Vistara mews launch | ವಿಸ್ತಾರ ನ್ಯೂಸ್‌ ಕರ್ನಾಟಕದ ಗಡಿ ದಾಟಲಿ : ವಿಸ್ತಾರ ನ್ಯೂಸ್‌ ಚಾನೆಲ್‌ಗೆ ಮುಖ್ಯಮಂತ್ರಿ ಶುಭ ಹಾರೈಕೆ - Vistara News

ಪ್ರಮುಖ ಸುದ್ದಿ

Vistara mews launch | ವಿಸ್ತಾರ ನ್ಯೂಸ್‌ ಕರ್ನಾಟಕದ ಗಡಿ ದಾಟಲಿ : ವಿಸ್ತಾರ ನ್ಯೂಸ್‌ ಚಾನೆಲ್‌ಗೆ ಮುಖ್ಯಮಂತ್ರಿ ಶುಭ ಹಾರೈಕೆ

ವಿಸ್ತಾರ ನ್ಯೂಸ್‌ ಚಾನೆಲ್‌ ಕರ್ನಾಟಕದ ಗಡಿಯನ್ನು ದಾಟಿ ವಿಸ್ತಾರವಾಗಿ ಅಪಾರ ಜನಮನ್ನಣೆ ಗಳಿಸಲಿ, ಪ್ರಜಾಪ್ರಭುತ್ವದ ಸಂರಕ್ಷಣೆಗೆ ಕೊಡುಗೆ ನೀಡಲಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು (Vistara mews launch) ಶುಭ ಹಾರೈಸಿದ್ದಾರೆ.

VISTARANEWS.COM


on

bommai
ವಿಸ್ತಾರ ನ್ಯೂಸ್‌ ಚಾನೆಲ್‌ಗೆ ಚಾಲನೆ ನೀಡಿದ ಬಳಿಕ ಸಮಾರಂಭವನ್ನು ಉದ್ದೇಶಿಸಿ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ವಿಸ್ತಾರ ಡಿಜಿಟಲ್‌ ನ್ಯೂಸ್ ಈಗಾಗಲೇ ಕ್ಷಿಪ್ರ ಅವಧಿಯಲ್ಲಿ ತನ್ನ ಗುಣಮಟ್ಟದಿಂದಾಗಿ ಜನಮನ್ನಣೆ ಗಳಿಸಿದೆ. ಇದೇ ರೀತಿ ವಿಸ್ತಾರ ನ್ಯೂಸ್‌ ಚಾನೆಲ್‌ ಕೂಡ ಕರ್ನಾಟಕದ ಗಡಿ ದಾಟಿ ಜನಪ್ರಿಯವಾಗಲಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Vistara mews launch) ಅವರು ಶುಭಾಶಯ ಕೋರಿದರು.

ಕನ್ನಡ ಮಾಧ್ಯಮ ಲೋಕದ ಬಹು ನಿರೀಕ್ಷಿತ ವಿಸ್ತಾರ ನ್ಯೂಸ್‌ ಚಾನೆಲ್‌ಗೆ ಚಾಲನೆ ನೀಡಿದ ಬಳಿಕ ಮಾತನಾಡಿದ ಅವರು, ಮಾಧ್ಯಮ ಮತ್ತು ಜನರ ಮನದಾಳಕ್ಕೂ ಅವಿನಾಭಾವ ಸಂಬಂಧ ಇದೆ. ಸಿನಿಮಾ ನೋಡುವಾಗ ಜನರ ಮನದಾಳದ ಡೈಲಾಗ್‌ ಅನ್ನು ಹೀರೊ ಹೇಳಿದಾಗ ಜನ ಚಪ್ಪಾಳೆ ತಟ್ಟಿ ಮೆಚ್ಚುತ್ತಾರೆ. ಅದೇ ರೀತಿ ಮಾಧ್ಯಮ ಜನರ ದನಿಯಾಗಬೇಕು. ಇಂದು ತಂತ್ರಜ್ಞಾನ ಇಡೀ ಬದುಕನ್ನು ಆವರಿಸಿದೆ. ನಮ್ಮ ಚಿಂತನಾಶಕ್ತಿ ಕಡಿಮೆಯಾಗುತ್ತಿದೆ. ನಾವು ಒಂದು ಬಟನ್‌ ಒತ್ತಿದರೆ ಎಲ್ಲವೂ ಸಿಗುವಂಥ ತಂತ್ರಜ್ಞಾನ ಬೆಳೆದಿದೆ. ಆದರೆ ಇಂಥ ಸಂದರ್ಭದಲ್ಲಿ ಅಂತಃಕರಣವನ್ನು, ಮಾನವೀಯತೆ, ಪ್ರೀತಿ, ವಿಶ್ವಾಸವನ್ನು ಯಾರೂ ಮರೆಯಬಾರದು. ಅದನ್ನು ಕಂಪ್ಯೂಟರ್‌ ಹೇಳಿಕೊಡುವುದಿಲ್ಲ. ಯಾವುದೇ ರಾಜಕಾರಣಿಗೆ ತಲೆ ತಣ್ಣಗಿರಬೇಕು, ಹೃದಯ ಬೆಚ್ಚಗಿರಬೇಕು ಎಂದು ಹಿರಿಯರು ಹೇಳುತ್ತಾರೆ. ಯಾರು ಏನೇ ಮಾತನಾಡಿದರೂ ತಲೆ ಕೆಡಿಸಿಕೊಳ್ಳಬಾರದು. ನಮ್ಮ ಗುರಿ, ಸಂಕಲ್ಪ ಸರಿಯಾಗಿದ್ದಾಗ ಎಲ್ಲವೂ ಸಾಧ್ಯವಾಗುತ್ತದೆ. ನಮ್ಮ ಕರ್ತವ್ಯಪರತೆ ನಮ್ಮ ಕೈಯಲ್ಲಿದೆ. ಯಾವುದೂ ಶಾಶ್ವತವಲ್ಲ, ಪ್ರೀತಿ ಮತ್ತು ವಿಶ್ವಾಸ ದೊಡ್ಡದು. ಜನರಿಗೆ ಪ್ರಜಾಪ್ರಭುತ್ವದ ಮೇಲೆ ಅಪಾರ ವಿಶ್ವಾಸ ಇದೆ. ಅದನ್ನು ಸಂರಕ್ಷಿಸಲು ಮಾಧ್ಯಮಗಳು, ರಾಜಕಾರಣಿಗಳು ಕಾರ್ಯಪ್ರವೃತ್ತವಾಗಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಜನರ ಮನದಾಳದ ಕನ್ನಡಿ ಮಾಧ್ಯಮ:

ಮಾಧ್ಯಮ ಮತ್ತು ಸಾರ್ವಜನಿಕ ವಲಯದ್ದು ಅವಿನಾಭಾವ ಸಂಬಂಧ. ಓದುಗರಿಲ್ಲದೆ ಪತ್ರಿಕೆಗಳು ಇಲ್ಲ, ನೋಡುಗರಿಲ್ಲದೆ ಚಾನೆಲ್‌ಗಳಿಲ್ಲ. ಹೀಗೆ ಇವೆರೆಡರ ಸಂಬಂಧವನ್ನು ಚೆನ್ನಾಗಿ ಅರಿತವರು ಯಶಸ್ವಿಯಾಗುತ್ತಾರೆ. ಜನರ ಮನದಾಳದಲ್ಲಿ ಏನಿದೆ ಎಂಬುದನ್ನು ಅರಿತುಕೊಳ್ಳುವುದು ಮುಖ್ಯ. ಹರಿಪ್ರಕಾಶ್‌ ಕೋಣೆಮನೆಯವರ ಅಪಾರ ಅನುಭವ, ಕ್ರಿಯಾಶೀಲತೆ, ಜನಮಾನಸದ ಜತೆ ಗುರುತಿಸಿಕೊಂಡಿರುವ ರೀತಿ, ಸ್ಥಿತಪ್ರಜ್ಞತೆಯಿಂದ, ಅವರ ನೇತೃತ್ವದಲ್ಲಿ ವಿಸ್ತಾರ ಸುವಿಸ್ತಾರವಾಗಿ ಬೆಳೆಯುವ ವಿಶ್ವಾಸ ಇದೆ ಎಂದು ಶುಭ ಹಾರೈಸಿದರು.

ಮಾಧ್ಯಮ-ರಾಜಕಾರಣಿಗಳ ಸಂಬಂಧ:

ಮಾಧ್ಯಮಗಳು ಮತ್ತು ರಾಜಕಾರಣಿಗಳ ನಂಟನ್ನು ವಿವರಿಸಿದ ಸಿಎಂ ಬಸವರಾಜ ಬೊಮ್ಮಾಯಿ ಅವರು, ಎಷ್ಟೇ ಜಗಳವಾಡಿದರೂ, ಭಿನ್ನಾಭಿಪ್ರಾಯವಿದ್ದರೂ, ಮಾಧ್ಯಮಗಳು ಮತ್ತು ರಾಜಕಾರಣಿಗಳ ಪರಸ್ಪರ ನಂಟು ಅವಿನಾಭಾವವಾಗಿರುವಂಥದ್ದು, ಗಂಡ-ಹೆಂಡತಿಯ ಸಂಬಂಧವದು ಎಂದು ಲಘು ಹಾಸ್ಯದ ಚಟಾಕಿಯೊಂದಿಗೆ ಬಣ್ಣಿಸಿದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Prajwal Revanna Case: ಜಡ್ಜ್‌ ಮುಂದೆಯೂ ನಿಂಬೆ ಹಣ್ಣು ಹಿಡಿದುಕೊಂಡಿದ್ದ ಎಚ್‌.ಡಿ.ರೇವಣ್ಣ!

Prajwal Revanna Case: ಪ್ರಜ್ವಲ್‌ ರೇವಣ್ಣ ಅಶ್ಲೀಲ ವಿಡಿಯೊ ಪ್ರಕರಣದ ಸಂಬಂಧ ಸಂತ್ರಸ್ತೆಯ ಕಿಡ್ನ್ಯಾಪ್‌ ಕೇಸ್‌ನಲ್ಲಿ ಬಂಧನವಾಗಿರುವ ರೇವಣ್ಣ ಅವರನ್ನು ಭಾನುವಾರ ನ್ಯಾಯಾಧೀಶರ ಮುಂದೆ ಎಸ್‌ಐಟಿ ಹಾಜರುಪಡಿಸಿತ್ತು. ಈ ವೇಳೆಯೂ ಅವರು ಕೈಯಲ್ಲಿ ನಿಂಬೆ ಹಣ್ಣು ಹಿಡಿದುಕೊಂಡು ಕಾಣಿಸಿಕೊಂಡಿದ್ದಾರೆ.

VISTARANEWS.COM


on

Prajwal Revanna Case
Koo

ಬೆಂಗಳೂರು: ಶಾಸಕ ಎಚ್.ಡಿ.ರೇವಣ್ಣ ಅವರ ಕೈಯಲ್ಲಿ ಸದಾ ನಿಂಬೆ ಹಣ್ಣು ಇರುತ್ತದೆ ಎಂಬುವುದು ಎಲ್ಲರಿಗೂ ತಿಳಿದ ವಿಷಯವೇ. ಈ ಬಗ್ಗೆ ಹಲವರು ಹಾಸ್ಯ ಮಾಡಿದರೂ ರೇವಣ್ಣ ಅವರು ಮಾತ್ರ ಎಲ್ಲವನ್ನೂ ನಗುತ್ತಲೇ ಸ್ವೀಕರಿಸಿ ಮುಂದೆ ಸಾಗುತ್ತಿದ್ದರು. ಇದೀಗ ಪ್ರಜ್ವಲ್‌ ರೇವಣ್ಣ ಅಶ್ಲೀಲ ವಿಡಿಯೊ ಪ್ರಕರಣ ಸಂಬಂಧಪಟ್ಟಂತೆ ಸಂತ್ರಸ್ತೆ ಕಿಡ್ನ್ಯಾಪ್‌ ಕೇಸ್‌ನಲ್ಲಿ ಬಂಧನವಾಗಿರುವ ರೇವಣ್ಣ ಅವರನ್ನು ಭಾನುವಾರ ಸಂಜೆ ನ್ಯಾಯಾಧೀಶರ ಮುಂದೆ ಎಸ್‌ಐಟಿ ಹಾಜರುಪಡಿಸಿತ್ತು. ಈ ವೇಳೆಯೂ ಅವರು ಕೈಯಲ್ಲಿ ನಿಂಬೆ ಹಣ್ಣು ಹಿಡಿದು ಸಾಗುತ್ತಿದ್ದದ್ದು ಕಂಡುಬಂದಿದೆ.

ಈ ಹಿಂದೆ ಕುಟುಂಬಕ್ಕೆ ಸಂಕಷ್ಟ ಬಂದಾಗ ಹೋಮ-ಹವನ, ದೇವಸ್ಥಾನಗಳಲ್ಲಿ ವಿಶೇಷ ಪೂಜೆಗಳ ಮೊರೆ ಹೋಗುವ ರೇವಣ್ಣ ಅವರು ಕೈಯಲ್ಲಿ ನಿಂಬೆ ಹಣ್ಣು ಹಿಡಿದು ಓಡಾಡುತ್ತಿದ್ದರು. ಆದರೆ, ಪ್ರಜ್ವಲ್‌ ರೇವಣ್ಣ ಪೆನ್‌ಡ್ರೈವ್‌ ಕೇಸ್‌ನಲ್ಲಿ ಬಂಧನವಾದ ನಂತರ ಅವರಿಗೆ ಜ್ಯೋತಿಷ್ಯ, ನಿಂಬೆಹಣ್ಣು ಕೂಡ ಕೈಹಿಡಿಯಲಿಲ್ಲ ಎಂದು ಸಾರ್ವಜನಿಕರು ವ್ಯಂಗ್ಯವಾಡುತ್ತಿದ್ದಾರೆ. ಇದರ ಬೆನ್ನಲ್ಲೇ ನ್ಯಾಯಾಧೀಶರ ಮುಂದೆ ಹಾಜರಾದಾಗಲೂ ರೇವಣ್ಣ ಅವರು ಎಡಗೈನಲ್ಲಿ ನಿಂಬೆಹಣ್ಣಿನೊಂದಿಗೆ ಕಾಣಿಸಿಕೊಂಡಿದ್ದಾರೆ.

ಬೆಂಗಳೂರಿಗೆ ಬರುವ ಮುನ್ನ ಹೊಳೇನರಸಿಪುರದ ಎಚ್‌.ಡಿ.ರೇವಣ್ಣ ನಿವಾಸದಲ್ಲಿ ಗಣಪತಿ ಹೋಮ ಮಾಡಿಸಲಾಗಿತ್ತು. ಅಲ್ಲದೆ, ನಿರೀಕ್ಷಣಾ ಜಾಮೀನು ಸಿಕ್ಕೇ ಸಿಗುತ್ತದೆ. ಚಿಂತೆ ಬೇಡ ಎಂಬುದಾಗಿ ಜ್ಯೋತಿಷಿಯೊಬ್ಬರು ಹೇಳಿದ್ದರು ಎನ್ನಲಾಗಿದೆ. ಇದರಿಂದಾಗಿ ತುಸು ನಿರಾಳರಾಗಿದ್ದ ಎಚ್‌.ಡಿ.ರೇವಣ್ಣ ಅವರು ಎಚ್‌.ಡಿ.ದೇವೇಗೌಡರ ನಿವಾಸದಲ್ಲಿಯೇ ನಿಶ್ಚಿಂತೆಯಿಂದ ಇದ್ದರು. ಆದರೆ, ಯಾವ ಪ್ರಯತ್ನವೂ ಫಲಿಸಲಿಲ್ಲ. ನ್ಯಾಯಾಲಯವು ಜಾಮೀನು ಅರ್ಜಿ ತಿರಸ್ಕರಿಸುತ್ತಲೇ ರೇವಣ್ಣ ಅವರನ್ನು ಎಸ್‌ಐಟಿ ಅಧಿಕಾರಿಗಳು ಶನಿವಾರ ವಶಕ್ಕೆ ಪಡೆದಿದ್ದರು.

ಇದನ್ನೂ ಓದಿ | Prajwal Revanna Case: ಪ್ರಜ್ವಲ್‌ಗೆ ವೋಟ್‌ ಹಾಕಿ ಎಂಬ ಸಿದ್ದರಾಮಯ್ಯ ಟ್ವೀಟ್‌; ಬಿಜೆಪಿಯಿಂದ ಫುಲ್‌ ಕ್ಲಾಸ್‌!

ಮಾಜಿ ಸಚಿವ ಎಚ್‌.ಡಿ. ರೇವಣ್ಣ 4 ದಿನ ಎಸ್‌ಐಟಿ ಕಸ್ಟಡಿಗೆ; ಮತ್ತೆ ತೀವ್ರ ವಿಚಾರಣೆ

Prajwal Revanna Case HD Revanna sent to judicial custody Shift to Parappana Agrahara

ಬೆಂಗಳೂರು: ಹಾಸನ ಸಂಸದ (Hassan MP) ಪ್ರಜ್ವಲ್ ರೇವಣ್ಣ (Prajwal Revanna Case) ಅವರದ್ದು ಎನ್ನಲಾದ ಅಶ್ಲೀಲ ವಿಡಿಯೊ ಪೆನ್‌ಡ್ರೈವ್‌ ಪ್ರಕರಣಕ್ಕೆ (Hassan Pen Drive Case) ಸಂಬಂಧಪಟ್ಟಂತೆ ಕಿಡ್ನ್ಯಾಪ್‌ ಕೇಸ್‌ನಲ್ಲಿ ಬಂಧನವಾಗಿರುವ ಮಾಜಿ ಸಚಿವ ಎಚ್.‌ಡಿ. ರೇವಣ್ಣ (HD Revanna) ಅವರನ್ನು 4 ದಿನಗಳವರೆಗೆ ಎಸ್‌ಐಟಿ ಕಸ್ಟಡಿಗೆ ನೀಡಿ 17ನೇ ಎಸಿಎಂಎಂ ಕೋರ್ಟ್ ನ್ಯಾಯಾಧೀಶರು ಆದೇಶ ಹೊರಡಿಸಿದ್ದಾರೆ.

ಇಂದು ಭಾನುವಾರ (ಮೇ 5) ಕೋರ್ಟ್‌ ರಜೆ ಇರುವ ಹಿನ್ನೆಲೆಯಲ್ಲಿ ಅಪಹರಣ ಪ್ರಕರಣದ ಪ್ರಮುಖ ಆರೋಪಿ ಎಚ್.ಡಿ. ರೇವಣ್ಣ ಅವರನ್ನು ಕೋರಮಂಗಲದಲ್ಲಿರುವ 17ನೇ ಎಸಿಎಂಎಂ ಕೋರ್ಟ್ ನ್ಯಾಯಾಧೀಶರ ನಿವಾಸಕ್ಕೆ ಕರೆತರಲಾಗಿತ್ತು. ಜಡ್ಜ್‌ ಮುಂದೆ ರೇವಣ್ಣ ಅವರನ್ನು ಎಸ್‌ಐಟಿ ಅಧಿಕಾರಿಗಳು ಹಾಜರುಪಡಿಸಿದರು. ಈ ವೇಳೆ ಎಸ್‌ಐಟಿ ಪರ ವಕೀಲರು, ಪ್ರಕರಣದ ತೀವ್ರತೆಯನ್ನು ವಿವರಿಸಿ ರೇವಣ್ಣ ಅವರನ್ನು ಕಸ್ಟಡಿಗೆ ಕೊಡುವಂತೆ ಮನವಿ ಮಾಡಿದರು. ಆದರೆ, ಇದಕ್ಕೆ ರೇವಣ್ಣ ಪರ ವಕೀಲರಾದ ಮೂರ್ತಿ ಡಿ. ನಾಯಕ್‌ ಆಕ್ಷೇಪ ವ್ಯಕ್ತಪಡಿಸಿದರು. ಅಲ್ಲದೆ, ಎಸ್‌ಐಟಿಯವರು ತಮ್ಮ ಕಕ್ಷಿದಾರರಿಗೆ ಕಿರುಕುಳವನ್ನು ನೀಡುತ್ತಿದ್ದಾರೆ. ಅವರಿಗೆ ಆರೋಗ್ಯ ಸಮಸ್ಯೆ ಇದೆ ಎಂದು ವಾದವನ್ನು ಮಂಡಿಸಿದರು.

ಈ ವೇಳೆ ರಿಮ್ಯಾಂಡ್‌ ಕಾಪಿ‌ಯನ್ನು ಎಸ್‌ಐಟಿ ಅಧಿಕಾರಿಗಳು ನ್ಯಾಯಾಧೀಶರಿಗೆ ಸಲ್ಲಿಕೆ ಮಾಡಿದ್ದಾರೆ. ಸುಮಾರು 15 ಅಂಶಗಳನ್ನು ಉಲ್ಲೇಖ ಮಾಡಿ 5 ದಿನಗಳ ಕಾಲ ಕಸ್ಟಡಿಗೆ ವಹಿಸುವಂತೆ ಕೋರಿದ್ದಾರೆ. ವಾದ – ಪ್ರತಿವಾದವನ್ನು ಆಲಿಸಿದ ನ್ಯಾಯಾಧೀಶರಾದ ರವೀಂದ್ರ ಕುಮಾರ್ ಬಿ. ಕಟ್ಟಿಮನಿ ಅವರು, ಎಚ್‌.ಡಿ. ರೇವಣ್ಣ ಅವರನ್ನು 4 ದಿನಗಳ ವರೆಗೆ ಅಂದರೆ ಮೇ 8ರವರೆಗೆ ಎಸ್‌ಐಟಿ ಕಸ್ಟಡಿಗೆ ನೀಡಿ ಆದೇಶ ಹೊರಡಿಸಿದ್ದಾರೆ.

ಬಿಗಿ ಭದ್ರತೆ ಒದಗಿಸಿದ್ದ ಪೊಲೀಸ್‌!

ಎಚ್.ಡಿ. ರೇವಣ್ಣ‌ ಪ್ರಭಾವಿ ನಾಯಕ ಹಾಗೂ ಶಾಸಕರಾಗಿರುವ ಕಾರಣ ಈಗಾಗಲೇ ಕೋರಮಂಗಲದ ನ್ಯಾಯಾಧೀಶರ ಮನೆ ಬಳಿ ಬಿಗಿ ಪೊಲೀಸ್ ಭದ್ರತೆಯನ್ನು ಒದಗಿಸಲಾಗಿತ್ತು. ಮನೆಯ ಮುಂಭಾಗದಲ್ಲಿ ‌ಬ್ಯಾರಿಕೇಡ್‌ಗಳನ್ನು ಹಾಕಲಾಗಿತ್ತು. ಭದ್ರತೆಯೊಂದಿಗೆ ಅವರನ್ನು ಜಡ್ಜ್‌ಗೆ ಹಾಜರುಪಡಿಸಲಾಯಿತು.

ರೇವಣ್ಣಗೆ ಮತ್ತೊಮ್ಮೆ ಮೆಡಿಕಲ್ ಟೆಸ್ಟ್

ನ್ಯಾಯಾಧೀಶರ ಮುಂದೆ ಎಚ್.ಡಿ. ರೇವಣ್ಣ ಅವರನ್ನು ಹಾಜರುಪಡಿಸುವ ಮುನ್ನ ಬೋರಿಂಗ್‌ ಆಸ್ಪತ್ರೆಯಲ್ಲಿ ಮತ್ತೊಮ್ಮೆ ವೈದ್ಯಕೀಯ ತಪಾಸಣೆ ಮಾಡಲಾಯಿತು. ಹೃದಯ ತಜ್ಞರು ಮತ್ತು ಗ್ಯಾಸ್ಟ್ರೋಎಂಟರಾಲಜಿಸ್ಟ್ ತಜ್ಞರ ಬಳಿ ತಪಾಸಣೆ ನಡೆಸಲಾಗಿದೆ.

ನನ್ನ ವಿರುದ್ಧ ಯಾವುದೇ ಸಾಕ್ಷಿಗಳಿಲ್ಲ, ಇದೊಂದು ಷಡ್ಯಂತ್ರ: ಎಚ್‌.ಡಿ. ರೇವಣ್ಣ

ನನ್ನ ಮೇಲೆ ಕಿಡ್ನ್ಯಾಪ್ ಕೇಸ್ ಹಾಕಿದ್ದಾರೆ. 40 ವರ್ಷ ರಾಜಕೀಯ ಜೀವನದಲ್ಲಿ ಒಂದೇ ಒಂದು ಕಪ್ಪು ಚುಕ್ಕೆ ಇಲ್ಲ. ಯಾವುದೇ ರೀತಿಯ ಪುರಾವೆಗಳು ಇಲ್ಲದಿದ್ದರೂ ಅನಾವಶ್ಯಕವಾಗಿ ನನ್ನನ್ನು ಇಕ್ಕಟ್ಟಿಗೆ ಸಿಲುಕಿಸುತ್ತಿದ್ದಾರೆ. ನನ್ನ ವಿರುದ್ಧದ ಆರೋಪಗಳೆಲ್ಲವೂ ಸುಳ್ಳು. ಇದೊಂದು ದುರದ್ದೇಶಪೂರ್ವಕ ಬಂಧನವಾಗಿದೆ. ಯಾವುದೇ ಸಾಕ್ಷಿಗಳು ಸಹ ಇವರ ಬಳಿ ಇಲ್ಲ ಎಂದು ಎಚ್‌.ಡಿ. ರೇವಣ್ಣ ಹೇಳಿದ್ದಾರೆ.

ಇದನ್ನೂ ಓದಿ | Prajwal Revanna Case: ನನ್ನ ವಿರುದ್ಧ ಯಾವುದೇ ಸಾಕ್ಷಿಗಳಿಲ್ಲ, ಇದೊಂದು ಷಡ್ಯಂತ್ರ: ಎಚ್‌.ಡಿ. ರೇವಣ್ಣ ಫಸ್ಟ್‌ ರಿಯಾಕ್ಷನ್‌!

ಎಸ್‌ಐಟಿ ಅಧಿಕಾರಿಗಳು ಮೆಡಿಕಲ್‌ ಟೆಸ್ಟ್‌ಗೆಂದು ಬೌರಿಂಗ್‌ ಆಸ್ಪತ್ರೆಗೆ ಕರೆದೊಯ್ಯುವ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಎಚ್‌.ಡಿ. ರೇವಣ್ಣ ಏಪ್ರಿಲ್‌ 28ರಂದು ನಮ್ಮ ವಿರುದ್ಧ ಕೇಸ್‌ ದಾಖಲಿಸಿದರು. ಆಗ ನಮ್ಮ ಮೇಲೆ ಯಾವುದೇ ಸಾಕ್ಷಿಗಳು ಸಿಕ್ಕಿಲ್ಲವೆಂದು ಪುನಃ ಮೇ 2ರಂದು ನನ್ನ ಮೇಲೆ ಸಾಕ್ಷಿಗಳನ್ನು ಸೃಷ್ಟಿ ಮಾಡಿ ಸಿಕ್ಕಿ ಹಾಕಿಸಿದ್ದಾರೆ. ಇದರಲ್ಲಿ ಯಾವುದೇ ರೀತಿಯ ಪುರಾವೆಗಳು ಇಲ್ಲ. ಆದರೂ ನನ್ನನ್ನು ಸಿಕ್ಕಿ ಹಾಕಿಸಲಾಗಿದೆ ಎಂದು ಗುಡುಗಿದರು.

Continue Reading

ಪ್ರಮುಖ ಸುದ್ದಿ

IPL 2024 : ಐಪಿಎಲ್ ಸ್ಟೇಡಿಯಮ್​ಗಳ ಗಾತ್ರದ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ ಆರ್​ ಅಶ್ವಿನ್​

IPL 2024 : ಐಪಿಎಲ್ 2024 ರಲ್ಲಿ ಸನ್​ರೈಸರ್ಸ್​​ ಹೈದರಾಬಾದ್ 277 ಮತ್ತು 287 ರನ್ ಗಳಿಸಿದ್ದರೆ, ಈ ಋತುವಿನಲ್ಲಿ ಹಲವು ತಂಡಗಳು 250 ಸ್ಕೋರ್​ಗಳ ಗಾಡಿ ಮೀರಿಸಿದೆ. ಇಂಪ್ಯಾಕ್ಟ್ ಪ್ಲೇಯರ್ ನಿಯಮವು ತಂಡಗಳಿಗೆ 8 ಬ್ಯಾಟರ್​ಗಳನ್ನು ಆಡುವ ಸ್ವಾತಂತ್ರ್ಯವನ್ನು ನೀಡಿದೆ. ಇದು ದೊಡ್ಡ ಮೊತ್ತಕ್ಕೆ ಸಹಾಯ ಮಾಡುತ್ತದೆ ಎಂಬುದು ಅಶ್ವಿನ್ ವಾದವಾಗಿದೆ.

VISTARANEWS.COM


on

IPL 2024
Koo

ನವದೆಹಲಿ: ಆಧುನಿಕ ಕ್ರಿಕೆಟ್​​ನಲ್ಲಿ ಪವರ್ ಹಿಟ್ಟಿಂಗ್ ಬ್ಯಾಟಿಂಗ್​ ಪ್ರವೃತ್ತಿಯು ಅಂತಾರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣಗಳ ಗಾತ್ರದ ಪ್ರಾಮುಖ್ಯತೆಯನ್ನು ಕುಗ್ಗಿಸುತ್ತದೆ ಎಂದು ರಾಜಸ್ಥಾನ್ ರಾಯಲ್ಸ್ (Rajastan Royals) ಪರ ಆಡುವ ಅನುಭವಿ ಆಫ್ ಸ್ಪಿನ್ನರ್ ಆರ್ ಅಶ್ವಿನ್ ಹೇಳಿದ್ದಾರೆ. ಇದು ಆಟವನ್ನು ಹೆಚ್ಚು ಏಕಪಕ್ಷೀಯವಾಗಿಸಬಹುದು ಎಂದು ಅವರು ಆತಂಕ ವ್ಯಕ್ತಪಡಿಸಿದ್ದಾರೆ. ಹಾಲಿ ಐಪಿಎಲ್​ನಲ್ಲಿ (IPL 2024) ಬೃಹತ್​​ ಮೊತ್ತಗಳ ಸಂಖ್ಯೆ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಅವರು ಈ ಮಾತನ್ನು ಉಲ್ಲೇಖಿಸಿದ್ದಾರೆ.

ಐಪಿಎಲ್ 2024 ರಲ್ಲಿ ಸನ್​ರೈಸರ್ಸ್​​ ಹೈದರಾಬಾದ್ 277 ಮತ್ತು 287 ರನ್ ಗಳಿಸಿದ್ದರೆ, ಈ ಋತುವಿನಲ್ಲಿ ಹಲವು ತಂಡಗಳು 250 ಸ್ಕೋರ್​ಗಳ ಗಾಡಿ ಮೀರಿಸಿದೆ. ಇಂಪ್ಯಾಕ್ಟ್ ಪ್ಲೇಯರ್ ನಿಯಮವು ತಂಡಗಳಿಗೆ 8 ಬ್ಯಾಟರ್​ಗಳನ್ನು ಆಡುವ ಸ್ವಾತಂತ್ರ್ಯವನ್ನು ನೀಡಿದೆ. ಇದು ದೊಡ್ಡ ಮೊತ್ತಕ್ಕೆ ಸಹಾಯ ಮಾಡುತ್ತದೆ ಎಂಬುದು ಅಶ್ವಿನ್ ವಾದವಾಗಿದೆ.

ಹಿಂದಿನ ದಿನಗಳಲ್ಲಿ ನಿರ್ಮಿಸಲಾದ ಕ್ರೀಡಾಂಗಣಗಳು ಆಧುನಿಕ ದಿನಗಳಲ್ಲಿ ಪ್ರಸ್ತುತವಲ್ಲ. ಆಗ ಬಳಸಲಾಗುತ್ತಿದ್ದ ಬ್ಯಾಟ್ ಗಳನ್ನು ಈಗ ಉಪಯೋಗಿಸುತ್ತಿಲ್ಲ. ಪ್ರಾಯೋಜಕರ ಎಲ್ಇಡಿ ಬೋರ್ಡ್​​ಗಳನ್ನು ಬಳಸುವುದರಿಂದ, ಬೌಂಡರಿ ಲೈನ್​ 10 ಗಜಗಳಷ್ಟು ಗಾತ್ರ ಚಿಕ್ಕದಾಗಿದೆ. ಹೀಗಾಗಿ ಬೌಲರ್​ಗಳು ದಂಡಿಸಿಕೊಳ್ಳುತ್ತಿದ್ದಾರೆ. ಅವರಿಗೆ ಮಾನಸಿಕ ಉತ್ತೇಜನದ ಅಗತ್ಯವಿದೆ ಎಂದು ಆರ್​ಆರ್​ ಪ್ರಚಾರ ಕಾರ್ಯಕ್ರಮದಲ್ಲಿ ಅಶ್ವಿನ್ ಹೇಳಿದರು.

ಪ್ರತಿಭಾವಂತ ಬೌಲರ್ ತನ್ನನ್ನು ತಾನು ಸ್ಥಾಪಿಸಿಕೊಳ್ಳುತ್ತಾನೆ. ತನ್ನ ಆವಿಷ್ಕಾರಗಳೊಂದಿಗೆ ಮೈದಾನದ ಉಳಿದ ಭಾಗಗಳಿಂದ ತನ್ನನ್ನು ಪ್ರತ್ಯೇಕಿಸಿಕೊಳ್ಳುತ್ತಾನೆ ಎಂದು ಅಶ್ವಿನ್ ಹೇಳಿದ್ದಾರೆ. ಇದೇ ವೇಳೆ ಅವರು ಚೆಂಡನ್ನು ಹೊಡೆಯುವ ಬ್ಯಾಟರ್​ಗಳ ಸಾಮರ್ಥ್ಯದ ಬಗ್ಗೆ ಅಚ್ಚರಿ ವ್ಯಕ್ತಪಡಿಸಿದ್ದಾರೆ. ರಾಜಸ್ಥಾನ್ ರಾಯಲ್ಸ್​​ ಬೌಲಿಂಗ್ ದಾಳಿಯು ಇತರ ಕೆಲವು ತಂಡಗಳಂತೆ ತೊಂದರೆ ಅನುಭವಿಸಿಲ್ಲ ಎಂದೂ ಹೇಳಿದ್ದಾರೆ.

ಇದನ್ನೂ ಓದಿ: Champions Trophy : ಚಾಂಪಿಯನ್ಸ್​ ಟ್ರೋಫಿ ಮೂಲಕ ಐಪಿಎಲ್​ಗೆ ತೊಂದರೆ ಕೊಡಲು ಪಾಕಿಸ್ತಾನ ಸಂಚು

ಬೌಲರ್​ಗಳು ರನ್ ಬಿಟ್ಟುಕೊಟ್ಟಿರುವ ಸರಾಸರಿ ರನ್​ ನೋಡಿದರೆ ಅಚ್ಚರಿಯಾಗುತ್ತದೆ. ಅದರಲ್ಲಿ ನಾವು (ರಾಜಸ್ಥಾನ್​ ಬೌಲರ್​ಗಳು) ಕಡಿಮೆ ರನ್ ನೀಡಿದ್ದೇವೆ. ಜೈಪುರದಲ್ಲಿ ನಡೆದ ಒಂದು ಪಂದ್ಯದಲ್ಲಿ ನಾವು 180 ರನ್ ಗಳನ್ನೂ ರಕ್ಷಿಸಿದ್ದೇವೆ. ಆದಾಗ್ಯೂ ದಿನದ ಕೊನೆಯಲ್ಲಿ, ಪ್ರೇಕ್ಷಕರು ಬೌಂಡರಿ ಮತ್ತು ಸಿಕ್ಸರ್ ಗಳನ್ನು ವೀಕ್ಷಿಸಲು ಬರುತ್ತಾರೆ ಎಂಬುದು ಸತ್ಯ. ಆದರೆ, ಬೌಲರ್​ಗಳ ದಂಡನೆ ನಿರಂತರ ಎಂದು ನುಡಿದಿದ್ದಾರೆ.

ಜೈಪುರದ ಮೈದಾನದ ಬೌಂಡರಿ ಲೈನ್​ ದೊಡ್ಡದಾಗಿದೆ. ಧ್ರುವ್ ಜುರೆಲ್ “ಇದು ತುಂಬಾ ದೊಡ್ಡದಾಗಿದೆ” ಎಂದು ಹೇಳಿದ್ದರು. ಅದರೆ, ನಾನು ಅದಾದರೂ ಇರಲಿ ಎಂದು ಹೇಳಿದೆ. ಈ ಕ್ರೀಡಾಂಗಣ ಸುತ್ತಲು ಬೈಸಿಕಲ್ ಬೇಕಾಗುತ್ತದೆ ಎಂದು ತಿಳಿದುಕೊಂಡೆ. ಅದರೆ, ಕೆಲವು ಕ್ರೀಡಾಂಗಣಗಳು ಚಿಕ್ಕದಾಗಿವೆ. ಚೂಯಿಂಗ್ ಗಮ್ ಜೋರಾಗಿ ಉಗಿದರೆ ಅದು ಬೌಂಡಿ ಲೈನ್​ಗಿಂತ ಆಚೆ ಹೋಗಿ ಬೀಳುತ್ತದೆ ಎಂದು ಹೇಳಿದರು.

Continue Reading

ದೇಶ

ಪಿಒಕೆ ನಮ್ಮದು ಎಂದಿದ್ದಕ್ಕೆ ಪಾಕ್ ಬಳೆ ತೊಟ್ಟಿಲ್ಲ ಎಂದ ಕಾಶ್ಮೀರ ಮಾಜಿ ಸಿಎಂ ಫಾರೂಕ್‌ ಅಬ್ದುಲ್ಲಾ!‌ ಇವರ ಬೆಂಬಲ ಯಾರಿಗೆ?

ಪಿಒಕೆ ನಾಗರಿಕರೇ ಭಾರತದೊಂದಿಗೆ ವಿಲೀನವಾಗಲು ಬಯಸುತ್ತಿದ್ದಾರೆ. ಪಿಒಕೆ ಮೊದಲು ಕೂಡ ನಮ್ಮದಾಗಿತ್ತು. ಮುಂದೆಯೂ ನಮ್ಮದಾಗಿ ಇರಲಿದೆ. ಹಾಗಂತ, ಪಿಒಕೆಗೆ ಸೈನಿಕರನ್ನೇ ಕಳುಹಿಸಬೇಕಾಗಿಲ್ಲ. ಅಲ್ಲಿನ ಜನರೇ, ಭಾರತದೊಂದಿಗೆ ವಿಲೀನವಾಗಲು ಬಯಸುತ್ತಿದ್ದಾರೆ ಎಂದು ರಾಜನಾಥ್‌ ಸಿಂಗ್‌ ಹೇಳಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿರುವ ಫಾರೂಕ್‌ ಅಬ್ದುಲ್ಲಾ, ಪಾಕಿಸ್ತಾನವೇನೂ ಬಳೆ ತೊಟ್ಟುಕೊಂಡು ಕೂತಿಲ್ಲ ಎಂದು ಹೇಳಿದ್ದಾರೆ.

VISTARANEWS.COM


on

Farooq Abdullah
Koo

ಶ್ರೀನಗರ: ಲೋಕಸಭೆ ಚುನಾವಣೆ (Lok Sabha Election 2024) ಹೊತ್ತಿನಲ್ಲೇ ಪಾಕ್‌ ಆಕ್ರಮಿತ ಕಾಶ್ಮೀರ (PoK) ಕುರಿತು ಮಹತ್ವದ ಚರ್ಚೆಯೊಂದು ಶುರುವಾಗಿದೆ. “ಪಾಕಿಸ್ತಾನ ಆಕ್ರಮಿತ ಕಾಶ್ಮೀರವನ್ನು ಭಾರತ ವಶಪಡಿಸಿಕೊಳ್ಳುವುದು, ಸೇನೆಯನ್ನು ನುಗ್ಗಿಸಿ ವಾಪಸ್‌ ಪಡೆಯುವುದು ಬೇಕಾಗಿಲ್ಲ. ಅಲ್ಲಿನ ಜನರೇ ಭಾರತದ ಜತೆ ವಿಲೀನವಾಗಲು ಬಯಸುತ್ತಿದ್ದಾರೆ” ಎಂಬುದಾಗಿ ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌ (Rajnath Singh) ಹೇಳಿದ್ದಾರೆ. ಇನ್ನು ಇದಕ್ಕೆ ಜಮ್ಮು ಕಾಶ್ಮೀರ ಮಾಜಿ ಮುಖ್ಯಮಂತ್ರಿ ಫಾರೂಕ್‌ ಅಬ್ದುಲ್ಲಾ (Farooq Abdullah) ಪ್ರತಿಕ್ರಿಯಿಸಿದ್ದು, “ಭಾರತ ಆಕ್ರಮಣ ಮಾಡುವುದು ಬೇಕಾಗಿಲ್ಲ. ಪಾಕಿಸ್ತಾನವೇನೂ ಬಳೆ ತೊಟ್ಟಿಲ್ಲ” ಎಂದು ಹೇಳಿದ್ದಾರೆ. ಇದು ಈಗ ಇನ್ನಷ್ಟು ಚರ್ಚೆಗೆ ಗ್ರಾಸವಾಗಿದೆ.

ರಾಜನಾಥ್‌ ಸಿಂಗ್‌ ಹೇಳಿದ್ದೇನು?

ಪಿಟಿಐಗೆ ಸಂದರ್ಶನ ನೀಡುವ ವೇಳೆ ರಾಜನಾಥ್‌ ಸಿಂಗ್‌ ಹೇಳಿಕೆ ನೀಡಿದ್ದರು. “ಪಿಒಕೆ ವಿಚಾರದಲ್ಲಿ ಭಾರತ ಏನೂ ಮಾಡಬೇಕಿಲ್ಲ. ಜಮ್ಮು-ಕಾಶ್ಮೀರದ ಪರಿಸ್ಥಿತಿ ಬದಲಾಗಿದೆ. ಜಮ್ಮು-ಕಾಶ್ಮೀರದಲ್ಲಿ ಶಾಂತಿ ನೆಲೆಸುವ ಜತೆಗೆ ಆರ್ಥಿಕ ಪ್ರಗತಿಯಾಗುತ್ತಿದೆ. ಇದರಿಂದಾಗಿ ನಾವು ಪಾಕ್‌ ಆಕ್ರಮಿತ ಕಾಶ್ಮೀರದ ಮೇಲೆ ದಾಳಿ ಮಾಡಬೇಕಿಲ್ಲ. ಪಿಒಕೆ ನಾಗರಿಕರೇ ಭಾರತದೊಂದಿಗೆ ವಿಲೀನವಾಗಲು ಬಯಸುತ್ತಿದ್ದಾರೆ. ಪಿಒಕೆ ಮೊದಲು ಕೂಡ ನಮ್ಮದಾಗಿತ್ತು. ಮುಂದೆಯೂ ನಮ್ಮದಾಗಿ ಇರಲಿದೆ. ಹಾಗಂತ, ಪಿಒಕೆಗೆ ಸೈನಿಕರನ್ನೇ ಕಳುಹಿಸಬೇಕಾಗಿಲ್ಲ. ಅಲ್ಲಿನ ಜನರೇ, ಭಾರತದೊಂದಿಗೆ ವಿಲೀನವಾಗಲು ಬಯಸುತ್ತಿದ್ದಾರೆ” ಎಂಬುದಾಗಿ ರಾಜನಾಥ್‌ ಸಿಂಗ್‌ ಹೇಳಿದ್ದರು.

ಫಾರೂಕ್‌ ಅಬ್ದುಲ್ಲಾ ಪ್ರತಿಕ್ರಿಯೆ ಏನು?

ಸುದ್ದಿಗೋಷ್ಠಿ ನಡೆಸಿದ ಜಮ್ಮು-ಕಾಶ್ಮೀರ ನ್ಯಾಷನಲ್‌ ಕಾನ್ಫರೆನ್ಸ್‌ ಮುಖ್ಯಸ್ಥ ಫಾರೂಕ್‌ ಅಬ್ದುಲ್ಲಾ, ರಾಜನಾಥ್‌ ಸಿಂಗ್‌ ಹೇಳಿಕೆಗೆ ಪ್ರತಿಕ್ರಿಯಿಸಿದರು. “ದೇಶದ ರಕ್ಷಣಾ ಸಚಿವರು ಪಿಒಕೆ ಮೇಲೆ ದಾಳಿ ಮಾಡಿ ಎಂಬುದಾಗಿ ಹೇಳಿದರೆ, ಅದನ್ನು ತಡೆಯಲು ನಾವು ಯಾರು? ಆದರೆ, ಒಂದು ನೆನಪಿರಲಿ. ಪಾಕಿಸ್ತಾನವೇನೂ ಬಳೆ ತೊಟ್ಟುಕೊಂಡು ಕೂತಿಲ್ಲ. ಅವರ ಬಳಿಯೂ ಪರಮಾಣು ಬಾಂಬ್‌ಗಳಿವೆ. ಆ ಪರಮಾಣು ಬಾಂಬ್‌ಗಳು ನಮ್ಮ ಮೇಲೆ ಬಂದು ಬೀಳುತ್ತವೆ” ಎಂಬುದಾಗಿ ಫಾರೂಕ್‌ ಅಬ್ದುಲ್ಲಾ ಎಚ್ಚರಿಸಿದ್ದಾರೆ.

ಜೈಶಂಕರ್‌ ಕೂಡ ಮಹತ್ವದ ಹೇಳಿಕೆ

ಪಿಒಕೆ ಕುರಿತು ವಿದೇಶಾಂಗ ಸಚಿವ ಎಸ್.ಜೈಶಂಕರ್‌ ಕೂಡ ಹೇಳಿಕೆ ನೀಡಿದ್ದಾರೆ. “ಪಿಒಕೆ ಭಾರತದ ಭಾಗವಾಗಿದೆ. ಪಿಒಕೆ ಭಾರತದ ಭಾಗ ಎಂಬುದಾಗಿ ಸಂಸತ್ತಿನಲ್ಲೂ ನಿರ್ಣಯ ತೆಗೆದುಕೊಳ್ಳಲಾಗಿದೆ. ಪಿಒಕೆ ಮೊದಲು ಕೂಡ ನಮ್ಮದಾಗಿತ್ತು. ಆದರೆ, ಅದನ್ನು ಅತಿಕ್ರಮಣ ಮಾಡಿಕೊಳ್ಳಲು ಕಾರಣರಾದವರು ಯಾರು? ಅದರ ಮೇಲೆ ಬೇರೆಯವರು ನಿಯಂತ್ರಣ ಸಾಧಿಸಲು ಯಾರು ಕಾರಣ” ಎಂಬುದಾಗಿ ಪರೋಕ್ಷವಾಗಿ ಕಾಂಗ್ರೆಸ್‌ಗೆ ಕುಟುಕಿದರು. ಇದಕ್ಕೂ ಮೊದಲು ಕೂಡ, ಅಮಿತ್‌ ಶಾ ಅವರು ಪಿಒಕೆ ನಮ್ಮದೇ ಎಂದು ಹೇಳಿದ್ದರು.

ಇದನ್ನೂ ಓದಿ: ಚೀನಾ ದಯೆಯಿಂದ ಮೊದಲ ಚಂದ್ರಯಾನ ಕೈಗೊಂಡ ಪಾಕಿಸ್ತಾನ; ಆದರೂ ಭಾರತಕ್ಕಿಂತ 16 ವರ್ಷ ಹಿಂದೆ!

Continue Reading

Latest

Champions Trophy : ಚಾಂಪಿಯನ್ಸ್​ ಟ್ರೋಫಿ ಮೂಲಕ ಐಪಿಎಲ್​ಗೆ ತೊಂದರೆ ಕೊಡಲು ಪಾಕಿಸ್ತಾನ ಸಂಚು

Champions Trophy: ಲಾಹೋರ್​ನ ಗಡಾಫಿ ಕ್ರೀಡಾಂಗಣದಲ್ಲಿ ಶನಿವಾರ (ಮೇ 5) ನಡೆದ ಸಾಮಾನ್ಯ ಮಂಡಳಿ ಸಭೆಯ ಸಿದ್ಧತೆಯಲ್ಲಿ ಪಿಸಿಬಿ ಆರು ಪಿಎಸ್ಎಲ್ ಫ್ರಾಂಚೈಸಿ ಮಾಲೀಕರೊಂದಿಗೆ ಸಭೆ ನಡೆಸಿದ ನಂತರ ಈ ಬೆಳವಣಿಗೆ ಬೆಳಕಿಗೆ ಬಂದಿದೆ. ಐಸಿಸಿ ಚಾಂಪಿಯನ್ಸ್ ಟ್ರೋಫಿ 2025 ಏಪ್ರಿಲ್ 7 ರಿಂದ ಮೇ 20 ರವರೆಗೆ ನಡೆಯಲಿದೆ.

VISTARANEWS.COM


on

Champions Trophy
Koo

ಬೆಂಗಳೂರು: ಪಾಕಿಸ್ತಾನ ಸೂಪರ್ ಲೀಗ್ (PSL) ನ 2025 ರ ಆವೃತ್ತಿಯನ್ನು ನಡೆಸಲು ಪಾಕಿಸ್ತಾನ ಕ್ರಿಕೆಟ್ ಮಂಡಳಿ (ಪಿಸಿಬಿ) ಏಪ್ರಿಲ್ 7 ರಿಂದ ಮೇ 20 ರವರೆಗೆ ಸಮಯವನ್ನು ನಿಗದಿಪಡಿಸಿದೆ. ಇದರರ್ಥ ಮುಂದಿನ ವರ್ಷದ ಪಿಎಸ್ಎಲ್ ಇಂಡಿಯನ್ ಪ್ರೀಮಿಯರ್ ಲೀಗ್ 2025 (IPL 2025) ಋತುವಿನೊಂದಿಗೆ ಸಂಘರ್ಷ ಹೊಂದುತ್ತದೆ. ಫೆಬ್ರವರಿ-ಮಾರ್ಚ್​​ನಲ್ಲಿ ಪಾಕಿಸ್ತಾನ ಆತಿಥ್ಯ ವಹಿಸಲಿರುವ 2025 ರ ಚಾಂಪಿಯನ್ಸ್ ಟ್ರೋಫಿಯಿಂದಾಗಿ (Champions Trophy) ಪಿಎಸ್ಎಲ್ 2025 ಅನ್ನು ವಿಳಂಬಗೊಳಿಸುವ ಕ್ರಮ ಕೈಗೊಳ್ಳಲಾಗಿದೆ. ಈ ಮೂಲಕ ಬಿಸಿಸಿಐಗೆ ತೊಂದರೆ ನೀಡಲು ಪಾಕಿಸ್ತಾನ ಸಂಚು ರೂಪಿಸಿದೆ.

ಚಾಂಪಿಯನ್ಸ್​ ಟ್ರೋಫಿಗೆ ಭಾರತ ತಂಡ ಪಾಕಿಸ್ತಾನಕ್ಕೆ ಹೋಗುವುದಿಲ್ಲ ಎಂದು ಸ್ಪಷ್ಟವಾಗಿ ತಿಳಿಸಿದೆ. ಇದು ಶತ್ರು ರಾಷ್ಟ್ರವನ್ನು ಕೆರಳಿಸಿದೆ. ಮತ್ತೊಂದು ಬಾರಿ ಆಗಲಿರುವ ಮುಜುಗರವನ್ನು ತಪ್ಪಿಸಿಕೊಳ್ಳುವುದಕ್ಕೆ ಭಾರತ ಮತ್ತು ಬಿಸಿಸಿಐಗೆ ಕಾಟ ಕೊಡಲು ಮುಂದಾಗಿದೆ. ಅರದಂತೆ ಫೆಬ್ರವರಿ ವೇಳೆಯಲ್ಲಿ ಚಾಂಪಿಯನ್ಸ್ ಟ್ರೋಫಿ ನಡೆಸಿ ಬಳಿಕ ಪಿಎಸ್​ಎಲ್​ ನಡೆಸಲು ಮುಂದಾಗಿದೆ. ಇದರಿಂದ ಭಾರತಕ್ಕೆ ಐಪಿಎಲ್​ ನಡೆಸಲು ತೊಂದರೆ ಆಗಲಿ ಮತ್ತು ವಿದೇಶಿ ಆಟಗಾರರ ಲಭ್ಯತೆ ಕಡಿಮೆಯಾಗಲಿ ಎಂದು ಯೋಜನೆ ರೂಪಿಸಿದೆ.

ಲಾಹೋರ್​ನ ಗಡಾಫಿ ಕ್ರೀಡಾಂಗಣದಲ್ಲಿ ಶನಿವಾರ (ಮೇ 5) ನಡೆದ ಸಾಮಾನ್ಯ ಮಂಡಳಿ ಸಭೆಯ ಸಿದ್ಧತೆಯಲ್ಲಿ ಪಿಸಿಬಿ ಆರು ಪಿಎಸ್ಎಲ್ ಫ್ರಾಂಚೈಸಿ ಮಾಲೀಕರೊಂದಿಗೆ ಸಭೆ ನಡೆಸಿದ ನಂತರ ಈ ಬೆಳವಣಿಗೆ ಬೆಳಕಿಗೆ ಬಂದಿದೆ. ಐಸಿಸಿ ಚಾಂಪಿಯನ್ಸ್ ಟ್ರೋಫಿ 2025 ಏಪ್ರಿಲ್ 7 ರಿಂದ ಮೇ 20 ರವರೆಗೆ ನಡೆಯಲಿದೆ. ಕರಾಚಿ, ಲಾಹೋರ್, ಮುಲ್ತಾನ್ ಮತ್ತು ರಾವಲ್ಪಿಂಡಿ ಪಾಕಿಸ್ತಾನದಲ್ಲಿ ಪಂದ್ಯಗಳನ್ನು ಆಯೋಜಿಸಲಿದ್ದು, ಎರಡೂ ತಂಡಗಳು ತವರು ನೆಲದಲ್ಲಿ ಕನಿಷ್ಠ ಐದು ಪಂದ್ಯಗಳನ್ನು ಆಡಲಿವೆ.

“ಪಿಸಿಬಿ ಹೆಚ್ಚುವರಿ ಸ್ಥಳಗಳನ್ನು ಅನ್ವೇಷಿಸುವುದನ್ನು ಮುಂದುವರಿಸುತ್ತದೆ. ನಾಲ್ಕು ಪ್ಲೇಆಫ್​ಗಳನ್ನು ತಟಸ್ಥ ಸ್ಥಳದಲ್ಲಿ ನಡೆಸಲು ಪ್ರಸ್ತಾಪಿಸಲಾಗಿದೆ, “ಎಂದು ಪಿಸಿಬಿ ಶನಿವಾರ ಪ್ರಕಟಣೆಯಲ್ಲಿ ತಿಳಿಸಿದೆ.

ಇದನ್ನೂ ಓದಿ: IPL 2024 : ಧೋನಿಯನ್ನು ಬೌಲ್ಡ್​ ಮಾಡಿ ಸಂಭ್ರಮಿಸದ ಹರ್ಷಲ್​ ಪಟೇಲ್​; ಕಾರಣ ನೀಡಿದ ಬೌಲರ್​

ವಿದೇಶಿ ಆಟಗಾರರಿಗೆ ಸಮಸ್ಯೆ

2025 ರಲ್ಲಿ ಐಪಿಎಲ್ ಮತ್ತು ಪಿಎಸ್ಎಲ್ ದಿನಾಂಕಗಳ ನಡುವಿನ ಸಂಭಾವ್ಯ ಘರ್ಷಣೆಯು ಅನೇಕ ವಿದೇಶಿ ಆಟಗಾರರನ್ನು ಇಕ್ಕಟ್ಟಿಗೆ ಸಿಲುಕಿಸುತ್ತದೆ. ಏಕೆಂದರೆ ಅವರು ಎರಡು ಲೀಗ್​ಗಳ ನಡುವೆ ಒಂದನ್ನು ಮಾತ್ರ ಆರಿಸಬೇಕಾಗುತ್ತದೆ.

“ಎಂದಿನಂತೆ, ಪಾಕಿಸ್ತಾನ ಸೂಪರ್ ಲೀಗ್ 2025 ಗಾಗಿ ನಾವು ಫ್ರಾಂಚೈಸಿ ಮಾಲೀಕರೊಂದಿಗೆ ಬಹಳ ರೋಮಾಂಚಕಾರಿ ಮತ್ತು ಆಸಕ್ತಿದಾಯಕ ಸಭೆಯನ್ನು ನಡೆಸಿದ್ದೇವೆ. ಫ್ರಾಂಚೈಸಿ ಮಾಲೀಕರು 2025 ರ ಈವೆಂಟ್ ಮತ್ತು ಅದರಾಚೆಗೆ ಪಿಸಿಬಿ ಶಿಫಾರಸು ಮಾಡಿದ ವಿಂಡೋ ಮತ್ತು ಪ್ಲೇಆಫ್ ಸ್ಥಳಗಳ ಬಗ್ಗೆ ತಮ್ಮ ಅಭಿಪ್ರಾಯಗಳನ್ನು ಮಂಡಿಸಿದ್ದಾರೆ.

“ಈ ಸಭೆಯಲ್ಲಿ ಪಿಎಸ್ಎಲ್ 2025 ಮತ್ತು ಅದಕ್ಕಿಂತ ಹೆಚ್ಚಿನ ಸೂಕ್ತ ವಿಂಡೋಗೆ ಸಂಬಂಧಿಸಿದಂತೆ ಪಿಸಿಬಿ ಫ್ರಾಂಚೈಸಿ ಮಾಲೀಕರೊಂದಿಗೆ ಹೆಚ್ಚಿನ ಡೇಟಾ ಹಂಚಿಕೊಳ್ಳಲಿದೆ. ಇದರಿಂದ ಅವರು ತಮ್ಮೊಳಗೆ ಚರ್ಚಿಸಬಹುದು, ಹೆಚ್ಚು ಮಾಹಿತಿಯುತ ನಿರ್ಧಾರ ತೆಗೆದುಕೊಳ್ಳಬಹುದು ಮತ್ತು ಸಾಮಾನ್ಯ ಮಂಡಳಿ ಸಭೆಯಲ್ಲಿ ತಮ್ಮ ಆಲೋಚನೆಗಳು ಮತ್ತು ಆಲೋಚನೆಗಳನ್ನು ಹಂಚಿಕೊಳ್ಳಲಾಗಿದೆ ಎಂದು ಎಂದು ಪಿಸಿಬಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸಲ್ಮಾನ್ ನಸೀರ್ ಹೇಳಿದ್ದಾರೆ.

ಪಾಕಿಸ್ತಾನದ ಅತಿದೊಡ್ಡ ಬ್ರಾಂಡ್​​ ಒಂದರ ಭವಿಷ್ಯಕ್ಕಾಗಿ ಸಮಯೋಚಿತ ನಿರ್ಧಾರಗಳನ್ನು ತೆಗೆದುಕೊಳ್ಳಲು ಫ್ರಾಂಚೈಸಿಗಳೊಂದಿಗೆ ನಿಕಟವಾಗಿ ಕೆಲಸ ಮಾಡಲು ನಾವು ಎದುರು ನೋಡುತ್ತಿದ್ದೇವೆ ಎಂದು ಪಿಸಿಬಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸಲ್ಮಾನ್ ನಸೀರ್ ಹೇಳಿದ್ದಾರೆ.

Continue Reading
Advertisement
Prajwal Revanna Case
ಕರ್ನಾಟಕ2 mins ago

Prajwal Revanna Case: ಜಡ್ಜ್‌ ಮುಂದೆಯೂ ನಿಂಬೆ ಹಣ್ಣು ಹಿಡಿದುಕೊಂಡಿದ್ದ ಎಚ್‌.ಡಿ.ರೇವಣ್ಣ!

IPL 2024
ಪ್ರಮುಖ ಸುದ್ದಿ17 mins ago

IPL 2024 : ಐಪಿಎಲ್ ಸ್ಟೇಡಿಯಮ್​ಗಳ ಗಾತ್ರದ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿದ ಆರ್​ ಅಶ್ವಿನ್​

Farooq Abdullah
ದೇಶ25 mins ago

ಪಿಒಕೆ ನಮ್ಮದು ಎಂದಿದ್ದಕ್ಕೆ ಪಾಕ್ ಬಳೆ ತೊಟ್ಟಿಲ್ಲ ಎಂದ ಕಾಶ್ಮೀರ ಮಾಜಿ ಸಿಎಂ ಫಾರೂಕ್‌ ಅಬ್ದುಲ್ಲಾ!‌ ಇವರ ಬೆಂಬಲ ಯಾರಿಗೆ?

Champions Trophy
Latest39 mins ago

Champions Trophy : ಚಾಂಪಿಯನ್ಸ್​ ಟ್ರೋಫಿ ಮೂಲಕ ಐಪಿಎಲ್​ಗೆ ತೊಂದರೆ ಕೊಡಲು ಪಾಕಿಸ್ತಾನ ಸಂಚು

Fire Accident
ಕರ್ನಾಟಕ2 hours ago

Fire Accident: ಬೆಂಗಳೂರಿನ ಎಂ.ಜಿ. ರಸ್ತೆಯ ಆಪ್ಟಿಕಲ್ಸ್‌ ಮಳಿಗೆಯಲ್ಲಿ ಬೆಂಕಿ ಅವಘಡ

IPL 2024
ಕ್ರೀಡೆ2 hours ago

IPL 2024 : ಧೋನಿಯನ್ನು ಬೌಲ್ಡ್​ ಮಾಡಿ ಸಂಭ್ರಮಿಸದ ಹರ್ಷಲ್​ ಪಟೇಲ್​; ಕಾರಣ ನೀಡಿದ ಬೌಲರ್​

Al Jazeera
ಪ್ರಮುಖ ಸುದ್ದಿ2 hours ago

Al Jazeera: ಹಮಾಸ್‌ ಉಗ್ರರ ಪರ ನಿಲುವು; ಇಸ್ರೇಲ್‌ನಲ್ಲಿ ಅಲ್‌ಜಜೀರಾ ಚಾನೆಲ್‌ ಬಂದ್‌ ಮಾಡಿದ ನೆತನ್ಯಾಹು!

Pralhad Joshi
ಕರ್ನಾಟಕ2 hours ago

Pralhad Joshi: ಕಾಂಗ್ರೆಸ್‌ನಿಂದ ಮೋದಿ ಎಂಬ ಆಕಾಶಕ್ಕೆ ಉಗುಳೋ ಕೃತ್ಯ: ಪ್ರಲ್ಹಾದ್ ಜೋಶಿ

Bernard Hill
Latest2 hours ago

Titanic Movie : ಟೈಟಾನಿಕ್​, ಗಾಂಧಿ ಸಿನಿಮಾದ ನಟ ಬರ್ನಾರ್ಡ್ ಹಿಲ್ ನಿಧನ

IPL 2024
Latest3 hours ago

IPL 2024 : ಸಿಎಸ್​ಕೆ ತಂಡದ ಸಮಸ್ಯೆಗಳನ್ನು ಬಹಿರಂಗಪಡಿಸಿದ ನಾಯಕ ಋತುರಾಜ್​

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Prajwal Revanna Case HD Revanna sent to judicial custody Shift to Parappana Agrahara
ಕ್ರೈಂ3 hours ago

Prajwal Revanna Case: ಎಸ್‌ಐಟಿ ಕಸ್ಟಡಿಗೆ ಮಾಜಿ ಸಚಿವ ಎಚ್‌.ಡಿ. ರೇವಣ್ಣ; ಮತ್ತೆ ತೀವ್ರ ವಿಚಾರಣೆ

Prajwal Revanna Case No evidence against me its a conspiracy says HD Revanna
ಕರ್ನಾಟಕ5 hours ago

Prajwal Revanna Case: ನನ್ನ ವಿರುದ್ಧ ಯಾವುದೇ ಸಾಕ್ಷಿಗಳಿಲ್ಲ, ಇದೊಂದು ಷಡ್ಯಂತ್ರ: ಎಚ್‌.ಡಿ. ರೇವಣ್ಣ ಫಸ್ಟ್‌ ರಿಯಾಕ್ಷನ್‌!

Narendra Modi
ದೇಶ5 hours ago

Narendra Modi: ರಾಮನಗರಿ ಅಯೋಧ್ಯೆಯಲ್ಲಿ ಮೋದಿ ಭರ್ಜರಿ ರೋಡ್‌ ಶೋ; ಲೈವ್‌ ಇಲ್ಲಿ ವೀಕ್ಷಿಸಿ

Dina Bhavishya
ಭವಿಷ್ಯ18 hours ago

Dina Bhavishya : ಈ ರಾಶಿಯವರಿಗೆ ಆಪ್ತರಿಂದ ಸಿಗಲಿದೆ ಸಿಹಿ ಸುದ್ದಿ

Dina Bhavishya
ಭವಿಷ್ಯ2 days ago

Dina Bhavishya: ವೀಕೆಂಡ್‌ನಲ್ಲೂ ಬಾಸ್‌ ಕಾಟ ತಪ್ಪಲ್ಲ; ಈ ರಾಶಿಯವರಿಗೆ ಇಡೀ ದಿನ ಕೆಲಸದ ಒತ್ತಡ

Bengaluru Rains
ಮಳೆ2 days ago

Bengaluru Rains:‌ ಅಬ್ಬಾಬ್ಬ ಲಾಟ್ರಿ.. ಕಂಗ್ರಾಜುಲೇಷನ್ ಬ್ರದರ್.. ಬೆಂಗಳೂರು ಮಳೆಗೆ ನೆಟ್ಟಿಗರ ವಿಷ್‌, ಫುಲ್ ಖುಷ್‌

Dina Bhavishya
ಭವಿಷ್ಯ3 days ago

Dina Bhavishya: ಈ ರಾಶಿಯ ವಿವಾಹ ಅಪೇಕ್ಷಿತರಿಗೆ ಸಿಗಲಿದೆ ಗುಡ್‌ ನ್ಯೂಸ್‌

Prajwal Revanna Case Another victim gives statement before judge Will Revanna get anticipatory bail
ಕ್ರೈಂ3 days ago

Prajwal Revanna Case: ನ್ಯಾಯಾಧೀಶರ ಮುಂದೆ 2 ಗಂಟೆ ಹೇಳಿಕೆ ನೀಡಿದ ಮತ್ತೊಬ್ಬ ಸಂತ್ರಸ್ತೆ; ರೇವಣ್ಣಗೆ ಸಿಗುತ್ತಾ ನಿರೀಕ್ಷಣಾ ಜಾಮೀನು?

Dina Bhavishya
ಭವಿಷ್ಯ4 days ago

Dina Bhavishya : ದಿನದ ಕೊನೆಯಲ್ಲಿ ಈ ರಾಶಿಯವರು ಯಾವುದಾದರೂ ಶುಭ ಸುದ್ದಿ ಕೇಳುವಿರಿ

dina bhavishya read your daily horoscope predictions for April 30 2024
ಭವಿಷ್ಯ6 days ago

Dina Bhavishya: ಈ ರಾಶಿಗಳ ಉದ್ಯೋಗಿಗಳಿಗೆ ಇಂದು ಒತ್ತಡ ಹೆಚ್ಚಲಿದೆ!

ಟ್ರೆಂಡಿಂಗ್‌