Koo Downloads | 5 ಕೋಟಿ ಡೌನ್‌ಲೋಡ್ಸ್‌ ಕಂಡ ಕನ್ನಡಿಗರೇ ಅಭಿವೃದ್ಧಿಪಡಿಸಿದ ಕೂ, 2 ವರ್ಷದಲ್ಲೇ ಜನಪ್ರಿಯ - Vistara News

ಕರ್ನಾಟಕ

Koo Downloads | 5 ಕೋಟಿ ಡೌನ್‌ಲೋಡ್ಸ್‌ ಕಂಡ ಕನ್ನಡಿಗರೇ ಅಭಿವೃದ್ಧಿಪಡಿಸಿದ ಕೂ, 2 ವರ್ಷದಲ್ಲೇ ಜನಪ್ರಿಯ

ದೇಶೀಯವಾಗಿ ಅಭಿವೃದ್ಧಿಪಡಿಸಿದ ಕೂ ಜಾಲತಾಣವು ಎರಡು ವರ್ಷದಲ್ಲಿಯೇ ಐದು ಕೋಟಿ ಡೌನ್‌ಲೋಡ್‌ಗಳನ್ನು (Koo Downloads) ಕಾಣುವ ಮೂಲಕ ಹೊಸ ಮೈಲುಗಲ್ಲು ಸ್ಥಾಪಿಸಿದೆ.

VISTARANEWS.COM


on

Koo Downloads
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಕನ್ನಡಿಗರೇ ಅಭಿವೃದ್ಧಿಪಡಿಸಿದ, ದೇಶದಲ್ಲಿ ಟ್ವಿಟರ್‌ಗೆ ಪರ್ಯಾಯವಾಗಿ ಬೆಳೆದು ನಿಂತಿರುವ ಜಾಲತಾಣ ‘ಕೂ’ 5 ಕೋಟಿ ಡೌನ್‌ಲೋಡ್‌ಗಳನ್ನು (Koo Downloads) ಕಾಣುವ ಮೂಲಕ ಮತ್ತೊಂದು ಮೈಲುಗಲ್ಲು ಸಾಧಿಸಿದೆ. 2020ರಲ್ಲಿ ಅಭಿವೃದ್ಧಿಯಾದ ಕೂ, ಎರಡೇ ವರ್ಷದಲ್ಲಿ ಮುನ್ನಡೆ ಸಾಧಿಸಿದೆ.

ಹೆಚ್ಚಿನ ಜನ ಡೌನ್‌ಲೋಡ್‌ ಮಾಡಿಕೊಳ್ಳುವ ಜತೆಗೆ ಕಳೆದ ವರ್ಷಕ್ಕೆ ಹೋಲಿಸಿದರೆ ಆ್ಯಕ್ಟಿವ್‌ ಯೂಸರ್ಸ್‌, ಕೂ ಎಂಗೇಜ್‌ಮೆಂಟ್‌ನಲ್ಲೂ ಏಳಿಗೆಯಾಗಿದೆ. “ನಮ್ಮ ಆ್ಯಪ್ 5 ಕೋಟಿ ಡೌನ್‌ಲೋಡ್‌ಗಳನ್ನು ಕಂಡಿರುವುದು ಹೆಮ್ಮೆಯ ಸಂಗತಿಯಾಗಿದೆ. ಎರಡು ವರ್ಷದಲ್ಲಿ ದೇಶದ ಜನರು ನೀಡಿದ ಪ್ರೀತಿ, ವಿಶ್ವಾಸವೇ ನಮ್ಮ ಮೂಲದ್ರವ್ಯವಾಗಿದೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಸುಧಾರಿತ ಸೇವೆ ನೀಡುವುದು ನಮ್ಮ ಉದ್ದೇಶ” ಎಂದು ಕೂ ಸಿಇಒ, ಸಹ ಸಂಸ್ಥಾಪಕರೂ ಆದ ಅಪ್ರಮೇಯ ರಾಧಾಕೃಷ್ಣ (Aprameya Radhakrishna) ತಿಳಿಸಿದರು.

ಆರಂಭದಲ್ಲಿ ಕನ್ನಡದಲ್ಲಿ ಮಾತ್ರ ಆರಂಭವಾದ ಕೂ ಈಗ 10 ಭಾಷೆಗಳಲ್ಲಿ ಲಭ್ಯವಿದೆ. ಇಂಗ್ಲಿಷ್‌, ಹಿಂದಿ, ತಮಿಳು, ತೆಲುಗು, ಮರಾಠಿ, ಬಾಂಗ್ಲಾ, ಗುಜರಾತಿ ಭಾಷೆಗಳಲ್ಲೂ ಕೂ ಜನರನ್ನು ಆಕರ್ಷಿಸಿದೆ. ಮುಂದಿನ ವರ್ಷದ ವೇಳೆಗೆ ಡೌನ್‌ಲೋಡ್‌ಗಳ ಸಂಖ್ಯೆ 10 ಕೋಟಿ ದಾಟಿಸುವುದು ಕಂಪನಿಯ ಗುರಿಯಾಗಿದೆ. ಕೇಂದ್ರದ ಪ್ರಭಾವಿ ಸಚಿವರು ಕೂಡ ಕೂ ಖಾತೆ ಹೊಂದಿದ್ದಾರೆ.

ಇದನ್ನೂ ಓದಿ | ಸ್ಥಳೀಯತೆ, ವೇಗ ಮತ್ತು ವೈಯಕ್ತಿಕತೆ ಡಿಜಿಟಲ್‌ ಮೀಡಿಯಾದ ಭವಿಷ್ಯ: ಅಪ್ರಮೇಯ ರಾಧಾಕೃಷ್ಣ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಬೆಂಗಳೂರು

Summer Special Trains : ನೈರುತ್ಯ ರೈಲ್ವೆಯಿಂದ ಬೇಸಿಗೆ ವಿಶೇಷ ರೈಲುಗಳ ಸಂಚಾರ; ಪಟ್ಟಿ ಇಲ್ಲಿದೆ

Summer Special Trains : ನೈರುತ್ಯ ರೈಲ್ವೆಯಿಂದ ಈ ಸಲದ ಬೇಸಿಗೆ ಅವಧಿಯಲ್ಲಿ ವಿಶೇಷ ರೈಲು ಸಂಚಾರಗಳು ಇರಲಿದೆ. ಬೇಸಿಗೆಯ ಕಾಲದಲ್ಲಿ ಶಾಲಾ -ಕಾಲೇಜುಗಳಿಗೆ ರಜೆ ಇರುವುದರಿಂದ ಪ್ರವಾಸದ ಸಲುವಾಗಿ ಪ್ರಯಾಣದ ದಟ್ಟಣೆ ಹೆಚ್ಚು ಇರುವುದು ಸಾಮಾನ್ಯ. ಆದ್ದರಿಂದ ಇಲಾಖೆ ಹೆಚ್ಚುವರಿ ರೈಲುಗಳನ್ನು ದೇಶದಾದ್ಯಂತ ಬಿಡುತ್ತಿದೆ.

VISTARANEWS.COM


on

By

Summer Special Trains
ಸಾಂದರ್ಭಿಕ ಚಿತ್ರ
Koo

ಬೆಂಗಳುರು: ಶಾಲಾ-ಕಾಲೇಜುಗಳಿಗೆ ಬೇಸಿಗೆ ರಜೆ ಹಿನ್ನೆಲೆಯಲ್ಲಿ ತಮ್ಮ ಊರುಗಳಿಗೆ ತೆರಳುವವರಿಗೆ, ಪ್ರವಾಸಕ್ಕೆ ಹೋಗುವವರಿಗಾಗಿ ನೈರುತ್ಯ ಇಲಾಖೆಯು ವಿಶೇಷ ರೈಲುಗಳನ್ನು (Summer Special Trains) ನಿಯೋಜನೆ ಮಾಡಿದೆ. ಬೇಸಿಗೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ಸರಿದೂಗಿಸಲು ಮುಜಾಫರ್ಪುರ ಮತ್ತು ಯಶವಂತಪುರ ನಿಲ್ದಾಣಗಳ ನಡುವೆ ಎರಡು ಹೆಚ್ಚುವರಿ ಟ್ರಿಪ್‌ಗಳನ್ನು ಓಡಿಸಲು ನೈರುತ್ಯ ಇಲಾಖೆ ನಿರ್ಧರಿಸಿದೆ.

ರೈಲು ಸಂಖ್ಯೆ 05271/05272 ಮುಜಾಫರ್ಪುರ-ಯಶವಂತಪುರ-ಮುಜಾಫರ್ಪುರ ಬೇಸಿಗೆ ವಿಶೇಷ ರೈಲು. ಈ ರೈಲು ಮೇ 24 ಮತ್ತು 31 ರಂದು ಮಧ್ಯಾಹ್ನ 03:30 ಗಂಟೆಗೆ ಮುಜಾಫರ್ಪುರದಿಂದ ಹೊರಟು ಭಾನುವಾರ ರಾತ್ರಿ 7 ಗಂಟೆಗೆ ಯಶವಂತಪುರಕ್ಕೆ ಆಗಮಿಸಲಿದೆ. ನಂತರ ರೈಲು ಸಂಖ್ಯೆ 05272 ಯಶವಂತಪುರದಿಂದ ಮೇ 27 ಮತ್ತು ಜೂನ್ 3 ರಂದು 07:30ಕ್ಕೆ ಹೊರಟು ಬುಧವಾರ ಮಧ್ಯಾಹ್ನ 12:00 ಗಂಟೆಗೆ ಮುಜಾಫರ್ಪುರ ನಿಲ್ದಾಣವನ್ನು ತಲುಪಲಿದೆ.

ಈ ರೈಲು ಎರಡು ಮಾರ್ಗಗಳಲ್ಲಿ ಹಾಜಿಪುರ, ಪಾಟಲಿಪುತ್ರ, ಅರಾ, ಬಕ್ಸಾರ್, ಪಂಡಿತ್ ದೀನ್ ದಯಾಳ್ ಉಪಾಧ್ಯಾಯ, ಪ್ರಯಾಗ್ರಾಜ್ ಚಿಯೋಕಿ, ಮಾಣಿಕ್ಪುರ, ಸತ್ನಾ, ಕಟ್ನಿ, ಜಬಲ್ಪುರ್, ನರಸಿಂಗಪುರ, ಪಿಪರಿಯಾ, ಇಟಾರ್ಸಿ, ನಾಗ್ಪುರ, ಬಲ್ಹಾರ್ಷಾ, ಸಿರ್ಪುರ್ ಕಾಖಜನಗರ್, ರಾಮಗುಂಡಂ, ಕಾಜಿಪೇಟ್, ಜಂಗಾಂವ್, ಕಾಚಿಗುಡ, ಶಾದ್ನಗರ್, ಜಡ್ ಚರ್ಲಾ, ಮಹಬೂಬ್ ನಗರ್ ಸೇರಿದಂತೆ ಗದ್ವಾಲ್, ಕರ್ನೂಲ್ ಸಿಟಿ, ಡೋನ್, ಗುತ್ತಿ, ಅನಂತಪುರ & ಧರ್ಮಾವರಂ ನಿಲ್ದಾಣಗಳಲ್ಲಿ ನಿಲುಗಡೆ ಹೊಂದಿರಲಿದೆ.

ಇದನ್ನು ಓದಿ: Murder case : ದನ ಕಟ್ಟುವ ವಿಚಾರಕ್ಕೆ ಕಿರಿಕ್‌; ಕಾಲಿಂದ ಒದ್ದು ಕುಡುಗೋಲಿನಿಂದ ಹೊಡೆದು ದೊಡ್ಡಮ್ಮನನ್ನೇ ಕೊಂದ ದುಷ್ಟ

ಇನ್ನೂ ಬೇಸಿಗೆಯಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ಸರಿದೂಗಿಸಲು ಬೆಂಗಳೂರಿನ ಸರ್.ಎಂ. ವಿಶ್ವೇಶ್ವರಯ್ಯ ಟರ್ಮಿನಲ್-ಭುವನೇಶ್ವರ ಮತ್ತು ಎಸ್ಎಂವಿಟಿ ಬೆಂಗಳೂರು-ಸಂಬಲ್ಪುರ ನಿಲ್ದಾಣಗಳ ನಡುವೆ ಒಂದು ಟ್ರಿಪ್ ಬೇಸಿಗೆ ವಿಶೇಷ ರೈಲುಗಳನ್ನು ನೈರುತ್ಯ ರೈಲ್ವೆ ಇಲಾಖೆಯು ನಿಯೋಜಿಸಿದೆ.

ರೈಲು ಸಂಖ್ಯೆ 06271/06272 ಎಸ್ಎಂವಿಟಿ ಬೆಂಗಳೂರು-ಭುವನೇಶ್ವರ ಸಮ್ಮರ್ ಸ್ಪೆಷಲ್ ಎಕ್ಸ್ ಪ್ರೆಸ್.. ಈ ರೈಲು (06271) ಮೇ 31 ರಂದು ಮಧ್ಯರಾತ್ರಿ 12:10 ಗಂಟೆಗೆ ಎಸ್ಎಂವಿಟಿ ಬೆಂಗಳೂರಿನಿಂದ ಹೊರಟು ಮರುದಿನ 04:00 ಗಂಟೆಗೆ ಭುವನೇಶ್ವರವನ್ನು ತಲುಪಲಿದೆ. ರೈಲು ಸಂಖ್ಯೆ 06272 ಜೂನ್ 2 ರಂದು 06:30 ಗಂಟೆಗೆ ಭುವನೇಶ್ವರದಿಂದ ಹೊರಟು ಮರುದಿನ 09:00 ಗಂಟೆಗೆ ಎಸ್ಎಂವಿಟಿ ಬೆಂಗಳೂರು ನಿಲ್ಡಾಣಕ್ಕೆ ಆಗಮಿಸಲಿದೆ.

ಈ ವಿಶೇಷ ರೈಲುಗಳು ಕೃಷ್ಣರಾಜಪುರಂ, ಬಂಗಾರಪೇಟೆ, ಜೋಲಾರ್ ಪೆಟ್ಟೈ, ಕಟಪಾಡಿ , ರೇಣಿಗುಂಟ, ಗುಡೂರು, ನೆಲ್ಲೂರು, ಒಂಗೋಲ್, ವಿಜಯವಾಡ, ರಾಜಮಂಡ್ರಿ, ದುವ್ವಾಡ, ಕೊತ್ತವಲಸ, ವಿಜಯನಗರಂ, ಶ್ರೀಕಾಕುಳಂ ರೋಡ್, ಪಲಾಸ, ಬ್ರಹ್ಮಪುರ ಮತ್ತು ಖುರ್ದಾ ರೋಡ್ ನಿಲ್ದಾಣಗಳಲ್ಲಿ ನಿಲ್ಲಲಿವೆ.

ರೈಲು ಸಂಖ್ಯೆ 06279/06280 ಎಸ್ಎಂವಿಟಿ ಬೆಂಗಳೂರು-ಸಂಬಲ್ಪುರ-ಎಸ್ಎಂವಿಟಿ ಬೆಂಗಳೂರು ಸಮ್ಮರ್ ಸ್ಪೆಷಲ್ ಎಕ್ಸ್ ಪ್ರೆಸ್: ಈ ರೈಲು ಜೂನ್ 7 ರಂದು ಮಧ್ಯರಾತ್ರಿ 12:10 ಗಂಟೆಗೆ ಎಸ್ಎಂವಿಟಿ ಬೆಂಗಳೂರಿನಿಂದ ಹೊರಟು ಮರುದಿನ 05:00 ಗಂಟೆಗೆ ಸಂಬಲ್ಪುರವನ್ನು ತಲುಪಲಿದೆ. ರೈಲು ಸಂಖ್ಯೆ 06280 ಜೂನ್ 8 ರಂದು 11:35 ಗಂಟೆಗೆ ಸಂಬಲ್ಪುರದಿಂದ ಹೊರಟು ಮರುದಿನ 19:30 ಗಂಟೆಗೆ ಎಸ್ಎಂವಿಟಿ ಬೆಂಗಳೂರು ನಿಲ್ಡಾಣಕ್ಕೆ ಆಗಮಿಸಲಿದೆ.

ಈ ವಿಶೇಷ ರೈಲು ಎರಡು ಮಾರ್ಗಗಳಲ್ಲಿ ಕೃಷ್ಣರಾಜಪುರಂ, ಬಂಗಾರಪೇಟೆ, ಜೋಲಾರ್ ಪೆಟ್ಟೈ, ಕಟಪಾಡಿ , ರೇಣಿಗುಂಟ, ಗುಡೂರು, ನೆಲ್ಲೂರು, ಒಂಗೋಲ್, ವಿಜಯವಾಡ , ರಾಜಮಂಡ್ರಿ, ದುವ್ವಾಡಾ, ಕೊತ್ತವಲಸ, ವಿಜಯನಗರಂ, ಬೊಬ್ಬಿಲಿ, ಪಾರ್ವತಿಪುರಂ, ರಾಯಗಡ, ಮುನಿಗುಡ, ಕೇಸಿಂಗಾ, ಟಿಟ್ಲಾಘರ್, ಬಾಲಂಗಿರ್ ಮತ್ತು ಬಾರ್ಘರ್ ರೋಡ್ ನಿಲ್ದಾಣಗಳಲ್ಲಿ ನಿಲ್ಲಲಿವೆ.

ಇನ್ನೂ ಬುಕಿಂಗ್ ಮತ್ತು ವೇಳಾಪಟ್ಟಿ ಸೇರಿದಂತೆ ಹೆಚ್ಚಿನ ಮಾಹಿತಿಗಾಗಿ, ಪ್ರಯಾಣಿಕರು www.enquiry.indianrail.gov.in ವೆಬ್ ಸೈಟ್‌ಗೆ ಭೇಟಿ ನೀಡಿ ಅಥವಾ ಸಹಾಯವಾಣಿ 139 ಸಂಖ್ಯೆಗೆ ಸಂಪರ್ಕಿಸಿ ಮಾಹಿತಿ ಪಡೆದುಕೊಳ್ಳಬಹುದು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕರ್ನಾಟಕ

Lockup Death: ದಾವಣಗೆರೆ ಯುವಕನ ಸಾವು ಪ್ರಕರಣ ಲಾಕಪ್ ಡೆತ್ ಅಲ್ಲ, ಎಫ್ಐಆರ್ ಇಲ್ಲದೆ ಕರೆ ತಂದಿದ್ದು ತಪ್ಪು ಎಂದ ಸಿಎಂ

Lockup Death: ದಾವಣಗೆರೆಯ ಚನ್ನಗಿರಿ ಠಾಣೆಯಲ್ಲಿ ಯುವಕನ ಸಾವು ಪ್ರಕರಣದ ಬಗ್ಗೆ ಮೈಸೂರಿನಲ್ಲಿ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ. ಇನ್ನು ಪ್ರಕರಣ ಸಂಬಂಧ ಡಿವೈಎಸ್‌ಪಿ ಮತ್ತು ಸಿಪಿಐ ಅವರನ್ನು ಅಮಾನತುಗೊಳಿಸಲಾಗಿದೆ.

VISTARANEWS.COM


on

Lockup Death
Koo

ಮೈಸೂರು: ದಾವಣಗೆರೆ ಯುವಕನ ಸಾವು ಪ್ರಕರಣ ಲಾಕಪ್ ಡೆತ್ (Lockup Death) ಅಲ್ಲ. ಅವನಿಗೆ ಮೂರ್ಛೆ ರೋಗ ಇತ್ತು. ಆ ರೋಗದಿಂದ ಆತ ಮೃತ ಪಟ್ಟಿದ್ದಾನೆ. ಆದರೆ, ಎಫ್ಐಆರ್ ಮಾಡದೇ ಪೊಲೀಸರು ಠಾಣೆಗೆ ಕರೆ ತಂದಿದ್ದು ತಪ್ಪು. ಈ ತಪ್ಪಿಗಾಗಿ ಪೊಲೀಸ್ ಅಧಿಕಾರಿಗಳ ಅಮಾನತಿಗೆ ಆದೇಶ ಮಾಡಿದ್ದೇನೆ. ಆದರೆ ಇದು ಲಾಕಪ್ ಡೆತ್ ಅಲ್ಲ ಎಂಬುದನ್ನು ಸ್ಪಷ್ಟ ಪಡಿಸುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ದಾವಣಗೆರೆಯ ಚನ್ನಗಿರಿ ಠಾಣೆಯಲ್ಲಿ ಯುವಕನ ಸಾವು ಪ್ರಕರಣದ ಬಗ್ಗೆ ನಗರದಲ್ಲಿ ಸಿಎಂ ಪ್ರತಿಕ್ರಿಯಿಸಿದ್ದಾರೆ. ಪೊಲೀಸ್ ಕಸ್ಟಡಿಯಲ್ಲಿದ್ದ (police custody) ಆರೋಪಿ ಸಾವಿಗೀಡಾಗಿದ್ದರಿಂದ (Lockup death), ರೊಚ್ಚಿಗೆದ್ದ ಸಂಬಂಧಿಕರು ಠಾಣೆಗೆ ನುಗ್ಗಿ ಅಲ್ಲಿದ್ದ ವಸ್ತುಗಳನ್ನು ಧ್ವಂಸ ಮಾಡಿದ್ದರು. ಅಲ್ಲದೇ ಪೊಲೀಸರ ವಿರುದ್ಧ ಕ್ರಮಕ್ಕೆ ಆಗ್ರಹಿಸಿದ್ದರು. ಹೀಗಾಗಿ ಪ್ರಕರಣದ ಬಗ್ಗೆ ಸಿಎಂ ಪ್ರತಿಕ್ರಿಯಿಸಿದ್ದಾರೆ.

ಆರೋಗ್ಯದಲ್ಲಿ‌ ಏರುಪೇರು ಆಗಿ ಆದಿಲ್ ಮೃತಪಟ್ಟಿದ್ದಾನೆ ಎಂದ ಗೃಹ ಸಚಿವ

ಚನ್ನಗಿರಿ ಪಟ್ಟಣದ ಯುವಕ​​ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಗೃಹ ಸಚಿವ ಡಾ.ಜಿ.ಪರಮೇಶ್ವರ್‌ ಪ್ರತಿಕ್ರಿಯಿಸಿ, ಆರೋಪಿ ಆದಿಲ್​ ವಿರುದ್ಧ ಚನ್ನಗಿರಿ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಹೀಗಾಗಿ ಪೊಲೀಸರು ಆತನನ್ನು ಠಾಣೆಗೆ ಕರೆತಂದಿದ್ದರು. ಠಾಣೆಗೆ ಕರೆತಂದು 7 ನಿಮಿಷದೊಳಗೆ ಆರೋಗ್ಯದಲ್ಲಿ‌ ಏರುಪೇರು ಆಗಿ ಆದಿಲ್ ಮೃತಪಟ್ಟಿದ್ದಾನೆ. ಮರಣೋತ್ತರ ಪರೀಕ್ಷೆಯಲ್ಲಿ ಎಲ್ಲವೂ ಗೊತ್ತಾಗಲಿದೆ ಎಂದು ತಿಳಿಸಿದ್ದಾರೆ.

ಕೆಜಿಹಳ್ಳಿ ಡಿಜೆಹಳ್ಳಿ ಘಟನೆ ಮಾದರಿಯಲ್ಲಿ ದಾವಣಗೆರೆ ಜಿಲ್ಲೆಯ ಘಟನೆಗೂ ಸಾಫ್ಟ್ ಆಗಿ ಉತ್ತರ ಕೊಟ್ಟಿರುವ ಪರಮೇಶ್ವರ್ ಅವರು, ಎಲ್ಲವೂ ಹೇಳಿ ಕೇಳಿ ಆಗಲ್ಲ. ಕಾನೂನು ರೀತ್ಯಾ ಕ್ರಮ ವಹಿಸುತ್ತೇವೆಂದು ತಿಳಿಸಿದ್ದಾರೆ.

ಅಧಿಕಾರಿಗಳಿಗೆ ನಿಯಂತ್ರಣ ಇಲ್ಲ ಎಂದ ಎಚ್‌ಡಿಕೆ

ಸರ್ಕಾರ ಹಾಗೂ ಅಧಿಕಾರಿಗಳಿಗೆ ಯಾರೂ ಗೌರವ ಕೊಡುವ ವಾತವರಣವಿಲ್ಲ. ಯಾವುದೇ ಪೊಲೀಸ್ ಅಧಿಕಾರಿಗಳಿಗೆ ಗೌರವವಿಲ್ಲ, ಯಾಕೆಂದರೆ ಸರ್ಕಾರ ಆ ರೀತಿ ಇದೆ. ಪೊಲೀಸ್ ಅಧಿಕಾರಿಗಳನ್ನು ಆ ರೀತಿ ಬಳಕೆ ಮಾಡಿಕೊಂಡಿದ್ದಾರೆ ಸರ್ಕಾರದವರು. ಆದ್ದರಿಂದ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ಕುಸಿತವಾಗಿದೆ. ಇದು ಸರ್ಕಾರದ ಸ್ವಯಂಕೃತ ಅಪರಾಧ. ಈ ಸರ್ಕಾರದ ಬಗ್ಗೆ ಅಧಿಕಾರಿಗಳಲ್ಲೂ ವಿಶ್ವಾಸವಿಲ್ಲ, ಜನತೆಯಲ್ಲೂ ವಿಶ್ವಾಸವಿಲ್ಲ ಎಂದು ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ಅವರು ಕಟುವಾಗಿ ಟೀಕಿಸಿದ್ದಾರೆ.

ಇದನ್ನೂ ಓದಿ | Lockup Death: ಪೊಲೀಸ್‌ ವಶದಲ್ಲಿದ್ದ ವ್ಯಕ್ತಿ ಸಾವು, ರೊಚ್ಚಿಗೆದ್ದ ಸಂಬಂಧಿಕರಿಂದ ಠಾಣೆ ಧ್ವಂಸ

ಸಿದ್ದರಾಮಯ್ಯ ಅವರೇ ಈಗಲಾದ್ರೂ ನಿದ್ದೆಯಿಂದ ಎದ್ದೇಳಿ ಎಂದ ಅಶೋಕ್‌

ಚನ್ನಗಿರಿ ಪ್ರಕರಣದ ಬಗ್ಗೆ ವಿಪಕ್ಷ ನಾಯಕ ಆರ್‌. ಅಶೋಕ್‌ ಪ್ರತಿಕ್ರಿಯಿಸಿ, ಕರ್ನಾಟಕದಲ್ಲಿ ಕಾನೂನು ಸುವ್ಯವಸ್ಥೆ ಕುಸಿದಿದೆ ಅಂತ ಒಂದು ವರ್ಷದಿಂದ ಸರ್ಕಾರಕ್ಕೆ ತಿಳಿ ಹೇಳಿದ್ದೆವು. ಸರ್ಕಾರದಲ್ಲಿ ಇಂಟೆಲಿಜೆನ್ಸಿ ಇದೆಯೋ, ಸತ್ತು ಹೋಗಿದೆಯೋ ಗೊತ್ತಿಲ್ಲ. ಉಡುಪಿ, ಬೆಳಗಾವಿ, ಚನ್ನಗಿರಿಯಲ್ಲಿ ಘಟನೆಗಳು ನಡೆದಿವೆ. ಕಾನೂನು ಸುವ್ಯವಸ್ಥೆ ಹಾಳಾಗಿರುವುದರಿಂದ ಬೆಂಗಳೂರಿನ ಕಂಪನಿಗಳು ಚೆನ್ನೈಗೆ ಹೋಗುತ್ತಿವೆ. ಅಂತಾರಾಷ್ಟ್ರೀಯ ಕಂಪನಿಗಳು ಕರ್ನಾಟಕದಿಂದ ಕಾಲು ಕಿತ್ತಿವೆ. ಇದರಿಂದ ಬ್ರ್ಯಾಂಡ್‌ ಬೆಂಗಳೂರು ಬ್ಯಾಡ್ ಬೆಂಗಳೂರು ಆಗಿದೆ. ಕಾನೂನು ಸುವ್ಯವಸ್ಥೆ ಹಾಳಾದರೆ ಆರ್ಥಿಕತೆ ಕುಸಿಯುತ್ತೆ, ಮುಂದಿನ ದಿನಗಳಲ್ಲಿ ನೌಕರರಿಗೆ ಸಂಬಳ ಕೊಡಲು ಹಣವಿಲ್ಲದ ಹಾಗೆ ಆಗುತ್ತೆ. ಸಿದ್ದರಾಮಯ್ಯ ಅವರೇ ಈಗಲಾದ್ರೂ ನಿದ್ದೆಯಿಂದ ಎದ್ದೇಳಿ ಎಂದು ಕಿಡಿಕಾರಿದ್ದಾರೆ.

ಇಬ್ಬರು ಪೊಲೀಸ್‌ ಅಧಿಕಾರಿಗಳ ಅಮಾನತು

ದಾವಣಗೆರೆ: ಚನ್ನಗಿರಿ ಪ್ರಕರಣದಲ್ಲಿ ಪೊಲೀಸ್ ಅಧಿಕಾರಿಗಳ ತಲೆದಂಡವಾಗಿದೆ. ದಾವಣಗೆರೆ ಜಿಲ್ಲೆಯ ಚನ್ನಗಿರಿ ಪೊಲೀಸ್ ಠಾಣೆಯ ಮೇಲೆ ಕಲ್ಲು ತೂರಾಟ ಪ್ರಕರಣ ಹಿನ್ನೆಲೆಯಲ್ಲಿ ಡಿವೈಎಸ್ಪಿ ಪ್ರಶಾಂತ್ ಪಿ ಮುನ್ನೋಳಿ ಹಾಗೂ ಸಿಪಿಐ ನಿರಂಜನ್ ಅವರನ್ನು ಅಮಾನತು ಮಾಡಲಾಗಿದೆ.

ಎಫ್‌ಐಆರ್ ದಾಖಲು ಮಾಡದೆ ಅರೋಪಿಯನ್ನು ಪೊಲೀಸ್ ಠಾಣೆಗೆ ಕರೆತಂದಿದ್ದು ತಪ್ಪು ಎಂದು ಅಮಾನತು ಮಾಡಲಾಗಿದೆ. ಅದಿಲ್ ವಿರುದ್ಧ ಮಟ್ಕಾ ದಂಧೆ ಸಂಬಂಧ ಮೂರು ಪ್ರಕರಣ ದಾಖಲಾಗಿದ್ದವು. ಶುಕ್ರವಾರ ಮಟ್ಕಾ ಕೇಸ್‌ನಲ್ಲಿ ಅದಿಲ್‌ನನ್ನು ಠಾಣೆಗೆ ಪೊಲೀಸರು ಕರೆಸಿದ್ದರು. ಆದರೆ, ಠಾಣೆಯಲ್ಲಿ ಯುವಕ ಮೃತಪಟ್ಟಿದ್ದ. ಹೀಗಾಗಿ ಪೊಲೀಸರ ದೌರ್ಜನ್ಯದಿಂದ ಲಾಕಪ್‌ ಡೆತ್‌ ಆಗಿದೆ ಎಂದು ಸಂಬಂಧಿಕರು ಆರೋಪಿಸಿದ್ದಾರೆ.

Continue Reading

ರಾಜಕೀಯ

Prajwal Revanna Case: ಪ್ರಜ್ವಲ್‌ಗೆ ದೇವೇಗೌಡರು ಪತ್ರ ಬರೆದಿದ್ದು ಏಕೆ? ಸೀಕ್ರೆಟ್‌ ರಿವೀಲ್‌ ಮಾಡಿದ ಎಚ್‌ಡಿಕೆ!

Prajwal Revanna Case: ಪ್ರಜ್ವಲ್ ರೇವಣ್ಣ ಅವರನ್ನು ವಾಪಸ್ ಕರೆಸುವ ವಿಚಾರಕ್ಕೆ ನಾನೂ ಮನವಿ ಮಾಡಿದ್ದೇನೆ. ಜತೆಗೆ ಎಚ್.ಡಿ. ದೇವೇಗೌಡರು ಸಹ ಮನವಿ ಮಾಡಿದ್ದಾರೆ. ಅದನ್ನು ಎಷ್ಟರ ಮಟ್ಟಿಗೆ ಗೌರವಿಸುತ್ತಾರೆ ಎಂಬುದರ ಬಗ್ಗೆ ನಿಮ್ಮಷ್ಟೇ ನಾನು ಸಹ ಕುತೂಹಲ ಇದೆ ಎಂದು ಎಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಅಲ್ಲದೆ, ನಮ್ಮ ಕುಟುಂಬವನ್ನು ಸಂಪೂರ್ಣವಾಗಿ ಮುಗಿಸುವ ಹುನ್ನಾರ ನಡೆದಿದೆ. ಅದನ್ನು ಹೊರತುಪಡಿಸಿ ಬೇರೆ ಏನು ಮಾಡಲಾಗುತ್ತಿದೆ? ಪೆನ್‌ಡ್ರೈವ್‌ ಅನ್ನು ಮಾರುಕಟ್ಟೆ ಬಿಟ್ಟ ಸೂತ್ರಧಾರಿಯನ್ನು ಬಂಧನ ಮಾಡಲಾಗಿದೆಯಾ? ಎಂದು ಪ್ರಶ್ನೆ ಮಾಡಿದ್ದಾರೆ.

VISTARANEWS.COM


on

Prajwal Revanna Case Why did Deve Gowda write a letter to Prajwal and HD Kumaraswamy reveals secret
Koo

ಬೆಂಗಳೂರು: ಕಾಂಗ್ರೆಸ್‌ ಸರ್ಕಾರದವರಿಗೆ ಸಂಸದ ಪ್ರಜ್ವಲ್‌ ರೇವಣ್ಣ ಅವರದ್ದು ಎನ್ನಲಾದ ಪೆನ್‌ಡ್ರೈವ್‌ ಪ್ರಕರಣವನ್ನು (Prajwal Revanna Case) ಜೀವಂತವಾಗಿ ಇಡಬೇಕು ಎಂಬುದನ್ನು ಹೊರತುಪಡಿಸಿದರೆ, ಇದರಲ್ಲಿನ ಸತ್ಯಾಂಶ ಮತ್ತು ವಾಸ್ತವಾಂಶವನ್ನು ಹೊರತರಬೇಕು ಎಂಬುದು ಇಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಸೇರಿದಂತೆ ಯಾರಿಗೂ ಆಸಕ್ತಿ ಇಲ್ಲ. ವಕೀಲ, ಬಿಜೆಪಿ ಮುಖಂಡ ದೇವರಾಜೇಗೌಡರನ್ನೇ (Devarajegowda) ಮುಖ್ಯಮಂತ್ರಿಗಳು ಪ್ರಶ್ನೆ ಮಾಡುತ್ತಾರೆ. ಹಾಗಾಗಿ ನಾನು ಸಹ ಸಿಎಂಗೆ ಒಂದು ಪ್ರಶ್ನೆ ಕೇಳುತ್ತೇನೆ. ಸಿದ್ದರಾಮಯ್ಯ ಅವರೇ ನಿಮ್ಮ ಮಗ ರಾಕೇಶ್‌ ವಿದೇಶಕ್ಕೆ ಹೋದಾಗ ದುರ್ಘಟನೆ ನಡೆಯಿತಲ್ಲವೇ? ಅಲ್ಲಿ ಯಾವ ಕಾರ್ಯಕ್ರಮಕ್ಕೆ ಹೋಗಿದ್ದರು? ಹಾಗೆ ಹೋಗಲು ನಿಮ್ಮ ಅನುಮತಿಯನ್ನು ಪಡೆದುಕೊಂಡಿದ್ದರಾ? ಎಂದು ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ (HD Kumaraswamy) ಪ್ರಶ್ನೆ ಮಾಡಿದ್ದಾರೆ. ಅಲ್ಲದೆ, ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರು (HD Devegowda) ಮೊಮ್ಮಗ ಪ್ರಜ್ವಲ್‌ ರೇವಣ್ಣ ವಾಪಸ್‌ ಬರುವಂತೆ ಏಕೆ ಪತ್ರ ಬರೆದರು? ಎಂಬ ಬಗ್ಗೆಯೂ ಎಚ್‌ಡಿಕೆ ತಿಳಿಸಿದ್ದಾರೆ.

ಮಾಧ್ಯಮದವರೊಂದಿಗೆ ಮಾತನಾಡಿದ ಎಚ್.ಡಿ. ಕುಮಾರಸ್ವಾಮಿ, ರಾಕೇಶ್‌ ವಿದೇಶಕ್ಕೆ ಹೋಗಿದ್ದಾಗ ನಿಮ್ಮ ಮಗನ ಜತೆಗೆ ಯಾರು? ಎಷ್ಟು ಜನ ಇದ್ದರು? ಅಲ್ಲಿ ನಡೆದಿದ್ದಂತಹ ಘಟನೆ ಬಗ್ಗೆ ತನಿಖೆಯನ್ನು ಏಕೆ ಮಾಡಲಿಲ್ಲ. ಆ ವಿಷಯವನ್ನು ಏಕೆ ಮುಚ್ಚಿಟ್ಟಿರಿ? ಹಾಗಿದ್ದರೆ ನೀವೇ ಅನುಮತಿಯನ್ನು ಕೊಟ್ಟಿದ್ದೀರಾ? ಬೆಳೆದಂತಹ ಮಕ್ಕಳು ಪ್ರತಿಯೊಂದು ವಿಚಾರವನ್ನು ತಂದೆ – ತಾಯಿಯನ್ನು ಕೇಳಿ ಮಾಡುತ್ತಾರಾ? ಎಂದು ಪ್ರಶ್ನೆ ಮಾಡಿದರು.

ದೇವೇಗೌಡರು ಪತ್ರ ಬರೆದಿದ್ದು ಯಾಕೆ?

ರಾಜತಾಂತ್ರಿಕ ಪಾಸ್‌ ಪೋರ್ಟ್ ಬಗ್ಗೆ ಹೇಳುತ್ತೀರಲ್ಲವಾ? ಅದರ ಕಾನೂನು ಗೊತ್ತಾ ನಿಮಗೆ? ಈಗ ಪ್ರಜ್ವಲ್‌ನನ್ನು ಕರೆದುಕೊಂಡು ಬರುವುದಕ್ಕೆ ಪತ್ರ ಬರೆದಿದ್ದೀರಲ್ಲವೇ? ಅದು ಸದ್ಯಕ್ಕೆ ಏನೂ ಆಗಲ್ಲ. ಆದರೆ, ಈ ಪ್ರೊಸೆಸ್‌ ಸಾಕಷ್ಟು ದಿನ ಹಿಡಿಯುತ್ತದೆ ಎಂದೇ ಮಾಜಿ ಪ್ರಧಾನಿ ಎಚ್.ಡಿ. ದೇವೆಗೌಡರ ಮೂಲಕ ಪತ್ರ ಬರೆದು ಕರೆಸುವ ಪ್ರಯತ್ನ ಮಾಡುತ್ತಿದ್ದೇವೆ. ಆದರೆ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದೇವೆಗೌಡರ ಬಗ್ಗೆ ಹಗುರವಾಗಿ ಮಾತನಾಡಿದ್ದಾರೆ. ಎಷ್ಟು ವರ್ಷ ಅವರ ಜತೆ ಕೆಲಸ ಮಾಡಿದ್ದಾರಾ? ಅವರ ಯಾವ ಮಟ್ಟದಲ್ಲಿ ರಾಜಕಾರಣ ಮಾಡಿದ್ದಾರೆ ಅಂತ ಅನುಭವ ಇಲ್ವಾ? ನಿಮ್ಮ ಕುಟುಂಬದಲ್ಲಿ ನಡೆದಿರುವುದು ಏನು? ವಿದೇಶಕ್ಕೆ ನಿಮ್ಮ ಮಗನನ್ನು ನೀವೆ ಕಳಿಸಿದ್ದಿರಾ? ಎಂದು ಎಚ್.ಡಿ. ಕುಮಾರಸ್ವಾಮಿ ಪ್ರಶ್ನೆ ಮಾಡಿದರು.

ಪ್ರಜ್ವಲ್ ರೇವಣ್ಣ ಅವರನ್ನು ವಾಪಸ್ ಕರೆಸುವ ವಿಚಾರಕ್ಕೆ ನಾನೂ ಮನವಿ ಮಾಡಿದ್ದೇನೆ. ಜತೆಗೆ ಎಚ್.ಡಿ. ದೇವೇಗೌಡರು ಸಹ ಮನವಿ ಮಾಡಿದ್ದಾರೆ. ಅದನ್ನು ಎಷ್ಟರ ಮಟ್ಟಿಗೆ ಗೌರವಿಸುತ್ತಾರೆ ಎಂಬುದರ ಬಗ್ಗೆ ನಿಮ್ಮಷ್ಟೇ ನಾನು ಸಹ ಕುತೂಹಲ ಇದೆ ಎಂದು ಎಚ್.ಡಿ. ಕುಮಾರಸ್ವಾಮಿ ಹೇಳಿದರು.

ಪೆನ್‌ಡ್ರೈವ್‌ ಸೂತ್ರಧಾರಿಯನ್ನು ಬಂಧನ ಮಾಡಲಾಗಿದೆಯಾ?

ಹಾಸನದಲ್ಲಿ ನಡೆದಿದೆ ಎನ್ನಲಾದ ಲೈಂಗಿಕ ದೌರ್ಜನ್ಯವುಳ್ಳ ಪೆನ್ ಡ್ರೈವ್ ಪ್ರಕರಣದಲ್ಲಿ ನಮ್ಮ ಕುಟುಂಬವನ್ನು ಸಂಪೂರ್ಣವಾಗಿ ಮುಗಿಸುವ ಹುನ್ನಾರ ನಡೆದಿದೆ. ಅದನ್ನು ಹೊರತುಪಡಿಸಿ ಬೇರೆ ಏನು ಮಾಡಲಾಗುತ್ತಿದೆ? ಪೆನ್‌ಡ್ರೈವ್‌ ಅನ್ನು ಮಾರುಕಟ್ಟೆ ಬಿಟ್ಟ ಸೂತ್ರಧಾರಿಯನ್ನು ಬಂಧನ ಮಾಡಲಾಗಿದೆಯಾ? ವಿಚಾರಣೆ ನಡೆಯುವಾಗ ಯಾರದ್ದೇ ತಪ್ಪು ಇದ್ದರೂ ಅವರಿಗೆ ಶಿಕ್ಷೆಯಾಗಬೇಕು ಎಂಬುದಾಗಿ ಮೊದಲಿನಿಂದಲೂ ಹೇಳುತ್ತಾ ಬಂದಿದ್ದೇನೆ. ಈಗ ಪೆನ್‌ಡ್ರೈವ್‌ ವಿತರಣೆ ಮಾಡಿರುವುದು ಅಪರಾಧ ಅಲ್ಲ ಎಂದು ಅವರೇ ಹೇಳುತ್ತಿದ್ದಾರೆ. ಆ ಹೆಣ್ಣು ಮಕ್ಕಳ ಮುಖವನ್ನು ಬ್ಲರ್‌ ಮಾಡದೇ ಹೊರಗಡೆ ಬಿಟ್ಟಿದ್ದೀರಲ್ಲವೇ ಅವರಿಗೆ ಏನು ನ್ಯಾಯ ಕೊಡಿಸುತ್ತೀರಿ? ಸರ್ಕಾರದಿಂದ ಏನು ನ್ಯಾಯ ಕೊಡಲು ಸಾಧ್ಯ? ಇದನ್ನೆಲ್ಲ ಸರಿ ಮಾಡುತ್ತೀರಾ ನೀವು? ನಾಲ್ಕು ಗೋಡೆಗಳ ಮಧ್ಯೆ ನಡೆದದ್ದು ಬೇರೆ, ಆದರೆ ಇದನ್ನು ಬೀದಿಗೆ ತಂದಿದ್ದು ನೀವೆ ತಾನೇ? ಇದರಲ್ಲಿ ಏನು ಮಾಹಿತಿ ಸಿಕ್ಕಿತ್ತೋ ಅದನ್ನು ಇಟ್ಟುಕೊಂಡು ಸಂತ್ರಸ್ತೆಯ ಕುಟುಂಬಕ್ಕೆ ಸಮಸ್ಯೆ ಆಗದಂತೆ ವಿಚಾರಣೆ ನಡೆಸಬೇಕಿತ್ತು ಎಂದು ಎಚ್.ಡಿ. ಕುಮಾರಸ್ವಾಮಿ ಹೇಳಿದರು.

ಕಾರ್ತಿಕ್‌ಗೆ ಎಸ್‌ಐಟಿಯಲ್ಲಿ ರಾಜಾತಿತ್ಯ

ಮಾತು ಎತ್ತಿದ್ದರೆ ಅದೇನೋ ಹೊಸ ಹೆಸರಿಟ್ಟುಕೊಂಡಿದ್ದಾರೆ, ಬ್ರದರ್‌ ಸ್ವಾಮಿ ಅಂತೆ. ನಿಮ್ಮ ಯೋಗ್ಯತೆಗೆ ಇಷ್ಟು. ನಿಮಗೆ ಮಾನ, ಮರ್ಯಾದೆ ಇದ್ದರೆ? ನೀವು ಯಾವ ರೀತಿ ನಡೆದುಕೊಂಡು ಬಂದಿದ್ದೀರಾ ಎಂಬುದನ್ನು ನೋಡಿಕೊಳ್ಳಿ. ನಿಮ್ಮ ಪಾರ್ಟಿ ಅಧ್ಯಕ್ಷ ಯಾವ ರೀತಿ ನಡೆದುಕೊಂಡು ಬಂದಿದ್ದಾರೆ ಅಂತ ಕಾಂಗ್ರೆಸ್ ಕಾರ್ಯಕರ್ತರನ್ನು ಕೇಳಲು ಬಯಸುತ್ತೇನೆ. ಮೊದಲು ನಿಮ್ಮ ಮನೆ ಸರಿ ಮಾಡಿಕೊಳ್ಳಿ. ಎಸ್‌ಐಟಿಯಲ್ಲಿ ಪ್ರಜ್ವಲ್‌ ಮಾಜಿ ಕಾರು ಚಾಲಕ ಕಾರ್ತಿಕ್‌ಗೆ ರಾಜಾತಿತ್ಯ ಸಿಗುತ್ತಿದೆ. ಎಲ್ಲಿದ್ದಾನೆ ಅವನು? ಮಾವನ ಮನೆಗೆ ಹೋದಂತೆ ಹೋಗಿ ಬರುತ್ತಾನೆ ಎಂದು ಎಚ್.ಡಿ. ಕುಮಾರಸ್ವಾಮಿ ಕಿಡಿಕಾರಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ, ನಿಮ್ಮ ವಿಧಾನಸೌಧದ ಒಳಗಡೆ ಕ್ಯಾಸೆಟ್ ಸರ್ಕ್ಯುಲೇಷನ್ ಮಾಡಿದವರು ಓಡಾಡಿಕೊಂಡು ಇದ್ದಾರೆ. ಏನು ತನಿಖೆ ನಡೆಸುತ್ತೀರಿ? ಎಂದು ಎಚ್.ಡಿ. ಕುಮಾರಸ್ವಾಮಿ ಪ್ರಶ್ನೆ ಮಾಡಿದರು.

ಇದನ್ನೂ ಓದಿ: HD Kumaraswamy: ರಾಕೇಶ್‌ನನ್ನು ವಿದೇಶಿ ಪಾರ್ಟಿಗೆ ನೀವೇ ಕಳಿಸಿ ಸಾವಿಗೆ ಕಾರಣರಾದಿರಿ ಎಂದರೆ ಹೇಗೆ? ಸಿದ್ದರಾಮಯ್ಯಗೆ ಎಚ್‌ಡಿಕೆ ಪ್ರಶ್ನೆ

ಇದೊಂದು ಕಾಂಗ್ರೆಸ್ ಪಕ್ಷವಾ?

ತನಿಖೆಯ ದಾರಿ ತಪ್ಪಿಸುವ ಕೆಲಸವನ್ನು ನಾನು ಮಾಡಿದ್ದೇನಾ? ಇದೊಂದು ಕಾಂಗ್ರೆಸ್ ಪಕ್ಷವಾ? ಗೌರವ ಇದೆಯಾ? ಮಾನ, ಮರ್ಯಾದೆ ಇದೆಯಾ? ನಿಮ್ಮ ಡಿಸಿಎಂ ಡಿ.ಕೆ. ಶಿವಕುಮಾರ್, ಅದೇ ಸಿಡಿ ಶಿವು ಅವರು ಯಾಕಪ್ಪಾ ಶಿವರಾಮೇಗೌಡರ ಜತೆ ಮಾತನಾಡಿದರು? ಇವರದ್ದು ಹಸ್ತಕ್ಷೇಪ ಇಲ್ಲವೆಂದಾದರೆ ಏಕೆ ಮಾತನಾಡಬೇಕಿತ್ತು? ಇನ್ನೂ ಏನಾದರೂ ಸಾಕ್ಷಿ ಇದ್ದರೆ ಕೊಡು ಅಂತ ಕೇಳಿದ್ದು ಯಾಕೆ? ಬ್ರೋಕರ್‌, ತಲೆ ಹಿಡಿಯುವ ಕೆಲಸವನ್ನು ಮಾಡುತ್ತಿರುವವರು ಇವರು. ನನ್ನ ಬಗ್ಗೆ ಪಕ್ಷದಿಂದ ಟ್ವೀಟ್‌ ಮಾಡಿಸುತ್ತೀರಾ? ನೀವು ಯಾವ ನೈತಿಕತೆ ಇಟ್ಟುಕೊಂಡಿದ್ದೀರಿ? ಗೃಹ ಸಚಿವರೇ ನಿಜವಾದ ಅಪರಾಧಿ ವಿರುದ್ಧ ಕ್ರಮ ಕೈಗೊಳ್ಳಿ. ನಿಮಗೆ ತಂದೆ – ತಾಯಿ ಜನ್ಮ ಕೊಟ್ಟು ಭೂಮಿಗೆ ಬಂದಿದ್ದೀರಿ. ಒಡಹುಟ್ಟಿದ ಅಕ್ಕ – ತಂಗಿಯರು ಇದ್ದಾರೆ ಎಂದು ಎಚ್.ಡಿ. ಕುಮಾರಸ್ವಾಮಿ ಹೇಳಿದರು.

ಈ ಸರ್ಕಾರದ ಬಗ್ಗೆ ಅಧಿಕಾರಿಗಳಲ್ಲೂ ವಿಶ್ವಾಸವಿಲ್ಲ

ಚನ್ನಗಿರಿಯ ಪ್ರಕರಣದ ಬಗ್ಗೆ ಎಚ್.ಡಿ. ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿ, ಸರ್ಕಾರಕ್ಕೆ ಹಾಗೂ ಅಧಿಕಾರಿಗಳಿಗೆ ಯಾರೂ ಗೌರವ ಕೊಡುವ ವಾತಾವರಣವಿಲ್ಲ. ಯಾವುದೇ ಪೊಲೀಸ್ ಅಧಿಕಾರಿಗಳಿಗೆ ಗೌರವವಿಲ್ಲ. ಏಕೆಂದರೆ ಸರ್ಕಾರ ಆ ರೀತಿ ಇದೆ. ಪೊಲೀಸ್ ಅಧಿಕಾರಿಗಳನ್ನು ಈ ಸರ್ಕಾರದವರು ಹಾಗೆ ಬಳಕೆ ಮಾಡಿಕೊಂಡಿದ್ದಾರೆ. ಅದರಿಂದಲೇ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಕುಸಿತ ಕಂಡಿದೆ. ಇದು ಸರ್ಕಾರದ ಸ್ವಯಂ ಜವಾಬ್ದಾರಿಯಾಗಿದೆ. ಅವರೇ ಮಾಡಿಕೊಂಡ ಕೆಲಸ ಇದು. ಈ ಸರ್ಕಾರದ ಬಗ್ಗೆ ಅಧಿಕಾರಿಗಳಲ್ಲೂ ವಿಶ್ವಾಸವಿಲ್ಲ, ಜನತೆಯಲ್ಲೂ ವಿಶ್ವಾಸವಿಲ್ಲ ಎಂದು ಎಚ್.ಡಿ. ಕುಮಾರಸ್ವಾಮಿ ಕಿಡಿಕಾರಿದರು.

Continue Reading

ಮೈಸೂರು

Murder case : ದನ ಕಟ್ಟುವ ವಿಚಾರಕ್ಕೆ ಕಿರಿಕ್‌; ಕಾಲಿಂದ ಒದ್ದು ಕುಡುಗೋಲಿನಿಂದ ಹೊಡೆದು ದೊಡ್ಡಮ್ಮನನ್ನೇ ಕೊಂದ ದುಷ್ಟ

Murder case : ಇತ್ತೀಚೆಗೆ ಸಣ್ಣ ವಿಚಾರಕ್ಕೆಲ್ಲ ಶುರುವಾಗುವ ಜಗಳವು ಕೊಲೆಯಲ್ಲಿ ಅಂತ್ಯವಾಗುತ್ತಿದೆ. ಸದ್ಯ ಮೈಸೂರಿನಲ್ಲಿ ಕೊಟ್ಟಿಗೆಯಲ್ಲಿ ದನ ಕಟ್ಟುವ ವಿಚಾರಕ್ಕೆ ಜಗಳ ಶುರುವಾಗಿದ್ದು, ಯುವಕನೊರ್ವ ತನ್ನ ದೊಡ್ಡಮ್ಮನನ್ನೇ ಕೊಂದಿದ್ದಾನೆ.

VISTARANEWS.COM


on

By

Murder case in Mysuru
Koo

ಮೈಸೂರು: ಕೊಟ್ಟಿಗೆಯಲ್ಲಿ ದನ ಕಟ್ಟುವ ವಿಚಾರಕ್ಕೆ ಜಗಳ ಶುರುವಾಗಿ ವಿಕೋಪಕ್ಕೆ ತಿರುಗಿದ್ದು, ಯುವಕನೊರ್ವ ದೊಡ್ಡಮ್ಮನನ್ನೇ ಕುಡುಗೋಲಿನಿಂದ ಹಲ್ಲೆ ಮಾಡಿ ಕೊಲೆ (Murder Case) ಮಾಡಿದ್ದಾನೆ. ಮೈಸೂರಿನ ನಂಜನಗೂಡು ತಾಲೂಕಿನ ತಗಡೂರು ಗ್ರಾಮದಲ್ಲಿ ಘಟನೆ ನಡೆದಿದೆ. ನಿಂಗಣ್ಣ ಎಂಬುವವರ ಪತ್ನಿ ವಿನೋದಾ (45) ಕೊಲೆಯಾದವರು.

ನಿಂಗಣ್ಣ ಹಾಗೂ ಸ್ವಾಮಿ ಇಬ್ಬರು ಸಹೋದರರಾಗಿದ್ದು, ಕೊಟ್ಟಿಗೆಯಲ್ಲಿ ದನ ಕಟ್ಟುವ ವಿಚಾರಕ್ಕೆ ಆಗಾಗ ಜಗಳ ನಡೆಯುತ್ತಿತ್ತು. ಮತ್ತದೇ ವಿಚಾರಕ್ಕೆ ಎರಡು ಕುಟುಂಬಗಳ ನಡುವೆ ಜಗಳ ನಡೆದಿದ್ದು, ಮಾತಿಗೆ ಮಾತು ಬೆಳೆದು ವಿಕೋಪಕ್ಕೆ ತಿರುಗಿತ್ತು. ಈ ಮಧ್ಯೆ ಜಗಳಕ್ಕೆ ಎಂಟ್ರಿ ಕೊಟ್ಟ ಸ್ವಾಮಿ ಅವರ ಪುತ್ರ ಅಭಿಷೇಕ್ ತನ್ನ ದೊಡ್ಡಮ್ಮನ ಮೇಲೆ ಹಲ್ಲೆ ಮಾಡಿ ಹೊಟ್ಟೆಗೆ ಒದ್ದಿದ್ದಾನೆ. ಕೆಳಗೆ ಬಿದ್ದವರಿಗೆ ಕುಡುಗೋಲಿನಿಂದ ಹಲ್ಲೆ ಮಾಡಿದ್ದಾನೆ. ಗಂಭೀರ ಗಾಯಗೊಂಡ ವಿನೋದಾರನ್ನು ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ.

ಇತ್ತ ದೊಡ್ಡಮ್ಮ ಮೃತಪಟ್ಟ ವಿಷಯ ತಿಳಿಯುತ್ತಿದ್ದಂತೆ ಆರೋಪಿ ಅಭಿಷೇಕ್ ಪರಾರಿ ಆಗಿದ್ದಾನೆ. ಸ್ಥಳಕ್ಕೆ ಎಎಸ್‌ಪಿ ನಂದಿನಿ ಸೇರಿದಂತೆ ಇತರ ಅಧಿಕಾರಿಗಳ ತಂಡ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕವಲಂದೆ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದ್ದು, ನಾಪತ್ತೆಯಾಗಿರುವ ಆರೋಪಿಗಾಗಿ ಹುಡುಕಾಟ ನಡೆಸುತ್ತಿದ್ದಾರೆ.

ಇದನ್ನೂ ಓದಿ: Road Accident : ಇಬ್ಬರ ಪ್ರಾಣ ತೆಗೆದ ಅಪರಿಚಿತ ವಾಹನ; ಹಿಟ್‌ ಆ್ಯಂಡ್‌ ರನ್‌ಗೆ ಪಾದಚಾರಿ ಸಾವು

Lockup Death: ಪೊಲೀಸ್‌ ವಶದಲ್ಲಿದ್ದ ವ್ಯಕ್ತಿ ಸಾವು, ರೊಚ್ಚಿಗೆದ್ದ ಸಂಬಂಧಿಕರಿಂದ ಠಾಣೆ ಧ್ವಂಸ

ದಾವಣಗೆರೆ: ಪೊಲೀಸ್ ಕಸ್ಟಡಿಯಲ್ಲಿದ್ದ (police custody) ಆರೋಪಿಯೊಬ್ಬ ಸಾವಿಗೀಡಾಗಿದ್ದು (Lockup death), ಇದರಿಂದ ರೊಚ್ಚಿಗೆದ್ದ ಆರೋಪಿ (culprit) ಕಡೆಯವರು ಠಾಣೆಗೆ ನುಗ್ಗಿ ಅಲ್ಲಿದ್ದ ವಸ್ತುಗಳನ್ನು ಧ್ವಂಸ ಮಾಡಿದ್ದಾರೆ. ದಾವಣಗೆರೆ (Davanagere news) ಜಿಲ್ಲೆಯ ಚನ್ನಗಿರಿ (Channagiri news) ತಾಲೂಕಿನಲ್ಲಿ ಘಟನೆ ನಡೆದಿದೆ.

ಚನ್ನಗಿರಿ ಪಟ್ಟಣದ ಟಿಪ್ಪು ನಗರ ನಿವಾಸಿಯಾಗಿದ್ದ ಅದೀಲ್ (30) ಎನ್ನುವ ವ್ಯಕ್ತಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದರು. ಈತ ಒಸಿ ಆಡಿಸುತ್ತಿದ್ದ ಪ್ರಕರಣದಲ್ಲಿ ಪೊಲೀಸರಿಂದ ತನಿಖೆಗೆ ಒಳಗಾಗಿದ್ದ. ಸಂಜೆ ಪೊಲೀಸರು ಈತನನ್ನು ಠಾಣೆಗೆ ಕರೆತಂದಿದ್ದ‌ರು.

ಇದ್ದಕ್ಕಿದ್ದಂತೆ ಬಿಪಿ ಲೋ ಆಗಿ ಬಿದ್ದ ಅದಿಲ್‌ನನ್ನು ಪೊಲೀಸರು ಅಸ್ಪತ್ರೆಗೆ ಸಾಗಿಸಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಅದಿಲ್‌ ಸಾವನ್ನಪ್ಪಿದ್ದ. ಅಕ್ರೋಶಗೊಂಡ ಆರೋಪಿ ಸಂಬಂಧಿಕರು, ಆರೋಪಿಯ ಸಾವಿಗೆ ಪೊಲೀಸರೇ ಕಾರಣ ಎಂದು ಆರೋಪಿಸಿ ಪ್ರತಿಭಟನೆ ನಡೆಸಿ ದೊಂಬಿ ಎಬ್ಬಿಸಿದ್ದಾರೆ. ಪೊಲೀಸರು ನೀಡಿದ ಹಿಂಸೆಯ ಪರಿಣಾಮ ಲಾಕಪ್‌ ಡೆತ್‌ ಆಗಿದೆ, ಅದನ್ನು ಮುಚ್ಚಿಡಲು ಲೋ ಬಿಪಿ ನಾಟಕವಾಡಿದ್ದಾರೆ ಎಂದು ಆರೋಪಿಸಿದ್ದಾರೆ.

ಪೊಲೀಸ್ ಠಾಣೆಯ ಮುಂದೆ ಜಮಾಯಿಸಿದ ಅದಿಲ್‌ ಸಂಬಂಧಿಕರು ಹಾಗೂ ಸ್ನೇಹಿತರು, ಪೊಲೀಸ್ ಠಾಣೆಗೆ ನುಗ್ಗಿ ಠಾಣೆಯಲ್ಲಿದ್ದ ವಸ್ತುಗಳನ್ನು ಧ್ವಂಸ ಮಾಡಿದ್ದಾರೆ. ಚನ್ನಗಿರಿ ಪೊಲೀಸ್ ಠಾಣೆಯ ಆವರಣದಲ್ಲಿ ನೂರಾರು ಜನ ಜಮಾಯಿಸಿದ್ದು, ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Pune Porsche accident
ಕ್ರೈಂ7 mins ago

Pune Porsche accident: ಕಾರು ಗುದ್ದಿ ಇಬ್ಬರನ್ನು ಸಾಯಿಸಿದ ಬಾಲಕನ ಅಜ್ಜನೂ ಪೊಲೀಸ್‌ ವಶಕ್ಕೆ

Summer Special Trains
ಬೆಂಗಳೂರು15 mins ago

Summer Special Trains : ನೈರುತ್ಯ ರೈಲ್ವೆಯಿಂದ ಬೇಸಿಗೆ ವಿಶೇಷ ರೈಲುಗಳ ಸಂಚಾರ; ಪಟ್ಟಿ ಇಲ್ಲಿದೆ

Lockup Death
ಕರ್ನಾಟಕ16 mins ago

Lockup Death: ದಾವಣಗೆರೆ ಯುವಕನ ಸಾವು ಪ್ರಕರಣ ಲಾಕಪ್ ಡೆತ್ ಅಲ್ಲ, ಎಫ್ಐಆರ್ ಇಲ್ಲದೆ ಕರೆ ತಂದಿದ್ದು ತಪ್ಪು ಎಂದ ಸಿಎಂ

Hardik Pandya
ಕ್ರೀಡೆ40 mins ago

Hardik Pandya: ಪತ್ನಿಗೆ ಶೇ.70ರಷ್ಟು ಆಸ್ತಿ ವರ್ಗಾಯಿಸಲು ಮುಂದಾದ ಹಾರ್ದಿಕ್​ ಪಾಂಡ್ಯ; ಶೀಘ್ರದಲ್ಲೇ ವಿಚ್ಛೇದನ!

Prajwal Revanna Case Why did Deve Gowda write a letter to Prajwal and HD Kumaraswamy reveals secret
ರಾಜಕೀಯ41 mins ago

Prajwal Revanna Case: ಪ್ರಜ್ವಲ್‌ಗೆ ದೇವೇಗೌಡರು ಪತ್ರ ಬರೆದಿದ್ದು ಏಕೆ? ಸೀಕ್ರೆಟ್‌ ರಿವೀಲ್‌ ಮಾಡಿದ ಎಚ್‌ಡಿಕೆ!

Murder case in Mysuru
ಮೈಸೂರು44 mins ago

Murder case : ದನ ಕಟ್ಟುವ ವಿಚಾರಕ್ಕೆ ಕಿರಿಕ್‌; ಕಾಲಿಂದ ಒದ್ದು ಕುಡುಗೋಲಿನಿಂದ ಹೊಡೆದು ದೊಡ್ಡಮ್ಮನನ್ನೇ ಕೊಂದ ದುಷ್ಟ

Gold Rate Today
ಚಿನ್ನದ ದರ46 mins ago

Gold Rate Today: ಚಿನ್ನದ ದರ ಇಂದು ಯಥಾಸ್ಥಿತಿ; 22K- 24K ಬಂಗಾರದ ದರಗಳು ಹೀಗಿವೆ

Shreerastu Shubhamastu Serial Netra Jadhav out
ಕಿರುತೆರೆ58 mins ago

Shreerastu Shubhamastu Serial: ʻಶ್ರೀರಸ್ತು ಶುಭಮಸ್ತುʼ ಧಾರಾವಾಹಿಯಿಂದ ಹೊರನಡೆದ ನೇತ್ರಾ ಜಾಧವ್: ʻಶಾರ್ವರಿʼ ಪಾತ್ರಕ್ಕೆ ಹೊಸ ಎಂಟ್ರಿ ಯಾರು?

Road Accident
ಕ್ರೈಂ1 hour ago

Road Accident : ಇಬ್ಬರ ಪ್ರಾಣ ತೆಗೆದ ಅಪರಿಚಿತ ವಾಹನ; ಹಿಟ್‌ ಆ್ಯಂಡ್‌ ರನ್‌ಗೆ ಪಾದಚಾರಿ ಸಾವು

Sreenath Bhasi Movie Shashidhar direction new Movie
ಸ್ಯಾಂಡಲ್ ವುಡ್1 hour ago

Sreenath Bhasi Movie: ʻಮಂಜುಮ್ಮೆಲ್ ಬಾಯ್ಸ್ʼ ನಟನಿಗೆ ಸ್ಯಾಂಡಲ್​ವುಡ್​ ಡೈರೆಕ್ಟರ್ ಆ್ಯಕ್ಷನ್​ ಕಟ್​!

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

dina bhavishya read your daily horoscope predictions for May 23 2024
ಭವಿಷ್ಯ2 days ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ3 days ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ4 days ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು4 days ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

Contaminated Water
ಮೈಸೂರು4 days ago

Contaminated Water : ಡಿ ಸಾಲುಂಡಿಯಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದ ಯುವಕ ಸಾವು

Karnataka Rain
ಮಳೆ5 days ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Rain
ಮಳೆ6 days ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ6 days ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ6 days ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

Prajwal Revanna Case JDS calls CD Shivakumar pen drive gang
ರಾಜಕೀಯ1 week ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

ಟ್ರೆಂಡಿಂಗ್‌