Winter Tips |ಚಳಿಗಾಲದಲ್ಲಿ ಮೊಸರು ಮಾಡುವುದು ಕಷ್ಟವೇ? ಇಲ್ಲಿವೆ ಸಪ್ತಸೂತ್ರಗಳು! - Vistara News

ಆರೋಗ್ಯ

Winter Tips |ಚಳಿಗಾಲದಲ್ಲಿ ಮೊಸರು ಮಾಡುವುದು ಕಷ್ಟವೇ? ಇಲ್ಲಿವೆ ಸಪ್ತಸೂತ್ರಗಳು!

ಚಳಿಗಾಲ ಬರುತ್ತಿದ್ದ (Winter Tips) ಹಾಗೆ ಮೊಸರು ಮಾಡಿಕೊಳ್ಳುವುದು ಬಹಳ ಕಷ್ಟ ಎನ್ನುವರಿಗೆ ಇಲ್ಲಿದೆ ಟಿಪ್ಸ್‌!

VISTARANEWS.COM


on

winter tips
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು: ಭಾರತೀಯರಿಗೆ ಮೊಸರಿಲ್ಲದೆ ಊಟವಿಲ್ಲ. ಏನೇ ಅಡುಗೆಯಿದ್ದರೂ ಪಕ್ಕದಲ್ಲೊಂದು ಕಪ್‌ನಲ್ಲಿ ಮೊಸರು ಇರಲೇಬೇಕು. ಮೊಸರು, ಊಟದ ಜೊತೆಗೊಂದು ತಾಜಾತನದ ಅನುಭೂತಿಯನ್ನು, ಒಂದು ಸಂತೃಪ್ತ ಭಾವನೆಯನ್ನೂ, ಊಟಕ್ಕೆ ಇನ್ನಷ್ಟು ರುಚಿಯನ್ನೂ ಕೊಡುವದರಲ್ಲಿ ಯಾವ ಅನುಮಾನವೂ ಇಲ್ಲ. ಜೊತೆಗೆ, ದೇಹಕ್ಕೆ ಅಗತ್ಯ ಬೇಕಾಗುವ ಕ್ಯಾಲ್ಶಿಯಂ ಸೇರಿದಂತೆ ಇತರ ಪೋಷಕಾಂಶಗಳನ್ನೂ ನೀಡುವುದರಲ್ಲಿ ಎತ್ತಿದ ಕೈ. ಊಟದ ಜೊತೆಗೆ ಖಾಲಿ ಮೊಸರು ಸೇವಿಸುವುದಷ್ಟೇ ಅಲ್ಲ, ದಿನನಿತ್ಯ ಮೊಸರಿನಿಂದ ಲಸ್ಸಿ, ಮಜ್ಜಿಗೆ, ಸ್ಮೂದಿಗಳು, ರೈತಾ, ಕಡಿ, ಹುಳಿ ಹೀಗೆ ಅನೇಕ ಬಗೆಯ ಅಡುಗೆಗಳನ್ನೂ ತಯಾರಿಸಿ ಉಣ್ಣುತ್ತೇವೆ. ಮೊಸರೂ ಹಾಲಿನಂತೆ ಪ್ಯಾಕ್‌ ಆಗಿ ಬಂದರೂ ಮನೆಯಲ್ಲೇ ಮೊಸರು ಮಾಡಿಕೊಳ್ಳುವುದು ಯಾವಾಗಲೂ ಆರೋಗ್ಯಕರ. ಆದರೆ, ಬಹಳಷ್ಟು ಮಂದಿಗೆ ಚಳಿಗಾಲ ಬರುತ್ತಿದ್ದ (Winter Tips) ಹಾಗೆ ಇಂಥದ್ದೊಂದು ಸಮಸ್ಯೆ ಶುರುವಾಗುತ್ತದೆ.

ಮನೆಯಲ್ಲಿ ಹಾಲಿಗೆ ಹೆಪ್ಪು ಹಾಕಿಟ್ಟರೂ ಮೊಸರು ಸಿದ್ಧವಾಗುವುದಿಲ್ಲ ಎಂಬುದು ಹಲವರ ದೂರು. ಚಳಿಗಾಲದಲ್ಲಿ ವಾತಾವರಣದ ಉಷ್ಣತೆ ಕಡಿಮೆಯಾಗುವುದರಿಂದ ತೇವಾಂಶವೂ ಕಡಿಮೆಯಾಗುತ್ತದೆ. ಆಗ ಮೊಸರಾಗಲು ಅಗತ್ಯ ಬೇಕಾಗುವ ಬ್ಯಾಕ್ಟೀರಿಯಾಗಳ ಬೆಳವಣಿಗೆಯೂ ಕಡಿಮೆಯಾಗುವುದರಿಂದ ಸಹಜವಾಗಿಯೇ ಹಾಲು ಮೊಸರಾಗಲು ಸಮಯ ಹೆಚ್ಚು ಬೇಕಾಗುತ್ತದೆ. ಅಥವಾ ಸರಿಯಾಗಿ ಆಗುವುದಿಲ್ಲ. ಈ ಬಗ್ಗೆ ಮನೆಯಲ್ಲಿ ತಾವೇ ಸಾಕಷ್ಟು ಅನ್ವೇಷಣೆ, ಸಂಶೋಧನೆ, ಪ್ರಯೋಗಗಳನ್ನು ಮಾಡಿಕೊಂಡು ನೋಡಿದರೂ, ಅಂತಹ ದೊಡ್ಡ ಪ್ರಯೋಜನ ಕಾಣದೆ, ಚಳಿಗಾಲವನ್ನು ಶಪಿಸುತ್ತಾ, ಅಂಗಡಿಯಿಂದ ಮೊಸರು ಕೊಳ್ಳಬೇಕಾಗುತ್ತದೆ. ಇಂತಹ ಅನುಭವ ನಿಮ್ಮದಾಗಿದ್ದರೆ, ಚಳಿಗಾಲದಲ್ಲಿ ಅಂಗಡಿಯ ಮೊಸರೇ ಗತಿ ಎಂದು ಬೇಸರ ಪಟ್ಟುಕೊಳ್ಳಬೇಕಾಗಿಲ್ಲ. ಇದಕ್ಕೆ ಸಾಕಷ್ಟು ಸರಳೋಪಾಯಗಳೂ ಇವೆ. ಅವುಗಳ ಬಗೆಗಿನ ಮಾಹಿತಿಗಳು ಇಲ್ಲಿವೆ.

ಇದನ್ನೂ ಓದಿ | Eye Care | ಕಣ್ಣುಗಳ ಆರೋಗ್ಯದ ಕುರಿತು ವಿಶೇಷ ಕಾಳಜಿ ಹೀಗಿರಲಿ

Winter Tips

ಬಿಸಿ ಹಾಲನ್ನು ಬಳಸಿ
ಹಾಲಿಗೆ ಹೆಪ್ಪು ಹಾಕುವ ಮೊದಲು ಹಾಲನ್ನು ಸ್ವಲ್ಪ ಬಿಸಿ ಮಾಡಿ. ಬೇಸಿಗೆಯಲ್ಲಿ ಉಗುರು ಬೆಚ್ಚಗಿನ ಹಾಲು ಸಾಕಾಗುತ್ತದೆ. ಆದರೆ, ಚಳಿಗಾಲದಲ್ಲಿ ಸ್ವಲ್ಪ ಹೆಚ್ಚೇ ಬೇಕಾಗುತ್ತದೆ ಎಂಬುದನ್ನು ನೆನಪಿಡಿ. ಆದರೆ, ತೀರಾ ಕುದಿಯುವ ಮಟ್ಟದ ಬಿಸಿಯೂ ಮಾಡಬೇಡಿ.

ಕ್ಯಾಸೆರೋಲ್‌ ಬಳಸಿ
ಬೇಸಿಗೆಯಲ್ಲಿ ಸ್ಟೀಲ್‌, ಗಾಜು, ಪಿಂಗಾಣಿ ಅಥವಾ ಯಾವುದೇ ಬಗೆಯ ಪಾತ್ರೆಯಲ್ಲಿ ಮೊಸರು ಮಾಡಲು ಹೆಪ್ಪು ಹಾಕಿದರೆ ನಡೆಯುತ್ತದೆ. ಆದರೆ, ಚಳಿಗಾಲದಲ್ಲಿ ಕ್ಯಾಸೆರೋಲ್‌ ಬಳಸಿ. ಇದರಲ್ಲಿ ನಿಮಗೆ ಸುಲಭವಾಗಿ ಈ ಸಮಸ್ಯೆಗೆ ಪರಿಹಾರ ಕಾಣುತ್ತದೆ. ಈ ಪಾತ್ರೆ ಬೆಚ್ಚಗೇ ಇಡುವುದರಿಂದ ಇದರಲ್ಲಿ ಮೊಸರು ಸುಲಭವಾಗಿ ಆಗುತ್ತದೆ.

ಹೆಚ್ಚು ಹೆಪ್ಪು ಹಾಕಿ
ಚಳಿಗಾಲದಲ್ಲಿ ಹಾಲಿಗೆ ಹಾಕುವ ಹೆಪ್ಪು ಬೇಸಗೆಯ ಪ್ರಮಾಣಕ್ಕಿಂತ ಹೆಚ್ಚಿರಲಿ. ಉದಾಹರನೆಗೆ ಬೇಸಿಗೆಯಲ್ಲಿ ಒಂದು ಚಮಚ ಹೆಪ್ಪು ಹಾಕಿದರೆ, ಚಳಿಗಾಲದಲ್ಲಿ ಅದೇ ಅಳತೆಯ ಹಾಲಿಗೆ ಎರಡು ಚಮಚ ಹೆಪ್ಪು ಹಾಕಿ.

ಮೈಕ್ರೋವೇವ್‌ ಒಳಗಿಡಿ
ಹಾಲಿಗೆ ಹೆಪ್ಪು ಹಾಕಿದ ಮೇಲೆ ಆ ಪಾತ್ರೆಯನ್ನು ಮುಚ್ಚಿದ ಪ್ರದೇಶದೊಳಗಿಡಿ. ಉದಾಹರಣೆಗೆ ಮೈಕ್ರೋವೇವ್‌ ಅವನ್‌ ಒಳಗೆ ಇಟ್ಟು ಬಾಗಿಲು ಮುಚ್ಚಬಹುದು. ಅದು ಅಲ್ಲಾಡದೆ ಹಾಗೆಯೇ ಅಲ್ಲಿರಲಿ.

Winter Tips

ಬೆಚ್ಚಗಿನ ಬಟ್ಟೆಯಲ್ಲಿ ಸುತ್ತಿಡಿ
ಇನ್ನೊಂದು ಬಹಳ ಇಂಟರೆಸ್ಟಿಂಗ್‌ ಐಡಿಯಾ ಎಂದರೆ ಹಾಲಿಗೆ ಹೆಪ್ಪು ಹಾಕಿದ ಮೇಲೆ ಆ ಪಾತ್ರೆಯನ್ನು ಒಂದು ಬೆಚ್ಚಗಿನ ಬಟ್ಟೆಯಲ್ಲಿ ಸುತ್ತಿಡಿ. ನಿಮ್ಮ ಹಳೆಯ ಸ್ವೆಟರ್‌ ಕೂಡಾ ಸರಿಯೇ. ಇದು ತಣ್ಣಗಿನ ಗಾಳಿ ಅದನ್ನು ಸ್ಪರ್ಶಿಸದಂತೆ ತಡೆದು, ಮೊಸರಾಗುವ ಕೆಲಸಕ್ಕೆ ಸಹಾಯ ಮಾಡುತ್ತದೆ.

ಬೆಳಗ್ಗೆ ಮಾಡಿ
ರಾತ್ರಿಯ ಸಮಯ ಹೆಚ್ಚು ಚಳಿ ಇರುವುದರಿಂದ, ರಾತ್ರಿ ಮಲಗುವ ಮೊದಲು ಹೆಪ್ಪು ಹಾಕಿಡುವ ಅಭ್ಯಾಸವನ್ನು ಬೆಳಗ್ಗೆ ಮಾಡಿ. ಬೆಳಗಿನ ಗೊತ್ತು ರಾತ್ರಿಗಿಂತ ಉಷ್ಣತೆ ಹೆಚ್ಚಿರುತ್ತದೆ.

ಬಿಸಿ ನೀರು ಹಾಕಿಡಿ
ಒಂದು ದೊಡ್ಡ ಕ್ಯಾಸೆರೋಲ್‌ ಒಳಗೆ ಬಿಸಿ ನೀರು ಹಾಕಿ, ಅದರೊಳಗೆ ಹೆಪ್ಪು ಹಾಕಿದ ಪಾತ್ರೆಯನ್ನಿಟ್ಟು ಮುಚ್ಚಳ ಮುಚ್ಚಿ. ಕ್ಯಾಸರೋಲ್‌ ಒಳಗಿನ ನೀರು ಬೆಚ್ಚಗೇ ಉಳಿಯುವುದರಿಂದ ಇದು ಇನ್ನೊಂದು ಪಾತ್ರೆಯನ್ನೂ ಬೆಚ್ಚಗಿಟ್ಟಿರುತ್ತದೆ ಹಾಗೂ ಮೊಸರಾಗುವಂತೆ ಮಾಡುತ್ತದೆ.

ಇದನ್ನೂ ಓದಿ | 108 ambulance | ಚಾಲಕರಿಗೆ ಸಿಗದ 3 ತಿಂಗಳ ಸಂಬಳ; ಜಿವಿಕೆಗೆ ಕೊನೇ ಡೆಡ್‌ಲೈನ್ ನೀಡಿದ ಆರೋಗ್ಯ ಇಲಾಖೆ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಚಿಕ್ಕಮಗಳೂರು

Dengue Fever : ಡೆಂಗ್ಯೂ ಮಹಾಮಾರಿಗೆ ಚಿಕ್ಕಮಗಳೂರಿನಲ್ಲಿ ಬಾಲಕಿ ಬಲಿ; ಈವರೆಗೆ ಐವರು ಸಾವು

Dengue Fever : ಪ್ರಸಕ್ತ ವರ್ಷ ರಾಜ್ಯದಲ್ಲಿ ಡೆಂಗ್ಯೂ ಜ್ವರಕ್ಕೆ ಐವರು ಬಲಿಯಾಗಿದ್ದಾರೆ. ಚಿಕ್ಕಮಗಳೂರಿನಲ್ಲಿ ಬಾಲಕಿಯೊಬ್ಬಳು ಮಹಾಮಾರಿಗೆ ಪ್ರಾಣವನ್ನೇ ಕಳೆದುಕೊಂಡಿದ್ದಾಳೆ.

VISTARANEWS.COM


on

By

Dengue Fever
Koo

ಚಿಕ್ಕಮಗಳೂರು: ಚಿಕ್ಕಮಗಳೂರಿನಲ್ಲಿ ಡೆಂಗ್ಯೂ ಮಹಾಮಾರಿಗೆ (Dengue Fever) ಬಾಲಕಿಯೊಬ್ಬಳು ಮೃತಪಟ್ಟಿದ್ದಾಳೆ. ಸಾನಿಯಾ (6) ಮೃತ ದುರ್ದೈವಿ. ಚಿಕ್ಕಮಗಳೂರಿನ ಕಡೂರು ತಾಲೂಕಿನ ಸಖರಾಯಪಟ್ಟಣದಲ್ಲಿ ಘಟನೆ ನಡೆದಿದೆ.

ಡೆಂಗ್ಯೂ ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಸಾನಿಯಾಳನ್ನು ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಬಾಲಕಿ ಮೃತಪಟ್ಟಿದ್ದಾಳೆ. ರಾಜ್ಯ ಸರ್ಕಾರದ ವಿರುದ್ಧ ಮೃತ ಬಾಲಕಿ ತಂದೆ ಆಸಿಫ್‌ ಬೇಸರ ವ್ಯಕ್ತಪಡಿಸಿದ್ದಾರೆ. ನನಗೆ ಯಾವುದೇ ಸಹಾಯ ಬೇಡ, ಸರ್ಕಾರಿ ಆಸ್ಪತ್ರೆ ಅಭಿವೃದ್ಧಿ ಮಾಡಿ ಎಂದು ಸರ್ಕಾರಕ್ಕೆ ಮನವಿ ಮಾಡಿದ್ದಾರೆ. ಡೆಂಗ್ಯೂ ಕಾಯಿಲೆಗೆ ಸರ್ಕಾರಿ ಆಸ್ಪತ್ರೆಗಳಲ್ಲಿ ಸೂಕ್ತ ಚಿಕಿತ್ಸ ಸಿಗುತ್ತಿಲ್ಲ. ಸರಕಾರಿ ಆಸ್ಪತ್ರೆಯಲ್ಲಿ ಬಡವರಿಗೆ ಹೆಚ್ಚಿನ ಸೌಲಭ್ಯ ಸಿಗಬೇಕು. ನನ್ನ ಮಗಳಿಗಾದ ಸ್ಥಿತಿ ಯಾರಿಗೂ ಆಗುವುದು ಬೇಡ ಎಂದು ಸರ್ಕಾರಿ ಆಸ್ಪತ್ರೆಗಳ ನಿರ್ಲಕ್ಷಕ್ಕೆ ಹಾಗೂ ಸರ್ಕಾರಕ್ಕೆ ಛೀಮಾರಿ ಹಾಕಿದರು.

4 ಸಾವಿರ ಗಡಿ ದಾಟಿದ ಡೆಂಗ್ಯೂ; ಐವರು ಸಾವು

ಹವಾಮಾನ ವೈಪರೀತ್ಯ ಮತ್ತು ಮಳೆಯಿಂದಾಗಿ ಡೆಂಗ್ಯೂ ಪ್ರಕರಣಗಳ ಸಂಖ್ಯೆ ಹೆಚ್ಚಳವಾಗುತ್ತಿರುವುದು ಆತಂಕ ಮೂಡಿಸಿದೆ. 2024ರಲ್ಲಿ ಈ ವರೆಗೆ (ಜೂನ್‌) 93,012 ಶಂಕಿತವಾಗಿದ್ದು, ಇದರಲ್ಲಿ 40,918 ಮಂದಿಯ ರಕ್ತ ಮಾದರಿಯನ್ನು ಸಂಗ್ರಹಿಸಲಾಗಿತ್ತು. ಆ ಪ್ರಕಾರ 4364 ಮಂದಿಗೆ ಡೆಂಗ್ಯೂ ಜ್ವರ ದೃಢಪಟ್ಟಿದೆ. ಡೆಂಗ್ಯೂ ಜ್ವರಕ್ಕೆ ಚಿಕಿತ್ಸೆ ಫಲಿಸದೇ ಐವರು ಮೃತಪಟ್ಟಿದ್ದಾರೆ. ಶಿವಮೊಗ್ಗ, ಬಾಗಲಕೋಟೆ, ಗದಗದಲ್ಲಿ ತಲಾ ಒಬ್ಬರು ಹಾಗೂ ಹಾಸನದಲ್ಲಿ ಇಬ್ಬರು ಮೃತಪಟ್ಟಿದ್ದಾರೆ.

ಇದನ್ನೂ ಓದಿ: Dengue Prevention: ರಾಜ್ಯದಲ್ಲಿ 6000ಕ್ಕೂ ಡೆಂಗ್ಯೂ ಪ್ರಕರಣ; ಇದರಿಂದ ಪಾರಾಗಲು ಹೀಗೆ ಮಾಡಿ

ಡೆತ್‌ ಆಡಿಟಿಂಗ್‌ಗೆ ಮುಂದಾದ ಬಿಬಿಎಂಪಿ

ರಾಜ್ಯ ರಾಜಧಾನಿಯಲ್ಲಿ ಡೆಂಗ್ಯೂ ಪ್ರಕರಣಗಳು ವಿಪರೀತ ಏರಿಕೆ ಆಗಿವೆ. ಬೆಂಗಳೂರಲ್ಲಿ ಜನವರಿಯಿಂದ ಈವರೆಗೆ 1,385 ಮಂದಿಗೆ ಡೆಂಗ್ಯೂ ಜ್ವರ ಕಂಡು ಬಂದಿದೆ. ಈವರೆಗೆ ಡೆಂಗ್ಯೂನಿಂದ ಮೃತಪಟ್ಟ ವರದಿ ಆಗಿಲ್ಲ. ಆದರೆ ಇಬ್ಬರು ಡೆಂಗ್ಯೂ ಜ್ವರದಿಂದ ಮೃತಪಟ್ಟಿರುವ ಶಂಕೆ ಇದ್ದು, ಸಾವಿಗೆ ಕಾರಣ ತಿಳಿಯುವ ಸಲುವಾಗಿ ಡೆತ್ ಆಡಿಟ್‌ಗೆ ಬಿಬಿಎಂಪಿ ಮುಂದಾಗಿದೆ.

ಇನ್ನೂ 3,470 ಲಾರ್ವಾ ಉತ್ಪತ್ತಿ ತಾಣ ಪತ್ತೆಯಾಗಿದ್ದು, ಇದರಲ್ಲಿ 2,004 ತಾಣಗಳ ನಾಶ ಮಾಡಲಾಗಿದೆ ಎಂದು ಬಿಬಿಎಂಪಿ ಆರೋಗ್ಯ ವಿಭಾಗ ಮಾಹಿತಿ ನೀಡಿದೆ. ಪಾಲಿಕೆಯ ಆರೋಗ್ಯ ಸಿಬ್ಬಂದಿ ನಿನ್ನೆವರೆಗೂ 17,877 ಮನೆಗಳ ಸಮೀಕ್ಷೆ ನಡೆಸಿದ್ದಾರೆ. ಆಡಿಟ್ ಬಳಿಕ ವರದಿಯನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗೆ ರವಾನೆ ಮಾಡಲಾಗುತ್ತದೆ.

ಡೆಂಗ್ಯೂ ಹೇಗೆ ಹರಡುತ್ತದೆ?

ಡೆಂಗ್ಯೂ ಜ್ವರ ಸೊಳ್ಳೆಯಿಂದ ಹರಡುವ ವೈರಲ್ ಸೋಂಕು ಆಗಿದೆ. ಇದು ಈಡಿಪಸ್‌ ಎಂಬ ಹೆಣ್ಣು ಸೊಳ್ಳೆಗಳ ಕಡಿತದಿಂದ ಹರಡುತ್ತದೆ. ಸೊಳ್ಳೆ ಕಚ್ಚಿದ 4-7 ದಿನಗಳ ನಂತರ ರೋಗ ಲಕ್ಷಣಗಳು ಸಾಮಾನ್ಯವಾಗಿ ಕಂಡು ಬರುತ್ತವೆ. ಇದರ ಪ್ರಭಾವ 10 ದಿನಗಳವರೆಗೆ ಇರುತ್ತದೆ. ಹೀಗಾಗಿ ಮನೆಯ ಸುತ್ತಮುತ್ತ ನೀರು ನಿಲ್ಲದಂತೆ ನೋಡಿಕೊಳ್ಳುವುದು, ಸ್ವಚ್ಛತೆಗೆ ಆದ್ಯತೆ ನೀಡುವುದು ಉತ್ತಮವಾಗಿದೆ.

ಡೆಂಗ್ಯೂ ಜ್ವರ ತಲೆನೋವಿನಂತಹ ರೋಗಲಕ್ಷಣಗಳನ್ನು ಉಂಟು ಮಾಡಬಹುದು. ಡೆಂಗ್ಯೂವನ್ನು ಹೆಮರಾಜಿಕ್ ಜ್ವರ ಎಂದೂ ಕರೆಯಲಾಗುತ್ತದೆ. ಡೆಂಗ್ಯೂ ಜ್ವರದ ತೀವ್ರ ಸ್ವರೂಪವು ತೀವ್ರ ರಕ್ತಸ್ರಾವ, ರಕ್ತದೊತ್ತಡ ಹಾಗೂ ರಕ್ತಕಣಗಳ ಸಂಖ್ಯೆಯಲ್ಲಿ ಭಾರಿ ಕುಸಿತವಾಗಿ ವ್ಯಕ್ತಿಯ ಸಾವಿಗೂ ಕಾರಣವಾಗಬಹುದು. ಅಧಿಕ ಜ್ವರ, ತೀವ್ರ ತಲೆನೋವು, ವಾಂತಿ, ದೇಹದ ವಿವಿಧ ಭಾಗಗಳಲ್ಲಿ ದದ್ದುಗಳು, ಗ್ರಂಥಿಗಳಲ್ಲಿ ಊತ, ಮೂಳೆ ಮತ್ತು ಕೀಲು ನೋವು, ರಕ್ತಸ್ರಾವವಾಗವುದು ರೋಗ ಲಕ್ಷಣಗಳಾಗಿವೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಆರೋಗ್ಯ

Orange Peel Benefits: ಕಿತ್ತಳೆ ಸಿಪ್ಪೆ ಎಸೆಯಬೇಡಿ; ಹೃದಯದ ಆರೋಗ್ಯಕ್ಕೆ ಇದು ಒಳ್ಳೆಯದು!

Orange Peel Benefits: ಸಿಪ್ಪೆ ಸುಲಿದು ರಸಭರಿತ ಕಿತ್ತಳೆಯನ್ನು ಬಾಯಿಗಿಟ್ಟರೆ, ಅಥವಾ ಜ್ಯೂಸ್‌ ಕುಡಿದರೆ, ಎಂಥಾ ಸೆಖೆಯಲ್ಲೂ ತಂಪಿನ, ಎಂಥಾ ಬಾಯಾರಿಕೆಯ ಸುಸ್ತಿನಲ್ಲೂ ಉಲ್ಲಾಸವನ್ನೂ ಶಕ್ತಿಯನ್ನೂ ಮತ್ತೆ ಜಿನುಗಿಸುವ ಶಕ್ತಿ ಇದೆ. ಆದರೆ, ಘಮಘಮಿಸುವ ಕಿತ್ತಳೆಯ ಸಿಪ್ಪೆಯನ್ನು ಮಾತ್ರ ನಾವು ಯಾವುದೇ ಯೋಚನೆ ಮಾಡದೆ ಎಸೆದು ಬಿಡುತ್ತೇವೆ. ನೀವು ವೇಸ್ಟ್‌ ಎಂದುಕೊಳ್ಳುವ ಈ ಸಿಪ್ಪೆಯಲ್ಲೂ ಬೇಕಾದಷ್ಟು ವಿಟಮಿನ್‌ ಸಿ, ನಾರಿನಂಶ ಹಾಗೂ ಪಾಲಿ ಫಿನಾಳ್‌ಗಳು ಇವೆ ಎಂದರೆ ನಂಬುತ್ತೀರಾ?

VISTARANEWS.COM


on

Orange Peel Benefits
Koo

ಕಿತ್ತಳೆ ಹಣ್ಣು ಹುಳಿಯನ್ನೂ ಸಿಹಿಯನ್ನೂ ಸಮಪ್ರಮಾಣದಲ್ಲಿ ಹೊಂದಿರುವ ದೇಹಕ್ಕೆ ಒಳ್ಳೆಯದನ್ನೇ ಬಯಸುವ ಹಣ್ಣು. ಇದರ ಘಮಕ್ಕೆ ಎಂಥ ಸಮಯದಲ್ಲೂ ನಮ್ಮನ್ನು ಬಡಿದೆಚ್ಚರಿಸುವ, ಉಲ್ಲಾಸವನ್ನು ತರುವ ಗುಣವಿದೆ. ಸಿಪ್ಪೆ ಸುಲಿದು ರಸಭರಿತ ಕಿತ್ತಳೆಯನ್ನು ಬಾಯಿಗಿಟ್ಟರೆ, ಅಥವಾ ಜ್ಯೂಸ್‌ ಕುಡಿದರೆ, ಎಂಥಾ ಸೆಖೆಯಲ್ಲೂ ತಂಪಿನ, ಎಂಥಾ ಬಾಯಾರಿಕೆಯ ಸುಸ್ತಿನಲ್ಲೂ ಉಲ್ಲಾಸವನ್ನೂ ಶಕ್ತಿಯನ್ನೂ ಮತ್ತೆ ಜಿನುಗಿಸುವ ಶಕ್ತಿ ಇದೆ. ಆದರೆ, ಘಮಘಮಿಸುವ ಕಿತ್ತಳೆಯ ಸಿಪ್ಪೆಯನ್ನು ಮಾತ್ರ ನಾವು ಯಾವುದೇ ಯೋಚನೆ ಮಾಡದೆ ಎಸೆದು ಬಿಡುತ್ತೇವೆ. ನೀವು ವೇಸ್ಟ್‌ ಎಂದುಕೊಳ್ಳುವ ಈ ಸಿಪ್ಪೆಯಲ್ಲೂ (Orange Peel Benefits) ಬೇಕಾದಷ್ಟು ವಿಟಮಿನ್‌ ಸಿ, ನಾರಿನಂಶ ಹಾಗೂ ಪಾಲಿ ಫಿನಾಳ್‌ಗಳು ಇವೆ ಎಂದರೆ ನಂಬುತ್ತೀರಾ?

Orange Peel

ಹೌದು. ಒಂದು ಚಮಚದಷ್ಟು ಕಿತ್ತಳೆ ಸಿಪ್ಪೆಯ ಪುಡಿಯಲ್ಲಿ ನಮ್ಮ ದೇಹಕ್ಕೆ ನಿತ್ಯವೂ ಬೇಕಾಗುವ ವಿಟಮಿನ್‌ ಸಿಯ ಶೇ.14ರಷ್ಟಿದೆಯಂತೆ. ಅಂದರೆ ಅದು ಒಳಗಿರುವ ಕಿತ್ತಳೆ ಹಣ್ಣಿನ ಮೂರು ಪಟ್ಟು ಹೆಚ್ಚು! ಕಿತ್ತಳೆ ಸಿಪ್ಪೆಯಲ್ಲಿ ಒಳಗಿನ ಹಣ್ಣಿಗಿಂತ ನಾಲ್ಕು ಪಟ್ಟು ಹೆಚ್ಚು ನಾರಿನಂಶವಿದೆಯಂತೆ. ಫ್ಲಾರಿಡಾ ವಿಶ್ವವಿದ್ಯಾಲಯವು ಕಿತ್ತಳೆ ಸಿಪ್ಪೆಯ ಸೇವನೆಯಿಂದ ಹೃದಯದ ಆರೋಗ್ಯಕ್ಕೆ ಸಾಕಷ್ಟು ಲಾಭವಿದೆ ಎಂದು ತನ್ನ ಸಂಶೋಧನಾ ವರದಿಯಲ್ಲಿ ಹೇಳಿದೆ. ನಮ್ಮ ದೇಹದಲ್ಲಿರುವ ಕೆಲವೊಂದು ಬ್ಯಾಕ್ಟೀರಿಯಾಗಳು ಹೃದಯದ ಕಾಯಿಲೆಯನ್ನು ಉಲ್ಬಣಗೊಳಿಸುವ ತಾಕತ್ತನ್ನು ಹೊಂದಿದೆಯಂತೆ. ಈ ಬ್ಯಾಕ್ಟೀರಿಯಾಗಳ ಬೆಳವಣಿಗೆಯನ್ನು ಕುಂಠಿತಗೊಳಿಸುವ ಶಕ್ತಿ ಈ ಕಿತ್ತಳೆ ಸಿಪ್ಪೆಯಲ್ಲಿದೆಯಂತೆ. ಕಿತ್ತಳೆ ಸಿಪ್ಪೆಯಲ್ಲಿರುವ ಫೈಟೋ ಕೆಮಿಕಲ್‌ಗಳು ಹೃದಯದ ಕಾಯಿಲೆಗೆ ಪೂರಕವಾದ ಟ್ರೈಮೀಥೈಲಾಮೈನ್‌ ಉತ್ಪಾದನೆಯನ್ನು ತಗ್ಗಿಸುವ ಮೂಲಕ ಹೃದಯಸ್ನೇಹಿಯಾಗಿ ವರ್ತಿಸುತ್ತದೆ.

ನಿತ್ಯ ಸೇವಿಸಬೇಕಿಲ್ಲ

ಹಾಗಂತ ಕಿತ್ತಳೆ ಹಣ್ಣಿಸ ಸಿಪ್ಪೆ ಒಳ್ಳೆಯದು ಎಂದು ಅದನ್ನು ನಿತ್ಯವೂ ಸೇವಿಸಬಹುದು ಎಂದಲ್ಲ. ಹಾಗೆ ಸೇವಿಸುವುದೂ ಕೂಡಾ ಒಳ್ಳೆಯದಲ್ಲ. ಕಿತ್ತಳೆಯ ಸಿಪ್ಪೆ ಕಹಿ ರುಚಿಯನ್ನು ಹೊಂದಿರುತ್ತದೆ ಹಾಗೂ ಇದನ್ನು ಹಾಗೆಯೇ ತಿನ್ನಲಾಗುವುದಿಲ್ಲ ಎಂಬುದೂ ನಿಮಗೆ ಗೊತ್ತು. ಅಷ್ಟೇ ಅಲ್ಲ. ಕಿತ್ತಳೆಯ ಸಿಪ್ಪೆಯಲ್ಲಿ ಅದನ್ನು ಬೆಳೆಸುವ ಸಂದರ್ಭ ಸಿಂಪಡಿಸಿದ ರಾಜಾಯನಿಕಗಳೂ, ಕೀಟನಾಶಕಗಳೂ ಇರುವ ಸಂಭವ ಹೆಚ್ಚು. ಹೀಗಾಗಿ ಅದನ್ನು ಸರಿಯಾಘಿ, ಸರಿಯಾದ ಕ್ರಮದಲ್ಲಿ ತೊಳೆದುಕೊಂಡು ಕೆಲವು ಆಹಾರ ತಯಾರಿಕೆಯಲ್ಲಿ ಬಳಸಿಕೊಳ್ಳಬಹುದು.

ಕ್ಯಾಂಡಿ

ಕಿತ್ತಳೆ ಸಿಪ್ಪೆಯನ್ನು ಸಕ್ಕರೆ ಪಾಕದಲ್ಲಿ ಹಾಕಿ ಮಕ್ಕಳಿಗಾಗಿ ಸಿಹಿ ಕ್ಯಾಂಡಿಗಳನ್ನು ಮಾಡಬಹುದು. ಸಿಪ್ಪೆಯನ್ನು 15 ನಿಮಿಷ ನೀರಿನಲ್ಲಿ ಹಾಕಿಟ್ಟು ನಂತರ ಚೆನ್ನಾಗಿ ತೊಳೆದು, ಅದನ್ನು ನೀರಿನಲ್ಲಿ ೧೫ ನಿಮಿಷ ಕುದಿಸಿ, ಸಿಪ್ಪೆಯನ್ನು ಸಕ್ಕರೆ ಪಾಕಕ್ಕೆ ಹಾಕಿ ಒಣಗಿಸುವ ಮೂಲಕ ಒಳ್ಳೆಯ ನೈಸರ್ಗಿಕ ಕ್ಯಾಂಡಿ ಮಾಡಬಹುದು.

ಸ್ಮೂದಿ

ಸಣ್ಣ ಸಣ್ಣ ತುಂಡುಗಳನ್ನು ನೀವು ಮಾಡುವ ಸ್ಮೂದಿಗೆ ಹಾಕಬಹುದು.

ಕಿತ್ತಳೆ ಕೇಕ್‌

ಕಿತ್ತಳೆ ಕೇಕ್‌ಗಳನ್ನು ಮಾಡುವಾಗ ಕಿತ್ತಳೆಯ ಸಿಪ್ಪೆಯನ್ನು ತುರಿದು ಒಂದೆರಡು ಚಮಚದಷ್ಟು ಪೇಸ್ಟ್‌ ತಯಾರಿಸಿ ಹಾಕಿದರೆ, ಯಾವುದೇ ಕೃತಕ ಘಮದ ಅವಶ್ಯಕತೆಯೇ ಇಲ್ಲ.

ಕಿತ್ತಳೆ ಸಿಪ್ಪೆಯ ಚಹಾ

ಕಿತ್ತಳೆ ಸಿಪ್ಪೆಯ ಚಹಾ ಮಾಡಿ ಕುಡಿಯಬಹುದು. ನಿತ್ಯವೂ ಅಲ್ಲದಿದ್ದರೂ, ಯಾವಾಗಲಾದರೊಮ್ಮೆ ಕುಡಿಯುವ ಮೂಲಕ ಇದರ ಲಾಭ ಪಡೆಯಬಹುದು.

ಇದನ್ನೂ ಓದಿ: Internet Addiction: ಈ 10 ಲಕ್ಷಣಗಳು ನಿಮ್ಮಲ್ಲಿದ್ದರೆ, ನೀವೂ ಇಂಟರ್ನೆಟ್‌ ಚಟಕ್ಕೆ ಬಿದ್ದಿದ್ದೀರಿ ಎಂದರ್ಥ!

ಕಿತ್ತಳೆ ಸಿಪ್ಪೆಯನ್ನು ಚೆನ್ನಾಗಿ ತೊಳೆದು ಒಣಗಿಸಿ ಪುಡಿ ಮಾಡಿಟ್ಟುಕೊಂಡರೆ, ನೀವು ಮನೆಯಲ್ಲೇ ಮಾಡುವ ಫೇಸ್‌ಪ್ಯಾಕ್‌ಗಳಿಗೆ ಇವನ್ನು ಸೇರಿಸಿ ಮುಖಕ್ಕೆ ಹಚ್ಚಿಕೊಳ್ಳಬಹುದು. ಮುಖದ ಮೇಲಿನ ಕಲೆಗಳು, ಸುಕ್ಕು ನಿರಿಗೆಗಳಿಗೆ ಇದು ಬಹಳ ಒಳ್ಳೆಯದು. ಇದರ ನಿಯಮಿತ ಬಳಕೆಯಿಂದ ಮುಖ ತಾಜಾತನದಿಂದ ಹೊಳೆಯುತ್ತದೆ.

Continue Reading

ಆರೋಗ್ಯ

Sadhguru Jaggi Vasudev: ಮಕ್ಕಳಲ್ಲಿ ಅಲರ್ಜಿ ಸಮಸ್ಯೆಗೆ ಏನು ಪರಿಹಾರ? ಸದ್ಗುರು ಸಲಹೆ ಇಲ್ಲಿದೆ ಕೇಳಿ

ಅಲರ್ಜಿ ತೊಂದರೆಗಳು ಈಗ ಎಲ್ಲರಲ್ಲೂ ಸಾಮಾನ್ಯ. ಇದಕ್ಕೆ ಮುಖ್ಯ ಕಾರಣ ನಮ್ಮ ಆಹಾರ. ಆದರೆ ಅದು ಹೇಗೆ ಬಂತು, ಕಡಿಮೆ ಮಾಡುವುದು ಹೇಗೆ ಎನ್ನುವುದಕ್ಕೆ ನಮ್ಮಲ್ಲಿ ಉತ್ತರವಿರುವುದಿಲ್ಲ. ವೈದ್ಯರನ್ನು ಸಂಪರ್ಕಿಸಿ ಒಂದೆರಡು ದಿನ ಔಷಧ ಪಡೆದು ಸುಮ್ಮನಾಗುತ್ತೇವೆ. ಇದು ಮತ್ತೊಮ್ಮೆ , ಮಗದೊಮ್ಮೆ ಉಂಟಾಗುತ್ತಲೇ ಇರುತ್ತದೆ. ಮಕ್ಕಳಲ್ಲಿ ಕಾಣಿಸಿಕೊಳ್ಳುವ ಅಲರ್ಜಿಯನ್ನು ನಾವು ಸಣ್ಣ ವಯಸ್ಸಿನಲ್ಲೇ ದೂರ ಮಾಡಬಹುದು. ಅದು ಹೇಗೆ ಎಂಬುದನ್ನು ಸದ್ಗುರು (Sadhguru Jaggi Vasudev) ಹೇಳಿರುವುದು ಹೀಗೆ.

VISTARANEWS.COM


on

By

Sadhguru Jaggi Vasudev
Koo

ಇತ್ತೀಚಿನ ದಿನಗಳಲ್ಲಿ ಸಣ್ಣ ಮಕ್ಕಳು (children’s) ಅಲರ್ಜಿ (allergies ) ತೊಂದರೆಯಿಂದ ಬಳಲುತ್ತಿರುತ್ತಾರೆ. ಎಷ್ಟೇ ಆರೈಕೆ ಮಾಡಿದರೂ ಸಂಪೂರ್ಣ ಗುಣಮುಖರಾಗುವುದಿಲ್ಲ. ಎಷ್ಟೋ ಬಾರಿ ಪೋಷಕರು (parents) ತಮ್ಮ ಮಕ್ಕಳಿಗೆ ಏಕೆ ಈ ತೊಂದರೆ ಕಾಣಿಸಿಕೊಂಡಿತು ಎಂದು ತಮ್ಮನ್ನು ತಾವು ಪ್ರಶ್ನಿಸುತ್ತಲೇ ಇರುತ್ತಾರೆ. ಆದರೆ ಅವರಿಗೆ ಇದಕ್ಕೆ ಉತ್ತರವೇ ಸಿಗುವುದಿಲ್ಲ. ಪ್ರಸಿದ್ಧ ಆಧ್ಯಾತ್ಮಿಕ ಮಾರ್ಗದರ್ಶಿ ಮತ್ತು ಆರೋಗ್ಯ ತಜ್ಞ ಸದ್ಗುರು ಜಗ್ಗಿ ವಾಸುದೇವ್ (Sadhguru Jaggi Vasudev) ಅವರು ಇದೀಗ ಮಕ್ಕಳಲ್ಲಿ ಉಂಟಾಗುವ ಅಲರ್ಜಿ ಸಮಸ್ಯೆಗಳಿಗೆ ಕಾರಣ ಮತ್ತು ಪರಿಹಾರವನ್ನು ಹೇಳಿದ್ದಾರೆ.

ಅಲರ್ಜಿ ತೊಂದರೆಗಳು ಈಗ ಎಲ್ಲರಲ್ಲೂ ಸಾಮಾನ್ಯ. ಇದಕ್ಕೆ ಮುಖ್ಯ ಕಾರಣ ನಮ್ಮ ಆಹಾರ. ಆದರೆ ಅದು ಹೇಗೆ ಬಂತು, ಕಡಿಮೆ ಮಾಡುವುದು ಹೇಗೆ ಎನ್ನುವುದಕ್ಕೆ ನಮ್ಮಲ್ಲಿ ಉತ್ತರವಿರುವುದಿಲ್ಲ. ವೈದ್ಯರನ್ನು ಸಂಪರ್ಕಿಸಿ ಒಂದೆರಡು ದಿನ ಔಷಧ ಪಡೆದು ಸುಮ್ಮನಾಗುತ್ತೇವೆ. ಇದು ಮತ್ತೊಮ್ಮೆ , ಮಗದೊಮ್ಮೆ ಉಂಟಾಗುತ್ತಲೇ ಇರುತ್ತದೆ. ಮಕ್ಕಳಲ್ಲಿ ಕಾಣಿಸಿಕೊಳ್ಳುವ ಅಲರ್ಜಿಯನ್ನು ನಾವು ಸಣ್ಣ ವಯಸ್ಸಿನಲ್ಲೇ ದೂರ ಮಾಡಬಹುದು ಎಂದಿದ್ದಾರೆ ಅವರು.

ಮಗುವು ಅಲರ್ಜಿಯೊಂದಿಗೆ ಹೋರಾಡುವುದನ್ನು ನೋಡುವುದು ಪ್ರತಿಯೊಬ್ಬ ಪೋಷಕರಿಗೂ ಸಂಕಟ ಮತ್ತು ಅಸಮಾಧಾನವನ್ನು ಉಂಟುಮಾಡುತ್ತದೆ. ಎಷ್ಟೇ ಔಷಧ ಮಾಡಿದರೂ ಇದು ಗುಣವಾಗದೇ ಇರುವುದು ನಮ್ಮನ್ನು ಚಿಂತೆಗೆ ಈಡಾಗುವಂತೆ ಮಾಡುತ್ತದೆ. ಎಷ್ಟೋ ಬಾರಿ ಇದು ಪುಟ್ಟ ಮಕ್ಕಳಿಗೆ ತಮ್ಮ ಬದುಕಿನಲ್ಲಿ ಬೇಸರ, ನಿರಾಸೆಯನ್ನು ಉಂಟು ಮಾಡಬಹುದು. ಆದರೂ ಮಕ್ಕಳ ಈ ಅಲರ್ಜಿ ಸಮಸ್ಯೆಗಳನ್ನು ನೈಸರ್ಗಿಕವಾಗಿ ಪರಿಹರಿಸಬಹುದು ಎನ್ನುತ್ತಾರೆ ಆರೋಗ್ಯ ತಜ್ಞರು, ಆಧ್ಯಾತ್ಮಿಕ ಚಿಂತಕರಾದ ಜಗ್ಗಿ ವಾಸುದೇವ್.

ಮಕ್ಕಳಲ್ಲಿ ಅಲರ್ಜಿಯನ್ನು ನಿರ್ವಹಿಸುವ ಕುರಿತು ಅವರು ತಮ್ಮ ಸಲಹೆಯನ್ನು ನೀಡಿದ್ದಾರೆ. ಸುಲಭವಾದ ಜೀವನಶೈಲಿ ಹೊಂದಾಣಿಕೆಯಿಂದ ಶಕ್ತಿಯುತವಾದ ಮನೆ ಚಿಕಿತ್ಸೆಗಳವರೆಗೆ ಎಲ್ಲವೂ ಅಲರ್ಜಿಯ ಲಕ್ಷಣಗಳನ್ನು ಕಡಿಮೆ ಮಾಡುತ್ತದೆ ಮತ್ತು ಮಕ್ಕಳ ಸಾಮಾನ್ಯ ಆರೋಗ್ಯವನ್ನು ಹೆಚ್ಚಿಸಲು ಪ್ರೇರಣೆಯಾಗುತ್ತದೆ ಎನ್ನುತ್ತಾರೆ ಅವರು.
ಇತ್ತೀಚಿಗೆ ಅವರು ಅಲರ್ಜಿಯ ಪ್ರಮುಖ ವಿಷಯವನ್ನು ಉದ್ದೇಶಿಸಿ ಮಾತನಾಡುತ್ತಿದ್ದರು. ಅಲರ್ಜಿಯನ್ನು ಜಯಿಸಲು ಪ್ರಮುಖ ಮಾರ್ಗಗಳನ್ನು ಸೂಚಿಸಿದ್ದಾರೆ.

ಇದನ್ನೂ ಓದಿ: Priyanka Chopra: ಬೆಳ್ಳುಳ್ಳಿ ಎಸಳು ಪಾದಗಳಿಗೆ ಉಜ್ಜುವುದರಿಂದ ಏನು ಪ್ರಯೋಜನ? ನಟಿ ಪ್ರಿಯಾಂಕಾ ಚೋಪ್ರಾ ಹೇಳಿದ್ದೇನು?

ಮಕ್ಕಳ ಬಗ್ಗೆ ಮಾತನಾಡಿದ ಅವರು, ಅಲರ್ಜಿಯಿಂದ ಪರಿಹಾರ ಪಡೆಯಲು ಹಲವು ದಾರಿಗಳಿವೆ. ಆರೋಗ್ಯಕರ ಜೀವಿಗಳಿಗೆ ಆಹಾರ ಸೇವನೆಯಲ್ಲಿ ಕೆಲವು ಬದಲಾವಣೆಗಳನ್ನು ಸಲಹೆ ನೀಡಿದ್ದಾರೆ.

ಮಕ್ಕಳಿಗೆ ಅಲರ್ಜಿಗಳು ಹೋಗಬೇಕಾದರೆ ಹಾಲು ಮತ್ತು ಮಾಂಸದ ಉತ್ಪನ್ನಗಳಿಂದ ಅವರನ್ನು ದೂರವಿರಿಸಿ. ಇವು ತುಂಬಾ ಕೆಟ್ಟದಾಗಿ ಅಲರ್ಜಿ ಉಂಟು ಮಾಡಬಲ್ಲದು. ಸ್ವಲ್ಪ ಅಲರ್ಜಿ ಕಾಣಿಸಿ ಕೊಂಡರೆ ಪರವಾಗಿಲ್ಲ. ತುಂಬಾ ಕೆಟ್ಟದಾಗಿ ಅಲರ್ಜಿಯಾಗಿದ್ದರೆ ಮಾಂಸ ಉತ್ಪನ್ನಗಳನ್ನು ತ್ಯಜಿಸಿ ಸಾಕಷ್ಟು ತರಕಾರಿ, ತಾಜಾ ಹಣ್ಣು ಮತ್ತು ವಸ್ತುಗಳನ್ನೇ ಅವರಿಗೆ ಸೇವಿಸಲು ಕೊಡಿ. ಇದರಿಂದ ಅವರು ಬಹುಬೇಗನೆ ಅಲರ್ಜಿ ತೊಂದರೆಯಿಂದ ಗುಣಮುಖರಾಗುತ್ತಾರೆ ಎಂದು ಸದ್ಗುರು ತಿಳಿಸಿದ್ದಾರೆ.

Continue Reading

ಕರ್ನಾಟಕ

Run4Research: ಬೆಂಗಳೂರಿನಲ್ಲಿ ಜೂ.30ರಂದು ʼರನ್4ರೀಸರ್ಚ್ʼ ಓಟ

Run4Research: ಇಂಡಿಯನ್ ಸೊಸೈಟಿ ಫಾರ್ ಕ್ಲಿನಿಕಲ್ ರೀಸರ್ಚ್ (ಐ.ಎಸ್.ಸಿ.ಆರ್.) ವತಿಯಿಂದ ಜೂ.30ರಂದು ಭಾನುವಾರ ಬೆಳಿಗ್ಗೆ 5 ರಿಂದ 9 ರವರೆಗೆ ಬೆಂಗಳೂರಿನ ಎಚ್.ಎಸ್.ಆರ್. ಬಡಾವಣೆಯ ಅಟಲ್ ಬಿಹಾರಿ ವಾಜಪೇಯಿ ಸ್ಟೇಡಿಯಂನಲ್ಲಿ ʼರನ್4ರೀಸರ್ಚ್ʼ ಕ್ಲಿನಿಕಲ್ ರೀಸರ್ಚ್ ಕುರಿತು ಅರಿವನ್ನು ಮೂಡಿಸಲು ಸವಾಲಿನ ಓಟ ಕಾರ್ಯಕ್ರಮ ಏರ್ಪಡಿಸಲಾಗಿದೆ.

VISTARANEWS.COM


on

Run4Research programme on June 30 in Bengaluru
Koo

ಬೆಂಗಳೂರು: ಇಂಡಿಯನ್ ಸೊಸೈಟಿ ಫಾರ್ ಕ್ಲಿನಿಕಲ್ ರೀಸರ್ಚ್ (ಐ.ಎಸ್.ಸಿ.ಆರ್.) ವತಿಯಿಂದ ಜೂ.30 ರಂದು ಭಾನುವಾರ ಬೆಳಿಗ್ಗೆ 5 ಗಂಟೆಯಿಂದ 9 ರವರೆಗೆ ಬೆಂಗಳೂರಿನ ಎಚ್.ಎಸ್.ಆರ್. ಬಡಾವಣೆಯ ಅಟಲ್ ಬಿಹಾರಿ ವಾಜಪೇಯಿ ಸ್ಟೇಡಿಯಂನಲ್ಲಿ ʼರನ್4ರೀಸರ್ಚ್ʼ (Run4Research) ಕ್ಲಿನಿಕಲ್ ರೀಸರ್ಚ್ ಕುರಿತು ಅರಿವನ್ನು ಮೂಡಿಸಲು ಸವಾಲಿನ ಓಟ ಕಾರ್ಯಕ್ರಮ ಏರ್ಪಡಿಸಲಾಗಿದೆ.

ಈ ಸವಾಲಿನ ಓಟವು ಭಾರತದ ಉಜ್ವಲ ಕ್ಲಿನಿಕಲ್ ರೀಸರ್ಚ್ ಸಮುದಾಯಕ್ಕೆ ಅರಿವನ್ನು ಉತ್ತೇಜಿಸುವ ಗುರಿ ಹೊಂದಿದೆ. ಅನುಷ್ಠಾನದ ಪಾಲುದಾರ ಸೆಲ್ಲುಲಾದೊಂದಿಗೆ ಆಯೋಜಿಸಿದ ಈ ಕಾರ್ಯಕ್ರಮದಲ್ಲಿ 3ಕೆ, 5ಕೆ ಮತ್ತು 10ಕೆ ವಿಭಾಗಗಳಿದ್ದು, ಎಲ್ಲ ಫಿಟ್ನೆಸ್ ಹಂತಗಳ ಭಾಗವಹಿಸುವವರಿಗೆ ಅವಕಾಶ ನೀಡುತ್ತದೆ. ಐ.ಸಿ.ಎಸ್.ಆರ್. ಕ್ಲಿನಿಕಲ್ ರೀಸರ್ಚ್ ಕ್ಷೇತ್ರದಲ್ಲಿ ತೊಡಗಿಕೊಂಡ ಮತ್ತು ಆರೋಗ್ಯದ ಉತ್ಸಾಹಿಗಳನ್ನು ಈ ಉತ್ಸಾಹಕರ ಕಾರ್ಯಕ್ರಮದಲ್ಲಿ ಭಾಗವಹಿಸಲು ಆಹ್ವಾನಿಸುತ್ತಿದೆ.

ಇದನ್ನೂ ಓದಿ: Post Office: ಪೋಸ್ಟ್‌ ಆಫೀಸ್‌ ಉಳಿತಾಯ ಯೋಜನೆಗಳ ಬಡ್ಡಿದರ ಬದಲಾವಣೆ ಇಲ್ಲ; ಬಡ್ಡಿಯ ಪಟ್ಟಿ ಇಲ್ಲಿದೆ

ಇಂಡಿಯನ್ ಸೊಸೈಟಿ ಫಾರ್ ಕ್ಲಿನಿಕಲ್ ರೀಸರ್ಚ್ (ಐ.ಎಸ್.ಸಿ.ಆರ್.) ಭಾರತದಲ್ಲಿ ನೈತಿಕ ಮತ್ತು ಉನ್ನತ ಗುಣಮಟ್ಟದ ಕ್ಲಿನಿಕಲ್ ರೀಸರ್ಚ್ ಉತ್ತೇಜಿಸಲು ಬದ್ಧವಾದ ವೃತ್ತಿಪರ ಸಂಸ್ಥೆಯಾಗಿದೆ. ಐ.ಸಿ.ಎಸ್.ಆರ್.ನ ಉದ್ದೇಶ ಪಾಲುದಾರರೊಂದಿಗೆ ಸಹಯೋಗ ರೂಪಿಸುವುದು ಮತ್ತು ಆರೋಗ್ಯಸೇವಾ ಫಲಿತಾಂಶಗಳನ್ನು ಸುಧಾರಿಸಲು ಕ್ಲಿನಿಕಲ್ ರೀಸರ್ಚ್ ಸುಧಾರಣೆಯನ್ನು ಪ್ರತಿಪಾದಿಸುವುದು. ಹಲವಾರು ಉಪಕ್ರಮಗಳ ಮೂಲಕ ಐ.ಸಿ.ಎಸ್.ಆರ್. ದೇಶದಲ್ಲಿ ಕ್ಲಿನಿಕಲ್ ಟ್ರಯಲ್‌ಗಳ ವೈಜ್ಞಾನಿಕ, ನೈತಿಕ ಮತ್ತು ಕಾರ್ಯಾಚರಣೆಯ ಆಯಾಮಗಳನ್ನು ಹೆಚ್ಚಿಸಲು ಶ್ರಮಿಸುತ್ತದೆ.

ಇದನ್ನೂ ಓದಿ: Bengaluru Power Cut: ಬೆಂಗಳೂರು ನಿವಾಸಿಗಳೇ ಗಮನಿಸಿ; ಜೂ.29ರಂದು ಈ ಪ್ರದೇಶಗಳಲ್ಲಿ ಕರೆಂಟ್‌ ಇರಲ್ಲ

ಇಂಡಿಯನ್ ಸೊಸೈಟಿ ಫಾರ್ ಕ್ಲಿನಿಕಲ್ ರೀಸರ್ಚ್ ಅಧ್ಯಕ್ಷ ಡಾ. ಸನಿಶ್ ಡೇವಿಸ್ ಈ ಕಾರ್ಯಕ್ರಮದ ಕುರಿತು ಮಾತನಾಡಿ, ಕ್ಲಿನಿಕಲ್ ರೀಸರ್ಚ್ ರೋಗಿಗಳಿಗೆ ಹೊಸ ಚಿಕಿತ್ಸೆಗಳನ್ನು ತರುವಲ್ಲಿ ಅತ್ಯಂತ ಮುಖ್ಯವಾಗಿದೆ. ಕ್ಲಿನಿಕಲ್ ಟ್ರಯಲ್‌ಗಳಲ್ಲಿ ಕಠಿಣ ಪರೀಕ್ಷೆಗಳಿಲ್ಲದೆ ಹೊಸ ಔಷಧಗಳು, ಲಸಿಕೆಗಳು ಮತ್ತು ವೈದ್ಯಕೀಯ ಸಾಧನಗಳನ್ನು ಬಳಕೆಗೆ ಅನುಮೋದಿಸಲು ಸಾಧ್ಯವಿಲ್ಲ. ಈ ಕಾರ್ಯಕ್ರಮವು ರೋಗಿಗಳಿಗೆ ಕ್ಲಿನಿಕಲ್ ಟ್ರಯಲ್‌ಗಳ ಪ್ರಾಮುಖ್ಯತೆ ಕುರಿತು ಮತ್ತು ಹೇಗೆ ಅವರ ಭಾಗವಹಿಸುವಿಕೆಯು ಅವರಿಗೆ ಮತ್ತು ಭವಿಷ್ಯದ ತಲೆಮಾರುಗಳಿಗೆ ಪ್ರಯೋಜನವಾಗಬಲ್ಲದು ಎಂದು ಅರಿವನ್ನು ಮೂಡಿಸುವ ಗುರಿ ಹೊಂದಿದೆ ಎಂದು ತಿಳಿಸಿದ್ದಾರೆ.

Continue Reading
Advertisement
Actor Darshan Renuka swamy case chitral support by vinay gowda
ಸ್ಯಾಂಡಲ್ ವುಡ್1 min ago

Actor Darshan: ʻಚಿತ್ರಾಲ್ʼ ಬಿಕಿನಿ ಮಾಡೆಲ್‌, ಕೆಟ್ಟ ಕಮೆಂಟ್‌ ಮಾಡಬೇಡಿ ಎಂದ ವಿನಯ್ ಗೌಡ !

Opposition party leader r ashok latest statement in chikkaballapur
ಕರ್ನಾಟಕ3 mins ago

R Ashok: ಪ್ರತಿ ಕುಟುಂಬದಿಂದ 8-10 ಸಾವಿರ ರೂ. ದರೋಡೆ ಮಾಡುತ್ತಿರುವ ಕಾಂಗ್ರೆಸ್‌ ಸರ್ಕಾರ: ಆರ್‌.ಅಶೋಕ್ ಆರೋಪ

Video conference meeting with Tehsildars by DC Gangubai Manakar
ಉತ್ತರ ಕನ್ನಡ4 mins ago

Uttara Kannada News: ಜಿಲ್ಲೆಯ ಮಾಜಿ ಸೈನಿಕರು, ಅಶಕ್ತರಿಗೆ ಭೂಮಿ ಒದಗಿಸಲು ಕ್ರಮ: ಡಿಸಿ ಗಂಗೂಬಾಯಿ ಮಾನಕರ್‌

VSK Media Awards 2024 Programme in Bengaluru on June 30
ಕರ್ನಾಟಕ5 mins ago

VSK Media Awards 2024: ಬೆಂಗಳೂರಿನಲ್ಲಿ ಜೂ.30 ರಂದು “ವಿಎಸ್‌ಕೆ ಮಾಧ್ಯಮ ಪ್ರಶಸ್ತಿ” ಪ್ರದಾನ

Prajwal Revanna Case
ಪ್ರಮುಖ ಸುದ್ದಿ22 mins ago

Prajwal Revanna Case: ಪ್ರಜ್ವಲ್ ರೇವಣ್ಣಗೆ ಜುಲೈ 8ರವರೆಗೆ ನ್ಯಾಯಾಂಗ ಬಂಧನ

Stabbing
ದೇಶ22 mins ago

Stabbing: ಕೋಪದ ಕೈಗೆ ಬುದ್ದಿ ಕೊಟ್ರೆ ಹೀಗೇ ಆಗೋದು! ಸಹಪಾಠಿಯನ್ನೇ ಇರಿದು ಕೊಂದ ವಿದ್ಯಾರ್ಥಿ

IND vs SA Final
ಕ್ರೀಡೆ26 mins ago

IND vs SA Final: ಭಾರತ ಸೋತರೆ ರೋಹಿತ್ ಈ ಅನಾಹುತ ಮಾಡಿಕೊಳ್ಳಬಹುದು; ಮಾಜಿ ನಾಯಕನಿಂದ ಶಾಕಿಂಗ್​ ಹೇಳಿಕೆ ​

Road Accident
ಕ್ರೈಂ31 mins ago

Road Accident : ಬೆಂ-ಮೈ ಎಕ್ಸ್‌ಪ್ರೆಸ್‌ ವೇನಲ್ಲಿ ಡಿವೈಡರ್‌ಗೆ ಗುದ್ದಿ ಹಳ್ಳಕ್ಕೆ ಜಿಗಿದ ಕೆಎಸ್‌ಆರ್‌ಟಿಸಿ; ಶಿರಾಡಿಘಾಟ್‌ನಲ್ಲಿ ಸರಣಿ ಅಪಘಾತ

Job Alert
ಉದ್ಯೋಗ58 mins ago

Job Alert: 10ನೇ ತರಗತಿ ಪಾಸಾದವರಿಗೆ ಗುಡ್‌ನ್ಯೂಸ್‌; SSCಯಿಂದ ಬರೋಬ್ಬರಿ 8,326 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

OTT Release
Latest1 hour ago

OTT Release : ಒಟಿಟಿಯಲ್ಲಿ ಈ ವಾರ ಬಿಡುಗಡೆಯಾಗಲಿರುವ ಹೊಸ ಚಲನಚಿತ್ರಗಳು, ವೆಬ್ ಸರಣಿಗಳ ಪಟ್ಟಿ ಹೀಗಿವೆ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Rain
ಮಳೆ6 hours ago

Karnataka Rain: ಭಾರಿ ಮಳೆಗೆ ಮನೆಗಳ ಗೋಡೆ ಕುಸಿತ; ಕೂದಲೆಳೆ ಅಂತರದಲ್ಲಿ ವೃದ್ಧ ಪಾರು

karnataka Weather Forecast
ಮಳೆ22 hours ago

Karnataka Weather : ಅಬ್ಬಬ್ಬಾ.. ಮುಲ್ಕಿಯಲ್ಲಿ 30 ಸೆಂ.ಮೀ ಮಳೆ ದಾಖಲು; ವಾರಾಂತ್ಯದಲ್ಲೂ ಭಾರಿ ವರ್ಷಧಾರೆ

karnataka Rain
ಮಳೆ1 day ago

Karnataka Rain : ಭಾರಿ ಮಳೆಗೆ ಪಾತಾಳ ಸೇರಿದ ಬಾವಿ; ಅಲೆಗಳ ಹೊಡೆತಕ್ಕೆ ಸಮುದ್ರಪಾಲಾದ ಮನೆ

Karnataka Weather Forecast
ಮಳೆ2 days ago

Karnataka Weather : ಭಾರಿ ಮಳೆ ಹಿನ್ನೆಲೆ ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್; ಶುಕ್ರವಾರವೂ ಶಾಲೆಗಳಿಗೆ ರಜೆ ಘೋಷಣೆ

karnataka Weather Forecast
ಮಳೆ2 days ago

Karnataka Weather : ಭಾರಿ ಮಳೆಗೆ ಸೇತುವೆಯಿಂದ ಹೊಳೆಗೆ ಬಿದ್ದ ಕಾರು; ಮರ ಹಿಡಿದು ಪ್ರಾಣ ಉಳಿಸಿಕೊಂಡ ಸವಾರರು

Heart Attack
ಕೊಡಗು2 days ago

Heart Attack : ಕೊಡಗಿನಲ್ಲಿ ಹೃದಯಾಘಾತಕ್ಕೆ ಯುವತಿ ಬಲಿ; ಹೆಚ್ಚಾಯ್ತು ಅಲ್ಪಾಯುಷ್ಯದ ಭಯ

karnataka Rains Effected
ಮಳೆ2 days ago

Karnataka Rain : ಧಾರಾಕಾರ ಮಳೆಗೆ ಸಡಿಲಗೊಂಡ ಗುಡ್ಡಗಳು; ಧರೆ ಕುಸಿದು ಮಣ್ಣಿನಡಿ ಸಿಲುಕಿದ ಇಬ್ಬರು ಮಕ್ಕಳು

karnataka Weather Forecast
ಮಳೆ5 days ago

Karnataka Weather : ಕರಾವಳಿಯಲ್ಲಿ ಮುಂದುವರಿದ ವರುಣಾರ್ಭಟ; ಸಾಂಪ್ರದಾಯಿಕ ಮೀನುಗಾರಿಕೆಗೂ ಬ್ರೇಕ್

karnataka weather Forecast
ಮಳೆ1 week ago

Karnataka Weather : ರಭಸವಾಗಿ ಹರಿಯುವ ನೀರಲ್ಲಿ ಸಿಲುಕಿದ ಬೊಲೆರೋ; ಬಿರುಗಾಳಿ ಸಹಿತ ಮಳೆ ಎಚ್ಚರಿಕೆ

International Yoga Day 2024
ಕರ್ನಾಟಕ1 week ago

International Yoga Day 2024: ಎಲ್ಲೆಲ್ಲೂ ಯೋಗಾಯೋಗ‌ಕ್ಕೆ ಮಂಡಿಯೂರಿದ ಜನತೆ

ಟ್ರೆಂಡಿಂಗ್‌