IND VS NZ | ಕಿವೀಸ್​​ ವಿರುದ್ಧದ ಸರಣಿಯಲ್ಲಿ ಸ್ವತಂತ್ರವಾಗಿ ಆಡುವಂತೆ ಹಾರ್ದಿಕ್​ ಪಡೆಗೆ ಲಕ್ಷ್ಮಣ್‌ ಕಿವಿಮಾತು - Vistara News

Latest

IND VS NZ | ಕಿವೀಸ್​​ ವಿರುದ್ಧದ ಸರಣಿಯಲ್ಲಿ ಸ್ವತಂತ್ರವಾಗಿ ಆಡುವಂತೆ ಹಾರ್ದಿಕ್​ ಪಡೆಗೆ ಲಕ್ಷ್ಮಣ್‌ ಕಿವಿಮಾತು

ನ್ಯೂಜಿಲೆಂಡ್​ ವಿರುದ್ಧದ ಮೊದಲ ಟಿ20 ಪಂದ್ಯ ಶುಕ್ರವಾರ ನಡೆಯಲಿದ್ದು ಪಂದ್ಯಕ್ಕೂ ಮುನ್ನ ನಾಯಕ ಹಾರ್ದಿಕ್​ ಪಾಂಡ್ಯ ಪಡೆಗೆ ಹಂಗಾಮಿ ಕೋಚ್​ ವಿವಿಎಸ್‌ ಲಕ್ಷ್ಮಣ್‌ ದೈರ್ಯ ತುಂಬಿದ್ದಾರೆ.

VISTARANEWS.COM


on

India tour of New Zealand
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ವೆಲ್ಲಿಂಗ್ಟನ್​: ನ್ಯೂಜಿಲೆಂಡ್(IND VS NZ) ವಿರುದ್ಧದ ಸರಣಿಯಲ್ಲಿ ಟೀಮ್​ ಇಂಡಿಯಾ ಭಯಮುಕ್ತವಾಗಿ ಹಾಗೂ ಸ್ವತಂತ್ರವಾಗಿ ಆಡಬೇಕೆಂದು ಪಂದ್ಯಕ್ಕೂ ಮುನ್ನವೇ ಆಟಗಾರರಿಗೆ ಹಂಗಾಮಿ ಕೋಚ್​ ವಿವಿಎಸ್‌ ಲಕ್ಷ್ಮಣ್‌ ದೈರ್ಯ ತುಂಬಿದ್ದಾರೆ. ಉಭಯ ತಂಡಗಳ ಸರಣಿ ಶುಕ್ರವಾರ ಟಿ20 ಪಂದ್ಯದ ಮೂಲಕ ಆರಂಭಗೊಳ್ಳಲಿದೆ.

ಟೀಮ್​ ಇಂಡಿಯಾದ ಮುಖ್ಯ ಕೋಚ್‌ ರಾಹುಲ್‌ ದ್ರಾವಿಡ್‌ ಅವರ ಅನುಪಸ್ಥಿಯಲ್ಲಿ ನ್ಯೂಜಿಲೆಂಡ್‌ ಪ್ರವಾಸಕ್ಕೆ ಹಂಗಾಮಿ ಕೋಚ್‌ ಆಗಿ ಕಾರ್ಯ ನಿರ್ವಹಿಸುತ್ತಿರುವ ವಿವಿಎಸ್‌ ಲಕ್ಷ್ಮಣ್‌ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, “ಟಿ20 ಕ್ರಿಕೆಟ್‌ನಲ್ಲಿ ಭಯಮುಕ್ತವಾಗಿ ಹಾಗೂ ಸ್ವತಂತ್ರವಾಗಿ ಆಡಬೇಕಾಗುತ್ತದೆ. ಅದರಂತೆ ಮೈದಾನಕ್ಕೆ ತೆರಳಿ ತಮ್ಮನ್ನು ತಾವು ಅಭಿವ್ಯಕ್ತಗೊಳಿಸಬಲ್ಲ ಆಟಗಾರರು ನಮ್ಮಲ್ಲಿದ್ದಾರೆ. ಏನೇ ಆಗಲಿ ಭಯಮುಕ್ತರಾಗಿ ಆಡುವಂತೆ ನಾಯಕ ಹಾಗೂ ಆಟಗಾರರಿಗೆ ತಿಳಿಸಿದ್ದೇವೆ” ಎಂದು ಹೇಳಿದರು.

ಗೊಂದಲ ನಿವಾರಿಸಿ

ನ್ಯೂಜಿಲೆಂಡ್​ನ ಪಿಚ್‌ಗಳು ಹಾಗೂ ಸನ್ನಿವೇಶಗಳನ್ನು ಮೊದಲು ಮನಸಿನಿಂದ ತೆಗೆದುಹಾಕಿ ಈ ಟಿ20 ಸರಣಿಯಲ್ಲಿ ಭಯಮುಕ್ತ ಕ್ರಿಕೆಟ್‌ ಆಡಬೇಕು. ಅದರಂತೆ ಯಾವುದೇ ಗೊಂದಲಕ್ಕೆ ಎಡೆ ಮಾಡಬಾರದು ಎಂದು ವಿವಿಎಸ್‌ ಲಕ್ಷ್ಮಣ್ ಆಟಗಾರರಿಗೆ ಸಲಹೆ ನೀಡಿದ್ದಾರೆ.

ಪಾಂಡ್ಯ ಅದ್ಭುತ ನಾಯಕ.

ಹಾರ್ದಿಕ್‌ ಪಾಂಡ್ಯ ನಾಯಕತ್ವದ ಬಗ್ಗೆ ಮಾತನಾಡಿದ ಲಕ್ಷ್ಮಣ್‌, ಪಾಂಡ್ಯ ಅದ್ಭುತ ನಾಯಕ ಎಂಬುವುದನ್ನು ಇಂಡಿಯನ್‌ ಪ್ರೀಮಿಯರ್‌ ಲೀಗ್‌ (ಐಪಿಎಲ್‌) ಟೂರ್ನಿಯಲ್ಲಿ ಮತ್ತು ಐರ್ಲೆಂಡ್‌ ಟಿ20 ಸರಣಿಯ ವೇಳೆ ನಾವು ನೋಡಿದ್ದೇವೆ. ಆಟಗಾರರಿಗೂ ಕೂಡ ಹಾರ್ದಿಕ್‌ ಮೇಲೆ ಹೆಚ್ಚಿನ ವಿಶ್ವಾಸವಿದೆ” ಎಂದು ವಿವಿಎಸ್‌ ಲಕ್ಷ್ಮಣ್‌ ಹೇಳಿದರು.

ಇದನ್ನೂ ಓದಿ | IND VS NZ | ಭಾರತ ಮತ್ತು ನ್ಯೂಜಿಲೆಂಡ್​ ವಿರುದ್ಧದ ಸರಣಿಯ ನೇರ ಪ್ರಸಾರ, ವೇಳಾಪಟ್ಟಿಯ ಮಾಹಿತಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಆರೋಗ್ಯ

ICMR Guidelines: ಕಬ್ಬಿನ ಹಾಲು ಕುಡಿದರೆ ಆರೋಗ್ಯಕ್ಕೆ ಹಾನಿಯೆ? ICMR ಅಭಿಪ್ರಾಯ ಹೀಗಿದೆ

ಭಾರತದಲ್ಲಿ ವಿಶೇಷವಾಗಿ ಬೇಸಿಗೆಯಲ್ಲಿ ಹೆಚ್ಚಿನವರು ಆರೋಗ್ಯಕರವೆಂದು ಕಬ್ಬಿನ ರಸವನ್ನು ಸೇವಿಸುತ್ತಾರೆ. ಆದರೆ ಇದರಲ್ಲಿ ಹೆಚ್ಚಿನ ಸಕ್ಕರೆಯಂಶ ಇರುತ್ತದೆ. ಐಸಿಎಂಆರ್ ಮಾರ್ಗಸೂಚಿ (ICMR Guidelines) ಪ್ರಕಾರ ಬೇಸಗೆಯಲ್ಲಿ ಕಬ್ಬಿಣ ರಸದ ಸೇವನೆಯನ್ನುಆದಷ್ಟು ಕಡಿಮೆ ಮಾಡಿದರೆ ಒಳ್ಳೆಯದು.

VISTARANEWS.COM


on

By

ICMR Guidelines
Koo

ಕೆಲವೆಡೆ ಮಳೆ (rain) ಸುರಿದರೂ ಇನ್ನು ಕೆಲವೆಡೆ ಬಿಸಿಲಿನ (summer) ತೀವ್ರತೆ ಇನ್ನೂ ಕಡಿಮೆಯಾಗಿಲ್ಲ. ಬೇಸಿಗೆಯ ಶಾಖದಿಂದ ದೇಹಾರೋಗ್ಯವನ್ನು ಕಾಪಾಡಿಕೊಳ್ಳಲು ಅನೇಕರು ಕಬ್ಬಿನ ರಸ (sugercane juice), ಹಣ್ಣಿನ ರಸ (fruit juice) ಮತ್ತು ಕೋಲ್ಡ್ ಕಾಫಿಗಳಂತಹ (cold coffee) ಪಾನೀಯಗಳನ್ನು ಸೇವಿಸುತ್ತಾರೆ. ಆದರೆ ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್ (ICMR Guidelines) ಜನಪ್ರಿಯ ಬಾಯಾರಿಕೆ ತಣಿಸುವ ಈ ಪಾನೀಯಗಳ ಅತಿಯಾದ ಸೇವನೆಯ ಬಗ್ಗೆ ಎಚ್ಚರಿಕೆಯನ್ನು ನೀಡಿದೆ.

ಭಾರತದಲ್ಲಿ ವಿಶೇಷವಾಗಿ ಬೇಸಿಗೆಯಲ್ಲಿ ಹೆಚ್ಚಿನವರು ಆರೋಗ್ಯಕರವೆಂದು ಕಬ್ಬಿನ ರಸವನ್ನು ಸೇವಿಸುತ್ತಾರೆ. ಆದರೆ ಇದರಲ್ಲಿ ಹೆಚ್ಚಿನ ಸಕ್ಕರೆಯಂಶ ಇರುತ್ತದೆ. ಆದ್ದರಿಂದ ಇದರ ಸೇವನೆಯನ್ನು ಕಡಿಮೆ ಮಾಡಬೇಕು ಎನ್ನುತ್ತದೆ ಐಸಿಎಂಆರ್. ತಂಪು ಪಾನೀಯಗಳು ನೀರು ಅಥವಾ ತಾಜಾ ಹಣ್ಣುಗಳಿಗೆ ಪರ್ಯಾಯವಲ್ಲ. ಹೀಗಾಗಿ ಆದಷ್ಟು ತಂಪು ಪಾನೀಯಗಳ ಸೇವನೆಯನ್ನು ಕಡಿಮೆ ಮಾಡಬೇಕು. ಬದಲಿಗೆ ಮಜ್ಜಿಗೆ, ಸಕ್ಕರೆ ಸೇರಿಸದೆ ನಿಂಬೆ ನೀರು, ಸಂಪೂರ್ಣ ಹಣ್ಣಿನ ರಸ ಮತ್ತು ತೆಂಗಿನ ನೀರು ಸೇವನೆ ಒಳ್ಳೆಯದು ಎಂದು ಹೇಳಿದೆ.

ಕಬ್ಬಿನ ರಸ ಅಪಾಯಕಾರಿ ಏಕೆ?

ಆಹಾರ ತಜ್ಞರ ಪ್ರಕಾರ ಕಬ್ಬಿನ ರಸದಲ್ಲಿ ನೈಸರ್ಗಿಕ ಸಕ್ಕರೆ ಪ್ರಮಾಣ ಸಮೃದ್ಧವಾಗಿದೆ. ಇದು ವಿಶೇಷವಾಗಿ ಬಿಸಿ ವಾತಾವರಣದಲ್ಲಿ ಹಲವಾರು ಆರೋಗ್ಯ ಅಪಾಯಗಳನ್ನು ಉಂಟುಮಾಡುತ್ತದೆ ಎನ್ನುತ್ತಾರೆ.
ನಿರ್ಜಲೀಕರಣ

ಹೆಚ್ಚಿನ ಸಕ್ಕರೆ ಸೇವನೆಯು ದೇಹದಲ್ಲಿ ಹೆಚ್ಚಿನ ನೀರಿನ ನಷ್ಟಕ್ಕೆ ಕಾರಣವಾಗಬಹುದು. ಸಕ್ಕರೆಯು ಚಯಾಪಚಯಗೊಳಿಸಲು ದೇಹಕ್ಕೆ ಹೆಚ್ಚಿನ ನೀರು ಬೇಕಾಗುತ್ತದೆ. ದೇಹವು ಈಗಾಗಲೇ ಬೆವರಿನ ಮೂಲಕ ಗಮನಾರ್ಹವಾದ ನೀರನ್ನು ಕಳೆದುಕೊಂಡಾಗ ಬೇಸಿಗೆಯಲ್ಲಿ ಇದು ವಿಶೇಷವಾಗಿ ಸಮಸ್ಯಾತ್ಮಕವಾಗಿದೆ.

ಮಧುಮೇಹ

ಕಬ್ಬಿನ ರಸದಿಂದ ದೇಹ ಸಕ್ಕರೆಯನ್ನು ತ್ವರಿತವಾಗಿ ಹೀರಿಕೊಳ್ಳುವುದರಿಂದ ರಕ್ತದಲ್ಲಿನ ಗ್ಲೂಕೋಸ್ ಮಟ್ಟದಲ್ಲಿ ಏರುಪೇರಾಗುವುದು. ಇನ್ಸುಲಿನ್ ಪ್ರತಿರೋಧ ಮತ್ತು ಟೈಪ್ 2 ಮಧುಮೇಹದ ಅಪಾಯವನ್ನು ಇದು ಹೆಚ್ಚಿಸುತ್ತದೆ.

ತೂಕ ಹೆಚ್ಚಳ

ಸಕ್ಕರೆ ಪಾನೀಯಗಳಿಂದ ಹೆಚ್ಚಿನ ಕ್ಯಾಲೋರಿಗಳು ತೂಕ ಹೆಚ್ಚಾಗಲು ಕಾರಣವಾಗುತ್ತದೆ. ಇದು ಮಧುಮೇಹ ಮತ್ತು ಹೃದಯರಕ್ತನಾಳದ ಕಾಯಿಲೆಗಳಂತಹ ಆರೋಗ್ಯ ಸಮಸ್ಯೆಗಳನ್ನು ಇನ್ನಷ್ಟು ಸಂಕೀರ್ಣಗೊಳಿಸುತ್ತದೆ.

ಹಣ್ಣು ಮತ್ತು ಹಣ್ಣಿನ ರಸ ಯಾವುದು ಒಳ್ಳೆಯದು?

ಹಣ್ಣುಗಳು ಪೌಷ್ಟಿಕಾಂಶದ ಫೈಬರ್ ಅನ್ನು ಹೊಂದಿರುತ್ತವೆ. ಇದು ಜ್ಯೂಸ್ ಮಾಡುವಾಗ ಹೊರಹಾಕಲ್ಪಡುತ್ತದೆ. ಫೈಬರ್ ನಿಮ್ಮನ್ನು ದೀರ್ಘಕಾಲದವರೆಗೆ ಹೊಟ್ಟೆ ತುಂಬಿದ ಅನುಭವವನ್ನು ಕೊಡುತ್ತದೆ. ಇದು ಜೀರ್ಣಕ್ರಿಯೆಗೆ ಸಹಾಯ ಮಾಡುತ್ತದೆ. ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸುತ್ತದೆ. ಸಂಪೂರ್ಣ ಹಣ್ಣುಗಳನ್ನು ಅಗಿಯುವುದರಿಂದ ಲಾಲಾರಸದ ಉತ್ಪಾದನೆ ಹೆಚ್ಚಿಸುತ್ತದೆ. ಇದು ಜೀರ್ಣಕ್ರಿಯೆಯನ್ನು ಸುಗಮಗೊಳಿಸುತ್ತದೆ ಆದರೆ ಸಕ್ಕರೆ ಹೀರಿಕೊಳ್ಳುವಿಕೆಯ ವೇಗವನ್ನು ನಿಯಂತ್ರಿಸುತ್ತದೆ.

ನೀರು ಮತ್ತು ತಂಪು ಪಾನೀಯ

ಹಲವು ಬಾರಿ ನೀರಿಗೆ ಬದಲಾಗಿ ತಂಪು ಪಾನೀಯಗಳನ್ನು ಸೇವಿಸುತ್ತೇವೆ. ಇದು ಆರೋಗ್ಯಕರವಲ್ಲ ಎನ್ನುತ್ತಾರೆ ಆಹಾರ ತಜ್ಞರು. ತಂಪು ಪಾನೀಯಗಳು ಹೆಚ್ಚಿನ ಪ್ರಮಾಣದ ಸಕ್ಕರೆಗಳನ್ನು ಹೊಂದಿರುತ್ತವೆ. ಇದು ಹೆಚ್ಚಿನ ಕ್ಯಾಲೋರಿ ಸೇವನೆ ಮತ್ತು ಸಂಭಾವ್ಯ ತೂಕ ಹೆಚ್ಚಳಕ್ಕೆ ಕಾರಣವಾಗುತ್ತದೆ. ಅನೇಕ ತಂಪು ಪಾನೀಯಗಳು ಕೃತಕ ಸುವಾಸನೆ, ಬಣ್ಣ ಮತ್ತು ಸಂರಕ್ಷಕಗಳನ್ನು ಒಳಗೊಂಡಿರುತ್ತವೆ. ಇದು ಕಾಲಾನಂತರದಲ್ಲಿ ಆರೋಗ್ಯದ ಮೇಲೆ ಪ್ರತಿಕೂಲ ಪರಿಣಾಮಗಳನ್ನು ಉಂಟು ಮಾಡುತ್ತದೆ. ತಂಪು ಪಾನೀಯಗಳಲ್ಲಿನ ಕೆಫೀನ್ ಮತ್ತು ಆಮ್ಲೀಯ ಅಂಶವು ಮೂತ್ರವರ್ಧಕ ಪರಿಣಾಮವನ್ನು ಹೊಂದಿರುತ್ತದೆ. ಇದು ನಿರ್ಜಲೀಕರಣಕ್ಕೆ ಕಾರಣವಾಗುತ್ತದೆ. ಭಾರತದಂತಹ ಬಿಸಿ ವಾತಾವರಣದಲ್ಲಿ ಇದು ವಿಶೇಷವಾಗಿ ಅಪಾಯಕಾರಿ.

ಬೇಸಿಗೆಯಲ್ಲಿ ಚಹಾ, ಕಾಫಿ

ಪ್ರತಿದಿನ ಎಷ್ಟು ಕಾಫಿ ಮತ್ತು ಚಹಾವನ್ನು ಸೇವಿಸುತ್ತೀರಿ ಎಂಬುದರ ಬಗ್ಗೆ ಗಮನವಿರಲಿ. ಬರಿ ಹೊಟ್ಟೆಗೆ ಚಹಾ, ಕಾಫಿ ಸೇವನೆಯನ್ನು ತಪ್ಪಿಸಿ. ಕುಡಿಯಲೇ ಬೇಕು ಅನಿಸಿದರೆ ಉಪಹಾರ ಮತ್ತು ಮಧ್ಯಾಹ್ನ ಊಟದ ಮಧ್ಯದ ಸಮಯಕ್ಕೆ ಮುಂದೂಡಿ. ಇಲ್ಲವಾದರೆ ದಾಲ್ಚಿನ್ನಿ, ಅರಿಶಿನದಂತಹ ಗಿಡಮೂಲಿಕೆಗಳನ್ನು ಮತ್ತು ಕ್ಯಾಮೊಮೈಲ್, ಮಲ್ಲಿಗೆ, ದಾಸವಾಳದ ಚಹಾದಂತಹ ಹೂವುಗಳನ್ನು ಕುಡಿಯಬಹುದು.

ದೇಹದ ಸಮಸ್ಯೆ ಆಲಿಸಿ

ಬೇಸಿಗೆಯಲ್ಲಿ ನಡುಗುವಿಕೆ, ಆತಂಕ ಅಥವಾ ನಿದ್ರೆಯ ಸಮಸ್ಯೆಗಳನ್ನು ಅನುಭವಿಸಿದರೆ ಆದಷ್ಟು ವಿಶ್ರಾಂತಿ ಪಡೆಯಿರಿ. ಜೊತೆಗೆ ಹೆಚ್ಚಿನ ಪ್ರಮಾಣದಲ್ಲಿ ನೀರು ಸೇವಿಸಿ.

ನಿರ್ಜಲೀಕರಣವಾಗದಂತೆ ತಡೆಯುವುದು ಹೇಗೆ?

ಬೇಸಿಗೆಯಲ್ಲಿ ಆರೋಗ್ಯವಾಗಿರಲು ದೇಹವನ್ನು ಹೈಡ್ರೀಕರಿಸಿರುವುದನ್ನು ಖಚಿತಪಡಿಸಿಕೊಳ್ಳಬೇಕು. ಇದಕ್ಕಾಗಿ ಪ್ರತಿದಿನ ಕನಿಷ್ಠ 8- 10 ಗ್ಲಾಸ್ ನೀರನ್ನು ಕುಡಿಯಿರಿ. ದೇಹದಲ್ಲಿ ಬೆವರಿನ ಮೂಲಕ ಕಳೆದುಹೋಗುವ ಲವಣ ಮತ್ತು ಖನಿಜಗಳನ್ನು ಪುನಃ ತುಂಬಿಸಲು ಮನೆಯಲ್ಲಿ ಅಥವಾ ವಾಣಿಜ್ಯಿಕವಾಗಿ ಲಭ್ಯವಿರುವ ಎಲೆಕ್ಟ್ರೋಲೈಟ್ ಪರಿಹಾರಗಳನ್ನು ಬಳಸಿ.

ಇದನ್ನೂ ಓದಿ: Heatwave Effect: ಬೇಸಿಗೆಗೂ ಕಣ್ಣಿನ ಸಮಸ್ಯೆಗೂ ಇದೆ ನಂಟು!

ದೇಹದಲ್ಲಿ ಜಲಸಂಚಯನವನ್ನು ಹೆಚ್ಚಿಸಲು ಆಹಾರದಲ್ಲಿ ಕಲ್ಲಂಗಡಿ, ಸೌತೆಕಾಯಿ ಮತ್ತು ಕಿತ್ತಳೆಯಂತಹ ನೀರು-ಭರಿತ ಹಣ್ಣುಗಳು ಮತ್ತು ತರಕಾರಿಗಳನ್ನು ಸೇರಿಸಿ. ಆಲ್ಕೋಹಾಲ್ ಮತ್ತು ಸಕ್ಕರೆ ಪಾನೀಯಗಳು ನಿರ್ಜಲೀಕರಣದ ಅಪಾಯವನ್ನು ಹೆಚ್ಚಿಸಬಹುದು. ಇದನ್ನು ಮಿತವಾಗಿ ಸೇವಿಸಿ ಅಥವಾ ಸಂಪೂರ್ಣವಾಗಿ ತಪ್ಪಿಸಬೇಕು.

Continue Reading

ಲೈಫ್‌ಸ್ಟೈಲ್

Ways To Stay Young: ಸಮುದ್ರದಾಳದಲ್ಲಿ ದಿನ ಕಳೆದರೆ ಇಳಿ ವಯಸ್ಸಲ್ಲೂ ಯೌವನ ಮರಳಿ ಬರುತ್ತದೆ!

93 ದಿನಗಳ ಕಾಲ ಸಮುದ್ರದಾಳದಲ್ಲಿ ವಾಸಿಸಿದ್ದರಿಂದ ನೌಕಾಪಡೆ ನಿವೃತ್ತ ಅಧಿಕಾರಿ ವಯಸ್ಸಿನಲ್ಲಿ ಸುಮಾರು ಹತ್ತು ವರ್ಷಗಳಷ್ಟು ಹಿಂದೆ ಹೋಗಿದ್ದಾರಂತೆ. ಅಂದರೆ, ಹತ್ತು ವರ್ಷಗಳಷ್ಟು ಹಿಂದಿನ ದೈಹಿಕ ಆರೋಗ್ಯ ಇವರಿಗೆ ಮರುಕಳಿಸಿದ್ದು, ಇದರಿಂದ ಸಾಗರದಾಳದಲ್ಲಿ ವಾಸಿಸುವ ಮೂಲಕ ಯೌವನವನ್ನು ಮರಳಿ ಪಡೆಯಬಹುದು ಎಂದು ಇವರು (Ways To Stay Young) ಜಗತ್ತಿಗೇ ತೋರಿಸಿಕೊಟ್ಟಿದ್ದಾರೆ.

VISTARANEWS.COM


on

Ways To Stay Young
Koo

56 ವರ್ಷದ ನಿವೃತ್ತ ನೌಕಾದಳದ ಅಧಿಕಾರಿ ಜೋಸೆಫ್‌ ಡಿಟೂರಿ ಇತ್ತೀಚೆಗೆ 93 ದಿನಗಳ ಕಾಲ ಅಟ್ಲಾಂಟಿಕ್‌ ಸಮುದ್ರದಾಳದಲ್ಲಿ ವಾಸಿಸುವ ಮೂಲಕ ಜಗತ್ತನ್ನು ನಿಬ್ಬೆರಗಾಗಿಸಿದ್ದಾರೆ. ಅಷ್ಟೇ ಅಲ್ಲ, ಸಾಗರದಾಳದಲ್ಲಿ ಜೀವಿಸುವುದರಿಂದ ತಮ್ಮ ವಯಸ್ಸನ್ನೂ ಕಡಿಮೆಗೊಳಿಸಿರುವುದು ಇಲ್ಲಿ ಅಚ್ಚರಿಯ ವಿಷಯ.
ಹೌದು. ಒತ್ತಡದ ಪಾಡ್‌ ಒಂದರೊಳಗೆ 93 ದಿನಗಳ ಕಾಲ ಸಮುದ್ರದಾಳದಲ್ಲಿ ವಾಸಿಸಿದ್ದರಿಂದ ಸುಮಾರು ಹತ್ತು ವರ್ಷಗಳಷ್ಟು ವಯಸ್ಸಿನಲ್ಲಿ ಇವರು ಹಿಂದೆ ಹೋಗಿದ್ದಾರಂತೆ. ಅಂದರೆ, ಹತ್ತು ವರ್ಷಗಳಷ್ಟು ಹಿಂದಿನ ದೈಹಿಕ ಆರೋಗ್ಯ ಇವರಿಗೆ ಮರುಕಳಿಸಿದ್ದು, ಇದರಿಂದ ಸಾಗರದಾಳದಲ್ಲಿ ವಾಸಿಸುವ ಮೂಲಕ ಯೌವನವನ್ನು ಮರಳಿ ಪಡೆಯಬಹುದು ಎಂದು (Ways To Stay Young) ಇವರು ಜಗತ್ತಿಗೇ ತೋರಿಸಿಕೊಟ್ಟಿದ್ದಾರೆ.

man spends 93 days under atlantic sea becomes 10 years younger

ದಾಖಲೆ ಅಷ್ಟೇ ಅಲ್ಲ

ಸಮುದ್ರದಾಳದಲ್ಲಿ 93 ದಿನಗಳ ಕಾಲ ಜೀವಿಸುವ ಮೂಲಕ ದಾಖಲೆ ಬರೆಯುವುದಷ್ಟೇ ಅಲ್ಲ, ಮಾನಸಿಕವಾಗಿ, ದೈಹಿಕವಾಗಿ, ಮತ್ತಷ್ಟು ಆರೋಗ್ಯವಂತರಾಗಿ, ಉಲ್ಲಾಸದಾಯಕ ವ್ಯಕ್ತಿಯಾಗಿ ಹೊರ ಜಗತ್ತಿಗೆ ಮರಳಿದ್ದಾರೆ. ಒತ್ತಡದ ಪಾಡ್‌ ಒಂದರಲ್ಲಿ ಸಮುದ್ರದಾಳದಲ್ಲಿ ಜೀವಿಸಿದ ಕಾರಣ, ಮನುಷ್ಯನ ದೇಹದ ಮೇಲೆ ಇದು ಬೀರುವ ಪರಿಣಾಮ ಇತ್ಯಾದಿಗಳನ್ನು ಡಿಟೂರಿ ಅವರು ಜಗತ್ತಿಗೆ ಸಾಬೀತುಪಡಿಸಿ ತೋರಿಸಿದ್ದಾರೆ. ಹೊರ ಬಂದ ಮೇಲೆ ಅವರ ಮೇಲೆ ನಡೆದ ಸಾಕಷ್ಟು ವೈದ್ಯಕೀಯ ಪರೀಕ್ಷೆಗಳು, ಈತ ಸಾಬೀತುಪಡಿಸಿದ ವಿಚಾರಗಳನ್ನು ಅಧಿಕೃತಗೊಳಿಸಿದ್ದು, ಮಾನಸಿಕ ಹಾಗೂ ದೈಹಿಕ ಆರೋಗ್ಯದ ವಿಚಾರದಲ್ಲಿ 93 ದಿನಗಳಲ್ಲಿ ಡಿಟೂರಿ ಅವರು 10 ವರ್ಷಗಳಷ್ಟು ಯೌವನವನ್ನು ಮರಳಿ ಪಡೆದಿದ್ದಾರೆ ಎಂದು ದೃಢಪಡಿಸಿವೆ. ವೈದ್ಯಕೀಯ ಪರೀಕ್ಷೆಗಳ ಪ್ರಕಾರ, ಡಿಟೂರಿ ಅವರ ಸ್ಟೆಮ್‌ ಸೆಲ್‌ (ಕಾಂಡ ಕೋಶ)ಗಳು ಗಣನೀಯವಾಗಿ ಏರಿದ್ದು, ಕೊಲೆಸ್ಟೆರಾಲ್‌ ಮಟ್ಟವು 72 ಪಾಯಿಂಟ್‌ಗಳಷ್ಟು ಕೆಳಗಿಳಿದಿವೆ. ದೇಹದಲ್ಲಿದ್ದ ಇತರ ಯುರಿಯೂತದ ಲಕ್ಷಣಗಳೂ ಕಡಿಮೆಯಾಗಿವೆ. ನಿದ್ದೆಯ ಗುಣಮಟ್ಟದಲ್ಲಿ ಗಣನೀಯ ಸುಧಾರಣೆಯಾಗಿದ್ದು, ಮುಖ್ಯವಾಗಿ ರಾತ್ರಿಯ ಗಾಢ ನಿದ್ದೆಯ ಗುಣಮಟ್ಟ ಶೇ.೬೦ರಷ್ಟು ಏರಿಕೆಯಾಗಿದೆ. ಸಾಮಾನ್ಯವಾಗಿ ಪ್ರತಿ ವ್ಯಕ್ತಿಯ ವರ್ಣತಂತುಗಳು ವಯಸ್ಸಾದ ಹಾಗೆ ಚಿಕ್ಕದಾಗುತ್ತಾ ಬರುವುದರಿಂದ, ಇಲ್ಲಿ, ಡಿಟೂರಿ ಅವರ ವರ್ಣತಂತು ಶೇ.೨೦ರಷ್ಟು ಉದ್ದವಾಗಿದ್ದು, ಇದು ಯೌವನವನ್ನು 10 ವರ್ಷಗಳಷ್ಟು ಮರಳಿಸಿದೆ ಎಂದು ವೈದ್ಯಕೀಯ ಪರೀಕ್ಷೆಗಳಿಂದ ತಿಳಿದುಬಂದಿದೆ.

ಆರೋಗ್ಯ ಸುಧಾರಣೆ

ಡಿಟೂರಿ ಅವರ ಮಿದುಳಿನ ಆರೋಗ್ಯ ಕೂಡಾ ಸಾಕಷ್ಟು ಸುಧಾರಿಸಿದ್ದು, ಅವರು ಮತತೆ ಲವಲವಿಕೆಯಿಂದ ಜೀವನೋತ್ಸಾಹದಿಂದ ಮರಳಿ ಬಂದಿರುವುದು ವಿಶೇಷ. ಸಮುದ್ರದಾಳದಲ್ಲಿ ಹೈಪರ್‌ಬಾರಿಕ್‌ ಚೇಂಬರ್‌ ಒಳಗೆ ಅವರು 93 ದಿನಗಳ ಕಾಲ ಉಳಿದುಕೊಂಡಿದ್ದು, ಇದು ಅವರ ಒಟ್ಟಾರೆ ಆರೋಗ್ಯಕ್ಕೆ ಭಾರೀ ಸಕಾರಾತ್ಮಕ ಪರಿಣಾಮ ಬೀರಿದೆ. ಡಿಟೂರಿ ಅವರೇ ಹೇಳುವಂತೆ, 100 ಚದರ ಅಡಿಯ ಚೇಂಬರ್‌ ಒಳಗೆ ಸಮುದ್ರದಾಳದಲ್ಲಿ ಜೀವಿಸುವ ಸಂದರ್ಭದಲ್ಲಿ ವಾರಕ್ಕೆ ಐದು ದಿನಗಳ ಕಾಲ ಪ್ರತಿ ನಿತ್ಯವೂ ಒಂದು ಗಂಟೆಗಳ ಕಾಲ ವ್ಯಾಯಾಮ ಇತ್ಯಾದಿಗಳನ್ನು ಅವರು ಮಾಡಿದ್ದಾರೆ. ದೈಹಿಕ, ಮಾನಸಿಕ ಆರೋಗ್ಯ ಸದೃಢವಾಗಿರಲು ಹೊರಗೆ ನೆಲದ ಮೇಲಿದ್ದಾಗ ಮಾಡುವ ವ್ಯಾಯಾಮಗಳನ್ನು ಮಾಡಿದ್ದಾರೆ. ಈ ಶಿಸ್ತನ್ನು ಪಾಲಿಸಿದ್ದೂ ಕೂಡಾ ಈ ಆರೋಗ್ಯ ಸುಧಾರಣೆಯಲ್ಲಿ ಬಹುಮುಖ್ಯ ಪಾತ್ರ ವಹಿಸಿದೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ICMR Guidelines: ಶಿಶು ಆಹಾರ ಹೇಗಿರಬೇಕು? ಐಸಿಎಂಆರ್‌ ಮಾರ್ಗಸೂಚಿ ಹೀಗಿದೆ

ಸಕಾರಾತ್ಮಕ ಪರಿಣಾಮ

ಜನರು ಪ್ರವಾಸಕ್ಕಾಗಿ ಆಗಾಗ ಹೊರಗೆ ತಿರುಗಾಡಿ ಬರುವ ಬದಲು ಹೀಗೆ ಎರಡು ವಾರಗಳ ಕಾಲ ಸಮುದ್ರದಾಳದಲ್ಲಿ ಕಳೆಯಬಹುದು. ಇದು ದೇಹಾರೋಗ್ಯಕ್ಕೆ, ಮಾನಸಿಕ ಆರೋಗ್ಯಕ್ಕೆ ಕೊಡುವ ಸಕಾರಾತ್ಮಕ ಪರಿಣಾಮವನ್ನು ಅನುಭವಿಸಿ ನೋಡಬಹುದು ಎಂದು ಅವರು ಹೇಳಿದ್ದಾರೆ. ಡಿಟೂರಿ ಅವರು ಈ ಹಿಂದೆಯೂ 2023ರಲ್ಲಿ ಸಮುದ್ರದಾಳದಲ್ಲಿ 74 ದಿನಗಳ ಕಾಲ ಕಳೆದಿದ್ದರು. ಇದೇ ಮೊದಲ ಬಾರಿಗೆ ಸಮುದ್ರದಾಳದಲ್ಲಿ 93 ದಿನಗಳನ್ನು ಕಳೆಯುವ ಮೂಲಕ ದಾಖಲೆ ಬರೆದಿದ್ದಾರೆ. ಈ ಹಿಂದೆಯೂ 100 ದಿನಗಳ ಕಾಲ ಸಮುದ್ರದಡಿಯಲ್ಲಿ 30 ಅಡಿ ಆಳದಲ್ಲಿ ಸ್ಟೀಲ್‌ ಹಾಗೂ ಗ್ಲಾಸ್‌ನಿಂದ ಮಾಡಿದ ಹೊಟೇಲ್‌ ಒಂದರಲ್ಲಿ ಇರುವ ಮೂಲಕವೂ ದಾಖಲೆ ಬರೆದಿದ್ದರು.

Continue Reading

ಪ್ರಮುಖ ಸುದ್ದಿ

Chamarajanagar Lok Sabha Constituency : ಚಾಮರಾಜನಗರ ಕ್ಷೇತ್ರವನ್ನು ತೆಕ್ಕೆಗೆ ತೆಗೆದುಕೊಳ್ಳಲು ಕಾಂಗ್ರೆಸ್​​ಗೆ ತವಕ

Chamarajanagar Lok Sabha Constituency : ಚಾಮರಾಜನಗರ ಲೋಕಸಭೆ ಕ್ಷೇತ್ರ, ಕರ್ನಾಟಕ ರಾಜ್ಯದ ಅತ್ಯಂತ ಪ್ರಮುಖ ಕ್ಷೇತ್ರಗಳಲ್ಲಿ ಒಂದು. ಈ ಲೋಕಸಭಾ ಕ್ಷೇತ್ರವು ಪರಿಶಿಷ್ಟ ಜಾತಿಗೆ ಮೀಸಲಾಗಿದೆ. ಚಾಮರಾಜನಗರ ಲೋಕಸಭಾ ಕ್ಷೇತ್ರವು 1962 ರಲ್ಲಿ ಅಸ್ತಿತ್ವಕ್ಕೆ ಬಂದಿತು.

VISTARANEWS.COM


on

Chamarajanagar Lok Sabha Constituency
Koo

ಬೆಂಗಳೂರು: ಚಾಮರಾಜನಗರ ಲೋಕಸಭಾ ಕ್ಷೇತ್ರವು (Chamarajanagar Lok Sabha Constituency) ಜನಸಂಖ್ಯೆಯ ದೃಷ್ಟಿಯಿಂದ ಜಿಲ್ಲೆಯು ರಾಜ್ಯದ ಮೂರನೇ ಅತಿದೊಡ್ಡ ಕ್ಷೇತ್ರ. ಈ ಜಿಲ್ಲೆಗೆ ಮೈಸೂರು ರಾಜ ಚಾಮರಾಜ ಒಡೆಯರ್ ಅವರ ಹೆಸರನ್ನು ಇಡಲಾಗಿದೆ. ಚಾಮರಾಜನಗರ ಲೋಕಸಭಾ ಕ್ಷೇತ್ರವು ಕರ್ನಾಟಕದ ದಕ್ಷಿಣ ಭಾಗದಲ್ಲಿದೆ ಮತ್ತು ಪ್ರಸ್ತುತ ಬಿಜೆಪಿಯ ದಿ. ವಿ ಶ್ರೀನಿವಾಸ್ ಪ್ರಸಾದ್ ಪ್ರತಿನಿಧಿಸುತ್ತಿದ್ದರು. ಭಾರತದ ಚುನಾವಣಾ ಆಯೋಗದ ಪ್ರಕಾರ 2019 ರಲ್ಲಿ ಒಟ್ಟು ಮತದಾರರ ಸಂಖ್ಯೆ 16,86,333. ಕೊಳ್ಳೇಗಾಲದ ಮಾಜಿ ಶಾಸಕ ಎಸ್. ಬಾಲರಾಜ್ ಬಿಜೆಪಿಯಿಂದ ಹಾಗೂ ಸಚಿವ ಎಚ್.ಸಿ.ಮಹದೇವಪ್ಪ ಅವರ ಪುತ್ರ ಕಾಂಗ್ರೆಸ್ ಅಭ್ಯರ್ಥಿ ಸುನೀಲ್ ಬೋಸ್ ಕಾಂಗ್ರೆಸ್​​ನಿಂದ ಸ್ಪರ್ಧಿಸಲಿದ್ದಾರೆ.

ಚಾಮರಾಜನಗರ ಕ್ಷೇತ್ರವು ಮೈಸೂರು ರಾಜ್ಯದ ಭಾಗವಾಗಿತ್ತು. 1977 ರಿಂದ ಇದನ್ನು ಕರ್ನಾಟಕಕ್ಕೆ ಸೇರಿಸಲಾಗಿದೆ. ಈ ಕ್ಷೇತ್ರದಲ್ಲಿ ಈವರೆಗೆ ಒಟ್ಟು 17 ಚುನಾವಣೆಗಳು ನಡೆದಿದ್ದು, ಅದರಲ್ಲಿ ಕಾಂಗ್ರೆಸ್ 12 ಬಾರಿ ಗೆದ್ದಿದೆ. ಇದಲ್ಲದೆ, ಜನತಾದಳ ಎರಡು ಬಾರಿ ಗೆದ್ದಿದ್ದರೆ ಜೆಡಿಎಸ್ ಮತ್ತು ಜೆಡಿಯು ಅಭ್ಯರ್ಥಿಗಳು ತಲಾ ಒಂದು ಬಾರಿ ಗೆದ್ದಿದ್ದಾರೆ.

ಚಾಮರಾಜನಗರ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಹೆಗ್ಗಡದೇವನಕೋಟೆ, ನಂಜನಗೂಡು, ವರುಣಾ, ಟಿ.ನರಸೀಪುರ, ಹನೂರು, ಕೊಳ್ಳೇಗಾಲ, ಚಾಮರಾಜನಗರ ಮತ್ತು ಗುಂಡ್ಲುಪೇಟೆ ವಿಧಾನಸಭಾ ಕ್ಷೇತ್ರಗಳಿವೆ. ಈ ಪೈಕಿ 7 ಸ್ಥಾನಗಳು ಕಾಂಗ್ರೆಸ್, 1 ಜೆಡಿಎಸ್ ಪಾಲಾಗಿವೆ.

ಚಾಮರಾಜನಗರ ಲೋಕಸಭಾ ಕ್ಷೇತ್ರದಲ್ಲಿ ಶ್ರೀನಿವಾಸ್​ ಪ್ರಸಾದ್ ಮೂಲಕ ಮೊದಲ ಬಾರಿಗೆ ಬಿಜೆಪಿ ಜಯಭೇರಿ ಬಾರಿಸಿತ್ತು. ಅದನ್ನು ಉಳಿಸಿಕೊಳ್ಳಲು ಎಲ್ಲ ರೀತಿಯಲ್ಲೂ ಸಜ್ಜಾಗಿದೆ. ಕ್ಷೇತ್ರದಲ್ಲಿ ಕಾಂಗ್ರೆಸ್ ಪ್ರಾಬಲ್ಯ ಹೊಂದಿದೆ. ಜನತಾದಳವು ಮೊದಲು ಈ ಕಾಂಗ್ರೆಸ್ ಭದ್ರಕೋಟೆಯನ್ನು ಮುರಿದಿತ್ತು. 1999ರಲ್ಲಿ ಶ್ರೀನಿವಾಸ್ ಪ್ರಸಾದ್ ಜನತಾದಳ ಅಭ್ಯರ್ಥಿಯಾಗಿ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು. ನಂತರ ಕಾಂಗ್ರೆಸ್ ನ ಆರ್.ಧ್ರುವನಾರಾಯಣ ಅವರು ಕ್ಷೇತ್ರವನ್ನು ಕಸಿದುಕೊಂಡಿದ್ದರು.

ಹೇಗಿದೆ ಮತದಾರರ ಸ್ಥಿತಿ

2011ರ ರ ಜನಗಣತಿಯ ಪ್ರಕಾರ ಚಾಮರಾಜನಗರವು 1020791 ಜನಸಂಖ್ಯೆಯನ್ನು ಹೊಂದಿತ್ತು. ಸರಾಸರಿ ಸಾಕ್ಷರತಾ ಪ್ರಮಾಣವು 61.43% – ಮಹಿಳೆಯರಲ್ಲಿ 54.92% ಮತ್ತು ಪುರುಷರಲ್ಲಿ 67.93% ಆಗಿತ್ತು. ಕ್ಷೇತ್ರದ ಒಟ್ಟು ಮತದಾರರಲ್ಲಿ ಸುಮಾರು 1436492 ಗ್ರಾಮೀಣ ಮತದಾರರು ಸುಮಾರು 85.1% ರಷ್ಟಿದ್ದಾರೆ. ಎಸ್ಸಿ ಮತ್ತು ಎಸ್ಟಿ ಮತದಾರರು ಕ್ರಮವಾಗಿ 25.2% ಮತ್ತು 13.9% ರಷ್ಟಿದ್ದಾರೆ.

ಇದನ್ನೂ ಓದಿ: Mysore lok sabha Constituency : ಕಿಂಗ್​​ ವರ್ಸಸ್​ ಆರ್ಡಿನರಿ ಸಿಟಿಜನ್​ ಫೈಟ್​​ನಲ್ಲಿ ಗೆಲುವು ಯಾರಿಗೆ?

ಹಿಂದಿನ ಫಲಿತಾಂಶಗಳು

2019ರ ಸಾರ್ವತ್ರಿಕ ಚುನಾವಣೆಯಲ್ಲಿ ಬಿಜೆಪಿಯ ವಿ .ಶ್ರೀನಿವಾಸ್ ಪ್ರಸಾದ್ ಅವರು ಕಾಂಗ್ರೆಸ್​ನ ಆರ್. ಧ್ರುವನಾರಾಯಣ ಅವರನ್ನು 1,817 ಮತಗಳ ಭಾರೀ ಅಂತರದಿಂದ ಸೋಲಿಸಿದ್ದರು. 2019ರ ಚುನಾವಣೆಯಲ್ಲಿ ಬಿಜೆಪಿ ಶೇ.44.74ರಷ್ಟು ಮತಗಳನ್ನು ಪಡೆದಿತ್ತು.

2014ರ ಸಾರ್ವತ್ರಿಕ ಚುನಾವಣೆಯಲ್ಲಿ ಕಾಂಗ್ರೆಸ್​ನ ಆರ್.ಧ್ರುವನಾರಾಯಣ ಅವರು ಬಿಜೆಪಿಯ ಎ.ಆರ್.ಕೃಷ್ಣಮೂರ್ತಿ ಅವರನ್ನು 1,41,182 ಮತಗಳ ಭಾರೀ ಅಂತರದಿಂದ ಸೋಲಿಸಿದ್ದರು. ಕಾಂಗ್ರೆಸ್ ಈ ಕ್ಷೇತ್ರದಲ್ಲಿ 50.11% ಮತಗಳನ್ನು ಗಳಿಸಿತ್ತು.

2009ರ ಸಾರ್ವತ್ರಿಕ ಚುನಾವಣೆಯಲ್ಲಿ ಆರ್.ಧ್ರುವನಾರಾಯಣ ಅವರು ಬಿಜೆಪಿಯ ಎ.ಆರ್.ಕೃಷ್ಣಮೂರ್ತಿ ಅವರನ್ನು 4,002 ಮತಗಳ ಅಂತರದಿಂದ ಸೋಲಿಸಿದ್ದರು. ಕಾಂಗ್ರೆಸ್ 37.99% ಮತಗಳನ್ನು ಪಡೆದಿತ್ತು.

Continue Reading

ಪ್ರಮುಖ ಸುದ್ದಿ

Mysore lok sabha Constituency : ಕಿಂಗ್​​ ವರ್ಸಸ್​ ಆರ್ಡಿನರಿ ಸಿಟಿಜನ್​ ಫೈಟ್​​ನಲ್ಲಿ ಗೆಲುವು ಯಾರಿಗೆ?

Mysore lok sabha Constituency :ಇತ್ತೀಚಿನ ಎರಡು ಚುನಾವಣೆಗಳಲ್ಲಿ ಬಿಜೆಪಿ ಪ್ರತಾಪ್ ಸಿಂಹ ಈ ಕ್ಷೇತ್ರದಲ್ಲಿ ಬಿಜೆಪಿ ಸ್ಥಾನ ಭದ್ರಪಡಿಸಿಕೊಂಡಿದ್ದರು. ಈ ಕ್ಷೇತ್ರವು ಮೈಸೂರು ಜಿಲ್ಲೆಯ ಭಾಗ ಮತ್ತು ಇಡೀ ಕೊಡಗು ಜಿಲ್ಲೆಯನ್ನು ಒಳಗೊಂಡಿದೆ. ಭಾರತದ ಚುನಾವಣಾ ಆಯೋಗದ ಪ್ರಕಾರ, 2019 ರಲ್ಲಿ ಒಟ್ಟು 18,96,333 ಮತದಾರರಿದ್ದರು.

VISTARANEWS.COM


on

Mysore lok sabha constituency
Koo

ಬೆಂಗಳೂರು: ಕಾಂಗ್ರೆಸ್ ಪ್ರಾಬಲ್ಯದ ಮೈಸೂರು ಲೋಕ ಸಭಾ ಕ್ಷೇತ್ರವು (Mysore lok sabha Constituency) ಕಳೆದ ಎರಡು ಚುನಾವಣೆಗಳಲ್ಲಿ ಸಂಪೂರ್ಣ ಬದಲಾವಣೆಗೆ ಸಾಕ್ಷಿಯಾಗಿದೆ. ಪ್ರತಾಪ್ ಸಿಂಹ (Pratap Simha) ಸತತ ಎರಡು ಬಾರಿ ಗೆದ್ದಿರುವ ಕ್ಷೇತ್ರದಲ್ಲಿ ಬಿಜೆಪಿ ತನ್ನ ಬಲವನ್ನು ಸಾಬೀತುಪಡಿಸಿದೆ. ಅದಕ್ಕಿಂತ ಹಿಂದೆ ಶ್ರೀಕಂಠದತ್ತ ನರಸಿಂಹರಾಜ ಒಡೆಯರ್ ಸೇರಿದಂತೆ ಹಿಂದಿನ ಮೈಸೂರು ರಾಜಮನೆತನದ ಸದಸ್ಯರು ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಿ ಗೆದ್ದಿದ್ದರು. ಈ ಬಾರಿ ಮೈಸೂರು ಕ್ಷೇತ್ರದಲ್ಲಿ ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರನ್ನು ಬಿಜೆಪಿ ಕಣಕ್ಕಿಳಿಸಿದೆ. ಮೈಸೂರಿನ ಕೆಲವು ಪ್ರದೇಶಗಳಲ್ಲಿ ಹಿಡಿತ ಹೊಂದಿರುವ ಬಿಜೆಪಿಯ ಮೈತ್ರಿ ಪಾಲುದಾರ ಜೆಡಿಎಸ್ ಅವರ ಗೆಲುವಿನ ಅಭಿಯಾನದಲ್ಲಿ ಸಾಥ್ ನೀಡಿದೆ. ಹೀಗಾಗಿ ಈ ಬಾರಿಯ ಚುನಾವಣೆ ‘ಕಿಂಗ್ ವರ್ಸಸ್ ಆರ್ಡಿನರಿ ಸಿಟಿಜನ್’ ಎಂಬ ಟ್ಯಾಗ್ ಲೈನ್ ಹೊಂದಿದೆ. ಕಾಂಗ್ರೆಸ್​ನಿಂದ ಆ ಪಕ್ಷದ ರಾಜ್ಯ ವಕ್ತಾರ ಲಕ್ಷ್ಮಣ ಕಣದಲ್ಲಿದ್ದಾರೆ.

1977 ರಲ್ಲಿ ರಚನೆಯಾದ ಮೈಸೂರು ಲೋಕಸಭಾ ಕ್ಷೇತ್ರವು ಮುಖ್ಯವಾಗಿ ಕಾಂಗ್ರೆಸ್ ಪ್ರಭಾವ ಹೊಂದಿತ್ತು. ಎಚ್.ಡಿ.ತುಳಸೀದಾಸ್, ಎಂ. ರಾಜಶೇಖರಮೂರ್ತಿ ಮತ್ತು ಶ್ರೀಕಂಠದತ್ತ ನರಸಿಂಹರಾಜ ಒಡೆಯರ್ ಅವರಂತಹ ಗಮನಾರ್ಹ ನಾಯಕರು ಇಲ್ಲಿ ಗೆದ್ದಿದ್ದರು. ಇತ್ತೀಚಿನ ಎರಡು ಚುನಾವಣೆಗಳಲ್ಲಿ ಬಿಜೆಪಿ ಪ್ರತಾಪ್ ಸಿಂಹ ಈ ಕ್ಷೇತ್ರದಲ್ಲಿ ಬಿಜೆಪಿ ಸ್ಥಾನ ಭದ್ರಪಡಿಸಿಕೊಂಡಿದ್ದರು. ಈ ಕ್ಷೇತ್ರವು ಮೈಸೂರು ಜಿಲ್ಲೆಯ ಭಾಗ ಮತ್ತು ಇಡೀ ಕೊಡಗು ಜಿಲ್ಲೆಯನ್ನು ಒಳಗೊಂಡಿದೆ. ಭಾರತದ ಚುನಾವಣಾ ಆಯೋಗದ ಪ್ರಕಾರ, 2019 ರಲ್ಲಿ ಒಟ್ಟು 18,96,333 ಮತದಾರರಿದ್ದರು.

ಕ್ಷೇತ್ರದ ವ್ಯಾಪ್ತಿಯೇನು?

ಮೈಸೂರು ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಮಡಿಕೇರಿ, ವಿರಾಜಪೇಟೆ, ಪಿರಿಯಾಪಟ್ಟಣ, ಹುಣಸೂರು, ಚಾಮುಂಡೇಶ್ವರಿ, ಕೃಷ್ಣರಾಜ, ಚಾಮರಾಜ ಮತ್ತು ನರಸಿಂಹರಾಜ ವಿಧಾನಸಭಾ ಕ್ಷೇತ್ರಗಳಿವೆ. ಕಾಂಗ್ರೆಸ್ 5, ಜೆಡಿಎಸ್ 2, ಬಿಜೆಪಿ 1 ಸ್ಥಾನ ಹೊಂದಿವೆ. ಸರಾಸರಿ ಸಾಕ್ಷರತಾ ಪ್ರಮಾಣವು ಸುಮಾರು 67,65% ರಷ್ಟಿದೆ. ಸುಮಾರು 977500 ನಗರ ಮತದಾರರು 51.6% ರಷ್ಟಿದ್ದಾರೆ. ಎಸ್ಸಿ ಮತ್ತು ಎಸ್ಟಿ ಮತದಾರರು ಸುಮಾರು 13.9% ರಷ್ಟಿದ್ದಾರೆ.

ಹಿಂದಿನ ಮೂರು ಚುನಾವಣಾ ಫಲಿತಾಂಶಗಳು

2019ರ ಸಾರ್ವತ್ರಿಕ ಚುನಾವಣೆಯಲ್ಲಿ ಬಿಜೆಪಿ ಪ್ರತಾಪ್ ಸಿಂಹ ಅವರು ಕಾಂಗ್ರೆಸ್​​ನ ಸಿ.ಎಚ್.ವಿಜಯಶಂಕರ್ ಅವರನ್ನು 1,38,647 ಮತಗಳ ಭಾರೀ ಅಂತರದಿಂದ ಸೋಲಿಸಿದ್ದರು. 2019ರ ಚುನಾವಣೆಯಲ್ಲಿ ಬಿಜೆಪಿ ಶೇ.52.27ರಷ್ಟು ಮತಗಳನ್ನು ಪಡೆದಿತ್ತು.

ಇದನ್ನೂ ಓದಿ : Kolar lok sabha constituency : ಕೋಲಾರವನ್ನು ವಾಪಸ್​ ತನ್ನ ತೆಕ್ಕೆಗೆ ತೆಗೆದುಕೊಳ್ಳುವುದೇ ಕಾಂಗ್ರೆಸ್​

2014ರ ಸಾರ್ವತ್ರಿಕ ಚುನಾವಣೆಯಲ್ಲಿ ಪ್ರತಾಪ್ ಸಿಂಹ ಅವರು ಕಾಂಗ್ರೆಸ್​ನ ಅಡಗೂರು ಎಚ್.ವಿಶ್ವನಾಥ್ ಅವರನ್ನು 31,608 ಮತಗಳ ಭಾರೀ ಅಂತರದಿಂದ ಸೋಲಿಸಿದ್ದರು. ಈ ಕ್ಷೇತ್ರದಲ್ಲಿ ಬಿಜೆಪಿ ಶೇ.43.46ರಷ್ಟು ಮತಗಳನ್ನು ಗಳಿಸಿದೆ

2009ರ ಸಾರ್ವತ್ರಿಕ ಚುನಾವಣೆಯಲ್ಲಿ ಅಡಗೂರು ಎಚ್.ವಿಶ್ವನಾಥ್ ಅವರು ಬಿಜೆಪಿಯ ಸಿ.ಎಚ್.ವಿಜಯಶಂಕರ್ ಅವರನ್ನು 7,691 ಮತಗಳ ಭಾರೀ ಅಂತರದಿಂದ ಸೋಲಿಸಿದ್ದರು. ಈ ಕ್ಷೇತ್ರದಲ್ಲಿ ಕಾಂಗ್ರೆಸ್ 36.42% ಮತಗಳನ್ನು ಪಡೆದಿತ್ತು.

ಬೌಗೋಳಿಕ ಗಡಿಗಳು

ಮೈಸೂರು ಲೋಕಸಭೆ ಕ್ಷೇತ್ರ ಭಾರತದ ದಕ್ಷಿಣ ಪ್ರದೇಶ ಮತ್ತು ಕರ್ನಾಟಕದ ದಕ್ಷಿಣ ಕರ್ನಾಟಕ ಪ್ರದೇಶದಲ್ಲಿದೆ. ಈ ಸ್ಥಾನವು ಕರ್ನಾಟಕದ ಕೊಡಗು, ಮೈಸೂರು ಜಿಲ್ಲೆಗಳನ್ನು ಒಳಗೊಂಡಿದೆ.

Continue Reading
Advertisement
mlc election raghupathi bhat
ಪ್ರಮುಖ ಸುದ್ದಿ11 mins ago

MLC Election: ಮೇಲ್ಮನೆ ಚುನಾವಣೆ ಮತದಾನ ಆರಂಭ, 6 ಕ್ಷೇತ್ರಗಳಲ್ಲಿ 78 ಸ್ಪರ್ಧಿಗಳ ಹಣಾಹಣಿ

Parvathi Menon secretly marry prashant murali
ಮಾಲಿವುಡ್17 mins ago

Parvathi Menon: ಸದ್ದಿಲ್ಲದೇ ಮದುವೆಯಾದ್ರಾ ʻಮಿಲನʼ ನಾಯಕಿ ಪಾರ್ವತಿ ಮೆನನ್?

Lok Sabha Election 2024
ದೇಶ24 mins ago

Lok Sabha Election 2024: ವಿಜಯೋತ್ಸವಕ್ಕೆ ಬಿಜೆಪಿ ಪ್ಲ್ಯಾನ್‌ ಹೇಗಿದೆ? ಈಗಿನಿಂದಲೇ ಶುರು ಭರ್ಜರಿ ತಯಾರಿ

vrl bus road accident
ಕ್ರೈಂ38 mins ago

Road Accident: ವಿಆರ್‌ಎಲ್ ಬಸ್‌ ಪಲ್ಟಿಯಾಗಿ ಇಬ್ಬರ ಸಾವು, ಹಲವರಿಗೆ ಗಾಯ

Raveena Tandon Was Not Drunk False Complaint Filed
ಬಾಲಿವುಡ್43 mins ago

Raveena Tandon: ರವೀನಾ ಟಂಡನ್ ವಿರುದ್ಧ ಸುಳ್ಳು ದೂರು ನೀಡಿದ್ರಾ? ಪೊಲೀಸರು ಹೇಳೋದೇನು?

ICMR Guidelines
ಆರೋಗ್ಯ54 mins ago

ICMR Guidelines: ಕಬ್ಬಿನ ಹಾಲು ಕುಡಿದರೆ ಆರೋಗ್ಯಕ್ಕೆ ಹಾನಿಯೆ? ICMR ಅಭಿಪ್ರಾಯ ಹೀಗಿದೆ

bangalore rain news
ಪ್ರಮುಖ ಸುದ್ದಿ1 hour ago

Bangalore Rain News: ಬೆಂಗಳೂರಿಗೆ ಮುಂಗಾರು ಶಾಕ್‌, ನೂರಾರು ಮರಗಳು ಧರೆಗೆ, ಅಪಾರ್ಟ್‌ಮೆಂಟ್‌ ನಿವಾಸಿಗಳು ಅಲ್ಲೇ ಲಾಕ್!‌

Chikkodi Lok Sabha Constituency
ಚಿಕ್ಕೋಡಿ1 hour ago

Chikkodi Lok Sabha Constituency: ಜೊಲ್ಲೆ vs ಜಾರಕಿಹೊಳಿ; ಯಾರಿಗೆ ಗೆಲುವಿನ ಹೋಳಿ?

Toll Fee Hike
ದೇಶ1 hour ago

Toll Fee Hike: ವಾಹನ ಸವಾರರಿಗೆ ಮತ್ತೆ ಸುಂಕದ ಬರೆ; ರಾಷ್ಟ್ರೀಯ ಹೆದ್ದಾರಿಗಳಲ್ಲಿ ಟೋಲ್‌ ದರ ಹೆಚ್ಚಳ

road accident tractor
ಪ್ರಮುಖ ಸುದ್ದಿ2 hours ago

Road Accident: ಮದುವೆ ದಿಬ್ಬಣದ ಟ್ರ್ಯಾಕ್ಟರ್‌ ಪಲ್ಟಿಯಾಗಿ 13 ಸಾವು, ರಾಷ್ಟ್ರಪತಿ ಸಂತಾಪ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ22 hours ago

Karnataka Rain : ವೀಕೆಂಡ್‌ ಮೋಜಿಗೆ ವರುಣ ಅಡ್ಡಿ; ಭಾನುವಾರ ಸಂಜೆಗೆ ಮಳೆ ಕಾಟ

Liquor ban
ಬೆಂಗಳೂರು2 days ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

Assault Case in Shivamogga
ಕ್ರೈಂ4 days ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

Karnataka weather Forecast
ಮಳೆ6 days ago

Karnataka Weather : ಚಿಕ್ಕಮಗಳೂರಲ್ಲಿ ಭಾರಿ ಮಳೆ; ಯಾದಗಿರಿಯಲ್ಲಿ ಕರೆಂಟ್‌ ಕಟ್‌, ಜನರೇಟರ್‌ನಿಂದ ಮೊಬೈಲ್‌ಗಳಿಗೆ ಚಾರ್ಜಿಂಗ್‌!

tumkur murder
ತುಮಕೂರು6 days ago

Tumkur Murder : ಮಗುವಿನ ಮುಂದೆಯೇ ಹೆಂಡತಿಯ ಕತ್ತು, ದೇಹವನ್ನು ಕತ್ತರಿಸಿ ಬಿಸಾಡಿದ ದುಷ್ಟ

Karnataka Weather Forecast
ಮಳೆ7 days ago

Karnataka Weather : ಕಡಲತೀರದಲ್ಲಿ ಅಲೆಗಳ ಅಬ್ಬರ, ಪ್ರವಾಸಿಗರಿಗೆ ಕಟ್ಟೆಚ್ಚರ; ನಾಳೆಯೂ ಗಾಳಿ ಸಹಿತ ಮಳೆ ಅಬ್ಬರ

Karnataka Rain
ಮಳೆ1 week ago

Karnataka Rain : ಯಾದಗಿರಿಯಲ್ಲಿ ಬಿರುಗಾಳಿ ಸಹಿತ ಮಳೆ; ಸಿಡಿಲು ಬಡಿದು ಎಮ್ಮೆಗಳು ಸಾವು

Basavanagudi News
ಬೆಂಗಳೂರು1 week ago

Basavanagudi News : ಪೂಜಾ ಸಾಮಗ್ರಿಗೆ ಒನ್‌ ಟು ಡಬಲ್‌ ರೇಟ್‌; ದೊಡ್ಡ ಗಣಪತಿ ದೇಗುಲದಲ್ಲಿ ಕೈ ಕೈ ಮಿಲಾಯಿಸಿದ ಭಕ್ತರು-ವ್ಯಾಪಾರಿಗಳು

Karnataka Rain
ಮಳೆ1 week ago

Karnataka Rain : ಭಾರಿ ಮಳೆಗೆ ರಸ್ತೆ ಕಾಣದೆ ರಾಜಕಾಲುವೆಗೆ ಉರುಳಿದ ಆಟೋ; ಚಾಲಕ ಸ್ಥಳದಲ್ಲೇ ಸಾವು

dina bhavishya read your daily horoscope predictions for May 23 2024
ಭವಿಷ್ಯ2 weeks ago

Dina Bhavishya : 12 ರಾಶಿಯವರ ಇಂದಿನ ಭವಿಷ್ಯ ಹೇಗಿದೆ? ಯಾರಿಗೆ ಶುಭ, ಯಾರಿಗೆ ಅಶುಭ ಫಲ?

ಟ್ರೆಂಡಿಂಗ್‌