲಿ ಸಾಮಾನ್ಯ ಜನರನ್ನು ಬಿಜೆಪಿ ನಿರ್ಲಕ್ಷಿಸಿರುವುದು ಸೋಲಿಗೆ ಕಾರಣ ಎಂದು ತಿಳಿಸಿದ್ದಾರೆ.

ಅಯೋಧ್ಯೆ ಚುನಾವಣಾ ಸೋಲಿನಿಂದ ನಾವು ಕಲಿಯಬೇಕು. ಭವ್ಯ ಮಂದಿರದ ಜೊತೆಗೆ ಹತ್ತಿರದ ಪಟ್ಟಣವಾಸಿಗಳ ಜೀವನವನ್ನು ಅದ್ದೂರಿಯಾಗಿ ಮಾಡಲು ಪ್ರಯತ್ನಿಸಬೇಕು. ಕೋಟಿಗಟ್ಟಲೆ ಬಜೆಟ್ ನಲ್ಲಿ ರಾಮಮಂದಿರವಾಗಲಿ, ಚಾರ್ ಧಾಮವಾಗಲಿ, ಜೈಪುರದ ಬಳಿಯಿರುವ ಖಾತು ಶಾಮ್ ಮಂದಿರವಾಗಲಿ ಅಲ್ಲಿಯ ಜನರ ಸಮಸ್ಯೆಗಳ ಪರಿಹಾರಕ್ಕೆ ಒಂದಿಷ್ಟು ಕೋಟಿಗಳನ್ನು ಇಡಬೇಕು ಎಂದು ಹೇಳಿದ್ದಾರೆ.


ಈ ವರ್ಷದ ಜನವರಿಯಲ್ಲಿ ರಾಮ್ ಮಂದಿರ ಉದ್ಘಾಟನೆಯ ಪವಿತ್ರ ಸಮಾರಂಭವು ಅದ್ದೂರಿಯಾಗಿ ನೆರವೇರಿತ್ತು. ಈ ಬಳಿಕ ಅಯೋಧ್ಯೆ ಇರುವ ಫೈಜಾಬಾದ್ ಕ್ಷೇತ್ರದಲ್ಲಿ ಬಿಜೆಪಿಯ ಸೋಲು ಅನೇಕರಿಗೆ ದೊಡ್ಡ ಆಘಾತವಾಗಿದೆ.
ಅಯೋಧ್ಯೆಯಲ್ಲಿ ಬಿಜೆಪಿಯ ಸೋಲಿಗೆ ಸಂಬಂಧಿಸಿದಂತೆ ಹಲವಾರು ಮಂದಿ ತಮ್ಮದೇ ಆದ ಅಭಿಪ್ರಾಯಗಳನ್ನು ಹೇಳಿಕೊಳ್ಳುತ್ತಿದ್ದಾರೆ. ರಾಮಾನಂದ್ ಸಾಗರ್ ಅವರ ರಾಮಾಯಣದ ಲಕ್ಷ್ಮಣನ ಪಾತ್ರಕ್ಕೆ ಹೆಸರುವಾಸಿಯಾದ ಸುನಿಲ್ ಲಹ್ರಿ ಅವರು ಅಯೋಧ್ಯೆಯ ಮತದಾನದ ಬಗ್ಗೆ ನಿರಾಶೆ ವ್ಯಕ್ತಪಡಿಸಿದ್ದರು.

ಇದನ್ನೂ ಓದಿ: Parliament Session 2024: ಜೂನ್‌ 24ರಿಂದ ಸಂಸತ್‌ ವಿಶೇಷ ಅಧಿವೇಶನ; ಸ್ಪೀಕರ್‌ ಆಯ್ಕೆ ಸೇರಿ ಏನೆಲ್ಲ ತೀರ್ಮಾನ?

ಇನ್‌ಸ್ಟಾಗ್ರಾಮ್‌ನಲ್ಲಿ ಸುನಿಲ್ ಮಾತನಾಡಿ, ಅಯೋಧ್ಯೆ ಜನರು ಸೀತಾ ದೇವಿಯನ್ನು ಗಡಿಪಾರು ಮಾಡಿದ ಅನಂತರವೂ ಸೀತಾ ದೇವಿಯನ್ನು ಅನುಮಾನಿಸಿದ್ದರು ಎಂಬುದನ್ನು ನಾವು ಮರೆಯುತ್ತಿದ್ದೇವೆ. ಸ್ವಾರ್ಥಿಗಳು ಅಯೋಧ್ಯೇಯ ನಾಗರಿಕರು. ಅವರು ಯಾವಾಗಲೂ ದ್ರೋಹ ಮಾಡಿದ್ದಾರೆ ಎಂಬುದಕ್ಕೆ ಇತಿಹಾಸವು ಪುರಾವೆಯಾಗಿದೆ ಎಂದು ಹೇಳಿದ್ದರು.

ಇನ್ನೊಂದು ಪೋಸ್ಟ್ ನಲ್ಲಿ ಅವರು, ಅಯೋಧ್ಯೆಯ ಪ್ರಿಯ ನಾಗರಿಕರೇ, ನಿಮ್ಮ ಹಿರಿಮೆಗೆ ನಾವು ನಮಸ್ಕರಿಸುತ್ತೇವೆ. ಸೀತಾದೇವಿಯನ್ನು ಸಹ ಬಿಡದ ನೀವು, ಶ್ರೀರಾಮನು ಆ ಸಣ್ಣ ಟೆಂಟ್ ನಿಂದ ಹೊರಬರುವಂತೆ ಮಾಡಿದ ವ್ಯಕ್ತಿಗೆ ನೀವು ದ್ರೋಹ ಬಗೆದುದರಲ್ಲಿ ಅಚ್ಚರಿಯಿಲ್ಲ. ಡೇರೆ ಇದ್ದ ಜಾಗದಲ್ಲಿ ಸುಂದರವಾದ ದೇವಾಲಯದಲ್ಲಿ ಸ್ಥಾಪಿಸಲಾಯಿತು. ಇಡೀ ರಾಷ್ಟ್ರವು ನಿಮ್ಮನ್ನು ಮತ್ತೆ ಗೌರವದಿಂದ ನೋಡುವುದಿಲ್ಲ ಎಂದು ಹೇಳಿದ್ದರು.

Continue Reading

Latest

Yamaha Fascino S : ಎಲ್ಲಿದ್ದೀಯಾ ಅಂಥ ಕೇಳಿದ್ರೆ, ಇಲ್ಲಿದ್ದೀನಿ ಅನ್ನುತ್ತೆ ಈ ಸ್ಕೂಟರ್​! ವಿಶೇಷ ಫೀಚರ್ ಇರುವ ಸ್ಕೂಟರ್ ಈಗ ಭಾರತದಲ್ಲಿ

Fascino S : ಇಂಡಿಯಾ ಯಮಹಾ ಮೋಟಾರ್ (IYM) ಪ್ರೈವೇಟ್ ಲಿಮಿಟೆಡ್, ‘ದಿ ಕಾಲ್ ಆಫ್ ದಿ ಬ್ಲೂ’ ಬ್ರಾಂಡ್ ಅಭಿಯಾನಕ್ಕೆ ಅನುಗುಣವಾಗಿ ‘ಆನ್ಸರ್​ ಬ್ಯಾಕ್’ (Answer Back)ಫೀಚರ್​ ಹೊಂದಿರುವ ಫ್ಯಾಸಿನೊ ಎಸ್ (Fascino S) ಮಾದರಿ ಸ್ಕೂಟರ್ ಬಿಡುಗಡೆ ಮಾಡಿದೆ. ಫ್ಯಾಸಿನೊ ಎಸ್ ಯುರೋಪಿಯನ್ ವಿನ್ಯಾಸ, ಕಾರ್ಯಕ್ಷಮತೆ ಮತ್ತು ಹೊಸತನದೊಂದಿಗೆ ರಸ್ತೆ ಇಳಿದಿದೆ.

VISTARANEWS.COM


on

Yamaha Fascino S
Koo

ಬೆಂಗಳೂರು: ನಗರದೊಳಗಿನ ಪಾರ್ಕಿಂಗ್​ನಲ್ಲಿ ಇಟ್ಟಿರುವ ಸ್ಕೂಟರ್​ಗಳನ್ನು ಪತ್ತೆ ಮಾಡುವುದು ಸಾಹಸದ ಕೆಲಸ. ರಾಶಿಯೊಳಗೆ ಎಲ್ಲಿಟ್ಟಿದ್ದೇವೆ ಎಂದು ಮರೆತು ಹೋಗುವುದು ಮೊದಲ ಸಮಸ್ಯೆಯಾದರೆ, ಒಂದೇ ರೀತಿಯ ಹತ್ತಾರು ಸ್ಕೂಟರ್​ಗಳು ಒಂದೇ ಕಡೆ ಇದ್ದಾಗ ನಮ್ಮದು ಯಾವುದು ಎಂದು ಪತ್ತೆ ಹಚ್ಚುವುದೂ ಕಷ್ಟ. ಇದಕ್ಕೆಲ್ಲ ಪರಿಹಾರ ಎಂಬ ಫೀಚರ್​ಗಳನ್ನು ಅಳವಡಿಸಿಕೊಂಡಿರು ಸ್ಕೂಟರ್ ಅನ್ನು ಯಮಹಾ ಇಂಡಿಯಾ ಬಿಡುಗಡೆ ಮಾಡಿದೆ. ಈಗಾಗಲೇ ಮಾರುಕಟ್ಟೆಯಲ್ಲಿರುವ ಫ್ಯಾಸಿನೊ ಸ್ಕೂಟರ್​ನ ಸುಧಾರಿತ ಫ್ಯಾಸಿನೊ ಎಸ್ (Yamaha Fascino S)​​ ಅವೃತ್ತಿಯಲ್ಲಿ ಈ ಫೀಚರ್ ಲಭ್ಯವಿದ್ದು, ‘ಆನ್ಸರ್ ಬ್ಯಾಕ್​ ಫೀಚರ್​ ಮೂಲಕ ಮೊಬೈಲ್​ನಲ್ಲೇ ಒಂದು ಬಟನ್ ಒತ್ತಿ ಸ್ಕೂಟರ್​ ಪತ್ತೆ ಹಚ್ಚುವುದಕ್ಕೆ ಸಾಧ್ಯವಾಗುತ್ತದೆ.

ಇಂಡಿಯಾ ಯಮಹಾ ಮೋಟಾರ್ (IYM) ಪ್ರೈವೇಟ್ ಲಿಮಿಟೆಡ್, ‘ದಿ ಕಾಲ್ ಆಫ್ ದಿ ಬ್ಲೂ’ ಬ್ರಾಂಡ್ ಅಭಿಯಾನಕ್ಕೆ ಅನುಗುಣವಾಗಿ ‘ಆನ್ಸರ್​ ಬ್ಯಾಕ್’ (Answer Back)ಫೀಚರ್​ ಹೊಂದಿರುವ ಫ್ಯಾಸಿನೊ ಎಸ್ (Yamaha Fascino S) ಮಾದರಿ ಸ್ಕೂಟರ್ ಬಿಡುಗಡೆ ಮಾಡಿದೆ. ಫ್ಯಾಸಿನೊ ಎಸ್ ಯುರೋಪಿಯನ್ ವಿನ್ಯಾಸ, ಕಾರ್ಯಕ್ಷಮತೆ ಮತ್ತು ಹೊಸತನದೊಂದಿಗೆ ರಸ್ತೆ ಇಳಿದಿದೆ. ಇದು ಯಮಹಾದ ಪೋರ್ಟ್ ಫೋಲಿಯೊಗೆ ರೋಮಾಚಂಕಾರಿ ಸೇರ್ಪಡೆಯಾಗಿದ್ದು ಪ್ರೀಮಿಯಂ ಸ್ಕೂಟರ್ ಮಾದರಿಯಲ್ಲಿ ಆಕರ್ಷಕ ಮ್ಯಾಟ್ ರೆಡ್ ಮತ್ತು ಮ್ಯಾಟ್ ಬ್ಲ್ಯಾಕ್ ಬಣ್ಣಗಳಲ್ಲಿ ಲಭ್ಯವಿದೆ. ಅಲ್ಲದೆ ಆಕರ್ಷಕ ಡಾರ್ಕ್ ಮ್ಯಾಟ್ ಬ್ಲೂ ಬಣ್ಣದಲ್ಲೂ ಸಿಗಲಿದೆ.

ಫ್ಯಾಸಿನೊ ಎಸ್ ಎಲ್ಲಾ ಯಮಹಾ ಅಧಿಕೃತ ಶೋರೂಂಗಳಲ್ಲಿ ಈ ಕೆಳಗಿನ ಬೆಲೆಯಲ್ಲಿ ಲಭ್ಯವಿದೆ

  • ಮ್ಯಾಟ್ ರೆಡ್ ಮತ್ತು ಮ್ಯಾಟ್ ಬ್ಲ್ಯಾಕ್ ರೂ. 93,730/-
  • ಡಾರ್ಕ್ ಮ್ಯಾಟ್ ಬ್ಲೂ ರೂ. 94,530/-

2024ರ ಫ್ಯಾಸಿನೊ ಎಸ್ ಮಾದರಿಯ ಪ್ರಮುಖ ಅಂಶವೆಂದರೆ ‘ಆನ್ಸರ್​ ಬ್ಯಾಕ್’ ಫಂಕ್ಷನ್. ‘ಯಮಹಾ ಸ್ಕೂಟರ್ ಆನ್ಸರ್​​ ಬ್ಯಾಕ್’ ಎಂಬ ಯಮಹಾದ ಮೊಬೈಲ್ ಅಪ್ಲಿಕೇಶನ್ ಮೂಲಕ ಗ್ರಾಹಕರು ಈ ಫೀಚರ್​ ಅನ್ನು ಬಳಸಬಹುದು. ಅಪ್ಲಿಕೇಶನ್ ನೊಳಗಿನ ಆನ್ಸರ್​ ಬ್ಯಾಕ್ ಬಟನ್ ಒತ್ತುವ ಮೂಲಕ, ಸವಾರರು ತಮ್ಮ ಸ್ಕೂಟರ್ ಅನ್ನು ಸುಲಭವಾಗಿ ಪತ್ತೆಹಚ್ಚಬಹುದು. ಇದು ಸುಮಾರು ಎರಡು ಸೆಕೆಂಡುಗಳ ಕಾಲ ಹಾರ್ನ್ ಮಾಡುತ್ತಾ ಎಡ ಮತ್ತು ಬಲ ಇಂಡಿಕೇಟರ್​ಗಳನ್ನು ಸಕ್ರಿಯಗೊಳಿಸುವ ಮೂಲಕ ಪ್ರತಿಕ್ರಿಯಿಸುತ್ತದೆ. ಇದು ಗ್ರಾಹಕರಿಗೆ ಹೆಚ್ಚು ಆರಾಮದಾಯಕ ಸವಾರಿ ಅನುಭವ ನೀಡುತ್ತದೆ. ಈ ಅಪ್ಲಿಕೇಶನ್ ಅನ್ನು ಗೂಗಲ್ ಪ್ಲೇಸ್ಟೋರ್ / ಆ್ಯಪ್ ಸ್ಟೋರ್ ನಿಂದ ಸುಲಭವಾಗಿ ಇನ್​ಸ್ಟಾಲ್​ ಮಾಡಬಹುದು.

ಇದನ್ನೂ ಓದಿ: Chandrababu Naidu: ಆಂಧ್ರ ಪ್ರದೇಶದ ರಾಜಧಾನಿ ಅಮರಾವತಿ; ಚಂದ್ರಬಾಬು ನಾಯ್ಡು ಘೋಷಣೆ

125 ಸಿಸಿಯ ಅತ್ಯುತ್ತಮ ಎಂಜಿನ್​

ಫ್ಯಾಸಿನೊ ಎಸ್ ಮಾದರಿಯು ಯಮಹಾದ ಅತ್ಯಾಧುನಿಕ ಬಿಎಸ್ 6 ಕಾಂಪ್ಲೈಂಟ್, ಏರ್-ಕೂಲ್ಡ್, ಫ್ಯೂಯಲ್-ಇಂಜೆಕ್ಟೆಡ್ (ಎಫ್ಐ), ಸ್ಮಾರ್ಟ್ ಮೋಟಾರ್ ಜನರೇಟರ್ (ಎಸ್ಎಂಜಿ) ನೊಂದಿಗೆ 125 ಸಿಸಿ ಬ್ಲೂ ಕೋರ್ ಹೈಬ್ರಿಡ್ ಎಂಜಿನ್ ಹೊಂದಿದೆ, ಎಂಜಿಜನ್​​ “ಸೈಲೆಂಟ್ ಸ್ಟಾರ್ಟ್” ಅನ್ನು ಆ್ಯಕ್ಟಿವೇಟ್ ಮಾಡುತ್ತದೆ. ಸರಿಸಾಟಿಯಿಲ್ಲದ “ಪವರ್ ಅಸಿಸ್ಟ್” ಕಾರ್ಯಕ್ಷಮತೆಯನ್ನು ನೀಡುತ್ತದೆ. ಈ ಮಾದರಿಯು ನಾರ್ಮಲ್ ಮೋಡ್ ಮತ್ತು ಟ್ರಾಫಿಕ್ ಮೋಡ್ ಸೇರಿದಂತೆ ಸುಧಾರಿತ ಸ್ವಯಂಚಾಲಿತ ಸ್ಟಾಪ್ & ಸ್ಟಾರ್ಟ್ ಸಿಸ್ಟಮ್ (ಎಸ್ಎಸ್ಎಸ್) ಅನ್ನು ಸಹ ಹೊಂದಿದೆ. ಈ ಫೀಚರ್​ ಮೂಲಕ ಮೈಲೇಜ್​ ಹೆಚ್ಚಿಸಲಾಗಿದೆ.

ಬಿಡುಗಡೆ ಸಂದರ್ಭದಲ್ಲಿ ಮಾತನಾಡಿದ ಯಮಹಾ ಮೋಟಾರ್ ಇಂಡಿಯಾ ಗ್ರೂಪ್ ಆಫ್ ಕಂಪನಿಗಳ ಅಧ್ಯಕ್ಷ ಈಶಿನ್ ಚಿಹಾನಾ, “ದ್ವಿಚಕ್ರ ವಾಹನ ಉದ್ಯಮದಲ್ಲಿ ವಿಕಸನಗೊಳ್ಳುತ್ತಿರುವ ವಿದ್ಯಮಾನಗಳೊಂದಿಗೆ ಗ್ರಾಹಕರಿಗೆ ವಿಶೇಷ ಫೀಚರ್​ಗಳನ್ನು ಒದಗಿಸುವುದು ಅತ್ಯಂತ ಮಹತ್ವದ್ದಾಗಿದೆ. ಇಂದು ಭಾರತದ ನಗರಗಳಲ್ಲಿರುವ ಗ್ರಾಹಕರು ಸ್ಮಾರ್ಟ್ ಆಯ್ಕೆಗಳನ್ನು ಮಾಡುತ್ತಾರೆ. ಯಮಹಾದಲ್ಲಿ, ನಾವು ನಿರಂತರವಾಗಿ ಗ್ರಾಹಕರ ಅಗತ್ಯಗಳಿಗೆ ಆದ್ಯತೆ ನೀಡುತ್ತೇವೆ. ಸವಾರಿ ಅನುಭವಕ್ಕೆ ಮೌಲ್ಯ ನೀಡುವ ಪರಿಹಾರಗಳನ್ನು ನೀಡುತ್ತಿದ್ದೇವೆ. ಫ್ಯಾಸಿನೊ ಎಸ್ ನಲ್ಲಿರುವ ‘ಆನ್ಸರ್​ ಬ್ಯಾಕ್’ ಫೀಚರ್​ ಯಮಹಾದ ವಿಶಿಷ್ಟ ಶೈಲಿ ಮತ್ತು ಗ್ರಾಹಕರ ಬೇಡಿಕೆಯನ್ನು ಪೂರೈಸುತ್ತದೆ. ನಮ್ಮ ಗ್ರಾಹಕರಿಗೆ ಸಮೃದ್ಧ ಅನುಭವ ನೀಡಲು ನಾವು ಅಂತಹ ಫೀಚಗಳ ಆವಿಷ್ಕಾರ ಮುಂದುವರಿಸುತ್ತೇವೆ ಎಂದು ಹೇಳಿದರು.

ಈ ಅತ್ಯಾಕರ್ಷಕ ಫೀಚರ್​ಗಳು ಸ್ಕೂಟರ್ ವಿಭಾಗದಲ್ಲಿ ಹೊಸ ಮಾನದಂಡಗಳನ್ನು ನಿಗದಿಪಡಿಸಲಿದೆ. ಹೊಸತನ ಮತ್ತು ಗ್ರಾಹಕರ ತೃಪ್ತಿಗೆ ಯಮಹಾದ ಬದ್ಧತೆಯಾಗಿದೆ. ಫ್ಯಾಸಿನೊ ಎಸ್ ತನ್ನ ಶೈಲಿ ಮತ್ತು ತಂತ್ರಜ್ಞಾನದ ಮಿಶ್ರಣದ ಮೂಲಕ ರಾಷ್ಟ್ರವ್ಯಾಪಿ ಮೋಡಿ ಮಾಡುತ್ತಿದೆ. ಯಮಹಾ ನಗರದ ಸವಾರಿಯಲ್ಲಿ ಪ್ರೀಮಿಯಂ ಫೀಚರ್​ಗಳನ್ನು ನೀಡುವಲ್ಲಿ ಮುಂಚೂಣಿಯಲ್ಲಿದೆ.

Continue Reading
Advertisement
Renuka Swamy Murder Case
ಕರ್ನಾಟಕ7 mins ago

Renuka Swamy Murder Case: ರೇಣುಕಾಸ್ವಾಮಿ ಕೊಲೆ ಕೇಸ್‌ ಖಂಡಿಸಿ ನಾಳೆ ಚಿತ್ರದುರ್ಗದಲ್ಲಿ ಬೃಹತ್‌ ಪ್ರತಿಭಟನೆ

Raksha Khadse
ರಾಜಕೀಯ21 mins ago

Raksha Khadse: ಅಂದು ಪಂಚಾಯಿತಿ ಸದಸ್ಯೆ, ಇಂದು ಕೇಂದ್ರ ಸಚಿವೆ! ಯಾರು ಈ ರಕ್ಷಾ ಖಡ್ಸೆ?

Health Tips For Monsoon
ಆರೋಗ್ಯ48 mins ago

Health Tips For Monsoon: ಮಳೆಗಾಲಕ್ಕೆ ನಮ್ಮ ಆಹಾರ ಹೇಗಿರಬೇಕು?

Ayodhya's e-rickshaw
ಪ್ರಮುಖ ಸುದ್ದಿ51 mins ago

Ayodhya’s e-rickshaw : ಅಯೋಧ್ಯೆಯಲ್ಲಿ ಬಿಜೆಪಿಗೆ ಸೋಲು; ಪ್ರವಾಸಿಗರ ಸಂಖ್ಯೆ ಇಳಿಕೆ; ರಿಕ್ಷಾ ಚಾಲಕರಿಗೆ ಆದಾಯ ನಷ್ಟ!

CM Siddaramaiah
ಕರ್ನಾಟಕ56 mins ago

CM Siddaramaiah: ಅಬಕಾರಿ ಪರವಾನಗಿ ನವೀಕರಣಕ್ಕೆ ಕಿರುಕುಳ ನೀಡಬೇಡಿ: ಅಧಿಕಾರಿಗಳಿಗೆ ಸಿಎಂ ಖಡಕ್‌ ಸೂಚನೆ

karnataka weather Forecast
ಮಳೆ1 hour ago

Karnataka Weather : ಭಾರಿ ಮಳೆಗೆ ಗುಡ್ಡದಿಂದ ಉರುಳಿ ಬಿದ್ದ ಬಂಡೆಗಲ್ಲು; ಬೆಂಗಳೂರಲ್ಲೂ ಸಂಜೆ ವರ್ಷಧಾರೆ

Free Bus Problem
ಪ್ರಮುಖ ಸುದ್ದಿ1 hour ago

Free Bus Problem: ನಮಗೆ ಫ್ರೀ ಬಸ್‌ ಬೇಡ, ವಿದ್ಯೆ ಬೇಕು! ಈ ವಿದ್ಯಾರ್ಥಿನಿ ಮಾತಿನ ವಿಡಿಯೊ ನೋಡಿ

Actor Darshan Arrested
ಪ್ರಮುಖ ಸುದ್ದಿ1 hour ago

Actor Darshan Arrested : ಪತಿ ಅರೆಸ್ಟ್​ ಆದರೂ ಪ್ರತಿಕ್ರಿಯೆ ನೀಡದ ದರ್ಶನ್​ ಪತ್ನಿ ವಿಜಯಲಕ್ಷ್ಮಿ!

Mens Stripe Shirt Fashion
ಫ್ಯಾಷನ್1 hour ago

Mens Stripe Shirt Fashion: ಮೆನ್ಸ್ ಕ್ಯಾಶುವಲ್‌ ಲುಕ್‌ಗೆ ರೀ ಎಂಟ್ರಿ ನೀಡಿದ ಸ್ಟ್ರೈಪ್ಡ್ ಶರ್ಟ್ಸ್

MS Dhoni
ಕ್ರೀಡೆ1 hour ago

MS Dhoni Fan: ಪ್ಯಾರಿಸ್​ನಲ್ಲಿ ಧೋನಿ ಕಾಲಿಗೆ ಬಿದ್ದು ಆಶೀರ್ವಾದ ಪಡೆದ ಅಭಿಮಾನಿ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka weather Forecast
ಮಳೆ1 hour ago

Karnataka Weather : ಭಾರಿ ಮಳೆಗೆ ಗುಡ್ಡದಿಂದ ಉರುಳಿ ಬಿದ್ದ ಬಂಡೆಗಲ್ಲು; ಬೆಂಗಳೂರಲ್ಲೂ ಸಂಜೆ ವರ್ಷಧಾರೆ

actor Darshan
ಚಿತ್ರದುರ್ಗ2 hours ago

Actor Darshan: ರೇಣುಕಾ ಸ್ವಾಮಿ ಕೊಲೆ ಕೇಸ್‌ನಲ್ಲಿ ದರ್ಶನ್‌ ಅರೆಸ್ಟ್‌; ಪ್ರಕರಣವನ್ನು ಸಿಬಿಐಗೆ ವಹಿಸಲು ಒತ್ತಾಯ

Actor Darshan gets a series of questions from the police
ಸಿನಿಮಾ3 hours ago

Actor Darshan : ಪವಿತ್ರಗೌಡ ಬಗ್ಗೆ ಪೋಸ್ಟ್‌ ಮಾಡಿದ್ರೆ ನಿಮಗ್ಯಾಕೆ ಕೋಪ? ದರ್ಶನ್‌ಗೆ ಪೊಲೀಸರ ಪ್ರಶ್ನೆಗಳ ಸುರಿಮಳೆ

Actor Darshan
ಸಿನಿಮಾ5 hours ago

Actor Darshan : ದರ್ಶನ್‌ ಜೈಲಿಗೆ ಹೋಗುತ್ತಿರುವುದು ಇದೇ ಮೊದಲಲ್ಲ; ನಟನ ಮೇಲಿವೆ ಹತ್ತಾರು ಕೇಸ್‌ಗಳು!

Saptami Gowda
ಸಿನಿಮಾ7 hours ago

Saptami Gowda : ಯುವ ಪತ್ನಿ ಶ್ರೀದೇವಿ ವಿರುದ್ಧ ಮಾನಹಾನಿ ಕೇಸ್; ಕಾನೂನು ಹೋರಾಟಕ್ಕೆ ಮುಂದಾದ ನಟಿ ಸಪ್ತಮಿ ಗೌಡ!

Karnataka weather Forecast
ಮಳೆ1 day ago

Karnataka Weather : ಭಾರಿ ಮಳೆಗೆ ಮನೆ ಗೋಡೆ ಕುಸಿದು ಎಮ್ಮೆಗಳು ಸಾವು; ಆಕಳಿನ ಜೀವ ತೆಗೆದ ವಿದ್ಯುತ್‌ ತಂತಿ

Karnataka weather Forecast
ಮಳೆ4 days ago

Karnataka weather : ಮಳೆಯಲ್ಲೆ ತಪಸ್ಸಿಗೆ ಕುಳಿತ ವೃದ್ಧ; ಇನ್ನೊಂದು ವಾರ ನಾನ್‌ ಸ್ಟಾಪ್‌ ವರುಣನ ಅಬ್ಬರ

Sigandur launch
ಶಿವಮೊಗ್ಗ4 days ago

Sigandur launch: ಸಿಗಂದೂರು ಲಾಂಚ್‌ನಲ್ಲಿ ಭಾರಿ ವಾಹನಗಳಿಗೆ ನಿರ್ಬಂಧ

Karnataka Rain
ಮಳೆ5 days ago

Karnataka Rain : ಭಾರಿ ಮಳೆಗೆ ಮರ ಬಿದ್ದು ಮೇಕೆಗಳು ಸಾವು; ಸಿಡಿಲಿಗೆ ಎಲೆಕ್ಟ್ರಿಕ್‌ ಅಂಗಡಿ ಸುಟ್ಟು ಭಸ್ಮ

Lok Sabha Election Result 2024 Live
ದೇಶ1 week ago

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶದ ಲೈವ್‌ ಇಲ್ಲಿ ವೀಕ್ಷಿಸಿ

ಟ್ರೆಂಡಿಂಗ್‌