IPL 2023 | ಫ್ರಾಂಚೈಸಿಗಳಿಂದ ಬಿಡುಗಡೆಗೊಂಡ, ಉಳಿದುಕೊಂಡ ಆಟಗಾರರ ಪಟ್ಟಿ ಇಂತಿದೆ - Vistara News

ಐಪಿಎಲ್ 2024

IPL 2023 | ಫ್ರಾಂಚೈಸಿಗಳಿಂದ ಬಿಡುಗಡೆಗೊಂಡ, ಉಳಿದುಕೊಂಡ ಆಟಗಾರರ ಪಟ್ಟಿ ಇಂತಿದೆ

ಐಪಿಎಲ್‌ನ ಎಲ್ಲ ಫ್ರಾಂಚೈಸಿಗಳು (IPL 2023)ಮಂಗಳವಾರ ಸಂಜೆ ತಮ್ಮ ಉಳಿಕೆ ಹಾಗೂ ಬಿಡುಗಡೆ ಮಾಡಿದ ಅಟಗಾರರ ಪಟ್ಟಿಯನ್ನು ಸಲ್ಲಿಕೆ ಮಾಡಿವೆ.

VISTARANEWS.COM


on

IPL 2023
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮುಂಬಯಿ : ಟಿ೨೦ ವಿಶ್ವ ಕಪ್‌ ಜ್ವರ ಮುಕ್ತಾಯಗೊಳ್ಳುತ್ತಿದ್ದಂತೆ ಐಪಿಎಲ್ (IPL 2023)ಕಿಕ್‌ ಏರುತ್ತಿದೆ. ಮಂಗಳವಾರ ಐಪಿಎಲ್‌ ಫ್ರಾಂಚೈಸಿಗಳಿಗೆ ತಮ್ಮಲ್ಲಿ ಉಳಿಸಿಕೊಳ್ಳುವ ಹಾಗೂ ಬಿಡುಗಡೆ ಮಾಡುವ ಆಟಗಾರ ಪಟ್ಟಿಯನ್ನು ಐಪಿಎಲ್‌ ಆಡಳಿತ ಮಂಡಳಿಗೆ ಸಲ್ಲಿಕೆ ಮಾಡಲು ಕೊನೇ ದಿನವಾಗಿತ್ತು. ಅಂತೆಯೇ ಸಂಜೆ ೫ ಗಂಟೆಯ ವೇಳೆಗೆ ಎಲ್ಲ ಫ್ರಾಂಚೈಸಿಗಳು ತಮ್ಮ ತಮ್ಮ ಪಟ್ಟಿಗಳನ್ನು ಸಲ್ಲಿಕೆ ಮಾಡಿವೆ.

ವಿರಾಟ್ ಕೊಹ್ಲಿ (ರಾಯಲ್ ಚಾಲೆಂಜರ್ಸ್ ಬೆಂಗಳೂರು), ಹಾರ್ದಿಕ್ ಪಾಂಡ್ಯ (ಗುಜರಾತ್ ಟೈಟಾನ್ಸ್), ರಶೀದ್ ಖಾನ್ (ಗುಜರಾತ್ ಟೈಟಾನ್ಸ್), ಎಂಎಸ್ ಧೋನಿ (ಚೆನ್ನೈ ಸೂಪರ್ ಕಿಂಗ್ಸ್), ರಿಷಭ್ ಪಂತ್ (ದೆಹಲಿ ಕ್ಯಾಪಿಟಲ್ಸ್), ಶಿಖರ್ ಧವನ್ (ಪಂಜಾಬ್‌ ಕಿಂಗ್ಸ್‌ ), ಕೆಎಲ್ ರಾಹುಲ್ (ಲಕ್ನೊ ಸೂಪರ್‌ ಜಯಂಟ್ಸ್‌), ಜೋಸ್ ಬಟ್ಲರ್ (ರಾಜಸ್ಥಾನ್ ರಾಯಲ್ಸ್), ರೋಹಿತ್ ಶರ್ಮಾ (ಮುಂಬೈ ಇಂಡಿಯನ್ಸ್), ಶ್ರೇಯಸ್ ಅಯ್ಯರ್ (ಕೋಲ್ಕತ್ತಾ ನೈಟ್ ರೈಡರ್ಸ್), ಗ್ಲೆನ್ ಫಿಲಿಪ್ಸ್ (ಸನ್ ರೈಸರ್ಸ್ ಹೈದರಾಬಾದ್) ಮತ್ತಿತರರು ಫ್ರಾಂಚೈಸಿಗಳು ಉಳಿಸಿಕೊಂಡಿರುವ ಪ್ರಮುಖ ಆಟಗಾರರು. ಅಂತೆಯೇ ಐಪಿಎಲ್‌ನ ೧೦ ಫ್ರಾಂಚೈಸಿಗಳು ಉಳಿಸಿಕೊಂಡ, ಬಿಡುಗಡೆ ಮಾಡಿದ ಹಾಗೂ ಉಳಿಸಿಕೊಂಡ ಮೊತ್ತದ ವಿವರವಿದೆ.

ರಾಯಲ್ ಚಾಲೆಂಜರ್ಸ್ ಬೆಂಗಳೂರು

ಉಳಿಸಿಕೊಂಡಿರುವ ಆಟಗಾರರು: ಫಾಫ್ ಡು ಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ, ಶುಯಾಶ್‌ ಪ್ರಭುದೇಸಾಯಿ, ರಜತ್ ಪಾಟಿದಾರ್, ದಿನೇಶ್ ಕಾರ್ತಿಕ್, ಅನುಜ್ ರಾವತ್, ಫಿನ್ ಅಲೆನ್, ಗ್ಲೆನ್ ಮ್ಯಾಕ್ಸ್‌ವೆಲ್, ವಾನಿಂದು ಹಸರಂಗ, ಶಹಬಾಜ್ ಅಹ್ಮದ್, ಹರ್ಷಲ್ ಪಟೇಲ್, ಡೇವಿಡ್ ವಿಲ್ಲಿ, ಕರಣ್‌ ಶರ್ಮಾ, ಮಹಿಪಾಲ್ ಲಾಮ್ರೋರ್‌, ಮೊಹಮ್ಮದ್ ಸಿರಾಜ್, ಜೋಶ್ ಹೇಜಲ್‌ವುಡ್‌, ಸಿದ್ದಾರ್ಥ್ ಕೌಲ್, ಆಕಾಶ್ ದೀಪ್.
ಬಿಡುಗಡೆಯಾದ ಆಟಗಾರರು: ಜೇಸನ್ ಬೆಹ್ರೆಂಡಾರ್ಫ್, ಅನೀಶ್ವರ್ ಗೌತಮ್, ಚಾಮ ಮಿಲಿಂದ್, ಲವ್‌ನೀತ್‌ ಸಿಸೋಡಿಯಾ, ಶೆರ್ಫಾನ್‌ ರುದರ್‌ಫೋರ್ಡ್.
ಉಳಿಕೆ ಮೊತ್ತ: 8.75 ಕೋಟಿ ರೂಪಾಯಿ
ಉಳಿಕೆ ವಿದೇಶಿ ಕೋಟಾ: ಎರಡು
ಟ್ರೇಡಿಂಗ್‌ ಮೂಲಕ ಪಡೆದುಕೊಂಡ ಆಟಗಾರರು: ಇಲ್ಲ

ಕೋಲ್ಕತ್ತಾ ನೈಟ್ ರೈಡರ್ಸ್

ಉಳಿಸಿಕೊಂಡಿರುವ ಆಟಗಾರರು: ಶ್ರೇಯಸ್ ಅಯ್ಯರ್ (ನಾಯಕ), ನಿತೀಶ್ ರಾಣಾ, ವೆಂಕಟೇಶ್ ಅಯ್ಯರ್, ಆಂಡ್ರೆ ರಸೆಲ್, ಸುನಿಲ್ ನರೈನ್, ಶಾರ್ದೂಲ್ ಠಾಕೂರ್, ಲಾಕಿ ಫರ್ಗ್ಯೂಸನ್, ಉಮೇಶ್ ಯಾದವ್, ಟಿಮ್ ಸೌಥಿ, ಹರ್ಷಿತ್ ರಾಣಾ, ವರುಣ್ ಚಕ್ರವರ್ತಿ, ಅನುಕೂಲ್ ರಾಯ್, ರಿಂಕು ಸಿಂಗ್‌.
ಬಿಡುಗಡೆಗೊಂಡ ಆಟಗಾರರು: ಪ್ಯಾಟ್ ಕಮಿನ್ಸ್, ಸ್ಯಾಮ್ ಬಿಲ್ಲಿಂಗ್ಸ್, ಅಮನ್ ಖಾನ್, ಶಿವಂ ಮಾವಿ, ಮೊಹಮ್ಮದ್ ನಬಿ, ಚಾಮಿಕಾ ಕರುಣಾರತ್ನೆ, ಆರೋನ್ ಫಿಂಚ್, ಅಲೆಕ್ಸ್ ಹೇಲ್ಸ್, ಅಭಿಜಿತ್ ತೋಮರ್, ಅಜಿಂಕ್ಯ ರಹಾನೆ, ಅಶೋಕ್ ಶರ್ಮಾ, ಬಾಬಾ ಇಂದ್ರಜಿತ್, ಪ್ರಥಮ್ ಸಿಂಗ್, ರಮೇಶ್ ಕುಮಾರ್, ರಸಿಖ್ ಸಲಾಮ್, ಶೆಲ್ಡನ್ ಜಾಕ್ಸನ್‌.
ಉಳಿದಿರುವ ಮೊತ್ತ: 7.05 ಕೋಟಿ ರೂಪಾಯಿ
ಉಳಿಕೆ ವಿದೇಶಿ ಆಟಗಾರರ ಖೋಟಾ: ಮೂರು
ಟ್ರೇಡ್‌ ಮಾಡಿಕೊಂಡ ಆಟಗಾರರು: ಶಾರ್ದೂಲ್ ಠಾಕೂರ್, ರಹಮಾನುಲ್ಲಾ ಗುರ್ಬಾಜ್, ಲಾಕಿ ಫರ್ಗ್ಯೂಸನ್.

ಚೆನ್ನೈ ಸೂಪರ್ ಕಿಂಗ್ಸ್

ಉಳಿಸಿಕೊಂಡಿರುವ ಆಟಗಾರರು: ಎಂಎಸ್ ಧೋನಿ (ನಾಯಕ), ಡೆವೊನ್ ಕಾನ್ವೆ, ಋತುರಾಜ್ ಗಾಯಕ್ವಾಡ್, ಅಂಬಾಟಿ ರಾಯುಡು, ಸುಭ್ರಾಂಶು ಸೇನಾಪತಿ, ಮೊಯಿನ್ ಅಲಿ, ಶಿವಂ ದುಬೆ, ರಾಜವರ್ಧನ್ ಹಂಗರ್‌ಗೇಕರ್‌, ಡ್ವೇನ್ ಪ್ರಿಟೋರಿಯಸ್, ಮಿಚೆಲ್ ಸ್ಯಾಂಟ್ನರ್, ರವೀಂದ್ರ ಜಡೇಜಾ, ತುಷಾರ್ ದೇಶಪಾಂಡೆ, ಮುಖೇಶ್ ಚೌಧರಿ, ಮತೀಶ್ ಪಥಿರಾಣಾ, ಸಿಮರ್‌ಜೀತ್‌ ಸಿಂಗ್‌, ದೀಪಕ್ ಚಾಹರ್, ಪ್ರಶಾಂತ್ ಸೋಲಂಕಿ, ಮಹೇಶ್ ತೀಕ್ಷಣ.
ಬಿಡುಗಡೆಗೊಂಡ ಆಟಗಾರರು: ಡ್ವೇನ್ ಬ್ರಾವೋ, ರಾಬಿನ್ ಉತ್ತಪ್ಪ, ಆಡಮ್ ಮಿಲ್ನೆ, ಹರಿ ನಿಶಾಂತ್, ಕ್ರಿಸ್ ಜೋರ್ಡಾನ್, ಭಗತ್ ವರ್ಮಾ, ಕೆಎಂ ಆಸಿಫ್, ನಾರಾಯಣ್ ಜಗದೀಶನ್‌.
ಉಳಿಕೆ ಮೊತ್ತ: 20.45 ಕೋಟಿ

ಪಂಜಾಬ್ ಕಿಂಗ್ಸ್

ಉಳಿಸಿಕೊಂಡಿರುವ ಆಟಗಾರರು: ಶಿಖರ್ ಧವನ್ (ಸಿ), ಶಾರುಖ್ ಖಾನ್, ಜಾನಿ ಬೇರ್‌ಸ್ಟೋ, ಪ್ರಭಾಸಿಮ್ರಾನ್ ಸಿಂಗ್, ಭಾನುಕಾ ರಾಜಪಕ್ಸ, ಜಿತೇಶ್ ಶರ್ಮಾ, ರಾಜ್ ಬಾವಾ, ರಿಷಿ ಧವನ್, ಲಿಯಾಮ್ ಲಿವಿಂಗ್‌ಸ್ಟನ್‌, ಅಥರ್ವ ಟೈಡೆ, ಅರ್ಶ್‌ದೀಪ್ ಸಿಂಗ್, ಬಲ್ತೇಜ್ ಸಿಂಗ್, ನೇಥನ್ ಎಲ್ಲಿಸ್, ಕಗಿಸೊ ರಬಾಡ, ರಾಹುಲ್ ಚಾಹರ್ , ಹರ್ಪ್ರೀತ್ ಬ್ರಾರ್.

ಬಿಡುಗಡೆಗೊಂಡ ಆಟಗಾರರು: ಮಯಾಂಕ್ ಅಗರ್ವಾಲ್, ಓಡೆನ್‌ ಸ್ಮಿತ್, ವೈಭವ್ ಅರೋರಾ, ಬೆನ್ನಿ ಹೋವೆಲ್, ಇಶಾನ್ ಪೊರೆಲ್, ಅನ್ಷ್‌ ಪಟೇಲ್, ಪ್ರೇರಕ್ ಮಂಕಡ್, ಸಂದೀಪ್ ಶರ್ಮಾ, ರಿತ್ತಿಕ್‌ ಚಟರ್ಜಿ.
ಉಳಿಕೆ ಮೊತ್ತ: 32.2 ಕೋಟಿ ರೂಪಾಯಿ
ಉಳಿಕೆ ವಿದೇಶಿ ಆಟಗಾರರ ಖೋಟಾ : ಮೂರು
ಟ್ರೇಡಿಂಗ್‌ ಮೂಲಕ ಪಡೆದುಕೊಂಡ ಆಟಗಾರರು: ಇಲ್ಲ

ಲಕ್ನೊ ಸೂಪರ್ ಜೈಂಟ್ಸ್
ಉಳಿಸಿಕೊಂಡಿರುವ ಆಟಗಾರರು: ಕೆಎಲ್ ರಾಹುಲ್ (ನಾಯಕ), ಆಯುಷ್ ಬದೋನಿ, ಕರಣ್ ಶರ್ಮಾ, ಮನನ್ ವೋಹ್ರಾ, ಕ್ವಿಂಟನ್ ಡಿ ಕಾಕ್, ಮಾರ್ಕಸ್ ಸ್ಟೊಯ್ನಿಸ್‌, ಕೃಷ್ಣಪ್ಪ ಗೌತಮ್, ದೀಪಕ್ ಹೂಡಾ, ಕೈಲ್ ಮೇಯರ್ಸ್, ಕೃನಾಲ್ ಪಾಂಡ್ಯ, ಅವೇಶ್ ಖಾನ್, ಮೊಹ್ಸಿನ್ ಖಾನ್, ಮಾರ್ಕ್ ವುಡ್, ಮಯಾಂಕ್ ಯಾದವ್, ರವಿ ಬಿಷ್ಣೋಯಿ. ಬಿಡುಗಡೆಗೊಂಡ ಆಟಗಾರರು: ಆಂಡ್ರ್ಯೂ ಟೈ, ಅಂಕಿತ್ ರಜಪೂತ್, ದುಷ್ಮಂತ ಚಾಮಿರಾ, ಎವಿನ್ ಲೂಯಿಸ್, ಜೇಸನ್ ಹೋಲ್ಡರ್, ಮನೀಶ್ ಪಾಂಡೆ, ಶಹಬಾಜ್ ನದೀಮ್.
ಉಳಿಕೆ ಮೊತ್ತ: 23.35 ಕೋಟಿ ರೂಪಾಯಿ
ಉಳಿಕೆ ವಿದೇಶಿ ಕೋಟಾ: ನಾಲ್ಕು
ಟ್ರೇಡಿಂಗ್‌ ಮಾಡಲಾದ ಆಟಗಾರರು: ಇಲ್ಲ

ಗುಜರಾತ್ ಟೈಟಾನ್ಸ್

ಉಳಿಸಿಕೊಂಡಿರುವ ಆಟಗಾರರು: ಹಾರ್ದಿಕ್ ಪಾಂಡ್ಯ (ಸಿ), ಶುಬ್ಮನ್‌ ಗಿಲ್, ಡೇವಿಡ್ ಮಿಲ್ಲರ್, ಅಭಿನವ್ ಮನೋಹರ್, ಸಾಯಿ ಸುದರ್ಶನ್, ವೃದ್ಧಿಮಾನ್ ಸಾಹ, ಮ್ಯಾಥ್ಯೂ ವೇಡ್, ರಶೀದ್ ಖಾನ್, ರಾಹುಲ್ ತೆವಾಟಿಯಾ, ವಿಜಯ್ ಶಂಕರ್, ಮೊಹಮ್ಮದ್ ಶಮಿ, ಅಲ್ಜಾರಿ ಜೋಸೆಫ್, ಯಶ್ ದಯಾಳ್, ಪ್ರದೀಪ್ ಸಾಂಗ್ವಾನ್, ದರ್ಶನ್ ನಾಲ್ಕಂಡೆ , ಜಯಂತ್ ಯಾದವ್, ಆರ್ ಸಾಯಿ ಕಿಶೋರ್, ನೂರ್ ಅಹ್ಮದ್.
ಬಿಡುಗಡೆಗೊಂಡ ಆಟಗಾರರು: ರಹಮಾನುಲ್ಲಾ ಗುರ್ಬಜ್, ಲಾಕಿ ಫರ್ಗ್ಯೂಸನ್‌, ಡಾಮಿನಿಕ್ ಡ್ರೇಕ್ಸ್, ಗುರುಕೀರತ್ ಸಿಂಗ್, ಜೇಸನ್ ರಾಯ್, ವರುಣ್‌ ಆರೋನ್‌.
ಉಳಿಕೆ ಮೊತ್ತ: 19.25 ಕೋಟಿ ರೂಪಾಯಿ
ಉಳಿಕೆ ವಿದೇಶಿ ಆಟಗಾರರ ಕೋಟಾ: ಇಲ್ಲ

ಮುಂಬೈ ಇಂಡಿಯನ್ಸ್

ಉಳಿಸಿಕೊಂಡಿರುವ ಆಟಗಾರರು: ರೋಹಿತ್ ಶರ್ಮಾ (ಸಿ), ಟಿಮ್ ಡೇವಿಡ್, ರಮಣದೀಪ್ ಸಿಂಗ್, ತಿಲಕ್ ವರ್ಮಾ, ಸೂರ್ಯಕುಮಾರ್ ಯಾದವ್, ಇಶಾನ್ ಕಿಶನ್, ಟ್ರಿಸ್ಟಾನ್ ಸ್ಟಬ್ಸ್, ಡೀವಾಲ್ಡ್ ಬ್ರೆವಿಸ್, ಜೋಫ್ರಾ ಆರ್ಚರ್, ಜಸ್ಪ್ರೀತ್ ಬುಮ್ರಾ, ಅರ್ಜುನ್ ತೆಂಡೂಲ್ಕರ್, ಅರ್ಷದ್ ಖಾನ್, ಕುಮಾರ್ ಕಾರ್ತಿಕೇಯ, ಹೃತಿಕ್ ಶೋಕಿನ್, ಜೇಸನ್ ಬೆಹ್ರೆನ್‌ಡಾರ್ಫ್ , ಆಕಾಶ್ ಮಧ್ವಲ್.
ಬಿಡುಗಡೆಗೊಂಡ ಆಟಗಾರರು: ಕೀರನ್‌ ಪೊಲಾರ್ಡ್, ಅನ್ಮೋಲ್‌ಪ್ರೀತ್‌ ಸಿಂಗ್‌, ಆರ್ಯನ್ ಜುಯಲ್, ಬಾಸಿಲ್ ಥಂಪಿ, ಡೇನಿಯಲ್ ಸಾಮ್ಸ್, ಫ್ಯಾಬಿಯನ್ ಅಲೆನ್, ಜಯದೇವ್ ಉನಾದ್ಕಟ್, ಮಯಾಂಕ್ ಮಾರ್ಕಾಂಡೆ, ಮುರುಗನ್ ಅಶ್ವಿನ್, ರಾಹುಲ್ ಬುದ್ಧಿ, ರಿಲೀ ಮೆರೆಡಿತ್, ಸಂಜಯ್ ಯಾದವ್, ಟೈಮಲ್ ಮಿಲ್ಸ್.
ಉಳಿಕೆ ಮೊತ್ತ: 20.55 ಕೋಟಿ ರೂಪಾಯಿ
ಉಳಿಕೆ ವಿದೇಶಿ ಆಟಗಾರರ ಕೋಟಾ: ಮೂರು
ಟ್ರೇಡ್‌ ಮಾಡಲಾದ ಆಟಗಾರ: ಜೇಸನ್ ಬೆಹ್ರೆನ್ಡಾರ್ಫ್

ರಾಜಸ್ಥಾನ್ ರಾಯಲ್ಸ್

ಉಳಿಕೆ ಆಟಗಾರರು: ಸಂಜು ಸ್ಯಾಮ್ಸನ್ (ಸಿ), ಯಶಸ್ವಿ ಜೈಸ್ವಾಲ್, ಶಿಮ್ರೋನ್ ಹೆಟ್ಮೆಯರ್, ದೇವದತ್ ಪಡಿಕ್ಕಲ್, ಜೋಸ್ ಬಟ್ಲರ್, ಧ್ರುವ್‌ ಜುರೆಲ್, ರಿಯಾನ್ ಪರಾಗ್, ಪ್ರಸಿದ್ಧ್ ಕೃಷ್ಣ, ಟ್ರೆಂಟ್ ಬೌಲ್ಟ್, ಒಬೆದ್ ಮೆಕಾಯ್, ನವದೀಪ್ ಸೈನಿ, ಕುಲದೀಪ್ ಸೇನ್, ಕುಲದೀಪ್ ಯಾದವ್, ಆರ್ ಅಶ್ವಿನ್, ಯುಜ್ವೇಂದ್ರ ಚಹಲ್‌, ಕೆ ಸಿ ಕಾರಿಯಪ್ಪ. ಬಿಡುಗಡೆಗೊಂಡ ಆಟಗಾರರು: ಅನುನಯ್ ಸಿಂಗ್, ಕಾರ್ಬಿನ್ ಬಾಷ್, ಡ್ಯಾರಿಲ್ ಮಿಚೆಲ್, ಜೇಮ್ಸ್ ನೀಶಾಮ್, ಕರುಣ್ ನಾಯರ್, ನಥಾನ್ ಕಾಲ್ಟರ್-ನೈಲ್, ರಾಸ್ಸಿ ವ್ಯಾನ್ ಡೆರ್ ಡಸ್ಸೆನ್, ಶುಭಂ ಗರ್ವಾಲ್, ತೇಜಸ್ ಬರೋಕಾ. ಉಳಿಕೆ ಮೊತ್ತ: 13.2 ಕೋಟಿ ರೂಪಾಯಿ
ಉಳಿಕೆ ವಿದೇಶಿ ಆಟಗಾರರ ಕೋಟಾ: ನಾಲ್ಕು
ಟ್ರೇಡ್‌ ಮಾಡಲಾದ ಆಟಗಾರರು: ಇಲ್ಲ

ಡೆಲ್ಲಿ ಕ್ಯಾಪಿಟಲ್ಸ್‌

ಉಳಿಸಿಕೊಂಡಿರುವ ಆಟಗಾರರು: ರಿಷಭ್ ಪಂತ್ (ಸಿ), ಡೇವಿಡ್ ವಾರ್ನರ್, ಪೃಥ್ವಿ ಶಾ, ರಾಯ್‌ಪಾಲ್ ಪಟೇಲ್, ರೋವ್ಮನ್‌ ಪೊವೆಲ್, ಸರ್ಫರಾಜ್ ಖಾನ್, ಯಶ್ ಧುಲ್, ಮಿಚೆಲ್ ಮಾರ್ಷ್, ಲಲಿತ್ ಯಾದವ್, ಅಕ್ಷರ್ ಪಟೇಲ್, ಅನ್ರಿಚ್ ನೋರ್ಜೆ, ಚೇತನ್ ಸಕರಿಯಾ, ಕಮಲೇಶ್ ನಾಗರಕೋಟಿ, ಖಲೀಲ್ ಅಹ್ಮದ್, ಲುಂಗಿ ಎನ್‌ಗಿಡಿ , ಮುಸ್ತಾಫಿಜುರ್ ರೆಹಮಾನ್, ಕುಲದೀಪ್ ಯಾದವ್, ಪ್ರವೀಣ್ ದುಬೆ, ವಿಕ್ಕಿ ಓಸ್ತ್ವಾಲ್,
ಬಿಡುಗಡೆಗೊಂಡ ಆಟಗಾರರು: ಶಾರ್ದೂಲ್ ಠಾಕೂರ್, ಟಿಮ್ ಸೀಫರ್ಟ್, ಅಶ್ವಿನ್ ಹೆಬ್ಬಾರ್, ಶ್ರೀಕರ್ ಭರತ್, ಮನದೀಪ್ ಸಿಂಗ್.
ಉಳಿಕೆ ಮೊತ್ತ: 19.45 ಕೋಟಿ ರೂಪಾಯಿ.
ಉಳಿಕೆ ವಿದೇಶಿ ಆಟಗಾರರ ಕೋಟಾ: ಎರಡು
ಟ್ರೇಡ್‌ಮಾಡಿಕೊಂಡ ಆಟಗಾರ: ಅಮನ್ ಖಾನ್

ಸನ್ ರೈಸರ್ಸ್ ಹೈದರಾಬಾದ್

ಉಳಿಸಿಕೊಂಡಿರುವ ಆಟಗಾರರು: ಅಬ್ದುಲ್ ಸಮದ್, ಏಡೆನ್ ಮಾರ್ಕ್ರಮ್‌, ರಾಹುಲ್ ತ್ರಿಪಾಠಿ, ಗ್ಲೆನ್ ಫಿಲಿಪ್ಸ್, ಅಭಿಷೇಕ್ ಶರ್ಮಾ, ಮಾರ್ಕೊ ಜಾನ್ಸೆನ್, ವಾಷಿಂಗ್ಟನ್ ಸುಂದರ್, ಫಜಲ್ಹಕ್ ಫಾರೂಕಿ, ಕಾರ್ತಿಕ್ ತ್ಯಾಗಿ, ಭುವನೇಶ್ವರ್ ಕುಮಾರ್, ಟಿ ನಟರಾಜನ್, ಉಮ್ರಾನ್ ಮಲಿಕ್.
ಬಿಡುಗಡೆಗೊಂಡ: ಕೇನ್ ವಿಲಿಯಮ್ಸನ್, ನಿಕೋಲಸ್ ಪೂರನ್, ಜಗದೀಶ ಸುಚಿತ್, ಪ್ರಿಯಂ ಗರ್ಗ್, ರವಿಕುಮಾರ್ ಸಮರ್ಥ್, ರೊಮಾರಿಯೋ ಶೆಫರ್ಡ್, ಸೌರಭ್ ದುಬೆ, ಸೀನ್ ಅಬಾಟ್, ಶಶಾಂಕ್ ಸಿಂಗ್, ಶ್ರೇಯಸ್ ಗೋಪಾಲ್, ಸುಶಾಂತ್ ಮಿಶ್ರಾ, ವಿಷ್ಣು ವಿನೋದ್
ಉಳಿಕೆ ಮೊತ್ತ: 42.25 ಕೋಟಿ ರೂಪಾಯಿ
ವಿದೇಶಿ ಆಟಗಾರರ ಕೋಟಾ: ನಾಲ್ಕು
ಟ್ರೇಡ್‌ ಮಾಡಲಾದ ಆಟಗಾರ: ಇಲ್ಲ

ಇದನ್ನೂ ಓದಿ | IPL 2023 | ಆರ್‌ಸಿಬಿ ಬಿಟ್ಟು ಮುಂಬಯಿ ತೆಕ್ಕೆಗೆ ಸೇರಿದ ವೇಗದ ಬೌಲರ್‌ ಜೇಸನ್‌ ಬೆಹ್ರೆನ್‌ಡಾರ್ಫ್‌

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

RCB vs RR: ಆರ್​ಸಿಬಿ-ರಾಜಸ್ಥಾನ್ ತಂಡಗಳ​ ಐಪಿಎಲ್​ ​ಪ್ಲೇ ಆಫ್/ನಾಕೌಟ್ ದಾಖಲೆ ಹೇಗಿದೆ?

RCB vs RR: ಆರ್​ಸಿಬಿ ಮತ್ತು ರಾಜಸ್ಥಾನ್​ ತಂಡಗಳು ಇದುವರೆಗಿನ ಐಪಿಎಲ್​ ಆವೃತ್ತಿಯಲ್ಲಿ ಒಟ್ಟು 31 ಬಾರಿ(RR vs RCB Head To Head Record) ಮುಖಾಮುಖಿಯಾಗಿವೆ. ಈ ಪೈಕಿ ಆರ್​ಸಿಬಿ 15, ರಾಜಸ್ಥಾನ್​ 13 ಗೆಲುವು ಸಾಧಿಸಿದೆ. 3 ಪಂದ್ಯಗಳು ಫಲಿತಾಂಶ ಕಂಡಿಲ್ಲ.

VISTARANEWS.COM


on

RCB vs RR
Koo

ಅಹಮದಾಬಾದ್​: ಐಪಿಎಲ್​ ಆವೃತ್ತಿಯ ಚೊಚ್ಚಲ ಚಾಂಪಿಯನ್​ ರಾಜಸ್ಥಾನ್​ ರಾಯಲ್ಸ್​(RCB vs RR) ಮತ್ತು ಮೂರು ಬಾರಿ ಫೈನಲ್​ ಪ್ರವೇಶಿಸಿದರೂ ಕಪ್​ ಗೆಲ್ಲದ ರಾಯಲ್​ ಚಾಲೆಂಜರ್ಸ್​ ಬೆಂಗಳೂರು(Royal Challengers Bengaluru) ತಂಡಗಳು ನಾಳೆ(ಬುಧವಾರ) ನಡೆಯುವ ಎಲಿಮಿನೇಟರ್​ ಪಂದ್ಯದಲ್ಲಿ ಕಣಕ್ಕಿಳಿಯಲಿದೆ. ಇತ್ತಂಡಗಳ ಇದುವರೆಗಿನ ಐಪಿಎಲ್​ನ ಸಾಧನೆಗಳ ಹಿನ್ನೋಟ ಇಂತಿದೆ.

ಸೇಡು ತೀರಿಸಿಕೊಂಡೀತೇ ಆರ್​ಸಿಬಿ?


ರಾಜಸ್ಥಾನ್​ ರಾಯಲ್ಸ್​ ಮತ್ತು ರಾಯಲ್​ ಚಾಲೆಂಜರ್ಸ್​ ಬೆಂಗಳೂರು ತಂಡ 2022ರಲ್ಲಿ ನಡೆದಿದ್ದ ಐಪಿಎಲ್​ ಟೂರ್ನಿಯ ಕ್ವಾಲಿಫೈಯರ್​-2 ಪಂದ್ಯದಲ್ಲಿ ಮುಖಾಮುಖಿಯಾಗಿತ್ತು. ಈ ಪಂದ್ಯ ನರೇಂದ್ರ ಮೋದಿ ಕ್ರಿಕೆಟ್​ ಸ್ಟೇಡಿಯಂನಲ್ಲಿ ನಡೆದಿತ್ತು. ಪಂದ್ಯದಲ್ಲಿ ರಾಜಸ್ಥಾನ್​ 7 ವಿಕೆಟ್​ ಅಂತರದ ಭರ್ಜರಿ ಗೆಲುವು ಸಾಧಿಸಿ ಫೈನಲ್​ ಪ್ರವೇಶಿಸಿತ್ತು. ಇದೀಗ ಅಂದಿನ ಈ ಸೋಲಿಗೆ ಆರ್​ಸಿಬಿ ಈ ಬಾರಿಯ ಎಲಿಮಿನೇಟರ್​ ಪಂದ್ಯದಲ್ಲಿ ಸೇಡು ತೀರಿಸಿಕೊಂಡೀತೇ? ಎಂದು ಕಾದು ನೋಡಬೇಕಿದೆ.

ಆರ್​ಸಿಬಿ ನಾಕೌಟ್​/ ಪ್ಲೇ ಆಫ್​ ಸಾಧನೆ


2009ರಲ್ಲಿ ಲೀಗ್​ನಲ್ಲಿ ಮೊದಲ ಸ್ಥಾನ. ಫೈನಲ್​ನಲ್ಲಿ ಸೋಲು (ರನ್ನರ್​ ಅಪ್​)

201ರಲ್ಲಿ ಲೀಗ್​ನಲ್ಲಿ ಮೂರನೇ ಸ್ಥಾನ. ಪ್ಲೇ ಆಫ್​ನಲ್ಲಿ ಸೋಲು

2011ರಲ್ಲಿ ಲೀಗ್​ನಲ್ಲಿ ಮೊದಲ ಸ್ಥಾನ. ಫೈನಲ್​ನಲ್ಲಿ ಸೋಲು (ರನ್ನರ್​ ಅಪ್​)

2015ರಲ್ಲಿ ಲೀಗ್​ನಲ್ಲಿ ಮೂರನೇ ಸ್ಥಾನ. ಪ್ಲೇ ಆಫ್​ನಲ್ಲಿ ಸೋಲು

2016ರಲ್ಲಿ ಲೀಗ್​ನಲ್ಲಿ ಮೊದಲ ಸ್ಥಾನ. ಫೈನಲ್​ನಲ್ಲಿ ಸೋಲು (ರನ್ನರ್​ ಅಪ್​)

2020ರಲ್ಲಿ ಲೀಗ್​ನಲ್ಲಿ 4ನೇ ಸ್ಥಾನ. ಪ್ಲೇ ಆಫ್​ನಲ್ಲಿ ಸೋಲು

2021ರಲ್ಲಿ ಲೀಗ್​ನಲ್ಲಿ 3ನೇ ಸ್ಥಾನ. ಪ್ಲೇ ಆಫ್​ನಲ್ಲಿ ಸೋಲು

2022ರಲ್ಲಿ ಲೀಗ್​ನಲ್ಲಿ 4ನೇ ಸ್ಥಾನ. ಪ್ಲೇ ಆಫ್​ನಲ್ಲಿ ಸೋಲು

ರಾಜಸ್ಥಾನ್​ ನಾಕೌಟ್​/ ಪ್ಲೇ ಆಫ್​ ಸಾಧನೆ


2008ರಲ್ಲಿ ಲೀಗ್​ನಲ್ಲಿ ಮೊದಲ ಸ್ಥಾನ. ಚಾಂಪಿಯನ್​

2013ರಲ್ಲಿ ಲೀಗ್​ನಲ್ಲಿ ಮೂರನೇ ಸ್ಥಾನ. ಪ್ಲೇ ಆಫ್​ನಲ್ಲಿ ಸೋಲು

2015ರಲ್ಲಿ ಲೀಗ್​ನಲ್ಲಿ 4ನೇ ಸ್ಥಾನ. ಪ್ಲೇ ಆಫ್​ನಲ್ಲಿ ಸೋಲು

2018ರಲ್ಲಿ ಲೀಗ್​ನಲ್ಲಿ 4ನೇ ಸ್ಥಾನ. ಪ್ಲೇ ಆಫ್​ನಲ್ಲಿ ಸೋಲು

2022ರಲ್ಲಿ ಲೀಗ್​ನಲ್ಲಿ 2ನೇ ಸ್ಥಾನ. ಫೈನಲ್​ನಲ್ಲಿ ಸೋಲು (ರನ್ನರ್​ ಅಪ್​)

ಇದನ್ನೂ ಓದಿ RCB IPL Records: ಕಳೆದ 16 ಆವೃತ್ತಿಯ ಐಪಿಎಲ್​ನಲ್ಲಿ ಆರ್​ಸಿಬಿ ಎಷ್ಟು ಬಾರಿ ಪ್ಲೇ ಆಫ್​ಪ್ರವೇಶಿಸಿದೆ?: ತಂಡದ ದಾಖಲೆ ಹೇಗಿದೆ?

ಮುಖಾಮುಖಿ


ಆರ್​ಸಿಬಿ ಮತ್ತು ರಾಜಸ್ಥಾನ್​ ತಂಡಗಳು ಇದುವರೆಗಿನ ಐಪಿಎಲ್​ ಆವೃತ್ತಿಯಲ್ಲಿ ಒಟ್ಟು 31 ಬಾರಿ(RR vs RCB Head To Head Record) ಮುಖಾಮುಖಿಯಾಗಿವೆ. ಈ ಪೈಕಿ ಆರ್​ಸಿಬಿ 15, ರಾಜಸ್ಥಾನ್​ 13 ಗೆಲುವು ಸಾಧಿಸಿದೆ. 3 ಪಂದ್ಯಗಳು ಫಲಿತಾಂಶ ಇಲ್ಲದೆ ಕೊನೆಗೊಂಡಿದೆ. ಈ ಲೆಕ್ಕಾಚಾರದಲ್ಲಿ ಆರ್​ಸಿಬಿ ಬಲಿಷ್ಠ ಎನ್ನಲಡ್ಡಿಯಿಲ್ಲ. ಈ ಬಾರಿಯ ಮುಖಾಮುಖಿಯಲ್ಲಿ ರಾಜಸ್ಥಾನ್​ ಗೆಲುವು ಸಾಧಿಸಿತ್ತು.

ಸಂಭಾವ್ಯ ತಂಡಗಳು


ಆರ್​ಸಿಬಿ:
ಫಾಫ್ ಡು ಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ, ಗ್ಲೆನ್ ಮ್ಯಾಕ್ಸ್‌ವೆಲ್, ರಜತ್ ಪಾಟಿದಾರ್, ಕ್ಯಾಮರೂನ್​ ಗ್ರೀನ್, ಮಹಿಪಾಲ್ ಲೊಮ್ರೋರ್, ದಿನೇಶ್ ಕಾರ್ತಿಕ್ (ವಿಕೆ), ಕರ್ಣ್ ಶರ್ಮಾ, ಯಶ್ ದಯಾಳ್, ಲಾಕಿ ಫರ್ಗುಸನ್, ಮೊಹಮ್ಮದ್ ಸಿರಾಜ್.

ರಾಜಸ್ಥಾನ್​ ರಾಯಲ್ಸ್​: ಯಶಸ್ವಿ ಜೈಸ್ವಾಲ್, ಟಾಮ್ ಕೊಹ್ಲರ್-ಕಾಡ್ಮೋರ್, ಸಂಜು ಸ್ಯಾಮ್ಸನ್ (ನಾಯಕ), ರಿಯಾನ್ ಪರಾಗ್, ಧ್ರುವ್ ಜುರೆಲ್, ರೋವ್ಮನ್ ಪೊವೆಲ್, ರವಿಚಂದ್ರನ್ ಅಶ್ವಿನ್, ಟ್ರೆಂಟ್ ಬೌಲ್ಟ್, ಸಂದೀಪ್ ಶರ್ಮಾ, ಅವೇಶ್ ಖಾನ್, ನಾಂದ್ರೆ ಬರ್ಗರ್.

Continue Reading

ಕ್ರೀಡೆ

IPL 2024: ಪ್ಲೇ ಆಫ್ ಪಂದ್ಯಗಳಿಗೆ ಮೀಸಲು ದಿನ ಇದೆಯೇ? ಮಳೆ ಬಂದರೆ ಫಲಿತಾಂಶ ನಿರ್ಧಾರ ಹೇಗೆ?

IPL 2024: ಒಂದು ವೇಳೆ ಮೀಸಲು ದಿನದಂದೂ ಕೂಡ ಮಳೆ ಅಡ್ಡಿ ಪಡಿಸಿದರೆ ಸೂಪರ್ ಓವರ್​ಗೆ ಅವಕಾಶವಿದೆ. ಇದಕ್ಕೂ ಕೂಡ ಮಳೆ ಅನುವು ಮಾಡಿಕೊಡದೇ ಇದ್ದಾಗ ಅಂತಿಮವಾಗಿ ಲೀಗ್​ ಹಂತದ ಅಂಕಪಟ್ಟಿಯಲ್ಲಿ ಯಾರು ಮುಂದಿರುತ್ತಾರೋ ಆ ತಂಡವನ್ನು ವಿಜಯೀ ಎಂದು ಘೋಷಿಸಲಾಗುತ್ತದೆ.

VISTARANEWS.COM


on

IPL 2024
Koo

ಬೆಂಗಳೂರು: 17ನೇ ಆವೃತ್ತಿಯ ಐಪಿಎಲ್​(IPL 2024) ಟೂರ್ನಿ ಕೊನೆಯ ಹಂತಕ್ಕೆ ಬಂದು ನಿಂತಿದೆ. ಈಗಾಗಲೇ ಲೀಗ್​ ಹಂತದ ಪಂದ್ಯಗಳು ಮುಕ್ತಾಯಕಂಡಿದ್ದು ಇನ್ನು ಕ್ವಾಲಿಫೈಯರ್​ ಮತ್ತು ಎಲಿಮಿನೇಟರ್​ ಪಂದ್ಯಗಳು ಮಾತ್ರ ಬಾಕಿ ಉಳಿದಿವೆ. ಮೊದಲ ಕ್ವಾಲಿಫೈಯರ್​ ಪಂದ್ಯ ನಾಳೆ(ಮಂಗಳವಾರ) ಅಹಮದಾಬಾದ್​ನಲ್ಲಿ ನಡೆಯಲಿದೆ. ಈ ಪಂದ್ಯದಲ್ಲಿ ಕೆಕೆಆರ್​ ಮತ್ತು ಸನ್​ರೈಸರ್ಸ್​ ಹೈದರಾಬಾದ್​ ಮುಖಾಮುಖಿಯಾಗಲಿವೆ. ಆದರೆ, ಪ್ಲೇ ಆಫ್​ ಪಂದ್ಯಗಳಿಗೂ ಹವಾಮಾನ ಇಲಾಖೆ ಭಾರೀ ಮಳೆಯ ಮುನ್ಸೂಚನೆ ನೀಡಿದೆ. ಈಗಾಗಲೇ ಲೀಗ್​ ಅಹಮದಾಬಾದ್​ ಸೇರಿ ಕೆಲವು ಕಡೆ ನಿಗದಿಯಾಗಿದ್ದ ಲೀಗ್​ ಪಂದ್ಯಗಳು ಮಳೆಯಿಂದ ರದ್ದಾದ ನಿದರ್ಶನವೂ ನಮ್ಮ ಕಣ್ಣ ಮುಂದಿದೆ. ಇದೀಗ ಪ್ಲೇ ಆಫ್​ ಪಂದ್ಯಗಳಿಗೆ(ipl playoffs rain rules) ಮಳೆ ನಿಯಮ ಹೇಗಿದೆ ಎಂಬ ಮಾಹಿತಿ ಇಂತಿದೆ.

ಮಳೆ ಬಂದರೆ?


ಐಪಿಎಲ್​ ಆಡಳಿತ ಮಂಡಳಿ ಮತ್ತು ಬಿಸಿಸಿಐ ಟೂರ್ನಿ ಆರಂಭಕ್ಕೂ ಮುನ್ನವೇ ಲೀಗ್​ ಪಂದ್ಯಗಳಿಗೆ ಯಾವುದೇ ಮೀಸಲು ದಿನ ಇಲ್ಲ ಎಂದು ಸ್ಪಷ್ಟಪಡಿಸಿತ್ತು. ಅದರಂತೆ ಮಳೆಯಿಂದ ಪಂದ್ಯ ರದ್ದುಗೊಂಡರೆ ಉಭಯ ತಂಡಗಳಿಗೂ ತಲಾ ಒಂದು ಅಂಕ ನಿಗದಿಪಡಿಸಿತ್ತು. ಆದರೆ, ನಾಕೌಟ್ ಹಂತಕ್ಕೆ ಮೀಸಲು ದಿನವನ್ನು (Reserve day) ಇರಿಸಿದೆ. ಪೂರ್ಣ ಪಂದ್ಯ ನಡೆಸಲು ಹೆಚ್ಚುವರಿ 120 ನಿಮಿಷಗಳನ್ನು ನೀಡಲಾಗಿದೆ. ಈ ಸಮಯದಲ್ಲಿಯೂ ಪಂದ್ಯ ನಡೆಯದೇ ಹೋದರೆ ಆಗ ಡಕ್​ವರ್ತ್​ ನಿಯದ ಅನುಸಾರ ಓವರ್​ ಕಡಿತಗೊಳಿಸಿ ಪಂದ್ಯ ನಡೆಸುವ ನಿರ್ಣಾಯಕ್ಕೆ ಬರಲಾಗುತ್ತದೆ. ಈ ವೇಳೆಯೂ ಪಂದ್ಯ ನಡೆಯದೇ ಇದ್ದರೆ ಪಂದ್ಯವನ್ನು ಮೀಸಲ ದಿನಕ್ಕೆ ಮುಂದೂಡಲಾಗುತ್ತದೆ. ಒಂದೊಮ್ಮೆ ಮೀಸಲು ದಿನದ ಮೊದಲಿನ ದಿನ ಪಂದ್ಯ ಅರ್ಧಕ್ಕೆ ನಿಂತಿದ್ದರೆ, ಅಲ್ಲಿಂದಲೇ ಮರುದಿನ ಪಂದ್ಯ ಆರಂಭಿಸಲಾಗುತ್ತದೆ.

ಇದನ್ನೂ ಓದಿ IPL 2024 Eliminator: ಎಲಿಮಿನೇಟರ್​ ಪಂದ್ಯಕ್ಕೂ ಮುನ್ನ ಆರ್​ಸಿಬಿಗೆ ಆಘಾತ; ಇಬ್ಬರು ಸ್ಟಾರ್​ ಆಟಗಾರರು ಅಲಭ್ಯ!

ಮೀಸಲು ದಿನಕ್ಕೂ ಮಳೆ ಬಂದರೆ?

ಮೀಸಲು ದಿನವೂ ಮಳೆ ಬಂದರೆ ಫಲಿತಾಂಶ ಹೇಗೆ ನಿರ್ಧರಿಸಲಾಗುತ್ತದೆ ಎನ್ನುವ ಪ್ರಶ್ನೆ ಕ್ರಿಕೆಟ್​ ಅಭಿಮಾನಿಗಳಿಗೆ ಕಾಡುವುದು ಸಹಜ. ಇದಕ್ಕೂ ಬಿಸಿಸಿಐ ಉತ್ತರ ನೀಡಿದೆ. ಒಂದು ವೇಳೆ ಮೀಸಲು ದಿನದಂದೂ ಕೂಡ ಮಳೆ ಅಡ್ಡಿ ಪಡಿಸಿದರೆ ಸೂಪರ್ ಓವರ್​ಗೆ ಅವಕಾಶವಿದೆ. ಇದಕ್ಕೂ ಕೂಡ ಮಳೆ ಅನುವು ಮಾಡಿಕೊಡದೇ ಇದ್ದಾಗ ಅಂತಿಮವಾಗಿ ಲೀಗ್​ ಹಂತದ ಅಂಕಪಟ್ಟಿಯಲ್ಲಿ ಯಾರು ಮುಂದಿರುತ್ತಾರೋ ಆ ತಂಡವನ್ನು ವಿಜಯೀ ಎಂದು ಘೋಷಿಸಲಾಗುತ್ತದೆ. ಈ ನಿಯಮ ಫೈನಲ್​ ಪಂದ್ಯಕ್ಕೂ ಅನ್ವಯವಾಗುತ್ತದೆ. ಒಂದೊಮ್ಮೆ ಮಳೆಯಿಂದ ಎಲ್ಲ ಪಂದ್ಯಗಳು ರದ್ದಾದದರೆ ಆಗ ಅಗ್ರಸ್ಥಾನಿ ಕೆಕೆಆರ್​ ಈ ಬಾರಿಯ ಚಾಂಪಿಯನ್​ ಪಟ್ಟ ಅಲಂಕರಿಸಲಿದೆ. ಏಕೆಂದರೆ ಕೆಕೆಆರ್ ಅಂಕಪಟ್ಟಿಯಲ್ಲಿ ಅಗ್ರಸ್ಥಾನಿಯಾಗಿದೆ.​

Continue Reading

ರಾಯಚೂರು

IPL 2024 : ಐಪಿಎಲ್‌ ಬೆಟ್ಟಿಂಗ್‌ಗಾಗಿ ಮೈ ತುಂಬಾ ಸಾಲ; ನೇಣಿಗೆ ಶರಣಾದ ಯುವಕ

IPL 2024 : ಐಪಿಎಲ್ ಬೆಟ್ಟಿಂಗ್ (IPL Betting) ದಂಧೆಗೆ ಯುವಕನೊಬ್ಬ ಬಲಿಯಾಗಿದ್ದಾನೆ. ಐಪಿಎಲ್‌ ಮ್ಯಾಚ್‌ಗೆ ಬೆಟ್ಟಿಂಗ್‌ ಕಟ್ಟಲು ವಿಪರೀತ ಸಾಲ ಮಾಡಿಕೊಂಡಿದ್ದ. ಆದರೆ ಮಾಡಿಕೊಂಡ ಸಾಲವನ್ನು ತೀರಿಸಲು ಆಗದೆ ನೇಣು ಬಿಗಿದುಕೊಂಡು (Self Harming) ಮೃತಪಟ್ಟಿದ್ದಾನೆ.

VISTARANEWS.COM


on

By

IPL 2024 Man commits suicide after taking loan for IPL betting
Koo

ರಾಯಚೂರು: ಐಪಿಎಲ್‌ (IPL 2024) ಬೆಟ್ಟಿಂಗ್‌ನಲ್ಲಿ (IPL Betting) ಲಕ್ಷ ಲಕ್ಷ ಕಳೆದುಕೊಂಡ ಯುವಕನೊಬ್ಬ ಲಾಡ್ಜ್‌ನಲ್ಲಿ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ (Self Harming) ಮಾಡಿಕೊಂಡಿದ್ದಾನೆ. ರಾಯಚೂರಿನ ಸಿಂಧನೂರು ನಗರದಲ್ಲಿ ಘಟನೆ ನಡೆದಿದೆ.

ಮಸ್ಕಿ ತಾಲೂಕಿನ ಉದ್ಬಾಳ ಗ್ರಾಮದ ಮುದಿಬಸವ (29) ಎಂಬಾತ ಆತ್ಮಹತ್ಯೆ ಮಾಡಿಕೊಂಡವರು. ಮುದಿಬಸವ ಐಪಿಎಲ್ ಬೆಟ್ಟಿಂಗ್‌ಗಾಗಿ ಸಾಕಷ್ಟು ಸಾಲವನ್ನು ಮಾಡಿಕೊಂಡಿದ್ದ. ಆದರೆ ಬೆಟ್ಟಿಂಗ್‌ ಕಟ್ಟಿದ ಎಲ್ಲ ಮ್ಯಾಚ್‌ಗಳು ಸೋತಿದ್ದವು. ಸಾಲದಿಂದ ಮಾನಸಿಕ ಒತ್ತಡಕ್ಕೆ ಒಳಗಾಗಿದ್ದ. ಸಾಲಗಾರರ ಕಾಟಕ್ಕೆ ಬೇಸತ್ತ ಮುದಿಬಸವ ಲಾಡ್ಜ್‌ವೊಂದರ ರೂಮಿನಲ್ಲಿ ಫ್ಯಾನ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ರೂಮಿನ ಬಾಗಿಲು ತೆರೆಯದೆ ಇದ್ದಾಗ ಅನುಮಾನಗೊಂಡು ಲಾಡ್ಜ್‌ ಸಿಬ್ಬಂದಿ ಒಳಹೊಕ್ಕಿ ನೋಡಿದಾಗ ಘಟನೆ ಬೆಳಕಿಗೆ ಬಂದಿದೆ. ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕಾಗಮಿಸಿದ ಸಿಂಧನೂರು ನಗರ ಪೊಲೀಸರು ಪರಿಶೀಲನೆ ನಡೆಸಿ, ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ರವಾನಿಸಿದ್ದಾರೆ. ಈ ಸಂಬಂಧ ಸಿಂಧನೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆಯನ್ನು ಮುಂದುವರಿಸಿದ್ದಾರೆ.

ಇದನ್ನೂ ಓದಿ: IPL 2024: ರಾಯಲ್‌ ಆಗಿ ಪ್ಲೇ ಆಫ್‌ ಪ್ರವೇಶಿಸಿದ ಬೆಂಗಳೂರು; ಮುಗಿಲು ಮುಟ್ಟಿದ ಸಂಭ್ರಮ

IPL 2024 : ಕ್ಯಾಚ್​ ಆಫ್​​ ದಿ ಸೀಸನ್​, ಫಾಫ್​ ಡು ಪ್ಲೆಸಿಸ್​ ಹಿಡಿದ ಅದ್ಭುತ್​ ಕ್ಯಾಚ್​​ನ ವಿಡಿಯೊ ಇಲ್ಲಿದೆ

ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧ ನಡೆದ ಮಾಡು ಇಲ್ಲವೇ ಮಡಿ ಐಪಿಎಲ್​ (IPL 2024) ಪಂದ್ಯದಲ್ಲಿ ಆರ್​ಸಿಬಿ ನಾಯಕ ಫಾಫ್ ಡು ಪ್ಲೆಸಿಸ್ (Faf du pelssis) ಹಿಡಿದ ಕ್ಯಾಚ್​ ಈ ಋತುವಿನ ಅದ್ಭುತ ಕ್ಯಾಚ್​ ಎನಿಸಿಕೊಂಡಿದೆ. ಪಂದ್ಯದ ಆರಂಭದಲ್ಲಿ ಅದ್ಭುತ ಅರ್ಧಶತಕ ಗಳಿಸಿದ ನಂತರ, ದಕ್ಷಿಣ ಆಫ್ರಿಕಾದ ಮಾಜಿ ನಾಯಕ ಮಿಚೆಲ್ ಸ್ಯಾಂಟ್ನರ್ ಅವರನ್ನು ಪೆವಿಲಿಯನ್​ಗೆ ಕಳುಹಿಸಲು ಅದ್ಭುತ ಕ್ಯಾಚ್​ ಹಿಡಿದರು. 15ನೇ ಓವರ್​ನ ಕೊನೆಯ ಎಸೆತದಲ್ಲಿ ಮೊಹಮ್ಮದ್ ಸಿರಾಜ್ ಆಫ್ ಸ್ಟಂಪ್ನಲ್ಲಿ ಲೊ ಫುಲ್ ಟಾಸ್ ಎಸೆದರು. ಚೆಂಡು ಫಾಫ್ ಡು ಪ್ಲೆಸಿಸ್ ಅವರ ತಲೆಯ ಮೇಲಿಂದ ಹಾರಿ ಹೋಗುತ್ತಿತ್ತು. ಆದಾಗ್ಯೂ, ಆರ್​ಸಿಬಿ ನಾಯಕನಿಗೆ ಬೇರೆ ಆಲೋಚನೆಗಳು ಇರಲಿಲ್ಲ. ವಿಶ್ವದ ಅತ್ಯುತ್ತಮ ಫೀಲ್ಡರ್​ಗಳಲ್ಲಿ ಒಬ್ಬರಾದ ಅವರು ಸಮಯೋಚಿತವಾಗಿ ಜಿಗಿದು ಒಂದು ಕೈಯಿಂದ ಚೆಂಡನ್ನು ಹಿಡಿದರು.

ಈ ಪಂದ್ಯದ ಆರಂಭದಲ್ಲಿ, ಫಾಫ್ ಡು ಪ್ಲೆಸಿಸ್ ಆರ್​ಸಿಬಿಯನ್ನು ಮುನ್ನಡೆಸಿದರು. ಅವರ ತಂಡದ ಪರ ಗರಿಷ್ಠ ಸ್ಕೋರ್ ಗಳಿಸಿದರು. ಅವರು 54 ರನ್ ಗಳಿಸಿ ಆರ್​ಸಿಬಿಗೆ ಮಾಡು ಇಲ್ಲವೇ ಮಡಿ ಹೋರಾಟದಲ್ಲಿ ಉತ್ತಮ ಆರಂಭವನ್ನು ನೀಡಿದರು. ವಿರಾಟ್ ಕೊಹ್ಲಿ (47), ರಜತ್ ಪಾಟಿದಾರ್ (41) ಮತ್ತು ಕ್ಯಾಮರೂನ್ ಗ್ರೀನ್ (38*) ಕೂಡ ನಿರ್ಣಾಯಕ ಶತಕಗಳ ನೆರವಿನಿಂದ ಆರ್ಸಿಬಿ 5 ವಿಕೆಟ್ ನಷ್ಟಕ್ಕೆ 218 ರನ್ ಗಳಿಸಿತು.

ಡ್ಯಾರಿಲ್​ ಮಿಚೆಲ್ ಕ್ಯಾಚ್ ಹಿಡಿದ ಬಳಿಕ ಕೊಹ್ಲಿಯ ಆಕ್ರಮಣಕಾರಿ ಸಂಭ್ರಮ ಹೀಗಿತ್ತು

ಬೆಂಗಳೂರು: ಇಂಡಿಯನ್ ಪ್ರೀಮಿಯರ್ ಲೀಗ್ 2024 ರಲ್ಲಿ (IPL 2024)ಚೆನ್ನೈ ಸೂಪರ್ ಕಿಂಗ್ಸ್ (CSK) ವಿರುದ್ಧ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಬ್ಯಾಟ್ಸ್ಮನ್ ವಿರಾಟ್ ಕೊಹ್ಲಿ ಮೈದಾನದಲ್ಲಿ ತಮ್ಮ ಅತ್ಯುತ್ತಮ ಪ್ರದರ್ಶನ ನೀಡಿದ್ದಾರೆ. ಉಭಯ ತಂಡಗಳ ನಡುವಿನ 69ನೇ ಪಂದ್ಯ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದಿದೆ. ಇಂಡಿಯನ್ ಪ್ರೀಮಿಯರ್ ಲೀಗ್​ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕ ವಿರಾಟ್ ಕೊಹ್ಲಿ (Virat kohli) ತಮ್ಮ ತಂಡದ ಪರವಾಗಿ ಅತ್ಯುತ್ತಮ ಪ್ರದರ್ಶನ ನೀಡಿದ್ದಾರೆ. ಅಂತೆಯೇ ಸಿಎಸ್​ಕೆ ಬ್ಯಾಟರ್​ಗಳು ಔಟಾಗುತ್ತಿದ್ದಂತೆ ಅವರ ಅಬ್ಬರವೂ ಜೋರಾಗಿತ್ತು.

ಡ್ಯಾರಿಲ್ ಮಿಚೆಲ್ ಕ್ಯಾಚ್ ಪಡೆದ ನಂತರ ವಿರಾಟ್ ಕೊಹ್ಲಿ ಆಕ್ರಮಣಕಾರಿ ಸಂಭ್ರಮವನ್ನು ಆಚರಿಸಿದರು. ಮೂರನೇ ಯಶ್ ದಯಾಳ್ ಎಸೆತದ ತಮ್ಮ ಓವರ್​ನ ಎರಡನೇ ಎಸೆತದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಬ್ಯಾಟ್ಸ್ಮನ್ ದೊಡ್ಡ ಹೊಡೆತ ಹೊಡೆದರು. ಚೆಂಡು ಗಾಳಿಯಲ್ಲಿ ಹಾರಿತು. ಅಲ್ಲಿ ನಿಂತಿದ್ದ ವಿರಾಟ್ ಕೊಹ್ಲಿ ವೇಗವಾಗಿ ಓಡಿ ಸುರಕ್ಷಿತ ಕ್ಯಾಚ್ ಪಡೆದರು. ಬಳಿಕ ಜೋರಾಗಿ ಕಿರುಚಿದರು. ಆದರೆ, ಅನೇಕರ ಗಮನ ಸೆಳೆದದ್ದು ಕೊಹ್ಲಿಯ ಸಂಭ್ರಮಾಚರಣೆ. ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಬ್ಯಾಟರ್​ ಆಕ್ರಮಣಕಾರಿಯಾಗಿ ಸಂಭ್ರಮಿಸಿದರು.

ವಿರಾಟ್ ಕೊಹ್ಲಿ ಪತ್ನಿ ಅನುಷ್ಕಾ ಶರ್ಮಾ ಕೂಡ ಸಂಭ್ರಮಾಚರಣೆಯಲ್ಲಿ ತೊಡಗಿದ್ದರು. ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ತನ್ನ ಎರಡನೇ ವಿಕೆಟ್ ಪಡೆದಾಗ ಬಾಲಿವುಡ್ ನಟಿ ತನ್ನ ಸೀಟಿನಲ್ಲಿ ಎದ್ದು ನಿಂತು ಸಂತೋಷ ವ್ಯಕ್ತಪಡಿಸಿದ್ದು ಕೂಡ ಕ್ಯಾಮೆರಾ ಕಣ್ಣಿಗೆ ಬಿತ್ತು. ವಿರಾಟ್ ಕೊಹ್ಲಿ ಪತ್ನಿ ಅನುಷ್ಕಾ ಶರ್ಮಾ ಕೂಡ ಸಂಭ್ರಮಾಚರಣೆಯಲ್ಲಿ ತೊಡಗಿದ್ದರು. ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ತನ್ನ ಎರಡನೇ ವಿಕೆಟ್ ಪಡೆದಾಗ ಬಾಲಿವುಡ್ ನಟಿ ತನ್ನ ಸೀಟಿನಲ್ಲಿ ಎದ್ದು ನಿಂತು ಸಂತೋಷ ವ್ಯಕ್ತಪಡಿಸಿದರು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಐಪಿಎಲ್ 2024

IPL 2024: ಸಿಎಸ್‌ಕೆ ತಂಡವನ್ನು ಸೋಲಿಸಿದ ಆರ್‌ಸಿಬಿ; ಪ್ಲೇ ಆಫ್‌ನಲ್ಲಿ ಯಾರು ಯಾರಿಗೆ ಎದುರಾಳಿ? ಇಲ್ಲಿದೆ ವೇಳಾಪಟ್ಟಿ

IPL 2024: ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಶನಿವಾರ ನಡೆದ ಐಪಿಎಲ್ 2024ರ 68ನೇ ಪಂದ್ಯದಲ್ಲಿ ಚೆನ್ನೈ ಸೂಪರ್​ ಕಿಂಗ್ಸ್ (CSK) ವಿರುದ್ಧ 27 ರನ್‌ಗಳಿಂದ ಜಯಗಳಿಸಿದ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು (RCB) 4ನೇ ತಂಡವಾಗಿ ಪ್ಲೇ ಆಫ್‌ ಪ್ರವೇಶಿಸಿದೆ. ಇದೀಗ ಪ್ಲೇ ಆಫ್‌ ಪಂದ್ಯಗಳ ಲೆಕ್ಕಾಚಾರ ಆರಂಭವಾಗಿದೆ. ಹಾಗಾದರೆ ಯಾರು ಯಾರನ್ನು ಎದುರಿಸುತ್ತಾರೆ? ಪಂದ್ಯ ಯಾವಾಗ? ಮುಂತಾದ ಪ್ರಶ್ನೆಗಳಿಗೆ ಇಲ್ಲಿದೆ ಉತ್ತರ.

VISTARANEWS.COM


on

IPL 2024
Koo

ಬೆಂಗಳೂರು: ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಶನಿವಾರ ನಡೆದ ಐಪಿಎಲ್ 2024ರ 68ನೇ ಪಂದ್ಯದಲ್ಲಿ ಚೆನ್ನೈ ಸೂಪರ್​ ಕಿಂಗ್ಸ್ (CSK) ವಿರುದ್ಧ 27 ರನ್‌ಗಳಿಂದ ಜಯಗಳಿಸಿದ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು (RCB) 4ನೇ ತಂಡವಾಗಿ ಪ್ಲೇ ಆಫ್‌ ಪ್ರವೇಶಿಸಿದೆ. ಈಗಾಗಲೇ ಕೋಲ್ಕತ್ತಾ ನೈಟ್ ರೈಡರ್ಸ್ (KKR), ರಾಜಸ್ಥಾನ್ ರಾಯಲ್ಸ್ (RR) ಮತ್ತು ಸನ್‌ ರೈಸರ್ಸ್‌ ಹೈದರಾಬಾದ್ (SRH) ಪ್ಲೇ ಆಫ್‌ನಲ್ಲಿ ಸ್ಥಾನ ಪಡೆದಿವೆ. ಹಾಗಾದರೆ ಪ್ಲೇ ಆಫ್‌ ಯಾವಾಗ ಎಲ್ಲಿ ನಡೆಯಲಿದೆ ಎನ್ನುವ ಪ್ರಶ್ನೆಗೆ ಇಲ್ಲಿದೆ ಉತ್ತರ.

ಪ್ಲೇ ಆಫ್‌ ವೇಳಾಪಟ್ಟಿ

ದಿನಾಂಕ ಪ್ಲೇ ಆಫ್‌ತಂಡಸಮಯ (ರಾತ್ರಿ)ಸ್ಥಳ
ಮೇ 21ಕ್ವಾಲಿಫೈರ್‌ 1ಕೋಲ್ಕತ್ತಾ ನೈಟ್‌ ರೈಡರ್ಸ್‌ ಮತ್ತು ರಾಜಸ್ಥಾನ್​ ರಾಯಲ್ಸ್​ / ಸನ್​ರೈಸರ್ಸ್​ ಹೈದರಾಬಾದ್​7.30ನರೇಂದ್ರ ಮೋದಿ ಸ್ಟೇಡಿಯಂ, ಅಹಮದಾಬಾದ್​
ಮೇ 22ಎಲಿಮಿನೇಟರ್‌ ರಾಜಸ್ಥಾನ್​ ರಾಯಲ್ಸ್​ / ಸನ್​ರೈಸರ್ಸ್​ ಹೈದರಾಬಾದ್ ಮತ್ತು ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು7.30ನರೇಂದ್ರ ಮೋದಿ ಸ್ಟೇಡಿಯಂ, ಅಹಮದಾಬಾದ್​
ಮೇ 24ಕ್ವಾಲಿಫೈರ್‌ 2ಎಲಿಮಿನೇಟರ್‌ನ ವಿಜೇತರು ಮತ್ತು ಕ್ವಾಲಿಫೈರ್‌ 1ರ ಸೋತ ತಂಡ7.30ಎಂ.ಎ.ಚಿದಂಬರಂ ಸ್ಟೇಡಿಯಂ, ಚೆನ್ನೈ
ಮೇ 26ಫೈನಲ್‌ಕ್ವಾಲಿಫೈರ್‌ 1ರ ವಿಜೇತರು ಮತ್ತು ಕ್ವಾಲಿಫೈರ್‌ 2ರ ವಿಜೇತರು7.30ಎಂ.ಎ.ಚಿದಂಬರಂ ಸ್ಟೇಡಿಯಂ, ಚೆನ್ನೈ

ಕ್ವಾಲಿಫೈರ್‌ ಪಂದ್ಯಗಳು

ಕ್ವಾಲಿಫೈರ್‌ 1ರಲ್ಲಿ ಅಗ್ರ ಎರಡು ತಂಡಗಳ ನಡುವೆ ಅಹಮದಾಬಾದ್ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಮೇ 21ರ ರಾತ್ರಿ 7.30ಕ್ಕೆ ಪಂದ್ಯ ನಡೆಯಲಿದೆ. ಈ ಪಂದ್ಯದಲ್ಲಿ ಗೆದ್ದ ತಂಡ ನೇರವಾಗಿ ಫೈನಲ್ ಪ್ರವೇಶಿಸಲಿದೆ. ಮೇ 22ರ ರಾತ್ರಿ ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆಯುವ ಎಲಿಮಿನೇಟರ್‌ ಪಂದ್ಯದಲ್ಲಿ ಮೂರನೇ ಮತ್ತು ನಾಲ್ಕನೇ ತಂಡದ ನಡುವೆ ಜಿದ್ದಾಜಿದ್ದು ನಡೆಯಲಿದೆ. ಇದರಲ್ಲಿ ಗೆದ್ದವರು ಮೇ 24ರಂದು ಚೆನ್ನೈ ಎಂ.ಎ.ಚಿದಂಬರಂ ಸ್ಟೇಡಿಯಂನಲ್ಲಿ ನಡೆಯಲಿರುವ ಕ್ವಾಲಿಫೈರ್‌ 2ರ ಪಂದ್ಯದಲ್ಲಿ ಕ್ವಾಲಿಫೈರ್‌ 1ರ ಸೋತ ತಂಡದೊಂದಿಗೆ ಸೆಣಸಾಡಲಿದ್ದಾರೆ. ಈ ಪಂದ್ಯ ರಾತ್ರಿ 7.30ಕ್ಕೆ ನಡೆಯಲಿದೆ. ಇದರಲ್ಲಿ ಗೆದ್ದವರು ಫೈನಲ್‌ನಲ್ಲಿ ಕ್ವಾಲಿಫೈರ್‌ 1ರ ವಿಜೇತರೊಂದಿಗೆ ಕಪ್‌ಗಾಗಿ ಹೋರಾಡಲಿದ್ದಾರೆ. ಫೈನಲ್‌ ಪಂದ್ಯ ಚೆನ್ನೈಯ ಎಂ.ಎ.ಚಿದಂಬರಂ ಸ್ಟೇಡಿಯಂನಲ್ಲಿ ಮೇ 26ರ ರಾತ್ರಿ 7.30ಕ್ಕೆ ಆಯೋಜಿಸಲಾಗಿದೆ.

ಲೀಗ್‌ ಹಂತದಲ್ಲಿ ಇನ್ನೂ ಕೆಲವು ಪಂದ್ಯ ಬಾಕಿ ಇರುವುದರಿಂದ ಅಂಕಪಟ್ಟಿ ಬದಲಾಗುವ ಸಾಧ್ಯತೆ ಇದೆ. ಅಗ್ರ ಮೂರು ಸ್ಥಾನಗಳಲ್ಲಿ ಇರುವ ಕೆಕೆಆರ್‌, ಆರ್‌ಆರ್‌ ಮತ್ತು ಎಸ್‌ಆರ್‌ಎಚ್‌ ತಂಡಗಳಿಗೆ ಇನ್ನು ತಲಾ 1 ಪಂದ್ಯಗಳಿವೆ. ಎಸ್‌ಆರ್‌ಎಚ್‌-ಪಂಜಾಬ್‌, ರಾಜಸ್ಥಾನ-ಕೋಲ್ಕತ್ತಾ ಪರಸ್ಪರ ಸೆಣಸಾಡಲಿರುವುದರಿಂದ ಪ್ಲೇ ಆಫ್‌ಗೆ ಅರ್ಹತೆ ಪಡೆದ ತಂಡಗಳ ಸ್ಥಾನಗಳಲ್ಲಿ ಏರುಪೇರಾಗಲಿದೆ. ಅದಾಗ್ಯೂ ಸೋತರೂ ಕೋಲ್ಕತ್ತಾ ಅಗ್ರ ಸ್ಥಾನದಲ್ಲೇ ಮುಂದುವರಿಯಲಿದ್ದು, ಆರ್‌ಸಿಬಿಗೆ ನಾಲ್ಕನೇ ಸ್ಥಾನ ಫಿಕ್ಸ್‌. ಎರಡು ಮತ್ತು ಮೂರನೇ ಸ್ಥಾನಗಳ ಸ್ಪಷ್ಟ ಚಿತ್ರಣ ಪಂದ್ಯದ ಬಳಿಕವಷ್ಟೇ ದೊರೆಯಲಿದೆ.

ಇದನ್ನೂ ಓದಿ: IPL 2024 : ಗೆಲುವೊಂದೇ ಗುರಿ; ಅಂಪೈರ್​ಗಳ ಜತೆ ಮತ್ತೆ ವಾಗ್ವಾದ ನಡೆಸಿದ ಕೊಹ್ಲಿ

ಸಿಎಸ್‌ಕೆ ಸೋಲಿಸಿ ಪ್ಲೇ ಆಫ್‌ಗೆ ಏರಿದ ಬೆಂಗಳೂರು

ಬೆಂಗಳೂರಿನ ಚಿನ್ನಸ್ವಾಮಿ ಕ್ರಿಕೆಟ್​ ಸ್ಟೇಡಿಯಂನಲ್ಲಿ ಶನಿವಾರ ನಡೆದ ಮಳೆ ಪೀಡಿತ ಪಂದ್ಯದಲ್ಲಿ ಟಾಸ್​ ಸೋತು ಬ್ಯಾಟಿಂಗ್​ ಆಹ್ವಾನ ಪಡೆದ ಆರ್​ಸಿಬಿ ವಿರಾಟ್​ ಕೊಹ್ಲಿ ಮತ್ತು ಫಾಫ್​ ಡುಪ್ಲೆಸ್​ ಮೊದಲ ವಿಕೆಟ್​ಗೆ ನಿರ್ಮಿಸಿದ ಭದ್ರ ಅಡಿಪಾಯದ ನೆರವಿನಿಂದ ನಿಗದಿತ 20 ಓವರ್​ಗಳಲ್ಲಿ 5 ವಿಕೆಟ್​ ನಷ್ಟಕ್ಕೆ 218 ರನ್​ ಬಾರಿಸಿತು. ಈ ಬೃಹತ್​ ಮೊತ್ತವನ್ನು ಬೆನ್ನಟ್ಟಿದ ಚೆನ್ನೈ ಹಲವು ಏರಿಳಿತ ಕಂಡು ಕೊನೆಗೆ ತನ್ನ ಪಾಲಿನ ಆಟದಲ್ಲಿ 7 ವಿಕೆಟ್​ಗೆ 191 ರನ್​ ಗಳಿಸಲಷ್ಟೇ ಶಕ್ತವಾಗಿ ಸೋಲಿಗೆ ಶರಣಾಯಿತು. ಜತೆಗೆ ಟೂರ್ನಿಯಿಂದಲೂ ಹೊರಬಿದ್ದು ಮಾಜಿ ಚಾಂಪಿಯನ್​ ಎನಿಸಿಕೊಂಡಿತು. ಒಂದೊಮ್ಮೆ ಚೆನ್ನೈ 201 ರನ್​ ಬಾರಿಸುತ್ತಿದ್ದರೂ ಆರ್​ಸಿಬಿ ಪ್ಲೇ ಆಫ್​ನಿಂದ ಹೊರ ಬೀಳುತ್ತಿತ್ತು.

Continue Reading
Advertisement
Vijayapura news
ಪ್ರಮುಖ ಸುದ್ದಿ3 hours ago

Vijayapura News : ಪ್ರೀತಿಸಿದವಳನ್ನೇ ಮದುವೆಯಾಗಲು ಯುವಕನ ಹಠ; ಪರಸ್ಪರ ಪೆಟ್ರೋಲ್ ಎರಚಿ ಬೆಂಕಿ ಹಚ್ಚಿಕೊಂಡು ಆಸ್ಪತ್ರೆ ಸೇರಿದರು!

Prajwal Revanna Case
ಪ್ರಮುಖ ಸುದ್ದಿ3 hours ago

Prajwal Revanna Case : ಮಾಜಿ ಶಾಸಕ ಪ್ರೀತಂ ಗೌಡ ಆಪ್ತ ಚೇತನ್​ಗೆ ಎಸ್ಐಟಿ ನೋಟಿಸ್

Yuvraj Singh
ಕ್ರೀಡೆ4 hours ago

Yuvraj Singh : ಅಪಾರ್ಟ್​ಮೆಂಟ್ ವಿತರಣೆಯಲ್ಲಿ ಮೋಸ, ರಿಯಲ್ ಎಸ್ಟೇಟ್ ಸಂಸ್ಥೆಗಳಿಗೆ ನೋಟಿಸ್​ ಕೊಟ್ಟ ಯುವರಾಜ್ ಸಿಂಗ್

Kavya Maran
ಪ್ರಮುಖ ಸುದ್ದಿ4 hours ago

Kavya Maran : ಸೋತಾಗ ಕಣ್ಣೀರು ಹಾಕಿದ ಕಾವ್ಯಾ ಮಾರನ್​, ​ ಡ್ರೆಸಿಂಗ್​ ರೂಮ್​ಗೆ ತೆರಳಿ ಆಟಗಾರರನ್ನೇ ನಗಿಸಿದರು; ಇಲ್ಲಿದೆ ವಿಡಿಯೊ

Viral Video
ದೇಶ4 hours ago

Viral Video: ಬೆಂಗಳೂರಿನಲ್ಲಷ್ಟೇ ಅಲ್ಲ, ಮೌಂಟ್ ಎವರೆಸ್ಟ್ ನಲ್ಲೂ ಈಗ ಟ್ರಾಫಿಕ್ ಜಾಮ್!!

Samsung Galaxy F55 5G Smartphone Released With Exciting Classy Veegan Leather Design
ದೇಶ4 hours ago

Samsung Galaxy: ಸ್ಯಾಮ್‌ಸಂಗ್‌ ಗ್ಯಾಲಕ್ಸಿ ಎಫ್ 55 5ಜಿ ಸ್ಮಾರ್ಟ್‌ಫೋನ್ ರಿಲೀಸ್‌; ಏನಿದರ ವಿಶೇಷತೆ?

Kannada New Movie
ಕರ್ನಾಟಕ5 hours ago

Kannada New Movie: ʼಬ್ಯಾಂಕ್ ಆಫ್‌ ಭಾಗ್ಯಲಕ್ಷ್ಮಿʼ ಚಿತ್ರದ ಅನಿಮೇಷನ್‌ ಟೀಸರ್‌ ರಿಲೀಸ್‌

Golden Star Ganesh Krishnam Pranaya Sakhi movie first song release in Mysore
ಕರ್ನಾಟಕ5 hours ago

Golden Star Ganesh: ಮೊದಲ ಹಾಡಿನಲ್ಲೇ ಮೋಡಿ ಮಾಡಿದ ʼಕೃಷ್ಣಂ ಪ್ರಣಯ ಸಖಿʼ

Mandya News
ಪ್ರಮುಖ ಸುದ್ದಿ5 hours ago

Mandya News : ಬೆಳ್ಳೂರಿನಲ್ಲಿ ಮುಸ್ಲಿಮ್ ಯುವಕರ ಗುಂಪಿನಿಂದ ಅಭಿಲಾಷ್​ ಎಂಬುವರ ಮೇಲೆ ಮಾರಕ ಹಲ್ಲೆ

11th Annual Mahotsav of Sri Annapurneswari Temple in Belagavi from 29th May
ಬೆಳಗಾವಿ5 hours ago

Belagavi News: ಬೆಳಗಾವಿಯಲ್ಲಿ ಮೇ 29ರಿಂದ ಶ್ರೀ ಅನ್ನಪೂರ್ಣೇಶ್ವರಿ ದೇವಸ್ಥಾನದ 11ನೇ ವಾರ್ಷಿಕ ಮಹೋತ್ಸವ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Weather Forecast
ಮಳೆ9 hours ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ1 day ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು1 day ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

Karnataka Rain
ಮಳೆ2 days ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ5 days ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ6 days ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ6 days ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು7 days ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

Contaminated Water
ಮೈಸೂರು7 days ago

Contaminated Water : ಡಿ ಸಾಲುಂಡಿಯಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದ ಯುವಕ ಸಾವು

Karnataka Rain
ಮಳೆ1 week ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

ಟ್ರೆಂಡಿಂಗ್‌