T20 World Cup | ಪಾಕಿಸ್ತಾನ ತಂಡವನ್ನು ಮಣಿಸಿದ ಇಂಗ್ಲೆಂಡ್‌ ಟಿ20 ವಿಶ್ವ ಚಾಂಪಿಯನ್‌ - Vistara News

T20 ವಿಶ್ವಕಪ್

T20 World Cup | ಪಾಕಿಸ್ತಾನ ತಂಡವನ್ನು ಮಣಿಸಿದ ಇಂಗ್ಲೆಂಡ್‌ ಟಿ20 ವಿಶ್ವ ಚಾಂಪಿಯನ್‌

ಪಾಕಿಸ್ತಾನ ತಂಡವನ್ನು ಫೈನಲ್‌ನಲ್ಲಿ ಬಗ್ಗುಬಡಿದ ಇಂಗ್ಲೆಂಡ್‌ ತಂಡ ಟಿ20 ವಿಶ್ವ ಕಪ್‌ ಟ್ರೋಫಿ ತನ್ನದಾಗಿಸಿಕೊಂಡಿತು.

VISTARANEWS.COM


on

t20 world cup
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮೆಲ್ಬೋರ್ನ್‌ : ಫೈನಲ್‌ ಹಣಾಹಣಿಯಲ್ಲಿ ಪಾಕಿಸ್ತಾನ ವಿರುದ್ಧ ೫ ವಿಕೆಟ್‌ಗಳ ಗೆಲುವು ಸಾಧಿಸಿದ ಇಂಗ್ಲೆಂಡ್‌ ತಂಡ ಟಿ೨೦ ವಿಶ್ವ ಕಪ್ ಟ್ರೋಫಿಯನ್ನು ತನ್ನದಾಗಿಸಿಕೊಂಡಿತು. ಆಂಗ್ಲರ ಪಡೆಗೆ ಇದು ಎರಡನೇ ಚುಟುಕು ಕ್ರಿಕೆಟ್‌ನ ವಿಶ್ವ ಕಪ್‌ ಆಗಿದ್ದು, ಈ ಹಿಂದೆ ೨೦೧೦ರಲ್ಲಿ ಇಂಗ್ಲೆಂಡ್‌ ತಂಡ ಚಾಂಪಿಯನ್‌ಪಟ್ಟ ಅಲಂಕರಿಸಿತ್ತು. ಅದೇ ರೀತಿ ೧೨ ವರ್ಷಗಳ ಅವಧಿಯಲ್ಲಿ ಮೂರನೇ ವಿಶ್ವ ಕಪ್‌ ಟ್ರೋಫಿ ಗೆದ್ದಂತಾಗಿದೆ. ೨೦೧೯ರಲ್ಲಿ ಇಯಾನ್‌ ಮಾರ್ಗನ್‌ ನೇತೃತ್ವದ ಇಂಗ್ಲೆಂಡ್ ತಂಡ ಏಕ ದಿನ ವಿಶ್ವ ಕಪ್‌ ಗೆದ್ದಿತ್ತು. ಹಾಲಿ ನಾಯಕ ಜೋಸ್‌ ಬಟ್ಲರ್‌ಗೆ ಚೊಚ್ಚಲ ನಾಯಕತ್ವದಲ್ಲೇ ವಿಶ್ವ ಕಪ್‌ ಲಭಿಸಿದ್ದು, ಈ ಮೂಲಕವೂ ಅವರು ದಾಖಲೆ ಮಾಡಿದ್ದರು.

ಮೆಲ್ಬೋರ್ನ್‌ ಕ್ರಿಕೆಟ್‌ ಗ್ರೌಂಡ್‌ನಲ್ಲಿ ಭಾನುವಾರ ನಡೆದ ಫೈನಲ್‌ ಪಂದ್ಯದಲ್ಲಿ ಟಾಸ್‌ ಗೆದ್ದ ಇಂಗ್ಲೆಂಡ್‌ ತಂಡದ ನಾಯಕ ಜೋಸ್‌ ಬಟ್ಲರ್‌ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡರೆ, ಮೊದಲು ಬ್ಯಾಟ್‌ ಮಾಡಿದ ಪಾಕಿಸ್ತಾನ ತಂಡ ನಿಗದಿತ ೨೦ ಓವರ್‌ಗಳಲ್ಲಿ ೮ ವಿಕೆಟ್‌ಗೆ ೧೩೭ ರನ್ ಬಾರಿಸಿತು. ಗುರಿ ಬೆನ್ನಟ್ಟಿದ ಇಂಗ್ಲೆಂಡ್‌ ಇನ್ನೂ ಒಂದು ಓವರ್‌ ಬಾಕಿ ಇರುವಂತೆಯೇ ೫ ವಿಕೆಟ್‌ ನಷ್ಟಕ್ಕೆ ೧೩೮ ರನ್‌ ಬಾರಿಸಿ ಜಯಶಾಲಿಯಾಯಿತು.

ಸಣ್ಣ ಮೊತ್ತದ ಗುರಿ ಬೆನ್ನಟ್ಟಿದ ಇಂಗ್ಲೆಂಡ್‌ ತಂಡ ಅಲೆಕ್ಸ್ ಹೇಲ್ಸ್‌ (೧) ಅವರ ವಿಕೆಟ್‌ ಕಳೆದುಕೊಳ್ಳುವ ಮೂಲಕ ಆರಂಭಿಕ ಆಘಾತಕ್ಕೆ ಒಳಗಾಯಿತು. ಬಟ್ಲರ್‌ ಕೂಡ (೨೬) ಬೇಗ ವಿಕೆಟ್ ಒಪ್ಪಿಸಿದರು. ಫಿಲ್ ಸಾಲ್ಟ್‌(೧೦), ಹ್ಯಾರಿ ಬ್ರೂಕ್‌ (೨೦) ಕೂಡ ಹೆಚ್ಚು ಹೊತ್ತು ಕ್ರೀಸ್‌ನಲ್ಲಿ ನಿಲ್ಲಲಿಲ್ಲ. ಈ ವೇಳೆ ಆಲ್‌ರೌಂಡರ್‌ ಬೆನ್‌ ಸ್ಟೋಕ್ಸ್‌ (೫೨*) ತಂಡವನ್ನು ಕಾಪಾಡಿದರು. ಮೊಯೀನ್‌ ಅಲಿ ೧೯ ರನ್ ಕೊಡುಗೆ ಕೊಟ್ಟರು.

ಪಾಕ್​ಗೆ ಆರಂಭಿಕ ಆಘಾತ

ನ್ಯೂಜಿಲೆಂಡ್​ ವಿರುದ್ಧದ ಮೊದಲ ಸೆಮಿಫೈನಲ್​ ಪಂದ್ಯದಲ್ಲಿ ಸ್ಫೋಟಕ ಬ್ಯಾಟಿಂಗ್​ ಮೂಲಕ ಅರ್ಧಶತಕ ಸಿಡಿಸಿ ಮಿಂಚಿದ್ದ ಆರಂಭಿಕ ಆಟಗಾರ ಮೊಹಮ್ಮದ್​ ರಿಜ್ವಾನ್​ ಈ ಪಂದ್ಯದಲ್ಲಿ ನಿರೀಕ್ಷಿತ ಪ್ರದರ್ಶನ ತೋರುವಲ್ಲಿ ಎಡವಿದರು. ಕೇವಲ 15 ರನ್​ಗೆ ಆಟ ಮುಗಿಸಿದರು. ಈ ವಿಕೆಟ್​ ಪತನದ ಬಳಿಕ ಆಡಲಿಳಿದ ಮೊಹಮ್ಮದ್​ ಹ್ಯಾರಿಸ್(8)​ ಕೂಡ ಹೆಚ್ಚು ಹೊತ್ತು ಕ್ರೀಸ್​ ಆಕ್ರಮಿಸಲು ವಿಫಲರಾದರು. ತಂಡದ ಮೊತ್ತ 50ರ ಗಡಿ ದಾಟುವ ಮೊದಲೇ ಪ್ರಮುಖ ಎರಡು ವಿಕೆಟ್​ ಕಳೆದುಕೊಂಡು ಪಾಕ್​ ಆರಂಭಿಕ ಆಘಾತಕ್ಕೆ ಸಿಲುಕಿತು.

ಆರಂಭಿಕ ಎರಡು ವಿಕೆಟ್​ ಕಳೆದು ಕೊಂಡು ಸಂಕಷ್ಟಕ್ಕೆ ಸಿಲುಕಿದ ಪಾಕಿಸ್ತಾನ ತಂಡಕ್ಕೆ ನೆರವಾದದ್ದು ನಾಯಕ ಬಾಬರ್​ ಅಜಂ. ತಾಳ್ಮೆಯುತ ಬ್ಯಾಟಿಂಗ್​ ಮೂಲಕ ತಂಡದ ಮೊತ್ತವನ್ನು ಹಿಗ್ಗಿಸುವ ಪ್ರಯತ್ನ ಮಾಡಿದರು. ಆದರೆ ಇವರ ಆಟವೂ ಹೆಚ್ಚು ಕಾಲ ನಡೆಯಲಿಲ್ಲ. ಆದಿಲ್​ ರಶೀದ್​ ಅವರ ಎಸೆತವನ್ನು ಲಾಂಗ್​ ಆನ್​ ಕಡೆಗೆ ಬಾರಿಸುವ ಯತ್ನದಲ್ಲಿ ಬೆನ್​ ಸ್ಟೋಕ್ಸ್​ಗೆ ಕ್ಯಾಚ್​ ನೀಡಿ ಔಟಾದರು. ಅವರ ಗಳಿಕೆ 32 ರನ್​ಗೆ ಕೊನೆಕೊಂಡಿತು. ಆದರೆ ಮಧ್ಯಮ ಕ್ರಮಾಂಕದಲ್ಲಿ ಬಿರುಸಿನ ಬ್ಯಾಟಿಂಗ್​ ನಡೆಸಿದ ಶಾನ್​ ಮಸೂದ್​(38) ಮತ್ತು ಶಾದಾಬ್​ ಖಾನ್​(20) ಸಾಹಸದಿಂದ ತಂಡ ಸ್ಪರ್ಧಾತ್ಮಕ ಮೊತ್ತ ಗಳಿಸಿತು.

ಸಂಕ್ಷಿಪ್ತ ಸ್ಕೋರ್​

ಪಾಕಿಸ್ತಾನ: 20 ಓವರ್​ಗಳಲ್ಲಿ 8 ವಿಕೆಟ್​ಗೆ 137 (ಬಾಬರ್​ ಅಜಂ 32, ಶಾನ್​ ಮಸೂದ್​ 38, ಆದಿಲ್​ ರಶೀದ್​ 22ಕ್ಕೆ2, ಸ್ಯಾಮ್​ ಕರನ್​​ 12ಕ್ಕೆ 3).

ಇಂಗ್ಲೆಂಡ್‌ : ೧೦ ಓವರ್‌ಗಳಲ್ಲಿ ೫ ವಿಕೆಟ್‌ಗೆ ೧೩೮ (ಬೆನ್‌ ಸ್ಟೋಕ್ಸ್‌ ೫೨*, ಜೋಸ್‌ ಬಟ್ಲರ್‌ ೨೬; ಹ್ಯಾರಿಸ್‌ ರವೂಫ್‌ ೨೩ಕ್ಕೆ೨).

ಇದನ್ನೂ ಓದಿ | PAK VS ENG | ಅಲ್ಪ ಮೊತ್ತಕ್ಕೆ ಕುಸಿದ ಪಾಕಿಸ್ತಾನ; ಇಂಗ್ಲೆಂಡ್​ ಗೆಲುವಿಗೆ 138 ರನ್​ ಗುರಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

T20 World Cup 2024: ನ್ಯೂಯಾರ್ಕ್​ಗೆ ಪ್ರಯಾಣಿಸಿದ ಮೊದಲ ಬ್ಯಾಚ್​; ವಿರಾಟ್​ ಕೊಹ್ಲಿ ಗೈರು, ಅಭ್ಯಾಸ ಪಂದ್ಯಕ್ಕೂ ಅನುಮಾನ

T20 World Cup 2024: “ಕೊಹ್ಲಿ ಅವರು ತಡವಾಗಿ ತಂಡವನ್ನು ಸೇರಿಕೊಳ್ಳುತ್ತಾರೆ ಎಂದು ನಮಗೆ ಮೊದಲೇ ತಿಳಿಸಿದ್ದರು. ಇದೇ ಕಾರಣಕ್ಕೆ ಬಿಸಿಸಿಐ ಅವರ ವೀಸಾವನ್ನು ಕಾಯ್ದಿರಿಸಿದೆ. ಅವರು ಮೇ 30 ರ ಮುಂಜಾನೆ ನ್ಯೂಯಾರ್ಕ್‌ಗೆ ಪ್ರಯಾಣಿಸುವ ನಿರೀಕ್ಷೆಯಿದೆ. ಅವರ ಮನವಿಗೆ ಬಿಸಿಸಿಐ ಒಪ್ಪಿಗೆ ನೀಡಿದೆ” ಎಂದು ಬಿಸಿಸಿಐ ಅಧಿಕಾರಿಯೊಬ್ಬರು ಇಂಡಿಯನ್ ಎಕ್ಸ್‌ಪ್ರೆಸ್‌ಗೆ ತಿಳಿಸಿದ್ದಾರೆ.

VISTARANEWS.COM


on

T20 World Cup 2024
Koo

ಮುಂಬಯಿ: ಜೂನ್​ 1ರಿಂದ ಆರಂಭಗೊಳ್ಳಲಿರುವ ಟಿ20 ವಿಶ್ವಕಪ್​ ಟೂರ್ನಿಗೆ(T20 World Cup 2024) ಭಾರತ ತಂಡದ(Team India) ಮೊದಲ ಬ್ಯಾಚ್ ನ್ಯೂಯಾರ್ಕ್​ಗೆ ಪ್ರಯಾಣಿಸಿದೆ. ಶನಿವಾರ ರಾತ್ರಿ ಮುಂಬೈ ವಿಮಾನ ನಿಲ್ದಾಣದಿಂದ ತಂಡದ ನಾಯಕ ರೋಹಿತ್​, ಶರ್ಮ, ಕೋಚ್ ರಾಹುಲ್​ ದ್ರಾವಿಡ್​, ರವೀಂದ್ರ ಜಡೇಜಾ, ಕುಲ್​ದೀಪ್​ ಯಾದವ್​, ಮೊಹಮ್ಮದ್ ಸಿರಾಜ್​ ಸೇರಿ ಹಲವು ಆಟಗಾರರು ಮತ್ತು ಕೋಚಿಂಗ್​ ಸಿಬ್ಬಂದಿಗಳು ಪ್ರಯಾಣಿಸಿದರು. ಆದರೆ ವಿರಾಟ್​ ಕೊಹ್ಲಿ ಮಾತ್ರ ಪ್ರಯಾಣಿಸಿಲ್ಲ.

ವಿರಾಟ್​ ಕೊಹ್ಲಿ ಅವರು ಮೇ 30ಕ್ಕೆ ಏಕಾಂಗಿಯಾಗಿ ನ್ಯೂಯಾರ್ಕ್​ಗೆ ಪ್ರಯಾಣಿಸಲಿದ್ದಾರೆ ಎಂದು ವರದಿಯಾಗಿದೆ, ಜತೆಗೆ ಜೂನ್​ 1ರಂದು ನಡೆಯುವ ಬಾಂಗ್ಲಾದೇಶ ವಿರುದ್ಧದ ಅಭ್ಯಾಸ ಪಂದ್ಯಕ್ಕೂ ಕೊಹ್ಲಿ ಅಲಭ್ಯರಾಗಲಿದ್ದಾರೆ ಎನ್ನಲಾಗಿದೆ. “ಕೊಹ್ಲಿ ಅವರು ತಡವಾಗಿ ತಂಡವನ್ನು ಸೇರಿಕೊಳ್ಳುತ್ತಾರೆ ಎಂದು ನಮಗೆ ಮೊದಲೇ ತಿಳಿಸಿದ್ದರು. ಇದೇ ಕಾರಣಕ್ಕೆ ಬಿಸಿಸಿಐ ಅವರ ವೀಸಾವನ್ನು ಕಾಯ್ದಿರಿಸಿದೆ. ಅವರು ಮೇ 30 ರ ಮುಂಜಾನೆ ನ್ಯೂಯಾರ್ಕ್‌ಗೆ ಪ್ರಯಾಣಿಸುವ ನಿರೀಕ್ಷೆಯಿದೆ. ಅವರ ಮನವಿಗೆ ಬಿಸಿಸಿಐ ಒಪ್ಪಿಗೆ ನೀಡಿದೆ” ಎಂದು ಬಿಸಿಸಿಐ ಅಧಿಕಾರಿಯೊಬ್ಬರು ಇಂಡಿಯನ್ ಎಕ್ಸ್‌ಪ್ರೆಸ್‌ಗೆ ತಿಳಿಸಿದ್ದಾರೆ.

ಕೊಹ್ಲಿ ಅಲ್ಲದೆ, ವಿಕೆಟ್ ಕೀಪರ್-ಬ್ಯಾಟರ್ ಸಂಜು ಸ್ಯಾಮ್ಸನ್ ಮತ್ತು ಆಲ್ ರೌಂಡರ್ ಹಾರ್ದಿಕ್ ಪಾಂಡ್ಯ ಕೂಡ ತಡವಾಗಿ ತಂಡವನ್ನು ಸೇರಿಕೊಳ್ಳಲಿದ್ದಾರೆ. ದುಬೈನಲ್ಲಿ ವೈಯಕ್ತಿಕ ಕೆಲಸದ ನಿಮಿತ್ತ ತಂಡ ಸೇರಲು ತಡವಾಗಲಿದೆ ಎಂದು ಸಂಜು ಈಗಾಗಲೇ ಬಿಸಿಸಿಐಗೆ ತಿಳಿಸಿರುವ ಕಾರಣ ಬಿಸಿಸಿಐ ಸ್ಯಾಮ್ಸನ್​ಗೆ ತಡವಾಗಿ ತಂಡ ಸೇರಲು ಅವಕಾಶ ನೀಡಿದೆ. ಭಾರತೀಯ ಆಟಗಾರರ ದ್ವಿತೀಯ ಬ್ಯಾಚ್ ಸೋಮವಾರ ಹೊರಡಲಿದೆ.

ಭಾರತ ತನ್ನ ಮೊದಲ ಲೀಗ್​ ಪಂದ್ಯವನ್ನು ಜೂನ್‌ 5 ರಂದು ಐರ್ಲೆಂಡ್​ ವಿರುದ್ಧ ಆಡಲಿದೆ. ಭಾರತವು ತನ್ನ ಗುಂಪು ಹಂತದ ಎಲ್ಲಾ ಪಂದ್ಯಗಳನ್ನು ಅಮೆರಿಕದಲ್ಲೇ ಆಡಲಿದೆ. ಲೀಗ್​ ಮುಕ್ತಾಯದ ಬಳಿಕ ಮುಂದಿನ ಹಂತಕ್ಕೆ ಅರ್ಹತೆ ಪಡೆದರೆ, ಸೂಪರ್ 8 ಪಂದ್ಯಗಳನ್ನು ಸಹ ಇಲ್ಲೇ ಆಡಲಿದೆ.

ಇದ್ನನೂ ಓದಿ T20 World Cup 2024: ಕೊನೆಗೂ ಟಿ20 ವಿಶ್ವಕಪ್​ಗೆ ತಂಡ ಪ್ರಕಟಿಸಿದ ಭಾರತದ ಬದ್ಧ ಎದುರಾಳಿ ಪಾಕಿಸ್ತಾನ

ಟೂರ್ನಿಯಲ್ಲಿ ಒಟ್ಟು 55 ಪಂದ್ಯಗಳು ನಡೆಯಲಿವೆ. ಜೂನ್ 1ರಿಂದ 18ರವರೆಗೆ ಗುಂಪು ಹಂತದಲ್ಲಿ 40 ಪಂದ್ಯಗಳು ನಡೆಯಲಿವೆ. ಜೂನ್ 19 ರಿಂದ 24 ರವರೆಗೆ ಸೂಪರ್ 8 ಪಂದ್ಯಗಳು ನಡೆಯಲಿವೆ. ಸಾಂಪ್ರದಾಯಿಕ ಬದ್ಧ ಎದುರಾಳಿಗಳಾದ ಭಾರತ ಮತ್ತು ಪಾಕಿಸ್ತಾನ ನಡುವಣ ಪಂದ್ಯ ಜೂನ್ 9 ರಂದು ನ್ಯೂಯಾರ್ಕ್‌ನಲ್ಲಿ ನಡೆಯಲಿದೆ.

ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಹಾರ್ದಿಕ್ ಪಾಂಡ್ಯ (ಉಪನಾಯಕ), ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್ (ವಿಕೆಟ್​ ಕೀಪರ್​), ಸಂಜು ಸ್ಯಾಮ್ಸನ್ (ವಿಕೆಟ್​ ಕೀಪರ್​), ಶಿವಂ ದುಬೆ, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ಯುಜ್ವೇಂದ್ರ ಚಾಹಲ್, ಅರ್ಶದೀಪ್​ ಸಿಂಗ್​, ಜಸ್​ಪ್ರೀತ್​ ಬುಮ್ರಾ, ಮೊಹಮ್ಮದ್​ ಸಿರಾಜ್. ಮೀಸಲು ಆಟಗಾರರು ಶುಭಮನ್ ಗಿಲ್, ರಿಂಕು ಸಿಂಗ್, ಖಲೀಲ್ ಅಹ್ಮದ್ ಮತ್ತು ಅವೇಶ್ ಖಾನ್.

Continue Reading

ಕ್ರಿಕೆಟ್

IPL Final 2024: ಫೈನಲ್​ ಪಂದ್ಯಕ್ಕೆ ಮಳೆ ಬಂದರೆ ಯಾರಾಗಲಿದ್ದಾರೆ ವಿಜೇತರು? ಮಳೆ ನಿಯಮ ಹೇಗಿದೆ?

IPL Final 2024: ಉಭಯ ತಂಡಗಳ ಐಪಿಎಲ್​ ಇತಿಹಾಸ ನೋಡುವಾಗ ಕೆಕೆಆರ್​ ಬಲಿಷ್ಠವಾಗಿದೆ. ಇದುವರೆಗೆ 27 ಪಂದ್ಯಗಳನ್ನು ಆಡಿ 18 ಪಂದ್ಯಗಳಲ್ಲಿ ಕೆಕೆಆರ್​ ಗೆಲುವು ಸಾಧಿಸಿದೆ. ಹೈದರಾಬಾದ್​ ಕೇವಲ 9 ಪಂದ್ಯ ಮಾತ್ರ ಗೆದ್ದಿದೆ. ಈ ಆವೃತ್ತಿಯಲ್ಲಿಯೂ ಆಡಿದ ಲೀಗ್​ ಮತ್ತು ಮೊದಲ ಕ್ವಾಲಿಫೈಯರ್​ ಪಂದ್ಯದಲ್ಲಿ ಕೆಕೆಆರ್​ ವಿರುದ್ಧ ಹೈದರಾಬಾದ್​ ಸೋಲು ಕಂಡಿತ್ತು.

VISTARANEWS.COM


on

IPL Final 2024
Koo

ಚೆನ್ನೈ: ಕಳೆದ ವರ್ಷದ ಐಪಿಎಲ್​ ಪಂದ್ಯ ಮಳೆಯಿಂದಾಗಿ ಮೀಸಲುದಿನಕ್ಕೆ ಮುಂದೂಡಲ್ಪಟ್ಟಿತ್ತು. ಇದೀಗ ನಾಳೆ(ಭಾನುವಾರ, ಮೇ 26) ನಡೆಯುವ 17ನೇ ಆವೃತ್ತಿಯ ಐಪಿಎಲ್​ ಫೈನಲ್(IPL Final 2024)​ ಪಂದ್ಯಕ್ಕೂ ಮಳೆ ಭೀತಿ ಎದುರಾಗಿದೆ. ಫೈನಲ್​ನಲ್ಲಿ ಕೆಕೆಆರ್​ ಮತ್ತು ಹೈದರಾಬಾದ್​(SRH vs KKR IPL Final) ತಂಡಗಳು ಸೆಣಸಾಟ ನಡೆಸಲಿವೆ. ಈ ಪಂದ್ಯದ ಮಳೆ ನಿಯಮ ಹೇಗಿದೆ(ipl final 2024 rain rules) ಎಂಬುದರ ಮಾಹಿತಿ ಇಂತಿದೆ.

ಲೀಗ್​ ಹಂತದ ಯಾವುದೇ ಪಂದ್ಯಕ್ಕೂ ಮೀಸಲು ದಿನ ಇರಲಿಲ್ಲ. ಆದರೆ ನಾಕೌಟ್​ ಮತ್ತು ಫೈನಲ್​ ಪಂದ್ಯಗಳಿಗೆ ಮೀಸಲು(Reserve day) ದಿನ ಇದೆ. ಪೂರ್ಣ ಪಂದ್ಯ ನಡೆಸಲು ಹೆಚ್ಚುವರಿ 120 ನಿಮಿಷಗಳನ್ನು ನೀಡಲಾಗಿದೆ. ಈ ಸಮಯದಲ್ಲಿಯೂ ಪಂದ್ಯ ನಡೆಯದೇ ಹೋದರೆ ಆಗ ಡಕ್​ವರ್ತ್​ ನಿಯದ ಅನುಸಾರ ಓವರ್​ ಕಡಿತಗೊಳಿಸಿ ಪಂದ್ಯ ನಡೆಸುವ ನಿರ್ಣಾಯಕ್ಕೆ ಬರಲಾಗುತ್ತದೆ. ಈ ವೇಳೆಯೂ ಪಂದ್ಯ ನಡೆಯದೇ ಇದ್ದರೆ ಪಂದ್ಯವನ್ನು ಮೀಸಲ ದಿನಕ್ಕೆ ಮುಂದೂಡಲಾಗುತ್ತದೆ. ಒಂದೊಮ್ಮೆ ಮೀಸಲು ದಿನದ ಮೊದಲಿನ ದಿನ ಪಂದ್ಯ ಅರ್ಧಕ್ಕೆ ನಿಂತಿದ್ದರೆ, ಅಲ್ಲಿಂದಲೇ ಮರುದಿನ ಪಂದ್ಯ ಆರಂಭಿಸಲಾಗುತ್ತದೆ.

ಮೀಸಲು ದಿನಕ್ಕೂ ಮಳೆ ಬಂದರೆ?

ಮೀಸಲು ದಿನವೂ ಮಳೆ ಬಂದರೆ ಫಲಿತಾಂಶ ಹೇಗೆ ನಿರ್ಧರಿಸಲಾಗುತ್ತದೆ ಎನ್ನುವ ಪ್ರಶ್ನೆ ಕ್ರಿಕೆಟ್​ ಅಭಿಮಾನಿಗಳಿಗೆ ಕಾಡುವುದು ಸಹಜ. ಇದಕ್ಕೂ ಬಿಸಿಸಿಐ ಉತ್ತರ ನೀಡಿದೆ. ಒಂದು ವೇಳೆ ಮೀಸಲು ದಿನದಂದೂ ಕೂಡ ಮಳೆ ಅಡ್ಡಿ ಪಡಿಸಿದರೆ ಸೂಪರ್ ಓವರ್​ಗೆ ಅವಕಾಶವಿದೆ. ಇದಕ್ಕೂ ಕೂಡ ಮಳೆ ಅನುವು ಮಾಡಿಕೊಡದೇ ಇದ್ದಾಗ ಅಂತಿಮವಾಗಿ ಲೀಗ್​ ಹಂತದ ಅಂಕಪಟ್ಟಿಯಲ್ಲಿ ಯಾರು ಮುಂದಿರುತ್ತಾರೋ ಆ ತಂಡವನ್ನು ವಿಜಯೀ ಎಂದು ಘೋಷಿಸಲಾಗುತ್ತದೆ. ಹೀಗಾದರೆ ಅಗ್ರಸ್ಥಾನಿ ಕೆಕೆಆರ್​ ಈ ಬಾರಿಯ ಚಾಂಪಿಯನ್​ ಪಟ್ಟ ಅಲಂಕರಿಸಲಿದೆ. ಏಕೆಂದರೆ ಕೆಕೆಆರ್ ಅಂಕಪಟ್ಟಿಯಲ್ಲಿ ಅಗ್ರಸ್ಥಾನಿಯಾಗಿದೆ.​ ಅಚ್ಚರಿ ಎಂದರೆ ಲೀಗ್​ ಹಂತದಲ್ಲಿ ಕೆಕೆಆರ್​ ಮತ್ತು ಹೈದರಾಬಾದ್​ ತಂಡಗಳ ಒಂದೊಂದು ಪಂದ್ಯ ಮಳೆಯಿಂದ ರದ್ದಾಗಿತ್ತು.

ಇದನ್ನೂ ಓದಿ IPL 2024: ಐಪಿಎಲ್​ ಟ್ರೋಫಿಯಲ್ಲಿರುವ ಸಂಸ್ಕೃತ ಶ್ಲೋಕದ ಮೂಲ ಸಾರವೇನು?

ಬಲಾಬಲ ​


ಉಭಯ ತಂಡಗಳ ಐಪಿಎಲ್​ ಇತಿಹಾಸ ನೋಡುವಾಗ ಕೆಕೆಆರ್​ ಬಲಿಷ್ಠವಾಗಿದೆ. ಇದುವರೆಗೆ 27 ಪಂದ್ಯಗಳನ್ನು ಆಡಿ 18 ಪಂದ್ಯಗಳಲ್ಲಿ ಕೆಕೆಆರ್​ ಗೆಲುವು ಸಾಧಿಸಿದೆ. ಹೈದರಾಬಾದ್​ ಕೇವಲ 9 ಪಂದ್ಯ ಮಾತ್ರ ಗೆದ್ದಿದೆ. ಈ ಆವೃತ್ತಿಯಲ್ಲಿಯೂ ಆಡಿದ ಲೀಗ್​ ಮತ್ತು ಮೊದಲ ಕ್ವಾಲಿಫೈಯರ್​ ಪಂದ್ಯದಲ್ಲಿ ಕೆಕೆಆರ್​ ವಿರುದ್ಧ ಹೈದರಾಬಾದ್​ ಸೋಲು ಕಂಡಿತ್ತು. ಈ ಲೆಕ್ಕಾಚಾರವನ್ನು ನೋಡುವಾಗ ನಾಳಿನ ಪಂದ್ಯದಲ್ಲಿಯೂ ಕೆಕೆಆರ್​ ಗೆಲುವಿನ ಫೇವರಿಟ್ ತಂಡವಾಗಿದೆ.

ಸಂಭಾವ್ಯ ತಂಡಗಳು


ಹೈದರಾಬಾದ್​:
ಟ್ರಾವಿಸ್ ಹೆಡ್, ಅಭಿಷೇಕ್ ಶರ್ಮಾ, ರಾಹುಲ್ ತ್ರಿಪಾಠಿ, ನಿತೀಶ್ ರೆಡ್ಡಿ, ಐಡೆನ್ ಮಾರ್ಕ್ರಾಮ್, ಹೆನ್ರಿಚ್ ಕ್ಲಾಸೆನ್ (ವಿಕೆಟ್​ ಕೀಪರ್​), ಅಬ್ದುಲ್ ಸಮದ್, ಪ್ಯಾಟ್ ಕಮಿನ್ಸ್ (ನಾಯಕ), ಭುವನೇಶ್ವರ್ ಕುಮಾರ್, ಜಯದೇವ್ ಉನದ್ಕತ್, ಟಿ ನಟರಾಜನ್.

ಕೆಕೆಆರ್​: ರಹಮಾನುಲ್ಲಾ ಗುರ್ಬಾಜ್ (ವಿಕೆಟ್​ ಕೀಪರ್​), ಸುನಿಲ್ ನರೈನ್, ವೆಂಕಟೇಶ್ ಅಯ್ಯರ್, ಶ್ರೇಯಸ್ ಅಯ್ಯರ್ (ನಾಯಕ), ರಿಂಕು ಸಿಂಗ್, ಆಂಡ್ರೆ ರಸೆಲ್, ರಮಣದೀಪ್ ಸಿಂಗ್, ಮಿಚೆಲ್ ಸ್ಟಾರ್ಕ್, ವೈಭವ್ ಅರೋರಾ, ಹರ್ಷಿತ್ ರಾಣಾ, ವರುಣ್ ಚಕ್ರವರ್ತಿ.

Continue Reading

ಕ್ರೀಡೆ

T20 World Cup 2024: ಇಂದು ಟೀಮ್​ ಇಂಡಿಯಾದ ಮೊದಲ ಬ್ಯಾಚ್​ ನ್ಯೂಯಾರ್ಕ್​ಗೆ ಪ್ರಯಾಣ

T20 World Cup 2024: ಟೀಮ್​ ಇಂಡಿಯಾದ(team india) ಮೊದಲ ಬ್ಯಾಚ್​ ಇಂದು (ಮೇ 25) ನ್ಯೂಯಾರ್ಕ್(New York)​ಗೆ ಪ್ರಯಾಣಿಸಲಿದೆ. ರಾತ್ರಿ 10 ಗಂಟೆಗೆ ಮುಂಬೈ ವಿಮಾನ ನಿಲ್ದಾಣದಿಂದ ಪ್ರಯಾಣ ಬೆಳೆಸಲಿದ್ದಾರೆ.

VISTARANEWS.COM


on

T20 World Cup 2024
Koo

ಮುಂಬಯಿ: ಐಸಿಸಿ ಪುರುಷರ ಟಿ20 ವಿಶ್ವಕಪ್​ ಟೂರ್ನಿ(T20 World Cup 2024) ಆರಂಭಕ್ಕೆ ಇನ್ನು ಕೇವಲ ಒಂದು ವಾರ ಮಾತ್ರ ಬಾಕಿ ಉಳಿದಿವೆ. ಮೇ 27ರಿಂದ ಅಭ್ಯಾಸ ಪಂದ್ಯಗಳು ಆರಂಭಗೊಳ್ಳಲಿದೆ. ಲೀಗ್​ ಹಂತದ ಪಂದ್ಯಗಳಿಗೆ ಜೂನ್​ 1ರಿಂದ ಚಾಲನೆ ಸಿಗಲಿದೆ. ಈ ಮಹತ್ವದ ಟೂರ್ನಿಯನ್ನಾಡಲು ಟೀಮ್​ ಇಂಡಿಯಾದ(team india) ಮೊದಲ ಬ್ಯಾಚ್​ ಇಂದು (ಮೇ 25) ನ್ಯೂಯಾರ್ಕ್(New York)​ಗೆ ಪ್ರಯಾಣಿಸಲಿದೆ.

ಬಿಸಿಸಿಐ ಮೂಲಗಳು ಪಿಟಿಐಗೆ ತಿಳಿಸಿದ ಮಾಹಿತಿ ಪ್ರಕಾರ ಮೊದಲ ಬ್ಯಾಚ್​ನಲ್ಲಿ ನಾಯಕ ರೋಹಿತ್​ ಶರ್ಮ(Rohit Sharma), ವಿರಾಟ್​ ಕೊಹ್ಲಿ(Virat Kohli), ರಿಷಭ್​ ಪಂತ್​, ಜಸ್​ಪ್ರೀತ್​ ಬುಮ್ರಾ, ಸೂರ್ಯಕುಮಾರ್​ ಯಾದವ್, ಮೊಹಮ್ಮದ್​ ಸಿರಾಜ್​​ ಸೇರಿ ಐಪಿಎಲ್​ ಪ್ಲೇ ಆಫ್​ನಿಂದ ಹೊರಬಿದ್ದ ತಂಡದ ಆಟಗಾರರು ಮತ್ತು ತಂಡದ ಕೋಚ್​ ಮತ್ತು ಸಿಬ್ಬಂದಿಗಳು ಇಂದು ನ್ಯೂಯಾರ್ಕ್​ಗೆ ಪ್ರಯಾಣಿಸಲಿದ್ದಾರೆ. ರಾತ್ರಿ 10 ಗಂಟೆಗೆ ಮುಂಬೈ ವಿಮಾನ ನಿಲ್ದಾಣದಿಂದ ಪ್ರಯಾಣ ಬೆಳೆಸಲಿದ್ದಾರೆ. ಉಪನಾಯಕ ಹಾರ್ದಿಕ್​ ಪಾಂಡ್ಯ ಲಂಡನ್​ನಲ್ಲಿರುವ ಕಾರಣ ಅಲ್ಲಿಂದಲೇ ಅವರು ನ್ಯೂಯಾರ್ಕ್​ಗೆ ಪ್ರಯಾಣಿಸಲಿದ್ದಾರೆ ಎಂದು ತಿಳಿದುಬಂದಿದೆ. ಯಶಸ್ವಿ ಜೈಸ್ವಾಲ್​, ರಿಂಕು ಸಿಂಗ್​ ಮತ್ತು ಸಂಜು ಸ್ಯಾಮ್ಸನ್​ 2ನೇ ಬ್ಯಾಚ್​ನಲ್ಲಿ ಪ್ರಯಾಣಿಸುವ ಆಟಗಾರರಾಗಿದ್ದಾರೆ.

ಭಾರತ ಕೇವಲ ಒಂದೇ ಅಭ್ಯಾಸ ಪಂದ್ಯವನ್ನು ಆಡಲಿದೆ. ಮೂಲ ವೇಳಾಪಟ್ಟಿಯ ಪ್ರಕಾರ ಭಾರತ ತಂಡದ ಆಟಗಾರರು ಮೇ 21ರಂದು ನ್ಯೂಯಾರ್ಕ್​ಗೆ ತೆರಳಬೇಕಿತ್ತು. ಆದರೆ ಐಪಿಎಲ್​ ಟೂರ್ನಿಯಿಂದಾಗಿ ಇದು ಸಾಧ್ಯವಾಗಲಿಲ್ಲ. ಭಾರತೀಯ ಆಟಗಾರರು ವ್ಯಾಪಕ ಪ್ರಯಾಣ ಮತ್ತು ಐಪಿಎಲ್​ನಿಂದ ದಣಿದಿರುವ ಕಾರಣ ಕೇವಲ ಒಂದು ಅಭ್ಯಾಸ ಪಂದ್ಯಕ್ಕೆ ಮೊರೆ ಹೋಗಿದ್ದಾರೆ. ಜೂನ್​ 1 ರಂದು ಬಾಂಗ್ಲಾದೇಶ ವಿರುದ್ಧ ಭಾರತ ಈ ಪಂದ್ಯವನ್ನು ಆಡಲಿದೆ.

ಭಾರತ ತನ್ನ ಮೊದಲ ಲೀಗ್​ ಪಂದ್ಯವನ್ನು ಜೂನ್‌ 5 ರಂದು ಐರ್ಲೆಂಡ್​ ವಿರುದ್ಧ ಆಡಲಿದೆ. ಭಾರತವು ತನ್ನ ಗುಂಪು ಹಂತದ ಎಲ್ಲಾ ಪಂದ್ಯಗಳನ್ನು ಅಮೆರಿಕದಲ್ಲೇ ಆಡಲಿದೆ. ಲೀಗ್​ ಮುಕ್ತಾಯದ ಬಳಿಕ ಮುಂದಿನ ಹಂತಕ್ಕೆ ಅರ್ಹತೆ ಪಡೆದರೆ, ಸೂಪರ್ 8 ಪಂದ್ಯಗಳನ್ನು ಸಹ ಇಲ್ಲೇ ಆಡಲಿದೆ.

ಟೂರ್ನಿಯಲ್ಲಿ ಒಟ್ಟು 55 ಪಂದ್ಯಗಳು ನಡೆಯಲಿವೆ. ಜೂನ್ 1ರಿಂದ 18ರವರೆಗೆ ಗುಂಪು ಹಂತದಲ್ಲಿ 40 ಪಂದ್ಯಗಳು ನಡೆಯಲಿವೆ. ಜೂನ್ 19 ರಿಂದ 24 ರವರೆಗೆ ಸೂಪರ್ 8 ಪಂದ್ಯಗಳು ನಡೆಯಲಿವೆ. ಸಾಂಪ್ರದಾಯಿಕ ಬದ್ಧ ಎದುರಾಳಿಗಳಾದ ಭಾರತ ಮತ್ತು ಪಾಕಿಸ್ತಾನ ನಡುವಣ ಪಂದ್ಯ ಜೂನ್ 9 ರಂದು ನ್ಯೂಯಾರ್ಕ್‌ನಲ್ಲಿ ನಡೆಯಲಿದೆ.

ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಹಾರ್ದಿಕ್ ಪಾಂಡ್ಯ (ಉಪನಾಯಕ), ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್ (ವಿಕೆಟ್​ ಕೀಪರ್​), ಸಂಜು ಸ್ಯಾಮ್ಸನ್ (ವಿಕೆಟ್​ ಕೀಪರ್​), ಶಿವಂ ದುಬೆ, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ಯುಜ್ವೇಂದ್ರ ಚಾಹಲ್, ಅರ್ಶದೀಪ್​ ಸಿಂಗ್​, ಜಸ್​ಪ್ರೀತ್​ ಬುಮ್ರಾ, ಮೊಹಮ್ಮದ್​ ಸಿರಾಜ್. ಮೀಸಲು ಆಟಗಾರರು ಶುಭಮನ್ ಗಿಲ್, ರಿಂಕು ಸಿಂಗ್, ಖಲೀಲ್ ಅಹ್ಮದ್ ಮತ್ತು ಅವೇಶ್ ಖಾನ್.

Continue Reading

ಕ್ರೀಡೆ

T20 World Cup 2024: ಟಿ20 ವಿಶ್ವಕಪ್​ನಲ್ಲಿ ಕಣಕ್ಕಿಳಿಯುವ 20 ತಂಡಗಳ ಆಟಗಾರರ ಪಟ್ಟಿ ಹೀಗಿದೆ

T20 World Cup 2024: ಟೂರ್ನಿಯಲ್ಲಿ ಒಟ್ಟು 55 ಪಂದ್ಯಗಳು ನಡೆಯಲಿವೆ. ಜೂನ್ 1ರಿಂದ 18ರವರೆಗೆ ಗುಂಪು ಹಂತದಲ್ಲಿ 40 ಪಂದ್ಯಗಳು, ಜೂನ್ 19 ರಿಂದ 24 ರವರೆಗೆ ಸೂಪರ್ 8 ಪಂದ್ಯಗಳು ನಡೆಯಲಿವೆ. ಫೈನಲ್​ ಪಂದ್ಯ ಜೂನ್​ 29ರಂದು ನಡೆಯಲಿದೆ.

VISTARANEWS.COM


on

T20 World Cup 2024
Koo

ನ್ಯೂಯಾರ್ಕ್​: ಪ್ರತಿಷ್ಠಿತ ಐಸಿಸಿ ಪುರುಷರ ಟಿ20 ವಿಶ್ವಕಪ್​ ಟೂರ್ನಿ(T20 World Cup 2024) ಆರಂಭಕ್ಕೆ ಇನ್ನು ಕೇವಲ ಒಂದು ವಾರ ಮಾತ್ರ ಬಾಕಿ ಉಳಿದಿವೆ. ಈ ಟೂರ್ನಿ ಅಮೆರಿಕ ಮತ್ತು ವೆಸ್ಟ್​ ಇಂಡೀಸ್​ ಜಂಟಿ ಆತಿಥ್ಯದಲ್ಲಿ ನಡೆಯಲಿದೆ. ಅಮೆರಿಕ ಇದೇ ಮೊದಲ ಬಾರಿಗೆ ಕ್ರಿಕೆಟ್ ಟೂರ್ನಿಯೊಂದರ ಆತಿಥ್ಯ ಪಡೆದಿರುವುದು. ಟೂರ್ನಿಯಲ್ಲಿ ಒಟ್ಟು 55 ಪಂದ್ಯಗಳು ನಡೆಯಲಿವೆ. ಜೂನ್ 1ರಿಂದ 18ರವರೆಗೆ ಗುಂಪು ಹಂತದಲ್ಲಿ 40 ಪಂದ್ಯಗಳು, ಜೂನ್ 19 ರಿಂದ 24 ರವರೆಗೆ ಸೂಪರ್ 8 ಪಂದ್ಯಗಳು ನಡೆಯಲಿವೆ. ಫೈನಲ್​ ಪಂದ್ಯ ಜೂನ್​ 29ರಂದು ನಡೆಯಲಿದೆ. ಒಟ್ಟು 20 ತಂಡಗಳ ನಡುವಣ ಕಾದಾಟ ಇದಾಗಿದೆ. ಎಲ್ಲ 20 ತಂಡಗಳ ಪಟ್ಟಿ ಇಂತಿದೆ.

ಭಾರತ ತಂಡ

ರೋಹಿತ್ ಶರ್ಮಾ (ನಾಯಕ), ಹಾರ್ದಿಕ್ ಪಾಂಡ್ಯ (ಉಪನಾಯಕ), ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್ (ವಿಕೆಟ್​ ಕೀಪರ್​), ಸಂಜು ಸ್ಯಾಮ್ಸನ್ (ವಿಕೆಟ್​ ಕೀಪರ್​), ಶಿವಂ ದುಬೆ, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ಯುಜ್ವೇಂದ್ರ ಚಾಹಲ್, ಅರ್ಶದೀಪ್​ ಸಿಂಗ್​, ಜಸ್​ಪ್ರೀತ್​ ಬುಮ್ರಾ, ಮೊಹಮ್ಮದ್​ ಸಿರಾಜ್. ಮೀಸಲು ಆಟಗಾರರು ಶುಭಮನ್ ಗಿಲ್, ರಿಂಕು ಸಿಂಗ್, ಖಲೀಲ್ ಅಹ್ಮದ್ ಮತ್ತು ಅವೇಶ್ ಖಾನ್.

ನ್ಯೂಜಿಲ್ಯಾಂಡ್​ ತಂಡ


ಕೇನ್ ವಿಲಿಯಮ್ಸನ್ (ನಾಯಕ), ಫಿನ್ ಅಲೆನ್, ಟ್ರೆಂಟ್ ಬೌಲ್ಟ್, ಮೈಕೆಲ್ ಬ್ರೇಸ್‌ವೆಲ್, ಮಾರ್ಕ್ ಚಾಪ್‌ಮನ್, ಡೆವೊನ್ ಕಾನ್ವೆ, ಲಾಕಿ ಫರ್ಗುಸನ್, ಮ್ಯಾಟ್ ಹೆನ್ರಿ, ಡ್ಯಾರಿಲ್ ಮಿಚೆಲ್, ಜಿಮ್ಮಿ ನೀಶಮ್, ಗ್ಲೆನ್ ಫಿಲಿಪ್ಸ್, ರಚಿನ್ ರವೀಂದ್ರ, ಮಿಚೆಲ್ ಸ್ಯಾಂಟ್ನರ್, ಇಶ್ ಸೋಧಿ, ಟಿಮ್ ಸೌಥಿ. ಮೀಸಲು ಆಟಗಾರ: ಬೆನ್ ಸಿಯರ್ಸ್.

ಆಸ್ಟ್ರೇಲಿಯಾ ತಂಡ

ಮಿಚೆಲ್ ಮಾರ್ಷ್ (ನಾಯಕ), ಆ್ಯಶ್ಟನ್​ ಅಗರ್, ಪ್ಯಾಟ್ ಕಮ್ಮಿನ್ಸ್, ಟಿಮ್ ಡೇವಿಡ್, ನಾಥನ್ ಎಲ್ಲಿಸ್, ಕ್ಯಾಮೆರಾನ್ ಗ್ರೀನ್, ಜೋಶ್ ಹ್ಯಾಜಲ್‌ವುಡ್, ಟ್ರಾವಿಸ್ ಹೆಡ್, ಜೋಶ್ ಇಂಗ್ಲಿಸ್, ಗ್ಲೆನ್ ಮ್ಯಾಕ್ಸ್‌ವೆಲ್, ಮಿಚೆಲ್ ಸ್ಟಾರ್ಕ್, ಮಾರ್ಕಸ್ ಸ್ಟೊಯಿನಿಸ್, ಮ್ಯಾಥ್ಯೂ ವೇಡ್, ಡೇವಿಡ್ ವಾರ್ನರ್, ಆ್ಯಡಂ ಝಂಪಾ.

ಪಾಕಿಸ್ತಾನ ತಂಡ


ಬಾಬರ್ ಅಜಂ (ನಾಯಕ), ಅಬ್ರಾರ್ ಅಹ್ಮದ್, ಅಜಮ್ ಖಾನ್, ಫಖರ್ ಜಮಾನ್, ಹ್ಯಾರಿಸ್ ರೌಫ್, ಇಫ್ತಿಕರ್ ಅಹ್ಮದ್, ಇಮಾದ್ ವಾಸಿಮ್, ಮೊಹಮ್ಮದ್ ಅಬ್ಬಾಸ್ ಅಫ್ರಿದಿ, ಮೊಹಮ್ಮದ್ ಅಮೀರ್, ಮೊಹಮ್ಮದ್ ರಿಜ್ವಾನ್, ನಸೀಮ್ ಶಾ, ಸೈಮ್ ಅಯೂಬ್, ಶಾದಾಬ್ ಖಾನ್, ಶಾಹೀನ್ ಶಾಹ್ಮಾನ್ ಅಫ್ರಿದಿ, ಉಸ್ಮಾನ್ ಖಾನ್.

ಇಂಗ್ಲೆಂಡ್​ ತಂಡ


ಜೋಸ್ ಬಟ್ಲರ್ (ನಾಯಕ), ಮೊಯಿನ್ ಅಲಿ, ಜೋಫ್ರಾ ಆರ್ಚರ್, ಜಾನಿ ಬೈರ್‌ಸ್ಟೋ, ಹ್ಯಾರಿ ಬ್ರೂಕ್, ಸ್ಯಾಮ್ ಕರ್ರಾನ್, ಬೆನ್ ಡಕೆಟ್, ಟಾಮ್ ಹಾರ್ಟ್ಲಿ, ವಿಲ್ ಜ್ಯಾಕ್ಸ್, ಕ್ರಿಸ್ ಜೋರ್ಡಾನ್, ಲಿಯಾಮ್ ಲಿವಿಂಗ್‌ಸ್ಟೋನ್, ಆದಿಲ್ ರಶೀದ್, ಫಿಲ್ ಸಾಲ್ಟ್, ರೀಸ್ ಟೋಪ್ಲಿ, ಮಾರ್ಕ್ ವುಡ್.

ದಕ್ಷಿಣ ಆಫ್ರಿಕಾ ತಂಡ


ಐಡೆನ್ ಮಾರ್ಕ್ರಾಮ್ (ನಾಯಕ), ಒಟ್ನಿಯೆಲ್ ಬಾರ್ಟ್‌ಮ್ಯಾನ್, ಜೆರಾಲ್ಡ್ ಕೊಡ್ಜಿ, ಕ್ವಿಂಟನ್ ಡಿ ಕಾಕ್, ಜಾರ್ನ್ ಫಾರ್ಟುಯಿನ್, ರೀಜಾ ಹೆಂಡ್ರಿಕ್ಸ್, ಮಾರ್ಕೊ ಜಾನ್ಸೆನ್, ಹೆನ್ರಿಚ್ ಕ್ಲಾಸೆನ್, ಕೇಶವ್ ಮಹಾರಾಜ್, ಡೇವಿಡ್ ಮಿಲ್ಲರ್, ಆನ್ರಿಚ್ ನಾರ್ಜೆ, ಕಗಿಸೊ ರಬಾಡಾ, ರಿಯಾನ್ ರಿಕೆಲ್ಟನ್, ಟ್ರೀಸ್ಟಾನ್ ಸ್ಟಬ್ಸ್​, ತಬ್ರೈಜ್ ಶಂಸಿ. ಮೀಸಲು ಆಟಗಾರು: ಲುಂಗಿ ಎನ್​ಗಿಡಿ, ಬರ್ಗರ್.

ಅಫಘಾನಿಸ್ಥಾನ ತಂಡ


ರಶೀದ್‌ ಖಾನ್‌ (ನಾಯಕ), ರೆಹಮಾನುಲ್ಲ ಗುರ್ಬಜ್‌, ಇಬ್ರಾಹಿಂ ಜದ್ರಾನ್‌, ಅಜ್ಮತುಲ್ಲ ಒಮರ್‌ಜಾಯ್‌, ನಜೀಬುಲ್ಲ ಜದ್ರಾನ್‌, ಮೊಹಮ್ಮದ್‌ ಇಶಾಖ್‌, ಮೊಹಮ್ಮದ್‌ ನಬಿ, ಗುಲ್ಬದಿನ್‌ ನೈಬ್‌, ಕರೀಂ ಜನ್ನತ್‌, ನಂಗ್ಯಾಲ್‌ ಖರೋಟಿ, ಮುಜೀಬ್‌ ಉರ್‌ ರೆಹಮಾನ್‌, ನೂರ್‌ ಅಹ್ಮದ್‌, ನವೀನ್‌ ಉಲ್‌ ಹಕ್‌, ಫ‌ಜಲ್‌ ಹಕ್‌ ಫಾರೂಖೀ, ಫ‌ರೀದ್‌ ಅಹ್ಮದ್‌ ಮಲಿಕ್‌. ಮೀಸಲು ಆಟಗಾರರು: ಸಾದಿಕ್‌ ಉಲ್ಲ ಅಟಲ್‌, ಹಜ್ರತುಲ್ಲ ಜಜಾಯ್‌, ಮೊಹಮ್ಮದ್‌ ಸಲೀಂ ಸಫಿ.

ಕೆನಡಾ ತಂಡ


ಸಾದ್ ಬಿನ್ ಜಾಫರ್ (ನಾಯಕ), ಆರನ್ ಜಾನ್ಸನ್, ದಿಲೋನ್ ಹೇಲಿಗರ್, ದಿಲ್‌ಪ್ರೀತ್ ಬಜ್ವಾ, ಹರ್ಷ್ ಠಾಕರ್, ಜೆರೆಮಿ ಗಾರ್ಡನ್, ಜುನೈದ್ ಸಿದ್ದಿಕಿ, ಕಲೀಮ್ ಸನಾ, ಕನ್ವರ್‌ಪಾಲ್ ತತ್‌ಗುರ್, ನವನೀತ್ ಧಲಿವಾಲ್, ನಿಕೋಲಸ್ ಕಿರ್ಟನ್, ಪರ್ಗತ್ ಸಿಂಗ್, ರವೀಂದರ್‌ಪಾಲ್ ಸಿಂಗ್, ರಾಯನ್‌ಖಾನ್‌ಸ್ಹಾನ್, ಶ್ವಾಖಾನ್‌ಸ್ಹಾನ್‌ಸ್ಯಾನ್. ಮೀಸಲು ಆಟಗಾರ: ತಜೀಂದರ್ ಸಿಂಗ್, ಆದಿತ್ಯ ವರದರಾಜನ್, ಅಮ್ಮರ್ ಖಾಲಿದ್, ಜತೀಂದರ್ ಮಥಾರು, ಪರ್ವೀನ್ ಕುಮಾರ್.

ನೇಪಾಳ ತಂಡ


ರೋಹಿತ್ ಪೌಡೆಲ್ (ನಾಯಕ), ಆಸಿಫ್ ಶೇಖ್, ಅನಿಲ್ ಕುಮಾರ್ ಸಾಹ್, ಕುಶಾಲ್ ಭುರ್ಟೆಲ್, ಕುಶಾಲ್ ಮಲ್ಲಾ, ದೀಪೇಂದ್ರ ಸಿಂಗ್ ಐರಿ, ಲಲಿತ್ ರಾಜಬಂಶಿ, ಕರಣ್ ಕೆಸಿ, ಗುಲ್ಶನ್ ಝಾ, ಸೋಂಪಾಲ್ ಕಾಮಿ, ಪ್ರತಿಸ್ ಜಿಸಿ, ಸಂದೀಪ್ ಜೋರಾ, ಅಬಿನಾಶ್ ಬೋಹರಾ, ಸಾಗರ್ ಧಕಲ್, ಕಮಲ್ ಸಿಂಗ್ ಐರಿ.

ಒಮಾನ್​ ತಂಡ


ಅಕಿಬ್ ಇಲ್ಯಾಸ್ (ನಾಯಕ), ಜೀಶನ್ ಮಕ್ಸೂದ್, ಕಶ್ಯಪ್ ಪ್ರಜಾಪತಿ, ಪ್ರತೀಕ್ ಅಠವಲೆ (ವಿಕಿ), ಅಯಾನ್ ಖಾನ್, ಶೋಯೆಬ್ ಖಾನ್, ಮೊಹಮ್ಮದ್ ನದೀಮ್, ನಸೀಮ್ ಖುಷಿ (ವಿಕಿ), ಮೆಹ್ರಾನ್ ಖಾನ್, ಬಿಲಾಲ್ ಖಾನ್, ರಫಿಯುಲ್ಲಾ, ಕಲೀಮುಲ್ಲಾ, ಫಯಾಜ್ ಬಟ್, ಶಕೀಲ್ ಅಹ್ಮದ್ , ಖಾಲಿದ್ ಕೈಲ್. ಮೀಸಲು ಆಟಗಾರ: ಜತೀಂದರ್ ಸಿಂಗ್, ಸಮಯ್ ಶ್ರೀವಾಸ್ತವ, ಸುಫ್ಯಾನ್ ಮೆಹಮೂದ್, ಜೇ ಒಡೆದ್ರಾ.

ಸ್ಕಾಟ್ಲೆಂಡ್​ ತಂಡ


ರಿಚಿ ಬೆರಿಂಗ್ಟನ್ (ನಾಯಕ), ಮ್ಯಾಥ್ಯೂ ಕ್ರಾಸ್, ಬ್ರಾಡ್ ಕ್ಯೂರಿ, ಕ್ರಿಸ್ ಗ್ರೀವ್ಸ್, ಒಲಿ ಹೇರ್ಸ್, ಜ್ಯಾಕ್ ಜಾರ್ವಿಸ್, ಮೈಕೆಲ್ ಜೋನ್ಸ್, ಮೈಕೆಲ್ ಲೀಸ್ಕ್, ಬ್ರಾಂಡನ್ ಮೆಕ್‌ಮುಲ್ಲೆನ್, ಜಾರ್ಜ್ ಮನ್ಸೆ, ಸಫ್ಯಾನ್ ಷರೀಫ್, ಕ್ರಿಸ್ ಸೋಲ್, ಚಾರ್ಲಿ ಟಿಯರ್, ಮಾರ್ಕ್ ವ್ಯಾಟಲ್.

ಉಗಾಂಡ ತಂಡ

ಬ್ರಿಯಾನ್ ಮಸಾಬಾ (ನಾಯಕ), ಸೈಮನ್ ಸ್ಸೆಸಾಜಿ, ರೋಜರ್ ಮುಕಾಸಾ, ಕಾಸ್ಮಾಸ್ ಕ್ಯೆವುಟಾ, ದಿನೇಶ್ ನಕ್ರಾನಿ, ಫ್ರೆಡ್ ಅಚೆಲಮ್, ಕೆನ್ನೆತ್ ವೈಸ್ವಾ, ಅಲ್ಪೇಶ್ ರಾಮ್‌ಜಾನಿ, ಫ್ರಾಂಕ್ ನ್ಸುಬುಗಾ, ಹೆನ್ರಿ ಸೆನ್ಯೊಂಡೋ, ಬಿಲಾಲ್ ಹಸುನ್, ರಾಬಿನ್ಸನ್ ಒಬುಯಾ, ರಿಯಾಝತ್ ಅಲಿ ಮಿಯಾಜಿ, ರನಾಕ್​ ಪಟೇಲ್. ಪ್ರಯಾಣ ಮೀಸಲು: ಇನೋಸೆಂಟ್ ಮ್ವೆಬಾಜ್, ರೊನಾಲ್ಡ್ ಲುತಾಯಾ​.

ಅಮೆರಿಕ ತಂಡ

ಮೊನಾಂಕ್ ಪಟೇಲ್ (ನಾಯಕ), ಆರನ್ ಜೋನ್ಸ್ (ಉಪನಾಯಕ), ಆಂಡ್ರೀಸ್ ಗೌಸ್, ಕೋರಿ ಆಂಡರ್ಸನ್, ಅಲಿ ಖಾನ್, ಹರ್ಮೀತ್ ಸಿಂಗ್, ಜೆಸ್ಸಿ ಸಿಂಗ್, ಮಿಲಿಂದ್ ಕುಮಾರ್, ನಿಸರ್ಗ್ ಪಟೇಲ್, ನಿತೀಶ್ ಕುಮಾರ್, ನೋಷ್ಟುಶ್ ಕೆಂಜಿಗೆ, ಸೌರಭ್ ನೇತ್ರಲ್ವಾಕರ್, ಶಾಡ್ಲಿ ವ್ಯಾನ್ ಶಾಲ್ಕ್‌ವಿಕ್, ಸ್ಟೀವನ್ ಟೇಯ್ , ಶಯಾನ್ ಜಹಾಂಗೀರ್. ಮೀಸಲು ಆಟಗಾರರು: ಗಜಾನಂದ್ ಸಿಂಗ್, ಜುವಾನೊಯ್ ಡ್ರೈಸ್‌ಡೇಲ್, ಯಾಸಿರ್ ಮೊಹಮ್ಮದ್.

ವೆಸ್ಟ್​ ಇಂಡೀಸ್​ ತಂಡ


ರೋವ್‌ಮನ್ ಪೊವೆಲ್ (ನಾಯಕ), ಅಲ್ಜಾರಿ ಜೋಸೆಫ್, ಜಾನ್ಸನ್ ಚಾರ್ಲ್ಸ್, ರೋಸ್ಟನ್ ಚೇಸ್, ಶಿಮ್ರಾನ್ ಹೆಟ್ಮೆಯರ್, ಜೇಸನ್ ಹೋಲ್ಡರ್, ಶಾಯ್ ಹೋಪ್, ಅಕೇಲ್ ಹೊಸೈನ್, ಶಮರ್ ಜೋಸೆಫ್, ಬ್ರಾಂಡನ್ ಕಿಂಗ್, ಗುಡಾಕೇಶ್ ಮೋಟಿ, ನಿಕೋಲಸ್ ಪೂರನ್, ಆಂಡ್ರೆ ರಸೆಲ್, ಶೆರ್ಫಾನ್ ರೊಥರ್‌ಫೋರ್ಡ್.

ನೆದರ್ಲೆಂಡ್ಸ್‌ ತಂಡ

ಸ್ಕಾಟ್‌ ಎಡ್ವರ್ಡ್ಸ್‌ (ನಾಯಕ), ಆರ್ಯನ್‌ ದತ್ತ, ಬಾಸ್‌ ಡಿ ಲೀಡ್‌, ಡೇನಿಯಲ್‌ ಡೋರಮ್‌, ಫ್ರೆಡ್‌ ಕ್ಲಾಸೆನ್‌, ಕೈಲ್‌ ಕ್ಲೀನ್‌, ಲೋಗನ್‌ ವಾನ್‌ ಬೀಕ್‌, ಮ್ಯಾಕ್ಸ್‌ ಓ’ಡೌಡ್‌, ಮೈಕಲ್‌ ಲೆವಿಟ್‌, ಪಾಲ್‌ ವಾನ್‌ ಮೀಕೆರೆನ್‌, ಸಿಬ್ರಾಂಡ್‌ ಏಂಜೆಲ್‌ಬ್ರೆಟ್‌, ತೇಜ ನಿಡಮನೂರು, ಟಿಮ್‌ ಪ್ರಿಂಗ್ಲ್, ವಿಕ್ರಮ್‌ ಸಿಂಗ್‌, ವೆಸ್ಲಿ ಬರೇಸಿ.

ಇದನ್ನೂ ಓದಿ T20 World Cup 2024: ಟಿ20 ವಿಶ್ವಕಪ್​ ಟೂರ್ನಿಗೆ ಕಾಮೆಂಟರಿ ಬಳಗ ಘೋಷಿಸಿದ ಐಸಿಸಿ; ದಿನೇಶ್​ ಕಾರ್ತಿಕ್​ಗೂ ಸ್ಥಾನ

ಐರ್ಲೆಂಡ್ ತಂಡ

ಪಾಲ್ ಸ್ಟರ್ಲಿಂಗ್ (ನಾಯಕ), ಮಾರ್ಕ್ ಅಡೈರ್, ರಾಸ್ ಅಡೈರ್, ಆಂಡ್ರ್ಯೂ ಬಲ್ಬಿರ್ನಿ, ಕರ್ಟಿಸ್ ಕ್ಯಾಂಫರ್, ಗರೆಥ್ ಡೆಲಾನಿ, ಜಾರ್ಜ್ ಡಾಕ್ರೆಲ್, ಗ್ರಹಾಂ ಹ್ಯೂಮ್, ಜೋಶ್ ಲಿಟಲ್, ಬ್ಯಾರಿ ಮೆಕಾರ್ಥಿ, ನೀಲ್ ರಾಕ್ (ವಿಕೆಟ್ ಕೀಪರ್), ಹ್ಯಾರಿ ಟೆಕ್ಟರ್, ಲಾರ್ಕನ್ ಟಕರ್ (ವಿಕೆಟ್ ಕೀಪರ್), ಬೆನ್ ವೈಟ್ ಮತ್ತು ಕ್ರೇಗ್ ಯಂಗ್.

ಪಪುವಾ ನ್ಯೂಗಿನಿಯಾ ತಂಡ


ಅಸ್ಸಾದ್ ವಾಲಾ(ನಾಯಕ),ಸಿಜೆ ಅಮಿನಿ(ಉಪನಾಯಕ),ಅಲೆಯ್ ನಾವೊ, ಚಾಡ್ ಸೋಪರ್, ಹಿಲಾ ವರೇ, ಹಿರಿ ಹಿರಿ, ಜ್ಯಾಕ್ ಗಾರ್ಡ್ನರ್, ಜಾನ್ ಕರಿಕೊ, ಕಬುವಾ ವಾಗಿ ಮೋರಿಯಾ, ಕಿಪ್ಲಿಂಗ್ ಡೊರಿಗಾ, ಲೆಗಾ ಸಿಯಾಕಾ, ನಾರ್ಮನ್ ವನುವಾ, ಸೆಮಾ ಕಾಮಿಯಾ, ಸೆಸೆ ಬೌ, ಟೋನಿ ಉರಾ.

ಇದನ್ನೂ ಓದಿ T20 World Cup 2024: ಕೊನೆಗೂ ಟಿ20 ವಿಶ್ವಕಪ್​ಗೆ ತಂಡ ಪ್ರಕಟಿಸಿದ ಭಾರತದ ಬದ್ಧ ಎದುರಾಳಿ ಪಾಕಿಸ್ತಾನ

ಶ್ರೀಲಂಕಾ ತಂಡ


ವನಿಂದು ಹಸರಂಗ (ನಾಯಕ), ಚರಿತ್ ಅಸಲಂಕಾ, ಕುಸಲ್ ಮೆಂಡಿಸ್, ಪಾತುಂ ನಿಸ್ಸಂಕ, ಕಮಿಂದು ಮೆಂಡಿಸ್, ಸದೀರ ಸಮರವಿಕ್ರಮ, ಏಂಜೆಲೊ ಮ್ಯಾಥ್ಯೂಸ್, ದಸುನ್ ಶನಕ, ಧನಂಜಯ ಡಿ ಸಿಲ್ವ, ಮಹೇಶ್ ತೀಕ್ಷಣ, ದುನಿತ್ ವೆಲ್ಲಲಾಗೆ, ಮಥೀಷ್ ತೀಕ್ಷಣ, ದುಷ್ಮಂತ ತುಷಾರ ಚಮೀರ, ನುವಾಂತಾ ಚಮೀರ ಮಧುಶಂಕ. ಪ್ರಯಾಣ ಮೀಸಲು: ಅಸಿತ ಫೆರ್ನಾಂಡೋ, ವಿಜಯಕಾಂತ್ ವ್ಯಾಸಕಾಂತ್, ಭಾನುಕಾ ರಾಜಪಕ್ಸೆ, ಜನಿತ್ ಲಿಯಾನಗೆ.

ಬಾಂಗ್ಲಾದೇಶ ತಂಡ


ನಜ್ಮುಲ್ ಹೊಸೈನ್ ಶಾಂಟೊ (ನಾಯಕ), ತಸ್ಕಿನ್ ಅಹ್ಮದ್, ಲಿಟ್ಟನ್ ದಾಸ್, ಸೌಮ್ಯ ಸರ್ಕಾರ್, ತಂಝಿದ್ ಹಸನ್ ತಮೀಮ್, ಶಕೀಬ್ ಅಲ್ ಹಸನ್, ತೌಹಿದ್ ಹೃದಯೋಯ್, ಮಹ್ಮುದುಲ್ಲಾ ರಿಯಾದ್, ಜೇಕರ್ ಅಲಿ ಅನಿಕ್, ತನ್ವಿರ್ ಇಸ್ಲಾಂ, ಶಾಕ್ ಮಹೇದಿ ಹಸನ್, ರಿಶಾದ್ ಹೊಸ್ರಿ ಫುಲ್ ರಹ್ಮಾನ್, ಶೋಝಿನ್, ಇಸ್ಲಾಂ, ತಂಝೀಮ್ ಹಸನ್ ಸಾಕಿಬ್. ಪ್ರಯಾಣ ಮೀಸಲು: ಅಫೀಫ್ ಹೊಸೈನ್, ಹಸನ್ ಮಹಮೂದ್.

ನಮೀಬಿಯಾ ತಂಡ


ಗೆರ್ಹಾರ್ಡ್ ಎರಾಸ್ಮಸ್ (ನಾಯಕ), ಝೇನ್ ಗ್ರೀನ್, ಮೈಕೆಲ್ ವ್ಯಾನ್ ಲಿಂಗೆನ್, ಡೈಲನ್ ಲೀಚರ್, ರೂಬೆನ್ ಟ್ರಂಪೆಲ್ಮನ್, ಜ್ಯಾಕ್ ಬ್ರಾಸೆಲ್, ಬೆನ್ ಶಿಕೊಂಗೊ, ತಂಗೇನಿ ಲುಂಗಮೆನಿ, ನಿಕೊ ಡೇವಿನ್, ಜೆಜೆ ಸ್ಮಿತ್, ಜಾನ್ ಫ್ರಿಲಿಂಕ್, ಜೆಪಿ ಕೋಟ್ಜೆ, ಡೇವಿಡ್ ವೈಸ್, ಮಲನ್ ಸ್ಕೋಲ್ಟ್ಜ್ , ಪಿಡಿ ಬ್ಲಿಗ್ನಾಟ್.

Continue Reading
Advertisement
Road Accident
ಕರ್ನಾಟಕ3 mins ago

Road Accident: ಕೆಎಸ್ಆರ್‌ಟಿಸಿ ಬಸ್-ಬೈಕ್ ಡಿಕ್ಕಿಯಾಗಿ ಇಬ್ಬರು ಸವಾರರ ಸಾವು

Porsche Car Crash
ದೇಶ3 mins ago

Porsche Crash: ಇಬ್ಬರ ಸಾವಿಗೆ ಕಾರಣವಾದ 17 ವರ್ಷದ ಬಾಲಕನಿಗೆ ಪೋರ್ಶೆ ಕಾರು ಸಿಕ್ಕಿದ್ದು ʼಬರ್ತ್‌ಡೇ ಗಿಫ್ಟ್‌ʼ!

Electric Scooters
ಪ್ರಮುಖ ಸುದ್ದಿ4 mins ago

Electric Scooters : ದೊಡ್ಡ ಬೂಟ್​ ಸ್ಪೇಸ್ ಇರುವಂಥ 5 ಎಲೆಕ್ಟ್ರಿಕ್​ ಸ್ಕೂಟರ್​ಗಳು ಇವು

Shreyanka Patil
ಕ್ರೀಡೆ11 mins ago

Shreyanka Patil: ನಟ ಸಮರ್ಜಿತ್ ಲಂಕೇಶ್ ಜತೆ ಮಸ್ತ್​ ಸ್ಟೆಪ್ಸ್ ಹಾಕಿದ ಆರ್​ಸಿಬಿ ಆಟಗಾರ್ತಿ ಶ್ರೇಯಾಂಕಾ; ವಿಡಿಯೊ ವೈರಲ್​

Kendall Jenner American model flaunted
ಬಾಲಿವುಡ್34 mins ago

Kendall Jenner: ತಿಂಗಳಲ್ಲಿ ಎರಡು ಬಾರಿ ಟಾಪ್‌ಲೆಸ್‌ ಆದ ಹಾಲಿವುಡ್‌ ಬ್ಯೂಟಿ ಕೆಂಡಲ್‌ ಜೆನ್ನರ್‌!

How To Get Rid Of Cockroaches
ಲೈಫ್‌ಸ್ಟೈಲ್38 mins ago

How To Get Rid Of Cockroaches: ಜಿರಳೆಗಳು ಮನೆಯೊಳಗೆ ಬರದಂತೆ ಮಾಡುವ ಈ ಉಪಾಯಗಳು ನಿಮಗೆ ತಿಳಿದಿದೆಯೆ?

Lockup Death
ಕರ್ನಾಟಕ40 mins ago

Lockup Death: ಚನ್ನಗಿರಿ ಆದಿಲ್ ಸಾವು ಪ್ರಕರಣ ಸಿಐಡಿಗೆ ವರ್ಗಾವಣೆ

theft Case in Raichur
ರಾಯಚೂರು40 mins ago

Raichur News : ಸಾಲದ ಸುಳಿಗೆ ಸಿಲುಕಿದ ಸ್ನೇಹಿತೆಗೆ ಕೊಟ್ಟಳು 10 ತೊಲೆ ಬಂಗಾರ! ‘ಕಳ್ಳತನ’ ನಾಟಕವಾಡಿದ ಗೆಳತಿಯರು ಲಾಕ್‌

Swati Maliwal
ದೇಶ46 mins ago

Swati Maliwal case: “ರೇಪ್‌, ಕೊಲೆ ಮಾಡೋದಾಗಿ ಬೆದರಿಕೆ ಬರ್ತಿದೆ”- ಸ್ವಾತಿ ಮಲಿವಾಲ್‌ ಮತ್ತೊಂದು ಆರೋಪ

India Head Coach
ಕ್ರಿಕೆಟ್57 mins ago

India Head Coach: ಕೋಚ್​ ಹುದ್ದೆಗೆ ನಾನು ರೆಡಿ; ಆದರೆ ಒಂದು ಷರತ್ತು ಎಂದ ಗಂಭೀರ್​

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ1 day ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ3 days ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ4 days ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ5 days ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು5 days ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

Contaminated Water
ಮೈಸೂರು5 days ago

Contaminated Water : ಡಿ ಸಾಲುಂಡಿಯಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದ ಯುವಕ ಸಾವು

Karnataka Rain
ಮಳೆ6 days ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Rain
ಮಳೆ1 week ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ1 week ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ1 week ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

ಟ್ರೆಂಡಿಂಗ್‌