Kashmir Masjid Fire | ಕಾಶ್ಮೀರದಲ್ಲಿ ಜಾಮಿಯಾ ಮಸೀದಿಗೆ ಬೆಂಕಿ, ಬಹುತೇಕ ಭಾಗಕ್ಕೆ ಹಾನಿ - Vistara News

ದೇಶ

Kashmir Masjid Fire | ಕಾಶ್ಮೀರದಲ್ಲಿ ಜಾಮಿಯಾ ಮಸೀದಿಗೆ ಬೆಂಕಿ, ಬಹುತೇಕ ಭಾಗಕ್ಕೆ ಹಾನಿ

ಜಮ್ಮು-ಕಾಶ್ಮೀರದ ದ್ರಾಸ್‌ನಲ್ಲಿರುವ ಅತಿ ಹಳೆಯ ಮಸೀದಿ (Kashmir Masjid Fire) ಎಂದೇ ಖ್ಯಾತಿಯಾಗಿದ್ದ ಜಾಮಿಯಾ ಮಸೀದಿಯು ಏಕಾಏಕಿ ಹೊತ್ತಿ ಉರಿದಿದೆ.

VISTARANEWS.COM


on

major fire broke out at the Jamia Masjid
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಶ್ರೀನಗರ: ಜಮ್ಮು-ಕಾಶ್ಮೀರದ ದ್ರಾಸ್‌ನಲ್ಲಿರುವ ಬಹುಕಾಲದ ಮಸೀದಿಯೊಂದರಲ್ಲಿ ಆಕಸ್ಮಿಕ ಅಗ್ನಿ ಅವಘಡ (Kashmir Masjid Fire) ಸಂಭವಿಸಿದೆ. ಬುಧವಾರ ರಾತ್ರಿ ಏಕಾಏಕಿ ಜಾಮಿಯಾ ಮಸೀದಿ ಹೊತ್ತಿ ಉರಿದಿದ್ದು, ಬಹುತೇಕ ಭಾಗ ಅಗ್ನಿಗಾಹುತಿಯಾಗಿದೆ ಎಂದು ತಿಳಿದುಬಂದಿದೆ.

ಮಸೀದಿ ಹೊತ್ತಿ ಉರಿಯಲು ಕಾರಣವೇನು ಎಂಬುದರ ಬಗ್ಗೆ ನಿಖರ ಮಾಹಿತಿ ಲಭ್ಯವಾಗಿಲ್ಲ. ಅಗ್ನಿಯ ಕೆನ್ನಾಲಗೆ ಚಾಚಿಕೊಳ್ಳುತ್ತಿರುವ ಸುದ್ದಿ ತಿಳಿದ ಸೇನೆ, ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿಯು ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸಿದ್ದಾರೆ. ಶಾರ್ಟ್‌ ಸರ್ಕ್ಯೂಟ್‌ನಿಂದಾಗಿ ಅವಘಡ ಸಂಭವಿಸಿರಬಹುದು ಎಂದು ಶಂಕಿಸಲಾಗಿದೆ. ಇನ್ನು ಘಟನೆ ಕುರಿತು ಮಸೀದಿ ಆಡಳಿತ ಮಂಡಳಿ ಬೇಸರ ವ್ಯಕ್ತಪಡಿಸಿದೆ.

ಇದನ್ನೂ ಓದಿ | Fire Accident | ರಿಚ್ಮಂಡ್ ಟೌನ್ ಫ್ಯಾಮಿಲಿ ಸೂಪರ್ ಮಾರ್ಟ್‌ನಲ್ಲಿ ಅಗ್ನಿ ಅವಘಡ : ಪೀಠೋಪಕರಣ ಭಸ್ಮ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

ಕೋರ್ಟ್‌ನಲ್ಲೇ ಅಳಿಯನನ್ನು ಗುಂಡಿಕ್ಕಿ ಕೊಂದ ಮಾಜಿ ಪೊಲೀಸ್‌ ಅಧಿಕಾರಿ; ಕೃತ್ಯಕ್ಕೆ ಕಾರಣವೇನು?

ಮಾಲ್ವಿಂದರ್‌ ಸಿಂಗ್‌ ಹಾಗೂ ಹರ್‌ಪ್ರೀತ್‌ ಸಿಂಗ್‌ ಮಧ್ಯೆ ಕೌಟುಂಬಿಕ ಸಮಸ್ಯೆ, ಕಂದಕ ಉಂಟಾಗಿತ್ತು. ಹಾಗಾಗಿ, ಅವರು ನ್ಯಾಯಾಲಯ ಮೆಟ್ಟಿಲೇರಿದ್ದರು. ಹಾಗಾಗಿ, ಇಬ್ಬರೂ ಕೌಟುಂಬಿಕ ನ್ಯಾಯಾಲಯಕ್ಕೆ ತೆರಳಿದ್ದರು. ಇದೇ ವೇಳೆ ಇಬ್ಬರ ಮಧ್ಯೆ ಮಧ್ಯಸ್ಥಿಕೆ ಪ್ರಕ್ರಿಯೆ ನಡೆಯುತ್ತಿತ್ತು. ಕೆಲ ನಿಮಿಷಗಳ ಬಳಿಕ ಇಬ್ಬರೂ ಹೊರಬಂದಿದ್ದು, ಜನರಿಗೆ ಗುಂಡಿನ ಸದ್ದು ಕೇಳಿದೆ. ನಂತರ ಏನಾಯಿತು ಎಂಬುದರ ಮಾಹಿತಿ ಇಲ್ಲಿದೆ.

VISTARANEWS.COM


on

Chandigarh Court
Koo

ಚಂಡೀಗಢ: ಪಂಜಾಬ್‌ನ ಚಂಡೀಗಢ ಕೋರ್ಟ್‌ನಲ್ಲಿ (Chandigarh Court) ಮಾಜಿ ಪೊಲೀಸ್‌ ಅಧಿಕಾರಿಯೊಬ್ಬರು ನೀರಾವರಿ ಇಲಾಖೆಯಲ್ಲಿ ಐಆರ್‌ಎಸ್‌ ಅಧಿಕಾರಿಯಾಗಿರುವ (IRS Officer) ವ್ಯಕ್ತಿಯೊಬ್ಬರ ಮೇಲೆ ಗುಂಡು ಹಾರಿಸಿ ಕೊಲೆ ಮಾಡಿದ್ದಾರೆ. ಮೃತರನ್ನು ಹರ್‌ಪ್ರೀತ್‌ ಸಿಂಗ್‌ ಎಂದು ಗುರುತಿಸಿದರೆ, ಕೊಲೆ ಆರೋಪಿಯನ್ನು ಮಾಲ್ವಿಂದರ್‌ ಸಿಂಗ್‌ ಸಿಧು ಎಂಬುದಾಗಿ ಗುರುತಿಸಲಾಗಿದೆ. ಮಾಲ್ವಿಂದರ್‌ ಸಿಂಗ್‌ಗೆ ಹರ್‌ಪ್ರೀತ್‌ ಸಿಂಗ್‌ ಅಳಿಯ (ಮಗಳ ಗಂಡ) ಆಗಬೇಕು ಎಂಬ ಸಂಗತಿಯು ಬಳಿಕ ಬಯಲಾಗಿದೆ.

ಮಾಲ್ವಿಂದರ್‌ ಸಿಂಗ್‌ ಹಾಗೂ ಹರ್‌ಪ್ರೀತ್‌ ಸಿಂಗ್‌ ಮಧ್ಯೆ ಕೌಟುಂಬಿಕ ಸಮಸ್ಯೆ, ಕಂದಕ ಉಂಟಾಗಿತ್ತು. ಹಾಗಾಗಿ, ಅವರು ನ್ಯಾಯಾಲಯ ಮೆಟ್ಟಿಲೇರಿದ್ದರು. ಹಾಗಾಗಿ, ಇಬ್ಬರೂ ಕೌಟುಂಬಿಕ ನ್ಯಾಯಾಲಯಕ್ಕೆ ತೆರಳಿದ್ದರು. ಇದೇ ವೇಳೆ ಇಬ್ಬರ ಮಧ್ಯೆ ಮಧ್ಯಸ್ಥಿಕೆ ಪ್ರಕ್ರಿಯೆ ನಡೆಯುತ್ತಿತ್ತು. ಆಗ, ಮಾಲ್ವಿಂದರ್‌ ಸಿಂಗ್‌, ಶೌಚಾಲಯಕ್ಕೆ ಹೋಗಿಬರುತ್ತೇನೆ ಎಂದು ಕೋಣೆಯಿಂದ ಹೊರಬಂದರು. ಇದೇ ವೇಳೆ ಮಾವನಿಗೆ ದಾರಿ ತೋರಿಸುತ್ತೇನೆ ಎಂದು ಹರ್‌ಪ್ರೀತ್‌ ಸಿಂಗ್‌ ಕೂಡ ಹೊರಬಂದರು. ಇದಾದ ಬಳಿಕ ಐದು ಬಾರಿ ಗುಂಡು ಹಾರಿಸಿದ ಸದ್ದು ಕೇಳಿದ ಕಾರಣ ಇಡೀ ಕೋರ್ಟ್‌ನಲ್ಲಿ ಪ್ರಕ್ಷುಬ್ಧ ವಾತಾವರಣ ನಿರ್ಮಾಣವಾಯಿತು.

ಮಾಲ್ವಿಂದರ್‌ ಸಿಂಗ್‌ ಅಳಿಯನಿಗೇ ಐದು ಬಾರಿ ಗುಂಡು ಹಾರಿಸಿದ್ದಾರೆ. ಐದರ ಪೈಕಿ ಎರಡು ಗುಂಡುಗಳು ಹರ್‌ಪ್ರೀತ್‌ ಸಿಂಗ್‌ಗೆ ತಗುಲಿವೆ. ಹರ್‌ಪ್ರೀತ್‌ ಸಿಂಗ್‌ ಕೋರ್ಟ್‌ನಲ್ಲಿ ಕೆಳಗೆ ಬಿದ್ದಿರುವ ವಿಡಿಯೊ ಲಭ್ಯವಾಗಿದೆ. “ಅವರಿಗೆ ಗುಂಡು ತಗುಲಿದೆ. ಯಾರಾದರೂ ಆಸ್ಪತ್ರೆಗೆ ಕರೆದುಕೊಂಡು ನಡೆಯಿರಿ” ಎಂದು ವ್ಯಕ್ತಿಯೊಬ್ಬ ಹೇಳುತ್ತಿರುವುದು ವಿಡಿಯೊದಲ್ಲಿ ದಾಖಲಾಗಿದೆ. ಬಳಿಕ ಹರ್‌ಪ್ರೀತ್‌ ಸಿಂಗ್‌ ಅವರನ್ನು ಆಸ್ಪತ್ರೆಗೆ ಸಾಗಿಸಲು ಪ್ರಯತ್ನಿಸಿದರೂ ಮಾರ್ಗ ಮಧ್ಯೆಯೇ ಅಧಿಕಾರಿ ಮೃತಪಟ್ಟರು ಎಂದು ತಿಳಿದುಬಂದಿದೆ.

ಅಳಿಯನಿಗೇ ಗುಂಡು ಹಾರಿಸಿದ ವ್ಯಕ್ತಿಯನ್ನು ಕೆಲ ವಕೀಲರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಇದಾದ ಬಳಿಕ ಪೊಲೀಸರು ಮಾಲ್ವಿಂದರ್‌ ಸಿಂಗ್‌ ಅವರನ್ನು ಬಂಧಿಸಿದರು. ಕೋರ್ಟ್‌ನಲ್ಲೇ ಹರ್‌ಪ್ರೀತ್‌ ಸಿಂಗ್‌ ರಕ್ತದ ಮಡುವಿನಲ್ಲಿ ಬಿದ್ದ ವಿಡಿಯೊ ಕೂಡ ಲಭ್ಯವಾಗಿದೆ. ಇಬ್ಬರ ನಡುವಿನ ಕೌಂಟುಂಬಿಕ ಸಮಸ್ಯೆ ಏನು? ಮಗಳಿಗೆ ಹರ್‌ಪ್ರೀತ್‌ ಸಿಂಗ್‌ ಕಿರುಕುಳ ಕೊಡುತ್ತಿದ್ದರಾ? ಸಂಧಾನಕ್ಕೆ ಬಂದವರ ಮಧ್ಯೆ ಗಲಾಟೆ ಏಕೆ ನಡೆಯಿತು ಎಂಬುದು ಸೇರಿ ಕೃತ್ಯಕ್ಕೆ ಕಾರಣ ಏನು ಎಂಬುದು ಇದುವರೆಗೆ ಗೊತ್ತಾಗಿಲ್ಲ. ಮಾಲ್ವಿಂದರ್‌ ಸಿಂಗ್‌ ಅವರು ಅಸಿಸ್ಟಂಟ್‌ ಐಜಿಪಿಯಾಗಿದ್ದರು ಹಾಗೂ ಅವರು ಅಮಾನತಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಇದನ್ನೂ ಓದಿ: Murder Case: ಒಂಟಿ ಕೈ ರೌಡಿಯಿಂದ ಇನ್ನೊಬ್ಬ ರೌಡಿಯ ಕೊಚ್ಚಿ ಕೊಲೆ

Continue Reading

ದೇಶ

Moon: ಭೂಮಿಯಿಂದ ದೂರ ಹೊರಟ ಚಂದ್ರ, ಶೀಘ್ರದಲ್ಲೇ ದಿನಕ್ಕೆ 24 ಅಲ್ಲ 25 ಗಂಟೆಗಳು ಇರಲಿವೆ!

Moon: ವರ್ಷದಿಂದ ವರ್ಷಕ್ಕೆ ಚಂದಿರನು ಭೂಮಿಯಿಂದ ದೂರವಾಗುತ್ತಿದ್ದಾನೆ ಎಂದು ಅಮೆರಿಕದ ಯುನಿವರ್ಸಿಟಿ ಆಫ್‌ ವಿಸ್ಕಾನ್ಸಿನ್-ಮ್ಯಾಡಿಸನ್‌ನ ತಜ್ಞರು ಮಾಡಿದ ಅಧ್ಯಯನ ವರದಿಯಲ್ಲಿ ಉಲ್ಲೇಖಿಸಲಾಗಿದೆ. ಸುಮಾರು 90 ದಶಲಕ್ಷ ವರ್ಷದಷ್ಟು ಹಳೆಯದಾದ ಶಿಲೆಯ ಮೇಲೆ ಗಮನ ಕೇಂದ್ರೀಕರಿಸಿ ಅಧ್ಯಯನ ನಡೆಸಲಾಗಿದ್ದು, ಭೂಮಿಯಿಂದ ಚಂದ್ರನು ಬೇರ್ಪಡುವುದರಿಂದ ಆಗುವ ಪರಿಣಾಮಗಳ ಕುರಿತು ಕೂಡ ಅವರು ಬೆಳಕು ಚೆಲ್ಲಿದ್ದಾರೆ.

VISTARANEWS.COM


on

Moon
Koo

ನವದೆಹಲಿ: ಚಂದಿರನಿಗೂ ಮಾನವನಿಗೂ ಎಲ್ಲಿಲ್ಲದ ನಂಟು. ಚಂದಿರನನ್ನು ತೋರಿಸಿ ಅಮ್ಮ ಕೈತುತ್ತು ತಿನಿಸಿದ, ಚಂದ್ರನ ಬೆಳಕಿನಲ್ಲಿ ರಾತ್ರಿ ರೈತ ಜಮೀನಿನಲ್ಲಿ ಕೆಲಸ ಮಾಡಿದ, ಚಂದಿರನ ಬೆಳದಿಂಗಳಲ್ಲಿ ಊರೆಲ್ಲ ಸುತ್ತಾಡಿದ ನೆನಪುಗಳು ಕಾಡುತ್ತವೆ. ಇನ್ನು ದೇಶದ ಕವಿಗಳೂ ಅಷ್ಟೇ, ಚಂದಿರನ ಬಗ್ಗೆ ಬಗೆಬಗೆಯ ಕವಿತೆಗಳನ್ನು ಬರೆಯುವ ಮೂಲಕ ನಮಗೆ ಚಂದಿರ ಏಕೆ ಮುಖ್ಯ ಎಂಬುದನ್ನು ಸಾರಿದ್ದಾರೆ. ಚಂದಮಾಮ ಎಂದೂ ಕೂಡ ವರ್ಣಿಸಿದ್ದಾರೆ. ಇಂತಹ ಚಂದಮಾಮ ಈಗ ಭೂಮಿಯಿಂದ ದೂರವಾಗುತ್ತಿದ್ದಾನೆ. ಅಷ್ಟೇ ಅಲ್ಲ, ಶೀಘ್ರದಲ್ಲೇ ನಮಗೆ ದಿನದಲ್ಲಿ 24 ಗಂಟೆ ಬದಲು 25 ಗಂಟೆ ಇರಲಿವೆ ಎಂದು ಅಧ್ಯಯನವೊಂದು ಭೀಕರ ಮಾಹಿತಿಯನ್ನು ಬಿಚ್ಚಿಟ್ಟಿದೆ.

ಹೌದು, ವರ್ಷದಿಂದ ವರ್ಷಕ್ಕೆ ಚಂದಿರನು ಭೂಮಿಯಿಂದ ದೂರವಾಗುತ್ತಿದ್ದಾನೆ ಎಂದು ಅಮೆರಿಕದ ಯುನಿವರ್ಸಿಟಿ ಆಫ್‌ ವಿಸ್ಕಾನ್ಸಿನ್-ಮ್ಯಾಡಿಸನ್‌ನ ತಜ್ಞರು ಮಾಡಿದ ಅಧ್ಯಯನ ವರದಿಯಲ್ಲಿ ಉಲ್ಲೇಖಿಸಲಾಗಿದೆ. ಸುಮಾರು 90 ದಶಲಕ್ಷ ವರ್ಷದಷ್ಟು ಹಳೆಯದಾದ ಶಿಲೆಯ ಮೇಲೆ ಗಮನ ಕೇಂದ್ರೀಕರಿಸಿ ಅಧ್ಯಯನ ನಡೆಸಲಾಗಿದ್ದು, ಭೂಮಿಯಿಂದ ಚಂದ್ರನು ಬೇರ್ಪಡುವುದರಿಂದ ಆಗುವ ಪರಿಣಾಮಗಳ ಕುರಿತು ಕೂಡ ಅವರು ಬೆಳಕು ಚೆಲ್ಲಿದ್ದಾರೆ. ಈ ಅಧ್ಯಯನ ವರದಿ ಈಗ ಜಗತ್ತಿನಾದ್ಯಂತ ಸುದ್ದಿಯಾಗಿದೆ.

ದಿನಕ್ಕೆ 25 ಗಂಟೆ ಹೇಗೆ?

ಪ್ರತಿ ವರ್ಷ ಚಂದ್ರನು ಭೂಮಿಯಿಂದ 3.8 ಸೆಂಟಿಮೀಟರ್‌ ದೂರವಾಗುತ್ತಿದ್ದಾನೆ. ಇದರಿಂದಾಗಿ ಭೂಮಿಯ ಒಂದು ದಿನದ ಅವಧಿಯು ಹೆಚ್ಚಾಗುತ್ತದೆ. ಅಂದರೆ, ಈಗ ದಿನಕ್ಕೆ 24 ಗಂಟೆ ಇದ್ದರೆ, ಮುಂಬರುವ ವರ್ಷಗಳಲ್ಲಿ ದಿನಕ್ಕೆ 25 ಗಂಟೆ ಇರಲಿವೆ. ಕಾಲಕಾಲಕ್ಕೆ ಭೂಮಿಯ ಮೇಲಿನ ಒಂದು ದಿನದಲ್ಲಿರುವ ಗಂಟೆಗಳ ಸಂಖ್ಯೆ ಹೆಚ್ಚಾಗುತ್ತದೆ. ಇದು ಸಹಜ ಪ್ರಕ್ರಿಯೆಯಾಗಿದೆ ಎಂಬುದಾಗಿ ವಿಜ್ಞಾನಿಗಳು ತಿಳಿಸಿದ್ದಾರೆ.

ಮುಂದಿನ 200 ದಶಲಕ್ಷ ವರ್ಷಗಳ ಬಳಿಕ ದಿನದಲ್ಲಿ 25 ಗಂಟೆ ಇರಲಿವೆ ಎಂದು ವಿಜ್ಞಾನಿಗಳು ವರದಿಯಲ್ಲಿ ಉಲ್ಲೇಖಿಸಿದ್ದಾರೆ. ಸುಮಾರು 1.4 ಶತಕೋಟಿ ವರ್ಷಗಳ ಹಿಂದೆ, ಭೂಮಿಯ ಅವಧಿಯು ದಿನಕ್ಕೆ ಕೇವಲ 18 ಗಂಟೆಯಾಗಿತ್ತು. ಕಾಲಕಾಲಕ್ಕೆ ಅದು ಹೆಚ್ಚಾಗುತ್ತ 24 ಗಂಟೆಗೆ ಏರಿಕೆಯಾಗಿದೆ. “ಭೂಮಿಯಿಂದ ಸೂರ್ಯನು ದೂರವಾಗುತ್ತ ಹೋದರೆ, ಭೂಮಿಯ ಮೇಲಿನ ಒಂದು ದಿನದ ಅವಧಿಯು ವಿಸ್ತರಣೆಯಾಗುತ್ತದೆ” ಎಂದು ವಿವಿ ಪ್ರೊಫೆಸರ್‌ ಸ್ಟೀಫನ್‌ ಮೇಯರ್ಸ್‌ ಹೇಳಿದ್ದಾರೆ.

ಇದನ್ನೂ ಓದಿ: DMK leader Controversy: ಶ್ರೀರಾಮನ ಅಸ್ತಿತ್ವಕ್ಕೆ ಪುರಾವೆಗಳೇ ಇಲ್ಲ: ಡಿಎಂಕೆ ನಾಯಕನ ವಿಡಿಯೋ ಫುಲ್‌ ವೈರಲ್‌

Continue Reading

ದೇಶ

Accident: ಬಾಲಕ ಚಲಾಯಿಸುತ್ತಿದ್ದ ಕಾರು ಸ್ಕೂಟರ್‌ಗೆ ಡಿಕ್ಕಿ; ಮಹಿಳೆ ಬಲಿ; ಭೀಕರ ದೃಶ್ಯ ವೈರಲ್‌

Accident: ಉತ್ತರ ಪ್ರದೇಶದ ಕಾನ್ಪುರದ ಜನನಿಬಿಡ ರಸ್ತೆಯಲ್ಲಿ 17 ವರ್ಷದ ಬಾಲಕ ಕಾರನ್ನು ಓಡಿಸುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ವಾಹನದ ಮೇಲೆ ಚಾಲಕನ ನಿಯಂತ್ರಣ ತಪ್ಪಿದ ನಂತರ ವೇಗವಾಗಿ ಬಂದ ಕಾರು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದಿದೆ. ಆಗ ಸ್ಕೂಟರ್‌ನಲ್ಲಿದ್ದ ಮಹಿಳೆ ಮತ್ತು ಮಗಳು ರಸ್ತೆಗೆ ಎಸೆಯಲ್ಪಟ್ಟಿದ್ದಾರೆ. ತಕ್ಷಣ ಸ್ಥಳೀಯರು ಧಾವಿಸಿ ಇಬ್ಬರನ್ನು ಆಸ್ಪತ್ರೆಗೆ ದಾಖಲಿಸಿದ್ದರು.

VISTARANEWS.COM


on

Koo

ಕಾನ್ಪುರ: ಅಪ್ರಾಪ್ತನೋರ್ವ ಪುಣೆಯಲ್ಲಿ ಕಾರು ಚಲಾಯಿಸಿ ಇಬ್ಬರು ಟೆಕ್ಕಿಗಳನ್ನು ಬಲಿ ಪಡೆದ ಪ್ರಕರಣ ಮಾಸುವ ಮುನ್ನವೇ ಕಾನ್ಪುರ(Kanpur)ದಲ್ಲೂ ಇಂತಹದ್ದೇ ಒಂದು ಘಟನೆ ವರದಿಯಾಗಿದೆ. 17ವರ್ಷದ ಬಾಲಕನೋರ್ವ ಚಲಾಯಿಸುತ್ತಿದ್ದ ಕಾರು ಸ್ಕೂಟರ್‌ಗೆ ಡಿಕ್ಕಿ ಹೊಡೆದಿದ್ದು(Accident), ಮಹಿಳೆ ಸಾವನ್ನಪ್ಪಿದ್ದಾಳೆ. ಸ್ಕೂಟರ್‌ನಲ್ಲಿದ್ದ ಮಹಿಳೆಯ ಮಗಳಿಗೆ ಗಂಭೀರ ಗಾಯಗಳಾಗಿವೆ. ಇನ್ನು ಈ ವಿಡಿಯೋ ಸಾಮಾಜಿಕ ಜಾಲತಾಣ(Social Media)ದಲ್ಲಿ ವೈರಲ್‌(Viral Video) ಆಗಿದೆ.

ಉತ್ತರ ಪ್ರದೇಶದ ಕಾನ್ಪುರದ ಜನನಿಬಿಡ ರಸ್ತೆಯಲ್ಲಿ 17 ವರ್ಷದ ಬಾಲಕ ಕಾರನ್ನು ಓಡಿಸುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ವಾಹನದ ಮೇಲೆ ಚಾಲಕನ ನಿಯಂತ್ರಣ ತಪ್ಪಿದ ನಂತರ ವೇಗವಾಗಿ ಬಂದ ಕಾರು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದಿದೆ. ಆಗ ಸ್ಕೂಟರ್‌ನಲ್ಲಿದ್ದ ಮಹಿಳೆ ಮತ್ತು ಮಗಳು ರಸ್ತೆಗೆ ಎಸೆಯಲ್ಪಟ್ಟಿದ್ದಾರೆ. ತಕ್ಷಣ ಸ್ಥಳೀಯರು ಧಾವಿಸಿ ಇಬ್ಬರನ್ನು ಆಸ್ಪತ್ರೆಗೆ ದಾಖಲಿಸಿದ್ದರು.

ಇನ್ನು ಚಿಕಿತ್ಸೆ ವೇಳೆ ಮಹಿಳೆ ಸಾವನ್ನಪ್ಪಿದ್ದಾಳೆ. ಆಕೆಯ ಮಗಳು ಬಹು ಮೂಳೆ ಮುರಿತಕ್ಕೆ ಒಳಗಾಗಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬಾಲಕನನ್ನು ವಶಕ್ಕೆ ಪಡೆಯಲಾಗಿದ್ದು, ತನಿಖೆ ನಡೆಸಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.

ಇಂತಹದ್ದೇ ಘಟನೆ ಪುಣೆಯಲ್ಲೂ ನಡೆದಿತ್ತು.ಮೇ 19ರಂದು ಪುಣೆಯಲ್ಲಿ ಅಪಘಾತ ಸಂಭವಿಸಿದೆ. ಕಲ್ಯಾಣಿ ನಗರದಲ್ಲಿ ಕುಡಿದು ವೇಗವಾಗಿ ಕಾರು ಚಲಾಯಿಸಿದ ಕಾರಣ ಮಧ್ಯಪ್ರದೇಶದ ಅಶ್ವಿನಿ ಕೋಷ್ಟ ಹಾಗೂ ಅನೀಶ್‌ ಅವಾಧಿಯಾ ಎಂಬ ಇಬ್ಬರು ಟೆಕ್ಕಿಗಳು ಮೃತಪಟ್ಟಿದ್ದಾರೆ. ವಿಶಾಲ್‌ ಅಗರ್ವಾಲ್‌ ರಿಯಲ್‌ ಎಸ್ಟೇಟ್‌ ಉದ್ಯಮಿಯಾಗಿದ್ದು, ಅವರು ಪ್ರಭಾವ ಬೀರಲು ಯತ್ನಿಸಿದ್ದರು. ಅಪಘಾತಕ್ಕೆ ಕಾರಣವಾದ 17 ವರ್ಷದ ಬಾಲಕನಿಗೆ ಪೊಲೀಸ್‌ ಠಾಣೆಯಲ್ಲಿ ಪಿಜ್ಜಾ ಕೂಡ ಪೂರೈಸಲಾಗಿತ್ತು ಎಂದು ವರದಿಗಳು ತಿಳಿಸಿವೆ. ಶ್ರೀಮಂತ ಕುಟುಂಬದ 17 ವರ್ಷದ ಬಾಲಕನಿಗೆ ಆತನ ತಾತನು ಹುಟ್ಟುಹಬ್ಬದ ಉಡುಗೊರೆಯಾಗಿ ಪೋರ್ಶೆ ಟೇಕ್ಯಾನ್‌ (ಸುಮಾರು 2 ಕೋಟಿ ರೂ.) ಕಾರು ಉಡುಗೊರೆಯಾಗಿ ನೀಡಿದ್ದರು ಎನ್ನಲಾಗಿದೆ.

ಅಪಘಾತದ ಒಂದು ತಿಂಗಳ ನಂತರ, ನ್ಯಾಯಮೂರ್ತಿಗಳಾದ ಭಾರತಿ ಡಾಂಗ್ರೆ ಮತ್ತು ಮಂಜುಷಾ ದೇಶಪಾಂಡೆ ಅವರ ನ್ಯಾಯಪೀಠವು ಬಾಲಾಪರಾಧಿ ನ್ಯಾಯ ಮಂಡಳಿಯ ನಿರ್ಧಾರ ಸರಿಯಲ್ಲ ಎಂದಿದೆ. ಅಪಘಾತವು ದುರದೃಷ್ಟಕರವಾಗಿದ್ದರೂ, ಅಪ್ರಾಪ್ತ ವಯಸ್ಸಿನ ಬಾಲಕನನ್ನು ವೀಕ್ಷಣಾ ಗೃಹದಲ್ಲಿ ಇರಿಸಲು ಸಾಧ್ಯವಿಲ್ಲ ಎಂದು ಹೇಳಿದೆ. ಹದಿಹರೆಯದವನನ್ನು ಬಿಡುಗಡೆ ಮಾಡುವಂತೆ ನ್ಯಾಯಾಲಯವು ಬಾಲಾಪರಾಧಿ ನ್ಯಾಯ ಮಂಡಳಿಗೆ ಆದೇಶಿಸಿತ್ತು.

ಇದನ್ನೂ ಓದಿ: Hit and Run Case: ಶಿವಸೇನೆ ಮುಖಂಡನ ಪುತ್ರನಿಂದ ಡ್ರಂಕ್‌ ಆ್ಯಂಡ್‌ ಡ್ರೈವ್‌; ಸ್ಕೂಟರ್‌ಗೆ BMW ಕಾರು ಡಿಕ್ಕಿ ಹೊಡೆದು ಮಹಿಳೆ ಸಾವು

Continue Reading

ದೇಶ

Wayanad Landslide: ವಯನಾಡು ಭೂಕುಸಿತ; ಎಲ್‌ಐಸಿ ಸೇರಿ ವಿಮಾ ಕಂಪನಿಗಳಿಗೆ ಕೇಂದ್ರ ಪ್ರಮುಖ ಸೂಚನೆ!

Wayanad Landslide: ವಯನಾಡು ಸೇರಿ ಹಲವು ಜಿಲ್ಲೆಗಳ ವಿಮಾ ಪಾಲಿಸಿದಾರರನ್ನು ಗುರುತಿಸಿ, ಅವರಿಗೆ ಕ್ಲೇಮ್‌ಗಳ ಮೂಲಕ ನೆರವಾಗಿ ಎಂದು ಎಲ್‌ಐಸಿ ಸೇರಿ ಹಲವು ಸಾರ್ವಜನಿಕ ವಲಯದ ವಿಮಾ ಕಂಪನಿಗಳಿಗೆ ಕೇಂದ್ರ ಸರ್ಕಾರ ಸೂಚನೆ ನೀಡಿದೆ.

VISTARANEWS.COM


on

Wayanad Landslide
Koo

ತಿರುವನಂತಪುರಂ: ದೇವರ ನಾಡು ಕೇರಳದ ವಯನಾಡಿನಲ್ಲಿ ಸಂಭವಿಸಿದ ಭೂಕುಸಿತವು 358 ಜನರನ್ನು ಬಲಿಪಡೆದಿದೆ. ಇನ್ನೂ 300 ಜನ ನಾಪತ್ತೆಯಾಗಿದ್ದು, ಸಾವಿನ ಸಂಖ್ಯೆ ದಿನೇದಿನೆ ಏರಿಕೆಯಾಗುತ್ತಿದೆ. ಇದರ ಬೆನ್ನಲ್ಲೇ, ಕೇಂದ್ರ ಸರ್ಕಾರವು ಭಾರತೀಯ ಜೀವ ವಿಮಾ ನಿಗಮ (LIC) ಸೇರಿ ಹಲವು ಸಾರ್ವಜನಿಕ ವಲಯದ ವಿಮಾ ಕಂಪನಿಗಳಿಗೆ ಮಹತ್ವದ ಸೂಚನೆ ನೀಡಿದೆ. “ಮೃತರು ಹಾಗೂ ಗಾಯಾಳುಗಳು ವಿಮೆ ಮಾಡಿಸಿದ್ದರೆ, ಅವರ ಕ್ಲೇಮ್‌ಅನ್ನು ಶೀಘ್ರದಲ್ಲೇ ನೀಡುವ ಮೂಲಕ ನೆರವಾಗಿ” ಎಂದು ಸೂಚಿಸಿದೆ.

ದೇಶದ ಸಾರ್ವಜನಿಕ ವಲಯದ ವಿಮಾ ಸಂಸ್ಥೆಗಳಾದ ಎಲ್‌ಐಸಿ, ನ್ಯೂ ಇಂಡಿಯಾ ಇನ್ಶುರೆನ್ಸ್‌, ಓರಿಯಂಟಲ್‌ ಇನ್ಶುರೆನ್ಸ್‌ ಹಾಗೂ ಯುನೈಟೆಡ್‌ ಇಂಡಿಯಾ ಕಂಪನಿಗಳಿಗೆ ಕೇಂದ್ರ ಹಣಕಾಸು ಸಚಿವಾಲಯವು ಸೂಚನೆ ನೀಡಿದೆ. ಸಂತ್ರಸ್ತ ಕುಟುಂಬಗಳಿಗೆ ಎಷ್ಟು ಸಾಧ್ಯವೋ ಅಷ್ಟು ನೆರವಾಗಿ ಎಂದು ಸೂಚಿಸಿದೆ. ಈಗಾಗಲೇ ವಿಮಾ ಕಂಪನಿಗಳು ಸ್ಥಳೀಯ ಪತ್ರಿಕೆಗಳು, ಸಾಮಾಜಿಕ ಜಾಲತಾಣ, ಕಂಪನಿ ವೆಬ್‌ಸೈಟ್‌ ಹಾಗೂ ಎಸ್‌ಎಂಎಸ್‌ ಮೂಲಕ ಪಾಲಿಸಿ ಹೋಲ್ಡರ್‌ಗಳನ್ನು ಸಂಪರ್ಕಿಸಲು ಯತ್ನಿಸುತ್ತಿವೆ ಎಂದು ಕೂಡ ಕೇಂದ್ರ ಸರ್ಕಾರ ತಿಳಿಸಿದೆ.

ವಯನಾಡು, ಪಾಲಕ್ಕಾಡ್‌, ಕಲ್ಲಿಕೋಟೆ, ಮಲಪ್ಪುರಂ ಹಾಗೂ ತ್ರಶ್ಶೂರ್‌ನಲ್ಲಿರುವ ಪಾಲಿಸಿದಾರರನ್ನು ಸಂಪರ್ಕಿಸುವ, ಅವರ ಸಂಪರ್ಕ ಸಂಖ್ಯೆಯನ್ನು ಪತ್ತೆ ಹಚ್ಚುವ ಪ್ರಯತ್ನ ಮಾಡಲಾಗುತ್ತದೆ. ಆ ಮೂಲಕ ವಿಮಾ ಸೌಲಭ್ಯದ ಮೂಲಕವಾದರೂ ಸಂತ್ರಸ್ತರಿಗೆ ನೆರವಾಗಲು ಕೇಂದ್ರ ಸರ್ಕಾರ ತೀರ್ಮಾನಿಸಿದೆ.

ಕರ್ನಾಟಕದಲ್ಲೂ ಕಟ್ಟೆಚ್ಚರ

ವಯನಾಡು ದುರಂತವನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿರುವ ರಾಜ್ಯ ಸರ್ಕಾರವು ಕರ್ನಾಟಕದ ಯಾವುದೇ ಮೂಲೆಯಲ್ಲಿ ಪ್ರವಾಹ, ಭೂಕುಸಿತ ಅಥವಾ ಇತರೇ ಯಾವುದೇ ನೈಸರ್ಗಿಕ ವಿಕೋಪಗಳು ಸಂಭವಿಸಿದರೆ ಅದನ್ನು ಸಮರ್ಥವಾಗಿ ಎದುರಿಸಲು ಸನ್ನದ್ಧ ಸ್ಥಿತಿಯಲ್ಲಿರಲು ಜಿಲ್ಲಾಡಳಿತಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದೆ. ನಿನ್ನೆ ಮುಖ್ಯಮಂತ್ರಿಗಳು ಕೊಡಗಿನಲ್ಲಿ ಭೂಕುಸಿತ ಸಂಭವಿಸಿದ ಜಾಗಕ್ಕೆ ಭೇಟಿ ನೀಡಿದ್ದರು.

“ಕಸ್ತೂರಿ ರಂಗನ್ ವರದಿಯನ್ನು ತಿರಸ್ಕರಿಸಬೇಕು ಎನ್ನುವುದು ನಮ್ಮ ನಿಲುವಾಗಿದೆ. ಈ ಬಗ್ಗೆ ಅರಣ್ಯ ಸಚಿವರ ಜೊತೆ ಮತ್ತೊಮ್ಮೆ ಚರ್ಚಿಸಿ ಅಂತಿಮ ತೀರ್ಮಾನ ಮಾಡಲಾಗುವುದು” ಎಂದು ಭೇಟಿಯ ಬಳಿಕ ಹೇಳಿದ್ದರು. “ಜಿಲ್ಲೆಯಲ್ಲಿ 20 ಕಡೆ ಭೂ ಕುಸಿತ ಆಗಿದೆ, ಬಹುತೇಕ ಕಡೆಗಳಲ್ಲಿ ಸಣ್ಣ ಪ್ರಮಾಣದಲ್ಲಿ ಭೂಮಿ ಜಾರಿದೆ. ಅದೃಷ್ಟವಶಾತ್ ಪ್ರಾಣ ಹಾನಿ ಆಗಿಲ್ಲ. ಹಲವರು ಗಾಯಗೊಂಡಿದ್ದಾರೆ.‌ 67 ಮನೆಗಳು ಪೂರ್ಣಹಾನಿ ಆಗಿವೆ. 176 ಮನೆಗಳು ಭಾಗಶಃ ಹಾನಿ ಆಗಿವೆ. 24 ಗಂಟೆಗಳ ಒಳಗೆ ಪೂರ್ಣ ಮತ್ತು ಭಾಗಶಃ ಹಾನಿ ಆಗಿರುವ ಘಟನೆಗಳೂ ನಡೆದಿವೆ. ಒಂದು ಲಕ್ಷದ 20 ಸಾವಿರ ರೂಪಾಯಿ ಜೊತೆಗೆ ಮನೆ ಕಟ್ಟಿ ಕೊಡಲಾಗುವುದು. ಭಾಗಶಃ ಹಾನಿ ಆಗಿರುವ ಮನೆಗಳಿಗೆ 50 ಸಾವಿರ ರೂಪಾಯಿ ಪರಿಹಾರ ನೀಡಲಾಗುವುದು.‌ ಇದರಲ್ಲಿ 43 ಸಾವಿರ ರಾಜ್ಯ ಸರ್ಕಾರದ ಹಣ. ಈಗಾಗಲೇ ಸಂತ್ರಸ್ಥರ ಖಾತೆಗೆ ಹಣ ವರ್ಗಾವಣೆ ಆಗಿದೆ. 16 ಜಾನುವಾರು ಸತ್ತಿವೆ. ತಲಾ 35 ಸಾವಿರ ಪರಿಹಾರ ನೀಡಿದ್ದೇನೆ. 14 ಪರಿಹಾರ ಕ್ಯಾಂಪ್ ಗಳನ್ನು ತೆರೆಯಲಾಗಿದೆ. 10 ಕ್ಯಾಂಪ್ ಗಳಲ್ಲಿ 186 ಮಂದಿ ಇದ್ದಾರೆ. ತೋರಾ ಕ್ಯಾಂಪ್ ನಲ್ಲಿ ಇರುವವರ ಜೊತೆ ನಾನೇ ನೇರವಾಗಿ ಮಾತನಾಡಿದ್ದೇನೆ” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಇದನ್ನೂ ಓದಿ: Wayanad Landslide: ವಯನಾಡು ಭೂಕುಸಿತಕ್ಕೆ ಗೋಹತ್ಯೆಯೇ ಕಾರಣ ಎಂದ ಬಿಜೆಪಿ ನಾಯಕ; ಅವರ ವಿವರಣೆ ಹೀಗಿದೆ!

Continue Reading
Advertisement
PSI Parshuram Death Case
ಕರ್ನಾಟಕ11 seconds ago

PSI Parshuram Death Case: ಯಾದಗಿರಿ ಪಿಎಸ್ಐ ಪರಶುರಾಮ್ ಸಾವು ಪ್ರಕರಣ ಸಿಐಡಿಗೆ ವರ್ಗಾವಣೆ

Deepika Kumari
ಪ್ರಮುಖ ಸುದ್ದಿ8 mins ago

Deepika Kumari : ಪದಕದ ಭರವಸೆ ಮೂಡಿಸಿ ಬರಿಗೈಯಲ್ಲಿ ವಾಪಸಾದ ಆರ್ಚರ್​ ದೀಪಿಕಾ ಕುಮಾರಿ

Chandigarh Court
ದೇಶ47 mins ago

ಕೋರ್ಟ್‌ನಲ್ಲೇ ಅಳಿಯನನ್ನು ಗುಂಡಿಕ್ಕಿ ಕೊಂದ ಮಾಜಿ ಪೊಲೀಸ್‌ ಅಧಿಕಾರಿ; ಕೃತ್ಯಕ್ಕೆ ಕಾರಣವೇನು?

karnataka weather forecast
ಮಳೆ1 hour ago

Karnataka Weather : ಹೊನ್ನಾವರದ ಹಲವೆಡೆ ನೆರೆ ಪರಿಸ್ಥಿತಿ; ಭಾನುವಾರವೂ ಮಳೆ ಎಚ್ಚರಿಕೆ

2nd PUC Exam Result 2024
ಕರ್ನಾಟಕ1 hour ago

2nd PUC Exam Result 2024: ದ್ವಿತೀಯ ಪಿಯುಸಿ ಪರೀಕ್ಷೆ-1, 2, 3ರಲ್ಲಿ ಒಟ್ಟಾರೆ ಶೇ. 84.87 ವಿದ್ಯಾರ್ಥಿಗಳು ಪಾಸ್; ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ

Moon
ದೇಶ2 hours ago

Moon: ಭೂಮಿಯಿಂದ ದೂರ ಹೊರಟ ಚಂದ್ರ, ಶೀಘ್ರದಲ್ಲೇ ದಿನಕ್ಕೆ 24 ಅಲ್ಲ 25 ಗಂಟೆಗಳು ಇರಲಿವೆ!

ಪ್ರಮುಖ ಸುದ್ದಿ2 hours ago

Mohammed Shami : ಭಾರತ ತಂಡ ಬಿಟ್ಟು ಬೇರೆ ತಂಡಕ್ಕೆ ಮರಳಲು ಮೊಹಮ್ಮದ್ ಶಮಿ ನಿರ್ಧಾರ

MS Dhoni
ಪ್ರಮುಖ ಸುದ್ದಿ2 hours ago

MS Dhoni : ವಿರಾಟ್ ಕೊಹ್ಲಿ ಜತೆಗಿನದ ಸಂಬಂಧವನ್ನು ವಿವರಿಸಿದ ಕೂಲ್ ಕ್ಯಾಪ್ಟನ್​ ಮಹೇಂದ್ರ ಸಿಂಗ್ ಧೋನಿ

KCET 2024
ಬೆಂಗಳೂರು3 hours ago

KCET 2024 : ನೀಟ್‌ ಮೊದಲ ಸುತ್ತಿನ ಕೌನ್ಸೆಲಿಂಗ್ ನಂತರವೇ ಕೆಸಿಇಟಿ ಸೀಟು ಹಂಚಿಕೆ ಪ್ರಕ್ರಿಯೆ ಶುರು

Shiradi ghat landslide
ಕರ್ನಾಟಕ3 hours ago

Shiradi ghat landslide: ಶಿರಾಡಿ ಘಾಟ್ ಗುಡ್ಡ ಕುಸಿತದ ಭೀಕರತೆಗೆ ಸಿಎಂ‌ ಶಾಕ್; 90 ಡಿಗ್ರಿ ನೇರವಾಗಿ ಗುಡ್ಡ ಸೀಳಿದ್ದಕ್ಕೆ ಅಧಿಕಾರಿಗೆ ತರಾಟೆ

Sharmitha Gowda in bikini
ಕಿರುತೆರೆ10 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ10 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ10 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ10 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

galipata neetu
ಕಿರುತೆರೆ8 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ8 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ11 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ9 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

karnataka rain
ಮಳೆ7 hours ago

Karnataka Rain : ಕಾರವಾರದ ಸುರಂಗ ಮಾರ್ಗದಲ್ಲಿ ಕುಸಿದ ಕಲ್ಲು; ಟನೆಲ್‌ ಬಂದ್‌ ಮಾಡಿದ ಪೊಲೀಸರು

karnataka Rain
ಮಳೆ2 days ago

Karnataka Rain : ಹುಲಿಗೆಮ್ಮದೇವಿ ದೇವಸ್ಥಾನದ ಸ್ನಾನ ಘಟ್ಟ ಜಲಾವೃತ;ಯಾದಗಿರಿ-ರಾಯಚೂರು ಸಂಪರ್ಕ ಕಡಿತ

Karnataka Rain
ಮಳೆ2 days ago

Karnataka Rain: ಚಿಕ್ಕಮಗಳೂರಿನಲ್ಲಿ ಮಳೆ ಆರ್ಭಟಕ್ಕೆ ಮನೆ ಮೇಲೆ ಕುಸಿದ ಗುಡ್ಡ; ಕೂದಲೆಳೆ ಅಂತರದಲ್ಲಿ ಪಾರು

karnataka Rain
ಮಳೆ2 days ago

Karnataka Rain : ತಿ. ನರಸೀಪುರ-ತಲಕಾಡು ಸಂಚಾರ ಬಂದ್; ಸುತ್ತೂರು ಸೇತುವೆ ಮುಳುಗಡೆ

karnataka Rain
ಮಳೆ4 days ago

Karnataka rain : ಭದ್ರಾ ನದಿಯಲ್ಲಿ ಕೊಚ್ಚಿ ಹೋದ ಹಸು; ಬೈಂದೂರಿನಲ್ಲಿ ಬೃಹತ್ ಗಾತ್ರದ ಮೊಸಳೆ ಪ್ರತ್ಯಕ್ಷ

Karnataka Rain
ಮಳೆ4 days ago

Karnataka Rain : ಭಾರಿ ಮಳೆಗೆ ಬಾಳೆಹೊನ್ನೂರು ಮುಳುಗಡೆ; ನೆರೆಗೆ ಬೋಟ್‌ ಮೊರೆ ಹೋದ ಜನರು

Bharachukki falls
ಚಾಮರಾಜನಗರ4 days ago

Bharachukki Falls : ಭರಚುಕ್ಕಿ ಜಲಪಾತಕ್ಕೆ ಕಳ್ಳ ಮಾರ್ಗದಿಂದ ಹೋದೋರಿಗೆ ಬಸ್ಕಿ ಹೊಡೆಸಿದ ಪೊಲೀಸರು!

karnataka Rain
ಮಳೆ5 days ago

Karnataka Rain: ಮತ್ತೆ ಶುರು ಮಳೆ ಅಬ್ಬರ; ಗಾಳಿಗೆ ಹಾರಿ ಹೋದ ಮನೆಗಳ ಚಾವಣಿ, ಶಿರಾಡಿಘಾಟ್‌ನಲ್ಲಿ ಮತ್ತೆ ಭೂ ಕುಸಿತ

Elephant combing Makna elephant captured near Bannerghatta
ಬೆಂಗಳೂರು ಗ್ರಾಮಾಂತರ5 days ago

Elephant combing: ಭೀಮ, ಮಹೇಂದ್ರರ ಮುಂದೆ ಮಂಡಿಯೂರಿದ ಮಕ್ನಾ ಆನೆ; ಹೇಗಿತ್ತು ಗೊತ್ತಾ ಕಾರ್ಯಾಚರಣೆ

karnataka rain
ಮಳೆ5 days ago

Karnataka rain: ಪ್ರವಾಹದ ಭೀಕರತೆ; ಹಳ್ಳದಲ್ಲಿ ತೇಲಿಬಂದ ಎಮ್ಮೆಗಳ ಕಳೇಬರ

ಟ್ರೆಂಡಿಂಗ್‌