ಗುಜರಾತ್​ ಮುಖ್ಯಮಂತ್ರಿ ಅಭ್ಯರ್ಥಿ ಹೆಸರು ಘೋಷಿಸಿದ ಆಮ್​ ಆದ್ಮಿ ಪಾರ್ಟಿ; ಶ್ರೀಕೃಷ್ಣನ ಕೃಪೆಯಿದೆ ಎಂದ ಅರವಿಂದ್ ಕೇಜ್ರಿವಾಲ್​ - Vistara News

ದೇಶ

ಗುಜರಾತ್​ ಮುಖ್ಯಮಂತ್ರಿ ಅಭ್ಯರ್ಥಿ ಹೆಸರು ಘೋಷಿಸಿದ ಆಮ್​ ಆದ್ಮಿ ಪಾರ್ಟಿ; ಶ್ರೀಕೃಷ್ಣನ ಕೃಪೆಯಿದೆ ಎಂದ ಅರವಿಂದ್ ಕೇಜ್ರಿವಾಲ್​

ಈ ಹಿಂದೆ ಪಂಜಾಬ್​ ಚುನಾವಣೆ ಸಂದರ್ಭದಲ್ಲಿ, ಅಲ್ಲಿನ ಮುಖ್ಯಮಂತ್ರಿ ಅಭ್ಯರ್ಥಿ ಆಯ್ಕೆಯನ್ನು ಜನರಿಗೇ ಬಿಟ್ಟಿದ್ದರು. ಒಂದು ಫೋನ್​ ನಂಬರ್​ ಕೊಟ್ಟು, ಎಸ್​ಎಂಎಸ್​ ಮೂಲಕ ನಿಮ್ಮ ಸಿಎಂ ಅಭ್ಯರ್ಥಿಯನ್ನು ನೀವೇ ಆಯ್ಕೆ ಮಾಡಿಕೊಳ್ಳಿ ಎಂಬ ವಿಶೇಷ ಪ್ರಯೋಗ ಮಾಡಿದ್ದರು. ಅದೇ ಪ್ರಯೋಗವನ್ನು ಗುಜರಾತ್​ನಲ್ಲಿಯೂ ಆಪ್​ ಮಾಡಿತ್ತು.

VISTARANEWS.COM


on

AAP Announce Gujarat Chief Minister candidate
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವ ದೆಹಲಿ: ಆಮ್​ ಆದ್ಮಿ ಪಕ್ಷ ಗುಜರಾತ್​ ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಿಕೊಂಡಿದ್ದು, ಅಲ್ಲಿ ಈಗ ಆಡಳಿತದಲ್ಲಿರುವ ಬಿಜೆಪಿಯನ್ನು ಹೇಗಾದರೂ ಸೋಲಿಸಿ, ಅಧಿಕಾರಕ್ಕೆ ಏರುವ ನಿಟ್ಟಿನಲ್ಲಿ ಆಪ್​ ತಂತ್ರ ಹೂಡುತ್ತಿದೆ. ಡಿ.1 ಮತ್ತು 5ರಂದು ಎರಡು ಹಂತದಲ್ಲಿ ಗುಜರಾತ್ ಚುನಾವಣೆ ನಡೆಯಲಿದ್ದು, ಡಿ.8ಕ್ಕೆ ಮತ ಎಣಿಕೆ ನಡೆಯಲಿದೆ. ಆಪ್​ ಮುಖ್ಯಸ್ಥ, ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್​ ಈಗಾಗಲೇ ಐದಾರು ಬಾರಿ ಗುಜರಾತ್​ಗೆ ಭೇಟಿ ನೀಡಿ, ಅಲ್ಲಿನ ಜನರಿಗೆ ವಿವಿಧ ಭರವಸೆಗಳನ್ನು ನೀಡಿದ್ದಾರೆ. ಹಾಗೇ, ಇಂದು ಗುಜರಾತ್​ನಲ್ಲಿ ತಮ್ಮ ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿ ಯಾರೆಂಬುದನ್ನೂ ಘೋಷಿಸಿದ್ದಾರೆ.

ಈ ಹಿಂದೆ ಪಂಜಾಬ್​ ಚುನಾವಣೆ ಸಂದರ್ಭದಲ್ಲಿ, ಅಲ್ಲಿನ ಮುಖ್ಯಮಂತ್ರಿ ಅಭ್ಯರ್ಥಿ ಆಯ್ಕೆಯನ್ನು ಜನರಿಗೇ ಬಿಟ್ಟಿದ್ದರು. ಒಂದು ಫೋನ್​ ನಂಬರ್​ ಕೊಟ್ಟು, ಎಸ್​ಎಂಎಸ್​ ಮೂಲಕ ನಿಮ್ಮ ಸಿಎಂ ಅಭ್ಯರ್ಥಿಯನ್ನು ನೀವೇ ಆಯ್ಕೆ ಮಾಡಿಕೊಳ್ಳಿ ಎಂಬ ವಿಶೇಷ ಪ್ರಯೋಗ ಮಾಡಿದ್ದರು. ಜನರೇ ಆಯ್ಕೆ ಮಾಡಿದ್ದ ಭಗವಂತ್​ ಮಾನ್​ರನ್ನೇ ಸಿಎಂ ಅಭ್ಯರ್ಥಿಯನ್ನಾಗಿ ಘೋಷಿಸಿದ್ದರು. ಅದೇ ಪ್ರಯೋಗವನ್ನು ಅರವಿಂದ್​ ಕೇಜ್ರಿವಾಲ್​ ಗುಜರಾತ್​​ನಲ್ಲೂ ಅನುಷ್ಠಾನಕ್ಕೆ ತಂದಿದ್ದರು. ಇಲ್ಲಿಯೂ ಸಿಎಂ ಅಭ್ಯರ್ಥಿ ಆಯ್ಕೆಯನ್ನು ಜನರಿಗೆ ಬಿಟ್ಟಿದ್ದರು. ಹೀಗೆ ಜನರ ಆಯ್ಕೆ ಪ್ರಕ್ರಿಯೆ ಮುಕ್ತಾಯವಾಗಿದ್ದು, ‘ಇಸುಧಾನ್ ಗಢವಿ’ ಅವರನ್ನು ಗುಜರಾತ್​ ಮುಖ್ಯಮಂತ್ರಿ ಅಭ್ಯರ್ಥಿ ಎಂದು ಇಂದು ಕೇಜ್ರಿವಾಲ್ ಘೋಷಿಸಿದ್ದಾರೆ. ಇಸುಧಾನ್​ ಗಢವಿ ಅವರು ಶ್ರೀಕೃಷ್ಣನ ಭೂಮಿಯಾದ ‘ದ್ವಾರಕಾ’ ದಿಂದ ಚುನಾವಣೆಯಲ್ಲಿ ಸ್ಪರ್ಧೆಗೆ ಇಳಿಯಲಿದ್ದಾರೆ.

ಇಸುಧಾನ್​ ಗಢವಿ ಅವರು ಹಲವು ವರ್ಷಗಳಿಂದಲೂ ನಿರುದ್ಯೋಗ ಸಮಸ್ಯೆ ವಿರುದ್ಧ, ರೈತರ ಅಭಿವೃದ್ಧಿಗಾಗಿ ಹೋರಾಟ ಮಾಡುತ್ತಲೇ ಬಂದಿದ್ದಾರೆ. ಇವರು ದ್ವಾರಕಾ ಜಿಲ್ಲೆಯ ಕಂಭಾಲಿಯಾದಿಂದ ಈ ಸಲ ಚುನಾವಣೆಯಲ್ಲಿ ಸ್ಪರ್ಧಿಸಲಿದ್ದಾರೆ. ಅದು ಭಗವಾನ್​ ಶ್ರೀಕೃಷ್ಣ ನೆಲೆಸಿದ್ದ ಭೂಮಿ. ಇವರು ಖಂಡಿತ ಗೆಲ್ಲುತ್ತಾರೆ ಮತ್ತು ಗುಜರಾತ್​ಗೆ ಒಬ್ಬ ಸಮರ್ಥ ಮುಖ್ಯಮಂತ್ರಿ ಸಿಗುತ್ತಾರೆ ಎಂದು ಅರವಿಂದ್ ಕೇಜ್ರಿವಾಲ್​ ಟ್ವೀಟ್ ಮಾಡಿದ್ದಾರೆ.

ಇದನ್ನೂ ಓದಿ: ಹಿಮಾಚಲ ಪ್ರದೇಶ, ಗುಜರಾತ್​​ನಲ್ಲಿ​ ಚುನಾವಣೋತ್ತರ ಸಮೀಕ್ಷೆ ನಡೆಸುವಂತಿಲ್ಲ: ಚುನಾವಣಾ ಆಯೋಗದ ಆದೇಶ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

Latest

Spoken Language: ವಿಶ್ವದಲ್ಲಿ ಅತೀ ಹೆಚ್ಚು ಮಾತನಾಡುವ ಭಾಷೆಗಳಲ್ಲಿ ಹಿಂದಿ ಯಾವ ಸ್ಥಾನದಲ್ಲಿದೆ ಗೊತ್ತೆ?

ವಿಶ್ವದ ಜನಸಂಖ್ಯೆಯ ಸುಮಾರು ಶೇ. 88ರಷ್ಟು ಮಂದಿ ಹೆಚ್ಚಾಗಿ ಮಾತನಾಡುವ (Spoken Language) ಟಾಪ್ 10 ಭಾಷೆಗಳು ಪಟ್ಟಿಯಲ್ಲಿ ಭಾರತೀಯ ಭಾಷೆಗಳು ಸೇರಿವೆ. ಅವುಗಳು ಯಾವುದು ಗೊತ್ತೇ? ಈ ಕುರಿತು ಇಲ್ಲಿದೆ ಕುತೂಹಲಕರ ವರದಿ.

VISTARANEWS.COM


on

By

Spoken Language
Koo

ಸಂವಹನಕ್ಕಾಗಿ ಭಾಷೆಯು (Spoken Language) ಅತ್ಯಗತ್ಯ ಸಾಧನವಾಗಿದೆ. ಇದು ವ್ಯಕ್ತಿಗಳ ನಡುವೆ ಸಂಪರ್ಕ ಕೊಂಡಿಯಾಗಿ ಕಾರ್ಯನಿರ್ವಹಿಸುತ್ತದೆ. ಆಲೋಚನೆಗಳು, ಭಾವನೆಗಳು ಮತ್ತು ಮಾಹಿತಿಗಳನ್ನು ವಿನಿಮಯ ಗೊಳಿಸುವುದನ್ನು ಭಾಷೆ ಸುಲಭಗೊಳಿಸುತ್ತದೆ. ವಿಶ್ವದಾದ್ಯಂತ (world) ಪ್ರಸ್ತುತ 7,000ಕ್ಕೂ ಹೆಚ್ಚು ಭಾಷೆಗಳಿವೆ, ಪ್ರತಿಯೊಂದು ಭಾಷೆಗೂ ಅದರದ್ದೇ ಆದ ವೈಶಿಷ್ಟ್ಯಗಳಿವೆ.

ಜಾಗತಿಕವಾಗಿ ಸಾವಿರಾರು ಭಾಷೆಗಳಿದ್ದರೂ ವಿಶ್ವದ ಜನಸಂಖ್ಯೆಯ ಅರ್ಧಕ್ಕಿಂತ ಹೆಚ್ಚು ಜನರು ಕೇವಲ ಕೆಲವೇ ಭಾಷೆಗಳನ್ನು ಮಾತನಾಡುತ್ತಾರೆ. ಇವುಗಳನ್ನು ಸಾಮಾನ್ಯವಾಗಿ ವ್ಯಾಪಾರ, ರಾಜಕೀಯ ಮತ್ತು ಮಾಧ್ಯಮಕ್ಕಾಗಿ ಬಳಸಲಾಗುತ್ತದೆ. ಎಥ್ನೋಲೊಗ್ 2023ರ ಲೆಕ್ಕಾಚಾರವನ್ನು ಆಧರಿಸಿ ಇತ್ತೀಚೆಗೆ ವಿಶ್ವದಾದ್ಯಂತ ಹೆಚ್ಚು ವ್ಯಾಪಕವಾಗಿ ಮಾತನಾಡುವ ಟಾಪ್ 10 ಭಾಷೆಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಇದರಲ್ಲಿ ಇಂಗ್ಲೀಷ್ (english) ಮೊದಲ ಸ್ಥಾನದಲ್ಲಿದ್ದರೆ ಭಾರತೀಯ (indian) ಭಾಷೆ ಹಿಂದಿ (hindi) ಮೂರನೇ ಸ್ಥಾನದಲ್ಲಿದೆ.

ಅಧ್ಯಯನದ ಮಾಹಿತಿ ಪ್ರಕಾರ ಈ ಭಾಷೆಗಳನ್ನು ಪ್ರಪಂಚದ ಜನಸಂಖ್ಯೆಯ ಸುಮಾರು ಶೇ. 88ರಷ್ಟು ಮಂದಿ ಸ್ಥಳೀಯವಾಗಿ ಮಾತನಾಡುತ್ತಾರೆ. ನೂರಾರು ಮಿಲಿಯನ್‌ಗಿಂತಲೂ ಹೆಚ್ಚು ಜನರು ಅವುಗಳನ್ನು ಎರಡನೇ ಭಾಷೆಯಾಗಿ ಮಾತನಾಡುತ್ತಾರೆ.

ಹೆಚ್ಚು ಮಾತನಾಡುವ 10 ಭಾಷೆಗಳು

ಪ್ರಪಂಚದಾದ್ಯಂತ ಹೆಚ್ಚು ಜನರು ಬಳಸುವ ಹತ್ತು ಭಾಷೆಗಳಲ್ಲಿ ಇಂಗ್ಲಿಷ್ ಮೊದಲ ಸ್ಥಾನದಲ್ಲಿದ್ದು, ಸುಮಾರು 1.5 ಬಿಲಿಯನ್ ಮಂದಿ ಇದನ್ನು ಮಾತನಾಡುತ್ತಾರೆ. ಬಳಿಕ ಮ್ಯಾಂಡರಿನ್ ಚೈನೀಸ್ 1.1 ಬಿಲಿಯನ್, ಹಿಂದಿ ಮೂರನೇ ಸ್ಥಾನದಲ್ಲಿದ್ದು, 609.5 ಮಿಲಿಯನ್, ಸ್ಪ್ಯಾನಿಷ್ 559.1 ಮಿಲಿಯನ್, ಫ್ರೆಂಚ್ 309.8 ಮಿಲಿಯನ್, ಸ್ಟ್ಯಾಂಡರ್ಡ್ ಅರೇಬಿಕ್ 274 ಮಿಲಿಯನ್, ಬಂಗಾಳಿ 272.8 ಮಿಲಿಯನ್, ಪೋರ್ಚುಗೀಸ್ 263.6 ಮಿಲಿಯನ್, ರಷ್ಯನ್ 255.0 ಮಿಲಿಯನ್, ಉರ್ದು 231.7 ಮಿಲಿಯನ್ ಮಂದಿ ಮಾತನಾಡುತ್ತಾರೆ.


ಇಂಗ್ಲೀಷ್

ಸರಿಸುಮಾರು 1.5 ಬಿಲಿಯನ್ ಮಾತನಾಡುವವರನ್ನು ಹೊಂದಿರುವ ಇಂಗ್ಲಿಷ್ ಜಾಗತಿಕವಾಗಿ ಹೆಚ್ಚು ಮಾತನಾಡುವ ಭಾಷೆಯಾಗಿದೆ. ಅಧಿಕೃತ ಯುಎನ್ ಭಾಷೆ. ಇಂಗ್ಲಿಷ್ ಭಾಷೆ ಅಂತಾರಾಷ್ಟ್ರೀಯ ವ್ಯವಹಾರ, ವಿಜ್ಞಾನ ಮತ್ತು ರಾಜತಾಂತ್ರಿಕತೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಇದರ ಜನಪ್ರಿಯತೆಯನ್ನು ಇಂಟರ್ನೆಟ್‌ನಿಂದ ಮತ್ತಷ್ಟು ಹೆಚ್ಚಿಸಲಾಗಿದೆ. ಅಲ್ಲಿ ಇದು ಸಂವಹನದ ಪ್ರಾಥಮಿಕ ಭಾಷೆಯಾಗಿದೆ. ಅದರ ವ್ಯಾಪಕ ಅಳವಡಿಕೆ ಮತ್ತು ಪ್ರವೇಶಕ್ಕೆ ಕೊಡುಗೆ ನೀಡುತ್ತದೆ.

ಮ್ಯಾಂಡರಿನ್ ಚೈನೀಸ್

ಚೀನಾ ಮತ್ತು ತೈವಾನ್‌ನಲ್ಲಿ ಸುಮಾರು 1.1 ಶತಕೋಟಿ ಮಾತನಾಡುವ ಮ್ಯಾಂಡರಿನ್ ಚೈನೀಸ್ ಜಾಗತಿಕವಾಗಿ ಹೆಚ್ಚು ಮಾತನಾಡುವ ಎರಡನೇ ಭಾಷೆಯಾಗಿದೆ. ಇದು ಜಾಗತಿಕ ಸಂವಹನದಲ್ಲಿ ಮಹತ್ವದ ಸ್ಥಾನವನ್ನು ಹೊಂದಿದೆ. ಯುಎನ್‌ ಇದನ್ನು ಅಧಿಕೃತ ಭಾಷೆ ಎಂದು ಪರಿಗಣಿಸಿರುವುದರಿಂದ ಮ್ಯಾಂಡರಿನ್‌ನ ಪ್ರಭಾವವು ವಿಶ್ವಾದ್ಯಂತ ಚೈನೀಸ್ ಮಾತನಾಡುವ ಸಮುದಾಯಗಳಿಗೆ ವಿಸ್ತರಿಸಿದೆ. ಇದು ವ್ಯಾಪಾರ ಮತ್ತು ಸಾಂಸ್ಕೃತಿಕ ವಿನಿಮಯಕ್ಕೆ ಅಮೂಲ್ಯವಾದ ಭಾಷೆಯಾಗಿದೆ.


ಹಿಂದಿ

609.5 ಮಿಲಿಯನ್ (ಸುಮಾರು 60 ಕೋಟಿ) ಮಾತನಾಡುವವರೊಂದಿಗೆ, ಹಿಂದಿ ಭಾರತದ ಪ್ರಮುಖ ಭಾಷೆಯಾಗಿದೆ. ಸರ್ಕಾರದ ಅಧಿಕೃತ ಭಾಷೆಗಳಲ್ಲಿ ಇದು ಕೂಡ ಒಂದು. ದೇವನಾಗರಿ ಲಿಪಿಯಲ್ಲಿ ಬರೆಯಲಾದ ಹಿಂದಿ ಹಲವಾರು ಉಪಭಾಷೆಗಳನ್ನು ಹೊಂದಿದೆ. ಇದು ಭಾರತೀಯ ಮತ್ತು ದಕ್ಷಿಣ ಏಷ್ಯಾದ ಉಪಖಂಡಗಳ ಭಾಷಾ ಶ್ರೀಮಂತಿಕೆಗೆ ಕೊಡುಗೆ ನೀಡುತ್ತದೆ. ಇದರ ಸಾಂಸ್ಕೃತಿಕ ಪ್ರಾಮುಖ್ಯತೆಯು ಬಾಲಿವುಡ್ ಚಲನಚಿತ್ರಗಳು ಮತ್ತು ಶಾಸ್ತ್ರೀಯ ಸಾಹಿತ್ಯದಲ್ಲಿ ಸ್ಪಷ್ಟವಾಗಿದೆ. ಇದು ಸಾಂಸ್ಕೃತಿಕ ವಿನಿಮಯ ಮತ್ತು ಮನೋರಂಜನೆಗೆ ಪ್ರಮುಖ ಭಾಷೆಯಾಗಿದೆ.

ಸ್ಪ್ಯಾನಿಷ್

ಯುಎನ್‌ನ ಅಧಿಕೃತ ಭಾಷೆಗಳಲ್ಲಿ ಒಂದಾದ ಸ್ಪ್ಯಾನಿಷ್ ಲ್ಯಾಟಿನ್‌ನ ಮೂಲವಾಗಿದೆ. ವೈವಿಧ್ಯಮಯ ಜಾಗತಿಕ ಸಮುದಾಯವನ್ನು ಹೊಂದಿದೆ. ಇದು ವ್ಯಾಪಾರ ಸಂವಹನ ಮತ್ತು ಸಾಂಸ್ಕೃತಿಕ ವಿನಿಮಯಕ್ಕೆ ನಿರ್ಣಾಯಕವಾಗಿದೆ. ಇಪ್ಪತ್ತು ದೇಶಗಳ ಅಧಿಕೃತ ಭಾಷೆಯಾಗಿದೆ, ಮತ್ತು ಅದರ ಸಾಂಸ್ಕೃತಿಕ ಪ್ರಭಾವವು ಐಬೇರಿಯನ್ ಪೆನಿನ್ಸುಲಾ ದ ಗಡಿ ದಾಟಿದೆ. ಸ್ಪ್ಯಾನಿಷ್ ತನ್ನ ಮಧುರ ಧ್ವನಿ ಮತ್ತು ಭಾವಪ್ರಧಾನತೆಗೆ ಹೆಸರುವಾಸಿಯಾಗಿದೆ. ಇದು ಪ್ರಪಂಚದಾದ್ಯಂತ ಕಲಿಯುವವರಿಗೆ ಜನಪ್ರಿಯ ಭಾಷೆಯ ಆಯ್ಕೆಯಾಗಿದೆ.

ಫ್ರೆಂಚ್

ಫ್ರೆಂಚ್, ಇಂಡೋ- ಯುರೋಪಿಯನ್ ಭಾಷಾ ಕುಟುಂಬಕ್ಕೆ ಸೇರಿದ ಮತ್ತು ಯುಎನ್ ನ ಮತ್ತೊಂದು ಅಧಿಕೃತ ಭಾಷೆಯಾಗಿದೆ. ಇದು ಫ್ರಾನ್ಸ್ , ಆಫ್ರಿಕಾ, ಕೆನಡಾ ಮತ್ತು ಹೆಚ್ಚಿನ ದೇಶಗಳ ಅಧಿಕೃತ ಭಾಷೆಯಾಗಿದೆ. ವ್ಯಾಪಾರ ಮತ್ತು ಸಾಂಸ್ಕೃತಿಕ ವಿನಿಮಯಕ್ಕೆ ಪ್ರಮುಖ ಭಾಷೆಯಾಗಿದೆ. ಇದು ಸಾಹಿತ್ಯ, ಕಲೆ ಮತ್ತು ಸಿನೆಮಾಕ್ಕೆ ಜನಪ್ರಿಯ ಭಾಷೆಯಾಗಿದೆ, ಅದರ ಜಾಗತಿಕ ಜನಪ್ರಿಯತೆಗೆ ಕೊಡುಗೆ ನೀಡುತ್ತದೆ.

ಸ್ಟ್ಯಾಂಡರ್ಡ್ ಅರೇಬಿಕ್

ಅರೇಬಿಕ್ ಅರಬ್ ಜಗತ್ತಿನಲ್ಲಿ ಪ್ರಮುಖ ಭಾಷೆಯಾಗಿದೆ. ಇದನ್ನು ಸರ್ಕಾರಿ ಉದ್ದೇಶಗಳಿಗಾಗಿ ಮತ್ತು ಅಧಿಕೃತ ಭಾಷಣಗಳು ಮತ್ತು ದಾಖಲೆಗಳಿಗಾಗಿ ಪ್ರತ್ಯೇಕವಾಗಿ ಬಳಸಲಾಗುತ್ತದೆ. ಸ್ಟ್ಯಾಂಡರ್ಡ್ ಅರೇಬಿಕ್ ಅನ್ನು ಅಡಿಪಾಯವಾಗಿ ಆಧರಿಸಿ ಪ್ರದೇಶದ ಸುತ್ತಲೂ ವಿವಿಧ ಅರೇಬಿಕ್ ಉಪಭಾಷೆಗಳನ್ನು ಕಲಿಯಬಹುದು. ಇದಲ್ಲದೆ, ಅರೇಬಿಕ್ ಸಾಹಿತ್ಯವು ಈ ಭಾಷೆಯನ್ನು ಸುಲಭವಾಗಿ ಕಲಿಯಲು ಪ್ರೇರೇಪಿಸುತ್ತದೆ. ಇದು ಸಾಂಸ್ಕೃತಿಕ ವಿನಿಮಯ ಮತ್ತು ಸಾಹಿತ್ಯಕ್ಕೆ ಅಮೂಲ್ಯವಾದ ಭಾಷೆಯಾಗಿದೆ.


ಬೆಂಗಾಲಿ

ಬಂಗಾಲಿ ಬಾಂಗ್ಲಾದೇಶದ ಅಧಿಕೃತ ಭಾಷೆಯಾಗಿದೆ ಮತ್ತು ಭಾರತದ ಪಶ್ಚಿಮ ಬಂಗಾಳದಲ್ಲಿ ವ್ಯಾಪಕವಾಗಿ ಮಾತನಾಡುತ್ತಾರೆ. ಕಾವ್ಯಾತ್ಮಕ ಮತ್ತು ಕಲಾತ್ಮಕ ಸಂಪ್ರದಾಯಗಳಿಗೆ ಹೆಸರುವಾಸಿಯಾದ ಬಂಗಾಳಿ ಶ್ರೀಮಂತ ಸಾಂಸ್ಕೃತಿಕ ಪರಂಪರೆಯನ್ನು ಹೊಂದಿದೆ. ಸಾಹಿತ್ಯ, ಸಂಗೀತ ಮತ್ತು ಸಿನೆಮಾಕ್ಕೆ ಕೊಡುಗೆಗಳನ್ನು ನೀಡಿದೆ. ಇದು ಸಾಂಸ್ಕೃತಿಕ ವಿನಿಮಯ ಮತ್ತು ಮನರಂಜನೆಗೆ ಅಮೂಲ್ಯವಾದ ಭಾಷೆಯಾಗಿದೆ.

ಪೋರ್ಚುಗೀಸ್

ಪೋರ್ಚುಗಲ್ ಮತ್ತು ದಕ್ಷಿಣ ಅಮೆರಿಕಾದ ಹಲವಾರು ಇತರ ದೇಶಗಳ ಅಧಿಕೃತ ಭಾಷೆಯಾಗಿರುವ ಪೋರ್ಚುಗೀಸ್ ಭಾಷೆಯ ಪರಂಪರೆಯು ಪರಿಶೋಧನೆ ಮತ್ತು ವ್ಯಾಪಾರದ ಇತಿಹಾಸದಲ್ಲಿ ಆಳವಾಗಿ ಹುದುಗಿದೆ. ಪೋರ್ಚುಗೀಸ್-ಮಾತನಾಡುವ ದೇಶಗಳಲ್ಲಿ ವ್ಯಾಪಾರ ಮತ್ತು ಸಾಂಸ್ಕೃತಿಕ ವಿನಿಮಯಕ್ಕೆ ಇದು ಅಮೂಲ್ಯವಾದ ಭಾಷೆಯಾಗಿದೆ.

ರಷ್ಯನ್

ಸಿರಿಲಿಕ್ ಲಿಪಿಯೊಂದಿಗೆ ರಷ್ಯನ್ ರಷ್ಯಾ ಮತ್ತು ನೆರೆಯ ದೇಶಗಳ ಸಾಂಸ್ಕೃತಿಕ ಮತ್ತು ರಾಜಕೀಯ ಭೂದೃಶ್ಯದಲ್ಲಿ ಕೇಂದ್ರ ಸ್ಥಾನವನ್ನು ಹೊಂದಿದೆ. ಇದು ವಿಶ್ವಾದ್ಯಂತ ಭಾಷಾ ಉತ್ಸಾಹಿಗಳಿಗೆ ಅಧ್ಯಯನದ ಆಕರ್ಷಕ ವಿಷಯವಾಗಿದೆ. ರಷ್ಯನ್-ಮಾತನಾಡುವ ದೇಶಗಳಲ್ಲಿ ವ್ಯಾಪಾರ ಮತ್ತು ಸಾಂಸ್ಕೃತಿಕ ವಿನಿಮಯಕ್ಕೆ ಇದು ಅಮೂಲ್ಯವಾದ ಭಾಷೆಯಾಗಿದೆ.

ಇದನ್ನೂ ಓದಿ: Maldives: ಭಾರತದ ಯುದ್ಧವಿಮಾನ ಹಾರಿಸುವ ತಾಕತ್ತು ನಮ್ಮ ಪೈಲಟ್‌ಗಳಿಗಿಲ್ಲ ಎಂದ ಮಾಲ್ಡೀವ್ಸ್, ಎಂಥಾ ದುಸ್ಥಿತಿ!


ಉರ್ದು

ಉರ್ದುವನ್ನು ಕವಿಗಳ ಭಾಷೆ ಎಂದು ಕರೆಯಲಾಗುತ್ತದೆ ಮತ್ತು ಅಪಾರ ಸಾಂಸ್ಕೃತಿಕ ಮಹತ್ವವನ್ನು ಹೊಂದಿದೆ. ಇದು ಪಾಕಿಸ್ತಾನದ ಅಧಿಕೃತ ಭಾಷೆಯಾಗಿದೆ ಮತ್ತು ಉತ್ತರ ಭಾರತದಲ್ಲಿ ವ್ಯಾಪಕವಾಗಿ ಮಾತನಾಡುತ್ತಾರೆ. ಉರ್ದು ದಕ್ಷಿಣ ಏಷ್ಯಾದ ಸಾಂಸ್ಕೃತಿಕ ಪರಂಪರೆಯನ್ನು ಮುಂದಕ್ಕೆ ಕೊಂಡೊಯ್ಯಲು ಅತ್ಯಮೂಲ್ಯವಾದ ಸಾಧನವಾಗಿದ್ದು, ಸಾಹಿತ್ಯ, ಸಂಗೀತ ಮತ್ತು ಚಲನಚಿತ್ರಕ್ಕೆ ಕೊಡುಗೆಗಳನ್ನು ನೀಡಿದೆ. ಇದು ದಕ್ಷಿಣ ಏಷ್ಯಾದಲ್ಲಿ ಸಾಂಸ್ಕೃತಿಕ ವಿನಿಮಯ ಮತ್ತು ಮನರಂಜನೆಗೆ ಅಮೂಲ್ಯವಾದ ಭಾಷೆಯಾಗಿದೆ.

Continue Reading

ಗ್ಯಾಜೆಟ್ಸ್

Warning For Android Users: ಆಂಡ್ರಾಯ್ಡ್ ಬಳಕೆದಾರರಿಗೆ ಕಾದಿದೆ ಅಪಾಯ; ಸರ್ಕಾರದಿಂದ ಗಂಭೀರ ಎಚ್ಚರಿಕೆ

ಆಂಡ್ರಾಯ್ಡ್ ನ ಕೆಲವು ಆವೃತ್ತಿಗಳಲ್ಲಿ ದೋಷ ಕಾಣಿಸಿಕೊಂಡಿದ್ದು (Warning For Android Users) ಸೈಬರ್ ದಾಳಿಗೆ ತುತ್ತಾಗುವ ಸಾಧ್ಯತೆ ಇದೆ. ಹೀಗಾಗಿ ಎಲ್ಲರೂ ಎಚ್ಚರಿಕೆಯಿಂದ ಇರುವಂತೆ ಭಾರತ ಸೈಬರ್ ಸುರಕ್ಷತೆ ಬೆದರಿಕೆಗಳ ಪ್ರಾಧಿಕಾರ ತಂಡ ಎಚ್ಚರಿಕೆ ನೀಡಿದೆ. ಈ ಕುರಿತ ವಿಸ್ತೃತ ಮಾಹಿತಿ ಇಲ್ಲಿದೆ.

VISTARANEWS.COM


on

By

Warning For Android Users
Koo

ನವದೆಹಲಿ: ಆಂಡ್ರಾಯ್ಡ್ ಆವೃತ್ತಿಗಳಾದ 12, 12L, 13 ಮತ್ತು 14ರಲ್ಲಿ ದೋಷ ಕಾಣಿಸಿಕೊಂಡಿದ್ದು, ಇವುಗಳ ಮೇಲೆ ಸೈಬರ್ ಆಕ್ರಮಣವಾಗುವ (Cyber attack) ಸಾಧ್ಯತೆ ಇದೆ (Warning For Android Users) ಎಂದು ಭಾರತ (india) ಸೈಬರ್ ಸುರಕ್ಷತೆ ಬೆದರಿಕೆಗಳ ಪ್ರಾಧಿಕಾರ ತಂಡ (CERT-In) ಎಚ್ಚರಿಕೆ ನೀಡಿದೆ. ಇದರಿಂದ ಸುಲಭವಾಗಿ ಸೈಬರ್ ಆಕ್ರಮಣಕಾರರು ಮಾಹಿತಿಯನ್ನು ಕದಿಯಬಹುದು ಎಂದು ಅದು ಹೇಳಿದೆ.

ಫ್ರೇಮ್‌ವರ್ಕ್, ಗೂಗಲ್ ಪ್ಲೇ ಸಿಸ್ಟಮ್ ಅಪ್‌ಡೇಟ್‌ಗಳು, ಕರ್ನಲ್, ಕರ್ನಲ್ ಎಲ್‌ಟಿಎಸ್ ಮತ್ತು ಆರ್ಮ್, ಮೀಡಿಯಾ ಟೆಕ್ ಮತ್ತು ಕ್ವಾಲ್‌ಕಾಮ್ ಘಟಕಗಳಲ್ಲಿನ ದೋಷಗಳಿಂದಾಗಿ ಆಂಡ್ರಾಯ್ಡ್‌ನಲ್ಲಿ ದೋಷ ಕಾಣಿಸಿಕೊಂಡಿದೆ ಎಂದು ಸಿಇಆರ್‌ಟಿ-ಇನ್ ತಿಳಿಸಿದೆ. ಭಾರತೀಯ ಆಂಡ್ರಾಯ್ಡ್ ಬಳಕೆದಾರರು ಇದರಿಂದ ಹೆಚ್ಚಿನ ಅಪಾಯವನ್ನು ಎದುರಿಸಬೇಕಾಗುತ್ತದೆ. ಹೀಗಾಗಿ ಎಚ್ಚರಿಕೆಯಿಂದ ಇರುವಂತೆ ಸೂಚಿಸಿದೆ. ಈ ನಿಟ್ಟಿನಲ್ಲಿ ಸರ್ಕಾರ ತಕ್ಷಣದ ಕ್ರಮ ಕೈಗೊಳ್ಳುವ ಅಗತ್ಯವಿದೆ.

ಮಾರ್ಗದರ್ಶಿ ಬಿಡುಗಡೆ

ಭಾರತದಲ್ಲಿನ ಸೈಬರ್ ಸುರಕ್ಷತೆ ಬೆದರಿಕೆಗಳ ಪ್ರಾಧಿಕಾರವಾದ ತಂಡ (CERT-In) ಇದಕ್ಕಾಗಿ ಮಾರ್ಗದರ್ಶಿಯನ್ನು ಬಿಡುಗಡೆ ಮಾಡಿದೆ. ಆಂಡ್ರಾಯ್ಡ್ ಆವೃತ್ತಿಗಳಾದ 14, 13, 12, ಮತ್ತು 12Lರಲ್ಲಿ ದೋಷ ಕಾಣಿಸಿಕೊಂಡಿರುವುದರಿಂದ ಇವು ಆಕ್ರಮಣಕಾರರಿಂದ ದುರ್ಬಳಕೆಯಾಗುವ ಸಾಧ್ಯತೆ ಇದೆ. ಹೀಗಾಗಿ ಈ ಬಗ್ಗೆ ಹೆಚ್ಚಿನ ಮಾಹಿತಿ, ಉನ್ನತ ಸವಲತ್ತುಗಳ ಕುರಿತು ತಿಳಿದುಕೊಳ್ಳಿ. ನಿಖರ ಮತ್ತು ಹೆಚ್ಚು ಕಷ್ಟಕರವಾದ ಕೋಡ್ ಹಾಕಿ. ಇದರಿಂದ ಅನಗತ್ಯ ಸೇವೆಗಳನ್ನು ನಿರಾಕರಿಸಿ ಎಂದು ಸಲಹೆ ನೀಡಲಾಗಿದೆ.

ಆಂಡ್ರಾಯ್ಡ್‌ನಲ್ಲಿ ಕಾಣಿಸಿರುವ ದುರ್ಬಲತೆಗಳು ಆಂಡ್ರಾಯ್ಡ್ ವ್ಯವಸ್ಥೆಯ ವಿವಿಧ ಪ್ರಮುಖ ಅಂಶಗಳ ಮೇಲೆ ಪರಿಣಾಮ ಬೀರಲಿದೆ. ಫ್ರೇಮ್‌ವರ್ಕ್, ಸಿಸ್ಟಮ್, ಎಎಂಲಾಜಿಕ್ಸ್ , ಆರ್ಮ್ ಕಾಂಪೊನೆಂಟ್‌ಗಳು, ಮೀಡಿಯಾ ಟೆಕ್ ಘಟಕಗಳು, ಕ್ವಾಲ್ಕಾಮ್ ಘಟಕಗಳು ಮತ್ತು ಕ್ವಾಲ್ಕಾಮ್ ಮುಚ್ಚಿದ ಮೂಲ ಘಟಕಗಳ ಮೇಲೆ ಇದು ಪರಿಣಾಮ ಬೀರಲಿದೆ. ಇದರಿಂದ ಹೆಚ್ಚಿನ ಸಂಖ್ಯೆಯ ಬಳಕೆದಾರರು ಅಪಾಯಕ್ಕೆ ಸಿಲುಕಿಕೊಳ್ಳಬಹುದು ಎಂದು ಎಚ್ಚರಿಸಲಾಗಿದೆ.

ಯಾರು ಚಿಂತಿಸಬೇಕು?

ಆಂಡ್ರಾಯ್ಡ್ ಸಾಧನ ಅಥವಾ ಸ್ಮಾರ್ಟ್‌ಫೋನ್ ನಲ್ಲಿ ಆಂಡ್ರಾಯ್ಡ್ ಆವೃತ್ತಿ 12, 12L, 13, ಅಥವಾ 14 ರನ್ ಆಗುತ್ತಿದ್ದರೆ ಬೆದರಿಕೆಗೆ ಒಳಗಾಗುವ ಸಾಧ್ಯತೆ ಇದೆ. ಅಲ್ಲದೇ ಸ್ಯಾಮ್ ಸಂಗ್, ಗೂಗಲ್ ಪಿಕ್ಸೆಲ್, ಒನ್ ಪ್ಲಸ್, ಕ್ಸಿಯೋಮಿ, ಒಪ್ಪೋ ಅಥವಾ ಯಾವುದೇ ಇತರ ಆಂಡ್ರಾಯ್ಡ್ ಬ್ರ್ಯಾಂಡ್ ಬಳಸುತ್ತಿದ್ದಾರೆ ಬೆದರಿಕೆ ಬರುವ ಸಾಧ್ಯತೆ ಇದೆ. ಹೆಚ್ಚಿನ ಅಪಾಯದ ಕಾರಣ CERT-In ಎಲ್ಲಾ ಬಳಕೆದಾರರಿಗೂ ಇತ್ತೀಚಿನ ಆಂಡ್ರಾಯ್ಡ್ ಆವೃತ್ತಿಗೆ ಅಪ್‌ಗ್ರೇಡ್ ಮಾಡಲು ಸೂಚನೆ ನೀಡಲಾಗಿದೆ.

ಏನು ಮಾಡಬೇಕು?

ತಕ್ಷಣವೇ ಆಂಡ್ರಾಯ್ಡ್ ಅನ್ನು ನವೀಕರಿಸುವ ಮೂಲಕ ಮುಂಬರುವ ಅಪಾಯಗಳಿಂದ ರಕ್ಷಿಸಿಕೊಳ್ಳಬಹುದು. ದೋಷಗಳನ್ನು ಸರಿಪಡಿಸಲು ಸಾಧನ ತಯಾರಕರು ಭದ್ರತಾ ಪ್ಯಾಚ್‌ಗಳನ್ನು ಬಿಡುಗಡೆ ಮಾಡುತ್ತಿದ್ದಾರೆ. ಆದರೆ ಈ ನವೀಕರಣಗಳ ಸಮಯವು ಆಂಡ್ರಾಯ್ಡ್ ಸಾಧನದ ತಯಾರಕ ಮತ್ತು ಮಾದರಿಯನ್ನು ಅವಲಂಬಿಸಿ ಬದಲಾಗುತ್ತದೆ. ಆದರೆ ಈ ಸಮಸ್ಯೆಗಳನ್ನು ಪರಿಹರಿಸಲು ನಿಮ್ಮ ಸಾಧನವನ್ನು ನವೀಕರಿಸಲಾಗಿದೆಯೇ ಎಂಬುದನ್ನು ನೋಡಬೇಕು.

ಹೇಗೆ ನಿರ್ಧರಿಸುವುದು?

ಸಾಧನದ ಭದ್ರತಾ ಪ್ಯಾಚ್ ಮಟ್ಟವನ್ನು ತಿಳಿಯಲು ಸೆಟ್ಟಿಂಗ್‌ನಲ್ಲಿ ಪರಿಶೀಲಿಸಬಹುದು ಎಂದು ಭದ್ರತಾ ಬುಲೆಟಿನ್‌ನಲ್ಲಿ ಆಂಡ್ರಾಯ್ಡ್ ಸೂಚಿಸಿದೆ. ನವೀಕರಣಗಳು ನಿಮಗೆ ಲಭ್ಯವಾದಾಗ ಅಧಿಸೂಚನೆಗಳನ್ನು ಪಡೆಯುತ್ತೀರಿ. ಸ್ಯಾಮ್‌ಸಂಗ್ ಎಲ್ಲಾ ಬಳಕೆದಾರರಿಗೆ ಪ್ರತ್ಯೇಕ ಪ್ಯಾಚ್ ನೋಟ್ ನವೀಕರಣವನ್ನು ಬಿಡುಗಡೆ ಮಾಡಿದೆ. ಪ್ಯಾಚ್ ಗಮನಿಸಿದಂತೆ ಸ್ಯಾಮ್‌ಸಂಗ್ ಮೊಬೈಲ್ ಮಾಸಿಕ ಭದ್ರತಾ ನಿರ್ವಹಣೆ ಬಿಡುಗಡೆ (SMR) ಪ್ರಕ್ರಿಯೆಯ ಭಾಗವಾಗಿ ಪ್ರಮುಖ ಮಾದರಿಗಳಿಗೆ ನಿರ್ವಹಣೆ ಬಿಡುಗಡೆಯನ್ನು ಬಿಡುಗಡೆ ಮಾಡುತ್ತಿದೆ. ಈ SMR ಪ್ಯಾಕೇಜ್ Google ಮತ್ತು Samsungನಿಂದ ಪ್ಯಾಚ್‌ಗಳನ್ನು ಒಳಗೊಂಡಿದೆ.

ಇದನ್ನೂ ಓದಿ: Artificial Intelligence: 98 ವಿವಿಧ ಭಾಷೆಗಳಲ್ಲಿ ಹನುಮಾನ್‌ AI ತಂತ್ರಜ್ಞಾನ; ಏನಿದರ ವಿಶೇಷ?

ಸಾಮಾನ್ಯ ಮುನ್ನೆಚ್ಚರಿಕೆ ಅಗತ್ಯ

ಅಪರಿಚಿತ ವೆಬ್‌ಸೈಟ್‌ಗಳು ಅಥವಾ ಆಪ್ ಸ್ಟೋರ್‌ಗಳಿಂದ ಅಪ್ಲಿಕೇಶನ್‌ಗಳನ್ನು ಡೌನ್‌ಲೋಡ್ ಮಾಡಬೇಡಿ. ಗೂಗಲ್ ಪ್ಲೇ ಸ್ಟೋರ್ ನಿಂದ ಅಗತ್ಯವಿರುವ ಅಪ್ಲಿಕೇಶನ್‌ಗಳನ್ನು ಡೌನ್‌ಲೋಡ್ ಮಾಡಿಕೊಳ್ಳಿ.

ಬಲವಾದ ಮತ್ತು ವಿಶಿಷ್ಟವಾದ ಪಾಸ್‌ವರ್ಡ್‌ಗಳನ್ನು ಬಳಸಿ, ಮತ್ತು ಸಾಧ್ಯವಾದಾಗಲೆಲ್ಲಾ ಭದ್ರತೆಯ ಹೆಚ್ಚುವರಿ ಲೇಯರ್‌ಗಾಗಿ ಎರಡು-ಅಂಶ ದೃಢೀಕರಣವನ್ನು ಸಕ್ರಿಯಗೊಳಿಸಿ.

Continue Reading

ದೇಶ

Dog Attack : ಮನೆಯಲ್ಲಿ ಮಲಗಿಸಿದ್ದ ಐದು ತಿಂಗಳ ಮಗುವನ್ನು ಕಚ್ಚಿ ಕೊಂದ ಬೀದಿ ನಾಯಿ!

Dog Attack : ಈ ಆಘಾತಕಾರಿ ಘಟನೆಯು ದೇಶದಲ್ಲಿ ನಾಯಿ ಕಡಿತ ಮತ್ತು ನಾಯಿ ದಾಳಿಯ ಘಟನೆಗಳು ಹೆಚ್ಚುತ್ತಿರುವ ಬಗ್ಗೆ ಗಮನ ಸೆಳೆದಿದೆ. 2022 ರಿಂದ 2023 ರವರೆಗೆ ನಾಯಿ ಕಡಿತದ ಘಟನೆಗಳು ವರ್ಷದಿಂದ ವರ್ಷಕ್ಕೆ ಶೇಕಡಾ 26.5 ರಷ್ಟು ಹೆಚ್ಚಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಕಳೆದ ಡಿಸೆಂಬರ್​ನಲ್ಲಿ ವರದಿ ಮಾಡಿತ್ತು.

VISTARANEWS.COM


on

Dog Attack
Koo

ಹೈದರಾಬಾದ್: ನಾಯಿಯೊಂದು ಐದು ತಿಂಗಳ ಮಗುವನ್ನು ಕಚ್ಚಿ ಕೊಂದಿರುವ (Dog Attack) ಹೃದಯ ವಿದ್ರಾವಕ ಘಟನೆ ತೆಲಂಗಾಣದ ವಿಕಾರಾಬಾದ್ ಜಿಲ್ಲೆಯ ತಾಂಡೂರಿನಲ್ಲಿ ನಡೆದಿದೆ. ಬಾಬುಸಾಯಿ ಎಂಬ ಮಗುವನ್ನು ಪೋಷಕರು ಕೆಲಸಕ್ಕೆ ಹೋಗುವ ವೇಳೆ ಮನೆಯಲ್ಲಿ ಮಲಗಿಸಿದ್ದರು. ಯಾರ ಗಮನಕ್ಕೂ ಬಾರದಂತೆ ಒಳ ಪ್ರವೇಶಿಸಿದ ನಾಯಿ ದಾಳಿ ಮಾಡಿ ಕೊಲೆ ಮಾಡಿದೆ. ಮಗುವಿನ ತಂದೆ ಮನೆಗೆ ಮರಳಿದಾಗ ಘಟನೆ ಬೆಳಕಿಗೆ ಬಂದಿದೆ. ಕೆಲಸದ ಸ್ಥಳದಲ್ಲಿದ್ದ ಸಾಕು ನಾಯಿ ಅದು ಎಂದು ಸ್ಥಳೀಯ ನಿವಾಸಿಗಳು ಹೇಳಿದರೆ, ಜಾಗದ ಮಾಲೀಕರು ಬೀದಿ ನಾಯಿ ಎಂದು ಹೇಳಿದ್ದಾರೆ.

ಈ ಆಘಾತಕಾರಿ ಘಟನೆಯು ದೇಶದಲ್ಲಿ ನಾಯಿ ಕಡಿತ ಮತ್ತು ನಾಯಿ ದಾಳಿಯ ಘಟನೆಗಳು ಹೆಚ್ಚುತ್ತಿರುವ ಬಗ್ಗೆ ಗಮನ ಸೆಳೆದಿದೆ. 2022 ರಿಂದ 2023 ರವರೆಗೆ ನಾಯಿ ಕಡಿತದ ಘಟನೆಗಳು ವರ್ಷದಿಂದ ವರ್ಷಕ್ಕೆ ಶೇಕಡಾ 26.5 ರಷ್ಟು ಹೆಚ್ಚಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಕಳೆದ ಡಿಸೆಂಬರ್​ನಲ್ಲಿ ವರದಿ ಮಾಡಿತ್ತು.

ಕಳೆದ ತಿಂಗಳು ಬೀದಿ ನಾಯಿಗಳ ದಾಳಿಯಲ್ಲಿ ಕನಿಷ್ಠ ಇಬ್ಬರು ಮಕ್ಕಳು ಸಾವನ್ನಪ್ಪಿದ್ದರು. ಏಪ್ರಿಲ್ 14 ರಂದು ಹೈದರಾಬಾದ್​​ನ ನಿರ್ಮಾಣ ಹಂತದಲ್ಲಿದ್ದ ಅಪಾರ್ಟ್​ಮೆಂಟ್​​ ಬಳಿ ಆಟವಾಡುತ್ತಿದ್ದ ಎರಡೂವರೆ ವರ್ಷದ ಬಾಲಕಿಯನ್ನು ಬೀದಿ ನಾಯಿಗಳು ಕಚ್ಚಿ ಕೊಂದಿದ್ದವು. ಮತ್ತೊಂದು ದುರಂತ ಘಟನೆಯಲ್ಲಿ, ಏಪ್ರಿಲ್ 13 ರಂದು ಉತ್ತರ ಪ್ರದೇಶದ ಡಿಯೋರಿಯಾದಲ್ಲಿ ಬೀದಿ ನಾಯಿಗಳು ದಾಳಿ ಮಾಡಿ ನಾಲ್ಕು ವರ್ಷದ ಬಾಲಕಿಯನ್ನು ಕೊಂದಿದ್ದವು.

ಇದನ್ನೂ ಓದಿ: Silicon City Hospital: ಲಕ್ಷಕ್ಕೆ ಇಬ್ಬರಿಗೆ ಬರುವ ಮೆದುಳಿನ ರಕ್ತನಾಳ ಒಡೆಯುವ ಕಾಯಿಲೆ; ಯಶಸ್ವಿ ಶಸ್ತ್ರಚಿಕಿತ್ಸೆಯಿಂದ ಬಾಲಕಿ ಪಾರು

ಬೇಜವಾಬ್ದಾರಿ ಕಾರಣ

ಈ ತಿಂಗಳ ಆರಂಭದಲ್ಲಿ, ಚೆನ್ನೈನ ಉದ್ಯಾನವನದಲ್ಲಿ ಎರಡು ರಾಟ್ವೀಲರ್ ನಾಯಿಗಳ ದಾಳಿಗೆ ಐದು ವರ್ಷದ ಬಾಲಕಿ ಗಂಭೀರವಾಗಿ ಗಾಯಗೊಂಡಿದ್ದಳು. ಅವು ಸಾಕಿದ್ದ ನಾಯಿಗಳಾಗಿದ್ದು ಮಾಲೀಕ ಅನ್ನು ಕಟ್ಟಿರಲಿಲ್ಲ. . ಪೊಲೀಸರು ಅವರ ಮಾಲೀಕರ ವಿರುದ್ಧ ನಿರ್ಲಕ್ಷ್ಯದ ಪ್ರಕರಣವನ್ನು ದಾಖಲಿಸಿದ್ದಾರೆ.

ಈ ಘಟನೆಯ ಹಿನ್ನೆಲೆಯಲ್ಲಿ, ಗ್ರೇಟರ್ ಚೆನ್ನೈ ಕಾರ್ಪೊರೇಷನ್ ಸಾಕುಪ್ರಾಣಿಗಳಿಗೆ ವಿಶೇಷವಾಗಿ ನಾಯಿಗಳಿಗೆ ಸಾರ್ವಜನಿಕ ಉದ್ಯಾನವನಗಳ ಒಳಗೆ ಪ್ರವೇಶ ನಿರ್ಬಂಧಿಸಿದೆ. ಪರಿಷ್ಕೃತ ನಿಯಮಗಳ ಪ್ರಕಾರ ಸಾಕುಪ್ರಾಣಿಗಳನ್ನು ಉದ್ಯಾನವನಗಳ ಒಳಗೆ ಬಿಗಿಯಾಗಿ ಕಟ್ಟುವುದು ಮತ್ತು ಬಾಯಿ ಮುಚ್ಚಿಸುವುದು ಕಡ್ಡಾಯ.

ನಾಯಿಗಳಿಗೆ ಬ್ಯಾನ್​

ನಾಯಿಗಳ ದಾಳಿಯು ಕೆಲವು ತಳಿಗಳ ನಾಯಿಗಳನ್ನು ವಸತಿ ಪ್ರದೇಶಗಳಲ್ಲಿ ಸಾಕಬಹುದೇ ಎಂಬ ಚರ್ಚೆ ಹುಟ್ಟು ಹಾಕಲು ಕಾರಣವಾಗಿದೆ. ಪಿಟ್ಬುಲ್ ಟೆರಿಯರ್, ಅಮೆರಿಕನ್ ಬುಲ್ಡಾಗ್, ರಾಟ್​ವೀಲರ್​ ಮತ್ತು ಮಾಸ್ಟಿಫ್ಸ್ ಸೇರಿದಂತೆ 23 ತಳಿಯ ಕ್ರೂರ ನಾಯಿಗಳ ಮಾರಾಟ ಮತ್ತು ಸಂತಾನೋತ್ಪತ್ತಿಯನ್ನು ನಿಷೇಧಿಸುವಂತೆ ಕೇಂದ್ರವು ಮಾರ್ಚ್​ನಲ್ಲಿ ರಾಜ್ಯಸರ್ಕಾರಗಳನ್ನು ಕೇಳಿದೆ. ಈಗಾಗಲೇ ಈ ತಳಿಗಳನ್ನು ಸಾಕುಪ್ರಾಣಿಗಳಾಗಿ ಹೊಂದಿರುವವರು ಅವುಗಳಿಗೆ ಸಂತಾನ ಹರಣ ಚಿಕಿತ್ಸೆ ಮಾಡಬೇಕು ಎಂದು ನಿರ್ದೇಶನದಲ್ಲಿ ಸೇರಿಸಲಾಗಿದೆ

Continue Reading

ಪ್ರಮುಖ ಸುದ್ದಿ

PM Narendra Modi: ನಾಮಪತ್ರ ಸಲ್ಲಿಕೆ ವೇಳೆ ಪಿಎಂ ಮೋದಿ ಪಕ್ಕದಲ್ಲಿ ಕುಳಿತಿದ್ದ ಸಾಧು ಯಾರು?

PM Narendra Modi: ಗಣೇಶ್ವರ ಶಾಸ್ತ್ರಿ ಅವರ ಪೂರ್ವಜರು ಗಂಗಾನದಿಯ ದಡದ ಕಾಶಿಯ ರಾಮಘಾಟ್ ಪ್ರದೇಶದಲ್ಲಿ ನೆಲೆಸಿದ್ದಾರೆ. ಗಣೇಶ್ವರ ಶಾಸ್ತ್ರಿ ಹುಟ್ಟಿದ್ದು ಇಲ್ಲೇ. ಇವರ ಕುಟುಂಬ ದಕ್ಷಿಣ ಭಾರತದಿಂದ ಬಂದು ಕಾಶಿಯಲ್ಲಿ ನೆಲೆಸಿದೆ. ಅವರ ಹಿರಿಯ ಸಹೋದರ, ಗೌರವಾನ್ವಿತ ವಿದ್ವಾಂಸರಾದ ಪಂಡಿತ ವಿಶ್ವೇಶ್ವರ ಶಾಸ್ತ್ರಿ ಅವರು ಕಾಶಿಯಲ್ಲಿ ವಾಸಿಸುತ್ತಿದ್ದಾರೆ. ಶೈಕ್ಷಣಿಕ ಶ್ರೇಷ್ಠತೆ ಈ ಕುಟುಂಬದ ಪರಂಪರೆಯಾಗಿದೆ.

VISTARANEWS.COM


on

pm narendra modi nomination 2
Koo

ವಾರಾಣಸಿ: ಪ್ರಧಾನ ಮಂತ್ರಿ ನರೇಂದ್ರ ಮೋದಿ (PM Narendra Modi) ಅವರು ಮಂಗಳವಾರ ವಾರಾಣಾಸಿ ಲೋಕಸಭೆ ಕ್ಷೇತ್ರದಿಂದ ನಾಮಪತ್ರ (Narendra Modi nomination) ಸಲ್ಲಿಸಿದರು. ಚುನಾವಣಾ ಅಧಿಕಾರಿಗೆ ನಾಮಪತ್ರ ಸಲ್ಲಿಸುವ ಸಂದರ್ಭದಲ್ಲಿ ಅವರ ಜೊತೆಗೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ (Yogi Adityanath) ಸೇರಿದಂತೆ ಇನ್ನೂ ಹಲವರಿದ್ದರು. ಆದರೆ ಮುಖ್ಯವಾಗಿ ಒಂದು ಮುಖ ಎಲ್ಲರ ಗಮನ ಸೆಳೆಯಿತು. ಅದು ಮೋದಿಯವರ ಪಕ್ಕದಲ್ಲಿಯೇ ಕುಳಿತಿದ್ದ, ಗಡ್ಡಧಾರಿ ಸಾಧು. ಮೋದಿ ಹಾಗೂ ಈ ವ್ಯಕ್ತಿ ಆತ್ಮೀಯವಾಗಿ ಮಾತನಾಡಿಕೊಳ್ಳುತ್ತಿದ್ದುದು ಕ್ಯಾಮೆರಾದಲ್ಲಿ ಸೆರೆಯಾಯಿತು.

ಹಾಗಾದರೆ ಅವರು ಯಾರು? ವಾರಾಣಸಿ ಕ್ಷೇತ್ರದಲ್ಲಿ ಪ್ರಧಾನಿ ಸಲ್ಲಿಸಿದ ನಾಮಪತ್ರವನ್ನು ಅನುಮೋದಿಸಿದ ನಾಲ್ವರಲ್ಲಿ ಈ ಸಾಧುವೂ ಒಬ್ಬರು. ಅವರ ಹೆಸರು ಪಂಡಿತ ಗಣೇಶ್ವರ ಶಾಸ್ತ್ರಿ (Pandit Ganeshwar Shastri). ಇತರ ಮೂವರೆಂದರೆ ಬೈಜನಾಥ್ ಪಟೇಲ್, ಲಾಲ್‌ಚಂದ್ ಕುಶ್ವಾಹಾ ಮತ್ತು ಸಂಜಯ್ ಸೋಂಕರ್.

ಯಾರು ಈ ಗಣೇಶ್ವರ ಶಾಸ್ತ್ರಿ? ಇವರು ಇತ್ತೀಚೆಗೆ ನಡೆದ ಅಯೋಧ್ಯೆಯ ರಾಮಮಂದಿರದ ಪ್ರಾಣ ಪ್ರತಿಷ್ಠಾಪನೆ ಸಮಾರಂಭದಲ್ಲಿ ಪ್ರಮುಖ ಪಾತ್ರ ವಹಿಸಿದ ಪ್ರಸಿದ್ಧ ವಿದ್ವಾಂಸರು. ವಿದ್ವಾಂಸ ರಾಜೇಶ್ವರ ಶಾಸ್ತ್ರಿಯವರ ಎರಡನೇ ಮಗ. ವಿದ್ವಾನ್‌ ಗಣೇಶ್ವರ ಶಾಸ್ತ್ರಿ ಅವರು ಕಾಶಿಯಲ್ಲಿ ನೆಲೆಸಿದ್ದು, ಧರ್ಮ ಪ್ರಚಾರ ಮತ್ತು ಬೋಧನೆಗೆ ಜೀವನವನ್ನು ಸಮರ್ಪಿಸಿಕೊಂಡಿದ್ದಾರೆ. ಅವರು ಸಾಂಗ್ವೇದ ವಿದ್ಯಾಲಯದಲ್ಲಿ ಗೀರ್ವಾಣವಾಗ್‌ವರ್ಧಿನಿ ಸಭೆಯ ನಿರ್ಧಾರಗಳನ್ನು ಶ್ರದ್ಧೆಯಿಂದ ಅನುಸರಿಸುತ್ತಾರೆ ಮತ್ತು ಜ್ಯೋತಿಷ್ಯ, ಆಯುರ್ವೇದ ಮತ್ತು ಆಚರಣೆಗಳಲ್ಲಿ ತಮ್ಮ ಪರಿಣತಿಯ ಮೂಲಕ ಜನರಿಗೆ ಸಹಾಯ ಮಾಡುತ್ತಿರುತ್ತಾರೆ.

ಜನವರಿ 22ರಂದು ನಡೆದ ಅಯೋಧ್ಯೆ ರಾಮ ಲಲ್ಲಾ ಪ್ರಾಣ ಪ್ರತಿಷ್ಠಾ ಸಮಾರಂಭವು ಪಂಡಿತ ಗಣೇಶ್ವರ ಶಾಸ್ತ್ರಿ ದ್ರಾವಿಡ ಅವರು ನಿರ್ಧರಿಸಿದ 84 ಸೆಕೆಂಡುಗಳ ಕಾಲ ಶುಭ ಮುಹೂರ್ತದಲ್ಲಿ ನಡೆದಿತ್ತು. ಈ ಸಮಯವನ್ನು ರಾಮ ಮಂದಿರದ ಅಡಿಪಾಯ ಹಾಕಲು ಸಹ ಬಳಸಲಾಗಿತ್ತು. ಇದು ಈ ಮಂದಿರ ಯೋಜನೆಯಲ್ಲಿ ಈ ವಿದ್ವಾಂಸರು ಎಷ್ಟು ಆಳವಾಗಿ ತೊಡಗಿಕೊಂಡಿದ್ದಾರೆ ಎಂಬುದನ್ನು ಎತ್ತಿ ತೋರಿಸುತ್ತದೆ.

ಗಣೇಶ್ವರ ಶಾಸ್ತ್ರಿ ಅವರ ಪೂರ್ವಜರು ಗಂಗಾನದಿಯ ದಡದ ಕಾಶಿಯ ರಾಮಘಾಟ್ ಪ್ರದೇಶದಲ್ಲಿ ನೆಲೆಸಿದ್ದಾರೆ. ಗಣೇಶ್ವರ ಶಾಸ್ತ್ರಿ ಹುಟ್ಟಿದ್ದು ಇಲ್ಲೇ. ಇವರ ಕುಟುಂಬ ದಕ್ಷಿಣ ಭಾರತದಿಂದ ಬಂದು ಕಾಶಿಯಲ್ಲಿ ನೆಲೆಸಿದೆ. ಅವರ ಹಿರಿಯ ಸಹೋದರ, ಗೌರವಾನ್ವಿತ ವಿದ್ವಾಂಸರಾದ ಪಂಡಿತ ವಿಶ್ವೇಶ್ವರ ಶಾಸ್ತ್ರಿ ಅವರು ಕಾಶಿಯಲ್ಲಿ ವಾಸಿಸುತ್ತಿದ್ದಾರೆ. ಶೈಕ್ಷಣಿಕ ಶ್ರೇಷ್ಠತೆ ಈ ಕುಟುಂಬದ ಪರಂಪರೆಯಾಗಿದೆ.

ಮೋದಿ ನಾಮಪತ್ರ ಅನುಮೋದಿಸಿದ ಇನ್ನು ಮೂವರೆಂದರೆ ಬೈಜನಾಥ್ ಪಟೇಲ್, ಹಿರಿಯ RSS ಸ್ವಯಂಸೇವಕ, OBC ಸಮುದಾಯಕ್ಕೆ ಸೇರಿದವರು. ಲಾಲ್‌ಚಂದ್ ಕುಶ್ವಾಹಾ, ಇವರು ಕೂಡ ಒಬಿಸಿ ಸಮುದಾಯದವರು. ಸಂಜಯ್ ಸೋಂಕರ್, ಇವರು ದಲಿತ ಸಮುದಾಯದಿಂದ ಬಂದವರು.

ಪ್ರತಿಯೊಬ್ಬ ಚುನಾವಣಾ ಅಭ್ಯರ್ಥಿಯು ಅನುಮೋದಕರನ್ನು ಹೊಂದಿರಬೇಕು. ಚುನಾವಣಾ ಆಯೋಗದ ನಿಯಮಗಳ ಪ್ರಕಾರ, ಇವರು ಅಭ್ಯರ್ಥಿಯ ನಾಮನಿರ್ದೇಶನವನ್ನು ಅನುಮೋದಿಸುವ ಅಸೆಂಬ್ಲಿ ಅಥವಾ ಸಂಸದೀಯ ಕ್ಷೇತ್ರದ ನೋಂದಾಯಿತ ಮತದಾರರಾಗಿರಬೇಕು. ಅಭ್ಯರ್ಥಿಯ ನಾಮನಿರ್ದೇಶನ ಪತ್ರಗಳಿಗೆ ಪ್ರಸ್ತಾವನೆದಾರರು ಮತ್ತು ಅಭ್ಯರ್ಥಿ ಸಹಿ ಮಾಡಬೇಕು. ಜನತಾ ಪ್ರಾತಿನಿಧ್ಯ ಕಾಯಿದೆ, 1951ರ ಪ್ರಕಾರ, ಮಾನ್ಯತೆ ಪಡೆದ ರಾಜ್ಯ ಅಥವಾ ರಾಷ್ಟ್ರೀಯ ಪಕ್ಷದ ಅಭ್ಯರ್ಥಿಗೆ ಒಬ್ಬ ಅನುಮೋದಕರ ಅಗತ್ಯವಿರುತ್ತದೆ. ಆದರೆ ಸ್ವತಂತ್ರ ಅಥವಾ ಗುರುತಿಸದ ಪಕ್ಷದ ಅಭ್ಯರ್ಥಿಗೆ 10 ಜನರ ಅಗತ್ಯವಿದೆ.

ಇದನ್ನೂ ಓದಿ: PM Narendra Modi: ಪಿಎಂ ಮೋದಿ ನಾಮಪತ್ರ ಅನುಮೋದಿಸಿದ ನಾಲ್ವರ ಹಿನ್ನೆಲೆ ಏನು?

Continue Reading
Advertisement
Spoken Language
Latest3 mins ago

Spoken Language: ವಿಶ್ವದಲ್ಲಿ ಅತೀ ಹೆಚ್ಚು ಮಾತನಾಡುವ ಭಾಷೆಗಳಲ್ಲಿ ಹಿಂದಿ ಯಾವ ಸ್ಥಾನದಲ್ಲಿದೆ ಗೊತ್ತೆ?

Karnataka Weather Forecast
ಮಳೆ11 mins ago

Karnataka Weather : ಭಾರಿ ಗಾಳಿ, ಮಳೆಗೆ ಶೃಂಗೇರಿಯಲ್ಲಿ ವಿದ್ಯುತ್‌ ಕಡಿತ; ಶಿರಸಿಯಲ್ಲಿ ಉರುಳಿ ಬಿದ್ದ ಮರ

Prajwal Revanna Case
ಕರ್ನಾಟಕ17 mins ago

Prajwal Revanna Case: ಪ್ರೀತಂಗೌಡರ ಮತ್ತಿಬ್ಬರು ಆಪ್ತರ ಹೋಟೆಲ್‌, ಬಾರ್‌ ಮೇಲೆ ಎಸ್‌ಐಟಿ ದಾಳಿ

Warning For Android Users
ಗ್ಯಾಜೆಟ್ಸ್19 mins ago

Warning For Android Users: ಆಂಡ್ರಾಯ್ಡ್ ಬಳಕೆದಾರರಿಗೆ ಕಾದಿದೆ ಅಪಾಯ; ಸರ್ಕಾರದಿಂದ ಗಂಭೀರ ಎಚ್ಚರಿಕೆ

Dog Attack
ದೇಶ25 mins ago

Dog Attack : ಮನೆಯಲ್ಲಿ ಮಲಗಿಸಿದ್ದ ಐದು ತಿಂಗಳ ಮಗುವನ್ನು ಕಚ್ಚಿ ಕೊಂದ ಬೀದಿ ನಾಯಿ!

Fashion Trend
ಫ್ಯಾಷನ್27 mins ago

Fashion Trend: ಯುವತಿಯರನ್ನು ಸೆಳೆದಿರುವ 3 ಶೈಲಿಯ ವೈಟ್‌ ಪ್ಯಾಂಟ್‌ಗಳಿವು!

HSRP Number Plate Registration Deadline Near Will the government impose fines
ಬೆಂಗಳೂರು50 mins ago

HSRP Number Plate: ಬಂದೇ ಬಿಡ್ತು ಎಚ್‌ಎಸ್‌ಆರ್‌ಪಿ ನಂಬರ್‌ ಪ್ಲೇಟ್‌ ನೋಂದಣಿ ಡೆಡ್‌ಲೈನ್‌! ಸರ್ಕಾರದಿಂದ ದಂಡಾಸ್ತ್ರ ಪ್ರಯೋಗ?

kodagu News Woman gives birth to baby in ambulance
ಕೊಡಗು55 mins ago

kodagu News : ಒಮ್ಮಿಂದೊಮ್ಮೆಗೇ ಜೋರಾಯಿತು ನೋವು; ಆಂಬ್ಯುಲೆನ್ಸ್‌ನಲ್ಲೇ ಹೆರಿಗೆ ಮಾಡಿಸಿದ ಸ್ಟಾಫ್‌ ನರ್ಸ್‌

IPL 2024
ಪ್ರಮುಖ ಸುದ್ದಿ56 mins ago

IPL 2024 : ನಾಯಕರಾಗಿ ನೀವೇನು ಮಾಡಿದ್ರಿ? ಪಾಂಡ್ಯನನ್ನು ಟೀಕಿಸಿದ್ದ ವಿಲಿಯರ್ಸ್​ಗೆ ತಿರುಗೇಟು ಕೊಟ್ಟ ಗಂಭೀರ್​

Milk Products
ಆಹಾರ/ಅಡುಗೆ57 mins ago

Milk Products: ಹಾಲು, ಹಾಲಿನ ಉತ್ಪನ್ನ ಸೇವಿಸಿದರೆ ಲಾಭವೋ ನಷ್ಟವೋ?

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

CM Siddaramaiah says Our government is stable for 5 years BJP will disintegrate
Lok Sabha Election 20242 hours ago

CM Siddaramaiah: ನಮ್ಮ ಸರ್ಕಾರ 5 ವರ್ಷ ಸುಭದ್ರ; ಚುನಾವಣೆ ಬಳಿಕ ಬಿಜೆಪಿ ಛಿದ್ರ ಎಂದ ಸಿಎಂ ಸಿದ್ದರಾಮಯ್ಯ!

I dont want to go to other states for Lok Sabha Election 2024 campaign for Congress says CM Siddaramaiah
Lok Sabha Election 20245 hours ago

CM Siddaramaiah: ಕಾಂಗ್ರೆಸ್‌ ಪರ ಬೇರೆ ರಾಜ್ಯಗಳಿಗೆ ಪ್ರಚಾರಕ್ಕೆ ಹೋಗಲು ನನಗೆ ಇಷ್ಟವಿಲ್ಲ: ಸಿಎಂ ಸಿದ್ದರಾಮಯ್ಯ!

HD Revanna Bail I am not happy that Revanna has been released says HD Kumaraswamy
ರಾಜಕೀಯ6 hours ago

HD Revanna Bail: ರೇವಣ್ಣ ಬಿಡುಗಡೆಯಾಗಿದ್ದಕ್ಕೆ ನಾನಂತೂ ಖುಷಿ ಪಡಲ್ಲ ಎಂದ ಎಚ್‌ಡಿಕೆ!

karnataka Rain Effected
ಬೆಂಗಳೂರು7 hours ago

Karnataka Rain: ಮಿಡ್‌ನೈಟ್‌ ಮಳೆ ಅವಾಂತರ; ಮರಗಳು, ವಿದ್ಯುತ್‌ ಕಂಬಗಳು ಧರೆಗೆ, ಕುಸಿದು ಬಿದ್ದ ಮನೆ

Dina Bhavishya
ಭವಿಷ್ಯ13 hours ago

Dina Bhavishya : ಉದ್ಯೋಗದ ಸ್ಥಳದಲ್ಲಿ ನಿಮ್ಮ ವಿರುದ್ಧ ಪಿತೂರಿ ಮಾಡ್ಬಹುದು ಎಚ್ಚರ!

HD Revanna Bail Revanna will not leave the country condition imposed by the court
ಕ್ರೈಂ24 hours ago

HD Revanna Bail: ರೇವಣ್ಣ ದೇಶ ಬಿಡಂಗಿಲ್ಲ, ಕೆ.ಆರ್‌. ನಗರಕ್ಕೆ ಎಂಟ್ರಿ ಕೊಡಂಗಿಲ್ಲ! ಕೋರ್ಟ್‌ ವಿಧಿಸಿದ ಷರತ್ತು ಏನು?

HD Revanna Bail
ಕ್ರೈಂ24 hours ago

HD Revanna Bail: ಎಚ್‌.ಡಿ ರೇವಣ್ಣಗೆ ಕೊನೆಗೂ ಜಾಮೀನು; ಎಸ್‌ಐಟಿಗೆ ಮುಖಭಂಗ!

Prajwal Revanna Case Revanna bail plea to be heard Judge reprimands SIT cops for their behaviour
ಕ್ರೈಂ1 day ago

Prajwal Revanna Case: ರೇವಣ್ಣ ಜಾಮೀನು ಅರ್ಜಿ ವಿಚಾರಣೆ; ಎಸ್‌ಐಟಿ ಪೊಲೀಸರ ವರ್ತನೆಗೆ ಜಡ್ಜ್‌ ಗರಂ!

Karnataka Weather Forecast
ಮಳೆ1 day ago

Karnataka Weather : ನಾಳೆ ಮುಕ್ಕಾಲು ಕರ್ನಾಟಕದಲ್ಲಿ ಬಿರುಗಾಳಿ ಜತೆಗೆ ವಿಪರೀತ ಮಳೆ

Modi Roadshow Live
ದೇಶ1 day ago

Modi Roadshow Live: ವಾರಾಣಸಿಯಲ್ಲಿ ಮೋದಿ ಭರ್ಜರಿ ರೋಡ್‌ ಶೋ; ಲೈವ್‌ ಇಲ್ಲಿ ವೀಕ್ಷಿಸಿ

ಟ್ರೆಂಡಿಂಗ್‌