Bigg Boss Kannada | ರಿಯಲ್‌-ಫೇಕ್‌ ವಾರ್: ಯಾವ ಪಟ್ಟ ಯಾರಿಗೆ? - Vistara News

ಬಿಗ್ ಬಾಸ್

Bigg Boss Kannada | ರಿಯಲ್‌-ಫೇಕ್‌ ವಾರ್: ಯಾವ ಪಟ್ಟ ಯಾರಿಗೆ?

ಯಾರು ರಿಯಲ್, ಯಾರು ಫೇಕ್ ಎಂಬ (Bigg Boss Kannada) ಟಾಸ್ಕ್‌ಅನ್ನು ಬಿಗ್‌ ಬಾಸ್‌ ನೀಡಿದ್ದಾರೆ. 46ನೇ ದಿನವೂ ಆಟ ಮುಂದುವರಿದಿದೆ.

VISTARANEWS.COM


on

Bigg Boss Kannada
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಬಿಗ್‌ ಬಾಸ್‌ ಸೀಸನ್‌ 9ರ (Bigg Boss Kannada) ಏಳನೇ ಯಾರು ರಿಯಲ್, ಯಾರು ಫೇಕ್ ಎಂಬ ಟಾಸ್ಕ್‌ ಬಿಗ್‌ ಬಾಸ್‌ ನೀಡಿದ್ದಾರೆ. ಹಿಂದಿನ ಸಂಚಿಕೆಯಲ್ಲಿ ರೂಪೇಶ್ ರಾಜಣ್ಣ ಫೇಕ್ ಎಂದು ಕೆಲವರು ಹೇಳಿದ್ದರು. ಅದಕ್ಕೆ ರಾಜಣ್ಣ ಸಿಟ್ಟಾಗಿದ್ದಾರೆ. ಫೇಕ್ ಎನ್ನುವ ಶಬ್ದವನ್ನು ಅರಗಿಸಿಕೊಳ್ಳಲಾಗದ ರೂಪೇಶ್‌ ರಾಜಣ್ಣ ಅವರು ನಟ ಅಂಬರೀಶ್‌ ಅವರ ಸ್ಟೈಲಿನಲ್ಲಿ ಡೈಲಾಗ್‌ಗಳನ್ನು ಹೇಳುವುದರ ಮೂಲಕ ಕೋಪವನ್ನು ತೋರಿಸಿಕೊಂಡಿದ್ದಾರೆ.

46ನೇ ದಿನವೂ ಆಟ ಮುಂದುವರಿದಿದ್ದು, ಒಬ್ಬರು ತೀರ್ಪುಗಾರರಾಗಲು ಬಿಗ್‌ ಬಾಸ್‌ ಒಂದು ಟಾಸ್ಕ್‌ ನೀಡಿದ್ದಾರೆ. ಅದುವೇ ʻಟವರ್‌ ಟಕ್ಕರ್‌. ಇದರ ಅನುಸಾರ ಗಾರ್ಡನ್‌ ಏರಿಯಾದಲ್ಲಿ ಮೂರು ಟವರ್‌ಗಳನ್ನು ಇರಿಸಲಾಗಿದೆ. ಪ್ರತಿ ಟವರ್‌ನಲ್ಲಿ ಇಬ್ಬರು ಸದಸ್ಯರು ಒಬ್ಬರದಾದ ಮೇಲೆ ಒಂದೊಂದು ಬ್ಲಾಕ್‌ಗಳನ್ನು ತೆಗೆಯಬೇಕು. ಹೀಗೆ ತೆಗೆಯುವ ಬ್ಲಾಕ್‌ಗಳಲ್ಲಿ ಕೆಂಪು ಗೆರೆಗಳಿದ್ದರೆ ಅವುಗಳನ್ನು ಸೇರಿಸಿ, ಎಕ್ಸ್‌ ಗುರುತು ರಚಿಸಬೇಕು. ಆಟದ ಮಧ್ಯೆ ಟವರ್‌ ಬಿದ್ದರೆ ಆಡುತ್ತಿರುವ ಸದಸ್ಯನ ಆಟ ಮುಗಿಯುತ್ತದೆ. ಈ ಟಾಸ್ಕ್‌ನಲ್ಲಿ ಅಮೂಲ್ಯ ಅವರು ವಿಜೇತರಾದರು.

Bigg Boss Kannada
Bigg Boss Kannada

ತೀರ್ಪುಗಾರರಾದ ಅಮೂಲ್ಯ ಅವರು, ರೂಪೇಶ್‌ ರಾಜಣ್ಣ, ದೀಪಿಕಾ ದಾಸ್‌, ಅರುಣ್‌ ಸಾಗರ್‌, ಆರ್ಯವರ್ಧನ್‌ ಮತ್ತು ಪ್ರಶಾಂತ್‌ ಸಂಬರಗಿ ಅವರನ್ನು ಫೇಕ್‌ ಎಂದು ಘೋಷಿಸಿದರು. ದಿವ್ಯಾ ಉರುಡುಗ, ಅನುಪಮಾ, ರಾಕೇಶ್‌ ಅಡಿಗ, ಕಾವ್ಯ ಮತ್ತು ರೂಪೇಶ್‌ ಶೆಟ್ಟಿ ಅವರನ್ನು ರಿಯಲ್‌ ಆಗಿ ಆಯ್ಕೆ ಮಾಡಿದರು. ಎರಡೂ ಗುಂಪಿನ ಚರ್ಚೆಯ ಮೇರೆಗೆ ದೀಪಿಕಾ ಹೊರತುಪಡಿಸಿ ರೂಪೇಶ್‌ ರಾಜಣ್ಣ ಮತ್ತು ಆರ್ಯವರ್ಧನ್‌ ಫೇಕ್‌ ಎಂದು ಪರಿಗಣನೆ ಮಾಡಿದರು.

ಇದನ್ನೂ ಓದಿ | Bigg Boss Kannada | ತಲೆ ಸುತ್ತು ಬರಿಸೋ ಗಿರಗಿರ ಗಾಯನ ಸ್ಪರ್ಧೆಯಲ್ಲಿ ಸ್ಪರ್ಧಿಗಳ ಮಜಾ: ನಾಮಿನೇಟ್‌ ಆದವರು ಯಾರು?

Bigg Boss Kannada
Bigg Boss Kannada

ಎರಡನೇ ಸುತ್ತಿನಲ್ಲಿ ʻʻಉರುಳಿಸಿ ನೋಡು ಬೀಳಿಸಿ ಆಡುʼʼ ಎನ್ನುವ ಟಾಸ್ಕ್‌ ಬಿಗ್‌ ಬಾಸ್‌ ನೀಡಿದರು. ಇದರ ಅನುಸಾರ ಆಡುವ ಸದಸ್ಯರು ಹಲಗೆಯಿಂದ ನಿರ್ಮಿಸಲಾದ ಹಾದಿಯ ಆರಂಭಿಕ ಸ್ಥಾನದಲ್ಲಿ ನಿಂತು ಚೆಂಡನ್ನು ಉರುಳಿಸಿ ಹಾದಿಯ ಅಂತಿಮ ಸ್ಥಾನದಲ್ಲಿರುವ ಬಾಟಲಿಯ ಆಕಾರದ ಬೌಲಿಂಗ್‌ ಪಿನ್‌ಗಳನ್ನು ಬೀಳಿಸಬೇಕು. ಚೆಂಡು ಉರುಳಿಸಲು ಪ್ರತಿ ಸದಸ್ಯರಿಗೆ ಐದು ಅವಕಾಶ ನೀಡಲಾಗುತ್ತದೆ. ಅತಿ ಕಡಿಮೆ ಅವಧಿಯಲ್ಲಿ ಎಲ್ಲ ಬೌಲಿಂಗ್‌ ಪಿನ್‌ ಬೀಳಿಸುವ ಸದಸ್ಯ ವಿಜೇತರಾಗುತ್ತಾರೆ. ಈ ಸುತ್ತಿನಲ್ಲಿ ವಿನೋದ್‌ ಗೊಬ್ಬರಗಾಲ ವಿನ್‌ ಆದರು.

Bigg Boss Kannada
Bigg Boss Kannada

ತೀರ್ಪುಗಾರರಾದ ವಿನೋದ್‌ ಗೊಬ್ಬರಗಾಲ ಅವರು ಕಾವ್ಯಶ್ರೀ, ಅರುಣ್‌ ಸಾಗರ್‌, ಅನುಪಮಾ, ರಾಕೇಶ್‌ ಅಡಿಗ, ದಿವ್ಯಾ ಅವರನ್ನು ರಿಯಲ್‌ ಆಗಿ ಆಯ್ಕೆ ಮಾಡಿದರು. ಅಮೂಲ್ಯ ಗೌಡ, ದೀಪಿಕಾ ದಾಸ್‌, ಪ್ರಶಾಂತ್‌ ಸಂಬರಗಿ, ಆರ್ಯವರ್ಧನ್‌ ಮತ್ತು ರೂಪೇಶ ರಾಜಣ್ಣ ಅವರನ್ನು ಫೇಕ್‌ ಎಂದು ಆಯ್ಕೆ ಮಾಡಿದರು. ಎರಡೂ ತಂಡದ ತೀರ್ಮಾನದ ಮೇರೆಗೆ ದೀಪಿಕಾ ದಾಸ್‌ ಹೊರತುಪಡಿಸಿ ಆರ್ಯವರ್ಧನ್‌ ಮತ್ತು ರೂಪೇಶ್‌ ರಾಜಣ್ಣ ಅವರು ಫೇಕ್‌ ಎಂದು ಪರಿಗಣನೆ ಮಾಡಿದರು. ಎರಡೂ ಸುತ್ತಿನಲ್ಲಿ ಆರ್ಯವರ್ಧನ್‌ ಮತ್ತು ರೂಪೇಶ್‌ ರಾಜಣ್ಣ ಫೇಕ್‌ ಎಂಬ ಕಾರಣಕ್ಕಾಗಿ ನೇರವಾಗಿ ನಾಮಿನೇಟ್‌ ಆದರು.

Bigg Boss Kannada
Bigg Boss Kannada

ಮೂರನೇ ಸುತ್ತಿನಲ್ಲಿ ʻವಿಜಯಪತಾಕೆʼ ಎನ್ನುವ ಟಾಸ್ಕ್‌ ಬಿಗ್‌ ಬಾಸ್‌ ನೀಡಿದ್ದು, ಆಡುವ ಸದಸ್ಯರು ತಮಗೆ ಮೀಸಲಿರುವ ಬಣ್ಣದ ಬಾವುಟಗಳನ್ನು ಕೊಳವೆಯಲ್ಲಿ ಸಿಕ್ಕಿಸಬೇಕು. ಕೊಳವೆಯಲ್ಲಿ ಸಿಕ್ಕಿಸಿ ಎದುರಾಳಿಯಿಂದ ಕಾಪಾಡಿಕೊಳ್ಳಲು 20 ನಿಮಿಷ ಕಾಲಾವಕಾಶ ನೀಡಲಾಗಿತ್ತು. ಈ ಟಾಸ್ಕ್‌ನಲ್ಲಿ ಅನುಪಮಾ ವಿಜೇತರಾಗಿದ್ದಾರೆ. ಮುಂದಿನ ಸಂಚಿಕೆಯಲ್ಲಿ ಅನುಪಮಾ ಅವರ ನಿರ್ಧಾರದ ಮೇರೆಗೆ ಯಾರು ಫೇಕ್‌ ಹಾಗೂ ರಿಯಲ್‌ ಎಂಬುದು ಕಾದು ನೋಡಬೇಕಿದೆ.

Bigg Boss Kannada
Bigg Boss Kannada

ಇದನ್ನೂ ಓದಿ | Bigg Boss Kannada | ʼಬದಲಾಗಲು ಸಾಧ್ಯವೇ ಇಲ್ಲ ರೂಪಿ’: ಸಾನ್ಯ ಅಯ್ಯರ್‌ ಭಾವುಕ ಪೋಸ್ಟ್‌ ವೈರಲ್‌!

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

ಬಿಗ್ ಬಾಸ್

Bigg Boss Kannada: ಲೀಕ್‌ ಆಯ್ತು ಬಿಗ್‌ ಬಾಸ್‌ ಪ್ರೋಮೊ ಶೂಟ್‌ ಫೋಟೊ; ನಿರೂಪಕನ ಫೇಸ್‌ ರಿವೀಲ್‌!

Bigg Boss Kannada: ಈ ಮುಂಚೆ ಸೋಷಿಯಲ್‌ ಮೀಡಿಯಾದಲ್ಲಿ ಸಂಭಾವಿತರ ಪಟ್ಟಿ ವೈರಲ್ ಆಗಿತ್ತು. ಈ ಬಾರಿ ಸುದೀಪ್‌ ಅವರು ಕಾರ್ಯಕ್ರಮವನ್ನು ನಿರೂಪಣೆ ಮಾಡುತ್ತಿಲ್ಲ ಎಂದು ವರದಿಯಾಗಿತ್ತು.ಆದರೆ ಈಗ ಪ್ರೋಮೊ ಶೂಟ್‌ ಫೋಟೊಗಳು ವೈರಲ್‌ ಆಗಿವೆ.

VISTARANEWS.COM


on

Bigg Boss Kannada promo shoot leak sudeep anchor
Koo

ಬೆಂಗಳೂರು: ಈಗಾಗಲೇ ಬಿಗ್‌ ಬಾಸ್‌ (Bigg Boss Kannada) ಹಿಂದಿ ಒಟಿಟಿ ಸೀಸನ್‌ ಮುಕ್ತಾಯವಾಗಿದೆ. ಕನ್ನಡದಲ್ಲಿ ಯಾವಾಗ ಸೀಸನ್‌ ಶುರು ಎಂಬ ಚರ್ಚೆ ಜೋರಾಗಿದೆ. ಇದೀಗ ಬಿಗ್‌ ಬಾಸ್‌ ಕನ್ನಡ ಸೀಸನ್‌ 11 ಶೀಘ್ರದಲ್ಲಿಯೇ ಶುರು ಆಗೋದು ಗ್ಯಾರಂಟಿ ಆಗಿದೆ ಸದ್ದಿಲ್ಲದೇ ಪ್ರೋಮೊ ಚಿತ್ರೀಕರಣ ಮಾಡಲಾಗಿದೆ. ಮತ್ತೊಮ್ಮೆ ಸುದೀಪ್ ವೀಕೆಂಡ್‌ನಲ್ಲಿ ಮನೆ ಮನೆಯ ಕಿರುತೆರೆಗೆ ಎಂಟ್ರಿ ಕೊಡಲಿದ್ದಾರೆ. ಆಗಸ್ಟ್ ಕೊನೆ ವಾರ ಅಥವಾ ಸೆಪ್ಟೆಂಬರ್ ಮೊದಲ ವಾರದಲ್ಲಿ ಬಿಗ್‌ಬಾಸ್ ಕನ್ನಡ-11 ಮೊದಲ ಪ್ರೋಮೊ ಬಿಡುಗಡೆ ಆಗಲಿದೆ.

ಈ ಮುಂಚೆ ಸೋಷಿಯಲ್‌ ಮೀಡಿಯಾದಲ್ಲಿ ಸಂಭಾವಿತರ ಪಟ್ಟಿ ವೈರಲ್ ಆಗಿತ್ತು. ಈ ಬಾರಿ ಸುದೀಪ್‌ ಅವರು ಕಾರ್ಯಕ್ರಮವನ್ನು ನಿರೂಪಣೆ ಮಾಡುತ್ತಿಲ್ಲ ಎಂದು ವರದಿಯಾಗಿತ್ತು.ಆದರೆ ಈಗ ಪ್ರೋಮೊ ಶೂಟ್‌ ಫೋಟೊಗಳು ವೈರಲ್‌ ಆಗಿವೆ.

ಸುದೀಪ್ ಸ್ಟೈಲಿಶ್ ಅವತಾರದಲ್ಲಿ ಕಾಣಿಸಿಕೊಂಡಿದ್ದಾರೆ. ಪ್ರೋಮೊಗೆ ಸಂಬಂಧಿಸಿದಂತೆ ಒಂದಷ್ಟು ಫೋಟೊಗಳು ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ.ಸೀಸನ್‌ನಿಂದ ಸೀಸನ್‌ಗೆ ಸುದೀಪ್ ಸಂಭಾವನೆ ಕೂಡ ಹೆಚ್ಚಾಗಿದೆ. ಇನ್ನು ಕಿಚ್ಚ ಬಹಳ ಇಷ್ಟಪಟ್ಟು ಶೋ ನಡೆಸಿಕೊಡುತ್ತಿದ್ದಾರೆ. ಸೆಪ್ಟೆಂಬರ್ 27 ಅಥವಾ ಅಕ್ಟೋಬರ್ 5ರಂದು ಬಿಗ್‌ಬಾಸ್ ಕನ್ನಡ-11 ಆರಂಭವಾಗಲಿದೆ. ಯೂಟ್ಯೂಬರ್ ವರ್ಷಾ ಕಾವೇರಿ, ಕಿರುತೆರೆ ನಟ ವರುಣ್ ಆರಾಧ್ಯ, ತುಕಾಲಿ ಸಂತು ಪತ್ನಿ ಮಾನಸ, ನಟ ಸುನೀಲ್ ರಾವ್, ಮೋಕ್ಷಿತಾ ಪೈ, ದಿವ್ಯಾ ವಸಂತ ಹೀಗೆ ಹಲವರ ಹೆಸರುಗಳು ಈ ಬಾರಿ ದೊಡ್ಮನೆಗೆ ಹೋಗಲು ಕೇಳಿಬರುತ್ತಿದೆ.

ಇದನ್ನೂ ಓದಿ: Bigg Boss Kannada: ಬಿಗ್‌ ಬಾಸ್‌ ಆಫರ್‌ ಬಂದಿದ್ದು ನಿಜ ಎಂದ ನಟಿ ಜ್ಯೋತಿ ರೈ! ಆದರೆ…..

ಸೆಪ್ಟೆಂಬರ್‌ನಲ್ಲೇ ಈ ಬಾರಿ ಸೀಸನ್ 11 ಶುರುವಾಗುವ ನಿರೀಕ್ಷೆಯಿದೆ. ಸಿನಿಮಾ ಹಾಗೂ ಕಿರುತೆರೆ ಕಲಾವಿದರ ಜತೆಗೆ ಬೇರೆ ಬೇರೆ ಕ್ಷೇತ್ರಗಳ ಹಲವರು ದೊಡ್ಮನೆ ಪ್ರವೇಶಿಸಲಿದ್ದಾರೆ. ವಿವಾದಾತ್ಮಕ ವ್ಯಕ್ತಿಗಳನ್ನು ಸಾಧ್ಯವಾದಷ್ಟು ಮಟ್ಟಿಗೆ ದೊಡ್ಮನೆ ಒಳಗೆ ಸೇರಿಸುವ ಪ್ರಯತ್ನ ನಡೆಯುತ್ತಿದೆ.

ಬಿಗ್‌ಬಾಸ್‌ ಕನ್ನಡ ಸೀಸನ್‌ʼ 10 (Bigg Boss Kannada OTT)ರ ಚಾಂಪಿಯನ್‌ ಆಗಿ ಕಾರ್ತಿಕ್‌ ಮಹೇಶ್‌ ಹೊರ ಹೊಮ್ಮಿದರೆ, ಡ್ರೋನ್‌ ಪ್ರತಾಪ್‌ ಎರಡನೇ ಸ್ಥಾನಕ್ಕೆ ತೃಪ್ತಿ ಪಟ್ಟುಕೊಂಡು ರನ್ನರ್‌ ಅಪ್‌ ಆಗಿದ್ದಾರೆ. ಬಿಗ್‌ ಬಾಸ್‌ ಸೀಸನ್‌ 10 ಭರ್ಜರಿ ಟಿಆರ್‌ಪಿಯನ್ನು ಪಡೆದು ವೀಕ್ಷಕರ ಮನ ಸೆಳೆದಿತ್ತು. ಕಿಚ್ಚ ಸುದೀಪ್ ಅವರು ಕಾರ್ಯಕ್ರಮ ನಡೆಸಿಕೊಡಲಿದ್ದಾರೆ. ಸುದೀಪ್ ಆ್ಯಂಕರಿಂಗ್ ನೋಡಲು ಅನೇಕರು ಕಾದಿದ್ದಾರೆ.. ‘ಡ್ರೋನ್’ ಪ್ರತಾಪ್, ಸೋನು ಶ್ರೀನಿವಾಸ್ ಗೌಡ ಅವರಿಗೆ ಅವಕಾಶ ಕೊಟ್ಟಿದ್ದಾರೆ ಎಂಬ ಆರೋಪ ಕೇಳಿ ಬಂದಿತ್ತು.

Continue Reading

ಬಿಗ್ ಬಾಸ್

Bigg boss Hindi: ಬಿಗ್ ಬಾಸ್ 18ರ ಸಂಭಾವ್ಯ ಸ್ಪರ್ಧಿಗಳ ಪಟ್ಟಿ ಇಲ್ಲಿದೆ; ಯಾವಾಗಿಂದ ಶುರು? 

Bigg boss Hindi: ಇದೀಗ ಬಿಗ್ ಬಾಸ್ 18ನೇ ಆವೃತ್ತಿ ರಿಯಾಲಿಟಿ ಶೋವನ್ನು ನಟ ಸಲ್ಮಾನ್ ಖಾನ್ನ ಡೆಸಿಕೊಡಲಿದ್ದಾರೆ. ಜತೆಗೆ ಸ್ಪರ್ಧಿಗಳು ಯಾರೆಲ್ಲ ಎಂಬ ಸಂಭಾವ್ಯ ಪಟ್ಟಿ ಹೊರ ಬಿದ್ದಿದೆ.

VISTARANEWS.COM


on

Bigg boss Hindi list of contestants
Koo

ಬೆಂಗಳೂರು: ಈ ವರ್ಷ, ನಟ ಅನಿಲ್ ಕಪೂರ್ ಅವರು ಸಲ್ಮಾನ್ ಖಾನ್ ಬದಲಿಗೆ ಬಿಗ್ ಬಾಸ್ ಹಿಂದಿ (Bigg boss Hindi) OTT ಯ (Bigg Boss OTT 3) ಮೂರನೇ ಸೀಸನ್‌ನ ನಿರೂಪಕರಾಗಿದ್ದರು. ಪ್ರೇಕ್ಷಕರ ಒಂದು ವರ್ಗ ಅನಿಲ್ ಕಪೂರ್ ಅವರ ನಿರೂಪಣಾ ಶೈಲಿಗೆ ಛೀಮಾರಿ ಹಾಕಿದೆ. ಬಿಗ್‌ ಬಾಸ್‌ ಸೀಸನ್‌ 18ನೇ ಆವೃತ್ತಿಗೆ ಸಲ್ಮಾನ್‌ ಅವರೇ ಹೋಸ್ಟ್‌ ಮಾಡಬೇಕು ಎಂದು ಪ್ರೇಕ್ಷಕರು ಕಮೆಂಟ್‌ ಮೂಲಕ ವ್ಯಕ್ತಪಡಿಸಿದ್ದರು. ಇದೀಗ ಬಿಗ್ ಬಾಸ್ 18ನೇ ಆವೃತ್ತಿ ರಿಯಾಲಿಟಿ ಶೋವನ್ನು ನಟ ಸಲ್ಮಾನ್ ಖಾನ್ನ ಡೆಸಿಕೊಡಲಿದ್ದಾರೆ. ಜತೆಗೆ ಸ್ಪರ್ಧಿಗಳು ಯಾರೆಲ್ಲ ಎಂಬ ಸಂಭಾವ್ಯ ಪಟ್ಟಿ ಹೊರ ಬಿದ್ದಿದೆ.

ಬಾಲಿವುಡ್ ನಟಿ ಇಶಾ ಕೋಪಿಕ್ಕರ್ 18ನೇ ಆವೃತ್ತಿ ಬಿಗ್ ಬಾಸ್ ಶೋನಲ್ಲಿ ಪಾಲ್ಗೊಳ್ಳುವುದು ಖಚಿತವಾಗಿದೆ.ಇಶಾ ಹೊರತಪಡಿಸಿದರೆ ಹಲವು ಹೆಸರು ಕೇಳಿಬರುತ್ತಿದೆ. ಈ ಪೈಕಿ ಸಂಭಾವ್ಯ ಸ್ಪರ್ಧಿಗಳ ಲಿಸ್ಟ್‌ನಲ್ಲಿ ನಟನೆಯಿಂದ ದೂರ ಉಳಿದಿರುವ ಸಮೀರಾ ರೆಡ್ಡಿ ಹೆಸರು ಮುಂಚೂಣಿಯಲ್ಲಿದೆ. ಹಿಂದಿ ಸೀರಿಯಲ್ ನಟ ಶೋಯಿಬ್ ಇಬ್ರಾಹಂ, ನಟಿ ಕಾಶಿಶ್ ಕಪೂರ್, ನಟ ಝ್ಯಾನ್ ಸೈಫಿ, ಪೂಜಾ ಶರ್ಮಾ, ಶೀಝಾನ್ ಖಾನ್, ದಲ್ಜಿತ್ ಕೌರ್ ಸಂಭಾವ್ಯ ಸ್ಪರ್ಧಿಗಳಾಗಿದ್ದಾರೆ. ಬಾಲಿವುಡ್ ಹಿರಿಯ ನಟಿ ರೇಖಾ ಈ ಬಾರಿಯಾ ಹಿಂದಿ ಬಿಗ್ ಬಾಸ್ ಶೋನಲ್ಲಿ ಪಾಲ್ಗೊಳುತ್ತಾರೆ ಅನ್ನೋ ಮಾತುಗಳು ಕೇಳಿಬರುತ್ತಿದೆ. ಸೆಲೆಬ್ರೆಟಿ ಚಾಯ್‌ವಾಲ ಡೋಲಿ ಚಾಯ್‌ವಾಲ ಈ ಬಾರಿಯ ಬಿಗ್ ಬಾಸ್‌ಗೆ ಆಹ್ವಾ ನೀಡಲಾಗಿದೆ ಎನ್ನಲಾಗುತ್ತಿದೆ. ಸಂಭಾವ್ಯ ಪಟ್ಟಿಯಲ್ಲಿ ಈ ಡೋಲಿ ಚಾಯ್‌ವಾಲ್ ಹೆಸರು ಮುಂಚೂಣಿಯಲ್ಲಿದೆ. ಸೋಶಿಯಲ್ ಮೀಡಿಯಾ ಸ್ಟಾರ್ ಫೈಸಲ್ ಶೇಕ್, ಫುಕ್ರಾ ಇನ್ಸಾನ್ ಯೂಟ್ಯೂಬರ್ ಅಭಿಷೇಕ್ ಮಲ್ಹನ್, ಟಿವಿ ನಟಿ ನುಸ್ರತ್ ಜಹಾನ್, ನಟಿ ದೀಪಿಕಾ ಆರ್ಯ ಸಂಭಾವ್ಯ ಸ್ಪರ್ಧಿಗಳ ಲಿಸ್ಟ್‌ನಲ್ಲಿ ಕಾಣಿಸಿಕೊಂಡಿದೆ.ಕಾಮಿಡಿಯನ್ ಹರ್ಷಾ ಬೆನಿವಾಲ್, ಟಿವಿ ನಟಿ ಸುರ್ಭಿ ಜ್ಯೋತಿ, ನಟ ಕರನ್ ಪಟೇಲ್, ನಟ ಅಲೈಸ್ ಕೌಶಿಕ್ ಹೆಸರು ಸಂಭಾವ್ಯ ಪಟ್ಟಿಯಲ್ಲಿ ಸೇರಿಕೊಂಡಿದೆ.

ಇದನ್ನೂ ಓದಿ: Kundapura Kannada Habba: ನನ್ನ ಸಿನಿಮಾ ಕಥೆಗಳಿಗೆ ಊರು, ಯಕ್ಷಗಾನವೇ ಪ್ರೇರಣೆ; ರಿಷಬ್ ಶೆಟ್ಟಿ

ಹಿಂದಿಯ ಬಿಗ್ ಬಾಸ್ 17ನೇ (Bigg Boss 17)ಆವೃತ್ತಿಯ ವಿನ್ನರ್ ಆಗಿ ಸ್ಟ್ಯಾಂಡ್‌ ಅಪ್‌ ಕಮೆಡಿಯನ್ ಮುನಾವರ್ ಫಾರೂಖಿ (Munawar Faruqui) ಅವರು ಹೊರ ಹೊಮ್ಮಿದ್ದರು,ಬಿಗ್ ಬಾಸ್ 17 ಗೆದ್ದಿರುವ ಮುನಾವರ್ ಫರೂಖಿ ಅವರಿಗೆ ಟ್ರೋಫಿ ದೊರೆತಿದ್ದು, ಜತೆಗೆ 50 ಲಕ್ಷ ರೂ. ಬಹುಮಾನ ಕೊಡ ನೀಡಲಾಗಿತ್ತು.

Continue Reading

ಬಿಗ್ ಬಾಸ್

Isha Koppikar: ʻಸೂರ್ಯವಂಶʼ ಖ್ಯಾತಿಯ ನಟಿ ಬಿಗ್‌ ಬಾಸ್‌ಗೆ ಹೋಗೋದು ಫಿಕ್ಸ್‌!

Isha Koppikar:ಇಶಾ ಕೊಪ್ಪಿಕರ್ ಹಿಂದಿ ಜತೆ ಕನ್ನಡ, ತಮಿಳು, ತೆಲುಗು ಹಾಗೂ ಮರಾಠಿ ಸಿನಿಮಾಗಳಲ್ಲಿ ನಟಿಸಿದ್ದಾರೆ. ಅದರಲ್ಲೂ ಬಾಲಿವುಡ್‌ನ ‘ಕಂಪನಿ’, ‘ಕಾಂಠೆ’, ‘ಡಾನ್’ ಅಂತಹ ಯಶಸ್ವಿ ಸಿನಿಮಾಗಳಲ್ಲಿ ನಾಯಕಿಯಾಗಿ ಮಿಂಚಿದ್ದರು.

VISTARANEWS.COM


on

Isha Koppikar Bigg Boss 18 Is Isha Koppikar a confirmed contestant
Koo

ಬೆಂಗಳೂರು: ಸಾಹಸ ಸಿಂಹ ವಿಷ್ಣುವರ್ಧನ್ ಜತೆ ʻಸೂರ್ಯವಂಶʼ ಸಿನಿಮಾದಲ್ಲಿ ನಾಯಕಿಯಾಗಿ ನಟಿಸಿದ್ದ ಮುಂಬೈ ನಟಿ ಇಶಾ ಕೊಪ್ಪಿಕರ್ (Isha Koppikar) ಚಿತ್ರರಂಗದಲ್ಲಿ ಅತ್ಯಂತ ಜನಪ್ರಿಯ ಹೆಸರುಗಳಲ್ಲಿ ಒಬ್ಬರು. ನಟಿ ಹಿಂದಿ ಚಿತ್ರರಂಗದಲ್ಲೂ ಹೆಸರು ಗಳಿಸಿದ್ದಾರೆ.  ಹಿಂದಿಯ ಬಿಗ್​ಬಾಸ್​ಗೆ ಮೊದಲ ಎಂಟ್ರಿಯಾಗಿ ಇಶಾ ಕೊಪ್ಪಿಕರ್​ ಹೆಸರು ಕನ್​ಫರ್ಮ್​ ಆಗಿದೆ. ಈ ಕುರಿತು ಖುದ್ದು ನಟಿ ಹೇಳಿದ್ದಾರೆ ಎನ್ನಲಾಗಿದೆ. 

ಇಶಾ ಕೊಪ್ಪಿಕರ್ ಹಿಂದಿ ಜತೆ ಕನ್ನಡ, ತಮಿಳು, ತೆಲುಗು ಹಾಗೂ ಮರಾಠಿ ಸಿನಿಮಾಗಳಲ್ಲಿ ನಟಿಸಿದ್ದಾರೆ. ಅದರಲ್ಲೂ ಬಾಲಿವುಡ್‌ನ ‘ಕಂಪನಿ’, ‘ಕಾಂಠೆ’, ‘ಡಾನ್’ ಅಂತಹ ಯಶಸ್ವಿ ಸಿನಿಮಾಗಳಲ್ಲಿ ನಾಯಕಿಯಾಗಿ ಮಿಂಚಿದ್ದರು. ಕನ್ನಡದಲ್ಲೂ ಐದು ಸಿನಿಮಾಗಳಲ್ಲಿ ನಟಿಸಿದ್ದಾರೆ. ‘ಸೂರ್ಯವಂಶ’,’ಹೂ ಅಂತಿಯಾ ಹೂಂ ಅಂತಿಯಾ’, ‘ಓ ನನ್ನ ನಲ್ಲೆ’, ‘ಲೂಟಿ’ ಹಾಗೂ ನಾಲ್ಕು ವರ್ಷಗಳ ಹಿಂದಷ್ಟೇ ತೆರೆಕಂಡಿರೋ ‘ಕವಚ’ ಸಿನಿಮಾದಲ್ಲಿ ನಟಿಸಿದ್ದರು. ಇದೀಗ ಅವರು ಹಿಂದಿಯ ಬಿಗ್​ಬಾಸ್​ಗೆ ಮೊದಲ ಸ್ಪರ್ಧಿಯಾಗಿ ಎಂಟ್ರಿ ಕೊಡಲಿದ್ದಾರೆ ಎಂದು ವರದಿಯಾಗಿದೆ.

ಇದನ್ನೂ ಓದಿ: Isha Koppikar: ಖ್ಯಾತ ನಟ ನನಗೆ ಏಕಾಂತದಲ್ಲಿ ಭೇಟಿಯಾಗುವಂತೆ ಹೇಳಿದ್ದ ಎಂದ ʻಸೂರ್ಯವಂಶʼ ನಟಿ!

ಇತ್ತೇಚೆಗೆ ನಟಿ ಕಾಸ್ಟಿಂಗ್ ಕೌಚ್ ಅನುಭವವನ್ನು ಹಂಚಿಕೊಂಡಿದ್ದರು. ಸಿದ್ಧಾರ್ಥ್ ಕಣ್ಣನ್ ಅವರೊಂದಿಗಿನ ಸಂದರ್ಶನದಲ್ಲಿ, ಇಶಾ ಮಾತನಾಡಿ ʻʻಆಗೆಲ್ಲ ಮಿ ಟೂ ಭಿಯಾನ ಇರಲಿಲ್ಲ. ನನ್ನ ಕಾಲದಲ್ಲಿ ಅನೇಕ ನಟಿಯರು ಇಂಡಸ್ಟ್ರಿ ತೊರೆದರು. ಕೆಲವೇ ಕೆಲವರು ಇಂಡಸ್ಟ್ರಿಯಲ್ಲಿ ಇದ್ದರು. ಅದರಲ್ಲಿ ನಾನೂ ಒಬ್ಬಳು. ನಾನು 18 ವರ್ಷವನಿದ್ದಾಗ ನಟ ಕಾಸ್ಟಿಂಗ್ ಕೌಚ್‌ಗಾಗಿ ಸಂಪರ್ಕಿಸಿದರು. ಕೆಲಸ ಸಿಗಬೇಕಾದರೆ ನಟರ ಜೊತೆ ‘ಫ್ರೆಂಡ್ಲಿ’ ಆಗಬೇಕು ಅಂತ ಹೇಳಿದ್ರು. ನೀವು ಯಾವ ಅರ್ಥದಲ್ಲಿ ‘ಫ್ರೆಂಡ್ಲಿ’ ಆಗಿರಬೇಕು ಎಂದು ಹೇಳುತ್ತಿದ್ದೀರಿ ಅಂತ ಅವರಿಗೆ ಮರು ಪ್ರಶ್ನೆ ಮಾಡಿದ್ದೆ ಎಂದಿದ್ದಾರೆ. ಇನ್ನೂ.. ಇದೊಂದೇ ಅಲ್ಲ. ಮತ್ತೊಮ್ಮೆ.. ಮತ್ತೊಬ್ಬ ಸ್ಟಾರ್‌ ನನಗೆ ಸಿಂಗಲ್ ಆಗಿ ಏಕಾಂತದಲ್ಲಿ ಭೇಟಿಯಾಗುವಂತೆ ಹೇಳಿದ್ದ ಎಂದಿದ್ದಾರೆ. ಡ್ರೈವರ್ ಅಥವಾ ಬೇರೆ ಯಾರನ್ನೂ ಜತೆಗೆ ಕರೆದುಕೊಂಡು ಬರಬಾರದು ಎಂಬ ಷರತ್ತನ್ನೂ ಹಾಕಿದ್ದ ಎಂದಿರುವ ಇಶಾ ಕೊಪ್ಪಿಕರ್, ಆ ಕಾಲಕ್ಕೆ ಆತ ಹಿಂದಿ ಚಿತ್ರರಂಗದ ‘ಎ’ ದರ್ಜೆಯ ನಾಯಕನಾಗಿದ್ದ ಎಂದು ಕೂಡ ಹೇಳಿದ್ದಾರೆ. ನನ್ನ ಜೊತೆ ಚಿತ್ರರಂಗದ ಬಂದ ಹಲವಾರು ನಾಯಕಿಯರು ಈ ಕಾಸ್ಟಿಂಗ್ ಕೌಚ್ ಕಾರಣಕ್ಕೆ ಚಿತ್ರರಂಗದಿಂದ ದೂರ ಸರೆದರು ಎಂದು ಹೇಳಿಕೊಂಡಿದ್ದರು.

ಬಾಲಿವುಡ್​ ನಟ ಸಲ್ಮಾನ್​ ಖಾನ್​ ನಡೆಸಿಕೊಡುವ ಬಿಗ್​ಬಾಸ್​ ಷೋ 18ನೇ ಸೀಸನ್​ ಬರುವ ಅಕ್ಟೋಬರ್​ 5ರಿಂದ ಶುರುವಾಗಲಿದೆ.

Continue Reading

ಬಿಗ್ ಬಾಸ್

Bigg Boss Telugu 8: ಬಿಗ್​ಬಾಸ್ ತೆಲುಗು ಸೀಸನ್‌ 8ರ ಪ್ರೋಮೊ ಔಟ್‌; ಸಂಭಾವ್ಯರ ಪಟ್ಟಿಯಲ್ಲಿ ಇಬ್ಬರು ಕನ್ನಡತಿಯರು!

Bigg Boss Telugu 8: ಈಗಾಗಲೇ ಮೂರು ಪ್ರೋಮೋಗಳು ಬಿಡುಗಡೆಯಾಗಿದ್ದು, ಸೀಸನ್ 8ಕ್ಕೆ ಯಾರೆಲ್ಲ ಬರುತ್ತಾರೆ ಎಂಬ ಬಗ್ಗೆ ಕುತೂಹಲ ಕೂಡ ಹೆಚ್ಚಿದೆ. ಕನ್ನಡದವರು ಕೂಡ ಈ ಬಾರಿ ಇರಲಿದ್ದಾರೆ ಎಂದು ವರದಿಯಾಗಿದೆ.

VISTARANEWS.COM


on

Bigg Boss Telugu 8 Confirmed Contestants nagarjuna akkineni host
Koo

ಬಿಗ್​ಬಾಸ್ ತೆಲುಗು (Bigg Boss Telugu 8) ಮತ್ತೆ ಪ್ರಾರಂಭವಾಗುತ್ತಿದೆ. ಸ್ಟಾರ್ ಮಾ ಜನಪ್ರಿಯ ಟಿವಿ ರಿಯಾಲಿಟಿ ಶೋ ಬಿಗ್ ಬಾಸ್ ತೆಲುಗು ಸೀಸನ್ 8 ರ ಹೊಸ ಪ್ರೋಮೊವನ್ನು ಭಾನುವಾರ ಬಿಡುಗಡೆ ಮಾಡಿದೆ. ,ಈ ಶೋಗೆ ಸ್ಪರ್ಧಿಗಳು ಯಾರೆಂಬುದರ ಬಗ್ಗೆ ಚರ್ಚೆಗಳು ಶುರುವಾಗಿವೆ. ಈಗಾಗಲೇ ಮೂರು ಪ್ರೋಮೋಗಳು ಬಿಡುಗಡೆಯಾಗಿದ್ದು, ಸೀಸನ್ 8ಕ್ಕೆ ಯಾರೆಲ್ಲ ಬರುತ್ತಾರೆ ಎಂಬ ಬಗ್ಗೆ ಕುತೂಹಲ ಕೂಡ ಹೆಚ್ಚಿದೆ. ಕನ್ನಡದವರು ಕೂಡ ಈ ಬಾರಿ ಇರಲಿದ್ದಾರೆ ಎಂದು ವರದಿಯಾಗಿದೆ.

ಸಂಭಾವ್ಯ ಅಭ್ಯರ್ಥಿಗಳ ಹೆಸರು ವೈರಲ್ ಆಗುತ್ತಿದೆ. ಅದರಂತೆ ಜ್ಯೋತಿಷ್ಯ ವೇಣುಸ್ವಾಮಿ, ಯೂಟ್ಯೂಬರ್ ಬರೆಲ್ಲಕ್ಕ, ಯೂಟ್ಯೂಬರ್ ಯಾದಂ ರಾಜು ರಿತು ಚೌಧರಿ, ಕಿರುತೆರೆ ತಾರೆಯರಾದ ಅಂಜಲಿ, ಯಶ್ಮಿ ಗೌಡ, ತೇಜಸ್ವಿನಿ ಗೌಡ, ಹಿರಿಯ ನಟಿ ಸನಾ, ನಟ ಅನಿಲ್ ಗೀಲಾ, ಹಾಸ್ಯನಟ ಬುಂಚಿಕ್ ಬಬ್ಲು, ಕಿರಾಕ್ ಆರ್‌ಪಿ, ರಿಂಗ್ ರಿಯಾಜ್, ನಿರೂಪಕಿ ವಿಂಧ್ಯಾ ವಿಶಾಖ, ಪಾಗಲ್ ಪವಿತ್ರಾ ಹೀಗೆ ಹಲವು ಜನರ ಹೆಸರಿದೆ. ಇದರ ಜೊತೆಗೆ ಸುದ್ದಿ ವಾಚಕಿ ಕಲ್ಯಾಣಿ, ನಟಿ ರೇಖಾ ಬೋಜ್, ಸಾವಯವ ಕೃಷಿ ತಜ್ಞ ನೇತ್ರಾ ರೆಡ್ಡಿ, ಧಾರಾವಾಹಿ ನಟ ಇಂದ್ರನೀಲ್ ಸೇನ್‌ಗುಪ್ತ, ನಟ ಅಬ್ಬಾಸ್, ನಟ ರೋಹಿತ್, ಗಾಯಕ ಸಾಕೇತ್ ಕೊಮಂದೂರಿ, ಫೆಮಿನಾ ಮಿಸ್ ಇಂಡಿಯಾ ತೆಲಂಗಾಣ 2023 ರ ಊರ್ಮಿಳಾ ಚೌಹಾಣ್ ಅವರ ಹೆಸರು ಕೂಡ ಇದೆ.

ಇದರಲ್ಲಿ ಯಶ್ಮಿ ಗೌಡ ಕನ್ನಡದಾಕೆ, ಇದರ ಜೊತೆಗೆ ತೇಜಸ್ವಿನಿ ಗೌಡ ಕೂಡ ಕನ್ನಡದವರೇ ಆಗಿದ್ದಾರೆ. ಮೂಲತಃ ಕನ್ನಡದವರಾದ ಇವರು ತೆಲುಗಿನ ಧಾರವಾಹಿಗಳಲ್ಲಿ ಫೇಮಸ್ ಆಗಿದ್ದಾರೆ. . ಬಿಗ್ ಬಾಸ್ ಸೀಸನ್ 8 ಸೆಪ್ಟೆಂಬರ್ 8 ರ ಭಾನುವಾರ ಸಂಜೆ 6 ರಿಂದ ಪ್ರಾರಂಭವಾಗಲಿದೆ. ನಂದಮೂರಿ ಕುಟುಂಬದಿಂದ ತೆಲುಗು ಸಿನೆಮಾ ರಂಗಕ್ಕೆ ನಾಯಕನಾಗಿ ಕಾಲಿಟ್ಟಿರುವ ಚೈತನ್ಯ ಕೃಷ್ಣ ಅವರು ಬಿಗ್‌ಬಾಸ್‌ ಗೆ ಬರಲಿದ್ದಾರೆಂದು ಸುದ್ದಿ ಹಬ್ಬಿದೆ.

ಇದನ್ನೂ ಓದಿ: Bigg Boss Telugu 8: ಬಿಗ್‌ ಬಾಸ್‌ ಮನೆಗೆ ಸೆಲೆಬ್ರಿಟಿ ಜ್ಯೋತಿಷಿ ವೇಣು ಸ್ವಾಮಿ ಎಂಟ್ರಿ?

ಸೆಪ್ಟೆಂಬರ್ 3 ರಂದು ತೆಲುಗು ಬಿಗ್​ಬಾಸ್ ಸೀಸನ್ 7 ಆರಂಭವಾಗಿತ್ತು. 19 ಮಂದಿ ಸ್ಪರ್ಧಿಗಳು ಶೋನಲ್ಲಿ ಭಾಗಿಯಾಗಿದ್ದರು. ಅವರಲ್ಲೇ ಇಬ್ಬರು ವೈಲ್ಡ್ ಕಾರ್ಡ್ ಎಂಟ್ರಿ ಮೂಲಕ ಮತ್ತೆ ಮನೆಗೆ ಬಂದಿದ್ದರು. ಅಲ್ಲಿಗೆ ಒಟ್ಟು 21 ಸ್ಪರ್ಧಿಗಳು ಈ ಬಾರಿಯ ಬಿಗ್​ಬಾಸ್ ತೆಲುಗು ಸೀಸನ್ 7ರಲ್ಲಿ ಆಡಿದರುಪಲ್ಲವಿ ಪ್ರಶಾಂತ್ ವಿನ್ನರ್ ಆಗಿದ್ದು, ಹಲವರಿಗೆ ಖುಷಿ ನೀಡಿತ್ತು. ಆದರೆ ಮೊದಲಿನಿಂದಲೂ ಶಿವಾಜಿ ವಿನ್ನರ್ ಎಂದುಕೊಂಡಿದ್ದ ಹಲವರಿಗೆ ಬೇಸರವಾಗಿತ್ತು.

Continue Reading
Advertisement
Actor darshan
ಪ್ರಮುಖ ಸುದ್ದಿ2 ಗಂಟೆಗಳು ago

Actor Darshan : ನಟ ದರ್ಶನ್ ಬಿಡುಗಡೆಗೆ ಮುಹೂರ್ತ ಫಿಕ್ಸ್; ಜನ್ಮ ಜಾತಕದ ಪ್ರಕಾರ ಶುಭ ಸಮಯ ಶುರು

KEA UGCET 2024
ಬೆಂಗಳೂರು3 ಗಂಟೆಗಳು ago

UGCET 2024 : ದ್ವಿತೀಯ ಪಿಯುಸಿ 3ನೇ ಪರೀಕ್ಷೆಯಲ್ಲಿ ಅರ್ಹರಾದವರಿಗೆ ಆಪ್ಷನ್‌ ದಾಖಲಿಸಲು ಲಿಂಕ್‌ ಓಪನ್‌

ಚಿಕ್ಕೋಡಿ3 ಗಂಟೆಗಳು ago

Physical Abuse: ಬಾಲಕಿಯನ್ನು ಕಬ್ಬಿನ ಗದ್ದೆಗೆ ಕರೆದೊಯ್ದು ಅತ್ಯಾಚಾರವೆಸಗಿ ಕೊಂದಿದ್ದ ನೀಚನಿಗೆ ಗಲ್ಲುಶಿಕ್ಷೆ ವಿಧಿಸಿದ ಕೋರ್ಟ್‌

BBMP plans to make arrangements for food in areas where stray dogs do not get food
ಬೆಂಗಳೂರು4 ಗಂಟೆಗಳು ago

Street Dogs : ಬೀದಿನಾಯಿಗಳ ಹಸಿವು ನೀಗಿಸಲು ಮುಂದಾದ ಬಿಬಿಎಂಪಿ; ಸಾರ್ವಜನಿಕರು ಕೈ ಜೋಡಿಸುವಂತೆ ಮನವಿ

Cm Siddaramaiah
ಬೆಂಗಳೂರು4 ಗಂಟೆಗಳು ago

CM Siddaramaiah : ಹೈಕೋರ್ಟ್ ಏಕಸದಸ್ಯ ಪೀಠ ಆದೇಶ ಪ್ರಶ್ನಿಸಿ ದ್ವಿಸದಸ್ಯ ಪೀಠಕ್ಕೆ ಅಪೀಲು ಅರ್ಜಿ ಸಲ್ಲಿಕೆಗೆ ಸಿಎಂ ಸಿದ್ದರಾಮಯ್ಯ ತೀರ್ಮಾನ

Mahalaya Amavasya on Gandhi Jayanti Poultry Association demands withdrawal of ban on sale of meat
ಬೆಂಗಳೂರು5 ಗಂಟೆಗಳು ago

Mahalaya Amavasya 2024: ಗಾಂಧಿ ಜಯಂತಿಯಂದೇ ಮಹಾಲಯ ಅಮಾವಾಸ್ಯೆ; ಮಾಂಸ ಮಾರಾಟ ನಿಷೇಧ ಹಿಂಪಡೆಯುವಂತೆ ಒತ್ತಾಯ

Road Accident
ಬೆಂಗಳೂರು7 ಗಂಟೆಗಳು ago

Road Accident : ಆಟೋಗೆ ಲೋಡ್‌ ತುಂಬಿದ್ದ ಲಾರಿ ಡಿಕ್ಕಿ; ಚಾಲಕನ ನಿದ್ರೆ ಮಂಪರಿಗೆ ಜೀವ ಬಿಟ್ಟಳು ಯುವತಿ

Techie robbery plans to delete her photo video from lovers mobile phone
ಬೆಂಗಳೂರು8 ಗಂಟೆಗಳು ago

Robbery case : ಲವ್ವರ್ ಮೊಬೈಲ್‌ನಲ್ಲಿದ್ದ ತನ್ನ ಫೋಟೊ, ವಿಡಿಯೊ ಡಿಲೀಟ್‌ ಮಾಡಿಸಲು ಟೆಕ್ಕಿಯ ಖರ್ತನಾಕ್‌ ರಾಬರಿ ಪ್ಲ್ಯಾನ್‌

Hopcoms store loses charm in Bengaluru
ಬೆಂಗಳೂರು8 ಗಂಟೆಗಳು ago

HOPCOMS Outlets : ಬೆಂಗಳೂರಿನಲ್ಲಿ ಚಾರ್ಮ್‌ ಕಳೆದುಕೊಂಡ ಹಾಪ್‌ಕಾಮ್ಸ್‌ ಮಳಿಗೆ

fire accident
ಬೆಂಗಳೂರು ಗ್ರಾಮಾಂತರ9 ಗಂಟೆಗಳು ago

Fire Accident : ಹೊಸೂರು ಸಮೀಪದ ಟಾಟಾ ಕಂಪೆನಿಯಲ್ಲಿ ಭಾರಿ ಅಗ್ನಿ ಅವಘಡ; ಪ್ರಾಣ ಉಳಿಸಿಕೊಳ್ಳಲು ಓಡಿ ಬಂದ ಕಾರ್ಮಿಕರು ‌

Kannada Serials
ಕಿರುತೆರೆ12 ತಿಂಗಳುಗಳು ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ12 ತಿಂಗಳುಗಳು ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

galipata neetu
ಕಿರುತೆರೆ10 ತಿಂಗಳುಗಳು ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ1 ವರ್ಷ ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ12 ತಿಂಗಳುಗಳು ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ12 ತಿಂಗಳುಗಳು ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ11 ತಿಂಗಳುಗಳು ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ10 ತಿಂಗಳುಗಳು ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ1 ವರ್ಷ ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ10 ತಿಂಗಳುಗಳು ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Sudeep's birthday location shift
ಸ್ಯಾಂಡಲ್ ವುಡ್4 ವಾರಗಳು ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್1 ತಿಂಗಳು ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ1 ತಿಂಗಳು ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 ತಿಂಗಳುಗಳು ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 ತಿಂಗಳುಗಳು ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 ತಿಂಗಳುಗಳು ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 ತಿಂಗಳುಗಳು ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 ತಿಂಗಳುಗಳು ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 ತಿಂಗಳುಗಳು ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

karnataka rain
ಮಳೆ2 ತಿಂಗಳುಗಳು ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

ಟ್ರೆಂಡಿಂಗ್‌