Vistara News Launch | ಹಿರಿಯ ಸಾಹಿತಿ ಡಾ. ಎಚ್‌ ಎಸ್‌ ವೆಂಕಟೇಶಮೂರ್ತಿ ಅವರಿಗೆ ವಿಸ್ತಾರ ಕಾಯಕ ಯೋಗಿ ಪ್ರಶಸ್ತಿ ಪ್ರದಾನ - Vistara News

ಕರ್ನಾಟಕ

Vistara News Launch | ಹಿರಿಯ ಸಾಹಿತಿ ಡಾ. ಎಚ್‌ ಎಸ್‌ ವೆಂಕಟೇಶಮೂರ್ತಿ ಅವರಿಗೆ ವಿಸ್ತಾರ ಕಾಯಕ ಯೋಗಿ ಪ್ರಶಸ್ತಿ ಪ್ರದಾನ

ಹೆಸರಾಂತ ಸಾಹಿತಿ ಡಾ. ಎಚ್ ಎಸ್ ವೆಂಕಟೇಶಮೂರ್ತಿ ಅವರು ವಿಸ್ತಾರ ನ್ಯೂಸ್ ಕಚೇರಿಗೆ ಮಂಗಳವಾರ ಭೇಟಿ ನೀಡಿದ್ದರು.

VISTARANEWS.COM


on

vistara news launch
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ವಿಸ್ತಾರ ನ್ಯೂಸ್ ಕಚೇರಿಗೆ ಹಿರಿಯ ಸಾಹಿತಿ ಡಾ. ಎಚ್ ಎಸ್ ವೆಂಕಟೇಶಮೂರ್ತಿ ಅವರು ಮಂಗಳವಾರ ಭೇಟಿ ನೀಡಿ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಅವರನ್ನು ವಿಸ್ತಾರ ಕಾಯಕ ಯೋಗಿ ಪ್ರಶಸ್ತಿ ನೀಡಿ ಗೌರವಿಸಲಾಯಿತು.

ವಿಸ್ತಾರ ಮೀಡಿಯಾದ ಧ್ಯೇಯೋದ್ದೇಶ ಮತ್ತು ವಿಸ್ತಾರ ನ್ಯೂಸ್ ನ ಗುಣಮಟ್ಟದ ಬಗ್ಗೆ ಎಚ್ ಎಸ್ ವಿ ಅವರು ಮೆಚ್ಚುಗೆ ವ್ಯಕ್ತಪಡಿಸಿದರು. ವಿಸ್ತಾರ ನ್ಯೂಸ್ ವೆಬ್ ಸೈಟ್ ಮತ್ತು ಯುಟ್ಯೂಬ್ ಚಾನೆಲ್ ಗಳಲ್ಲಿ ಸಂಗೀತ ಮತ್ತು ಸಾಹಿತ್ಯಕ್ಕೆ ಆದ್ಯತೆ ನೀಡುತ್ತಿರುವುದರ ಬಗ್ಗೆ ಅವರು ಸಂತಸಪಟ್ಟರು.

ವಿಸ್ತಾರ ನ್ಯೂಸ್ ಸಿಇಒ, ಪ್ರಧಾನ ಸಂಪಾದಕ ಹರಿಪ್ರಕಾಶ್ ಕೋಣೆಮನೆ ಮತ್ತು ವಿಸ್ತಾರ ಮೀಡಿಯಾದ ಚೇರ್ಮನ್, ಎಂಡಿ ಎಚ್ ವಿ ಧರ್ಮೇಶ್ ಅವರು ವೆಂಕಟೇಶಮೂರ್ತಿ ಅವರಿಗೆ ವಿಸ್ತಾರ ನ್ಯೂಸ್ ಅಳವಡಿಸಿಕೊಂಡಿರುವ ಅತ್ಯಾಧುನಿಕ ವ್ಯವಸ್ಥೆಯ ಮಾಹಿತಿ ನೀಡಿದರು.

ವಿಸ್ತಾರ ನ್ಯೂಸ್ ಕಾರ್ಯ ನಿರ್ವಾಹಕ ಸಂಪಾದಕ ಶರತ್ ಎಂ ಎಸ್, ಸಿಒಒ, ಸಿಟಿಒ ಪರಶುರಾಮ್, ಇನ್ ಫುಟ್-ಔಟ್ ಫುಟ್ ಮುಖ್ಯಸ್ಥ ಮಂಜುನಾಥ್ ಪಿ, ವಿಸ್ತಾರ ಡಿಜಿಟಲ್ ಸಂಪಾದಕ ರಮೇಶ್ ಕುಮಾರ್ ನಾಯಕ್, ಸ್ಪೆಷಲ್ ಆಪರೇಷನಲ್ ಎಡಿಟರ್ ಕಿರಣ್ ಕುಮಾರ್ ಡಿ ಕೆ ಜತೆಗಿದ್ದರು.

ಇದನ್ನೂ ಓದಿ | Vistara News Launch | ಅಭಿನಯ ಚತುರ, ಹ್ಯಾಟ್ರಿಕ್‌ ಹೀರೋ ಶಿವರಾಜ್‌ ಕುಮಾರ್‌ಗೆ ಕಾಯಕ ಯೋಗಿ ಪ್ರಶಸ್ತಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಬೆಂಗಳೂರು

Murder case : ಕಳ್ಳನೆಂದು ಹಿಡಿಯಲು ಹೋದ ಸೆಕ್ಯೂರಿಟಿ ಗಾರ್ಡ್‌ಗಳು; ನೂಕಾಟದಲ್ಲಿ ಬಿದ್ದ ಯುವಕ, ಕರೆಂಟ್‌ ಶಾಕ್‌ನಿಂದ ಸಾವು

Murder case : ಮಿಷನ್ ರಸ್ತೆಯ ಕಟ್ಟಡದ ನೆಲ ಮಹಡಿಯಲ್ಲಿ ಯುವಕನ ಶವವೊಂದು (Dead Body Found) ಪತ್ತೆಯಾಗಿತ್ತು. ಮೊದಮೊದಲು ಇದೊಂದು ಕೊಲೆ ಎಂದು ಭಾವಿಸಲಾಗಿತ್ತು. ಆದರೆ ಅಸಲಿ ಸಂಗತಿಯನ್ನು ಪೊಲೀಸರು ಹೊರಗೆಳೆದಿದ್ದಾರೆ. ಪ್ರೀತಿ ವಿಷಯಕ್ಕೆ ಬಲಿಯಾದ ಎಂದವರಿಗೆ ಯುವಕನ ಸಾವಿನ ರಹಸ್ಯವನ್ನು ಬಯಲು (Secret revealed) ಮಾಡಿದ್ದಾರೆ.

VISTARANEWS.COM


on

By

Murder case In Bengaluru
ಬಂಧಿತ ಆರೋಪಿಗಳು ಹಾಗೂ ಮೃತಪಟ್ಟಿದ್ದ ಯುವಕ ಸತ್ಯ
Koo

ಬೆಂಗಳೂರು: ಕಳೆದ ಮೇ 9 ರಂದು ಬೆಂಗಳೂರಿನ ಎಸ್‌ಆರ್‌ ನಗರ ಠಾಣಾ ವ್ಯಾಪ್ತಿಯಲ್ಲಿರುವ ಮಿಷನ್ ರೋಡ್‌ನ ಪಿ.ಸಿ.ಮೋಹನ್ ಆ್ಯಂಡ್‌ ಕೊ ಕಾಂಪ್ಲೆಕ್ಸ್‌ನ ಗ್ರೌಂಡ್ ಫ್ಲೋರ್‌ನಲ್ಲಿ ಯುವಕನೊಬ್ಬನ ಶವ (Dead Body Found) ಪತ್ತೆಯಾಗಿತ್ತು. ಕೆ.ಎಸ್. ಗಾರ್ಡನ್ ನಿವಾಸಿ ಸತ್ಯ (22) ಎಂಬಾತ ಸ್ನೇಹಿತರ ಜತೆ ಹೊರಹೋದವನು (Murder Case) ಬೀದಿ ಹೆಣವಾಗಿದ್ದ. ಮೊದಮೊದಲು ಇದು ಪ್ರೀತಿ ವಿಚಾರಕ್ಕೆ ಕೊಲೆ ಆಗಿರಬಹುದೆಂದು ಅಂದಾಜಿಸಲಾಗಿತ್ತು. ಆದರೆ ಇದೀಗ ಯುವಕನ ಸಾವಿನ ಸಿಕ್ರೇಟ್‌ (Secret revealed) ಅನ್ನು ಎಸ್‌.ಆರ್ ನಗರ ಪೊಲೀಸರು ಪತ್ತೆ ಹಚ್ಚಿದ್ದಾರೆ.

ಕಳೆದ ಮೇ 9ರಂದು ರಾತ್ರಿ ಕಾಂಪ್ಲೆಕ್ಸ್‌ನ ಪಕ್ಕದಲ್ಲಿರುವ ನಿರ್ಮಾಣ ಹಂತದ ಕಟ್ಟಡದ ಮೇಲೆ ಸತ್ಯ ತೆರಳಿದ್ದ. ಈ ವೇಳೆ ಅಲ್ಲಿದ್ದ ಸೆಕ್ಯುರಿಟಿ ಗಾರ್ಡ್‌ಗಳು ಸತ್ಯನನ್ನು ಕಳ್ಳ ಎಂದು ಭಾವಿಸಿ ಹಿಡಿಯಲು ಹೋಗಿದ್ದಾರೆ. ಈ ತಳ್ಳಾಟ ನೂಕಾಟದಲ್ಲಿ ಸತ್ಯ ಕಾಲು ಜಾರಿ ಕಟ್ಟಡದಿಂದ ಕೆಳಗೆ ಬಿದಿದ್ದ. ಆಗ ವಿದ್ಯುತ್ ತಂತಿ ಸ್ಪರ್ಶದಿಂದ ಮೃತ ಪಟ್ಟಿದ್ದ.

ಅನಂತರ ಸತ್ಯ ಸಾವಿನ ವಿಚಾರ ತಿಳಿದ ಸೆಕ್ಯೂರಿಟಿ ಗಾರ್ಡ್‌ ರಂಜಿತ್ ಪ್ರದಾನ್, ರಮೇಶ್ ರಾತ್ರೋರಾತ್ರಿ ಸತ್ಯನ ಮೃತದೇಹವನ್ನು ಪಕ್ಕದ ಕಟ್ಟಡಕ್ಕೆ ರವಾನಿಸಿದರು. ಮರುದಿನ ಮೇ 10ರಂದು ನೆಲಮಹಡಿಯಲ್ಲಿ ಶವ ಪತ್ತೆಯಾಗಿತ್ತು. ಆದರೆ ಪೊಲೀಸರ ತನಿಖೆ ವೇಳೆ ಸತ್ಯನ ಸಾವಿನ ಸಿಕ್ರೇಟ್ ಬಯಲಾಗಿದೆ. ಸದ್ಯ ಎಸ್‌ಆರ್ ನಗರ ಪೊಲೀಸರು ಐಪಿಸಿ 304ರ ಅಡಿ ಪ್ರಕರಣ ದಾಖಲಿಸಿಕೊಂಡು, ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.

ಇನ್ನೂ ಕೆಎಸ್ ಗಾರ್ಡನ್ ನಿವಾಸಿಯಾದ ಸತ್ಯ ಪ್ಲಂಬರ್ ಕೆಲಸ ಮಾಡಿಕೊಂಡಿದ್ದ. ಈ ಹಿಂದೆ ಪ್ರಕರಣವೊಂದರಲ್ಲಿ ಬಂಧಿತನಾಗಿ ಜೈಲು ಸೇರಿದ್ದ. ಅದೇ ವಿಚಾರವಾಗಿ ಸತ್ಯನ ಕೊಲೆಯಾಗಿದೆ ಎಂದು ಆರೋಪಿಸಿಸಲಾಗಿತ್ತು‌.ಆದರೆ ತನಿಖೆ ಕೈಗೊಂಡಾಗ ಅಸಲಿ ಸತ್ಯ ತಿಳಿದುಬಂದಿದೆ.

ಇದನ್ನೂ ಓದಿ: Illegal hunting: ಶಿಕಾರಿಗೆ ತೆರಳಿದ ಯುವಕನಿಗೆ ಗುಂಡು ತಗುಲಿ ಸಾವು, ಆಕಸ್ಮಿಕವೋ ಕೊಲೆಯೋ?

ದೊಡ್ಡಬಳ್ಳಾಪುರ ಕೊಲೆ ಆರೋಪಿ ಕಾಲಿಗೆ ಗುಂಡು ಹಾರಿಸಿ ಬಂಧನ

ದೊಡ್ಡಬಳ್ಳಾಪುರ: ಕೊಲೆ ಆರೋಪಿಯೊಬ್ಬನ (Murder Suspect) ಕಾಲಿಗೆ ಪೊಲೀಸರು ಗುಂಡು ಹಾರಿಸಿ (Encounter) ಬಂಧಿಸಿದ್ದಾರೆ. ಹೇಮಂತ್‌ ಕುಮಾರ್‌ ಗೌಡ ಎಂಬ ಯುವಕನ ಕೊಲೆ (Murder Case) ಆರೋಪಿ ರೌಡಿ ಶೀಟರ್ ಶ್ರೀನಿವಾಸ್ ಅಲಿಯಾಸ್ ಮಿಟ್ಟೆ ಕಾಲಿಗೆ ಗುಂಡು ಹಾರಿಸಿ (Shoot out) ಬಂಧಿಸಲಾಗಿದೆ.

ಯಲಹಂಕ ತಾಲೂಕಿನ ಶ್ರೀರಾಮನಹಳ್ಳಿ ಬಳಿ ಘಟನೆ ನಡೆದಿದೆ. ರೌಡಿ‌ ಶೀಟರ್ ಬಂಧನಕ್ಕೆ ತೆರಳಿದ ವೇಳೆ ಪೊಲೀಸ್ ಕಾನ್‌ಸ್ಟೇಬಲ್ ಚಂದ್ರು ಮೇಲೆ ಈತ ಹಲ್ಲೆ‌ ನಡೆಸಿದ್ದಾನೆ. ಪೊಲೀಸರ ಮೇಲೆ ಹಲ್ಲೆ ಹಿನ್ನೆಲೆಯಲ್ಲಿ ಆತ್ಮರಕ್ಷಣೆಗಾಗಿ ಇನ್‌ಸ್ಪೆಕ್ಟರ್ ಸಾಧಿಕ್ ಪಾಷ ಅವರಿಂದ ಫೈರಿಂಗ್ ನಡೆದಿದೆ.

ಈತ ಕೊಲೆ ಕೇಸ್‌ನ 2ನೇ ಆರೋಪಿಯಾಗಿದ್ದಾನೆ. ಮೇ 11ರಂದು ದೊಡ್ಡಬಳ್ಳಾಪುರ ಹೊರವಲಯ ನವೋದಯ ಶಾಲೆಯ ಮುಂಭಾಗ ಹೇಮಂತ್ ಕುಮಾರ್ ಗೌಡ (27) ಎಂಬವರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. ಹೇಮಂತ್ ಅವರನ್ನು ಅಟ್ಟಾಡಿಸಿ ಕೊಲೆ ಮಾಡಿ ಆರೋಪಿಗಳು ಕಾರಿನಲ್ಲಿ ಶವದ ಜೊತೆ ರೌಂಡ್ಸ್ ಹಾಕಿದ್ದರು. ಪ್ರಕರಣ ದಾಖಲಿಸಿಕೊಂಡ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್‌ ಅಧಿಕಾರಿಗಳು ಆರೋಪಿಗಳ ಪತ್ತೆಗೆ ವಿಶೇಷ ತಂಡ ರಚಿಸಿ ಬಂಧನಕ್ಕಾಗಿ ಬಲೆ ಬೀಸಿದ್ದರು.

ಪ್ರಕರಣದ ಪ್ರಮುಖ ಆರೋಪಿ ನರಸಿಂಹಮೂರ್ತಿ ಅಲಿಯಾಸ್​ ಮಿಟ್ಟೆ ಎಂಬಾತನನ್ನು ಈಗಾಗಲೇ ದಸ್ತಗಿರಿ ಮಾಡಲಾಗಿದೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಡಿವೈಎಸ್ಪಿ ರವಿಕುಮಾರ್, ಗ್ರಾಮಾಂತರ ಠಾಣೆ ಇನ್ಸ್ಪೆಕ್ಟರ್ ಸಾದಿಕ್ ಪಾಷ ನೇತೃತ್ವದ ತಂಡದಿಂದ ಕಾರ್ಯಾಚರಣೆ ನಡೆಸಲಾಗಿತ್ತು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕ್ರೈಂ

Prajwal Revanna Case: ಕಷ್ಟಕ್ಕಾಗದ ಭವಾನಿ ರೇವಣ್ಣ ಮೇಲೆ ದೇವೇಗೌಡ ಫ್ಯಾಮಿಲಿ ಕೆಂಡಾಮಂಡಲ

Prajwal Revanna Case: ಪ್ರಜ್ವಲ್ ರೇವಣ್ಣನ ಪೆನ್ ಡ್ರೈವ್ ಪ್ರಕರಣ ದೇವೇಗೌಡರ ಕುಟುಂಬಕ್ಕೆ ರಾಷ್ಟ್ರ ಮಟ್ಟದಲ್ಲಿ ಭಾರಿ ಮುಜುಗರ ಸೃಷ್ಟಿಸಿದೆ. ರೇವಣ್ಣ ಹೊರತುಪಡಿಸಿ, ಉಳಿದ ಮೂವರ ವಿರುದ್ಧ ಅಸಮಾಧಾನ ಮಾಡಿಕೊಂಡಿರುವ ದೇವೇಗೌಡರ ಕುಟುಂಬ, ಪ್ರಜ್ವಲ್‌ ಹಾಗೂ ಭವಾನಿ ಮತ್ತು ಸೂರಜ್‌ ಈ ಮೂವರಿಂದ ಅಂತರ ಕಾಯ್ದುಕೊಂಡಿದೆ.

VISTARANEWS.COM


on

prajwal revanna case bhavani revanna hd revanna
Koo

ಹುಬ್ಬಳ್ಳಿ: ಹಾಸನ ಸಂಸದ ಪ್ರಜ್ವಲ್‌ ರೇವಣ್ಣ (Hassan MP Prajwal Revanna Case) ಅವರದೆನ್ನಲಾದ ಅಶ್ಲೀಲ ವಿಡಿಯೋ (Obscene video) ಪ್ರಕರಣದಲ್ಲಿ ನೋಟೀಸ್‌ ನೀಡಿದರೂ ಎಸ್‌ಐಟಿ (SIT) ಮುಂದೆ ಹಾಜರಾಗದ, ಗಂಡ ಎಚ್‌ಡಿ ರೇವಣ್ಣ (HD Revanna) ಜೈಲಿಗೆ ಹೋದರೂ. ಜೈಲಿನಿಂದ ಬಂದ ಮೇಲೂ ನೋಡಲು ಬಾರದ, ಯಾವ ರೀತಿಯಲ್ಲೂ ಸ್ಪಂದಿಸದ ಭವಾನಿ ರೇವಣ್ಣ (Bhavani Revanna) ಮೇಲೆ ಇಡೀ ದೇವೇಗೌಡ (HD Deve Gowda) ಫ್ಯಾಮಿಲಿ ಕೋಪಿಸಿಕೊಂಡಿದೆ. ಜೊತೆಗೆ, ವಿದೇಶದಲ್ಲಿ ತಲೆಮರೆಸಿಕೊಂಡು ರೇವಣ್ಣಗೆ ಇನ್ನಷ್ಟು ಸಂಕಷ್ಟ ತಂದಿಟ್ಟಿರುವ ಪ್ರಜ್ವಲ್‌ ಮೇಲೂ ಅವರ ಸಿಟ್ಟು ಹೆಚ್ಚಿದೆ.

ಪ್ರಜ್ವಲ್ ರೇವಣ್ಣನ ಪೆನ್ ಡ್ರೈವ್ ಪ್ರಕರಣ ದೇವೇಗೌಡರ ಕುಟುಂಬಕ್ಕೆ ರಾಷ್ಟ್ರ ಮಟ್ಟದಲ್ಲಿ ಭಾರಿ ಮುಜುಗರ ಸೃಷ್ಟಿಸಿದೆ. ರೇವಣ್ಣ ಹೊರತುಪಡಿಸಿ, ಉಳಿದ ಮೂವರ ವಿರುದ್ಧ ಅಸಮಾಧಾನ ಮಾಡಿಕೊಂಡಿರುವ ದೇವೇಗೌಡರ ಕುಟುಂಬ, ಪ್ರಜ್ವಲ್‌ ಹಾಗೂ ಭವಾನಿ ಮತ್ತು ಸೂರಜ್‌ ಈ ಮೂವರಿಂದ ಅಂತರ ಕಾಯ್ದುಕೊಂಡಿದೆ.

ಪ್ರಜ್ವಲ್ ರೇವಣ್ಣನಿಂದಲೇ ರೇವಣ್ಣಗೆ ಸಂಕಷ್ಟ ಒದಗಿದೆ ಎಂಬುದು ಸ್ಪಷ್ಟವಾಗಿದೆ. ಪ್ರಜ್ವಲ್‌ ಪೆನ್‌ ಡ್ರೈವ್‌ನಿಂದಲೇ ಶುರುವಾದ ಪ್ರಕರಣ ರೇವಣ್ಣ ವರೆಗೆ ತಲುಪಿದೆ. ಅತ್ತ ರಾಜಕೀಯದಲ್ಲೂ ಐದು ವರ್ಷಗಳ ಕಾಲ ಪೂರೈಸುವ ಬಗ್ಗೆ ಪ್ರಶ್ನೆ, ಸಂಕಷ್ಟ ಉಂಟಾಗಿದೆ. ಪ್ರಕರಣ ಸಾಬೀತಾದರೆ ಪ್ರಜ್ವಲ್‌ ಸಂಸದ ಸ್ಥಾನಕ್ಕೂ ಸಂಚಕಾರ ಒದಗಬಹುದು. ಅತ್ತ ಜೆಡಿಎಸ್‌ನ ಹಿರಿಯ ನಾಯಕರಿಗೂ ಪ್ರಜ್ವಲ್‌ ಗೌರವ ಕೊಡುತ್ತಿರಲಿಲ್ಲ. ಪ್ರಜ್ವಲ್ ನಡವಳಿಕೆ ಬಗ್ಗೆ ಪದೇ ಪದೆ ದೂರು ಕೊಡುತ್ತಿದ್ದರೂ ಆತನನ್ನು ಭವಾನಿ ರೇವಣ್ಣ ಸಮರ್ಥನೆ ಮಾಡಿಕೊಳ್ಳುತ್ತಿದ್ದರು.

ಭವಾನಿ ರೇವಣ್ಣ ಮಾತು ಕೇಳಿ ಆತನನ್ನು ರೇವಣ್ಣ ಸಮರ್ಥನೆ ಮಾಡಿಕೊಂಡಿದ್ದರು. ಹಾಸನ ಜಿಲ್ಲೆಯ ಹಿರಿಯ ನಾಯಕರು ಗೌರವ ಕೊಡಲ್ಲ ಅಂತ ದೂರು ಕೊಟ್ಟರೂ ಸಮರ್ಥನೆ ಮಾಡಿ ರೇವಣ್ಣ ವಿಲನ್ ಆಗಿದ್ದರು. ಇದೀಗ ಒಂದು ಪ್ರಕರಣದಲ್ಲಿ ರೇವಣ್ಣಗೆ ಬೇಲ್‌ ದೊರೆತಿದೆ. ಆದರೆ ಇನ್ನೊಂದರಲ್ಲಿ ಇನ್ನೂ ಸಿಕ್ಕಿಲ್ಲ. ಪ್ರಜ್ವಲ್ ನಾಪತ್ತೆಯಾಗಿದ್ದು, ಹೀಗಾಗಿ ರೇವಣ್ಣಗೆ ಜಾಮೀನು ಕೊಡಬೇಡಿ ಎಂದು ಎಸ್ಐಟಿ ಪರ ವಕೀಲರು ವಾದ ಮಾಡುತ್ತಿದ್ದಾರೆ. ಇಂದು ರೇವಣ್ಣ ಜಾಮೀನು ಅರ್ಜಿ ಭವಿಷ್ಯ ನಿರ್ಧಾರವಾಗಬೇಕಿದೆ. ಇದೆಲ್ಲದರಿಂದಾಗಿ ಪ್ರಜ್ವಲ್ ಮೇಲೆ ಇಡೀ ದೇವೇಗೌಡರ ಕುಟುಂಬಕ್ಕೆ ಸಿಟ್ಟು ಮೂಡಿದೆ.

ಇನ್ನು ಇದೆಲ್ಲದಕ್ಕೂ ಭವಾನಿ ಅವರ ಸಮರ್ಥನೆ, ದುರಹಂಕಾರ ಹಾಗೂ ಮೊಂಡು ಹಠವೇ ಕಾರಣ ಎಂಬುದು ಗೌಡರ ಕುಟುಂಬ ಹಾಗೂ ಜೆಡಿಎಸ್‌ ನಾಯಕರ ಅಭಿಪ್ರಾಯ. ಕಳೆದ ಚುನಾವಣೆಯಲ್ಲಿ ಭವಾನಿ ಹಠದಿಂದಲೇ ಪ್ರಜ್ವಲ್‌ಗೆ ಟಿಕೆಟ್‌ ನೀಡಲಾಗಿದೆ. ಪ್ರಜ್ವಲ್‌ ಹೀನ ಕೆಲಸಗಳನ್ನು ಭವಾನಿ ಸಮರ್ಥನೆ ಮಾಡಿಕೊಂಡು ಆತನ ಬೆನ್ನು ತಟ್ಟುವ ಕೆಲಸ ಮಾಡುತ್ತ ಬಂದಿದ್ದಾರೆ. ಪಕ್ಷದ ಇತರ ನಾಯಕರ ಮುಂದೆ ಕುಟುಂಬದ ಮಾನ ಹರಾಜು ಹಾಕಿದ್ದಾರೆ. ʼಕೋಟಿ ರೂಪಾಯಿ ಬೆಲೆಯ ಕಾರುʼನಂಥ ಪ್ರಕರಣಗಳಿಂದ ಸುತ್ತಮುತ್ತ ದುರಹಂಕಾರಕ್ಕೂ ಕುಖ್ಯಾತರಾಗಿದ್ದಾರೆ.

ಜೊತೆಗೆ ಭವಾನಿ ತನಿಖೆಗಾಗಿ ಎಸ್‌ಐಟಿ ನೋಟೀಸ್‌ ನೀಡಿ ಒಂದು ವಾರವಾದರೂ ಇನ್ನೂ ತನಿಖಾ ತಂಡದ ಮುಂದೆ ಅವರು ಹಾಜರಾಗಿಲ್ಲ. ಇದು ಕೂಡ ರೇವಣ್ಣ ಕೊರಳಿಗೆ ಉರುಳಾಗುವ ಸಾಧ್ಯತೆಗಳಿವೆ. ಪತಿ ಜೈಲಿಹೆ ಹೋದಾಗಲೂ ಅವರು ನೋಡಲು ಬಂದಿರಲಿಲ್ಲ. ಪತಿ ಜೈಲಿನಿಂದ ರಿಲೀಸ್‌ ಆದಾಗಲೂ ಬಂದಿರಲಿಲ್ಲ. ತಮಗೂ ರೇವಣ್ಣಗೂ ಸಂಬಂಧವೇ ಇಲ್ಲದಂತೆ ಇದ್ದುಬಿಟ್ಟಿದ್ದಾರೆ. ಇದೆಲ್ಲದರಿಂದ ಸಿಟ್ಟಿಗೆದ್ದಿರುವ ದೇವೇಗೌಡರ ಫ್ಯಾಮಿಲಿ, ರೇವಣ್ಣ ಹೊರತುಪಡಿಸಿ ಉಳಿದ ಕುಟುಂಬದ ಸದಸ್ಯರಿಂದ ಅಂತರ ಕಾಯ್ದುಕೊಂಡಿದೆ.

ರೇವಣ್ಣಗೆ ಮಧ್ಯಂತರ ಜಾಮೀನು

ಹೊಳೆನರಸೀಪುರದ ಲೈಂಗಿಕ ದೌರ್ಜನ್ಯ (Physical Abuse) ಪ್ರಕರಣದಲ್ಲಿ ಮಾಜಿ ಸಚಿವ ಎಚ್‌.ಡಿ ರೇವಣ್ಣ (HD Revanna Case) ಅವರಿಗೆ ಮಧ್ಯಂತರ ಜಾಮೀನು (Bail) ನೀಡಲಾಗಿದ್ದು, ಶುಕ್ರವಾರಕ್ಕೆ (ಮೇ 17) ವಿಚಾರಣೆಯನ್ನು ಮುಂದೂಡಲಾಗಿದೆ. ಹೀಗಾಗಿ ರೇವಣ್ಣ ಅವರು ಇನ್ನೂ ನಿಟ್ಟುಸಿರು ಬಿಡುವಂತೆ ಇಲ್ಲ. ಇಂದು ಕೋರ್ಟ್‌ ಯಾವ ನಿರ್ಧಾರವನ್ನು ಪ್ರಕಟಿಸಲಿದೆ ಎಂಬುದರ ಮೇಲೆ ಜೈಲಾ? ಎಸ್‌ಐಟಿ ವಶವೇ? ಅಥವಾ ಜಾಮೀನಾ ಎಂಬುದು ನಿರ್ಧಾರ ಆಗಲಿದೆ.

ಎಚ್‌.ಡಿ. ರೇವಣ್ಣ ಅವರು ನಿನ್ನೆ ಬೆಳಗ್ಗಿನಿಂದ ಟೆಂಪಲ್ ರನ್‌ ನಡೆಸಿದರು. ಬಳಿಕ ಇನ್ನೊಂದು ಪ್ರಕರಣದಲ್ಲಿ ಸಲ್ಲಿಸಿರುವ ಜಾಮೀನು ಅರ್ಜಿ ವಿಚಾರಣೆಗಾಗಿ ನ್ಯಾಯಾಲಯದ ಮುಂದೆ ಹಾಜರಾದರು. ಈಗಾಗಲೇ ಮೈಸೂರಿನ ಸಂತ್ರಸ್ತೆಯ ಕಿಡ್ನ್ಯಾಪ್‌ (kidnap case) ಪ್ರಕರಣದಲ್ಲಿ ಅವರು ಜಾಮೀನು ಪಡೆದಿದ್ದಾರೆ. ಈಗ ಹೊಳೆನರಸೀಪುರದ ಪ್ರಕರಣದಲ್ಲಿ ಮಧ್ಯಂತರ ಜಾಮೀನು ಸಿಕ್ಕಿದ್ದು, ಶುಕ್ರವಾರದ ಆದೇಶದ ಮೇಲೆ ಎಲ್ಲವೂ ನಿಂತಿದೆ. ಈಗ ಐದು ಲಕ್ಷ ರೂಪಾಯಿ ಬಾಂಡ್ ಹಾಗೂ ಒಬ್ಬರ ಶ್ಯೂರಿಟಿ ನೀಡುವಂತೆ ಕೋರ್ಟ್‌ ಸೂಚನೆ ನೀಡಿದೆ.

ಇದನ್ನೂ ಓದಿ: HD Revanna Case: ಹೊಳೆನರಸೀಪುರದ ಲೈಂಗಿಕ ದೌರ್ಜನ್ಯ ಕೇಸ್‌ನಲ್ಲಿ ರೇವಣ್ಣಗೆ ಮಧ್ಯಂತರ ಜಾಮೀನು; ಆದರೂ ಮುಗಿದಿಲ್ಲ ಟೆನ್ಶನ್‌!

Continue Reading

ಬೆಂಗಳೂರು ಗ್ರಾಮಾಂತರ

Murder case : ಬಯಲು ಶೌಚಾಲಯಕ್ಕೆ ಹೋದ ಬಾಲಕನ ದೊಣ್ಣೆಯಿಂದ ಹೊಡೆದು ಕೊಂದರು

Murder case : ಬಯಲು ಶೌಚಾಲಯಕ್ಕೆ ಹೋದ 15 ವರ್ಷದ ಬಾಲಕನ ತಲೆಗೆ ದೊಣ್ಣೆಯಿಂದ ಹೊಡೆದು ಕೊಂದಿದ್ದಾರೆ. ಹಂತಕರ ಪತ್ತೆಗೆ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ. ಹತ್ಯೆ ಯಾಕಾಗಿ ನಡೆದಿದೆ ಎಂಬುದು ತಿಳಿದು ಬಂದಿಲ್ಲ.

VISTARANEWS.COM


on

By

Murder Case in Anekla
Koo

ಆನೇಕಲ್: ಬಾಲಕನನ್ನು ದೊಣ್ಣೆಯಿಂದ ಹೊಡೆದು ಕೊಲೆ (Murder case) ಮಾಡಲಾಗಿದೆ. ಬೆಂಗಳೂರು ಹೊರವಲಯ ಆನೇಕಲ್ ತಾಲೂಕಿನ ಸರ್ಜಾಪುರ ಸಮೀಪದ ನೆರಿಗಾ ಗ್ರಾಮದಲ್ಲಿ ಘಟನೆ ನಡೆದಿದೆ.

ಬಯಲು ಶೌಚಾಲಯಕ್ಕೆ ಹೋದ ಬಾಲಕ ಶವವಾಗಿ ಪತ್ತೆಯಾಗಿದ್ದಾನೆ. ಕಳೆದ ಮೇ 15ರಂದು ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಪ್ರಾಣೇಶ್ (15) ಕೊಲೆಯಾಗಿ ಪ್ರಾಣವನ್ನು ಕಳೆದುಕೊಂಡವನು.

ಪ್ರಾಣೇಶ್‌ ತಂದೆ, ತಾಯಿ ಕಳೆದ ಮೂರು ತಿಂಗಳ ಹಿಂದೆ ಗಾರೆ ಕೆಲಸಕ್ಕೆಂದು ನೆರಿಗಾ ಗ್ರಾಮಕ್ಕೆ ಬಂದು ನೆಲೆಸಿದ್ದರು. ಮೂಲತಃ ಆಂಧ್ರ ಪ್ರದೇಶದ ಕರ್ನೂಲ್ ಜಿಲ್ಲೆಗೆ ಸೇರಿದ ಮಂತ್ರಾಲಯದ ಪ್ರಾಣೇಶ್‌, ಬೇಸಿಗೆ ರಜೆ ಹಿನ್ನೆಲೆಯಲ್ಲಿ ತಂದೆ- ತಾಯಿ ಬಳಿ ಬಂದಿದ್ದ.

ಆದರೆ ಬಯಲು ಶೌಚಾಲಯಕ್ಕೆಂದು ಹೋದವನನ್ನು ಯಾರೋ ಹಂತಕರು ದೊಣ್ಣೆಯಿಂದ ಹೊಡೆದು ಕೊಂದಿದ್ದಾರೆ. ತಲೆ ಹಾಗೂ ಹೊಟ್ಟೆ ಭಾಗಕ್ಕೆ ರಭಸವಾಗಿ ಹೊಡೆದಿರುವುದರಿಂದ ಗಂಭೀರ ಗಾಯಗೊಂಡು ಮೃತಪಟ್ಟಿದ್ದಾನೆ. ಮಗ ಕಾಣೆದೇ ಇದ್ದಾಗ ಹುಡುಕಾಟ ನಡೆಸಿದಾಗ ಆತನ ಮೃತದೇಹವು ಪತ್ತೆಯಾಗಿದೆ.

ಕೂಡಲೇ ಪೋಷಕರು ಪೊಲೀಸರಿಗೆ ಮಾಹಿತಿಯನ್ನು ನೀಡಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿದ್ದು, ವರದಿಗಾಗಿ ಕಾಯುತ್ತಿದ್ದಾರೆ. ಸರ್ಜಾಪುರ ಪೂಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆಯನ್ನು ಮುಂದುವರಿಸಿದ್ದಾರೆ.

ಇದನ್ನೂ ಓದಿ: Physical Abuse: ತೀರ್ಥದಲ್ಲಿ ನಿದ್ದೆ ಮಾತ್ರೆ ಬೆರೆಸಿ ಅರ್ಚಕನಿಂದ ನಿರೂಪಕಿ ಮೇಲೆ ಅತ್ಯಾಚಾರ

ತಂಗಿಯನ್ನು ಬೈಕ್‌ನಲ್ಲಿ ಸುತ್ತಾಡಿಸುತ್ತಿದ್ದವನನ್ನು ಸ್ಕ್ರೂಡ್ರೈವರ್‌ನಿಂದ ಚುಚ್ಚಿ ಕೊಂದ

ಬೆಳಗಾವಿ : ಬೆಳಗಾವಿಯಲ್ಲಿ (Belgavi News) ಹಾಡಹಗಲೇ ಸ್ಕ್ರೂಡ್ರೈವರ್‌ನಿಂದ ಚುಚ್ಚಿ ಯುವಕನ (Murder Case) ಕೊಲೆ ಮಾಡಲಾಗಿತ್ತು. ಬೆಳಗಾವಿ ನಗರದ ಮಹಾಂತೇಶ ನಗರದ ಬ್ರಿಡ್ಜ್‌ ಬಳಿ ಘಟನೆ ನಡೆದಿತ್ತು. ಗಾಂಧಿ ನಗರ ನಿವಾಸಿ ಇಬ್ರಾಹಿಂ ಗೌಸ್ (22) ಮೃತಪಟ್ಟವನು. ಮುಜಮಿಲ್ ಸತ್ತಿಗೇರಿ ಕೊಲೆ ಆರೋಪಿಯಾಗಿದ್ದಾನೆ.

ಇದೇ ಬಡಾವಣೆಯ ಯುವತಿ ಜತೆಗೆ ಇಬ್ರಾಹಿಂ ಪ್ರೀತಿ -ಪ್ರೇಮ ಅಂತ ಓಡಾಡುತ್ತಿದ್ದ . ಗುರುವಾರ ತನ್ನ ಹುಡುಗಿ ಜತೆಗೆ ಇಬ್ರಾಹಿಂ ಬೈಕ್‌ನಲ್ಲಿ ಹೊರಟ್ಟಿದ್ದ. ಇದನ್ನು ನೋಡಿದ ಯುವತಿಯ ಸಹೋದರ ಮುಜಮಿಲ್ ಸತ್ತಿಗೇರಿ ಎಂಬಾತ ಸ್ಕ್ರೂಡ್ರೈವರ್‌ನಿಂದ ಚುಚ್ಚಿದ್ದಾನೆ.

ಕೂಡಲೇ ಅಲ್ಲಿದ್ದ ಸ್ಥಳೀಯರು ಗಾಯಾಳು ಇಬ್ರಾಹಿಂನನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಇಬ್ರಾಹಿಂ ಚಿಕಿತ್ಸೆ ಫಲಿಸದೇ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ. ಮಾಳ ಮಾರುತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಈ ಸಂಬಂಧ ಪ್ರಕರಣ ದಾಖಲಾಗಿದ್ದು ತನಿಖೆಯನ್ನು ನಡೆಸುತ್ತಿದ್ದಾರೆ. ಮರಣೋತ್ತರ ಪರೀಕ್ಷೆ ನಂತರ ಕುಟುಂಬಸ್ಥರಿಗೆ ಮೃತದೇಹ ಹಸ್ತಾಂತರ ಮಾಡಲಾಗಿದೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಕ್ರೈಂ

Anjali Murder Case: ಥಳಿಸಿದವರಿಗೆ ಈತ ಅಂಜಲಿ ಹಂತಕ ಎಂದು ಗೊತ್ತೇ ಇರಲಿಲ್ಲ! ಕೊಲೆಗಾರ ಸಿಕ್ಕಿಬಿದ್ದಿದ್ದು ಹೀಗೆ

Anjali Murder Case: ರೈಲಿನಲ್ಲಿ ಮಹಿಳಾ ಪ್ರಯಾಣಿಕರೊಂದಿಗೆ ಅಸಭ್ಯ ರೀತಿಯಲ್ಲಿ ವರ್ತಿಸಿದ್ದಾನೆ. ಈ ಸಂದರ್ಭದಲ್ಲಿ ಪ್ರಯಾಣಿಕರು ಒಟ್ಟು ಸೇರಿ ಈತನನ್ನು ಥಳಿಸಿದ್ದಾರೆ. ಜನರಿಂದ ತಪ್ಪಿಸಿಕೊಳ್ಳಲು ಚಲಿಸುವ ರೈಲಿನಿಂದ ಜಿಗಿದಿದ್ದ. ಆಗ ತೀವ್ರವಾಗಿ ಗಾಯಗೊಂಡಿದ್ದ.

VISTARANEWS.COM


on

anjali murder suspect girish2
Koo

ಹುಬ್ಬಳ್ಳಿ: ಹುಬ್ಬಳ್ಳಿಯ ಬೆಂಡಿಗೇರಿಯಲ್ಲಿ (Hubli Crime) ಅಂಜಲಿಯನ್ನು ಕೊಲೆ (Anjali Murder Case) ಮಾಡಿ ಪರಾರಿಯಾಗಿದ್ದ ಆರೋಪಿ ಗಿರೀಶ್‌ ಸಾವಂತ್ (Anjali Murder suspect) ಬಂಧನ ಪ್ರಕರಣ ಅನಿರೀಕ್ಷಿತ, ರೋಚಕ ರೀತಿಯಲ್ಲಿ ಸಂಭವಿಸಿದೆ. ರೈಲಿನಲ್ಲಿ ಇತರ ಪ್ರಯಾಣಿಕರಿಂದ (Co passengers) ಥಳಿತಕ್ಕೊಳಗಾದ ಗಿರೀಶ್‌, ಕೊಲೆ ಆರೋಪಿ ಎಂದು ಥಳಿಸಿದವರಿಗೆ ಗೊತ್ತೇ ಇರಲಿಲ್ಲ!

ಇದು ನಡೆದದ್ದು ಹೀಗೆ: ಕೊಲೆ ಆರೋಪಿ ಗಿರೀಶ್ ಸಾವಂತ್ ಮೈಸೂರಿನಿಂದ ಹುಬ್ಬಳ್ಳಿಗೆ ರೈಲಿನಲ್ಲಿ ಬರುತ್ತಿದ್ದ. ರೈಲಿನಲ್ಲಿ ಮಹಿಳಾ ಪ್ರಯಾಣಿಕರೊಂದಿಗೆ ಅಸಭ್ಯ ರೀತಿಯಲ್ಲಿ ವರ್ತಿಸಿದ್ದಾನೆ. ಈ ಸಂದರ್ಭದಲ್ಲಿ ಪ್ರಯಾಣಿಕರು ಒಟ್ಟು ಸೇರಿ ಈತನನ್ನು ಥಳಿಸಿದ್ದಾರೆ. ಜನರಿಂದ ತಪ್ಪಿಸಿಕೊಳ್ಳಲು ಚಲಿಸುವ ರೈಲಿನಿಂದ ಜಿಗಿದಿದ್ದ. ಆಗ ತೀವ್ರವಾಗಿ ಗಾಯಗೊಂಡಿದ್ದ.

ಆರೋಪಿಯನ್ನ ದಾವಣಗೆರೆ ಪೊಲೀಸರು ವಶಕ್ಕೆ ಪಡೆದಿದ್ದರು. ಅಂಜಲಿ ಕೊಲೆ ಆರೋಪಿ ಎಂದು ಆರಂಭದಲ್ಲಿ ತಿಳಿದಿರಲಿಲ್ಲ. ಬಳಿಕ ಆರೋಪಿಯ ಗುರುತು ಪತ್ತೆ ಹಚ್ಚಿದ ದಾವಣಗೆರೆ ಪೊಲೀಸರು, ಹುಬ್ಬಳ್ಳಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಬಳಿಕ ಈತನನ್ನು ಹುಬ್ಬಳ್ಳಿ ಪೊಲೀಸರು ವಶಕ್ಕೆ ಪಡೆದು ಹುಬ್ಬಳ್ಳಿಗೆ ಕರೆತಂದು ಕಿಮ್ಸ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮಿಷನರ್ ರೇಣುಕಾ ಸುಕುಮಾರ ಕಿಮ್ಸ್‌ಗೆ ಆಗಮಿಸಿ ಆರೋಪಿಯನ್ನು ಪರಿಶೀಲಿಸಿದ್ದಾರೆ.

ಎಲ್ಲಿದ್ದ ಗಿರೀಶ್?‌

ಆರೋಪಿ ಗಿರೀಶ್‌ ಮೈಸೂರಿನಲ್ಲಿ ಮಹಾರಾಜ್ ಹೋಟೆಲ್‌ನಲ್ಲಿ ಕೆಲಸ ಮಾಡುತ್ತಿದ್ದ. ಆತ ನೀಡಿದ ಮಾಹಿತಿ ಪ್ರಕಾರ, ಗಿರೀಶ್ ಮತ್ತು ಅಂಜಲಿ ಪರಸ್ಪರ ಪ್ರೀತಿಸುತ್ತಿದ್ದರು. 15 ದಿನಗಳ ಹಿಂದೆ ದೇವಸ್ಥಾನದಲ್ಲಿ ಮದುವೆಯಾಗಿದ್ದರು. ಒಂದು ವಾರದ ಮೊದಲು 2 ಸಾವಿರ ರೂ. ಹಣ ಕೇಳಿದ್ದಳು. ಗಿರೀಶ್‌ ಅದನ್ನು ಫೋನ್ ಪೇ ಮಾಡಿದ್ದ. ಆ ನಂತರ ಗಿರೀಶನ ನಂಬರ್ ಅನ್ನು ಅಂಜಲಿ ಬ್ಲಾಕ್ ಲಿಸ್ಟ್‌ಗೆ ಹಾಕಿದ್ದಳು. ಆತನ ಫೋನ್ ರೀಸಿವ್ ಮಾಡುತ್ತಿರಲಿಲ್ಲ. ಹೀಗಾಗಿ ಸಿಟ್ಟಿಗೆದ್ದ ಗಿರೀಶ್‌ ಮೈಸೂರನಿಂದ ಹುಬ್ಬಳ್ಳಿಗೆ ಬಂದು ನಸುಕಿನ ಜಾವ ಕೊಲೆ ಮಾಡಿದ್ದಾನೆ.

ಕೊಲೆ ನಂತರ ಹುಬ್ಬಳ್ಳಿ ಹೊಸ ಬಸ್ ಸ್ಟ್ಯಾಂಡ್‌ನಿಂದ ಬಸ್‌ ಹತ್ತಿ ಹಾವೇರಿಗೆ ಬಂದಿದ್ದ. ಹಾವೇರಿಯಿಂದ ಮೈಸೂರಿಗೆ ಟ್ರೈನ್ ಹತ್ತಿದ್ದ. ಮೈಸೂರಿನ ಮಹಾರಾಜ್ ಹೋಟೆಲ್‌ನಲ್ಲಿ ಮಲಗಿದ್ದ. ಆ ನಂತರ ಮೈಸೂರಿನಿಂದ ಹುಬ್ಬಳ್ಳಿಗೆ ಬರಲೆಂದು ವಾಪಸ್ ಬರುತ್ತಿದ್ದಾಗ ಟ್ರೈನ್‌ನಲ್ಲಿ ಸಾರ್ವಜನಿಕರೊಡನೆ ಕಿರಿಕ್ ಆಗಿ ಟ್ರೈನ್‌ನಿಂದ ಹಾರಿದ್ದ.

ಪೊಲೀಸರು ಹೇಳೋದೇನು?

“ಅಂಜಲಿ ಕೊಲೆ ಆರೋಪಿ ಪತ್ತೆಗಾಗಿ ಎಂಟು ತಂಡಗಳನ್ನು ನಾವು ರಚನೆ ಮಾಡಿದ್ದೆವು. ನಿನ್ನೆ ರೇಲ್ವೆ ಪೊಲೀಸರ ಸಹಾಯದಿಂದ ಆರೋಪಿ ಸಿಕ್ಕಿದ್ದಾನೆ. ಆರೋಪಿ ಗಿರೀಶ್‌ ತಲೆ ಮತ್ತು ಬೆನ್ನಿಗೆ ಗಂಭೀರ ಗಾಯವಾಗಿದೆ. ಸದ್ಯ ಕೋಮಾ ಸ್ಟೇಜ್‌ನಲ್ಲಿದ್ದಾನೆ. ಟ್ರೈನಿನಿಂದ ಯಾಕೆ ಜಿಗಿದ ಎಂದು ಅವನು ಹೇಳಬೇಕಿದೆ” ಎಂದು ಪೋಲಿಸ್ ಕಮೀಷನರ್ ರೇಣುಕಾ ಸುಕುಮಾರ್ ಹೇಳಿಕೆ ನೀಡಿದ್ದಾರೆ.

“ಬೆಳಗಿನ ಜಾವ 4.30ಗೆ ನಮ್ಮ ಕಸ್ಟಡಿಗೆ ದೊರೆತಿದ್ದಾನೆ. ಈತ ಮೈಸೂರಿನಿಂದ ಗೋವಾ, ಮಹಾರಾಷ್ಟ್ರ ಕಡೆ ಹೋಗಿ ತಲೆಮರೆಸಿಕೊಳ್ಳಬೇಕು ಎಂದು ಪ್ಲ್ಯಾನ್ ಮಾಡಿಕೊಂಡಿದ್ದ. ಗಿರೀಶ್ ಮೇಲೆ ಬೈಕ್ ಕಳ್ಳತನ ವಿಚಾರದಲ್ಲಿಯೂ 4 ಪ್ರಕರಣಗಳು ದಾಖಲು ಆಗಿವೆ. ಅವನು ಹೇಳುವ ಪ್ರಕಾರ ಹುಡುಗಿ ಫೋನ್ ಬ್ಲಾಕ್ ಮಾಡಿದ್ದಳು. ನಾವು ಪ್ರೀತಿ ಮಾಡ್ತಿದ್ದೆವು ಎಂದು ಹೇಳಿದ್ದಾನೆ. ಪ್ರಜ್ಞೆ ಬಂದರ ನಂತರ ಪೂರ್ತಿ ಹೇಳಿಕೆ ಪಡೆದುಕೊಳ್ಳಲಾಗುವುದು” ಎಂದು ತಿಳಿಸಿದ್ದಾರೆ.

ದೊಡ್ಡಬಳ್ಳಾಪುರ ಕೊಲೆ ಆರೋಪಿ ಕಾಲಿಗೆ ಗುಂಡು ಹಾರಿಸಿ ಬಂಧನ

ದೊಡ್ಡಬಳ್ಳಾಪುರ: ಕೊಲೆ ಆರೋಪಿಯೊಬ್ಬನ (Murder Suspect) ಕಾಲಿಗೆ ಪೊಲೀಸರು ಗುಂಡು ಹಾರಿಸಿ (Encounter) ಬಂಧಿಸಿದ್ದಾರೆ. ಹೇಮಂತ್‌ ಕುಮಾರ್‌ ಗೌಡ ಎಂಬ ಯುವಕನ ಕೊಲೆ (Murder Case) ಆರೋಪಿ ರೌಡಿ ಶೀಟರ್ ಶ್ರೀನಿವಾಸ್ ಅಲಿಯಾಸ್ ಮಿಟ್ಟೆ ಕಾಲಿಗೆ ಗುಂಡು ಹಾರಿಸಿ (Shoot out) ಬಂಧಿಸಲಾಗಿದೆ.

ಯಲಹಂಕ ತಾಲೂಕಿನ ಶ್ರೀರಾಮನಹಳ್ಳಿ ಬಳಿ ಘಟನೆ ನಡೆದಿದೆ. ರೌಡಿ‌ ಶೀಟರ್ ಬಂಧನಕ್ಕೆ ತೆರಳಿದ ವೇಳೆ ಪೊಲೀಸ್ ಕಾನ್‌ಸ್ಟೇಬಲ್ ಚಂದ್ರು ಮೇಲೆ ಈತ ಹಲ್ಲೆ‌ ನಡೆಸಿದ್ದಾನೆ. ಪೊಲೀಸರ ಮೇಲೆ ಹಲ್ಲೆ ಹಿನ್ನೆಲೆಯಲ್ಲಿ ಆತ್ಮರಕ್ಷಣೆಗಾಗಿ ಇನ್‌ಸ್ಪೆಕ್ಟರ್ ಸಾಧಿಕ್ ಪಾಷ ಅವರಿಂದ ಫೈರಿಂಗ್ ನಡೆದಿದೆ.

ಈತ ಕೊಲೆ ಕೇಸ್‌ನ 2ನೇ ಆರೋಪಿಯಾಗಿದ್ದಾನೆ. ಮೇ 11ರಂದು ದೊಡ್ಡಬಳ್ಳಾಪುರ ಹೊರವಲಯ ನವೋದಯ ಶಾಲೆಯ ಮುಂಭಾಗ ಹೇಮಂತ್ ಕುಮಾರ್ ಗೌಡ (27) ಎಂಬವರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. ಹೇಮಂತ್ ಅವರನ್ನು ಅಟ್ಟಾಡಿಸಿ ಕೊಲೆ ಮಾಡಿ ಆರೋಪಿಗಳು ಕಾರಿನಲ್ಲಿ ಶವದ ಜೊತೆ ರೌಂಡ್ಸ್ ಹಾಕಿದ್ದರು. ಪ್ರಕರಣ ದಾಖಲಿಸಿಕೊಂಡ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್‌ ಅಧಿಕಾರಿಗಳು ಆರೋಪಿಗಳ ಪತ್ತೆಗೆ ವಿಶೇಷ ತಂಡ ರಚಿಸಿ ಬಂಧನಕ್ಕಾಗಿ ಬಲೆ ಬೀಸಿದ್ದರು.

ಪ್ರಕರಣದ ಪ್ರಮುಖ ಆರೋಪಿ ನರಸಿಂಹಮೂರ್ತಿ ಅಲಿಯಾಸ್​ ಮಿಟ್ಟೆ ಎಂಬಾತನನ್ನು ಈಗಾಗಲೇ ದಸ್ತಗಿರಿ ಮಾಡಲಾಗಿದೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಲ್ಲಿಕಾರ್ಜುನ ಬಾಲದಂಡಿ, ಡಿವೈಎಸ್ಪಿ ರವಿಕುಮಾರ್, ಗ್ರಾಮಾಂತರ ಠಾಣೆ ಇನ್ಸ್ಪೆಕ್ಟರ್ ಸಾದಿಕ್ ಪಾಷ ನೇತೃತ್ವದ ತಂಡದಿಂದ ಕಾರ್ಯಾಚರಣೆ ನಡೆಸಲಾಗಿತ್ತು.

ಸಾಫ್ಟ್‌ವೇರ್‌ ಎಂಜಿನಿಯರ್‌ ಪತ್ನಿಯ ಅನುಮಾನಾಸ್ಪದ ಸಾವು

ಬೆಂಗಳೂರು: ರಾಜಧಾನಿಯ (bengaluru crime) ಬಸವೇಶ್ವರನಗರ ಪೊಲೀಸ್ ಠಾಣೆ ವ್ಯಾಪ್ತಿಯ ಮಂಜುನಾಥ ನಗರದಲ್ಲಿ ಮಹಿಳೆಯೊಬ್ಬರು ಆತ್ಮಹತ್ಯೆ (woman self harming) ಮಾಡಿಕೊಂಡ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ. ಮೃತರು ಸಾಫ್ಟ್‌ವೇರ್‌ ಎಂಜಿನಿಯರ್‌ (Software engineer) ಪತ್ನಿಯಾಗಿದ್ದು, ಇದೊಂದು ಅಸಹಜ ಸಾವು (UDR Case) ಎಂದು ಮೃತಳ ತವರಿನವರು ಶಂಕಿಸಿದ್ದಾರೆ.

ಮಂಜುನಾಥ ನಗರದ ಸಂಧ್ಯಾ ಮೃತ ಮಹಿಳೆ. ನೆನ್ನೆ ರಾತ್ರಿ ಘಟನೆ ನಡೆದಿದೆ. ನೇಣು ಬಿಗಿದ ಸ್ಥಿತಿಯಲ್ಲಿ ಸಂಧ್ಯಾ ಮೃತ ದೇಹ ಪತ್ತೆಯಾಗಿದೆ. ಇವರಿಗೆ ಮದುವೆಯಾಗಿ 5 ವರ್ಷ ಆಗಿತ್ತು. ನಾಲ್ಕು ವರ್ಷದ ಗಂಡು ಮಗುವೂ ಇತ್ತು. ಅಳಿಯ ಜಯಪ್ರಕಾಶ್‌ ಮೈತುಂಬಾ ಸಾಲ ಮಾಡಿ ಅದನ್ನು ತೀರಿಸಲು ಕಿರುಕುಳ ನೀಡುತ್ತಿದ್ದ. ನನ್ನ ಮಗಳಿಗೆ ಈ ವಿಚಾರವಾಗಿ ಕಿರುಕುಳ ನೀಡುತ್ತಿದ್ದ ಎಂದು ಸಂಧ್ಯಾ ತಂದೆ ಆಪಾದಿಸಿದ್ದಾರೆ. ಸದ್ಯ ಬಸವೇಶ್ವರನಗರ ಪೊಲೀಸ್ ಠಾಣಾ ಸಿಬ್ಬಂದಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಇದನ್ನೂ ಓದಿ: Murder Case : ತಂಗಿಯನ್ನು ಬೈಕ್‌ನಲ್ಲಿ ಸುತ್ತಾಡಿಸುತ್ತಿದ್ದವನನ್ನು ಸ್ಕ್ರೂಡ್ರೈವರ್‌ನಿಂದ ಚುಚ್ಚಿ ಕೊಂದ

Continue Reading
Advertisement
dhruva sarja support C Cinema Kanda Kanda Video Song Release
ಸ್ಯಾಂಡಲ್ ವುಡ್7 mins ago

Dhruva Sarja: ‘ಸಿ’ ಅಂತಿದ್ದಾರೆ ಧ್ರುವ ಸರ್ಜಾ; ಇದು ಅಪ್ಪ-ಮಗಳ ಕಥೆ!

Pushpa 2 Allu Arjun anasuya bharadwaj poster look out
ಟಾಲಿವುಡ್9 mins ago

Pushpa 2: ʻಪುಷ್ಪ 2ʼ ಅನಸೂಯಾ ಭಾರದ್ವಾಜ್ ಪಾತ್ರದ ಫಸ್ಟ್ ಲುಕ್ ಔಟ್!

Viral News
ವೈರಲ್ ನ್ಯೂಸ್11 mins ago

Viral News: ತ್ರಿವಳಿ ತಲಾಖ್‌ನಿಂದ ಬೇಸತ್ತಿದ್ದ ಮಹಿಳೆ ಹಿಂದೂ ಧರ್ಮಕ್ಕೆ ಮತಾಂತರ; ದೇವಸ್ಥಾನದಲ್ಲಿ ಮರು ಮದುವೆ

Murder case In Bengaluru
ಬೆಂಗಳೂರು20 mins ago

Murder case : ಕಳ್ಳನೆಂದು ಹಿಡಿಯಲು ಹೋದ ಸೆಕ್ಯೂರಿಟಿ ಗಾರ್ಡ್‌ಗಳು; ನೂಕಾಟದಲ್ಲಿ ಬಿದ್ದ ಯುವಕ, ಕರೆಂಟ್‌ ಶಾಕ್‌ನಿಂದ ಸಾವು

IPL Ticket Scam
ಕ್ರೀಡೆ41 mins ago

IPL Ticket Scam: ಆನ್​ಲೈನ್​ ಟಿಕೆಟ್​ ಖರೀದಿಸಲು ಹೋಗಿ 3 ಲಕ್ಷ ರೂ ಕಳೆದುಕೊಂಡ ಆರ್​ಸಿಬಿ ಅಭಿಮಾನಿ

Zakir Naik
ವಿದೇಶ47 mins ago

Zakir Naik: ಹಿಂದುಗಳನ್ನು ಮತಾಂತರಗೊಳಿಸುವ ಜಾಕೀರ್ ನಾಯ್ಕ್‌ನನ್ನು ಭಾರತದ ಚಕ್ರವರ್ತಿಯನ್ನಾಗಿಸಬೇಕು; ವಿವಾದ ಹುಟ್ಟುಹಾಕಿದ ಮೌಲ್ವಿ

prajwal revanna case bhavani revanna hd revanna
ಕ್ರೈಂ1 hour ago

Prajwal Revanna Case: ಕಷ್ಟಕ್ಕಾಗದ ಭವಾನಿ ರೇವಣ್ಣ ಮೇಲೆ ದೇವೇಗೌಡ ಫ್ಯಾಮಿಲಿ ಕೆಂಡಾಮಂಡಲ

Murder Case in Anekla
ಬೆಂಗಳೂರು ಗ್ರಾಮಾಂತರ1 hour ago

Murder case : ಬಯಲು ಶೌಚಾಲಯಕ್ಕೆ ಹೋದ ಬಾಲಕನ ದೊಣ್ಣೆಯಿಂದ ಹೊಡೆದು ಕೊಂದರು

Kannada New Movie tanush shivannas mr natwarlal In OTT
ಸ್ಯಾಂಡಲ್ ವುಡ್1 hour ago

Kannada New Movie: ಒಟಿಟಿಗೆ ಲಗ್ಗೆ ಇಟ್ಟ ತನುಷ್ ಶಿವಣ್ಣ ಅಭಿನಯದ ಕ್ರೈಮ್-ಆ್ಯಕ್ಷನ್ ಸಿನಿಮಾ ʻMr ನಟ್ವರ್ ಲಾಲ್ʼ!

Viral News
ವೈರಲ್ ನ್ಯೂಸ್1 hour ago

Viral News: ಅಂತ್ಯಕ್ರಿಯೆ ವೇಳೆ ಬದುಕಿ ಬಂದ ಮಗಳು; ಖುಷಿಯಾಗಿದ್ದ ಪೋಷಕರಿಗೆ ಕಾದಿತ್ತು ಮತ್ತೊಂದು ಶಾಕ್‌!

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka weather Forecast
ಮಳೆ6 hours ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

Dina Bhavishya
ಭವಿಷ್ಯ7 hours ago

Dina Bhavishya : ಈ ರಾಶಿಯ ಪ್ರೇಮಿಗಳಿಗೆ ಮನೆಯಿಂದ ಸಿಗುತ್ತೆ ಗ್ರೀನ್‌ ಸಿಗ್ನಲ್‌

Karnataka Weather Forecast
ಮಳೆ19 hours ago

Karnataka Weather : ಭಾರಿ ಮಳೆಗೆ ಕೊಟ್ಟೂರು ಬಸ್ ಸ್ಟ್ಯಾಂಡ್‌ ಜಲಾವೃತ; ‌ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

Drowned in water
ಹಾಸನ22 hours ago

Drowned in water : ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರುಪಾಲು; ಓರ್ವ ಬಾಲಕ ಪಾರು

Suspicious Case
ಬೆಂಗಳೂರು1 day ago

Suspicious Case : ಬಾತ್‌ ರೂಂನಲ್ಲಿತ್ತು ಕಾಲೇಜು ಹುಡುಗಿ ಡೆಡ್‌ ಬಾಡಿ; ಕುತ್ತಿಗೆ ಕೊಯ್ದು ಸಾಯಿಸಿದವರು ಯಾರು?

Prajwal Revanna Case
ಕರ್ನಾಟಕ2 days ago

Prajwal Revanna Case: ಪ್ರಜ್ವಲ್‌ ರೇವಣ್ಣ ಇಂದೇ ಜರ್ಮನಿಯಿಂದ ಭಾರತಕ್ಕೆ? ಎಸ್‌ಐಟಿ ಅಲರ್ಟ್‌

Dina Bhavishya
ಭವಿಷ್ಯ2 days ago

Dina Bhavishya : ಭೂ ವ್ಯವಹಾರಕ್ಕೆ ಇದು ಸೂಕ್ತ ಸಮಯ; ವ್ಯಾಪಾರದಲ್ಲಿ ಡಬಲ್‌ ಲಾಭ

HD Revanna Released first reaction after release will be acquitted of all charges
ರಾಜಕೀಯ3 days ago

HD Revanna Released: ರಿಲೀಸ್‌ ಬಳಿಕ ರೇವಣ್ಣ ಫಸ್ಟ್‌ ರಿಯಾಕ್ಷನ್;‌ ನ್ಯಾಯಾಂಗದ ಮೇಲೆ ನಂಬಿಕೆ ಇದೆ; ಆರೋಪ ಮುಕ್ತನಾಗುವೆ

CM Siddaramaiah says Our government is stable for 5 years BJP will disintegrate
Lok Sabha Election 20243 days ago

CM Siddaramaiah: ನಮ್ಮ ಸರ್ಕಾರ 5 ವರ್ಷ ಸುಭದ್ರ; ಚುನಾವಣೆ ಬಳಿಕ ಬಿಜೆಪಿ ಛಿದ್ರ ಎಂದ ಸಿಎಂ ಸಿದ್ದರಾಮಯ್ಯ!

I dont want to go to other states for Lok Sabha Election 2024 campaign for Congress says CM Siddaramaiah
Lok Sabha Election 20243 days ago

CM Siddaramaiah: ಕಾಂಗ್ರೆಸ್‌ ಪರ ಬೇರೆ ರಾಜ್ಯಗಳಿಗೆ ಪ್ರಚಾರಕ್ಕೆ ಹೋಗಲು ನನಗೆ ಇಷ್ಟವಿಲ್ಲ: ಸಿಎಂ ಸಿದ್ದರಾಮಯ್ಯ!

ಟ್ರೆಂಡಿಂಗ್‌