Elon Musk | ಟ್ವಟರ್‌ ಖರೀದಿಸಿದ ಬಳಿಕ ಎಲಾನ್‌ ಮಸ್ಕ್‌ಗೆ 73,800 ಕೋಟಿ ರೂ. ನಷ್ಟ - Vistara News

ಪ್ರಮುಖ ಸುದ್ದಿ

Elon Musk | ಟ್ವಟರ್‌ ಖರೀದಿಸಿದ ಬಳಿಕ ಎಲಾನ್‌ ಮಸ್ಕ್‌ಗೆ 73,800 ಕೋಟಿ ರೂ. ನಷ್ಟ

ಸಾಮಾಜಿಕ ಜಾಲತಾಣ ಟ್ವಿಟರ್‌ ಅನ್ನು ಖರೀದಿಸಿದ ಬಳಿಕ ಎಲಾನ್‌ ಮಸ್ಕ್‌ ಅವರ (Elon Musk) ಸಂಪತ್ತಿನಲ್ಲಿ 73,800 ಕೋಟಿ ರೂ. ನಷ್ಟವಾಗಿದೆ ಎಂದು ಬ್ಲೂಮ್‌ ಬರ್ಗ್‌ ವರದಿ ತಿಳಿಸಿದೆ.

VISTARANEWS.COM


on

Elon Musk
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಸ್ಯಾನ್‌ ಫ್ರಾನ್ಸಿಸ್ಕೊ: ಟೆಸ್ಲಾ ಸ್ಥಾಪಕ ಎಲಾನ್‌ ಮಸ್ಕ್‌ ಅವರು ಟ್ವಿಟರ್‌ ಅನ್ನು ಖರೀದಿಸಿದ ಬಳಿಕ ಅವರ ಸಂಪತ್ತಿನಲ್ಲಿ 9 ಶತಕೋಟಿ ಡಾಲರ್‌ (ಅಂದಾಜು 73,800 ಕೋಟಿ ರೂ.) ನಷ್ಟವಾಗಿದೆ (Elon Musk) ಎಂದು ವರದಿಯಾಗಿದೆ.

ಎಲಾನ್‌ ಮಸ್ಕ್‌ ಸಂಪತ್ತು 204 ಶತಕೋಟಿ ಡಾಲರ್‌ಗೆ (16.72 ಲಕ್ಷ ಕೋಟಿ ರೂ.) ಇಳಿಕೆಯಾಗಿದೆ ಎಂದು ಬ್ಲೂಮ್‌ ಬರ್ಗ್‌ ವರದಿ ತಿಳಿಸಿದೆ. ಹೀಗಿದ್ದರೂ, ಎಲಾನ್‌ ಮಸ್ಕ್‌ ಜಗತ್ತಿನ ಅತಿ ದೊಡ್ಡ ಸಿರಿವಂತ ಎನ್ನಿಸಿದ್ದಾರೆ.

3,700 ಹುದ್ದೆ ಕಡಿತ? : ಎಲಾನ್‌ ಮಸ್ಕ್‌ ಅವರು ಟ್ವಿಟರ್‌ನಲ್ಲಿ 3,700 ಹುದ್ದೆಗಳನ್ನು ಕಡಿತಗೊಳಿಸುವ ಸಾಧ್ಯತೆ ಇದೆ ಎಂದು ವರದಿಯಾಗಿದೆ. ಅಂದರೆ ಕಂಪನಿಯ ಅರ್ಧದಷ್ಟು ಉದ್ಯೋಗಿಗಳು ಕೆಲಸ ಕಳೆದುಕೊಳ್ಳಲಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Narendra Modi: ಕರ್ನಾಟಕದಲ್ಲಿ ಬಿಜೆಪಿ ಗೆಲುವಿನ ಬಗ್ಗೆ ನರೇಂದ್ರ ಮೋದಿ ಹೇಳಿದ್ದೇನು?

Narendra Modi: ದಕ್ಷಿಣ ಭಾರತದಲ್ಲಿ ಎನ್‌ಡಿಎ ಬುನಾದಿ ಭದ್ರವಾಗಿದ್ದು, ಹೊಸ ರಾಜಕೀಯಕ್ಕೆ ಇದು ನಾಂದಿಯಾಗಿದೆ. ಕರ್ನಾಟಕ ಹಾಗೂ ತೆಲಂಗಾಣವನ್ನೇ ತೆಗೆದುಕೊಳ್ಳಿ, ಇತ್ತೀಚೆಗೆ ಬೇರೆ ಪಕ್ಷಗಳ ಸರ್ಕಾರಗಳು ಅಲ್ಲಿ ಆಡಳಿತಕ್ಕೆ ಬಂದಿವೆ. ಆದರೆ, ಜನರು ಭ್ರಮೆಯಿಂದ ಹೊರಬಂದು ಎನ್‌ಡಿಎ ಮೈತ್ರಿಕೂಟವನ್ನು ಬೆಂಬಲಿಸಿದ್ದಾರೆ ಸಂಸದೀಯ ಮಂಡಳಿ ಸಭೆಯಲ್ಲಿ ನರೇಂದ್ರ ಮೋದಿ ಹೇಳಿದರು.

VISTARANEWS.COM


on

Narendra Modi
Koo

ನವದೆಹಲಿ: ನರೇಂದ್ರ ಮೋದಿ (Narendra Modi) ಅವರು ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾಗಿದ್ದಾರೆ. ಎನ್‌ಡಿಎ ಸಂಸದೀಯ ಮಂಡಳಿ ಸಭೆಯಲ್ಲಿ ಮೋದಿ ಅವರು ಆಯ್ಕೆಯಾಗಿದ್ದು, ಸತತ ಮೂರನೇ ಬಾರಿಗೆ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಇದೇ ವೇಳೆ, ಎನ್‌ಡಿಎ ನಾಯಕರು, ಸಂಸದರು, ಎನ್‌ಡಿಎ ಆಡಳಿತದ ರಾಜ್ಯಗಳ ಮುಖ್ಯಮಂತ್ರಿಗಳನ್ನು ಉದ್ದೇಶಿಸಿ ಮಾತನಾಡಿದ ಅವರು, ಲೋಕಸಭೆ ಚುನಾವಣೆಯಲ್ಲಿ (Lok Sabha Election 2024) ಕರ್ನಾಟಕ (Karnataka) ಸೇರಿ ದಕ್ಷಿಣ ಭಾರತದಲ್ಲಿ ಬಿಜೆಪಿ ಪ್ರದರ್ಶನದ ಕುರಿತು ಮಾತನಾಡಿದರು.

“ದಕ್ಷಿಣ ಭಾರತದಲ್ಲಿ ಎನ್‌ಡಿಎ ಬುನಾದಿ ಭದ್ರವಾಗಿದ್ದು, ಹೊಸ ರಾಜಕೀಯಕ್ಕೆ ಇದು ನಾಂದಿಯಾಗಿದೆ. ಕರ್ನಾಟಕ ಹಾಗೂ ತೆಲಂಗಾಣವನ್ನೇ ತೆಗೆದುಕೊಳ್ಳಿ, ಇತ್ತೀಚೆಗೆ ಬೇರೆ ಪಕ್ಷಗಳ ಸರ್ಕಾರಗಳು ಅಲ್ಲಿ ಆಡಳಿತಕ್ಕೆ ಬಂದಿವೆ. ಆದರೆ, ಜನರು ಭ್ರಮೆಯಿಂದ ಹೊರಬಂದು ಎನ್‌ಡಿಎ ಮೈತ್ರಿಕೂಟವನ್ನು ಬೆಂಬಲಿಸಿದ್ದಾರೆ. ಕರ್ನಾಟಕ ಹಾಗೂ ತೆಲಂಗಾಣದಲ್ಲಿ ಜನ ಎನ್‌ಡಿಎ ಮೈತ್ರಿಕೂಟವನ್ನು ಸ್ವೀಕರಿಸಿದ್ದಾರೆ. ಇದು ಎನ್‌ಡಿಎ ಮೇಲೆ ಜನ ಇಟ್ಟಿರುವ ವಿಶ್ವಾಸಕ್ಕೆ ಸಾಕ್ಷಿಯಾಗಿದೆ” ಎಂದು ಹೇಳಿದರು.

“ಕರ್ನಾಟಕ, ತೆಲಂಗಾಣದ ಜತೆಗೆ ತಮಿಳುನಾಡಿನ ತಂಡಕ್ಕೂ ನಾನು ಅಭಿನಂದನೆ ತಿಳಿಸುತ್ತೇನೆ. ನಾವು ಒಗ್ಗೂಡಿ ಹೋರಾಡಿದರೂ ಒಂದು ಸೀಟು ಕೂಡ ಗೆಲ್ಲಲು ಆಗಲಿಲ್ಲ. ಆದರೆ, ಎನ್‌ಡಿಎ ಮತಗಳಿಕೆಯ ಪ್ರಮಾಣವು ಜಾಸ್ತಿಯಾಗಿದೆ. ಇದರಿಂದ ಸ್ಪಷ್ಟ ಸಂದೇಶ ರವಾನೆಯಾದಂತಾಗಿದೆ. ಮುಂದಿನ ದಿನಗಳಲ್ಲಿ ತಮಿಳುನಾಡಿನಲ್ಲಿ ಎನ್‌ಡಿಎಗೆ ಜನಬೆಂಬಲ ಸಿಗುತ್ತದೆ ಎಂಬುದಕ್ಕೆ ಇದು ಸಂಕೇತವಾಗಿದೆ. ಕೇರಳದಲ್ಲಿ ನಮ್ಮ ನೂರಾರು ಕಾರ್ಯಕರ್ತರು ತ್ಯಾಗ, ಬಲಿದಾನ ಮಾಡಿದರು. ಇದೇ ಮೊದಲ ಬಾರಿಗೆ ಕೇರಳದಲ್ಲಿ ಎನ್‌ಡಿಎ ಖಾತೆ ತೆರೆದಿದೆ” ಎಂದು ಹೇಳಿದರು.

ನೂರು ದಾಟದ ಕಾಂಗ್ರೆಸ್‌

ಹತ್ತು ವರ್ಷಗಳ ಬಳಿಕವೂ ಕಾಂಗ್ರೆಸ್‌ಗೆ 100 ಸೀಟುಗಳನ್ನು ದಾಟಲೂ ಸಾಧ್ಯವಾಗಲಿಲ್ಲ. ಕಾಂಗ್ರೆಸ್‌ನ ಭ್ರಷ್ಟಾಚಾರ ಮತ್ತು ಜನ ವಿರೋಧಿ ನೀತಿಯನ್ನು ಮತದಾರರು ಮರೆತಿಲ್ಲ. ಯುಪಿಎ ಹೆಸರನ್ನು ಇಂಡಿ ಒಕ್ಕೂಟ ಎಂದು ಬದಲಾಯಿಸಿಕೊಂಡರೂ ಜನ ಇವರ ಹಗರಣಗಳನ್ನು ಮರೆತಿಲ್ಲ. ಹಾಗಾಗಿ ಮೂರನೇ ಬಾರಿ ದೇಶದ ಜನ ಎನ್‌ಡಿಎ ಒಕ್ಕೂಟವನ್ನು ಬೆಂಬಲಿಸಿದ್ದಾರೆ ಎಂದು ಮೋದಿ ಹೇಳಿದರು.

ಪ್ರತಿಪಕ್ಷಗಳು ಅಭಿವೃದ್ಧಿಯ ವಿರೋಧಿ

ಚುನಾವಣೆಯುದ್ದಕ್ಕೂ ಪ್ರತಿಪಕ್ಷಗಳು ಎಲೆಕ್ಟ್ರಾನಿಕ್‌ ಮತ ಯಂತ್ರಗಳನ್ನು ದೂಷಿಸುತ್ತ ಬಂದವು. ಆದರೆ ಮತ ಎಣಿಕೆ ಮುಗಿದ ಬಳಿಕ ಮೌನವಾಗಿವೆ. ಕಾಂಗ್ರೆಸ್‌ ಮತ್ತಿತರ ಪಕ್ಷಗಳು ಮತಯಂತ್ರಗಳಿಗೆ ಕಳಂಕ ಹೊರಿಸುವ ಮೂಲಕ ಪ್ರಜಾಪ್ರಭುತ್ವವನ್ನೂ ಅವಮಾನಿಸಿದವು. ಈ ಪಕ್ಷಗಳಿಗೆ ಹಳೆಯ ಪಾಳೇಗಾರಿಕೆಯಲ್ಲೇ ನಂಬಿಕೆ ಇದೆ. ಇವರು ಆಧುನಿಕತೆಯನ್ನು ಬೆಂಬಲಿಸುವುದಿಲ್ಲ. ಇವರು ಡಿಜಿಟಲ್‌ ಪಾವತಿಯನ್ನು ವಿರೋಧಿಸುತ್ತಾರೆ. ಇವರು ಆಧಾರ್‌ ವ್ಯವಸ್ಥೆಗೆ ಅಡ್ಡಿಪಡಿಸುತ್ತಾರೆ. ದೇಶಕ್ಕೆ ಉತ್ತಮ ಕೊಡುಗೆಯಾದ ಆಧಾರ್‌ ವ್ಯವಸ್ಥೆಯನ್ನು ಹಾಳುಗೆಡವಲು ಇವರು ಎಷ್ಟೆಲ್ಲ ಪ್ರಯತ್ನಪಟ್ಟರು. ಇವರು ಅಭಿವೃದ್ಧಿ ವಿರೋಧಿಗಳು ಎಂದು ಟೀಕಿಸಿದರು.

ಇದನ್ನೂ ಓದಿ: Narendra Modi: ಪ್ರಮಾಣವಚನಕ್ಕೂ ಮೊದಲು ಅಡ್ವಾಣಿಯ ಆಶೀರ್ವಾದ ಪಡೆದ ನರೇಂದ್ರ ಮೋದಿ!

Continue Reading

ಉದ್ಯೋಗ

Job Alert: ಬರೋಬ್ಬರಿ 9,923 ಬ್ಯಾಂಕ್‌ ಹುದ್ದೆಗಳ ಭರ್ತಿಗೆ ಮುಂದಾದ ಐಬಿಪಿಎಸ್‌; ಇಂದೇ ಅರ್ಜಿ ಸಲ್ಲಿಸಿ

Job Alert: ಬ್ಯಾಂಕಿಂಗ್ ಸಿಬ್ಬಂದಿ ನೇಮಕಾತಿ ಸಂಸ್ಥೆ (Institute of Banking Personnel Selection) ಬೃಹತ್‌ ನೇಮಕಾತಿಗೆ ಮುಂದಾಗಿದೆ. ದೇಶದ ಪ್ರಾದೇಶಿಕ ಗ್ರಾಮೀಣ ಬ್ಯಾಂಕ್‌ಗಳಲ್ಲಿ ಖಾಲಿ ಇರುವ 9,923 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ (IBPS RRB Recruitment 2024). ಆಫೀಸರ್, ಕಚೇರಿ ಸಹಾಯಕ ಸೇರಿ ವಿವಿಧ ಹುದ್ದೆಗಳಿದ್ದು, ಪದವಿ ಪಡೆದ ಅಭ್ಯರ್ಥಿಗಳು ಅರ್ಜಿ ಸಲ್ಲಿಬಹುದು. ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನ ಜೂನ್‌ 27.

VISTARANEWS.COM


on

Job Alert
Koo

ಬೆಂಗಳೂರು: ಬ್ಯಾಂಕ್‌ ಉದ್ಯೋಗ ಹೊಂದಬೇಕು ಎನ್ನುವ ಕನಸು ಯಾರಿಗೆ ಇಲ್ಲ ಹೇಳಿ? ಅಂತಹವರ ಕನಸು ನನಸಾಗುವ ದಿನ ಹತ್ತಿರದಲ್ಲೇ ಇದೆ. ಯಾಕೆಂದರೆ ಬ್ಯಾಂಕಿಂಗ್ ಸಿಬ್ಬಂದಿ ನೇಮಕಾತಿ ಸಂಸ್ಥೆ (Institute of Banking Personnel Selection) ಬೃಹತ್‌ ನೇಮಕಾತಿಗೆ ಮುಂದಾಗಿದೆ. ದೇಶದ ಪ್ರಾದೇಶಿಕ ಗ್ರಾಮೀಣ ಬ್ಯಾಂಕ್‌ಗಳಲ್ಲಿ ಖಾಲಿ ಇರುವ 9,923 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ (IBPS RRB Recruitment 2024). ಆಫೀಸರ್, ಕಚೇರಿ ಸಹಾಯಕ ಸೇರಿ ವಿವಿಧ ಹುದ್ದೆಗಳಿದ್ದು, ಪದವಿ ಪಡೆದ ಅಭ್ಯರ್ಥಿಗಳು ಅರ್ಜಿ ಸಲ್ಲಿಬಹುದು. ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನ ಜೂನ್‌ 27 (Job Alert).

ಹುದ್ದೆಗಳ ವಿವರ ಮತ್ತು ವಿದ್ಯಾರ್ಹತೆ

ಕಚೇರಿ ಸಹಾಯಕ – 5,538 ಹುದ್ದೆ, ಆಫೀಸರ್ ಸ್ಕೇಲ್ 1 – 2,485 ಹುದ್ದೆ, ಆಫೀಸರ್ ಸ್ಕೇಲ್ 2 – 315 ಹುದ್ದೆ, ಆಫೀಸರ್ ಸ್ಕೇಲ್ 2 – 68 ಹುದ್ದೆ, ಆಫೀಸರ್ ಸ್ಕೇಲ್ 2 – 21 ಹುದ್ದೆ, ಆಫೀಸರ್ ಸ್ಕೇಲ್ 2 – 24 ಹುದ್ದೆ, ಆಫೀಸರ್ ಸ್ಕೇಲ್ 2 – 8 ಹುದ್ದೆ, ಆಫೀಸರ್ ಸ್ಕೇಲ್ 2 – 3 ಹುದ್ದೆ, ಆಫೀಸರ್ ಸ್ಕೇಲ್ 2 – 59 ಹುದ್ದೆ, ಆಫೀಸರ್ ಸ್ಕೇಲ್ 3 – 73 ಹುದ್ದೆಗಳಿವೆ. ಪದವಿ ವಿದ್ಯಾರ್ಹತೆ ಹೊಂದಿದವರು ಅರ್ಜಿ ಸಲ್ಲಿಸಬಹುದು.

ವಯೋಮಿತಿ

ಆಫೀಸರ್ ಸ್ಕೇಲ್ 1 ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಕನಿಷ್ಠ ವಯಸ್ಸು 21 ವರ್ಷ ಮತ್ತು ಗರಿಷ್ಠ ವಯಸ್ಸು 40 ವರ್ಷ. ಆಫೀಸರ್ ಸ್ಕೇಲ್ 2 ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಕನಿಷ್ಠ ವಯಸ್ಸು 21 ವರ್ಷ ಮತ್ತು ಗರಿಷ್ಠ ವಯಸ್ಸು 32 ವರ್ಷ. ಆಫೀಸರ್ ಸ್ಕೇಲ್ 3 ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ ವಯಸ್ಸು 18 ವರ್ಷ ಮತ್ತು ಗರಿಷ್ಠ ವಯಸ್ಸು 28 ವರ್ಷ. ಕಚೇರಿ ಸಹಾಯಕ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಕನಿಷ್ಠ ವಯಸ್ಸು 18 ವರ್ಷ ಮತ್ತು ಗರಿಷ್ಠ ವಯಸ್ಸು 28 ವರ್ಷ. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಇದೆ. ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ 5 ವರ್ಷ, ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷಗಳ ರಿಯಾಯಿತಿ ಲಭ್ಯ.

ಅರ್ಜಿ ಶುಲ್ಕ

ಅರ್ಜಿ ಶುಲ್ಕವಾಗಿ ಸಾಮಾನ್ಯ ಅಭ್ಯರ್ಥಿಗಳು 850 ರೂ. ಮತ್ತು ಪ.ಜಾ. / ಪ.ಪಂ. / ಅಂಗವಿಕಲ ಅಭ್ಯರ್ಥಿಗಳು 175 ರೂ. ಪಾವತಿಸಬೇಕು. ಅರ್ಜಿ ಶುಲ್ಕವನ್ನು ಇಂಟರ್‌ನೆಟ್‌ ಬ್ಯಾಂಕಿಂಗ್/ ಕ್ರೆಡಿಟ್ / ಡೆಬಿಟ್ ಕಾರ್ಡ್ ಬಳಸಿಕೊಂಡು ಆನ್‌ಲೈನ್‌ ಮೂಲಕ ಪಾವತಿಸಬಹುದು.

ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್‌ ಮಾಡಿ.

ಅರ್ಜಿ ಸಲ್ಲಿಸುವ ವಿಧಾನ

ಇದನ್ನೂ ಓದಿ: Job Alert: ಭಾರತೀಯ ವಾಯುಪಡೆಯಲ್ಲಿದೆ ಉದ್ಯೋಗಾವಕಾಶ; ದ್ವಿತೀಯ ಪಿಯು ಪಾಸಾದವರೂ ಅರ್ಜಿ ಸಲ್ಲಿಸಿ

Continue Reading

ಪ್ರಮುಖ ಸುದ್ದಿ

T20 World Cup : ಅಮೆರಿಕದ ವಿರುದ್ಧದ ಪಂದ್ಯದಲ್ಲಿ ಬಾಲ್​ ವಿರೂಪಗೊಳಿಸಿದ ಪಾಕ್​ ಬೌಲರ್​; ಆರೋಪ

T20 World Cup : ಬದಲಾದ ಈ ಚೆಂಡಿನಿಂದ ಪಾಕಿಸ್ತಾನ ಮೋಸದಾಟ ಆಟಿದೆ. ಐಸಿಸಿ ಈ ಬಗ್ಗೆ ಏನು ಮಾಡುತ್ತಿದೆ. 2 ಓವರ್ ಗಳ ಹಿಂದೆ ಬದಲಾಯಿಸಲಾದ ಚೆಂಡನ್ನು ರಿವರ್ಸ್ ಸ್ವಿಂಗ್​ ಮಾಡಲು ಹೇಗೆ ಸಾಧ್ಯ ? ಹ್ಯಾರಿಸ್ ರವೂಫ್ ತನ್ನ ಹೆಬ್ಬೆರಳಿನ ಉಗುರುಗಳನ್ನು ಚೆಂಡಿನ ಎಳೆಯುವುದನ್ನು ನೀವು ಅಕ್ಷರಶಃ ನೋಡಬಹುದು ಎಂದು ಥೆರಾನ್ ತನ್ನ ಎಕ್ಸ್ ಖಾತೆಯಲ್ಲಿ ಬರೆದಿದ್ದಾರೆ.

VISTARANEWS.COM


on

Haris Rauf
Koo

ನವದೆಹಲಿ: ಪಾಕಿಸ್ತಾನ ಕ್ರಿಕೆಟ್ ತಂಡದ ಆಟಗಾರರು ಮತ್ತೆ ತಮ್ಮ ಕೃತ್ರಿಮ ಬುದ್ಧಿಯನ್ನು ತೋರಿಸಿದ್ದಾರೆ. ಟಿ 20 ವಿಶ್ವಕಪ್ 2024 ರ (T20 World Cup) ಯುಎಸ್ಎ ಮತ್ತು ಪಾಕಿಸ್ತಾನ ನಡುವಿನ ಪಂದ್ಯದ 11 ನೇ ಪಂದ್ಯದ ಸಮಯದಲ್ಲಿ ಪಾಕಿಸ್ತಾನದ ವೇಗದ ಬೌಲರ್ ಹ್ಯಾರಿಸ್ ರೌಫ್ ‘ಬಾಲ್ ವಿರೂಪ ‘ ಮಾಡಿದ್ದಾರೆ ಎಂದು ಯುಎಸ್ಎ ಕ್ರಿಕೆಟಿಗ ರಸ್ಟಿ ಥೆರಾನ್ ಆರೋಪಿಸಿದ್ದಾರೆ. ವಿಶೇಷವೆಂದರೆ, ಯುಎಸ್ಎ ಇನ್ನಿಂಗ್ಸ್​ನ 12 ಓವರ್​ನಲ್ಲಿ 94 ರನ್ ಬಾರಿಸಿದ್ದಾಗ ಪಾಕಿಸ್ತಾನ ತಂಡ ಚೆಂಡು ಬದಲಾವಣೆಗೆ ಮನವಿ ಮಾಡಿತ್ತು.

ಬದಲಾವಣೆಯ ಒಂದು ಓವರ್ ನಂತರ, ಆಂಡ್ರೀಸ್ ಗೌಸ್ (26 ಎಸೆತಗಳಲ್ಲಿ 35 ರನ್) ಮತ್ತು ಮೊನಾಂಕ್ ಪಟೇಲ್ (38 ಎಸೆತಗಳಲ್ಲಿ 50 ರನ್) ನಡುವಿನ ಜತೆಯಾಟ ಮುರಿದು ಹೋಯಿತು. ಔಟ್ ಆದ ತಕ್ಷಣ, ಥೆರಾನ್ ಈ ವಿಷಯವನ್ನು ಪರಿಶೀಲಿಸುವಂತೆ ಐಸಿಸಿಯನ್ನು ಕೇಳಿಕೊಂಡಿತು. ರವೂಫ್ ಚೆಂಡಿನ ಮೇಲೆ ತನ್ನ ಹೆಬ್ಬೆರಳಿನ ಉಗುರಿನ ಮೂಲಕ ಗೆರೆ ಎಳೆಯುತ್ತಿರುವುದು ಕಂಡಿದೆ ಎಂದು 38 ವರ್ಷದ ಆಟಗಾರ ಆರೋಪಿಸಿದ್ದಾರೆ.

ಇದನ್ನೂ ಓದಿ: T20 World Cup: ಪಾಕಿಸ್ತಾನಕ್ಕೆ ಮುಖಭಂಗ ಮಾಡಿದ ಅಮೆರಿಕ ಕ್ರಿಕೆಟ್‌ ತಂಡದ ಸೌರಭ್ ನೇತ್ರವಾಲ್ಕರ್ ಹಿನ್ನೆಲೆ ಏನು?

ಬದಲಾದ ಈ ಚೆಂಡಿನಿಂದ ಪಾಕಿಸ್ತಾನ ಮೋಸದಾಟ ಆಟಿದೆ. ಐಸಿಸಿ ಈ ಬಗ್ಗೆ ಏನು ಮಾಡುತ್ತಿದೆ. 2 ಓವರ್ ಗಳ ಹಿಂದೆ ಬದಲಾಯಿಸಲಾದ ಚೆಂಡನ್ನು ರಿವರ್ಸ್ ಸ್ವಿಂಗ್​ ಮಾಡಲು ಹೇಗೆ ಸಾಧ್ಯ ? ಹ್ಯಾರಿಸ್ ರವೂಫ್ ತನ್ನ ಹೆಬ್ಬೆರಳಿನ ಉಗುರುಗಳನ್ನು ಚೆಂಡಿನ ಎಳೆಯುವುದನ್ನು ನೀವು ಅಕ್ಷರಶಃ ನೋಡಬಹುದು ಎಂದು ಥೆರಾನ್ ತನ್ನ ಎಕ್ಸ್ ಖಾತೆಯಲ್ಲಿ ಬರೆದಿದ್ದಾರೆ.

ಏತನ್ಮಧ್ಯೆ, ಗೌಸ್ ಔಟಾದ ನಂತರ, ಮೊಹಮ್ಮದ್ ಅಮೀರ್ ಮುಂದಿನ ಓವರ್​​ನಲ್ಲಿ ಯುಎಸ್ಎ ನಾಯಕನನ್ನು ಔಟ್ ಮಾಡುವಲ್ಲಿ ಯಶಸ್ವಿಯಾದರು. ಈ ವೇಳೆ ಅಮೆರಿಕ 14.1 ಓವರ್​ಗಳಲ್ಲಿ 111/3 ಸ್ಕೋರ್​ ಮಾಡಿತ್ತು. ಆದಾಗ್ಯೂ, ಎರಡು ತ್ವರಿತ ಹೊಡೆತಗಳ ಹೊರತಾಗಿಯೂ, ಆರೋನ್ ಜೋನ್ಸ್ (26 ಎಸೆತಗಳಲ್ಲಿ 36* ರನ್) ಮತ್ತು ನಿತೀಶ್ ಕುಮಾರ್ (14 ಎಸೆತಗಳಲ್ಲಿ 14* ರನ್) ಅವರ ನಿರ್ಣಾಯಕ ಇನ್ನಿಂಗ್ಸ್​ಗಳ ಮೂಲಕ ಪಂದ್ಯ ಸಮಬಲಗೊಂಡಿತು.

ಅಂತಿಮವಾಗಿ ಅಮೆರಿಕ ನಿಗದಿತ 20 ಓವರ್​ಗಳಲ್ಲಿ 159 ರನ್ ಬಾರಿಸಿತು. ಪಂದ್ಯದ ವಿಜೇತರನ್ನು ನಿರ್ಧರಿಸಲು, ಸೂಪರ್ ಓವರ್​ ಮೊರೆ ಹೋಗಲಾಯಿತು. ಅಲ್ಲಿ ಜೋನ್ಸ್ ಮತ್ತು ಹರ್ಮೀತ್ ಸಿಂಗ್ ಮೊಹಮ್ಮದ್ ಅಮೀರ್ ವಿರುದ್ಧ ಬ್ಯಾಟಿಂಗ್ ಮಾಡಿದರು. ಎಡಗೈ ವೇಗಿ ಎಸೆದ ಎರಡು ವೈಡ್ ಗಳು ಮತ್ತು ಕೆಲವು ಓವರ್ ಥ್ರೋ ಮೂಲಕ ಯುಎಸ್​ ತಂಡ 18 ರನ್ ಬಾರಿಸಿತು. ಅಮೆರಿಕದ ಬೌಲರ್​ ಸೌರಭ್ ನೇತ್ರವಾಲ್ಕರ್ ಅವರು ಸ್ಕೋರ್ ಅನ್ನು ಯಶಸ್ವಿಯಾಗಿ ರಕ್ಷಿಸುವಲ್ಲಿ ಯಶಸ್ವಿಯಾದರು. ಪಾಕಿಸ್ತಾನವು ತನ್ನ ಸೂಪರ್ ಓವರ್​ನಲ್ಲಿ ಕೇವಲ 13 ರನ್ ಗಳಿಸಲಷ್ಟೇ ಶಕ್ತವಾಯಿತು. ಇದರ ಪರಿಣಾಮವಾಗಿ, ಯುಎಸ್ಎ 2009 ರ ಪಂದ್ಯಾವಳಿಯ ಚಾಂಪಿಯನ್​ ತಂಡವನ್ನು ಸೋಲಿಸಿತು. ಪಾಕಿಸ್ತಾನ ತಂಡ ಜೂನ್ 9ರಂದು ನ್ಯೂಯಾರ್ಕ್​ನ ನಸ್ಸೌ ಕೌಂಟಿ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ಸಾಂಪ್ರದಾಯಿಕ ಎದುರಾಳಿ ಭಾರತವನ್ನು ಎದುರಿಸಲಿದೆ.

Continue Reading

ಪ್ರಮುಖ ಸುದ್ದಿ

Rahul Gandhi: ಚುನಾವಣಾ ಜವಾಬ್ದಾರಿ ನಿರ್ವಹಿಸುವಲ್ಲಿ ವಿಫಲ; 18 ಸಚಿವರ ವಿರುದ್ಧ ರಾಹುಲ್ ಗಾಂಧಿ ಅಸಮಾಧಾನ

Election Results 2024: ಲೋಕಸಭಾ ಚುನಾವಣೆಯಲ್ಲಿ ರಾಜ್ಯದ 18 ಕ್ಷೇತ್ರಗಳಲ್ಲಿ ಲೀಡ್‌ ಕೊಡಿಸಲು ವಿಫಲರಾದ ಸಚಿವರ ವಿರುದ್ಧ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅಸಮಾಧಾನ ಹೊರಹಾಕಿದ್ದಾರೆ. ಇದೇ ವೇಳೆ ಗೆದ್ದವರಿಗೆ ಅಭಿನಂದನೆ, ಸೋತ ಅಭ್ಯರ್ಥಿಗಳಿಗೆ ಧೈರ್ಯ ಹೇಳಿದ್ದಾರೆ.

VISTARANEWS.COM


on

Election results 2024
Koo

ಬೆಂಗಳೂರು: ರಾಜ್ಯದ ಲೋಕಸಭೆ ಚುನಾವಣೆಯಲ್ಲಿ (Karnataka election results 2024) ಗೆದ್ದ ಕಾಂಗ್ರೆಸ್‌ನ 9 ನೂತನ ಸಂಸದರಿಗೆ ಅಭಿನಂದನೆ ಹಾಗೂ ಸೋತ 19 ಅಭ್ಯರ್ಥಿಗಳಿಗೆ ಸನ್ಮಾನ ಕಾರ್ಯಕ್ರಮ ಶುಕ್ರವಾರ ನಗರದ ಕೆಪಿಸಿಸಿ ಕಚೇರಿಯ ಭಾರತ್ ಜೋಡೋ ಭವನದಲ್ಲಿ ನೆರವೇರಿತು. ಬಿಜೆಪಿಯ ಮಾನನಷ್ಟ ಪ್ರಕರಣದ ವಿಚಾರಣೆಗಾಗಿ ನಗರಕ್ಕೆ ಆಗಮಿಸಿದ್ದ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ (Rahul Gandhi) ಅವರು, ಗೆದ್ದ ಅಭ್ಯರ್ಥಿಗಳಿಗೆ ಅಭಿನಂದನೆ ಸಲ್ಲಿಸಿ, ಸೋತವರಿಗೆ ಧೈರ್ಯ ಹೇಳಿದ್ದಾರೆ. ಇದೇ ವೇಳೆ ಚುನಾವಣಾ ಜವಾಬ್ದಾರಿ ನಿರ್ವಹಿಸುವಲ್ಲಿ ವಿಫಲರಾದ ಸಚಿವರ ಬಗ್ಗೆ ರಾಹುಲ್ ಗಾಂಧಿ ಅಸಮಾಧಾನ ಹೊರಹಾಕಿದ್ದಾರೆ.

ಎಲ್ಲಾ 28 ಕಾಂಗ್ರೆಸ್‌ ಅಭ್ಯರ್ಥಿಗಳ ಜತೆ ರಾಹುಲ್ ಗಾಂಧಿ ಸಭೆ ನಡೆಸಿದರು. ಈ ವೇಳೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್, ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್‌ ಸುರ್ಜೇವಾಲಾ ಉಪಸ್ಥಿತರಿದ್ದರು. ಈ ವೇಳೆ ಗೆದ್ದವರಿಗೆ ಅಭಿನಂದನೆ, ಸೋತವರಿಗೆ ಧೈರ್ಯ ಹೇಳಿದ ರಾಹುಲ್ ಗಾಂಧಿ ಅವರು, ಕ್ಷೇತ್ರದಲ್ಲಿ ಹೆಚ್ಚು ಸಮಯ ಕಳೆಯಿರಿ. ಬೆಂಗಳೂರು, ದೆಹಲಿಯಲ್ಲೇ ಇರಬೇಡಿ. ಕ್ಷೇತ್ರದ ಜನರ ಜೊತೆಗೆ ನಿರಂತರ ಸಂಪರ್ಕ ಇಟ್ಟುಕೊಳ್ಳಿ. ನಾವು ನಿಮ್ಮ ಜತೆಗೆ ಇದ್ದೇವೆ. ನಿಮ್ಮ ನಿಮ್ಮ ಕ್ಷೇತ್ರಗಳಲ್ಲಿ ಪಕ್ಷ ಸಂಘಟನೆಯಲ್ಲಿ ತೊಡಗಿಕೊಳ್ಳಿ. ಕಾರ್ಯಕರ್ತರ ವಿಶ್ವಾಸಗಳಿಸಿ, ಅದರಿಂದ ಮುಂದೆ ನಿಮಗೂ, ಪಕ್ಷಕ್ಕೂ ಅನುಕೂಲವಾಗಲಿದೆ ಎಂದು ತಿಳಿಸಿದ್ದಾರೆ.

ಸಚಿವರ ಬಗ್ಗೆ ರಾಹುಲ್ ಗಾಂಧಿ ಅಸಮಾಧಾನ

ಚುನಾವಣಾ ಜವಾಬ್ದಾರಿ ನಿರ್ವಹಿಸುವಲ್ಲಿ ವಿಫಲರಾದ ಸಚಿವರ ಬಗ್ಗೆ ಸಭೆಯಲ್ಲಿ ರಾಹುಲ್ ಗಾಂಧಿ ಅಸಮಾಧಾನ ಹೊರಹಾಕಿದ್ದಾರೆ ಎನ್ನಲಾಗಿದೆ. ಲೀಡ್ ಕಡಿಮೆ ಕೊಟ್ಟ ಸಚಿವರ ಬಗ್ಗೆ ರಣದೀಪ್‌ ಸುರ್ಜೇವಾಲಾ ಮಾಹಿತಿ ನೀಡಿದ್ದಾರೆ. ಈ ವೇಳೆ 18 ಸಚಿವರು ಲೀಡ್ ಕೊಡಿಸುವಲ್ಲಿ ವಿಫಲ‌ ಎಂದು ವರದಿಯಲ್ಲಿ ತಿಳಿಸಲಾಗಿದೆ. ತಮ್ಮ ಜಿಲ್ಲೆಯಲ್ಲಿ ಅಭ್ಯರ್ಥಿ ಗೆಲ್ಲಿಸುವುದರಲ್ಲೂ ವಿಫಲರಾಗಿದ್ದಕ್ಕೆ ಸಚಿವರ ವಿರುದ್ಧ ರಾಹುಲ್‌ ಗಾಂಧಿ ಅಸಮಾಧಾನ ಹೊರಹಾಕಿದ್ದಾರೆ.

ಇದನ್ನೂ ಓದಿ | Lok Sabha Election 2024: ನೂತನ ಸಂಸದರಲ್ಲಿ ಶೇ. 93ರಷ್ಟು ಮಂದಿ ಕೋಟ್ಯಧೀಶರು, ಶೇ.46ರಷ್ಟು ಮಂದಿ ವಿರುದ್ಧ ಕ್ರಿಮಿನಲ್ ಕೇಸ್!

ಸ್ವ ಕ್ಷೇತ್ರದಲ್ಲೂ ಲೀಡ್ ಕೊಡಿಸುವಲ್ಲಿ ವಿಫಲವಾದ 18 ಸಚಿವರ ಬಗ್ಗೆ ರಾಹುಲ್ ಅಸಮಾಧಾನ ಹೊರಹಾಕಿದ್ದಾರೆ ಎನ್ನಲಾಗಿದ್ದು, ಲೀಡ್ ಕೊಡಿಸುವಲ್ಲಿ ವಿಫಲವಾದ ಸಚಿವರ ಸ್ಥಾನಮಾನಕ್ಕೆ ಮುಂದೆ ಸಂಕಷ್ಟ ಸಾಧ್ಯತೆ ಇದೆ ಎಂದು ಕೆಪಿಸಿಸಿ ಮೂಲಗಳು ತಿಳಿಸಿವೆ.

Continue Reading
Advertisement
Niveditha Gowda chandan divorce whats the reason
ಕಿರುತೆರೆ6 mins ago

Niveditha Gowda: ದಸರಾ ವೇದಿಕೆ ಮೇಲೆ ಪ್ರಪೋಸ್‌ ಮಾಡಿದ್ದೇ ವಿಚ್ಛೇದನಕ್ಕೆ ಕಾರಣವೇ? ʻಕ್ಯೂಟ್‌ ಕಪಲ್‌ʼ ಬಾಳಲ್ಲಿ ಬಿರುಗಾಳಿ!

Narendra Modi
ಪ್ರಮುಖ ಸುದ್ದಿ15 mins ago

Narendra Modi: ಕರ್ನಾಟಕದಲ್ಲಿ ಬಿಜೆಪಿ ಗೆಲುವಿನ ಬಗ್ಗೆ ನರೇಂದ್ರ ಮೋದಿ ಹೇಳಿದ್ದೇನು?

RTE Admissions 2024
ಶಿಕ್ಷಣ17 mins ago

RTE Admission 2024: ನಾಳೆಯಿಂದ ಆರ್‌ಟಿಇ ಅಡಿ ದಾಖಲಾತಿ ಪ್ರಕ್ರಿಯೆ ಪ್ರಾರಂಭ

NDA Meeting
ದೇಶ19 mins ago

NDA Meeting: ಯೋಗಿಯ ಬೆನ್ನು ತಟ್ಟಿದ ಮೋದಿ; ವಿರೋಧಿಗಳಿಗೆ ದೊಡ್ಡ ಸಂದೇಶ ರವಾನಿಸಿದ ನಾಯಕರು

Job Alert
ಉದ್ಯೋಗ22 mins ago

Job Alert: ಬರೋಬ್ಬರಿ 9,923 ಬ್ಯಾಂಕ್‌ ಹುದ್ದೆಗಳ ಭರ್ತಿಗೆ ಮುಂದಾದ ಐಬಿಪಿಎಸ್‌; ಇಂದೇ ಅರ್ಜಿ ಸಲ್ಲಿಸಿ

Haris Rauf
ಪ್ರಮುಖ ಸುದ್ದಿ22 mins ago

T20 World Cup : ಅಮೆರಿಕದ ವಿರುದ್ಧದ ಪಂದ್ಯದಲ್ಲಿ ಬಾಲ್​ ವಿರೂಪಗೊಳಿಸಿದ ಪಾಕ್​ ಬೌಲರ್​; ಆರೋಪ

Niveditha Gowda chandan shetty divorce
ಸ್ಯಾಂಡಲ್ ವುಡ್35 mins ago

Niveditha Gowda: ನಿವೇದಿತಾ- ಚಂದನ್‌ ದಾಂಪತ್ಯದಲ್ಲಿ ಬಿರುಕು? ಡಿವೋರ್ಸ್‌ ಕೊಟ್ರಾ ಬಾರ್ಬಿ ಡಾಲ್‌?

Election results 2024
ಪ್ರಮುಖ ಸುದ್ದಿ42 mins ago

Rahul Gandhi: ಚುನಾವಣಾ ಜವಾಬ್ದಾರಿ ನಿರ್ವಹಿಸುವಲ್ಲಿ ವಿಫಲ; 18 ಸಚಿವರ ವಿರುದ್ಧ ರಾಹುಲ್ ಗಾಂಧಿ ಅಸಮಾಧಾನ

Narendra Modi
ದೇಶ57 mins ago

Narendra Modi: ಪ್ರಮಾಣವಚನಕ್ಕೂ ಮೊದಲು ಅಡ್ವಾಣಿಯ ಆಶೀರ್ವಾದ ಪಡೆದ ನರೇಂದ್ರ ಮೋದಿ!

Kangana Ranaut
ದೇಶ1 hour ago

Kangana Ranaut: ಕಂಗನಾಗೆ ಕಪಾಳಮೋಕ್ಷ ಮಾಡಿದ್ದ ಕುಲ್ವಿಂದರ್‌ ಕೌರ್‌ ಅರೆಸ್ಟ್‌

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ1 day ago

Karnataka Rain : ಭಾರಿ ಮಳೆಗೆ ಮರ ಬಿದ್ದು ಮೇಕೆಗಳು ಸಾವು; ಸಿಡಿಲಿಗೆ ಎಲೆಕ್ಟ್ರಿಕ್‌ ಅಂಗಡಿ ಸುಟ್ಟು ಭಸ್ಮ

Lok Sabha Election Result 2024 Live
ದೇಶ3 days ago

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶದ ಲೈವ್‌ ಇಲ್ಲಿ ವೀಕ್ಷಿಸಿ

Karnataka Rain
ಮಳೆ4 days ago

Karnataka Rain : 133 ವರ್ಷದ ರೆಕಾರ್ಡ್ ಬ್ರೇಕ್ ಮಾಡಿದ ʻಬೆಂಗಳೂರು ಮಳೆʼ

Snake Rescue Snakes spotted in heavy rain
ಮಳೆ4 days ago

Snake Rescue: ಮಳೆ ನೀರಿನಲ್ಲಿ ಹರಿದು ಬಂದು ಬೈಕ್‌ನಲ್ಲಿ ಸೇರಿಕೊಂಡ ಹಾವು; ಮನೆಗಳಲ್ಲೂ ಪ್ರತ್ಯಕ್ಷ

Karnataka Rain
ಮಳೆ5 days ago

Karnataka Rain : ವೀಕೆಂಡ್‌ ಮೋಜಿಗೆ ವರುಣ ಅಡ್ಡಿ; ಭಾನುವಾರ ಸಂಜೆಗೆ ಮಳೆ ಕಾಟ

Liquor ban
ಬೆಂಗಳೂರು6 days ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

Assault Case in Shivamogga
ಕ್ರೈಂ1 week ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ1 week ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು1 week ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ2 weeks ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

ಟ್ರೆಂಡಿಂಗ್‌