Janhvi Kapoor | ನೂಲಿನಂತೆ ಸೀರೆ! ಶ್ರೀದೇವಿ ಮಗಳು ಜಾಹ್ನವಿಯ ಬ್ಯೂಟಿ ಕಹಾನಿ - Vistara News

ಲೈಫ್‌ಸ್ಟೈಲ್

Janhvi Kapoor | ನೂಲಿನಂತೆ ಸೀರೆ! ಶ್ರೀದೇವಿ ಮಗಳು ಜಾಹ್ನವಿಯ ಬ್ಯೂಟಿ ಕಹಾನಿ

ಹುಟ್ಟು ಸೌಂದರ್ಯವನ್ನು ಜಾಹ್ನವಿ ಪಡೆದಿರುವುದು ನಿಜವೇ ಆದರೂ, ತನ್ನ ಸೌಂದರ್ಯದ ಕೆಲವು ಸೀಕ್ರೆಟ್‌ಗಳನ್ನು ಜಾಹ್ನವಿ ತಮ್ಮ ಬಾಲ್ಯದ ದಿನಗಳಿಂದಲೂ ನೆನಪಿಸಿಕೊಳ್ಳುತ್ತಾರೆ. ಅದರಲ್ಲಿ ಅಮ್ಮ ಶ್ರೀದೇವಿಯ ಕೊಡುಗೆಯೂ ಇದೆ.

VISTARANEWS.COM


on

janhvi kapoor
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬಾಲಿವುಡ್‌ನಲ್ಲಿ ಸ್ಟಾರ್‌ ಕಿಡ್‌ಗಳು ಹೊಸತೇನಲ್ಲ. ಬಹಳಷ್ಟು ಮಂದಿ ತಮ್ಮ ಅಪ್ಪ ಅಮ್ಮಂದಿರ ಹಾದಿಯನ್ನೇ ಹಿಡಿದು ತಮ್ಮ ಅದೃಷ್ಟ ಪರೀಕ್ಷೆಗೆ ಹೊರಟವರು ಅನೇಕ. ಕೆಲವರಿಗೆ ಯಶಸ್ಸೂ ಸಿಕ್ಕಿದೆ. ಅಂತಹ ʻಸ್ಟಾರ್‌ ಕಿಡ್‌ʼಗಳ ಪೈಕಿ ಸದಾ ಟ್ರೆಂಡ್‌ನಲ್ಲಿರುವ, ಸಾಮಾಜಿಕ ಜಾಲತಾಣಗಳಲ್ಲಿ ಸುದ್ದಿ ಮಾಡುತ್ತಲೇ ಇರುವ ಹೊಸಬರ ಪೈಕಿ ಜಾಹ್ನವಿ ಕಪೂರ್‌ ಕೂಡಾ ಒಬ್ಬರು. ಒಂದು ಕಾಲದಲ್ಲಿ ಮನೆಮಾತಾಗಿದ್ದ ನಟಿ ಶ್ರೀದೇವಿಯ ಮಗಳು ಜಾಹ್ನವಿ ಇಂದು ತನ್ನ ಹೊಳೆಯುವ ಗ್ಲಾಸ್‌ ಸ್ಕಿನ್‌, ಸದಾ ಗ್ಲಾಮರಸ್‌ ಲುಕ್‌ ಹಾಗೂ ಸಹಜವಾದ ಕೂದಲರಾಶಿಯಿಂದ ಈಗಿನ ಯುವಜನತೆಯ ಮನಸ್ಸಿಗೆ ಲಗ್ಗೆಯಿಟ್ಟಿದ್ದಾರೆ. ಯಾವಾಗಲೂ ಹೊಸ ಬಗೆಯ ಫ್ಯಾಷನ್‌ಗಳಿಂದಲೂ, ಸಾಮಾಜಿಕ ಜಾಲತಾಣಗಳ ಮೂಲಕ ಆಕ್ಟಿವ್‌ ಆಗಿರುವ ಮೂಲಕ ಟ್ರೆಂಡ್‌ ಸೆಟ್ಟರ್‌ ಆಗಿಯೂ ಮಿಂಚುತ್ತಿರುವುದು ಸತ್ಯವೇ.

ಹುಟ್ಟು ಸೌಂದರ್ಯವನ್ನು ಜಾಹ್ನವಿ ಪಡೆದಿರುವುದು ನಿಜವೇ ಆದರೂ, ತನ್ನ ಸೌಂದರ್ಯದ ಕೆಲವು ಸೀಕ್ರೆಟ್‌ಗಳನ್ನು ಜಾಹ್ನವಿ ತಮ್ಮ ಬಾಲ್ಯದ ದಿನಗಳಿಂದಲೂ ನೆನಪಿಸಿಕೊಳ್ಳುತ್ತಾರೆ. ಅಮ್ಮ ಶ್ರೀದೇವಿ ಮಕ್ಕಳ ಚರ್ಮ ಹಾಗೂ ಕೂದಲ ಸೌಂದರ್ಯಕ್ಕಾಗಿ ಏನೆಲ್ಲ ಮಾಡುತ್ತಿದ್ದರು ಎಂಬುದನ್ನು ಆಕೆ ಎಳೆಎಳೆಯಾಗಿ ಬಿಚ್ಚಿಡುತ್ತಾರೆ. ಮನೆಯಲ್ಲಿಯೇ ಇರುವ ವಸ್ತುಗಳನ್ನು ಸೌಂದರ್ಯಕ್ಕೆ ಬಳಸುವ ಕಲೆ ತಿಳಿದಿದ್ದು ಅಮ್ಮನಿಂದಲೇ ಎಂದು ಆಕೆ ಹೇಳುತ್ತಾರೆ.

ನಾವು ಯಾವಾಗಲೂ ಬಾಯಿಗೆ ರುಚಿಯಿರುವ ಹೊಟ್ಟೆ ತುಂಬಬಹುದಾದ ಆಹಾರಗಳನ್ನೇ ತಿನ್ನುತ್ತೇವೆ. ಕೆಲವೊಮ್ಮೆ ಸೌಂದರ್ಯಕ್ಕೆ ಬೇಕಾದನ್ನೂ ಮಾಡುವುದನ್ನು ರೂಢಿಸಿಕೊಳ್ಳಬೇಕು ಎನ್ನುತ್ತಾರೆ ಜಾಹ್ನವಿ. ಆಕೆ ಹೇಳುವಂತೆ, ಮನೆಯಲ್ಲಿ ಅಮ್ಮ ನಾವೆಲ್ಲ ಸಣ್ಣವರಿದ್ದಾಗ ಸಾಕಷ್ಟು ತಿನ್ನುವ ವಸ್ತುಗಳನ್ನು ಮುಖಕ್ಕೆ, ಕೂದಲಿಗೆ ಹಚ್ಚುತ್ತಿದ್ದರು. ನಮಗೂ ಹಚ್ಚುತ್ತಿದ್ದರು. ಕೂದಲಿಗೆ ಬೀಯರ್‌, ಮೊಟ್ಟೆ ಹಾಗೂ ಮೆಂತ್ಯ ಕಾಳುಗಳ ಪೇಸ್ಟ್‌ ಇವೆಲ್ಲ ಹಚ್ಚುತ್ತಿದ್ದರು ಎನ್ನುತ್ತಾರೆ. ಅಮ್ಮ ಬೆಳಗ್ಗೆ ತಿನ್ನಲು ಕೊಟ್ಟ ಹಣ್ಣು ಹಂಪಲುಗಳಲ್ಲಿ ಉಳಿದದ್ದನೆಲ್ಲ ಮುಖಕ್ಕೆ ಹಚ್ಚಲು ಬಳಸುತ್ತಿದ್ದರಂತೆ. ಬಾಳೆಹಣ್ಣು, ಮಾವಿನಹಣ್ಣು, ಸ್ಟ್ರಾಬೆರಿ ಹೀಗೆ ಎಲ್ಲವೂ ಮಕ್ಕಳ ಮುಖಕ್ಕೂ ಹಚ್ಚುತ್ತಿದ್ದರಂತೆ.

ಇದನ್ನೂ ಓದಿ | Jahnavi Kapoor | ನೀಲಿ ಬಣ್ಣದ ಉಡುಪಿನಲ್ಲಿ ಜಾನ್ವಿ ಕಪೂರ್ ಆಕರ್ಷಕ ಫೋಟೊಗಳು

ಶ್ರೀದೇವಿ ಅವರು, ತನ್ನ ಮಕ್ಕಳಿಬ್ಬರಿಗೂ ಪ್ರತಿ ಮೂರು ದಿನಕ್ಕೊಮ್ಮೆ ತಲೆಗೆ ಎಣ್ಣೆ ಮಸಾಜ್‌ ಮಾಡುತ್ತಿದ್ದರಂತೆ. ಹಾಗಾಗಿ ಜಾಹ್ನವಿಗೆ ಎಣ್ಣೆಯೂ ಬಹಳ ಮುಖ್ಯ. ಆಕೆ ಹೇಳುವಂತೆ, ಇದೇ ಅಭ್ಯಾಸ ಅಮ್ಮನಿಂದ ನನಗೂ ದಾಟಿಕೊಂಡು ಬಂದಿದೆ. ಕೂದಲಿನ ಆರೈಕೆಗೂ ಬಹಳ ಗಮನ ಕೊಡಬೇಕು. ಮೆಂತ್ಯದ ಪ್ಯಾಕ್‌ ಹಚ್ಚುವ ಮೂಲಕ ತಲೆಹೊಟ್ಟು, ಕೂದಲುದುರುವುದು ಮುಂತಾದ ಸಮಸ್ಯೆಗಳಿಂದ ಪರಿಹಾರ ಕಾಣಬಹುದು. ಬೀಯರ್‌ ಕೂದಲನ್ನು ನುಣುಪಾಯಿಯೂ ಹೊಳೆಯುವಂತೆಯೂ ಮಾಡುತ್ತದೆ. ಮೊಟ್ಟೆಯ ಬಳಕೆಯಿಂದಲೂ ಕೂದಲು ನುಣುಪಾಗಿ ಹೊಳೆಯುವುದಲ್ಲದೆ ಕೂದಲನ್ನು ಗಟ್ಟಿಮುಟ್ಟಾಗಿಸುತ್ತದೆ ಎನ್ನುತ್ತಾರೆ. ಅಷ್ಟೇ ಅಲ್ಲ, ಕೂದಲ ಆರೈಕೆಗೆ ಅಮ್ಮ ಮನೆಯಲ್ಲೇ ಎಣ್ಣೆಯನ್ನೂ ಮಾಡಿಡುತ್ತಿದ್ದಳು. ನೆಲ್ಲಿಕಾಯಿ, ಒಣ ಹೂವುಗಳನ್ನು ಹಾಕಿ ಮಾಡಿದ ಎಣ್ಣೆಯಿಂದಲೇ ತಮಗೆ ತಲೆಗೆ ಮಸಾಜ್‌ ಮಾಡುತ್ತಿದ್ದಳು ಎಂದು ನೆನಪಿಸಿಕೊಳ್ಳುತ್ತಾರೆ ಜಾಹ್ನವಿ.

ಹಾಗಾದರೆ ಜಾಹ್ನವಿಯ ಸೌಂದರ್ಯದ ಕುರಿಯಾದ ದಿನಚರಿ ಏನು ಎಂದು ಕೇಳಿದರೆ ಆಕೆ, ʻಅಂಥದ್ದೇವಿಲ್ಲ, ಬಹಳ ಸರಳವಾದ ದಿನಚರಿ ನನ್ನದು. ನಾನು ಹೆಚ್ಚು ಪ್ರಾಡಕ್ಟ್‌ಗಳನ್ನು ಬಳಸುವುದಿಲ್ಲ. ನನ್ನ ವೃತ್ತಿ ನಟನೆಯಾದ್ದರಿಂದ ಸದಾ ಚರ್ಮ ಕೂದಲುಗಳ ಮೇಲೆ ಸಾಕಷ್ಟು ಬಿಸಿಲು, ಹಾಗೂ ರಾಸಾಯನಿಕಗಳ ಪರಿಣಾಮ ಬೀಳುವುದರಿಂದ ಮನೆಯಲ್ಲಿದ್ದಷ್ಟೂ ಸಮಯ ನಾನು ಸರಳವಾಗಿ ಸಹಜವಾಗಿ ಇರಲು ಬಯಸುತ್ತೇನೆ. ಹೆಚ್ಚು ನೀರು ಕುಡಿಯುತ್ತೇನೆ. ಬೆಳಗ್ಗೆ ಎದ್ದ ಕೂಡಲೇ ಮುಖ ತೊಳೆದುಕೊಂಡು ಸೀರಂ ಹಚ್ಚಿ ಕೊಳ್ಳುತ್ತೇವೆ. ಶೂಟಿಂಗ್‌ನಲ್ಲಿದ್ದ ಸಂದರ್ಭ ಆಯಿಲ್‌ ಕಂಟ್ರೋಲ್‌ ಅಷ್ಟೇ ಮುಖ್ಯ ಟಾಸ್ಕ್‌. ಹೆಚ್ಚು ಕೆಲಸದ ನಿಮಿತ್ತ ಹೊರಗೇ ಇರಬೇಕಾಗುವುದರಿಂದ ಏನೂ ಮಾಡಿಕೊಳ್ಳಲು ಸಮಯ ಸಾಲುವುದಿಲ್ಲ. ಆದರೆ, ಮನೆಯಲ್ಲಿದ್ದಾಗ ಆದಷ್ಟೂ ಮನೆಮದ್ದುಗಳನ್ನೇ ಟ್ರೈ ಮಾಡುತ್ತೇನೆ. ಹೇರ್‌ ಪ್ಯಾಕ್‌ ಮಾಡಿಕೊಂಡು ತಲೆಗೆ ಹಚ್ಚಿ ಕೂರುತ್ತೇನೆ. ಅದು ನನಗಿಷ್ಟʼ ಎನ್ನುತ್ತಾರೆ ಜಾಹ್ನವಿ.

ಇದನ್ನೂ ಓದಿ | Wedding Season Trend: ಮದುಮಗಳ ಸೌಂದರ್ಯಕ್ಕೂ ಬಂತು ಬ್ರೈಡಲ್‌ ಪ್ಯಾಕೇಜ್‌

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕರ್ನಾಟಕ

Fortis Hospital: ವಿಶ್ವದಲ್ಲೇ ಮೊದಲ ಬಾರಿಗೆ 3 ವಿಭಿನ್ನ ಕಾಯಿಲೆಗೆ ಏಕಕಾಲದಲ್ಲೇ ಯಶಸ್ವಿ ಶಸ್ತ್ರಚಿಕಿತ್ಸೆ

Fortis Hospital: ಹೃದ್ರೋಗ ಸಮಸ್ಯೆ, ಕರುಳಿನ ಕ್ಯಾನ್ಸರ್‌ ಹಾಗೂ ಪಿತ್ತಕೋಶದಲ್ಲಿ ಕಲ್ಲು ಹೊಂದಿದ್ದ 44 ವರ್ಷದ ವ್ಯಕ್ತಿಗೆ ಏಕಕಾಲದಲ್ಲೇ ಮೂರು ಶಸ್ತ್ರಚಿಕಿತ್ಸೆಯನ್ನು ಬೆಂಗಳೂರಿನ ಫೋರ್ಟಿಸ್‌ ಆಸ್ಪತ್ರೆಯಲ್ಲಿ ಯಶಸ್ವಿಯಾಗಿ ನಡೆಸಿದೆ. ಫೋರ್ಟಿಸ್ ಆಸ್ಪತ್ರೆಯ ಹೃದಯ ತಜ್ಞ ಡಾ. ವಿವೇಕ್ ಜವಳಿ ಮತ್ತು ಮಿನಿಮಲ್ ಆಕ್ಸೆಸ್ ಮತ್ತು ಬಾರಿಯಾಟ್ರಿಕ್ ಸರ್ಜರಿ ನಿರ್ದೇಶಕ ಡಾ. ಜಿ. ಐ. ಗಣೇಶ್ ಶೆಣೈ ಅವರ ವೈದ್ಯರ ತಂಡ ಈ ಚಿಕಿತ್ಸೆಯನ್ನು ನೆರವೇರಿಸಿದೆ

VISTARANEWS.COM


on

Fortis Hospital doctors team performed complex surgery for three different diseases simultaneously
Koo

ಬೆಂಗಳೂರು: ವಿಶ್ವದಲ್ಲೇ ಮೊದಲ ಬಾರಿಗೆ ಏಕಕಾಲದಲ್ಲೇ ಒಬ್ಬ ವ್ಯಕ್ತಿಗೆ ಮೂರು ವಿಭಿನ್ನ ಕಾಯಿಲೆಗಳಿಗೆ ಸಂಕೀರ್ಣ ಶಸ್ತ್ರಚಿಕಿತ್ಸೆಯನ್ನು ಫೋರ್ಟಿಸ್‌ ಆಸ್ಪತ್ರೆ (Fortis Hospital) ವೈದ್ಯಕೀಯ ತಂಡ ಯಶಸ್ವಿಯಾಗಿ ನಡೆಸಿದೆ.

ನಗರದ ಕನ್ನಿಂಗ್‌ಹ್ಯಾಮ್‌ ರಸ್ತೆಯ ಫೋರ್ಟಿಸ್‌ ಆಸ್ಪತ್ರೆಯಲ್ಲಿ ಹೃದ್ರೋಗ ಸಮಸ್ಯೆ, ಕರುಳಿನ ಕ್ಯಾನ್ಸರ್‌ ಹಾಗೂ ಪಿತ್ತಕೋಶದಲ್ಲಿ ಕಲ್ಲು ಹೊಂದಿದ್ದ 44 ವರ್ಷದ ವ್ಯಕ್ತಿಗೆ ಏಕಕಾಲದಲ್ಲೇ ಮೂರು ಶಸ್ತ್ರಚಿಕಿತ್ಸೆಯನ್ನು ಯಶಸ್ವಿಯಾಗಿ ನಡೆಸಿದ್ದು, ಇದು ವಿಶ್ವದಲ್ಲೇ ಮೊದಲ ಪ್ರಕರಣವಾಗಿದೆ.

ಫೋರ್ಟಿಸ್ ಆಸ್ಪತ್ರೆಯ ಹೃದಯ ತಜ್ಞ ಡಾ. ವಿವೇಕ್ ಜವಳಿ ಮತ್ತು ಮಿನಿಮಲ್ ಆಕ್ಸೆಸ್ ಮತ್ತು ಬಾರಿಯಾಟ್ರಿಕ್ ಸರ್ಜರಿ ನಿರ್ದೇಶಕ ಡಾ. ಜಿ. ಐ. ಗಣೇಶ್ ಶೆಣೈ ಅವರ ವೈದ್ಯರ ತಂಡ ಈ ಚಿಕಿತ್ಸೆಯನ್ನು ನೆರವೇರಿಸಿದೆ.

ಇದನ್ನೂ ಓದಿ: Karnataka Congress: ಬೂತ್ ಮಟ್ಟದಲ್ಲಿ ‘ಕಾಂಗ್ರೆಸ್ ಕುಟುಂಬ’ ಕಾರ್ಯಕ್ರಮ; ಪಕ್ಷ ಬಲವರ್ಧನೆಗೆ ಡಿ.ಕೆ.ಶಿ ಪ್ಲ್ಯಾನ್‌

ಈ ಕುರಿತು ಮಾತನಾಡಿದ ಡಾ. ವಿವೇಕ್‌ ಜವಳಿ, 44 ವರ್ಷದ ಕೊಪ್ಪರಂ ಎಂಬ ವ್ಯಕ್ತಿಯು ಹೃದ್ರೋಗ ಸಮಸ್ಯೆಯನ್ನು ಹೊಂದಿದ್ದರು. ಇದಕ್ಕೆ ಚಿಕಿತ್ಸೆ ಪಡೆಯಲು ಫೋರ್ಟಿಸ್‌ ಆಸ್ಪತ್ರೆಗೆ ದಾಖಲಾದರು. ಇವರಿಗೆ ಕೊರೊನರಿ ಆರ್ಟರಿ ಬೈಪಾಸ್ ಸರ್ಜರಿ ಮಾಡುವ ಅವಶ್ಯಕತೆ ಇತ್ತು.

ರೋಗಿಯು ತಾವು ಮೊದಲಿನಿಂದಲೂ ಹೊಟ್ಟೆ ನೋವು ಅನುಭವಿಸುತ್ತಿರುವ ಬಗ್ಗೆಯೂ ನಮಗೆ ತಿಳಿಸಿದರು, ಇದಕ್ಕೆ ಅಲ್ಟ್ರಾಸೌಂಡ್ ಪರೀಕ್ಷೆ ನಡೆಸಿದೆವು. ಈ ವೇಳೆ ಅವರಿಗೆ ಪಿತ್ತಕೋಶದಲ್ಲಿ ಕಲ್ಲು ಇರುವುದು ಕಂಡು ಬಂತು. ಹೀಗಾಗಿ ಮತ್ತೊಮ್ಮೆ ಪರೀಕ್ಷೆಗೆ ಒಳಪಡಿಸಿದಾಗ ಅವರಿಗೆ ಕರುಳಿನ ಕ್ಯಾನ್ಸರ್‌ ಇರುವುದು ಸಹ ಪತ್ತೆಯಾಯಿತು. ಕರುಳಿನ ಕ್ಯಾನ್ಸರ್‌ ಬಹುಪಾಲು ದೊಡ್ಡಮಟ್ಟದಲ್ಲಿಯೇ ಅವರಿಗೆ ಹಾನಿ ಮಾಡುತ್ತಿತ್ತು. ಹೀಗಾಗಿ ಅವರಿಗೆ ಹೃದಯ ಬೈಪಾಸ್‌ ಸರ್ಜರಿಯ ಜತೆಗೆ ಕರುಳಿನ ಕ್ಯಾನ್ಸರ್‌ ಶಸ್ತ್ರಚಿಕಿತ್ಸೆಯೂ ಹೆಚ್ಚು ಅನಿವಾರ್ಯವಾಗಿತ್ತು.

ಆದರೆ, ಹೃದಯದ ಬೈಪಾಸ್‌ ಸರ್ಜರಿ ಬಳಿಕ 3 ತಿಂಗಳು ಯಾವುದೇ ಚಿಕಿತ್ಸೆಗೆ ಒಳಪಡುವುದು ಹೆಚ್ಚು ಅಪಾಯಕಾರಿ. ಆದರೆ, ಮೂರು ತಿಂಗಳವರೆಗೂ ಕರುಳಿನ ಕ್ಯಾನ್ಸರ್‌ನನ್ನು ಹಾಗೇ ಬಿಡಲು ಸಹ ಸಾಧ್ಯವಾಗದ ಸ್ಥಿತಿ ನಿರ್ಮಾಣವಾಗಿತ್ತು. ಹೀಗಾಗಿ ಈ ವ್ಯಕ್ತಿಗೆ ಏಕಕಾಲದಲ್ಲೇ ಹೃದಯದ ಬೈಪಾಸ್‌ ಸರ್ಜರಿ, ಕರುಳಿನ ಕ್ಯಾನ್ಸರ್‌ ಶಸ್ತ್ರಚಿಕಿತ್ಸೆ ಹಾಗೂ ಪಿತ್ತಕೋಶದಲ್ಲಿ ಕಲ್ಲು ತೆಗೆಯುವ ಶಸ್ತ್ರಚಿಕಿತ್ಸೆಯನ್ನು ನಡೆಸಲು ಅವರ ಕುಟುಂಬದವರ ಒಪ್ಪಿಗೆ ಪಡೆದುಕೊಂಡೆವು.

ಇದನ್ನೂ ಓದಿ: IPL 2024 : ಇದು ಕಾಕತಾಳಿಯವೇ? ಐಪಿಎಲ್ ಮತ್ತು ಡಬ್ಲ್ಯುಪಿಎಲ್​ ಫೈನಲ್ ರಿಸಲ್ಟ್​​ನಲ್ಲಿದೆ ಸಾಮ್ಯತೆ

ಮೊದಲಿಗೆ ಆಫ್-ಪಂಪ್ ಕರೋನರಿ ಆರ್ಟರಿ ಬೈಪಾಸ್ (OPCAB)ನ ವಿಶೇಷ ಶಸ್ತ್ರಚಿಕಿತ್ಸಾ ತಂತ್ರದ ಮೂಲಕ ಕೊರೊನರಿ ಆರ್ಟರಿ ಬೈಪಾಸ್ ಸರ್ಜರಿಗೆ ನಡೆಸಿದೆವು. ಈ ಅವಧಿಯಲ್ಲೇ ಬಾರಿಯಾಟ್ರಿಕ್ ಸರ್ಜನ್‌ ಡಾ. ಜಿ. ಐ. ಗಣೇಶ್ ಶೆಣೈ ಅವರು, ಲ್ಯಾಪರೊಸ್ಕೋಪಿಕ್ ತಂತ್ರಜ್ಞಾನ ಬಳಸಿಕೊಂಡು, ಲ್ಯಾಪರೊಸ್ಕೋಪಿಕ್ ಎಕ್ಸ್ಟೆಂಡೆಡ್ ರೈಟ್ ಹೆಮಿಕೊಲೆಕ್ಟಮಿ (LERHC) ಅನ್ನು ಕ್ಯಾನ್ಸರ್‌ನ ಕರುಳಿನ ಭಾಗವನ್ನು ತೆಗೆದುಹಾಕಿದರು, ಜತೆಗೆ ಪಿತ್ತಕೋಶದ ಕಲ್ಲುಗಳನ್ನು ಸಹ ಲ್ಯಾಪರೊಸ್ಕೋಪಿಕ್ ಕೊಲೆಸಿಸ್ಟೆಕ್ಟಮಿ (LC) ಮೂಲಕ ತೆಗೆದು ಹಾಕುವಲ್ಲಿ ಯಶಸ್ವಿಯಾದರು. ಈ ಎಲ್ಲಾ ಶಸ್ತ್ರಚಿಕಿತ್ಸೆಯನ್ನು 7 ಗಂಟೆಗಳಲ್ಲಿ ನಡೆಸಲಾಯಿತು. ರೋಗಿಯು ಶಸ್ತ್ರಚಿಕಿತ್ಸೆಯಾದ 15 ದಿನಗಳ ನಂತರ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಸಂಪೂರ್ಣ ಆರೋಗ್ಯವಾಗಿದ್ದಾರೆ ಎಂದು ಅವರು ವಿವರಿಸಿದರು.

Continue Reading

ಫ್ಯಾಷನ್

Hairstyle Craze: ಸೋಷಿಯಲ್‌ ಮೀಡಿಯಾದಲ್ಲಿ ರಂಗೇರಿದ ಹೇರ್‌ ಸ್ಟೈಲ್ಸ್

ಚಿತ್ರ-ವಿಚಿತ್ರ ವಿನ್ಯಾಸದ ಹೇರ್‌ ಸ್ಟೈಲ್ಸ್‌, (Hairstyle Craze) ಕಲಾತ್ಮಕವಾಗಿ ಮಾಡಿದ ಹೇರ್‌ ಡಿಸೈನಿಂಗ್‌ ಫೋಟೋಗಳು ಇಂದು ಸೋಷಿಯಲ್‌ ಮೀಡಿಯಾದಲ್ಲಿ ಹಂಗಾಮ ಎಬ್ಬಿಸಿವೆ.

VISTARANEWS.COM


on

HairStyle Craze
Koo

-ಶೀಲಾ ಸಿ. ಶೆಟ್ಟಿ, ಬೆಂಗಳೂರು
ಚಿತ್ರ-ವಿಚಿತ್ರ ವಿನ್ಯಾಸದಲ್ಲಿ ಕಲಾತ್ಮಕವಾಗಿ ಮಾಡಿದ ಹೇರ್‌ಸ್ಟೈಲ್‌ (Hairstyle Craze) ಫೋಟೋಗಳು ಸೋಷಿಯಲ್‌ ಮೀಡಿಯಾದ ಬ್ಯೂಟಿ ಬ್ಲಾಗ್‌-ವ್ಲಾಗ್‌ಗಳಲ್ಲಿ ಆನ್‌ಲೈನ್‌ ಪ್ರೇಮಿಗಳನ್ನು ಆಕರ್ಷಿಸಿವೆ. ಪ್ರಯೋಗಾತ್ಮಕವಾಗಿ ಮಾಡಿದ ನಾನಾ ಶೈಲಿಯ ಈ ಕೂದಲಿನ ವಿನ್ಯಾಸಗಳಿಗೆ ಸೋಷಿಯಲ್‌ ಮೀಡಿಯಾ ವೇದಿಕೆ ಕಲ್ಪಿಸಿದ್ದು, ಹೇರ್‌ ಸ್ಟೈಲಿಂಗ್‌ ಪ್ರಿಯರಲ್ಲಿ ಈ ಕ್ರೇಜ್ ಹುಟ್ಟು ಹಾಕಿದೆ.

Online Craze

ಚಿತ್ರ-ವಿಚಿತ್ರ ಹೇರ್‌ ಸ್ಟೈಲಿಂಗ್‌

ಹೇರ್‌ ಸ್ಟೈಲಿಸ್ಟ್‌ ರಿಚರ್ಡ್ ಹೇಳುವಂತೆ, ತಲೆಗೂದಲನ್ನು ವಿಭಿನ್ನ ಕಾನ್ಸೆಪ್ಟ್‌ಗಳಲ್ಲಿ ಬಾಚುವುದು, ಕೂದಲನ್ನು ಪ್ರಯೋಗಾತ್ಮಕವಾಗಿ ಸಿಂಗರಿಸಿ ಇಲ್ಲವೇ ಅಲಂಕರಿಸುವುದು. ಅವರವರ ಆಯ್ಕೆಗೆ ತಕ್ಕಂತೆ ಥೀಮ್‌ಗೆ ತಕ್ಕಂತೆ ಕೂದಲನ್ನು ಆರ್ಟ್‌ನ ಒಂದು ಭಾಗವಾಗಿಸುವುದು. ಇವೆಲ್ಲಾ ಇಂದು ಸೋಷಿಯಲ್ ಮೀಡಿಯಾದ ಬ್ಯೂಟಿ ಪ್ರಿಯರ ಬ್ಲಾಗ್‌ ಹಾಗೂ ವ್ಲಾಗ್‌ಗಲ್ಲಿ ಕಂಡು ಬರುತ್ತಿವೆ. ಇನ್ನು ಬ್ಯೂಟಿ ಎಕ್ಸ್‌ಪರ್ಟ್ ತನ್ಯಾ ಪ್ರಕಾರ, ವಿಭಿನ್ನ, ವೈವಿದ್ಯಮಯ ಊಹೆಗೂ ಮೀರಿದ ಕೂದಲಿನ ವಿನ್ಯಾಸದಲ್ಲಿ ಕೆಲವು ಆಕರ್ಷಕ ಹೇರ್‌ ಸ್ಟೈಲಿಂಗ್‌ ಲಿಸ್ಟ್‌ಗೆ ಸೇರಿದರೇ ಇನ್ನು ಕೆಲವು ವಿಯರ್ಡ್‌ ಬ್ಯೂಟಿ ಹೇರ್‌ ಸ್ಟೈಲಿಂಗ್‌ ವಿಭಾಗಕ್ಕೆ ಸೇರುತ್ತವಂತೆ.

Online Craze

ಇನ್ನು ಹೇರ್‌ ಡಿಸೈನಿಂಗ್‌ ಅಥವಾ ಆರ್ಟಿಸ್ಟಿಕ್‌ ಹೇರ್‌ಸ್ಟೈಲ್‌ ಮಾಡಲು ಬಯಸುವವರು ಮೊದಲು ಒಂದಿಷ್ಟು ಬ್ಯೂಟಿ ಬ್ಲಾಗ್‌ಗಳಲ್ಲಿ ಈ ಕುರಿತಂತೆ ಸಮೀಕ್ಷೆ ಮಾಡಿ ನಂತರ ತಮ್ಮ ಕೂದಲಿನ ಟೆಕ್ಷ್ಚರ್‌ಗೆ ಹೊಂದುವಂತೆ ವಿನ್ಯಾಸವನ್ನು ಆಯ್ಕೆ ಮಾಡಿಕೊಳ್ಳಬೇಕು. ಎಲ್ಲದಕ್ಕಿಂತ ಮೊದಲು ಕೂದಲು ಆರೋಗ್ಯವಾಗಿರಬೇಕು. ವಾಲ್ಯೂಮ್‌ ಹೊಂದಿರಬೇಕು ಎನ್ನುತ್ತಾರೆ ಹೇರ್ ಸ್ಟೈಲಿಸ್ಟ್‌ ಸ್ವಪ್ನಾ ಭವ್ನಾನಿ.

Online Craze

ಹೇರ್‌ ಸ್ಟೈಲಿಂಗ್‌ ಮಾಡುವ ಮುನ್ನ

ಸೋಷಿಯಲ್‌ ಮೀಡಿಯಾದಲ್ಲಿನ ಹೇರ್‌ ಸ್ಟೈಲಿಂಗ್‌ ಕ್ರೇಜ್‌ಗೆ ನೀವು ಸಾಥ್‌ ನೀಡುವುದಾದಲ್ಲಿ ಒಂದಿಷ್ಟು ವಿಷಯಗಳನ್ನು ಗಮನದಲ್ಲಿಟ್ಟುಕೊಳ್ಳಬೇಕು.

  • ಹೇರ್‌ ಎಕ್ಸ್‌ಪರ್ಟ್ ಬಳಿ ನಿಮ್ಮ ಥೀಮ್‌ ಬಗ್ಗೆ ಮೊದಲು ಚರ್ಚಿಸಿ.
  • ಹೇರ್‌ ಡಿಸೈನಿಂಗ್‌ಗೆ ಬೇಕಾಗುವ ಪರಿಕರ ಹಾಗೂ ವಸ್ತುಗಳನ್ನು ತೆಗೆದಿರಿಸಿ.
  • ಮೇಕಪ್‌ ಮುಗಿದ ನಂತರ ಹೇರ್ ಡಿಸೈನಿಂಗ್‌ ಮಾಡುವುದು/ಮಾಡಿಸುವುದು ಒಳಿತು.
  • ಸೋಷಿಯಲ್‌ ಮೀಡಿಯಾಗೆ ಅಪ್‌ಲೋಡ್‌ ಮಾಡುವಾಗ ಹ್ಯಾಶ್‌ಟ್ಯಾಗ್‌ ಬಳಸಿ.

(ಲೇಖಕಿ: ಫ್ಯಾಷನ್‌ ಪತ್ರಕರ್ತೆ)

ಇದನ್ನೂ ಓದಿ: Mango Nail Art: ಸಮ್ಮರ್‌ ಸೀಸನ್‌ನಲ್ಲಿ ಬಂತು ಮ್ಯಾಂಗೋ ನೇಲ್‌ ಆರ್ಟ್!

Continue Reading

ಆರೋಗ್ಯ

Mouthwashes: ಬಾಯಿಯ ಎಲ್ಲ ಸಮಸ್ಯೆಗಳಿಗೂ ಮೌತ್‌ವಾಷ್‌ ಪರಿಹಾರವೆ? ಇದರ ಇತಿಮಿತಿ ಬಗ್ಗೆಯೂ ತಿಳಿದಿರಲಿ

ಮೌತ್‌ವಾಷ್‌ಗಳನ್ನು (Mouthwashes) ಬಳಸದವರ ಸಂಖ್ಯೆ ವಿರಳ. ಕೆಲವರು ನಿಯಮಿತವಾಗಿ ಬಳಸಿದರೆ, ಹಲವರು ಅಪರೂಪಕ್ಕಾದರೂ ಬಳಸುತ್ತಾರೆ. ವ್ಯಾಪಕವಾಗಿ ಬಳಕೆಯಲ್ಲಿರುವ ಈ ಮೌತ್‌ವಾಷ್‌ನ ಇತಿ-ಮಿತಿಗಳೇನು? ಇದನ್ನು ಬಳಸಬೇಕಾದರೆ ಗಮನಿಸಬೇಕಾದ ಅಂಶಗಳು ಯಾವುವು? ಇಲ್ಲಿದೆ ವಿವರ.

VISTARANEWS.COM


on

Mouthwashes
Koo

ಜಾಹೀರಾತುಗಳನ್ನು ನೋಡಿ ಮರುಳಾಗುವುದು, ಅದನ್ನೇ ಅನುಸರಿಸುವುದು ಹೊಸದೇನಲ್ಲ. ಉದಾಹರಣೆಗೆ ಹೇಳುವುದಾದರೆ, ಯಾವುದೋ ಟೂತ್‌ಪೇಸ್ಟ್‌ ಉಪಯೋಗಿಸಿದರೆ ಹಲ್ಲುಗಳೆಲ್ಲ ಫಳಫಳಿಸಿ, ಉಸಿರು ತಾಜಾ ಆಗುತ್ತದೆ ಎಂದಿದ್ದರೆ, ಅದು ಸತ್ಯ ಎಂದು ಭಾವಿಸಿಯೇ ನಾವು ಉಪಯೋಗಿಸುತ್ತೇವೆ. ಮೌತ್‌ವಾಷ್‌ ಸಹ ಅದೇ ಸಾಲಿಗೆ ಸೇರುವಂಥದ್ದು. ಯಾವುದೇ ಮನೆಯ ಬಾತ್‌ರೂಂಗಳಲ್ಲಿ ಅದೀಗ ಖಾಯಂ ಸ್ಥಾನವನ್ನು ಗಿಟ್ಟಿಸಿಕೊಂಡಿದೆ. ಬಣ್ಣದ ಬಾಟಲಿಗಳ ಮೇಲಿನ ಮೋಹವನ್ನೋ ಅಥವಾ ಜಾಹೀರಾತುಗಳ ಭರವಸೆಯನ್ನೋ ಒಂದೆಡೆ ಇಟ್ಟು, ಮೌತ್‌ವಾಷ್‌ (Mouthwashes) ಬಳಕೆ ಇತಿ-ಮಿತಿಗಳೇನು ಎಂಬುದನ್ನು ಅರ್ಥ ಮಾಡಿಕೊಳ್ಳೋಣ.

Mouthwashes

ದುರ್ಗಂಧ ದೂರ

ಬಾಯಿಯ ದುರ್ಗಂಧ ಎಷ್ಟೋ ಸಂದರ್ಭಗಳಲ್ಲಿ ಮುಜುಗರ ತರುವಂತಹದ್ದು. ಸಾಮಾಜಿಕ, ವೈಯಕ್ತಿಕ ಅಥವಾ ವೃತ್ತಿಯ ಸಂದರ್ಭಗಗಳಲ್ಲಿ ಇದನ್ನು ನಿಭಾಯಿಸುವುದು ಕಷ್ಟವಾಗಬಹುದು. ಬಾಯಿಯ ಆರೋಗ್ಯ ಕಾಪಾಡಿಕೊಳ್ಳುವುದು, ಜೀರ್ಣಾಂಗಗಳ ಆರೋಗ್ಯ ನಿಭಾಯಿಸುವುದು, ಆಗಾಗ ನೀರು ಕುಡಿಯುವುದು- ಇಂಥವೆಲ್ಲ ಬಾಯಿಯ ದುರ್ಗಂಧ ನಿವಾರಣೆಯಲ್ಲಿ ಮುಖ್ಯವಾದವು. ಜೊತೆಗೆ ಮೌತ್‌ವಾಷ್‌ ಬಳಕೆ ಸಹ ಈ ಸಮಸ್ಯೆಗೆ ಸಮರ್ಥ ಪರಿಹಾರವನ್ನು ಒದಗಿಸಬಲ್ಲದು.

ಒಸಡಿನ ಸಮಸ್ಯೆ ದೂರ

ಕೆಲವು ಮೌತ್‌ವಾಷ್‌ಗಳು ಬ್ಯಾಕ್ಟೀರಿಯ ವಿರೋಧಿ ಸಾಮರ್ಥ್ಯವನ್ನು ಹೊಂದಿರುತ್ತವೆ. ಇಂಥವುಗಳ ನಿಯಮಿತ ಬಳಕೆಯಿಂದ ಒಸಡಿನ ಸೋಂಕುಗಳನ್ನು ಮಟ್ಟ ಹಾಕಬಹುದು. ಪ್ಲೇಕ್‌ಗಳು ನಿರ್ಮಾಣವಾಗಿ ಒಸಡಿನ ಆರೋಗ್ಯಕ್ಕೆ ಸವಾಲೊಡ್ಡುವ ಸಾಧ್ಯತೆ ಇರುತ್ತದೆ. ಇವುಗಳಿಗೂ ಕೆಲವು ಮೌತ್‌ವಾಷ್‌ಗಳು ಪರಿಹಾರ ಒದಗಿಸಬಲ್ಲವು.

Woman using mouthwash after brushing

ಉಪಯೋಗ ಸುಲಭ

ಮನೆಯಲ್ಲಿದ್ದರೂ, ಪ್ರಯಾಣದಲ್ಲಿದ್ದರೂ ಇವುಗಳನ್ನು ಕೊಂಡೊಯ್ಯುವುದು ಮತ್ತು ಬಳಸುವುದು ಸುಲಭ. ಫ್ಲೋಸಿಂಗ್‌ನಂಥ ಕ್ರಮಗಳು ಸಮಯ ಬೇಡುತ್ತವೆ. ಮಾತ್ರವಲ್ಲ, ವಿಮಾನದಲ್ಲಿ, ಟ್ರೇನ್‌ನಲ್ಲಿ ಪ್ರಯಾಣಿಸುತ್ತಿದ್ದಾಗ ಇದನ್ನು ಮಾಡಲೂ ಸಾಧ್ಯವಿಲ್ಲ. ಆದರೆ ಮೌತ್‌ವಾಷ್‌ ಬಳಕೆಗೆ ಅಂಥ ಯಾವುದೇ ಅಡೆ-ತಡೆಗಳಿಲ್ಲ; ಇದರ ಬಳಕೆ ಅತಿ ಸುಲಭ.

ಹೆಚ್ಚುವರಿ ರಕ್ಷಣೆ

ಫ್ಲೂರೈಡ್‌ ಹೊಂದಿರುವ ಮೌತ್‌ವಾಷ್‌ಗಳು ಬಾಯಿಯ ಆರೋಗ್ಯದ ವಿಚಾರದಲ್ಲಿ ಹೆಚ್ಚುವರಿ ರಕ್ಷಣೆಯನ್ನು ಒದಗಿಸುತ್ತವೆ. ದಂತಗಳ ಎನಾಮಲ್‌ ರಕ್ಷಣೆ ಮಾಡಿ, ಒಡಸುಗಳನ್ನು ಸುರಕ್ಷಿತವಾಗಿ ಇರಿಸಿ, ಹಲ್ಲುಗಳ ಬೇರನ್ನು ಭದ್ರ ಮಾಡುತ್ತವೆ. ಎಲ್ಲಕ್ಕಿಂತ ಮುಖ್ಯವಾಗಿ, ಹಲ್ಲುಗಳು ಹುಳುಕಾಗಿ, ಕುಳಿಯಾಗದಂತೆ ರಕ್ಷಣೆ ನೀಡುತ್ತವೆ. ಒಟ್ಟಾರೆಯಾಗಿ ಬಾಯಿಯ ಆರೋಗ್ಯಕ್ಕೆ ಇದೊಂದು ಒಳ್ಳೆಯ ಆಯ್ಕೆ.

Woman with mouthwash

ಮಿತಿಗಳಿಲ್ಲವೇ?

ಹಾಗೆಂದು ಮೌತ್‌ವಾಷ್‌ ಬಳಕೆಯಲ್ಲಿ ಯಾವುದೇ ಸಮಸ್ಯೆ ಇಲ್ಲವೇ? ಅದನ್ನು ಬಳಸಿದಾಗ ಆಗುವುದೆಲ್ಲ ಒಳ್ಳೆಯದು ಎಂದು ತೀರ್ಮಾನಿಸಲು ಸಾಧ್ಯವೇ? ಎಂದು ಕೇಳಿದರೆ, ಹಾಗೇನಿಲ್ಲ. ಅದರಲ್ಲೂ ಸಮಸ್ಯೆಗಳು ಇಲ್ಲದಿಲ್ಲ. ಬಾಯಿಯ ಸರ್ವರೋಗಗಳಿಗೆ ಇದೊಂದೇ ಮದ್ದು ಎಂದು ಖಂಡಿತಕ್ಕೂ ಭಾವಿಸುವಂತಿಲ್ಲ. ಹಾಗಾದರೆ ಮೌತ್‌ವಾಷ್‌ ಬಳಸುವುದರಲ್ಲಿ ಇರುವಂಥ ಸಮಸ್ಯೆಗಳೇನು? ಯಾವುದರ ಬಗ್ಗೆ ಗಮನ ನೀಡಬೇಕು ಇದನ್ನು ಬಳಸುವಾಗ?

ಆಲ್ಕೋಹಾಲ್‌ ಕಿರಿಕಿರಿ

ಬಹಳಷ್ಟು ಮೌತ್‌ವಾಷ್‌ಗಳು ಆಲ್ಕೋಹಾಲ್‌ ಅಂಶವನ್ನು ಹೊಂದಿರುತ್ತವೆ. ಇದು ಬಾಯಿ ಒಣಗಿದಂತೆ ಮಾಡಿ, ಕಿರಿಕಿರಿ ಉಂಟುಮಾಡಬಹುದು. ದೀರ್ಘಕಾಲ ಇಂಥ ಮೌತ್‌ವಾಷ್‌ ಬಳಸುವುದರಿಂದ, ಈ ಸಮಸ್ಯೆಗಳು ಹೆಚ್ಚುತ್ತವೆ. ಹಾಗಾಗಿ ಸೂಕ್ಷ್ಮ ಒಸಡುಗಳು ಇರುವವರಿಗೆ ಮತ್ತು ಗರ್ಭಿಣಿಯರಿಗೆ ಆಲ್ಕೋಹಾಲ್‌ ಇಲ್ಲದಂಥ ಮೌತ್‌ವಾಷ್‌ ಬಳಕೆಯನ್ನು ವೈದ್ಯರು ಶಿಫಾರಸು ಮಾಡುತ್ತಾರೆ.

Female with mouthwash

ಸಮಸ್ಯೆ ತಿಳಿಯದು

ಬಾಯಿಯ ದುರ್ಗಂಧದ ಸಮಸ್ಯೆಗಳನ್ನು ಮೌತ್‌ವಾಷ್‌ಗಳು ತಡೆಯುವುದು ಹೌದಾದರೂ ಅದು ತಾತ್ಕಾಲಿಕ. ಬಾಯಿಯ ದುರ್ಗಂಧಕ್ಕೆ ಮೂಲ ಕಾರಣವೇನು ಎಂಬುದನ್ನು ಹುಡುಕಿ, ಅದನ್ನು ಪರಿಹರಿಸಿಕೊಳ್ಳುವುದು ಮುಖ್ಯ. ಹಲ್ಲುಗಳು ಹುಳುಕಾಗಿವೆಯೇ ಅಥವಾ ಜೀರ್ಣಾಂಗಗಳ ಸಮಸ್ಯೆಯಿಂದ ಹೀಗಾಗುತ್ತಿದೆಯೇ- ಅಂತೂ ಕಾರಣವೇನು ಎಂಬುದನ್ನು ಪತ್ತೆ ಮಾಡುವುದು ಅಗತ್ಯ. ಹಾಗಾಗಿ ಸಮಸ್ಯೆಗಳನ್ನು ಮೌತ್‌ವಾಷ್‌ ತಾತ್ಕಾಲಿಕವಾಗಿ ಮಾತ್ರವೇ ನಿವಾರಣೆ ಮಾಡಬಲ್ಲದು.

ಇದನ್ನೂ ಓದಿ: Mint Leaf Water: ಪುದಿನ ಎಲೆಗಳ ನೀರನ್ನು ನಿತ್ಯವೂ ಕುಡಿಯಿರಿ, ಈ ಲಾಭಗಳನ್ನು ಪಡೆಯಿರಿ!

ಬಿಡುವಂತಿಲ್ಲ

ಮೌತ್‌ವಾಷ್‌ಗಳ ಬಳಕೆಯ ನೆವದಿಂದ ನಿತ್ಯದ ಸ್ವಚ್ಛತೆಯ ಅಭ್ಯಾಸಗಳನ್ನು ಬಿಡುವಂತಿಲ್ಲ. ಅಂದರೆ ನಿಯಮಿತವಾಗಿ ಬ್ರಷ್‌ ಮಾಡುವುದು, ಫ್ಲೋಸ್‌ ಮಾಡುವುದು, ಊಟ-ತಿಂಡಿಯ ನಂತರ ಬಾಯಿಗೆ ನೀರು ಹಾಕಿ ಮುಕ್ಕಳಿಸುವುದು- ಇವೆಲ್ಲ ಅಗತ್ಯ ಅಭ್ಯಾಸಗಳು. ಎಂದೋ ಪ್ರಯಾಣದ ಸಂದರ್ಭದಲ್ಲಿ ಬ್ರಷ್‌ ಮಾಡುವುದಕ್ಕೆ ಅನುಕೂಲವಿಲ್ಲ ಎನ್ನುವಾಗ ಮಾತ್ರವೇ ಮೌತ್‌ವಾಷ್‌ ಬಳಕೆಯನ್ನು ಪರ್ಯಾಯ ಆಗಿಸಿಕೊಳ್ಳಬಹುದೇ ಹೊರತು, ಸದಾ ಅಲ್ಲ.

Continue Reading

ಲೈಫ್‌ಸ್ಟೈಲ್

Clay Pot Cooking: ಮಣ್ಣಿನ ಪಾತ್ರೆಗಳಲ್ಲಿ ಅಡುಗೆ ಮಾಡಲು ಬಯಸಿದ್ದೀರಾ? ಹಾಗಿದ್ದರೆ ಇವಿಷ್ಟು ಸಂಗತಿ ನೆನಪಿರಲಿ!

ತಲೆತಲಾಂತರದಿಂದ ಬಳಕೆಯಲ್ಲಿದ್ದ ವಸ್ತುಗಳೂ ಹೊಸ ರೂಪ ತಳೆದು ಮತ್ತೆ ಅಡುಗೆ ಮನೆಯಲ್ಲಿ ಸ್ಥಾನ ಪಡೆಯುತ್ತಿವೆ. ಅಂಥ ಹಳೆಯ ವಸ್ತುಗಳ ಪೈಕಿ ಈಗಲೂ ಬೇಡಿಕೆಯಿರುವ ಅಡುಗೆಮನೆಯ ವಸ್ತುಗಳ ಪೈಕಿ ಮಣ್ಣಿನ ಮಡಕೆಗೆ ಮಹತ್ವದ ಸ್ಥಾನವಿದೆ. ಮಣ್ಣಿನ ಮಡಕೆಗಳು, ಪಾತ್ರೆಗಳಲ್ಲಿ ಅಡುಗೆ ಮಾಡುವ ಪದ್ಧತಿ ಮತ್ತೆ ಜಾಲ್ತಿಯಲ್ಲಿ ಬರುತ್ತಿವೆ. ಟ್ರೆಂಡ್‌ ಆಗುತ್ತಿವೆ. ಬನ್ನಿ, ಮಣ್ಣಿನ ಪಾತ್ರೆಗಳಲ್ಲಿ ಅಡುಗೆ ಮಾಡುವ ಮಂದಿ, ಇಂಡಿಯಲ್‌ ಕೌನ್ಸಿಲ್‌ ಫಾರ್‌ ಮೆಡಿಕಲ್‌ ರೀಸರ್ಚ್‌ ಇತ್ತೀಚೆಗಷ್ಟೇ ಬಿಡುಗಡೆ ಮಾಡಿದ ಮಣ್ಣಿನ ಪಾತ್ರೆಗಳ ಬಗೆಗಿನ ಆರೋಗ್ಯ ಸೂಚಿಗಳನ್ನು (clay pot cooking) ಗಮನಿಸಿ.

VISTARANEWS.COM


on

Clay Pot Cooking
Koo

ಅಡುಗೆ ಮನೆ ಇಂದು ಪ್ರತಿ ಮನೆಯ ಅತ್ಯಂತ ಮುಖ್ಯವಾದ ಕೋಣೆ. ಒಂದು ಕುಟುಂಬಕ್ಕೆ ಅನ್ನ ನೀಡುವ ಕುಟುಂಬ ಕಣ್ಣು ಇದು. ಅಡುಗೆ ಮನೆಯೆಂದರೆ, ಕಪ್ಪಾಗಿ ಮಸಿ ಹಿಡಿದ, ಎಣ್ಣೆಯುಕ್ತ ಕಿಟಕಿ ಬಾಗಿಲುಗಳೆಂಬ, ಬೆಳಕೇ ಇಲ್ಲದ ಕತ್ತಲ ಕೋಣೆಗಳಂತೆ ಕಾಣುವ, ಕೇವಲ ಮನೆಯೊಡತಿ ಮಾತ್ರ ಗಂಟೆಗಟ್ಟಲೆ ಇರುವ ಕೋಣೆಯಾಗಿ ಉಳಿದಿಲ್ಲ. ಸಕಲ ಸೌಲಭ್ಯಗಳಿಂದ, ಹೊಸ ಹೊಸ ತಂತ್ರಜ್ಞಾನಗಳಿಂದ ವಿನ್ಯಾಸಗಳಿಂದ ಮನ ಸೆಳೆಯುತ್ತದೆ. ಸಾಕಷ್ಟು ಗಾಳಿ ಬೆಳಕುಗಳಿರುವ, ಮನೆಯ ಎಲ್ಲರೂ ಸಂತೋಷವಾಗಿ ಜೊತೆಗೇ ಕಾಲ ಕಳೆಯಬಲ್ಲ ಕೋಣೆಯಾಗಿ ಬದಲಾಗುತ್ತಿದೆ. ಹೊಸ ಹೊಸ ಉತ್ಪನ್ನಗಳು ಬರುವ ಜೊತೆಗೇ, ತಲೆತಲಾಂತರದಿಂದ ಬಳಕೆಯಲ್ಲಿದ್ದ ವಸ್ತುಗಳೂ ಹೊಸ ರೂಪ ತಳೆದು ಮತ್ತೆ ಅಡುಗೆ ಮನೆಯಲ್ಲಿ ಸ್ಥಾನ ಪಡೆಯುತ್ತಿವೆ. ಅಂಥ ಹಳೆಯ ವಸ್ತುಗಳ ಪೈಕಿ ಈಗಲೂ ಬೇಡಿಕೆಯಿರುವ ಅಡುಗೆಮನೆಯ ವಸ್ತುಗಳ ಪೈಕಿ ಮಣ್ಣಿನ ಮಡಕೆಗೆ ಮಹತ್ವದ ಸ್ಥಾನವಿದೆ. ಮಣ್ಣಿನ ಮಡಕೆಗಳು, ಪಾತ್ರೆಗಳಲ್ಲಿ ಅಡುಗೆ ಮಾಡುವ ಪದ್ಧತಿ ಮತ್ತೆ ಜಾಲ್ತಿಯಲ್ಲಿ ಬರುತ್ತಿವೆ. ಟ್ರೆಂಡ್‌ ಆಗುತ್ತಿವೆ. ಬನ್ನಿ, ಮಣ್ಣಿನ ಪಾತ್ರೆಗಳಲ್ಲಿ ಅಡುಗೆ ಮಾಡುವ ಮಂದಿ, ಇಂಡಿಯಲ್‌ ಕೌನ್ಸಿಲ್‌ ಫಾರ್‌ ಮೆಡಿಕಲ್‌ ರೀಸರ್ಚ್‌ ಇತ್ತೀಚೆಗಷ್ಟೇ ಬಿಡುಗಡೆ ಮಾಡಿದ ಮಣ್ಣಿನ ಪಾತ್ರೆಗಳ ಬಗೆಗಿನ ಆರೋಗ್ಯ ಸೂಚಿಗಳನ್ನು (clay pot cooking) ಗಮನಿಸಿ.

Clay pot for cooking
  • ಮಣ್ಣಿನ ಪಾತ್ರೆಗಳನ್ನು ಬೇರೆ ಪಾತ್ರೆಗಳ ಜತೆಗೆ ಇಡಬೇಡಿ. ಮಣ್ಣಿನ ಪಾತ್ರೆಗಳಿಗೇ ಪ್ರತ್ಯೇಕ ಜಾಗವನ್ನು ಮಾಡಿ. ಯಾಕೆಂದರೆ ಮಣ್ಣಿನ ಮಡಿಕೆಗಳು ಬೇರೆ ಪಾತ್ರೆಗಳಿಗೆ ತಾಕಿ ಒಡೆಯಲೂಬಹುದು. ಅವುಗಳನ್ನು ಮೇಲಿಂದ ಮೇಲೆಯೂ ಇಡಬೇಡಿ. ಬಹಳ ಜಾಗರೂಕತೆಯಿಂದ ಬಳಸಬೇಕಾದವು ಇವು. ಸಣ್ಣ ಬಿರುಕು ಬಂದರೂ ಪಾತ್ರೆಯಲ್ಲಿ ಅಡುಗೆ ಮಾಡಲು ಸಾಧ್ಯವಾಗದು.
  • ಮಣ್ಣಿನ ಪಾತ್ರೆಗಳಲ್ಲಿ ಅಡುಗೆ ಮಾಡುವ ಸಂದರ್ಭ ಲೋಹದ ಸೌಟುಗಳನ್ನು ಬಳಸಬೇಡಿ. ಮರದ ಸೌಟನ್ನೇ ಬಳಸಿ. ಸ್ಟೀಲ್‌ ಅಥವಾ ಬೇರೆ ಲೋಹದ ಸೌಟು ಮಣ್ಣಿನ ಮಡಕೆಯನ್ನು ಹಾಳು ಮಾಡುವ ಅಪಾಯವಿದೆ. ಹೀಗಾಗಿ ಮರದ ಸೌಟನ್ನೇ ಬಳಸಿ.
  • ಮಡಕೆಗಳನ್ನು ಸ್ವಚ್ಛಗೊಳಿಸಲು ನೀವು ಬೇರೆ ಪಾತ್ರೆಗಳನ್ನು ಸ್ವಚ್ಛಗೊಳಿಸಲು ನಿತ್ಯವೂ ಬಳಸುವ ರಾಸಾಯನಿಕಯುಕ್ತ ಡಿಟರ್ಜೆಂಟ್‌ ಅನ್ನು ಬಳಸಬೇಡಿ. ಲೋಹದ ಸ್ಕ್ರಬರ್‌ ಅನ್ನೂ ಬಳಸಬೇಡಿ. ತೆಂಗಿನಕಾಯಿಯ ಜುಟ್ಟಿನಿಂದ ಮಾಡಿದ ನೈಸರ್ಗಿಕ ಸ್ಕ್ರಬರ್‌ ಅನ್ನು ಬಳಸಬಹುದು. ಅಥವಾ ಬೇಕಿಂಗ್‌ ಸೋಡಾ ಹಾಗೂ ಉಪ್ಪನ್ನು ಹಾಕಿ ಪಾತ್ರೆಯನ್ನು ಕ್ಲೀನ್‌ ಮಾಡಬಹುದು.
  • ಮಡಕೆಗಳನ್ನು ಸದಾ ತೊಳೆದ ಮೇಳೆ ಆರಲು ಬಿಟ್ಟು ಒಣಗಿದ ಮೇಲೆಯೇ ಒಳಗಿಡಿ. ಒದ್ದೆಯಾಗಿ ಬಿಡಬೇಡಿ. ಅಡುಗೆ ಮಾಡುವಾಗಲೂ ಒಣಗಿದ ಮಡಕೆಗಳನ್ನೇ ಬಳಸಿ. ಇದರಿಂದ ಮಡಕೆ ಹಾಳಾಗುವ ಅಪಾಯವಿದೆ.
  • ಮಣ್ಣಿನ ಮಡಕೆಗಳಲ್ಲಿ ಸಿಟ್ರಿಕ್‌ ಆಸಿಡ್‌ ಇರುವ ವಸ್ತುಗಳನ್ನು, ಆಹಾರಗಳನ್ನು ಇಡಬೇಡಿ. ನಿಂಬೆಹಣ್ಣಿನ ಜ್ಯೂಸ್‌, ನಿಂಬೆಹಣ್ಣು ಹಾಕಿ ಮಾಡಿದ ಆಹಾರಗಳು, ಅಥವಾ ಸಿಟ್ರಸ್‌ ಹಣ್ಣುಗಳ ಜ್ಯೂಸ್‌ ಇತ್ಯಾದಿಗಳಿಗೆ ಮಣ್ಣಿನ ಮಡಕೆ ಬಳಸಬೇಡಿ. ಅಂಥವುಗಳಿಗೆ ಗಾಜು, ಅಥವಾ ಸ್ಟೀಲ್‌ ಪಾತ್ರೆಗಳು ಉತ್ತಮ. ಇವುಗಳಲ್ಲಿರು ಆಮ್ಲೀಯತೆ ಮಣ್ಣಿನ ಜೊತೆಗೆ ವರ್ತಿಸುವ ಅಪಾಯವಿರುವುದರಿಂದ ಈ ವಿಚಾರದಲ್ಲಿ ಎಚ್ಚರಿಕೆ ವಹಿಸಿ.

ಇದನ್ನೂ ಓದಿ: Toothpaste Hacks: ಟೂತ್‌ಪೇಸ್ಟ್‌ನಿಂದ ಯಾವೆಲ್ಲ ವಸ್ತುಗಳನ್ನು ಹೊಳೆಯುವಂತೆ ಮಾಡಬಹುದು ನೋಡಿ!

Continue Reading
Advertisement
Vijayapura news
ಪ್ರಮುಖ ಸುದ್ದಿ3 hours ago

Vijayapura News : ಪ್ರೀತಿಸಿದವಳನ್ನೇ ಮದುವೆಯಾಗಲು ಯುವಕನ ಹಠ; ಪರಸ್ಪರ ಪೆಟ್ರೋಲ್ ಎರಚಿ ಬೆಂಕಿ ಹಚ್ಚಿಕೊಂಡು ಆಸ್ಪತ್ರೆ ಸೇರಿದರು!

Prajwal Revanna Case
ಪ್ರಮುಖ ಸುದ್ದಿ3 hours ago

Prajwal Revanna Case : ಮಾಜಿ ಶಾಸಕ ಪ್ರೀತಂ ಗೌಡ ಆಪ್ತ ಚೇತನ್​ಗೆ ಎಸ್ಐಟಿ ನೋಟಿಸ್

Yuvraj Singh
ಕ್ರೀಡೆ4 hours ago

Yuvraj Singh : ಅಪಾರ್ಟ್​ಮೆಂಟ್ ವಿತರಣೆಯಲ್ಲಿ ಮೋಸ, ರಿಯಲ್ ಎಸ್ಟೇಟ್ ಸಂಸ್ಥೆಗಳಿಗೆ ನೋಟಿಸ್​ ಕೊಟ್ಟ ಯುವರಾಜ್ ಸಿಂಗ್

Kavya Maran
ಪ್ರಮುಖ ಸುದ್ದಿ4 hours ago

Kavya Maran : ಸೋತಾಗ ಕಣ್ಣೀರು ಹಾಕಿದ ಕಾವ್ಯಾ ಮಾರನ್​, ​ ಡ್ರೆಸಿಂಗ್​ ರೂಮ್​ಗೆ ತೆರಳಿ ಆಟಗಾರರನ್ನೇ ನಗಿಸಿದರು; ಇಲ್ಲಿದೆ ವಿಡಿಯೊ

Viral Video
ದೇಶ4 hours ago

Viral Video: ಬೆಂಗಳೂರಿನಲ್ಲಷ್ಟೇ ಅಲ್ಲ, ಮೌಂಟ್ ಎವರೆಸ್ಟ್ ನಲ್ಲೂ ಈಗ ಟ್ರಾಫಿಕ್ ಜಾಮ್!!

Samsung Galaxy F55 5G Smartphone Released With Exciting Classy Veegan Leather Design
ದೇಶ4 hours ago

Samsung Galaxy: ಸ್ಯಾಮ್‌ಸಂಗ್‌ ಗ್ಯಾಲಕ್ಸಿ ಎಫ್ 55 5ಜಿ ಸ್ಮಾರ್ಟ್‌ಫೋನ್ ರಿಲೀಸ್‌; ಏನಿದರ ವಿಶೇಷತೆ?

Kannada New Movie
ಕರ್ನಾಟಕ4 hours ago

Kannada New Movie: ʼಬ್ಯಾಂಕ್ ಆಫ್‌ ಭಾಗ್ಯಲಕ್ಷ್ಮಿʼ ಚಿತ್ರದ ಅನಿಮೇಷನ್‌ ಟೀಸರ್‌ ರಿಲೀಸ್‌

Golden Star Ganesh Krishnam Pranaya Sakhi movie first song release in Mysore
ಕರ್ನಾಟಕ4 hours ago

Golden Star Ganesh: ಮೊದಲ ಹಾಡಿನಲ್ಲೇ ಮೋಡಿ ಮಾಡಿದ ʼಕೃಷ್ಣಂ ಪ್ರಣಯ ಸಖಿʼ

Mandya News
ಪ್ರಮುಖ ಸುದ್ದಿ5 hours ago

Mandya News : ಬೆಳ್ಳೂರಿನಲ್ಲಿ ಮುಸ್ಲಿಮ್ ಯುವಕರ ಗುಂಪಿನಿಂದ ಅಭಿಲಾಷ್​ ಎಂಬುವರ ಮೇಲೆ ಮಾರಕ ಹಲ್ಲೆ

11th Annual Mahotsav of Sri Annapurneswari Temple in Belagavi from 29th May
ಬೆಳಗಾವಿ5 hours ago

Belagavi News: ಬೆಳಗಾವಿಯಲ್ಲಿ ಮೇ 29ರಿಂದ ಶ್ರೀ ಅನ್ನಪೂರ್ಣೇಶ್ವರಿ ದೇವಸ್ಥಾನದ 11ನೇ ವಾರ್ಷಿಕ ಮಹೋತ್ಸವ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Weather Forecast
ಮಳೆ9 hours ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ1 day ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು1 day ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

Karnataka Rain
ಮಳೆ2 days ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ5 days ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

Karnataka Weather Forecast
ಮಳೆ6 days ago

Karnataka Weather : ಮುಂದುವರಿಯಲಿದೆ ವರುಣಾರ್ಭಟ; ಬೆಂಗಳೂರಲ್ಲೂ ಭಾರಿ ಮಳೆ ನಿರೀಕ್ಷೆ!

Karnataka Rain
ಮಳೆ6 days ago

Karnataka Rain : ಭಾರಿ ಮಳೆಗೆ ಕರೆಂಟ್‌ ಕಟ್‌, ಕತ್ತಲಲ್ಲೇ ರೋಗಿಗಳಿಗೆ ಟ್ರೀಟ್‌ಮೆಂಟ್‌; ಮರ ಬಿದ್ದರೂ ಪಾರಾದ ತಾಯಿ-ಮಗ

Love Case Father throws hot water on man who loved his daughter for coming home
ಕೊಡಗು7 days ago

Love Case : ಮನೆಗೆ ಬಂದ ಪ್ರೇಮಿಗೆ ಕೊತ ಕೊತ ಕುದಿಯುವ ನೀರು ಎರಚಿದ ಯುವತಿ ತಂದೆ!

Contaminated Water
ಮೈಸೂರು7 days ago

Contaminated Water : ಡಿ ಸಾಲುಂಡಿಯಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದ ಯುವಕ ಸಾವು

Karnataka Rain
ಮಳೆ1 week ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

ಟ್ರೆಂಡಿಂಗ್‌