Kerala Governor VS LDF | ಡೀಮ್ಡ್ ವಿವಿ ಕುಲಾಧಿಪತಿ ಹುದ್ದೆಯಿಂದ ರಾಜ್ಯಪಾಲರನ್ನು ಕೆಳಗಿಳಿಸಿದ ಕೇರಳ ಸರ್ಕಾರ - Vistara News

ದೇಶ

Kerala Governor VS LDF | ಡೀಮ್ಡ್ ವಿವಿ ಕುಲಾಧಿಪತಿ ಹುದ್ದೆಯಿಂದ ರಾಜ್ಯಪಾಲರನ್ನು ಕೆಳಗಿಳಿಸಿದ ಕೇರಳ ಸರ್ಕಾರ

ಕೇರಳ ವಿವಿಗಳ ಕುಲಾಧಿಪತಿ ಹುದ್ದೆಯಿಂದ ರಾಜ್ಯಪಾಲರನ್ನು ತೆಗೆದುಹಾಕುವ ಕುರಿತು ತೀರ್ಮಾನ ಕೈಗೊಂಡ ಬೆನ್ನಲ್ಲೇ ರಾಜ್ಯ ಸರ್ಕಾರವು ಕೇರಳ ಕಲಾಮಂಡಲಂ ಡೀಮ್ಡ್‌ ವಿಶ್ವವಿದ್ಯಾಲಯದ ಕುಲಾಧಿಪತಿ ಹುದ್ದೆಯಿಂದ ಆರಿಫ್‌ ಮೊಹಮ್ಮದ್‌ ಖಾನ್‌ (Kerala Governor VS LDF) ಅವರನ್ನು ಕೆಳಗಿಳಿಸಿದೆ.

VISTARANEWS.COM


on

Kerala Governer
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ತಿರುವನಂತಪುರಂ: ಕೇರಳದಲ್ಲಿ ರಾಜ್ಯಪಾಲ ಆರಿಫ್‌ ಮೊಹಮ್ಮದ್‌ ಖಾನ್‌ ಹಾಗೂ ಪಿಣರಾಯಿ ವಿಜಯನ್‌ ನೇತೃತ್ವದ ಎಲ್‌ಡಿಎಫ್‌ ಸರ್ಕಾರದ ನಡುವಿನ ಸಂಘರ್ಷ (Kerala Governor VS LDF) ತಾರಕಕ್ಕೇರಿದೆ. ಕೇರಳದ ವಿಶ್ವವಿದ್ಯಾಲಯಗಳ ಕುಲಾಧಿಪತಿ ಹುದ್ದೆಯಿಂದ ರಾಜ್ಯಪಾಲರನ್ನು ತೆಗೆದುಹಾಕುವ ಕುರಿತು ತೀರ್ಮಾನ ಕೈಗೊಂಡ ಬೆನ್ನಲ್ಲೇ ರಾಜ್ಯ ಸರ್ಕಾರವು ಕೇರಳ ಕಲಾಮಂಡಲಂ ಡೀಮ್ಡ್‌ ವಿಶ್ವವಿದ್ಯಾಲಯದ ಕುಲಾಧಿಪತಿ ಹುದ್ದೆಯಿಂದ ಆರಿಫ್‌ ಮೊಹಮ್ಮದ್‌ ಖಾನ್‌ ಅವರನ್ನು ಕೆಳಗಿಳಿಸಿದೆ.

ಕೇರಳದ ಹಲವು ವಿಶ್ವವಿದ್ಯಾಲಯಗಳಿಗೆ ಕುಲಪತಿಗಳನ್ನು ನೇಮಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿತ್ತು. ಆದರೆ, ಕೂಡಲೇ ಒಂಬತ್ತು ವಿವಿಗಳ ಕುಲಪತಿಗಳು ರಾಜೀನಾಮೆ ನೀಡಬೇಕು ಎಂದು ಆರಿಫ್‌ ಮೊಹಮ್ಮದ್‌ ಖಾನ್‌ ಆದೇಶಿಸಿದ್ದರು. ಇದಾದ ಬಳಿಕ ಕೇರಳ ಸರ್ಕಾರ ಹಾಗೂ ರಾಜ್ಯಪಾಲರ ಮಧ್ಯೆ ತೀವ್ರ ಬಿಕ್ಕಟ್ಟು ಉಂಟಾಗಿದೆ.

ಇದೇ ಕಾರಣಕ್ಕೆ ಒಂದು ಹೆಜ್ಜೆ ಮುಂದೆ ಇಟ್ಟಿರುವ ಪಿಣರಾಯಿ ಸರ್ಕಾರವು, ವಿವಿಗಳ ಕುಲಾಧಿಪತಿ ಹುದ್ದೆಯಿಂದ ರಾಜ್ಯಪಾಲರನ್ನು ಕೆಳಗಿಳಿಸುವ ಕುರಿತು ಸುಗ್ರೀವಾಜ್ಞೆ ಹೊರಡಿಸಲು ತೀರ್ಮಾನಿಸಿದೆ. ಇಂತಹ ನಿರ್ಧಾರ ಕೈಗೊಂಡ ಬೆನ್ನಲ್ಲೇ ಕೇರಳ ಕಲಾಮಂಡಲಂ ವಿವಿ ಕುಲಾಧಿಪತಿ ಹುದ್ದೆಯಿಂದ ರಾಜ್ಯಪಾಲರನ್ನು ಕೆಳಗಿಳಿಸಿದೆ. ಪಶ್ಚಿಮ ಬಂಗಾಳದಲ್ಲಿ ಈಗಾಗಲೇ ರಾಜ್ಯಪಾಲರನ್ನು ಸರ್ಕಾರಿ ವಿವಿಗಳ ಕುಲಾಧಿಪತಿ ಹುದ್ದೆಯಿಂದ ತೆರವುಗೊಳಿಸುವ ದಿಸೆಯಲ್ಲಿ ವಿಧೇಯಕ ಮಂಡಿಸಲಾಗಿದೆ.

ಇದನ್ನೂ ಓದಿ | Kerala Governor | ಕುಲಪತಿಗಳ ರಾಜೀನಾಮೆಗೆ ಕೇರಳ ರಾಜ್ಯಪಾಲ ಆದೇಶ, ಇಂದು ಸಂಜೆ ಹೈಕೋರ್ಟ್‌ನಲ್ಲಿ ವಿಚಾರಣೆ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Indian Chutneys: ವಿಶ್ವದ ಟಾಪ್ 50 ಅಚ್ಚುಮೆಚ್ಚಿನ ತಿನಿಸುಗಳಲ್ಲಿ ಭಾರತದ ಈ ಎರಡು ಚಟ್ನಿಗಳು!

Indian Chutneys: ಅಡುಗೆ ಎಂಬ ಶಬ್ದ ಕಿವಿಯ ಮೇಲೆ ಇದ್ದರೆ ಹೊಟ್ಟೆ ಜಾಗೃತವಾಗುತ್ತದೆ. ರುಚಿಯಾದ ಅಡುಗೆಯನ್ನು ಚಪ್ಪರಿಸಿ ತಿನ್ನುವುದೇ ಒಂದು ಭಾಗ್ಯ. ಇನ್ನು ಮಸಾಲೆ ಸಾಮಗ್ರಿಗಳನ್ನು ಬಳಸಿ ಮಾಡುವ ಭಾರತದ ಅಡುಗೆಗಳು ಸಾಕಷ್ಟು ಪ್ರಸಿದ್ಧಿಯನ್ನು ಪಡೆದಿವೆ. ಭಾರತದ ಅಡುಗೆಗೆ ಈಗ ಇನ್ನೊಂದು ಗರಿ ಮೂಡಿದೆ. ಅದೇನೆಂದರೆ ಊಟದ ಎಲೆಯ ತುದಿಯ ಮೇಲೆ ಬೀಳುವ ಚಟ್ನಿ  ಈಗ ವಿಶ್ವದ 50 ಡಿಪ್‌ ಗಳಲ್ಲಿ ಸ್ಥಾನ ಪಡೆದಿದೆಯೆಂತೆ.  

VISTARANEWS.COM


on

Indian Chutneys
Koo

ಬೆಂಗಳೂರು: ಚಟ್ನಿ ಎಂದಾಗ ಬಾಯಲ್ಲಿ ನೀರು ಬರುವುದು ಸಹಜ. ದೋಸೆ, ಇಡ್ಲಿ ಮಾಡಿದಾಗ ಸಾಂಬಾರಿನ ಹಂಗಿಲ್ಲದೇ ಚಟ್ನಿ ಜೊತೆ ಇವುಗಳನ್ನು ಸವಿಯಬಹುದು. ಇನ್ನು ಬಿಸಿ ಬಿಸಿ ಅನ್ನದ (Rice) ಜೊತೆಗೆ ಈ ಚಟ್ನಿಯ ಕಾಂಬಿನೇಷನ್‌ ಸೂಪರ್‌ ಆಗಿರುತ್ತದೆ. ಹೆಚ್ಚಾಗಿ  ನಾವು ಕೊತ್ತಂಬರಿಸೊಪ್ಪಿನ ಚಟ್ನಿ, ಮಾವಿನಕಾಯಿ ಚಟ್ನಿ (Mango Chutney), ಟೊಮೆಟೊ ಚಟ್ನಿ, ಶೇಂಗಾ ಚಟ್ನಿ ಮಾಡುತ್ತೇವೆ. ಇನ್ನು ಹಲವು ಬಗೆಯ ತರಕಾರಿಗಳನ್ನು ಬಳಸಿ ರುಚಿ ರುಚಿಯಾದ ಚಟ್ನಿಗಳನ್ನು ಮಾಡಬಹುದು. ಚಟ್ನಿಯ ಕುರಿತು ಯಾಕಿಷ್ಟು ಪೀಠಿಕೆಯೆಂದರೆ, ಇದೀಗ ಭಾರತದ ಚಟ್ನಿಗಳಲ್ಲಿ (Indian Chutneys)ಎರಡು ಚಟ್ನಿಗಳು ವಿಶ್ವದ 50 ಡಿಪ್ ಗಳಲ್ಲಿ ಸ್ಥಾನ ಪಡೆದಿವೆಯಂತೆ!

ಟೇಸ್ಟ್ ಅಟ್ಲಾಸ್ ಇತ್ತೀಚೆಗೆ ಜೂನ್ 2024ರ  ಶ್ರೇಯಾಂಕದ ಪ್ರಕಾರ ವಿಶ್ವದ 50 ಅತ್ಯುತ್ತಮ ಡಿಪ್ ಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಅದರಲ್ಲಿ ಭಾರತೀಯ ಮಿಕ್ಸ್ ಚಟ್ನಿ  42ನೇ ಸ್ಥಾನ ಪಡೆದುಕೊಂಡಿದೆ. ಈ ಚಟ್ನಿಯನ್ನು ಬೇಯಿಸಿದ ಹಣ್ಣು ಮತ್ತು ತರಕಾರಿಗಳಿಂದ ತಯಾರಿಸಲಾಗುತ್ತದೆ. ಹಣ್ಣು ಹಾಗೂ ತರಕಾರಿಗಳನ್ನು ಸಣ್ಣ ತುಂಡುಗಳಾಗಿ ಕತ್ತರಿಸಿ ಅದಕ್ಕೆ ಜೀರಿಗೆ, ಏಲಕ್ಕಿ, ಹುಣಸೆಹಣ್ಣು, ಶುಂಠಿ ಮತ್ತು ಅರಿಶಿನದಂತಹ ವಿವಿಧ ಮಸಾಲೆಗಳನ್ನು ಬೆರೆಸಿ ತಯಾರಿಸಲಾಗುತ್ತದೆಯಂತೆ. ಇದನ್ನು “ಭಾರತದ ರಾಷ್ಟ್ರೀಯ ಕಾಂಡಿಮೆಂಟ್ಸ್”ಎಂದು ಕರೆಯಲಾಗಿದೆ. ಹಾಗೇ ಟೇಸ್ಟ್ ಅಟ್ಲಾಸ್ ನ ಪಟ್ಟಿಯಲ್ಲಿ 47 ನೇ ಸ್ಥಾನದಲ್ಲಿ ನಮಗೆ ಪ್ರಿಯವಾದಂತಹ ಕೊತ್ತಂಬರಿ ಚಟ್ನಿ (ಧನಿಯಾ ಚಟ್ನಿ) ಹಾಗೂ ಕೊನೆಯ ಅಂದರೆ 50 ನೇ ಸ್ಥಾನದಲ್ಲಿ ಮಾವಿನ ಚಟ್ನಿ ಇದೆ. ಇದನ್ನು ಮಾವಿನ ಹಣ್ಣಿನಿಂದ ತಯಾರಿಸಲಾಗುತ್ತದೆ. ಈ ಮಾವಿನ ಚಟ್ನಿ ಹುಳಿ, ಸಿಹಿ ಮತ್ತು ಮಸಾಲೆಯ ಸುವಾಸನೆಯಿಂದ ಕೂಡಿತ್ತು ಎನ್ನಲಾಗಿದೆ.

ಅಲ್ಲದೇ ಈ ಪಟ್ಟಿಯಲ್ಲಿ ಲೆಬನಾನ್ ನಿಂದ ಟೌಮ್ ಮೊದಲ ಸ್ಥಾನದಲ್ಲಿದ್ದರೆ , ಮೆಕ್ಸಿಕನ್ ನ ಜನಪ್ರಿಯ ಡಿಲೈಟ್ ಗ್ವಾಕಮೋಲ್ 4ನೇ ಸ್ಥಾನದಲ್ಲಿದೆ. ಹಮ್ಮಸ್ 10 ನೇ ಸ್ಥಾನವನ್ನು ಪಡೆದುಕೊಂಡಿದೆ.

ಇದಕ್ಕೂ ಮೊದಲು ಹಲವಾರು ಭಾರತೀಯ ಭಕ್ಷ್ಯಗಳು ಟೇಸ್ಟ್ ಅಟ್ಲಾಸ್ ನ ಟಾಪ್ 50 ಪಟ್ಟಿಗಳಲ್ಲಿ ಸ್ಥಾನ ಪಡೆದಿತ್ತು. ವಡಾ ಪಾವ್, ಮಹಾರಾಷ್ಟ್ರದ ಪ್ರಸಿದ್ಧ ಬೀದಿ ಶೈಲಿಯ ತಿಂಡಿ ವಿಶ್ವದ ಅತ್ಯುತ್ತಮ ಸ್ಯಾಂಡ್ ವಿಚ್ ಗಳಲ್ಲಿ ಹೆಸರು ಪಡೆದಿವೆ.  ಅಷ್ಟೇ ಅಲ್ಲದೇ ಮೂರು ಭಾರತೀಯ ಸಿಹಿತಿಂಡಿಗಳು ವಿಶ್ವದ 10 ಅತ್ಯುತ್ತಮ ರೈಸ್ ಪುಡಿಂಗ್ ಗಳಲ್ಲಿ ಸ್ಥಾನ ಪಡೆದಿವೆ.

ಇದೇ ರೀತಿ ಭಾರತೀಯ ಎಲ್ಲಾ ಭಕ್ಷ್ಯಗಳು ವಿಶ್ವದ ಎಲ್ಲಾ ಕಡೆ ಮೆಚ್ಚುಗೆಯನ್ನು ಗಳಿಸುವಂತಾಗಲಿ. ಎಲ್ಲರ ನಾಲಿಗೆಯ ರುಚಿಯನ್ನು ಹೆಚ್ಚಿಸುವಂತಾಗಲಿ.

Continue Reading

ದೇಶ

Samsung: ಕ್ಯೂಎಲ್ಇಡಿ 4ಕೆ ಪ್ರೀಮಿಯಂ ಟಿವಿ ಸರಣಿ ಬಿಡುಗಡೆ ಮಾಡಿದ ಸ್ಯಾಮ್‌ಸಂಗ್

Samsung: ಸ್ಯಾಮ್‌ಸಂಗ್ ಇಂದು 2024 ಕ್ಯೂಎಲ್ಇಡಿ 4ಕೆ ಟಿವಿ ಸರಣಿಯನ್ನು ಭಾರತದಲ್ಲಿ ರೂ.65990 ರ ಆರಂಭಿಕ ಬೆಲೆಯಲ್ಲಿ ಬಿಡುಗಡೆ ಮಾಡಿದ್ದು, 2024 ಕ್ಯೂಎಲ್ಇಡಿ 4ಕೆ ಟಿವಿ ಉತ್ಪನ್ನ ಶ್ರೇಣಿಯು ಪ್ರೀಮಿಯಂ ಫೀಚರ್‌ಗಳ ಸಮೃದ್ಧಿಯನ್ನು ಹೊಂದಿದೆ. 2024 ಕ್ಯೂಎಲ್ಇಡಿ 4ಕೆ ಟಿವಿಯು 55”, 65” ಮತ್ತು 75” ಈ ಮೂರು ಗಾತ್ರಗಳಲ್ಲಿ ದೊರೆಯಲಿದೆ. ಕ್ವಾಂಟಮ್ ಪ್ರೊಸೆಸರ್ ಲೈಟ್ 4ಕೆ ಎಂಬ ಪ್ರೊಸೆಸರ್ ನಿಂದ ಚಾಲಿತವಾಗಿರುವ 2024 ಕ್ಯೂಎಲ್ಇಡಿ 4ಕೆ ಟಿವಿ ಸರಣಿಯು ಕ್ವಾಂಟಮ್ ಡಾಟ್ ಮತ್ತು ಕ್ವಾಂಟಮ್ ಎಚ್‌ಡಿಆರ್‌ ಫೀಚರ್ ಹೊಂದಿದೆ.

VISTARANEWS.COM


on

Samsung launches 2024 QLED 4K premium TV series
Koo

ಬೆಂಗಳೂರು: ಭಾರತದ ಅತಿದೊಡ್ಡ ಗ್ರಾಹಕ ಎಲೆಕ್ಟ್ರಾನಿಕ್ಸ್ ಬ್ರ್ಯಾಂಡ್ ಆಗಿರುವ ಸ್ಯಾಮ್‌ಸಂಗ್ (Samsung) ಇಂದು 2024 ಕ್ಯೂಎಲ್ಇಡಿ 4ಕೆ ಟಿವಿ ಸರಣಿಯನ್ನು ಭಾರತದಲ್ಲಿ ರೂ.65990 ರ ಆರಂಭಿಕ ಬೆಲೆಯಲ್ಲಿ ಬಿಡುಗಡೆ ಮಾಡಿದೆ. 2024 ಕ್ಯೂಎಲ್ಇಡಿ 4ಕೆ ಟಿವಿ ಉತ್ಪನ್ನ ಶ್ರೇಣಿಯು ಪ್ರೀಮಿಯಂ ಫೀಚರ್‌ಗಳ ಸಮೃದ್ಧಿಯನ್ನು ಹೊಂದಿದೆ.

2024 ಕ್ಯೂಎಲ್ಇಡಿ 4ಕೆ ಟಿವಿಯು 55”, 65” ಮತ್ತು 75” ಈ ಮೂರು ಗಾತ್ರಗಳಲ್ಲಿ ದೊರೆಯಲಿದ್ದು, ಈ ಉತ್ಪನ್ನ ಶ್ರೇಣಿಯು ಇಂದಿನಿಂದ Samsung.com ಮತ್ತು Amazon.in ಸೇರಿದಂತೆ ಹಲವು ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಮಾರಾಟಕ್ಕೆ ಲಭ್ಯವಿದೆ.

2024 ಕ್ಯೂಎಲ್ಇಡಿ 4ಕೆ ಟಿವಿ ಸರಣಿ ವಿಶೇಷತೆ

ಕ್ವಾಂಟಮ್ ಪ್ರೊಸೆಸರ್ ಲೈಟ್ 4ಕೆ ಎಂಬ ಪ್ರೊಸೆಸರ್ ನಿಂದ ಚಾಲಿತವಾಗಿರುವ 2024 ಕ್ಯೂಎಲ್ಇಡಿ 4ಕೆ ಟಿವಿ ಸರಣಿಯು ಕ್ವಾಂಟಮ್ ಡಾಟ್ ಮತ್ತು ಕ್ವಾಂಟಮ್ ಎಚ್‌ಡಿಆರ್‌ ಫೀಚರ್ ಹೊಂದಿದ್ದು, ಜತೆಗೆ 100% ಬಣ್ಣಗಳ ಶ್ರೀಮಂತಿಕೆಯ ಅನುಭವವನ್ನು ಒದಗಿಸುತ್ತದೆ. ಇದಲ್ಲದೇ, ಈ ಸರಣಿಯು 4ಕೆ ಅಪ್‌ಸ್ಕೇಲಿಂಗ್‌ ತಂತ್ರಜ್ಞಾನ ಹೊಂದಿದ್ದು, ಈ ತಂತ್ರಜ್ಞಾನವು ಬಳಕೆದಾರರು ಹೈ ರೆಸಲ್ಯೂಶನ್ 4ಕೆ ಗುಣಮಟ್ಟದಲ್ಲಿ ದೃಶ್ಯಗಳನ್ನು ಆನಂದಿಸಲು ಅನುವು ಮಾಡಿಕೊಡುತ್ತದೆ. ಕ್ಯೂ-ಸಿಂಫನಿ ಸೌಂಡ್ ಟೆಕ್ನಾಲಜಿ, ಡ್ಯುಯಲ್ ಎಲ್‌ಇಡಿ, ಗೇಮಿಂಗ್‌ಗಾಗಿ ಮೋಷನ್ ಎಕ್ಸಲರೇಟರ್ ಮತ್ತು ಪ್ಯಾಂಟೋನ್ ಮೌಲ್ಯೀಕರಣ, ಅತ್ಯುತ್ತಮ ಬಣ್ಣದ ಸಂಯೋಜನೆ ಇತ್ಯಾದಿ ಹೊಂದಿರುವ ಈ ಟಿವಿಯು ಗ್ರಾಹಕರ ವಿಶ್ವಾಸಾರ್ಹ ಉತ್ಪನ್ನವಾಗಿ ಮೂಡಿಬಂದಿದೆ.

ಇದನ್ನೂ ಓದಿ: Kannada New Movie: ಹಳ್ಳಿಗಳನ್ನು ಉಳಿಸುವ ಹುಡುಗರ ಕಥೆ ʻಸಂಭವಾಮಿ ಯುಗೇ ಯುಗೇʼ: ಇದೇ ಜೂನ್‌ 21ಕ್ಕೆ ತೆರೆಗೆ!

ಸ್ಯಾಮ್‌ಸಂಗ್ ಇಂಡಿಯಾದ ವಿಷುಯಲ್ ಡಿಸ್‌ಪ್ಲೇ ಬಿಸಿನೆಸ್‌ನ ಹಿರಿಯ ಉಪಾಧ್ಯಕ್ಷ ಮೋಹನ್‌ದೀಪ್ ಸಿಂಗ್ ಈ ಕುರಿತು ಮಾತನಾಡಿ, ದೃಶ್ಯ ವೀಕ್ಷಣಾ ಕ್ರಮವು ಕಳೆದ ಎರಡು ವರ್ಷಗಳಲ್ಲಿ ಬಹಳ ವೇಗದ ಬದಲಾವಣೆ ಕಂಡಿದೆ. ಬಳಕೆದಾರರು ಹೆಚ್ಚು ತೀವ್ರ ಅನುಭವ ಒದಗಿಸುವ ಮತ್ತು ಪ್ರೀಮಿಯಂ ವೀಕ್ಷಣೆಯ ಅನುಭವವನ್ನು ಹೊಂದಲು ಬಯಸುತ್ತಾರೆ. ಈ ಬೇಡಿಕೆಯನ್ನು ಪೂರೈಸಲು ನಾವು 2024 ಕ್ಯೂಎಲ್ಇಡಿ 4ಕೆ ಟಿವಿ ಸರಣಿಯನ್ನು ಪ್ರಾರಂಭಿಸಿದ್ದೇವೆ. ಈ ಮೂಲಕ ಪ್ರೀಮಿಯಂ ಮತ್ತು ಉನ್ನತ ಮಟ್ಟದ ವೀಕ್ಷಣೆಯ ಅನುಭವ ಒದಗಿಸುವ ನಿಟ್ಟಿನಲ್ಲಿ ಒಂದು ಮೆಟ್ಟಿಲು ಮೇಲೆ ಹೋಗಿದ್ದೇವೆ.

ಈ ಹೊಸ ಟಿವಿ ಸರಣಿಯು 4ಕೆ ಅಪ್‌ಸ್ಕೇಲಿಂಗ್ ಫೀಚರ್ ಹೊಂದಿದ್ದು, ದೃಶ್ಯ ಗುಣಮಟ್ಟವನ್ನು ಒದಗಿಸುತ್ತದೆ. ಪರದೆಯ ಮೇಲೆ ಕಾಣಿಸುವ ದೃಶ್ಯಗಳನ್ನು 4ಕೆ ಗುಣಮಟ್ಟಕ್ಕೆ ಬದಲಿಸುತ್ತದೆ. ಈ ಮೂಲಕ ಗ್ರಾಹಕರ ಒಟ್ಟಾರೆ ವೀಕ್ಷಣೆಯ ಅನುಭವವನ್ನು ಹಲವು ಹಂತಗಳಲ್ಲಿ ಉನ್ನತೀಕರಿಸುತ್ತದೆ ಎಂದು ತಿಳಿಸಿದ್ದಾರೆ.

ಕ್ವಾಂಟಮ್ ತಂತ್ರಜ್ಞಾನ

ಉದ್ಯಮದ ಮಾನದಂಡಗಳನ್ನು ಮೀರಿ 2024 ಕ್ಯೂಎಲ್ಇಡಿ 4ಕೆ ಟಿವಿ ಸರಣಿಯು ಕ್ವಾಂಟಮ್ ಪ್ರೊಸೆಸರ್ ಲೈಟ್ 4ಕೆ ಪ್ರೊಸೆಸರ್‌ನಿಂದ ಕಾರ್ಯನಿರ್ವಹಿಸುತ್ತಿದೆ. ಈ ಪ್ರೊಸೆಸರ್ ವೀಕ್ಷಣೆ ಮತ್ತು ಆಡಿಯೋ ಗುಣಮಟ್ಟವನ್ನು ಉತ್ತಮಗೊಳಿಸುವ ಶಕ್ತಿಶಾಲಿ ಪ್ರೊಸೆಸರ್ ಆಗಿದೆ. ಹೆಚ್ಚುವರಿಯಾಗಿ ಕ್ವಾಂಟಮ್ ಎಚ್‌ಡಿಆರ್‌ ಫೀಚರ್ ಇದ್ದು, ಸಿನಿಮೀಯ ಪ್ರಮಾಣದಲ್ಲಿ ವಿಸ್ತಾರ ವ್ಯಾಪ್ತಿಯ ಕಾಂಟ್ರಾಸ್ಟ್ ಅನ್ನು ಒದಗಿಸುತ್ತದೆ. ಕ್ವಾಂಟಮ್ ಡಾಟ್ ತಂತ್ರಜ್ಞಾನವು ಜೀವನದ ತರಹವೇ ದೃಶ್ಯಗಳನ್ನು ಕಾಣಿಸುವ ಸೌಲಭ್ಯ ಒದಗಿಸುತ್ತಿದ್ದು, ಬಣ್ಣಗಳ ಒಂದು ಬಿಲಿಯನ್ ಶೇಡ್‌ಗಳನ್ನು ಕಾಣಿಸುತ್ತದೆ. ಜತೆಗೆ ವಿವಿಧ ಹಂತದ ಬ್ರೈಟ್‌ನೆಸ್‌ನಲ್ಲಿಯೂ ಬಣ್ಣಗಳನ್ನು ನಿಖರವಾಗಿ ಪ್ರದರ್ಶಿಸುತ್ತದೆ.

ಇದನ್ನೂ ಓದಿ: UGCET 2024: ಸಿಇಟಿ ಅಪ್‌ಡೇಟ್‌; ಮೊದಲ ದಿನ 250 ವಿಕಲಚೇತನರ ವೈದ್ಯಕೀಯ ತಪಾಸಣೆ

ಅತ್ಯುತ್ತಮ ದೃಶ್ಯ ಗುಣಮಟ್ಟ

ಅಂತಿಮ 4ಕೆ ಅಪ್‌ಸ್ಕೇಲಿಂಗ್ ಫೀಚರ್ ಗ್ರಾಹಕರಿಗೆ ಉತ್ತಮವಾದ ದೃಶ್ಯ ಅನುಭವವನ್ನು ನೀಡುತ್ತದೆ. ಬಳಕೆದಾರರು ವೀಕ್ಷಿಸುತ್ತಿರುವ ಕಂಟೆಂಟ್‌ನ ರೆಸಲ್ಯೂಶನ್ ಏನೇ ಆಗಿದ್ದರೂ ಟಿವಿಗಳು ಸ್ವಯಂಚಾಲಿತವಾಗಿ ಟೋನಿಯರ್-4ಕೆ ಮಟ್ಟವನ್ನು ಅಪ್‌ಗ್ರೇಡ್ ಮಾಡುವುದರಿಂದ ಅವರು 4ಕೆ ಗುಣಮಟ್ಟದ ದೃಶ್ಯಗಳನ್ನು ಆನಂದಿಸಬಹುದು. ಮೇಲಾಗಿ, ಪ್ಯಾಂಟೋನ್ ಮೌಲ್ಯೀಕರಣವು 2000ಕ್ಕೂ ಬಣ್ಣಗಳನ್ನು ಹೆಚ್ಚು ನಿಖರವಾಗಿ ತೋರಿಸುತ್ತದೆ ಮತ್ತು ಡ್ಯುಯಲ್ ಎಲ್ಇಡಿಯ ನವೀನ ಬ್ಯಾಕ್‌ಲೈಟಿಂಗ್ ತಂತ್ರಜ್ಞಾನವು ವೀಕ್ಷಿಸುತ್ತಿರುವ ದೃಶ್ಯದ ಪ್ರಕಾರಕ್ಕೆ ತಕ್ಕಂತೆ ಬ್ಯಾಕ್‌ಲೈಟ್ ಬಣ್ಣದ ಟೋನ್ ಅನ್ನು ಬದಲಿಸುವ ಮೂಲಕ ಉತ್ತಮ ಕಾಂಟ್ರಾಸ್ಟ್ ನ ದೃಶ್ಯವನ್ನು ವೀಕ್ಷಿಸುವ ಸೌಕರ್ಯ ಒದಗಿಸುತ್ತದೆ.

ಭವಿಷ್ಯಕ್ಕೆ ತಕ್ಕ ವಿನ್ಯಾಸ

2024 ಕ್ಯೂಎಲ್ಇಡಿ 4ಕೆ ಟಿವಿ ಸರಣಿಯು ಏರ್‌ಸ್ಲಿಮ್ ವಿನ್ಯಾಸವನ್ನು ಹೊಂದಿದೆ. ಈ ವಿನ್ಯಾಸವು ನಿಮ್ಮ ಟಿವಿಯು ಗೋಡೆಗೆ ಉತ್ತಮವಾಗಿ ಹೊಂದಿಕೆಯಾಗುತ್ತದೆ. ಈ ಟಿವಿಯ ಸ್ಕ್ರೀನ್ ಮತ್ತು ಅಡ್ಜಸ್ಟೇಬಲ್ ಸ್ಟ್ಯಾಂಡ್ ಹೋಮ್ ಎಂಟರ್ಟೈನ್ಮೆಂಟ್ ಸೆಟಪ್ ಅನ್ನು ಬಹಳ ಅದ್ಭುತವಾಗಿ ಕಾಣಿಸುತ್ತದೆ. ಈ ಟಿವಿ ಸರಣಿಯು ಸೋಲಾರ್‌ಸೆಲ್ ರಿಮೋಟ್‌ ಅನ್ನು ಹೊಂದಿದ್ದು, ಸುಸ್ಥಿರತೆಯ ಗುಣವನ್ನು ಹೊಂದಿದೆ. ಈ ರಿಮೋಟ್ ಬ್ಯಾಟರಿಗಳ ಅಗತ್ಯವಿಲ್ಲದೆ ಕಾರ್ಯನಿರ್ವಹಿಸುತ್ತದೆ. ಜತೆಗೆ, ಎಐ ಎನರ್ಜಿ ಮೋಡ್ ವಿದ್ಯುತ್ ಉಳಿತಾಯ ಪ್ರಯೋಜನವನ್ನು ಒದಗಿಸುತ್ತದೆ.

ಅತ್ಯುತ್ತಮ ಧ್ವನಿ ಗುಣಮಟ್ಟ

ತೀವ್ರವಾದ ದೃಶ್ಯ ವೀಕ್ಷಣೆಯ ಅನುಭವ ಒದಗಿಸಲು 2024 ಕ್ಯೂಎಲ್ಇಡಿ 4ಕೆ ಟಿವಿ ಸರಣಿಯು ಸರಣಿಯು ಕ್ಯೂ-ಸಿಂಫನಿ, ಓಟಿಎಸ್ ಲೈಟ್ ಮತ್ತು ಅಡಾಪ್ಟಿವ್ ಸೌಂಡ್‌ ಫೀಚರ್‌ಗಳನ್ನು ಹೊಂದಿದೆ. ಈ ಫೀಚರ್‌ಗಳು ಬಳಕೆದಾರರಿಗೆ ಆನ್-ಸ್ಕ್ರೀನ್ ವೀಕ್ಷಣೆಯನ್ನು ಉತ್ತಮ ರೀತಿಯಲ್ಲಿ ಅನುಭವಿಸಲು ಅನುವು ಮಾಡಿಕೊಡುತ್ತದೆ. ನೈಜ-ಸಮಯದ ದೃಶ್ಯ ವಿಶ್ಲೇಷಣೆ ಮಾಡುವ ಮೂಲಕ 3ಡಿ ಸರೌಂಡ್ ಸೌಂಡ್ ಸೌಕರ್ಯವನ್ನು ಒದಗಿಸುತ್ತದೆ. ಜತೆಗೆ ತೀವ್ರ ರೀತಿಯ ವೀಕ್ಷಣೆಯ ಅನುಭವವನ್ನು ಉಂಟು ಮಾಡುತ್ತದೆ.

ಅತ್ಯುತ್ತಮ ಗೇಮಿಂಗ್ ಸೌಲಭ್ಯ

2024 ಕ್ಯೂಎಲ್ಇಡಿ 4ಕೆ ಟಿವಿ ಸರಣಿಯು ಮೋಷನ್ ಎಕ್ಸಲರೇಟರ್ ಮತ್ತು ಆಟೋ ಲೋ ಲೋಟೆನ್ಸಿ ಮೋಡ್ (ಎಎಲ್ಎಲ್ಎಂ) ತಂತ್ಪಜ್ಞಾನ ಹೊಂದಿದೆ. ಅದರಿಂದಾಗಿ ಗೇಮರ್‌ಗಳು ಉತ್ತಮ ಗೇಮ್ ಆಡಬಹುದಾಗಿದೆ. ಫ್ರೇಮ್‌ಗಳ ನಡುವಿನ ಚಲನೆಯನ್ನು ಮೊದಲೇ ಊಹಿಸಬಹುದಾಗಿದೆ. ಈ ಫೀಚರ್‌ಗಳು ಸ್ಕ್ರೀನ್ ಚಲನೆಯ ಮೃದುತ್ವವನ್ನು ಸುಧಾರಿಸುತ್ತದೆ ಮತ್ತು ಕಡಿಮೆ ಲೇಟೆನ್ಸಿ ಜತೆಗೆ ಫ್ರೇಮ್ ಬದಲಾವಣೆನ್ನು ವೇಗಗೊಳಿಸುತ್ತದೆ.

ಇದನ್ನೂ ಓದಿ:8th Pay Commission: ಭಾರಿ ವೇತನ ಹೆಚ್ಚಳ ನಿರೀಕ್ಷೆಯಲ್ಲಿ ಕೇಂದ್ರ ಸರ್ಕಾರಿ ನೌಕರರು

ಇತರ ಸ್ಮಾರ್ಟ್ ಫೀಚರ್‌ಗಳು

2024 ಕ್ಯೂಎಲ್ಇಡಿ 4ಕೆ ಟಿವಿ ಸರಣಿಯು ಸ್ಯಾಮ್‌ಸಂಗ್‌ನ ಟಿವಿ ಪ್ಲಸ್ ಫೀಚರ್ ಹೊಂದಿದ್ದು, 100+ ಉಚಿತ ಚಾನಲ್‌ಗಳನ್ನು ಒದಗಿಸುತ್ತದೆ. ಇದಲ್ಲದೆ, ಅಂತರ್ನಿರ್ಮಿತ ಮಲ್ಟಿ ವಾಯ್ಸ್ ಅಸಿಸ್ಟೆಂಟ್ ಫೀಚರ್ ಗ್ರಾಹಕರಿಗೆ ಉತ್ತಮ ಕನೆಕ್ಟಿವಿಟಿ ಒದಗಿಸುತ್ತದೆ. ಜತೆಗೆ ಉನ್ನತ ಶ್ರೇಣಿಯ ಭದ್ರತಾ ಪರಿಹಾರವಾದ ಸ್ಯಾಮ್‌ಸಂಗ್ ನಾಕ್ಸ್ ಸುರಕ್ಷಿತ ಅನುಭವವನ್ನು ಒದಗಿಸುತ್ತದೆ.

Continue Reading

ದೇಶ

Tshering Tobgay: ಮೋದಿ ನನ್ನ ಗುರು, ದೊಡ್ಡಣ್ಣ;‌ ಭೂತಾನ್‌ ಪ್ರಧಾನಿ ತ್ಶೆರಿಂಗ್‌ ತೋಬ್ಗೆ ಬಹುಪರಾಕ್!

Tshering Tobgay: ನರೇಂದ್ರ ಮೋದಿ ಅವರು ಕಳೆದ ಮಾರ್ಚ್‌ನಲ್ಲಿ ಭೂತಾನ್‌ಗೆ ಭೇಟಿ ನೀಡಿ, ಎರಡು ದಿನ ತಂಗಿದ್ದರು. “ನರೇಂದ್ರ ಮೋದಿ ಅವರು ಭೂತಾನ್‌ಗೆ ಆಗಮಿಸುವ ಗ್ಯಾರಂಟಿ ನೀಡಿದ್ದರು. ಈಗ ಆ ಗ್ಯಾರಂಟಿ ಸಾಕಾರಗೊಂಡಿದೆ” ಎಂಬುದಾಗಿ ಇದೇ ವೇಳೆ ತ್ಶೆರಿಂಗ್‌ ತೋಬ್ಗೆ ಹೇಳಿದ್ದರು. ಈಗ ಮೋದಿ ಪ್ರಮಾಣವಚನ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಭಾರತಕ್ಕೆ ಬಂದಿರುವ ತ್ಶೆರಿಂಗ್‌ ತೋಬ್ಗೆ ಅವರು ನರೇಂದ್ರ ಮೋದಿ ಅವರನ್ನು ಹೊಗಳಿದ್ದಾರೆ.

VISTARANEWS.COM


on

Tshering Tobgay
Koo

ನವದೆಹಲಿ: ನರೇಂದ್ರ ಮೋದಿ (Narendra Modi) ಅವರು ಸತತ ಮೂರನೇ ಬಾರಿಗೆ ದೇಶದ ಪ್ರಧಾನಿಯಾಗಿ ಭಾನುವಾರ (ಜೂನ್‌ 9) ಪ್ರಮಾಣವಚನ ಸ್ವೀಕರಿಸಿದ್ದಾರೆ. ದೇಶ-ವಿದೇಶಗಳ ಸಾವಿರಾರು ಗಣ್ಯರು ಪದಗ್ರಹಣ ಕಾರ್ಯಕ್ರಮಕ್ಕೆ ಸಾಕ್ಷಿಯಾಗಿದ್ದಾರೆ. ಇದರ ಬೆನ್ನಲ್ಲೇ, ಭೂತಾನ್‌ ಪ್ರಧಾನಿ ತ್ಶೆರಿಂಗ್‌ ತೋಬ್ಗೆ (Tshering Tobgay) ಅವರು ನರೇಂದ್ರ ಮೋದಿ ಅವರನ್ನು ಮುಕ್ತಕಂಠದಿಂದ ಹೊಗಳಿದ್ದಾರೆ. “ನರೇಂದ್ರ ಮೋದಿ ಅವರು ನನ್ನ ಗುರು, ಅವರು ನನ್ನ ದೊಡ್ಡಣ್ಣ ಇದ್ದಂತೆ” ಎಂದು ಎನ್‌ಡಿಟಿವಿಗೆ ನೀಡಿದ ಸಂದರ್ಶನದಲ್ಲಿ ಅವರು ಹೇಳಿದ್ದಾರೆ.

“ನರೇಂದ್ರ ಮೋದಿ ಅವರ ಮಾರ್ಗದರ್ಶನವು ನನಗೆ ಪ್ರಮುಖವಾಗಿದೆ. ಅವರು ನನಗೆ ಗುರು, ಸಹೋದರ ಇದ್ದಂತೆ. ಅವರ ಜತೆ ಉತ್ತಮ ಬಾಂಧವ್ಯ ಹೊಂದಿರುವುದು ನನಗೆ ಖುಷಿಯಾದ ವಿಚಾರ. ಅವರು ದೂರದೃಷ್ಟಿ ಹೊಂದಿರುವ ನಾಯಕರಾಗಿದ್ದು, ಆ ಯೋಜನೆಯನ್ನು ಅವರು ಸಾಕಾರಗೊಳಿಸುತ್ತಾರೆ. ಇದೆಲ್ಲದರ ಹೊರತಾಗಿ ಅವರು ನನಗೆ ದೊಡ್ಡಣ್ಣ ಇದ್ದಂತೆ. ನಾನು ಅವರನ್ನು ಬಡೆ ಭಾಯ್‌ ಎಂದೇ ಕರೆಯುತ್ತೇನೆ” ಎಂಬುದಾಗಿ ತ್ಶೆರಿಂಗ್‌ ತೋಬ್ಗೆ ಅವರು ಸಂದರ್ಶನದಲ್ಲಿ ಹೇಳಿಕೊಂಡಿದ್ದಾರೆ.

ನರೇಂದ್ರ ಮೋದಿ ಅವರು ಕಳೆದ ಮಾರ್ಚ್‌ನಲ್ಲಿ ಭೂತಾನ್‌ಗೆ ಭೇಟಿ ನೀಡಿ, ಎರಡು ದಿನ ತಂಗಿದ್ದರು. “ನರೇಂದ್ರ ಮೋದಿ ಅವರು ಭೂತಾನ್‌ಗೆ ಆಗಮಿಸುವ ಗ್ಯಾರಂಟಿ ನೀಡಿದ್ದರು. ಈಗ ಆ ಗ್ಯಾರಂಟಿ ಸಾಕಾರಗೊಂಡಿದೆ” ಎಂಬುದಾಗಿ ಇದೇ ವೇಳೆ ತ್ಶೆರಿಂಗ್‌ ತೋಬ್ಗೆ ಹೇಳಿದ್ದರು. ಅಷ್ಟೇ ಅಲ್ಲ, ಮೋದಿ ಅವರು ಭೂತಾನ್‌ಗೆ ಭೇಟಿ ನೀಡಿದ್ದ ವೇಳೆ ಅಲ್ಲಿನ ಸರ್ಕಾರವು ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿ “ಡ್ರಕ್‌ ಗ್ಯಾಲ್ಪೋ” ನೀಡಿ ಗೌರವಿಸಿದ್ದರು. ಇದರೊಂದಿಗೆ ಭೂತಾನ್‌ ಅತ್ಯುನ್ನತ ನಾಗರಿಕ ಪ್ರಶಸ್ತಿ ಸ್ವೀಕರಿಸಿದ ವಿಶ್ವದ ನಾಲ್ಕನೇ ವಿದೇಶಿ ನಾಯಕ ಎಂಬ ಖ್ಯಾತಿಗೆ ಮೋದಿ ಭಾಜನರಾಗಿದ್ದರು.

ಭಾರತದ ಸಾವಿರಾರು ಗಣ್ಯರ ಜತೆಗೆ ನೆರೆ ರಾಷ್ಟ್ರಗಳ ನಾಯಕರು ಕೂಡ ಭಾಗವಹಿಸಿದ್ದರು. ಶ್ರೀಲಂಕಾ ಅಧ್ಯಕ್ಷ ರನಿಲ್ ವಿಕ್ರಮಸಿಂಘೆ, ಮಾಲ್ಡೀವ್ಸ್ ಅಧ್ಯಕ್ಷ ಮೊಹಮದ್ ಮುಯಿಝು, ಸೆಶೆಲ್ಸ್‌ನ ಉಪಾಧ್ಯಕ್ಷ ಅಹ್ಮದ್ ಅಫೀಫ್; ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ; ಮಾರಿಷಸ್‌ನ ಪ್ರಧಾನ ಮಂತ್ರಿ, ಪ್ರವಿಂದ್ ಕುಮಾರ್ ಜುಗ್ನೌತ್; ನೇಪಾಳದ ಪ್ರಧಾನಿ, ಪುಷ್ಪ ಕಮಲ್ ದಹಲ್ ‘ಪ್ರಚಂಡ’ ಮತ್ತು ಭೂತಾನ್ ಪ್ರಧಾನಿ, ತ್ಶೆರಿಂಗ್ ಟೊಬ್ಗೇ ಉಪಸ್ಥಿತರಿದ್ದರು.

ಇದನ್ನೂ ಓದಿ: Narendra Modi 3.0 : ಮೋದಿ ಅಧಿಕಾರಕ್ಕೆ ಬಾರದಿರಲಿ ಎಂದು ಕಾದು ಕೂತು, ಕೊನೆಗೂ ಅಭಿನಂದನೆ ತಿಳಿಸಿದ ಪಾಕಿಸ್ತಾನ!

Continue Reading

ಪ್ರಮುಖ ಸುದ್ದಿ

Narendra Modi 3.0 : ಮೋದಿ ಅಧಿಕಾರಕ್ಕೆ ಬಾರದಿರಲಿ ಎಂದು ಕಾದು ಕೂತು, ಕೊನೆಗೂ ಅಭಿನಂದನೆ ತಿಳಿಸಿದ ಪಾಕಿಸ್ತಾನ!

Narendra Modi 3.0 : ಚುನಾವಣೆಯಲ್ಲಿ ಅವರು ಮತ್ತೊಂದು ಬಾರಿ ಆರಿಸಿ ಬರದಿರಲಿ ಎಂದು ಆಶಿಸಿದ್ದರು. ಅದರೆ, ಪಾಕ್​ನ ಲೆಕ್ಕಾಚಾರ ಉಲ್ಟಾ ಆಗಿದೆ. ಮೋದಿ ಮೂರನೇ ಬಾರಿಗೆ ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಿದ್ದಾರೆ. ಇನ್ನೀಗ ಶುಭಾಶಯ ಹೇಳದೆ ವಿಧಿಯಿಲ್ಲ. ಹೀಗಾಗಿ ಭಾರತದ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ನರೇಂದ್ರ ಮೋದಿ ಅವರಿಗೆ ಪಾಕಿಸ್ತಾನ ಪ್ರಧಾನಿ ಶೆಹಬಾಜ್ ಷರೀಫ್ ಅಭಿನಂದನೆ ಸಲ್ಲಿಸಿದ್ದಾರೆ

VISTARANEWS.COM


on

Narendra Modi 3.20
Koo

ಬೆಂಗಳೂರು: ನರೇಂದ್ರ ಮೋದಿ ಮತ್ತೊಂದು ಅವಧಿಗೆ ಭಾರತದ ಪ್ರಧಾನಿಯಾಗುವುದು (Narendra Modi 3.0) ಪಾಕಿಸ್ತಾನದ ಸರ್ಕಾರಕ್ಕೆ ಇಷ್ಟವಿರಲಿಲ್ಲ. ಹಿಂದೂಸ್ತಾನದಲ್ಲೀಗ ಮೋದಿ ಯುಗ, ‘ಮೋದಿಯ ಭಾರತ’ ಎಂದು ಆಗಾಗ ಕರೆಯುತ್ತಿದ್ದರು. ಚುನಾವಣೆಯಲ್ಲಿ ಅವರು ಮತ್ತೊಂದು ಬಾರಿ ಆರಿಸಿ ಬರದಿರಲಿ ಎಂದು ಆಶಿಸಿದ್ದರು. ಅದರೆ, ಪಾಕ್​ನ ಲೆಕ್ಕಾಚಾರ ಉಲ್ಟಾ ಆಗಿದೆ. ಮೋದಿ ಮೂರನೇ ಬಾರಿಗೆ ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಿದ್ದಾರೆ. ಇನ್ನೀಗ ಶುಭಾಶಯ ಹೇಳದೆ ವಿಧಿಯಿಲ್ಲ. ಹೀಗಾಗಿ ಭಾರತದ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ನರೇಂದ್ರ ಮೋದಿ ಅವರಿಗೆ ಪಾಕಿಸ್ತಾನ ಪ್ರಧಾನಿ ಶೆಹಬಾಜ್ ಷರೀಫ್ ಅಭಿನಂದನೆ ಸಲ್ಲಿಸಿದ್ದಾರೆ. “ಭಾರತದ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದ @narendramodi ಅವರಿಗೆ ಅಭಿನಂದನೆಗಳು” ಎಂದು ಷರೀಫ್ ಎಕ್ಸ್​ ಪೋಸ್ಟ್​ ಮಾಡಿದ್ದಾರೆ.

ಪಾಕಿಸ್ತಾನದ ವಿದೇಶಾಂಗ ಕಚೇರಿ ವಕ್ತಾರ ಮುಮ್ತಾಜ್ ಜಹ್ರಾ ಬಲೂಚ್ ಅವರು ಶನಿವಾರ ಪ್ರಧಾನಿ ಮೋದಿಯವರನ್ನು ಅಭಿನಂದಿಸುವ ಬಗ್ಗೆ ಕೇಳಿದಾಗ, “ಅವರ ಚುನಾವಣಾ ಪ್ರಕ್ರಿಯೆಯ ಬಗ್ಗೆ ನಾವು ಯಾವುದೇ ಪ್ರತಿಕ್ರಿಯೆಗಳನ್ನು ಹೊಂದಿಲ್ಲ” ಎಂದು ಹೇಳಿದ್ದರು. ಹೊಸ ಭಾರತ ಸರ್ಕಾರ ಅಧಿಕೃತವಾಗಿ ಪ್ರಮಾಣವಚನದ ಪ್ರಕಟಣೆ ಹೊರಡಿಸದ ಕಾರಣ, ಅಭಿನಂದನಾ ಸಂದೇಶಗಳನ್ನು ಚರ್ಚಿಸಲು ಕಾಲ ಪಕ್ವವಾಗಿಲ್ಲ ಎಂದು ಅವರು ಹೇಳಿದರು.

ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಎನ್ಡಿಎ, ಲೋಕಸಭೆ ಚುನಾವಣೆಯಲ್ಲಿ 543 ಸ್ಥಾನಗಳಲ್ಲಿ 293 ಸ್ಥಾನಗಳನ್ನು ಗೆಲ್ಲುವ ಮೂಲಕ ನಿರ್ಣಾಯಕ ಗೆಲುವು ಸಾಧಿಸಿದೆ.

“ಪಾಕಿಸ್ತಾನವು ಯಾವಾಗಲೂ ಭಾರತ ಸೇರಿದಂತೆ ತನ್ನ ಎಲ್ಲಾ ನೆರೆಹೊರೆಯವರೊಂದಿಗೆ ಸಹಕಾರ ಸಂಬಂಧವನ್ನು ಬಯಸುತ್ತದೆ. ಜಮ್ಮು ಮತ್ತು ಕಾಶ್ಮೀರದ ಪ್ರಮುಖ ವಿವಾದ ಸೇರಿದಂತೆ ಬಾಕಿ ಇರುವ ಎಲ್ಲಾ ಸಮಸ್ಯೆಗಳನ್ನು ಪರಿಹರಿಸಲು ರಚನಾತ್ಮಕ ಮಾತುಕತೆ ಮತ್ತು ತೊಡಗಿಸಿಕೊಳ್ಳುವಿಕೆಯನ್ನು ನಾವು ನಿರಂತರವಾಗಿ ಪ್ರತಿಪಾದಿಸಿದ್ದೇವೆ” ಎಂದು ಬಲೂಚ್ ಹೇಳಿದ್ದರು.

ಇದನ್ನೂ ಓದಿ: Narendra Modi 3.0 : ಮೋದಿ ಅಧಿಕಾರಕ್ಕೆ ಬಾರದಿರಲಿ ಎಂದು ಕಾದು ಕೂತು, ಕೊನೆಗೂ ಅಭಿನಂದನೆ ತಿಳಿಸಿದ ಪಾಕಿಸ್ತಾನ!

ಪಾಕಿಸ್ತಾನದೊಂದಿಗೆ ಸೌಹಾರ್ದಯುತ ಸಂಬಂಧವನ್ನು ಬಯಸುವುದಾಗಿ ಭಾರತ ಸಮರ್ಥಿಸಿಕೊಂಡಿದೆ, ಇಸ್ಲಾಮಾಬಾದ್ ಮೊದಲು ಭಯೋತ್ಪಾದನೆ ಮತ್ತು ಹಗೆತನ ಮುಕ್ತ ವಾತಾವರಣವನ್ನು ಸೃಷ್ಟಿಸಬೇಕು ಎಂದು ಒತ್ತಿಹೇಳಿದೆ.

Continue Reading
Advertisement
Hebbe WaterFalls
ಚಿಕ್ಕಮಗಳೂರು56 seconds ago

Hebbe Waterfalls : ಪ್ರಾಣ ಕಸಿದ ಸೆಲ್ಫಿ ಕ್ರೇಜ್; ಫಾಲ್ಸ್‌ನಲ್ಲಿ ಕಾಲು ಜಾರಿ ಬಿದ್ದ ಪ್ರವಾಸಿಗ ಸಾವು

Indian Chutneys
ದೇಶ3 mins ago

Indian Chutneys: ವಿಶ್ವದ ಟಾಪ್ 50 ಅಚ್ಚುಮೆಚ್ಚಿನ ತಿನಿಸುಗಳಲ್ಲಿ ಭಾರತದ ಈ ಎರಡು ಚಟ್ನಿಗಳು!

Opposition party leader r ashok latest statement in Bengaluru
ಕರ್ನಾಟಕ10 mins ago

R Ashok: ವಾಲ್ಮೀಕಿ ನಿಗಮ ಹಗರಣದಲ್ಲಿ ಸಿದ್ದರಾಮಯ್ಯ ಮೊದಲ ಆರೋಪಿ ಎಂದ ಆರ್‌.ಅಶೋಕ್‌

Samsung launches 2024 QLED 4K premium TV series
ದೇಶ14 mins ago

Samsung: ಕ್ಯೂಎಲ್ಇಡಿ 4ಕೆ ಪ್ರೀಮಿಯಂ ಟಿವಿ ಸರಣಿ ಬಿಡುಗಡೆ ಮಾಡಿದ ಸ್ಯಾಮ್‌ಸಂಗ್

World Environment Day and Vanamahotsava programme at shira
ತುಮಕೂರು16 mins ago

Shira News: ಪರಿಸರ ಸಂರಕ್ಷಣೆ ನಮ್ಮೆಲ್ಲರ ಆದ್ಯ ಕರ್ತವ್ಯ: ಶಾಸಕ ಟಿ.ಬಿ.ಜಯಚಂದ್ರ

Chandan Shetty reaction about prashant sambaragi statement on divorce
ಸಿನಿಮಾ22 mins ago

Chandan Shetty: ನಮ್ಮ ಖುಷಿ ಮೇಲೆ ಪ್ರಶಾಂತ್‌ ಸಂಬರಗಿ ಕಣ್ಣು; ಟಾಂಗ್‌ ಕೊಟ್ಟ ಚಂದನ್‌ ಶೆಟ್ಟಿ

Health Benefits of Mango Leaves
ಆರೋಗ್ಯ29 mins ago

Health Benefits of Mango Leaves: ಮಾವಿನೆಲೆಗಳು ತೋರಣ ಕಟ್ಟಲಷ್ಟೇ ಅಲ್ಲ, ಆರೋಗ್ಯಕ್ಕೂ ಒಳ್ಳೆಯದು!

Yuva Rajkumar
ಸಿನಿಮಾ30 mins ago

Yuva Rajkumar: ವಿಚ್ಛೇದನ ಅರ್ಜಿ ಸಿಕ್ಕಾಗ ಉತ್ತರಿಸುವೆ; ಯುವ ನೋಟಿಸ್‌ಗೆ ಪತ್ನಿ ಶ್ರೀದೇವಿ ಫಸ್ಟ್‌ ರಿಯಾಕ್ಷನ್!

Suspension Order tumkur News
ತುಮಕೂರು37 mins ago

Suspension Order : ಕ್ರಿಮಿನಲ್‌ಗಳಿಗೆ ಮಾಹಿತಿ ಸೋರಿಕೆ; ಐವರು ಪೊಲೀಸ್‌ ಸಿಬ್ಬಂದಿ ಅಮಾನತು

Niveditha Gowda Chandan Shetty Divorce Case
ಸಿನಿಮಾ45 mins ago

Niveditha Gowda: ಸೃಜನ್‌, ಸಂಬರಗಿ, ಜೀವನಾಂಶ, ಮಗು; ಎಲ್ಲದಕ್ಕೂ ಸ್ಪಷ್ಟನೆ ಕೊಟ್ಟ ಚಂದನ್‌-ನಿವೇದಿತಾ!

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka weather Forecast
ಮಳೆ1 hour ago

Karnataka Weather : ಭಾರಿ ಮಳೆಗೆ ಮನೆ ಗೋಡೆ ಕುಸಿದು ಎಮ್ಮೆಗಳು ಸಾವು; ಆಕಳಿನ ಜೀವ ತೆಗೆದ ವಿದ್ಯುತ್‌ ತಂತಿ

Karnataka weather Forecast
ಮಳೆ3 days ago

Karnataka weather : ಮಳೆಯಲ್ಲೆ ತಪಸ್ಸಿಗೆ ಕುಳಿತ ವೃದ್ಧ; ಇನ್ನೊಂದು ವಾರ ನಾನ್‌ ಸ್ಟಾಪ್‌ ವರುಣನ ಅಬ್ಬರ

Sigandur launch
ಶಿವಮೊಗ್ಗ3 days ago

Sigandur launch: ಸಿಗಂದೂರು ಲಾಂಚ್‌ನಲ್ಲಿ ಭಾರಿ ವಾಹನಗಳಿಗೆ ನಿರ್ಬಂಧ

Karnataka Rain
ಮಳೆ4 days ago

Karnataka Rain : ಭಾರಿ ಮಳೆಗೆ ಮರ ಬಿದ್ದು ಮೇಕೆಗಳು ಸಾವು; ಸಿಡಿಲಿಗೆ ಎಲೆಕ್ಟ್ರಿಕ್‌ ಅಂಗಡಿ ಸುಟ್ಟು ಭಸ್ಮ

Lok Sabha Election Result 2024 Live
ದೇಶ6 days ago

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶದ ಲೈವ್‌ ಇಲ್ಲಿ ವೀಕ್ಷಿಸಿ

Karnataka Rain
ಮಳೆ1 week ago

Karnataka Rain : 133 ವರ್ಷದ ರೆಕಾರ್ಡ್ ಬ್ರೇಕ್ ಮಾಡಿದ ʻಬೆಂಗಳೂರು ಮಳೆʼ

Snake Rescue Snakes spotted in heavy rain
ಮಳೆ1 week ago

Snake Rescue: ಮಳೆ ನೀರಿನಲ್ಲಿ ಹರಿದು ಬಂದು ಬೈಕ್‌ನಲ್ಲಿ ಸೇರಿಕೊಂಡ ಹಾವು; ಮನೆಗಳಲ್ಲೂ ಪ್ರತ್ಯಕ್ಷ

Karnataka Rain
ಮಳೆ1 week ago

Karnataka Rain : ವೀಕೆಂಡ್‌ ಮೋಜಿಗೆ ವರುಣ ಅಡ್ಡಿ; ಭಾನುವಾರ ಸಂಜೆಗೆ ಮಳೆ ಕಾಟ

Liquor ban
ಬೆಂಗಳೂರು1 week ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

Assault Case in Shivamogga
ಕ್ರೈಂ2 weeks ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

ಟ್ರೆಂಡಿಂಗ್‌