ವಿಜಯನಗರ, ಬಳ್ಳಾರಿಯ ಅರಣ್ಯ ಪ್ರದೇಶ; ರಕ್ಷಿತ ಅರಣ್ಯ ಎಂದು ಘೋಷಿಸಿದ ಸರ್ಕಾರ - Vistara News

ಪರಿಸರ

ವಿಜಯನಗರ, ಬಳ್ಳಾರಿಯ ಅರಣ್ಯ ಪ್ರದೇಶ; ರಕ್ಷಿತ ಅರಣ್ಯ ಎಂದು ಘೋಷಿಸಿದ ಸರ್ಕಾರ

ಅರಣ್ಯ ಸಂರಕ್ಷಣೆಗೆ ಮುಂದಾಗಿರುವ ರಾಜ್ಯ ಸರ್ಕಾರವು ರಾಜ್ಯದ ರಕ್ಷಿತ ಅರಣ್ಯಗಳ ಸಂಖ್ಯೆಯನ್ನು ಹೆಚ್ಚಿಸಿದೆ. ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಯ ಅರಣ್ಯ ಪ್ರದೇಶ ಈಗ “ರಕ್ಷಿತ ಅರಣ್ಯʼʼ ಎಂದು ಘೋಷಿಸಲ್ಪಟ್ಟಿವೆ.

VISTARANEWS.COM


on

ರಕ್ಷಿತ ಅರಣ್ಯ
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು : ರಾಜ್ಯ ಸರ್ಕಾರವು ವಿಜಯನಗರ ಮತ್ತು ಬಳ್ಳಾರಿ ಜಿಲ್ಲೆಯ ಒಂದೊಂದು ಅರಣ್ಯ ಪ್ರದೇಶವನ್ನು ಹೊಸದಾಗಿ “ರಕ್ಷಿತ ಅರಣ್ಯʼʼ ಎಂದು ಘೋಷಿಸಿ, ಅಧಿಸೂಚನೆ ಹೊರಡಿಸಿದೆ.

ವಿಜಯನಗರ ಜಿಲ್ಲೆಯ ಕೂಡ್ಲಗಿ ತಾಲೂಕಿನ ಗುಡೇಕೋಟೆ ಹೋಬಳಿಯ ಕಸಾಪುರ ಗ್ರಾಮದ 1.83 ಹೆಕ್ಟೇರ್‌ (4.53 ಎಕರೆ) ಅರಣ್ಯ ಪ್ರದೇಶವನ್ನು (ಸರ್ವೇ ನಂಬರ್‌ 418/2) ರಕ್ಷಿತ ಅರಣ್ಯ ಎಂದು ಘೋಷಿಸಲಾಗಿದೆ.

ಅದೇ ರೀತಿಯಾಗಿ ಬಳ್ಳಾರಿ ಜಿಲ್ಲೆಯ ಸಂಡೂರು ತಾಲೂಕಿನ ತೋರಣಗಲ್ಲು ಹೋಬಳಿ, ಅಪ್ಪಲಾಪುರ ಗ್ರಾಮದ 1.998 ಹೆಕ್ಟೇರ್‌ (4.94 ಎಕರೆ) ಪ್ರದೇಶವನ್ನು (ಸರ್ವೇ ನಂಬರ್‌ 25/1&25/2) ರಕ್ಷಿತ ಅರಣ್ಯ ಎಂದು ಘೋಷಿಸಲಾಗಿದೆ.

ಈ ಪ್ರದೇಶದಲ್ಲಿರುವ ಅರಣ್ಯ ಸಂಪತ್ತನ್ನು ರಕ್ಷಿಸಲು ಇನ್ನು ಅರಣ್ಯ ಇಲಾಖೆಯು ಕ್ರಮ ತೆಗೆದುಕೊಳ್ಳಲಿದ್ದು, ಗಡಿಯನ್ನು ಗುರುತಿಸಿ ಅತಿಕ್ರಮವಾಗದಂತೆ ನೋಡಿಕೊಳ್ಳಲಿದೆ.

ಬೆಳ್ಳೂರು ಮೀಸಲು ಅರಣ್ಯದ ಗಡಿ ಗುರುತು
ಚಿಕ್ಕಮಗಳೂರು ಜಿಲ್ಲೆ ನರಸಿಂಹರಾಜಪುರ ತಾಲೂಕಿನ ಬಾಳೆಹೊನ್ನೂರು ಹೋಬಳಿಯ ಬೆಳ್ಳೂರು ಮೀಸಲು ಅರಣ್ಯ ಪ್ರದೇಶವನ್ನೂ ಸರ್ಕಾರ ಅಂತಿಮಗೊಳಿಸಿ ಅಧಿಸೂಚನೆ ಹೊರಡಿಸಿದೆ.

2018ರಲ್ಲಿಯೇ ಸರ್ಕಾರ ಈ ಬೆಳ್ಳೂರು ಗ್ರಾಮದ 37 ಎಕರೆ 15 ಗುಂಟೆ ಪ್ರದೇಶವನ್ನು ಮೀಸಲು ಅರಣ್ಯವೆಂದು ಘೋಷಿಸಲು ಉದ್ದೇಶಿಸಿತ್ತು. ಈ ಪ್ರದೇಶವನ್ನು ಅಧಿಕಾರಿಗಳು ಪರಿಶೀಲಿಸಿ, ಶಿಫಾರಸು ಮಾಡಿರುವುದರಿಂದ ಈಗ ಅಧಿಕೃತವಾಗಿ ಈ ಅರಣ್ಯ ಪ್ರದೇಶವನ್ನು (ಸರ್ವೇ ನಂಬರ್‌ 33) “ಬೆಳ್ಳೂರು ಬ್ಲಾಕ್‌ʼʼ ಮೀಸಲು ಅರಣ್ಯ ಎಂದು ಘೋಷಿಸಲಾಗಿದೆ.

ಈ ಮೀಸಲು ಅರಣ್ಯ ಪ್ರದೇಶದಲ್ಲಿ ಸ್ಥಳೀಯ ನಿವಾಸಿಗಳಿಗೆ ಎಳೆಯ ನೆಡುತೋಪು ಪ್ರದೇಶಗಳನ್ನು ಹೊರತುಪಡಿಸಿ ಉಳಿದ ಪ್ರದೇಶಗಳಲ್ಲಿ ತಮ್ಮ ಜಾನುವಾರುಗಳಿಗೆ ಉಚಿತವಾಗಿ ಹುಲ್ಲು ಮೇಯಿಸಲು ಹಾಗೂ ತಮ್ಮ ಸ್ವಂತ ಉಪಯೋಗಕ್ಕಾಗಿ ಉಚಿತವಾಗಿ ಒಣ ಎಲೆಯನ್ನು ಸಂಗ್ರಹಿಸಲು ಅವಕಾಶವಿರುತ್ತದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ | ನಮೀಬಿಯಾದಿಂದ ಬಂದ ಚೀತಾಗಳ ಮೊದಲ ಬೇಟೆ; ಅರಣ್ಯಕ್ಕೆ ಬಿಡುತ್ತಿದ್ದಂತೆ ಕೊಂದಿದ್ದು ಯಾವ ಪ್ರಾಣಿಯನ್ನು ಗೊತ್ತಾ?

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪರಿಸರ

Arecanut Research Centre: ಹೊಸ ಅಡಿಕೆ ಸಂಶೋಧನಾ ಕೇಂದ್ರ ಮತ್ತೊಂದು ಮದುವೆ ಛತ್ರ ಆಗದಿರಲಿ!

Arecanut Research Centre: ಇರುವ ಅಡಿಕೆ ಸಂಶೋಧನಾ ಕೇಂದ್ರಗಳಲ್ಲಿ ಅಡಿಕೆ ರೋಗಗಳ ವಿಚಾರದಲ್ಲಿ ಯಾವುದೇ ಮಹತ್ತರ ಸಂಶೋಧನೆ, ಅಧ್ಯಯನಗಳು ನೆಡೆಯದೆ ಇರುವಾಗ, ಮತ್ತೊಂದು ಅಡಿಕೆ ಸಂಶೋಧನಾ ಕೇಂದ್ರ ಕರ್ನಾಟಕಕ್ಕೆ ಬೇಕಾ ಎನ್ನುವುದು ಅಡಿಕೆ ಬೆಳೆಗಾರರ ಮುಂದಿರುವ ಪ್ರಶ್ನೆ.

VISTARANEWS.COM


on

Koo

-ಅರವಿಂದ ಸಿಗದಾಳ್, ಮೇಲುಕೊಪ್ಪ
ನಿಯಮ 377ರ ಅಡಿಯಲ್ಲಿ ಹಳದಿ ರೋಗದ (Arecanut Research Centre) ಹರಡುವಿಕೆಯಿಂದ ದಕ್ಷಿಣ ಕನ್ನಡ ಜಿಲ್ಲೆಯ ಅಡಿಕೆ ಬೆಳೆಗಾರರು ಅನುಭವಿಸುತ್ತಿರುವ ನಷ್ಟದ ಕುರಿತು ಲೋಕಸಭೆಯಲ್ಲಿ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟರವರು ವಿಷಯ ಪ್ರಸ್ತಾಪಿಸಿ ಗಮನ ಸೆಳೆದಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಡಿಕೆ ಬೆಳೆಗಾರರು ಎದುರಿಸುತ್ತಿರುವ ಹಳದಿ ಎಲೆ ರೋಗ ಸಮಸ್ಯೆ ಬಗ್ಗೆ ಒಂದೇ ಹಂತದಲ್ಲಿ ಪರಿಹಾರ ನೀಡುವ ಮೂಲಕ ಬಿಕ್ಕಟ್ಟನ್ನು ಬಗೆಹರಿಸಲು ಮುಂದಾಗಬೇಕು ಎಂದು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಲಾಯಿತು. ಈ ರೋಗ ತಡೆಗೆ ಸಂಬಂಧಿಸಿ, ದಕ್ಷಿಣ ಕನ್ನಡದಲ್ಲಿ ಅಡಿಕೆ ಸಂಶೋಧನಾ ಸಂಸ್ಥೆ ಸ್ಥಾಪಿಸಲು ಹಣಕಾಸು ನೆರವನ್ನು ನೀಡಬೇಕು ಎಂದು ಲೋಕಸಭೆಗೆ ಕ್ಯಾಪ್ಟನ್ ಬ್ರಿಜೇಶ್ ಚೌಟ ಮನವಿ ಮಾಡಿದ್ದಾರೆ.

arecanut price
Arecanut Price

ಇನ್ನೊಂದು ಅಡಿಕೆ ಸಂಶೋಧನಾ ಕೇಂದ್ರ ಬೇಕಾ?

ಇರುವ ಅಡಿಕೆ ಸಂಶೋಧನಾ ಕೇಂದ್ರಗಳಲ್ಲಿ ಅಡಿಕೆ ರೋಗಗಳ ವಿಚಾರದಲ್ಲಿ ಯಾವುದೇ ಮಹತ್ತರ ಸಂಶೋಧನೆ, ಅಧ್ಯಯನಗಳು ನೆಡೆಯದೆ ಇರುವಾಗ, ಮತ್ತೊಂದು ಅಡಿಕೆ ಸಂಶೋಧನಾ ಕೇಂದ್ರ ಕರ್ನಾಟಕಕ್ಕೆ ಬೇಕಾ ಎನ್ನುವುದು ಅಡಿಕೆ ಬೆಳೆಗಾರರ ಮುಂದಿರುವ ಪ್ರಶ್ನೆ.
ತೀರ್ಥಹಳ್ಳಿ ಮತ್ತು ಶೃಂಗೇರಿಗಳಲ್ಲಿ ಈಗಾಗಲೇ ಸಂಶೋಧನಾ ಕೇಂದ್ರಗಳಿದ್ದು, ಅಲ್ಲಿ ಅಡಿಕೆಗೆ ಸಂಬಂಧಿಸಿದ ಯಾವ ಮಹತ್ತರವಾದ ಸಂಶೋಧನೆಗಳೂ ನೆಡೆಯುತ್ತಿರುವ ವರದಿಗಳಿಲ್ಲ. ಅದರಲ್ಲೂ ಶೃಂಗೇರಿ ಸಂಶೋಧನಾ ಕೇಂದ್ರದ ಸುತ್ತಮುತ್ತಲಿನ ಅಡಿಕೆ ತೋಟಗಳಿಗೆ ಹಳದಿ ರೋಗ ಬಂದು, ದಶಕಗಳೇ ಕಳೆದು, ಈಗ ಎಲೆ ಚುಕ್ಕಿ ರೋಗವೂ ಜೊತೆಗೂಡಿ ತೋಟಗಳೇ ನಾಶವಾಗಿವೆ. ಶೃಂಗೇರಿ ಕ್ಷೇತ್ರದ ಸುತ್ತಮುತ್ತಲಿನ ಅಡಿಕೆ ಬೆಳೆಗಾರರು ಪರ್ಯಾಯ ಬೆಳೆಯ ದಾರಿ ಹುಡುಕುತ್ತಿದ್ದಾರೆ. ಹಳದಿರೋಗ, ಎಲೆಚುಕ್ಕಿ ರೋಗದ ಬಾಧೆ ತಾಳಲಾರದೆ ಪರ್ಯಾಯ ಕ್ಷೇತ್ರಗಳಲ್ಲಿ ಬದುಕು ಕಟ್ಟಿಕೊಳ್ಳುವ ಪ್ರಯತ್ನ ಮಾಡುತ್ತಿದ್ದಾರೆ.

ವಿಜ್ಞಾನಿಗಳೆಲ್ಲಿ?

ಅಡಿಕೆ ಎಲೆಚುಕ್ಕಿ, ಹಳದಿ ರೋಗಗಳ ಬಗ್ಗೆ ಎರಡು ವರ್ಷಗಳ ಹಿಂದೆ ಸ್ಥಳೀಯ ಅಡಿಕೆ ಬೆಳೆಗಾರರ ತೀವ್ರ ಒತ್ತಡ ತಂದಾಗ, ಆಗಿನ ರಾಜ್ಯ ಸರಕಾರದ ತೋಟಗಾರಿಕೆ ಸಚಿವರು “ಅಗತ್ಯ ಬಿದ್ದರೆ ಇಸ್ರೇಲ್‌ನಿಂದ ವಿಜ್ಞಾನಿಗಳನ್ನು ಕರೆಸೋಣ. ಅತಿ ಶೀಘ್ರದಲ್ಲಿ ವಿಜ್ಞಾನಿಗಳನ್ನು ಕರೆಸಿ ಎರಡೂ ರೋಗಗಳ ಬಗ್ಗೆ ತ್ವರಿತಗತಿಯಲ್ಲಿ ಅಧ್ಯಯನ, ಸಂಶೋದನೆಗೆ ಒತ್ತು ಕೊಟ್ಟು ಅಡಿಕೆ ರೋಗಗಳಿಗೆ ಪರಿಹಾರ ಕೊಡಿಸುತ್ತೇನೆ” ಎಂದಿದ್ದರು. ಅಡಿಕೆ ಹಳದಿ ರೋಗ, ಎಲೆ ಚುಕ್ಕಿರೋಗಗಳಿಂದ ಶೃಂಗೇರಿ ಪ್ರಾಂತ್ಯದ ಅಡಿಕೆ ತೋಟಗಳು ‘ಕುರುಕ್ಷೇತ್ರದ’ ಬಣ್ಣಕ್ಕೆ ತಿರುಗಿದ್ದ ಕಾಲ ಅದು!
ನುಡಿದಂತೆ ನಡೆದ ಸಚಿವರು ಮೂರು ವಿಜ್ಞಾನಿಗಳನ್ನು ಶೃಂಗೇರಿಯಲ್ಲಿರುವ ಅಡಿಕೆ ಸಂಶೋಧನಾ ಕೇಂದ್ರಕ್ಕೆ ಡೆಪ್ಯೂಟ್ ಮಾಡಿದರು! ಆದರೆ, ಡೆಪ್ಯೂಟ್ ಡ್ರಾಮಾ ಎಷ್ಟು ತಮಾಷೆಯಾಗಿತ್ತು ಅಂದರೆ, ಡೆಪ್ಯೂಟ್ ಆದ ಮೇಲೆ, ಆ ಮೂರು ಜನ ವಿಜ್ಞಾನಿಗಳೊಂದಿಗೆ ರೈತ ಸಂವಾದ ಕಾರ್ಯಕ್ರಮ ನೆಡೆಸಿದಾಗ ತಿಳಿದಿದ್ದು ಮೂವರೂ ವಿಜ್ಞಾನಿಗಳು ಅಡಿಕೆ ತೋಟದ ವಿಚಾರದಲ್ಲಿ ಪ್ರೀ ನರ್ಸರಿ ಮಾಹಿತಿಯೂ ಇಲ್ಲದವರು ಎಂದು! ಮೂವರು ವಿಜ್ಞಾನಿಗಳೂ ಹೊಸಬರು. ಅಡಿಕೆ ವಿಚಾರದ ವೃತ್ತಿ ಅನುಭವ ಇಲ್ಲದವರು. ಕನಿಷ್ಠ ಪಕ್ಷ ಅಡಿಕೆ ತೋಟದ ಕಪ್ಪು ದಾಟಿದ ಅನುಭವವೂ ಇಲ್ಲದವರು! ಇಸ್ರೇಲ್ ಬೇಡ ಭಾರತದಲ್ಲೇ, ಅದರಲ್ಲೂ ಕರ್ನಾಟಕದಲ್ಲೇ ನುರಿತ ಅನುಭವಿ ತಜ್ಞ ವಿಜ್ಞಾನಿಗಳು ಇರಲಿಲ್ವಾ?
ಕೆಲವು ತಿಂಗಳು ಕಳೆಯುವುದರೊಳಗೆ ಬಂದ ಅಧಿಕೃತ ಸುದ್ದಿ ‘ಆ ಮೂವರು ‘ಹೊಸ’ ವಿಜ್ಞಾನಿಗಳನ್ನು ಬೇರೆಡೆಗೆ ವರ್ಗಾಯಿಸಲಾಗಿದೆ’ ಎಂದು. ಅಲ್ಲಿಗೆ ಹಳದಿ, ಎಳೆ ಚುಕ್ಕಿ ಸಂಶೋಧನೆಗಳು, ರೋಗ ಅಧ್ಯಯನಗಳು ಶೃಂಗೇರಿ ಆಶ್ಲೇಷಾ ಮಳೆಯ ನೆರೆಯಲ್ಲಿ ಹುಣಸೇಹಣ್ಣು ಕರಗಿದಂತೆ ಕರಗಿ ತೇಲಿ ಹೋಯಿತು!

Arecanut Price
Arecanut Price

ನರಳುತ್ತಿದೆ ಸಂಶೋಧನೆ

ಲ್ಯಾಬ್ ಇಲ್ಲದ, ವಿಜ್ಞಾನಿಗಳಿಲ್ಲದ, ಸಿಬ್ಬಂದಿ ಇಲ್ಲದ, ಸಂಶೋಧನೆಗೆ ಅನುದಾನವೂ ಇಲ್ಲದೆ ನರಳುತ್ತಿರುವ ತೀರ್ಥಹಳ್ಳಿ ಮತ್ತು ಶೃಂಗೇರಿಯ ಎರಡೂ ಸಂಶೋಧನಾ ಕೇಂದ್ರಗಳನ್ನು ಕರಿ ಕಸ ಗುಡಿಸಿ ಮದುವೆ, ಮುಂಜಿಗಳಗೆ ಬಾಡಿಗೆಗೆ ಕೊಟ್ಟರೆ ಸರ್ಕಾರಕ್ಕೆ ಒಂದಿಷ್ಟು ಆದಾಯ ಬರಬಹುದು ಅಂತ ಅಡಿಕೆ ಬೆಳೆಗಾರರು ಮಾತಾಡಿಕೊಳ್ತಾ ಇದ್ದಾರೆ.
ಈಗಲೂ ಆ ಸಂಶೋಧನಾ ಛತ್ರಗಳಲ್ಲಿ ವರ್ಷಕ್ಕೊಂದೆರಡು ಕೃಷಿ ಸಮಾಲೋಚನೆ, ಮಾಹಿತಿ ಶಿಬಿರಗಳನ್ನು ನೆಡೆಸಿ ರೈತರಿಗೆ ಒಂದು ಪಲಾವ್ ಊಟ ಹಾಕಿಸಲಾಗುತ್ತದೆ! ಮಣ್ಣು ಪರೀಕ್ಷೆಗೆ ಕೊಟ್ಟರೆ, ಹದಿನೆಂಟು ಪ್ಯಾರಾಮೀಟರ್‌ಗಳಲ್ಲಿ ಮೂರು ಪ್ಯಾರಾಮೀಟರ್ ಚಕ್ ಮಾಡುವ ಉಪಕರಣಗಳೂ ಅಲ್ಲಿಲ್ಲ, ಸಿಬ್ಬಂದಿಯೂ ಇಲ್ಲ. ಅನುದಾನ ಬಂದಿದ್ದರಲ್ಲಿ ಖುರ್ಚಿ, ಪೋಡಿಯಂ, ಡೆಸ್ಕ್, ಟೇಬಲ್‌ಗಳನ್ನು ವಾಸ್ತು ಪ್ರಕಾರ ಹಾಕಿ ಮೆಯಿನ್ಟೆಯಿನ್ ಮಾಡಲಾಗುತ್ತಿದೆ!

ಇದನ್ನೂ ಓದಿ: ವಿಸ್ತಾರ ಗ್ರಾಮ ದನಿ: ಅಡಿಕೆ ಬೆಳೆಗಾರರೂ ‘ಇನ್‌ಕಮ್ ಟ್ಯಾಕ್ಸ್ ರಿಟರ್ನ್ಸ್ʼ ಸಲ್ಲಿಸಬೇಕಾ? ಸಲ್ಲಿಸದಿದ್ದರೆ ಏನಾಗುತ್ತದೆ?

ರೋಗ ಯಾವುದು? ಪರಿಹಾರ ಏನು?

ಸಂಶೋಧನೆ, ಅಧ್ಯಯನಗಳು ಮೊದಲು ಆಗಬೇಕಾಗಿದ್ದು ಹಳದಿ ರೋಗ, ಎಲೆ ಚುಕ್ಕಿ ರೋಗಗಳಿಗಲ್ಲ. ಮೊದಲು ಸಂಶೋಧನೆ ಆಗಬೇಕಾಗಿರುವುದು ಅಡಿಕೆ ಸಂಶೋಧನಾ ಕೇಂದ್ರಗಳಿಗೆ ಬಂದಿರುವ ರೋಗ ಯಾವುದು? ಪರಿಹಾರ ಏನು ಎಂದು ನೋಡುವುದಕ್ಕೆ! ಇರುವ ಎರಡು ಅಡಿಕೆ ಸಂಶೋಧನಾ ಕೇಂದ್ರಗಳಿಗೆ ಕೊರೋನಾ, ಡೆಂಗ್ಯು ಬಂದು ನರಳುತ್ತಿರುವಾಗ, ಈಗ ಇನ್ನೊಂದು ಸಂಶೋಧನಾ ಕೇಂದ್ರವನ್ನು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ತೆರೆಯಲು ಮುಂದಾಗುವುದು, ಅದಕ್ಕೆ ಸ್ಥಳಿಯ ಸಂಸದರು ಒತ್ತಾಯಿಸುವುದು ಸುಮ್ಮನೆ ಹಣ ವ್ಯರ್ಥ ಅನಿಸುತ್ತದೆ. ದಕ್ಷಿಣ ಕನ್ನಡದಲ್ಲಿ ಸಾಕಷ್ಟು ಛತ್ರಗಳಿರುವುದರಿಂದ, ಮತ್ತೊಂದು ಛತ್ರದ ಕಟ್ಟಡ ನಿರ್ಮಾಣ ಬೇಡ ಅನಿಸುತ್ತದೆ! ಬೇಕೇ ಬೇಕು ಅನ್ನುವುದಾದಲ್ಲಿ ಘಟ್ಟದ ಮೇಲಿನ ಸಂಶೋಧನಾ ಛತ್ರಗಳ ಕಾರ್ಯಕ್ಷಮತೆಯನ್ನು ಒಮ್ಮೆ ಸಂಶೋಧನೆ ಮಾಡಿ ತೀರ್ಮಾನ ಮಾಡುವುದು ಒಳ್ಳೆಯದು. ಹೊಸ ಸಂಶೋಧನಾ ಕೇಂದ್ರದ ಹಣದಲ್ಲಿ, ಇರುವ ಸಂಶೋಧನಾ ಕೇಂದ್ರಗಳನ್ನು ಬಲ ಪಡಿಸಿ, ಅಡಿಕೆ ರೋಗಗಳಿಗೆ ಪರಿಹಾರ ಕಂಡುಕೊಳ್ಳುವ ಪ್ರಯತ್ನ ಮಾಡಬಹುದು.

Continue Reading

ಪರಿಸರ

ವಿಸ್ತಾರ ಗ್ರಾಮ ದನಿ: ಅಡಿಕೆ ಬೆಳೆಗಾರರೂ ‘ಇನ್‌ಕಮ್ ಟ್ಯಾಕ್ಸ್ ರಿಟರ್ನ್ಸ್ʼ ಸಲ್ಲಿಸಬೇಕಾ? ಸಲ್ಲಿಸದಿದ್ದರೆ ಏನಾಗುತ್ತದೆ?

Vistara Gramadani: ಯಾವ ಬ್ಯಾಂಕ್ ಕೂಡ TDS ಕಟ್ಟಿ (ವಿಸ್ತಾರ ಗ್ರಾಮ ದನಿ) ಅಂತ ಕೇಳಲ್ಲ. ಗಾಬರಿ ಬೇಡ. TDS ಅಂದ್ರೆ TAX Deducted at Source ಅಂತ. ಅಂದರೆ ಈಗಾಗಲೆ ನಿಮ್ಮ ಫಿಕ್ಸೆಡ್ ಡಿಪಾಸಿಟ್ (FD ಅಕೌಂಟ್) ಮೇಲೆ ಕೊಟ್ಟ ಒಟ್ಟು ಬಡ್ಡಿಯ ಮೇಲೆ 10% ಆದಾಯ ತೆರಿಗೆಯನ್ನು ನಿಮ್ಮ ಬಡ್ಡಿಯಿಂದ ಕಳೆದು, ಆದಾಯ ತೆರಿಗೆ ಇಲಾಖೆಗೆ ಕಟ್ಟಿರುತ್ತಾರೆ. ಅಡಿಕೆ ಬೆಳೆಗಾರರೂ ಇದಕ್ಕೆ ಹೊರತಲ್ಲ! ಹಾಗಾದರೆ ಹಣ ಕಟ್‌ ಆಗದ ಹಾಗೆ ಮಾಡಲು ಏನು ಮಾಡಬೇಕು? ಇಲ್ಲಿದೆ ಸರಳ ಮಾಹಿತಿ.

VISTARANEWS.COM


on

Arecanut Price
Koo
Aravinda Sigadal

| ಅರವಿಂದ ಸಿಗದಾಳ್, ಮೇಲುಕೊಪ್ಪ
ಉಜಿರೆ ಸಮೀಪದ ಒಂದು ಹಳ್ಳಿಯಿಂದ ಮಂಜುನಾಥ್ ಎನ್ನುವವರು ಫೋನ್ ಮಾಡಿ “ನಾನು ಅಡಿಕೆ ಬೆಳೆಗಾರ, ನಿಮ್ಮ ಅಡಿಕೆ ಬೆಳೆಗಾರರ ವಾಟ್ಸಪ್ ಗ್ರೂಪ್‌ನಲ್ಲಿದ್ದೇನೆ. ನನಗೆ ನನ್ನ ಬ್ಯಾಂಕಿಂದ ಒಂದು ಇ-ಮೇಲ್‌ ಬಂದಿದೆ. ಅದರಲ್ಲಿ ₹ 6,200 TDS ಕಟ್ಟಬೇಕು ಅಂತ ಬಂದಿದೆ. ಎನು ಮಾಡುವುದು? ಈ TDS ಅಂದ್ರೆ ಎಂತ?” ಅಂದ್ರು. “ಮೊದಲನೆಯದಾಗಿ, ಯಾವ ಬ್ಯಾಂಕ್ ಕೂಡ TDS ಕಟ್ಟಿ ಅಂತ ಕೇಳಲ್ಲ. ಗಾಬರಿ ಬೇಡ. TDS ಅಂದ್ರೆ TAX Deducted at Source ಅಂತ. ಅಂದ್ರೆ ಈಗಾಗಲೆ ನಿಮ್ಮ ಫಿಕ್ಸೆಡ್ ಡಿಪೋಸಿಟ್ (FD ಅಕೌಂಟ್) ಮೇಲೆ ಕೊಟ್ಟ ಒಟ್ಟು ಬಡ್ಡಿಯ ಮೇಲೆ 10% ಆದಾಯ ತೆರಿಗೆಯನ್ನು ನಿಮ್ಮ ಬಡ್ಡಿಯಿಂದ ಕಳೆದು, ಆದಾಯ ತೆರಿಗೆ ಇಲಾಖೆಗೆ ಕಟ್ಟಿರುತ್ತಾರೆ. ನಿಮಗೆ ಬಂದಿರೋ ಮಾಹಿತಿ ಬಹುಶಃ (Vistara Gramadani) ಅದೇ ಇರಬೇಕು” ಅಂದೆ.

ನಾನೊಬ್ಬ ಕೃಷಿಕ, ತೆರಿಗೆ ಕಟ್ಟಬೇಕಾ?

“ಅಯ್ಯೋ, ನನ್ನಿಂದ ಯಾಕೆ ಆದಾಯ ತೆರಿಗೆ ತಗೊಂಡಿದಾರೆ? ನಾನೊಬ್ಬ ಕೃಷಿಕ. ಈ ರೀತಿ ನನಗೆ ಗೊತ್ತಿಲ್ಲದೆ ಟ್ಯಾಕ್ಸ್ ತಗೊಂಡಿದ್ದು ತಪ್ಪಲ್ವಾ? ಅದರಲ್ಲೂ ನನಗೆ ಕೃಷಿ ಇನ್‌ಕಮ್ ಬಿಟ್ಟು ಬೇರೆ ಆದಾಯ ಇಲ್ಲ. ಕೃಷಿ ಆದಾಯಕ್ಕೆ ಟ್ಯಾಕ್ಸ್ ಇಲ್ಲ ಅಲ್ವಾ?” ಅಂದ್ರು. “ಹೌದು. ಕೃಷಿ ಆದಾಯಕ್ಕೆ ಟ್ಯಾಕ್ಸ್ ಇಲ್ಲ. ಕೃಷಿಕರಾದವರಿಗೆ ಕೃಷಿಯೇತರ ಆದಾಯ ಇದ್ರೆ, ಅದೂ ತೆರಿಗೆ ಮಿತಿಗೆ ಒಳ ಪಡುವ ಆದಾಯಕ್ಕಿಂತ ಹೆಚ್ಚಿದ್ದರೆ ಮಾತ್ರ ತೆರಿಗೆ ಬರುತ್ತದೆ. ನಿಮ್ಮ FD ಬಡ್ಡಿ ಕೃಷಿಯೇತರ ಆದಾಯ ಆಗಿದೆ. FDಯ ಮೂಲ ಇನ್ವೆಸ್ಟ್‌ಮೆಂಟ್ ಹಣ ಕೃಷಿಯದ್ದಾದರೂ, ಅದಕ್ಕೆ ಬಂದ ಬಡ್ಡಿ ಕೃಷಿಯೇತರ ಆದಾಯವಾಗಿರುತ್ತದೆ. ಹಾಗಾಗಿ ಬ್ಯಾಂಕ್‌ನವರು FD ಬಡ್ಡಿಗೆ 10% ತೆರಿಗೆಯನ್ನು ಬ್ಯಾಂಕಿನಲ್ಲಿ ಮುರಿದುಕೊಂಡಿದ್ದಾರೆ. ಜೊತೆಗೆ, ಬುಹುಶಃ ನೀವು FD ಮಾಡುವಾಗ ಕೊಡಬೇಕಿದ್ದ ಫಾರಂ 15G/ ಅಥವಾ 15H ನ್ನು ಕೊಟ್ಟಿರುವುದಿಲ್ಲ. ಇದರಿಂದ ನಿಮ್ಮ ಬಡ್ಡಿ ಹಣದಲ್ಲಿ 6,200 ರೂಪಾಯಿಗಳು TDS ಕಟ್ಟಾಗಿದೆ. ಏನೂ ಸಮಸ್ಯೆ ಇಲ್ಲ, ಹತ್ತಿರದ ಟ್ಯಾಕ್ಸ್ ಕನ್ಸಲ್ಟೆಂಟ್ ಅಥವಾ ಇನ್‌ಕಮ್‌ ಟ್ಯಾಕ್ಸ್ ರಿಟರ್ನ್ಸ್ ಮಾಹಿತಿ ಇದ್ದವರ ಬಳಿಯಲ್ಲಿ ಟ್ಯಾಕ್ಸ್ ರಿಟರ್ನ್ಸ್ ಸಬ್‌ಮಿಶನ್ ಮಾಡ್ಸಿ, 45 ದಿನಗಳ ಒಳಗೆ 6,200 ವಾಪಾಸ್ ಬರುತ್ತೆ”

ಕೃಷಿ ಆದಾಯಕ್ಕೆ ಆದಾಯ ತೆರಿಗೆ ಇಲ್ಲ

ಭಾರತವು ತನ್ನ ಮೂಲಭೂತ ಆಹಾರದ ಅವಶ್ಯಕತೆಗಳಿಗಾಗಿ ಸಂಪೂರ್ಣವಾಗಿ ಕೃಷಿಯ ಮೇಲೆ ಅವಲಂಬಿತವಾಗಿದೆ. ಈ ವಲಯದಲ್ಲಿ ಬೆಳವಣಿಗೆಯನ್ನು ಉತ್ತೇಜಿಸಲು ಸರ್ಕಾರವು ಹಲವಾರು ಯೋಜನೆಗಳು, ನೀತಿಗಳು ಮತ್ತು ಇತರ ಕ್ರಮಗಳನ್ನು ಹೊಂದಿದೆ – ಅವುಗಳಲ್ಲಿ ಒಂದು ಕೃಷಿ ಆದಾಯವನ್ನು ಆದಾಯ ತೆರಿಗೆಯಿಂದ ವಿನಾಯಿತಿಗೊಳಿಸಲಾಗಿದೆ. ಕೃಷಿ ಆದಾಯಕ್ಕೆ ಆದಾಯ ತೆರಿಗೆ ಇಲ್ಲ.
ಕೃಷಿಯೇತರ ವ್ಯವಹಾರಗಳಿಂದ ಬರುವ ಆದಾಯ ಮೂಲ ವಿನಾಯಿತಿ ಮಿತಿಗಿಂತ ಕಡಿಮೆಯಿದ್ದರೆ ಅದಕ್ಕೂ ತೆರಿಗೆ ಇರುವುದಿಲ್ಲ. ಉದಾಹರಣೆಗೆ ದೊಡ್ಡ ಮೊತ್ತವನ್ನು ಫಿಕ್ಸಡ್ ಡೆಪೋಸಿಟ್ ಮಾಡಿ ಅದಕ್ಕೆ ವಾರ್ಷಿಕ 1.8 ಲಕ್ಷ ರೂಪಾಯಿ ಆದಾಯ ಬಂದಿದ್ದರೂ ಅದಕ್ಕೆ ಆದಾಯ ತೆರಿಗೆ ಇರುವುದಿಲ್ಲ. ಯಾಕೆಂದರೆ, ಕೃಷಿಯೇತರ ಆದಾಯ, ಆದಾಯ ಮೂಲ ವಿನಾಯಿತಿ ಮಿತಿಗಿಂತ ಕಡಿಮೆಯಿದೆ. (2023-24 ಕ್ಕೆ ಆದಾಯ ಮೂಲ ವಿನಾಯಿತಿ ಮಿತಿ ₹.3.00 ಲಕ್ಷ)

ಇದನ್ನೂ ಓದಿ: ವಿಸ್ತಾರ ಗ್ರಾಮ ದನಿ: ಅಡಿಕೆ ರೋಗಗಳ ನಿವಾರಣೆಗೆ ‘ಕೃಷಿ ಸುಣ್ಣ’ ರಾಮಬಾಣ!

ಫಾರಂ 15G ಮತ್ತು 15H ಅಂದರೇನು?

ಸೂಕ್ಷ್ಮ ಇರುವುದು ಇಲ್ಲಿ. ವಾರ್ಷಿಕ FD ಇಂಟ್ರೆಸ್ಟ್ ಆದಾಯ ಮೂಲ ವಿನಾಯಿತಿ ಮಿತಿಗಿಂತ ಕಡಿಮೆ ಇರುವ ಸಂದರ್ಭದಲ್ಲಿ, ಬ್ಯಾಂಕಿನಲ್ಲಿ FD ಮಾಡುವಾಗ, ಆದಾಯ ಮೂಲ ವಿನಾಯಿತಿ ಮಿತಿಗಿಂತ ಕಡಿಮೆಯಿದೆ ಎಂದು ಫಾರಂ 15G ಮತ್ತು 15H ನ್ನು ಭರ್ತಿ ಮಾಡಿ ಕೊಡಬೇಕು.
ಒಬ್ಬ ವ್ಯಕ್ತಿಯ ಬಡ್ಡಿ ಆದಾಯವು ವರ್ಷಕ್ಕೆ ರೂ. 10,000ಕ್ಕಿಂತ ಹೆಚ್ಚಿರುವಾಗ ಬ್ಯಾಂಕುಗಳು TDS ಅನ್ನು ಕಡಿತಗೊಳಿಸಬೇಕಾಗುತ್ತದೆ. ₹10,000 ಈ ಮಿತಿಯನ್ನು ನಿರ್ಧರಿಸಲು ಬ್ಯಾಂಕ್ ಎಲ್ಲಾ ಶಾಖೆಗಳಲ್ಲಿ ಹೊಂದಿರುವ ಠೇವಣಿಗಳನ್ನು ಒಳಗೊಂಡಿದೆ. ಒಬ್ಬ ವ್ಯಕ್ತಿಯ ಒಟ್ಟು ಆದಾಯವು ತೆರಿಗೆಯ ಮಿತಿಗಿಂತ ಕಡಿಮೆಯಿದ್ದರೆ, ಅವನು/ಅವಳು ಬಡ್ಡಿ ಮೊತ್ತದ ಮೇಲೆ TDS ಕಡಿತಗೊಳಿಸದಂತೆ ವಿನಂತಿಸಲು ಬ್ಯಾಂಕ್‌ಗೆ ಫಾರ್ಮ್ 15G ಮತ್ತು ಫಾರ್ಮ್ 15H ಅನ್ನು ಸಲ್ಲಿಸಬಹುದು. ಈ ಫಾರಂ ಸಲ್ಲಿಸದಿದ್ದಲ್ಲಿ, ಬ್ಯಾಂಕುಗಳು ಸಹಜವಾಗಿ ಒಟ್ಟು ಬಡ್ಡಿಯಲ್ಲಿ 10% ಆದಾಯ ತೆರಿಗೆ ಎಂದು ಕಡಿತ ಮಾಡಿ, ತೆರಿಗೆಯನ್ನು ತೆರಿಗೆ ಇಲಾಖೆಗೆ ಕಟ್ಟುತ್ತದೆ. ಅದರ ಒಂದು ದಾಖಲಾತಿಯಾಗಿ TDS (ಟ್ಯಾಕ್ಸ್ ಡಿಡಕ್ಟೆಡ್ ಎಟ್ ಸೋರ್ಸ್) ಬ್ಯಾಂಕಿನವರು ಕೊಡುತ್ತಾರೆ. (ಬ್ಯಾಂಕಿನವರು ಕೇಳಿದರೆ ಕೊಡ್ತಾರೆ. ಕೆಲವು ಬ್ಯಾಂಕ್‌ಗಳಲ್ಲಿ ಇ-ಮೇಲ್‌ ಮಾಡಿರ್ತಾರೆ).
TDS ಅನ್ನು ಬ್ಯಾಂಕಿನವರು ಕೊಡುವುದೂ ಬೇಕಾಗಿಲ್ಲ. PAN ನಂಬರ್‌ ಬಳಸಿ, Incomtax portalನಲ್ಲಿ ಇದನ್ನು ಪಡೆದು ಪರಿಶೀಲಿಸಬಹುದು.

ಉಜಿರೆ ರೈತರ ಹಣ ಕಡಿತ ಆಗಿದ್ದೇಕೆ?

ಈಗ ಅಡಿಕೆ ಬೆಳೆಗಾರ ಉಜಿರೆ ಮಂಜುನಾಥ್‌ ಅವರ ವಿಷಯಕ್ಕೆ ಬರೋಣ. ಅವರು FD ಮಾಡುವಾಗ ಫಾರ್ಮ್ 15G ಮತ್ತು ಫಾರ್ಮ್ 15H ಕೊಟ್ಟಿಲ್ಲದ ಕಾರಣ ₹ 6,200 TDS ಕಟ್ಟಾಗಿದೆ.
ಮಂಜುನಾಥ‌ರವರು ಆ 6,200ನ್ನು ಹಿಂಪಡೆಯಲು ಜುಲೈ 31ರ ಒಳಗೆ ಇನ್‌ಕಮ್ ಟ್ಯಾಕ್ಸ್ ರಿಟರ್ನ್ಸ್‌ನ್ನು (ITR) ಆದಾಯ ತೆರಿಗೆ ಇಲಾಖೆಗೆ ಸಲ್ಲಿಸಬೇಕು. ಕೃಷಿ ಆದಾಯ, ಕೃಷಿಯೇತರ (ಬಡ್ಡಿ) ಆದಾಯದ ಮಾಹಿತಿಗಳನ್ನು ITR ನಲ್ಲಿ ತೋರಿಸಬೇಕು. 45 ದಿನಗಳೊಳಗೆ ಬ್ಯಾಂಕ್ ಕಡಿತಗೊಳಿಸಿದ TDS ಮರು ಪಾವತಿಯಾಗಿ SB ಖಾತೆಗೆ ಜಮಾ ಆಗುತ್ತದೆ.
ITR ಸಲ್ಲಿಸುವಾಗ ಎಲ್ಲಾ SB ಖಾತೆಗಳ ಮಾಹಿತಿಯನ್ನು (ಅಕೌಂಟ್ ನಂಬರ್, IFSC ಕೋಡ್) ನಮೂದಿಸಬೇಕು. ಹಾಗಾಗಿ, ಇಂತಹ ಸಂದರ್ಭದಲ್ಲಿ, ಅಡಿಕೆ ಬೆಳೆಗಾರರು ಮತ್ತು ಎಲ್ಲಾ ಕೃಷಿಕರು ಇನ್‌ಕಮ್ ಟ್ಯಾಕ್ಸ್ ರಿಟರ್ನ್ಸ್ ಸಬ್‌ಮಿಷನ್ ಮಾಡಬೇಕು. ಎಷ್ಟೋ ಸಂದರ್ಭಗಳಲ್ಲಿ TDS ಕಡಿತಗೊಳಿಸಿದ ಮಾಹಿತಿ ತೆರಿಗೆದಾರನಿಗೆ ತಿಳಿಯದೇ ಹೋಗಬಹುದು. ಎಲ್ಲಾ ಬ್ಯಾಂಕುಗಳು TDS ಕಡಿತದ ಮಾಹಿತಿಯನ್ನು ಕೊಡುವುದಿಲ್ಲ (ಕೇಳಿದರೆ ಮಾತ್ರ ಕೊಡ್ತಾರೆ).

ಇದನ್ನೂ ಓದಿ: ವಿಸ್ತಾರ ಗ್ರಾಮ ದನಿ: ಗ್ರಾಮೀಣ ಪ್ರದೇಶದಲ್ಲೇ ಹೆಚ್ಚು ಮತದಾನ, SSLC ಫಲಿತಾಂಶದಂತೆ!

ಜಮೀನು, ಮನೆ ಮಾರಿದಾಗ?

ಇದಲ್ಲದೆ ಕೃಷಿ ಜಮೀನು, ಮನೆ ಮಾರಾಟ ಮಾಡುವಾಗ, ಮಾರಾಟದ ಬೆಲೆ ₹ 50 ಲಕ್ಷಕ್ಕಿಂತ ಹೆಚ್ಚಿದ್ದಾಗ, ಖರೀದಿಸುವವನು ಖರೀದಿ ಮೌಲ್ಯದ ಮೇಲೆ, ಸರಿ ಸುಮಾರು 0.75% (₹.37,500+)TDS ಕಟ್ಟಿರುತ್ತಾನೆ. ಇದೂ ಕೂಡ ತೆರಿಗೆ ಆದಾಯ ಮಿತಿಯ ಒಳಗೆ ಇದ್ದರೆ, ಇನ್‌ಕಮ್ ಟ್ಯಾಕ್ಸ್ ರಿಟರ್ನ್ಸ್ ಮಾಡುವುದರಿಂದ ಹಿಂಪಡೆಯಬಹುದಾಗಿರುತ್ತದೆ. ನಿಮ್ಮ ಯಾವುದೇ ಆದಾಯದಿಂದ ಟಿಡಿಎಸ್ ಕಡಿತಗೊಂಡಿದ್ದರೆ ನೀವು ತೆರಿಗೆ ಕ್ರೆಡಿಟ್ ಫಾರ್ಮ್ 26AS ಮೂಲಕ ಗಮನಿಸಬಹುದು . ಈ ಫಾರ್ಮ್ ಏಕೀಕೃತ TDS ಹೇಳಿಕೆಯಾಗಿದ್ದು ಅದು ಎಲ್ಲಾ PAN ಹೊಂದಿರುವವರಿಗೆ ಇನ್‌ಕಮ್ ಟ್ಯಾಕ್ಸ್ ಪೋರ್ಡಲ್‌ನಲ್ಲಿ ಲಭ್ಯವಿದೆ. ಹಾಗಾಗಿ ಅಡಿಕೆ ಬೆಳೆಗಾರರು ಮತ್ತು ಎಲ್ಲಾ ಕೃಷಿಕರು ಕೃಷಿ ಆದಾಯದ ಜೊತೆ, ಕೃಷಿಯೇತರ ಆದಾಯವೂ ಇದ್ದಲ್ಲಿ, ಮತ್ತು ಅದು ಮೂಲ ವಿನಾಯಿತಿ ಮಿತಿಗಿಂತ ಕಡಿಮೆಯಿದ್ದರೂ, ರಿಟರ್ನ್ಸ್ ಸಲ್ಲಿಸಬೇಕು. ಕೃಷಿಯೇತರ ಆದಾಯ ಮೂಲ ವಿನಾಯಿತಿ ಮಿತಿಗಿಂತ ಹೆಚ್ಚಿದ್ದರೆ, ರಿಟರ್ನ್ಸ್ ಸಲ್ಲಿಸುವುದು ಕಡ್ಡಾಯವಾಗಿರುತ್ತದೆ.
ಅಂದ ಹಾಗೆ, ITR ರಿಟರ್ನ್ಸ್ ಮಾಡಲು ಇನ್ನು 5 ದಿನಗಳು ಮಾತ್ರ ಬಾಕಿ ಇವೆ. ಕೊನೇಯ ದಿನಾಂಕ 31.07.2024.

Continue Reading

ಆರೋಗ್ಯ

Mosquito Repellent Plants: ನಿಮಗೆ ಗೊತ್ತೆ? ಈ 5 ಬಗೆಯ ಗಿಡಗಳು ಸೊಳ್ಳೆಗಳನ್ನು ಓಡಿಸುತ್ತವೆ!

Mosquito Repellent Plants: ಸೊಳ್ಳೆಗಳನ್ನು ದೂರ ಮಾಡಲು ಎಂಥಾ ಸರ್ಕಸ್‌ ಮಾಡಿದರೂ ನಷ್ಟವಿಲ್ಲ ಎಂಬಂತಾಗಿದೆ ಈ ಮಳೆಗಾಲದಲ್ಲಿ. ನೈಸರ್ಗಿಕ ಪರಿಮಳದ ತೈಲಗಳು ಅಥವಾ ರಿಪೆಲ್ಲೆಂಟ್‌ಗಳನ್ನು ಹಚ್ಚಿಕೊಂಡರೆ, ಸೊಳ್ಳೆಗಳನ್ನು ಓಡಿಸಬಹುದು. ಜೊತೆಗೆ, ಮನೆಯ ಒಳ-ಹೊರಗೆ ಕೆಲವು ಬಗೆಯ ಗಿಡಗಳನ್ನು ಬೆಳೆಸುವುದು ಸಹ ಈ ಕೆಲಸದಲ್ಲಿ ಉಪಯೋಗಕ್ಕೆ ಬರುತ್ತದೆ.

VISTARANEWS.COM


on

Mosquito Repellent Plants
Koo

ಮಳೆಗಾಲವೆಂದರೆ ಸೊಳ್ಳೆಗಳ (Mosquito Repellent Plants) ಕಾಲವೆಂಬ ಭಾವನೆ ಬಂದರೆ ಅಚ್ಚರಿಯಿಲ್ಲ. ಬರೀ ಸೊಳ್ಳೆ ಕಚ್ಚುವುದು ಸಮಸ್ಯೆಯಲ್ಲ, ಅದರೊಂದಿಗೆ ಬರುವ ಮಲೇರಿಯ, ಡೆಂಗ್ಯೂ, ಜೀಕಾ ಮುಂತಾದ ವೈರಸ್‌ಗಳು ಭೀತಿ ಮೂಡಿಸುತ್ತಿವೆ. ಮನೆಯ ಸುತ್ತ ನೀರು ನಿಲ್ಲದಂತೆ ಎಚ್ಚರಿಕೆ ವಹಿಸಿದರೂ, ಮನೆಯೆದುರಿನ ರಸ್ತೆಯಲ್ಲೋ ಚರಂಡಿಯಲ್ಲೋ ನೀರು ನಿಲ್ಲುತ್ತಿದ್ದರೆ ಎಷ್ಟೆಂದು ಒದ್ದಾಡುವುದಕ್ಕೆ ಸಾಧ್ಯ? ಕಿಟಕಿಗಳಿಗೆಲ್ಲ ಸೊಳ್ಳೆ ಪರದೆ ಹಾಕಿದ್ದಾಗಿದೆ, ಆದರೂ ಬಾಗಿಲು ತೆರೆದಾಗ ನಮಗಿಂತ ಮೊದಲು ಸೊಳ್ಳೆಗಳು ನುಗ್ಗುತ್ತವೆ. ರಾತ್ರಿ ಮಲಗುವಾಗಲೂ ಪರದೆಯೊಳಗೇ ಮಲಗುತ್ತೇವೆ, ಹಗಲೆಲ್ಲ ಸೊಳ್ಳೆ ಪರದೆ ಸುತ್ತಿಕೊಂಡು ಓಡಾಡಲು ಸಾಧ್ಯವೇ?
ಈ ಕ್ರಮಗಳೆಲ್ಲ ಒಳ್ಳೆಯದೇ. ಅಗತ್ಯವಾಗಿ ಬೇಕಾಗಿದ್ದು ಸಹ ಹೌದು. ಜೊತೆಗೆ ಕೆಲವು ನೈಸರ್ಗಿಕ ಪರಿಮಳದ ತೈಲಗಳು ಅಥವಾ ರಿಪೆಲ್ಲೆಂಟ್‌ಗಳನ್ನು ಹಚ್ಚಿಕೊಂಡರೆ, ಸೊಳ್ಳೆಗಳು ಹತ್ತಿರ ಬಾರದಂತೆ ಕಾಪಾಡಿಕೊಳ್ಳಬಹುದು. ಜೊತೆಗೆ, ಮನೆಯ ಸುತ್ತಮುತ್ತ ಕೆಲವು ಒಳಾಂಗಣ/ಹೊರಾಂಗಣದ ಗಿಡಗಳನ್ನು ಬೆಳೆಸುವುದು ಸಹ ಈ ಕೆಲಸದಲ್ಲಿ ಉಪಯೋಗಕ್ಕೆ ಬರುತ್ತದೆ. ಸೊಳ್ಳೆಗಳನ್ನು ದೂರ ಓಡಿಸುವಂಥ ಗುಣವನ್ನುಳ್ಳ ಐದು ಗಿಡಗಳ ಬಗ್ಗೆ ಇಲ್ಲಿ ವಿವರಿಸಲಾಗಿದೆ.

citronella

ಸಿಟ್ರೋನೆಲ್ಲ

ಲೆಮೆನ್‌ಗ್ರಾಸ್‌, ನಿಂಬೆ ಹುಲ್ಲು ಎಂದೆಲ್ಲಾ ಈ ಗಿಡವನ್ನು/ಹುಲ್ಲನ್ನು ಕರೆಯಲಾಗುತ್ತದೆ. ಸೊಳ್ಳೆಯನ್ನು ದೂರ ಅಟ್ಟುವ ವಿಷಯದಲ್ಲಿ ವಿಶೇಷ ಪರಿಣತಿ ಹೊಂದಿರುವ ಈ ಗಿಡದ ಸಾರವನ್ನು ಸ್ಪ್ರೇ, ಕ್ರೀಮ್‌, ಲೋಶನ್‌, ತೈಲ, ಮೋಂಬತ್ತಿಗಳು ಮುಂತಾದ ಹಲವು ರೀತಿಯ ಉತ್ಪನ್ನಗಳಲ್ಲಿ ಉಪಯೋಗಿಸಲಾಗುತ್ತದೆ. ಇದಕ್ಕಿರುವ ನಿಂಬೆಯ ಗಾಢವಾದ ಸುಗಂಧವೇ ಸೊಳ್ಳೆಯನ್ನು ದೂರ ಇರಿಸುತ್ತದೆ. ಮನೆಯ ಸುತ್ತಮುತ್ತಲಿನ ಭಾಗದಲ್ಲಿ ಅಥವಾ ಬಾಲ್ಕನಿಯ ಕುಂಡಗಳಲ್ಲಾದರೂ ಸರಿ, ಬೆಳೆಸಿ. ಇದು ಹಲವು ಔಷಧೀಯ ಉಪಯೋಗಗಳನ್ನೂ ಹೊಂದಿದ್ದು, ಸೊಳ್ಳೆ ಬಾರದಂತೆ ತಡೆಯಲೂ ನೆರವಾಗುತ್ತದೆ. ಆದರೆ ಈ ಹುಲ್ಲಿನ ಅಂಚು ಹರಿತವಾಗಿರುವುದರಿಂದ, ನೇರವಾಗಿ ಕೈ-ಕಾಲುಗಳ ಮೇಲೆ ಉಜ್ಜಿಕೊಳ್ಳಲು ಯತ್ನಿಸಬೇಡಿ, ಗಾಯವಾದೀತು.

Lavender Fragrant Flowers

ಲಾವೆಂಡರ್

ಇದರ ಹೂವುಗಳು ನಿಮ್ಮ ಬಾಲ್ಕನಿ ಮತ್ತು ಮನೆಯೊಳಗಿನ ಜಾಗವನ್ನು ಸುಂದರಗೊಳಿಸುವುದು ಮಾತ್ರವಲ್ಲ, ಆಹ್ಲಾದಕರ ಪರಿಮಳವು ಸೊಳ್ಳೆಗಳನ್ನು ದೂರ ಓಡಿಸುತ್ತದೆ. ಇದರ ಘಮ ಮನುಷ್ಯರಿಗೆ ಆಪ್ಯಾಯಮಾನವೇ ಹೊರತು ಸೊಳ್ಳೆ ಅಥವಾ ಇತರ ಕೀಟಗಳಿಗಲ್ಲ. ಬಿಸಿಲು ಬರುವಂಥ ಜಾಗದಲ್ಲಿ ಇದನ್ನು ಕುಂಡಗಳಲ್ಲಿ ಬೆಳೆಯಬಹುದು. ಈ ಹೂವನ್ನು ಒಣಗಿಸಿ ಅದನ್ನು ಪುಟ್ಟ ಸ್ಯಾಶೆಗಳಲ್ಲಿ ತುಂಬಿ ಮನೆಯಲ್ಲೆಲ್ಲಾ ಇರಿಸಿಕೊಳ್ಳಬಹುದು. ಲ್ಯಾವೆಂಡರ್‌ ತೈಲವನ್ನೂ ಇತರ ಎಣ್ಣೆಯೊಂದಿಗೆ ಸೇರಿಸಿ ಚರ್ಮಕ್ಕೆ ಲೇಪಿಸಿಕೊಳ್ಳಬಹುದು. ಇದನ್ನು ಹಚ್ಚಿಕೊಳ್ಳುವುದರಿಂದ ಚರ್ಮಕ್ಕೆ ಹಲವು ರೀತಿಯಲ್ಲಿ ಅನುಕೂಲಗಳಿವೆ.

Marigold
Lemon balm

ಮಾರಿಗೋಲ್ಡ್‌

ಚೆಂಡು ಹೂವು ಎಂದೇ ಇವು ಪ್ರಸಿದ್ಧ. ಮಳೆಗಾಲದ ಈ ಹೊತ್ತಿನಲ್ಲಿ ಮೇಲೇಳುವ ಚೆಂಡು ಹೂವಿನ ಗಿಡಗಳು, ನವರಾತ್ರಿ-ದೀಪಾವಳಿಯ ಆಸುಪಾಸಿನಲ್ಲಿ ಇಡೀ ಗಿಡ ತುಂಬುವಷ್ಟು ಹೂ ಬಿಡುತ್ತವೆ. ಇವೂ ಸಹ ಸೊಳ್ಳೆ ಓಡಿಸುವಲ್ಲಿ ಸಹಕಾರ ನೀಡುವಂಥವು. ಬಾಲ್ಕನಿಯಲ್ಲಿ, ಬಾಗಿಲು-ಕಿಟಕಿಗಳ ಬಳಿ, ಅಂದರೆ ಸೊಳ್ಳೆ ಒಳ ಪ್ರದೇಶ ಮಾಡುವ ಜಾಗಗಳಲ್ಲಿ ಇದನ್ನು ಕುಂಡದಲ್ಲಿ ಇರಿಸಿಕೊಳ್ಳುವುದು ಒಳ್ಳೆಯ ಉಪಾಯ. ಇದರ ಹೂವುಗಳನ್ನು ಗೊಂಚಲು ಮಾಡಿ, ಹೂದಾನಿಗಳಲ್ಲಿ ಮನೆಯೊಳಗೆ ಇರಿಸಿಕೊಳ್ಳಬಹುದು. ಹೂವನ್ನು ಒಣಗಿಸಿಟ್ಟುಕೊಂಡರೆ ಸೊಳ್ಳೆ ಓಡಿಸುವಲ್ಲಿ ಇನ್ನಷ್ಟು ನೆರವು ದೊರೆಯುತ್ತದೆ.

Basil
Lemon balm

ಬೆಸಿಲ್

ಇದು ಕೇವಲ ಸೊಳ್ಳೆ ಓಡಿಸುವುದಕ್ಕೆ ಮಾತ್ರವಲ್ಲ, ರುಚಿಕಟ್ಟಾದ ಅಡುಗೆಗೂ ಉಪಯೋಗವಾಗುತ್ತದೆ. ಇದರ ತೀಕ್ಷ್ಣವಾದ ಪರಿಮಳವು ಸೊಳ್ಳೆಗಳನ್ನು ಹತ್ತಿರ ಸುಳಿಯಗೊಡುವುದಿಲ್ಲ. ಹಾಗಾಗಿ ಸೊಳ್ಳೆ ಓಡಿಸುವ ಉಪಾಯಗಳಲ್ಲಿ ಇದನ್ನು ಸಹ ಅಳವಡಿಸಿಕೊಳ್ಳಬಹುದು. ಸಾಕಷ್ಟು ಗಾಳಿ-ಬೆಳಕು ಇರುವಂಥ ಜಾಗದಲ್ಲಿ ಇದನ್ನು ಕುಂಡಗಳಲ್ಲಿ ಬೆಳೆಸಬಹುದು. ಇದರ ಎಲೆಗಳನ್ನು ಕಿವುಚಿ ಮೈ-ಕೈಗೆಲ್ಲ ರಸ ಲೇಪಿಸಿಕೊಂಡರೂ ಸೊಳ್ಳೆ ಹತ್ತಿರ ಸುಳಿಯುವುದಿಲ್ಲ. ಇದರ ಕುಂಡಗಳನ್ನು ಸೊಳ್ಳೆಯ ಪ್ರವೇಶ ದ್ವಾರಗಳಲ್ಲಿ ಇರಿಸಿಕೊಂಡರೆ, ಸೊಳ್ಳೆಯ ಉಪಟಳಕ್ಕೆ ಬಾಗಿಲು ತೆರೆಯಲೂ ಅಳುಕುವ ಸ್ಥಿತಿ ತೊಲಗುತ್ತದೆ.

Lemon balm
Lemon balm

ಲೆಮೆನ್‌ ಬಾಮ್‌

ಪುದೀನಾ ಜಾತಿಗೆ ಸೇರಿದ ಸಸ್ಯವಿದು. ಇದರ ಕಟುವಾದ ಘಮ ಸೊಳ್ಳೆ ಓಡಿಸುವಲ್ಲಿ ನೆರವಾಗುತ್ತದೆ. ಯಾವುದೇ ಕೈತೋಟ ಅಥವಾ ಬಾಲ್ಕನಿಗಳಲ್ಲಿ ಇವುಗಳನ್ನು ಸುಲಭವಾಗಿ ಬೆಳೆಯಬಹುದು. ಇದರ ಗಾಢವಾದ ನಿಂಬೆಯಂಥ ಪರಿಮಳ ನಮಗೆ ಹಿತವೆನಿಸಿದರೂ ಸೊಳ್ಳೆಗಳಿಗೆ ಆಗದು. ಮನಸ್ಸನ್ನು ಶಾಂತಗೊಳಿಸುವ ಗುಣಗಳು ಇದಕ್ಕಿರುವುದರಿಂದ, ಈ ಮೂಲಿಕೆಯ ಎಲೆಗಳನ್ನು ಚಹಾ ಮಾಡಿ ಕುಡಿಯುವವರಿದ್ದಾರೆ.

ಇದನ್ನೂ ಓದಿ: Head Massage Tips: ತಲೆಯ ಮಸಾಜ್‌ನಿಂದ ಮಾನಸಿಕ ಒತ್ತಡ ನಿವಾರಿಸಲು ಸಾಧ್ಯ! ಹಾಗಂತ ಬೇಕಾಬಿಟ್ಟಿ ಮಸಾಜ್‌ ಮಾಡಬೇಡಿ

Continue Reading

ತುಮಕೂರು

Shira News: ಶಿರಾದಲ್ಲಿ ʼಪರೋಪಕಾರಂʼ ಸೇವಾ ಸಂಸ್ಥೆಯಿಂದ ಸ್ವಚ್ಛತಾ ಅಭಿಯಾನ

Shira News: ಶಿರಾ ನಗರದ ಸಾರ್ವಜನಿಕ ಆರೋಗ್ಯ ಕೇಂದ್ರದ ಆವರಣದಲ್ಲಿ “ಪರೋಪಕಾರಂ” ಸೇವಾ ಸಂಸ್ಥೆಯ ವತಿಯಿಂದ ಸ್ವಚ್ಛತಾ ಕಾರ್ಯಕ್ರಮ ಜರುಗಿತು.

VISTARANEWS.COM


on

Cleanliness programme in Shira Public Health Center premises
Koo

ಶಿರಾ: ಪ್ರತಿಯೊಬ್ಬರೂ ಮನೆ, ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳುವುದರ ಮೂಲಕ ಸ್ವಚ್ಛತೆಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ನಗರಸಭೆಯ ಪೌರಾಯುಕ್ತ ರುದ್ರೇಶ್ (Shira News) ತಿಳಿಸಿದರು.

ನಗರದ ಸಾರ್ವಜನಿಕ ಆರೋಗ್ಯ ಕೇಂದ್ರದ ಆವರಣದಲ್ಲಿ ಭಾನುವಾರ “ಪರೋಪಕಾರಂ” ಸೇವಾ ಸಂಸ್ಥೆಯ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಸ್ವಚ್ಛತಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮನುಷ್ಯ ತನ್ನ ನಿತ್ಯ ಜೀವನ ನಿರ್ವಹಣೆಯ ಜತೆಗೆ ಸಮಾಜದಲ್ಲಿ ಇತರರಿಗೂ ಸಹಾಯ ಮಾಡುವ ಗುಣಗಳನ್ನು ಬೆಳೆಸಿಕೊಳ್ಳಬೇಕು ಎಂದು ಅವರು ಹೇಳಿದರು.

ಪರೋಪಕಾರಂ ಸೇವಾ ಸಂಸ್ಥೆಯ ವತಿಯಿಂದ ಶಿರಾ ನಗರ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ನಿರಂತರವಾಗಿ ಸ್ವಚ್ಛತೆ, ಜಲ, ಪರಿಸರ ಸಂರಕ್ಷಣೆಗಳಂತಹ ಮಾದರಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಬರುತ್ತಿರುವುದು ಎಲ್ಲರಿಗೂ ಮಾದರಿಯಾಗಿದೆ ಎಂದು ತಿಳಿಸಿದರು.

ಇದನ್ನೂ ಓದಿ: One Nation One Rate: ಚಿನ್ನಕ್ಕೆ ದೇಶಾದ್ಯಂತ ಒಂದೇ ದರ! ಹೊಸ ನಿಯಮ ಶೀಘ್ರ ಜಾರಿ ಸಾಧ್ಯತೆ

ಸಾರ್ವಜನಿಕ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ. ಶ್ರೀನಾಥ್‌ ಮಾತನಾಡಿ, ಎಲ್ಲರೂ ಸ್ವಚ್ಛತೆಯನ್ನು ಕಾಪಾಡುವುದರಿಂದ ಆರೋಗ್ಯಯುತ ಸಮಾಜ ನಿರ್ಮಾಣ ಮಾಡಲು ಸಹಕಾರಿಯಾಗುತ್ತದೆ. ಸ್ವಚ್ಛತೆ ಇರುವ ಕಡೆ ಸಾಂಕ್ರಾಮಿಕ ಕಾಯಿಲೆಗಳು ಹರಡದಂತೆ ತಡೆಗಟ್ಟಬಹುದಾಗಿದೆ. ಈ ಹಿನ್ನೆಲೆಯಲ್ಲಿ ಪ್ರತಿಯೊಬ್ಬರು ತಮ್ಮ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛವಾಗಿಟ್ಟುಕೊಳ್ಳಬೇಕು ಎಂದು ತಿಳಿಸಿದರು.

ಇದನ್ನೂ ಓದಿ: Healthy Heart Tips: ನಿಮ್ಮ ಹೃದಯ ಆರೋಗ್ಯವಾಗಿರಬೇಕೆ? ಮಳೆಗಾಲದಲ್ಲಿ ಈ ಏಳು ಆಹಾರಗಳಿಂದ ದೂರವಿರಿ!

ಸ್ವಚ್ಛತಾ ಕಾರ್ಯಕ್ರಮದಲ್ಲಿ ಶಿರಾದ ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ಆಡಳಿತ ಅಧಿಕಾರಿ ಡಾ. ಡಿ.ಎಂ. ಗೌಡ, ನಗರಸಭೆಯ ಸದಸ್ಯರಾದ ಉಮಾ ವಿಜಯರಾಜ್, ರಾಧಾಕೃಷ್ಣ, ಸಮಾಜ ಸೇವಕ ಡೈರಿ ಕುಮಾರ್ ಸೇರಿದಂತೆ ಇತರೆ ಅಧಿಕಾರಿಗಳು, ಸಿಬ್ಬಂದಿ ಮತ್ತು ಇತರರು ಪಾಲ್ಗೊಂಡಿದ್ದರು.

Continue Reading
Advertisement
Pervez Musharraf
ದೇಶ2 mins ago

Pervez Musharraf: ಭಾರತ ವಿರೋಧಿ ಪರ್ವೇಜ್‌ ಮುಷರ‍್ರಫ್‌ಗೆ ಕೇರಳ ಬ್ಯಾಂಕ್‌ ಗೌರವ; ಭುಗಿಲೆದ್ದ ವಿವಾದ

Paris Olympics 2024
ಪ್ರಮುಖ ಸುದ್ದಿ8 mins ago

Paris Olympics 2024 : ಷಟ್ಲರ್​ಗಳ ಪರಾಕ್ರಮ ಆರಂಭ; ಸಿಂಗಲ್ಸ್​ನಲ್ಲಿ ಲಕ್ಷ್ಯ ಸೇನ್​, ಡಬಲ್ಸ್​ನಲ್ಲಿ ಸಾತ್ವಿಕ್​- ಚಿರಾಗ್ ಜೋಡಿಗೆ ಗೆಲುವು

Paris Olympics 2024
ಪ್ರಮುಖ ಸುದ್ದಿ36 mins ago

Paris Olympics 2024 : ಭಾರತ ಹಾಕಿ ತಂಡದ ಶುಭಾರಂಭ; ನ್ಯೂಜಿಲ್ಯಾಂಡ್ ವಿರುದ್ಧ 3-2 ಗೋಲ್​ಗಳ ಗೆಲುವು

Tihar Jail
ದೇಶ46 mins ago

Tihar Jail: ತಿಹಾರ ಜೈಲಿನ 125 ಕೈದಿಗಳಿಗೆ ಎಚ್‌ಐವಿ ಪಾಸಿಟಿವ್‌; ಇವರು ‘ಬೇಲಿ’ ಹಾರಿದ್ದು ಎಲ್ಲಿ?

IND vs SL
ಪ್ರಮುಖ ಸುದ್ದಿ56 mins ago

IND vs SL : ಶ್ರೀಲಂಕಾ ವಿರುದ್ಧ ಟಿ20 ಸರಣಿಯ ಮೊದಲ ಪಂದ್ಯದಲ್ಲಿ ಭಾರತಕ್ಕೆ 43 ರನ್​ ಭರ್ಜರಿ ಜಯ

Rishabh Pant
ಪ್ರಮುಖ ಸುದ್ದಿ1 hour ago

Rishabh Pant : ಧೋನಿಯಂತೆ ಭರ್ಜರಿ ಹೆಲಿಕಾಪ್ಟರ್​ ಶಾಟ್​​ ಮೂಲಕ ಸಿಕ್ಸರ್ ಬಾರಿಸಿದ ರಿಷಭ್ ಪಂತ್​

Puneeth Kerehalli
ಕರ್ನಾಟಕ2 hours ago

Puneeth Kerehalli: ಪುನೀತ್‌ ಕೆರೆಹಳ್ಳಿಗೆ ನ್ಯಾಯಾಂಗ ಬಂಧನ; 14 ದಿನ ಪರಪ್ಪನ ಅಗ್ರಹಾರವೇ ಗತಿ!

Mumbai Girl
ದೇಶ2 hours ago

ಬಾರೆ ಸಖಿ ಎಂದು 20 ವರ್ಷದ ಯುವತಿಯನ್ನು ಕರೆದುಕೊಂಡು ಹೋದ, ಕೊಂದು ಪೊದೆಯಲ್ಲಿ ಬಿಸಾಡಿದ; ಕೃತ್ಯಕ್ಕೆ ಕಾರಣವೇನು?

ಪರಿಸರ2 hours ago

Arecanut Research Centre: ಹೊಸ ಅಡಿಕೆ ಸಂಶೋಧನಾ ಕೇಂದ್ರ ಮತ್ತೊಂದು ಮದುವೆ ಛತ್ರ ಆಗದಿರಲಿ!

ind vs sl
ಪ್ರಮುಖ ಸುದ್ದಿ3 hours ago

IND vs SL : ಅಪರೂಪದ ದೃಶ್ಯ; ಎರಡೂ ಕೈಯಲ್ಲಿ ಬೌಲಿಂಗ್ ಮಾಡಿದ ಲಂಕಾದ ಬೌಲರ್​ ಕಮಿಂಡು ಮೆಂಡಿಸ್​!

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka weather Forecast
ಮಳೆ5 hours ago

Karnataka Weather : ವೀಕೆಂಡ್‌ ಮೋಜಿಗೆ ಮಳೆರಾಯ ಅಡ್ಡಿ; ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ

ramanagara news
ರಾಮನಗರ10 hours ago

Ramanagar News : ರಾಮನಗರದಲ್ಲಿ ಎರಡು ಜಡೆ ಹಾಕಿಲ್ಲವೆಂದು ವಿದ್ಯಾರ್ಥಿನಿಯರ ಕೂದಲು ಕತ್ತರಿಸಿದ ಶಿಕ್ಷಕರು ಅಮಾನತು

karnataka rain
ಮಳೆ11 hours ago

Karnataka Rain : ಕಾವೇರಿ ನದಿ ತೀರದಲ್ಲಿ ಪ್ರವಾಹ ಭೀತಿ; ಮುತ್ತತ್ತಿಗೆ ಪ್ರವಾಸಿಗರ ನಿಷೇಧ, ಶ್ರೀರಂಗಪಟ್ಟಣದಲ್ಲಿ ಪಿಂಡ ಪ್ರದಾನಕ್ಕೆ ಬ್ರೇಕ್

Ankola landslide
ಉತ್ತರ ಕನ್ನಡ1 day ago

Ankola landslide: ಅಂಕೋಲಾ-ಶಿರೂರು ಗುಡ್ಡ ಕುಸಿತ; ನಾಳೆಯಿಂದ ಪ್ಲೋಟಿಂಗ್ ಪ್ಲಾಟ್‌ಫಾರಂ ಕಾರ್ಯಾಚರಣೆ

karnataka rain
ಮಳೆ1 day ago

Karnataka Rain : ಉಕ್ಕಿ ಹರಿಯುವ ನೇತ್ರಾವತಿ ನದಿಯಲ್ಲಿ ತೇಲಿ ಬಂದ ಜೀವಂತ ಹಸು

Karnataka Rain
ಮಳೆ1 day ago

Karnataka Rain: ವಿದ್ಯುತ್‌ ದುರಸ್ತಿಗಾಗಿ ಪ್ರಾಣದ ಹಂಗು ತೊರೆದು ಉಕ್ಕಿ ಹರಿಯುವ ನೀರಿಗೆ ಧುಮುಕಿದ ಲೈನ್‌ ಮ್ಯಾನ್‌!

Karnataka rain
ಮಳೆ1 day ago

Karnataka Rain : ಹಾಸನದಲ್ಲಿ ಹೇಮಾವತಿ, ಚಿಕ್ಕಮಗಳೂರಲ್ಲಿ ಭದ್ರೆಯ ಅಬ್ಬರಕ್ಕೆ ಜನರು ತತ್ತರ

karnataka Rain
ಮಳೆ2 days ago

Karnataka Rain : ಮನೆಯೊಳಗೆ ನುಗ್ಗಿದ ಮಳೆ ನೀರು; ಕಾಲು ಜಾರಿ ಬಿದ್ದು ವೃದ್ಧೆ ಸಾವು

Actor Darshan
ಸ್ಯಾಂಡಲ್ ವುಡ್2 days ago

Actor Darshan: ನಟ ದರ್ಶನ್ ಇರುವ ಜೈಲು ಕೋಣೆ ಹೇಗಿದೆ?

Actor Darshan
ಸಿನಿಮಾ2 days ago

Actor Darshan : ಹೆಂಡ್ತಿ ಮಕ್ಕಳೊಟ್ಟಿಗೆ ಚೆನ್ನಾಗಿರು.. ಸಹಕೈದಿ ಜತೆಗೆ 12 ನಿಮಿಷ ಕಳೆದ ನಟ ದರ್ಶನ್‌

ಟ್ರೆಂಡಿಂಗ್‌