Assembly Bypolls | 6 ರಾಜ್ಯದ 7 ವಿಧಾನಸಭೆ ಕ್ಷೇತ್ರಗಳಿಗೆ ಗುರುವಾರ ಉಪ ಚುನಾವಣೆ, ಇಲ್ಲಿದೆ ಕ್ಷೇತ್ರಗಳ ಮಾಹಿತಿ - Vistara News

ದೇಶ

Assembly Bypolls | 6 ರಾಜ್ಯದ 7 ವಿಧಾನಸಭೆ ಕ್ಷೇತ್ರಗಳಿಗೆ ಗುರುವಾರ ಉಪ ಚುನಾವಣೆ, ಇಲ್ಲಿದೆ ಕ್ಷೇತ್ರಗಳ ಮಾಹಿತಿ

ಹಾಲಿ ಶಾಸಕರ ನಿಧನ, ಪಕ್ಷಾಂತರ ಸೇರಿ ಹಲವು ಕಾರಣಗಳಿಂದಾಗಿ ದೇಶದ ಆರು ರಾಜ್ಯಗಳ ಏಳು ವಿಧಾನಸಭೆ ಕ್ಷೇತ್ರಗಳಿಗೆ ಉಪ ಚುನಾವಣೆ (Assembly Bypolls) ನಡೆಯಲಿದೆ.

VISTARANEWS.COM


on

Election
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವದೆಹಲಿ: ದೇಶದ ಆರು ರಾಜ್ಯಗಳ ಏಳು ವಿಧಾನಸಭೆ ಕ್ಷೇತ್ರಗಳಿಗೆ (Assembly Bypolls) ಗುರುವಾರ (ನವೆಂಬರ್‌ 3) ಉಪ ಚುನಾವಣೆ ನಡೆಯಲಿದೆ. ಮಹಾರಾಷ್ಟ್ರ, ತೆಲಂಗಾಣ, ಬಿಹಾರ, ಹರಿಯಾಣ, ಒಡಿಶಾ ಹಾಗೂ ಉತ್ತರ ಪ್ರದೇಶದಲ್ಲಿ ಹಲವು ಕಾರಣಗಳಿಂದ ತೆರವಾದ ಸ್ಥಾನಗಳಿಗೆ ಉಪ ಚುನಾವಣೆ ನಡೆಯಲಿದೆ. ಬೆಳಗ್ಗೆ 7ರಿಂದ ಸಂಜೆ 6ರವರೆಗೆ ಮತದಾನ ನಡೆಯಲಿದ್ದು, ನವೆಂಬರ್‌ 6ರಂದು ಫಲಿತಾಂಶ ಪ್ರಕಟವಾಗಲಿದೆ.

ತೆಲಂಗಾಣದ ಮುನುಗೋಡೆ ವಿಧಾನಸಭೆ ಕ್ಷೇತ್ರದ ಉಪ ಚುನಾವಣೆಯು ತೀವ್ರ ಜಿದ್ದಾಜಿದ್ದಿನಿಂದ ಕೂಡಿದೆ. ಕಾಂಗ್ರೆಸ್‌ ಶಾಸಕರಾಗಿದ್ದ ಕೊಮಾಟಿರೆಡ್ಡಿ ರಾಜಗೋಪಾಲ್‌ ರೆಡ್ಡಿ ಅವರು ಕಳೆದ ಆಗಸ್ಟ್‌ನಲ್ಲಿ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ, ಬಿಜೆಪಿ ಸೇರಿದ ಕಾರಣ ಇಲ್ಲಿ ಉಪ ಚುನಾವಣೆ ನಡೆಯುತ್ತಿದೆ. ಮಹಾರಾಷ್ಟ್ರದ ಅಂಧೇರಿ ಪೂರ್ವ ಕ್ಷೇತ್ರದಲ್ಲೂ ತೀವ್ರ ಸ್ಪರ್ಧೆ ಏರ್ಪಟ್ಟಿದೆ. ಅದರಲ್ಲೂ, ಶಿವಸೇನೆಯು ಉದ್ಧವ್‌ ಠಾಕ್ರೆ ಹಾಗೂ ಏಕನಾಥ್‌ ಶಿಂಧೆ ಬಣಗಳಾಗಿ ಇಬ್ಭಾಗವಾದ ಬಳಿಕ ನಡೆಯುತ್ತಿರುವ ಮೊದಲ ಚುನಾವಣೆ ಇದಾಗಿದ್ದು, ಎರಡೂ ಬಣಗಳಿಗೆ ಪ್ರತಿಷ್ಠೆಯ ಪ್ರಶ್ನೆಯಾಗಿದೆ.

ಇವುಗಳ ಜತೆಗೆ ಬಿಹಾರದ ಮೊಕಾಮ ಹಾಗೂ ಗೋಪಾಲ್‌ಗಂಜ್‌, ಹರಿಯಾಣದ ಅದಂಪುರ, ಉತ್ತರ ಪ್ರದೇಶದ ಗೋಲ ಗೋಕ್ರಣ್‌ನಾಥ್‌ ಮತ್ತು ಒಡಿಶಾದ ಧಾಮ್‌ನಗರ ಕ್ಷೇತ್ರಗಳಲ್ಲಿ ಉಪ ಚುನಾವಣೆ ನಡೆಯಲಿದೆ. ಆಯಾ ಕ್ಷೇತ್ರಗಳಲ್ಲಿ ಪಾರದರ್ಶಕ ಮತದಾನಕ್ಕಾಗಿ ಚುನಾವಣೆ ಆಯೋಗವು ಹತ್ತಾರು ಕ್ರಮ ತೆಗೆದುಕೊಂಡಿದೆ.

ಇದನ್ನೂ ಓದಿ | Telangana battle | ತೆಲಂಗಾಣದ ಮುನುಗೋಡೆ ಉಪಚುನಾವಣೆಯಲ್ಲಿ ಟಿಆರ್‌ಎಸ್-ಬಿಜೆಪಿ ಹಣಾಹಣಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Wayanad Landslide: ವಯನಾಡು ಈಗ ಸಾವಿನ ಮನೆ: ಮೃತರ ಸಂಖ್ಯೆ 240, 160 ಶವ ಪತ್ತೆ, 220 ಜನ ಮಿಸ್ಸಿಂಗ್; ಭೀಕರ ಚಿತ್ರಣ ಇಲ್ಲಿದೆ

Wayanad Landslide: ವಯನಾಡಿನಲ್ಲಿ ಎನ್‌ಡಿಆರ್‌ಎಫ್‌, ಎಸ್‌ಡಿಆರ್‌ಎಫ್‌, ಸೈನಿಕರು ಸೇರಿ ನಿರಂತರವಾಗಿ ಕಾರ್ಯಾಚರಣೆ ಕೈಗೊಳ್ಳುತ್ತಿದ್ದಾರೆ. ಇದುವರೆಗೆ 160 ಶವಗಳನ್ನು ಹೊರತೆಗೆಯಲಾಗಿದ್ದರೆ ಇನ್ನೂ 220 ಜನ ನಾಪತ್ತೆಯಾಗಿದ್ದಾರೆ ಎಂದು ತಿಳಿದುಬಂದಿದೆ.

VISTARANEWS.COM


on

Wayanad Landslide
Koo

ತಿರುವನಂತಪುರಂ: ಕೇರಳದ (Kerala) ವಯನಾಡು ಜಿಲ್ಲೆ ಮೆಪ್ಪಾಡಿ ಪ್ರದೇಶದ ಹಲವು ಗ್ರಾಮಗಳಲ್ಲಿ ಸಂಭವಿಸಿದ ಭೀಕರ ಭೂಕುಸಿತದಿಂದಾಗಿ (Wayanad Landslide) ಮೃತಪಟ್ಟವರ ಸಂಖ್ಯೆ 240ಕ್ಕೆ ತಲುಪಿದೆ. ಇದುವರೆಗೆ 160 ಶವಗಳನ್ನು ಅವಶೇಷಗಳಿಂದ ಹೊರತೆಗೆಯಲಾಗಿದ್ದು, ಈಗಲೂ ಕಾರ್ಯಾಚರಣೆ ಮುಂದುವರಿದಿದೆ. ಅಷ್ಟೇ ಅಲ್ಲ, 220 ಜನ ಇನ್ನೂ ನಾಪತ್ತೆಯಾಗಿರುವ ಕಾರಣ, ಅವರು ನಾಪತ್ತೆಯಾಗಿ ಈಗಾಗಲೇ 48 ಗಂಟೆಯಾಗಿರುವ ಕಾರಣ ಸಾವಿನ ಸಂಖ್ಯೆ ಜಾಸ್ತಿಯಾಗವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.

ಆರೋಗ್ಯ ಕೇಂದ್ರದಲ್ಲಿ ಹೆಣಗಳ ರಾಶಿ

ಕಲ್ಲು, ಮಣ್ಣು ಸೇರಿ ಹಲವು ಅವಶೇಷಗಳ ಅಡಿಯಲ್ಲಿ ಸಿಲುಕಿರುವ ಶವಗಳನ್ನು ಎನ್‌ಡಿಆರ್‌ಎಫ್‌ ಹಾಗೂ ಎಸ್‌ಡಿಆರ್‌ಎಫ್‌ ಸಿಬ್ಬಂದಿಯು ನಿರಂತರ ಕಾರ್ಯಾಚರಣೆ ಮೂಲಕ ಹೊರತೆಗೆಯುತ್ತಿದ್ದಾರೆ. ಮೆಪ್ಪಾಡಿ ಕೌಟುಂಬಿಕ ಆರೋಗ್ಯ ಕೇಂದ್ರ ಹಾಗೂ ನಿಲಂಬುರ್‌ ಸರ್ಕಾರಿ ಆಸ್ಪತ್ರೆಯಲ್ಲಿ ಶವಗಳ ರಾಶಿಯೇ ಬಿದ್ದದ್ದು, ಅವರ ಕುಟುಂಬಸ್ಥರು ಶವಗಳನ್ನು ಪತ್ತೆಹಚ್ಚಲು ಕೂಡ ಕಷ್ಟವಾಗುತ್ತಿದೆ. ಇನ್ನು, ಶವ ಪತ್ತೆಹಚ್ಚುವ ಕುಟುಂಬಸ್ಥರ ಆಕ್ರಂದನವು ಮುಗಿಲು ಮುಟ್ಟಿದೆ. ಮೆಪ್ಪಾಡಿ ಆರೋಗ್ಯ ಕೇಂದ್ರ ಹಾಗೂ ನಿಲಂಬುರ್‌ ಆಸ್ಪತ್ರೆಯಲ್ಲಿ ಈಗ ಎಲ್ಲೆಂದರಲ್ಲಿ ಶವಗಳೇ ಕಣ್ಣಿಗೆ ರಾಚುತ್ತಿವೆ.

ಭರದಿಂದ ಸಾಗುತ್ತಿರುವ ಕಾರ್ಯಾಚರಣೆ

ಎನ್‌ಡಿಆರ್‌ಎಫ್‌, ಎಸ್‌ಡಿಆರ್‌ಎಫ್‌ ಜತೆಗೆ ಭಾರತೀಯ ಸೇನೆಯ ಯೋಧರು, ರಾಜ್ಯ ಪೊಲೀಸರು ಕೂಡ ರಕ್ಷಣಾ ಕಾರ್ಯಾಚರಣೆಯಲ್ಲಿ ನಿರತರಾಗಿದ್ದಾರೆ. ಭೂಕುಸಿತ ಪೀಡಿತ ಪ್ರದೇಶಗಳಿಂದ ಸೈನಿಕರು ಸುಮಾರು 5,500 ಜನರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರ ಮಾಡಿದ್ದಾರೆ. ಎನ್‌ಡಿಆರ್‌ಎಫ್‌, ಎಸ್‌ಡಿಆರ್‌ಎಫ್‌, ಸೇನೆ, ಪೊಲೀಸರು, ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಸ್ವಯಂ ಸೇವಕರು ಸೇರಿ ಒಟ್ಟು 600 ಮಂದಿಯು ರಕ್ಷಣಾ ಕಾರ್ಯಾಚರಣೆಯಲ್ಲಿ ನಿರತರಾಗಿದ್ದಾರೆ ಎಂದು ತಿಳಿದುಬಂದಿದೆ.

ವಯನಾಡು ದುರಂತವನ್ನು ರಾಷ್ಟ್ರೀಯ ವಿಪತ್ತು ಎಂಬುದಾಗಿ ಘೋಷಿಸಬೇಕು ಎಂದು ರಾಜ್ಯಸಭೆಯಲ್ಲಿ ಕಾಂಗ್ರೆಸ್‌ ಸೇರಿ ಹಲವು ಪ್ರತಿಪಕ್ಷಗಳು ಆರೋಪಿಸಿವೆ. ಇನ್ನು, ಜುಲೈ 23ರಂದೇ ಭೂಕುಸಿತ, ಹವಾಮಾನ್ಯ ವೈಪರೀತ್ಯದ ಕುರಿತು ಕೇರಳ ಸರ್ಕಾರಕ್ಕೆ ಮಾಹಿತಿ ನೀಡಲಾಗಿತ್ತು ಎಂಬುದಾಗಿ ಕೇಂದ್ರ ಗೃಹ ಸಚಿವ ಅಮಿತ್‌ ಶಾ ತಿಳಿಸಿದ್ದಾರೆ. ಮೃತರ ಕುಟುಂಬಸ್ಥರಿಗೆ ಕೇಂದ್ರ ಸರ್ಕಾರವು ತಲಾ 2 ಲಕ್ಷ ರೂ. ಹಾಗೂ ಗಾಯಾಳುಗಳಿಗೆ 50 ಸಾವಿರ ರೂ. ಪರಿಹಾರ ಘೋಷಣೆ ಮಾಡಿದೆ. ನೌಕಾಪಡೆ ತಂಡಗಳು, ವಾಯುಪಡೆ ಹೆಲಿಕಾಪ್ಟರ್‌ಗಳನ್ನು ಕೂಡ ರಕ್ಷಣಾ ಕಾರ್ಯಾಚರಣೆಗೆ ಬಳಸಿಕೊಳ್ಳಲಾಗುತ್ತಿದೆ.

ಇದನ್ನೂ ಓದಿ: Wayanad Landslide: ಎಲ್ಲೆಂದರಲ್ಲಿ ಹೆಣಗಳ ರಾಶಿ; ಕೊಚ್ಚಿ ಹೋದ ಬದುಕು: ಸ್ಮಶಾನದಂತಾದ ಭೂಲೋಕದ ಸ್ವರ್ಗ ವಯನಾಡು

Continue Reading

ತಂತ್ರಜ್ಞಾನ

FASTag new rule: ಫಾಸ್ಟ್‌ಟ್ಯಾಗ್‌ ಬಳಕೆದಾರರೇ ಗಮನಿಸಿ; ನಾಳೆಯಿಂದ ಹೊಸ ನಿಯಮ ಜಾರಿ!

ಆಗಸ್ಟ್ 1ರಿಂದ ಫಾಸ್ಟ್ ಟ್ಯಾಗ್ ಗೆ ಸಂಬಂಧಿಸಿ ಹೊಸ ನಿಯಮಗಳು (FASTag new rule) ಜಾರಿಗೆ ಬರಲಿದ್ದು, ಇದಕ್ಕಾಗಿ ಗ್ರಾಹಕರು ಕೆವೈಸಿ ಪ್ರಕ್ರಿಯೆಗಳನ್ನು ಪೂರ್ಣಗೊಳಿಸುವುದು ಕಡ್ಡಾಯವಾಗಿದೆ. ಟೋಲ್ ಪಾವತಿಗಳನ್ನು ಸರಳಗೊಳಿಸಲು ಮತ್ತು ಟೋಲ್ ಪ್ಲಾಜಾಗಳಲ್ಲಿ ಸಂಚಾರ ದಟ್ಟಣೆಯನ್ನು ಕಡಿಮೆ ಮಾಡಲು ಎನ್ ಪಿಸಿಐ ಜಾರಿಗೊಳಿಸಿರುವ ಹೊಸ ನಿಯಮಗಳು ಯಾವುದು ಎನ್ನುವ ಮಾಹಿತಿ ಇಲ್ಲಿದೆ.

VISTARANEWS.COM


on

By

FASTag new rule
Koo

ಫಾಸ್ಟ್ ಟ್ಯಾಗ್ ಬಳಕೆದಾರರಿಗೆ ನಾಳೆಯಿಂದ ಅಂದರೆ ಆಗಸ್ಟ್ 1ರಿಂದ ಹೊಸ ನಿಯಮಗಳು (FASTag new rule) ಜಾರಿಗೆ ಬರಲಿದೆ. ಯಾಕೆಂದರೆ ನ್ಯಾಷನಲ್ ಪೇಮೆಂಟ್ಸ್ ಕಾರ್ಪೊರೇಷನ್ ಆಫ್ ಇಂಡಿಯಾ (NPCI) ನವೀಕರಿಸಿದ ಮಾರ್ಗಸೂಚಿಗಳನ್ನು ಪರಿಚಯಿಸಿದ್ದು, ಇದಕ್ಕಾಗಿ ಗ್ರಾಹಕರು ಕೆವೈಸಿ (KYC) ಪ್ರಕ್ರಿಯೆಗಳನ್ನು ಪೂರ್ಣಗೊಳಿಸಬೇಕಾಗುತ್ತದೆ.

ಟೋಲ್ ಪಾವತಿಗಳನ್ನು ಸರಳಗೊಳಿಸಲು ಮತ್ತು ಟೋಲ್ ಪ್ಲಾಜಾಗಳಲ್ಲಿ ಸಂಚಾರ ದಟ್ಟಣೆಯನ್ನು ಕಡಿಮೆ ಮಾಡಲು ಫಾಸ್ಟ್ ಟ್ಯಾಗ್ ಅತ್ಯಗತ್ಯವಾಗಿದೆ. ಆದರೆ ಎನ್ ಪಿಸಿಐ ಮಾಡಿರುವ ಈ ಬದಲಾವಣೆಗಳು ಬಳಕೆದಾರರ ಮೇಲೆ ಗಮನಾರ್ಹವಾಗಿ ಪರಿಣಾಮ ಬೀರುವ ಸಾಧ್ಯತೆ ಇದೆ.

ಆಗಸ್ಟ್ 1ರಿಂದ ಫಾಸ್ಟ್‌ಟ್ಯಾಗ್ ಸೇವೆಗಳನ್ನು ಒದಗಿಸುವ ಕಂಪನಿಗಳು 3- 5 ವರ್ಷಗಳ ಹಿಂದೆ ನೀಡಲಾದ ಎಲ್ಲಾ ಫಾಸ್ಟ್‌ಟ್ಯಾಗ್‌ಗಳಿಗೆ ಕೆವೈಸಿ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಲು ಅಕ್ಟೋಬರ್ 31ರವರೆಗೆ ಸಮಯಾವಕಾಶವನ್ನು ನೀಡಲಿದೆ. ಈ ಅವಧಿಯಲ್ಲಿ ಫಾಸ್ಟ್‌ಟ್ಯಾಗ್ ಹೊಂದಿರುವವರು ಸೇವೆಯಲ್ಲಿ ಯಾವುದೇ ಅಡಚಣೆಗಳು ಉಂಟಾಗದಂತೆ ತಡೆಗಟ್ಟಲು ಕೆವೈಸಿ ಮಾಹಿತಿಯನ್ನು ನವೀಕರಿಸುವುದು ಕಡ್ಡಾಯವಾಗಿದೆ.

ಐದು ವರ್ಷಕ್ಕಿಂತ ಹಳೆಯದಾದ ಫಾಸ್ಟ್ ಟ್ಯಾಗ್ ಅನ್ನು ಬದಲಾಯಿಸಬೇಕು. ವಾಹನ ಮಾಲೀಕರು ತಮ್ಮ ಫಾಸ್ಟ್ ಟ್ಯಾಗ್ ಗಳ ವಿತರಣೆಯ ದಿನಾಂಕಗಳನ್ನು ಪರಿಶೀಲಿಸಬೇಕು ಮತ್ತು ಸಮಸ್ಯೆಗಳನ್ನು ತಪ್ಪಿಸಲು ತ್ವರಿತವಾಗಿ ಕ್ರಮ ತೆಗೆದುಕೊಳ್ಳಬೇಕು.

ಹಳೆಯ ವಾಹನಗಳನ್ನು ಹೊಂದಿರುವ ಚಾಲಕರಿಗೆ ಈ ನವೀಕರಣಗಳು ವಿಶೇಷವಾಗಿ ಮುಖ್ಯವಾಗಿದೆ. ಆಗಸ್ಟ್ 1 ಮತ್ತು ಅಕ್ಟೋಬರ್ 31ರ ಗಡುವಿನೊಳಗೆ ಫಾಸ್ಟ್ ಟ್ಯಾಗ್ ಸೇವೆಗಳನ್ನು ಒದಗಿಸುವ ಕಂಪೆನಿಗಳು ಮೂರು ಮತ್ತು ಐದು ವರ್ಷಗಳ ಹಿಂದೆ ನೀಡಲಾದ ಎಲ್ಲಾ ಫಾಸ್ಟ್‌ಟ್ಯಾಗ್‌ಗಳಿಗೆ ಕೆವೈಸಿ ಅನ್ನು ಪೂರ್ಣಗೊಳಿಸಬೇಕಾಗುತ್ತದೆ. ಈ ಗಡುವುಗಳನ್ನು ತಪ್ಪಿಸಿಕೊಂಡರೆ ಮುಂದೆ ಹಲವು ತೊಂದರೆಗಳನ್ನು ಎದುರಿಸಬೇಕಾಗಬಹುದು.

ಹೊಸ ನಿಯಮಗಳು ಆಗಸ್ಟ್ 1ರಿಂದ ಎಲ್ಲಾ ಫಾಸ್ಟ್‌ಟ್ಯಾಗ್‌ಗಳನ್ನು ವಾಹನದ ನೋಂದಣಿ ಸಂಖ್ಯೆ ಮತ್ತು ಚಾಸಿಸ್ ಸಂಖ್ಯೆಗೆ ಲಿಂಕ್ ಮಾಡಬೇಕು ಎಂಬ ಷರತ್ತು ವಿಧಿಸಲಾಗಿದೆ.

ಹೊಸ ವಾಹನ ಮಾಲೀಕರು ವಾಹನವನ್ನು ಖರೀದಿಸಿದ 90 ದಿನಗಳಲ್ಲಿ ತಮ್ಮ ನೋಂದಣಿ ಸಂಖ್ಯೆಯನ್ನು ನವೀಕರಿಸಬೇಕು. ಫಾಸ್ಟ್‌ಟ್ಯಾಗ್ ಪೂರೈಕೆದಾರರು ತಮ್ಮ ಡೇಟಾಬೇಸ್‌ಗಳು ನಿಖರ ಮತ್ತು ಪ್ರಸ್ತುತ ಎಂದು ಖಚಿತಪಡಿಸಿಕೊಳ್ಳಲು ಅಗತ್ಯವಿದೆ. ಇದು ಎಲ್ಲಾ ವಿವರಗಳನ್ನು ಪರಿಶೀಲಿಸುವುದು ಮತ್ತು ನವೀಕರಿಸುವುದನ್ನು ಒಳಗೊಂಡಿರುತ್ತದೆ.

ಈ ಬದಲಾವಣೆಗಳ ಜೊತೆಗೆ ಸುಲಭವಾಗಿ ಗುರುತಿಸಲು ಅನುಕೂಲವಾಗುವಂತೆ ವಾಹನದ ಮುಂಭಾಗ ಮತ್ತು ಬದಿಯ ಸ್ಪಷ್ಟ ಫೋಟೋಗಳನ್ನು ಅಪ್‌ಲೋಡ್ ಮಾಡಬೇಕು. ಸುಗಮ ಸಂವಹನ ಮತ್ತು ನವೀಕರಣಗಳನ್ನು ಖಚಿತಪಡಿಸಿಕೊಳ್ಳಲು ಪ್ರತಿ ಫಾಸ್ಟ್‌ಟ್ಯಾಗ್ ಅನ್ನು ಮೊಬೈಲ್ ಸಂಖ್ಯೆಯೊಂದಿಗೆ ಲಿಂಕ್ ಮಾಡಬೇಕು.

ಇದನ್ನೂ ಓದಿ: New Toll System: ಫಾಸ್ಟ್‌ ಟ್ಯಾಗ್‌ಗೂ ಉಪಗ್ರಹ ಆಧರಿತ ಟೋಲ್‌ ಸಂಗ್ರಹಕ್ಕೂ ಏನು ವ್ಯತ್ಯಾಸ? ಏನು ಪ್ರಯೋಜನ?

ನಿಯಮ ಏನಿದೆ?

5 ವರ್ಷಕ್ಕಿಂತ ಹಳೆಯದಾದ ಫಾಸ್ಟ್‌ಟ್ಯಾಗ್‌ಗಳನ್ನು ಬದಲಾಯಿಸಬೇಕು.

3 ವರ್ಷಗಳ ಹಿಂದೆ ನೀಡಲಾದ ಫಾಸ್ಟ್‌ಟ್ಯಾಗ್‌ಗಳಿಗೆ ಕೆವೈಸಿ ಅನ್ನು ನವೀಕರಿಸಬೇಕು.

ವಾಹನ ನೋಂದಣಿ ಸಂಖ್ಯೆ ಮತ್ತು ಚಾಸಿಸ್ ಸಂಖ್ಯೆಯನ್ನು ಫಾಸ್ಟ್‌ಟ್ಯಾಗ್‌ನೊಂದಿಗೆ ಲಿಂಕ್ ಮಾಡಬೇಕು.

ಹೊಸ ವಾಹನವನ್ನು ಖರೀದಿಸಿದ 90 ದಿನಗಳಲ್ಲಿ ನೋಂದಣಿ ಸಂಖ್ಯೆಯನ್ನು ನವೀಕರಿಸಬೇಕು.

ಫಾಸ್ಟ್ ಟ್ಯಾಗ್ ಪೂರೈಕೆದಾರರು ತಮ್ಮ ಡೇಟಾಬೇಸ್‌ಗಳನ್ನು ಪರಿಶೀಲಿಸಬೇಕು.

ಕಾರಿನ ಮುಂಭಾಗ ಮತ್ತು ಬದಿಯ ಸ್ಪಷ್ಟ ಫೋಟೋಗಳನ್ನು ಅಪ್‌ಲೋಡ್ ಮಾಡಬೇಕು.

ಫಾಸ್ಟ್ ಟ್ಯಾಗ್ ಅನ್ನು ಮೊಬೈಲ್ ಸಂಖ್ಯೆಗೆ ಲಿಂಕ್ ಮಾಡಬೇಕು.

Continue Reading

ವಾಣಿಜ್ಯ

ITR Filing: ಐಟಿ ರಿಟರ್ನ್ಸ್‌ ಗಡುವು ವಿಸ್ತರಣೆ ಇಲ್ಲ, ಕೊನೇ ಕ್ಷಣದಲ್ಲಿ ಪೋರ್ಟಲ್‌ ಕ್ರ್ಯಾಶ್;‌ ಇನ್ಫೋಸಿಸ್‌ ವಿರುದ್ಧ ಆಕ್ರೋಶ!

ITR Filing: ಐಟಿಆರ್‌ಗೆ ಬುಧವಾರವೇ ಕೊನೇ ದಿನವಾದ ಕಾರಣ ಹೆಚ್ಚಿನ ಜನರು ಐಟಿಆರ್‌ ಸಲ್ಲಿಕೆಗೆ ಮುಂದಾಗಿದ್ದು, ವೆಬ್‌ ಪೋರ್ಟಲ್‌ನಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿದೆ. ಇದರಿಂದ ಜನರು, ಲೆಕ್ಕಪರಿಶೋಧಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಐಟಿಆರ್‌ ಸಲ್ಲಿಕೆಯ ಕೊನೆಯ ದಿನದಂದು ಪೋರ್ಟಲ್‌ನಲ್ಲಿ ಲೋಡಿಂಗ್‌ ಸಮಸ್ಯೆಯಾಗುತ್ತಿದೆ ಎಂದೆಲ್ಲ ಪೋಸ್ಟ್‌ ಮಾಡಿದ್ದಾರೆ.

VISTARANEWS.COM


on

ITR Filing
Koo

ನವದೆಹಲಿ: ಆದಾಯ ತೆರಿಗೆ ರಿಟರ್ನ್ಸ್‌ (ITR Filing) ಸಲ್ಲಿಸದವರು ಕುತೂಹಲದಿಂದ ಕಾಯುತ್ತಿದ್ದ ದಿನವು ಮುಕ್ತಾಯಗೊಂಡಿದ್ದು, ಐಟಿಆರ್‌ ಸಲ್ಲಿಕೆಯ ಗಡುವನ್ನು ವಿಸ್ತರಣೆ ಮಾಡದ ಹಿನ್ನೆಲೆಯಲ್ಲಿ ಅವರಿಗೆ ನಿರಾಸೆಯಾಗಿದೆ. ಬುಧವಾರ (ಜುಲೈ 31) ಸಂಜೆಯಾದರೂ ಕೇಂದ್ರ ಹಣಕಾಸು ಸಚಿವಾಲಯವು ಐಟಿಆರ್‌ ಸಲ್ಲಿಕೆಯ ಗಡುವು (ITR Filing Deadline) ವಿಸ್ತರಣೆ ಮಾಡದ ಕಾರಣ ಜನರಿಗೆ ನಿರಾಸೆಯಾಯಿತು. ಇನ್ನು, ಐಟಿಆರ್‌ಗೆ ಬುಧವಾರವೇ ಕೊನೇ ದಿನವಾದ ಕಾರಣ ಹೆಚ್ಚಿನ ಜನರು ಐಟಿಆರ್‌ ಸಲ್ಲಿಕೆಗೆ (Income Tax Returns) ಮುಂದಾಗಿದ್ದು, ವೆಬ್‌ ಪೋರ್ಟಲ್‌ನಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿದೆ. ಇದರಿಂದ ಜನರು, ಲೆಕ್ಕಪರಿಶೋಧಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಪೋರ್ಟಲ್‌ನಲ್ಲಿ ಏನು ದೋಷ?

ಸಿಎ ನಿಖಿತಾ ಕೋಲ್ತೆ-ಗೋರೆ ಎಂಬುವರು ಐಟಿಆರ್‌ ಸಲ್ಲಿಕೆಯ ವೆಬ್‌ ಪೋರ್ಟಲ್‌ನಲ್ಲಿ ಸಮಸ್ಯೆಯಾಗಿದ್ದನ್ನು ಎಕ್ಸ್‌ ಜಾಲತಾಣದಲ್ಲಿ ಪೋಸ್ಟ್‌ ಮಾಡಿದ್ದಾರೆ. “ಐಟಿಆರ್‌ ಸಲ್ಲಿಕೆಯ ಕೊನೆಯ ದಿನದಂದು ಪೋರ್ಟಲ್‌ನಲ್ಲಿ ಲೋಡಿಂಗ್‌ ಸಮಸ್ಯೆಯಾಗುತ್ತಿದೆ. ವೆಬ್‌ ಪೋರ್ಟಲ್‌ನಲ್ಲಿರುವ ಸಮಸ್ಯೆಯನ್ನು ಬಗೆಹರಿಸಬೇಕು. ಮುಂದಿನ ವರ್ಷವಾದರೂ ತೆರಿಗೆ ಪಾವತಿದಾರರು ಸುಲಭವಾಗಿ ಐಟಿಆರ್‌ ಸಲ್ಲಿಸುವ ವ್ಯವಸ್ಥೆ ಜಾರಿಗೆ ತರಬೇಕು” ಎಂದಿದ್ದಾರೆ. ಇವರು ವೆಬ್‌ ಪೋರ್ಟಲ್‌ ಅಭಿವೃದ್ಧಿ ಪಡಿಸಿರುವ ಇನ್ಫೋಸಿಸ್‌ಅನ್ನೂ ಟ್ಯಾಗ್‌ ಮಾಡಿದ್ದಾರೆ.

ಇನ್ಫೋಸಿಸ್‌ ವಿರುದ್ಧ ಆಕ್ರೋಶ

“ಕಳೆದ ಮೂರು ದಿನಗಳಿಂದ ಆದಾಯ ತೆರಿಗೆ ರಿಟರ್ನ್ಸ್‌ ಸಲ್ಲಿಕೆಗೆ ಪ್ರಯತ್ನಿಸುತ್ತಿದ್ದಾರೆ. ಆದರೆ, ಪ್ರತಿಬಾರಿ ಪ್ರಯತ್ನಿಸಿದಾಗಲೂ ‘Something Went Wrong’ ಎಂಬ ಪ್ರತಿಕ್ರಿಯೆ ಬರುತ್ತಿದೆ. ಐಟಿಆರ್‌ ಸಲ್ಲಿಕೆಯ ಪೋರ್ಟಲ್‌ಗಾಗಿ ಇನ್ಫೋಸಿಸ್‌ಗೆ 4,200 ಕೋಟಿ ರೂ. ನೀಡುತ್ತಿರುವುದು ನಿಜವಾಗಿಯೂ ವೇಸ್ಟ್”‌ ಎಂದು ಸಿಎ ಅನಂತ್‌ ಸೆಖ್ಸಾರಿಯಾ ತಿಳಿಸಿದ್ದಾರೆ.

6.5 ಕೋಟಿ ಐಟಿಆರ್‌ ಸಲ್ಲಿಕೆ

ಜುಲೈ 31ರವರೆಗೆ 6.5 ಕೋಟಿ ಐಟಿಆರ್‌ ಸಲ್ಲಿಕೆಯಾಗಿದೆ ಎಂದು ಆದಾಯ ತೆರಿಗೆ ಇಲಾಖೆ ಮಾಹಿತಿ ನೀಡಿದೆ. 2023-24ನೇ ಸಾಲಿನಲ್ಲಿ ಜುಲೈ 30ರವರೆಗೆ ಸಲ್ಲಿಕೆಯಾದ ಐಟಿಆರ್‌ಗಳಿಗಿಂತ ಶೇ.7.5ರಷ್ಟು ಹೆಚ್ಚಾಗಿದೆ ಎಂದು ತಿಳಿದುಬಂದಿದೆ.

ಎಷ್ಟು ದಂಡ?

ಜುಲೈ 31ರ ಗಡುವಿನ ನಂತರ ಐಟಿಆರ್ ಸಲ್ಲಿಸುವವರು ದಂಡ ಪಾವತಿಸಬೇಕಾಗುತ್ತದೆ. ನಿವ್ವಳ ತೆರಿಗೆಯ ಆದಾಯವು 5 ಲಕ್ಷ ರೂ. ವರೆಗೆ ಇದ್ದರೆ ತಡವಾಗಿ ತೆರಿಗೆ ರಿಟರ್ನ್‌ಗೆ ಗರಿಷ್ಠ ದಂಡ 1,000 ರೂ ಆಗಿದೆ. 5 ಲಕ್ಷ ರೂ. ಗಿಂತ ಹೆಚ್ಚಿನ ಆದಾಯ ಹೊಂದಿರುವವರು 5,000 ರೂ. ವರೆಗೆ ದಂಡ ವಿಧಿಸಲಾಗುತ್ತದೆ. ಆದಾಯ ತೆರಿಗೆ ಕಾಯಿದೆಯ ಪ್ರಕಾರ ಒಟ್ಟು ಆದಾಯವು ಮೂಲ ವಿನಾಯಿತಿ ಮಿತಿಗಿಂತ ಕಡಿಮೆಯಾದರೆ ಯಾವುದೇ ದಂಡವನ್ನು ವಿಧಿಸಲಾಗುವುದಿಲ್ಲ.

ಇದನ್ನೂ ಓದಿ: New Rules: ಐಟಿಆರ್‌ನಿಂದ ಕ್ರೆಡಿಟ್ ಕಾರ್ಡ್‌ವರೆಗೆ; ಈ ತಿಂಗಳಲ್ಲಿ ಹಲವು ಹೊಸ ಬದಲಾವಣೆ

Continue Reading

ದೇಶ

Parliament Session: RSS ಬಗ್ಗೆ ದೋಷಾರೋಪಣೆ ಸಲ್ಲದು; ಜಗದೀಪ್ ಧನ್‌ಕರ್ ಹೇಳಿಕೆ- ಪ್ರತಿಪಕ್ಷಗಳು ವಾಕ್‌ಔಟ್‌!

Parliament Session: ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ ಅಧ್ಯಕ್ಷರ ನೇಮಕದ ಕುರಿತು ಸಮಾಜವಾದಿ ಪಕ್ಷದ ಶಾಸಕ ರಾಮ್‌ಜಿ ಸುಮನ್ ಅವರ ಟೀಕೆಗಳ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ ಧನ್‌ಕರ್‌ ಅವರು ಆರ್‌ಎಸ್‌ಎಸ್ ವಿರುದ್ಧ ಯಾವುದೇ ಟೀಕೆ ಟಿಪ್ಪಣಿ ಮಾಡುವ ಅರ್ಹತೆ ಯಾರಿಗೂ ಇಲ್ಲ ಎಂದು ಹೇಳಿದರು. ಧನ್‌ಕರ್‌ ಅವರು ಟಿಪ್ಪಣಿಯನ್ನು ದಾಖಲೆಯಲ್ಲಿ ಅನುಮತಿಸುವುದಿಲ್ಲ ಎಂದು ಒತ್ತಿ ಹೇಳಿದರು. ಆರ್‌ಎಸ್‌ಎಸ್ ಅನ್ನು ಪ್ರತ್ಯೇಕಿಸಲು ಯಾರಿಗೂ ಅವಕಾಶ ನೀಡುವುದಿಲ್ಲ ಎಂದು ಹೇಳಿದರು.

VISTARANEWS.COM


on

Jagdeep Dhankhar
Koo

ನವದೆಹಲಿ: ಆಡಳಿತಾರೂಢ ಭಾರತೀಯ ಜನತಾ ಪಕ್ಷ(BJP)ದ ಸೈದ್ಧಾಂತಿಕ ಮೂಲ ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ದೇಶಕ್ಕೆ ಸೇವೆ ಸಲ್ಲಿಸುತ್ತದೆ ಮತ್ತು ಅದಕ್ಕೆ ಸಂಬಂಧಿಸಿದ ಜನರು ನಿಸ್ವಾರ್ಥವಾಗಿ ಕೆಲಸ ಮಾಡುತ್ತಾರೆ ಎಂದು ರಾಜ್ಯಸಭಾ ಅಧ್ಯಕ್ಷ ಜಗದೀಪ್ ಧನ್‌ಕರ್(Jagdeep Dhankhar) ಬುಧವಾರ ಹೇಳಿದ್ದಾರೆ. ಸಂಸತ್‌ ಅಧಿವೇಶನದಲ್ಲಿ(Parliament Session) ಪ್ರತಿಪಕ್ಷಗಳ ಆರೋಪಕ್ಕೆ ಪ್ರತಿಕ್ರಿಯಿಸಿದ ರಾಷ್ಟ್ರೀಯ ಕಾರ್ಯದಲ್ಲಿ ತೊಡಗಿಸಿಕೊಂಡಿರುವ ಸಂಘಟನೆಯನ್ನು ಟೀಕಿಸುವುದು ಸಂವಿಧಾನಕ್ಕೆ ವಿರುದ್ಧವಾಗಿದ್ದು, ದೇಶದ ಅಭಿವೃದ್ಧಿ ಪಯಣದ ಭಾಗವಾಗಲು ಅದಕ್ಕೆ ಹಕ್ಕಿದೆ ಎಂದು ಹೇಳುವ ಮೂಲಕ ಪ್ರತಿಪಕ್ಷಗಳಿಗೆ ಟಾಂಗ್‌ ಕೊಟ್ಟಿದ್ದಾರೆ.

ನ್ಯಾಷನಲ್ ಟೆಸ್ಟಿಂಗ್ ಏಜೆನ್ಸಿ ಅಧ್ಯಕ್ಷರ ನೇಮಕದ ಕುರಿತು ಸಮಾಜವಾದಿ ಪಕ್ಷದ ಶಾಸಕ ರಾಮ್‌ಜಿ ಸುಮನ್ ಅವರ ಟೀಕೆಗಳ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ ಧನ್‌ಕರ್‌ ಅವರು ಆರ್‌ಎಸ್‌ಎಸ್ ವಿರುದ್ಧ ಯಾವುದೇ ಟೀಕೆ ಟಿಪ್ಪಣಿ ಮಾಡುವ ಅರ್ಹತೆ ಯಾರಿಗೂ ಇಲ್ಲ ಎಂದು ಹೇಳಿದರು. ಧನ್‌ಕರ್‌ ಅವರು ಟಿಪ್ಪಣಿಯನ್ನು ದಾಖಲೆಯಲ್ಲಿ ಅನುಮತಿಸುವುದಿಲ್ಲ ಎಂದು ಒತ್ತಿ ಹೇಳಿದರು. ಆರ್‌ಎಸ್‌ಎಸ್ ಅನ್ನು ಪ್ರತ್ಯೇಕಿಸಲು ಯಾರಿಗೂ ಅವಕಾಶ ನೀಡುವುದಿಲ್ಲ ಎಂದು ಹೇಳಿದರು.

ಧನ್‌ಕರ್‌ ಅವರ ಹೇಳಿಕೆಗೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಆಕ್ಷೇಪ ವ್ಯಕ್ತಪಡಿಸಿ, ಸದಸ್ಯರು ವ್ಯವಹಾರ ನಿಯಮಗಳನ್ನು ಉಲ್ಲಂಘಿಸದ ಹೊರತು ಸಭಾಪತಿ ಆಕ್ಷೇಪಿಸಲು ಸಾಧ್ಯವಿಲ್ಲ ಎಂದು ಹೇಳಿದರು. ಅದಕ್ಕೆ ಧನ್‌ಖರ್‌ ಪ್ರತಿಕ್ರಿಯಿಸಿ, ಉಲ್ಲಂಘನೆಯಾದಾಗ ಅಡ್ಡಿಪಡಿಸಬಹುದು ಎಂದು ಒಪ್ಪಿಕೊಂಡರು. ಆದರೆ ಇಲ್ಲಿ ಸದಸ್ಯರು ಭಾರತದ ಸಂವಿಧಾನವನ್ನು ಉಲ್ಲಂಘಿಸಿದ್ದಾರೆ. ನಾನು ಸಂಘಟನೆಯಿಂದ ಹೊರಗುಳಿಯಲು ಅವಕಾಶ ನೀಡುವುದಿಲ್ಲ. ಇದು ಸಂವಿಧಾನದ ಉಲ್ಲಂಘನೆಯಾಗಿದೆ. ಈ ರಾಷ್ಟ್ರದ ಅಭಿವೃದ್ಧಿ ಪಯಣದಲ್ಲಿ ಭಾಗವಹಿಸಲು ಆರ್‌ಎಸ್‌ಎಸ್‌ಗೆ ಸಂಪೂರ್ಣ ಸಾಂವಿಧಾನಿಕ ಹಕ್ಕುಗಳಿವೆ ಎಂದು ಹೇಳಿದರು. ಇದಕ್ಕೆ ಆಕ್ರೋಶ ವ್ಯಕ್ತಪಡಿಸಿದ ಬಹುಜನ ಸಮಾಜ ಪಕ್ಷ ಮತ್ತು ಬಿಜು ಜನತಾ ದಳ ಸೇರಿದಂತೆ ವಿರೋಧ ಪಕ್ಷಗಳು ವಾಕ್‌ಔಟ್‌ ಮಾಡಿವೆ.

ಇದನ್ನೂ ಓದಿ: Parliament Session: ಪತಿ ಅಮಿತಾಬ್‌ ಹೆಸರು ಜಯಾ ಬಚ್ಚನ್‌ಗೆ ಅಲರ್ಜಿ! ಸಂಸತ್‌ನಲ್ಲಿ ಆ ಹೆಸರು ಹೇಳಬೇಡಿ ಎಂದ ನಟಿ!

Continue Reading
Advertisement
Wayanad Landslide
ದೇಶ29 mins ago

Wayanad Landslide: ವಯನಾಡು ಈಗ ಸಾವಿನ ಮನೆ: ಮೃತರ ಸಂಖ್ಯೆ 240, 160 ಶವ ಪತ್ತೆ, 220 ಜನ ಮಿಸ್ಸಿಂಗ್; ಭೀಕರ ಚಿತ್ರಣ ಇಲ್ಲಿದೆ

Sexual Abuse
Latest57 mins ago

Sexual Abuse: ಕ್ಲಾಸ್‌ಗೆ ಹೋಗಲು ಆಟೊ ಹತ್ತಿದ್ದ ಬಾಲಕಿ ಮೇಲೆ ಅತ್ಯಾಚಾರ; ಚಾಲಕ ಮೊಹಮ್ಮದ್‌ ಬಂಧನ

Karnataka Rain
ಕರ್ನಾಟಕ59 mins ago

Karnataka Rain: ಭದ್ರಾ ನದಿಯ ಆರ್ಭಟಕ್ಕೆ ಬಾಳೆಹೊನ್ನೂರು ಮುಳುಗಡೆ; ನದಿ ತಟದ ಸಂತೆ, ಮನೆ, ಅಂಗಡಿಗಳಿಗೆ ಜಲ ದಿಗ್ಬಂಧನ

FASTag new rule
ತಂತ್ರಜ್ಞಾನ1 hour ago

FASTag new rule: ಫಾಸ್ಟ್‌ಟ್ಯಾಗ್‌ ಬಳಕೆದಾರರೇ ಗಮನಿಸಿ; ನಾಳೆಯಿಂದ ಹೊಸ ನಿಯಮ ಜಾರಿ!

Koti Koti Rokka Galisi kannada song released
ಕರ್ನಾಟಕ1 hour ago

Kannada New Song: ಹೂಡಿ ಚಿನ್ನಿ ಕಂಠಸಿರಿಯಲ್ಲಿ ಮೂಡಿಬಂದ ʼಕೋಟಿ ಕೋಟಿ ರೊಕ್ಕ ಗಳಿಸಿʼ ಹಾಡು ರಿಲೀಸ್‌

Paris Olympics Archery
ಕ್ರೀಡೆ1 hour ago

Paris Olympics Archery: ಪ್ರೀ-ಕ್ವಾರ್ಟರ್‌ ಫೈನಲ್​ಗೇರಿದ ದೀಪಿಕಾ ಕುಮಾರಿ

ITR Filing
ವಾಣಿಜ್ಯ1 hour ago

ITR Filing: ಐಟಿ ರಿಟರ್ನ್ಸ್‌ ಗಡುವು ವಿಸ್ತರಣೆ ಇಲ್ಲ, ಕೊನೇ ಕ್ಷಣದಲ್ಲಿ ಪೋರ್ಟಲ್‌ ಕ್ರ್ಯಾಶ್;‌ ಇನ್ಫೋಸಿಸ್‌ ವಿರುದ್ಧ ಆಕ್ರೋಶ!

Gunfire On School
Latest2 hours ago

Gunfire On School: ಶಾಲೆಯೊಳಗೆ ಗನ್‌ ತಂದು 10 ವರ್ಷದ ಹುಡುಗನಿಗೆ ಗುಂಡು ಹಾರಿಸಿದ 5 ವರ್ಷದ ಬಾಲಕ!

Ibbani Thabbida Ileyali movie Helu Gelati song released
ಕರ್ನಾಟಕ2 hours ago

Kannada New Movie: ರೆಟ್ರೋ ಸ್ಟೈಲ್‌ನಲ್ಲಿ ಮೂಡಿಬಂದ ʼಹೇಳು ಗೆಳತಿʼ; ಚರಣ್‌ರಾಜ್ ಕಂಠಸಿರಿಗೆ ಕೇಳುಗರು ಫಿದಾ

Ashwini Ponnappa
ಕ್ರೀಡೆ2 hours ago

Ashwini Ponnappa: ‘ಇದು ನನ್ನ ಕೊನೆಯ ಒಲಿಂಪಿಕ್ಸ್​’; ನಿವೃತ್ತಿ ಘೋಷಿಸಿದ ಶಟ್ಲರ್​ ಅಶ್ವಿನಿ ಪೊನ್ನಪ್ಪ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Rain
ಮಳೆ1 day ago

Karnataka rain : ಭದ್ರಾ ನದಿಯಲ್ಲಿ ಕೊಚ್ಚಿ ಹೋದ ಹಸು; ಬೈಂದೂರಿನಲ್ಲಿ ಬೃಹತ್ ಗಾತ್ರದ ಮೊಸಳೆ ಪ್ರತ್ಯಕ್ಷ

Karnataka Rain
ಮಳೆ1 day ago

Karnataka Rain : ಭಾರಿ ಮಳೆಗೆ ಬಾಳೆಹೊನ್ನೂರು ಮುಳುಗಡೆ; ನೆರೆಗೆ ಬೋಟ್‌ ಮೊರೆ ಹೋದ ಜನರು

Bharachukki falls
ಚಾಮರಾಜನಗರ1 day ago

Bharachukki Falls : ಭರಚುಕ್ಕಿ ಜಲಪಾತಕ್ಕೆ ಕಳ್ಳ ಮಾರ್ಗದಿಂದ ಹೋದೋರಿಗೆ ಬಸ್ಕಿ ಹೊಡೆಸಿದ ಪೊಲೀಸರು!

karnataka Rain
ಮಳೆ2 days ago

Karnataka Rain: ಮತ್ತೆ ಶುರು ಮಳೆ ಅಬ್ಬರ; ಗಾಳಿಗೆ ಹಾರಿ ಹೋದ ಮನೆಗಳ ಚಾವಣಿ, ಶಿರಾಡಿಘಾಟ್‌ನಲ್ಲಿ ಮತ್ತೆ ಭೂ ಕುಸಿತ

Elephant combing Makna elephant captured near Bannerghatta
ಬೆಂಗಳೂರು ಗ್ರಾಮಾಂತರ2 days ago

Elephant combing: ಭೀಮ, ಮಹೇಂದ್ರರ ಮುಂದೆ ಮಂಡಿಯೂರಿದ ಮಕ್ನಾ ಆನೆ; ಹೇಗಿತ್ತು ಗೊತ್ತಾ ಕಾರ್ಯಾಚರಣೆ

karnataka rain
ಮಳೆ2 days ago

Karnataka rain: ಪ್ರವಾಹದ ಭೀಕರತೆ; ಹಳ್ಳದಲ್ಲಿ ತೇಲಿಬಂದ ಎಮ್ಮೆಗಳ ಕಳೇಬರ

Tungabhadra Dam
ಕೊಪ್ಪಳ3 days ago

Tungabhadra Dam: ಕಾಲುವೆಯಲ್ಲಿ ಬಾಲಕರ ಈಜಾಟ; ಅಧಿಕಾರಿಗಳಿಗೆ ಪೀಕಲಾಟ!

Elephant attack
ಮಳೆ3 days ago

Elephant attack : ಮಳೆ ಮಧ್ಯೆ ಮಲೆನಾಡಿನಲ್ಲಿ ಕಾಡಾನೆಗಳ ಕಾಟ; ಪ್ರವಾಹಕ್ಕೆ ಸಿಲುಕಿದ ಪಟಗುಂದಿ ಗ್ರಾಮ

karnataka Rain
ಮಳೆ3 days ago

Karnataka Rain : ಮಳೆ ನಿಂತರೂ ಕಡಿಮೆಯಾಗದ ಅನಾಹುತ; ಮಾದಪುರ ಟೌನ್ ಸಮೀಪ ಗುಡ್ಡ ಕುಸಿತ

karnataka Rain
ಮಳೆ3 days ago

Karnataka Rain : ರಭಸವಾಗಿ ಬೀಸಿದ ಗಾಳಿಗೆ ಮನೆ ಮೇಲೆ ಬಿದ್ದ ತೆಂಗಿನ ಮರ; ನದಿ ನೀರು ಸೇವಿಸದಂತೆ ಸೂಚನೆ

ಟ್ರೆಂಡಿಂಗ್‌