ಮೊದಲು ಕಾರು ಮಾರಾಟ, ಸರ್ವೀಸ್‌ಗೆ ಅನುಮತಿ ನೀಡದಿದ್ದರೆ ಭಾರತದಲ್ಲಿ ಟೆಸ್ಲಾ ಉತ್ಪಾದನೆ ಇಲ್ಲ ಎಂದ ಎಲಾನ್‌ ಮಸ್ಕ್ - Vistara News

ಪ್ರಮುಖ ಸುದ್ದಿ

ಮೊದಲು ಕಾರು ಮಾರಾಟ, ಸರ್ವೀಸ್‌ಗೆ ಅನುಮತಿ ನೀಡದಿದ್ದರೆ ಭಾರತದಲ್ಲಿ ಟೆಸ್ಲಾ ಉತ್ಪಾದನೆ ಇಲ್ಲ ಎಂದ ಎಲಾನ್‌ ಮಸ್ಕ್

ಟೆಸ್ಲಾ ಕಾರುಗಳ ಮಾರಾಟ ಮತ್ತು ಸರ್ವೀಸ್‌ಗೆ ಮೊದಲು ಅನುಮತಿ ನೀಡದಿದ್ದರೆ ಭಾರತದಲ್ಲಿ ಉತ್ಪಾದನೆ ಮಾಡುವುದಿಲ್ಲ ಎಂದು ಟೆಸ್ಲಾ ಕಂಪನಿಯ ಸ್ಥಾಪಕ ಮತ್ತು ಸಿಇಒ ಎಲಾನ್‌ ಮಸ್ಕ್‌ ತಿಳಿಸಿದ್ದಾರೆ.

VISTARANEWS.COM


on

tesla car
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಭಾರತದಲ್ಲಿ ಟೆಸ್ಲಾ ಕಾರುಗಳ ಮಾರಾಟ ಮತ್ತು ಸರ್ವೀಸ್‌ಗೆ ಮೊದಲು ಅನುಮತಿ ನೀಡದಿದ್ದರೆ, ಇಲ್ಲಿ ಉತ್ಪಾದನೆ ಮಾಡುವುದಿಲ್ಲ ಎಂದು ಟೆಸ್ಲಾ ಕಂಪನಿಯ ಸ್ಥಾಪಕ ಮತ್ತಿ ಸಿಇಒ ಆದ ಎಲಾನ್‌ ಮಸ್ಕ್‌ ಹೇಳಿದ್ದಾರೆ.

ಟ್ವಿಟಿಗರೊಬ್ಬರು ಈ ಸಂಬಂಧ ಕೇಳಿದ ಪ್ರಶ್ನೆಗೆ ಶುಕ್ರವಾರ ಪ್ರತಿಕ್ರಿಯಿಸಿರುವ ಎಲಾನ್‌ ಮಸ್ಕ್‌, ತಮ್ಮ ಷರತ್ತನ್ನು ಸ್ಪಷ್ಟಪಡಿಸಿದ್ದಾರೆ.

ಯಾವುದೇ ಪ್ರದೇಶದಲ್ಲಾದರೂ, ಟೆಸ್ಲಾ ಕಾರುಗಳಿಗೆ ಮೊದಲು ಮಾರಾಟ ಮತ್ತು ಸರ್ವೀಸ್‌ ನೀಡಲು ಅನುಮತಿ ಕೊಡದಿದ್ದರೆ, ಉತ್ಪಾದನಾ ಘಟಕ ತೆರೆಯಲಾಗದು ಎಂದು ತಿಳಿಸಿದ್ದಾರೆ.

ಭಾರತೀಯ ಮಾರುಕಟ್ಟೆಯನ್ನು ಪ್ರವೇಶಿಸಲಿ ಟೆಸ್ಲಾ 2019ರಿಂದ ಯತ್ನಿಸುತ್ತಿದೆ. ಆದರೆ ಆಮದು ಮಾಡುವ ‌ದುಬಾರಿ ಎಲೆಕ್ಟ್ರಿಕ್ ಕಾರುಗಳಿಗೆ ಸುಂಕ ಕಡಿತ ಮಾಡಲು ಭಾರತ ಸರಕಾರ ಸಮ್ಮತಿಸಿಲ್ಲ. ಸುಂಕ ಇಳಿಸಬೇಕು ಎಂದು ಟೆಸ್ಲಾ ಪಟ್ಟು ಹಿಡಿದಿತ್ತು. ಸರಕಾರ 40,000 ಡಾಲರ್‌ಗಿಂತ ಕಡಿಮೆ ಬೆಲೆಯ ಎಲೆಕ್ಟ್ರಿಕ್‌ ವಾಹನಗಳ ಆಮದಿಗೆ ಶೇ. 60 ಹಾಗೂ ಅದಕ್ಕಿಂತ ಹೆಚ್ಚಿನ ದರದ ಕಾರುಗಳ ಆಮದಿಗೆ ಶೇ.100 ಆಮದು ಸುಂಕ ವಿಧಿಸುತ್ತದೆ.

ಇದನ್ನೂ ಓದಿ:Twitter ಖರೀದಿಸುವ ಮೆಗಾ ಡೀಲ್‌ಗೆ ತಾತ್ಕಾಲಿಕವಾಗಿ ಬ್ರೇಕ್‌ ಹಾಕಿದ ಎಲನ್‌ ಮಸ್ಕ್‌!

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Team India : ಮುಂಬೈನಲ್ಲಿ ನಡೆದ ಭಾರತ ತಂಡದ ವಿಜಯೋತ್ಸವ ನೋಡಿದರೆ ರೋಮಾಂಚನ ಖಾತರಿ

Team India : ಸಮಾರಂಭದ ನಂತರ, ಆಟಗಾರರು ಅಭಿಮಾನಿಗಳೊಂದಿಗೆ ಮಾತುಕತೆ ನಡೆಸಿದರು. ಸಹಿ ಮಾಡಿದ ಚೆಂಡುಗಳನ್ನು ವಿತರಿಸಿದರು ಮತ್ತು ಸೆಲ್ಫಿಗಳನ್ನು ತೆಗೆದುಕೊಂಡರು. ಇದು ಕ್ರಿಕೆಟ್​ನ ಅಪ್ಪಟ ಅಭಿಮಾನಿಗಳಿಗೆ ಸಂತೋಷವನ್ನುಂಟುಮಾಡಿತು. ಮರೀನ್ ಡ್ರೈವ್​​ನಲ್ಲಿ ಪ್ರಾರಂಭವಾದ 20 ವಿಶ್ವಕಪ್ ವಿಜಯೋತ್ಸವ ಮೆರವಣಿಗೆ ವಾಂಖೆಡೆ ಕ್ರೀಡಾಂಗಣದಲ್ಲಿ ಕೊನೆಗೊಂಡಿತು.

VISTARANEWS.COM


on

Team India
Koo

ಬೆಂಗಳೂರು: ಟಿ 20 ವಿಶ್ವಕಪ್ 2024 ರಲ್ಲಿ (Team India) ಟೀಮ್ ಇಂಡಿಯಾದ ಟ್ರೋಫಿ ಗೆದ್ದ ಸಂಭ್ರಮವನ್ನು ಆಚರಿಸಲು ಕ್ರಿಕೆಟ್ ಅಭಿಮಾನಿಗಳು ಮುಂಬೈನಲ್ಲಿ ಜಮಾಯಿಸಿದ್ದರು. ಅಲ್ಲಿನ ಐತಿಹಾಸಿಕ ವಾಂಖೆಡೆ ಕ್ರೀಡಾಂಗಣವು ಗದ್ದಲ ಮತ್ತು ಉತ್ಸಾಹದಿಂದ ತುಂಬಿತ್ತು. ವಾಂಖೆಡೆ ಸ್ಟೇಡಿಯಂನಲ್ಲಿ ಭಾರತ ತಂಡಕ್ಕೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) 125 ಕೋಟಿ ರೂ.ಗಳ ಬಹುಮಾನವು ದೊರೆಯಿತು. ಈ ಕಾರ್ಯಕ್ರಮದಲ್ಲಿ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ, ರಾಹುಲ್ ದ್ರಾವಿಡ್ ಮತ್ತು ಜಸ್ಪ್ರೀತ್ ಬುಮ್ರಾ ಅವರಂತಹ ಪ್ರಮುಖ ಆಟಗಾರರು ವೇದಿಕೆಯಲ್ಲಿದ್ದು, ಅದ್ಯಮ ಉತ್ಸಹದಲ್ಲಿದ್ದ ಪ್ರೇಕ್ಷಕರೊಂದಿಗೆ ತಮ್ಮ ಭಾವನೆಗಳನ್ನು ಹಂಚಿಕೊಂಡರು.

ಸಮಾರಂಭದ ನಂತರ, ಆಟಗಾರರು ಅಭಿಮಾನಿಗಳೊಂದಿಗೆ ಮಾತುಕತೆ ನಡೆಸಿದರು. ಸಹಿ ಮಾಡಿದ ಚೆಂಡುಗಳನ್ನು ವಿತರಿಸಿದರು ಮತ್ತು ಸೆಲ್ಫಿಗಳನ್ನು ತೆಗೆದುಕೊಂಡರು. ಇದು ಕ್ರಿಕೆಟ್​ನ ಅಪ್ಪಟ ಅಭಿಮಾನಿಗಳಿಗೆ ಸಂತೋಷವನ್ನುಂಟುಮಾಡಿತು. ಮರೀನ್ ಡ್ರೈವ್​​ನಲ್ಲಿ ಪ್ರಾರಂಭವಾದ 20 ವಿಶ್ವಕಪ್ ವಿಜಯೋತ್ಸವ ಮೆರವಣಿಗೆ ವಾಂಖೆಡೆ ಕ್ರೀಡಾಂಗಣದಲ್ಲಿ ಕೊನೆಗೊಂಡಿತು. ಅಭಿಮಾನಿಗಳ ಬೃಹತ್​​ ಸಂಖ್ಯೆಯು ಯಶಸ್ಸನ್ನು ಹೆಚ್ಚಿಸಿತು. ಅಪಾರ ಜನಸಂದಣಿಯಿಂದಾಗಿ ಟೀಮ್ ಇಂಡಿಯಾ ಬಸ್ ಬೀದಿಗಳಲ್ಲಿ ಸಂಚರಿಸಲು ಕಷ್ಟವಾಯಿತು. ಇದು ಭಾವನಾತ್ಮಕ ಮತ್ತು ಸಂಭ್ರಮದ ವಾತಾವರಣ ಉಂಟು ಮಾಡಿತು.

ಇದನ್ನೂ ಓದಿ: India’s open-bus parade : ಮುಂಬೈನಲ್ಲಿ ನಡೆದ ಭಾರತ ಕ್ರಿಕೆಟ್​ ತಂಡದ ವಿಜಯೋತ್ಸವ ಕಾರ್ಯಕ್ರಮದ ಚಿತ್ರಗಳು ಇಲ್ಲಿವೆ

“ಮುಂಬೈ ಎಂದಿಗೂ ನಿರಾಶೆ ಮಾಡುವುದಿಲ್ಲ.. ನಮಗೆ ಆದರದ ಸ್ವಾಗತ ದೊರೆಯಿತು. ತಂಡದ ಪರವಾಗಿ, ನಾವು ಅಭಿಮಾನಿಗಳಿಗೆ ಧನ್ಯವಾದ ಹೇಳಲು ಬಯಸುತ್ತೇವೆ. ನಾನು ತುಂಬಾ ಸಂತೋಷ ಮತ್ತು ನಿರಾಳನಾಗಿದ್ದೇನೆ ಎದು ರೋಹಿತ್​ ಶರ್ಮಾ ಹೇಳಿದರು. ಇದೇ ವೇಳೆ ಅವರು ಟಿ 20 ವಿಶ್ವಕಪ್​​ನ ಅಂತಿಮ ಓವರ್​ನಲ್ಲಿ ನಿರ್ಣಾಯಕ ಪ್ರದರ್ಶನಕ್ಕಾಗಿ ಭಾರತೀಯ ನಾಯಕ ತಮ್ಮ ಉಪನಾಯಕ ಹಾರ್ದಿಕ್ ಪಾಂಡ್ಯ ಅವರನ್ನು ಶ್ಲಾಘಿಸಿದರು. “ಕೊನೆಯ ಓವರ್ ಎಸೆದು ತಂಡವನ್ನು ಕಾಪಾಡಿದ ಹಾರ್ದಿಕ್ಗೆ ಹ್ಯಾಟ್ಸ್ ಆಫ್. ನಿಮಗೆ ಎಷ್ಟು ರನ್​ಗಳ ಅಗತ್ಯವಿದ್ದರೂ, ಆ ಓವರ್ ಎಸೆಯಲು ಯಾವಾಗಲೂ ತುಂಬಾ ಒತ್ತಡವಿರುತ್ತದೆ. ಅವರಿಗೆ ಹ್ಯಾಟ್ಸ್ ಆಫ್” ಎಂದು ನಾಯಕ ಹೇಳಿದರು. ಇದೇ ವೇಳೆ ಹಾರ್ದಿಕ್! ಹಾರ್ದಿಕ್!” ಜನಸಮೂಹದಿಂದ. ಪಾಂಡ್ಯ ಮುಗುಳ್ನಗೆ ಮತ್ತು ಅಲೆಯೊಂದಿಗೆ ಚಪ್ಪಾಳೆಯನ್ನು ಒಪ್ಪಿಕೊಂಡರು. ಭಾವಪರವಶರಾದ ಹಾರ್ದಿಕ್ ಎದ್ದು ನಿಂತು ಅಭಿಮಾನಿಗಳನ್ನು ಸ್ವಾಗತಿಸಿದರು. ಇದು ವಾಂಖೆಡೆಯಲ್ಲಿ ಭಾವನಾತ್ಮಕ ಮತ್ತು ಸಂಭ್ರಮದ ವಾತಾವರಣವನ್ನು ಹೆಚ್ಚಿಸಿತು.

ವಿರಾಟ್ ಕೊಹ್ಲಿ ಕೂಡ ಪ್ರೇಕ್ಷಕರಿಗೆ ಹಾಗೂ ಸಹ ಆಟಗಾರರಿಗೆ ಹೃತ್ಪೂರ್ವಕ ಧನ್ಯವಾದ ಹೇಳಿದ್ದಾರೆ. “ರೋಹಿತ್ ಮತ್ತು ನಾನು ನಾವು ಇದನ್ನು ಬಹಳ ಸಮಯದಿಂದ ಪ್ರಯತ್ನಿಸುತ್ತಿದ್ದೇವೆ. ನಾವು ಯಾವಾಗಲೂ ವಿಶ್ವಕಪ್ ಗೆಲ್ಲಲು ಬಯಸಿದ್ದೆವು. ಟ್ರೋಫಿಯನ್ನು ವಾಂಖೆಡೆಗೆ ಮರಳಿ ತರುವುದು ಬಹಳ ವಿಶೇಷವಾದ ಭಾವನೆ. ನಾವು ಕಳೆದ 15 ವರ್ಷಗಳಿಂದ ಆಡುತ್ತಿದ್ದೇವೆ ಮತ್ತು ರೋಹಿತ್ ತುಂಬಾ ಭಾವುಕನಾಗಿರುವುದನ್ನು ನಾನು ಇದೇ ಮೊದಲ ಬಾರಿಗೆ ನೋಡಿದ್ದೇನೆ. ಅವನು ಅಳುತ್ತಿದ್ದನು, ನಾನು ಅಳುತ್ತಿದ್ದೆ, ನಮ್ಮಿಬ್ಬರ ನಡುವಿನ ಆ ಅಪ್ಪುಗೆಯನ್ನು ಎಂದಿಗೂ ಮರೆಯುವುದಿಲ್ಲ ಎಂದು ಹೇಳಿದ್ದಾರೆ.

ಭಾರತದ ಶ್ರೇಷ್ಠ ಆಟಗಾರ ಜಸ್ಪ್ರೀತ್ ಬುಮ್ರಾ ಅವರನ್ನು ಶ್ಲಾಘಿಸಿದ ಕೊಹ್ಲಿ, “ಜಸ್ಪ್ರೀತ್ ಬುಮ್ರಾ ಇದೀಗ ವಿಶ್ವದ ಎಂಟನೇ ಅದ್ಭುತ ಎಂದು ಹೇಳಿದರು. ಮುಂಬೈನ ಪ್ರೇಕ್ಷಕರು ಬೌಲರ್​​ನ ಅಸಾಧಾರಣ ಕೊಡುಗೆಗಳನ್ನು ಸಂಭ್ರಮಿಸಿದರು.

ವಾಂಖೆಡೆಯಲ್ಲಿ ನಡೆದ ಸಂಭ್ರಮಾಚರಣೆಯಲ್ಲಿ ಅಪ್ರತಿಮ ಜೋಡಿ ಕೊಹ್ಲಿ ಮತ್ತು ರೋಹಿತ್ ಮೈದಾನದಲ್ಲಿ ನೃತ್ಯ ಮಾಡಿದರು. ಇದು ಅಭಿಮಾನಿಗಳ ಸಂತೋಷಕ್ಕೆ ಕಾರಣವಾಯಿತು. ವಿಜಯೋತ್ಸವದ ಮೆರವಣಿಗೆಯ ಬಗ್ಗೆ ಪ್ರತಿಕ್ರಿಯಿಸಿದ ಜಸ್ಪ್ರೀತ್ ಬುಮ್ರಾ, “ನಾನು ಇಂದು ನೋಡಿದ್ದನ್ನು ನಾನು ಹಿಂದೆಂದೂ ನೋಡಿಲ್ಲ ಎಂದು ಹೇಳಿದರು.

Continue Reading

ದೇಶ

10 ರೂ.ಗಾಗಿ ಎಲ್ಲರ ಮುಂದೆ ಪ್ಯಾಂಟ್‌ ಬಿಚ್ಚಿ, ಆಟೋ ಡ್ರೈವರ್‌ ಮೇಲೆ ಮಂಗಳಮುಖಿ ಹಲ್ಲೆ; Video ಇಲ್ಲಿದೆ

ಇ-ರಿಕ್ಷಾದಿಂದ ಚಾಲಕನನ್ನು ಇಳಿಸಿ, ಆತನ ಕೊರಳಪಟ್ಟಿ ಹಿಡಿದು, ಎಳೆದಾಡಿ ಹಲ್ಲೆ ನಡೆಸಿದ್ದಾರೆ. ಇದೇ ವೇಳೆ, ಆಟೋ ಚಾಲಕನು ಕೂಡ ಮಂಗಳಮುಖಿಗೆ ಹೊಡೆದಿದ್ದಾನೆ. ಇದೇ ವೇಳೆ, ಮಂಗಳಮುಖಿಗೆ ಏನು ಅನಿಸಿತೋ ಏನೋ, ಕೂಡಲೇ ತಮ್ಮ ಪ್ಯಾಂಟ್‌ ಬಿಚ್ಚಿ, ಬೆತ್ತಲೆಯಾಗಿದ್ದಾರೆ. ಈ ವಿಡಿಯೊ ಈಗ ಭಾರಿ ವೈರಲ್‌ ಆಗಿದೆ.

VISTARANEWS.COM


on

Viral Video
Koo

ನವದೆಹಲಿ: ರೈಲುಗಳಲ್ಲಿ, ಬಸ್‌ ಸ್ಟ್ಯಾಂಡ್‌ಗಳು, ಟ್ರಾಫಿಕ್‌ ಸಿಗ್ನಲ್‌ಗಳಲ್ಲಿ ಮಂಗಳಮುಖಿಯರು (Transgenders) ಜನರಿಂದ 5-10 ರೂ. ಪಡೆಯುತ್ತಾರೆ. ಜನರೂ ಕರುಣೆ ತೋರಿಸಿ ಅವರಿಗೆ ಹಣ ನೀಡುತ್ತಾರೆ. ಕೆಲವೊಮ್ಮೆ ಕಾಡಿ-ಬೇಡಿ ಮಂಗಳಮುಖಿಯರು ಜನರಿಂದ ಹಣ ಪಡೆಯುತ್ತಾರೆ. ಇದರಿಂದ ಜಗಳಗಳೂ ನಡೆದಿರುವ ಉದಾಹರಣೆಗಳು ಇವೆ. ಇದಕ್ಕೆ ತಾಜಾ ನಿದರ್ಶನ ಎಂಬಂತೆ, ಮಂಗಳಮುಖಿಯೊಬ್ಬರು 10 ರೂ.ಗಾಗಿ ಎಲ್ಲರ ಮುಂದೆಯೇ ಪ್ಯಾಂಟ್‌ ಬಿಚ್ಚಿಕೊಂಡು, ಆಟೋ ಚಾಲಕನ ಮೇಲೆ ಹಲ್ಲೆ ನಡೆಸಿದ್ದಾರೆ. ಈ ವಿಡಿಯೊ (Viral Video) ಈಗ ಭಾರಿ ವೈರಲ್‌ ಆಗಿದೆ.

ವ್ಯಕ್ತಿಯು ಇ-ರಿಕ್ಷಾವನ್ನು ಓಡಿಸಿಕೊಂಡು ಜೀವನ ಸಾಗಿಸುತ್ತಿದ್ದು, ಈತನ ರಿಕ್ಷಾವನ್ನು ಮಂಗಳಮುಖಿ ಹತ್ತಿದ್ದಾರೆ. ಮಂಗಳಮುಖಿಯು ಇಳಿಯುವಾಗ ಎಂದಿನಂತೆ ಇ-ರಿಕ್ಷಾ ಚಾಲಕನು 10 ರೂ. ಬಾಡಿಗೆ ಕೊಡಿ ಎಂದಿದ್ದಾನೆ. ಇದರಿಂದ ಕುಪಿತಗೊಂಡ ಮಹಿಳೆಯು ಆತನ ಜತೆ ಜಗಳಕ್ಕೆ ನಿಂತಿದ್ದಾರೆ. ಯಾವುದೇ ಕಾರಣಕ್ಕೂ ಬಾಡಿಗೆ ಕೊಡುವುದಿಲ್ಲ ಎಂದು ಹೇಳುವ ಜತೆಗೆ ಬೈದಿದ್ದಾರೆ. ಇದಾದ ನಂತರ ಆಟೋ ಚಾಲಕನು ಕೂಡ ಗದರಿದ್ದಾನೆ. ಆಗ ಮಂಗಳಮುಖಿಯ ಕೋಪ ದ್ವಿಗುಣಗೊಂಡಿದೆ. ಕೂಡಲೇ ಆಟೋ ಚಾಲಕನ ಮೇಲೆ ದಾಳಿ ನಡೆಸಿದ್ದಾರೆ.‌ ಘಟನೆಯು ಎಲ್ಲಿ ನಡೆದಿದೆ ಎಂಬುದರ ಕುರಿತು ನಿಖರ ಮಾಹಿತಿ ಲಭ್ಯವಾಗಿಲ್ಲ.

ಇ-ರಿಕ್ಷಾದಿಂದ ಚಾಲಕನನ್ನು ಇಳಿಸಿ, ಆತನ ಕೊರಳಪಟ್ಟಿ ಹಿಡಿದು, ಎಳೆದಾಡಿ ಹಲ್ಲೆ ನಡೆಸಿದ್ದಾರೆ. ಇದೇ ವೇಳೆ, ಆಟೋ ಚಾಲಕನು ಕೂಡ ಮಂಗಳಮುಖಿಗೆ ಹೊಡೆದಿದ್ದಾನೆ. ಇದೇ ವೇಳೆ, ಮಂಗಳಮುಖಿಗೆ ಏನು ಅನಿಸಿತೋ ಏನೋ, ಕೂಡಲೇ ತಮ್ಮ ಪ್ಯಾಂಟ್‌ ಬಿಚ್ಚಿ, ಬೆತ್ತಲೆಯಾಗಿದ್ದಾರೆ. ಪ್ಯಾಂಟ್‌ ಬಿಚ್ಚಿ ಬೆತ್ತಲೆಯಾದ ಬಳಿಕವೂ ಅವರು ಮತ್ತೆ ಚಾಲಕನ ಮೇಳೆ ಹಲ್ಲೆ ನಡೆಸಿದ್ದಾರೆ. ಕೇವಲ 10 ರೂ.ಗಾಗಿ ಇಬ್ಬರೂ ರಸ್ತೆ ಮಧ್ಯೆ ಕಾದಾಡಿಕೊಂಡಿರುವ ವಿಡಿಯೊ ಭಾರಿ ಸದ್ದು ಮಾಡುತ್ತಿದೆ.

ವಿಡಿಯೊ ವೈರಲ್‌ ಆಗುತ್ತಲೇ ಹತ್ತಾರು ಅಭಿಪ್ರಾಯಗಳು ವ್ಯಕ್ತವಾಗಿವೆ. “ಆಟೋ ಚಾಲಕರು 10 ರೂ.ಗಾಗಿ ದುಡಿಯುತ್ತಾರೆ. ಮಂಗಳಮುಖಿಯರು ಅವರಿಗೆ ಬಾಡಿಗೆ ಕೊಡಬೇಕು. ಅವರು ಬೇಕಾದರೆ ಶ್ರೀಮಂತರ ಬಳಿ ಹಣ ಪಡೆಯಲಿ” ಎಂದು ಒಬ್ಬರು ಕಮೆಂಟ್‌ ಮಾಡಿದ್ದಾರೆ. ಮತ್ತೊಬ್ಬರು ಪ್ರತಿಕ್ರಿಯಿಸಿ, “ಮಂಗಳಮುಖಿಯರು ಕೆಲಸ ಮಾಡುತ್ತೇವೆ ಎಂದರೆ ಯಾರೂ ಕೆಲಸ ಕೊಡಲ್ಲ. ಅವರಿಗೆ ಮಾನವೀಯತೆ ಆಧಾರದ ಮೇಲೆ ಜನ ನೆರವು ನೀಡಬೇಕು” ಎಂಬುದಾಗಿ ಹೇಳಿದ್ದಾರೆ. ಹೀಗೆ ಪರ-ವಿರೋಧಗಳ ಚರ್ಚೆಯಾಗಿದೆ.

ಇದನ್ನೂ ಓದಿ: Assault Case: ಸಾಲ ವಾಪಸ್‌ ಕೇಳಿದ್ದಕ್ಕೆ ಮಾರಣಾಂತಿಕ ಹಲ್ಲೆ ಮಾಡಿದ ಬಿಜೆಪಿ ಕಾರ್ಯಕರ್ತ

Continue Reading

ಪ್ರಮುಖ ಸುದ್ದಿ

India’s open-bus parade : ಮುಂಬೈನಲ್ಲಿ ನಡೆದ ಭಾರತ ಕ್ರಿಕೆಟ್​ ತಂಡದ ವಿಜಯೋತ್ಸವ ಕಾರ್ಯಕ್ರಮದ ಚಿತ್ರಗಳು ಇಲ್ಲಿವೆ

India’s open-bus parade: ಟೀಮ್ ಇಂಡಿಯಾ ಮುಂಬೈಗೆ ಆಗಮಿಸುವ ಮೊದಲೇ ಸಾವಿರಾರು ಅಭಿಮಾನಿಗಳು ಮರೀನ್ ಡ್ರೈವ್​ಗೆ ಆಗಮಿಸಿದ್ದರು. ವಿಶ್ವಕಪ್ ವಿಜೇತರಿಗಾಗಿ ಅಭಿಮಾನಿಗಳು ತೀವ್ರವಾಗಿ ಕಾಯುತ್ತಿದ್ದರಿಂದ ವಾಂಖೆಡೆ ಕ್ರೀಡಾಂಗಣವೂ ಜನರಿಂದ ತುಂಬಿತ್ತು. ಆ ಬಳಿಕ ಐತಿಹಾಸಿಕ ವಾಖೆಂಡೆ ಸ್ಟೇಡಿಯಮ್​ನಲ್ಲಿ ಸಾವಿರಾರು ಅಭಿಮಾನಿಗಳ ಸಮ್ಮುಖದಲ್ಲಿ ಕಾರ್ಯಕ್ರಮ ನಡೆಯಿತು.

VISTARANEWS.COM


on

India's open-bus parade
Koo

ಮುಂಬೈ: ಟಿ20 ವಿಶ್ವ ಕಪ್​ ನಲ್ಲಿ ಚಾಂಪಿಯನ್​ ಪಟ್ಟ ಪಡೆದುಕೊಂಡ ಭಾರತ ಕ್ರಿಕೆಟ್ ತಂಡಕ್ಕೆ (Team India) ಮುಂಬಯಿನಲ್ಲಿ ಬಿಸಿಸಿಐ ಅದ್ಧೂರಿ ವಿಜಯೋತ್ಸವ ಕಾರ್ಯಕ್ರಮ ಆಯೋಜಿಸಿತ್ತು. ತಂಡದ ಆಟಗಾರರನ್ನು ತುಂಬಿಕೊಂಡಿದ್ದ ತೆರೆದ ಬಸ್​ (India’s open-bus parade) ಸಂಜೆ 7 ಗಂಟೆಗೆ ಮರೀನ್ ಡ್ರೈವ್​ನಿಂದ ಆರಂಭಗೊಂಡು ರಸ್ತೆಯುದ್ದಕ್ಕೂ ನೆರೆದಿದ್ದ ಅಭಿಮಾನಿಗಳ ಸಮ್ಮುಖದಲ್ಲಿ ಸಾಗಿತು.

ಐಸಿಸಿ ಟಿ 20 ವಿಶ್ವಕಪ್ 2024 ರಲ್ಲಿ ಐತಿಹಾಸಿಕ ವಿಜಯವನ್ನು ಆಚರಿಸಲು ದೊಡ್ಡ ಸಂಖ್ಯೆಯಲ್ಲಿ ಬಂದಿದ್ದರು. ಟೀಮ್ ಇಂಡಿಯಾ ಮುಂಬೈಗೆ ಆಗಮಿಸುವ ಮೊದಲೇ ಸಾವಿರಾರು ಅಭಿಮಾನಿಗಳು ಮರೀನ್ ಡ್ರೈವ್​ಗೆ ಆಗಮಿಸಿದ್ದರು. ವಿಶ್ವಕಪ್ ವಿಜೇತರಿಗಾಗಿ ಅಭಿಮಾನಿಗಳು ತೀವ್ರವಾಗಿ ಕಾಯುತ್ತಿದ್ದರಿಂದ ವಾಂಖೆಡೆ ಕ್ರೀಡಾಂಗಣವೂ ಜನರಿಂದ ತುಂಬಿತ್ತು. ಆ ಬಳಿಕ ಐತಿಹಾಸಿಕ ವಾಖೆಂಡೆ ಸ್ಟೇಡಿಯಮ್​ನಲ್ಲಿ ಸಾವಿರಾರು ಅಭಿಮಾನಿಗಳ ಸಮ್ಮುಖದಲ್ಲಿ ಕಾರ್ಯಕ್ರಮ ನಡೆಯಿತು. ನಾಯಕ ರೋಹಿತ್ ಶರ್ಮಾ. ವಿರಾಟ್​ ಕೊಹ್ಲಿ ಮುಂದಾಳತ್ವದಲ್ಲಿ ತಂಡದ ಆಟಗಾರರು ಕುಣಿದು ಕುಪ್ಪಳಿಸಿದರು. ಬಳಿಕ ಅವರು ತಮ್ಮ ತಂಡದ ಆಟಗಾರರು ಹಾಗೂ ಪ್ರೇಕ್ಷಕರನ್ನುದ್ದೇಶಿಸಿ ಮಾತನಾಡಿದರು. ಈ ವಿಶೇಷ ಸಂದರ್ಭದ ಚಿತ್ರಗಳು ಈ ಕೆಳಗಿವೆ.

ಇದನ್ನೂ ಓದಿ: Rohit Sharma : ವಾಂಖೆಡೆ ಸ್ಟೇಡಿಯಮ್​ನಲ್ಲಿ ಡಾನ್ಸ್ ಮಾಡಿದ ರೋಹಿತ್ ಶರ್ಮಾ

Continue Reading

ದೇಶ

2025ರ ವೇಳೆಗೆ ಬಾಹ್ಯಾಕಾಶ, ಸಮುದ್ರದ ಆಳಕ್ಕೆ ಮಾನವ ಸಹಿತ ಮಿಷನ್;‌ ಕೇಂದ್ರ ಸಚಿವ ಮಹತ್ವದ ಘೋಷಣೆ

ಬಾಹ್ಯಾಕಾಶ ಕ್ಷೇತ್ರವು ರಾಕೆಟ್‌ ಹಾಗೂ ಉಪಗ್ರಹಗಳ ಉಡಾವಣೆಗಷ್ಟೇ ಸೀಮಿತವಾಗಿದೆ. ಆದರೆ, ಬಾಹ್ಯಾಕಾಶ ಕ್ಷೇತ್ರದಿಂದ ಕೃಷಿ, ಮೂಲ ಸೌಕರ್ಯ, ಸಂವಹನ, ಆರೋಗ್ಯ ಸೇರಿ ಹಲವು ಕ್ಷೇತ್ರಗಳ ಮೇಲೆ ಸಕಾರಾತ್ಮಕ ಪರಿಣಾಮ ಬೀರುತ್ತದೆ. ಭಾರತದಲ್ಲಿ ಬಾಹ್ಯಾಕಾಶ ಕ್ಷೇತ್ರದಲ್ಲೂ ಖಾಸಗಿ ಸಹಭಾಗಿತ್ವಕ್ಕೆ ಅವಕಾಶ ನೀಡಿರುವುದು ಭಾರಿ ಅನುಕೂಲವಾಗಿದೆ ಎಂಬುದಾಗಿ ಡಾ.ಜಿತೇಂದ್ರ ಸಿಂಗ್‌ ತಿಳಿಸಿದ್ದಾರೆ.

VISTARANEWS.COM


on

Dr Jitendra Singh
Koo

ನವದೆಹಲಿ: 2023ರಲ್ಲಿ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯು (ISRO) ಚಂದ್ರಯಾನ-3 (Chandrayaan 3) ಮಿಷನ್‌ಅನ್ನು ಯಶಸ್ವಿಯಾಗಿ ಕೈಗೊಳ್ಳುವ ಮೂಲಕ ಇತಿಹಾಸ ಸೃಷ್ಟಿಸಿದ ಬಳಿಕ ಭಾರತದ ಬಾಹ್ಯಾಕಾಶ ವಿಜ್ಞಾನಿಗಳ ಆತ್ಮವಿಶ್ವಾಸವು ನೂರ್ಮಡಿಯಾಗಿದೆ. ಕೇಂದ್ರ ಸರ್ಕಾರವೂ (Central Government) ಬಾಹ್ಯಾಕಾಶ ಯೋಜನೆಗಳಿಗೆ ಉತ್ತೇಜನ ನೀಡುತ್ತಿದೆ. ಇದರ ಬೆನ್ನಲ್ಲೇ, “2025ರ ವೇಳೆಗೆ ಭಾರತವು ಮೊದಲ ಮಾನವ ಸಹಿತ ಬಾಹ್ಯಾಕಾಶ ಯಾನ ಹಾಗೂ ಸಮುದ್ರದ ಆಳಕ್ಕೆ ಮಾನವ ಸಹಿತ ಮಿಷನ್‌ ಕಳುಹಿಸಲಾಗುತ್ತದೆ” ಎಂಬುದಾಗಿ ಕೇಂದ್ರ ಸಚಿವ ಡಾ.ಜಿತೇಂದ್ರ ಸಿಂಗ್‌ (Dr. Jitendra Singh) ತಿಳಿಸಿದ್ದಾರೆ.

ಭಾರತ್‌ 24 ನ್ಯೂಸ್‌ ನೆಟ್‌ವರ್ಕ್‌ ಜತೆಗಿನ ವಿಶೇಷ ಸಂವಾದದಲ್ಲಿ ಈ ಕುರಿತು ಅವರು ಮಾಹಿತಿ ನೀಡಿದ್ದಾರೆ. “ಬಾಹ್ಯಾಕಾಶ ಕ್ಷೇತ್ರವು ರಾಕೆಟ್‌ ಹಾಗೂ ಉಪಗ್ರಹಗಳ ಉಡಾವಣೆಗಷ್ಟೇ ಸೀಮಿತವಾಗಿದೆ. ಆದರೆ, ಬಾಹ್ಯಾಕಾಶ ಕ್ಷೇತ್ರದಿಂದ ಕೃಷಿ, ಮೂಲ ಸೌಕರ್ಯ, ಸಂವಹನ, ಆರೋಗ್ಯ ಸೇರಿ ಹಲವು ಕ್ಷೇತ್ರಗಳ ಮೇಲೆ ಸಕಾರಾತ್ಮಕ ಪರಿಣಾಮ ಬೀರುತ್ತದೆ. ಭೂಮಿ ದಾಖಲೆ ನಿರ್ವಹಣೆ, ಹೊಸ ಭೌಗೋಳಿಕ ನೀತಿ, ಹೊಸ ಬಾಹ್ಯಾಕಾಶ ನೀತಿ, ಮಣ್ಣಿನ ಆರೋಗ್ಯ ಕಾರ್ಡ್‌, ಲ್ಯಾಂಡ್‌ ಮ್ಯಾಪಿಂಗ್‌ ಸೇರಿ ಮುಂತಾದ ವಲಯಗಳಿಗೆ ಅನುಕೂಲವಾಗಲಿದೆ” ಎಂಬುದಾಗಿ ಅವರು ತಿಳಿಸಿದರು.

“ಭಾರತದ ಬಾಹ್ಯಾಕಾಶ ಕ್ಷೇತ್ರವು ಗಣನೀಯವಾಗಿ ಏಳಿಗೆ ಹೊಂದುತ್ತಿದೆ. 2022ರಲ್ಲಿ ದೇಶದಲ್ಲಿ ಬಾಹ್ಯಾಕಾಶಕ್ಕೆ ಸಂಬಂದಿಸಿದ ಒಂದೇ ಒಂದು ನವೋದ್ಯಮ ಇತ್ತು. ಬಾಹ್ಯಾಕಾಶದಲ್ಲೂ ಖಾಸಗಿ ಸಹಭಾಗಿತ್ವಕ್ಕೆ 2024ರಲ್ಲಿ ಅವಕಾಶ ನೀಡಿದ ಬಳಿಕ ನಾವೀಗ 200 ನವೋದ್ಯಮಗಳನ್ನು ಹೊಂದಿದ್ದೇವೆ. ಇವುಗಳಲ್ಲೇ ಕೆಲವು ಸ್ಟಾರ್ಟಪ್‌ಗಳು ಜಾಗತಿಕ ಮಟ್ಟದ ಸಾಮರ್ಥ್ಯ ಹೊಂದಿವೆ. ಅಷ್ಟೇ ಅಲ್ಲ, ಖಾಸಗಿ ವಲಯದಿಂದ ಬಾಹ್ಯಾಕಾಶ ಕ್ಷೇತ್ರದಲ್ಲಿ 1 ಸಾವಿರ ಕೋಟಿ ರೂ. ಹೂಡಿಕೆ ಹರಿದು ಬಂದಿದೆ” ಎಂಬುದಾಗಿ ಡಾ.ಜಿತೇಂದ್ರ ಸಿಂಗ್‌ ತಿಳಿಸಿದರು.

ಈಶಾನ್ಯ ರಾಜ್ಯಗಳ ಅಭಿವೃದ್ಧಿ ಬಗ್ಗೆ ಮಾತನಾಡಿದ ಅವರು ಹತ್ತಾರು ವಿಷಯಗಳನ್ನು ಪ್ರಸ್ತಾಪಿಸಿದರು. “ಈಶಾನ್ಯ ರಾಜ್ಯಗಳಲ್ಲಿ ಕಳೆದ 10 ವರ್ಷಗಳಲ್ಲಿ ಭಾರಿ ಅಭಿವೃದ್ಧಿಯಾಗಿದೆ. ಎಲ್ಲ ಹವಾಮಾನದಲ್ಲೂ ಸುಗಮವಾಗಿ ಸಂಚಾರಕ್ಕೆ ಅನುಕೂಲವಾಗುವ ರಸ್ತೆಗಳ ಅಭಿವೃದ್ಧಿ, ಹೆದ್ದಾರಿಗಳ ಮೂಲಕ ಉತ್ತಮ ಸಂಪರ್ಕ, ನಗರ ಪ್ರದೇಶಗಳಿಂದ ದೂರವಿರುವ ಪಟ್ಟಣ, ಗ್ರಾಮಗಳಿಗೂ ರಸ್ತೆ ಸಂಪರ್ಕ ಕಲ್ಪಿಸಲಾಗಿದೆ. ಇದು ಈಶಾನ್ಯ ರಾಜ್ಯಗಳ ಮಟ್ಟಿಗೆ ಅತ್ಯುತ್ತಮ ಬೆಳವಣಿಗೆ” ಎಂದು ಹೇಳಿದರು.

ಇದನ್ನೂ ಓದಿ: Aditya L1: ಲ್ಯಾಗ್ರೇಂಜ್‌ ಪಾಯಿಂಟ್‌ನ ಮೊದಲ ಸುತ್ತು ಪೂರ್ಣಗೊಳಿಸಿದ ಆದಿತ್ಯ ಎಲ್‌ 1; ಇಸ್ರೋಗೆ ಭಾರಿ ಮುನ್ನಡೆ

Continue Reading
Advertisement
Team India
ಪ್ರಮುಖ ಸುದ್ದಿ44 mins ago

Team India : ಮುಂಬೈನಲ್ಲಿ ನಡೆದ ಭಾರತ ತಂಡದ ವಿಜಯೋತ್ಸವ ನೋಡಿದರೆ ರೋಮಾಂಚನ ಖಾತರಿ

Viral Video
ದೇಶ50 mins ago

10 ರೂ.ಗಾಗಿ ಎಲ್ಲರ ಮುಂದೆ ಪ್ಯಾಂಟ್‌ ಬಿಚ್ಚಿ, ಆಟೋ ಡ್ರೈವರ್‌ ಮೇಲೆ ಮಂಗಳಮುಖಿ ಹಲ್ಲೆ; Video ಇಲ್ಲಿದೆ

A lorry collided with a bike Two persons died on the spot
ಕರ್ನಾಟಕ1 hour ago

Road Accident: ಬೈಕ್‌ಗೆ ಲಾರಿ ಡಿಕ್ಕಿ; ಇಬ್ಬರು ಸ್ಥಳದಲ್ಲೇ ಸಾವು!

Drowned In Water A woman died while crossing the kalu sanka
ಕರ್ನಾಟಕ1 hour ago

Drowned In Water: ಕಾಲು ಸಂಕ ದಾಟುವಾಗ ನೀರಲ್ಲಿ ಕೊಚ್ಚಿ ಹೋದ ಮಹಿಳೆ!

Fans came from Japan to Hyderabad to watch Prabhas starrer Kalki 2898 AD
ಕರ್ನಾಟಕ1 hour ago

Kalki 2898 AD: “ಕಲ್ಕಿ 2898 ಎಡಿ” ಸಿನಿಮಾ ನೋಡಲು ಜಪಾನ್‌ನಿಂದ ಹೈದರಾಬಾದ್‌ಗೆ ಬಂದ ಫ್ಯಾನ್ಸ್‌!

India's open-bus parade
ಪ್ರಮುಖ ಸುದ್ದಿ1 hour ago

India’s open-bus parade : ಮುಂಬೈನಲ್ಲಿ ನಡೆದ ಭಾರತ ಕ್ರಿಕೆಟ್​ ತಂಡದ ವಿಜಯೋತ್ಸವ ಕಾರ್ಯಕ್ರಮದ ಚಿತ್ರಗಳು ಇಲ್ಲಿವೆ

Dr Jitendra Singh
ದೇಶ2 hours ago

2025ರ ವೇಳೆಗೆ ಬಾಹ್ಯಾಕಾಶ, ಸಮುದ್ರದ ಆಳಕ್ಕೆ ಮಾನವ ಸಹಿತ ಮಿಷನ್;‌ ಕೇಂದ್ರ ಸಚಿವ ಮಹತ್ವದ ಘೋಷಣೆ

Rohit Sharma
ಕ್ರಿಕೆಟ್2 hours ago

Rohit Sharma : ವಾಂಖೆಡೆ ಸ್ಟೇಡಿಯಮ್​ನಲ್ಲಿ ಡಾನ್ಸ್ ಮಾಡಿದ ರೋಹಿತ್ ಶರ್ಮಾ

Mukesh Ambani
ದೇಶ3 hours ago

Mukesh Ambani: ಸೋನಿಯಾ ಗಾಂಧಿಯನ್ನು ಮಗನ ಮದುವೆಗೆ ಆಹ್ವಾನಿಸಿದ ಮುಕೇಶ್‌ ಅಂಬಾನಿ

India's open-bus parade
ಪ್ರಮುಖ ಸುದ್ದಿ3 hours ago

India’s open-bus parade : ಭಾರತ ತಂಡದ ವಿಜಯೋತ್ಸವ ಮೆರವಣಿಗೆಯಲ್ಲಿ ಭದ್ರತಾ ವೈಫಲ್ಯ; ಬಸ್​​ನಲ್ಲಿದ್ದ ಆಟಗಾರರು ಜಸ್ಟ್​ ಮಿಸ್​​

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Weather Forecast
ಮಳೆ7 hours ago

Karnataka Weather : ಭಾರಿ ಮಳೆಗೆ ಗುಡ್ಡ ಕುಸಿತ; ಮಣ್ಣಿನ ಅಡಿ ಸಿಲುಕಿದ ಮಹಿಳೆ ಉಸಿರುಗಟ್ಟಿ ಸಾವು

karnataka Rain
ಮಳೆ8 hours ago

Karnataka Rain : ಮಳೆಗೆ ಜಾರಿ ಮುಖಾಮುಖಿ ಡಿಕ್ಕಿಯಾದ ಲಾರಿಗಳು; ಕಾರಿನ ಮೇಲೆ ಬಿದ್ದ ಬೃಹತ್‌ ಮರ

wild animal attack
ಬೆಂಗಳೂರು ಗ್ರಾಮಾಂತರ9 hours ago

Wild Animal Attack : ಮಾಗಡಿಯಲ್ಲಿ ರೈತನ ತಲೆ ಬಗೆದ ಕರಡಿ; ಮಲೆನಾಡಿನಲ್ಲಿ ಆನೆಗಳ ಹಾವಳಿ

Chikkaballapura News
ಚಿಕ್ಕಬಳ್ಳಾಪುರ11 hours ago

Chikkaballapura News : ಒಂದು ವರ್ಷದ ಮಗು ಬಿಟ್ಟು ಕ್ಷಣಾರ್ಧದಲ್ಲಿ ತಾಯಿ ಎಸ್ಕೇಪ್!

karnataka Rain
ಮಳೆ11 hours ago

Karnataka Rain : ಧಾರಾಕಾರ ಮಳೆಗೆ ಗುಡ್ಡ ಕುಸಿತ; ಹೊನ್ನಾವರ-ಬೆಂಗಳೂರು ಹೆದ್ದಾರಿ ಬಂದ್

Karnataka Rain
ಮಳೆ13 hours ago

Karnataka Rain : ಉಕ್ಕಿ ಹರಿದ ಚಂಡಿಕಾ ಹೊಳೆಯಲ್ಲಿ ಸಿಲುಕಿಕೊಂಡ ಬಸ್‌; ಪ್ರಯಾಣಿಕರು ಕಂಗಾಲು

Tornado Effect in Udupi
ಉಡುಪಿ14 hours ago

Tornado Effect : ಉಡುಪಿಯ ರಟ್ಟಾಡಿಯಲ್ಲಿ ಭಾರಿ ಶಬ್ದದೊಂದಿಗೆ ಅಪ್ಪಳಿಸಿದ ಸುಂಟರಗಾಳಿ

karnataka weather Forecast
ಮಳೆ2 days ago

Karnataka Weather : ಮಳೆ ಅಬ್ಬರಕ್ಕೆ ಹೆಚ್ಚಾದ ಗುಡ್ಡ ಕುಸಿತ; ಬಂಗ್ರ ಕೂಳೂರಿನಲ್ಲಿ ರಸ್ತೆ ಬಂದ್‌

karnataka Weather Forecast
ಮಳೆ3 days ago

Karnataka Weather : ಕೊಡಗು, ದಾವಣಗೆರೆಯಲ್ಲಿ ಮಳೆಯಾಟ; ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ

karnataka Weather Forecast
ಮಳೆ4 days ago

Karnataka Weather : ಬೆಂಗಳೂರು, ಕಲಬುರಗಿ ಸೇರಿದಂತೆ ಹಲವೆಡೆ ವರ್ಷಧಾರೆ; ನಾಳೆಗೂ ಮಳೆ ಅಲರ್ಟ್‌

ಟ್ರೆಂಡಿಂಗ್‌