T20 World Cup | ಈ ಬಾರಿಯ ಟಿ20 ವಿಶ್ವ ಕಪ್​ನಲ್ಲಿ ಅತಿ ಹೆಚ್ಚು ರನ್​ ಗಳಿಸಿದ ಟಾಪ್​ 5 ಆಟಗಾರರು ಯಾರು? - Vistara News

Latest

T20 World Cup | ಈ ಬಾರಿಯ ಟಿ20 ವಿಶ್ವ ಕಪ್​ನಲ್ಲಿ ಅತಿ ಹೆಚ್ಚು ರನ್​ ಗಳಿಸಿದ ಟಾಪ್​ 5 ಆಟಗಾರರು ಯಾರು?

ಐಸಿಸಿ ಟಿ20 ವಿಶ್ವ ಕಪ್​ ಟೂರ್ನಿಯಲ್ಲಿ ಅತಿ ಹೆಚ್ಚು ರನ್​ ಗಳಿಸಿದ ಆಟಗಾರ ಎಂಬ ಹೆಗ್ಗಳಿಕೆ ಟೀಮ್​ ಇಂಡಿಯಾದ ಆಟಗಾರ ವಿರಾಟ್​ ಕೊಹ್ಲಿ ಪಾಲಾಗಿದೆ.

VISTARANEWS.COM


on

virat
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮೆಲ್ಬೋರ್ನ್​: ಆಸ್ಟ್ರೇಲಿಯಾ ಆತಿಥ್ಯದಲ್ಲಿ ನಡೆದ ಐಸಿಸಿ ಟಿ20 ವಿಶ್ವ ಕಪ್(T20 World Cup)​ ಟೂರ್ನಿಯಲ್ಲಿ ಅತಿ ಹೆಚ್ಚು ರನ್​ ಗಳಿಸಿದ ಟಾಪ್​ 5 ಆಟಗಾರರ ಪಟ್ಟಿ ಬಿಡುಗಡೆಗೊಂಡಿದ್ದು ಟೀಮ್​ ಇಂಡಿಯಾದ ಇಬ್ಬರು ಆಟಗಾರರು ಈ ಪಟ್ಟಿಯಲ್ಲಿ ಕಾಣಿಸಿಕೊಂಡಿದ್ದಾರೆ. ಸ್ಟಾರ್​ ಬ್ಯಾಟರ್​ ವಿರಾಟ್​ ಕೊಹ್ಲಿ ಮೊದಲ ಸ್ಥಾನದಲ್ಲಿ ಪಡೆದರೆ, ಸ್ಫೋಟಕ ಆಟಗಾರ ಸೂರ್ಯಕುಮಾರ್​ ಯಾದವ್​ ಮೂರನೇ ಸ್ಥಾನ ಪದೆದಿದ್ದಾರೆ. ಉಳಿದ ಆಟಗಾರರ ಕ್ರಮಾಂಕ ಈ ಕೆಳಗಿನಂತಿವೆ.

ಟಾಪ್​​ ರನ್​ ಗಳಿಸಿದ ಟಾಪ್​ 5 ಆಟಗಾರರು

ಆಟಗಾರಪಂದ್ಯರನ್​
1.ವಿರಾಟ್​ ಕೊಹ್ಲಿ6296
2.ಮ್ಯಾಕ್ಸ್​ ಒ’ ಡಾವ್ಡ್​8242
3.ಸೂರ್ಯಕುಮಾರ್​ ಯಾದವ್​6239
4.ಜೋಸ್​ ಬಟ್ಲರ್​​8225
5.ಕುಸಾಲ್​ ಮೆಂಡಿಸ್​8223

ಭಾನುವಾರ ನಡೆದ ಫೈನಲ್‌ ಪಂದ್ಯದಲ್ಲಿ ಪಾಕಿಸ್ತಾನ ತಂಡವನ್ನು ಐದು ವಿಕೆಟ್‌ಗಳಿಂದ ಸೋಲಿಸಿದ ಇಂಗ್ಲೆಂಡ್‌ ತಂಡದ ಚಾಂಪಿಯನ್‌ ಪಟ್ಟ ತನ್ನದಾಗಿಸಿಕೊಂಡಿದೆ. ಮೊದಲು ಬ್ಯಾಟ್‌ ಮಾಡಿದ ಪಾಕಿಸ್ತಾನ ತಂಡ ನಿಗದಿತ ೨೦ ಓವರ್‌ಗಳಲ್ಲಿ ೧೩೭ ರನ್‌ ಬಾರಿಸಿದರೆ ಗುರಿ ಬೆನ್ನಟ್ಟಿದ ಇಂಗ್ಲೆಂಡ್‌ ಬಳಗ ಬೆನ್ ಸ್ಟೋಕ್ಸ್‌ ಅವರ ಅಜೇಯ ೫೨ ರನ್‌ಗಳ ನೆರವಿನಿಂದ ಇನ್ನೂ ಆರು ಎಸೆತಗಳು ಬಾಕಿ ಇರುವಂತೆಯೇ ೧೩೮ ರನ್‌ ಬಾರಿಸಿ ಜಯಶಾಲಿಯಾಯಿತು.

ಇದನ್ನೂ ಓದಿ | T20 World Cup | ಪಾಕಿಸ್ತಾನ ತಂಡವನ್ನು ಮಣಿಸಿದ ಇಂಗ್ಲೆಂಡ್‌ ಟಿ20 ವಿಶ್ವ ಚಾಂಪಿಯನ್‌

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೈಂ

Teenage Boy Arrested: ತನ್ನನ್ನು ಅತ್ಯಾಚಾರ ಮಾಡಿ ಬ್ಲ್ಯಾಕ್ ಮೇಲ್ ಮಾಡುತ್ತಿದ್ದವನನ್ನು ಕೊಂದ ಬಾಲಕ!

ಮುಜಾಫರ್‌ನಗರದ ಹಳ್ಳಿಯೊಂದರಲ್ಲಿ ತನ್ನ ಮೇಲೆ ಹಲವು ಬಾರಿ ಅತ್ಯಾಚಾರ ಎಸಗಿದ 50 ವರ್ಷದ ವ್ಯಕ್ತಿಯನ್ನು ಕೊಂದ ಆರೋಪದ ಮೇಲೆ 15 ವರ್ಷದ ಬಾಲಕನನ್ನು (Teenage Boy Arrested) ಬಂಧಿಸಲಾಗಿದೆ.

VISTARANEWS.COM


on

By

Teenage boy arrested
Koo

ಉತ್ತರಪ್ರದೇಶ: ಅತ್ಯಾಚಾರಿಯನ್ನು (rapist) ಕೊಂದ ಹದಿಹರೆಯದ ಬಾಲಕನನ್ನು (Teenage Boy Arrested) ಉತ್ತರಪ್ರದೇಶದ (Uttar Pradesh) ಮುಜಾಫರ್‌ನಗರದಲ್ಲಿ (Muzaffarnagar) ಪೊಲೀಸರು ಬಂಧಿಸಿದ್ದು, ಐಪಿಸಿ ಸೆಕ್ಷನ್ 302 (Murder) ಅಡಿಯಲ್ಲಿ ಪ್ರಕರಣವನ್ನು ದಾಖಲಿಸಲಾಗಿದೆ. ಬಾಲಕನನ್ನು ಬಾಲಾಪರಾಧಿ ಕೇಂದ್ರಕ್ಕೆ ಕಳುಹಿಸಲಾಗಿದೆ.

ಮುಜಾಫರ್‌ನಗರದ ಹಳ್ಳಿಯೊಂದರಲ್ಲಿ ತನ್ನ ಮೇಲೆ ಹಲವು ಬಾರಿ ಅತ್ಯಾಚಾರ ಎಸಗಿದ 50 ವರ್ಷದ ವ್ಯಕ್ತಿಯನ್ನು ಕೊಂದ ಆರೋಪದ ಮೇಲೆ 15 ವರ್ಷದ ಬಾಲಕನನ್ನು ಬಂಧಿಸಲಾಗಿದೆ. ಮೇ 20ರಂದು ಬಾಲಕನ ಮನೆಯಲ್ಲಿ ವ್ಯಕ್ತಿಯ ಶವ ಪತ್ತೆಯಾಗಿದ್ದು, ಪೊಲೀಸ್ ತನಿಖೆಯ ಅನಂತರ ಹದಿಹರೆಯದವರನ್ನು ಶನಿವಾರ ಬಂಧಿಸಲಾಯಿತು.

ವ್ಯಕ್ತಿಯ ಕುಟುಂಬದವರು ಪೊಲೀಸರಿಗೆ ದೂರು ನೀಡಿದ ಅನಂತರ ಬಾಲಕನ ವಿರುದ್ಧ ಐಪಿಸಿ ಸೆಕ್ಷನ್ 302 (ಕೊಲೆ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಬಾಲಕನನ್ನು ಬಾಲಾಪರಾಧಿ ಕೇಂದ್ರಕ್ಕೆ ಕಳುಹಿಸಲಾಗಿದೆ.

ಎಸ್ಪಿ (ಗ್ರಾಮೀಣ) ಆದಿತ್ಯ ಬನ್ಸಾಲ್ ಅವರು, ವಾರಗಳ ಹಿಂದೆ ಮೃತರು ಅಪ್ರಾಪ್ತ ವಯಸ್ಕನನ್ನು ಅಶ್ಲೀಲ ವಿಡಿಯೋ ಕ್ಲಿಪ್ ಅನ್ನು ರೆಕಾರ್ಡ್ ಮಾಡಿದ್ದರು. ಬಾಲಕನಿಗೆ ಬ್ಲ್ಯಾಕ್‌ಮೇಲ್ ಮಾಡಲಾಗುತ್ತಿದೆ ಮತ್ತು ಪದೇ ಪದೇ ಲೈಂಗಿಕ ಕಿರುಕುಳ ನೀಡಲಾಗುತ್ತಿತ್ತು.

ಸೋಮವಾರ ವಿಡಿಯೋವನ್ನು ಆನ್‌ಲೈನ್‌ನಲ್ಲಿ ಅಪ್‌ಲೋಡ್ ಮಾಡುವುದಾಗಿ ಬೆದರಿಕೆ ಹಾಕಿದ ಅನಂತರ, ವ್ಯಕ್ತಿ ತನ್ನ ಮನೆಗೆ ಬರುವಂತೆ ಬಾಲಕನಿಗೆ ಒತ್ತಾಯಿಸಿದ್ದನು. ಆತ ಕಿರುಕುಳ ನೀಡುತ್ತಿದ್ದುದರಿಂದ ಹುಡುಗ ತನ್ನ ಪಕ್ಕದಲ್ಲಿದ್ದ ಹರಿತವಾದ ವಸ್ತುವನ್ನು ಎತ್ತಿಕೊಂಡು ಹೋಗಿ ವ್ಯಕ್ತಿಯ ತಲೆ ಮತ್ತು ಗಂಟಲಿನ ಮೇಲೆ ಹಲ್ಲೆ ನಡೆಸಿದ್ದ. ಗಂಭೀರ ಗಾಯಗೊಂಡಿದ್ದ ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿರುವುದಾಗಿ ಆತನ ಕುಟುಂಬಸ್ಥರು ದೂರಿನಲ್ಲಿ ತಿಳಿಸಿದ್ದಾರೆ.

ಪ್ರೀತಿಗೆ ವಿರೋಧ; ಯುವಕ ಆತ್ಮಹತ್ಯೆ

ಪ್ರೀತಿಸಿದ ಯುವತಿಯ ಕುಟುಂಬಸ್ಥರು ಮದುವೆಗೆ ವಿರೋಧ ವ್ಯಕ್ತಪಡಿಸಿದ ಕಾರಣ ಮನನೊಂದ ಪ್ರಿಯಕರ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹುಲಸೂರ ಪಟ್ಟಣದಲ್ಲಿ ಈ ಘಟನೆ ನಡೆದಿದೆ.

ಅಜಯ್ ಮನೋಹರ ಸೂರ್ಯವಂಶಿ (22) ಮೃತ ವ್ಯಕ್ತಿ. ಕೆಲವು ವರ್ಷಗಳಿಂದ ಈತ ಯುವತಿಯೊಬ್ಬಳನ್ನು ಪ್ರೀತಿಸುತಿದ್ದ, ಆದರೆ ತನ್ನ ತಂಗಿಯನ್ನು ಮರೆತು ಬಿಡುವಂತೆ ಆಕೆಯ ಅಣ್ಣ ಯುವಕನಿಗೆ ಧಮ್ಕಿ ಹಾಕಿದ್ದ. ಹೀಗಾಗಿ ಆತನ ಭಯಕ್ಕೆ ಹೆದರಿ ತನ್ನ ಮಗ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಮೃತನ ತಾಯಿ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ.

ಈ ಕುರಿತು ಹೊಲಸೂರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.

ಇದನ್ನೂ ಓದಿ: Physical Abuse: ವಾಯಿಸ್‌ ಚೇಂಜಿಂಗ್‌ ಆಪ್‌ ಸಹಾಯದಿಂದ ಯುವತಿಯರಿಗೆ ಬಲೆ; ಮಹಿಳೆಯಂತೆ ಮಾತನಾಡಿ ವಿದ್ಯಾರ್ಥಿನಿಯರ ಮೇಲೆ ಅತ್ಯಾಚಾರ

ಹಿಟ್‌ ಆ್ಯಂಡ್‌ ರನ್‌: ಪಾದಚಾರಿ ಸಾವು

ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಅರೇಪುರ ಗೇಟ್ ಬಳಿ ಹಿಟ್‌ ಆ್ಯಂಡ್‌ ರನ್‌ಗೆ ಪಾದಚಾರಿಯೊಬ್ಬರು ಮೃತಪಟ್ಟ ಘಟನೆ ನಡೆದಿದೆ.

ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಪಾದಚಾರಿಗೆ ಹಿಂಬದಿಯಿಂದ ಬಂದ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ರಸ್ತೆಯ ಮಧ್ಯೆ ಹಾರಿ ಬಿದ್ದ ವ್ಯಕ್ತಿ ಮೇಲೆ ಮತ್ತೊಂದು ವಾಹನ ಹರಿದಿದೆ ಎನ್ನಲಾಗಿದೆ.

ಅಪಘಾತದಿಂದ ಗಂಭೀರ ಗಾಯಗೊಂಡಿದ್ದ ವ್ಯಕ್ತಿಯನ್ನು ಸ್ಥಳೀಯರು ಕೂಡಲೇ ಆಂಬ್ಯುಲೆನ್ಸ್‌ನಲ್ಲಿ ಕರೆದೊಯ್ಯುವಾಗ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ. ಮೃತಪಟ್ಟ ವ್ಯಕ್ತಿಯ ಗುರುತು ಪತ್ತೆಯಾಗದ ಹಿನ್ನೆಲೆಯಲ್ಲಿ ಪೊಲೀಸರು ಸ್ಥಳೀಯ ಠಾಣೆಗಳಿಗೆ ಮಾಹಿತಿ ರವಾನಿಸಿದ್ದಾರೆ. ಬೇಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Continue Reading

ಪ್ರಮುಖ ಸುದ್ದಿ

Natasa Stankovic : ಡೈವೋರ್ಸ್​ ಗಾಸಿಪ್​ ನಡುವೆಯೇ ಬೇರೊಬ್ಬರ ಜತೆ ಕಾಣಿಸಿಕೊಂಡ ಹಾರ್ದಿಕ್ ಪಾಂಡ್ಯ ಪತ್ನಿ

Natasa Stankovic: ನತಾಶಾ ಮತ್ತು ಹಾರ್ದಿಕ್ ಮೇ 2020 ರಲ್ಲಿ ವಿವಾಹವಾಗಿದ್ದರು. ಅವರಿಗೆ ಅಗಸ್ತ್ಯ ಎಂಬ ಮೂರು ವರ್ಷದ ಮಗನಿದ್ದಾನೆ. ಇತ್ತೀಚೆಗೆ, ನತಾಶಾ ತಮ್ಮ ಪಕ್ಕದಲ್ಲಿದ್ದ ಪಾಂಡ್ಯಾ ಹೆಸರನ್ನು ತೆಗೆದುಹಾಕಿದ್ದರು. ಇದು ಅವರ ವಿಚ್ಛೇದನದ ಬಗ್ಗೆ ಊಹಾಪೋಹಗಳನ್ನು ಸೃಷ್ಟಿಸಿತ್ತು.

VISTARANEWS.COM


on

Natasa Stankovic
Koo

ಬೆಂಗಳೂರು: ಟೀಂ ಇಂಡಿಯಾ ಆಲ್ರೌಂಡರ್ ಹಾರ್ದಿಕ್ ಪಾಂಡ್ಯ ಪತ್ನಿ ನತಾಶಾ ಸ್ಟಾಂಕೋವಿಕ್ (Natasa Stankovic) ಈಗ ಸುದ್ದಿಯಲ್ಲಿದ್ದಾರೆ. ಅವರು ಮತ್ತು ಹಾರ್ದಿಕ್ ಈಗಾಗಲೇ ಪರಸ್ಪರ ಒಪ್ಪಂದದಿಂದ ಬೇರ್ಪಟ್ಟಿದ್ದಾರೆ ಎಂದು ಸಾಕಷ್ಟು ವದಂತಿಗಳಾಗಿವೆ. ಈ ಗಾಸಿಪ್​ ಸುದ್ದಿಯ ಬೆಂಕಿಗೆ ಹೆಚ್ಚಿನ ತುಪ್ಪ ಸುರಿಯುವಂತೆ ಅವರು ಬಾಲಿವುಡ್ ಉದಯೋನ್ಮುಖ ನಟಿ ದಿಶಾ ಪಟಾನಿ ಅವರ ಬಾಯ್​ಫ್ರೆಂಡ್​ ಎಂದು ಹೇಳಿಕೊಳ್ಳಲಾಗುತ್ತಿರುವ ವ್ಯಕ್ತಿಯ ಜತೆ ಕಾಣಿಸಿಕೊಂಡಿದ್ದಾರೆ. ಅವರಿಬ್ಬರೂ ಸಾರ್ವಜನಿಕಗಾಗಿ ಹೋಗುತ್ತಿರುವ ವಿಡಿಯೊ ವೈರಲ್ ಆಗಿದ್ದು ಪಾಪರಾಜಿಗಳು (ಕ್ಯಾಮೆರಾಮನ್​ಗಳು) ಅವರಿಬ್ಬರ ಚಿತ್ರಗಳನ್ನು ಸೆರೆ ಹಿಡಿದಿದ್ದಾರೆ.

ನಟಿ ದಿಶಾ ಪಠಾಣಿ ಅವರ ವದಂತಿಯ ಗೆಳೆಯ ಅಲೆಕ್ಸಾಂಡರ್ ಅಲೆಕ್ಸ್ಲಿಕ್​ ಮತ್ತು ನತಾಶಾ ಜತೆಯಾಗಿ ಕಾಣಿಸಿಕೊಂಡಿದ್ದಾರೆ. ಪಾಪರಾಜಿಗಳಿಂದ ಸಾಕಷ್ಟು ವಿನಂತಿಗಳನ್ನು ಪಡೆದ ನಂತರ ನತಾಶಾ ಪೋಸ್ ನೀಡಿದ್ದಾರೆ. ಹೀಗಾಗಿ ಪಾಂಡ್ಯಾ ಜತೆಗಿನ ಡೈವೋರ್ಸ್​ ಪ್ರಕರಣವನ್ನು ಇನ್ನಷ್ಟು ಆಸಕ್ತಿದಾಯಕವಾಗಿದೆ. ಐಪಿಎಲ್ 2024 ರಲ್ಲಿ ಹಾರ್ದಿಕ್ ತಮ್ಮ ಉನ್ನತ ನಿರೀಕ್ಷೆಗಳಿಗೆ ತಕ್ಕ ಹಾಗೆ ಆಡಿಲ್ಲ. ಪತಿ ಸೋಲುತ್ತಿದ್ದರೂ ಒಂದೇ ಒಂದು ಬಾರಿಯೂ, ನತಾಶಾ ತಮ್ಮ ಪತಿಯ ಆತ್ಮವಿಶ್ವಾಸವನ್ನು ಹೆಚ್ಚಿಸಲು ಸ್ಟ್ಯಾಂಡ್​ಗಳಿಗೆ ಬಂದಿರಲಿಲ್ಲ.

ನತಾಶಾ ಮತ್ತು ಹಾರ್ದಿಕ್ ಮೇ 2020 ರಲ್ಲಿ ವಿವಾಹವಾಗಿದ್ದರು. ಅವರಿಗೆ ಅಗಸ್ತ್ಯ ಎಂಬ ಮೂರು ವರ್ಷದ ಮಗನಿದ್ದಾನೆ. ಇತ್ತೀಚೆಗೆ, ನತಾಶಾ ತಮ್ಮ ಪಕ್ಕದಲ್ಲಿದ್ದ ಪಾಂಡ್ಯಾ ಹೆಸರನ್ನು ತೆಗೆದುಹಾಕಿದ್ದರು. ಇದು ಅವರ ವಿಚ್ಛೇದನದ ಬಗ್ಗೆ ಊಹಾಪೋಹಗಳನ್ನು ಸೃಷ್ಟಿಸಿತ್ತು.

ಇದನ್ನೂ ಓದಿ: IPL 2024 : ಶಿಮ್ರೋನ್ ಹೆಟ್ಮಾಯರ್​ಗೆ ದೊಡ್ಡ ಮೊತ್ತದ ದಂಡ ವಿಧಿಸಿದ ಬಿಸಿಸಿಐ

ಅದೇನೇ ಇದ್ದರೂ, ಅಲೆಕ್ಸಾಂಡರ್ ಮತ್ತು ನತಾಶ ಮತ್ತು ದಿಶಾ ಇಬ್ಬರಿಗೂ ಉತ್ತಮ ಸ್ನೇಹಿತ ಎಂದು ವರದಿಯಾಗಿದೆ. ಅವರು ತಮ್ಮ ತೋಳುಗಳ ಮೇಲೆ ದಿಶಾ ಅವರ ಮುಖದ ಹಚ್ಚೆ ಹೊಂದಿರುವುದರಿಂದ, ಅವರು ಬಾಲಿವುಡ್ ನಟಿ ಜೊತೆ ಡೇಟಿಂಗ್ ಮಾಡುತ್ತಿರಬೇಕು ಎಂದು ಎಲ್ಲರೂ ಭಾವಿಸಿದ್ದಾರೆ.

ಬಹುತೇಕ ಆಸ್ತಿಯನ್ನು ಪೋಷಕರ ಹೆಸರಲ್ಲಿಟ್ಟ ಚಾಲಾಕಿ ಹಾರ್ದಿಕ್!

ಮುಂಬಯಿ: ಆಲ್​ರೌಂಡರ್​ ಹಾರ್ದಿಕ್ ಪಾಂಡ್ಯ(Hardik Pandya) ಅವರು ಪತ್ನಿ, ಸರ್ಬಿಯಾದ ನಟಿ ನತಾಶಾ ಸ್ಟಾನ್‌ಕೋವಿಕ್‌(Natasa Stankovic) ಅವರಿಗೆ ವಿಚ್ಛೇದನ ನೀಡಿದರೆ(Hardik Pandya and Natasa Stankovic divorce) ಪತ್ನಿಗೆ ಜೀವನಾಂಶವಾಗಿ ತಮ್ಮ ಆಸ್ತಿಯಲ್ಲಿ ಶೇ. 70 ರಷ್ಟು ಭಾಗವನ್ನು ನೀಡಬೇಕಾಗಬಹುದು ಎಂದು ಹೇಳಲಾಗಿದೆ. ಆದರೆ, ಚಾಲಾಕಿ ಪಾಂಡ್ಯ ಅವರ ಬುದ್ಧಿವಂತಿಕೆಯಿಂದ ಪತ್ನಿಗೆ ನಯಾ ಪೈಸೆಯೂ ಸಿಗುವುದು ಅನುಮಾನ ಎನ್ನುವಂತಿದೆ.

ಅಹಮದಾಬಾದ್ ಮಿರರ್ ವರದಿ ಪ್ರಕಾರ, ವಿಚ್ಛೇದನದ ಸಂದರ್ಭದಲ್ಲಿ ಹಾರ್ದಿಕ್ ಪಾಂಡ್ಯ ತನ್ನ ಆಸ್ತಿಯಲ್ಲಿ ಶೇ. 70 ಪ್ರತಿಶತವನ್ನು ನತಾಶಾಗೆ ನೀಡಬೇಕಾಗಬಹುದು. ಏಕೆಂದರೆ ಪಾಂಡ್ಯ ಅವರ ಹೆಂಡತಿ ಸರ್ಬಿಯಾ ದೇಶದವರು. ಹೀಗಾಗಿ ಅವರು ಜೀವನಾಂಶವನ್ನು ಸರ್ಬಿಯನ್ ದಿನಾರ್​ನಲ್ಲಿ ಪಡೆದುಕೊಳ್ಳುವ ಸಾಧ್ಯತೆಯಿದೆ ಎನ್ನಲಾಗಿದೆ. ಆದರೆ ಇದು ಅಸಾಧ್ಯ ಎನ್ನುವಂತಿದೆ.

ಹೌದು, ಹಾರ್ದಿಕ್​ ಪಾಂಡ್ಯ ಅವರು ಮುಂಬೈಯಲ್ಲಿ ವಿಲಾಸಿ ಜೀವನ ನಡೆಸುತ್ತಿದ್ದರೂ ಕೂಡ ತಮ್ಮ ಹೆಸರಿನಲ್ಲಿ ಹೆಚ್ಚು ಆಸ್ತಿಯನ್ನು ಮಾಡಿಲ್ಲ. ಬಹುತೇಕ ಆಸ್ತಿಯನ್ನು ತನ್ನ ಪೋಷಕರ ಹೆಸರಿನಲ್ಲಿ ಮಾಡಿಟ್ಟಿದ್ದಾರೆ. ಈ ವಿಚಾರವನ್ನು ಪಾಂಡ್ಯ ಹಿಂದೊಮ್ಮೆ ಸಂದರ್ಶನದಲ್ಲಿ ಹೇಳಿದ್ದರು. ಈ ಸಂದರ್ಶನದಲ್ಲಿ ಮನಬಿಚ್ಚಿ ಮಾತನಾಡಿದ್ದ ಪಾಂಡ್ಯ, “ನಾನು ಜಾಹಿರಾತು, ಕ್ರಿಕೆಟ್​ ಸೇರಿ ಇನ್ನಿತರ ಮೂಲಗಳಿಂದ ಎಷ್ಟೇ ಹಣ ಸಂಪಾದಿಸಿದರೂ ಕೂಡ ಇದನೆಲ್ಲ ನನ್ನ ಹೆಸರಿನಲ್ಲಿ ಇಟ್ಟಿಲ್ಲ. ನನ್ನ ಬಳಿ ದುಬಾರಿ ಕಾರು, ಬಂಗಲೆ ಇದ್ದರೂ ಕೂಡ ಇದೆಲ್ಲ ನನ್ನ ಸಹೋದರ, ತಂದೆ ಮತ್ತು ತಾಯಿಯ ಹೆಸರಿನಲ್ಲಿದೆ. ಹೀಗಾಗಿ ನಾನು ಯಾವುದೇ ಸಮಸ್ಯೆ ಬಂದರೂ ಕೂಡ ಯಾರೀಗೂ ನನ್ನ ಆಸ್ತಿಯಲ್ಲಿ ಶೇ. 50ರಷ್ಟು ಜೀವನಾಂಶ ಕೊಡುವ ಪ್ರಮೇಯವೇ ಬರುವುದಿಲ್ಲ ಎಂದು ಹೇಳಿದ್ದರು. ಈ ವಿಡಿಯೊ ಈಗ ವೈರಲ್​ ಆಗಿದ್ದು ಪಾಂಡ್ಯಗೆ ಜೀವನದಲ್ಲಿ ಮುದೊಂದು ದಿನ ಪ್ರೇಯಸಿಯಿಂದ ದೋಖಾ ಎದುರಾಗುವ ಸುಳಿವು ಮೊದಲೇ ತಿಳಿದಿತ್ತಾ? ಎನ್ನುವ ನಿಗೂಡ ಪ್ರಶ್ನೆಯೊಂದು ಹುಟ್ಟಿಕೊಂಡಿದೆ.

Continue Reading

ಪ್ರಮುಖ ಸುದ್ದಿ

IPL 2024 : ಶಿಮ್ರೋನ್ ಹೆಟ್ಮಾಯರ್​ಗೆ ದೊಡ್ಡ ಮೊತ್ತದ ದಂಡ ವಿಧಿಸಿದ ಬಿಸಿಸಿಐ

IPL 2024 : ಅಭಿಷೇಕ್ ಶರ್ಮಾ ಅವರ ಅರೆಕಾಲಿಕ ಸ್ಪಿನ್ಗೆ ಔಟಾದ ನಂತರ, ಶಿಮ್ರಾನ್ ಹೆಟ್ಮೆಯರ್ ಹತಾಶೆಯಿಂದ ತಮ್ಮ ಬ್ಯಾಟ್ನಿಂದ ಸ್ಟಂಪ್​ಗಳ ಮೇಲೆ ಹೊಡೆದಿದ್ದರು. ಐಪಿಎಲ್ ನೀತಿ ಸಂಹಿತೆಯ ಪ್ರಕಾರ ಅವರು ಲೆವೆಲ್ 1 ಅಪರಾಧದಲ್ಲಿ ತಪ್ಪಿತಸ್ಥರೆಂದು ಕಂಡುಬಂದಿದೆ. ತಪ್ಪನ್ನು ಒಪ್ಪಿಕೊಂಡ ನಂತರ ಹೆಟ್ಮಾಯರ್​ಗೆ ಪಂದ್ಯದ ಶುಲ್ಕದ 10% ದಂಡ ವಿಧಿಸಲಾಗಿದೆ.

VISTARANEWS.COM


on

IPL 2024
Koo

ಬೆಂಗಳೂರು: ಐಪಿಎಲ್ 2024 ರ (IPL 2024) ಎರಡನೇ ಕ್ವಾಲಿಫೈಯರ್ ಪಂದ್ಯದಲ್ಲಿ ಸನ್​ರೈಸರ್ಸ್​ ಹೈದರಾಬಾದ್ (ಎಸ್ಆರ್ಹೆಚ್) ರಾಜಸ್ಥಾನ್ ರಾಯಲ್ಸ್ ವಿರುದ್ಧ 36 ರನ್​ಗಳಿಂದ ಜಯಗಳಿಸುವ ಮೂಲಕ ಐಪಿಎಲ್​ 2024ರ ಫೈನಲ್​ಗೇರಿದೆ. ಈ ಸೋಲಿನಿಂದ ರಾಜಸ್ಥಾನ್​ ತಂಡದ ಕಪ್ ಗೆಲ್ಲುವ ಆಸೆ ಕೊನೆಗೊಂಡಿದೆ. ಸೋಲಿನೊಂದಿಗೆ ಆ ತಂಡದ ಆಟಗಾರರು ಸಾಕಷ್ಟು ದುಃಖಕ್ಕೆ ಒಳಗಾಗಿದ್ದಾರೆ. ಅವರೆಲ್ಲರೂ ಒಂದೊಂದು ರೀತಿಯಲ್ಲಿ ನಿರಾಸೆ ವ್ಯಕ್ತಪಡಿಸುತ್ತಿದ್ದಾರೆ. ಏತನ್ಮಧ್ಯೆ, ಮೈದಾನದಲ್ಲಿ ಹತಾಶೆಗೆ ಒಳಗಾಗಿ ನಿಯಮ ಉಲ್ಲಂಘಿಸಿದ್ದಕ್ಕಾಗಿ ರಾಜಸ್ಥಾನ್ ರಾಯಲ್ಸ್ ತಂಡದ ಬ್ಯಾಟ್ಸ್ಮನ್ ಶಿಮ್ರಾನ್ ಹೆಟ್ಮಾಯರ್​​ಗೆ (Shimron Hetmyer) ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (BCCI) ದಂಡ ವಿಧಿಸಿದೆ.

ಅಭಿಷೇಕ್ ಶರ್ಮಾ ಅವರ ಅರೆಕಾಲಿಕ ಸ್ಪಿನ್ಗೆ ಔಟಾದ ನಂತರ, ಶಿಮ್ರಾನ್ ಹೆಟ್ಮೆಯರ್ ಹತಾಶೆಯಿಂದ ತಮ್ಮ ಬ್ಯಾಟ್ನಿಂದ ಸ್ಟಂಪ್​ಗಳ ಮೇಲೆ ಹೊಡೆದಿದ್ದರು. ಐಪಿಎಲ್ ನೀತಿ ಸಂಹಿತೆಯ ಪ್ರಕಾರ ಅವರು ಲೆವೆಲ್ 1 ಅಪರಾಧದಲ್ಲಿ ತಪ್ಪಿತಸ್ಥರೆಂದು ಕಂಡುಬಂದಿದೆ. ತಪ್ಪನ್ನು ಒಪ್ಪಿಕೊಂಡ ನಂತರ ಹೆಟ್ಮಾಯರ್​ಗೆ ಪಂದ್ಯದ ಶುಲ್ಕದ 10% ದಂಡ ವಿಧಿಸಲಾಗಿದೆ.

ಇದನ್ನೂ ಓದಿ: Gautam Gambhir : ಗಂಭೀರ್​ ಟೀಮ್​ ಇಂಡಿಯಾ ಕೋಚ್ ಆಗದಂತೆ ತಡೆಯುತ್ತಿದ್ದಾರೆಯೇ ಶಾರುಖ್?

ಚೆನ್ನೈನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ಮೇ 24 ರಂದು ನಡೆದ ಸನ್ರೈಸರ್ಸ್ ಹೈದರಾಬಾದ್ ವಿರುದ್ಧದ ಟಾಟಾ ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 2024 ರ ಕ್ವಾಲಿಫೈಯರ್ 2ರ ಸಂದರ್ಭದಲ್ಲಿ ಐಪಿಎಲ್ ನೀತಿ ಸಂಹಿತೆ ಉಲ್ಲಂಘಿಸಿದ್ದಕ್ಕಾಗಿ ರಾಜಸ್ಥಾನ್ ರಾಯಲ್ಸ್​ನ ಶಿಮ್ರಾನ್ ಹೆಟ್ಮಾಯರ್​ಗೆ ಪಂದ್ಯದ ಶುಲ್ಕದ ಶೇಕಡಾ 10 ರಷ್ಟು ದಂಡ ವಿಧಿಸಲಾಗಿದೆ ಎಂದು ಬಿಸಿಸಿಐ ಬಿಡುಗಡೆ ಮಾಡಿದ ಹೇಳಿಕೆಯಲ್ಲಿ ತಿಳಿಸಿದೆ.

ಭಾರತದ ಮಾಜಿ ವೇಗಿ ಜಾವಗಲ್ ಶ್ರೀನಾಥ್ ದಂಡ ವಿಧಿಸಿದ್ದಾರೆ. ಬಿಸಿಸಿಐ ನಿಖರವಾದ ಕಾರಣವನ್ನು ನಿರ್ದಿಷ್ಟಪಡಿಸದಿದ್ದರೂ ಔಟಾದ ನಂತರ ಹೆಟ್ಮೆಯರ್ ಅವರ ಪ್ರತಿಕ್ರಿಯೆ ಬಹುಶಃ ಕಾರಣವಾಗಿರಬಹುದು ಎಂದು ವರದಿ ಮಾಡಲಾಗಿದೆ.

ನಿರ್ಣಾಯಕ ಪರಿಸ್ಥಿತಿಯಲ್ಲಿ ಹೆಟ್ಮೆಯರ್ ಔಟಾಗಿದ್ದರು. ಕ್ರೀಸ್​ನಲ್ಲಿ ಅವರಿದ್ದಿದ್ದರೆ ಪಂದ್ಯ ಆರ್​ಆರ್​ ಪರವಾಗಿರುತ್ತಿತ್ತು.

ಟಾಸ್ ಗೆದ್ದ ಆರ್​ಆರ್​​ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿತು. ಇಬ್ಬನಿ ಅಂಶವನ್ನು ಲಾಭ ಮಾಡಿಕೊಳ್ಳುವ ಭರವಸೆಯಲ್ಲಿದ್ದರು. ಆದರೆ, ರಾಹುಲ್ ತ್ರಿಪಾಠಿ (15 ಎಸೆತಗಳಲ್ಲಿ 37 ರನ್) ಮತ್ತು ಹೆನ್ರಿಕ್ ಕ್ಲಾಸೆನ್ (34 ಎಸೆತಗಳಲ್ಲಿ 50 ರನ್) ಅವರ ನಿರ್ಣಾಯಕ ಕೊಡುಗೆಗಳೊಂದಿಗೆ ಎಸ್ಆರ್ಹೆಚ್ 20 ಓವರ್​ಗಳಲ್ಲಿ 9 ವಿಕೆಟ್ ನಷ್ಟಕ್ಕೆ 175 ರನ್ ಗಳಿಸಿತು.

ಪ್ರತಿಕ್ರಿಯೆಯಾಗಿ, ಎಸ್ಆರ್​ಎಚ್​ ಸ್ಪಿನ್ ದಾಳಿಯ ವಿರುದ್ಧ ಆರ್​ಆರ್​ ಹೆಣಗಾಡಿತು. ಇಬ್ಬನಿಯ ಕೊರತೆಯು ಎಸ್ಆರ್​ಎಚ್​​ ಪರವಾಗಿ ಕೆಲಸ ಮಾಡಿತು. 35 ಎಸೆತಗಳಲ್ಲಿ 56 ರನ್ ಗಳಿಸಿದ ಜುರೆಲ್ ಅವರ ದಿಟ್ಟ ಪ್ರಯತ್ನದ ಹೊರತಾಗಿಯೂ, ಆರ್​ಆರ್​ 20 ಓವರ್​ಗಳಲ್ಲಿ 7 ವಿಕೆಟ್ ನಷ್ಟಕ್ಕೆ 139 ರನ್ ಗಳಿಸಲಷ್ಟೇ ಶಕ್ತವಾಯಿತು.

Continue Reading

ಆಟೋಮೊಬೈಲ್

Jawa Yezdi : ಜಾವಾ ಯೆಜ್ಡಿ ಮೋಟಾರ್‌ಸೈಕಲ್ಸ್ ನ ಜಾವಾ 42 ಬಾಬರ್ ರೆಡ್ ಶೀನ್‌ ಬಿಡುಗಡೆ

Jawa Yezdi : ಫ್ಯಾಷನ್, ಸಂಗೀತ ಮತ್ತು ಕಲೆಯೊಂದಿಗೆ ಆಚರಿಸುವ ಎವೈಸಿಎಸ್ ಫೆಸ್ಟಿವಲ್ ನಲ್ಲಿ ನಡೆದ ಬಿಡುಗಡೆ ಕಾರ್ಯಕ್ರಮವು ರೋಮಾಂಚಕ ಜೀವನಶೈಲಿ ಮತ್ತು ಮೋಟಾರ್‌ಸೈಕ್ಲಿಂಗ್ ಪೋಷಿಸುವ ಜಾವಾ ಯೆಜ್ಡಿ ಮೋಟಾರ್‌ಸೈಕಲ್‌ನ ಬದ್ಧತೆಗೆ ಸಾಕ್ಷಿಯಾಗಿದೆ.

VISTARANEWS.COM


on

Jawa Yezdi
Koo

ಬೆಂಗಳೂರು: ಕಾರ್ಯಕ್ಷಮತೆ- ಕ್ಲಾಸಿಕ್ ಮೋಟಾರ್‌ಸೈಕಲ್‌ಗಳಿಗೆ ಹೆಸರುವಾಸಿಯಾಗಿರುವ ಪ್ರಮುಖ ಬೈಕ್ ತಯಾರಕರಾದ ಜಾವಾ ಯೆಜ್ಡಿ (Jawa Yezdi) ಮೋಟಾರ್‌ ಸೈಕಲ್ಸ್ ಇಂದು ಮುಂಬೈನಲ್ಲಿ ನಡೆದ ಆಲ್ ಯು ಕ್ಯಾನ್ ಸ್ಟ್ರೀಟ್ ಫೆಸ್ಟಿವಲ್ (ಎವೈಸಿಎಸ್) ನಲ್ಲಿ ಅತ್ಯಾಕರ್ಷಕವಾದ ಜಾವಾ 42 ಬಾಬರ್ ರೆಡ್ ಶೀನ್ ಅನ್ನು ಬಿಡುಗಡೆ ಮಾಡಿದೆ. ರೂ.2.29 ಲಕ್ಷ ಬೆಲೆಯನ್ನು (ಎಕ್ಸ್ ಶೋ ರೂಂ ದೆಹಲಿ) ಹೊಂದಿರುವ ಮತ್ತು ವೇರಿಯಂಟ್ ಗಳಲ್ಲಿ ಅಗ್ರ ಸ್ಥಾನ ಪಡೆದಿರುವ ರೆಡ್ ಶೀನ್ ಜನಪ್ರಿಯ ಬ್ಲ್ಯಾಕ್ ಮಿರರ್ ಎಡಿಷನ್ ಗೆ ಹೊಸ ಸೇರ್ಪಡೆ ಆಗಿದೆ.

ಫ್ಯಾಷನ್, ಸಂಗೀತ ಮತ್ತು ಕಲೆಯೊಂದಿಗೆ ಆಚರಿಸುವ ಎವೈಸಿಎಸ್ ಫೆಸ್ಟಿವಲ್ ನಲ್ಲಿ ನಡೆದ ಬಿಡುಗಡೆ ಕಾರ್ಯಕ್ರಮವು ರೋಮಾಂಚಕ ಜೀವನಶೈಲಿ ಮತ್ತು ಮೋಟಾರ್‌ಸೈಕ್ಲಿಂಗ್ ಪೋಷಿಸುವ ಜಾವಾ ಯೆಜ್ಡಿ ಮೋಟಾರ್‌ಸೈಕಲ್‌ನ ಬದ್ಧತೆಗೆ ಸಾಕ್ಷಿಯಾಗಿದೆ.

ಜಾವಾ 42 ಬಾಬರ್‌ನ ಯಶಸ್ಸಿನ ಬಳಿಕ ಜಾವಾ ಯೆಜ್ಡಿ ಮೋಟಾರ್‌ಸೈಕಲ್ಸ್ ಕಂಪನಿಯು ಜಾವಾ 42 ರೆಡ್ ಶೀನ್ ಮೂಲಕ ತನ್ನ ಬಾಬರ್ ವಿಭಾಗದ ನಾಯಕತ್ವವನ್ನು ಗಟ್ಟಿಗೊಳಿಸುವ ಉದ್ದೇಶ ಹೊಂದಿದೆ. ಆಕರ್ಷಕವಾದ ಕೆಂಪು ಬಣ್ಣದ ಫ್ಯುಯಲ್ ಟ್ಯಾಂಕ್ ಅನ್ನು ಹೊಂದಿರುವ ಈ ಹೊಸ ವೇರಿಯಂಟ್ ಬೋಲ್ಡ್ ಆಗಿದೆ ಮತ್ತು ವಿಶಿಷ್ಟ ರೀತಿಯ ರೈಡ್ ಆನಂದಿಸುವ ಕಿರಿ ವಯಸ್ಸಿನ ಸವಾರರ ಗಮನ ಸೆಳೆಯಲೆಂದೇ ವಿನ್ಯಾಸ ಮಾಡಲಾಗಿದೆ.

ವಿನ್ಯಾಸ ಹೇಗಿದೆ?

ರೆಡ್ ಶೀನ್ ಬೈಕ್ ಅಪೂರ್ವವಾದ ಕ್ರೋಮ್ ಫಿನಿಶ್ ಹೊಂದಿರುವ ಟ್ಯಾಂಕ್ ಮತ್ತು ಡೈಮಂಡ್- ಕಟ್ ಅಲಾಯ್ ವೀಲ್ ಗಳನ್ನು ಹೊಂದಿದೆ. ಜೊತೆಗೆ ಈ ಬೈಕ್ ಟ್ಯೂಬ್‌ಲೆಸ್ ಟೈರ್‌ಗಳನ್ನು ಹೊಂದಿದೆ. ಇದರ ಶಕ್ತಿಶಾಲಿ 334 ಸಿಸಿ ಲಿಕ್ವಿಡ್-ಕೂಲ್ಡ್ ಎಂಜಿನ್ 29.9 ಪಿಎಸ್ ಮತ್ತು 30ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುವ ಸಾಮರ್ಥ್ಯ ಹೊಂದಿದೆ. ಮೃದುವಾದ ಮತ್ತು ನಿಖರವಾದ ಆರು-ಸ್ಪೀಡ್ ಗೇರ್‌ಬಾಕ್ಸ್‌ ಅನ್ನು ಈ ಬೈಕ್ ಹೊಂದಿದೆ. ಅಸಿಸ್ಟ್ ಆ್ಯಂಡ್​ ಸ್ಲಿಪ್ ಕ್ಲಚ್, ಏಳು- ಹಂತದ ಪ್ರೀ- ಲೋಡ್ ಅಡ್ಜಸ್ಟೇಬಲ್ ರೇರ್ ಮೊನೊ- ಶಾಕ್, ಎರಡು- ಹಂತದ ಅಡ್ಜಸ್ಟೇಬಲ್ ಸೀಟ್, ಯುಎಸ್‌ಬಿ ಚಾರ್ಜಿಂಗ್ ಪೋರ್ಟ್, ಡಿಜಿಟಲ್ ಕನ್ಸೋಲ್ ಮತ್ತು ಪೂರ್ಣ ಎಲ್ಇಡಿ ಲೈಟಿಂಗ್ ಅನ್ನು ಒದಗಿಸುವ ಮೂಲಕ ರೈಡರ್ ಗಳಿಗೆ ಉತ್ತಮ ಸೌಕರ್ಯವನ್ನು ಒದಗಿಸಲಾಗಿದೆ.

ಜಾವಾ 42 ಬಾಬರ್ ಅದ್ಭುತವಾದ ಯಶಸ್ಸನ್ನು ಕಂಡಿದೆ ಮತ್ತು ರೆಡ್ ಶೀನ್‌ ಅನ್ನು ಪರಿಚಯ ಮಾಡುವ ಮೂಲಕ ನಮ್ಮ ಕುಟುಂಬವನ್ನು ವಿಸ್ತರಣೆ ಮಾಡಲು ನಾವು ಸಂತೋಷ ಹೊಂದಿದ್ದೇವೆ ಎಂದು ಜಾವಾ ಯೆಜ್ಡಿ ಮೋಟಾರ್‌ಸೈಕಲ್ಸ್ ಸಿಇಓ ಆಶಿಶ್ ಸಿಂಗ್ ಜೋಶಿ ಹೇಳಿದ್ದಾರೆ. ಮಾತು ಮುಂದುವರಿಸುತ್ತಾ ಅವರು, “ಈ ಅತ್ಯಾಕರ್ಷಕ ವೇರಿಯಂಟ್ ಬಾಬರ್ ವಿಭಾಗಕ್ಕೆ ಅತ್ಯಪೂರ್ವ ಶಕ್ತಿ ಮತ್ತು ಹುಮ್ಮಸ್ಸನ್ನು ತುಂಬಲಿದೆ. ತಮ್ಮ ವಿಶೇಷತೆಯನ್ನು ಪ್ರತಿಬಿಂಬಿಸುವ ಮೋಟಾರ್‌ಸೈಕಲ್ ಗೆ ಹಂಬಲಿಸುವ ಹೊಸ ತಲೆಮಾರಿನ ಸವಾರರಿಗಾಗಿ ಈ ಬೈಕ್ ಅನ್ನು ವಿನ್ಯಾಸ ಗೊಳಿಸಲಾಗಿದೆ. ಆಲ್ ಯು ಕ್ಯಾನ್ ಸ್ಟ್ರೀಟ್ ಫೆಸ್ಟಿವಲ್‌ನಲ್ಲಿ ಬಿಡುಗಡೆ ಮಾಡುವುದರ ಮೂಲಕ ಜಾವಾ ಯೆಜ್ಡಿ ಮೋಟಾರ್‌ಸೈಕಲ್ಸ್ ನ ಸ್ವಯಂ ಅಭಿವ್ಯಕ್ತಿ ಮತ್ತು ರೈಡ್ ಮೇಲಿನ ಪ್ರೀತಿಯನ್ನು ಆಚರಿಸುವ ಸಂಸ್ಕೃತಿಯನ್ನು ಪೋಷಣೆ ಮಾಡುವ ಬದ್ಧತೆಯು ಸಾಕಾರಗೊಂಡಿದೆ” ಎಂದು ಹೇಳಿದರು.

ಇದನ್ನೂ ಓದಿ: Magnite GEZA CVT : ಮ್ಯಾಗ್ನೈಟ್ ಗೆಝಾ ಸಿವಿಟಿ ಸ್ಪೆಷಲ್ ಎಡಿಷನ್ ಬಿಡುಗಡೆ ಮಾಡಿದ ನಿಸ್ಸಾನ್

42 ಬಾಬರ್ ರೆಡ್ ಶೀನ್ ಬಿಡುಗಡೆ ಮಾಡುವ ಮೂಲಕ ಕಂಪನಿಯು ಅತ್ಯಾಧುನಿಕ ಶೈಲಿ ಮತ್ತು ಕಾಲಾತೀತ ಪರಂಪರೆ ಎರಡನ್ನೂ ಹೊಂದಿರುವ ಮೋಟಾರ್‌ಸೈಕಲ್ ಅನ್ನು ಬಯಸುವ ಜೆನ್- ಝಡ್ ಗ್ರಾಹಕರಿಂದ ಅಪಾರ ಆಸಕ್ತಿಯನ್ನು ನಿರೀಕ್ಷೆ ಮಾಡುತ್ತಿದೆ. ಬೀದಿಗಳಲ್ಲಿ ಚಲಿಸುವ ತಮ್ಮ ಬೈಕ್ ಅನ್ನು ತಿರುಗಿ ನೋಡಬೇಕು ಎಂದು ಬಯಸುವ ಸವಾರರಿಗೆ ರೆಡ್ ಶೀನ್ ಅತ್ಯುತ್ತಮ ಆಯ್ಕೆಯಾಗಿದೆ. ಜಾವಾ 42 ಬಾಬರ್ ಜೊತೆಗೆ ಇತ್ತೀಚೆಗೆ ಪರಿಷ್ಕರಣೆ ಮಾಡಿದ ಜಾವಾ ಪೆರಾಕ್ ಮೂಲಕ ಜಾವಾ ಯೆಜ್ಡಿ ಮೋಟಾರ್‌ಸೈಕಲ್ಸ್ ಪ್ರಸ್ತುತ ‘ಫ್ಯಾಕ್ಟರಿ ಕಸ್ಟಮ್’ ಪೋರ್ಟ್ ಪೋಲಿಯೋವನ್ನು ಒದಗಿಸುತ್ತಿದೆ. ಅವುಗಳೊಂದಿಗೆ ಜಾವಾ 350, ಜಾವಾ 42, ಯೆಜ್ಡಿ ರೋಡ್‌ಸ್ಟರ್, ಯೆಜ್ಡಿ ಸ್ಕ್ರ್ಯಾಂಬ್ಲರ್ ಮತ್ತು ಯೆಜ್ಡಿ ಅಡ್ವೆಂಚರ್ ಅನ್ನು ಒಳಗೊಂಡಿರುವ ಆಕರ್ಷಕ ಉತ್ಪನ್ನ ಶ್ರೇಣಿಯನ್ನು ಕಂಪನಿಯು ಗ್ರಾಹಕರಿಗೆ ಒದಗಿಸುತ್ತಿದೆ.

ಜಾವಾ ಪೆರಾಕ್ ಮತ್ತು ವಿವಿಧ ಜಾವಾ 42 ಬಾಬರ್ ವೇರಿಯಂಟ್ ಗಳ (ಎಕ್ಸ್ ಶೋ ರೂಂ ದೆಹಲಿ) ಬೆಲೆ ಈ ಕೆಳಗಿನಂತಿದೆ:

  • ಜಾವಾ ಪೆರಾಕ್: ರೂ. 2,13,187
  • ಜಾವಾ 42 ಬಾಬರ್ – ಮೂನ್‌ಸ್ಟೋನ್ ವೈಟ್: ರೂ 2,09,500
  • ಜಾವಾ 42 ಬಾಬರ್ – ಮಿಸ್ಟಿಕ್ ಕಾಪರ್ ಸ್ಪೋಕ್ ವೀಲ್: ರೂ 2,12,500
  • ಜಾವಾ 42 ಬಾಬರ್ – ಮಿಸ್ಟಿಕ್ ಕಾಪರ್ ಅಲಾಯ್ ವೀಲ್: ರೂ 2,18,900
  • ಜಾವಾ 42 ಬಾಬರ್ – ಜಾಸ್ಪರ್ ರೆಡ್ ಡ್ಯುಯಲ್ ಟೋನ್ ಸ್ಪೋಕ್ ವೀಲ್: ರೂ 2,15,187
  • ಜಾವಾ 42 ಬಾಬರ್ – ಜಾಸ್ಪರ್ ರೆಡ್ ಡ್ಯುಯಲ್ ಟೋನ್ ಅಲಾಯ್ ವೀಲ್: ರೂ 2,19,950
  • ಜಾವಾ 42 ಬಾಬರ್ – ಬ್ಲ್ಯಾಕ್ ಮಿರರ್: ರೂ. 2,29,500
  • ಹೊಸ ಜಾವಾ 42 ಬಾಬರ್ -ರೆಡ್ ಶೀನ್: ರೂ. 2,29,500
Continue Reading
Advertisement
IT Raid
ದೇಶ1 min ago

IT Raid: ಚಿನ್ನದ ವ್ಯಾಪಾರಿಗಳಿಗೆ ಐಟಿ ಶಾಕ್‌; ಬೆಳ್ಳಂಬೆಳಗ್ಗೆ ರೇಡ್‌, ಕೋಟಿ ಕೋಟಿ ಹಣ ಜಪ್ತಿ!

Udupi Gang War
ಕರ್ನಾಟಕ9 mins ago

Udupi Gang War: ಉಡುಪಿ ಗ್ಯಾಂಗ್ ವಾರ್ ಪ್ರಕರಣ; ಮತ್ತೆ ಮೂವರು ಆರೋಪಿಗಳ ಬಂಧನ

T20 World Cup 2024
ಕ್ರೀಡೆ19 mins ago

T20 World Cup 2024: ನ್ಯೂಯಾರ್ಕ್​ಗೆ ಪ್ರಯಾಣಿಸಿದ ಮೊದಲ ಬ್ಯಾಚ್​; ವಿರಾಟ್​ ಕೊಹ್ಲಿ ಗೈರು, ಅಭ್ಯಾಸ ಪಂದ್ಯಕ್ಕೂ ಅನುಮಾನ

Road Accident in Bengaluru
ಕ್ರೈಂ21 mins ago

Road Accident : ಕಾರು ಡ್ರೈವಿಂಗ್‌ ಕಲಿಯುವಾಗ ಬ್ರೇಕ್‌ ಬದಲು ಎಕ್ಸಿಲೇಟರ್‌ ತುಳಿದಳು; ಡೆಡ್ಲಿ ಆಕ್ಸಿಡೆಂಟ್‌ಗೆ ಬಾಲಕಿ ಬಲಿ

Teenage boy arrested
ಕ್ರೈಂ35 mins ago

Teenage Boy Arrested: ತನ್ನನ್ನು ಅತ್ಯಾಚಾರ ಮಾಡಿ ಬ್ಲ್ಯಾಕ್ ಮೇಲ್ ಮಾಡುತ್ತಿದ್ದವನನ್ನು ಕೊಂದ ಬಾಲಕ!

Janhvi Kapoor on paparazzi culture
ಬಾಲಿವುಡ್42 mins ago

Janhvi Kapoor: ಪಾಪರಾಜಿಗಳ ಅಸಲಿ ಮುಖ ರಿವೀಲ್‌ ಮಾಡಿದ ಜಾನ್ವಿ ಕಪೂರ್!

Gold Rate Today
ಕರ್ನಾಟಕ47 mins ago

Gold Rate Today: ಇಂದೂ ಯಥಾಸ್ಥಿತಿ ಕಾಯ್ದುಕೊಂಡ ಚಿನ್ನ, ಬೆಳ್ಳಿ ದರ

Tiger attack
ಮೈಸೂರು1 hour ago

Tiger Attack : ಮೈಸೂರಲ್ಲಿ ಹುಲಿ ದಾಳಿ; ಮಹಿಳೆಯನ್ನು ಹೊತ್ತೊಯ್ದು ಕೊಂದ ವ್ಯಾಘ್ರ

IPL 2024 Final
ಕ್ರೀಡೆ1 hour ago

IPL 2024 Final: ಐಪಿಎಲ್​ ವಿನ್ನರ್​ & ರನ್ನರ್​ಗೆ ಸಿಗುವ ಮೊತ್ತವೆಷ್ಟು? ಈ ಬಾರಿ ಆರೆಂಜ್​ ಕ್ಯಾಪ್​, ಪರ್ಪಲ್​ ಕ್ಯಾಪ್​ ಯಾರಿಗೆ ಸಿಗಲಿದೆ?

Cyclone Remal
ದೇಶ1 hour ago

Cyclone Remal: ರೆಮಲ್‌ ಚಂಡ ಮಾರುತದ ಅಬ್ಬರ ಶುರು; ಬಾಂಗ್ಲಾದೇಶ, ಪ.ಬಂಗಾಳ ಸೇರಿದಂತೆ ಹಲವಡೆ ಭಾರೀ ಮಳೆ, ಭೂಕುಸಿತ ಸಾಧ್ಯತೆ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ21 hours ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ3 days ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ4 days ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ5 days ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು5 days ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

Contaminated Water
ಮೈಸೂರು5 days ago

Contaminated Water : ಡಿ ಸಾಲುಂಡಿಯಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದ ಯುವಕ ಸಾವು

Karnataka Rain
ಮಳೆ6 days ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Rain
ಮಳೆ7 days ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ7 days ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ7 days ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

ಟ್ರೆಂಡಿಂಗ್‌