Modi Visit | ಸಿದ್ಧವಾಯ್ತು ಕೆಂಪೇಗೌಡ ಪೇಟ; ಮೋದಿಗೆ ತೊಡಿಸಲಿರುವ ಇದರ ವಿಶೇಷತೆ ಏನಿದೆ? - Vistara News

ಕರ್ನಾಟಕ

Modi Visit | ಸಿದ್ಧವಾಯ್ತು ಕೆಂಪೇಗೌಡ ಪೇಟ; ಮೋದಿಗೆ ತೊಡಿಸಲಿರುವ ಇದರ ವಿಶೇಷತೆ ಏನಿದೆ?

Modi Visit | ನವೆಂಬರ್ 11ರಂದು ರಾಜ್ಯಕ್ಕೆ ಭೇಟಿ ನೀಡಲಿರುವ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಈ ಬಾರಿ ಕೆಂಪೇಗೌಡ ಪೇಟವನ್ನು ತೊಡಿಸಲಾಗುತ್ತಿದ್ದು, ಇದನ್ನು ಮೈಸೂರಿನಲ್ಲಿ ವಿನ್ಯಾಸಗೊಳಿಸಲಾಗಿದೆ.

VISTARANEWS.COM


on

modi peta
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮೈಸೂರು: ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಿರ್ಮಿಸಲಾಗಿರುವ ೧೦೮ ಅಡಿ ಎತ್ತರದ ಕೆಂಪೇಗೌಡರ ಭವ್ಯ ಪ್ರತಿಮೆ ಅನಾವರಣ ಕಾರ್ಯಕ್ರಮದ ಹಿನ್ನೆಲೆಯಲ್ಲಿ ನವೆಂಬರ್ 11ರಂದು ರಾಜ್ಯಕ್ಕೆ ಪ್ರಧಾನಿ ನರೇಂದ್ರ ಮೋದಿ (Modi Visit) ಭೇಟಿ ನೀಡಲಿದ್ದಾರೆ. ಈ ವೇಳೆ ಮೋದಿಗೆ “ಕೆಂಪೇಗೌಡ ಪೇಟ”ವನ್ನು ತೊಡಿಸಲಾಗುತ್ತಿದ್ದು, ಪೇಟವು ಮೈಸೂರಿನಲ್ಲಿ ಸಿದ್ಧವಾಗಿದೆ. ಇದು ಹಲವು ವಿಶೇಷತೆಯಿಂದ ಕೂಡಿದೆ.

Narendra Modi

ಪ್ರಧಾನಿ ನರೇಂದ್ರ ಮೋದಿ ನವೆಂಬರ್‌ ೧೧ರಂದು ಪ್ರಗತಿಯ ಪ್ರತಿಮೆಯನ್ನು ಅನಾವರಣ ಮಾಡಲಿದ್ದು, ಈ ವಿಶೇಷ ಸಂದರ್ಭಕ್ಕಾಗಿ ಅ. ೨೧ರಿಂದ ಪವಿತ್ರ ಮೃತ್ತಿಕೆ ಸಂಗ್ರಹ ಅಭಿಯಾನ ಆರಂಭವಾಗಿದೆ. ನವೆಂಬರ್‌ ೭ರವರೆಗೆ ಮಣ್ಣಿನ ಸಂಗ್ರಹ ನಡೆಯಲಿದೆ.

ಪೇಟ ಸಿದ್ಧಪಡಿಸಿದ ಮೈಸೂರು ಕಲಾವಿದ
ಕೆಂಪೇಗೌಡ ಅವರ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಮೈಸೂರಿನಲ್ಲಿ ಕೆಂಪೇಗೌಡ ಪೇಟವನ್ನು ಸಿದ್ಧಪಡಿಸಲಾಗಿದೆ. ಕೆಂಪೇಗೌಡರ ಪ್ರತಿಮೆಯಲ್ಲಿರುವ ಪೇಟದಂತೆಯೇ ವಿನ್ಯಾಸಗೊಳಿಸಲಾಗಿದೆ. ಮೈಸೂರಿನ ಕಲಾವಿದ ನಂದನ್ ಎಂಬುವವರು ಪೇಟ ತಯಾರಿಸಿದ್ದಾರೆ.

ಹೇಗಿದೆ ಪೇಟ?
ಕಲಾವಿದ ನಂದನ್‌ ಅವರು ಈ ಪೇಟ ತಯಾರಿಗೆ ಹತ್ತು ದಿನ ತೆಗೆದುಕೊಂಡಿದ್ದಾರೆ. ಬನಾರಸ್ ರೇಷ್ಮೆ ಬಳಸಿ ಪೇಟವನ್ನು ತಯಾರಿಸಲಾಗಿದೆ. ಕೆಂಪು ಬಣ್ಣದ ಪೇಟ ಇದಾಗಿದೆ. ರೇಷ್ಮೆ, ಗರಿ, ಮುತ್ತುಗಳು ಸೇರಿ ಕುಸುರಿ ಕೆಲಸದಿಂದ ಕಂಗೊಳಿಸುತ್ತಿರುವ ಈ ಪೇಟವನ್ನು ಇದೇ ಮೊದಲ ಬಾರಿಗೆ ಸಿದ್ಧಪಡಿಸಲಾಗಿದೆ.

ನಮ್ಮೂರು ನಮ್ಮೋರು‌ ಸಮಾಜ ಸೇವಾ ಟ್ರಸ್ಟ್ ಹಾಗೂ ಕೆಂಪೇಗೌಡ ಅಭಿಮಾನಿ ಬಳಗದವರು ಆದಿಚುಂಚನಗಿರಿ ಮಠದ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಅವರ ಅನುಮತಿ ಪಡೆದು ಈ ಪೇಟವನ್ನು ತಯಾರಿಸಿದ್ದಾರೆ.

ಇದನ್ನೂ ಓದಿ | PM Modi | ಮೋದಿ ಭಾಷಣ ಮಾಡುತ್ತಿದ್ದ ಮಂಟಪದ ಬೋಲ್ಟ್ ತೆಗೆಯುತ್ತಿದ್ದ ವ್ಯಕ್ತಿ ಬಂಧನ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Pralhad Joshi: ದೇಶದಲ್ಲಿ ಹಿಂದೂ ಜನಸಂಖ್ಯೆ ಕುಸಿತ ಆತಂಕಕಾರಿ: ಸಚಿವ ಪ್ರಲ್ಹಾದ್‌ ಜೋಶಿ

Pralhad Joshi: ದೇಶದಲ್ಲಿ ಹಿಂದೂ ಜನಸಂಖ್ಯೆ ಕುಸಿತ ತೀವ್ರ ಆತಂಕಕಾರಿ ಬೆಳವಣಿಗೆಯಾಗಿದೆ ಎಂದು ಕಳವಳ ವ್ಯಕ್ತಪಡಿಸಿದ ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ, ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಈಗಲೇ ಎಚ್ಚೆತ್ತುಕೊಂಡು ಪರ್ಯಾಯ ಕ್ರಮ ಕೈಗೊಳ್ಳಬೇಕಿದೆ ಎಂದು ತಿಳಿಸಿದ್ದಾರೆ.

VISTARANEWS.COM


on

Union Minister Pralhad Joshi latest Statement in hubli
Koo

ಹುಬ್ಬಳ್ಳಿ: ದೇಶದಲ್ಲಿ ಹಿಂದೂ ಜನಸಂಖ್ಯೆ ಕುಸಿತ ತೀವ್ರ ಆತಂಕಕಾರಿ ಬೆಳವಣಿಗೆಯಾಗಿದೆ ಎಂದು ಕಳವಳ ವ್ಯಕ್ತಪಡಿಸಿರುವ ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ (Pralhad Joshi), ಈ ಬಗ್ಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಈಗಲೇ ಎಚ್ಚೆತ್ತುಕೊಂಡು ಪರ್ಯಾಯ ಕ್ರಮ ಕೈಗೊಳ್ಳಬೇಕಿದೆ ಎಂದು ತಿಳಿಸಿದ್ದಾರೆ.

ಹುಬ್ಬಳ್ಳಿಯಲ್ಲಿ ಶುಕ್ರವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಭಾರತದಲ್ಲಿ ಹಿಂದೂಗಳ ಜನಸಂಖ್ಯೆ ಕ್ಷಿಣಿಸುತ್ತಿರುವ ಬಗ್ಗೆ ತಕ್ಷಣಕ್ಕೆ ಯಾವುದೇ ನಿರ್ಧಾರಕ್ಕೆ ಬರಲಾಗುವುದಿಲ್ಲ. ಆದರೆ ಸಮಗ್ರ ಅಧ್ಯಯನ ನಡೆಸಬೇಕಿದೆ ಎಂದರು.

ಇದನ್ನೂ ಓದಿ: Star Suvarna: ಬಹುಮಾನದ ಜತೆಗೆ ಮನೋರಂಜನೆ ಹೊತ್ತು ಬರುತ್ತಿದೆ ʼಸುವರ್ಣ ಗೃಹಮಂತ್ರಿʼ; ಯಾವಾಗ ಪ್ರಸಾರ?

ಪ್ರಜಾಪ್ರಭುತ್ವಕ್ಕೆ ಧಕ್ಕೆ

ದೇಶದಲ್ಲಿ ಹಿಂದೂಗಳ ಜನಸಂಖ್ಯೆ ಕಡಿಮೆಯಾದಂತೆ ಕಾಲಕ್ರಮೇಣ ಪ್ರಜಾಪ್ರಭುತ್ವವೇ ಬದಲಾಗುವ ಸ್ಥಿತಿ ಎದುರಾಗಲಿದೆ. ಅಲ್ಲದೇ, ಜಾತ್ಯತೀತವಾಗಿ ಉಳಿಯುವುದಿಲ್ಲ ಎಂದು ಜೋಶಿ ತೀವ್ರ ಆತಂಕ ವ್ಯಕ್ತಪಡಿಸಿದರು.

ಜಗತ್ತಿನಲ್ಲೇ ಏಕೈಕ ಜಾತ್ಯತೀತ ರಾಷ್ಟ್ರ ಭಾರತ. ಪಕ್ಕಾ ಜಾತ್ಯತೀತ ದೇಶವಾಗಿದೆ. ಜಾತ್ಯತೀತತೆ ಎನ್ನುವುದು ಭಾರತೀಯರ ರಕ್ತ, ಸ್ವಭಾವದಲ್ಲೇ ಬಂದಿದೆ. ಮುಂದೊಂದು ದಿನ ಇದಕ್ಕೆ ಧಕ್ಕೆ ಉಂಟಾಗಬಹುದು ಎಂದರು.

ಭಾರತ ವಿವಿಧತೆಯಲ್ಲಿ ಏಕತೆ ಕಂಡ ದೇಶವಾಗಿದೆ. ನಾನಾ ಧರ್ಮ, ಸಂಸ್ಕೃತಿ ಆಚರಣೆಗೆ ಮುಕ್ತ ಅವಕಾಶ ಕೊಟ್ಟ ರಾಷ್ಟ್ರ. ಈ ಪರಂಪರೆಯೆ ಮುಂದುವರಿಯಬೇಕು ಎಂದು ಸಚಿವ ಜೋಶಿ ಆಶಿಸಿದರು.

ಪ್ರಮುಖವಾಗಿ ಹಿಂದೂಗಳ ದೇಶವೆಂದರೂ ಸರ್ವ ಧರ್ಮೀಯರನ್ನು ಒಳಗೊಂಡಿದೆ. ಆದರೆ, ಈಗ ಹಿಂದೂಗಳ ಸಂಖ್ಯೆಯೇ ಕುಸಿಯುತ್ತಿದೆ ಎಂದರೆ ಸರ್ಕಾರ ಮತ್ತು ಸಮಾಜ ಗಂಭೀರವಾಗಿ ಚಿಂತಿಸಬೇಕಾದ ಸಂಗತಿ ಎಂದು ತಿಳಿಸಿದರು.

ಇದನ್ನೂ ಓದಿ: Gold Rate Today: ಅಕ್ಷಯ ತದಿಗೆಯಂದು ಚಿನ್ನದ ಬೆಲೆಯಲ್ಲಿ ಭಾರೀ ಏರಿಕೆ; ಬಂಗಾರ ಕೊಳ್ಳಲು ಮುಗಿಬಿದ್ದ ಜನ; ದರಗಳು ಹೀಗಿವೆ

ಬಸವಣ್ಣನ ಕಲ್ಪನೆಯ ಸಮಾಜ ನಿರ್ಮಾಣ ಆಗಬೇಕು

ಪ್ರಜಾಪ್ರಭುತ್ವದ ರೂವಾರಿ, ಸಾಮಾಜಿಕ ಸಮಾನತೆಯ ಹರಿಕಾರ ಬಸವಣ್ಣ. ಇಂದು ಅವರ ಕಲ್ಪನೆಯ ಸಮಾಜ ನಿರ್ಮಾಣ ಮತ್ತು ಆಡಳಿತ ವ್ಯವಸ್ಥೆ ಬರಬೇಕಿದೆ ಎಂದು ಸಚಿವ ಪ್ರಲ್ಹಾದ್‌ ಜೋಶಿ ಇದೇ ವೇಳೆ ಪ್ರತಿಪಾದಿಸಿದರು.

Continue Reading

ಪ್ರಮುಖ ಸುದ್ದಿ

Terminal 2: ಭಾರಿ ಮಳೆಗೆ ಬೆಂಗಳೂರು ವಿಮಾನ ನಿಲ್ದಾಣದ 2ನೇ ಟರ್ಮಿನಲ್‌ ಸೋರಿಕೆ; ವಿಮಾನ ಹಾರಾಟ ಅಸ್ತವ್ಯಸ್ತ

Terminal 2: ನಿನ್ನೆ ರಾತ್ರಿಯ ಭಾರಿ ಮಳೆಯ ನಂತರ T2ನ ಬ್ಯಾಗೇಜ್ ಕ್ಲೈಮ್ ಪ್ರದೇಶದ ಬಳಿ ಛಾವಣಿಯಿಂದ ಮಳೆನೀರು ಜಿನುಗತೊಡಗಿತು. “ಮಳೆನೀರು ಛಾವಣಿಯಿಂದ ಸೋರಿಕೆಯಾಗಲು ಪ್ರಾರಂಭಿಸಿತು. ಕನ್ವೇಯರ್ ಬೆಲ್ಟ್ ಬಳಿ ಕೊಚ್ಚೆಗುಂಡಿಯಂತೆ ಆಯಿತು. ಪ್ರಯಾಣಿಕರಿಗೆ ಅನನುಕೂಲತೆಯನ್ನು ತಪ್ಪಿಸಲು ಗೃಹರಕ್ಷಕ ಸಿಬ್ಬಂದಿ ಯತ್ನಿಸಿದ್ದು, ನೀರನ್ನು ತೆರವುಗೊಳಿಸಿದರು” ಎಂದು ವಿಮಾನ ನಿಲ್ದಾಣದ ಸಿಬ್ಬಂದಿ ತಿಳಿಸಿದ್ದಾರೆ.

VISTARANEWS.COM


on

KIA bengaluru terminal 2
Koo

ಬೆಂಗಳೂರು: ನಿನ್ನೆ ಸುರಿದ ಭಾರೀ ಮಳೆಗೆ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ (Kempegowda International Airport – KIA) ನೂತನ ಟರ್ಮಿನಲ್ 2 (Terminal 2, T2) ಇದರಲ್ಲಿ ಭಾರಿ ಸೋರಿಕೆ (leakage) ಕಂಡುಬಂತು. ಭಾರಿ ಮಳೆಯ ಪರಿಣಾಮ ಇಲ್ಲಿಗೆ ಬರಬೇಕಿದ್ದ ಹಲವು ವಿಮಾನಗಳನ್ನು ಬೇರೆ ಕಡೆಗೆ ಕಳಿಸಲಾಯಿತು.

ನಿನ್ನೆ ರಾತ್ರಿಯ ಭಾರಿ ಮಳೆಯ ನಂತರ T2ನ ಬ್ಯಾಗೇಜ್ ಕ್ಲೈಮ್ ಪ್ರದೇಶದ ಬಳಿ ಛಾವಣಿಯಿಂದ ಮಳೆನೀರು ಜಿನುಗತೊಡಗಿತು. “ಮಳೆನೀರು ಛಾವಣಿಯಿಂದ ಸೋರಿಕೆಯಾಗಲು ಪ್ರಾರಂಭಿಸಿತು. ಕನ್ವೇಯರ್ ಬೆಲ್ಟ್ ಬಳಿ ಕೊಚ್ಚೆಗುಂಡಿಯಂತೆ ಆಯಿತು. ಪ್ರಯಾಣಿಕರಿಗೆ ಅನನುಕೂಲತೆಯನ್ನು ತಪ್ಪಿಸಲು ಗೃಹರಕ್ಷಕ ಸಿಬ್ಬಂದಿ ಯತ್ನಿಸಿದ್ದು, ನೀರನ್ನು ತೆರವುಗೊಳಿಸಿದರು” ಎಂದು ವಿಮಾನ ನಿಲ್ದಾಣದ ಸಿಬ್ಬಂದಿ ತಿಳಿಸಿದ್ದಾರೆ.

ಬೆಂಗಳೂರು ಇಂಟರ್‌ನ್ಯಾಶನಲ್ ಏರ್‌ಪೋರ್ಟ್ ಲಿಮಿಟೆಡ್ (BIAL) ಈ ಬಗ್ಗೆ ಹೇಳಿಕೆ ನೀಡಿದ್ದು, ಹೀಗೆ ಹೇಳಿದೆ: “ಮೇ 9, 2024ರ ಸಂಜೆ ಅಲ್ಪಾವಧಿಯಲ್ಲಿಯೇ ಅತಿ ಹೆಚ್ಚು ಮಳೆ ಸುರಿದ ಪರಿಣಾಮ, ಬೆಂಗಳೂರು ವಿಮಾನ ನಿಲ್ದಾಣದ ಟರ್ಮಿನಲ್‌ಗಳ ಕೆಲವು ಪ್ರದೇಶಗಳಲ್ಲಿ ನೀರು ಸೋರಿಕೆಯಾಗಿದೆ. ನಮ್ಮ ಕಾರ್ಯಾಚರಣೆ ತಂಡಗಳು ಈ ಸೋರಿಕೆಯನ್ನು ತಗ್ಗಿಸಲು ಮತ್ತು ಚಟುವಟಿಕೆಯನ್ನು ಸಾಮಾನ್ಯ ಸ್ಥಿತಿಗೆ ತರಲು ತ್ವರಿತವಾಗಿ ಪ್ರತಿಕ್ರಿಯಿಸಿವೆ. ನಮ್ಮ ಪ್ರಯಾಣಿಕರಿಗೆ ಉಂಟಾದ ಅನನುಕೂಲತೆಗಾಗಿ ನಾವು ವಿಷಾದಿಸುತ್ತೇವೆ.”

KIAಯ T2 ಅನ್ನು 5,000 ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಿಸಲಾಗಿದೆ. ನವೆಂಬರ್ 11, 2022ರಂದು ಪ್ರಧಾನಿ ನರೇಂದ್ರ ಮೋದಿ (PM Narendra Modi) ಅವರು ಇದನ್ನು ಉದ್ಘಾಟಿಸಿದರು. ʼಉದ್ಯಾನವನ ಟರ್ಮಿನಲ್ʼ ಎಂದು ಕರೆಯಲ್ಪಡುವ T2, ಯುನೆಸ್ಕೋದಿಂದ ʼವಿಶ್ವದ ಅತ್ಯಂತ ಸುಂದರವಾದ ವಿಮಾನ ನಿಲ್ದಾಣ’ ಎಂದು ಗುರುತಿಸಲ್ಪಟ್ಟಿದೆ. ಜನವರಿ 15, 2023ರಂದು ದೇಶೀಯ ಕಾರ್ಯಾಚರಣೆಯನ್ನು ಆರಂಭಿಸಿದ ಟರ್ಮಿನಲ್, ಉದ್ಘಾಟನೆಯ ಕೆಲವೇ ತಿಂಗಳುಗಳಲ್ಲಿ ಸೋರಿಕೆಯನ್ನು ಕಂಡಿದೆ. T2ನಲ್ಲಿ ಅಂತಾರಾಷ್ಟ್ರೀಯ ವಿಮಾನ ಕಾರ್ಯಾಚರಣೆಗಳು ಸೆಪ್ಟೆಂಬರ್ 12ರಂದು ಪ್ರಾರಂಭವಾದವು.

ವಿಮಾನ ಹಾರಾಟದ ದಿಕ್ಕು ಬದಲಾವಣೆ

ಗುರುವಾರ ರಾತ್ರಿ ಸುರಿದ ಭಾರಿ ಮಳೆಯಿಂದಾಗಿ ಬೆಂಗಳೂರಿಗೆ ಬರುತ್ತಿದ್ದ 17 ವಿಮಾನಗಳನ್ನು ಚೆನ್ನೈ ಕಡೆಗೆ ತಿರುಗಿಸಲಾಯಿತು. 13 ದೇಶೀಯ ವಿಮಾನಗಳು, ಮೂರು ಅಂತಾರಾಷ್ಟ್ರೀಯ ಪ್ರಯಾಣಿಕ ವಿಮಾನಗಳು ಮತ್ತು ಒಂದು ಅಂತಾರಾಷ್ಟ್ರೀಯ ಕಾರ್ಗೋ ವಿಮಾನವನ್ನು ತಿರುಗಿಸಲಾಗಿದೆ ಎಂದು ಬಿಐಎಎಲ್ ವಕ್ತಾರರು ತಿಳಿಸಿದ್ದಾರೆ. “ಬಲವಾದ ಗಾಳಿಯೊಂದಿಗೆ ಭಾರೀ ಮಳೆಯ ಕಾರಣ ವಿಮಾನ ನಿಲ್ದಾಣದೊಳಗೆ ರಾತ್ರಿ 9:35ರಿಂದ 10:30ರ ನಡುವೆ ಲ್ಯಾಂಡಿಂಗ್‌ ಸಾಧ್ಯವಾಗಲಿಲ್ಲ. ಇದು ವಿಮಾನಗಳ ಮಾರ್ಗವನ್ನು ತಿರುಗಿಸಲು ಕಾರಣವಾಯಿತು” ಎಂದು ತಿಳಿಸಿದ್ದಾರೆ.

ಬೆಂಗಳೂರಿನಿಂದ ಚೆನ್ನೈಗೆ ತಿರುಗಿಸಲಾದ ದೇಶೀಯ ವಿಮಾನಗಳಲ್ಲಿ ತಲಾ ನಾಲ್ಕು ಇಂಡಿಗೋ (ಪುಣೆ, ಕೋಲ್ಕತ್ತಾ, ಲಕ್ನೋ ಮತ್ತು ಮಧುರೈ) ಮತ್ತು ಏರ್ ಇಂಡಿಯಾ ಎಕ್ಸ್‌ಪ್ರೆಸ್ (ಹೈದರಾಬಾದ್, ಲಕ್ನೋ, ಮುಂಬೈ ಮತ್ತು ರಾಂಚಿಯಿಂದ), ದೆಹಲಿ ಮತ್ತು ಹೈದರಾಬಾದ್‌ನಿಂದ ಎರಡು ಏರ್ ಇಂಡಿಯಾ ವಿಮಾನಗಳು ಸೇರಿವೆ. ಇತರ ದೇಶೀಯ ವಿಮಾನಗಳೆಂದರೆ: ದೆಹಲಿಯಿಂದ ವಿಸ್ತಾರಾ ವಿಮಾನ, ಪುಣೆಯಿಂದ ಆಕಾಶ ಏರ್ ವಿಮಾನ ಮತ್ತು ಜಾಮ್‌ನಗರದಿಂದ ಸ್ಟಾರ್ ಏರ್ ವಿಮಾನ. ಬೆಂಗಳೂರಿನಿಂದ ಚೆನ್ನೈಗೆ ಕಳಿಸಲಾದ ಮೂರು ಅಂತಾರಾಷ್ಟ್ರೀಯ ವಿಮಾನಗಳು: ಸಿಂಗಾಪುರ್ ಏರ್‌ಲೈನ್ಸ್ (SQ 510), ಅಬುಧಾಬಿಯಿಂದ ಎತಿಹಾದ್ (EY 238) ಮತ್ತು ಆಮ್‌ಸ್ಟರ್‌ಡ್ಯಾಮ್‌ನಿಂದ KLM ವಿಮಾನ (KL-879).

ಭಾರತೀಯ ಹವಾಮಾನ ಇಲಾಖೆಯ ಪ್ರಕಾರ, ಬೆಂಗಳೂರು ವಿಮಾನ ನಿಲ್ದಾಣದಲ್ಲಿ 72.4 ಮಿಮೀ ಮಳೆ ದಾಖಲಾಗಿದ್ದರೆ, ಬೆಂಗಳೂರು ನಗರದಲ್ಲಿ ಮೇ 10 ರಂದು ಬೆಳಿಗ್ಗೆ 8:30 ರವರೆಗೆ 14 ಮಿಮೀ ಮಳೆಯಾಗಿದೆ. ಮೇ 9ರ ಸಂಜೆ ರಸ್ತೆಗಳಲ್ಲಿ ನೀರು ನಿಂತಿದ್ದರಿಂದ ವಿಮಾನ ನಿಲ್ದಾಣಕ್ಕೆ ತೆರಳುವ ಅನೇಕ ಪ್ರಯಾಣಿಕರು ತೀವ್ರ ತೊಂದರೆ ಅನುಭವಿಸಿದರು. ಚಾಲುಕ್ಯ ವೃತ್ತದಿಂದ ಹೆಬ್ಬಾಳ ಮೇಲ್ಸೇತುವೆ ಹಾಗೂ ಹುಣಸಮಾರನಹಳ್ಳಿವರೆಗೆ ಜಲಾವೃತವಾಗಿತ್ತು.

ಇದನ್ನೂ ಓದಿ: Karnataka Weather : 50 ಕಿ.ಮೀ ವೇಗದಲ್ಲಿ ಬೀಸುತ್ತೆ ಗಾಳಿ; ಗುಡುಗು ಸಹಿತ ಭಾರಿ ಮಳೆಗೆ ಯೆಲ್ಲೋ ಅಲರ್ಟ್‌ ಘೋಷಣೆ

Continue Reading

ರಾಜಕೀಯ

Prajwal Revanna Case: ಪೆನ್‌ಡ್ರೈವ್‌ ಕೇಸ್‌ ವೈಯಕ್ತಿಕ ಜಗಳ; ಬಿಜೆಪಿ – ಜೆಡಿಎಸ್‌ ಮೈತ್ರಿಗೆ ಧಕ್ಕೆ ಇಲ್ಲ: ಆರ್.‌ ಅಶೋಕ್‌

Prajwal Revanna Case: ಪ್ರತಿ ದಿನ ಕಾಂಗ್ರೆಸ್ – ಜೆಡಿಎಸ್ ಪಕ್ಷದ ವಾರ್ ಟಾಕ್ ನಡೆಯುತ್ತಿದೆ. ಅದು ಏನು ಏನು ಆಗುತ್ತದೋ? ಎಲ್ಲಿಗೆ ಹೋಗಿ ಮುಟ್ಟುತ್ತದೆ ಎಂಬುದು ನನಗೂ ಗೊತ್ತಿಲ್ಲ. ಇದೊಂದು ವೈಯಕ್ತಿಕವಾಗಿ ಹೋಗಿಬಿಟ್ಟಿದೆ. ಜನಗಳ ಅಭಿವೃದ್ಧಿ ಕಾರ್ಯದ ಚರ್ಚೆ ನಡೆಯುತ್ತಿಲ್ಲ. ಬರಗಾಲ ಇದೆ, ಇಲ್ಲೇನಾಗಿದೆ ಅನ್ನೊದು ಮುಖ್ಯ, ಜನ ಅಭಿವೃದ್ಧಿಯನ್ನು ಕೇಳುತ್ತಿದ್ದಾರೆ. ಕಾಂಗ್ರೆಸ್‌ಗೆ ಅಭಿವೃದ್ಧಿ ಬೇಕಿಲ್ಲ. ಇದೇ ನಡೆಯುತ್ತಿರಲಿ ಎಂದು ಅಂತ ಕಾಂಗ್ರೆಸ್ ಬಯಸುತ್ತಿದೆ. ನಮಗೆ ಈ ಸುದ್ದಿ ಬೇಡ, ರಾಜ್ಯದ ಜನರ ಒಳಿತು ಬೇಕು. ಡಿಕೆಶಿ ಮತ್ತು ಕುಮಾರಸ್ವಾಮಿ ಕುಟುಂಬದ ನಡುವಿನ ವೈಯಕ್ತಿಕ ಜಗಳ ಇದು. ಇಬ್ಬರ ಕೌಟುಂಬಿಕ, ವೈಯಕ್ತಿಕ ಜಗಳದಿಂದ ರಾಜ್ಯ ಜನರಿಗೆ ಅನ್ಯಾಯ ಆಗುತ್ತಿದೆ ಎಂದು ಆರ್.‌ ಅಶೋಕ್‌ ಅಸಮಾಧಾನವನ್ನು ವ್ಯಕ್ತಪಡಿಸಿದರು.

VISTARANEWS.COM


on

Prajwal Revanna Case Pen drive case personal quarrel No threat to BJP and JDS alliance says R Ashoka
Koo

ಬೆಂಗಳೂರು: ಪ್ರಜ್ವಲ್‌ ರೇವಣ್ಣ (Prajwal Revanna Case) ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊ ಪ್ರಕರಣಕ್ಕೆ ಸಂಬಂಧಪಟ್ಟಂತೆ ವಿಧಾನಸಭಾ ವಿಪಕ್ಷ ನಾಯಕ ಆರ್. ಅಶೋಕ್ ಅಂತರ ಕಾಯ್ದುಕೊಂಡಿದ್ದಾರೆ. ಪೆನ್ ಡ್ರೈವ್ ಪ್ರಕರಣ ಎರಡು ಕುಟುಂಬಗಳ ನಡುವೆ ನಡೆಯುತ್ತಿದೆ. ಇದಕ್ಕೆ ರಾಜ್ಯದ ಜನರನ್ನು ಎಳೆದು ತರುವುದು ಬೇಡ. ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ಬಗೆಹರಿಸಿಕೊಳ್ಳುತ್ತಾರೆ ಎಂದು ಹೇಳಿದ್ದಾರೆ. ಅಲ್ಲದೆ, ಇದರಿಂದ ಮೈತ್ರಿಗೆ ಧಕ್ಕೆ ಆಗಲ್ಲ ಎಂದು ಹೇಳಿದ್ದಾರೆ.

ಮಾಧ್ಯಮದವರೊಂದಿಗೆ ಮಾತನಾಡಿದ ಆರ್.‌ ಅಶೋಕ್‌, ಅಭಿವೃದ್ಧಿ ವಿಚಾರ ಚರ್ಚೆ ಮಾಡುವುದನ್ನು ಬಿಟ್ಟು ಬರೀ ಇದನ್ನು ಚರ್ಚೆ ಮಾಡುತ್ತಿದ್ದಾರೆ. ಬಿಜೆಪಿ ನಿಲುವನ್ನು ಈಗಾಗಲೇ ಸ್ಪಷ್ಟಪಡಿಸಲಾಗಿದೆ. ಯಾರೇ ಆಗಲಿ ಈ ಕೃತ್ಯದಲ್ಲಿ ಭಾಗವಹಿಸಿದವರಿಗೆ ಕಾನೂನು ಪ್ರಕಾರ ಶಿಕ್ಷೆ ಆಗಲಿ. ಅವರವ ಡೋಂಕು ಅವರವರು ತಿದ್ದುಕೊಳ್ಳಲಿ ಎಂದು ಹೇಳಿದರು.

ಪ್ರತಿ ದಿನ ಕಾಂಗ್ರೆಸ್ – ಜೆಡಿಎಸ್ ಪಕ್ಷದ ವಾರ್ ಟಾಕ್ ನಡೆಯುತ್ತಿದೆ. ಅದು ಏನು ಏನು ಆಗುತ್ತದೋ? ಎಲ್ಲಿಗೆ ಹೋಗಿ ಮುಟ್ಟುತ್ತದೆ ಎಂಬುದು ನನಗೂ ಗೊತ್ತಿಲ್ಲ. ಇದೊಂದು ವೈಯಕ್ತಿಕವಾಗಿ ಹೋಗಿಬಿಟ್ಟಿದೆ. ಜನಗಳ ಅಭಿವೃದ್ಧಿ ಕಾರ್ಯದ ಚರ್ಚೆ ನಡೆಯುತ್ತಿಲ್ಲ. ಬರಗಾಲ ಇದೆ, ಇಲ್ಲೇನಾಗಿದೆ ಅನ್ನೊದು ಮುಖ್ಯ, ಜನ ಅಭಿವೃದ್ಧಿಯನ್ನು ಕೇಳುತ್ತಿದ್ದಾರೆ. ಕಾಂಗ್ರೆಸ್‌ಗೆ ಅಭಿವೃದ್ಧಿ ಬೇಕಿಲ್ಲ. ಇದೇ ನಡೆಯುತ್ತಿರಲಿ ಎಂದು ಅಂತ ಕಾಂಗ್ರೆಸ್ ಬಯಸುತ್ತಿದೆ. ನಮಗೆ ಈ ಸುದ್ದಿ ಬೇಡ, ರಾಜ್ಯದ ಜನರ ಒಳಿತು ಬೇಕು. ಡಿಕೆಶಿ ಮತ್ತು ಕುಮಾರಸ್ವಾಮಿ ಕುಟುಂಬದ ನಡುವಿನ ವೈಯಕ್ತಿಕ ಜಗಳ ಇದು. ಇಬ್ಬರ ಕೌಟುಂಬಿಕ, ವೈಯಕ್ತಿಕ ಜಗಳದಿಂದ ರಾಜ್ಯ ಜನರಿಗೆ ಅನ್ಯಾಯ ಆಗುತ್ತಿದೆ. ತಪ್ಪು ಮಾಡಿದವರಿಗೆ ಶಿಕ್ಷೆ ಆಗಲಿ, ಇದರಲ್ಲಿ ಎರಡು ಮಾತಿಲ್ಲ. ಆದರೆ, ಇವರ ಕುಟುಂಬದ ಜಗಳದಲ್ಲಿ ಬಿಜೆಪಿ ಎಂಟ್ರಿ ಆಗಲ್ಲ. ಪ್ರಜ್ವಲ್ ಪ್ರಕರಣದಿಂದ ಮೈತ್ರಿ ಮೇಲೆ ಪರಿಣಾಮ ಆಗಲ್ಲ. ಮೈತ್ರಿ ಮುಂದುವರಿದುಕೊಂಡು ಹೋಗುತ್ತದೆ. ಮುಂದೆ ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡರು ಮತ್ತು ವರಿಷ್ಠರು ಚರ್ಚೆ ಮಾಡುತ್ತಾರೆ ಎಂದು ಆರ್.‌ ಅಶೋಕ್‌ ಹೇಳಿದರು.

ಕಾಂಗ್ರೆಸ್‌ ಸರ್ಕಾರ ಪತನ

ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರಕ್ಕೆ ಭವಿಷ್ಯ ಇಲ್ಲ. ಇದು ಅಲುಗಾಡುತ್ತಿದೆ. ಇದನ್ನು ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ. ಶಾಸಕರು ಅಸಮಾಧಾನಗೊಂಡಿದ್ದಾರೆ. ಅಭಿವೃದ್ಧಿಗೆ ಅನುದಾನ ಕೊಡದಿರುವುದಕ್ಕೆ ಅಸಮಾಧಾನಗೊಂಡಿದ್ದಾರೆ. ಚುನಾವಣೆ ಬಳಿಕ ಈ ಸರ್ಕಾರ ಪತನ ಗ್ಯಾರಂಟಿ. ಹೀಗಾಗಿ ಅಧಿಕಾರ ಇದೆ ಅಂತ ದರ್ಪ ಮಾಡಿ ಬಿಜೆಪಿ ಕಾರ್ಯಕರ್ತರನ್ನು ಎದುರಿಸುವುದು ಬೇಡ ಎಂದು ಹೇಳುವ ಮೂಲಕ, ಸಾಮಾಜಿಕ ಜಾಲತಾಣದ ಪ್ರಶಾಂತ್ ಬಂಧಿಸಿದ್ದಕ್ಕೆ ಆರ್.‌ ಅಶೋಕ್‌ ಆಕ್ರೋಶ ವ್ಯಕ್ತಪಡಿಸಿದರು.

ಪ್ರಜಾಪ್ರಭುತ್ವದಲ್ಲಿ ಟೀಕೆ ಟಿಪ್ಪಣಿ ಸಾಮಾನ್ಯ. ಬರೀ ಹಾರ ತೂರಾಯಿ ಹಾಕಿಸಿಕೊಳ್ಳುವುದಕ್ಕೆ ಅಲ್ಲ. ಕಾಂಗ್ರೆಸ್ ಸಾಮಾಜಿಕ ಜಾಲತಾಣದಲ್ಲೂ ನಮ್ಮನ್ನು ಟೀಕೆ ಮಾಡಿದ್ದಾರೆ. 40% ಕಮಿಷನ್ ಸರ್ಕಾರ ಅಂತ ಪ್ರಚಾರ ಮಾಡಿದಿರಿ. ನಾವು ಟಾರ್ಗೆಟ್ ಮಾಡುವ ಕೆಲಸ ಮಾಡಿದೆವಾ? ಮಹಾರಾಷ್ಟ್ರ ಸರ್ಕಾರದಂತೆ ಇಲ್ಲೂ ಸರ್ಕಾರ ಬೀಳೋದು ಪಕ್ಕಾ ಎಂದು ಆರ್.‌ ಅಶೋಕ್‌ ಕಿಡಿಕಾರಿದರು.

ಸುಳ್ಳು ಹೇಳುವುದರಲ್ಲಿ ಕಾಂಗ್ರೆಸಿಗರು ನಿಸ್ಸೀಮರು

ಬಿಜೆಪಿ ಸಾಮಾಜಿಕ ಜಾಲತಾಣ ಮುಖ್ಯಸ್ಥ ಪ್ರಶಾಂತ್ ಮಾಕನೂರು ಬಂಧನದ ಬಗ್ಗೆ ಪ್ರತಿಕ್ರಿಯೆ ನೀಡಿದ ಆರ್. ಅಶೋಕ್‌, ಚುನಾವಣೆಯಲ್ಲಿ ಕಾಂಗ್ರೆಸ್‌ನವರು ಸಹ ನೂರಾರು ಟ್ವೀಟ್ ಮಾಡಿದ್ದಾರೆ. ಸಾಕಷ್ಟು ಆಪದಾನೆಗಳನ್ನು ಮಾಡಿದ್ದಾರೆ. 40% ಸರ್ಕಾರ ಅಂತೆಲ್ಲ ಆರೋಪ ಮಾಡಿದರು. ತನಿಖೆ ಮಾಡಿದ್ದೇವೆ ಅಂದರು. ಆದರೆ, ಏನೂ ಬರಲಿಲ್ಲ. ಕಾಂಗ್ರೆಸ್ ಅಂದ್ರೆ ಸುಳ್ಳು. ಸುಳ್ಳು ಹೇಳೋದ್ರಲ್ಲಿ ನಿಸ್ಸೀಮರು. ನಮ್ಮ ಸಾಮಾಜಿಕ ಜಾಲತಾಣದ ಮುಖ್ಯಸ್ಥ ಪ್ರಶಾಂತರನ್ನು ಬಂಧಿಸಿ ವಿಚಾರಣೆಗೆ ಕರೆದಿರೋದು ತಪ್ಪು. ಇದನ್ನು ಮಾಡಬಾರದಿತ್ತು. ಅವರು ಸಾಕಷ್ಟು ಟ್ವೀಟ್, ಹೇಳಿಕೆಗಳನ್ನು ಕೊಟ್ಟಿದ್ದಾರೆ. ಸರ್ಕಾರ ಇದೆ ಅಂತ ಕಾಂಗ್ರೆಸ್‌ನವರು ದುರಹಂಕಾರದಿಂದ ಮಾಡುತ್ತಿದ್ದಾರೆ. ಇದು ಅವರಿಗೆ ತಿರುಗುಬಾಣ ಆಗುತ್ತದೆ. ಬಹಳ ದಿನ ನೀವು ಇರೋದಿಲ್ಲ, ಬಹಳ ದಿನ ಉಳಿಯೋದಿಲ್ಲ. ನಿಮ್ಮ ಸರ್ಕಾರದ ಅವಧಿ ಮುಗಿಯುತ್ತಿದೆ. ಸರ್ಕಾರದ ಆಯುಷ್ಯ ಮುಗಿಯುತ್ತಿದೆ. ಇನ್ನೇನು ದಿನಗಳನ್ನು ಎಣಿಸುತ್ತಿದ್ದೀರಿ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇದನ್ನೂ ಓದಿ: Prajwal Revanna Case: ರೇವಣ್ಣ ಜಾಮೀನು ಅರ್ಜಿ ಸೋಮವಾರಕ್ಕೆ: ಎಸ್‌ಐಟಿಗೆ ಹಿಗ್ಗಾಮುಗ್ಗಾ ತರಾಟೆ; ವಕೀಲ ನಾಗೇಶ್‌ ವಾದ ಹೀಗಿತ್ತು!

ಬಹಳಷ್ಟು ಶಾಸಕರು ಸಂಪರ್ಕದಲ್ಲಿದ್ದಾರೆ

ಬರಗಾಲ ಪರಿಹಾರವನ್ನು ನ್ಯಾಯವಾಗಿ ಬಿಡುಗಡೆ ಮಾಡಿಲ್ಲ. ಕೇಂದ್ರ ಕೊಟ್ಟಿದ್ದು ಬಿಟ್ಟರೆ ರಾಜ್ಯ ಸರ್ಕಾರದ ಒಂದೇ ಒಂದು ನಯಾ ಪೈಸೆಯನ್ನು ಕೊಟ್ಟಿಲ್ಲ. ಇವರ ಯೋಗ್ಯತೆ ಏನು? ಮಾನ ಮರ್ಯಾದೆ ಇದೆಯಾ? ಸರ್ಕಾರ ಬೀಳುವ ಹಂತಕ್ಕೆ ತಯಾರಾಗಿ ನಿಂತಿದ್ದಾರೆ. ಅವರ ಸರ್ಕಾರವನ್ನು ಅವರೇ ಬೀಳಿಸುತ್ತಾರೆ. ಮುಂದೆ ನೋಡಿ ಪಿಕ್ಚರ್ ಇದೆ. ಹೇಗಿರಲಿದೆ ಎಂದು ನೀವೇ ನೋಡಿ. ರಾಜಕಾರಣದಲ್ಲಿ ಏನಾದರೂ ಆಗಬಹುದು. ಮಹಾರಾಷ್ಟ್ರದಲ್ಲಿ, ಮಧ್ಯ ಪ್ರದೇಶದಲ್ಲಿ ಅಷ್ಟೇ ಏಕೆ ನಮ್ಮ‌ ಕರ್ನಾಟಕದಲ್ಲೇ ಆಗಿದ್ದನ್ನು ನೋಡಿದ್ದೇವೆ. ಬಹಳಷ್ಟು ಜನ ಸಂಪರ್ಕದಲ್ಲಿದ್ದಾರೆ. ಇಲ್ಲ ಅಂತ ಯಾರು ಹೇಳುತ್ತಾರೆ. ನಮ್ಮ ಜತೆ ಸಂಪರ್ಕದಲ್ಲಿದ್ದಾರೆ. ಈ ಕಾಂಗ್ರೆಸ್ ಸರ್ಕಾರಕ್ಕೆ ಕ್ಷಣಗಣನೆ ಪ್ರಾರಂಭವಾಗಿದೆ. ಲೋಕಸಭಾ ಚುನಾವಣೆ ಫಲಿತಾಂಶದ ನಂತರ ಗ್ಯಾರಂಟಿಯಾಗಿ ಬದಲಾವಣೆ ಆಗುತ್ತದೆ ಎಂದು ಜನರೇ ಹೇಳುತ್ತಿದ್ದಾರೆ.

Continue Reading

ಕ್ರೈಂ

Physical Abuse : ಲೈಂಗಿಕ ದೌರ್ಜನ್ಯ; ಕಕ್ಷಿದಾರ ಮಹಿಳೆಯನ್ನು ಮಂಚಕ್ಕೆ ಕರೆದ ಪಬ್ಲಿಕ್ ಪ್ರಾಸಿಕ್ಯೂಟರ್!

Physical Abuse : ಪ್ರಕರಣವೊಂದರ ಆದೇಶ ಪ್ರತಿ ಕೊಡುವುದಾಗಿ ಹೇಳಿ ಕಕ್ಷಿದಾರ ಮಹಿಳೆಯನ್ನು ಲಾಡ್ಜ್‌ಗೆ ಕರೆದ ಪಬ್ಲಿಕ್‌ ಪ್ರಾಸಿಕ್ಯೂಟರ್ ಲೈಂಗಿಕ ದೌರ್ಜನ್ಯ ನಡೆಸಿದ್ದಾನೆ. ಬೆಂಗಳೂರಿನಲ್ಲಿ ಪಬ್ಲಿಕ್‌ ಪ್ರಾಸಿಕ್ಯೂಟರ್‌ನನ್ನು ಪೊಲೀಸರು ಬಂಧಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

VISTARANEWS.COM


on

By

Physical Abuse The public prosecutor called the client woman to the lodge
ಸಿಕ್ಕಿ ಬಿದ್ದಿದ್ದಕ್ಕೆ ಓಡಿ ಹೋಗುತ್ತಿದ್ದ ಪಬ್ಲಿಕ್‌ ಪ್ರಾಸಿಕ್ಯೂಟರ್ ಶ್ರೀರಾಂ
Koo

ಬೆಂಗಳೂರು: ಕಕ್ಷಿದಾರ ಮಹಿಳೆಗೆ ಪ್ರಕರಣವೊಂದರ ಆದೇಶ ಪ್ರತಿ ಕೊಡುವುದಾಗಿ ಹೇಳಿ ಲೈಂಗಿಕ ದೌರ್ಜನ್ಯ (Physical Abuse) ನಡೆಸಿರುವ ಆರೋಪ ಕೇಳಿ ಬಂದಿದೆ. ಬೆಂಗಳೂರಿನ ಕಾಟನ್‌ಪೇಟೆ ಪೊಲೀಸರು ಪಬ್ಲಿಕ್ ಪ್ರಾಸಿಕ್ಯೂಟರ್‌ ಶ್ರೀರಾಂ ಬಂಧಿಸಲಾಗಿದೆ.

ಮಹಿಳೆ ನೀಡಿದ್ದ ಹಳೆಯ ಪ್ರಕರಣದಲ್ಲಿ ಆರೋಪಿಗಳಿಗೆ ಜಾಮೀನು ಮಂಜೂರಾಗಿತ್ತು. ಹೀಗಾಗಿ ಆ ಮಹಿಳೆ ಜಾಮೀನು ರದ್ದು ಕೋರಿ ಅರ್ಜಿ ಸಲ್ಲಿಸಲು ಆದೇಶ ಪ್ರತಿಯನ್ನು ಪಬ್ಲಿಕ್‌ ಪ್ರಾಸಿಕ್ಯೂಟರ್ ಬಳಿ ಕೇಳಿದ್ದಳು. ಮೆಜೆಸ್ಟಿಕ್‌ ಬಳಿ ಇರುವ ಹೋಟೆಲ್‌ ಸಮೀಪ ಪ್ರಾಸಿಕ್ಯೂಟರ್ ಶ್ರೀರಾಂ ಆದೇಶ ಪ್ರತಿ ಕೊಡುವುದಾಗಿ ಮಾತನಾಡಿದ್ದಾನೆ. ಇಲ್ಲೇ ಕಾಟನ್‌ಪೇಟೆಯ ಲಾಡ್ಜ್‌ವೊಂದಕ್ಕೆ ಬನ್ನಿ ಕೇಸ್ ಬಗ್ಗೆ ಮಾತಾಡೋಣ ಎಂದಿದ್ದಾನೆ. ಮಹಿಳೆಯನ್ನು ನಾನಾ ರೀತಿಯಲ್ಲಿ ಒತ್ತಾಯ ಮಾಡಿ ಲಾಡ್ಜ್‌ ಹೋಗೊಣಾ ಎಂದಿದ್ದಾನೆ. ಲೈಂಗಿಕವಾಗಿ ಸಹಕರಿಸಲು ಕೋರಿದ್ದಾನೆ ಎಂದು ಆರೋಪಿಸಿದ್ದಾರೆ.

ಈ ವೇಳೆ ಪಬ್ಲಿಕ್‌ ಪ್ರಾಸಿಕ್ಯೂಟರ್ ವರ್ತನೆಗೆ ಪ್ರತಿರೋಧ ತೋರಿದ ಮಹಿಳೆ, ಆತನಿಗೆ ಗೊತ್ತಿಲ್ಲದಂತೆ ಕೂಡಲೆ ಪತಿಗೆ ಕರೆ ಮಾಡಿ ಅಸಭ್ಯ ವರ್ತನೆ ಮಾಡುತ್ತಿರುವ ಬಗ್ಗೆ ತಿಳಿಸಿದ್ದಾಳೆ. ತಕ್ಷಣ ಮಾಹಿತಿ ಪಡೆದು ಬಂದ ಮಹಿಳೆಯ ಪತಿ ಹಾಗೂ ಅವರ ಸ್ನೇಹಿತರು ಪಬ್ಲಿಕ್‌ ಪ್ರಾಸಿಕ್ಯೂಟರ್‌ ಲಾಡ್ಜ್‌ಗೆ ಕರೆಯುವುದನ್ನು ಮೊಬೈಲ್‌ನಲ್ಲಿ ರೆಕಾರ್ಡ್‌ ಮಾಡಿದ್ದಾರೆ. ರಸ್ತೆಯಲ್ಲೇ ನಿಂತು ಮಹಿಳೆಯನ್ನು ಲಾಡ್ಜ್‌ಗೆ ಕರೆದಿದ್ದಾನೆ. ಈ ವೇಳೆ ಮಹಿಳೆಯ ಪತಿ ಹಾಗೂ ಸ್ನೇಹಿತರು ಸಹಾಯಕ್ಕೆ ದೌಡಾಯಿಸಿದ್ದಾರೆ. ಯಾವ ಲಾಡ್ಜ್‌ಗೆ ಬರಬೇಕೆಂದು ಪ್ರಶ್ನೆ ಮಾಡಿದಾಗ ಇವರಿಂದ ತಪ್ಪಿಸಿಕೊಳ್ಳಲು ಯತ್ನಿಸಿದ್ದಾನೆ. ಕೂಡಲೇ ಸ್ಥಳೀಯರು ಎಲ್ಲರೂ ಸೇರಿ ಆತನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.

ಕಾಟನ್ ಪೇಟೆ ಪೊಲೀಸರು ಆರೋಪಿ ಶ್ರೀರಾಂನನ್ನು ಬಂಧಿಸಿ ಕೋರ್ಟ್‌ಗೆ ಹಾಜರು ಪಡಿಸಿದ್ದಾರೆ. ನ್ಯಾಯಾಲಯವು ಆರೋಪಿ ಶ್ರೀಂರಾಗೆ ನ್ಯಾಯಾಂಗ ಬಂಧನಕ್ಕೆ ಆದೇಶಿಸಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Union Minister Pralhad Joshi latest Statement in hubli
ಕರ್ನಾಟಕ9 mins ago

Pralhad Joshi: ದೇಶದಲ್ಲಿ ಹಿಂದೂ ಜನಸಂಖ್ಯೆ ಕುಸಿತ ಆತಂಕಕಾರಿ: ಸಚಿವ ಪ್ರಲ್ಹಾದ್‌ ಜೋಶಿ

Rahul gandhi
ದೇಶ27 mins ago

Rahul Gandhi: “ಅದಾನಿ-ಅಂಬಾನಿ… ಕಾಪಾಡಿ..ಕಾಪಾಡಿ ಅಂತಿದ್ದಾರೆ ಪ್ರಧಾನಿ ಮೋದಿ” ; ರಾಹುಲ್‌ ಗಾಂಧಿ ವ್ಯಂಗ್ಯ

Madhavi Latha
ದೇಶ30 mins ago

ಹೈದರಾಬಾದ್ ದರ್ಗಾದಲ್ಲಿ ಪ್ರಾರ್ಥನೆ ಸಲ್ಲಿಸಿ, ಮುಸ್ಲಿಂ ಗಲ್ಲಿಗಳಲ್ಲಿ ಪ್ರಚಾರ ಮಾಡಿದ ಬಿಜೆಪಿ ಅಭ್ಯರ್ಥಿ ಮಾಧವಿ ಲತಾ

Covishield Vaccine
ಪ್ರಮುಖ ಸುದ್ದಿ41 mins ago

Covishield: ಭಾರತದಲ್ಲೂ ಎಲ್ಲಾ ಕೋವಿಡ್ ಲಸಿಕೆಗಳ ಸೈಡ್‌ ಎಫೆಕ್ಟ್‌ ಪರಿಶೀಲಿಸಿ: ವೈದ್ಯರ ಒತ್ತಾಯ

Kannada New Movie
ಸಿನಿಮಾ57 mins ago

Kannada New Movie: ‘ಗಾಡ್ ಪ್ರಾಮಿಸ್’ ಚಿತ್ರಕ್ಕೆ ಮುನ್ನುಡಿ; ಆನೆಗುಡ್ಡೆ ಗಣಪತಿ ದೇಗುಲದಲ್ಲಿ ಮುಹೂರ್ತ

Aravind Kejriwal
ಪ್ರಮುಖ ಸುದ್ದಿ1 hour ago

Arvind Kejriwal: ಜೂನ್‌ 1ರವರೆಗೆ ಕೇಜ್ರಿವಾಲ್‌ಗೆ ಜಾಮೀನು, ಮತದಾನ ಮುಗಿಯುವವರೆಗೆ ರಿಲೀಫ್‌

KIA bengaluru terminal 2
ಪ್ರಮುಖ ಸುದ್ದಿ2 hours ago

Terminal 2: ಭಾರಿ ಮಳೆಗೆ ಬೆಂಗಳೂರು ವಿಮಾನ ನಿಲ್ದಾಣದ 2ನೇ ಟರ್ಮಿನಲ್‌ ಸೋರಿಕೆ; ವಿಮಾನ ಹಾರಾಟ ಅಸ್ತವ್ಯಸ್ತ

Prajwal Revanna Case Pen drive case personal quarrel No threat to BJP and JDS alliance says R Ashoka
ರಾಜಕೀಯ2 hours ago

Prajwal Revanna Case: ಪೆನ್‌ಡ್ರೈವ್‌ ಕೇಸ್‌ ವೈಯಕ್ತಿಕ ಜಗಳ; ಬಿಜೆಪಿ – ಜೆಡಿಎಸ್‌ ಮೈತ್ರಿಗೆ ಧಕ್ಕೆ ಇಲ್ಲ: ಆರ್.‌ ಅಶೋಕ್‌

Physical Abuse The public prosecutor called the client woman to the lodge
ಕ್ರೈಂ2 hours ago

Physical Abuse : ಲೈಂಗಿಕ ದೌರ್ಜನ್ಯ; ಕಕ್ಷಿದಾರ ಮಹಿಳೆಯನ್ನು ಮಂಚಕ್ಕೆ ಕರೆದ ಪಬ್ಲಿಕ್ ಪ್ರಾಸಿಕ್ಯೂಟರ್!

Roopa Iyer
ಕ್ರೈಂ2 hours ago

Roopa Iyer: ನಿರ್ದೇಶಕಿ ರೂಪಾ ಅಯ್ಯರ್‌ಗೂ ಆನ್‌ಲೈನ್‌ ಕಳ್ಳರ ಕಾಟ; ಅಧಿಕಾರಿಗಳ ಹೆಸರಿನಲ್ಲಿ ಕರೆ ಮಾಡಿ 30 ಲಕ್ಷ ರೂ.ಗೆ ಬೇಡಿಕೆ

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Physical Abuse The public prosecutor called the client woman to the lodge
ಕ್ರೈಂ2 hours ago

Physical Abuse : ಲೈಂಗಿಕ ದೌರ್ಜನ್ಯ; ಕಕ್ಷಿದಾರ ಮಹಿಳೆಯನ್ನು ಮಂಚಕ್ಕೆ ಕರೆದ ಪಬ್ಲಿಕ್ ಪ್ರಾಸಿಕ್ಯೂಟರ್!

murder case kalaburagi
ಕಲಬುರಗಿ3 hours ago

Murder Case : ಕಾಂಗ್ರೆಸ್‌ಗೆ ವೋಟ್‌ ಹಾಕಿದ್ದಕ್ಕೆ ಅಮಾವಾಸ್ಯೆ ದಿನ ಕರೆದು ಕೊಂದರು

Rain Effect In karnataka
ಮಳೆ4 hours ago

Rain Effect : ಬಿರುಗಾಳಿ ರಭಸಕ್ಕೆ ಮನೆಯ ಗೇಟ್ ಬಿದ್ದು ಬಾಲಕಿ ಸಾವು; ಸಿಡಿಲಿಗೆ ಎತ್ತುಗಳು ಬಲಿ

Dina Bhavishya
ಭವಿಷ್ಯ11 hours ago

Dina Bhavishya: ಶುಭ ಶುಕ್ರವಾರ ಈ ರಾಶಿಯವರಿಗೆ ಖುಲಾಯಿಸಲಿದೆ ಲಕ್‌

Prajwal Revanna case Revanna bail plea to be heard on Monday Advocate Nagesh argument was as follows
ಕ್ರೈಂ18 hours ago

Prajwal Revanna Case: ರೇವಣ್ಣ ಜಾಮೀನು ಅರ್ಜಿ ಸೋಮವಾರಕ್ಕೆ: ಎಸ್‌ಐಟಿಗೆ ಹಿಗ್ಗಾಮುಗ್ಗಾ ತರಾಟೆ; ವಕೀಲ ನಾಗೇಶ್‌ ವಾದ ಹೀಗಿತ್ತು!

Prajwal Revanna Case Hasanambe is going to destroy this government HD Kumaraswamy curse
ರಾಜಕೀಯ19 hours ago

Prajwal Revanna Case: ಈ ಸರ್ಕಾರವನ್ನು ಹಾಸನಾಂಬೆ ಧ್ವಂಸ ಮಾಡಲಿದ್ದಾಳೆ: ಎಚ್‌ಡಿಕೆ ಶಾಪ

Prajwal Revanna Case DK Shivakumar alleged mastermind in 25000 pen drive allotment
ಹಾಸನ20 hours ago

Prajwal Revanna Case: 25,000 ಪೆನ್ ಡ್ರೈವ್ ಹಂಚಿಕೆಯಲ್ಲಿ ಡಿ.ಕೆ. ಶಿವಕುಮಾರ್ ಮಾಸ್ಟರ್ ಮೈಂಡ್ ಎಂದು ರಾಜ್ಯಪಾಲರಿಗೆ ದೂರು!

SSLC Result 2024 what is the reason for most of the students fail in SSLC
ಕರ್ನಾಟಕ1 day ago

SSLC Result 2024: ಎಸ್‌ಎಸ್‌ಎಲ್‌ಸಿಯಲ್ಲಿ ಹೆಚ್ಚಿನ ಮಕ್ಕಳು ಫೇಲ್‌ ಆಗಲು ಶಿಕ್ಷಣ ಇಲಾಖೆಯ ಈ ನಿರ್ಧಾರವೇ ಕಾರಣ!

Sslc exam Result 2024
ಶಿಕ್ಷಣ1 day ago

SSLC Result 2024 : ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಫೇಲಾದರೂ, ಕಡಿಮೆ ಅಂಕ ಬಂದರೂ ಡೋಂಟ್‌ ವರಿ; ಇನ್ನೂ ಇದೆ ಎರಡು ಚಾನ್ಸ್‌!

SSLC Result 2024 secret behind 20 percent grace marks
ಕರ್ನಾಟಕ1 day ago

SSLC Result 2024: ಎಸ್‌ಎಸ್‌ಎಲ್‌ಸಿಯಲ್ಲಿ ಈ ಬಾರಿ ನೂರಕ್ಕೆ 25 ಅಂಕ ಪಡೆದವರೂ ಪಾಸ್! ಶೇ. 20 ಗ್ರೇಸ್ ಮಾರ್ಕ್ಸ್ ಕೊಟ್ಟಿದ್ದರ ಹಿಂದಿದೆ ಇಂಟರೆಸ್ಟಿಂಗ್ ಕತೆ!

ಟ್ರೆಂಡಿಂಗ್‌