Book Excerpt: ಮೈ ನಡುಗಿಸಿದ ಯೂರಿಯಾ ಪ್ರಕರಣ - Vistara News

ಕಲೆ/ಸಾಹಿತ್ಯ

Book Excerpt: ಮೈ ನಡುಗಿಸಿದ ಯೂರಿಯಾ ಪ್ರಕರಣ

ಯೂರಿಯಾ ಸೇವಿಸಿ ಮಾರಣಾಂತಿಕ ಸಂಕಟದಿಂದ ಒದ್ದಾಡುತ್ತಿರುವ ಹಸುಗಳನ್ನು ನೋಡಿ ಪಶುವೈದ್ಯರು ಮಾಡಿದ್ದೇನು? ʼಪ್ರಾಣಿಗಳೇ ಗುಣದಲಿ ಮೇಲುʼ ಕೃತಿಯಿಂದ ಆಯ್ದ ಸ್ವಾರಸ್ಯಕರ ಅನುಭವ ಕತೆಯಲ್ಲಿ ಓದಿ ನೋಡಿ.

VISTARANEWS.COM


on

book excerpt
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ವೃತ್ತಿಯಲ್ಲಿ ಪ್ರಾಣಿವೈದ್ಯರಾಗಿರುವ ಡಾ.ಗವಿಸ್ವಾಮಿ ಎನ್.‌ ಅವರು ಬರೆದ ಕೃತಿ ʼಪ್ರಾಣಿಗಳೇ ಗುಣದಲಿ ಮೇಲು.ʼ ಗ್ರಾಮೀಣ ಪ್ರದೇಶದ ಪಶುವೈದ್ಯರೊಬ್ಬರ ಅನುಭವದ ಹಿನ್ನೆಲೆಯಲ್ಲಿ ಮೂಡಿಬಂದ ಈ ಕೃತಿಯಲ್ಲಿ ವಿಡಂಬನೆ, ತಿಳಿಹಾಸ್ಯ, ಅಸಹಾಯಕತೆ, ರೋಚಕತೆ ಎಲ್ಲವೂ ಬೆರೆತಿವೆ. ಈ ಕೃತಿಯಿಂದ ಆಯ್ದ ಭಾಗ ಇಲ್ಲಿದೆ.

ಆಸ್ಪತ್ರೆಯಲ್ಲಿದ್ದಾಗ ಒಂದು ಕರೆ ಬಂತು. “ನಮ್ ದನ್ಗಳು ಯೂರಿಯಾ ನೀರು ಕುಡುಬುಟ್ಟು ಒದ್ದಾಡ್ತಾ ಅವೆ, ಒಸಿ ಬ್ಯಾಗ್ನೆ ಬನ್ನಿ ಸಾ” ಅತ್ತಲಿಂದ ಹೆಂಗಸಿನ ಗದ್ಗದಿತ ದನಿ ಕೇಳಿ ಬಂತು. ನಾನು ತಡಬಡಾಯಿಸಿಕೊಂಡು, ನನ್ನ ಔಷಧಿ ಚೀಲಕ್ಕೆ ಇದ್ದಬದ್ದ ಸಲೈನ್ ಬಾಟಲಿಗಳನ್ನೆಲ್ಲ ತುಂಬಿಕೊಂಡು ಆಸ್ಪತ್ರೆಯಿಂದ ಹೊರಟೆ.

ದಾರಿಯಲ್ಲಿ ದಿನಸಿ ಅಂಗಡಿಯಲ್ಲಿ ವಿನೆಗಾರ್ ಸೀಸೆಗಳನ್ನು ಖರೀದಿಸಿ, ತುಂಬಿದ ಬಸುರಿಯಂತಿದ್ದ ಔಷಧಿ ಚೀಲದ ಮೇಲೆ ಇಟ್ಟುಕೊಂಡು ವೇಗವಾಗಿ ಬೈಕನ್ನು ಚಲಾಯಿಸಿದೆ. ಊರನ್ನು ದಾಟಿದ ನಂತರ, ಕಾಡಂಚಿನ ದುರ್ಗಮ ಹಾದಿಯಲ್ಲಿ ಪ್ರಯಾಣಿಸಿ ಘಟನಾ ಸ್ಥಳಕ್ಕೆ ತಲುಪಬೇಕಾಗಿತ್ತು. ಎರಡು ಕಿ.ಮೀ. ಉದ್ದದ ಕೊರಕಲು ಓಣಿಯಲ್ಲಿ ಅನಿವಾರ್ಯವಾಗಿ ನನ್ನ ಬೈಕಿನ ವೇಗಕ್ಕೆ ಕಡಿವಾಣ ಬಿದ್ದಿತು.

ಆಗ ನಾನು ಕೆಲಸಕ್ಕೆ ಸೇರಿ ಎರಡುಮೂರು ವರ್ಷಗಳಾಗಿದ್ದವು ಅಷ್ಟೇ. ಆ ಸ್ಥಳ ತಲುಪಿದಾಗ ಕಂಡ ಘನಘೋರ ದೃಶ್ಯ ನನ್ನನ್ನು ಈಗಲೂ ಬೆಚ್ಚಿ ಬೀಳಿಸುತ್ತದೆ.

ಇನ್ನಷ್ಟು ಓದಿಗೆ: Book Excerpt: ಅವನ ನೋಟ ಕಲೆಗೆ ಮೆಚ್ಚುಗೆಯೋ, ನನ್ನ ಮೇಲಿನ ಪ್ರೀತಿಯೋ?

ಒಂದು ಎಕರೆಯಷ್ಟು ಅಗಲದ ಕೂಳೆ (ಆಗಷ್ಟೇ ಫಸಲು ತೆಗಿದಿದ್ದ ಜಮೀನಿನಲ್ಲಿ ಮೂರು ರಾಸುಗಳು ಕಾಲು ಬಡಿದುಕೊಂಡು ಒದ್ದಾಡುತ್ತಿದ್ದವು. ಮೂರು ಜಾನುವಾರುಗಳೂ ಮೂರು ದಿಕ್ಕಿನಲ್ಲಿ ಬಿದ್ದಿದ್ದವು. ಜಾನುವಾರುಗಳ ಮಾಲೀಕಳ ಆಕ್ರಂದನ ನನ್ನನ್ನು ನಡುಗಿಸಿತು. ಆಕೆ ಜಮೀನಿನಲ್ಲಿ ಮಣ್ಣನ್ನು ಎತ್ತಿ ತಲೆಗೆ ಹುಯ್ದುಕೊಂಡು, ಗಂಟಲು ಹರಿದುಕೊಂಡು ಕಿರುಚುತ್ತಿದ್ದಳು. ಇನ್ನೇನು ಸಾಯುವುದರಲ್ಲಿದ್ದ ಹಸು-ಕರುಗಳ ಮೇಲೆ ಬಿದ್ದು ಗೋಳಾಡುತ್ತಿದ್ದಳು. ನನ್ನೆದುರಿಗೆ ಬಿದ್ದು ಒರಳಾಡುತ್ತಾ, ಹಸುಕರುಗಳನ್ನು ಉಳಿಸುವಂತೆ ಅಂಗಲಾಚುತ್ತಿದ್ದಳು.

ನನಗೆ ಆಕೆಯನ್ನು ಸಮಾಧಾನಪಡಿಸುವುದೇ ದೊಡ್ಡ ಸವಾಲಾಗಿತ್ತು. ನನ್ನ ಪರಿಸ್ಥಿತಿಯನ್ನು ನೆನೆದು ದುಃಖವಾಯಿತು. ಯಾಕಾದರೂ ಇಂತಹ ಸನ್ನಿವೇಶಕ್ಕೆ ಸಿಲುಕಿಕೊಂಡೆನೋ ಎಂದು ಮರುಗಿದೆ. ಆದರೆ ಕರ್ತವ್ಯ ಪ್ರಜ್ಞೆ ನನ್ನನ್ನು ಧೃತಿಗೆಡಲು ಬಿಡಲಿಲ್ಲ. ಆಕೆಯನ್ನು ಹಿಡಿತಕ್ಕೆ ತೆಗೆದುಕೊಳ್ಳುವಂತೆ ಅಲ್ಲಿ ನೆರೆದಿದ್ದ ಒಂದಿಬ್ಬರು ಹೆಂಗಸರಿಗೆ ವಿನಂತಿಸಿದೆ. ಇಲ್ಲಿಂದಲ್ಲಿಗೆ ಧೂಳೆಬ್ಬಿಸಿಕೊಂಡು ಹುಚ್ಚು ಹಿಡಿದವಳಂತೆ ಓಡಾಡುತ್ತಿದ್ದಳು. ಆ ವಿಶಾಲ ಜಮೀನಿನಲ್ಲಿ ಆಕೆಯನ್ನು ಹಿಡಿಯುವುದೇ ಕಷ್ಟವಾಗಿತ್ತು. ಅಲ್ಲಿಂದಿಲ್ಲಿಗೆ, ಕೊನೆಗೂ ಅವರು ಆಕೆಯನ್ನು ಕಂಟ್ರೋಲಿಗೆ ತೆಗೆದುಕೊಂಡು ಸಮಾಧಾನಿಸತೊಡಗಿದರು.

ನಾನು ಮುಳ್ಳು ಗಿಡಗಳ ನಡುವೆ ರಭಸದಿಂದ ಓಡಾಡುತ್ತಾ ಮೂರೂ ರಾಸುಗಳ ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಅವಲೋಕಿಸಿದೆ. ಒಂದು ನಡುಮಟ್ಟದ ಹೋರಿ ಕರು ತೀವ್ರ ಚಿಂತಾಜನಕವಾಗಿ ಒದ್ದಾಡುತ್ತಿತ್ತು. ಇನ್ನೊಂದು ಕಡಸಿನ ಪರಿಸ್ಥಿತಿಯೂ ಅದಕ್ಕಿಂತ ಭಿನ್ನವಾಗಿ ಇರಲಿಲ್ಲ . ಅದರ ಹೊಟ್ಟೆ ಪಿಪಾಯಿಯಂತೆ ಉಬ್ಬರಿಸಿಕೊಂಡಿತ್ತು. ದೂರದ ಮೂಲೆಯಲ್ಲಿ ಇನ್ನೊಂದು ಹಸು ನಾಲ್ಕೂ ಕಾಲುಗಳನ್ನು ಚಾಚಿಕೊಂಡು ಬಿದ್ದಿತ್ತು. ತೀವ್ರವಾಗಿ ಏದುಸಿರು ಬಿಡುತ್ತಿತ್ತು. ಅದರ ಪರಿಸ್ಥಿತಿಯೂ ಗಂಭೀರವಾಗಿತ್ತು.

ಯಾವುದಕ್ಕೆ ಚಿಕಿತ್ಸೆ ನೀಡಬೇಕೆಂಬುದೇ ನನಗೆ ತೋಚಲಿಲ್ಲ. ಆ ಸಂದಿಗ್ಧ ಪರಿಸ್ಥಿತಿಯಲ್ಲಿ, ಹಾಲು ಕರೆಯುವ ಹಸುವನ್ನೇ ಮೊದಲು ಕಾಪಾಡಲು ಪ್ರಯತ್ನಿಸಲು ತೀರ್ಮಾನಿಸಿದೆ. ಇನ್ನೆರಡು ರಾಸುಗಳತ್ತ ತಿರುಗಿ ಮನದಲ್ಲೇ ಕ್ಷಮೆಯಾಚಿಸಿದೆ.

ಅಲ್ಲಿದ್ದ ಇಬ್ಬರು ಮೂವರು ರೈತರು ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ಹಸುವಿನ ಕತ್ತನ್ನು ಮೇಲಕ್ಕೆ ಎತ್ತಿ ಹಿಡಿದುಕೊಂಡರು. ಅದಕ್ಕೆ ಸಲೈನ್ ಬಾಟಲಿಗಳನ್ನು ಜೋಡಿಸಿ ಜೀವರಕ್ಷಕ ಇಂಜೆಕ್ಷನ್ನುಗಳನ್ನು ನೀಡಿದೆ. ಹೊಟ್ಟೆಯ ಗಾಳಿ ತೆಗೆದು ಉಸಿರಾಟವನ್ನು ಸರಾಗಗೊಳಿಸಿದೆ. ಮತ್ತೆರಡರ ಪರಿಸ್ಥಿತಿ ಹೇಗಿದೆ ಎಂದು ನೋಡಲು ಅವುಗಳತ್ತ ಓಡಿದೆ. ಹೋರಿಕರು ಕೊನೆಯ ಸೆಕೆಂಡುಗಳನ್ನು ಎಣಿಸುತ್ತಿತ್ತು. ಅದರ ದೊಡ್ಡ ಜೀವ ಆಗಲೇ ಹೊರಟು ಹೋಗಿತ್ತು. ನನ್ನಿಂದ ಏನೂ ಮಾಡಲು ಸಾಧ್ಯವಿಲ್ಲ ಎಂದು ಆಕೆಗೆ ಹೇಳಿದೆ.

ಹಸುವನ್ನಾದರೂ ಉಳಿಸಿ ಸಾ ಎಂದು ಅಂಗಲಾಚಿದಳು. ಆಕೆಯ ಕೆದರಿದ ತಲೆ, ಮುಖದ ಮೇಲಿನ ಧೂಳನ್ನು ನೋಡಿ ನನಗೆ ಭಯ ದುಃಖಗಳು ಒಟ್ಟಿಗೇ ಆವರಿಸಿದವು. ನಾನು ಇನ್ನೊಂದು ಕಡಸಿನತ್ತ ಓಡುತ್ತಿರುವಾಗಲೇ, ಹೋರಿ ಸತ್ತುಹೋಯ್ತು ಎಂದು ಯಾರೋ ಬೆನ್ನ ಹಿಂದೆ ಕೂಗಿದರು. ಆಗ ಆ ಕಡಸೂ ಕೂಡ ಹೆಚ್ಚಕಡಿಮೆ ಸಾವಿನ ದವಡೆಗೆ ಸಿಲುಕಿ ಆಗಿತ್ತು.

ಯೂರಿಯಾ ಜಾನುವಾರುಗಳನ್ನು ಯಾವ ರೀತಿ ತೀವ್ರ ವಿಷವಾಗಿ ಕೊಲ್ಲುತ್ತದೆ ಎಂಬುದನ್ನು ಓದಿ ತಿಳಿದುಕೊಂಡಿದ್ದೆ ಅಷ್ಟೇ. ಆದರೆ ಅಂದು ಆ ಬಟಾಬಯಲಿನ ಪ್ರಯೋಗ ಶಾಲೆಯಲ್ಲಿ ಅದರ ಘೋರ ರೂಪದ ದರ್ಶನ ಆಯಿತು.

ಆಕೆ ಅಂದು ರಾಸುಗಳನ್ನು ಮೇಯಿಸಿಕೊಂಡು ಊರಿಗೆ ವಾಪಸ್ ಆಗುತ್ತಿರುವಾಗ ಮಾಮೂಲಿನಂತೆ ಪಕ್ಕದ ಜಮೀನಿನಲ್ಲಿದ್ದ ನೀರಿನ ಡ್ರಮ್ಮಿನಲ್ಲಿ ಮೂರು ರಾಸುಗಳಿಗೂ ನೀರು ಕುಡಿಸಿದ್ದಳು. ಆಕೆಯ ದುರಾದೃಷ್ಟಕ್ಕೆ, ಜಮೀನಿನ ಮಾಲೀಕ ಪೈರುಗಳಿಗೆ ಡ್ರಿಪ್ ಮೂಲಕ ಸಿಂಪಡಿಸಲು ಡ್ರಮ್ಮಿಗೆ ಯೂರಿಯಾ ಬೆರೆಸಿದ್ದು ಆಕೆಗೆ ಗೊತ್ತಾಗಲಿಲ್ಲ. ಆ ಸಂದರ್ಭದಲ್ಲಿ ಆತ ಅಲ್ಲಿ ಇರಲಿಲ್ಲ. ರಾಸುಗಳೂ ಕೂಡ ರುಚಿಕರ ಯೂರಿಯಾ ನೀರನ್ನು ಚಪ್ಪರಿಸಿಕೊಂಡು ಕುಡಿದಿದ್ದವು.

ಇದನ್ನೂ ಓದಿ: Book Excerpt : ಯಕ್…!‌

ಯೂರಿಯಾ ಹಸುವಿನ ಹೊಟ್ಟೆಗೆ ಸೇರಿದ ತಕ್ಷಣವೇ ವಿಷಕಾರಿ ಅಮೋನಿಯಾ ಆಗಿ ಪರಿವರ್ತನೆಗೊಳ್ಳುತ್ತದೆ. ರಕ್ತನಾಳಗಳ ಮೂಲಕ ಅಂಗಾಂಗಗಳನ್ನು ವ್ಯಾಪಿಸಿ ನಂಜಾಗಿ ಕೊಲ್ಲುತ್ತದೆ. ಹಾಗಾಗಿ ಯಾವ ಪ್ರಮಾಣದಲ್ಲಿ ಯೂರಿಯಾ ಹಸುವಿನ ಹೊಟ್ಟೆಯನ್ನು ಸೇರಿದೆ ಹಾಗು ಅದರ ಆರೋಗ್ಯ ಸ್ಥಿತಿ ಹೇಗಿದೆ ಎಂಬುದರ ಮೇಲೆ ಹಸುವಿನ ಅಳಿವು ಉಳಿವು ತೀರ್ಮಾನವಾಗುತ್ತದೆ. ಮೊದಲ ಇಪ್ಪತ್ತುಮೂವತ್ತು ನಿಮಿಷಗಳು ಮಹತ್ವದ ಅವಧಿ, ಆ ಘಳಿಗೆಯಲ್ಲಿ ನಾವು ಹೋರಾಡಿ ಹಸುವನ್ನು ಬದುಕಿಸಿಕೊಂಡರೆ ಅದೊಂದು ಪವಾಡವೇ ಸರಿ.

ಆ ಕಡಸಿಗೂ ಜೀವರಕ್ಷಕ ಔಷಧಿಗಳನ್ನು ಹಾಕುವ ವ್ಯರ್ಥ ಪ್ರಯತ್ನ ಮಾಡಿದೆ. ಅದೂ ಕೂಡ ಒಂದೆರಡು ನಿಮಿಷಗಳಲ್ಲಿ ತೇಲುಗಣ್ಣು ಮೇಲುಗಣ್ಣು ಮಾಡಿ ಕಾಲುಗಳನ್ನು ನೆಟ್ಟಗೆ ಚಾಚಿ ನನ್ನ ಹಸ್ತಗಳ ಮೇಲೆ ಅಸುನೀಗಿತು. ಬಿಸಿಲಿಗೆ ಒಣಗಿದ್ದ ನನ್ನ ಕಣ್ಣುಗಳು ಚೂರು ತೇವವಾಗಿ ಮತ್ತೆ ಒಣಗಿದವು. ಏತನ್ಮಧ್ಯೆ ನಿರಂತರ ಚಿಕಿತ್ಸೆಯ ಪರಿಣಾಮ ಆ ಹಸುವಿಗೆ ನಿಧಾನವಾಗಿ ಪ್ರಜ್ಞೆ ಬರತೊಡಗಿತು. ನಿಧಾನವಾಗಿ ಕತ್ತು ಎತ್ತಿತು. ಕತ್ತು ಸ್ವಾಧೀನಕ್ಕೆ ಬಂದಿತು.

ಇದೇ ಸೂಕ್ತ ಸಮಯವೆಂದು ವಿನೇಗಾರ್ ಕುಡಿಸಿದೆ. ಬೇಕರಿಗಳಲ್ಲಿ ಬನ್‌ಗಳನ್ನು ತಯಾರಿಸಲು ಬಳಸುವ ವಿನೇಗಾರಿನಲ್ಲಿ ಇರುವ ಅಸಿಟಿಕ್ ಆಸಿಡಿಗೆ ಹಸುವಿನ ಹೊಟ್ಟೆಯಲ್ಲಿ ಅಮೋನಿಯಾದ ದುಷ್ಪರಿಣಾಮಗಳನ್ನು ತಿಳಿಗೊಳಿಸುವ ಶಕ್ತಿ ಇದೆ. ಯೂರಿಯಾವನ್ನು ಶೇ. 2ರ ಪ್ರಮಾಣದಲ್ಲಿ ನೀರಿಗೆ ಬೆರೆಸಿ ಒಣ ಮೇವಿಗೆ ಮಿತವಾಗಿ ಸಿಂಪಡಿಸಿದರೆ ಮೇವಿನ ಪೌಷ್ಟಿಕಾಂಶವನ್ನು ಹೆಚ್ಚಿಸಬಲ್ಲದು. ವಿಸ್ಮಯದ ಸಂಗತಿ! ಯೂರಿಯಾಕ್ಕೆ ಆಹಾರವಾಗಿಯೂ ಚೈತನ್ಯ ನೀಡುವ ಶಕ್ತಿಯಿದೆ, ವಿಷವಾಗಿ ಕೊಲ್ಲುವ ಶಕ್ತಿಯೂ ಇದೆ! ಯೂರಿಯಾದ ಒಳಿತುಕೆಡಕುಗಳು ಬಳಸುವವರ ವಿವೇಚನೆ ವಿವೇಕವನ್ನು ಅವಲಂಬಿಸಿವೆ.

ಹಸು ಆಶ್ಚರ್ಯಕರ ರೀತಿಯಲ್ಲಿ ಮತ್ತಷ್ಟು ಚೇತರಿಸಿಕೊಂಡಿತು. ಒಂದೆರಡು ನಿಮಿಷಗಳಲ್ಲಿ ತೂರಾಡುತ್ತಾ ಎದ್ದು ನಿಂತಿತು. ಇಷ್ಟಾಗಿಯೂ ಎರಡು ರಾಸುಗಳು ಸತ್ತು ಹೋಗಿದ್ದಕ್ಕೆ ಆಕೆ ಇನ್ನೂ ದುಃಖದಲ್ಲಿದ್ದಳು. ಆದದ್ದು ಆಗಿಹೋಯ್ತು ಡಾಕ್ಟ್ರು ಇದನ್ನಾದ್ರೂ ಬದುಕಿಸಿದಲ್ಲ ಎಂದು
ಆಕೆಗೆ ಅಕ್ಕಪಕ್ಕದ ಜನ ಸಮಾಧಾನ ಹೇಳತೊಡಗಿದರು.

ಆ ಎರಡು ರಾಸುಗಳನ್ನು ಉಳಿಸಲು ವಿಫಲನಾಗಿದ್ದಕ್ಕೆ ನನಗೂ ತೀವ್ರ ದುಃಖವಾಗಿತ್ತು. ಆದರೆ ಯಾರ ಮುಂದೆ ಹೇಳಿಕೊಳ್ಳಲಿ. ನಿನ್ನ ಶಕ್ತಿ ಮೀರಿ ಪ್ರಯತ್ನಿಸಿದ್ದೀಯಾ, ಮರುಗದಿರು ಎಂದು ನನ್ನ ಅಂತರಾತ್ಮ ಸಂತೈಸುತ್ತಿತ್ತು.

ಆ ವಿಲಕ್ಷಣ ಸನ್ನಿವೇಶದಿಂದ ದೈಹಿಕವಾಗಿ ಹೊರಬಂದರೂ ಮಾನಸಿಕವಾಗಿ ಆಗಾಗ ಕಾಡುತ್ತದೆ. ಅಂದು ನಾನು ನಿಜಕ್ಕೂ ಗೆದ್ದೆನೇ ಅಥವಾ 1-2 ಅಂತರದಲ್ಲಿ ಸೋತೆನೇ ಎಂದು ಜಿಜ್ಞಾಸೆಯಲ್ಲಿ ಮುಳುಗುತ್ತೇನೆ. ಅದಕ್ಕೇ ನಾನು ಹೇಳಿದ್ದು, ಪಶುವೈದ್ಯರು ನಿರಂತರವಾಗಿ ಅನಿವಾರ್ಯವಾಗಿ ಸಿಲುಕಿಕೊಳ್ಳುವ ಹತ್ತು ಹಲವು ಕರುಣಾಜನಕ ಪರಿಸ್ಥಿತಿಗಳು ಮತ್ಯಾರ ಬದುಕಿನಲ್ಲಿಯೂ ಬಾರದಿರಲೆಂದು.

ಇದನ್ನೂ ಓದಿ: Booker award: ಭಾರತೀಯ ಲೇಖಕಿ ಗೀತಾಂಜಲಿ ಶ್ರೀ ಕಾದಂಬರಿಗೆ ಮನ್ನಣೆ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಪ್ರಮುಖ ಸುದ್ದಿ

ಕರ್ನಾಟಕದ ಶ್ರುತಿ ಬಿ.ಆರ್, ಕೃಷ್ಣಮೂರ್ತಿ ಬಿಳಿಗೆರೆಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಗರಿ

ಕೇಂದ್ರ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಮಾಧವ್‌ ಕೌಶಿಕ್‌ ಅವರ ನೇತೃತ್ವದಲ್ಲಿ ಇತ್ತೀಚೆಗೆ ಗುಜರಾತ್‌ನ ನರ್ಮದಾದಲ್ಲಿ ನಡೆದ ಸಭೆಯಲ್ಲಿ ಪ್ರಶಸ್ತಿ ಘೋಷಣೆ ಕುರಿತು ತೀರ್ಮಾನ ತೆಗೆದುಕೊಳ್ಳಲಾಗಿದೆ. ದೇಶದ ಭಾಷೆಗಳ ಸಾಹಿತಿಗಳನ್ನು ಗುರುತಿಸಿ ಕೇಂದ್ರ ಸಾಹಿತ್ಯ ಅಕಾಡೆಮಿಯು ಪ್ರತಿ ವರ್ಷ ಪ್ರಶಸ್ತಿಗಳನ್ನು ನೀಡುತ್ತದೆ. ಪ್ರಶಸ್ತಿಯು ಒಂದು ಲಕ್ಷ ರೂ. ನಗದು ಹಾಗೂ ಫಲಕವನ್ನು ಹೊಂದಿದೆ. ಒಟ್ಟು 23 ಸಾಹಿತಿಗಳಿಗೆ ಪ್ರಶಸ್ತಿ ನೀಡಲಾಗಿದ್ದು, ಕರ್ನಾಟಕದ ಇಬ್ಬರಿಗೂ ಪ್ರಶಸ್ತಿ ದೊರೆತಿದೆ.

VISTARANEWS.COM


on

Kendra Sahitya Akademi Award
Koo

ನವದೆಹಲಿ/ಬೆಂಗಳೂರು: ದೇಶದ 23 ಲೇಖಕರಿಗೆ 2024ನೇ ಸಾಲಿನ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿಯನ್ನು (Kendra Sahitya Akademi Award) ಘೋಷಣೆ ಮಾಡಲಾಗಿದ್ದು, ಕರ್ನಾಟಕದ ಇಬ್ಬರಿಗೆ ಪ್ರತಿಷ್ಠಿತ ಪ್ರಶಸ್ತಿ ಲಭಿಸಿದೆ. ಶ್ರುತಿ ಬಿ.ಆರ್.‌ (Shruti BR) ಅವರಿಗೆ ಯುವ ಪುರಸ್ಕಾರ ಘೋಷಿಸಿದ್ದರೆ, ಕೃಷ್ಣಮೂರ್ತಿ ಬಿಳಿಗೆರೆ (Krishnamurthy Biligere) ಅವರಿಗೆ ಬಾಲ ಪುರಸ್ಕಾರ ಘೋಷಣೆ ಮಾಡಲಾಗಿದೆ. ಕೇಂದ್ರ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಮಾಧವ್‌ ಕೌಶಿಕ್‌ ಅವರ ನೇತೃತ್ವದಲ್ಲಿ ಇತ್ತೀಚೆಗೆ ಗುಜರಾತ್‌ನ ನರ್ಮದಾದಲ್ಲಿ ನಡೆದ ಸಭೆಯಲ್ಲಿ ಈ ಕುರಿತು ತೀರ್ಮಾನಿಸಲಾಗಿದೆ.

ಶ್ರುತಿ ಬಿ.ಆರ್.‌ ಅವರು ಚಿಕ್ಕಮಗಳೂರಿನ ತರೀಕೆರೆಯವರಾಗಿದ್ದು, ಪ್ರಸ್ತುತ ಬೆಂಗಳೂರಿನಲ್ಲಿ ನೆಲೆಸಿದ್ದಾರೆ. ಇವರು ಕೆಎಎಸ್‌ ಅಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದು, ಕವಯತ್ರಿಯಾಗಿಯೂ ಗುರುತಿಸಿಕೊಂಡಿದ್ದಾರೆ. ಇವರ ಮೊದಲ ಕವನ ಸಂಕಲನವಾದ ‘ಜೀರೋ ಬ್ಯಾಲೆನ್ಸ್’‌ ಕೃತಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪುರಸ್ಕಾರ ಲಭಿಸಿದೆ. ಮೈಸೂರು ವಿಶ್ವವಿದ್ಯಾಲಯದಲ್ಲಿ ಅರ್ಥಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿಯನ್ನು ಐದು ಚಿನ್ನದ ಪದಕಗಳೊಂದಿಗೆ ಪಡೆದಿದ್ದು, ಪಿಎಚ್‌.ಡಿಯನ್ನೂ ಪಡೆದಿದ್ದಾರೆ. ಇವರ ಲೇಖನಗಳು, ಕವಿತೆಗಳು ನಾಡಿನ ಹಲವು ಪತ್ರಿಕೆಗಳಲ್ಲಿ ಪ್ರಕಟವಾಗಿವೆ.

ತುಮಕೂರು ಜಿಲ್ಲೆ ತಿಪಟೂರು ತಾಲೂಕಿನ ಬಿಳಿಗೆರೆ ಅವರು ಇದೇ ಜಿಲ್ಲೆಯ ಹುಳಿಯಾರಿನ ಬಿಎಂಎಸ್‌ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪ್ರಾಚಾರ್ಯರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಸಾವಯವ ಕೃಷಿ, ಬೀಜ ನಾಟಿ, ನೀರು ಸಂಗ್ರಹ ಸೇರಿ ಹಲವು ಚಳವಳಿಗಳಲ್ಲೂ ಸಕ್ರಿಯರಾಗಿರುವ ಇವರು, ಸಾಹಿತ್ಯ ಕೃಷಿಯಲ್ಲೂ ನಾಡಿನಾದ್ಯಂತ ಹೆಸರು ಗಳಿಸಿದ್ದಾರೆ. ಕಾವ್ಯ, ಕತೆ, ನಾಟಕಗಳ ರಚನೆ ಮೂಲಕ ಇವರು ನಾಡಿನ ಮನೆಮಾತಾಗಿದ್ದಾರೆ. ಇವರಿಗೆ ಎರಡು ಬಾರಿ ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಸೇರಿ ಹಲವು ಪ್ರಶಸ್ತಿಗಳು ದೊರೆತಿವೆ.

ಕೇಂದ್ರ ಸಾಹಿತ್ಯ ಅಕಾಡೆಮಿಯ ಸದಸ್ಯರನ್ನೂ ಒಳಗೊಂಡ ತೀರ್ಪುಗಾರರ ಸಮಿತಿ ಮಾಡಿದ ಶಿಫಾರಸಿನಂತೆ ಪ್ರಶಸ್ತಿ ಘೋಷಣೆ ಮಾಡಲಾಗಿದೆ. ದೇಶದ ಭಾಷೆಗಳ ಸಾಹಿತಿಗಳನ್ನು ಗುರುತಿಸಿ ಕೇಂದ್ರ ಸಾಹಿತ್ಯ ಅಕಾಡೆಮಿಯು ಪ್ರತಿ ವರ್ಷ ಪ್ರಶಸ್ತಿಗಳನ್ನು ನೀಡುತ್ತದೆ. ಪ್ರಶಸ್ತಿಯು ಒಂದು ಲಕ್ಷ ರೂ. ನಗದು ಹಾಗೂ ಫಲಕವನ್ನು ಹೊಂದಿದೆ.

ಕನ್ನಡದ ಖ್ಯಾತ ಬರಹಗಾರ ಲಕ್ಷ್ಮೀಶ ತೋಳ್ಪಾಡಿ ಅವರಿಗೆ 2023ರ ಸಾಲಿನ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ನೀಡಲಾಗಿತ್ತು. ಲಕ್ಷ್ಮೀಶ ತೋಳ್ಪಾಡಿ ಅವರ ಮಹಾಭಾರತದ ಅನುಸಂಧಾನದ ಭಾರತಯಾತ್ರೆ ಕೃತಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಸಂದಿತ್ತು. ಕನ್ನಡ ವಿಭಾಗದ ಪ್ರಶಸ್ತಿ ಆಯ್ಕೆ ಸಮಿತಿಯಲ್ಲಿ ಹಿರಿಯ ವಿಜ್ಞಾನ ಬರಹಗಾರ ನಾಗೇಶ್ ಹೆಗಡೆ, ಆನಂದ ಝುಂಜರವಾಡ ಮತ್ತು ಜೆ. ಎನ್. ತೇಜಶ್ರೀ ಅವರಿದ್ದರು.

ಇದನ್ನೂ ಓದಿ: Kendra Sahitya Akademi Award: ಇಬ್ಬರು ಸಾಹಿತಿಗಳಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ; ಯಾರಿವರು?

Continue Reading

ಪ್ರಮುಖ ಸುದ್ದಿ

Kendra Sahitya Akademi Award: ಇಬ್ಬರು ಸಾಹಿತಿಗಳಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ; ಯಾರಿವರು?

Kendra Sahitya Akademi Award: ಮಾನಸ್‌ ರಂಜನ್‌ ಸಮಾಲ್‌ ಅವರು ರಚಿಸಿದ ಸಣ್ಣ ಕತೆಗಳ ಸಂಕಲನವಾದ ‘ಗಾಪ ಕಲಿಕಾ’ ಕೃತಿಗೆ ಪ್ರಶಸ್ತಿ ಘೋಷಣೆ ಮಾಡಲಾಗಿದೆ. ಹಾಗೆಯೇ, ಸಂಜಯ್‌ ಕುಮಾರ್‌ ಪಾಂಡಾ ಅವರ ‘ಹು ಬೈಯಾ’ ಕೃತಿಗೆ ಪ್ರಶಸ್ತಿ ನೀಡಲಾಗುತ್ತಿದೆ. ಇದು ಕೂಡ ಸಣ್ಣ ಕತೆಗಳ ಸಂಕಲನವಾಗಿದೆ. ಇಬ್ಬರ ಕೃತಿಗಳಿಗೂ ಕೇಂದ್ರ ಸಾಹಿತ್ಯ ಅಕಾಡೆಮಿಯು ಪ್ರಶಸ್ತಿ ಘೋಷಿಸಿದೆ/

VISTARANEWS.COM


on

Kendra Sahitya Akademi Award
Koo

ನವದೆಹಲಿ: ಒಡಿಶಾದ ಇಬ್ಬರು ಲೇಖಕರಿಗೆ 2024ನೇ ಸಾಲಿನ ಪ್ರತಿಷ್ಠಿತ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿಯನ್ನು (Kendra Sahitya Akademi Award 2024) ಅವರಿಗೆ ಘೋಷಣೆ ಮಾಡಲಾಗಿದೆ. ಒಡಿಶಾ ಲೇಖಕರಾದ ಮಾನಸ್‌ ರಂಜನ್‌ ಸಮಾಲ್‌ (Manas Ranjan Samal) ಹಾಗೂ ಸಂಜಯ್‌ ಕುಮಾರ್‌ ಪಾಂಡಾ (Sanjay Kumar Panda) ಅವರಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಘೋಷಣೆ ಮಾಡಲಾಗಿದೆ. ಕೇಂದ್ರ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಮಾಧವ್‌ ಕೌಶಿಕ್‌ ಅವರ ನೇತೃತ್ವದಲ್ಲಿ ಇತ್ತೀಚೆಗೆ ಗುಜರಾತ್‌ನ ನರ್ಮದಾದಲ್ಲಿ ನಡೆದ ಸಭೆಯಲ್ಲಿ ಈ ಕುರಿತು ತೀರ್ಮಾನಿಸಲಾಗಿದೆ. ಕರ್ನಾಟಕದ ಇಬ್ಬರಿಗೆ ಪ್ರತಿಷ್ಠಿತ ಪ್ರಶಸ್ತಿ ಲಭಿಸಿದೆ. ಶ್ರುತಿ ಬಿ.ಆರ್.‌ (Shruti BR) ಅವರಿಗೆ ಯುವ ಪುರಸ್ಕಾರ ಘೋಷಿಸಿದ್ದರೆ, ಕೃಷ್ಣಮೂರ್ತಿ ಬಿಳಿಗೆರೆ (Krishnamurthy Biligere) ಅವರಿಗೆ ಬಾಲ ಪುರಸ್ಕಾರ ಘೋಷಣೆ ಮಾಡಲಾಗಿದೆ.

ಕೇಂದ್ರ ಸಾಹಿತ್ಯ ಅಕಾಡೆಮಿಯ ಎರಡು ವಿಭಾಗಗಳಲ್ಲಿ ಪ್ರಶಸ್ತಿ ಘೋಷಣೆ ಮಾಡಲಾಗಿದೆ. ಮಾನಸ್‌ ರಂಜನ್‌ ಸಮಾಲ್‌ ಅವರಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಬಾಲ ಪುರಸ್ಕಾರ ಪ್ರಶಸ್ತಿ ಘೋಷಣೆ ಮಾಡಲಾಗಿದೆ. ಸಂಜಯ್‌ ಕುಮಾರ್‌ ಪಾಂಡಾ ಅವರಿಗೆ ಸಾಹಿತ್ಯ ಅಕಾಡೆಮಿ ಯುವ ಪುರಸ್ಕಾರ ಘೋಷಿಸಲಾಗಿದೆ. ಮಾನಸ್‌ ರಂಜನ್‌ ಸಮಾಲ್‌ ಅವರು ರಚಿಸಿದ ಸಣ್ಣ ಕತೆಗಳ ಸಂಕಲನವಾದ ‘ಗಾಪ ಕಲಿಕಾ’ (Gapa Kalika) ಕೃತಿಗೆ ಪ್ರಶಸ್ತಿ ಘೋಷಣೆ ಮಾಡಲಾಗಿದೆ. ಹಾಗೆಯೇ, ಸಂಜಯ್‌ ಕುಮಾರ್‌ ಪಾಂಡಾ ಅವರ ‘ಹು ಬೈಯಾ’ (Hu Baia) ಕೃತಿಗೆ ಪ್ರಶಸ್ತಿ ನೀಡಲಾಗುತ್ತಿದೆ. ಇದು ಕೂಡ ಸಣ್ಣ ಕತೆಗಳ ಸಂಕಲನವಾಗಿದೆ.

ಕೇಂದ್ರ ಸಾಹಿತ್ಯ ಅಕಾಡೆಮಿಯ ಸದಸ್ಯರನ್ನೂ ಒಳಗೊಂಡ ತೀರ್ಪುಗಾರರ ಸಮಿತಿ ಮಾಡಿದ ಶಿಫಾರಸಿನಂತೆ ಪ್ರಶಸ್ತಿ ಘೋಷಣೆ ಮಾಡಲಾಗಿದೆ. ದೇಶದ ಭಾಷೆಗಳ ಸಾಹಿತಿಗಳನ್ನು ಗುರುತಿಸಿ ಕೇಂದ್ರ ಸಾಹಿತ್ಯ ಅಕಾಡೆಮಿಯು ಪ್ರತಿ ವರ್ಷ ಪ್ರಶಸ್ತಿಗಳನ್ನು ನೀಡುತ್ತದೆ. ಪ್ರಶಸ್ತಿಯು ಒಂದು ಲಕ್ಷ ರೂ. ನಗದು ಹಾಗೂ ಫಲಕವನ್ನು ಹೊಂದಿದೆ.

ಕನ್ನಡದ ಖ್ಯಾತ ಬರಹಗಾರ ಲಕ್ಷ್ಮೀಶ ತೋಳ್ಪಾಡಿ ಅವರಿಗೆ 2023ರ ಸಾಲಿನ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ನೀಡಲಾಗಿತ್ತು. ಲಕ್ಷ್ಮೀಶ ತೋಳ್ಪಾಡಿ ಅವರ ಮಹಾಭಾರತದ ಅನುಸಂಧಾನದ ಭಾರತಯಾತ್ರೆ ಕೃತಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಸಂದಿತ್ತು. ಕನ್ನಡ ವಿಭಾಗದ ಪ್ರಶಸ್ತಿ ಆಯ್ಕೆ ಸಮಿತಿಯಲ್ಲಿ ಹಿರಿಯ ವಿಜ್ಞಾನ ಬರಹಗಾರ ನಾಗೇಶ್ ಹೆಗಡೆ, ಆನಂದ ಝುಂಜರವಾಡ ಮತ್ತು ಜೆ. ಎನ್. ತೇಜಶ್ರೀ ಅವರಿದ್ದರು.

ಭಗವದ್ಗೀತೆಯ ಕುರಿತಾದ ‘ಮಹಾಯುದ್ದಕ್ಕೆ ಮುನ್ನ’ ಅವರ ಮೊದಲ ಪ್ರಕಟಿತ ಕೃತಿಯಾಗಿದೆ. ಭಾಗವತದ ಬಗ್ಗೆ ಬರೆದ ಸರಣಿ ಬರಹಗಳ ಸಂಕಲನ ‘ಸಂಪಿಗೆ ಭಾಗವತ’, ‘ಬೆಟ್ಟ ಮಹಮದನ ಬಳಿಗೆ ಬಾರದಿದ್ದರೆ’, ‘ಭವ ತಲ್ಲಣ’ ಅವರ ಇತರ ಕೃತಿಗಳಾಗಿವೆ. ಜತೆಗೆ, ಕನ್ನಡದ ಅನೇಕ ಪತ್ರಿಕೆಗಳಲ್ಲಿ ಅವರ ಲೇಖನಗಳು ಪ್ರಕವಾಗುತ್ತಲೇ ಇರುತ್ತವೆ.

ಇದನ್ನೂ ಓದಿ: All We Imagine As Light: ʻದಿ ಕೇರಳ ಸ್ಟೋರಿʼ ಸಿನಿಮಾ ಆಡಿಷನ್‌ ರಿಜೆಕ್ಟ್‌ ಮಾಡಿದ್ರಂತೆ ಕಾನ್‌ ಪ್ರಶಸ್ತಿ ವಿಜೇತೆ!

Continue Reading

ಕರ್ನಾಟಕ

Bengaluru News: ಬೆಂಗಳೂರಿನಲ್ಲಿ ಜೂ.15ರಂದು ʼನಾರಿ ಸಮ್ಮಾನ್‌ʼ ಪ್ರಶಸ್ತಿ ಪ್ರದಾನ

Bengaluru News: ಮೀಡಿಯಾ ವಿಷನ್‌, ಬೆಂಗಳೂರು, ಬಿ.ಎಂ. ವಿರುಪಾಕ್ಷಯ್ಯ ಕಲಾ ಟ್ರಸ್ಟ್‌ (ಬಿ.ಎಂ.ವಿ.), ಬಸವ ಪರಿಷತ್‌, ವಿಸ್ತಾರ ನ್ಯೂಸ್‌ ಸಹಯೋಗದಲ್ಲಿ ಇದೇ ಜೂ.15ರಂದು ಶನಿವಾರ ಸಂಜೆ 5 ಗಂಟೆಗೆ ಬೆಂಗಳೂರು ನಗರದ ಅರಮನೆ ರಸ್ತೆಯಲ್ಲಿರುವ ಸ್ಕೌಟ್ಸ್‌ ಅಂಡ್‌ ಗೈಡ್ಸ್‌ ಸಂಸ್ಥೆ ಪ್ರಾಂಗಣದಲ್ಲಿರುವ ಕೊಂಡಜ್ಜಿ ಬಸಪ್ಪ ಸಭಾಂಗಣದಲ್ಲಿ ʼನಾರಿ ಸಮ್ಮಾನ್‌ 2024ʼ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಏರ್ಪಡಿಸಲಾಗಿದೆ.

VISTARANEWS.COM


on

Nari Samman 2024 award ceremony on June 15 in Bengaluru
Koo

ಬೆಂಗಳೂರು: ಮೀಡಿಯಾ ವಿಷನ್‌, ಬೆಂಗಳೂರು, ಬಿ.ಎಂ. ವಿರುಪಾಕ್ಷಯ್ಯ ಕಲಾ ಟ್ರಸ್ಟ್‌ (ಬಿ.ಎಂ.ವಿ.), ಬಸವ ಪರಿಷತ್‌, ವಿಸ್ತಾರ ನ್ಯೂಸ್‌ ಸಹಯೋಗದಲ್ಲಿ ಇದೇ ಜೂ.15ರಂದು ಶನಿವಾರ ಸಂಜೆ 5 ಗಂಟೆಗೆ, ಬೆಂಗಳೂರು ನಗರದ ಅರಮನೆ ರಸ್ತೆಯಲ್ಲಿರುವ ಸ್ಕೌಟ್ಸ್‌ ಅಂಡ್‌ ಗೈಡ್ಸ್‌ ಸಂಸ್ಥೆ ಪ್ರಾಂಗಣದಲ್ಲಿರುವ ಕೊಂಡಜ್ಜಿ ಬಸಪ್ಪ ಸಭಾಂಗಣದಲ್ಲಿ ʼನಾರಿ ಸಮ್ಮಾನ್‌ 2024ʼ ಪ್ರಶಸ್ತಿ ಪ್ರದಾನ ಕಾರ್ಯಕ್ರಮ (Bengaluru News) ಏರ್ಪಡಿಸಲಾಗಿದೆ.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಬಾಂಬೆ ಹೈಕೋರ್ಟ್‌ ನಿವೃತ್ತ ಮುಖ್ಯ ನ್ಯಾ. ಮಂಜುಳಾ ಚೆಲ್ಲೂರು, ರಾಜ್ಯ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಅಭಿವೃದ್ಧಿ ಆಯುಕ್ತೆ ಶಾಲಿನಿ ರಜನೀಶ್‌, ಖ್ಯಾತ ಚಲನಚಿತ್ರ ನಟ ಶ್ರೀನಾಥ್‌, ಬೆಂಗಳೂರಿನ ಬಸವ ಪರಿಷತ್‌ ಅಧ್ಯಕ್ಷೆ ಎಂ.ಪಿ. ಉಮಾದೇವಿ, ಮಾಜಿ ಸಚಿವೆ ರಾಣಿ ಸತೀಶ್‌, ಕಾರ್ಮಿಕ ಸಚಿವ ಸಂತೋಷ್‌ ಲಾಡ್‌, ಇಸ್ರೋ ಸಂಸ್ಥೆ ವಿಜ್ಞಾನಿ ಬಿ.ಎಚ್‌.ಎಂ. ದಾರುಕೇಶ್‌, ಡಾ. ಎಚ್‌.ಆರ್‌. ಶಾಂತರಾಜಣ್ಣ, ಚಲನಚಿತ್ರ ನಟ ಸುಚೇಂದ್ರ ಪ್ರಸಾದ್‌, ಚಲನಚಿತ್ರ ನಟಿ ಭಾವನಾ, ಡಾ. ಮಂಜುಳಾ ಎ. ಪಾಟೀಲ್‌ ಪಾಲ್ಗೊಳ್ಳುವರು.

ಇದನ್ನೂ ಓದಿ: Gold Rate Today: ಆಭರಣ ಖರೀದಿಸಲು ಇದು ಸಕಾಲ; ಚಿನ್ನದ ಬೆಲೆ ಇಳಿಕೆ

ಮಾಜಿ ಮುಖ್ಯಮಂತ್ರಿ, ಸಂಸದ ಬಸವರಾಜ ಬೊಮ್ಮಾಯಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು. ಸಮಾರಂಭದಲ್ಲಿ ಕಿರುತೆರೆ ನಿರೂಪಕಿ ಅನುಶ್ರೀ, ಚಲನಚಿತ್ರ ನಟಿ ಸೋನಾಲ್‌ ಮಂಥೇರೋ, ಉದ್ಯಮಿ ಪಲ್ಲವಿ ರವಿ, ಡಾ. ಮಮತಾ ಎಸ್‌.ಎಚ್‌., ಉಮಾಬಾಯಿ ಖರೆ, ಜ್ಯೋತಿ ಟೋಸೂರ, ಡಾ. ರತ್ನಮ್ಮ ಆರ್‌., ಹಿರಿಯ ನಿರೂಪಕಿ ನವಿತ ಜೈನ್‌, ಸುಜಾತ ಬಯ್ಯಾಪುರ, ಮಧುರ ಅಶೋಕ್‌ ಕುಮಾರ, ಡಾ. ಸುಮಾ ಬಿರಾದಾರ, ಸುಮಿತ್ರಾ ಎಂ.ಪಿ.ರೇಣುಖಾಚಾರ್ಯ, ಡಾ. ಸಂದರ್ಶಿನಿ ನರೇಂದ್ರಕುಮಾರ್‌, ಡಾ. ಪುಲಿಗೆರೆ ಸಂಪದ ಅವರು ಪ್ರಶಸ್ತಿ ಸ್ವೀಕರಿಸಲಿದ್ದಾರೆ.

ಇದನ್ನೂ ಓದಿ: Euro Cup 2024: ಇಂದಿನಿಂದ ಯುರೋ ಕಪ್ ಟೂರ್ನಿ; ಜರ್ಮನಿ-ಸ್ಕಾಟ್ಲೆಂಡ್ ನಡುವೆ ಮೊದಲ ಪಂದ್ಯ

ನಾಟ್ಯ ಸಂಪದ ನೃತ್ಯ ಶಾಲೆ ಸಂಸ್ಥಾಪಕಿ ಡಾ. ಮಾನಸ ಕಂಠಿ ತಂಡದವರಿಂದ ಭರತನಾಟ್ಯ ಕಾರ್ಯಕ್ರಮ ನಡೆಯಲಿದೆ.

Continue Reading

Latest

Veeraloka Books : ಹೊಸ ಲೇಖಕರಿಗೆ ವೀರಲೋಕ ಪ್ರಕಾಶನ ಹೆದ್ದಾರಿಯನ್ನೇ ಸೃಷ್ಟಿಸಿದೆ: ಜಯಂತ್‌ ಕಾಯ್ಕಿಣಿ ಶ್ಲಾಘನೆ

Veeraloka Books: ಕನ್ನಡ ಪುಸ್ತಕ ಲೋಕದ ಪ್ರತಿಕೂಲ ಪರಿಸ್ಥಿತಿಯಲ್ಲಿ ವೀರಲೋಕ ಪ್ರಕಾಶನವು ಅಜ್ಞಾತ ಓದುಗರನ್ನೂ ತಲುಪಿದೆ. ಎಲ್ಲೋ ತಮ್ಮ ಪಾಡಿಗೆ ತಾವು ಬರೆದುಕೊಂಡಿದ್ದು, ಪ್ರಕಾಶಕರು ಸಿಗದೆ ಪರದಾಡುತ್ತಿರುವವರಿಗೆ ವೀರಲೋಕ ಹೆದ್ದಾರಿಯನ್ನೇ ಸೃಷ್ಟಿ ಮಾಡಿದೆ. ಇಡೀ ತಂಡದ ವೇಗ ಹೀಗೆಯೇ ಮುಂದುವರಿಯಲಿ ಎಂದು ಹಿರಿಯ ಸಾಹಿತಿ ಜಯಂತ್‌ ಕಾಯ್ಕಿಣಿ ಅವರು ಹಾರೈಸಿದರು.

VISTARANEWS.COM


on

Veeraloka
Koo

ಬೆಂಗಳೂರು: ಇವತ್ತು ದಾಲ್ ತಡ್ಕ ರೇಟ್ ಜಾಸ್ತಿಯಾದರೆ (Veeraloka Books) ನಾವು ಯಾರನ್ನೂ ಕೇಳುವುದಿಲ್ಲ. ಸುಮ್ಮನೆ ಹೋಗಿ ಹಣ ಕೊಟ್ಟು ತಿಂದು ಬರುತ್ತೇವೆ. ಆದರೆ ಕನ್ನಡ ಪುಸ್ತಕಗಳಿಗೆ ದಾಲ್‌ ತಡ್ಕಾಗಿರುವಷ್ಟು ಬೇಡಿಕೆಯೂ ಇಲ್ಲ. ಮುಖಬೆಲೆ ಐದು ರೂಪಾಯಿ ಜಾಸ್ತಿಯಾದರೂ ಓದುಗ ಪುಸ್ತಕ ಖರೀದಿಸಲು ಹಿಂದೆ ಮುಂದೆ ನೋಡುವಂಥ ಪರಿಸ್ಥಿತಿ ಇದೆ ಎಂದು ಹಿರಿಯ ಸಾಹಿತಿ ಜಯಂತ್‌ ಕಾಯ್ಕಿಣಿ (jayant kaikini) ವಿಷಾದಿಸಿದರು. ನಗರದಲ್ಲಿ ಶನಿವಾರ ಆಯೋಜಿಸಲಾಗಿದ್ದ ವೀರಲೋಕ ಬುಕ್ಸ್ 2ನೇ ವಾರ್ಷಿಕೋತ್ಸವ ಸಮಾರಂಭದಲ್ಲಿ ಪುಸ್ತಕ ಬಿಡುಗಡೆ ಮಾಡಿ ಅವರು ಮಾತನಾಡಿದರು.

ಕನ್ನಡ ಪುಸ್ತಕ ಲೋಕದ ಪ್ರತಿಕೂಲ ಪರಿಸ್ಥಿತಿಯಲ್ಲಿ ವೀರಲೋಕ ಪ್ರಕಾಶನವು ಅಜ್ಞಾತ ಓದುಗರನ್ನೂ ತಲುಪಿದೆ. ಎಲ್ಲೋ ತಮ್ಮ ಪಾಡಿಗೆ ತಾವು ಬರೆದುಕೊಂಡಿದ್ದು, ಪ್ರಕಾಶಕರು ಸಿಗದೆ ಪರದಾಡುತ್ತಿರುವವರಿಗೆ ವೀರಲೋಕ ಹೆದ್ದಾರಿಯನ್ನೇ ಸೃಷ್ಟಿ ಮಾಡಿದೆ. ಇಡೀ ತಂಡದ ವೇಗ ಹೀಗೆಯೇ ಮುಂದುವರಿಯಲಿ ಎಂದು ಕಾಯ್ಕಿಣಿ ಅವರು ಹಾರೈಸಿದರು.

ವೀರಲೋಕ ಬುಕ್ಸ್ ಆಯೋಜಿಸಿದ್ದ 2ನೇ ವಾರ್ಷಿಕೋತ್ಸವ ಸಮಾರಂಭದಲ್ಲಿ ಐದು ಕೃತಿಗಳ ಬಿಡುಗಡೆಯನ್ನೂ ಹಮ್ಮಿಕೊಳ್ಳಲಾಗಿತ್ತು. ಅವುಗಳಲ್ಲಿ ರಾಧಾಕೃಷ್ಣ ಕಲ್ಚಾರ್‌ ಅವರ ‘ಕವಚ’ ಕಾದಂಬರಿ ವೀರಲೋಕದ ನೂರನೇ ಕೃತಿಯಾಗಿತ್ತು. ಡಾ. ಎಂ ವೆಂಕಟಸ್ವಾಮಿಯವರ ‘ಜಗತ್ತಿನ ಭೀಕರ ಯುದ್ಧಗಳು’, ನೌಶಾದ್ ಜನ್ನತ್ತ್ ಅವರ ‘ಬೇವಾಚ್’, ಸಂದ್ಯಾರಾಣಿಯವರ ‘ನಾತಿಚರಾಮಿ’, ಡಾ. ಶೈಲೇಶ್ ಕುಮಾರ್ ಅವರ ‘ಸುಪ್ತ ಸಾಗರದಾಚೆ’ ಇನ್ನಿತರ ಕೃತಿಗಳಾಗಿದ್ದವು.
ವೀರಲೋಕ ಬುಕ್ಸ್ ಸಂಸ್ಥಾಪಕರಾದ ವೀರಕಪುತ್ರ ಶ್ರೀನಿವಾಸ್ ಅವರು ಆಶಯ ನುಡಿಗಳನ್ನಾಡಿದರು. ಎರಡು ವರ್ಷಗಳಲ್ಲಿನ ಏಳುಬೀಳುಗಳು, ಮೈಲುಗಲ್ಲುಗಳು, ಮುಂದಿನ ತಯಾರಿಗಳ ಬಗ್ಗೆ ವಿವರಿಸಿದರು.

ಇದೇ ವೇದಿಕೆಯಲ್ಲಿ ಅನಂತ ಕುಣಿಗಲ್ ಅವರು ಸಂಪಾದಿಸಿರುವ ವೀರಕಪುತ್ರ ಶ್ರೀನಿವಾಸ್ ಅವರ ಲಲಿತ ಪ್ರಬಂಧಗಳ ಸಂಕಲನ ‘ಬದುಕೇ ಥ್ಯಾಂಕ್ಯೂ’ ಕೃತಿಯೂ ಬಿಡುಗಡೆಯಾಯಿತು. ಕನ್ನಡ ಮಾಣಿಕ್ಯ ಮಾಸ ಪತ್ರಿಕೆಯ ದಶಮಾನೋತ್ಸವವನ್ನೂ ಆಚರಿಸಲಾಯಿತು. ವೀರಲೋಕದ ಐದು ಕೃತಿಗಳ ಮರುಮುದ್ರಣದ ಆವೃತ್ತಿಯನ್ನು ಈ ಸಂದರ್ಭದಲ್ಲಿ ಬಿಡುಗಡೆ ಮಾಡಲಾಯಿತು.

ಇದನ್ನೂ ಓದಿ: V Somanna profile : ಅಂದು ಜನತಾ ಬಜಾರ್‌ನಲ್ಲಿ ಸೇಲ್ಸ್‌ಮ್ಯಾನ್‌; ಇಂದು ಕೇಂದ್ರ ಸಚಿವ! ವಿ ಸೋಮಣ್ಣ ರಾಜಕೀಯ ಹಾದಿ ಕುತೂಹಲಕರ

ಚಿತ್ರ ನಿರ್ದೇಶಕರಾದ ಗಿರೀಶ್ ಕಾಸರವಳ್ಳಿ, ಹಿರಿಯ ಸಾಹಿತಿ ಮಲ್ಲೇಪುರಂ ಜಿ. ವೆಂಕಟೇಶ್, ನಿರ್ದೇಶಕ ಮಂಸೋರೆ, ಸಂಭಾಷಣೆಕಾರ ಮಾಸ್ತಿ, ಮಹೇಶ ಅರಬಳ್ಳಿ, ಭಾರತಿ ಬಿ.ವಿ, ಪೂರ್ಣಿಮಾ ಮಾಳಗಿಮನಿ, ಶೋಭಾ ರಾವ್, ನವೀನ್ ಸಾಗರ್, ಮಂಡ್ಯ ರಮೇಶ್, ಜೋಗಿ, ಸಂತೋಷ್ ಹಾನಗಲ್, ದಿವ್ಯಾ ಆಲೂರು, ಹರಿವು ರತೀಶ್, ಕಾನ್ಕೇವ್ ನಂದೀಶ್, ಪ್ರಕಾಶ್ ಕಂಬತ್ತಳ್ಳಿ, ಷಡಕ್ಷರಿ, ವಿ ನಾಗೇಂದ್ರ ಪ್ರಸಾದ್ ಮತ್ತಿತರು ಉಪಸ್ಥಿತರಿದ್ದರು.

Continue Reading
Advertisement
DK Shivakumar
ಪ್ರಮುಖ ಸುದ್ದಿ13 mins ago

DK Shivakumar: ಇವಿಎಂ ಸತ್ಯಾಸತ್ಯತೆ ಪ್ರಪಂಚಕ್ಕೇ ಅರ್ಥವಾಗಿದೆ; ಮಸ್ಕ್ ಅನುಮಾನ ಸಮರ್ಥಿಸಿಕೊಂಡ ಡಿಕೆಶಿ

Viral Video
Latest30 mins ago

Viral Video: 7 ಅಜ್ಜಂದಿರ ಜೊತೆ ಸಂಸಾರ ನಡೆಸುತ್ತಿರುವ ಯುವತಿ; ಆಕೆಯ ಪ್ಲ್ಯಾನ್ ಇಂಟರೆಸ್ಟಿಂಗ್!

Malaika Vasupal experimented with a halter neck blouse for a traditional saree
ಫ್ಯಾಷನ್32 mins ago

Malaika Vasupal: ಟ್ರೆಡಿಷನಲ್‌ ಸೀರೆಗೆ ಹಾಲ್ಟರ್‌ ನೆಕ್‌ ಬ್ಲೌಸ್‌ ಪ್ರಯೋಗಿಸಿದ ನಟಿ ಮಲೈಕಾ ವಸುಪಾಲ್‌

Air India Food
ದೇಶ36 mins ago

Air India Food:‌ ಪ್ರಯಾಣಿಕರೇ ಎಚ್ಚರ; ವಿಮಾನದ ಊಟದಲ್ಲಿ ಸಿಕ್ತು ಮೆಟಲ್‌ ಬ್ಲೇಡ್!

Viral news
ವೈರಲ್ ನ್ಯೂಸ್46 mins ago

Viral News: ಕಾಯಿಲೆ ಗುರುತು ಹಿಡಿಯಲು ಖ್ಯಾತ ವೈದ್ಯರ ತಿಣುಕಾಟ; ಹತ್ತೇ ಸೆಕೆಂಡ್ ನಲ್ಲಿ ಪತ್ತೆಹಚ್ಚಿದ ಕೆಲಸದ ಮಹಿಳೆ!

T20 World Cup Super 8
ಕ್ರೀಡೆ46 mins ago

T20 World Cup Super 8 Stage: ಸೂಪರ್​-8 ಪಂದ್ಯಕ್ಕೂ ಮಳೆ ಭೀತಿ; ಭಾರತ-ಆಸೀಸ್​ ಪಂದ್ಯ ಅನುಮಾನ!

Rakshit Shetty Ekam web series release date announce
ಸ್ಯಾಂಡಲ್ ವುಡ್47 mins ago

Rakshit Shetty: ʻಏಕಂʼ ವೆಬ್ ಸಿರೀಸ್​ ರಿಲೀಸ್‌ ಡೇಟ್‌ ಅನೌನ್ಸ್‌ ಮಾಡಿದ ಸಿಂಪಲ್‌ ಸ್ಟಾರ್‌ ರಕ್ಷಿತ್ ಶೆಟ್ಟಿ!

Dawood Ibrahim
ವಿದೇಶ58 mins ago

Dawood Ibrahim: ವೃದ್ಧ ಡಾನ್‌ ದಾವೂದ್‌ ಇಬ್ರಾಹಿಂ ಈಗ ಅಮೆರಿಕದ ಕೇಂದ್ರ ಗುಪ್ತಚರ ಸಂಸ್ಥೆಯ ಕೈಗೊಂಬೆ?

Two drown in quarry
ಕರ್ನಾಟಕ59 mins ago

Drown in Quarry: ಕ್ವಾರಿಯಲ್ಲಿ ಈಜಲು ಹೋಗಿದ್ದ ಇಬ್ಬರು ಯುವಕರ ಸಾವು

MAHE Manipal 1 Day Treatment Capacity Development Training Program at KMC
ಬೆಂಗಳೂರು1 hour ago

MAHE Manipal: ಕೆಎಂಸಿಯಲ್ಲಿ 1 ದಿನದ ಚಿಕಿತ್ಸಾ ಸಾಮರ್ಥ್ಯ ಅಭಿವೃದ್ಧಿ ತರಬೇತಿ ಕಾರ್ಯಕ್ರಮಕ್ಕೆ ಚಾಲನೆ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Actor Darshan
ಮೈಸೂರು4 hours ago

Actor Darshan : ಕೊಲೆ ಕೇಸ್‌ ಬೆನ್ನಲ್ಲೇ ನಟ ದರ್ಶನ್‌ ಸೇರಿ ಪತ್ನಿ ವಿಜಯಲಕ್ಷ್ಮಿಗೆ ಬಾರ್ ಹೆಡೆಡ್ ಗೂಸ್ ಸಂಕಷ್ಟ!

Bakrid 2024
ಬೆಂಗಳೂರು5 hours ago

Bakrid 2024 : ಮತ್ತೊಂದು ಧರ್ಮವನ್ನೂ ಪ್ರೀತಿಸಿ; ಬಕ್ರೀದ್‌ ಪ್ರಾರ್ಥನೆಯಲ್ಲಿ ಸಿಎಂ ಸಿದ್ದರಾಮಯ್ಯ ಕರೆ

Renukaswamy murder case The location of the accused is complete
ಸಿನಿಮಾ23 hours ago

Renuka Swamy murder : ಭೀಕರವಾಗಿ ಕೊಂದರೂ ಆರೋಪಿಗಳಿಗೆ ಕಾಡುತ್ತಿಲ್ವಾ ಪಾಪಪ್ರಜ್ಞೆ? ನಗುತ್ತಲೇ ಹೊರಬಂದ ಪವಿತ್ರಾ ಗೌಡ, ಪವನ್‌

Renuka swamy murder
ಚಿತ್ರದುರ್ಗ1 day ago

Renuka swamy Murder : ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಾಳೆಹೊನ್ನೂರು ಶ್ರೀಗಳು

Vijayanagara News
ವಿಜಯನಗರ1 day ago

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

Actor Darshan
ಯಾದಗಿರಿ2 days ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

Karnataka Weather Forecast
ಮಳೆ3 days ago

Karnataka Weather : ಕರಾವಳಿ, ಉತ್ತರ ಒಳನಾಡಿನಲ್ಲಿ ವರುಣಾರ್ಭಟ; ನಾಳೆಯು ಹಲವೆಡೆ ಸಿಕ್ಕಾಪಟ್ಟೆ ಮಳೆ

Actor Darshan
ಬೆಂಗಳೂರು3 days ago

Actor Darshan : ರೇಣುಕಾಸ್ವಾಮಿಯನ್ನು ಕಿಡ್ನ್ಯಾಪ್ ಮಾಡಿ ಕರೆತರುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆ!

actor Darshan
ಬೆಂಗಳೂರು3 days ago

Actor Darshan : ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಮತ್ತಿಬ್ಬರು ಸರೆಂಡರ್‌; ಆರೋಪಿಗಳ ಸಂಖ್ಯೆ 16ಕ್ಕೆ ಏರಿಕೆ

Actor Darshan
ಸಿನಿಮಾ3 days ago

Actor Darshan : ರೇಣುಕಾಸ್ವಾಮಿ ‌ಮೃತದೇಹ ಬಿಸಾಡಿ ಬಳಿಕ ಸಾಕ್ಷ್ಯಇದ್ದ 2 ಮೊಬೈಲ್‌ಗಳನ್ನು ಮೋರಿಗೆ ಎಸೆದ್ರಾ ಆರೋಪಿಗಳು?

ಟ್ರೆಂಡಿಂಗ್‌