ICC Chairman | ಐಸಿಸಿ ಅಧ್ಯಕ್ಷರಾಗಿ ಮರು ಆಯ್ಕೆಯಾದ ನ್ಯೂಜಿಲೆಂಡ್‌ನ ಗ್ರೆಗ್ ಬಾರ್ಕ್ಲೆ - Vistara News

Latest

ICC Chairman | ಐಸಿಸಿ ಅಧ್ಯಕ್ಷರಾಗಿ ಮರು ಆಯ್ಕೆಯಾದ ನ್ಯೂಜಿಲೆಂಡ್‌ನ ಗ್ರೆಗ್ ಬಾರ್ಕ್ಲೆ

ನ್ಯೂಜಿಲೆಂಡ್‌ನ ಗ್ರೆಗ್ ಬಾರ್ಕ್ಲೆ (Greg Barclay) ಅವರು ಅಂತಾರಾರಾಷ್ಟ್ರೀಯ ಕ್ರಿಕೆಟ್ ಮಂಡಳಿಯ (ICC ) ಅಧ್ಯಕ್ಷರಾಗಿ ಮರು ಆಯ್ಕೆಯಾಗಿದ್ದಾರೆ.

VISTARANEWS.COM


on

Greg Barclay
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮೆಲ್ಬೋರ್ನ್​: ನ್ಯೂಜಿಲೆಂಡ್‌ನ ಗ್ರೆಗ್ ಬಾರ್ಕ್ಲೆ (Greg Barclay) ಅವರು ಅಂತಾರಾರಾಷ್ಟ್ರೀಯ ಕ್ರಿಕೆಟ್ ಮಂಡಳಿಯ (ಐಸಿಸಿ) (ICC Chairman) ಅಧ್ಯಕ್ಷರಾಗಿ ಮರು ಆಯ್ಕೆಯಾಗಿದ್ದಾರೆ. ಅದರಂತೆ ಮುಂದಿನ ಎರಡು ವರ್ಷಗಳ ಕಾಲ ಅವರು ಈ ಹುದ್ದೆಯಲ್ಲಿ ಕಾರ್ಯನಿರ್ವಹಿಸಲಿದ್ದಾರೆ. ಜಿಂಬಾಬ್ವೆಯ ತವೆಂಗ್ವಾ ಮುಕುಲಾನಿ ಸ್ಪರ್ಧೆಯಿಂದ ಹಿಂದೆ ಸರಿದ ಹಿನ್ನೆಲೆಯಲ್ಲಿ ಗ್ರೆಗ್ ಬಾರ್ಕ್ಲೆ ಅವಿರೋಧವಾಗಿ ಆಯ್ಕೆಯಾದರು.

ಶನಿವಾರ ಮೊಲ್ಬೋರ್ನ್​ನಲ್ಲಿ ನಡೆದ ಸಭೆಯಲ್ಲಿ ಈ ಆಯ್ಕೆ ನಡೆಯಿತು. ಅಧ್ಯಕ್ಷರಾದ ಬಳಿಕ ಮಾತನಾಡಿದ ಗ್ರೆಗ್ ಬಾರ್ಕ್ಲೆ ಅವರು “ಐಸಿಸಿ ಅಧ್ಯಕ್ಷರಾಗಿ ಮರು ಆಯ್ಕೆಯಾಗಿರುವುದು ತಮಗೆ ಸಂದ ಗೌರವವಾಗಿದ್ದು, ಇದಕ್ಕಾಗಿ ನಿರ್ದೇಶಕ ಮಂಡಳಿಯ ಸದಸ್ಯರಿಗೆ ಧನ್ಯವಾದ ಸಲ್ಲಿಸುತ್ತೇನೆ” ಎಂದು ಬಾರ್ಕ್ಲೆ ಪ್ರತಿಕ್ರಿಯಿಸಿದ್ದಾರೆ.

2ನೇ ಬಾರಿಗೆ ಆಯ್ಕೆ

ಬಾರ್ಕ್ಲೆ ಅವರು ಮೊದಲ ಬಾರಿಗೆ ನವೆಂಬರ್ 2020 ರಲ್ಲಿ ಐಸಿಸಿ ಅಧ್ಯಕ್ಷ ಕುರ್ಚಿ ಏರಿದ್ದರು. ನ್ಯೂಜಿಲೆಂಡ್ ಕ್ರಿಕೆಟ್‌ನ ಅಧ್ಯಕ್ಷರಾಗಿದ್ದ ಬಾರ್ಕ್ಲೆ ಆಗಿನ ಐಸಿಸಿ ಅಧ್ಯಕ್ಷರಾಗಿದ್ದ ಶಶಾಂಕ್ ಮನೋಹರ್ ಸ್ಥಾನಕ್ಕೆ ಎಂಟ್ರಿಕೊಟ್ಟಿದ್ದರು. ಅದಕ್ಕೂ ಮುನ್ನ 2015 ರಲ್ಲಿ ಬಾರ್ಕ್ಲೆ ಐಸಿಸಿ ಪುರುಷರ ಕ್ರಿಕೆಟ್ ವಿಶ್ವ ಕಪ್‌ನ ನಿರ್ದೇಶಕರಾಗಿದ್ದರು. ಬಾರ್ಕ್ಲೆ ಅವಿರೋಧವಾಗಿ ಆಯ್ಕೆಯಾಗುವುದರೊಂದಿಗೆ 17 ಸದಸ್ಯರ ಮಂಡಳಿಯಲ್ಲಿ ಬಿಸಿಸಿಐ ಕೂಡ ಅವರಿಗೆ ಸಂಪೂರ್ಣ ಬೆಂಬಲವನ್ನು ನೀಡಿದೆ.

ಗಂಗೂಲಿಯ ಹೆಸರು ಕೇಳಿಬಂದಿತ್ತು

ಬಿಸಿಸಿಐ ಅಧ್ಯಕ್ಷ ಹುದ್ದೆಯಿಂದ ಕೆಳಗಿಳಿದ ಬಳಿಕ ಐಸಿಸಿ ಅಧ್ಯಕ್ಷ ಸ್ಥಾನಕ್ಕೆ ಸೌರವ್​ ಗಂಗೂಲಿ ಸ್ಪರ್ಧೆ ಮಾಡುತ್ತಾರೆ ಎನ್ನುವ ಮಾತುಗಳು ಕೇಳಿಬಂದಿತ್ತು. ಮಾಧ್ಯಮ ವರದಿಗಳ ಪ್ರಕಾರ, ಗಂಗೂಲಿಗೆ ಐಪಿಎಲ್ ಅಧ್ಯಕ್ಷ ಸ್ಥಾನವನ್ನು ನೀಡಲು ಬಿಸಿಸಿಐ ಮುಂದಾಗಿತ್ತು. ಆದರೆ ಗಂಗೂಲಿಗೆ ಐಸಿಸಿ ಅಧ್ಯಕ್ಷ ಹುದ್ದೆ ಅಥವಾ ಬಿಸಿಸಿಐ ಅಧ್ಯಕ್ಷರಾಗಿ ಮುಂದುವರಿಯುವ ಬಯಕೆ ಇತ್ತು. ಆದರೆ ಗಂಗೂಲಿಗೆ ಬಿಸಿಸಿಐ ಬೆಂಬಲ ಸಿಗಲಿಲ್ಲ. ಇದರಿಂದ ಗಂಗೂಲಿ ಈ ರೇಸ್​ನಿಂದ ಹೊರಬಿದ್ದಿದ್ದರು.

ಇದನ್ನೂ ಓದಿ | Team India | ಯುವ ಆಟಗಾರರಿಗೆ ಆದ್ಯತೆ, ಹಿರಿಯರಿಗೆ ಕೊಕ್‌; ಬಿಸಿಸಿಐ ಯೋಜನೆ ರೆಡಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೈಂ

Google Map: ತಪ್ಪು ದಾರಿ ತೋರಿಸಿದ ಗೂಗಲ್‌ ಮ್ಯಾಪ್‌; ನದಿಗೆ ಬಿದ್ದ ಕಾರು!

ಕೇರಳದ ಕಾಸರಗೋಡಿನ ಪಲ್ಲಂಚಿಯಲ್ಲಿ ಉಕ್ಕಿ ಹರಿಯುತ್ತಿರುವ ನದಿಯಲ್ಲಿ ಕಾರಿನಲ್ಲಿ ಸಿಲುಕಿದ್ದ ಯುವಕರನ್ನು ಅಗ್ನಿಶಾಮಕ ದಳದ ಸಿಬ್ಬಂದಿ ಸುರಕ್ಷಿತವಾಗಿ ರಕ್ಷಿಸಿದ್ದಾರೆ. ಆಸ್ಪತ್ರೆಗೆ ಹೋಗಲು ಗೂಗಲ್ ಮ್ಯಾಪ್ (Google Map) ಬಳಸಿ ದಾರಿ ಹುಡುಕುತ್ತಾ ಹೋದ ಯುವಕರಿಬ್ಬರು ತಮ್ಮ ಕಾರನ್ನು ಉಕ್ಕಿ ಹರಿಯುತ್ತಿದ್ದ ನದಿಗೆ ಇಳಿಸಿದ್ದರು. ಈ ಯುವಕರಿಬ್ಬರು ಅಪಾಯದಿಂದ ಪಾರಾಗಿದ್ದೇ ಪವಾಡ.

VISTARANEWS.COM


on

By

Google Map
Koo

ಕಾಸರಗೋಡು: ಆಸ್ಪತ್ರೆಗೆ ಹೋಗಲು ಗೂಗಲ್ ಮ್ಯಾಪ್ (Google Map) ಬಳಸಿ ದಾರಿ ಹುಡುಕುತ್ತಾ ಹೋದ ಯುವಕರಿಬ್ಬರು ತಮ್ಮ ಕಾರನ್ನು ಉಕ್ಕಿ ಹರಿಯುತ್ತಿದ್ದ ನದಿಗೆ ಇಳಿಸಿದ ಘಟನೆ ಕೇರಳದ (kerala) ಕಾಸರಗೋಡು (kasaragodu) ಜಿಲ್ಲೆಯಲ್ಲಿ ನಡೆದಿದೆ. ಅದೃಷ್ಟವಶಾತ್ ವಾಹನ ಮರಕ್ಕೆ ಸಿಲುಕಿದ್ದರಿಂದ ಯುವಕರಿಬ್ಬರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಕೇರಳದ ಕಾಸರಗೋಡಿನ ಪಲ್ಲಂಚಿಯಲ್ಲಿ ಉಕ್ಕಿ ಹರಿಯುತ್ತಿರುವ ನದಿಯಲ್ಲಿ ಕಾರಿನಲ್ಲಿ ಸಿಲುಕಿದ್ದ ಯುವಕರನ್ನು ಅಗ್ನಿಶಾಮಕ ದಳದ ಸಿಬ್ಬಂದಿ ಸುರಕ್ಷಿತವಾಗಿ ರಕ್ಷಿಸಿದ್ದಾರೆ. ಹೈದರಾಬಾದ್ ಮೂಲದ ಪ್ರವಾಸಿಗರಾದ ಯುವಕರು ಬೆಳ್ಳಂಬೆಳಗ್ಗೆ ಹತ್ತಿರದ ಆಸ್ಪತ್ರೆಗೆ ಹೋಗುತ್ತಿದ್ದರು. ಇದಕ್ಕಾಗಿ ಅವರು ಗೂಗಲ್ ನಕ್ಷೆಯನ್ನು ಬಳಸಿಕೊಂಡು ಮುಂದುವರಿಯುತ್ತಿದ್ದರು. ಎಂದು ಯುವಕರಲ್ಲಿ ಒಬ್ಬರಾದ ಅಬ್ದುಲ್ ರಶೀದ್ ತಿಳಿಸಿದ್ದಾರೆ.

ಗೂಗಲ್ ನಕ್ಷೆ ಕಿರಿದಾದ ರಸ್ತೆಯನ್ನು ತೋರಿಸಿತ್ತು. ಹೀಗಾಗಿ ಕಾರನ್ನು ಮುಂದೆ ಓಡಿಸಿದೆವು. ವಾಹನದ ಹೆಡ್‌ಲೈಟ್ ಅನ್ನು ಬಳಸಿದಾಗ ನಮ್ಮ ಮುಂದೆ ಸ್ವಲ್ಪ ನೀರು ಇದೆ ಎಂದು ಅನಿಸಿತು. ಆದರೆ ಎರಡು ಕಡೆ ನದಿ ಮತ್ತು ಮಧ್ಯದಲ್ಲಿ ಸೇತುವೆ ಇರುವುದು ಗೊತ್ತಾಗಲಿಲ್ಲ. ಸೇತುವೆಗೆ ತಡೆ ಗೋಡೆಯೂ ಇರಲಿಲ್ಲ ಎಂದು ಅವರು ತಿಳಿಸಿದರು.

ಕಾರು ಹಠಾತ್ತನೆ ನೀರಿನ ಪ್ರವಾಹಕ್ಕೆ ಸಿಲುಕಲು ಪ್ರಾರಂಭಿಸಿತು. ಆದರೆ ಅನಂತರ ನದಿಯ ದಡದಲ್ಲಿರುವ ಮರದಲ್ಲಿ ಸಿಲುಕಿಕೊಂಡಿತು. ಅಷ್ಟರಲ್ಲಾಗಲೇ ಕಾರಿನ ಬಾಗಿಲು ತೆರೆದು ವಾಹನದಿಂದ ಹೊರಬಂದು ಅಗ್ನಿಶಾಮಕ ದಳದ ಸಿಬ್ಬಂದಿಯನ್ನು ಸಂಪರ್ಕಿಸಿ ಸ್ಥಳವನ್ನು ತಿಳಿಸಿದೆವು. ಅನಂತರ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಹಗ್ಗಗಳನ್ನು ಬಳಸಿ ನಮ್ಮನ್ನು ಸುರಕ್ಷಿತವಾಗಿ ಕರೆದುಕೊಂಡು ಬಂದಿದ್ದಾರೆ ಎಂದು ಅವರು ವಿವರಿಸಿದರು. ನಾವು ನಮ್ಮ ಜೀವ ಉಳಿಸಿಕೊಳ್ಳಬಹುದು ಎಂದು ಕನಸಿನಲ್ಲೂ ಯೋಚಸಲಿಲ್ಲ. ಇದು ಪುನರ್ಜನ್ಮ ಎಂದು ಭಾವಿಸುತ್ತೇವೆ ಎಂದು ರಶೀದ್ ಹೇಳಿದರು.

ಇದು ಮೊದಲಲ್ಲ

ಗೂಗಲ್ ನಕ್ಷೆ ತಪ್ಪು ದಾರಿ ತೋರಿಸಿರುವುದು ಇದು ಮೊದಲಲ್ಲ. ಕಳೆದ ತಿಂಗಳು, ಹೈದರಾಬಾದ್‌ನಿಂದ ಪ್ರವಾಸಿಗರ ಗುಂಪೊಂದು ಕೊಟ್ಟಾಯಂನ ಕುರುಪ್ಪಂಥಾರ ಬಳಿ ಉಕ್ಕಿ ಹರಿಯುತ್ತಿದ್ದ ನದಿಗೆ ವಾಹನವನ್ನು ಓಡಿಸಿತ್ತು. ಸಮೀಪದ ಪೊಲೀಸ್ ಗಸ್ತು ಘಟಕ ಮತ್ತು ಸ್ಥಳೀಯ ನಿವಾಸಿಗಳ ಪ್ರಯತ್ನದಿಂದಾಗಿ ನಾಲ್ವರೂ ಪ್ರಾಣಾಪಾಯದಿಂದ ಪಾರಾಗಿದ್ದರೂ ಅವರ ವಾಹನವು ಸಂಪೂರ್ಣವಾಗಿ ಮುಳುಗಿತ್ತು.

ಕಳೆದ ಮೇ 24ರಂದು ತಡರಾತ್ರಿ ಈ ಘಟನೆ ನಡೆದಿತ್ತು. ಅವರು ಪ್ರಯಾಣಿಸುತ್ತಿದ್ದ ರಸ್ತೆಯು ಭಾರೀ ಮಳೆಯಿಂದಾಗಿ ಹೊಳೆಯಿಂದ ಉಕ್ಕಿ ಹರಿಯುವ ನೀರಿನಿಂದ ಆವೃತವಾಗಿತ್ತು. ಪ್ರವಾಸಿಗರಿಗೆ ಈ ಪ್ರದೇಶದ ಪರಿಚಯವಿಲ್ಲದ ಕಾರಣ, ಅವರು ಗೂಗಲ್ ಮ್ಯಾಪ್ ಬಳಸಿ ಹೋಗುತ್ತಿದ್ದರು.

ಕಳೆದ ವರ್ಷ ಅಕ್ಟೋಬರ್‌ನಲ್ಲಿ ಇಬ್ಬರು ಯುವ ವೈದ್ಯರು ಕಾರು ಅಪಘಾತದಲ್ಲಿ ಸಾವನ್ನಪ್ಪಿದರು. ಇದಕ್ಕೆ ಕಾರಣ ಗೂಗಲ್ ನಕ್ಷೆ ಬಳಸಿ ಅವರು ದಾರಿಯನ್ನು ಹುಡುಕಿಕೊಂಡು ಹೋಗಿ ನದಿಗೆ ಬಿದ್ದರು. ವೈದ್ಯರಾದ ಅದ್ವೈತ್ ಮತ್ತು ಅಜ್ಮಲ್ ಮೃತರು. ಕಾರಿನಲ್ಲಿದ್ದ ಇತರ ಮೂವರು ಅದೃಷ್ಟವಶಾತ್ ಪಾರಾಗಿದ್ದಾರೆ. ಚಾಲಕನು ನದಿಯನ್ನು ನೀರಿನಿಂದ ತುಂಬಿದ ರಸ್ತೆ ಎಂದು ತಪ್ಪಾಗಿ ಭಾವಿಸಿ ಮುಂದೆ ಓಡಿಸಿದ್ದರಿಂದ ಈ ದುರ್ಘಟನೆ ಸಂಭವಿಸಿತ್ತು.

ಇದನ್ನೂ ಓದಿ: IND vs SA Final: 40 ಸಾವಿರ ಅಡಿ ಎತ್ತರದಲ್ಲಿಯೂ ಮೊಳಗಿದ ವಿಶ್ವಕಪ್​ ಗೆಲುವಿನ ಸಂಭ್ರಮ; ವಿಡಿಯೊ ವೈರಲ್​

ಆಗಸ್ಟ್ 2022ರಲ್ಲಿ ಎರ್ನಾಕುಲಂನಿಂದ ಕುಂಬನಾಡ್‌ಗೆ ಹಿಂತಿರುಗುತ್ತಿದ್ದ ಕುಟುಂಬವೊಂದು ಕೊಟ್ಟಾಯಂ ಜಿಲ್ಲೆಯ ಪರಚಲ್ ಬಳಿ ದಾರಿ ತಪ್ಪಿ ಕಾಲುವೆಗೆ ಕಾರನ್ನು ತೆಗೆದುಕೊಂಡು ಹೋಗಿದ್ದರು. ಇದಕ್ಕೆ ಮುಖ್ಯ ಕಾರಣ ಗೂಗಲ್ ನಕ್ಷೆ ತಪ್ಪು ದಾರಿ ತೋರಿದ್ದು. ಸ್ಥಳೀಯ ನಿವಾಸಿಗಳ ತ್ವರಿತ ರಕ್ಷಣಾ ಕಾರ್ಯಾಚರಣೆಯಿಂದ ಕಾರಿನಲ್ಲಿದ್ದವರು ಅಪಾಯದಿಂದ ಪಾರಾಗಿದ್ದರು.

Continue Reading

ವೈರಲ್ ನ್ಯೂಸ್

Viral Video: ರೀಲ್ಸ್‌ಗಾಗಿ ಸಿಗರೇಟ್‌ ದಂ ಹೊಡೆದ ಯುವತಿ; ಮನೇಲಿ ಹಿಗ್ಗಾಮುಗ್ಗಾ ಹೊಡೆದ ಅಪ್ಪ!

ಸಾಮಾಜಿಕ ಮಾಧ್ಯಮವಾದ ಎಕ್ಸ್‌ನಲ್ಲಿ ಶೋನಿಕಪೂರ್ ಹಂಚಿಕೊಂಡ ವೈರಲ್ ವಿಡಿಯೋದಲ್ಲಿ ಅಪ್ರಾಪ್ತ ಯುವತಿಯೊಬ್ಬಳು ರೀಲ್ಸ್ ಗಾಗಿ ಬೀದಿಯಲ್ಲಿ ಧೂಮಪಾನ ಮಾಡುತ್ತಿರುವ ವಿಡಿಯೋ ಮಾಡಿದ್ದಾಳೆ. ಬಳಿಕ ಇದನ್ನು ಸಾಮಾಜಿಕ ಜಾಲತಾಣದಲ್ಲಿ (Viral Video) ಹಾಕಿದ್ದು ಸಾಕಷ್ಟು ಮಂದಿಯ ಗಮನ ಸೆಳೆದಿತ್ತು. ಇದು ಮನೆಯವರಿಗೆ ತಿಳಿದು ತಂದೆಯಿಂದ ಸಾಕಷ್ಟು ಏಟು ಕೂಡ ತಿಂದಳು. ಈ ಎರಡು ವಿಡಿಯೊಗಳನ್ನು ನೋಡಿ.

VISTARANEWS.COM


on

By

Viral Video
Koo

ರೀಲ್ಸ್ (reels) ಹುಚ್ಚು ನಮ್ಮಿಂದ ಯಾವ ಕೆಲಸವನ್ನು ಬೇಕಾದರೂ ಮಾಡಿಸುತ್ತದೆ ಎನ್ನುವುದಕ್ಕೆ ಇತ್ತೀಚಿನ ದಿನಗಳಲ್ಲಿ ಸಾಕಷ್ಟು ಉದಾಹರಣೆಗಳು ಲಭ್ಯವಾಗುತ್ತಿದೆ. ಇದೀಗ ಪಶ್ಚಿಮ ಬಂಗಾಳದ (west bengal) ಯುವತಿಯೊಬ್ಬಳು ರೀಲ್ಸ್ ಮಾಡಿ ತಂದೆಯ ಕೈಯಿಂದ ಸರಿಯಾಗಿ ಹೊಡೆತ ತಿಂದಿರುವ ಘಟನೆ ನಡೆದಿದೆ. ಇದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ (social media) ಭಾರೀ ವೈರಲ್ (Viral Video) ಆಗಿದೆ.

ರೀಲ್ಸ್ ಗಾಗಿ ಯುವತಿಯೊಬ್ಬಳು ಸಿಗರೇಟ್ ಸೇದುತ್ತಿರುವ ವಿಡಿಯೋ ಮಾಡಿ ತಂದೆಯಿಂದ ಸರಿಯಾಗಿ ಏಟು ಕೂಡ ತಿಂದಿದ್ದಾಳೆ. ಸಾಮಾಜಿಕ ಮಾಧ್ಯಮವಾದ ಎಕ್ಸ್‌ನಲ್ಲಿ ಶೋನಿ ಕಪೂರ್ ಹಂಚಿಕೊಂಡ ವೈರಲ್ ವಿಡಿಯೋದಲ್ಲಿ ಅಪ್ರಾಪ್ತ ಯುವತಿಯೊಬ್ಬಳು ರೀಲ್ಸ್ ಗಾಗಿ ಬೀದಿಯಲ್ಲಿ ಧೂಮಪಾನ ಮಾಡುತ್ತಿರುವ ವಿಡಿಯೋ ಮಾಡಿದ್ದಾಳೆ. ಬಳಿಕ ಇದನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿದ್ದು ಸಾಕಷ್ಟು ಮಂದಿಯ ಗಮನ ಸೆಳೆದಿತ್ತು. ಇದು ಮನೆಯವರಿಗೆ ತಿಳಿದು ತಂದೆಯಿಂದ ಸಾಕಷ್ಟು ಏಟು ಕೂಡ ತಿಂದಳು.

ವೈರಲ್ ಆಗಿರುವ ವಿಡಿಯೋದ ಇನ್ನೊಂದು ಭಾಗದಲ್ಲಿ ಬೀದಿಯಲ್ಲಿ ಸಿಗರೇಟ್ ಸೇದಿದ್ದಕ್ಕಾಗಿ ಅವಳ ತಂದೆ ಹೇಗೆ ಅವಳಿಗೆ ಬೆಲ್ಟ್‌ನಿಂದ ಹೊಡೆಯುತ್ತಿದ್ದಾರೆ ಎಂಬುದನ್ನು ನೋಡಬಹುದು. ಈ ಸಂಪೂರ್ಣ ಘಟನೆಯು ಯುವ ಸಾಮಾಜಿಕ ಮಾಧ್ಯಮ ಬಳಕೆದಾರರಿಗೆ ಒಂದು ಎಚ್ಚರಿಕೆಯ ಕಥೆಯಾಗಿದೆ. ರೀಲ್ಸ್ ಗಾಗಿ ನಾವು ಮಾಡುವ ಸ್ಟಂಟ್ ಗಳು ಮನೆಯವರಿಗೆ ಕೆಟ್ಟ ಹೆಸರು ತರಬಹುದು ಅಥವಾ ಅವರಿಗೆ ಮುಜುಗರ ಉಂಟು ಮಾಡಬಹುದು ಎನ್ನುವ ಯೋಚನೆ ನಮ್ಮಲ್ಲಿ ಇರಬೇಕು. ಆನ್ ಲೈನ್ ನಲ್ಲಿ ಜವಾಬ್ದಾರಿಯುತ ನಡವಳಿಕೆಯನ್ನು ತೋರಿಸುವುದು ಕೂಡ ಬಹು ಮುಖ್ಯವಾಗಿದೆ. ಮಕ್ಕಳು ಈ ಬಗ್ಗೆ ಪೋಷಕರೊಂದಿಗೆ ಮುಕ್ತವಾಗಿ ಮಾತನಾಡಬೇಕು ಎನ್ನುವುದನ್ನು ಈ ವಿಡಿಯೋದಲ್ಲಿ ಹೇಳಲಾಗಿದೆ.

ಈ ವಿಡಿಯೋ ಗೆ ಸಾಕಷ್ಟು ಮಂದಿ ಕಾಮೆಂಟ್ ಕೂಡ ಮಾಡಿದ್ದಾರೆ. ಒಬ್ಬರು ನನ್ನ ತಂದೆ ಖಂಡಿತಾ ನನ್ನ ತಲೆ ಬೋಳಿಸುತ್ತಿದ್ದರು ಎಂದು ಹೇಳಿದ್ದರೆ, ಇನ್ನೊಬ್ಬರು ಅವಳ ತಂದೆ ಜೈಲಿಗೆ ಹೋಗುವುದು ಖಚಿತ. ಅವರು ಅದನ್ನು ಚಿತ್ರೀಕರಿಸಬಾರದು ಎಂದು ತಿಳಿಸಿದ್ದಾರೆ.


ಸಾಮಾಜಿಕ ಮಾಧ್ಯಮ ಬಳಕೆದಾರರು ಇತ್ತೀಚಿನ ದಿನಗಳಲ್ಲಿ ತಮ್ಮ ಅನುಯಾಯಿಗಳನ್ನು ಹೆಚ್ಚಿಸಲು, ಹೆಚ್ಚು ಲೈಕ್ ಗಳನ್ನು ಪಡೆಯಲು ಮಾಡುವ ಕೆಲವೊಂದು ರೀಲ್ಸ್ ಗಳು ಅವರನ್ನು ತೊಂದರೆಗೆ ಸಿಲುಕಿಸುತ್ತದೆ. ಹೀಗಾಗಿ ಈ ವೈರಲ್ ವೀಡಿಯೊ ಆನ್‌ಲೈನ್ ಜವಾಬ್ದಾರಿಯ ಪ್ರಾಮುಖ್ಯತೆ ಮತ್ತು ಸಾಮಾಜಿಕ ಮಾಧ್ಯಮದ ಸಂಭಾವ್ಯ ಅಪಾಯಗಳನ್ನು ಎತ್ತಿ ತೋರಿಸುತ್ತದೆ. ಇದರಿಂದ ಪ್ರತಿಯೊಬ್ಬರೂ ಕಲಿಯಬೇಕಾದ ಕೆಲವು ಸಂಗತಿಗಳಿವೆ.

ಇದನ್ನೂ ಓದಿ: Viral Video: ಮೊಬೈಲ್ ಕದ್ದ ಕಳ್ಳನಿಗೆ ದೇವರು ಕೊಟ್ಟ ಶಿಕ್ಷೆ ಮಾತ್ರ ಘೋರ! ವಿಡಿಯೊ ನೋಡಿ

ಆನ್ ಲೈನ್ ನಲ್ಲಿ ಏನಾದರೂ ಪೋಸ್ಟ್ ಮಾಡುವ ಮೊದಲು ಯೋಚಿಸಿ. ಒಮ್ಮೆ ಏನನ್ನಾದರೂ ಆನ್‌ಲೈನ್‌ನಲ್ಲಿ ಹಂಚಿಕೊಂಡರೆ ಬಳಿಕ ಅದನ್ನು ಸಂಪೂರ್ಣವಾಗಿ ಅಳಿಸಲು ಕಷ್ಟವಾಗಬಹುದು ಅಥವಾ ಅಸಾಧ್ಯವಾಗಬಹುದು. ಅನುಯಾಯಿಗಳ ಬಗ್ಗೆ ಗಮನವಿರಲಿ. ನಿಮಗೆ ಹಾಸ್ಯವಾಗಿ ಕಾಣುವ ಕೆಲವು ಸಂಗತಿಗಳು ಕೆಲವರಿಗೆ ಗ್ರಹಿಸಲು ಕಷ್ಟವಾಗಬಹುದು. ಇದು ನಿಮ್ಮನ್ನು ತೊಂದರೆಗೆ ಸಿಲುಕಿಸಬಹುದು.

ಅದೇ ರೀತಿ ಮುಕ್ತ ಸಂವಹನವು ಮುಖ್ಯ. ಆನ್‌ಲೈನ್ ಸುರಕ್ಷತೆ ಮತ್ತು ಜವಾಬ್ದಾರಿಯುತ ಸಾಮಾಜಿಕ ಮಾಧ್ಯಮ ಬಳಕೆಯ ಕುರಿತು ಪೋಷಕರು ತಮ್ಮ ಮಕ್ಕಳೊಂದಿಗೆ ಮುಕ್ತ ಸಂಭಾಷಣೆಗಳನ್ನು ನಡೆಸುವುದು ಕೂಡ ಬಹು ಮುಖ್ಯವಾಗಿದೆ.

Continue Reading

ಕ್ರೈಂ

Physical Assualt: 2 ವರ್ಷದ ಮಗುವನ್ನೇ ಲೈಂಗಿಕ ಕ್ರಿಯೆಗಾಗಿ ಮಾರಲು ಯತ್ನಿಸಿದ್ದ ದುಷ್ಟ ದಂಪತಿ ಬಂಧನ

ಎರಡು ವರ್ಷದ ಮಗಳೊಂದಿಗೆ ಲೈಂಗಿಕ ಚಟುವಟಿಕೆ ನಡೆಸಲು (Physical Assualt) ಹಣ ಪಾವತಿಸಲು ಸಿದ್ಧರಿರುವ ಪುರುಷರನ್ನು ಆನ್‌ಲೈನ್ ಚಾಟ್‌ರೂಮ್ ನಲ್ಲಿ ಹುಡುಕುತ್ತಿದ್ದ ಕ್ರಾಲಿ ಮತ್ತು ಟ್ರಿಪ್ ದಂಪತಿಯನ್ನು ಅಮೆರಿಕದಲ್ಲಿ ಜಾರ್ಜಿಯಾದ ಗ್ರೋವ್‌ಟೌನ್ ಪೊಲೀಸರು ಬಂಧಿಸಿದ್ದಾರೆ.

VISTARANEWS.COM


on

By

Physical Assault
Koo

ಜಾರ್ಜಿಯಾ: ಎರಡು ವರ್ಷದ ಮಗಳನ್ನು ಲೈಂಗಿಕ ಚಟುವಟಿಕೆಗಾಗಿ (Physical Assualt) ಮಾರಾಟ ಮಾಡಲು ಯತ್ನಿಸಿದ ದುಷ್ಟ ದಂಪತಿಯನ್ನು ಅಮೆರಿಕದಲ್ಲಿ (america) ಜಾರ್ಜಿಯಾದ (Georgia) ಗ್ರೋವ್‌ಟೌನ್ ಪೊಲೀಸರು ಬಂಧಿಸಿದ್ದಾರೆ. ಆಶ್ಲೀ ಕ್ರಾಲಿ (26) ಜೇಮ್ಸ್ ಟ್ರಿಪ್ (29) ಬಂಧಿತರು.

ಕ್ರಾಲಿ ಮತ್ತು ಟ್ರಿಪ್ ತಮ್ಮ 2 ವರ್ಷದ ಮಗಳೊಂದಿಗೆ ಲೈಂಗಿಕ ಚಟುವಟಿಕೆ ನಡೆಸಲು ಹಣ ಪಾವತಿಸಲು ಸಿದ್ಧರಿರುವ ಪುರುಷರನ್ನು ಹುಡುಕುತ್ತಿದ್ದರು. ಇದಕ್ಕಾಗಿ ಆನ್‌ಲೈನ್ ಚಾಟ್‌ರೂಮ್ ಅನ್ನು ಬಳಸಿದ್ದಾರೆ ಎಂದು ತನಿಖಾಧಿಕಾರಿಗಳು ತಿಳಿಸಿದ್ದಾರೆ. ಇಷ್ಟು ಮಾತ್ರವಲ್ಲದೆ ಕ್ರಾಲಿ ಅಶ್ಲೀಲ ವಿಡಿಯೋಗಳನ್ನು ತಯಾರಿಸಿ ಅದನ್ನು ಆನ್‌ಲೈನ್‌ನಲ್ಲಿ ಮಾರಾಟ ಮಾಡುತ್ತಿದ್ದರು. ಇದರಲ್ಲಿ ಕೆಲವು ವಿಡಿಯೋಗಳು ಅಂಬೆಗಾಲಿಡುವ ಮಕ್ಕಳು ಸೇರಿದಂತೆ ಅವರ ಮಕ್ಕಳನ್ನು ಒಳಗೊಂಡಿವೆ. ಟ್ರಿಪ್ ತನ್ನ ಅಪ್ರಾಪ್ತ ವಯಸ್ಸಿನ ಸಂಬಂಧಿಗಳೊಂದಿಗೆ ಲೈಂಗಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ಕ್ರಾಲಿಯ ಅನುಮತಿಯನ್ನೂ ಪಡೆಯುತ್ತಿದ್ದನು.

ಇದನ್ನೂ ಓದಿ: Physical assualt : ಅಣ್ಣ ಕರೀತಾನೆ ಎಂದು ಹೇಳಿ ಕಾಲೇಜು ವಿದ್ಯಾರ್ಥಿನಿ ಕಿಡ್ನಾಪ್ ; ನಾಲ್ವರಿಂದ ಸಾಮೂಹಿಕ ಅತ್ಯಾಚಾರ

ಇವರ ಆರೈಕೆಯಲ್ಲಿದ್ದ ಎಲ್ಲಾ ಮಕ್ಕಳನ್ನು ಅವರ ಮನೆಯಿಂದ ಅಧಿಕಾರಿಗಳು ತ್ವರಿತವಾಗಿ ರಕ್ಷಣೆ ಮಾಡಿದ್ದಾರೆ. ಕ್ರಾಲಿ ವಿರುದ್ಧ ಮಕ್ಕಳ ಮೇಲೆ ಕಿರುಕುಳ ಮತ್ತು ಕಂಪ್ಯೂಟರ್ ಅಥವಾ ಎಲೆಕ್ಟ್ರಾನಿಕ್ ಪೋರ್ನೋಗ್ರಫಿ ಮತ್ತು 2007ರ ಮಕ್ಕಳ ಶೋಷಣೆ ಮತ್ತು ತಡೆಗಟ್ಟುವಿಕೆ ಕಾಯಿದೆಯನ್ನು ಉಲ್ಲಂಘಿಸಿದ ಪ್ರಕರಣಗಳನ್ನು ದಾಖಲಿಸಲಾಗಿದೆ. ಟ್ರಿಪ್ ವಿರುದ್ಧ ಮಕ್ಕಳ ಮೇಲೆ ಲೈಂಗಿಕ ಕಿರುಕುಳ ಮತ್ತು ಕ್ರಿಮಿನಲ್ ಪ್ರಕರಣ ದಾಖಲಿಸಲಾಗಿದೆ. ಸದ್ಯ ಇಬ್ಬರನ್ನೂ ಕೊಲಂಬಿಯಾ ಕೌಂಟಿ ಜೈಲಿನಲ್ಲಿ ಇರಿಸಲಾಗಿದೆ. ತನಿಖೆ ಮುಂದುವರಿಸಲಾಗಿದ್ದು ಹೆಚ್ಚುವರಿ ಆರೋಪಗಳನ್ನು ದಾಖಲಿಸುವ ಸಾಧ್ಯತೆ ಇದೆ ಎಂದು ಪೊಲೀಸರು ತಿಳಿಸಿದ್ದಾರೆ.

ಲೈಂಗಿಕ ದೌರ್ಜನ್ಯ: ಬಾಲಕಿ ಸಾವು

ನಿರಂತರ ಲೈಂಗಿಕ ದೌರ್ಜನ್ಯ ಎಸಗಿದ್ದರಿಂದ 13 ವರ್ಷದ ಅಪ್ರಾಪ್ತ ವಯಸ್ಸಿನ ದಲಿತ ಬಾಲಕಿ ಮೃತಪಟ್ಟಿರುವ ಘಟನೆ ಕಲ್ಬುರ್ಗಿ ನಗರದ ಸಬ್ ಅರ್ಬನ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಲೈಂಗಿಕ ದೌರ್ಜನ್ಯದಿಂದ ತೀವ್ರ ರಕ್ತಸ್ರಾವ ಉಂಟಾಗಿ ಬಾಲಕಿ ಕೊನೆಯುಸಿರೆಳೆದಿದ್ದಾಳೆ ಎಂಬ ಆರೋಪ ಕೇಳಿಬಂದಿದ್ದು, ಪ್ರಕರಣಕ್ಕೆ ಸಂಬಂಧಿಸಿ ಒಬ್ಬ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಬಜ್ಜಿ ಅಂಗಡಿ ವ್ಯಾಪಾರಿ ಸರ್ಫರಾಜ್ (30) ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಾಲಕಿಯ ಮನೆಗೆ ಹೋಗಿ ಹೆದರಿಸಿ ಕಾರಿನಲ್ಲಿ ಕರೆದುಕೊಂಡು ಹೋಗಿ ನಿರಂತರವಾಗಿ ಲೈಂಗಿಕ ದೌರ್ಜನ್ಯ ಎಸಗಿದ್ದರಿಂದ ತೀವ್ರ ರಕ್ತ ಸ್ರಾವವಾಗಿ ಬಾಲಕಿ ಮೃತಪಟ್ಟಿದ್ದಾಳೆ ಎನ್ನಲಾಗಿದೆ.

ಅತ್ಯಾಚಾರಿಗೆ ಕಠಿಣ ಶಿಕ್ಷೆ ವಿಧಿಸಲು ಆಗ್ರಹಿಸಿ ದಲಿತ ಸೇನೆ ಕಾರ್ಯಕರ್ತರು ರಸ್ತೆ ತಡೆ ನಡೆಸಿ, ಪ್ರತಿಭಟನೆ ನಡೆಸಿದ್ದಾರೆ. ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಆಗಮಿಸಿದ್ದಾರೆ.

Continue Reading

Latest

Viral Video: ಮನೆಯ ಹೊರಗೆ ತಾಯಿಯ ಜೊತೆ ಆಡುತ್ತಿದ್ದ ಮಗುವಿನ ಮೇಲೆ ಕಾರು ಹತ್ತಿಸಿದ ಚಾಲಕ!

Viral Video ಮಗುವೊಂದು ಮನೆಯ ಟಿವಿ ಸ್ಟ್ಯಾಂಡ್ ಬಿದ್ದು ಮೃತಪಟ್ಟ ಘಟನೆ ಇನ್ನೂ ಮಾಸಿಲ್ಲ ಈಗ ನೋಯ್ಡಾದ ಸೆಕ್ಟರ್ 63 ರ ಬಿ ಬ್ಲಾಕ್‌ನಲ್ಲಿ ಶುಕ್ರವಾರ ಸಂಜೆ ತಾಯಿಯೊಂದಿಗೆ ಮನೆಯ ಮುಂದೆ ಆಟವಾಡುತ್ತಿದ್ದ 18 ತಿಂಗಳ ಮಗುವಿಗೆ ಕಾರೊಂದು ಡಿಕ್ಕಿ ಹೊಡೆದಿದೆ. ಈ ಘೋರ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಈ ಅಪಘಾತದ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.ಮಕ್ಕಳನ್ನು ಕಣ್ಣರಪ್ಪೆಯ ಮೇಲಿಟ್ಟುಕೊಂಡು ಸಾಕಿದರೂ ಏನಾದರೊಂದು ಅವಘಡಗಳು ನಡೆಯುತ್ತಲೇ ಇರುತ್ತದೆ.

VISTARANEWS.COM


on

Viral Video
Koo

ನೋಯ್ಡಾ : ಚಿಕ್ಕಮಕ್ಕಳು ಆಟವಾಡುತ್ತಿರುವಾಗ ಪೋಷಕರು ಅವರ ಗಮನಕೊಡುವ ಬದಲು ಮೊಬೈಲ್ ನೋಡುವುದರಲ್ಲಿ, ಬೇರೆಯವರ ಜೊತೆ ಮಾತನಾಡುವುದರಲ್ಲೇ ಕಾಲ ಕಳೆಯುತ್ತಿರುತ್ತಾರೆ. ಆದರೆ ಚಿಕ್ಕಮಕ್ಕಳು ಹೊರಗಡೆ ಅಥವಾ ಮನೆಯ ಒಳಗಡೆ ಆಟವಾಡುವಾಗ ಪೋಷಕರು ಮಕ್ಕಳ ಬಗ್ಗೆ ಗಮನಕೊಡುತ್ತಿರಬೇಕು. ಇಲ್ಲವಾದರೆ ಇದರಿಂದ ಅಪಾಯ ಸಂಭವಿಸಬಹುದು. ಆದರೆ ಕೆಲವೊಮ್ಮೆ ಮಕ್ಕಳು ಪಾಪ ತಮ್ಮ ಪಾಡಿಗೆ ಮನೆಯ ಬಳಿ ಆಟವಾಡುತ್ತಿದ್ದರೂ ಅವರದಲ್ಲದ ತಪ್ಪಿಗೆ ಬಲಿಪಶು ಆಗುತ್ತಿದ್ದಾರೆ. ಚಾಲಕರ ಬೇಜವಾಬ್ದಾರಿ ಚಾಲನೆ ಇದಕ್ಕೆ ಕಾರಣ. ಅಂತಹದೊಂದು ಘಟನೆ ಇದೀಗ ನೋಯ್ಡಾದಲ್ಲಿ ಸಂಭವಿಸಿದ್ದು, ವಿಡಿಯೋ ವೈರಲ್ (Viral Video )ಆಗಿದೆ.

ನೋಯ್ಡಾದ ಸೆಕ್ಟರ್ 63 ರ ಬಿ ಬ್ಲಾಕ್‌ನಲ್ಲಿ ಶುಕ್ರವಾರ ಸಂಜೆ ತಾಯಿಯೊಂದಿಗೆ ಮನೆಯ ಮುಂದೆ ಆಟವಾಡುತ್ತಿದ್ದ 18 ತಿಂಗಳ ಮಗುವಿಗೆ ಕಾರೊಂದು ಡಿಕ್ಕಿ ಹೊಡೆದಿದೆ. ಈ ಘೋರ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಈ ಅಪಘಾತದ ವಿಡಿಯೊ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ವಿಡಿಯೊದಲ್ಲಿ ಮಹಿಳೆಯೊಬ್ಬಳು ತನ್ನ ಮಗುವಿನೊಂದಿಗೆ ರಸ್ತೆಯ ಹೊರಗೆ ಕುಳಿತು ಆಟವಾಡುತ್ತಿದ್ದಾಗ ಬಿಳಿ ಬಣ್ಣದ ಕಾರು ಬಂದು ಮಗುವಿನ ಮೇಲೆ ಹರಿದಿದೆ. ಮಗುವಿನ ತಾಯಿ ತಕ್ಷಣ ತನ್ನ ಮಗುವನ್ನು ಎತ್ತಿಕೊಂಡು ಗೋಳಾಡುತ್ತಾ ಆಸ್ಪತ್ರೆಯ ಕಡೆಗೆ ಹೋಗಿದ್ದಾಳೆ.

ವರದಿಗಳ ಪ್ರಕಾರ, ಗಾಯಗೊಂಡ ಬಾಲಕಿಯನ್ನು ಕೈಲಾಶ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆಕೆಯ ಸ್ಥಿತಿ ಗಂಭೀರವಾಗಿದೆ. ವಿಡಿಯೊದಲ್ಲಿ ಕಂಡುಬರುವ ಮಹಿಳೆಯನ್ನು ರಿಂಕಿ ಎಂದು ಗುರುತಿಸಲಾಗಿದ್ದು, ಅವರು ಕನೌಜಿಯಾ ಎಂಬ ವ್ಯಕ್ತಿಯ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದಾರೆ ಎಂಬುದಾಗಿ ತಿಳಿದುಬಂದಿದೆ.

ಘಟನೆಯ ಬಗ್ಗೆ ಸೆಕ್ಟರ್ -63 ಠಾಣೆಯ ಪೊಲೀಸರು ಸೋಶಿಯಲ್ ಮೀಡಿಯಾಗಳ ಮೂಲಕ ಮಾಹಿತಿ ಪಡೆದರು. ಘಟನೆಯ ಬಗ್ಗೆ ತಕ್ಷಣ ಗಮನ ಹರಿಸಿದ ಪೊಲೀಸರು ಗಂಭೀರ ವಿಭಾಗಗಳ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದು, ಮುಂದಿನ ಕ್ರಮ ಕೈಗೊಂಡಿದ್ದಾರೆ. ಘಟನೆಯಲ್ಲಿ ಭಾಗಿಯಾಗಿರುವ ವಾಹನವನ್ನು ಗುರುತಿಸಲಾಗಿದೆ. ಆರೋಪಿ ಕಾರು ಚಾಲಕನನ್ನು ಬಂಧಿಸಲು ತಂಡಗಳನ್ನು ರಚಿಸಲಾಗಿದೆ. ಬಾಲಕಿಯ ಸರಿಯಾದ ಚಿಕಿತ್ಸೆಗಾಗಿ ಆಸ್ಪತ್ರೆಯ ಆಡಳಿತವನ್ನು ಸಂಪರ್ಕಿಸಲಾಗಿದೆ.

ಇದನ್ನೂ ಓದಿ: ಒಟಿಟಿಯಲ್ಲಿ ಈ ವಾರ ಬಿಡುಗಡೆಯಾಗಲಿರುವ ಹೊಸ ಚಲನಚಿತ್ರಗಳು, ವೆಬ್ ಸರಣಿಗಳ ಪಟ್ಟಿ ಹೀಗಿವೆ

Viral Video

ಇಂತಹದೊಂದು ಘಟನೆ ಈ ವರ್ಷದ ಏಪ್ರಿಲ್ ನಲ್ಲಿ ಬೆಂಗಳೂರಿನ ಎಚ್ಎಸ್ಆರ್ ಲೇಔಟ್‌ನ ಅಗರ ಗ್ರಾಮದಲ್ಲಿ ನಡೆದಿದ್ದು, ಮನೆಯ ಮುಂದೆ ನಿಂತಿದ್ದ ಒಂದೂವರೆ ವರ್ಷದ ಮಗುವಿಗೆ ತಂದೆಯ ಕಾರು ಡಿಕ್ಕಿ ಹೊಡೆದ ಪರಿಣಾಮ ಮಗು ಸ್ಥಳದಲ್ಲೇ ಮೃತಪಟ್ಟಿತ್ತು. ಮಗುವಿನ ಕುಟುಂಬದವರು ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ ನಂತರ ಮಗು ತನ್ನ ಹೆತ್ತವರೊಂದಿಗೆ ಸಂಜೆ ಚನ್ನಪಟ್ಟಣದಿಂದ ಹಿಂದಿರುಗಿತ್ತು.ಆಕೆಯ ತಂದೆ ವಾಹನದಿಂದ ಸಾಮಾನುಗಳನ್ನು ಹೊರತೆಗೆದು, ಕಾರು ಪಾರ್ಕಿಂಗ್ ಮಾಡುತ್ತಿದ್ದಾಗ ಮಗು ವಾಹನದ ಹಿಂಭಾಗದ ಚಕ್ರದ ಅಡಿಯಲ್ಲಿ ಬಂದು ಚಕ್ರಕ್ಕೆ ಸಿಲುಕಿ ನಜ್ಜುಗುಜ್ಜಾಗಿ ಸಾವನಪ್ಪಿದೆ.

Continue Reading
Advertisement
Karnataka Politics
ಕರ್ನಾಟಕ12 mins ago

Karnataka Politics: ಸ್ಥಾನ ಭದ್ರಪಡಿಸಲು ದೆಹಲಿಯಲ್ಲಿ ಸಿಎಂ, ಡಿಸಿಎಂ ಪ್ರಯತ್ನ: ಎನ್.ರವಿಕುಮಾರ್ ಟೀಕೆ

Google Map
ಕ್ರೈಂ21 mins ago

Google Map: ತಪ್ಪು ದಾರಿ ತೋರಿಸಿದ ಗೂಗಲ್‌ ಮ್ಯಾಪ್‌; ನದಿಗೆ ಬಿದ್ದ ಕಾರು!

Viral Video
ವೈರಲ್ ನ್ಯೂಸ್28 mins ago

Viral Video: ರೀಲ್ಸ್‌ಗಾಗಿ ಸಿಗರೇಟ್‌ ದಂ ಹೊಡೆದ ಯುವತಿ; ಮನೇಲಿ ಹಿಗ್ಗಾಮುಗ್ಗಾ ಹೊಡೆದ ಅಪ್ಪ!

Reasi Terror Attack
ದೇಶ60 mins ago

Reasi Terror Attack: ಕಾಶ್ಮೀರದಲ್ಲಿ ಹಿಂದೂ ಯಾತ್ರಿಕರ ಮೇಲೆ ಉಗ್ರರ ದಾಳಿ; ಹಲವೆಡೆ NIA ರೇಡ್‌

Jasprit Bumrah
ಪ್ರಮುಖ ಸುದ್ದಿ1 hour ago

Jasprit Bumrah : ಮಗನ ಮುಂದೆ ವಿಶ್ವ ಕಪ್​ ಗೆದ್ದಿದ್ದು ದೊಡ್ಡ ಖುಷಿ ಎಂದ ಜಸ್​ಪ್ರಿತ್​ ಬುಮ್ರಾ

Bangalore–Mysore Expressway
ಕರ್ನಾಟಕ1 hour ago

Bangalore–Mysore Expressway: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ನಾಳೆಯಿಂದ ಸ್ಮಾರ್ಟ್‌ ಟ್ರಾಫಿಕ್‌ ಸಿಸ್ಟಂ

karnataka Weather Forecast
ಮಳೆ1 hour ago

Karnataka Weather : ಬೆಂಗಳೂರು, ಕಲಬುರಗಿ ಸೇರಿದಂತೆ ಹಲವೆಡೆ ವರ್ಷಧಾರೆ; ನಾಳೆಗೂ ಮಳೆ ಅಲರ್ಟ್‌

Rain Effect
ಕೊಡಗು1 hour ago

Rain Effect : ಭಾರಿ ಮಳೆ ಎಫೆಕ್ಟ್‌; ಈ ಹೆದ್ದಾರಿ ಮಾರ್ಗದಲ್ಲಿ ನಾಳೆಯಿಂದ 1 ತಿಂಗಳು ವಾಹನ ಸಂಚಾರಕ್ಕೆ ನಿರ್ಬಂಧ!

Breakfast Tip
ಆರೋಗ್ಯ2 hours ago

Breakfast Tips: ಬೆಳಗಿನ ಉಪಾಹಾರಕ್ಕೆ ಈ 5 ಬಗೆಯ ಆಹಾರಗಳನ್ನು ಸೇವಿಸಬೇಡಿ!

Ravindra jadeja
ಪ್ರಮುಖ ಸುದ್ದಿ2 hours ago

Ravindra Jadeja : ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್​ಗೆ ಆಲ್​ರೌಂಡರ್​ ರವೀಂದ್ರ ಜಡೇಜಾ ವಿದಾಯ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Weather Forecast
ಮಳೆ1 hour ago

Karnataka Weather : ಬೆಂಗಳೂರು, ಕಲಬುರಗಿ ಸೇರಿದಂತೆ ಹಲವೆಡೆ ವರ್ಷಧಾರೆ; ನಾಳೆಗೂ ಮಳೆ ಅಲರ್ಟ್‌

Actor Darshan
ಬೆಂಗಳೂರು6 hours ago

Actor Darshan : ಖೈದಿ ನಂ.6106ಕ್ಕೆ ಡಿಮ್ಯಾಂಡ್‌! ದರ್ಶನ್‌ ಫ್ಯಾನ್ಸ್‌ಗೆ ಕಾನೂನು ಕಂಟಕ, ರೂಲ್ಸ್‌ ಬ್ರೇಕ್‌ ಮಾಡಿದ್ರೆ ಬೀಳುತ್ತೆ ಕೇಸ್‌‌!

karnataka weather Forecast
ಮಳೆ1 day ago

Karnataka Weather : ಮಳೆಗೆ ಸ್ಕಿಡ್‌ ಆಗಿ ಹೇಮಾವತಿ ನದಿಗೆ ಹಾರಿದ ಕಾರು; ಕರಾವಳಿಗೆ ಎಚ್ಚರಿಕೆ ಕೊಟ್ಟ ತಜ್ಞರು

karnataka Rain
ಮಳೆ1 day ago

Karnataka Rain: ಭಾರಿ ಮಳೆಗೆ ಮನೆಗಳ ಗೋಡೆ ಕುಸಿತ; ಕೂದಲೆಳೆ ಅಂತರದಲ್ಲಿ ವೃದ್ಧ ಪಾರು

karnataka Weather Forecast
ಮಳೆ2 days ago

Karnataka Weather : ಅಬ್ಬಬ್ಬಾ.. ಮುಲ್ಕಿಯಲ್ಲಿ 30 ಸೆಂ.ಮೀ ಮಳೆ ದಾಖಲು; ವಾರಾಂತ್ಯದಲ್ಲೂ ಭಾರಿ ವರ್ಷಧಾರೆ

karnataka Rain
ಮಳೆ2 days ago

Karnataka Rain : ಭಾರಿ ಮಳೆಗೆ ಪಾತಾಳ ಸೇರಿದ ಬಾವಿ; ಅಲೆಗಳ ಹೊಡೆತಕ್ಕೆ ಸಮುದ್ರಪಾಲಾದ ಮನೆ

Karnataka Weather Forecast
ಮಳೆ3 days ago

Karnataka Weather : ಭಾರಿ ಮಳೆ ಹಿನ್ನೆಲೆ ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್; ಶುಕ್ರವಾರವೂ ಶಾಲೆಗಳಿಗೆ ರಜೆ ಘೋಷಣೆ

karnataka Weather Forecast
ಮಳೆ3 days ago

Karnataka Weather : ಭಾರಿ ಮಳೆಗೆ ಸೇತುವೆಯಿಂದ ಹೊಳೆಗೆ ಬಿದ್ದ ಕಾರು; ಮರ ಹಿಡಿದು ಪ್ರಾಣ ಉಳಿಸಿಕೊಂಡ ಸವಾರರು

Heart Attack
ಕೊಡಗು3 days ago

Heart Attack : ಕೊಡಗಿನಲ್ಲಿ ಹೃದಯಾಘಾತಕ್ಕೆ ಯುವತಿ ಬಲಿ; ಹೆಚ್ಚಾಯ್ತು ಅಲ್ಪಾಯುಷ್ಯದ ಭಯ

karnataka Rains Effected
ಮಳೆ3 days ago

Karnataka Rain : ಧಾರಾಕಾರ ಮಳೆಗೆ ಸಡಿಲಗೊಂಡ ಗುಡ್ಡಗಳು; ಧರೆ ಕುಸಿದು ಮಣ್ಣಿನಡಿ ಸಿಲುಕಿದ ಇಬ್ಬರು ಮಕ್ಕಳು

ಟ್ರೆಂಡಿಂಗ್‌