Sensex | ಸೆನ್ಸೆಕ್ಸ್‌ 113 ಅಂಕ ಏರಿಕೆ, ನಿಫ್ಟಿ 39 ಅಂಕ ಚೇತರಿಕೆ - Vistara News

ವಾಣಿಜ್ಯ

Sensex | ಸೆನ್ಸೆಕ್ಸ್‌ 113 ಅಂಕ ಏರಿಕೆ, ನಿಫ್ಟಿ 39 ಅಂಕ ಚೇತರಿಕೆ

ಅಮೆರಿಕದಲ್ಲಿ ಫೆಡರಲ್‌ ರಿಸರ್ವ್‌ ಬಡ್ಡಿ ದರ ಏರಿಸಿದ್ದರೂ, ಭಾರತೀಯ ಷೇರು ಮಾರುಕಟ್ಟೆ (Sensex) ಅಲ್ಪ ಏರಿಳಿತ ದಾಖಲಿಸಿ ಪ್ರಬುದ್ಧತೆಯನ್ನು ತೋರಿಸಿದೆ ಎನ್ನುತ್ತಾರೆ ಮಾರುಕಟ್ಟೆ ತಜ್ಞರು.

VISTARANEWS.COM


on

stock invest
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮುಂಬಯಿ: ಅಮೇರಿಕಾದ ಫೆಡರಲ್ ಬ್ಯಾಂಕ್ ಬಡ್ಡಿದರ ಹೆಚ್ಚಳದವಾಗಿದ್ದರಿಂದ ಜಾಗತಿಕವಾಗಿ ಷೇರುಪೇಟೆ ಅಸ್ಥಿರತೆ ಮುಂದುವರೆದಿದ್ದು (Sensex) ಇದರ ಪರಿಣಾಮ ಭಾರತದ ಮಾರುಕಟ್ಟೆಯಲ್ಲೂ ಮುಂದುವರೆದಿದೆ. ಆದಕಾರಣ ಇಂದು ಮಾರುಕಟ್ಟೆ ಅಲ್ಪ ಪ್ರಮಾಣದಲ್ಲಿ ಏರಿಳಿತ ದಾಖಲಿಸಿತು.
ನಿಫ್ಟಿ ಕೇವಲ 1 ಅಂಕಗಳ ಏರಿಕೆಯೊಂದಿಗೆ 18053 ರಲ್ಲಿ ಪ್ರಾರಂಭವಾದರೆ, ಸೆನ್ಸೆಕ್ಸ್ 138 ಅಂಶಗಳ ಇಳಿಕೆಯೊಂದಿಗೆ 60698 ರಲ್ಲಿ ಆರಂಭವಾಯಿತು. ಬ್ಯಾಂಕ್ ನಿಫ್ಟಿ 16 ಅಂಕಗಳ ಏರಿಕೆಯೊಂದಿಗೆ 41314 ರಲ್ಲಿ ಶುರುವಾಯಿತು. ನಿಫ್ಟಿ ಕೇವಲ 125 ಅಂಕಗಳ ನಡೆವೆ ವಹಿವಾಟು ನಡೆಸಿತು. ನಿಫ್ಟಿ ಮತ್ತು ಬ್ಯಾಂಕ್ ನಿಫ್ಟಿ ಆರಂಭದಿಂದಲೂ ಇಳಿಮುಖವಾಗುತ್ತಲೇ ಸಾಗಿತ್ತು, ಆದರೆ ವಹಿವಾಟಿನ ಕೊನೆಯ 1 ಗಂಟೆ ಅವಧಿಯಲ್ಲಿ ವಿದೇಶಿ ಸಾಂಸ್ಥಿಕ ಹೂಡಿಕೆದಾರರಿಂದ ಷೇರುಗಳಿಗೆ ಬೇಡಿಕೆ ವ್ಯಕ್ತವಾದ ಕಾರಣ ನಿಫ್ಟಿ ಸಕಾರಾತ್ಮಕವಾಗಿ ಅಂತ್ಯಕಂಡಿತು.
ದಿನದ ಅಂತ್ಯಕ್ಕೆ ನಿಫ್ಟಿ 64 ಅಂಕಗಳ ಏರಿಕೆಯೊಂದಿಗೆ 18117 ರಲ್ಲಿ ಮತ್ತು ಸೆನ್ಸೆಕ್ಸ್ 113 ಅಂಶಗಳ ಹೆಚ್ಚಳದೊಂದಿಗೆ 60950 ರಲ್ಲಿ ಮುಕ್ತಾಯವಾಯಿತು. ಆದರೆ ಬ್ಯಾಂಕ್ ನಿಫ್ಟಿ 39 ಅಂಕಗಳ ಇಳಿಕೆಯೊಂದಿಗೆ 41258 ರಲ್ಲಿ ಅಂತ್ಯಗೊಂಡಿತು.
ಸಣ್ಣ ಕಂಪನಿಗಳ ಸೂಚ್ಯಂಕ ಶೇ. 0.37 ರಷ್ಟು ಏರಿಕೆಯಾದರೆ ಮಧ್ಯಮ ಕಂಪನಿಗಳ ಸೂಚ್ಯಂಕ 0.32 ರಷ್ಟು ಇಳಿಕೆಯಾಯಿತು. ಲೋಹ ಮತ್ತು ಸಿಮೆಂಟ್ ಕಂಪನಿಗಳ ಷೇರುಗಳಿಗೆ ಭಾರಿ ಬೇಡಿಕೆ ವ್ಯಕ್ತವಾಯಿತು.
ಲೋಹ, ಮಾಧ್ಯಮ ಮತ್ತು ಸಾರ್ವಜನಿಕ ಕ್ಷೇತ್ರದ ಬ್ಯಾಂಕಿಂಗ್ ವಲಯದ ಸೂಚ್ಯಂಕಗಳು ಏರಿಕೆಯಾದರೆ, ಫಾರ್ಮಾ, ಐಟಿ ಮತ್ತು ಎಫ್ಎಂಸಿಜಿ ಸೂಚ್ಯಂಕಗಳು ಇಳಿಕೆಯಾದವು.
ವಿದೇಶಿ ಸಾಂಸ್ಥಿಕ ಹೂಡಿಕೆದಾರರು ತಮ್ಮ ಕೊಳ್ಳುವಿಕೆಯನ್ನು ಮುಂದುವರೆಸಿದ್ದು ಇಂದು 1436 ಕೋಟಿ ರೂ ಮೌಲ್ಯದ ಷೇರುಗಳನ್ನು ಕೊಂಡುಕೊಂಡಿದ್ದಾರೆ. ದೇಶಿ ಸಾಂಸ್ಥಿಕ ಹೂಡಿಕೆದಾರರು 548 ಕೋಟಿ ರೂ ಮೌಲ್ಯದ ಷೇರುಗಳನ್ನು ಮಾರಾಟ ಮಾಡಿದ್ದಾರೆ. ಇಂದು ಬೆಳ್ಳಿ 1224 ರೂ ಮತ್ತು ಚಿನ್ನ 364 ರೂ ಹೆಚ್ಚಳವಾಗಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ತಂತ್ರಜ್ಞಾನ

Four Digit PIN: ಇಂಥ ಪಿನ್ ನಂಬರ್ ಕೊಡ್ತಾ ಇದ್ದೀರಾ? ನಿಮ್ಮ ದುಡ್ಡಿಗೆ ಕಾದಿದೆ ಅಪಾಯ!

ಸಾಮಾನ್ಯವಾಗಿ 1234, 0000, ಜನ್ಮ ದಿನಾಂಕ ಅಥವಾ ಫೋನ್ ಸಂಖ್ಯೆಯಂತಹ ವೈಯಕ್ತಿಕ ಮಾಹಿತಿಯನ್ನು ಆಧರಿಸಿದಂತಹ ದುರ್ಬಲ ಪಿನ್ ನಂಬರ್ (Four Digit PIN) ಅನ್ನು ಹೊಂದಿದ್ದರೆ ನಮ್ಮ ವಯಕ್ತಿಕ ಮಾಹಿತಿಗಳು ಸುಲಭವಾಗಿ ಸೈಬರ್ ದಾಳಿಕೋರರಿಗೆ ಲಭ್ಯವಾಗುವುದು.

VISTARANEWS.COM


on

By

Four Digit PIN
Koo

ಸಾಮಾನ್ಯವಾಗಿ ನಾವು ನಾಲ್ಕು ಅಂಕೆಯ (Four Digit PIN) ಪಿನ್ ನಂಬರ್ ಹಾಕಬೇಕಾದಾಗ ನಮಗೆ ಸುಲಭವಾಗಿ ನೆನಪಿಟ್ಟುಕೊಳ್ಳಬಹುದಾದ ಅಂಕೆಗಳನ್ನು (numbers) ಹಾಕುತ್ತೇವೆ. ಆದರೆ ಇದು ತುಂಬಾ ಅಪಾಯಕಾರಿ. ಯಾಕೆಂದರೆ ಸುಲಭವಾದ ಪಿನ್ ಸಂಖ್ಯೆಯು ಶೀಘ್ರದಲ್ಲಿ ಸೈಬರ್ ವಂಚಕರ (cyber attacks) ಪಾಲಾಗಬಹುದು. ಹೀಗಾಗಿ ಅತ್ಯಂತ ಸರಳ ಪಿನ್ ಗಳನ್ನು ನೀವು ಯಾವುದೇ ಉದ್ದೇಶಕ್ಕೆ ಬಳಸಿದ್ದರೆ ಕೂಡಲೇ ಅದನ್ನು ಬದಲಾಯಿಸುವುದು ಒಳ್ಳೆಯದು.

ಸಾಮಾನ್ಯವಾಗಿ ನಾವು 1234 ಅಥವಾ 0000 ಅಥವಾ ಜನ್ಮ ದಿನಾಂಕ (date of birth) ಅಥವಾ ಫೋನ್ ಸಂಖ್ಯೆಯಂತಹ (phone number) ವೈಯಕ್ತಿಕ ಮಾಹಿತಿಯನ್ನು ಆಧರಿಸಿದಂತಹ ದುರ್ಬಲ ಪಿನ್ ನಂಬರ್ ಅನ್ನು ನಾವು ಹೊಂದಿರುತ್ತೇವೆ. ಇದು ಸೈಬರ್ ದಾಳಿಕೋರರಿಗೆ ಸುಲಭವಾಗಿ ಸಿಗುತ್ತದೆ.

ವರ್ಷದಿಂದ ವರ್ಷಕ್ಕೆ ಸೈಬರ್ ದಾಳಿಗಳು ಹೆಚ್ಚಾಗುತ್ತಲೇ ಇದೆ. 2024 ರ ಮೊದಲ ತ್ರೈಮಾಸಿಕದಲ್ಲಿ ಸೈಬರ್ ದಾಳಿಯ ಪ್ರಮಾಣ ಶೇ. 33ರಷ್ಟು ಹೆಚ್ಚಾಗಿದೆ. ಭಾರತವು ವಿಶ್ವದಲ್ಲೇ ಅತೀ ಹೆಚ್ಚು ಸೈಬರ್ ದಾಳಿಗೆ ಒಳಗಾದ ರಾಷ್ಟ್ರಗಳಲ್ಲಿ ಒಂದಾಗಿದೆ ಎಂದು ಚೆಕ್ ಪಾಯಿಂಟ್ ಸಾಫ್ಟ್‌ವೇರ್ ಟೆಕ್ನಾಲಜೀಸ್ ಲಿಮಿಟೆಡ್ ವರದಿ ತಿಳಿಸಿದೆ.

ಕಂಪ್ಯೂಟರ್ ವ್ಯವಸ್ಥೆಗಳು, ನೆಟ್‌ವರ್ಕ್‌ಗಳಲ್ಲಿನ ದೌರ್ಬಲ್ಯಗಳನ್ನು ಕಂಡುಹಿಡಿಯುವ ಮೂಲಕ ಸೈಬರ್ ಅಪರಾಧಿಗಳು ಜನರ ವ್ಯವಹಾರ ಖಾತೆಗಳು ಮತ್ತು ಸರ್ಕಾರದ ಖಾತೆಗಳ ಮೇಲೆ ದಾಳಿ ನಡೆಸುತ್ತಾರೆ. ಸೂಕ್ಷ್ಮ ಮಾಹಿತಿಯನ್ನು ಕದಿಯಲು, ಬ್ಯಾಂಕ್ ಖಾತೆಗಳಿಂದ ಹಣವನ್ನು ದೋಚಲು ವಿವಿಧ ವಿಧಾನಗಳನ್ನು ಬಳಸುತ್ತಾರೆ.


ಏನು ಕಾರಣ?

ಸೈಬರ್ ದಾಳಿಯಲ್ಲಿ ದಿಢೀರ್ ಏರಿಕೆಗೆ ಮುಖ್ಯ ಕಾರಣ ನಾವು ಬಳಸುವ ದುರ್ಬಲ ಪಿನ್ ಗಳು. ಇದು ಯಾವುದೇ ವ್ಯವಸ್ಥೆಯನ್ನು ಉಲ್ಲಂಘಿಸಲು ಸುಲಭವಾದ ಮಾರ್ಗವಾಗಿದೆ. ದುರ್ಬಲವಾದ ಪಿನ್ “1234” ಅಥವಾ “0000” ನಂತಹ ಸ್ಪಷ್ಟವಾಗಿರಬಹುದು ಅಥವಾ ಜನ್ಮ ದಿನಾಂಕ ಅಥವಾ ಫೋನ್ ಸಂಖ್ಯೆಯಂತಹ ವೈಯಕ್ತಿಕ ಮಾಹಿತಿಯ ಆಧಾರದ ಮೇಲೆ ಸುಲಭವಾಗಿ ಊಹಿಸಬಹುದಾಗಿದೆ.

ಸಾಮಾನ್ಯವಾದ ಪಿನ್‌ಗಳು ಯಾವುವು?

ಸೈಬರ್‌ ಸೆಕ್ಯುರಿಟಿ ಅಧ್ಯಯನವು ಅನೇಕರು ತಮ್ಮ ಭದ್ರತಾ ಕೋಡ್‌ಗಳಲ್ಲಿ ಸರಳ ಮಾದರಿಗಳ ಪಿನ್ ಗಳನ್ನು ಬಳಸುತ್ತಾರೆ ಎಂದು ತೋರಿಸಿದ್ದಾರೆ. ಪರೀಕ್ಷಿಸಿದ 3.4 ಮಿಲಿಯನ್ ಪಿನ್‌ಗಳಲ್ಲಿ ಸಾಮಾನ್ಯ ಮಾದರಿಗಳು ಹೀಗಿವೆ.

1234, 1111, 0000, 1212, 7777, 1004, 2000, 4444, 2222, 6969 ಈಗಾಗಲೇ ಈ ಮಾದರಿಯ ಪಿನ್ ಗಳು ಸೈಬರ್ ದಾಳಿಗೆ ತುತ್ತಾಗಿದ್ದು, ಯಾರಾದರೂ ಈಗಲೂ ಇಂತಹ ಪಿನ್ ಬಳಸುತ್ತಿದ್ದಾರೆ ಬದಲಾಯಿಸಿಕೊಳ್ಳುವುದು ಒಳ್ಳೆಯದು.
ಸರಳವಾದ ಅಥವಾ ಸುಲಭವಾಗಿ ಊಹಿಸಬಹುದಾದ ಪಿನ್ ಅನ್ನು ಆಯ್ಕೆ ಮಾಡುವುದರಿಂದ ಸೈಬರ್ ಅಪರಾಧಿಗಳಿಗೆ ನೀವು ಸುಲಭ ಗುರಿಯಾಗಬಹುದು. ನಿಮ್ಮ ಖಾತೆಗಳು ಮತ್ತು ಸಾಧನಗಳನ್ನು ರಕ್ಷಿಸಲು ಪಿನ್ ಅನ್ನು ಆಯ್ಕೆ ಮಾಡುವಾಗ ಸುರಕ್ಷತೆಗೆ ಆದ್ಯತೆ ನೀಡುವುದು ಮುಖ್ಯವಾಗಿದೆ. ಬಲವಾದ, ವಿಶಿಷ್ಟವಾದ ಪಿನ್ ಸೂಕ್ಷ್ಮ ಮಾಹಿತಿಗೆ ಅನಧಿಕೃತ ಪ್ರವೇಶದ ಅಪಾಯವನ್ನು ಗಣನೀಯವಾಗಿ ಕಡಿಮೆ ಮಾಡುತ್ತದೆ.

ಇಎಸ್ ಇ ಟಿ ಸೈಬರ್ ಸೆಕ್ಯುರಿಟಿ ತಜ್ಞ, ಜೇಕ್ ಮೂರ್, ಸರಳವಾದ ಪಾಸ್‌ಕೋಡ್‌ಗಳನ್ನು ಬಳಸದಂತೆ ಸಲಹೆ ನೀಡಿದ್ದಾರೆ. ಇದು ಜನರನ್ನು ಸೈಬರ್‌ಟಾಕ್‌ಗಳಿಗೆ ಗುರಿಯಾಗಿಸಬಹುದು ಎಂದು ಡೈಲಿ ಮೇಲ್ ವರದಿ ಮಾಡಿದೆ.

ಪರಿಣಿತ ಹ್ಯಾಕರ್‌ಗಳು ಸೀಮಿತ ಸಂಖ್ಯೆಯ ಪ್ರಯತ್ನಗಳಲ್ಲಿ ಪಾಸ್ಕೋಡ್ ಗಳನ್ನು ಊಹಿಸಿ ಶೀಘ್ರದಲ್ಲೇ ಖಾತೆಗಳಿಗೆ, ವಯಕ್ತಿಕ ಮಾಹಿತಿಗಳ ಮೇಲೆ ಕನ್ನ ಹಾಕಬಹುದು. ಸಾಮಾಜಿಕ ಮಾಧ್ಯಮ ಸೇರಿದಂತೆ ವೈಯಕ್ತಿಕ ಖಾತೆಗಳಿಗೆ ಜನ್ಮ ವರ್ಷಗಳು, ವೈಯಕ್ತಿಕ ಮಾಹಿತಿ ಅಥವಾ ಪುನರಾವರ್ತಿತ ಪಾಸ್‌ವರ್ಡ್‌ಗಳನ್ನು ಬಳಸದಂತೆ ಜಾಗತಿಕ ಸೈಬರ್‌ ಸೆಕ್ಯುರಿಟಿ ಸಲಹೆಗಾರರು ಶಿಫಾರಸು ಮಾಡುತ್ತಾರೆ. ಸುಲಭವಾಗಿ ಊಹಿಸಬಹುದಾದ ಪಿನ್‌ಗಳನ್ನು ಬಳಸುವುದರಿಂದ ಜನರು ಸುಲಭವಾಗಿ ದಾಳಿಕೋರರು ಬಲಿಯಾಗುತ್ತಾರೆ.

ಇದನ್ನೂ ಓದಿ: Google Update: ಕೃತಕ ಬುದ್ಧಿಮತ್ತೆ, ವಂಚನೆ ತಡೆಯಲು ಅಲರ್ಟ್‌; ಗೂಗಲ್‌ ಹೊಸ ಘೋಷಣೆಗಳು ಏನೇನು?

ಕಡಿಮೆ ಬಳಕೆಯ ಸಾಮಾನ್ಯ ಪಿನ್

ಕಡಿಮೆ ಬಳಸುವ ಆದರೆ ತೀರಾ ಸಾಮಾನ್ಯವಾದ 4-ಅಂಕಿಯ ಪಿನ್‌ಗಳು ಹೀಗಿವೆ. 8557, 8438, 9539,7063, 6827, 0859, 6793, 0738, 6835.

ಸಾಕಷ್ಟು ಮುನ್ನೆಚ್ಚರಿಕೆಗಳನ್ನು ವಹಿಸಿದ್ದರೂ ಪಾಸ್‌ಕೋಡ್‌ಗಳನ್ನು ಹ್ಯಾಕ್ ಮಾಡಬಹುದು. ಆದ್ದರಿಂದ ಹೆಚ್ಚುವರಿ ಭದ್ರತೆಗಾಗಿ ಪಾಸ್‌ವರ್ಡ್ ನಿರ್ವಾಹಕರನ್ನು ಬಳಸಲು ಶ್ರೀ ಮೂರ್ ಸಲಹೆ ನೀಡಿದ್ದಾರೆ. ಇದರಿಂದ ವೈಯಕ್ತಿಕ ಮಾಹಿತಿಯನ್ನು ರಕ್ಷಿಸಬಹುದು ಮತ್ತು ಸಂಪೂರ್ಣವಾಗಿ ಯಾದೃಚ್ಛಿಕ ಕೋಡ್‌ಗಳನ್ನು ರಚಿಸಲು ಸಹಾಯ ಮಾಡಬಹುದು ಎಂದು ಅವರು ತಿಳಿಸಿದ್ದಾರೆ.

Continue Reading

ದೇಶ

Reliance Retail: ರಿಲಯನ್ಸ್‌ ರಿಟೇಲ್‌ನಲ್ಲಿ ಎಎಸ್‌ಒಎಸ್‌ ಬ್ರ್ಯಾಂಡ್‌ನ ಉತ್ಪನ್ನಗಳು ಈಗ ಲಭ್ಯ

Reliance Retail: ಬ್ರಿಟನ್‌ನ ಪ್ರಮುಖ ಆನ್‌ಲೈನ್‌ ಫ್ಯಾಷನ್‌ ಕಂಪನಿ ಎಎಸ್‌ಒಎಸ್‌ ನ (ಎಸೋಸ್‌) ಉತ್ಪನ್ನಗಳನ್ನು ಭಾರತದಲ್ಲಿ ಮಾರಾಟ ಮಾಡಲು ರಿಲಯನ್ಸ್‌ ರಿಟೇಲ್‌ ಕಂಪನಿಯು ದೀರ್ಘಾವಧಿಯ ಪಾಲುದಾರಿಕೆ ಮಾಡಿಕೊಂಡಿದ್ದು, ಈ ಒಪ್ಪಂದದ ಪ್ರಕಾರ ರಿಲಯನ್ಸ್‌ ರಿಟೇಲ್‌ ಕಂಪನಿಯು ಭಾರತದಲ್ಲಿ ತನ್ನ ಆನ್‌ಲೈನ್‌ ಮತ್ತು ಆಫ್‌ಲೈನ್‌ ಪ್ಲಾಟ್‌ಫಾರಂಗಳಲ್ಲಿ (ASOS) ಎಎಸ್‌ಒಎಸ್‌ನ ಉತ್ಪನ್ನಗಳು ಲಭ್ಯವಾಗುವಂತೆ ಮಾಡಲಿದೆ. ಎಎಸ್‌ಒಎಸ್‌ ಕಂಪನಿಯು ಜಗತ್ತಿನಾದ್ಯಂತ ಯುವ ಪೀಳಿಗೆಯಲ್ಲಿ ಜನಪ್ರಿಯವಾಗಿದ್ದು, 200ಕ್ಕೂ ಅಧಿಕ ಮಾರುಕಟ್ಟೆಗಳಲ್ಲಿ ಕಂಪನಿಯ ಉತ್ಪನ್ನಗಳು ಲಭ್ಯವಿವೆ.

VISTARANEWS.COM


on

ASOS brand products are available at Reliance Retail
Koo

ನವದೆಹಲಿ: ಬ್ರಿಟನ್‌ನ ಪ್ರಮುಖ ಆನ್‌ಲೈನ್‌ ಫ್ಯಾಷನ್‌ ಕಂಪನಿ ಎಎಸ್‌ಒಎಸ್‌ ನ (ಎಸೋಸ್‌) ಉತ್ಪನ್ನಗಳನ್ನು ಭಾರತದಲ್ಲಿ ಮಾರಾಟ ಮಾಡಲು ರಿಲಯನ್ಸ್‌ ರಿಟೇಲ್‌ (Reliance Retail) ಕಂಪನಿಯು ದೀರ್ಘಾವಧಿಯ ಪಾಲುದಾರಿಕೆ ಮಾಡಿಕೊಂಡಿದ್ದು, ಈ ಒಪ್ಪಂದದ ಪ್ರಕಾರ, ರಿಲಯನ್ಸ್‌ ರಿಟೇಲ್‌ ಕಂಪನಿಯು ಭಾರತದಲ್ಲಿ ತನ್ನ ಆನ್‌ಲೈನ್‌ ಮತ್ತು ಆಫ್‌ಲೈನ್‌ ಪ್ಲಾಟ್‌ಫಾರಂಗಳಲ್ಲಿ (ASOS) ಎಎಸ್‌ಒಎಸ್‌ನ ಉತ್ಪನ್ನಗಳು ಲಭ್ಯವಾಗುವಂತೆ ಮಾಡಲಿದೆ.

ಎಎಸ್‌ಒಎಸ್‌ ಕಂಪನಿಯು ಜಗತ್ತಿನಾದ್ಯಂತ ಯುವ ಪೀಳಿಗೆಯಲ್ಲಿ ಜನಪ್ರಿಯವಾಗಿದ್ದು, 200ಕ್ಕೂ ಅಧಿಕ ಮಾರುಕಟ್ಟೆಗಳಲ್ಲಿ ಕಂಪನಿಯ ಉತ್ಪನ್ನಗಳು ಲಭ್ಯವಿವೆ.

ಇದನ್ನೂ ಓದಿ: Udupi News: ಮೂವರು ಸಾಧಕರಿಗೆ ಭಂಡಾರಕೇರಿ ಮಠದ ಪ್ರಶಸ್ತಿ; ಬೆಂಗಳೂರಿನಲ್ಲಿ ಮೇ 20ರಂದು ಪ್ರಶಸ್ತಿ ಪ್ರದಾನ

ಈ ಕುರಿತು ರಿಲಿಯನ್ಸ್‌ ರಿಟೇಲ್‌ ವೆಂಚರ್ಸ್‌ನ ನಿರ್ದೇಶಕಿ ಇಶಾ ಅಂಬಾನಿ ಮಾತನಾಡಿ, ನಮ್ಮ ಫ್ಯಾಷನ್‌ ಕುಟುಂಬಕ್ಕೆ ಎಎಸ್‌ಒಎಸ್‌ ಅನ್ನು ಸ್ವಾಗತಿಸುತ್ತೇವೆ. ಜಾಗತಿಕ ಫ್ಯಾಷನ್‌ ಅನ್ನು ಭಾರತದ ಮಾರುಕಟ್ಟೆಗೆ ತರುವ ನಿಟ್ಟಿನಲ್ಲಿ ಇದೊಂದು ಮಹತ್ವದ ಮೈಲಿಗಲ್ಲು. ಭಾರತದ ರಿಟೇಲ್‌ ಮಾರುಕಟ್ಟೆಯಲ್ಲಿ ನಮಗಿರುವ ಸ್ಥಾನವನ್ನು ಈ ಪಾಲುದಾರಿಕೆಯು ಸೂಚಿಸುತ್ತದೆ. ಅಲ್ಲದೆ, ನಮ್ಮ ಗ್ರಾಹಕರು ಬಯಸುವ ಫ್ಯಾಷನ್‌ ಉತ್ಪನ್ನಗಳನ್ನು ಅವರಿಗೆ ಒದಗಿಸುವ ಖಾತರಿಯನ್ನೂ ನೀಡುತ್ತದೆ ಎಂದು ತಿಳಿಸಿದರು.

ಈ ಬಗ್ಗೆ ಎಎಸ್‌ಒಎಸ್‌ (ASOS) ನ ಸಿಇಒ ಜೋಸ್‌ ಆಂಟೋನಿಯೋ ಮಾತನಾಡಿ, ರಿಲಯನ್ಸ್‌ ರಿಟೇಲ್‌ ಜತೆಗೂಡಿ ನಮ್ಮ ಫ್ಯಾಷನ್‌ ಬ್ರ್ಯಾಂಡ್‌ಗಳಲ್ಲಿ ಕೆಲವೊಂದನ್ನು ನಾವು ಭಾರತದ ಗ್ರಾಹಕರಿಗೆ ನೀಡಲು ಉತ್ಸುಕರಾಗಿದ್ದೇವೆ. ಮುಖ್ಯವಾಗಿ ಜಗತ್ತಿನಲ್ಲಿಯೇ ಬ್ರಿಟಿಷ್‌ ಫ್ಯಾಷನ್‌ ಬ್ರ್ಯಾಂಡ್‌ಗಳಲ್ಲಿ ಒಂದಾಗಿರುವ ಎಎಸ್‌ಒಎಸ್‌ ವಿನ್ಯಾಸವನ್ನು ನೀಡಲು ಕಾತುರರಾಗಿದ್ದೇವೆ ಎಂದು ಹೇಳಿದರು.

ಇದನ್ನೂ ಓದಿ: Bengaluru News: ವ್ಯಾಸ-ದಾಸ ಸಾಹಿತ್ಯ ಜ್ಞಾನ ಪ್ರಸಾರಕ್ಕೆ ಮಾನ್ಯತೆ ನೀಡಿ; ಶ್ರೀ ವಿದ್ಯೇಶತೀರ್ಥ ಸ್ವಾಮೀಜಿ

ಆರ್‌ಐಎಲ್‌ (ರಿಲಯನ್ಸ್‌ ಇಂಡಸ್ಟ್ರೀಸ್‌ ಲಿಮಿಟೆಡ್‌) ಸಮೂಹದ ಎಲ್ಲಾ ರೀಟೇಲ್‌ ಕಂಪನಿಗಳನ್ನು ಒಳಗೊಂಡಿರುವ ಕಂಪನಿಯೇ ರಿಲಿಯನ್ಸ್‌ ರಿಟೇಲ್‌ ವೆಂಚರ್ಸ್‌ ಲಿಮಿಟೆಡ್‌ (ರಿಲಯನ್ಸ್‌ ರಿಟೇಲ್‌). ರಿಲಯನ್ಸ್‌ ರಿಟೇಲ್‌ 18,836ಕ್ಕೂ ಅಧಿಕ ಮಳಿಗೆಗಳು ಮತ್ತು ಡಿಜಿಟಲ್‌ ಇ-ಕಾಮರ್ಸ್‌ ಮೂಲಕ ಕಾರ್ಯಾಚರಿಸುತ್ತದೆ. ರಿಲಯನ್ಸ್‌ ರಿಟೇಲ್‌ ಕಂಪನಿಯು ತನ್ನ ಹೊಸ ವಾಣಿಜ್ಯ ಯೋಜನೆಯ ಭಾಗವಾಗಿ 30 ಲಕ್ಷಕ್ಕೂ ಅಧಿಕ ವ್ಯಾಪಾರಿಗಳೊಂದಿಗೆ ಪಾಲುದಾರಿಕೆ ಮಾಡಿಕೊಂಡಿದೆ.

Continue Reading

ಮನಿ-ಗೈಡ್

Money Guide: ಎನ್‌ಪಿಎಸ್‌ಗೆ 15 ವರ್ಷ; ಇಲ್ಲಿದೆ ಯೋಜನೆಯ ಸಂಪೂರ್ಣ ವಿವರ

Money Guide: ದೇಶದ ಜನರಲ್ಲಿನ ಉಳಿತಾಯ ಪ್ರವೃತ್ತಿಯನ್ನು ಉತ್ತೇಜಿಸಲು ಸರ್ಕಾರ ಜಾರಿಗೆ ತಂದ ಯೋಜನೆಗಳಲ್ಲಿ ರಾಷ್ಟ್ರೀಯ ಪಿಂಚಣಿ ಯೋಜನೆ ಕೂಡ ಒಂದು. 18ರಿಂದ 70 ವರ್ಷ ವಯಸ್ಸಿನವರು ಈ ಯೋಜನೆಯಲ್ಲಿ ಹೂಡಿಕೆ ಮಾಡಬಹುದು. ಜತೆಗೆ ಇದರಲ್ಲಿ ಹೂಡಿಕೆ ಮಾಡಿದರೆ ಹಲವು ರೀತಿಯ ತೆರಿಗೆ ಪ್ರಯೋಜನಗಳೂ ಲಭ್ಯ. ಇಂತಹ ಅತ್ಯುತ್ತಮ ಯೋಜನೆ ಜಾರಿಗೆ ಬಂದು ಇಂದಿಗೆ 15 ವರ್ಷ ಪೂರ್ಣಗೊಂಡಿದೆ. ಈ ಯೋಜನೆ ಕುರಿತಾದ ಕೆಲವು ಆಸಕ್ತಿದಾಯಕ ಸಂಗತಿಗಳ ವಿವರ ಇಲ್ಲಿದೆ

VISTARANEWS.COM


on

Money Guide
Koo

ಬೆಂಗಳೂರು: ದೇಶದ ಜನರಲ್ಲಿನ ಉಳಿತಾಯ ಪ್ರವೃತ್ತಿಯನ್ನು ಉತ್ತೇಜಿಸಲು ಸರ್ಕಾರ ಜಾರಿಗೆ ತಂದ ಯೋಜನೆಗಳಲ್ಲಿ ರಾಷ್ಟ್ರೀಯ ಪಿಂಚಣಿ ಯೋಜನೆ (NPS) ಕೂಡ ಒಂದು. 18ರಿಂದ 70 ವರ್ಷ ವಯಸ್ಸಿನವರು ಈ ಯೋಜನೆಯಲ್ಲಿ ಹೂಡಿಕೆ ಮಾಡಬಹುದು. ಜತೆಗೆ ಇದರಲ್ಲಿ ಹೂಡಿಕೆ ಮಾಡಿದರೆ ಹಲವು ರೀತಿಯ ತೆರಿಗೆ ಪ್ರಯೋಜನಗಳೂ ಲಭ್ಯ. ಇಂತಹ ಅತ್ಯುತ್ತಮ ಯೋಜನೆ ಜಾರಿಗೆ ಬಂದು ಇಂದಿಗೆ 15 ವರ್ಷ ಪೂರ್ಣಗೊಂಡಿದೆ. 2009ರ ಮೇ 1ರಂದು ಈ ಯೋಜನೆಯನ್ನು ದೇಶದಲ್ಲಿ ಜಾರಿಗೊಳಿಸಲಾಯಿತು. ಈ ಯೋಜನೆ ಕುರಿತಾದ ಕೆಲವು ಆಸಕ್ತಿದಾಯಕ ಸಂಗತಿಗಳ ವಿವರ ಇಲ್ಲಿದೆ (Money Guide).

ಭಾರತ ಸರ್ಕಾರ 2004ರ ಜನವರಿ 1ರಂದು ಎನ್‌ಪಿಎಸ್‌ ಅನ್ನು ಪರಿಚಯಿಸಿತು ಮತ್ತು ಐದು ವರ್ಷಗಳ ನಂತರ (2009) ಅದನ್ನು ಸಾರ್ವಜನಿಕರಿಗಾಗಿ ಮುಕ್ತಗೊಳಿಸಲಾಯಿತು. ಈ ಯೋಜನೆಯು ಭಾರತದ ನಾಗರಿಕರಿಗೆ ವೃದ್ಧಾಪ್ಯದ ಭದ್ರತೆಯಾಗಿ ಪಿಂಚಣಿ ಮತ್ತು ಹೂಡಿಕೆಯನ್ನು ಒದಗಿಸುವ ಗುರಿಯನ್ನು ಹೊಂದಿದೆ. ಇದನ್ನು ಪಿಂಚಣಿ ನಿಧಿ ನಿಯಂತ್ರಣ ಮತ್ತು ಅಭಿವೃದ್ಧಿ ಪ್ರಾಧಿಕಾರ (PFRDA) ನಿಯಂತ್ರಿಸುತ್ತದೆ.

ಯಾರೆಲ್ಲ ಅರ್ಹರು?

ಭಾರತೀಯ ಮತ್ತು ಆನಿವಾಸಿ ಭಾರತೀಯ ನಾಗರಿಕರು ಈ ಯೋಜನೆಯಲ್ಲಿ ಹೀಡಿಕೆ ಮಾಡಬಹುದಾಗಿದೆ. 18ರಿಂದ 70 ವರ್ಷದವರು ಈ ಯೋಜನೆಗೆ ಅರ್ಹರು. ವೃದ್ಧಾಪ್ಯ ಆದಾಯವನ್ನು ಒದಗಿಸುವುದು, ದೀರ್ಘಾವಧಿಯಲ್ಲಿ ಮಾರುಕಟ್ಟೆ ಆಧಾರಿತ ಆದಾಯ ನೀಡುವುದು ಮತ್ತು ಎಲ್ಲ ನಾಗರಿಕರಿಗೆ ವೃದ್ಧಾಪ್ಯ ಭದ್ರತಾ ವ್ಯಾಪ್ತಿಯನ್ನು ವಿಸ್ತರಿಸುವುದು ಕೂಡ ಈ ಯೋಜನೆಯ ಉದ್ದೇಶ.

ಎನ್‌ಆರ್‌ಐ ಕೂಡ ಹೂಡಿಕೆ ಮಾಡಬಹುದೆ?

ವಿಶೇಷ ಎಂದರೆ ಆನಿವಾಸಿ ಭಾರತೀಯರು ಕೂಡ ಈ ಯೋಜನೆಯಲ್ಲಿ ಹೂಡಿಕೆ ಮಾಡಬಹುದು. ಅದಾಗ್ಯೂ ಆರ್‌ಬಿಐ ಮತ್ತು ಫೆಮಾ ಸೂಚಿಸುವ ಷರತ್ತುಗಳು ಅನ್ವಯವಾಗುತ್ತವೆ. ಇನ್ನು ಒಸಿಐ (ಓವರ್‌ಸೀಸ್‌ ಸಿಟಿಜನ್ಸ್ ಆಫ್ ಇಂಡಿಯಾ) ಮತ್ತು ಪಿಐಒ (ಪರ್ಸನ್ ಆಫ್ ಇಂಡಿಯನ್ ಒರಿಜಿನ್) ಕಾರ್ಡ್ ಹೊಂದಿರುವವರು ಈ ಯೋಜನೆಗೆ ಅರ್ಹರಲ್ಲ.

ಎನ್‌ಪಿಎಸ್‌ ಖಾತೆ ತೆರೆಯುವುದು ಹೇಗೆ?

ಆಫ್‌ಲೈನ್‌

  • ನಿಮ್ಮ ಮನೆ ಹತ್ತಿರದ ಪಿಒಪಿ (PoP) ಅಥವಾ ಪೋಸ್ಟ್‌ ಆಫೀಸ್‌ಗೆ ತೆರಳಿ.
  • ಅಪ್ಲಿಕೇಷನ್‌ ಫಾರಂ ಭರ್ತಿ ಮಾಡಿ.
  • ಅಗತ್ಯ ಡಾಕ್ಯುಮೆಂಟ್‌ ಒದಗಿಸಿ.
  • ಟೈರ್‌ 1 ಖಾತೆಗೆ ಕನಿಷ್ಠ 500 ರೂ. ಹೂಡಿಕೆ ಮಾಡಿ.
  • ಅಪ್ಲಿಕೇಷನ್‌ ಫಾರಂ ಸಲ್ಲಿಸಿ.

ಆನ್‌ಲೈನ್‌

  • ಇಲ್ಲಿ ಕ್ಲಿಕ್‌ ಮಾಡಿ
  • ಹೆಸರು ನೋಂದಾಯಿಸಿ.
  • ಮೊಬೈಲ್‌ ನಂಬರ್‌, ಪ್ಯಾನ್‌ ಕಾರ್ಡ್‌ ನಂಬರ್‌ ಮತ್ತು ಇಮೇಲ್‌ ಐಡಿ ನಮೂದಿಸಿ.
  • ಮೊಬೈಲ್‌ಗೆ ಬಂದ ಒಟಿಪಿ ನಮೂದಿಸಿ.
  • ಅಗತ್ಯ ವಿವರಗಳನ್ನು ಭರ್ತಿ ಮಾಡಿ. ಈಗ ನಿಮಗೆ PRAN (Permanent Retirement Account Number) ಸಂಖ್ಯೆ ದೊರೆಯುತ್ತದೆ. ಇದನ್ನು ಬಳಸಿ ಲಾಗಿನ್‌ ಆಗಬಹುದು.

ಯಾವೆಲ್ಲ ದಾಖಲೆ ಅಗತ್ಯ?

  • ಇತ್ತೀಚಿನ ಭಾವಚಿತ್ರ
  • ಪ್ಯಾನ್‌ ಕಾರ್ಡ್‌
  • ವಿಳಾಸದ ಪುರಾವೆ
  • ಬ್ಯಾಂಕ್‌ ಅಕೌಂಟ್‌ ವಿವರ

ರಾಷ್ಟ್ರೀಯ ಪಿಂಚಣಿ ಯೋಜನೆಯಲ್ಲಿ ಹೂಡಿಕೆ ಮಾಡುವುದರಿಂದ ಸೆಕ್ಷನ್ 80C ಅಡಿಯಲ್ಲಿ ತೆರಿಗೆ ವಿನಾಯಿತಿ ಸೌಲಭ್ಯ ಸಿಗಲಿದೆ. ಈ ಯೋಜನೆಯಲ್ಲಿ ಗರಿಷ್ಠ 1.5 ಲಕ್ಷ ರೂಪಾಯಿವರೆಗಿನ ಹೂಡಿಕೆಗೆ ತೆರಿಗೆ ವಿನಾಯಿತಿ ಪಡೆಯಬಹುದು.

ಇದನ್ನೂ ಓದಿ: Money Guide: ನಿಮ್ಮ ಎನ್‌ಪಿಎಸ್‌ ಖಾತೆ ಸ್ಥಗಿತಗೊಂಡಿದ್ದರೆ ಚಿಂತಿಸಬೇಡಿ; ಮನೆಯಲ್ಲೇ ಕೂತು ಸಕ್ರಿಯಗೊಳಿಸುವ ವಿಧಾನ ಇಲ್ಲಿದೆ

Continue Reading

ವಾಣಿಜ್ಯ

Startup Investment : ಡ್ರಿಂಕ್​​ಪ್ರೈಮ್​ ವಿಸ್ತರಣಾ ಯೋಜನೆಯಲ್ಲಿ ಎಸ್​​ಐಡಿಬಿಐ ಹಣಕಾಸು ಸಂಸ್ಥೆಯ ಹೂಡಿಕೆ

Startup Investment : ಪ್ರಸ್ತುತ ಅಸ್ತಿತ್ವದಲ್ಲಿರುವ ಹೂಡಿಕೆದಾರರೊಂದಿಗೆ ಎಸ್​ವಿಸಿಎಲ್ , ಡ್ರಿಂಕ್​​ ಪ್ರೈಮ್ ಗೆ ಆರ್ಥಿಕ ಬೆಂಬ ನೀಡುವ ಮೂಲಕ ಬ್ರಾಂಡ್ ನ ಸಾಮರ್ಥ್ಯ ಮತ್ತು ಮಾರುಕಟ್ಟೆ ಮೌಲ್ಯದ ಮೇಲಿನ ವಿಶ್ವಾಸ ಮತ್ತಷ್ಟು ಹೆಚ್ಚಾಗಿದೆ. ಎಸ್ ವಿಸಿಎಲ್ ಮತ್ತು ಅಸ್ತಿತ್ವದಲ್ಲಿರುವ ಹೂಡಿಕೆದಾರರಿಂದ ಮೂಲಕ ಕಾರ್ಯತಂತ್ರದ ಹೂಡಿಕೆಭಾಗವಾಗಿ 3 ಮಿಲಿಯನ್ ಡಾಲರ್​ (25,04,88,900.00 ರೂಪಾಯಿ) ಸಂಗ್ರಹಿಸಲಾಗಿದೆ.

VISTARANEWS.COM


on

Startup Investment
Koo

ಬೆಂಗಳೂರು: ಭಾರತದ 30 ವರ್ಷಗಳಷ್ಟು ಹಳೆಯದಾದ ವಾಟರ್ ಪ್ಯೂರಿಫೈಯರ್ ಉದ್ಯಮವಾಗಿರುವ ಡ್ರಿಂಕ್​​ಪ್ರೈಮ್​ನಲ್ಲಿ (DrinkPrime) ಹೂಡಿಕೆ ನಿರ್ವಹಣಾ ಕಂಪನಿಯಾದ ಎಸ್ಐಡಿಬಿಐ ವೆಂಚರ್ ಕ್ಯಾಪಿಟಲ್ ಲಿಮಿಟೆಡ್ (SVCL) ಹೂಡಿಕೆ ಮಾಡಿದೆ (Startup Investment). ಎಸ್​ವಿಸಿಎಲ್​ ಎಸ್​​ಐಡಿಬಿಐನ (SIDBI) ಸಂಪೂರ್ಣ ಸ್ವಾಮ್ಯದ ಹಣಕಾಸು ಸಂಸ್ಥೆಯಾಗಿದ್ದು ಭಾರತದ ಸೂಕ್ಷ್ಮ, ಸಣ್ಣ ಹಾಗೂ ಮಧ್ಯಮ ಉದ್ಯಮಗಳಿಗೆ (MSME) ಆರ್ಥಿಕ ಬೆಂಬಲವನ್ನು ಒದಗಿಸುತ್ತದೆ. ಪ್ರಸ್ತುತ ಅಸ್ತಿತ್ವದಲ್ಲಿರುವ ಹೂಡಿಕೆದಾರರೊಂದಿಗೆ ಎಸ್​ವಿಸಿಎಲ್ , ಡ್ರಿಂಕ್​​ ಪ್ರೈಮ್ ಗೆ ಆರ್ಥಿಕ ಬೆಂಬ ನೀಡುವ ಮೂಲಕ ಬ್ರಾಂಡ್ ನ ಸಾಮರ್ಥ್ಯ ಮತ್ತು ಮಾರುಕಟ್ಟೆ ಮೌಲ್ಯದ ಮೇಲಿನ ವಿಶ್ವಾಸ ಮತ್ತಷ್ಟು ಹೆಚ್ಚಾಗಿದೆ. ಎಸ್ ವಿಸಿಎಲ್ ಮತ್ತು ಅಸ್ತಿತ್ವದಲ್ಲಿರುವ ಹೂಡಿಕೆದಾರರಿಂದ ಮೂಲಕ ಕಾರ್ಯತಂತ್ರದ ಹೂಡಿಕೆಭಾಗವಾಗಿ 3 ಮಿಲಿಯನ್ ಡಾಲರ್​ (25,04,88,900.00 ರೂಪಾಯಿ) ಸಂಗ್ರಹಿಸಲಾಗಿದೆ.

“ಎಸ್ಐಡಿಬಿಐ ವೆಂಚರ್ ಕ್ಯಾಪಿಟಲ್ ಲಿಮಿಟೆಡ್ ನಮ್ಮ ದೀರ್ಘಕಾಲೀನ ಹೂಡಿಕೆದಾರರ ಗುಂಪಿಗೆ ಸೇರಲು ನಾವು ಉತ್ಸುಕರಾಗಿದ್ದೇವೆ. ನಮ್ಮ ಮೇಲಿನ ಅವರ ನಂಬಿಕೆಯು ಕುಡಿಯುವ ನೀರಿನ ಉದ್ಯಮದಲ್ಲಿ ಡ್ರಿಂಕ್​ಪ್ರೈಮ್ ನ ಆವಿಷ್ಕಾರಕ್ಕೆ ಲಭಿಸಿದ ಬಲಿಷ್ಠ ಬೆಂಬಲವಾಗಿದೆ. ನಮ್ಮ ಅಸಾಧಾರಣ ಬೆಳವಣಿಗೆಯ ಯಾನದಲ್ಲಿ ನಂಬಿಕೆಯೂ ಆಗಿದೆ. 2021 ರಿಂದ 2023 ರವರೆಗೆ, ನಾವು ಗಮನಾರ್ಹವಾದ 3 ಪಟ್ಟು ಬೆಳವಣಿಗೆ ಸಾಧಿಸಿದ್ದೇವೆ. ಕಾರ್ಯತಂತ್ರದ ಹೂಡಿಕೆಯು ವ್ಯವಹಾರ ವಿಸ್ತರಣೆಗೆ ಅವಕಾಶ ಒದಗಿಸುತ್ತದೆ” ಎಂದು ಡ್ರಿಂಕ್ ಪ್ರೈಮ್ ಸಹ ಸಂಸ್ಥಾಪಕ ಮತ್ತು ಸಿಇಒ ವಿಜೇಂದರ್ ರೆಡ್ಡಿ ಮುತ್ಯಾಲ ಹೇಳಿದರು.

ಎಸ್ ವಿಸಿಎಲ್ ಸಂಸ್ಥೆಯು ಡ್ರಿಂಕ್​​​ ಪ್ರೈಮ್ ನಲ್ಲಿ ಮಾಡಿರುವ ಹೂಡಿಕೆಯು ಉದ್ಯಮಶೀಲತೆಯನ್ನು ಉತ್ತೇಜಿಸುವ ಮತ್ತು ಭಾರತದಾದ್ಯಂತ ಸುಸ್ಥಿರ ಅಭಿವೃದ್ಧಿಗೆ ಪೂರಕವಾಗಿರುವ ಧ್ಯೇಯವನ್ನು ಹೊಂದಿದೆ. ಈ ಪಾಲುದಾರಿಕೆಯು ನಿರ್ಣಾಯಕ ಸಾಮಾಜಿಕ ಸವಾಲುಗಳನ್ನು ಪರಿಹರಿಸುವ ಮತ್ತು ಆರ್ಥಿಕ ಬೆಳವಣಿಗೆಗೆ ಕೊಡುಗೆ ನೀಡುವ ವಿನೂತನ ಸ್ಟಾರ್ಟ್​​ಅಪ್​ಗಳನ್ನು ಬೆಂಬಲಿಸುವ ಬದ್ಧತೆಯ ಪ್ರತೀಕವಾಗಿದೆ ಎಂದು ವಿಜೇಂದರ್ ರೆಡ್ಡಿ ಅವು ಹೇಳಿದರು.

“ನಾವು ಡ್ರಿಂಕ್​​ ಪ್ರೈಮ್ ತಂಡದೊಂದಿಗೆ ಕೆಲಸ ಮಾಡಲು ಉತ್ಸುಕರಾಗಿದ್ದೇವೆ ಮತ್ತು ಅದನ್ನು ಭಾರತದ ಪ್ರಮುಖ ವಾಟರ್ ಟೆಕ್ ಬ್ರಾಂಡ್ ಆಗಿ ಮಾಡಲು ಪ್ರಯತ್ನಿಸುತ್ತೇವೆ, ಅದೇ ಸಮಯದಲ್ಲಿ ಅದರ ನಾವಿನ್ಯ ಕೊಡುಗೆಗಳನ್ನು ಜಗತ್ತಿಗೆ ಪ್ರಸ್ತುತಪಡಿಸಲಿದ್ದೇವೆ. ಎಲ್ಲರಿಗೂ ಶುದ್ಧ, ಸುರಕ್ಷಿತ ಮತ್ತು ಆರೋಗ್ಯಕರ ಕುಡಿಯುವ ನೀರನ್ನು ಒದಗಿಸುವ ಧ್ಯೇಯವನ್ನು ಡ್ರಿಂಕ್ ಪ್ರೈಮ್ ವಿಸ್ತರಿಸಲಿದೆ ಮತ್ತು ಆ ಹೊಣೆಗಾರಿಕೆಯನ್ನು ತೆಗೆದುಕೊಳ್ಳುತ್ತದೆ ಎಂದು ಖಚಿತಪಡಿಸಿಕೊಂಡಿದ್ದೆವೆ. ನಾವು ಯೋಜನೆಯನ್ನು ನಂಬುತ್ತೇವೆ ಮತ್ತು ವರ್ಷಗಳಲ್ಲಿ ಡ್ರಿಂಕ್​ ಪ್ರೈಮ್​ ಬೆಳವಣಿಗೆ ಗಮನಿಸಿದ್ದೇವೆ. ಈಗ, ನಾವು ಡ್ರಿಂಕ್ ಪ್ರೈಮ್ ನ ತ್ವರಿತ ಬೆಳವಣಿಗೆಯನ್ನು ಎದುರು ನೋಡುತ್ತಿದ್ದೇವೆ ” ಎಂದು ಎಸ್ ಐಡಿಬಿಐ ವೆಂಚರ್ ಕ್ಯಾಪಿಟಲ್ ಲಿಮಿಟೆಡ್ ನ ಹಿರಿಯ ಫಂಡ್ ಮ್ಯಾನೇಜರ್ ದೇಬ್ರಾಜ್ ಬ್ಯಾನರ್ಜಿ ಹೇಳಿದರು.

ಇದನ್ನೂ ಓದಿ: Gold Rate Today: ಬಂಗಾರದ ಬೆಲೆಯಲ್ಲಿ ಭಾರೀ ಏರಿಕೆ, ಮತ್ತೆ ಚಿನ್ನದ ಮಾರುಕಟ್ಟೆಯಲ್ಲಿ ತುರುಸು; ದರಗಳು ಹೀಗಿವೆ

ಹೂಡಿಕೆಯನ್ನು ಬಳಸಿಕೊಳ್ಳುವ ಬಗ್ಗೆ ಮಾತನಾಡಿದ ಡ್ರಿಂಕ್ ಪ್ರೈಮ್ ನ ಸಹ-ಸಂಸ್ಥಾಪಕ ಮತ್ತು ಸಿಒಒ ಮಾನಸ್ ರಂಜನ್ ಹೋಟಾ, “ಈ ಕಾರ್ಯತಂತ್ರದ ಹೂಡಿಕೆಯು ವಿಸ್ತರಣಾ ಯೋಜನೆಗಳ ವೇಗವನ್ನು ದ್ವಿಗುಣಗೊಳಿಸಲು, ನಮ್ಮ ನವೀನ ಉತ್ಪನ್ನಗಳ ಪೋರ್ಟ್ ಫೋಲಿಯೊವನ್ನು ಅಭಿವೃದ್ಧಿಪಡಿಸಲು ನೆರವಾಗಲಿದೆ. ಅದೇ ರೀತಿ ನಮ್ಮ ಉದ್ಯಮದ ಪ್ರಮುಖ ಮತ್ತು ಉದ್ಯಮದ ಜೀವಾಳವಾಗಿರುವ ಇಂಟರ್ನೆಟ್ ಆಫ್ ಥಿಂಗ್ಸ್ (ಐಒಟಿ) ವೈಶಿಷ್ಟ್ಯವನ್ನು ಬಲಪಡಿಸಲು ಡ್ರಿಂಕ್ ಪ್ರೈಮ್ ಗೆ ವಿಪುಲ ಅವಕಾಶ ನೀಡುತ್ತದೆ” ಎಂದು ಹೇಳಿದರು.

ಡ್ರಿಂಕ್ ಪ್ರೈಮ್ ನಲ್ಲಿ ದೀರ್ಘಕಾಲೀನ ಹೂಡಿಕೆದಾರರು ಹೊಂದಿರುವ ನಂಬಿಕೆ ಮತ್ತು ಸ್ಟಾರ್ಟ್ ಅಪ್ ನ ಸಾಮರ್ಥ್ಯ ಅಪೂರ್ವವಾಗಿದೆ. “ಡ್ರಿಂಕ್ ಪ್ರೈಮ್ ಕಳೆದ ಎಂಟು ವರ್ಷಗಳಿಂದ ಭಾರತದ ನೀರು ಶುದ್ಧೀಕರಣ ಮಾರುಕಟ್ಟೆಯನ್ನು ಆಳುತ್ತಿದೆ ದಶಕಗಳಿಂದ ಸ್ಥಗಿತಗೊಂಡಿದ್ದ ಉದ್ಯಮದಲ್ಲಿ ಅವರು ಅನ್ವೇಷಣೆ, ಆವಿಷ್ಕಾರ ಮತ್ತು ಬದಲಾವಣೆಯನ್ನು ಸೃಷ್ಟಿಸುವುದನ್ನು ನಾನು ನೋಡಿದ್ದೇನೆ. ಅದಕ್ಕಾಗಿಯೇ ನಾನು ಡ್ರಿಂಕ್​ಪ್ರೈಮ್​ನಲ್ಲಿ ಮರುಹೂಡಿಕೆ ಮಾಡಲು ನಿರ್ಧರಿಸಿದೆ ಎಂದು ಪಾಲಿಕ್ಯಾಬ್ ಇಂಡಿಯಾ ಲಿಮಿಟೆಡ್​​ನ ಕಾರ್ಯನಿರ್ವಾಹಕ ನಿರ್ದೇಶಕ ಭರತ್ ಜೈಸಿಂಘಾನಿ ಹೇಳಿದ್ದಾರೆ.

ಡ್ರಿಂಕ್ ಪ್ರೈಮ್ ಪ್ರಸ್ತುತ ಭಾರತದ ಏಳು ನಗರಗಳಲ್ಲಿ 2 ಲಕ್ಷಕ್ಕೂ ಹೆಚ್ಚು + ಕುಟುಂಬಗಳಿಗೆ ಶುದ್ಧ, ಸುರಕ್ಷಿತ ಮತ್ತು ಆರೋಗ್ಯಕರ ಕುಡಿಯುವ ನೀರಿನ ಲಭ್ಯತೆ ನೀಡಿದೆ. ಎಲ್ಲರಿಗೂ ಸುರಕ್ಷಿತ ಕುಡಿಯುವ ನೀರು ಲಭ್ಯವಾಗುವಂತೆ ಮಾಡುವ ತನ್ನ ಧ್ಯೇಯಕ್ಕೆ ಹತ್ತಿರವಾಗಲು ವಿಸ್ತರಣಾ ಯೋಜನೆಗಳು ಜಾರಿಯಲ್ಲಿರುವುದರಿಂದ, ಡ್ರಿಂಕ್ ಪ್ರೈಮ್ ತನ್ನ ಎರಡನೇ ಹಂತದ ನಿಧಿಸಂಗ್ರಹಕ್ಕೆ ಸಜ್ಜಾಗುತ್ತಿದೆ.

Continue Reading
Advertisement
Uttar Pradesh
ದೇಶ2 mins ago

Uttar Pradesh: ಉತ್ತರ ಪ್ರದೇಶದಲ್ಲಿ ಲೋಕಸಭೆ ಸಮರ; ನೀವು ತಿಳಿಯಲೇಬೇಕಾದ 5 ಅಂಶಗಳು ಇಲ್ಲಿವೆ

Prajwal Revanna Case
ಕರ್ನಾಟಕ18 mins ago

Prajwal Revanna Case: ಅಶ್ಲೀಲ ವಿಡಿಯೊ ವೈರಲ್ ಕೇಸ್‌; ವಕೀಲ ದೇವರಾಜೇಗೌಡ ಎಸ್‌ಐಟಿ ಕಸ್ಟಡಿಗೆ

theft Case
ಕ್ರೈಂ40 mins ago

Theft Case : ಪೊಲೀಸ್‌ ಬಸ್ಸನ್ನೇ ಕದಿಯಲು ಬಂದ ಕುಡುಕ; ಪೇಡ ಕೇಳಿದವ 15 ಕೆಜಿ ತುಪ್ಪ ಎಗರಿಸಿದ

7 books release programme on May 19 in Bengaluru
ಬೆಂಗಳೂರು49 mins ago

Bengaluru News: ಬೆಂಗಳೂರಿನಲ್ಲಿ ಮೇ 19ರಂದು ವೀರಲೋಕ ಪ್ರಕಾಶನದ 7 ಕೃತಿಗಳ ಲೋಕಾರ್ಪಣೆ

Pension and NAREGA money credited to farmers loans CM Siddaramaiah slams bank
ರಾಜಕೀಯ53 mins ago

CM Siddaramaiah: ಪಿಂಚಣಿ, ನರೇಗಾ ಹಣ ರೈತರ ಸಾಲಕ್ಕೆ ಜಮೆ; ಬ್ಯಾಂಕ್‌ ವಿರುದ್ಧ ಸಿಎಂ ಗರಂ! ಕೂಡಲೇ ನಿಲ್ಲಿಸಲು ಸೂಚನೆ

Canne Film Festival 2024
ಪ್ರಮುಖ ಸುದ್ದಿ57 mins ago

Canne Film Festival 2024: ಕಾನ್‌ ಫಿಲ್ಮ್ ಫೆಸ್ಟಿವಲ್‌ನ ರೆಡ್‌ ಕಾರ್ಪೆಟ್‌ನಲ್ಲಿ ತಾರೆಯರ ಫ್ಯಾಷನ್ ಕಲರವ!

Konkani Book Release
ಕಲೆ/ಸಾಹಿತ್ಯ1 hour ago

Konkani Book Release: ಇಟಾಲಿಯನ್-ಬ್ರಿಟಿಷ್ ಲೇಖಕ ರಚಿಸಿರುವ ಜಿಎಸ್‌ಬಿ ಕೊಂಕಣಿ ಮಾರ್ಗದರ್ಶಿ ಕೃತಿ ಬಿಡುಗಡೆ

MLC Meeting
ರಾಜಕೀಯ1 hour ago

MLC Election: ಬೆಂಗಳೂರು ಪದವೀಧರ ಕ್ಷೇತ್ರದ ಚುನಾವಣಾ ಪೂರ್ವಸಿದ್ಧತೆ ಸಭೆ; ಬಿಜೆಪಿ ಅಭ್ಯರ್ಥಿ ಅ. ದೇವೇಗೌಡ ಗೆಲುವಿಗೆ ರಣತಂತ್ರ

Arvind Kejriwal
ದೇಶ1 hour ago

Arvind Kejriwal: ಅಬಕಾರಿ ಕೇಸ್‌: ಕೇಜ್ರಿವಾಲ್‌ಗೆ ಬಿಗ್ ಶಾಕ್; ಇ.ಡಿ ಚಾರ್ಜ್‌ಶೀಟ್‌ನಲ್ಲಿ ಇವರೇ ಆರೋಪಿ!

HD Revanna case Hearing in Holenarasipura sexual assault case adjourned to Monday
ಹಾಸನ2 hours ago

HD Revanna Case: ಹೊಳೆನರಸೀಪುರದ ಲೈಂಗಿಕ ದೌರ್ಜನ್ಯ ಕೇಸ್‌ ವಿಚಾರಣೆ ಸೋಮವಾರಕ್ಕೆ ಮುಂದೂಡಿಕೆ; ರೇವಣ್ಣಗೆ ಜೈಲಾ? ಬೇಲಾ?

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka weather Forecast
ಮಳೆ13 hours ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

Dina Bhavishya
ಭವಿಷ್ಯ14 hours ago

Dina Bhavishya : ಈ ರಾಶಿಯ ಪ್ರೇಮಿಗಳಿಗೆ ಮನೆಯಿಂದ ಸಿಗುತ್ತೆ ಗ್ರೀನ್‌ ಸಿಗ್ನಲ್‌

Karnataka Weather Forecast
ಮಳೆ1 day ago

Karnataka Weather : ಭಾರಿ ಮಳೆಗೆ ಕೊಟ್ಟೂರು ಬಸ್ ಸ್ಟ್ಯಾಂಡ್‌ ಜಲಾವೃತ; ‌ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

Drowned in water
ಹಾಸನ1 day ago

Drowned in water : ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರುಪಾಲು; ಓರ್ವ ಬಾಲಕ ಪಾರು

Suspicious Case
ಬೆಂಗಳೂರು1 day ago

Suspicious Case : ಬಾತ್‌ ರೂಂನಲ್ಲಿತ್ತು ಕಾಲೇಜು ಹುಡುಗಿ ಡೆಡ್‌ ಬಾಡಿ; ಕುತ್ತಿಗೆ ಕೊಯ್ದು ಸಾಯಿಸಿದವರು ಯಾರು?

Prajwal Revanna Case
ಕರ್ನಾಟಕ2 days ago

Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

Dina Bhavishya
ಭವಿಷ್ಯ3 days ago

Dina Bhavishya : ಭೂ ವ್ಯವಹಾರಕ್ಕೆ ಇದು ಸೂಕ್ತ ಸಮಯ; ವ್ಯಾಪಾರದಲ್ಲಿ ಡಬಲ್‌ ಲಾಭ

HD Revanna Released first reaction after release will be acquitted of all charges
ರಾಜಕೀಯ3 days ago

HD Revanna Released: ರಿಲೀಸ್‌ ಬಳಿಕ ರೇವಣ್ಣ ಫಸ್ಟ್‌ ರಿಯಾಕ್ಷನ್;‌ ನ್ಯಾಯಾಂಗದ ಮೇಲೆ ನಂಬಿಕೆ ಇದೆ; ಆರೋಪ ಮುಕ್ತನಾಗುವೆ

CM Siddaramaiah says Our government is stable for 5 years BJP will disintegrate
Lok Sabha Election 20243 days ago

CM Siddaramaiah: ನಮ್ಮ ಸರ್ಕಾರ 5 ವರ್ಷ ಸುಭದ್ರ; ಚುನಾವಣೆ ಬಳಿಕ ಬಿಜೆಪಿ ಛಿದ್ರ ಎಂದ ಸಿಎಂ ಸಿದ್ದರಾಮಯ್ಯ!

I dont want to go to other states for Lok Sabha Election 2024 campaign for Congress says CM Siddaramaiah
Lok Sabha Election 20243 days ago

CM Siddaramaiah: ಕಾಂಗ್ರೆಸ್‌ ಪರ ಬೇರೆ ರಾಜ್ಯಗಳಿಗೆ ಪ್ರಚಾರಕ್ಕೆ ಹೋಗಲು ನನಗೆ ಇಷ್ಟವಿಲ್ಲ: ಸಿಎಂ ಸಿದ್ದರಾಮಯ್ಯ!

ಟ್ರೆಂಡಿಂಗ್‌