13 ವರ್ಷಗಳ ಕಾರ್ಯಾಚರಣೆ ಬಳಿಕ ಭೂಮಿಗೆ ಮರಳಿದ ರಿಸ್ಯಾಟ್‌-2 ಉಪಗ್ರಹ - Vistara News

ದೇಶ

13 ವರ್ಷಗಳ ಕಾರ್ಯಾಚರಣೆ ಬಳಿಕ ಭೂಮಿಗೆ ಮರಳಿದ ರಿಸ್ಯಾಟ್‌-2 ಉಪಗ್ರಹ

13 ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದ ಭಾರತದ ರೇಡಾರ್ ಇಮೇಜಿಂಗ್ ಉಪಗ್ರಹ (ರಿಸ್ಯಾಟ್-2) ಕೆಲಸ ಮುಗಿಸಿ ಭೂಮಿಗೆ ಮರು ಪ್ರವೇಶ ಮಾಡಿದೆ.

VISTARANEWS.COM


on

risat 2 satellite
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವ ದೆಹಲಿ: 13 ವರ್ಷಗಳಿಂದ ಸೇವೆ ಸಲ್ಲಿಸುತ್ತಿದ್ದ ಭಾರತದ ರೇಡಾರ್ ಇಮೇಜಿಂಗ್ ಉಪಗ್ರಹ (ರಿಸ್ಯಾಟ್-2) ಭೂಮಿಗೆ ಮರು ಪ್ರವೇಶ ಮಾಡಿದೆ ಎಂದು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಗುರುವಾರ ತಿಳಿಸಿದೆ.

ರಿಸ್ಯಾಟ್‌ ಬಾಹ್ಯಾಕಾಶ ನೌಕೆಯು ಅಕ್ಟೋಬರ್ 30ರಂದು ಜಕಾರ್ತಾ ಬಳಿ ಹಿಂದೂ ಮಹಾಸಾಗರದ ಮೇಲೆ ಅಪ್ಪಳಿಸಿತು. 2009ರಲ್ಲಿ 300 ಕಿಲೋಗ್ರಾಂ ತೂಕದ ನೌಕೆ ಹೊರಟಿತ್ತು. ನಾಲ್ಕು ವರ್ಷಗಳ ಕಾರ್ಯಾಚರಣೆಯನ್ನು ಅದರಿಂದ ನಿರೀಕ್ಷಿಸಲಾಗಿತ್ತು. ಇದಕ್ಕಾಗಿ ರಿಸ್ಯಾಟ್ 30 ಕೆಜಿ ಇಂಧನವನ್ನು ಹೊಂದಿತ್ತು. ಇದೀಗ ಮರುಪ್ರವೇಶದ ವೇಳೆಗೆ ಉಪಗ್ರಹದಲ್ಲಿ ಯಾವುದೇ ಇಂಧನ ಉಳಿದಿಲ್ಲ. ಹೀಗಾಗಿ ಅದು ಮಾಲಿನ್ಯ ಸೃಷ್ಟಿಸಿಲ್ಲ ಅಥವಾ ಸ್ಫೋಟಗೊಂಡಿಲ್ಲ.

“ಇಸ್ರೋದ ಈ ಬಾಹ್ಯಾಕಾಶ ನೌಕೆ ಕಕ್ಷೆಯಲ್ಲಿ ಗರಿಷ್ಠ ಪರಿಣಾಮಕಾರಿ ನಿರ್ವಹಣೆ, ಇಂಧನದ ಗರಿಷ್ಠ ಬಳಕೆಗಳೊಂದಿಗೆ 13 ವರ್ಷಗಳವರೆಗೆ ಬಹಳ ಉಪಯುಕ್ತವಾದ ಪೇಲೋಡ್ ಡೇಟಾ ಒದಗಿಸಿದೆ. ಅದರ ಪೇಲೋಡ್‌ ಸೇವೆಗಳು ಇನ್ನಿತರ ಹಲವು ಬಾಹ್ಯಾಕಾಶ ಅಪ್ಲಿಕೇಶನ್‌ಗಳಿಗೆ ಬಳಸಿಕೊಳ್ಳಲಾಗಿದೆ” ಎಂದು ಇಸ್ರೋ ಹೇಳಿದೆ.

ಇದನ್ನೂ ಓದಿ | ISRO | ದೇಶದ ಮೊದಲ ವಾಣಿಜ್ಯಿಕ ಉಡಾವಣೆ ಯಶಸ್ವಿ, 36 ಉಪಗ್ರಹ ನಭಕ್ಕೆ ಹಾರಿಸಿ ಇಸ್ರೊ ಇತಿಹಾಸ

ಕಳೆದ ಒಂದು ತಿಂಗಳಿನಿಂದ ಭಾರತೀಯ ಸಿಸ್ಟಮ್ ಫಾರ್ ಸೇಫ್ ಅಂಡ್ ಸಸ್ಟೈನಬಲ್ ಸ್ಪೇಸ್ ಆಪರೇಷನ್ ಮ್ಯಾನೇಜ್‌ಮೆಂಟ್ (IS4OM) ವತಿಯಿಂದ ಈ ರಿಸ್ಯಾಟ್‌ನ ಭೂ ಮರುಪ್ರವೇಶವನ್ನು ನಿರ್ವಹಿಸಲಾಗಿತ್ತು. VSSC ಮತ್ತು ISTRAC ತಂಡಗಳು ಆಂತರಿಕವಾಗಿ ಅಭಿವೃದ್ಧಿಪಡಿಸಿದ ವಿಶ್ಲೇಷಣಾ ಸಾಫ್ಟ್‌ವೇರ್ ಮತ್ತು ಮಲ್ಟಿ ಆಬ್ಜೆಕ್ಟ್ ಅನ್ನು ಬಳಸಿಕೊಂಡು ಇದನ್ನು ಟ್ರ್ಯಾಕ್ ಮಾಡಿದವು. ಶ್ರೀಹರಿಕೋಟಾದಲ್ಲಿ ಇದರ ಟ್ರ್ಯಾಕಿಂಗ್ ರಾಡಾರ್ ಇದೆ.

“ರಿಸ್ಯಾಟ್-2 ಬಾಹ್ಯಾಕಾಶ ನೌಕೆಯ ಸಮರ್ಥ ಕಾರ್ಯಾಚರಣೆ ಹಾಗೂ ಮರುಪ್ರವೇಶಗಳು ನಿಖರ ಸಾಮರ್ಥ್ಯದ ಸ್ಪಷ್ಟ ಉದಾಹರಣೆಯಾಗಿದೆ. 13.5 ವರ್ಷಗಳ ನಂತರ ಯಶಸ್ವಿಯಾಗಿ ಭೂಮಿಗೇ ಮರಳುವ ಮೂಲಕ ಬಾಹ್ಯಾಕಾಶ ಕಸವನ್ನು ಸೃಷ್ಟಿಸದ ಅಂತಾರಾಷ್ಟ್ರೀಯ ನೀತಿಗೆ ಬದ್ಧವಾಗಿ ರಿಸ್ಯಾಟ್‌ ಮಾದರಿಯಾಗಿದೆʼʼ ಎಂದು ಇಸ್ರೋ ಹೇಳಿದೆ.

ಇದನ್ನೂ ಓದಿ | ವಿಸ್ತಾರ Explainer | ರಷ್ಯಾದ ನಷ್ಟ ಭಾರತಕ್ಕೆ ಲಾಭ! ನಾಳೆ ವನ್‌ವೆಬ್ ಉಪಗ್ರಹಗಳ ಉಡಾವಣೆ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Narendra Modi: ಜಿ-7 ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಇಟಲಿಯ ಅಪುಲಿಯಾಗೆ ತಲುಪಿದ ಪ್ರಧಾನಿ ಮೋದಿ

Narendra modi:

VISTARANEWS.COM


on

Narendra Modi
Koo

ಬೆಂಗಳೂರು: 50 ನೇ ಆವೃತ್ತಿಯ ಜಿ 7 ಶೃಂಗಸಭೆಯಲ್ಲಿ ಭಾಗವಹಿಸಲು ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಇಟಲಿಯ ಅಪುಲಿಯಾ ಪ್ರದೇಶದ ಬೃಂಡಿಸಿ ವಿಮಾನ ನಿಲ್ದಾಣಕ್ಕೆ ತಲುಪಿದ್ದಾರೆ. ಅವರು ಮೂರನೇ ಅವಧಿಗೆ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ನಂತರದ ಮೊದಲ ವಿದೇಶ ಪ್ರವಾಸ ಇದಾಗಿದೆ. ಜಿ 7 ಶೃಂಗಸಭೆಯಲ್ಲಿ ಭಾಗವಹಿಸಲು ಇಟಲಿಗೆ ಬಂದಿಳಿದಿದ್ದೇನೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. “ವಿಶ್ವ ನಾಯಕರೊಂದಿಗೆ ಉಪಯುಕ್ತ ಚರ್ಚೆಗಳಲ್ಲಿ ತೊಡಗಿಸಿಕೊಳ್ಳಲು ಎದುರು ನೋಡುತ್ತಿದ್ದೇನೆ. ಒಟ್ಟಾಗಿ, ನಾವು ಜಾಗತಿಕ ಸವಾಲುಗಳನ್ನು ಎದುರಿಸುವ ಮತ್ತು ಉಜ್ವಲ ಭವಿಷ್ಯಕ್ಕಾಗಿ ಅಂತರರಾಷ್ಟ್ರೀಯ ಸಹಕಾರವನ್ನು ವೃದ್ಧಿಸುವ ಗುರಿಯನ್ನು ಹೊಂದಿದ್ದೇವೆ” ಎಂದು ಅವರು ಟ್ವೀಟ್ ಮಾಡಿದ್ದಾರೆ.

ಶೃಂಗಸಭೆಯ ಸಮಯದಲ್ಲಿ, ಪಿಎಂ ಮೋದಿ ಇಟಲಿಯ ಪ್ರಧಾನಿ ಜಾರ್ಜಿಯಾ ಮೆಲೋನಿ ಅವರೊಂದಿಗೆ ದ್ವಿಪಕ್ಷೀಯ ಸಭೆ ನಡೆಸಲಿದ್ದಾರೆ. ಶೃಂಗಸಭೆಯ ಹೊರತಾಗಿ ಮೋದಿ ಯುಎಸ್ ಅಧ್ಯಕ್ಷ ಜೋ ಬೈಡನ್ ಅವರನ್ನು ಭೇಟಿ ಮಾಡುವ ಸಾಧ್ಯತೆಯಿದೆ ಎಂದು ಯುಎಸ್ ರಾಷ್ಟ್ರೀಯ ಭದ್ರತಾ ಸಲಹೆಗಾರ ಜೇಕ್ ಸುಲ್ಲಿವಾನ್ ಈ ಹಿಂದೆಯೇ ಹೇಳಿದ್ದರು.

ಶೃಂಗಸಭೆಯಲ್ಲಿ ಪಾಲ್ಗೊಳ್ಳುವಂತೆ ಇಟಲಿ ಭಾರತಕ್ಕೆ ಆಹ್ವಾನ ನೀಡಿತ್ತು. ಇದು ಜಿ 7 ಶೃಂಗಸಭೆಯಲ್ಲಿ ಮೋದಿಯವರ ಸತತ ಐದನೇ ಭಾಗವಹಿಸುವಿಕೆಯಾಗಿದ್ದು, ಭಾರತವು ಹಿಂದಿನ ಹತ್ತು ಶೃಂಗಸಭೆಗಳಲ್ಲಿ ಅವರು ಭಾಗವಹಿಸಿದ್ದರು.

ವಿಷಯಗಳು ಯಾವುವು?

ಶೃಂಗಸಭೆಯ ವಿದೇಶದ ಅಧಿವೇಶನದಲ್ಲಿ ಭಾರತವು ಕೃತಕ ಬುದ್ಧಿಮತ್ತೆ, ಇಂಧನ, ಆಫ್ರಿಕಾ ಮತ್ತು ಮೆಡಿಟರೇನಿಯನ್ ದೇಶಗಳ ಸಹಕಾರದ ಮೇಲೆ ಗಮನ ಹರಿಸಲಿದೆ ಎಂದು ಪ್ರಧಾನಿ ಹೇಳಿದ್ದಾರೆ. ಜಾಗತಿಕವಾಗಿ ನಿರ್ಣಾಯಕ ವಿಷಯಗಳ ಬಗ್ಗೆ ಚರ್ಚಿಸಲಾಗುವುದು ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: Amit Shah: ತಮಿಳಿಸೈಗೆ ಅಮಿತ್ ಶಾ ಬೈಗುಳದ ವಿಡಿಯೋ; ವಿವಾದಕ್ಕೆ ತೆರೆ ಎಳೆದ ತಮಿಳುನಾಡು ಬಿಜೆಪಿ ನಾಯಕಿ

ಜಿ 7 ನ ಸಮ್ಮೇಳನದ ನೇತೃತ್ವ ವಹಿಸಿರುವ ಇಟಲಿ, ಯುರೋಪಿಯನ್ ಒಕ್ಕೂಟದ ಜೊತೆಗೆ ಕೆನಡಾ, ಫ್ರಾನ್ಸ್, ಜರ್ಮನಿ, ಜಪಾನ್, ಯುನೈಟೆಡ್ ಕಿಂಗ್ಡಮ್ ಮತ್ತು ಯುನೈಟೆಡ್ ಸ್ಟೇಟ್ಸ್ ಸೇರಿದಂತೆ ಏಳು ಪ್ರಮುಖ ಮುಂದುವರಿದ ಆರ್ಥಿಕತೆಗಳ ಬಣದ ಸಭೆ ಆಯೋಜಿಸುತ್ತಿದೆ.

ಇಟಲಿಯ ಅಪುಲಿಯಾ ಪ್ರದೇಶದ ಬೊರ್ಗೊ ಎಗ್ನಾಜಿಯಾ ರೆಸಾರ್ಟ್​​ನಲ್ಲಿ ಜಿ 7 ಶೃಂಗಸಭೆ ಜೂನ್ 13 ರಿಂದ 15 ರವರೆಗೆ ನಡೆಯಲಿದೆ. ಶೃಂಗಸಭೆಯಲ್ಲಿ ಉಕ್ರೇನ್ ನಲ್ಲಿ ನಡೆಯುತ್ತಿರುವ ಯುದ್ಧ ಮತ್ತು ಗಾಝಾದಲ್ಲಿನ ಸಂಘರ್ಷದ ಕುರಿತು ಚರ್ಚಿಸುವ ನಿರೀಕ್ಷೆಯಿದೆ.

Continue Reading

ಪ್ರಮುಖ ಸುದ್ದಿ

Amit Shah: ತಮಿಳಿಸೈಗೆ ಅಮಿತ್ ಶಾ ಬೈಗುಳದ ವಿಡಿಯೋ; ವಿವಾದಕ್ಕೆ ತೆರೆ ಎಳೆದ ತಮಿಳುನಾಡು ಬಿಜೆಪಿ ನಾಯಕಿ

Amith Shah: ಸೌಂದರರಾಜನ್ ಅವರ ಪ್ರಕಾರ, ವೀಡಿಯೊದಲ್ಲಿ ಕಂಡುಬರುವಂತೆ ಅಮಿತ್ ಶಾ ಅವರ ಸೂಚನೆಯನ್ನು ತಪ್ಪಾಗಿ ಅರ್ಥೈಸಲಾಗಿದೆ. ಅಲ್ಲಿ ಅಮಿತ್ ಅವರು ತಮಗೆ ರಾಜಕೀಯವನ್ನು ಸಮರ್ಥವಾಗಿ ನಿರ್ವಹಿಸಲು ಸಲಹೆ ನೀಡಿದ್ದಾರೆ ಎಂಬುದಾಗಿ ಅವರು ಹೇಳಿದ್ದಾರೆ.

VISTARANEWS.COM


on

Amith Shah
Koo

ನವದೆಹಲಿ: ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ಅವರು ತಮಿಳುನಾಡು ಬಿಜೆಪಿ ನಾಯಕಿ ತಮಿಳಿಸೈಯನ್ನು ಕಾರ್ಯಕ್ರಮವೊಂದರ ವೇದಿಕೆಯಲ್ಲೇ ಗದರಿದ್ದಾರೆ ಎಂಬ ವಿಡಿಯೊ ವೈರಲ್ ಆಗಿದೆ. ಆದರೆ ಸ್ವತಃ ತಮಿಳಿಸೈ ಅವರು ಅದನ್ನು ನಿರಾಕರಿಸಿದ್ದು ಅವರು ತಮ್ಮನ್ನು ಬೈದಿದ್ದಲ್ಲ ಎಂದು ಹೇಳಿದ್ದಾರೆ.

ಸೌಂದರರಾಜನ್ ಅವರ ಪ್ರಕಾರ, ವೀಡಿಯೊದಲ್ಲಿ ಕಂಡುಬರುವಂತೆ ಅಮಿತ್ ಶಾ ಅವರ ಸೂಚನೆಯನ್ನು ತಪ್ಪಾಗಿ ಅರ್ಥೈಸಲಾಗಿದೆ. ಅಲ್ಲಿ ಅಮಿತ್ ಅವರು ತಮಗೆ ರಾಜಕೀಯವನ್ನು ಸಮರ್ಥವಾಗಿ ನಿರ್ವಹಿಸಲು ಸಲಹೆ ನೀಡಿದ್ದಾರೆ ಎಂಬುದಾಗಿ ಅವರು ಹೇಳಿದ್ದಾರೆ.

ನಿನ್ನೆ, 2024 ರ ಚುನಾವಣೆಯ ನಂತರ ಮೊದಲ ಬಾರಿಗೆ ಆಂಧ್ರಪ್ರದೇಶದಲ್ಲಿ ನಡೆದ ಕಾರ್ಯಕ್ರಮದಲ್ಲಿ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಿದ್ದೆ. ಅವರು ನನಗೆ ಚುನಾವಣೆ ನಂತರದ ಸವಾಲುಗಳ ಬಗ್ಗೆ ಕೇಳಿದರು. ನಾನು ವಿವರಿಸುತ್ತಿರುವಂತೆ, ಸಮಯದ ಅಭಾವದಿಂದಾಗಿ ಅವರು ರಾಜಕೀಯ ಮತ್ತು ಕ್ಷೇತ್ರದ ಕೆಲಸಗಳನ್ನು ತೀವ್ರಗತಿಯಲ್ಲಿ ಮಾಡುವಂತೆ ಸಲಹೆ ನೀಡಿದರು. ಹೀಗಾಗಿ ಭರವಸೆ ಮೂಡಿದೆ. ಇದು ಅನಗತ್ಯ ಊಹಾಪೋಹ ಸೃಷ್ಟಿಸಿದೆ ಎಂದು ತಮಿಳಸೈ ಸೌಂದರರಾಜನ್ ಎಕ್ಸ್​ನಲ್ಲಿ ಪೋಸ್ಟ್ ಮಾಡಿದ್ದಾರೆ.

ಇದಕ್ಕೆ ಕಾರಣವೇನು?

ಆಂಧ್ರಪ್ರದೇಶದ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಅಮಿತ್ ಶಾ ಅವರು ತೆಲಂಗಾಣದ ಮಾಜಿ ರಾಜ್ಯಪಾಲರನ್ನು ವೇದಿಕೆಯ ಮೇಲೆ ತರಾಟೆಗೆ ತೆಗೆದುಕೊಂಡಿದ್ದಾರೆ ಎಂಬ ವೀಡಿಯೊ ವಿವಾದಕ್ಕೆ ಕಾರಣವಾಗಿತ್ತು . ತಮಿಳುನಾಡು ಬಿಜೆಪಿ ಘಟಕದ ಅಧ್ಯಕ್ಷ ಕೆ.ಅಣ್ಣಾಮಲೈ ಅವರು ರಾಜ್ಯದಲ್ಲಿನ ಚುನಾವಣಾ ಸೋಲಿನ ಬಗ್ಗೆ ಸೌಂದರರಾಜನ್ ಟೀಕಿಸಿದ್ದರು. ಅದೇ ಹೇಳಿಕೆಗಾಗಿ ಅಮಿತ್ ಶಾ ತಮಿಳಿಸೈ ಅವರನ್ನು ಬೈಯುತ್ತಿದ್ದಾರೆ ಎಂದು ಹಲವರು ಊಹಿಸಿದ್ದರು.

ಇದನ್ನೂ ಓದಿ: Jammu Kashmir: ಕಾಶ್ಮೀರದಲ್ಲಿ ಮತ್ತೊಂದು ದುರಂತ; ಸೇನಾ ವಾಹನ ಕಣಿವೆಗೆ ಬಿದ್ದು ಯೋಧ ಸಾವು, ನಾಲ್ವರಿಗೆ ಗಾಯ

ಈ ವಿಡಿಯೋದಲ್ಲಿ ಡಿಎಂಕೆ ನಾಯಕರು ಬಿಜೆಪಿಯನ್ನು ಗುರಿಯಾಗಿಸಿಕೊಂಡಿದ್ದು, ಅಮಿತ್ ಶಾ ಅವರ ನಡವಳಿಕೆಯನ್ನು ಪ್ರಶ್ನಿಸಿದ್ದಾರೆ. ಮಾಜಿ ಕೇಂದ್ರ ಸಚಿವ ಮತ್ತು ಡಿಎಂಕೆ ನಾಯಕ ದಯಾನಿಧಿ ಮಾರನ್ ಅವರು ಅಮಿತ್ ಶಾ ಅವರ ಈ ವೀಡಿಯೊದ ಬಗ್ಗೆ ಟೀಕಿಸಿದ್ದು, ಇದು ‘ದುರದೃಷ್ಟಕರ’ ಮತ್ತು ‘ಸ್ವಾಗತಾರ್ಹವಲ್ಲ’ ಎಂದು ಹೇಳಿದ್ದಾರೆ.

ಇದು ತುಂಬಾ ದುರದೃಷ್ಟಕರ. ಅವರು ತೆಲಂಗಾಣ ಮತ್ತು ಪುದುಚೇರಿಯ ರಾಜ್ಯಪಾಲರಾಗಿದ್ದರು. ಗೃಹ ಸಚಿವರು ಹಣಕಾಸು ಸಚಿವೆಯಾಗಿರುವ ನಿರ್ಮಲಾ ಸೀತಾರಾಮನ್ ಅಥವಾ ವಿದೇಶಾಂಗ ಸಚಿವರಾಗಿರುವ ಎಸ್ ಜೈಶಂಕರ್ ಅವರನ್ನು ಅದೇ ರೀತಿ ಬೈಯುತ್ತಾರೆಯೇ? ತಮಿಳಿಸೈ ತಮಿಳುನಾಡಿನವಳು ಎಂಬ ಕಾರಣಕ್ಕಾಗಿ ತರಾಟೆಗೆ ತೆಗೆದುಕೊಂಡರೇ? ಇದು ಅತ್ಯಂತ ಸ್ವಾಗತಾರ್ಹವಲ್ಲ” ಎಂದು ಹೇಳಿದ್ದರು.

ಡಿಎಂಕೆ ವಕ್ತಾರ ಸರವಣನ್ ಅಣ್ಣಾದೊರೈ ಇದನ್ನು ಅಪದ್ಧ ಎಂದು ಕರೆದಿದ್ದಾರೆ. ಇದು ಯಾವ ರೀತಿಯ ರಾಜಕೀಯ? ತಮಿಳುನಾಡಿನ ಪ್ರಮುಖ ಮಹಿಳಾ ರಾಜಕಾರಣಿಯನ್ನು ಸಾರ್ವಜನಿಕವಾಗಿ ಖಂಡಿಸುವುದು ಸಭ್ಯವೇ? ಇದನ್ನು ಎಲ್ಲರೂ ನೋಡಿದ್ದಾರೆ ಎಂಬುದನ್ನು ಅಮಿತ್ ಶಾ ತಿಳಿದುಕೊಳ್ಳಬೇಕು. ಎಂದು ಅವರು ಎಕ್ಸ್ ನಲ್ಲಿ ಬರೆದಿದ್ದಾರೆ.

Continue Reading

ದೇಶ

Jammu Kashmir: ಕಾಶ್ಮೀರದಲ್ಲಿ ಮತ್ತೊಂದು ದುರಂತ; ಸೇನಾ ವಾಹನ ಕಣಿವೆಗೆ ಬಿದ್ದು ಯೋಧ ಸಾವು, ನಾಲ್ವರಿಗೆ ಗಾಯ

Jammu Kashmir: ಜಮ್ಮು-ಕಾಶ್ಮೀರದ ರಾಜೌರಿ ಜಿಲ್ಲೆಯಲ್ಲಿ ಸೇನೆಯ ವಾಹನವೊಂದು ಗುರುವಾರ ಸಂಜೆ ಕಂದಕಕ್ಕೆ ಉರುಳಿದೆ. ಚಾಲಕನ ನಿಯಂತ್ರಣ ತಪ್ಪಿ ವಾಹನ ಬಿದ್ದಿದೆ. ವಾಹನದಲ್ಲಿದ್ದ ಐವರು ಯೋಧರ ಪೈಕಿ ಒಬ್ಬ ಯೋಧ ಮೃತಪಟ್ಟಿದ್ದು, ನಾಲ್ವರು ಗಾಯಗೊಂಡಿದ್ದಾರೆ. ಗಾಯಾಳು ಯೋಧರಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಹಿರಿಯ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

VISTARANEWS.COM


on

Jammu Kashmir
Koo

ಶ್ರೀನಗರ: ಕಳೆದ ಕೆಲ ದಿನಗಳಿಂದ ಉಗ್ರರ ದಾಳಿಗೆ ನಲುಗಿ ಹೋಗಿರುವ ಜಮ್ಮು-ಕಾಶ್ಮೀರದಲ್ಲಿ (Jammu Kashmir) ಮತ್ತೊಂದು ದುರಂತ ಸಂಭವಿಸಿದೆ. ರಾಜೌರಿ ಜಿಲ್ಲೆಯಲ್ಲಿ ಗುರುವಾರ (ಜೂನ್‌ 13) ಸೇನೆಯ ವಾಹನವೊಂದು (Army Vehicle) ಕಂದಕಕ್ಕೆ ಉರಳಿ ಒಬ್ಬ ಯೋಧ ಮೃತಪಟ್ಟಿದ್ದರೆ, ನಾಲ್ವರು ಸೈನಿಕರು ಗಾಯಗೊಂಡಿದ್ದಾರೆ. ಗಾಯಗೊಂಡಿರುವ ಯೋಧರನ್ನು ಸೇನೆಯ ಆಸ್ಪತ್ರೆಗೆ ರವಾನಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ನಾಲ್ವರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.

ನೌಶೇರಾ ಸೆಕ್ಟರ್‌ ಬಳಿಯ ಗಡಿ ನಿಯಂತ್ರಣ ರೇಖೆಗೆ ಸಮೀಪದಲ್ಲಿರುವ ಭವಾನಿ ಗ್ರಾಮದ ಮೂಲಕ ಸೇನಾ ವಾಹನವು ಗುರುವಾರ ಸಂಜೆ ತೆರಳುತ್ತಿತ್ತು. ವಾಹದಲ್ಲಿ ಐವರು ಯೋಧರು ಇದ್ದರು. ಇದೇ ವೇಳೆ, ವಾಹನವು ಚಾಲಕನ ನಿಯಂತ್ರಣ ತಪ್ಪಿದ್ದು, ಕಂದಕಕ್ಕೆ ಉರುಳಿದೆ. ದುರಂತ ಸಂಭವಿಸುತ್ತಲೇ ಐವರೂ ಯೋಧರನ್ನು ಆಸ್ಪತ್ರೆಗೆ ಸಾಗಿಸಲಾಗಿದೆ. ಆದರೆ, ಅಷ್ಟೊತ್ತಿಗಾಗಲೇ ಒಬ್ಬ ಯೋಧ ಮೃತಪಟ್ಟಿದ್ದರು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಗುರುವಾರವೇ ಶ್ರೀನಗರದಲ್ಲಿ ಸಿಆರ್‌ಪಿಎಫ್‌ ವಾಹನವೊಂದರಲ್ಲಿ ಬೆಂಕಿ ಕಾಣಿಸಿಕೊಂಡು ವಾಹನ ಸುಟ್ಟಿತ್ತು. ಅದೃಷ್ಟವಶಾತ್‌, ವಾಹನದಲ್ಲಿದ್ದ ಯೋಧರಿಗೆ ಯಾವುದೇ ತೊಂದರೆ ಆಗಿರಲಿಲ್ಲ.

ಕಾಶ್ಮೀರದಲ್ಲಿ ಇತ್ತೀಚೆಗೆ ಉಗ್ರರ ಉಪಟಳ ಜಾಸ್ತಿಯಾಗಿದೆ. ಹಾಗಾಗಿ, ಪ್ರಧಾನಿ ನರೇಂದ್ರ ಮೋದಿ (Narendra Modi) ಅವರು ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್‌ ದೋವಲ್‌ ಸೇರಿ ಹಲವರೊಂದಿಗೆ ಉನ್ನತ ಮಟ್ಟದ ಸಭೆ ನಡೆಸಿದ್ದು, ಕಾಶ್ಮೀರದಲ್ಲಿ ಉಗ್ರರ ನಿರ್ನಾಮಕ್ಕೆ ಸೂಚಿಸಿದ್ದಾರೆ. ಹಾಗೆಯೇ, ಎಲ್ಲ ಸೈನಿಕರನ್ನು ಗಡಿಯಲ್ಲಿ ನಿಯೋಜಿಸುವ ಮೂಲಕ ಉಗ್ರರಿಗೆ ತಿರುಗೇಟು ನೀಡುವಂತೆ ಸೂಚನೆ ನೀಡಿದ್ದಾರೆ.

ಜಮ್ಮು-ಕಾಶ್ಮೀರ ಲೆಫ್ಟಿನೆಂಟ್‌ ಗವರ್ನರ್‌ ಮನೋಜ್‌ ಸಿನ್ಹಾ, ಎನ್‌ಎಸ್‌ಎ ಅಜಿತ್‌ ದೋವಲ್‌ ಸೇರಿ ಹಲವು ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಮೋದಿ ಅವರು ಕಣಿವೆಯ ಭದ್ರತೆಯನ್ನು ಪರಿಶೀಲಿಸಿದರು. ಕಣಿವೆಯಲ್ಲಿ ಶಾಂತಿ ಸ್ಥಾಪನೆಯಾಗಬೇಕು. ಉಗ್ರರ ದಾಳಿಗಳನ್ನು ನಿಗ್ರಹಿಸಬೇಕು. ಗಡಿಯುದ್ದಕ್ಕೂ ಹೆಚ್ಚಿನ ಭದ್ರತಾ ಸಿಬ್ಬಂದಿಯನ್ನು ನಿಯೋಜಿಸಬೇಕು. ಸೂಕ್ಷ್ಮ ನೆಲೆಗಳಲ್ಲಿ ಹೆಚ್ಚಿನ ಭದ್ರತೆ ಕೈಗೊಳ್ಳಬೇಕು ಎಂದು ಸೂಚಿಸುವ ಜತೆಗೆ ಆಧುನಿಕ ತಂತ್ರಜ್ಞಾನದ ಬಳಕೆ, ಉಗ್ರರ ನಿಗ್ರಹಕ್ಕೆ ಇದುವರೆಗೆ ತೆಗೆದುಕೊಂಡ ಕ್ರಮಗಳ ಕುರಿತು ಕೂಡ ಮೋದಿ ಅವರು ಪರಿಶೀಲನೆ ನಡೆಸಿದರು ಎಂದು ತಿಳಿದುಬಂದಿದೆ.

ಜಮ್ಮು-ಕಾಶ್ಮೀರದ ರಿಯಾಸಿ ಜಿಲ್ಲೆಯಲ್ಲಿ ಜೂನ್ 9ರಂದು ನಡೆದ ಭಯೋತ್ಪಾದಕರ ಗುಂಡಿನ ದಾಳಿಯ ಸಂದರ್ಭದಲ್ಲಿ, ಪುಟ್ಟ ಕಂದಮ್ಮನೂ ಸೇರಿ 10 ಮಂದಿ ಮೃತಪಟ್ಟಿದ್ದಾರೆ. ಜಮ್ಮು-ಕಾಶ್ಮೀರದಲ್ಲಿರುವ ಶಿವ ಖೋರಿ ದೇವಸ್ಥಾನಕ್ಕೆ ಹಿಂದು ಯಾತ್ರಾರ್ಥಿಗಳನ್ನು ಕರೆದೊಯ್ಯುತ್ತಿದ್ದ ಬಸ್ ಮೇಲೆ ಭಯೋತ್ಪಾದಕರು ದಾಳಿ ನಡೆಸಿದ್ದರು. ಪಾಕಿಸ್ತಾನದ ಲಷ್ಕರೆ ತಯ್ಬಾ ಉಗ್ರ ಸಂಘಟನೆಯು ದಾಳಿ ನಡೆಸಿದ್ದು, ಉಗ್ರನಿಗಾಗಿ ಪೊಲೀಸರು ಬಲೆ ಬೀಸಿದ್ದಾರೆ. ಅಲ್ಲದೆ, ಉಗ್ರನ ಕುರಿತು ಸುಳಿವು ನೀಡಿದವರಿಗೆ 20 ಲಕ್ಷ ರೂ. ಬಹುಮಾನ ಘೋಷಣೆ ಮಾಡಲಾಗಿದೆ.

ಇದನ್ನೂ ಓದಿ: Terrorist Attack : ಜಮ್ಮು ಕಾಶ್ಮೀರದಲ್ಲಿ ಉಗ್ರರ ಅಟ್ಟಹಾಸ; ಯೋಧ ಹುತಾತ್ಮ , ಆರು ಯೋಧರಿಗೆ ಗಾಯ

Continue Reading

ಕರ್ನಾಟಕ

ದೇಶದ ಪ್ರತಿ ಜಿಲ್ಲೆಗೂ ಉಗ್ರರ ನೇಮಿಸಲು ಬಳ್ಳಾರಿಯಲ್ಲಿ ಸಂಚು; ಎನ್‌ಐಎ ಚಾರ್ಜ್‌ಶೀಟ್‌ನಲ್ಲಿ ಸ್ಫೋಟಕ ಮಾಹಿತಿ!

ಉಗ್ರರು 2025ರ ವೇಳೆಗೆ ಪ್ರತಿಯೊಂದು ಜಿಲ್ಲೆಯಲ್ಲಿ ಸ್ಲೀಪರ್‌ಸೆಲ್‌ಗಳನ್ನು ನೇಮಿಸುವ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ಸಮರ ಸಾರುವ ಉದ್ದೇಶ ಹೊಂದಿದ್ದರು. ಧಾರ್ಮಿಕ ಮುಖಂಡರು, ದೇಶದ ಯೋಧರು, ಪೊಲೀಸರು ಸೇರಿ ಹಲವರನ್ನು ಗುರಿಯಾಗಿಸಿಕೊಂಡು ದಾಳಿ ಮಾಡುವ ಉದ್ದೇಶ ಹೊಂದಿದ್ದರು ಎಂದು ತಿಳಿದುಬಂದಿದೆ. ಎಲ್ಲ ಚಟುವಟಿಕೆಗಳಿಗೂ ಉಗ್ರರು ಬಳ್ಳಾರಿಯನ್ನೇ ಪ್ರಮುಖ ಕೇಂದ್ರವನ್ನಾಗಿಸಿಕೊಂಡಿದ್ದರು ಎಂದು ಚಾರ್ಜ್‌ಶೀಟ್‌ ಸಲ್ಲಿಸಲಾಗಿದೆ.

VISTARANEWS.COM


on

ISIS Terrorists
Koo

ಬಳ್ಳಾರಿ: ಗಣಿ ಜಿಲ್ಲೆ ಬಳ್ಳಾರಿಯಲ್ಲಿ ಕುಳಿತು ದೇಶದ ಪ್ರತಿಯೊಂದು ಜಿಲ್ಲೆಯಲ್ಲೂ ಐಸಿಸ್‌ ಉಗ್ರರ ಜಾಲ (Bellary ISIS Module) ರೂಪಿಸಬೇಕು ಎಂದು ಸಂಚು ಹೆಣೆದಿದ್ದ ಏಳು ಶಂಕಿತ ಉಗ್ರರನ್ನು ಬಂಧಿಸಿದ ಎನ್‌ಐಎ ಅಧಿಕಾರಿಗಳು (NIA Officials) ಅವರ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಿದ್ದಾರೆ. ಚಾರ್ಜ್‌ಶೀಟ್‌ನಲ್ಲಿ ಪ್ರಸ್ತಾಪವಾಗಿರುವ ವಿಷಯಗಳು ಜನರನ್ನು ಬೆಚ್ಚಿಬೀಳಿಸಿವೆ. ದೇಶದ ಪ್ರತಿಯೊಂದು ಜಿಲ್ಲೆಯಲ್ಲೂ ಯುವಕರನ್ನು ಐಸಿಸ್‌ ಉಗ್ರ ಸಂಘಟನೆಗೆ ನೇಮಿಸಬೇಕು ಎಂಬುದು ಉಗ್ರರ ಉದ್ದೇಶವಾಗಿತ್ತು ಅಂಶವು ಚಾರ್ಜ್‌ಶೀಟ್‌ನಿಂದ (NIA Chargesheet) ಬಯಲಾಗಿದೆ.

ಕರ್ನಾಟಕದಲ್ಲಿ ಬಂಧಿತರಾಗಿದ್ದ ಮೊಹಮ್ಮದ್‌ ಮುನಿರುದ್ದೀನ್‌, ಸೈಯದ್‌ ಅಮೀರ್‌, ಎಂ.ಡಿ.ಮುಜಮಿಲ್‌ ಹಾಗೂ ಮಹಾರಾಷ್ಟ್ರದ ನಾಲ್ವರು ಉಗ್ರರ ವಿರುದ್ಧ ನ್ಯಾಯಾಲಯಕ್ಕೆ ಎನ್‌ಐಎ ಚಾರ್ಜ್‌ಶೀಟ್‌ ಸಲ್ಲಿಸಿದೆ. ದೇಶದ ಪ್ರತಿಯೊಂದು ಜಿಲ್ಲೆಯಲ್ಲೂ 50 ಯುವಕರನ್ನು ಸ್ಲೀಪರ್‌ಸೆಲ್‌ಗಳನ್ನಾಗಿ ನೇಮಕ ಮಾಡಿಕೊಂಡು, ದೇಶಾದ್ಯಂತ ಐಸಿಸ್‌ ಉಗ್ರ ಸಂಘಟನೆಯ ಜಾಲವನ್ನು ವಿಸ್ತರಣೆ ಮಾಡಬೇಕು ಎಂಬುದು ಇವರ ಉದ್ದೇಶವಾಗಿತ್ತು. ಬಳ್ಳಾರಿಯ ಮೂವರು ಹಾಗೂ ಮಹಾರಾಷ್ಟ್ರದ ನಾಲ್ವರು ಶಂಕಿತರು ಇಂತಹ ಸಂಚು ರೂಪಿಸಿದ್ದರು ಎಂದು ಚಾರ್ಜ್‌ಶೀಟ್‌ನಲ್ಲಿ ಉಲ್ಲೇಖಿಸಲಾಗಿದೆ.

Manipur violence

ಐಸಿಸ್‌ ಉಗ್ರ ಸಂಘಟನೆಯ ಸುಲೇಮಾನ್‌ ಅಲಿಯಾಸ್‌ ಮಿನಾಜ್‌ ಎಂಬಾತನಿಂದ ಏಳು ಉಗ್ರರು ಪ್ರತಿಜ್ಞೆ ಪಡೆದುಕೊಂಡಿದ್ದರು. ಭಾರತದಾದ್ಯಂತ ಐಸಿಸ್‌ ಜಾಲವನ್ನು ವಿಸ್ತರಿಸುವುದಾಗಿ ಇವರು ಪ್ರತಿಜ್ಞೆ ಸ್ವೀಕರಿಸಿದ್ದರು. ಐಸಿಸ್‌ ಉಗ್ರ ಸಂಘಟನೆಯ ಜತೆ ನಿರಂತರವಾಗಿ ಇವರು ಸಂಪರ್ಕದಲ್ಲಿದ್ದರು. ಜಿಲ್ಲೆಗಳಲ್ಲಿ ಸ್ಲೀಪರ್ ಸೆಲ್‌ಗಳನ್ನು ಬಳಸಿ ಗೆರಿಲ್ಲಾ ಮಾದರಿಯ ದಾಳಿಗೆ ಷಡ್ಯಂತ್ರ ಮಾಡಿದ್ದರು. ಸುಧಾರಿತ ಸ್ಫೋಟಕ ಸಾಧನಗಳ (IED) ಮೂಲಕ ದಾಳಿ ನಡೆಸುವುದು, ಬಳ್ಳಾರಿಯನ್ನು ಉಗ್ರ ಸಂಘಟನೆಯ ಜಾಲದ ಪ್ರಮುಖ ಕೇಂದ್ರವನ್ನಾಗಿ ರೂಪಿಸುವುದು, ಇಲ್ಲಿಯೇ ಪ್ರಾಯೋಗಿಕವಾಗಿ ಸ್ಫೋಟಿಸುವುದು ಸೇರಿ ಹಲವು ಕುತಂತ್ರಗಳನ್ನು ಹೆಣೆದಿದ್ದರು ಎಂದು ಎನ್‌ಐಎ ಅಧಿಕಾರಿಗಳು ಚಾರ್ಜ್‌ಶೀಟ್‌ನಲ್ಲಿ ಉಲ್ಲೇಖಿಸಿದ್ದಾರೆ.

ಬಂಧಿತ ಉಗ್ರರು 2025ರ ವೇಳೆಗೆ ಪ್ರತಿಯೊಂದು ಜಿಲ್ಲೆಯಲ್ಲಿ ಸ್ಲೀಪರ್‌ಸೆಲ್‌ಗಳನ್ನು ನೇಮಿಸುವ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ಸಮರ ಸಾರುವ ಉದ್ದೇಶ ಹೊಂದಿದ್ದರು. ಧಾರ್ಮಿಕ ಮುಖಂಡರು, ದೇಶದ ಯೋಧರು, ಪೊಲೀಸರು ಸೇರಿ ಹಲವರನ್ನು ಗುರಿಯಾಗಿಸಿಕೊಂಡು ದಾಳಿ ಮಾಡುವ ಉದ್ದೇಶ ಹೊಂದಿದ್ದರು ಎಂದು ತಿಳಿದುಬಂದಿದೆ. ಇವರ ಬಳಿಯಿಂದ ಹಲವು ಡಿವೈಸ್‌ಗಳ ಜತೆಗೆ ಜಿಹಾದ್‌ ಕುರಿತ ಪುಸ್ತಕಗಳನ್ನೂ ವಶಪಡಿಸಿಕೊಳ್ಳಲಾಗಿದೆ ಎಂದು ತಿಳಿದುಬಂದಿದೆ.

ಇದನ್ನೂ ಓದಿ: NIA Raid: ಮಧ್ಯಪ್ರದೇಶದಲ್ಲಿ ಐಸಿಸ್‌ ಉಗ್ರರ ಜಾಲ ಬಯಲು; ಮಸೀದಿಗಳಲ್ಲೇ ಸಂಚು ರೂಪಿಸುತ್ತಿದ್ದ ಮೂವರ ಬಂಧನ

Continue Reading
Advertisement
Narendra Modi
ಪ್ರಮುಖ ಸುದ್ದಿ7 mins ago

Narendra Modi: ಜಿ-7 ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಇಟಲಿಯ ಅಪುಲಿಯಾಗೆ ತಲುಪಿದ ಪ್ರಧಾನಿ ಮೋದಿ

karnataka weather Forecast
ಮಳೆ26 mins ago

Karnataka Weather : ಬೆಂಗಳೂರಲ್ಲಿ ಮುಂದುವರಿಯಲಿದೆ ಭರ್ಜರಿ ಮಳೆ; ಈ 7 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌

Amith Shah
ಪ್ರಮುಖ ಸುದ್ದಿ34 mins ago

Amit Shah: ತಮಿಳಿಸೈಗೆ ಅಮಿತ್ ಶಾ ಬೈಗುಳದ ವಿಡಿಯೋ; ವಿವಾದಕ್ಕೆ ತೆರೆ ಎಳೆದ ತಮಿಳುನಾಡು ಬಿಜೆಪಿ ನಾಯಕಿ

Leg Cramps At Night
ಆರೋಗ್ಯ56 mins ago

Leg Cramps At Night: ರಾತ್ರಿ ಮಲಗಿದಾಗ ಕಾಡುವ ಕಾಲುನೋವಿಗೆ ಇದೆ ಪರಿಹಾರ!

Dina Bhavishya
ಭವಿಷ್ಯ2 hours ago

Dina Bhavishya: ಉದ್ಯೋಗದ ಸ್ಥಳದಲ್ಲಿ ನಿಮ್ಮ ವಿರುದ್ಧ ಪಿತೂರಿ ಮಾಡುವುವರ ಬಗ್ಗೆ ಎಚ್ಚರಿಕೆ ಇರಲಿ

Jammu Kashmir
ದೇಶ7 hours ago

Jammu Kashmir: ಕಾಶ್ಮೀರದಲ್ಲಿ ಮತ್ತೊಂದು ದುರಂತ; ಸೇನಾ ವಾಹನ ಕಣಿವೆಗೆ ಬಿದ್ದು ಯೋಧ ಸಾವು, ನಾಲ್ವರಿಗೆ ಗಾಯ

Forest department agrees to give 500 acres for yEttina hole project work says DCM DK Shivakumar
ಕರ್ನಾಟಕ7 hours ago

DK Shivakumar: ಎತ್ತಿನಹೊಳೆ ಕಾಮಗಾರಿಗೆ 500 ಎಕರೆ ನೀಡಲು ಅರಣ್ಯ ಇಲಾಖೆ ಒಪ್ಪಿಗೆ

Maharaj
ಸಿನಿಮಾ7 hours ago

Maharaj: ಹಿಂದುಗಳಿಗೆ ಅವಮಾನ; ಆಮೀರ್‌ ಖಾನ್‌ ಪುತ್ರನ ‘ಮಹಾರಾಜ್’‌ ಸಿನಿಮಾ ಬಿಡುಗಡೆಗೆ ಕೋರ್ಟ್‌ ತಡೆ

ISIS Terrorists
ಕರ್ನಾಟಕ8 hours ago

ದೇಶದ ಪ್ರತಿ ಜಿಲ್ಲೆಗೂ ಉಗ್ರರ ನೇಮಿಸಲು ಬಳ್ಳಾರಿಯಲ್ಲಿ ಸಂಚು; ಎನ್‌ಐಎ ಚಾರ್ಜ್‌ಶೀಟ್‌ನಲ್ಲಿ ಸ್ಫೋಟಕ ಮಾಹಿತಿ!

Actress Ramya
ಕರ್ನಾಟಕ9 hours ago

Actress Ramya: ಕಾನೂನಿಗಿಂತ ಯಾರೂ ದೊಡ್ಡೋರಲ್ಲ; ದರ್ಶನ್‌ಗೆ ಮತ್ತೆ ನಟಿ ರಮ್ಯಾ ಕ್ಲಾಸ್!

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka weather Forecast
ಮಳೆ3 days ago

Karnataka Weather : ಭಾರಿ ಮಳೆಗೆ ಗುಡ್ಡದಿಂದ ಉರುಳಿ ಬಿದ್ದ ಬಂಡೆಗಲ್ಲು; ಬೆಂಗಳೂರಲ್ಲೂ ಸಂಜೆ ವರ್ಷಧಾರೆ

actor Darshan
ಚಿತ್ರದುರ್ಗ3 days ago

Actor Darshan: ರೇಣುಕಾ ಸ್ವಾಮಿ ಕೊಲೆ ಕೇಸ್‌ನಲ್ಲಿ ದರ್ಶನ್‌ ಅರೆಸ್ಟ್‌; ಪ್ರಕರಣವನ್ನು ಸಿಬಿಐಗೆ ವಹಿಸಲು ಒತ್ತಾಯ

Actor Darshan gets a series of questions from the police
ಸಿನಿಮಾ3 days ago

Actor Darshan : ಪವಿತ್ರಗೌಡ ಬಗ್ಗೆ ಪೋಸ್ಟ್‌ ಮಾಡಿದ್ರೆ ನಿಮಗ್ಯಾಕೆ ಕೋಪ? ದರ್ಶನ್‌ಗೆ ಪೊಲೀಸರ ಪ್ರಶ್ನೆಗಳ ಸುರಿಮಳೆ

Actor Darshan
ಸಿನಿಮಾ3 days ago

Actor Darshan : ದರ್ಶನ್‌ ಜೈಲಿಗೆ ಹೋಗುತ್ತಿರುವುದು ಇದೇ ಮೊದಲಲ್ಲ; ನಟನ ಮೇಲಿವೆ ಹತ್ತಾರು ಕೇಸ್‌ಗಳು!

Saptami Gowda
ಸಿನಿಮಾ3 days ago

Saptami Gowda : ಯುವ ಪತ್ನಿ ಶ್ರೀದೇವಿ ವಿರುದ್ಧ ಮಾನಹಾನಿ ಕೇಸ್; ಕಾನೂನು ಹೋರಾಟಕ್ಕೆ ಮುಂದಾದ ನಟಿ ಸಪ್ತಮಿ ಗೌಡ!

Karnataka weather Forecast
ಮಳೆ4 days ago

Karnataka Weather : ಭಾರಿ ಮಳೆಗೆ ಮನೆ ಗೋಡೆ ಕುಸಿದು ಎಮ್ಮೆಗಳು ಸಾವು; ಆಕಳಿನ ಜೀವ ತೆಗೆದ ವಿದ್ಯುತ್‌ ತಂತಿ

Karnataka weather Forecast
ಮಳೆ6 days ago

Karnataka weather : ಮಳೆಯಲ್ಲೆ ತಪಸ್ಸಿಗೆ ಕುಳಿತ ವೃದ್ಧ; ಇನ್ನೊಂದು ವಾರ ನಾನ್‌ ಸ್ಟಾಪ್‌ ವರುಣನ ಅಬ್ಬರ

Sigandur launch
ಶಿವಮೊಗ್ಗ7 days ago

Sigandur launch: ಸಿಗಂದೂರು ಲಾಂಚ್‌ನಲ್ಲಿ ಭಾರಿ ವಾಹನಗಳಿಗೆ ನಿರ್ಬಂಧ

Karnataka Rain
ಮಳೆ1 week ago

Karnataka Rain : ಭಾರಿ ಮಳೆಗೆ ಮರ ಬಿದ್ದು ಮೇಕೆಗಳು ಸಾವು; ಸಿಡಿಲಿಗೆ ಎಲೆಕ್ಟ್ರಿಕ್‌ ಅಂಗಡಿ ಸುಟ್ಟು ಭಸ್ಮ

Lok Sabha Election Result 2024 Live
ದೇಶ1 week ago

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶದ ಲೈವ್‌ ಇಲ್ಲಿ ವೀಕ್ಷಿಸಿ

ಟ್ರೆಂಡಿಂಗ್‌