Vijayananda Film | ನ.6ರಂದು ವಿಜಯ ಸಂಕೇಶ್ವರ ಜೀವನ ಆಧಾರಿತ ವಿಜಯಾನಂದ ಚಿತ್ರದ ಆಡಿಯೊ ಲಾಂಚ್ - Vistara News

ಪ್ರಮುಖ ಸುದ್ದಿ

Vijayananda Film | ನ.6ರಂದು ವಿಜಯ ಸಂಕೇಶ್ವರ ಜೀವನ ಆಧಾರಿತ ವಿಜಯಾನಂದ ಚಿತ್ರದ ಆಡಿಯೊ ಲಾಂಚ್

‘ವಿಜಯಾನಂದ’ ಚಿತ್ರದ ಆಡಿಯೊ (Vijayananda Film) ನವೆಂಬರ್‌ 6ರಂದು ಸಂಜೆ 6 ಗಂಟೆಗೆ ಬಿಡುಗಡೆಯಾಗಲಿದೆ.
‘ಹಾಗೆ ಆದ ಆಲಿಂಗನ’ ಎಂದು ಸಾಗುವ ರೊಮ್ಯಾಂಟಿಕ್ ಸಾಂಗ್ ಇದಾಗಿದೆ.

VISTARANEWS.COM


on

Vijayananda-Film-3
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಪದ್ಮಶ್ರೀ ಡಾ. ವಿಜಯ ಸಂಕೇಶ್ವರ ಅವರ ಜೀವನಾಧಾರಿತ ‘ವಿಜಯಾನಂದ’ (Vijayananda Film) ಚಿತ್ರವು ಪ್ರಾರಂಭದಿಂದಲೂ ಸ್ಟಾರ್ ಕಾಸ್ಟ್, ಕಲಾವಿದರ ಲುಕ್, ಮೇಕಿಂಗ್, ಕುತೂಹಲ ಮೂಡಿಸುವ ಟೀಸರ್, ಬಹುಭಾಷೆಗಳಲ್ಲಿ ಪ್ಯಾನ್ ಇಂಡಿಯಾ ಬಿಡುಗಡೆ ಯೋಜನೆ ಸೇರಿ ಹಲವು ಕಾರಣಕ್ಕೆ ಸುದ್ದಿ ಮಾಡುತ್ತಿದೆ. ಈಗ ಸಿನಿಮಾ ಕುರಿತು ಮತ್ತೊಂದು ಅಪ್‌ಡೇಟ್‌ ಸಿಕ್ಕಿದ್ದು, ‘ವಿಜಯಾನಂದ’ ಚಿತ್ರದ ಆಡಿಯೊ ನವೆಂಬರ್‌ 6ರಂದು ಸಂಜೆ 6 ಗಂಟೆಗೆ ಬಿಡುಗಡೆಯಾಗಲಿದೆ. ‘ಹಾಗೆ ಆದ ಆಲಿಂಗನ’ ಎಂದು ಸಾಗುವ ರೊಮ್ಯಾಂಟಿಕ್ ಸಾಂಗ್ಅನ್ನು ಬಿಡುಗಡೆ ಮಾಡಲಾಗುತ್ತಿದೆ.

ನಿಹಾಲ್‌ ನಾಯಕನಾಗಿ, ಸಿರಿ ಪ್ರಹ್ಲಾದ್ ನಾಯಕಿಯಾಗಿ ನಟಿಸುತ್ತಿದ್ದಾರೆ. ಚಿಕ್ಕಮಗಳೂರಿನ ಸುಂದರ ತಾಣಗಳಲ್ಲಿ, ಹಳೇಬೀಡು, ಬೇಲೂರು ಸೇರಿದಂತೆ 10ಕ್ಕೂ ಹೆಚ್ಚು ಪ್ರೇಕ್ಷಣೀಯ ಸ್ಥಳಗಳಲ್ಲಿ ಹಾಡಿನ ಚಿತ್ರೀಕರಣ ಮಾಡಲಾಗಿದೆ ಎಂದು ಚಿತ್ರತಂಡ ಹೇಳಿಕೊಂಡಿದೆ.

ಹೆಸರಾಂತ ಸಂಗೀತ ನಿರ್ದೇಶಕ ಗೋಪಿ ಸುಂದರ್ ಸಂಗೀತ ಸಂಯೋಜಿಸಿರುವ ಈ ಹಾಡಿಗೆ ಧನಂಜಯ್ ರಂಜನ್ ಸಾಹಿತ್ಯ ರಚಿಸಿದ್ದಾರೆ. ಒರಾಯನ್ ಮಾಲ್‌ನಲ್ಲಿ ನಡೆಯಲಿರುವ ಆಡಿಯೊ ಬಿಡುಗಡೆ ಕಾರ್ಯಕ್ರಮದಲ್ಲಿ ಗೋಪಿ ಸುಂದರ್ ಹಾಡಿನ ಪ್ರದರ್ಶನ ನೀಡಲಿದ್ದಾರೆ. ಶರಣ್, ಹರ್ಷಿಕಾ ಪೂಣಚ್ಚ ಸೇರಿ ಸ್ಯಾಂಡಲ್‌ವುಡ್‌ನ ನಟ, ನಟಿಯರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.

ಯಶಸ್ವಿ ಮತ್ತು ಮಾದರಿ ಉದ್ಯಮಿ ಡಾ. ವಿಜಯ ಸಂಕೇಶ್ವರ ಅವರ ಕುರಿತ ‘ವಿಜಯಾನಂದ’ ಚಿತ್ರವನ್ನು ವೀಕ್ಷಿಸಲು ನಾಡಿನ ಜನ ಕಾತರದಿಂದ ಕಾಯುತ್ತಿದ್ದಾರೆ. ಭಾನುವಾರ ಇದರ ಹಾಡುಗಳ ಆಡಿಯೊ ಬಿಡುಗಡೆ ಆಗುತ್ತಿರುವುದು ಸಂತಸದ ಸಂಗತಿ. ಈ ಚಿತ್ರದ ಟ್ರೇಲರ್ ಸೂಪರ್ ಹಿಟ್ ಆದಂತೆ, ಹಾಡುಗಳೂ ಜನ ಮೆಚ್ಚುಗೆ ಗಳಿಸಲಿವೆ.
ಹರಿಪ್ರಕಾಶ್ ಕೋಣೆಮನೆ, ಸಿಇಒ ಮತ್ತು ಪ್ರಧಾನ ಸಂಪಾದಕ, ವಿಸ್ತಾರ ನ್ಯೂಸ್

ಇದನ್ನೂ ಓದಿ | ಮಾಜಿ ಶಾಸಕ ವಿಜಯಾನಂದ ಕಾಶಪ್ಪನವರ್ 2ನೇ ಮದುವೆ ಚರ್ಚೆ ಜೋರು; ನಟಿ ಜತೆಗಿನ ಫೋಟೋ ವೈರಲ್


ಪದ್ಮಶ್ರೀ ಡಾ. ವಿಜಯ ಸಂಕೇಶ್ವರರ ಬಯೋಪಿಕ್‌ಅನ್ನು ವಿಆರ್‌ಎಲ್ ಫಿಲಂ ಪ್ರೊಡಕ್ಷನ್ಸ್ ಬ್ಯಾನರ್‌ನಲ್ಲಿ ಡಾ. ಆನಂದ ಸಂಕೇಶ್ವರ ನಿರ್ಮಿಸುತ್ತಿದ್ದಾರೆ. ‘ಟ್ರಂಕ್’ ಖ್ಯಾತಿಯ ನಿರ್ದೇಶಕಿ ರಿಷಿಕಾ ಶರ್ಮಾ ನಿರ್ದೇಶಿಸುತ್ತಿದ್ದಾರೆ. ಡಾ. ವಿಜಯ ಸಂಕೇಶ್ವರರ ಪಾತ್ರದಲ್ಲಿ ನಿಹಾಲ್ ರಜಪೂತ್, ಶ್ರೀಮತಿ ಲಲಿತಾ ಸಂಕೇಶ್ವರರ ಪಾತ್ರದಲ್ಲಿ ಸಿರಿ ಪ್ರಹ್ಲಾದ್, ಡಾ. ವಿಜಯ ಸಂಕೇಶ್ವರರ ತಂದೆ ಬಿ.ಜಿ. ಸಂಕೇಶ್ವರರ ಪಾತ್ರದಲ್ಲಿ ಹಿರಿಯ ನಟ ಅನಂತ್ ನಾಗ್, ಡಾ. ಆನಂದ ಸಂಕೇಶ್ವರರ ಪಾತ್ರದಲ್ಲಿ ಭರತ್ ಬೋಪಣ್ಣ ಹಾಗೂ ವಿಜಯ ಸಂಕೇಶ್ವರರ ಗುರುಗಳ ಪಾತ್ರದಲ್ಲಿ ರವಿಚಂದ್ರನ್ ನಟಿಸುತ್ತಿದ್ದಾರೆ.

ಡಾ. ವಿಜಯ ಸಂಕೇಶ್ವರ ಅವರ ಜೀವನ ಮತ್ತು ಸಾಧನೆ‌ಯ ಕತೆ ಎಲ್ಲರಿಗೂ ಪ್ರೇರಣಾದಾಯಕ. ಶೀಘ್ರವೇ ಬಿಡುಗಡೆ ಆಗಲಿರುವ ‘ವಿಜಯಾನಂದ’ ಚಿತ್ರ ಸ್ಫೂರ್ತಿದಾಯಕ ಆಗಲಿದೆ. ಭಾನುವಾರ ನ.6ರಂದು ಬಿಡುಗಡೆ ಆಗಲಿರುವ ಈ ಚಿತ್ರದ ಹಾಡುಗಳು ಸೂಪರ್ ಹಿಟ್ ಆಗಲಿ.
-ಎಚ್ ವಿ ಧರ್ಮೇಶ್, ಚೇರ್ಮನ್ ಮತ್ತು ಎಂಡಿ, ವಿಸ್ತಾರ ನ್ಯೂಸ್ ಪ್ರೈ.ಲಿ.

    ‘ವಿಜಯಾನಂದ’ ಚಿತ್ರ ಕನ್ನಡ, ಹಿಂದಿ, ತೆಲುಗು, ತಮಿಳು ಹಾಗೂ ಮಲಯಾಳಂ ಭಾಷೆಗಳಲ್ಲಿ ಏಕಕಾಲಕ್ಕೆ ಕೆಲವೇ ದಿನಗಳಲ್ಲಿ ಬಿಡುಗಡೆಯಾಗಲಿದೆ.

    Vijayananda Film

    ಇದನ್ನೂ ಓದಿ | Vijay Sankeshwar | ಇತಿಹಾಸ ಸೃಷ್ಟಿಸಿದವರೆಲ್ಲರೂ ಅಪ್ಪನ ವಿರುದ್ಧ ಹೋದವರು!: ವಿಜಯಾನಂದ ಟೀಸರ್‌ ವೈರಲ್‌

    ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
    ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
    Continue Reading
    Click to comment

    Leave a Reply

    Your email address will not be published. Required fields are marked *

    ಕ್ರೀಡೆ

    Mitchell Starc : ಐಪಿಎಲ್ ಯಶಸ್ಸಿನ ಶ್ರೇಯಸ್ಸನ್ನು ಪತ್ನಿಗೆ ಅರ್ಪಿಸಿದ ಸ್ಟಾರ್ಕ್​; ಅವರ ಪತ್ನಿಯೂ ಕ್ರಿಕೆಟರ್​

    Mitchell Strac :ಸ್ಟಾರ್ಕ್ ಅವರ ಪತ್ನಿ ಆಸ್ಟ್ರೇಲಿಯಾ ಮಹಿಳೆಯರ ತಂಡದ ವಿಕೆಟ್​ ಕೀಪರ್ ಬ್ಯಾಟರ್​ ಅಲಿಸ್ಸಾ ಹೀಲಿ ಕೂಡ ಪಂದ್ಯಗಳ ಸಮಯದಲ್ಲಿ ತಮ್ಮ ಪತಿಯನ್ನು ಹುರಿದುಂಬಿಸಲು ಆಗಮಿಸಿದ್ದರು. ಆಸ್ಟ್ರೇಲಿಯಾ ಮಹಿಳಾ ತಂಡದ ನಾಯಕಿಯೂ ಆಗಿರುವ ಹೀಲಿ, ವಾಂಖೆಡೆ ಕ್ರೀಡಾಂಗಣದಲ್ಲಿ ಹಾರ್ದಿಕ್ ಪಾಂಡ್ಯ ಅವರ ಮುಂಬೈ ಇಂಡಿಯನ್ಸ್ ವಿರುದ್ಧದ ಕೆಕೆಆರ್ ಪಂದ್ಯದ ವೇಳೆ ಮೊದಲ ಬಾರಿಗೆ ಕಾಣಿಸಿಕೊಂಡರು.

    VISTARANEWS.COM


    on

    Mitchell Starc
    Koo

    ಬೆಂಗಳೂರು: ಇಂಡಿಯನ್ ಪ್ರೀಮಿಯರ್ ಲೀಗ್ ನಲ್ಲಿ (IPL 2024) ಪುನರಾಗಮನ ಮಾಡಲು ಸಹಾಯ ಮಾಡಿದ ಪತ್ನಿ ಅಲಿಸ್ಸಾ ಹೀಲಿ ಅವರನ್ನು ಮಿಚೆಲ್ ಸ್ಟಾರ್ಕ್ ಶ್ಲಾಘಿಸಿದ್ದಾರೆ. ಆಸ್ಟ್ರೇಲಿಯಾದ ಎಡಗೈ ವೇಗದ ಬೌಲರ್ 24.75 ಕೋಟಿ ರೂ.ಗೆ ಖರೀದಿಸಿದ ನಂತರ ಅವರ ಹೆಗಲ ಮೇಲೆ ಭಾರಿ ನಿರೀಕ್ಷೆಗಳಿದ್ದವು. ವಾಸ್ತವವಾಗಿ, ಅವರು ನಗದು ಶ್ರೀಮಂತ ಟಿ 20 ಲೀಗ್ ಇತಿಹಾಸದಲ್ಲಿ ಅತ್ಯಂತ ದುಬಾರಿ ಆಟಗಾರ ಎನಿಸಿಕೊಂಡಿದ್ದಾರೆ. ಆದಾಗ್ಯೂ, ಅವರು ತಮ್ಮ ಮೊದಲ 2 ಪಂದ್ಯಗಳಲ್ಲಿ ಒಂದೇ ಒಂದು ವಿಕೆಟ್ ಪಡೆಯದೆ 12.50 ಎಕಾನಮಿ ದರದಲ್ಲಿ 100 ರನ್​ಗಳನ್ನು ಸೋರಿಕೆ ಮಾಡಿದ ನಂತರ ಅವರು ತಮ್ಮ ಕಷ್ಟದ ಸಮಯವನ್ನು ಎದುರಿಸದಿರು. ಲೀಗ್ ಹಂತದ ಕೊನೆಯ ಹಂತದಲ್ಲಿ ಫಾರ್ಮ್​ ಕಂಡುಕೊಳ್ಳುವ ಮೂಲಕ ಟೀಕಾಕಾರರಿಗೆ ಉತ್ತರ ನೀಡಿದರು.

    ಸ್ಟಾರ್ಕ್ ಅವರ ಪತ್ನಿ ಆಸ್ಟ್ರೇಲಿಯಾ ಮಹಿಳೆಯರ ತಂಡದ ವಿಕೆಟ್​ ಕೀಪರ್ ಬ್ಯಾಟರ್​ ಅಲಿಸ್ಸಾ ಹೀಲಿ ಕೂಡ ಪಂದ್ಯಗಳ ಸಮಯದಲ್ಲಿ ತಮ್ಮ ಪತಿಯನ್ನು ಹುರಿದುಂಬಿಸಲು ಆಗಮಿಸಿದ್ದರು. ಆಸ್ಟ್ರೇಲಿಯಾ ಮಹಿಳಾ ತಂಡದ ನಾಯಕಿಯೂ ಆಗಿರುವ ಹೀಲಿ, ವಾಂಖೆಡೆ ಕ್ರೀಡಾಂಗಣದಲ್ಲಿ ಹಾರ್ದಿಕ್ ಪಾಂಡ್ಯ ಅವರ ಮುಂಬೈ ಇಂಡಿಯನ್ಸ್ ವಿರುದ್ಧದ ಕೆಕೆಆರ್ ಪಂದ್ಯದ ವೇಳೆ ಮೊದಲ ಬಾರಿಗೆ ಕಾಣಿಸಿಕೊಂಡರು. ಅಂದಿನಿಂದ ಸ್ಟಾರ್ಕ್ ಹಿಂತಿರುಗಿ ನೋಡಿಲ್ಲ. ಹೀಲಿಯ ಉಪಸ್ಥಿತಿಯು ತನ್ನ ಆತ್ಮವಿಶ್ವಾಸ ಹೆಚ್ಚಿಸಿದೆ ಎಂದು ಸ್ಟಾರ್ಕ್ ಹೇಳಿದರು.

    “ಅಲಿಸ್ಸಾ ಬಂದ ನಂತರ ಎಲ್ಲವೂ ಉತ್ತಮವಾಗಿ ಸಾಗಿದೆ ” ಎಂದು ಸ್ಟಾರ್ಕ್ ಸ್ಟಾರ್ ಸ್ಪೋರ್ಟ್ಸ್​ಗೆ ತಿಳಿಸಿದ್ದಾರೆ.

    ಸ್ಟಾರ್ಕ್ ಅತ್ಯುತ್ತಮ ಪ್ರದರ್ಶನ

    ಪ್ಲೇಆಫ್ ಮತ್ತು ಫೈನಲ್​ನಲ್ಲಿ ಸ್ಟಾರ್ಕ್ ತಮ್ಮನ್ನು ತಾವು ಅತ್ಯುತ್ತಮ ಆಟಗಾರ ಎಂಬುದನ್ನು ಸಾಬೀತು ಮಾಡಿದರು. ಅಹಮದಾಬಾದ್​​ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಎಸ್​ಆರ್​ಎಚ್​​ ವಿರುದ್ಧದ ಕ್ವಾಲಿಫೈಯರ್ 1 ರಲ್ಲಿ, ನೈಟ್ ರೈಡರ್ಸ್ 8 ವಿಕೆಟ್​ಗಳಿಂದ ಗೆದ್ದ ನಂತರ ಸ್ಟಾರ್ಕ್ ಪಂದ್ಯಶ್ರೇಷ್ಠ ಪ್ರಶಸ್ತಿಯನ್ನು ಪಡೆದುಕೊಂಡರು. ಸ್ಟಾರ್ಕ್ ಟ್ರಾವಿಸ್ ಹೆಡ್ ಅವರನ್ನು ಬೌಲ್ಡ್ ಮಾಡಿ ಮಿಂಚಿದ್ದರು. ಅ ಪಂದ್ಯದಲ್ಲಿ 4 ಓವರ್​ಗಳಲ್ಲಿ 34 ರನ್ ಬಿಟ್ಟುಕೊಟ್ಟು 3 ವಿಕೆಟ್​ ಪಡೆದುಕೊಂಡಿದ್ದರು.

    ಇದನ್ನೂ ಓದಿ: Mitchell Strac : ಐಪಿಎಲ್ ಯಶಸ್ಸಿನ ಶ್ರೇಯಸ್ಸನ್ನು ಪತ್ನಿಗೆ ಅರ್ಪಿಸಿದ ಸ್ಟಾರ್ಕ್​; ಅವರ ಪತ್ನಿಯೂ ಕ್ರಿಕೆಟರ್​ 

    ಫೈನಲ್​ನಲ್ಲಿ ಸ್ಟಾರ್ಕ್ ತಮ್ಮ ಫಾರ್ಮ್ ಅನ್ನು ಮುಂದುವರಿಸಿದರು. ಮತ್ತೆ ಅವರು ಪಂದ್ಯಶ್ರೇಷ್ಠ ಪ್ರಶಸ್ತಿಯನ್ನು ಗೆದ್ದರು. ಈ ಬಾರಿ, ಅವರು 3-0-14-2 ರ ಅತ್ಯುತ್ತಮ ಸ್ಪೆಲ್ ಎಸೆದರು, ನೈಟ್ ರೈಡರ್ಸ್ ಫೈನಲ್​ನಲ್ಲಿ 8 ವಿಕೆಟ್​ಗಳಿಂದ ಗೆದ್ದು ಮೂರನೇ ಬಾರಿಗೆ ಟ್ರೋಫಿಯನ್ನು ಎತ್ತಿಹಿಡಿದಿತು. 14 ಪಂದ್ಯಗಳನ್ನಾಡಿರುವ 34ರ ಹರೆಯದ ಸ್ಟಾರ್ಕ್ 10.61ರ ಎಕಾನಮಿ ರೇಟ್ನಲ್ಲಿ 17 ವಿಕೆಟ್​​ ಕಬಳಿಸಿದ್ದಾರೆ.

    Continue Reading

    ದೇಶ

    Asaduddin Owaisi: ಓವೈಸಿ ಪಕ್ಷದ ನಾಯಕನ ಮೇಲೆ ಗುಂಡಿನ ದಾಳಿ

    Asaduddin Owaisi: ಅಬ್ದುಲ್ ಮಲಿಕ್ ಮೊಹಮ್ಮದ್ ಅವರ ದೇಹಕ್ಕೆ ಮೂರು ಕಡೆ ಗುಂಡುಗಳು ಬಿದ್ದಿವೆ. ಎದೆಯ ಎಡಭಾಗದಲ್ಲಿ, ಎಡ ತೊಡೆ ಮತ್ತು ಬಲಗೈಗೆ ಗಾಯಗಳಾಗಿವೆ. ಗಾಯಗಳು ತೀವ್ರವಾಗಿರುವ ಕಾರಣ, ಎಐಎಂಐಎಂ ನಾಯಕನನ್ನು ನಾಸಿಕ್‌ನ ಆಸ್ಪತ್ರೆಗೆ ವರ್ಗಾಯಿಸಲಾಯಿತು.

    VISTARANEWS.COM


    on

    Asaduddin Owaisi Party Leader
    Koo

    ನಾಸಿಕ್: ಅಸಾದುದ್ದೀನ್ ಓವೈಸಿ (Asaduddin Owaisi) ಯವರ ಆಲ್ ಇಂಡಿಯಾ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್ (All India Majlis-e-Ittehadul Muslimeen – AIMIM – ಎಐಎಂಐಎಂ) ಪಕ್ಷದ ನಾಯಕ, ಮಹಾರಾಷ್ಟ್ರದ ಮಾಲೆಗಾಂವ್‌ನ ಮಾಜಿ ಮೇಯರ್ (Ex Malegaon Mayor) ಅಬ್ದುಲ್ ಮಲಿಕ್ ಮೊಹಮ್ಮದ್ ಯೂನಸ್ ಇಸಾ ಎಂಬಾತನ ಮೇಲೆ ಇಂದು ಬೆಳಗ್ಗೆ ಅಪರಿಚಿತ ದಾಳಿಕೋರರು ಗುಂಡಿನ ದಾಳಿ (Firing) ನಡೆಸಿದ್ದಾರೆ.

    ಅಬ್ದುಲ್ ಮಲಿಕ್ ಮೊಹಮ್ಮದ್ ಅವರ ದೇಹಕ್ಕೆ ಮೂರು ಕಡೆ ಗುಂಡುಗಳು ಬಿದ್ದಿವೆ. ಎದೆಯ ಎಡಭಾಗದಲ್ಲಿ, ಎಡ ತೊಡೆ ಮತ್ತು ಬಲಗೈಗೆ ಗಾಯಗಳಾಗಿವೆ. ಗಾಯಗಳು ತೀವ್ರವಾಗಿರುವ ಕಾರಣ, ಎಐಎಂಐಎಂ ನಾಯಕನನ್ನು ನಾಸಿಕ್‌ನ ಆಸ್ಪತ್ರೆಗೆ ವರ್ಗಾಯಿಸಲಾಯಿತು.

    ಮಾಲೆಗಾಂವ್ ನಗರ ಪೊಲೀಸ್ ಅಧಿಕಾರಿಯ ಪ್ರಕಾರ, ಓಲ್ಡ್ ಆಗ್ರಾ ರಸ್ತೆಯಲ್ಲಿರುವ ಅಂಗಡಿಯೊಂದರ ಹೊರಗೆ ಮಲಿಕ್ ಕುಳಿತಿದ್ದಾಗ 1:20ಕ್ಕೆ ಈ ಘಟನೆ ಸಂಭವಿಸಿದೆ. ಸ್ಥಳೀಯ ಪೊಲೀಸರು ವ್ಯಾಪಕ ತನಿಖೆಯನ್ನು ಪ್ರಾರಂಭಿಸಿದ್ದಾರೆ, ಆದರೆ ಇದುವರೆಗೆ ಯಾರನ್ನೂ ಬಂಧಿಸಲಾಗಿಲ್ಲ. ಅಬ್ದುಲ್ ಮಲಿಕ್ ಮೊಹಮ್ಮದ್ ಯೂನಸ್ ಇಸಾ, ಅಸಾದುದ್ದೀನ್‌ ಓವೈಸಿಯ ಆಪ್ತನಾಗಿದ್ದು, ಮಾಲೆಗಾಂವ್‌ನ ಮೇಯರ್‌ ಆಗಿದ್ದ.

    ಅಯೋಧ್ಯೆಯಲ್ಲಿ ರಾಮಮಂದಿರವೇ ಇರ್ಲಿಲ್ಲ: ಅಸಾದುದ್ದೀನ್‌ ಓವೈಸಿ ವಿವಾದ!

    ಕಲಬುರಗಿ: ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್‌ ಓವೈಸಿ ಅವರು (Asaduddin Owaisi), “ಅಯೋಧ್ಯೆಯಲ್ಲಿ ರಾಮಮಂದಿರವೇ ಇರಲಿಲ್ಲ” ಎಂದು ಹೇಳಿಕೆ ನೀಡಿರುವುದು ವಿವಾದಕ್ಕೆ ಕಾರಣವಾಗಿದೆ.

    ಕಲಬುರಗಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “500 ವರ್ಷಗಳಿಂದ ಬಾಬರಿ ಮಸೀದಿಯಲ್ಲಿ ಮುಸ್ಲಿಮರು ಪ್ರಾರ್ಥನೆ ಸಲ್ಲಿಸುತ್ತಿದ್ದರು. ಅಯೋಧ್ಯೆಯಲ್ಲಿ ರಾಮಮಂದಿರವೇ ಇರಲಿಲ್ಲ. ಆದರೆ, ಷಡ್ಯಂತ್ರದ ಮೂಲದ ಮುಸ್ಲಿಮರಿಂದ ರಾಮಮಂದಿರವನ್ನು ಕಸಿದುಕೊಳ್ಳಲಾಯಿತು. ಕಾಂಗ್ರೆಸ್‌ನ ಜಿ.ಬಿ. ಪಂತ್‌ ಅವರು ಉತ್ತರ ಪ್ರದೇಶ ಮುಖ್ಯಮಂತ್ರಿಯಾಗಿದ್ದಾಗ ಮಸೀದಿಯಲ್ಲಿ ರಾಮನ ಮೂರ್ತಿಗಳನ್ನು ಇರಿಸಲಾಯಿತು. ಆಗ, ನಾಯರ್‌ ಅವರು ಅಯೋಧ್ಯೆ ಜಿಲ್ಲಾಧಿಕಾರಿಯಾಗಿದ್ದರು. ಇದಾದ ಬಳಿಕ ರಾಮನ ಮೂರ್ತಿಗಳನ್ನು ಮಸೀದಿಯಿಂದ ತೆಗೆಯಲೇ ಇಲ್ಲ” ಎಂದು ತಿಳಿಸಿದ್ದಾರೆ.

    “ರಾಮಮಂದಿರದ ಕುರಿತು ಮಹಾತ್ಮ ಗಾಂಧೀಜಿ ಅವರು ಎಂದಿಗೂ ಪ್ರಸ್ತಾಪ ಮಾಡಿಲ್ಲ. ವಿಶ್ವ ಹಿಂದು ಪರಿಷತ್‌ ಹುಟ್ಟುವ ಮೊದಲೇ ಮಸೀದಿ ಇತ್ತು. ಜಿ.ಬಿ. ಪಂತ್‌ ಅವರು ಮಸೀದಿಯಿಂದ ರಾಮನ ಮೂರ್ತಿಗಳನ್ನು ವಾಪಸ್‌ ತೆಗೆದುಕೊಂಡಿದ್ದರೆ 1992ರಲ್ಲಿ ಮಸೀದಿಯನ್ನು ನೆಲಸಮಗೊಳಿಸಲು ಆಗುತ್ತಿರಲಿಲ್ಲ. ತುಂಬ ವ್ಯವಸ್ಥಿತವಾಗಿ ಮಸೀದಿಯನ್ನು ಮುಸ್ಲಿಮರಿಂದ ಕಿತ್ತುಕೊಳ್ಳಲಾಯಿತು. ಇಂಡಿಯಾ ಒಕ್ಕೂಟದ ಸದಸ್ಯರಾಗಿರುವ ಅರವಿಂದ್‌ ಕೇಜ್ರಿವಾಲ್‌ ಅವರೂ ಈಗ ಹನುಮಾನ್‌ ಚಾಲೀಸಾ ಪಠಣ ಆಯೋಜಿಸಲು ಮುಂದಾಗಿದ್ದಾರೆ. ಎಲ್ಲರಿಗೂ ಬಹುಸಂಖ್ಯಾತರ ಮತಗಳೇ ಮುಖ್ಯವಾಗಿವೆ” ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

    ಇದನ್ನೂ ಓದಿ: Ram Mandir: ಅಮೆಜಾನ್‌ನಲ್ಲಿ ರಾಮಮಂದಿರ ಪ್ರಸಾದ ಸಿಗುತ್ತದೆಯೇ? ಕೇಂದ್ರ ಕೆಂಡವಾಗಿದ್ದೇಕೆ?

    Continue Reading

    ಪ್ರಮುಖ ಸುದ್ದಿ

    BS Yediyurappa: ಯಡಿಯೂರಪ್ಪ ವಿರುದ್ಧ ಪೋಕ್ಸೊ ಕೇಸ್ ದಾಖಲಿಸಿದ್ದ ಮಹಿಳೆ ಸಾವು

    BS Yediyurappa: ಉಸಿರಾಟ ಸಮಸ್ಯೆ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆ, ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಮಹಿಳೆ ತನ್ನ ಮಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಿ ಮಾಜಿ ಸಿಎಂ ಬಿ.ಎಸ್‌.ಯಡಿಯೂರಪ್ಪ ಅವರ ವಿರುದ್ಧ ನೀಡಿದ ದೂರಿನ ಮೇರೆಗೆ ಮಾರ್ಚ್‌ 14ರಂದು ಪೋಕ್ಸೊ ಪ್ರಕರಣ ದಾಖಲಾಗಿತ್ತು.

    VISTARANEWS.COM


    on

    BS Yediyurappa
    Koo

    ಬೆಂಗಳೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ವಿರುದ್ಧ ಪೋಕ್ಸೊ ಕೇಸ್‌ ದಾಖಲಿಸಿದ್ದ ಮಹಿಳೆ ಮೃತಪಟ್ಟಿದ್ದಾರೆ. ಉಸಿರಾಟದ ತೊಂದರೆಯಿಂದ ಹುಳಿಮಾವು ಬಳಿಯ ನ್ಯಾನೋ‌ ಆಸ್ಪತ್ರೆಯಲ್ಲಿ ಮಹಿಳೆ ಮೃತಪಟ್ಟಿದ್ದಾರೆ. ಮಮತಾ ಮೃತ ಮಹಿಳೆ. ಉಸಿರಾಟ ಸಮಸ್ಯೆ ಸಂಬಂಧ ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆ, ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.

    ಮಹಿಳೆಯ ಅಪ್ರಾಪ್ತ ವಯಸ್ಸಿನ ಮಗಳ ಮೇಲೆ ಈ ಹಿಂದೆ ಲೈಂಗಿಕ ದೌರ್ಜನ್ಯ ಆಗಿದೆ ಎಂಬ ಆರೋಪ ಕೇಳಿ ಬಂದಿತ್ತು. ಈ ಸಂಬಂಧ ಎಸ್‌ಐಟಿ ತನಿಖೆಗೆ ವಹಿಸುವಂತೆ ಸಹಕರಿಸಬೇಕು ಎಂದು ಮನವಿ ಮಾಡಲು 2024ರ ಫೆಬ್ರವರಿ 2ರಂದು ಯಡಿಯೂರಪ್ಪನವರ ಮನೆಗೆ ಸಂತ್ರಸ್ತ ಮಗಳ ಜತೆಗೆ ಮಹಿಳೆ ಹೋಗಿದ್ದರು. ಈ ವೇಳೆ ಯಡಿಯೂರಪ್ಪ ಅವರು ತಾಯಿ ಮತ್ತು ಮಗಳ ಜತೆ 9 ನಿಮಿಷಗಳ ಕಾಲ ಮಾತನಾಡಿದ್ದರು ಎನ್ನಲಾಗಿತ್ತು. ಆಗ ಅವರು ಬಾಲಕಿಗೆ ಮತ್ತು ಆಕೆಯ ತಾಯಿಗೆ ಸಾಂತ್ವನ ಹೇಳಿದ್ದರು ಎನ್ನಲಾಗಿತ್ತು. ಆದರೆ ಆ ಬಾಲಕಿಯ ತಾಯಿ ಕೆಲ ದಿನಗಳ ಬಳಿಕ ಯಡಿಯೂರಪ್ಪ ವಿರುದ್ಧವೇ ಆರೋಪ ಮಾಡಿದ್ದರು. ಆದರೆ ಈ ಆರೋಪವನ್ನು ಯಡಿಯೂರಪ್ಪ ಅವರು ಸ್ಪಷ್ಟವಾಗಿ ನಿರಾಕರಿಸಿದ್ದರು. ಈ ಆರೋಪ ದುರುದ್ದೇಶಪೂರಿತ ಎಂದು ಹೇಳಿದ್ದರು. ನಂತರ ಪ್ರಕರಣದ ತನಿಖೆಯನ್ನು ಸಿಐಡಿಗೆ ವರ್ಗಾವಣೆ ಮಾಡಲಾಗಿತ್ತು.

    ಇದನ್ನೂ ಓದಿ | Road Accident: ಭೀಕರ ರಸ್ತೆ ಅಪಘಾತ; ಕೆಕೆಆರ್‌ಟಿಸಿ ಬಸ್‌ ಅಪ್ಪಳಿಸಿ 3 ಬೈಕ್‌ ಸವಾರರು ಬಲಿ

    ಸೆಲೆಬ್ರಿಟಿಗಳ ಬಳಿಕ ಈಗ ಬೆಂಗಳೂರು ಶಾಲಾ ವಿದ್ಯಾರ್ಥಿನಿಯರಿಗೆ ಡೀಪ್‌ಫೇಕ್‌ ಕಾಟ; ನಗ್ನ ಫೋಟೋ ವೈರಲ್

    deep fake

    ಬೆಂಗಳೂರು: ಡೀಪ್‌ಫೇಕ್‌ ತಂತ್ರಜ್ಞಾನದ (Deep fake Technology) ದುರ್ಬಳಕೆ ಎಂದರೆ ಇದುವರೆಗೆ ರಶ್ಮಿಕಾ ಮಂದಣ್ಣ, ಕತ್ರಿನಾ ಕೈಫ್‌, ಸಚಿನ್‌ ತೆಂಡೂಲ್ಕರ್‌ ಅವರಂತಹ ಸೆಲೆಬ್ರಿಟಿಗಳು, ನಟಿಯರ ತಿರುಚಿದ ವಿಡಿಯೊಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುವುದು ಎಂದಾಗಿತ್ತು. ಆದರೆ, ಡೀಪ್‌ಫೇಕ್‌ ತಂತ್ರಜ್ಞಾನದ ಕಾವು (Deep fake Scam) ಶಾಲಾ ವಿದ್ಯಾರ್ಥಿಯರಿಗೂ ಎದುರಾಗಿದೆ.

    ಸೆಲೆಬ್ರಿಟಿಗಳಿಗೆ ಕಾಡುತ್ತಿದ್ದ ಡೀಪ್‌ಫೇಕ್‌ ಕಾಟವು ಇದೀಗ ಶಾಲಾ ವಿದ್ಯಾರ್ಥಿನಿಯರಿಗೆ ಶುರುವಾಗಿದೆ. ಪ್ರತಿಷ್ಠಿತ ಶಾಲೆಯ ವಿದ್ಯಾರ್ಥಿನಿಯರ ಮಾರ್ಫಿಂಗ್ ಫೋಟೋ ಸೋಶಿಯಲ್‌ ಮೀಡಿಯಾದಲ್ಲಿ ವೈರಲ್ ಆಗುತ್ತಿದ್ದು, ಪೋಷಕರಲ್ಲಿ ಆತಂಕ ಹೆಚ್ಚಿದೆ.

    ಖಾಸಗಿ ಶಾಲೆಯೊಂದರ 9ನೇ ತರಗತಿ ವಿದ್ಯಾರ್ಥಿನಿಯ AI ಅಲ್ಲಿ ರಚನೆಯಾದ ನಗ್ನ ಫೋಟೋ ವೈರಲ್ ಆಗಿದೆ. ಮೇ 24 ರಂದು ಬೆಳಕಿಗೆ ಬಂದ ಪ್ರಕರಣವು ಈಗ ಚರ್ಚೆಗೆ ಗ್ರಾಸವಾಗಿದೆ. ಅಂದಹಾಗೆ 50ಕ್ಕೂ ಹೆಚ್ಚು ಶಾಲೆಯ ವಿದ್ಯಾರ್ಥಿಗಳು ಇದ್ದ ಇನ್ಸ್ಟ್ರಾಗ್ರಾಂನಲ್ಲಿ ಗ್ರೂಪ್‌ವೊಂದು ರಚನೆ ಮಾಡಿದ್ದರು. ಆ ಗ್ರೂಪ್‌ನಲ್ಲಿ ಅನಾಮಧೇಯ ವ್ಯಕ್ತಿಯಿಂದ ವಿದ್ಯಾರ್ಥಿನಿಯರ ಮಾರ್ಫಿಂಗ್ ಫೋಟೋಸ್ ವೈರಲ್ ಆಗಿದೆ. ಆ ವ್ಯಕ್ತಿ ಯಾರು ಎಂಬುದರ ಅರಿವು ಕೂಡ ವಿದ್ಯಾರ್ಥಿನಿಯರಿಗೆ ಇಲ್ಲ.

    ಇದನ್ನೂ ಓದಿ | physical Abuse : ಮಗನ ಕಾಮಚೇಷ್ಠೆಗೆ ತಾಯಿ ಸಾಥ್‌; ಬೆತ್ತಲೆ ಫೋಟೊ ತೋರಿ ಬೆದರಿಸುತ್ತಿದ್ದ ಕಾಮುಕರಿಬ್ಬರು ಅರೆಸ್ಟ್‌

    ಶಾಲಾ ಗ್ರೂಪ್‌ನಲ್ಲಿ ಇದ್ದಾನೆಂದರೆ ಅವನು ಖಂಡಿತ ವಿದ್ಯಾರ್ಥಿ ಆಗಿರಬಹುದೆಂದು ಶಂಕಿಸಲಾಗಿದೆ. ಈ ವಿಚಾರ ತಿಳಿದ ಕೂಡಲೇ ವಿದ್ಯಾರ್ಥಿನಿಯರು ಕುಗ್ಗಿ ಹೋಗಿದ್ದಾರೆ. ಈಗಾಗಲೇ ವಿದ್ಯಾರ್ಥಿನಿಯರ ಪೋಷಕರು ಸೈಬರ್ ಸೆಲ್‌ಗೆ ದೂರು ನೀಡಿದ್ದಾರೆ. ಡೀಪ್‌ಫೇಕ್ ಕಾಟಕ್ಕೆ ವಿದ್ಯಾರ್ಥಿನಿಯರು ಮಾನಸಿಕ ಹಿಂಸೆಗೆ ಒಳಗಾಗಿದ್ದಾರೆ.

    Continue Reading

    ಪ್ರಮುಖ ಸುದ್ದಿ

    Sunil Narine : ಐಪಿಎಲ್​ 2024ರ ‘ಮೌಲ್ಯಯುತ ಆಟಗಾರ ಪ್ರಶಸ್ತಿ’ ಗೆದ್ದು ಹೊಸ ದಾಖಲೆ ಬರೆದ ಸುನಿಲ್ ನರೈನ್​​

    Sunil Narine : ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ಭಾನುವಾರ (ಮೇ 26) ನಡೆದ ಪಂದ್ಯದಲ್ಲಿ ಸನ್ ರೈಸರ್ಸ್ ಹೈದರಾಬಾದ್ ತಂಡವನ್ನು ಮಣಿಸಿದ ನೈಟ್ ರೈಡರ್ಸ್ ಒಟ್ಟು ಮೂರನೇ ಬಾರಿಗೆ ಪ್ರಶಸ್ತಿ ಮುಡಿಗೇರಿಸಿಕೊಂಡಿದೆ. ಶ್ರೇಯಸ್ ಅಯ್ಯರ್ ನೇತೃತ್ವದ ತಂಡವು ಪ್ಯಾಟ್ ಕಮಿನ್ಸ್ ನೇತೃತ್ವದ ತಂಡವನ್ನು ಏಕಪಕ್ಷೀಯ ಮುಖಾಮುಖಿಯಲ್ಲಿ ಸೋಲಿಸಿತು. 114 ರನ್​ಗಳ ಗುರಿ ಬೆನ್ನಟ್ಟಿದ ಕೆಕೆಆರ್​ 10.3 ಓವರ್​ಗಳಲ್ಲಿ 8 ವಿಕೆಟ್ ಕಳೆದುಕೊಂಡು ಗುರಿ ತಲುಪಿತು.

    VISTARANEWS.COM


    on

    Sunil Narine
    Koo

    ಬೆಂಗಳೂರು: ಇಂಡಿಯನ್ ಪ್ರೀಮಿಯರ್ ಲೀಗ್ 2024ರ (IPL 2024) ಫೈನಲ್ ಪಂದ್ಯದಲ್ಲಿ ಸನ್​ರೈಸರ್ಸ್​ ಹೈದರಾಬಾದ್ (SRH) ವಿರುದ್ಧ ಗೆಲುವು ಸಾಧಿಸಿದ ನಂತರ ಕೋಲ್ಕತಾ ನೈಟ್ ರೈಡರ್ಸ್ (KKR) ಆಲ್​ರೌಂಡರ್​ ಸುನಿಲ್ ನರೈನ್ ಇತಿಹಾಸ ನಿರ್ಮಿಸಿದ್ದಾರೆ. ಐಪಿಎಲ್ ಇತಿಹಾಸದಲ್ಲಿ ಮೂರು ಬಾರಿ ಅತ್ಯಂತ ಮೌಲ್ಯಯುತ ಆಟಗಾರ ಪ್ರಶಸ್ತಿ ಪಡೆದ ಮೊದಲ ಆಟಗಾರ ಎಂಬ ಹೆಗ್ಗಳಿಕೆಗೆ ಸುನಿಲ್ ನರೈನ್ ಪಾತ್ರರಾಗಿದ್ದಾರೆ.

    ಚೆನ್ನೈನ ಎಂಎ ಚಿದಂಬರಂ ಸ್ಟೇಡಿಯಂನಲ್ಲಿ ಭಾನುವಾರ (ಮೇ 26) ನಡೆದ ಪಂದ್ಯದಲ್ಲಿ ಸನ್ ರೈಸರ್ಸ್ ಹೈದರಾಬಾದ್ ತಂಡವನ್ನು ಮಣಿಸಿದ ನೈಟ್ ರೈಡರ್ಸ್ ಒಟ್ಟು ಮೂರನೇ ಬಾರಿಗೆ ಪ್ರಶಸ್ತಿ ಮುಡಿಗೇರಿಸಿಕೊಂಡಿದೆ. ಶ್ರೇಯಸ್ ಅಯ್ಯರ್ ನೇತೃತ್ವದ ತಂಡವು ಪ್ಯಾಟ್ ಕಮಿನ್ಸ್ ನೇತೃತ್ವದ ತಂಡವನ್ನು ಏಕಪಕ್ಷೀಯ ಮುಖಾಮುಖಿಯಲ್ಲಿ ಸೋಲಿಸಿತು. 114 ರನ್​ಗಳ ಗುರಿ ಬೆನ್ನಟ್ಟಿದ ಕೆಕೆಆರ್​ 10.3 ಓವರ್​ಗಳಲ್ಲಿ 8 ವಿಕೆಟ್ ಕಳೆದುಕೊಂಡು ಗುರಿ ತಲುಪಿತು.

    ಸುನಿಲ್ ನರೈನ್ ಸಾಧನೆ

    ಕೋಲ್ಕತಾ ನೈಟ್ ರೈಡರ್ಸ್​ ತಂಡ ಮೂರು ಪ್ರಶಸ್ತಿ ವಿಜೇತ ಅಭಿಯಾನಗಳ ಭಾಗವಾಗಿರುವ ಏಕೈಕ ಆಟಗಾರ ಸುನಿಲ್ ನರೈನ್. ಸ್ಪಿನ್ ಬೌಲರ್ 2012 ರ ಋತುವಿನಿಂದಲೂ ನೈಟ್ ರೈಡರ್ಸ್ ಜೊತೆಗಿದ್ದಾರೆ. 36 ವರ್ಷದ ಕ್ರಿಕೆಟರ್ ಗೌತಮ್ ಗಂಭೀರ್ ನಾಯಕತ್ವದಲ್ಲಿ 2012 ಮತ್ತು 2014ರಲ್ಲಿ ಪ್ರಶಸ್ತಿ ಗೆಲ್ಲುವ ಅಭಿಯಾನದ ಭಾಗವಾಗಿದ್ದರು.

    ಇತ್ತೀಚೆಗೆ ಮುಕ್ತಾಯಗೊಂಡ ಪಂದ್ಯಾವಳಿಯಲ್ಲಿ ಬ್ಯಾಟ್ ಮತ್ತು ಬಾಲ್ ಎರಡರಲ್ಲೂ ನೀಡಿದ ಕೊಡುಗೆಗಳಿಗಾಗಿ ಸುನಿಲ್ ನರೈನ್ ಪಂದ್ಯಾವಳಿಯ ಆಟಗಾರ ಪ್ರಶಸ್ತಿ ಚಪಡೆದರು. ಈ ಹಿಂದೆ 2012 ಮತ್ತು 2018ರಲ್ಲಿ ಪ್ರಶಸ್ತಿ ಗೆದ್ದಿದ್ದ ನರೈನ್​​ ಇದು ಐಪಿಎಲ್ ಇತಿಹಾಸದಲ್ಲಿ ಮೂರನೇ ಪ್ರಶಸ್ತಿಯಾಗಿದೆ. ಐಪಿಎಲ್ ಇತಿಹಾಸದಲ್ಲಿ ಮೂರು ಬಾರಿ ಪ್ರಶಸ್ತಿ ಗೆದ್ದ ಮೊದಲ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.

    ಇದನ್ನೂ ಓದಿ: IPL 2024 : ಐಪಿಎಲ್​ ಯಶಸ್ಸಿನ ಖುಷಿ; ಪಿಚ್ ಸಿದ್ಧಪಡಿಸಿದವರಿಗೂ 25 ಲಕ್ಷ ರೂ. ಇನಾಮು ಕೊಟ್ಟ ಬಿಸಿಸಿಐ!

    ಐಪಿಎಲ್ 2024 ರಲ್ಲಿ, ನರೈನ್ ಅವರನ್ನು ನೈಟ್ ರೈಡರ್ಸ್ ಪರ ಆರಂಭಿಕ ಸ್ಥಾನಕ್ಕೆ ಬಡ್ತಿ ನೀಡಲಾಯಿತು. ಪಂದ್ಯಾವಳಿಯಲ್ಲಿ ಫಿಲ್ ಸಾಲ್ಟ್ ಅವರೊಂದಿಗೆ ಆಕ್ರಮಣಕಾರಿ ಆರಂಭವನ್ನು ನೀಡಿದರು. ಎಡಗೈ ಬ್ಯಾಟ್ಸ್ಮನ್ 15 ಪಂದ್ಯಗಳಲ್ಲಿ 34.85 ಸರಾಸರಿಯಲ್ಲಿ 488 ರನ್ ಗಳಿಸಿದ್ದಾರೆ ಮತ್ತು 180.74 ಸ್ಟ್ರೈಕ್ ರೇಟ್ ಹೊಂದಿದ್ದಾರೆ. ಇದರಲ್ಲಿ ಒಂದು ಶತಕ ಮತ್ತು ಮೂರು ಅರ್ಧಶತಕಗಳು ಸೇರಿವೆ.

    ಟ್ರಿನಿಡಾಡ್​ನ ಆಟಗಾರ 21.64ರ ಸರಾಸರಿಯಲ್ಲಿ 17 ವಿಕೆಟ್​​ ಕಬಳಿಸಿದ್ದಾರೆ. ವರುಣ್ ಚಕ್ರವರ್ತಿ, ಹರ್ಷಿತ್ ರಾಣಾ ಮತ್ತು ಆಂಡ್ರೆ ರಸೆಲ್ ನಂತರ ನರೈನ್ ಕೆಕೆಆರ್ ಪರ ನಾಲ್ಕನೇ ಅತಿ ಹೆಚ್ಚು ವಿಕೆಟ್ ಪಡೆದ ಬೌಲರ್ ಎನಿಸಿಕೊಂಡರು. ಅಂತಿಮ ಪಂದ್ಯದಲ್ಲಿ ಸ್ಪಿನ್ನರ್ ನಾಲ್ಕು ಓವರ್ ಗಳಲ್ಲಿ ಕೇವಲ 16 ರನ್ ಗಳಿಗೆ ಒಂದು ವಿಕೆಟ್ ಪಡೆದರು.

    ಇದು 2012 ರಂತೆ ಭಾಸವಾಯಿತು – ಸುನಿಲ್ ನರೈನ್

    ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮಾತನಾಡಿದ ಸುನಿಲ್ ನರೈನ್, ಪ್ರಶಸ್ತಿ ಗೆಲ್ಲಲು ಕೆಕೆಆರ್ ಆಟದ ಪ್ರತಿಯೊಂದು ಅಂಶದಲ್ಲೂ ಉತ್ತಮವಾಗಿ ಸಿದ್ಧವಾಗಿದೆ ಎಂದು ಹೇಳಿದರು. ಫೈನಲ್​ನಲ್ಲಿ ಫಿಲ್ ಸಾಲ್ಟ್ ಇಲ್ಲದಿರುವುದನ್ನು ಆಲ್​ರೌಂಡರ್​​ ಒಪ್ಪಿಕೊಂಡರು ಮತ್ತು ರಹಮಾನುಲ್ಲಾ ಗುರ್ಬಾಜ್ ಅವರ ಕೊಡುಗೆಯನ್ನು ಶ್ಲಾಘಿಸಿದರು.

    ಇಂದು ಮೈದಾನಕ್ಕೆ ಬಂದಾಗ, ಇದು 2012 ರಂತೆ ಭಾಸವಾಯಿತು. ಭಾವನೆ ಮಿತಿ ಮೀರಿದೆ. ಇದಕ್ಕಿಂತ ಉತ್ತಮವಾದ ಹುಟ್ಟುಹಬ್ಬದ ಉಡುಗೊರೆಯನ್ನು ನಾನು ನಿರೀಕ್ಷಿಸಲು ಸಾಧ್ಯವಿಲ್ಲ. ನಾನು ಈ ಸಮಯದಲ್ಲಿ ನನ್ನ ಕ್ರಿಕೆಟ್ ಅನ್ನು ಆನಂದಿಸುತ್ತಿದ್ದೇನೆ. ಬ್ಯಾಟಿಂಗ್, ಬೌಲಿಂಗ್ ಮತ್ತು ಫೀಲ್ಡಿಂಗ್. ತಂಡ ಗೆದ್ದಾಗ ಎಲ್ಲವೂ ಸಹಾಯವಾಗುತ್ತದೆ ಎಂದು ನರೈನ್ ಹೇಳಿದರು.

    Continue Reading
    Advertisement
    Viral Video
    ವೈರಲ್ ನ್ಯೂಸ್3 mins ago

    Viral Video: ರೈಫಲ್‌ ಜೊತೆ ಬಾರ್‌ಗೆ ನುಗ್ಗಿದ ಕಿಡಿಗೇಡಿ..ಡಿಜೆ ಮೇಲೆ ಗುಂಡಿನ ದಾಳಿ-ಶಾಕಿಂಗ್‌ ವಿಡಿಯೋ ನೋಡಿ

    Mitchell Starc
    ಕ್ರೀಡೆ6 mins ago

    Mitchell Starc : ಐಪಿಎಲ್ ಯಶಸ್ಸಿನ ಶ್ರೇಯಸ್ಸನ್ನು ಪತ್ನಿಗೆ ಅರ್ಪಿಸಿದ ಸ್ಟಾರ್ಕ್​; ಅವರ ಪತ್ನಿಯೂ ಕ್ರಿಕೆಟರ್​

    Love Propose
    ಬಾಗಲಕೋಟೆ28 mins ago

    Love Propose : I Love You ಮೆಸೇಜ್‌ ಕಳಿಸಿದ ಮುಸ್ಲಿಂ ಯುವಕನಿಗೆ ವಿವಾಹಿತೆಯಿಂದ ಚಪ್ಪಲಿ ಏಟು!

    Dhruva Sarja Trainer Prashanth Was Attacked First Reaction
    ಸ್ಯಾಂಡಲ್ ವುಡ್32 mins ago

    Dhruva Sarja: ಜಿಮ್ ಟ್ರೈನರ್ ಮೇಲೆ ಹಲ್ಲೆ; ಧ್ರುವ ಸರ್ಜಾ ನೀಡಿದ ಸ್ಪಷ್ಟನೆ ಏನು?

    Asaduddin Owaisi Party Leader
    ದೇಶ44 mins ago

    Asaduddin Owaisi: ಓವೈಸಿ ಪಕ್ಷದ ನಾಯಕನ ಮೇಲೆ ಗುಂಡಿನ ದಾಳಿ

    BS Yediyurappa
    ಪ್ರಮುಖ ಸುದ್ದಿ47 mins ago

    BS Yediyurappa: ಯಡಿಯೂರಪ್ಪ ವಿರುದ್ಧ ಪೋಕ್ಸೊ ಕೇಸ್ ದಾಖಲಿಸಿದ್ದ ಮಹಿಳೆ ಸಾವು

    Fire accident
    ದೇಶ48 mins ago

    Fire Accident: 4 ವರ್ಷ ನೀವು ನಿದ್ದೆಯಲ್ಲಿದ್ರಾ? ನಿಮಗೆ ಕಣ್ಣು ಕಾಣೋದಿಲ್ವಾ?-ಗುಜರಾತ್‌ ಸರ್ಕಾರಕ್ಕೆ ಹೈಕೋರ್ಟ್‌ ತರಾಟೆ

    Sunil Narine
    ಪ್ರಮುಖ ಸುದ್ದಿ55 mins ago

    Sunil Narine : ಐಪಿಎಲ್​ 2024ರ ‘ಮೌಲ್ಯಯುತ ಆಟಗಾರ ಪ್ರಶಸ್ತಿ’ ಗೆದ್ದು ಹೊಸ ದಾಖಲೆ ಬರೆದ ಸುನಿಲ್ ನರೈನ್​​

    deep fake
    ಬೆಂಗಳೂರು1 hour ago

    Deep fake Scam : ಸೆಲೆಬ್ರಿಟಿಗಳ ಬಳಿಕ ಈಗ ಬೆಂಗಳೂರು ಶಾಲಾ ವಿದ್ಯಾರ್ಥಿನಿಯರಿಗೆ ಡೀಪ್‌ಫೇಕ್‌ ಕಾಟ; ನಗ್ನ ಫೋಟೋ ವೈರಲ್

    Dhruva Sarja Gym trainer prashanth attacked
    ಸ್ಯಾಂಡಲ್ ವುಡ್1 hour ago

    Dhruva Sarja:  ಧ್ರುವ ಸರ್ಜಾ ಜತೆಗಿದ್ದ ಜಿಮ್ ಟ್ರೈನರ್ ಮೇಲೆ ಮಚ್ಚಿನಿಂದ‌ ಹಲ್ಲೆ?

    Sharmitha Gowda in bikini
    ಕಿರುತೆರೆ8 months ago

    Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

    Kannada Serials
    ಕಿರುತೆರೆ8 months ago

    Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

    Bigg Boss- Saregamapa 20 average TRP
    ಕಿರುತೆರೆ7 months ago

    Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

    galipata neetu
    ಕಿರುತೆರೆ6 months ago

    Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

    Kannada Serials
    ಕಿರುತೆರೆ8 months ago

    Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

    Kannada Serials
    ಕಿರುತೆರೆ8 months ago

    Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

    Bigg Boss' dominates TRP; Sita Rama fell to the sixth position
    ಕಿರುತೆರೆ7 months ago

    Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

    geetha serial Dhanush gowda engagement
    ಕಿರುತೆರೆ5 months ago

    Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

    varun
    ಕಿರುತೆರೆ6 months ago

    Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

    Kannada Serials
    ಕಿರುತೆರೆ9 months ago

    Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

    Karnataka Rain
    ಮಳೆ20 hours ago

    Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

    Basavanagudi News
    ಬೆಂಗಳೂರು21 hours ago

    Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

    Karnataka Rain
    ಮಳೆ2 days ago

    Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

    dina bhavishya read your daily horoscope predictions for May 23 2024
    ಭವಿಷ್ಯ4 days ago

    Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

    Karnataka Weather Forecast
    ಮಳೆ5 days ago

    Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

    Karnataka Rain
    ಮಳೆ6 days ago

    Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

    Love Case Father throws hot water on man who loved his daughter for coming home
    ಕೊಡಗು6 days ago

    Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

    Contaminated Water
    ಮೈಸೂರು6 days ago

    Contaminated Water : ಡಿ ಸಾಲುಂಡಿಯಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದ ಯುವಕ ಸಾವು

    Karnataka Rain
    ಮಳೆ1 week ago

    Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

    Karnataka Rain
    ಮಳೆ1 week ago

    Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

    ಟ್ರೆಂಡಿಂಗ್‌