ಬೆಂಗಳೂರಿನ ವಾಹನ ಸವಾರರಿಗೆ ವಾಟರ್‌ ಟ್ಯಾಂಕರ್‌ ಕಂಟಕ! - Vistara News

ಬೆಂಗಳೂರು

ಬೆಂಗಳೂರಿನ ವಾಹನ ಸವಾರರಿಗೆ ವಾಟರ್‌ ಟ್ಯಾಂಕರ್‌ ಕಂಟಕ!

ಅತಿ ವೇಗದ ಚಾಲನೆ ಮತ್ತು ಡ್ರಂಕ್ ಅಂಡ್‌ ಡ್ರೈವ್‌ ಕೂಡ ಅಪಘಾತಕ್ಕೆ ಪ್ರಮುಖ ಕಾರಣಗಳಾಗಿವೆ.‌ ಬೇಕಾಬಿಟ್ಟಿ ವಾಟರ್‌ ಟ್ಯಾಂಕರ್‌ ಓಡಿಸುವುದರ ಕುರಿತು ಸಾರ್ವಜನಿಕರು ದೂರು ದಾಖಲಿಸುತ್ತಿದ್ದಾರೆ.

VISTARANEWS.COM


on

ವಾಟರ್‌ ಟ್ಯಾಂಕರ್‌
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ರಾಜ್ಯ ರಾಜಧಾನಿಯಲ್ಲಿ ದಿನೇದಿನೆ ಅಪಘಾತಗಳು ಹೆಚ್ಚಾಗುತ್ತಿವೆ. ಜನವರಿಯಿಂದ ಏಪ್ರಿಲ್‌ವರೆಗೆ ನಾಲ್ಕು ತಿಂಗಳ ಅವಧಿಯಲ್ಲಿ 1212 ಅಪಘಾತ ಪ್ರಕರಣಗಳು ದಾಖಲಾಗಿವೆ. ಬಿಎಂಟಿಸಿ ಬಸ್‌, ಕಸದ ಲಾರಿಗಳಿಂದ ಹೆಚ್ಚು ಹೆಚ್ಚು ಅಪಘಾತ ಪ್ರಕರಣಗಳು ನಡೆಯುತ್ತಿವೆ. ಇದೀಗ, ಮಿತಿ ಮೀರಿದ ವೇಗದಲ್ಲಿ ಸಂಚರಿಸುತ್ತಿರುವ ವಾಟರ್‌ ಟ್ಯಾಂಕರ್‌ಗಳು ಮುಖ್ಯವಾಗಿ ದ್ವಿಚಕ್ರ ವಾಹನ ಸವಾರರಿಗೆ ಕಂಟಕವಾಗಿ ಪರಿಣಮಿಸಿದೆ.

ವಾಟರ್‌ ಟ್ಯಾಂಕರ್‌ ಗಳ ಬೇಕಾಬಿಟ್ಟಿ ಓಡಾಟದ ಕುರಿತು ಸಾರ್ವಜನಿಕರಿಂದ ವ್ಯಾಪಕ ದೂರುಗಳು ಕೇಳಿ ಬರುತ್ತಿವೆ. ಸಾರ್ವಜನಿಕರಿಂದ ದೂರ ಬಂದ ಹಿನ್ನಲೆಯಲ್ಲಿ ಟ್ಯಾಂಕರ್‌ಗಳ ವಿರುದ್ಧ ಸಂಚಾರ ಠಾಣೆ ಪೊಲೀಸರು ಕಾರ್ಯಾಚರಣೆ ನಡೆಸಿ ಪ್ರಕರಣ ದಾಖಲಿಸುತ್ತಿದ್ದಾರೆ. ಅತಿ ವೇಗದ ಚಾಲನೆ ಮತ್ತು ಡ್ರಂಕ್ ಅಂಡ್‌ ಡ್ರೈವ್‌ ಅಪಘಾತ‌ಗಳಿಗೆ ಪ್ರಮುಖ ಕಾರಣಗಳಾಗಿವೆ.

ಇದನ್ನೂ ಓದಿ | Accidents in Bangalore | ಅಪಘಾತಗಳ ನಗರವಾಗ್ತಿದೆ ಸಿಲಿಕಾನ್‌ ಸಿಟಿ, 4 ತಿಂಗಳಲ್ಲಿ 231 ಜನರ ಸಾವು

ಈ ಹಿನ್ನೆಲೆಯಲ್ಲಿ ಟ್ರಾಫಿಕ್‌ ಪೊಲೀಸರು ಸ್ಪೆಷಲ್ ಡ್ರೈವ್‌ಗೆ ಇಳಿದಿದ್ದಾರೆ. ಮೇ 27ರಂದು ಒಂದೇ ದಿನ 4 ವಿಭಾಗಗಳಲ್ಲಿ 258 ಪ್ರಕರಣವನ್ನು ದಾಖಲು ಮಾಡಿದ್ದಾರೆ. ಅದರಲ್ಲಿ ಡ್ರಂಕ್ ಅಂಡ್‌ ಡ್ರೈವ್‌ 4 ಪ್ರಕರಣ‌, ನೋ ಎಂಟ್ರಿ 28 ಪ್ರಕರಣ, ಟ್ರಾಫಿಕ್‌ ಸಿಗ್ನಲ್‌ ಜಂಪ್‌ 14 ಪ್ರಕರಣ, ಚಾಲನೆ ವೇಳೆ ಮೊಬೈಲ್‌ ಬಳಕೆ 7 ಪ್ರಕರಣ, ಇನ್ಸುರೆನ್ಸ್‌ ಇಲ್ಲದೇ ವಾಹನ ಚಾಲನೆ 1 ಪ್ರಕರಣ, ಲೈಸೆನ್ಸ್‌ ಇಲ್ಲದೇ ವಾಹನ ಚಾಲನೆ 2 ಪ್ರಕರಣ ಸೇರಿದಂತೆ 200ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿವೆ.

ಇದನ್ನೂ ಓದಿ | ಹುಬ್ಬಳ್ಳಿ ಅಪಘಾತ: ಮಡಿದವರ ಕುಟುಂಬಕ್ಕೆ ₹2 ಲಕ್ಷ ಪರಿಹಾರ ಘೋಷಿಸಿದ ಪ್ರಧಾನಿ ಮೋದಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Bengaluru News: ಬೆಂಗಳೂರು ಸೇರಿದಂತೆ ಎಲ್ಲೆಡೆ ಕುಡಿಯುವ ನೀರಿನ ಪರೀಕ್ಷೆಗೆ ಸೂಚನೆ ನೀಡಿದ ಡಿ.ಕೆ.ಶಿವಕುಮಾರ್

Bengaluru News: ಕುಡಿಯುವ ನೀರಿಗೆ ಕಲುಷಿತ ನೀರು ಬೆರೆಯುತ್ತಿರುವ ಬಗ್ಗೆ ಮಾಹಿತಿ ಬಂದ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ಎಲ್ಲೆಡೆ ಕುಡಿಯುವ ನೀರನ್ನು ಪರೀಕ್ಷೆ ಒಳಪಡಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

VISTARANEWS.COM


on

DCM D K Shivakumar instructed to test drinking water everywhere including Bengaluru
Koo

ಬೆಂಗಳೂರು: ಕುಡಿಯುವ ನೀರಿಗೆ ಕಲುಷಿತ ನೀರು ಬೆರೆಯುತ್ತಿರುವ ಬಗ್ಗೆ ಮಾಹಿತಿ ಬಂದ ಹಿನ್ನೆಲೆಯಲ್ಲಿ ಬೆಂಗಳೂರು (Bengaluru News) ಸೇರಿದಂತೆ ಎಲ್ಲೆಡೆ ಕುಡಿಯುವ ನೀರನ್ನು ಪರೀಕ್ಷೆ ಒಳಪಡಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.

ವೈಯಾಲಿಕಾವಲ್‌ನ ಐಪಿಪಿ ಕಚೇರಿಯಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಅಧಿಕಾರಿಗಳ ಸಭೆಗೂ ಮುನ್ನ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು.

ಮುಖ್ಯಮಂತ್ರಿಗಳು ನಿನ್ನೆ ನಗರ ಪ್ರದಕ್ಷಿಣೆ ಮಾಡಿ ವಿವಿಧ ಕ್ರಮಗಳ ಬಗ್ಗೆ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡಿದ್ದಾರೆ. ಶೀಘ್ರದಲ್ಲೇ ಕಾರ್ಯಪಡೆ ರಚನೆಗೆ ಸೂಚನೆ ನೀಡಿದ್ದು, ಎಲ್ಲೆಲ್ಲಿ ಯಾವ ಕಾರ್ಯಗಳು ಸಾಗಬೇಕು ಎಂದು ತಿಳಿಸಿದ್ದಾರೆ. ರಾಜ್ಯದಲ್ಲಿ ಕೆಲವು ಕಡೆ ಕುಡಿಯುವ ನೀರು ಕಲುಷಿತವಾಗಿ ಕಾಲರ ಸಂಭವಿಸಿರುವ ಪ್ರಕರಣಗಳು ಗಮನಕ್ಕೆ ಬಂದಿವೆ. ಹೀಗಾಗಿ ಬೆಂಗಳೂರಿನ ಎಲ್ಲೆಡೆ ಕುಡಿಯುವ ನೀರಿನ ಪರಿಶೀಲನೆ ನಡೆಸಲು ವ್ಯವಸ್ಥೆ ಮಾಡಬೇಕಾಗಿದೆ. ಈ ಬಗ್ಗೆ ಮುಖ್ಯಮಂತ್ರಿಗಳ ಜತೆ ಚರ್ಚೆ ಮಾಡಲಾಗಿದೆ ಎಂದರು.

ಇದನ್ನೂ ಓದಿ: Koppala News: ವಿಜಯನಗರ ಅರಸರ ಕಾಲದಲ್ಲಿ ನಿರ್ಮಿಸಿದ್ದ ಹುಲಗಿ ಕಟ್ಟೆಯ ಶಾಸನ ಪತ್ತೆ

ಬೆಂಗಳೂರು ಹಾಗೂ ಬೇರೆ ಭಾಗಗಳಲ್ಲಿ ಜನರಿಗೆ ಕುಡಿಯಲು ಗುಣಮಟ್ಟದ ನೀರು ನೀಡಬೇಕು ಎಂದು ಅಧಿಕಾರಿಗಳಿಗೆ ಮುಂಜಾಗ್ರತೆಯಿಂದ ಎಚ್ಚರಿಕೆ ನೀಡಿದ್ದೇವೆ. ಇನ್ನು ಬೆಂಗಳೂರಿನಲ್ಲಿರುವ ಎಲ್ಲಾ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ರಿಪೇರಿ ಮಾಡಲು ಮಾರ್ಗದರ್ಶನ ನೀಡಲಾಗಿದೆ. ಇನ್ನು ಮಳೆ ಆರಂಭಕ್ಕೂ ಮುನ್ನ ಮುಂಜಾಗ್ರತಾ ಕ್ರಮಗಳನ್ನು ಮಾಡುತ್ತೇವೆ ಎಂದು ತಿಳಿಸಿದರು.

ಒತ್ತುವರಿ ತೆರವು ವಿಚಾರವಾಗಿ ಬಿಎಂಟಿಎಫ್‌ ಅವರ ಸಹಾಯ ಪಡೆಯುತ್ತೀರಾ ಎಂದು ಕೇಳಿದಾಗ, “ಬಿಎಂಟಿಎಫ್‌ ಜತೆ ಚರ್ಚೆ ನಡೆಸಲಾಗಿದ್ದು. ಎಲ್ಲೆಲ್ಲಿ ಬಾಕಿ ಇದೆ ಅವುಗಳನ್ನು ತೆರವುಗೊಳಿಸಲು ಸಿಎಂ ಸೂಚಿಸಿದ್ದಾರೆ”ಎಂದರು.

ರಾಜಕಾಲುವೆ, ಕೆರೆ ಒತ್ತುವರಿದಾರರು ತಡೆಯಾಜ್ಞೆ ತರುತ್ತಿರುವ ವಿಚಾರವಾಗಿ ಕೇಳಿದಾಗ, “ಕೆರೆ, ಸರ್ಕಾರಿ ಉದ್ಯಾನವನ ಜಾಗ ಸೇರಿದಂತೆ ಅನೇಕ ಕಡೆಗಳಲ್ಲಿ ಒತ್ತುವರಿ ಮಾಡಿಕೊಂಡು ಮನೆ ಕಟ್ಟಿಕೊಂಡಿದ್ದಾರೆ. ಇದು ನಮ್ಮ ಗಮನದಲ್ಲಿದ್ದು. ಈ ವಿಚಾರದಲ್ಲಿ ಕಾನೂನು ಚೌಕಟ್ಟಿನಲ್ಲಿ ಕೆಲಸ ಮಾಡಬೇಕು. ಅದಕ್ಕೆ ಕಾನೂನು ಅವಕಾಶಗಳನ್ನು ಕಂಡುಕೊಳ್ಳುತ್ತೇವೆ ಎಂದು ತಿಳಿಸಿದರು.

ಬೆಂಗಳೂರಿನ ಮೂಲಸೌಕರ್ಯ ಸಮಸ್ಯೆಗಳ ನಿವಾರಣೆಗೆ 5 ಅಂಶಗಳ ಕಾರ್ಯಕ್ರಮ

ಶುದ್ಧ ಕುಡಿಯುವ ನೀರು, ರಸ್ತೆಗುಂಡಿ ಸಮಸ್ಯೆ ಸೇರಿದಂತೆ ಬೆಂಗಳೂರಿನ ಪ್ರಮುಖ ಮೂಲಸೌಕರ್ಯ ಸಮಸ್ಯೆಗಳ ನಿವಾರಣೆಗೆ ಐದು ಅಂಶಗಳ ಕಾರ್ಯಕ್ರಮ ರೂಪಿಸಲಾಗಿದೆ” ಎಂದು ತಿಳಿಸಿದ ಡಿಸಿಎಂ ಡಿ.ಕೆ.ಶಿವಕುಮಾರ್, ಬಿಬಿಎಂಪಿ ಆಸ್ತಿಗಳ ಗುರುತಿಸುವಿಕೆ ಹಾಗೂ ಸಂರಕ್ಷಣೆ, ಆಸ್ತಿ ತೆರಿಗೆ, ರಾಜಕಾಲುವೆ, ಕೆರೆ ಒತ್ತುವರಿ ತೆರವು ಕಾರ್ಯಾಚರಣೆ ಈ ಐದು ಅಂಶಗಳ ಕಾರ್ಯಕ್ರಮದಲ್ಲಿ ಸೇರಿವೆ ಎಂದರು.

ಇದನ್ನೂ ಓದಿ: Shivamogga News: ಚಂದ್ರಗುತ್ತಿಯ ಶ್ರೀ ರೇಣುಕಾಂಬ ದೇವಿಯ ದರ್ಶನ ಪಡೆದ ಸಾವಿರಾರು ಭಕ್ತರು

ಮುಖ್ಯಮಂತ್ರಿಗಳ ಜತೆಗೂಡಿ ಬುಧವಾರ ಬೆಂಗಳೂರು ನಗರದ ಒಂದಷ್ಟು ಭಾಗಗಳಲ್ಲಿ ಪರಿಶೀಲನೆ ನಡೆಸಲಾಯಿತು. ಈ ವೇಳೆ ಅನೇಕ ಸಮಸ್ಯೆಗಳು ಕಂಡು ಬಂದ ಕಾರಣ ಬಿಬಿಎಂಪಿ ವಲಯ ಅಧಿಕಾರಿಗಳು ಸೇರಿದಂತೆ ಬೆಂಗಳೂರಿಗೆ ಸಂಬಂಧಿಸಿದ ಎಲ್ಲಾ ಇಲಾಖೆಗಳ ಅಧಿಕಾರಿಗಳ ಸಭೆ ನಡೆಸಿ ಸಮಸ್ಯೆ ಪರಿಹಾರಕ್ಕೆ ಚರ್ಚೆ ನಡೆಸಲಾಯಿತು ಎಂದರು.

ಶುದ್ಧ ಕುಡಿಯುವ ನೀರಿನ ಘಟಕಗಳ ದುರಸ್ತಿ ಹಾಗೂ ನಗರದ ಎಲ್ಲಾ ಭಾಗಗಳಲ್ಲಿ ಸರಬರಾಜಾಗುವ ನೀರಿನ ಗುಣಮಟ್ಟದ ಪರೀಕ್ಷೆಯನ್ನು ಬಿಬಿಎಂಪಿ ನಡೆಸಬೇಕು ಹಾಗೂ ಗುಣಮಟ್ಟದ ಫಲಿತಾಂಶವನ್ನು ಬಿಡ್ಬ್ಲೂಎಸ್‌ಎಸ್‌ಬಿಗೆ ನೀಡಬೇಕು ಎಂದು ಸೂಚಿಸಲಾಗಿದೆ ಎಂದರು.

ರಾಜಕಾಲುವೆ ಒತ್ತುವರಿ ತೆರವಿಗೆ ನ್ಯಾಯಾಲಯ ಈ ಹಿಂದೆ ನಿರ್ದೇಶನ ನೀಡಿತ್ತು. ಅದರಂತೆ 2016-17 ರಲ್ಲಿ 2,626 ಒತ್ತುವರಿಗಳನ್ನು ಗುರುತಿಸಲಾಗಿತ್ತು. 2022- 23 ಹೊತ್ತಿಗೆ 556 ಒತ್ತುವರಿ ತೆರವು ಮಾಡಲಾಗಿತ್ತು. ಈಗ 1136 ಹೊಸದಾಗಿ ಒತ್ತುವರಿಗಳನ್ನು ಗುರುತಿಸಲಾಗಿದ್ದು, ಒಟ್ಟು 4,316 ಒತ್ತುವರಿಗಳನ್ನು ಗುರುತಿಸಲಾಗಿದೆ. ಸ್ಯಾಟ್‌ಲೈಟ್, ಗೂಗಲ್ ಇಮೇಜ್ ಮತ್ತು ಸರ್ವೇ ಇಲಾಖೆ ಈ ಒತ್ತುವರಿ ಮಾಹಿತಿ ಸಂಗ್ರಹಿಸಿದೆ. ಒತ್ತುವರಿ ತೆರವುಗೊಳಿಸಲು ಬಿಎಂಟಿಎಫ್‌ಗೆ ಕಾನೂನಾತ್ಮಕವಾಗಿ ಮತ್ತು ಎಲ್ಲಾ ರೀತಿಯ ಬೆಂಬಲ ನೀಡಬೇಕು ಎಂದು ಮಾರ್ಗದರ್ಶನ ನೀಡಲಾಗಿದೆ ಎಂದು ತಿಳಿಸಿದರು.

ಇದನ್ನೂ ಓದಿ: Golden Star Ganesh: ಮೈಸೂರಿನಲ್ಲಿ ಮೇ 25ರಂದು ʼಕೃಷ್ಣಂ ಪ್ರಣಯ ಸಖಿʼ ಚಿತ್ರದ ಫಸ್ಟ್‌ ಸಾಂಗ್‌ ರಿಲೀಸ್‌

ಬಾಗಿಲಿಗೆ ಬಂತು ಸರ್ಕಾರ ಕಾರ್ಯಕ್ರಮದಲ್ಲಿ ಸಾರ್ವಜನಿಕರಿಂದ ಒತ್ತುವರಿ ವಿಚಾರವಾಗಿ ಬಂದಿರುವ ಅರ್ಜಿಗಳನ್ನು ಶೀಘ್ರ ವಿಲೇವಾರಿ ಮಾಡಬೇಕು ಎಂದು ಸೂಚನೆ ನೀಡಿದ್ದೇನೆ ಎಂದ ಅವರು, 182 ಕೆರೆಗಳಲ್ಲಿ 116 ಕೆರೆಗಳ ಒತ್ತುವರಿ ಬಗ್ಗೆ ಸರ್ವೇ ನಡೆಸಬೇಕಾಗಿದೆ. ಬಾಕಿ ಉಳಿದ ಕೆರೆಗಳನ್ನು ಸರ್ವೇ ನಡೆಸಬೇಕು. ಹಾಗೂ ಬಿಬಿಎಂಪಿ ಆಸ್ತಿಗಳನ್ನು ಗುರುತು ಮಾಡಬೇಕು. ಪಾಲಿಕೆ ಆಸ್ತಿ ಸಂರಕ್ಷಣೆ ಸೇರಿದಂತೆ ಒತ್ತುವರಿ ತೆರವಿಗೆ ಶೀಘ್ರ ಕ್ರಮ ತೆಗೆದುಕೊಳ್ಳಬೇಕು ಎಂದು ಹೇಳಲಾಗಿದೆ. ಸಂಸ್ಕರಿಸಿದ ನೀರನ್ನು ಕೆರೆಗಳಿಗೆ ತುಂಬಿಸುವ ಜವಾಬ್ದಾರಿಯನ್ನು ಬಿಡ್ಬ್ಲೂಎಸ್‌ಎಸ್‌ಬಿ ಗೆ ವಹಿಸಲಾಗಿದೆ. ಕೆರೆಗಳಲ್ಲಿ ನೀರಿದ್ದರೆ ಒತ್ತುವರಿ ತಪ್ಪುತ್ತದೆ, ಅಂತರ್ಜಲ ಹೆಚ್ಚುತ್ತದೆ. ಆದ ಕಾರಣ ಈ ಕ್ರಮ ತೆಗೆದುಕೊಳ್ಳಲಾಗಿದೆ ಎಂದು ಹೇಳಿದರು.

ಇದನ್ನೂ ಓದಿ: COMEDK UGET 2024: ನಾಳೆ ಮಧ್ಯಾಹ್ನ ಕಾಮೆಡ್‌ – ಕೆ ಫಲಿತಾಂಶ ಪ್ರಕಟ; ವೀಕ್ಷಣೆ, ಡೌನ್‌ಲೋಡ್‌ ಮಾಡಿಕೊಳ್ಳೋದು ಹೇಗೆ?

ನಗರದಲ್ಲಿ ಸುಮಾರು 5 ಸಾವಿರಕ್ಕೂ ಹೆಚ್ಚು ರಸ್ತೆ ಗುಂಡಿಗಳು ಇವೆ ಎಂದು ಸಿಎಂ ಮಾಹಿತಿ ನೀಡಿದ್ದರು. ಲೋಕಸಭಾ ಚುನಾವಣಾ ಫಲಿತಾಂಶ ಬಂದ ನಂತರ ಸಾರ್ವಜನಿಕರೇ ರಸ್ತೆಗುಂಡಿಗಳ ಫೋಟೋ ತೆಗೆದು ಮಾಹಿತಿ ನೀಡುವ ಆ್ಯಪ್ ಬಿಡುಗಡೆ ಮಾಡಲಾಗುವುದು. ಮುಂದಿನ 15 ದಿನಗಳಲ್ಲಿ ಎಲ್ಲಾ ರಸ್ತೆಗುಂಡಿಗಳನ್ನು ಮುಚ್ಚಬೇಕು ಎಂದು ತಿಳಿಸಲಾಗಿದೆ ಎಂದರು.

Continue Reading

ಶಿಕ್ಷಣ

COMEDK UGET 2024: ನಾಳೆ ಮಧ್ಯಾಹ್ನ ಕಾಮೆಡ್‌ – ಕೆ ಫಲಿತಾಂಶ ಪ್ರಕಟ; ವೀಕ್ಷಣೆ, ಡೌನ್‌ಲೋಡ್‌ ಮಾಡಿಕೊಳ್ಳೋದು ಹೇಗೆ?

COMEDK UGET 2024: ಕಾಮೆಡ್‌ – ಕೆ ಪರೀಕ್ಷೆಯನ್ನು ದೇಶಾದ್ಯಂತ ನಡೆಸಲಾಗಿದ್ದು, 200ಕ್ಕೂ ಹೆಚ್ಚು ಕೇಂದ್ರಗಳಲ್ಲಿ ವ್ಯವಸ್ಥೆ ಮಾಡಲಾಗಿತ್ತು. ಪ್ರತಿ ವರ್ಷ ಮೇ ತಿಂಗಳಲ್ಲಿ ನಡೆಯುವ ಈ ಪ್ರವೇಶ ಪರೀಕ್ಷೆಯು ಪದವಿ ಪೂರ್ವ ಮೆಡಿಕಲ್, ಎಂಜಿನಿಯರಿಂಗ್, ಡೆಂಟಲ್‌ ಕೋರ್ಸ್‌ಗಳ ಪ್ರವೇಶಕ್ಕೆ ಬುನಾದಿಯಾಗಲಿದೆ. ಶುಕ್ರವಾರ (ಮೇ 24) ಮಧ್ಯಾಹ್ನ 2 ಗಂಟೆಗೆ ಪ್ರಕಟಿಸಲಾಗುತ್ತದೆ. COMEDK UGET 2024ರ ಫಲಿತಾಂಶವನ್ನು ಅಧಿಕೃತ ವೆಬ್‌ಸೈಟ್‌ನಲ್ಲಿ ಪರಿಶೀಲಿಸಿಕೊಳ್ಳಬಹುದಾಗಿದೆ.

VISTARANEWS.COM


on

COMEDK UGET 2024 Result Declared Tomorrow Afternoon How to view and download
Koo

ಬೆಂಗಳೂರು: ಕರ್ನಾಟಕದ ವೈದ್ಯಕೀಯ, ಎಂಜಿನಿಯರಿಂಗ್ ಮತ್ತು ದಂತ ವೈದ್ಯಕೀಯ ಕಾಲೇಜುಗಳ ಒಕ್ಕೂಟ (COMEDK) 2024ರ ಪ್ರವೇಶ ಪರೀಕ್ಷೆಯ (UGET) ಫಲಿತಾಂಶವನ್ನು ಶುಕ್ರವಾರ (ಮೇ 24) ಮಧ್ಯಾಹ್ನ 2 ಗಂಟೆಗೆ ಪ್ರಕಟಿಸಲಾಗುತ್ತದೆ. COMEDK UGET 2024ರ ಫಲಿತಾಂಶವನ್ನು ಅಧಿಕೃತ ವೆಬ್‌ಸೈಟ್ನಲ್ಲಿ ಪರಿಶೀಲಿಸಿಕೊಳ್ಳಬಹುದಾಗಿದ್ದು, ಡೌನ್‌ಲೋಡ್ ಮಾಡಿಕೊಳ್ಳುವ ಅವಕಾಶವನ್ನೂ ಕಲ್ಪಿಸಲಾಗಿದೆ.

ಕರ್ನಾಟಕದ 150 ಪ್ರೈವೇಟ್‌ ಎಂಜಿನಿಯರಿಂಗ್ ಕಾಲೇಜು, ದೇಶದ ಕೆಲವು ಕಡೆ ಇರುವ 40 ಖಾಸಗಿ ವಿವಿಗಳಲ್ಲಿನ ಸುಮಾರು 22 ಸಾವಿರ ಎಂಜಿನಿಯರಿಂಗ್ ಸೀಟುಗಳ ಪ್ರವೇಶಾತಿಗಾಗಿ ಈ ಅರ್ಹತಾ ಪರೀಕ್ಷೆಯನ್ನು ನಡೆಸಲಾಗಿತ್ತು. ದೇಶದ 1,03,799 (ಶೇಕಡಾ 87.96) ವಿದ್ಯಾರ್ಥಿಗಳು ಪರೀಕ್ಷೆಯನ್ನು ಬರೆದಿದ್ದು, ಶುಕ್ರವಾರ ಅವರ ಭವಿಷ್ಯ ನಿರ್ಧಾರ ಆಗಲಿದೆ. ವಿದ್ಯಾರ್ಥಿಗಳು ತಮ್ಮ ಶ್ರೇಯಾಂಕದ ಪಟ್ಟಿಯನ್ನು ಪರಿಶೀಲಿಸಿಕೊಂಡು ಸ್ಕೋರ್‌ ಕಾರ್ಡ್‌ ಅನ್ನು ಡೌನ್‌ಲೋಡ್‌ ಮಾಡಿಕೊಳ್ಳಬಹುದು.

COMEDK UGET ಫಲಿತಾಂಶ 2024 ಪರಿಶೀಲನೆ ಹೇಗೆ?

ಹಂತ 1: ಕಾಮೆಡ್‌ಕೆ ಪರೀಕ್ಷಾ ಪೋರ್ಟಲ್‌ಗೆ ಭೇಟಿ ನೀಡಿ.

ಹಂತ 2: COMEDK UGET 2024 ಫಲಿತಾಂಶದ ಲಾಗಿನ್ ಲಿಂಕ್ ಮೇಲೆ ಕ್ಲಿಕ್ ಮಾಡಿ.

ಹಂತ 3: ನಿಮ್ಮ ಲಾಗಿನ್ ರುಜುವಾತುಗಳನ್ನು ನಮೂದಿಸಿ – ಅಪ್ಲಿಕೇಶನ್ ಸಂಖ್ಯೆ ಅಥವಾ ಬಳಕೆದಾರ ID ಮತ್ತು ಪಾಸ್‌ವರ್ಡ್ ಮತ್ತು ನಂತರ ಸಲ್ಲಿಸು ಮೇಲೆ ಕ್ಲಿಕ್ ಮಾಡಿ.

ಹಂತ 4: COMEDK UGET ಫಲಿತಾಂಶ 2024 ಪರದೆಯ ಮೇಲೆ ಕಾಣಿಸುತ್ತದೆ.

ಹಂತ 5: ಕೀ ಉತ್ತರವನ್ನು ಪರಿಶೀಲಿಸಿ ಮತ್ತು ಡೌನ್‌ಲೋಡ್ ಮಾಡಿ.

ವಾರದಲ್ಲಿ ಕೌನ್ಸೆಲಿಂಗ್‌ ನೋಂದಣಿ ಆರಂಭ

ಮೇ 24ರಂದು ಕಾಮೆಡ್‌ಕೆ ರಿಸಲ್ಟ್‌ ಪ್ರಕಟವಾಗಿ ವಾರದಲ್ಲಿ ಕೌನ್ಸೆಲಿಂಗ್‌ ನೋಂದಣಿ ಆರಂಭವಾಗಲಿದೆ. ಕರ್ನಾಟಕದಲ್ಲಿರುವ 150 ಖಾಸಗಿ ಎಂಜಿನಿಯರಿಂಗ್ ಕಾಲೇಜು ಮತ್ತು ದೇಶದ ವಿವಿಧ ಕಡೆ ಇರುವ 40 ಖಾಸಗಿ ವಿಶ್ವವಿದ್ಯಾಲಯಗಳಲ್ಲಿ ಯಾವ ಕಡೆಯಲ್ಲಾದರೂ ಪ್ರವೇಶ ಪಡೆಯಬೇಕೆಂದರೆ ಇಲ್ಲಿ ನೋಂದಣಿಯನ್ನು ಮಾಡಿಕೊಂಡಿರಬೇಕು.

ಇದನ್ನೂ ಓದಿ: Rave party: ರೇವ್‌ ಪಾರ್ಟಿಯಲ್ಲಿ ಹೇಮಾ, ಆಶಿ ಸೇರಿ 86 ಮಂದಿಯಿಂದ ಮಾದಕ ವಸ್ತು ಸೇವನೆ; ಬ್ಲಡ್‌ ರಿಪೋರ್ಟ್‌ ಪಾಸಿಟಿವ್‌

ಪ್ರತಿ ವರ್ಷ ಮೇ ತಿಂಗಳಲ್ಲಿ ಕಾಮೆಡ್‌-ಕೆ ಪರೀಕ್ಷೆ

ಕಾಮೆಡ್‌ – ಕೆ ಪರೀಕ್ಷೆಯನ್ನು ದೇಶಾದ್ಯಂತ ನಡೆಸಲಾಗಿದ್ದು, 200ಕ್ಕೂ ಹೆಚ್ಚು ಕೇಂದ್ರಗಳಲ್ಲಿ ವ್ಯವಸ್ಥೆ ಮಾಡಲಾಗಿತ್ತು. ಪ್ರತಿ ವರ್ಷ ಮೇ ತಿಂಗಳಲ್ಲಿ ನಡೆಯುವ ಈ ಪ್ರವೇಶ ಪರೀಕ್ಷೆಯು ಪದವಿ ಪೂರ್ವ ಮೆಡಿಕಲ್, ಎಂಜಿನಿಯರಿಂಗ್, ಡೆಂಟಲ್‌ ಕೋರ್ಸ್‌ಗಳ ಪ್ರವೇಶಕ್ಕೆ ಬುನಾದಿಯಾಗಲಿದೆ.

Continue Reading

ಮಳೆ

Karnataka Rain : ಮಳೆ ಅವಘಡಕ್ಕೆ ಜನರು ತತ್ತರ; ಧರೆಗುರುಳಿದ ಮರಗಳು, ಕುಸಿದು ಬಿದ್ದ ಮನೆಗಳು

Rain News : ರಾಜ್ಯದ ಹಲವೆಡೆ ಮಳೆಯು (Karnataka Rain) ಅಬ್ಬರಿಸುತ್ತಿದೆ. ಮೈಸೂರಿನ ಹುಣಸೂರಿನಲ್ಲಿ ಜೋರು ಮಳೆಗೆ ಮನೆ ಕುಸಿದು ಬಿದ್ದರೆ, ಬೆಳಗಾವಿಯಲ್ಲಿ ಗಾಳಿ ಮಳೆಗೆ ಶಾಲೆಯ ಶೆಡ್‌
(Karnataka Weather Forecast) ಹಾರಿ ಹೋಗಿದೆ. ಯಾದಗಿರಿ, ಧಾರವಾಡದಲ್ಲಿ ಮರಗಳು ಧರೆಗುರುಳಿದ್ದವು.

VISTARANEWS.COM


on

By

Karnataka rain
Koo

ಮೈಸೂರು: ಮೈಸೂರಿನ ಹುಣಸೂರು ಭಾಗದಲ್ಲಿ ವರುಣನ (Rain News) ಅಬ್ಬರ ಜೋರಾಗಿದೆ. ಕಳೆದ ನಾಲ್ಕೈದು ದಿನಗಳಿಂದ ಸುರಿಯುತ್ತಿರುವ ಮಳೆಗೆ (Karnataka Rain) ತಾಲೂಕಿನ ಹಲವು ಗ್ರಾಮಗಳಲ್ಲಿ ಅಪಾರ ಪ್ರಮಾಣದಲ್ಲಿ ಹಾನಿಯಾಗಿದೆ. ಕಾಳೇನಹಳ್ಳಿಯಲ್ಲಿ ಶ್ರೀನಿವಾಸ್ ಎಂಬುವರಿಗೆ ಸೇರಿದ ಮನೆಯು ಕುಸಿದು ಬಿದ್ದಿದೆ. ಅದೃಷ್ಟವಶಾತ್ ಯಾವುದೇ ಅಪಾಯ ಸಂಭವಿಸಿಲ್ಲ. ಜೋರಾಗಿ ಸುರಿದ ಮಳೆಗೆ ಮನೆಯಲ್ಲಿದ್ದ ವಸ್ತುಗಳೆಲ್ಲ ನಾಶವಾಗಿದೆ. ವಾಸಕ್ಕೆ ಮನೆಯಿಲ್ಲದ ಪರಿಸ್ಥಿತಿ ನಿರ್ಮಾಣವಾಗಿದ್ದು, ಕುಟುಂಬಸ್ಥರು ಪರಿಹಾರಕ್ಕಾಗಿ ಮನವಿ ಮಾಡಿದ್ದಾರೆ.

ಇತ್ತ ಹನಗೋಡಿನಲ್ಲಿ ಭಾರಿ ಮಳೆಗೆ ಜನರು ತತ್ತರಿಸಿದ್ದರು. ಹುಣಸೂರು ತಾಲೂಕಿನ ಹನಗೋಡಿ ಗ್ರಾಮದಲ್ಲಿ ವಾರದಿಂದ ಸುರಿಯುತ್ತಿರುವ ಮಳೆಗೆ ಮನೆ ಅಂಗಡಿಗಳಿಗೆ ನೀರು ನುಗ್ಗಿ ಸಂಪೂರ್ಣ ಜಲಾವೃತಗೊಂಡಿತ್ತು. ಬಸ್ ನಿಲ್ದಾಣ ಕೆರೆಯಂತಾಗಿತ್ತು. ಚರಂಡಿಗಳ ವ್ಯವಸ್ಥೆ ಸರಿಯಿಲ್ಲದೆ ನೀರು ಹೋಗದೆ ನಿಂತಲ್ಲೇ ನಿಂತು ಜನರಿಗೆ ತೊಂದರೆಯಾಗಿತ್ತು.

ಇದನ್ನೂ ಓದಿ: Accident Case : ಇಳಿಜಾರಿನಲ್ಲಿ ತಪ್ಪಿದ ಕಂಟ್ರೋಲ್‌; ಟ್ರ್ಯಾಕ್ಟರ್‌ ಪಲ್ಟಿಯಾಗಿ ಯುವಕ ಮೃತ್ಯು

ಗಾಳಿ ಮಳೆಗೆ ಹಾರಿ ಹೋದ ಶಾಲೆಯ ಶೆಡ್‌

ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಜುಗೂಳ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಜೋರು ಗಾಳಿ ಮಳೆಗೆ ಶೆಡ್ ಹಾರಿ ಹೋಗಿತ್ತು. ಶಾಲೆಗೆ ರಜೆ ಇದ್ದಿದ್ದರಿಂದ ಭಾರಿ ಅನಾಹುತ ತಪ್ಪಿತ್ತು. ಶಾಲೆಯ ಶೆಡ್ ಹಾರಿ ಅಕ್ಕಪಕ್ಕದ ಮನೆಗಳು ಹಾಗೂ ವಿದ್ಯುತ್ ತಂತಿಗಳು ಮೇಲೆ ಬಿದ್ದು ಹಾನಿಯಾಗಿತ್ತು.

ಯಾದಗಿರಿಯಲ್ಲಿ ಧರೆಗುರುಳಿದ ಮರಗಳು

ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆಗೆ ಬೃಹತ್ ಮರಗಳು ಧರೆಗುರುಳಿದ್ದವು. ಸತತ ಒಂದು ಗಂಟೆಗೂ ಹೆಚ್ಚು ಸಮಯ ಸುರಿದ ಮಳೆಗೆ ಮರಗಳ ಮೇಲ್ಭಾಗದ ರಂಬೆ, ಕೊಂಬೆಗಳು ಸಂಪೂರ್ಣ ಗಾಳಿಗೆ ಮುರಿದು ಬೋಳಾಗಿದ್ದವು. ಕೆಲವೆಡೆ ಮನೆ ಮುಂದೆ ಇದ್ದ ಮರಗಳು ನೆಲಕ್ಕುರುಳಿದ್ದವು. ಭಾರಿ ಮಳೆಗೆ ಸುಭಾಷ್ ವೃತ್ತದ ಸಮೀಪದ ಪಿಡ್ಲೂಡಿ ಕಚೇರಿ ಆವರಣದೊಳಗೆ ಮಳೆ ನೀರು ನುಗ್ಗಿತ್ತು. ಯಾದಗಿರಿ ಶಾಸಕ ಚನ್ನಾರೆಡ್ಡಿ ಪಾಟೀಲ ತುನ್ನೂರು ಅವರ ಜನಸಂಪರ್ಕದ ಕಚೇರಿ ಆವರಣದಲ್ಲಿ ಮರಗಳು ಧರೆಗುರುಳಿದ್ದವು.

ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಭಾರೀ ಮಳೆಗೆ ಆರು ಜನರ ಕುಟುಂಬವೊಂದು ಪ್ರಾಣಾಪಾಯದಿಂದ ಜಸ್ಟ್ ಮಿಸ್ ಆಗಿದೆ. ಯಾದಗಿರಿಯ ಮಾತಾಮಣಿಕೇಶ್ವರಿ ನಗರದಲ್ಲಿ ಭಾರೀ ಮಳೆ ಗಾಳಿಗೆ ಮನೆಗೆ ಹಾಕಿದ ಟಿನ್ ಶೆಡ್ ಹಾರಿಹೋಗಿದೆ. ಮಳೆ ಗಾಳಿ ಜೋರಾಗುತ್ತಿದ್ದಂತೆ ಇಡೀ ಕುಟುಂಬ ಮನೆಯಿಂದ ಹೊರಬಂದು ಬಚಾವ್ ಆಗಿದ್ದಾರೆ. ಮನೆಯಿಂದ ಹೊರ ಬಂದ ಕೆಲವೇ ಕ್ಷಣದಲ್ಲಿ ಟಿನ್ ಶೆಡ್ ಕುಸಿದು ಬಿದ್ದಿದೆ. ಇತ್ತ ದಿನಸಿ ಸಾಮಾನು ಸೇರಿದಂತೆ ಎಲ್ಲ ವಸ್ತುಗಳು ಹಾಳಾಗಿವೆ.

ಧಾರಾವಾಡದಲ್ಲಿ ಧಾರಾಕಾರ ಮಳೆಗೆ ರಸ್ತೆ ಮೇಲೆ ನಿಂತ ನೀರು

ಧಾರವಾಡದಲ್ಲಿ ಗುರುವಾರದಂದು ಅರ್ಧ ಗಂಟೆಗೂ ಹೆಚ್ಚು ಸಮಯ ಮಳೆಯಾಗಿತ್ತು. ಎರಡು ದಿನದಿಂದ ಬ್ರೇಕ್‌ ಕೊಟ್ಟಿದ್ದ ಮಳೆಯು ಗುರುವಾರ ದಿಢೀರ್‌ ಅಪ್ಪಳಿಸಿತ್ತು. ಪರಿಣಾಮ ವಾಹನ ಸಂಚಾರ ಅಸ್ತವ್ಯಸ್ತವಾಗಿತ್ತು. ಧಾರವಾಡ ಹೊರವಲಯದ ಕೆಎಂಎಫ್ ಬಳಿ ಧಾರಾಕಾರ ಮಳೆಗೆ ರಸ್ತೆಯಲ್ಲೇ ನೀರು ನಿಂತಿತ್ತು. ಬಿಆರ್‌ಟಿಎಸ್ ಕಾರಿಡಾರ್‌ನಿಂದ ಹರಿದು ಹೋಗದೇ ಇರುವುದೇ ಕಾರಣ ಎಂದು ಸ್ಥಳೀಯರು ಆಕ್ರೋಶಿಸಿದರು.

ಚಿಕ್ಕಮಗಳೂರಿನ ಕೊಪ್ಪ ತಾಲೂಕಿನ ಬಸರೀಕಟ್ಟೆ, ತರೀಕೆರೆಯಲ್ಲೂ ಭಾರೀ ಮಳೆಯಾಗಿದ್ದು ರಸ್ತೆಯಲ್ಲಿ ಎರಡು ಅಡಿ ನೀರು ನಿಂತಿತ್ತು. ತರೀಕೆರೆ ಪಟ್ಟಣದ ಗಣಪತಿ ಪೆಂಡಾಲ್ ಮುಂಭಾಗ ಕಾರು, ಬೈಕ್‌ಗಳು ಅರ್ಧದಷ್ಟು ಮುಳುಗಿತ್ತು. ಎನ್ಆರ್‌ ಪುರ ತಾಲೂಕಿನ ಬಾಳೆಹೊನ್ನೂರಿನಲ್ಲೂ ಮಳೆಯಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕ್ರೈಂ

Rave party: ರೇವ್‌ ಪಾರ್ಟಿಯಲ್ಲಿ ಹೇಮಾ, ಆಶಿ ಸೇರಿ 86 ಮಂದಿಯಿಂದ ಮಾದಕ ವಸ್ತು ಸೇವನೆ; ಬ್ಲಡ್‌ ರಿಪೋರ್ಟ್‌ ಪಾಸಿಟಿವ್‌

Rave party: ಈಗಾಗಲೇ ಪಾರ್ಟಿ ಮಾಡಿದ ಐವರನ್ನು ಬಂಧಿಸಲಾಗಿದೆ. 73 ಮಂದಿ ಪುರುಷರಲ್ಲಿ 59 ಮಂದಿ ಬ್ಲಡ್ ರಿಪೋರ್ಟ್ ಪಾಸಿಟಿವ್ ಬಂದಿದ್ದರೆ, 30 ಮಂದಿ ಯುವತಿಯರ ಪೈಕಿ 27 ಮಂದಿಯ ಬ್ಲಡ್ ರಿಪೋರ್ಟ್ ಪಾಸಿಟಿವ್ ಬಂದಿದೆ. ಹೀಗಾಗಿ ಪಾರ್ಟಿಯಲ್ಲಿ ಸೇರಿದ್ದ ಬಹುತೇಕ ಮಂದಿ ಮಾದಕ ವಸ್ತು ಸೇವನೆ ಮಾಡಿದ್ದಾರೆ. ಟಿಯರಾದ ಹೇಮಾ ಹಾಗೂ ಆಶಿ ರಾಯ್‌ ಸಹ ಮಾದಕ ವಸ್ತುಗಳನ್ನು ಸೇವಿಸಿದ್ದಾರೆಂಬುದು ಸಾಬೀತಾಗಿವೆ ಎನ್ನಲಾಗಿದೆ.

VISTARANEWS.COM


on

Rave party 86 people including Hema and Ashi consumed drugs in the rave party Blood report positive
Koo

ಬೆಂಗಳೂರು: ಮೇ 19ರ ತಡರಾತ್ರಿ ಎಲೆಕ್ಟ್ರಾನಿಕ್‌ ಸಿಟಿಯ (electronic city) ಫಾರಂ ಹೌಸ್‌ನಲ್ಲಿ (Farm house) ನಡೆದಿದ್ದ ರೇವ್‌ ಪಾರ್ಟಿಯಲ್ಲಿ (Rave party) ತೆಲುಗು ನಟಿಯರಾದ ಹೇಮಾ (Telugu actress Hema) ಹಾಗೂ ಆಶಿ ರಾಯ್ (Aashi Roy) ಒಳಗೊಂಡಂತೆ 103 ಮಂದಿ ಭಾಗಿಯಾಗಿದ್ದರು. ಇಲ್ಲಿ ಮಾದಕ ವಸ್ತುಗಳನ್ನು ಸೇವನೆ ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿತ್ತು. ಹೀಗಾಗಿ ಅಷ್ಟೂ ಮಂದಿಯನ್ನು ತಪಾಸಣೆಗೊಳಪಡಿಸಲಾಗಿತ್ತು. ಈಗ ವೈದ್ಯಕೀಯ ವರದಿ ಬಂದಿದ್ದು, ಅವರಲ್ಲಿ 86 ಮಂದಿಯ ರಿಪೋರ್ಟ್ ಪಾಸಿಟಿವ್ ಬಂದಿದೆ. ನಟಿಯರಾದ ಹೇಮಾ ಹಾಗೂ ಆಶಿ ರಾಯ್‌ ಸಹ ಮಾದಕ ವಸ್ತುಗಳನ್ನು ಸೇವಿಸಿದ್ದಾರೆಂಬುದು ಸಾಬೀತಾಗಿವೆ ಎನ್ನಲಾಗಿದೆ.

ಈಗಾಗಲೇ ಪಾರ್ಟಿ ಮಾಡಿದ ಐವರನ್ನು ಬಂಧಿಸಲಾಗಿದೆ. 73 ಮಂದಿ ಪುರುಷರಲ್ಲಿ 59 ಮಂದಿ ಬ್ಲಡ್ ರಿಪೋರ್ಟ್ ಪಾಸಿಟಿವ್ ಬಂದಿದ್ದರೆ, 30 ಮಂದಿ ಯುವತಿಯರ ಪೈಕಿ 27 ಮಂದಿಯ ಬ್ಲಡ್ ರಿಪೋರ್ಟ್ ಪಾಸಿಟಿವ್ ಬಂದಿದೆ. ಹೀಗಾಗಿ ಪಾರ್ಟಿಯಲ್ಲಿ ಸೇರಿದ್ದ ಬಹುತೇಕ ಮಂದಿ ಮಾದಕ ವಸ್ತು ಸೇವನೆ ಮಾಡಿದ್ದಾರೆ.

ವಾಸು ಎಂಬಾತನ ಬರ್ತ್‌ ಡೇ ಪಾರ್ಟಿಗಾಗಿ ಏರ್ಪಡಿಸಲಾಗಿದ್ದ ಈ ರೇವ್ ಪಾರ್ಟಿಯಲ್ಲಿ ದೊಡ್ಡ ಮಟ್ಟದ ಮಾದಕ ವಸ್ತು ಬಳಕೆ ಮಾಡಲಾಗುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿದ್ದರು. ಈ ವೇಳೆ ದೊಡ್ಡ ಪ್ರಮಾಣದಲ್ಲಿ ಎಂಡಿಎಂಎ, ಕೊಕೇನ್, ಹೈಡ್ರೋ ಗಾಂಜಾ ಪತ್ತೆಯಾಗಿದ್ದವು.

Sunset To Sun Rise victory ಶೀರ್ಷಿಕೆಯಲ್ಲಿ ಈ ರೇವ್ ಪಾರ್ಟಿಯನ್ನು ಆಯೋಜನೆ ಮಾಡಲಾಗಿತ್ತು. ಪಾರ್ಟಿಯಲ್ಲಿ ಸುಮಾರು ನೂರೈವತ್ತು ಮಂದಿ ಸೇರಿದ್ದರು. ಪೊಲೀಸ್‌ ದಾಳಿ ವೇಳೆ ಕೆಲವರು ತಪ್ಪಿಸಿಕೊಂಡು ಓಡಿದ್ದರು. ಆದರೆ, ಬಹುತೇಕ ಮಂದಿ ಸಿಕ್ಕಿಬಿದ್ದಿದ್ದರು. ಈಗ ಸಿಕ್ಕಿಬಿದ್ದವರಲ್ಲಿ ಬಹುತೇಕರ ಬ್ಲಡ್ ರಿಪೋರ್ಟ್‌ನಲ್ಲಿ ಮಾದಕ ವಸ್ತು ಸೇವನೆ ಸಂಬಂಧ ಪಾಸಿಟಿವ್ ಅಂಶ ಪತ್ತೆಯಾಗಿದೆ. ಹೀಗಾಗಿ ಪಾಸಿಟಿವ್‌ ರಿಪೋರ್ಟ್‌ ಬಂದವರಿಗೆ ಸಿಸಿಬಿ ನೋಟಿಸ್ ನೀಡಲಿದ್ದು, ಅವರನ್ನು ಕರೆಸಿ ವಿಚಾರಣೆ ನಡೆಸಲಾಗುತ್ತದೆ.

ʼರೇವ್‌ ಪಾರ್ಟಿಯಲ್ಲಿ ನಾನಿಲ್ಲʼ ಎಂದು ವಿಡಿಯೋ ಮಾಡಿದ್ದ ಹೇಮಾ!

ಈ ರೇವ್‌ ಪಾರ್ಟಿಯಲ್ಲಿ ತೆಲುಗು ನಟಿ ಹೇಮಾ ಭಾಗಿಯಾಗಿದ್ದು, ಪೊಲೀಸ್‌ ವಶದಲ್ಲಿದ್ದಾರೆ ಎಂದು ಸುದ್ದಿಯಾಗಿದ್ದಂತೆ ವಿಡಿಯೊವೊಂದನ್ನು ಮಾಡಿ ಸೋಷಿಯಲ್‌ ಮೀಡಿಯಾದಲ್ಲಿ ಅಪ್ಲೋಡ್‌ ಮಾಡಿದ್ದ ಹೇಮಾ, ನಾನು ಆ ರೇವ್‌ ಪಾರ್ಟಿಯಲ್ಲಿ ಭಾಗಿಯಾಗಲೇ ಇಲ್ಲ. ಹೈದರಾಬಾದ್‌ನ ಫಾರ್ಮ್‌ ಹೌಸ್‌ನಲ್ಲಿದ್ದೇನೆ ಎಂದು ವಿಡಿಯೊ ಸಂದೇಶವನ್ನು ಹರಿಬಿಟ್ಟಿದ್ದರು. ಆದರೆ, ಮುಜುಗರ ತಪ್ಪಿಸಲು ಅವರು ಅದೇ ಫಾರಂ ಹೌಸ್‌ನ ಒಂದು ಕಡೆ ಬಂದು ವಿಡಿಯೊ ಮಾಡಿದ್ದಾರೆ ಎಂದು ಹಲವರು ಅಂದೇ ಹೇಳಿದ್ದರು. ಹೆಬ್ಬಗೋಡಿ ಫಾರ್ಮ್ ಹೌಸ್ ಒಳಗಡೆಯೇ ವಿಡಿಯೋ ಮಾಡಿ, ತಾನು ಹೈದರಾಬಾದ್‌ ಫಾರ್ಮ್ ಹೌಸ್‌ನಲ್ಲಿದ್ದೀನಿ ಎಂದು ಸುಳ್ಳು ಹೇಳುತ್ತಿದ್ದಾರೆ ಎಂದು ಹಲವರು ವಾದಿಸಿದ್ದರು. ಈಗ ಈ ಸಂಬಂಧ ಪೊಲೀಸರಿಗೆ ಬಂದಿರುವ ರಿಪೋರ್ಟ್‌ ವೈರಲ್‌ ಆಗಿದ್ದು, ಅವರು ಸಹ ಮಾದಕ ವಸ್ತು ಸೇವನೆ ಮಾಡಿರುವುದು ಸಾಬೀತಾಗಿದೆ ಎಂದು ತಿಳಿದುಬಂದಿದೆ.

ಕಮೋಡ್‌ನಲ್ಲಿ ಫ್ಲಶ್‌ ಮಾಡಿದರು!

ಸಿಸಿಬಿ ಪೊಲೀಸರು ದಾಳಿ ಮಾಡಿದ ಸಂದರ್ಭದಲ್ಲಿ ಪಾರ್ಟಿ ಆಯೋಜಕರು ಸ್ಥಳದ ಡೋರ್‌ಲಾಕ್ ಮಾಡಿಕೊಂಡಿದ್ದಲ್ಲದೆ, ಎಂಡಿಎಂಎ ಮತ್ತು ಇನ್ನಿತರೆ ಮಾದಕ ವಸ್ತುಗಳನ್ನು ಸಿಕ್ಕಸಿಕ್ಕಲ್ಲಿ ಎಸೆದಿದ್ದರು. ಪೊಲೀಸರು ಎಂದು ಗೊತ್ತಾಗುತ್ತಿದ್ದಂತೆ ಓಡಿಹೋಗಲು ಯತ್ನಿಸಿದ್ದರು. ಡ್ರಗ್ಸ್‌ ಅನ್ನು ಬಾತ್ ರೂಂನ ಕಮೋಡ್‌ನಲ್ಲಿ ಹಾಕಿ ಫ್ಲಶ್ ಮಾಡಿದ್ದರು.. ಪೊಲೀಸರು ಬಲವಂತವಾಗಿ ಡೋರ್ ತೆಗಿಸಿ ಒಳಹೋಗಿದ್ದು, ಫಾರ್ಮ್ ಹೌಸ್‌ನ ಇಂಚಿಂಚನ್ನೂ ಜಾಲಾಡಿದ್ದರು.

3 ಜನ ಡ್ರಗ್ ಪೆಡ್ಲರ್‌ಗಳು, ಆಯೋಜಕ ವಾಸು ಸೇರಿ ಐದು ಜನರನ್ನು ಅಂದೇ ಪೊಲೀಸರು ಬಂಧಿಸಿದ್ದರು. ಪಾರ್ಟಿಯಲ್ಲಿ ಡ್ರಗ್ ಪೆಡ್ಲರ್‌ಗಳೂ ಭಾಗಿಗಳಾಗಿದ್ದರು. ಇವರು ಯಥೇಚ್ಛವಾಗಿ ಮಾದಕ ವಸ್ತುಗಳನ್ನು ಪೂರೈಸುತ್ತಿದ್ದರು. ವಾಸು ಹುಟ್ಟಿದ ಹಬ್ಬಕ್ಕೆ ಪಾರ್ಟಿ ಆಯೋಜಿಸಿದ ಆರ್ಗನೈಸರ್ ಅರುಣ್, ಸಿದ್ಧಿಕಿ, ರಣಬೀರ್, ನಾಗಬಾಬುರನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದರು. ಮಾದಕ ವಸ್ತು ಸಿಕ್ಕಿದಂತಹ ಐಷಾರಾಮಿ ಮರ್ಸಿಡಿಸ್‌ ಬೆಂಜ್‌, ರೇಂಜ್ ರೋವರ್, ಆಡಿ ಕಾರುಗಳನ್ನು ವಶಕ್ಕೆ ಪಡೆಯಲಾಗಿತ್ತು.

ಎಂಟ್ರಿಗೆ ಪಾಸ್‌ವರ್ಡ್‌ ನೀಡಿದ್ದ ವಾಸು

ಪಾರ್ಟಿ ಆಯೋಜಕ, ಆರೋಪಿ ವಾಸು ಪೊಲೀಸರಿಂದ ಬಚಾವಾಗಲು ʼನಾನು ಪಾರ್ಟಿಗೆ ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ಅನುಮತಿ ಪಡೆದಿದ್ದೇನೆಂದುʼ ಸುಳ್ಳು ಹೇಳಿಕೆ ನೀಡಿದ್ದ. ಆದರೆ, ಫಾರ್ಮ್ ಹೌಸ್ ಹೆಬ್ಬಗೋಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿದೆ. ಪಾರ್ಟಿಗೆ ಬಂದವರು ಫಾರ್ಮ್ ಹೌಸ್ ಒಳಗೆ ಹೋಗಬೇಕಾದರೆ ಸೆಕ್ಯೂರಿಟಿಗೆ ಪಾಸ್ ವರ್ಡ್ ಹೇಳಬೇಕಿತ್ತು. ವಾಸು ನೀಡಿದ ಪಾಸ್‌ವರ್ಡ್ ಹೇಳಿದರೆ ಮಾತ್ರ ಒಳಗೆ ಎಂಟ್ರಿಯಾಗಬಹುದಿತ್ತು. ಡ್ರಗ್ ಪಾರ್ಟಿ ಹಿನ್ನೆಲೆಯಲ್ಲಿ ಬೇರೆ ಯಾರೂ ಬಾರದಿರಲಿ ಎಂಬ ಕಾರಣಕ್ಕೆ ವಾಸು ಪಾಸ್‌ವರ್ಡ್ ನೀಡಿದ್ದ.

ಮಾದಕ ವಸ್ತುಗಳ ವಶಕ್ಕೆ

ಫಾರಂ ಹೌಸ್‌ನಲ್ಲಿ ಸದ್ಯ ಭಾರಿ ಪ್ರಮಾಣದಲ್ಲಿ ಎಂಡಿಎಂಎ, ಕ್ಯಾಪ್ಸೂಲ್, ಕೊಕೇನ್ ಇತ್ಯಾದಿ ಮಾದಕ ವಸ್ತುಗಳು ದೊರೆತಿದ್ದವು. 45 ಗ್ರಾಂನಷ್ಟು ಡ್ರಗ್ ವಶಕ್ಕೆ ಪಡೆಯಲಾಗಿತ್ತು. 1 ಗ್ರಾಂ ಕೊಕೇನ್‌ಗೆ 8ರಿಂದ 9 ಸಾವಿರ ರೂ. ದರವಿದೆ. ಇಂತಹ ಕೊಕೇನ್ ಭಾರಿ ಪ್ರಮಾಣದಲ್ಲಿ ಪಾರ್ಟಿಯಲ್ಲಿ ಪತ್ತೆಯಾಗಿದೆ. ಸದ್ಯ ಸಿಕ್ಕಿರುವ ಡ್ರಗ್ಸ್‌ನ ಮೌಲ್ಯ ಪರಿಶೀಲನೆಯನ್ನು ಸಿಸಿಬಿ ನಡೆಸುತ್ತಿದೆ.

ಇದನ್ನೂ ಓದಿ: Prajwal Revanna Case: ತಾಳ್ಮೆ ಪರೀಕ್ಷಿಸಬೇಡ, ಈಗಲೇ ಬಂದು ಶರಣಾಗು; ಪ್ರಜ್ವಲ್‌ಗೆ ದೇವೇಗೌಡರ ವಾರ್ನಿಂಗ್‌

ನಟಿ ಆಶಿ ರಾಯ್ ಹೇಳಿದ್ದೇನು?

ಈ ಪಾರ್ಟಿಯಲ್ಲಿ ಭಾಗಿಯಾಗಿದ್ದ ಆಶಿ ರಾಯ್‌ ಸಹ ವಿಡಿಯೊವೊಂದನ್ನು ಮಾಡಿ ಸ್ಪಷ್ಟನೆ ನೀಡಿದ್ದಾರೆ. ʻʻಅದೊಂದು ಬರ್ತ್‌ಡೇ ಪಾರ್ಟಿಯಾಗಿತ್ತು. ಒಳಗೆ ಏನು ನಡೀತಿತ್ತು ಎಂದು ಗೊತ್ತಿಲ್ಲ. ನಾನು ಯಾವುದೇ ತಪ್ಪು ಮಾಡಿಲ್ಲ. ದಯವಿಟ್ಟು ನೀವೆಲ್ಲ ನನ್ನ ಬೆಂಬಲಿಸಿ. ನಾನು ಕಷ್ಟಪಟ್ಟು ಉದ್ಯಮದಲ್ಲಿ ಬೆಳೆಯುತ್ತಿರುವ ಹುಡುಗಿ. ದಯವಿಟ್ಟು ನನಗೆ ಸಹಾಯ ಮಾಡಿʼʼ ಎಂದು ವಿಡಿಯೊವನ್ನು ಹಂಚಿಕೊಂಡಿದ್ದರು. ಆಶಿ ರಾಯ್‌ ಹಲವು ಸಂದರ್ಶನದಲ್ಲಿ ಪಾರ್ಟಿಯಲ್ಲಿ ಹೇಮಾ ಅವರನ್ನು ನೋಡಿಲ್ಲ ಎಂದಿದ್ದಾರೆ. ಆಶಿರಾಯ್‌ ಅವರು ಹಲವು ತೆಲುಗು ಸಿನಿಮಾಗಳಲ್ಲಿ ನಟಿಸಿದ್ದಾರೆ.

Continue Reading
Advertisement
Narendra Modi
ದೇಶ2 hours ago

PM Modi: 400 ಸೀಟು, 400 ಸೀಟು ಎಂದು ಪ್ರತಿಪಕ್ಷಗಳನ್ನು ಮಂಗ್ಯಾ ಮಾಡಿದ ಮೋದಿ; ಅವರ ಮಾತಲ್ಲೇ ಕೇಳಿ!

Rajakaluve
ಸಂಪಾದಕೀಯ3 hours ago

ವಿಸ್ತಾರ ಸಂಪಾದಕೀಯ: ಮುಂಗಾರಿಗೆ ಮುನ್ನವೇ ರಾಜಕಾಲುವೆ ಒತ್ತುವರಿ ತೆರವಾಗಲಿ

IPL 2024
ಪ್ರಮುಖ ಸುದ್ದಿ3 hours ago

IPL 2024 : ಅಭಿಮಾನಿಗಳ ದುರಂಹಕಾರವೇ ಆರ್​​ಸಿಬಿ ಸೋಲಿಗೆ ಕಾರಣ ಎಂದ ಮಾಜಿ ಕ್ರಿಕೆಟಿಗ

DCM D K Shivakumar instructed to test drinking water everywhere including Bengaluru
ಕರ್ನಾಟಕ3 hours ago

Bengaluru News: ಬೆಂಗಳೂರು ಸೇರಿದಂತೆ ಎಲ್ಲೆಡೆ ಕುಡಿಯುವ ನೀರಿನ ಪರೀಕ್ಷೆಗೆ ಸೂಚನೆ ನೀಡಿದ ಡಿ.ಕೆ.ಶಿವಕುಮಾರ್

Naxals
ದೇಶ3 hours ago

Naxals: ಛತ್ತೀಸ್‌ಗಢದಲ್ಲಿ ಭದ್ರತಾ ಸಿಬ್ಬಂದಿ ಭರ್ಜರಿ ಬೇಟೆ; 7 ನಕ್ಸಲರ ಎನ್‌ಕೌಂಟರ್

IPL 2024
ಪ್ರಮುಖ ಸುದ್ದಿ4 hours ago

IPL 2024 : ಐಪಿಎಲ್​ನಲ್ಲಿ ಕಳಪೆ ದಾಖಲೆಯೊಂದನ್ನು ಸೃಷ್ಟಿಸಿ ನಿರ್ಗಮಿಸಿದ ಆರ್​ಸಿಬಿ

arecanut price
ಕರ್ನಾಟಕ4 hours ago

Arecanut Price: ಮಲೆನಾಡಿನ ರಾಶಿ ಇಡಿ ಅಡಿಕೆ ಧಾರಣೆ ‘ಅಬ್‌ ಕಿ ಬಾರ್ ₹60,000 ಪಾರ್ ಆಗಲಿದೆಯಾ?

Self Harming Husband commits suicide for taking his wife home
ಕರ್ನಾಟಕ4 hours ago

Self Harming: ಹೆಂಡತಿಯನ್ನು ತವರು ಮನೆಗೆ ಕರೆದುಕೊಂಡು ಹೋಗಿದ್ದಕ್ಕೆ ಪತಿ ಆತ್ಮಹತ್ಯೆ!

WhatsApp AI
ತಂತ್ರಜ್ಞಾನ4 hours ago

WhatsApp AI: WhatsAppಗೂ ಬಂತು ಎಐ; ನಿಮ್ಮ ಪ್ರೊಫೈಲ್‌ ಫೋಟೊ ಇನ್ನು AI ಜನರೇಟೆಡ್!‌

T20 world cup 2024
ಕ್ರೀಡೆ5 hours ago

T20 World Cup 2024 : ಭಾರತ ತಂಡ ವಿಶ್ವ ಕಪ್​ ಗೆಲ್ಲುವುದಿಲ್ಲ; ಇಂಗ್ಲೆಂಡ್​ ಮಾಜಿ ಆಟಗಾರನ ಭವಿಷ್ಯ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

dina bhavishya read your daily horoscope predictions for May 23 2024
ಭವಿಷ್ಯ21 hours ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ2 days ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ2 days ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು3 days ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

Contaminated Water
ಮೈಸೂರು3 days ago

Contaminated Water : ಡಿ ಸಾಲುಂಡಿಯಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದ ಯುವಕ ಸಾವು

Karnataka Rain
ಮಳೆ4 days ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Rain
ಮಳೆ4 days ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ4 days ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ5 days ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

Prajwal Revanna Case JDS calls CD Shivakumar pen drive gang
ರಾಜಕೀಯ6 days ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

ಟ್ರೆಂಡಿಂಗ್‌