Sensex | ಸಾರ್ವಕಾಲಿಕ ಏರಿಕೆಯ ಸನಿಹಕ್ಕೆ ಷೇರು ಪೇಟೆ, ಸೆನ್ಸೆಕ್ಸ್‌ 61,185ಕ್ಕೆ ಏರಿಕೆ, ನಿಫ್ಟಿ 18,202ಕ್ಕೆ ಸ್ಥಿರ - Vistara News

ಪ್ರಮುಖ ಸುದ್ದಿ

Sensex | ಸಾರ್ವಕಾಲಿಕ ಏರಿಕೆಯ ಸನಿಹಕ್ಕೆ ಷೇರು ಪೇಟೆ, ಸೆನ್ಸೆಕ್ಸ್‌ 61,185ಕ್ಕೆ ಏರಿಕೆ, ನಿಫ್ಟಿ 18,202ಕ್ಕೆ ಸ್ಥಿರ

ಮುಂಬಯಿ ಷೇರು ಮಾರುಕಟ್ಟೆ ಸಂವೇದಿ ಸೂಚ್ಯಂಕ ಸೆನ್ಸೆಕ್ಸ್‌ (Sensex ) ಸೋಮವಾರ 234 ಅಂಕ ವೃದ್ಧಿಸಿತು. ನಿಫ್ಟಿ 85 ಅಂಕ ಲಾಭ ಗಳಿಸಿತು.

VISTARANEWS.COM


on

Stock Market goes up and Sensex jumps by 612 points
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮುಂಬಯಿ: ವಿದೇಶಿ ಹೂಡಿಕೆದಾರರ ಸತತ ಹೂಡಿಕೆ ಹಾಗೂ ಸಾರ್ವಜನಿಕ ವಲಯದ ಬ್ಯಾಂಕಗಳ ಬೆಂಬಲದಿಂದ ಮಾರುಕಟ್ಟೆ ಇಂದು (Sensex) ಉತ್ತಮ ವಹಿವಾಟು ನಡೆಸಿತು.
ನಿಫ್ಟಿ ಇಂದು 94 ಅಂಕಗಳ ಏರಿಕೆಯೊಂದಿಗೆ 18221 ರಲ್ಲಿ ಮತ್ತು ಸೆನ್ಸೆಕ್ಸ್ 238 ಅಂಶಗಳ ಹೆಚ್ಚಳದೊಂದಿಗೆ 61188 ರಲ್ಲಿ ಪ್ರಾರಂಭವಾಯಿತು. ಬ್ಯಾಂಕ್ ನಿಫ್ಟಿ ಸಹ 482 ಅಂಕಗಳ ಏರಿಕೆಯೊಂದಿಗೆ 41740 ರಲ್ಲಿ ಆರಂಭವಾಯಿತು.
ನಿಫ್ಟಿ ಆರಂಭವಾದ ನಂತರ ಸತತವಾಗಿ ಇಳಿಕೆ ಕಂಡು 18060 ರವರೆಗೆ ಕುಸಿಯಿತು. ಮಧ್ಯಾಹ್ನ 1.30 ಕ್ಕೆ ಯುರೋಪ್ ಮಾರುಕಟ್ಟೆ ಪ್ರಾರಂಭದ ನಂತರ ಏರಿಕೆಯ ಹಾದಿ ಹಿಡಿದ ನಿಫ್ಟಿ 85 ಅಂಕಗಳ ಏರಿಕೆಯೊಂದಿಗೆ 18202 ರಲ್ಲಿ ಮುಕ್ತಾಯಕಂಡಿತು. ಬ್ಯಾಂಕ್ ನಿಫ್ಟಿ ಬೆಳಿಗ್ಗೆ ಸಾರ್ವಕಾಲಿಕ ಏರಿಕೆಯ ಸಮೀಪ ಪ್ರಾರಂಭವಾದಾಗ ಹೂಡಿಕೆದಾರರು ಲಾಭ ನಗಧೀಕರಣಕ್ಕೆ ಮುಂದಾಗಿದ್ದರಿಂದ ಇಳಿಕೆಯಾಯಿತು. ಪುನಃ ಮಧ್ಯಾಹ್ನ ಸೂಚ್ಯಂಕ ಏರಿಕೆ ಕಂಡು 428 ಅಂಶಗಳ ಹೆಚ್ಚಳದೊಂದಿಗೆ ವಹಿವಾಟು ಪೂರ್ಣಗೊಳಿಸಿತು. ಸೆನ್ಸೆಕ್ಸ್ 234 ಅಂಕಗಳ ಏರಿಕೆಯೊಂದಿಗೆ 61185 ರಲ್ಲಿ ಅಂತ್ಯಗೊಂಡಿತು
ಬ್ಯಾಂಕ್ ನಿಫ್ಟಿ ಸಾರ್ವಕಾಲಿಕ ಏರಿಕೆ ಮಟ್ಟದಿಂದ ಕೇವಲ 150 ಅಂಕಗಳ ದೂರದಲ್ಲಿದೆ ಮತ್ತು ನಿಫ್ಟಿ ಸಹ ಸಾರ್ವಕಾಲಿಕ ಏರಿಕೆ ಹತ್ತಿರದಲ್ಲಿದೆ. ಇಂದು ಸಾರ್ವಜನಿಕ ಬ್ಯಾಂಕಗಳು ಉತ್ತಮ ವಹಿವಾಟು ನಡೆಸಿ ಷೇರುಪೇಟೆಗೆ ಉತ್ತಮ ಸ್ಪಂಧನೆ ನೀಡಿದವು.
ಸಣ್ಣ ಕಂಪನಿಗಳ ಸೂಚ್ಯಂಕ ಶೇ. 0.83 ರಷ್ಟು ಏರಿಕೆಯಾದರೆ ಮಧ್ಯಮ ಕಂಪನಿಗಳ ಸೂಚ್ಯಂಕ 0.89 ರಷ್ಟು ಏರಿಕೆಯಾಯಿತು.
ಬ್ಯಾಂಕಿಂಗ್, ಆಟೋ, ಲೋಹ ಮತ್ತು ರಿಯಾಲಿಟಿ ವಲಯದ ಸೂಚ್ಯಂಕಗಳು ಏರಿಕೆ ಕಂಡರೆ ಫಾರ್ಮಾ ಸೂಚ್ಯಂಕ ಇಳಿಕೆ ದಾಖಲಿಸಿತು.
ಇಂದು ವಿದೇಶಿ ಸಾಂಸ್ಥಿಕ ಹೂಡಿಕೆದಾರರು 1948 ಕೋಟಿ ರೂ ಮೌಲ್ಯದ ಷೇರುಗಳನ್ನು ಕೊಂಡುಕೊಂಡಿದ್ದಾರೆ. ದೇಶಿ ಸಾಂಸ್ಥಿಕ ಹೂಡಿಕೆದಾರರು 844 ಕೋಟಿ ರೂ ಮೌಲ್ಯದ ಷೇರುಗಳನ್ನು ಮಾರಾಟ ಮಾಡಿದ್ದಾರೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

ಸೆಕ್ಸ್‌ ವರ್ಕರ್‌ಗೆ ಮಾಡಿದ ಮೆಸೇಜ್‌ ಗೊತ್ತಾಗಿ ಪತ್ನಿ ವಿಚ್ಛೇದನ; ಆ್ಯಪಲ್‌ ಕಂಪನಿ ವಿರುದ್ಧ ಕೇಸ್‌ ಜಡಿದ ಪತಿ!

ಲಂಡನ್‌ ಉದ್ಯಮಿಯೊಬ್ಬ ಆ್ಯಪಲ್‌ ಕಂಪನಿ ವಿರುದ್ಧ ಮೊಕದ್ದಮೆ ಹೂಡಿದ್ದಾನೆ. ಉದ್ಯಮಿಯ ಮನೆಯಲ್ಲಿರುವ ಸದಸ್ಯರ ಬಳಕೆಗಾಗಿ ಐಮ್ಯಾಕ್‌ ಇದೆ. ಐಮ್ಯಾಕ್‌ನಲ್ಲಿ ಐಮೆಸೇಜ್‌ ಮೂಲಕ ಹಲವು ಸೆಕ್ಸ್‌ ವರ್ಕರ್‌ಗಳ ಜತೆ ರೊಮ್ಯಾಂಟಿಕ್‌ ಆಗಿ ಚಾಟ್‌ (Sexting) ಮಾಡಿದ್ದಾನೆ. ಈ ಮೆಸೇಜ್‌ಗಳನ್ನು ಡಿಲೀಟ್‌ ಮಾಡಿದರೂ ಪತ್ನಿಗೆ ಕಾಣಿಸಿವೆ. ಇದರಿಂದಾಗಿ ಕಂಪನಿ ವಿರುದ್ಧವೇ ಉದ್ಯಮಿಯು ಮೊಕದ್ದಮೆ ಹೂಡಿದ್ದಾನೆ.

VISTARANEWS.COM


on

Sex Worker
Koo

ಲಂಡನ್:‌ ಸುರಕ್ಷತೆಯ ದೃಷ್ಟಿಯಿಂದ ಆ್ಯಪಲ್‌ ಕಂಪನಿಯ ಉತ್ಪನ್ನಗಳನ್ನು ಜನ ಹೆಚ್ಚಿನ ದುಡ್ಡು ಕೊಟ್ಟು ಖರೀದಿಸುತ್ತಾರೆ. ಐಫೋನ್‌ ಹಾಗೂ ಐಮ್ಯಾಕ್‌ಗಳನ್ನು ಇದೇ ಕಾರಣಕ್ಕಾಗಿ ಖರೀದಿಸುತ್ತಾರೆ. ಆದರೆ, ಲಂಡನ್‌ನಲ್ಲಿ ವ್ಯಕ್ತಿಯೊಬ್ಬ ಸುರಕ್ಷತೆಗೆ ಧಕ್ಕೆ ಬಂದ ಹಿನ್ನೆಲೆಯಲ್ಲಿ ಆ್ಯಪಲ್‌ ಕಂಪನಿ (Apple Company) ವಿರುದ್ಧವೇ ಮೊಕದ್ದಮೆ ಹೂಡಿದ್ದಾನೆ. ವ್ಯಕ್ತಿಯೊಬ್ಬ ಐಮ್ಯಾಕ್‌ನಲ್ಲಿ ಲೈಂಗಿಕ ಕಾರ್ಯಕರ್ತೆ (Sex Worker) ಜತೆ ಚಾಟ್‌ ಮಾಡಿದ್ದು, ಆ ಮೆಸೇಜ್‌ಗಳನ್ನು ಬಳಿಕ ಡಿಲೀಟ್‌ ಮಾಡಿದ್ದಾನೆ. ಆದರೆ, ಪರ್ಮನೆಂಟ್‌ ಆದ ಮೆಸೇಜ್‌ಗಳು ಹೆಂಡತಿಗೆ ಕಾಣಿಸಿದ ಕಾರಣ ವ್ಯಕ್ತಿಯು ಆ್ಯಪಲ್‌ ಕಂಪನಿ ವಿರುದ್ಧ ಕೇಸ್‌ ಹಾಕಿದ್ದಾನೆ ಎಂದು ತಿಳಿದುಬಂದಿದೆ.

ಹೌದು, ಲಂಡನ್‌ ಉದ್ಯಮಿಯೊಬ್ಬ ಆ್ಯಪಲ್‌ ಕಂಪನಿ ವಿರುದ್ಧ ಮೊಕದ್ದಮೆ ಹೂಡಿದ್ದಾನೆ. ಉದ್ಯಮಿಯ ಮನೆಯಲ್ಲಿರುವ ಸದಸ್ಯರ ಬಳಕೆಗಾಗಿ ಐಮ್ಯಾಕ್‌ ಇದೆ. ಐಮ್ಯಾಕ್‌ನಲ್ಲಿ ಐಮೆಸೇಜ್‌ ಮೂಲಕ ಹಲವು ಸೆಕ್ಸ್‌ ವರ್ಕರ್‌ಗಳ ಜತೆ ರೊಮ್ಯಾಂಟಿಕ್‌ ಆಗಿ ಚಾಟ್‌ (Sexting) ಮಾಡಿದ್ದಾನೆ. ಐಮ್ಯಾಕ್‌ನಲ್ಲಿ ಕಳುಹಿಸಿದ ಮೆಸೇಜ್‌ಗಳನ್ನು ಆತ ತನ್ನ ಐಫೋನ್‌ನಲ್ಲಿ ಡಿಲೀಟ್‌ ಮಾಡಿದ್ದಾನೆ. ಪರ್ಮನೆಂಟ್‌ ಆಗಿ ಮೆಸೇಜ್‌ಗಳನ್ನು ಡಿಲೀಟ್‌ ಮಾಡಿದ್ದಾನೆ. ಆದರೂ, ಈ ಮೆಸೇಜ್‌ಗಳನ್ನು ಪತ್ನಿಯು ಪತ್ತೆಹಚ್ಚಿದ್ದಾರೆ. ಇದು ಉದ್ಯಮಿಯ ಪಿತ್ತ ನೆತ್ತಿಗೇರುವಂತೆ ಮಾಡಿದೆ.

Hiring to Apple

ವಿಚ್ಛೇದನಕ್ಕೆ ಅರ್ಜಿ ಹಾಕಿದ ಪತ್ನಿ

ಪತಿಯು ರೆಡ್‌ಲೈಟ್‌ ಏರಿಯಾದ ಲಲನೆಯರ ಜತೆ ‘ಸರಸ’ದ ಮೆಸೇಜ್‌ಗಳನ್ನು ಮಾಡಿರುವುದು ಪತ್ತೆ ಹಚ್ಚಿದ ಪತ್ನಿಯು ಈಗ ವಿಚ್ಛೇದನ ಅರ್ಜಿ ಹಾಕಿದ್ದಾರೆ. ಅಷ್ಟೇ ಅಲ್ಲ, ಸುಮಾರು 52 ಕೋಟಿ ರೂ. (50 ಲಕ್ಷ ಪೌಂಡ್ಸ್)‌ ಜೀವನಾಂಶ ಕೊಡಬೇಕು ಎಂದು ಕೋರ್ಟ್‌ ಮೊರೆಹೋಗಿದ್ದಾರೆ. ಇದು ಈಗ ಹೆಸರು ಹೇಳಲು ಇಚ್ಛಿಸದ ಉದ್ಯಮಿಗೆ ಪೇಚಾಟ ತಂದಿದೆ. ಹೆಂಡತಿ ಇದ್ದರೂ ಬೇರೆ ಹೆಣ್ಣುಮಕ್ಕಳ ಜತೆ ಚಾಟ್‌ ಮಾಡಿದ್ದರಿಂದ ಕುಟುಂಬಸ್ಥರು ಹಾಗೂ ಗೆಳೆಯರ ಎದುರು ಅವಮಾನ ಆಗಿದೆ. ಇದರ ಮಧ್ಯೆಯೇ ಪತ್ನಿಯು ವಿಚ್ಛೇದನಕ್ಕೆ ಅರ್ಜಿ ಹಾಕಿರುವುದು ನುಂಗಲಾರದ ತುತ್ತಾಗಿ ಪರಿಣಮಿಸಿದೆ.

ಆ್ಯಪಲ್‌ ವಿರುದ್ಧ ಕೇಸ್‌ ಏಕೆ?

ಐಮ್ಯಾಕ್‌ನಲ್ಲಿ ಮಾಡಿದ ಮೆಸೇಜ್‌ಗಳನ್ನು ಐಫೋನ್‌ನಲ್ಲಿ ಡಿಲೀಟ್‌ ಮಾಡಿದ್ದರಿಂದ ಉದ್ಯಮಿಯ ಪತ್ನಿಗೆ ಐಮ್ಯಾಕ್‌ನಲ್ಲಿ ಮಾಡಿದ ಮೆಸೇಜ್‌ಗಳು ಸಿಕ್ಕಿವೆ. ಹಾಗಾಗಿ, “ಲಿಂಕ್‌ ಆದ ಡಿವೈಸ್‌ಗಳ ಮೂಲಕ ಕಳುಹಿಸಿದ ಮೆಸೇಜ್‌ಗಳನ್ನು ಎಲ್ಲ ಕಡೆಯೂ ಡಿಲೀಟ್‌ ಮಾಡಬೇಕು ಎಂಬುದರ ಕುರಿತು ಆ್ಯಪಲ್‌ ಕಂಪನಿಯು ಗ್ರಾಹಕರಿಗೆ ಮಾಹಿತಿ ನೀಡಿಲ್ಲ. ಇದರಿಂದ ನಾನೀಗ ನನ್ನ ಪತ್ನಿ, ಅಪಾರ ಪ್ರಮಾಣದ ಹಣ ಕಳೆದುಕೊಳ್ಳುವಂತಾಗಿದೆ” ಎಂದು ಉದ್ಯಮಿಯು ಕೋರ್ಟ್‌ ಮೊರೆ ಹೋಗಿದ್ದಾನೆ.

ಇದನ್ನೂ ಓದಿ: Murder Case : ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಗಂಡನಿಗೆ ಚಟ್ಟ ಕಟ್ಟಿದಳು ಹೆಂಡತಿ

Continue Reading

ಪ್ರಮುಖ ಸುದ್ದಿ

DK Shivakumar: ಇವಿಎಂ ಸತ್ಯಾಸತ್ಯತೆ ಪ್ರಪಂಚಕ್ಕೇ ಅರ್ಥವಾಗಿದೆ; ಮಸ್ಕ್ ಅನುಮಾನ ಸಮರ್ಥಿಸಿಕೊಂಡ ಡಿಕೆಶಿ

DK Shivakumar: ಇವಿಎಂಗಳ ಮೇಲೆ ಎಲಾನ್ ಮಸ್ಕ್ ಅನುಮಾನ ವ್ಯಕ್ತಪಡಿಸಿದ ಹಿನ್ನೆಲೆ ಸಾಮಾಜಿಕ ಜಾಲತಾಣದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಚುನಾವಣೆಯ ನಂತರ ದೇಶದ ಕೆಲವೆಡೆ ನಡೆಯುತ್ತಿರುವ ಘಟನೆಗಳಿಗೂ ಮಸ್ಕ್‌ ಅವರ ಹೇಳಿಕೆಗೂ ತಾಳೆಯಾಗುತ್ತಿದೆ. ಇವಿಎಂಗಳ ಸತ್ಯಾಸತ್ಯತೆ ಬಗ್ಗೆ ಈಗ ಪ್ರಪಂಚಕ್ಕೇ ಅರ್ಥವಾಗಿದೆ ಎಂದು ಡಿಕೆಶಿ ಹೇಳಿದ್ದಾರೆ.

VISTARANEWS.COM


on

DK Shivakumar
Koo

ಬೆಂಗಳೂರು: ಕೃತಕ ಬುದ್ಧಿಮತ್ತೆ (AI) ಬಳಸಿ ಇವಿಎಂಗಳನ್ನು (EVMs) ಹ್ಯಾಕ್‌ ಮಾಡಬಹುದು ಎಂದು ಟೆಸ್ಲಾ ಸಿಇಒ ಎಲಾನ್‌ ಮಸ್ಕ್‌ ಹೇಳಿಕೆ ನೀಡಿದ ಬಳಿಕ ಕಾಂಗ್ರೆಸ್‌ ನಾಯಕ ರಾಹುಲ್‌ ಕೂಡ ಇವಿಎಂಗಳ (Electronic Voting Machine) ಮೇಲೆ ಅನುಮಾನ ವ್ಯಕ್ತಪಡಿಸಿದ್ದರು. ಇದೀಗ ಎಲಾನ್‌ ಮಸ್ಕ್‌ ಅವರು ಹೇಳಿರೋದನ್ನು ಡಿಸಿಎಂ ಡಿ.ಕೆ. ಶಿವಕುಮಾರ್‌ (DK Shivakumar) ಅವರು ಕೂಡ ಸಮರ್ಥಿಸಿಕೊಂಡಿರುವುದು ಕಂಡುಬಂದಿದೆ.

ಇವಿಎಂಗಳ ಮೇಲೆ ಎಲಾನ್ ಮಸ್ಕ್ ಅನುಮಾನ ವ್ಯಕ್ತಪಡಿಸಿದ ಹಿನ್ನೆಲೆ ಸಾಮಾಜಿಕ ಜಾಲತಾಣದಲ್ಲಿ ಅಭಿಪ್ರಾಯ ವ್ಯಕ್ತಪಡಿಸಿರುವ ಅವರು, ʼಮಸುಕಾʼಗಿದ್ದ ಅನುಮಾನ ಈಗ ತೀಕ್ಷ್ಣವಾಗಿದೆ! ತಂತ್ರಜ್ಞಾನ ನಿಪುಣ ಎಂದು ಇಡೀ ಪ್ರಪಂಚವೇ ಒಪ್ಪಿಕೊಂಡಿರುವ ಎಲಾನ್‌ ಮಸ್ಕ್‌ ಅವರೇ ಇವಿಎಂಗಳ ಮೇಲೆ ವ್ಯಕ್ತಪಡಿಸಿರುವ ಅನುಮಾನವು ಭಾರತದಲ್ಲಿ ನಡೆದ ಮತದಾನ ಪ್ರಕ್ರಿಯೆಗಳ ಬಗ್ಗೆ ಆತಂಕ ಮೂಡಿಸಿದೆ.

ಚುನಾವಣೆಯ ನಂತರ ದೇಶದ ಕೆಲವೆಡೆ ನಡೆಯುತ್ತಿರುವ ಘಟನೆಗಳಿಗೂ ಮಸ್ಕ್‌ ಅವರ ಹೇಳಿಕೆಗೂ ತಾಳೆಯಾಗುತ್ತಿದೆ. ಚುನಾವಣೆ ವ್ಯವಸ್ಥೆಯೇ ಪಾರದರ್ಶಕವಾಗಿರದಿದ್ದರೆ ಜನಾದೇಶ ಯಾರ ಕಡೆ ಇದೆ ಎಂದು ತಿಳಿಯುವುದಾದರೂ ಹೇಗೆ? ಇವಿಎಂಗಳ ಸತ್ಯಾಸತ್ಯತೆ ಬಗ್ಗೆ ಈಗ ಪ್ರಪಂಚಕ್ಕೇ ಅರ್ಥವಾಗಿದೆ. ಭಾರತಕ್ಕೂ ಆ ಕಾಲ ಸನ್ನಿಹಿತವಾಗಿದೆ ಎಂದು ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.

ಇದನ್ನೂ ಓದಿ | Petrol Diesel Price Hike: ಬಡವರ ಮೇಲೆ ತೆರಿಗೆ ಹಾಕಿ ಬೇರೆ ರಾಜ್ಯಗಳಿಗೆ ಹೋಲಿಸುವುದು ದ್ರೋಹ: ಬೊಮ್ಮಾಯಿ ಆಕ್ರೋಶ

ಎಲಾನ್‌ ಮಸ್ಕ್‌ ಏನು ಹೇಳಿದ್ದರು?

ಅಮೆರಿಕದ ಚುನಾವಣೆಯಲ್ಲಿ ಬಳಸುವ ಇವಿಎಂಗಳ ಬಗ್ಗೆ ಎಲಾನ್‌ ಮಸ್ಕ್‌ ಅವರು ಅನುಮಾನ ವ್ಯಕ್ತಪಡಿಸಿದ್ದರು. “ಅಮೆರಿಕದಲ್ಲಿ ನಾವು ಎಲೆಕ್ಟ್ರಾನಿಕ್‌ ವೋಟಿಂಗ್‌ ಮಷೀನ್‌ಗಳ ಬಳಕೆಯನ್ನು ನಿಲ್ಲಿಸಬೇಕು. ಹ್ಯಾಕರ್‌ಗಳು ಅಥವಾ ಆರ್ಟಿಫಿಶಿಯಲ್‌ ಇಂಟೆಲಿಜೆನ್ಸ್‌ ತಂತ್ರಜ್ಞಾನವನ್ನು ಬಳಕೆ ಮಾಡುವ ಮೂಲಕ ಇವಿಎಂಗಳನ್ನು ಹ್ಯಾಕ್‌ ಮಾಡುವ ಸಾಧ್ಯತೆ ಇದೆ. ಇದು ಸಣ್ಣ ಸಂಗತಿಯಾದರೂ, ದೊಡ್ಡ ಸಮಸ್ಯೆಯಾಗಿದೆ” ಎಂದು ಎಲಾನ್‌ ಮಸ್ಕ್‌ ಎಕ್ಸ್‌ ಜಾಲತಾಣದಲ್ಲಿ ಪೋಸ್ಟ್‌ ಮಾಡಿದ್ದರು. ಇದು ಅಮೆರಿಕದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ.

ಇದನ್ನೂ ಓದಿ | Rahul Gandhi: ಕಾಂಗ್ರೆಸ್‌ ಹೆಚ್ಚು ಕ್ಷೇತ್ರ ಗೆದ್ದರೂ ಇವಿಎಂ ಬಗ್ಗೆ ಅನುಮಾನ ವ್ಯಕ್ತಪಡಿಸಿದ ರಾಹುಲ್‌ ಗಾಂಧಿ !

“ಆರ್ಟಿಫಿಶಿಯಲ್‌ ಇಂಟೆಲಿಜೆನ್ಸ್‌ ಬಳಸಿ ಇವಿಎಂಗಳನ್ನು ಹ್ಯಾಕ್‌ ಮಾಡಬಹುದು” ಎಂದು ಟೆಸ್ಲಾ ಸಿಇಒ ಎಲಾನ್‌ ಮಸ್ಕ್‌ ಹೇಳಿದ ಬೆನ್ನಲ್ಲೇ ರಾಹುಲ್‌ ಗಾಂಧಿ ಅವರು ಕೂಡ ಇವಿಎಂ ಬಗ್ಗೆ ಅನುಮಾನ ವ್ಯಕ್ತಪಡಿಸಿದ್ದರು. “ಭಾರತದಲ್ಲಿ ಇವಿಎಂಗಳು ಎಂದರೆ ಬ್ಲ್ಯಾಕ್‌ ಬಾಕ್ಸ್‌ (ಯಾರಿಗೂ ಗೊತ್ತಾಗದ, ಒಬ್ಬರಿಗೆ ಮಾತ್ರ ಆಕ್ಸೆಸ್‌ ಇರುವ ಎಲೆಕ್ಟ್ರಾನಿಕ್‌ ಡಿವೈಸ್)‌ ಇದ್ದಂತೆ. ಅವುಗಳನ್ನು ಯಾರೂ ಪರಿಶೀಲನೆ ಮಾಡಲು, ತಪಾಸಣೆ ಮಾಡಲು ಸಾಧ್ಯವಿಲ್ಲ. ಭಾರತದ ಚುನಾವಣೆ ಪಾರದರ್ಶಕತೆ ಕುರಿತು ಗಂಭೀರವಾದ ಆತಂಕಗಳು ವ್ಯಕ್ತವಾಗುತ್ತಿವೆ. ಸಂಸ್ಥೆಗಳು ವಿಶ್ವಾಸ ಕಳೆದುಕೊಂಡರೆ ಪ್ರಜಾಪ್ರಭುತ್ವ ವ್ಯವಸ್ಥೆಯೇ ಒಂದು ನಾಟಕೀಯ ಸ್ವರೂಪ ಪಡೆಯುತ್ತದೆ” ಎಂದು ಹೇಳಿದ್ದರು. ಇದೀಗ ಡಿಸಿಎಂ ಡಿಕೆಶಿ ಅವರು ಕೂಡ ವಿದ್ಯುನ್ಮಾನ ಮತಯಂತ್ರಗಳ ಕಾರ್ಯದಕ್ಷತೆ ಬಗ್ಗೆ ಅನುಮಾನ ಹೊರಹಾಕಿದ್ದಾರೆ.

Continue Reading

Latest

Viral Video: 7 ಅಜ್ಜಂದಿರ ಜೊತೆ ಸಂಸಾರ ನಡೆಸುತ್ತಿರುವ ಯುವತಿ; ಆಕೆಯ ಪ್ಲ್ಯಾನ್ ಇಂಟರೆಸ್ಟಿಂಗ್!

Viral Video: ಕಟ್ಟಿಕೊಂಡ ಗಂಡನ ಜೊತೆ ಈಗ ಬಾಳ್ವೆ ನಡೆಸುವುದೇ ಕಷ್ಟವಾಗಿರುವ ಈ ದಿನಗಳಲ್ಲಿ ಇಲ್ಲೊಬ್ಬಳು ಯುವತಿ ಏಳು ಮಂದಿ ಪುರುಷರ ಜೊತೆ ಸುಖವಾಗಿ ಇದ್ದೇನೆ ಎಂದು ಹೇಳುವ ಮೂಲಕ ಎಲ್ಲರ ಗಮನವನ್ನು ತನ್ನತ್ತ ಸೆಳೆದುಕೊಂಡಿದ್ದಾಳೆ. ಪ್ರೀತಿಸಿದ ಯುವಕ ದೂರಾದ ಬಳಿಕ ಈಕೆ ಸಂಬಂಧ ಬೆಳೆಸಿದ್ದು ವಯಸ್ಸಾದ ಪುರುಷರ ಜೊತೆಯಂತೆ. ಇನ್ನು ಈ ಸಂಬಂಧ ಹೊಂದಲು ಕಾರಣವೇನು ಎಂಬುದನ್ನು ಕೇಳಿದ್ರೆ ನೀವು ಶಾಕ್‌ ಆಗ್ತೀರಿ!

VISTARANEWS.COM


on

Viral Video
Koo

ಕೊಲಂಬಿಯಾ : ತಾಳಿ ಕಟ್ಟಿಸಿಕೊಂಡ ಒಬ್ಬನ ಜೊತೆ ಸರಿಯಾಗಿ ಬಾಳ್ವೆ ನಡೆಸದೇ ಮದುವೆಯಾಗಿ ಮಾರನೇ ದಿನಕ್ಕೆ ವಿಚ್ಛೇದನ ನೀಡುವ ಹೆಣ್ಣಿನ ಬಗ್ಗೆ, ಮನೆಯಲ್ಲಿ ಹೆಂಡತಿಯಿದ್ದರೂ, ಹೊರಗಡೆ ಸಂಬಂಧ ಇಟ್ಟುಕೊಂಡ ಗಂಡಸಿನ ಬಗ್ಗೆ ಕೇಳಿರುತ್ತೇವೆ, ನೋಡಿರುತ್ತೇವೆ. ಇನ್ನು ನಮ್ಮ ಪುರಾಣದ ಪುಟ ತಿರುವಿ ಹಾಕಿದರೆ ಮಹಾಭಾರತದಲ್ಲಿ ದ್ರೌಪದಿಗೆ ಐದು ಮಂದಿ ಪತಿಯರಿರುವುದನ್ನೂ ಕೇಳಿರುತ್ತೇವೆ. ಆದರೆ ಕಲಿಯುಗದ ಈ ಮಹಿಳೆಯೊಬ್ಬಳು 7 ಮಂದಿ ಪುರುಷರ ಜೊತೆ ಸುಖವಾಗಿ ಕಾಲ ಕಳೆಯುತ್ತಿರುವ ಸುದ್ದಿಯೊಂದು ಸೋಶಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ವೈರಲ್‌ (Viral Video) ಆಗಿದ್ದು, ಎಲ್ಲರೂ ಹುಬ್ಬೇರಿಸುವಂತೆ ಮಾಡಿದೆ.

ವರದಿಯ ಪ್ರಕಾರ ಲೀನಾ ಎಂಬ ಮಹಿಳೆ ಕೊಲಂಬಿಯಾದ ಬ್ಯಾರನ್ ಕ್ವಿಲ್ಲಾ ನಗರದಲ್ಲಿ ವಾಸವಾಗಿದ್ದಳು. ಆಕೆಗೆ 7 ಮಂದಿ ಗೆಳೆಯರಿದ್ದು, ಎಲ್ಲರೂ ವಯಸ್ಸಾದ ಮುದುಕರಾಗಿದ್ದಾರೆ. ಅಲ್ಲದೇ ಅವರ ಖರ್ಚುವೆಚ್ಚವನ್ನು ಆಕೆಯೇ ನೋಡಿಕೊಳ್ಳುತ್ತಾಳೆ ಎನ್ನಲಾಗಿದೆ. ಇನ್ನು ಅವರ ಜೊತೆಗೆ ಸಂಬಂಧ ಹೊಂದಲು ಕಾರಣವೇನು ಎಂಬುದನ್ನು ಆಕೆ ಬಿಚ್ಚಿಟ್ಟಿದ್ದಾಳೆ.

ಮಹಿಳೆಯ ಸಂದರ್ಶನದ ವಿಡಿಯೊವನ್ನು ಯೂಟ್ಯೂಬ್ ಚಾನೆಲ್‌ವೊಂದು ಪೋಸ್ಟ್ ಮಾಡಿದ್ದು, ಈ ವಿಡಿಯೊದಲ್ಲಿ ಮಹಿಳೆ ತಿಳಿಸಿದಂತೆ ಆಕೆಗೆ ತನ್ನ ಪ್ರಿಯತಮನ ಜೊತೆಗಿನ ಸಂಬಂಧದಲ್ಲಿ ಸಮಸ್ಯೆಯಾದ ಕಾರಣ ಆಕೆ ತನ್ನ ಜೀವನವನ್ನು ಸಾಗಿಸಲು ಪಿಂಚಣಿ ಹೊಂದಿರುವ ವಯಸ್ಸಾದ ವ್ಯಕ್ತಿಗಳೊಂದಿಗೆ ಸಂಬಂಧ ಹೊಂದಲು ಶುರುಮಾಡಿದಳಂತೆ. ಆಕೆ ಮೊದಲು ಯುವಕನ ಜೊತೆ ಪ್ರೀತಿಯಲ್ಲಿ ಬಿದ್ದಿದ್ದಳಂತೆ. ಆದರೆ ಅವರ ನಡುವೆ ಸಮಸ್ಯೆ ಉಂಟಾದ ಕಾರಣ ಇಬ್ಬರೂ ದೂರವಾದರು. ಹೀಗಿರುವಾಗ ಒಂದು ದಿನ ಆಕೆಯ ಪಕ್ಕದ ಮನೆಯ ವಯಸ್ಸಾದ ವ್ಯಕ್ತಿಯೊಬ್ಬ ಅವಳ ಜೊತೆ ಚೆಲ್ಲಾಟವಾಡಲು ಶುರುಮಾಡಿದನಂತೆ. ಆಕೆಗೆ ಆರ್ಥಿಕ ಸಮಸ್ಯೆ ಇರುವ ಕಾರಣ ಅವನ ಚೆಲ್ಲಾಟವನ್ನು ಸಹಿಸಿಕೊಂಡಳು. ಮುಂದೆ ಇದನ್ನೇ ದಾರಿಯಾಗಿಸಿಕೊಂಡ ಆಕೆ ಪಿಂಚಣಿ ಹಣ ಹೊಂದಿರುವ ವಯಸ್ಸಾದ ವ್ಯಕ್ತಿಯ ಜೊತೆ ಸಂಬಂಧವಿರಿಸಿಕೊಳ್ಳುವುದಕ್ಕೆ ಶುರುಮಾಡಿದ್ದಾಳೆ. ಅದಕ್ಕಾಗಿ ಅವಳು ಉದ್ಯಾನವನ ಮತ್ತು ವಯಸ್ಸಾದ ವ್ಯಕ್ತಿಗಳು ಸಮಯ ಕಳೆಯುವಂತಹ ಸ್ಥಳಗಳಿಗೆ ಭೇಟಿ ನೀಡಲು ಪ್ರಾರಂಭಿಸಿದಳು. ಹಾಗಾಗಿ ಇದೀಗ ಅವಳು 7 ಮಂದಿ ವಯಸ್ಸಾದ ಪುರುಷರ ಜೊತೆ ಸಂಬಂಧದಲ್ಲಿರುವ ಮೂಲಕ ಬಹುಪತಿತ್ವವನ್ನು ಅನುಸರಿಸುತ್ತಿದ್ದಾಳೆ.

ಇದನ್ನೂ ಓದಿ: Viral Video: ಬಕ್ರೀದ್ ಬಲಿ ಕೊಡುವ ಮೇಕೆಯ ಮೈಮೇಲೆ ʼರಾಮʼ ನಾಮ; ಹಿಂದೂಗಳನ್ನು ಕೆಣಕಿದ ವ್ಯಕ್ತಿ ಅರೆಸ್ಟ್

ಅಲ್ಲದೇ ಆಕೆಯ ಪ್ರಕಾರ ವಯಸ್ಸಾದ ವ್ಯಕ್ತಿಗಳ ಬಳಿ ಏನನ್ನೂ ಕೇಳಬೇಕಾಗಿಲ್ಲ, ಎಲ್ಲವನ್ನೂ ಅವರೇ ನೀಡುತ್ತಾರೆ. ಏಕೆಂದರೆ ಅವರ ವಯಸ್ಸಿನವರಿಗೆ ತನ್ನಂತಹ ಹುಡುಗಿಯು ಸಿಗುವುದಿಲ್ಲ. ಹಾಗಾಗಿ ತಾನು ಪಿಂಚಣಿ ಹೊಂದಿರುವ ಅಂತಹ ವ್ಯಕ್ತಿಯನ್ನು ಹುಡುಕಿದೆ. ಯಾಕೆಂದರೆ ಅವರು ತನ್ನನ್ನು ಸುಖವಾಗಿ ನೋಡಿಕೊಳ್ಳುತ್ತಾರೆ. ಅಂದ ಹಾಗೇ ಈಕೆಯ ಗೆಳೆಯರು ಕಾರ್ಲೋಸ್, ಸೈಮನ್, ಜೀಸಸ್, ಪಾಬ್ಲೋ, ಮ್ಯಾನುಯೆಲ್ ಹಾಗೂ ಇಬ್ಬರ ಹೆಸರನ್ನು ಬಹಿರಂಗಪಡಿಸಿಲ್ಲ. ಇವರೆಲ್ಲರೂ ಸಹ ಪಿಂಚಣಿದಾರರಾಗಿದ್ದು, ಒಬ್ಬರನೊಬ್ಬರು ಚೆನ್ನಾಗಿ ಅರಿತುಕೊಂಡಿದ್ದಾರಂತೆ. ಹಾಗೇ ಅವರು ಆಕೆಗೆ ಅಡುಗೆ ಮಾಡಲು, ಬಟ್ಟೆ ಒಗೆಯಲು, ಮನೆ ಶುಚಿ ಮಾಡುವಂತಹ ಕೆಲಸಗಳಲ್ಲಿ ಸಹಾಯ ಮಾಡುತ್ತಾರಂತೆ.

Continue Reading

ದೇಶ

Air India Food:‌ ಪ್ರಯಾಣಿಕರೇ ಎಚ್ಚರ; ವಿಮಾನದ ಊಟದಲ್ಲಿ ಸಿಕ್ತು ಮೆಟಲ್‌ ಬ್ಲೇಡ್!

Air India Food: ಮ್ಯಾಥ್ಯೂರಸ್‌ ಪೌಲ್‌ ಎಂಬ ಪತ್ರಕರ್ತ ಬೆಂಗಳೂರಿನಿಂದ ಸ್ಯಾನ್‌ ಪ್ರಾನ್ಸಿಸ್ಕೋಗೆ ಏರ್‌ ಇಂಡಿಯಾ ವಿಮಾನದಲ್ಲಿ ತೆರಳುವಾಗ ಅವರಿಗೆ ಭೀಕರ ಅನುಭವವಾಗಿದೆ. ವಿಮಾನದಲ್ಲಿ ಅವರು ಆರ್ಡರ್‌ ಮಾಡಿದ ಆಹಾರದಲ್ಲಿ ಮೆಟಲ್‌ ಬ್ಲೇಡ್‌ ಪತ್ತೆಯಾಗಿದೆ. ಈ ಕುರಿತು ಅವರು ಪೋಸ್ಟ್‌ ಮಾಡುತ್ತಲೇ ವಿಮಾನಯಾನ ಸಂಸ್ಥೆಯು ಕ್ಷಮೆಯಾಚಿಸಿದೆ.

VISTARANEWS.COM


on

Air India Food
Koo

ಬೆಂಗಳೂರು: ಏರ್‌ ಇಂಡಿಯಾ ಸೇರಿ ಹಲವು ಸಂಸ್ಥೆಗಳ ವಿಮಾನಗಳಲ್ಲಿ ಪ್ರಯಾಣಿಕರು ಕುಡಿದು ಗಲಾಟೆ ಮಾಡುವುದು, ಸಹ ಪ್ರಯಾಣಿಕರಿಗೆ ತೊಂದರೆ ಕೊಡುವುದು, ವಿಮಾನದ ಸಿಬ್ಬಂದಿ ಮೇಲೆ ಹಲ್ಲೆ ನಡೆಸುವುದು ಸೇರಿ ಹಲವು ಕೃತ್ಯಗಳು ಇತ್ತೀಚೆಗೆ ವರದಿಯಾಗುತ್ತಲೇ ಇವೆ. ಇದರ ಬೆನ್ನಲ್ಲೇ, ಏರ್‌ ಇಂಡಿಯಾ ವಿಮಾನದಲ್ಲಿ ಆರ್ಡರ್‌ ಮಾಡಿದ ಊಟದಲ್ಲಿ (Air India Food) ಮೆಟಲ್‌ ಬ್ಲೇಡ್‌ (Metal Blade) ಒಂದು ಸಿಕ್ಕಿದ್ದು, ಊಟ ಆರ್ಡರ್‌ ಮಾಡಿದ ವ್ಯಕ್ತಿಯು ಕಂಗಾಲಾಗಿದ್ದಾರೆ. ಹಾಗೆಯೇ, ತಮಗೆ ಆದ ಭೀಕರ ಅನುಭವವನ್ನು, ಮೆಟಲ್‌ ಬ್ಲೇಡ್‌ ಫೋಟೊವನ್ನು ಎಕ್ಸ್‌ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.

ಮ್ಯಾಥ್ಯೂರಸ್‌ ಪೌಲ್‌ ಎಂಬ ಪತ್ರಕರ್ತ ಬೆಂಗಳೂರಿನಿಂದ ಸ್ಯಾನ್‌ ಪ್ರಾನ್ಸಿಸ್ಕೋಗೆ ಏರ್‌ ಇಂಡಿಯಾ ವಿಮಾನದಲ್ಲಿ ತೆರಳುವಾಗ ಅವರಿಗೆ ಇಂತಹ ಭೀಕರ ಅನುಭವವಾಗಿದೆ. “ಏರ್‌ ಇಂಡಿಯಾ ವಿಮಾನದಲ್ಲಿ ನಾನು ಆರ್ಡರ್‌ ಮಾಡಿದ ಸ್ವೀಟ್‌ ಪೊಟ್ಯಾಟೋ ಹಾಗೂ ಫಿಗ್‌ ಚಾಟ್‌ನಲ್ಲಿ ಬ್ಲೇಡ್‌ ರೀತಿ ಇರುವ ಮೆಟಲ್‌ ತುಣುಕು ಪತ್ತೆಯಾಗಿದೆ. ಅದೃಷ್ಟವಶಾತ್‌ ಇದರಿಂದ ನನಗೆ ಯಾವುದೇ ತೊಂದರೆ ಆಗಿಲ್ಲ. ಆದರೆ, ಏರ್‌ ಇಂಡಿಯಾ ಕೆಟರಿಂಗ್‌ ಸರ್ವಿಸ್‌ ಬಗ್ಗೆ ನನಗೆ ಇದ್ದ ಗೌರವ ಕಡಿಮೆಯಾಗಿದೆ” ಎಂದು ಪೋಸ್ಟ್‌ ಮಾಡಿದ್ದಾರೆ.

ಮ್ಯಾಥ್ಯೂರಸ್‌ ಪೌಲ್‌ ಕೂಡಲೇ ಏರ್‌ ಇಂಡಿಯಾ ವಿಮಾನಯಾನ ಸಂಸ್ಥೆಯು ಪ್ರತಿಕ್ರಿಯಿಸಿದೆ. “ನಿಮಗೆ ಇಂತಹ ಕೆಟ್ಟ ಅನುಭವ ಆಗಿದ್ದಕ್ಕೆ ಕ್ಷಮೆ ಇರಲಿ. ನಾವು ಪ್ರಯಾಣಿಕರಿಗೆ ಸೇವೆ ನೀಡಬೇಕು ಎಂಬ ನಿರ್ದಿಷ್ಟ ಗುರಿ ಹೊಂದಿದ್ದು, ಆ ಗುರಿಗೆ ಇದು ಧಕ್ಕೆ ತರುವಂತಿದೆ. ಸೇವೆಯಲ್ಲಿ ಸಮಸ್ಯೆಯಾಗಿರುವುದಕ್ಕೆ ಕ್ಷಮೆ ಇರಲಿ. ನಾವು ಈ ಸಮಸ್ಯೆಯನ್ನು ಬಗೆಹರಿಸಿಕೊಳ್ಳುತ್ತೇವೆ” ಎಂಬುದಾಗಿ ಏರ್‌ ಇಂಡಿಯಾ ಪ್ರತಿಕ್ರಿಯಿಸಿದೆ. ಅಷ್ಟೇ ಅಲ್ಲ, ಏರ್‌ ಇಂಡಿಯಾ ಸಂಸ್ಥೆಯು ಮ್ಯಾಥ್ಯೂರಸ್‌ ಪೌಲ್‌ ಅವರಿಗೆ ಒಂದು ವರ್ಷದಲ್ಲಿ ಒಮ್ಮೆ ಉಚಿತವಾಗಿ ಟಿಕೆಟ್‌ ನೀಡಲಾಗುವುದು ಎಂದು ಆಫರ್‌ ನೀಡಿದೆ. ಆದರೆ, ಇದನ್ನು ಪತ್ರಕರ್ತ ನಿರಾಕರಿಸಿದ್ದಾರೆ.

ವೆಜ್‌ ಊಟದಲ್ಲಿ ಮೂಳೆಗಳು ಪತ್ತೆ

ಕೆಲ ತಿಂಗಳ ಹಿಂದೆಯೂ ಏರ್‌ ಇಂಡಿಯಾ ವಿಮಾನದಲ್ಲಿ ಆರ್ಡರ್‌ ಮಾಡಿದ ಸಸ್ಯಾಹಾರದ ಬದಲಿಗೆ ಚಿಕನ್‌ ಪೀಸ್‌ಗಳು ಇರುವ ಊಟ ನೀಡಲಾಗಿದೆ ಎಂದು ಮಹಿಳೆಯೊಬ್ಬರು ಆಕ್ರೋಶ ವ್ಯಕ್ತಪಡಿಸಿದ್ದರು. ಹಾಗೆಯೇ, ಫೋಟೊಗಳ ಸಮೇತ ಅವರು ಎಕ್ಸ್‌ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್‌ ಮಾಡಿದ್ದರು.

“ಏರ್‌ ಇಂಡಿಯಾ 582 ವಿಮಾನದಲ್ಲಿ ನಾನು ಪ್ರಯಾಣಿಸುತ್ತಿದ್ದೆ. ಇದೇ ವೇಳೆ ನನಗೆ ನೀಡಿದ ವೆಜ್‌ ಮೀಲ್‌ನಲ್ಲಿ ಚಿಕನ್‌ ಪೀಸ್‌ಗಳು ದೊರೆತಿವೆ. ನಾನು ಕಲ್ಲಿಕೋಟೆಯಿಂದ ವಿಮಾನ ಹತ್ತಿದೆ. ಈ ವಿಮಾನವು 6.40 ಹೊರಡುವ ಬದಲು 7.40ಕ್ಕೆ ಹಾರಾಟ ಆರಂಭಿಸಿದೆ. ವಿಮಾನ ಹಾರಾಟ ವಿಳಂಬ ಮಾಡುವ ಜತೆಗೆ ಮಾಂಸಾಹಾರ ನೀಡಲಾಗಿದೆ. ಇದರ ಕುರಿತು ವಿಮಾನದ ಸಿಬ್ಬಂದಿಗೆ ಮಾಹಿತಿ ನೀಡಿದರೆ, ಅವರು ಒಂದು ಸಾರಿ ಕೇಳಿ ಸುಮ್ಮನಾದರು. ಹಾಗಾಗಿ, ಸಿಬ್ಬಂದಿ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು ಎಂಬುದಾಗಿ ಆಗ್ರಹಿಸುತ್ತಿದ್ದೇನೆ” ಎಂದು ವೀರಾ ಜೈನ್‌ ಎಂಬ ಮಹಿಳೆಯು ಪೋಸ್ಟ್‌ ಮಾಡಿದ್ದರು.

ಇದನ್ನೂ ಓದಿ: Mayank Agarwal: ವಿಮಾನದಲ್ಲಿ ನೀರೆಂದು ಆ್ಯಸಿಡ್ ಕುಡಿದ ಕ್ರಿಕೆಟಿಗ ಮಯಾಂಕ್ ಅಗರ್ವಾಲ್? ಐಸಿಯುನಲ್ಲಿ ಚಿಕಿತ್ಸೆ

Continue Reading
Advertisement
Sex Worker
ಪ್ರಮುಖ ಸುದ್ದಿ19 mins ago

ಸೆಕ್ಸ್‌ ವರ್ಕರ್‌ಗೆ ಮಾಡಿದ ಮೆಸೇಜ್‌ ಗೊತ್ತಾಗಿ ಪತ್ನಿ ವಿಚ್ಛೇದನ; ಆ್ಯಪಲ್‌ ಕಂಪನಿ ವಿರುದ್ಧ ಕೇಸ್‌ ಜಡಿದ ಪತಿ!

NEETPG 2024
ಶಿಕ್ಷಣ40 mins ago

NEETPG 2024 : ಜೂ.23ಕ್ಕೆ ನೀಟ್‌ ಪಿಜಿ ಪರೀಕ್ಷೆ; ನಾಳೆಯಿಂದಲೇ ಪ್ರವೇಶ ಪತ್ರ ಬಿಡುಗಡೆ

DK Shivakumar
ಪ್ರಮುಖ ಸುದ್ದಿ58 mins ago

DK Shivakumar: ಇವಿಎಂ ಸತ್ಯಾಸತ್ಯತೆ ಪ್ರಪಂಚಕ್ಕೇ ಅರ್ಥವಾಗಿದೆ; ಮಸ್ಕ್ ಅನುಮಾನ ಸಮರ್ಥಿಸಿಕೊಂಡ ಡಿಕೆಶಿ

Viral Video
Latest1 hour ago

Viral Video: 7 ಅಜ್ಜಂದಿರ ಜೊತೆ ಸಂಸಾರ ನಡೆಸುತ್ತಿರುವ ಯುವತಿ; ಆಕೆಯ ಪ್ಲ್ಯಾನ್ ಇಂಟರೆಸ್ಟಿಂಗ್!

Malaika Vasupal experimented with a halter neck blouse for a traditional saree
ಫ್ಯಾಷನ್1 hour ago

Malaika Vasupal: ಟ್ರೆಡಿಷನಲ್‌ ಸೀರೆಗೆ ಹಾಲ್ಟರ್‌ ನೆಕ್‌ ಬ್ಲೌಸ್‌ ಪ್ರಯೋಗಿಸಿದ ನಟಿ ಮಲೈಕಾ ವಸುಪಾಲ್‌

Air India Food
ದೇಶ1 hour ago

Air India Food:‌ ಪ್ರಯಾಣಿಕರೇ ಎಚ್ಚರ; ವಿಮಾನದ ಊಟದಲ್ಲಿ ಸಿಕ್ತು ಮೆಟಲ್‌ ಬ್ಲೇಡ್!

Viral news
ವೈರಲ್ ನ್ಯೂಸ್2 hours ago

Viral News: ಕಾಯಿಲೆ ಗುರುತು ಹಿಡಿಯಲು ಖ್ಯಾತ ವೈದ್ಯರ ತಿಣುಕಾಟ; ಹತ್ತೇ ಸೆಕೆಂಡ್ ನಲ್ಲಿ ಪತ್ತೆಹಚ್ಚಿದ ಕೆಲಸದ ಮಹಿಳೆ!

T20 World Cup Super 8
ಕ್ರೀಡೆ2 hours ago

T20 World Cup Super 8 Stage: ಸೂಪರ್​-8 ಪಂದ್ಯಕ್ಕೂ ಮಳೆ ಭೀತಿ; ಭಾರತ-ಆಸೀಸ್​ ಪಂದ್ಯ ಅನುಮಾನ!

Rakshit Shetty Ekam web series release date announce
ಸ್ಯಾಂಡಲ್ ವುಡ್2 hours ago

Rakshit Shetty: ʻಏಕಂʼ ವೆಬ್ ಸಿರೀಸ್​ ರಿಲೀಸ್‌ ಡೇಟ್‌ ಅನೌನ್ಸ್‌ ಮಾಡಿದ ಸಿಂಪಲ್‌ ಸ್ಟಾರ್‌ ರಕ್ಷಿತ್ ಶೆಟ್ಟಿ!

Dawood Ibrahim
ವಿದೇಶ2 hours ago

Dawood Ibrahim: ವೃದ್ಧ ಡಾನ್‌ ದಾವೂದ್‌ ಇಬ್ರಾಹಿಂ ಈಗ ಅಮೆರಿಕದ ಕೇಂದ್ರ ಗುಪ್ತಚರ ಸಂಸ್ಥೆಯ ಕೈಗೊಂಬೆ?

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Actor Darshan
ಮೈಸೂರು5 hours ago

Actor Darshan : ಕೊಲೆ ಕೇಸ್‌ ಬೆನ್ನಲ್ಲೇ ನಟ ದರ್ಶನ್‌ ಸೇರಿ ಪತ್ನಿ ವಿಜಯಲಕ್ಷ್ಮಿಗೆ ಬಾರ್ ಹೆಡೆಡ್ ಗೂಸ್ ಸಂಕಷ್ಟ!

Bakrid 2024
ಬೆಂಗಳೂರು6 hours ago

Bakrid 2024 : ಮತ್ತೊಂದು ಧರ್ಮವನ್ನೂ ಪ್ರೀತಿಸಿ; ಬಕ್ರೀದ್‌ ಪ್ರಾರ್ಥನೆಯಲ್ಲಿ ಸಿಎಂ ಸಿದ್ದರಾಮಯ್ಯ ಕರೆ

Renukaswamy murder case The location of the accused is complete
ಸಿನಿಮಾ1 day ago

Renuka Swamy murder : ಭೀಕರವಾಗಿ ಕೊಂದರೂ ಆರೋಪಿಗಳಿಗೆ ಕಾಡುತ್ತಿಲ್ವಾ ಪಾಪಪ್ರಜ್ಞೆ? ನಗುತ್ತಲೇ ಹೊರಬಂದ ಪವಿತ್ರಾ ಗೌಡ, ಪವನ್‌

Renuka swamy murder
ಚಿತ್ರದುರ್ಗ1 day ago

Renuka swamy Murder : ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಾಳೆಹೊನ್ನೂರು ಶ್ರೀಗಳು

Vijayanagara News
ವಿಜಯನಗರ1 day ago

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

Actor Darshan
ಯಾದಗಿರಿ2 days ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

Karnataka Weather Forecast
ಮಳೆ3 days ago

Karnataka Weather : ಕರಾವಳಿ, ಉತ್ತರ ಒಳನಾಡಿನಲ್ಲಿ ವರುಣಾರ್ಭಟ; ನಾಳೆಯು ಹಲವೆಡೆ ಸಿಕ್ಕಾಪಟ್ಟೆ ಮಳೆ

Actor Darshan
ಬೆಂಗಳೂರು3 days ago

Actor Darshan : ರೇಣುಕಾಸ್ವಾಮಿಯನ್ನು ಕಿಡ್ನ್ಯಾಪ್ ಮಾಡಿ ಕರೆತರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ!

actor Darshan
ಬೆಂಗಳೂರು3 days ago

Actor Darshan : ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಮತ್ತಿಬ್ಬರು ಸರೆಂಡರ್‌; ಆರೋಪಿಗಳ ಸಂಖ್ಯೆ 16ಕ್ಕೆ ಏರಿಕೆ

Actor Darshan
ಸಿನಿಮಾ3 days ago

Actor Darshan : ರೇಣುಕಾಸ್ವಾಮಿ ‌ಮೃತದೇಹ ಬಿಸಾಡಿ ಬಳಿಕ ಸಾಕ್ಷ್ಯಇದ್ದ 2 ಮೊಬೈಲ್‌ಗಳನ್ನು ಮೋರಿಗೆ ಎಸೆದ್ರಾ ಆರೋಪಿಗಳು?

ಟ್ರೆಂಡಿಂಗ್‌