Vikram S Mission | ಶುಕ್ರವಾರ ದೇಶದ ಮೊದಲ ಖಾಸಗಿ ರಾಕೆಟ್‌ ಉಡಾವಣೆ, ಏನಿದರ ವೈಶಿಷ್ಟ್ಯ? - Vistara News

ದೇಶ

Vikram S Mission | ಶುಕ್ರವಾರ ದೇಶದ ಮೊದಲ ಖಾಸಗಿ ರಾಕೆಟ್‌ ಉಡಾವಣೆ, ಏನಿದರ ವೈಶಿಷ್ಟ್ಯ?

ದೇಶದ ಮೊದಲ ಖಾಸಗಿ ರಾಕೆಟ್‌ ಉಡಾವಣೆಗೆ ಕ್ಷಣಗಣನೆ ಆರಂಭವಾಗಿದ್ದು, ವಿಕ್ರಮ್‌ ಎಸ್‌ ರಾಕೆಟ್‌ (Vikram S Mission) ನಭಕ್ಕೆ ಹಾರಲು ಸಜ್ಜಾಗಿದೆ. ಸ್ಕೈರೂಟ್ ಏರೋಸ್ಪೇಸ್‌ ರಾಕೆಟ್‌ಅನ್ನು ಅಭಿವೃದ್ಧಿಪಡಿಸಿದೆ.

VISTARANEWS.COM


on

Vikram S Mission success
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಹೈದರಾಬಾದ್:‌ ಬಾಹ್ಯಾಕಾಶ ಕ್ಷೇತ್ರದಲ್ಲೂ ಖಾಸಗಿ ಸಹಭಾಗಿತ್ವವನ್ನು ಉತ್ತೇಜಿಸುವ ಕೇಂದ್ರ ಸರ್ಕಾರದ ಉದ್ದೇಶದಂತೆ ಶುಕ್ರವಾರ (ನವೆಂಬರ್‌ 18) ದೇಶದ ಮೊದಲ ಖಾಸಗಿ ರಾಕೆಟ್‌ ಉಡಾವಣೆ ಆಗಲಿದೆ. ತೆಲಂಗಾಣ ಮೂಲದ ಸ್ಕೈರೂಟ್‌ ಏರೋಸ್ಪೇಸ್‌‌ (Skyroot Aerospace) ಎಂಬ ಕಂಪನಿಯು ರಾಕೆಟ್‌ಅನ್ನು ಅಭಿವೃದ್ಧಿಪಡಿಸಿದ್ದು, ಇದಕ್ಕೆ ವಿಕ್ರಮ್‌ ಎಸ್‌ (Vikram S Mission) ಎಂದು ನಾಮಕರಣ ಮಾಡಿದೆ.

ದೇಶದ ಗಮನ ಸೆಳೆದಿರುವ ವಿಕ್ರಮ್‌ ಎಸ್‌ ರಾಕೆಟ್‌ಅನ್ನು ಶುಕ್ರವಾರ ಬೆಳಗ್ಗೆ 11ರಿಂದ 12 ಗಂಟೆ ಅವಧಿಯಲ್ಲಿ ಉಡಾವಣೆ ಮಾಡಲಾಗುತ್ತದೆ. ಆಂಧ್ರಪ್ರದೇಶದ ಶ್ರೀಹರಿಕೋಟಾದಲ್ಲಿರುವ ಸತೀಶ್‌ ಧವನ್‌ ಬಾಹ್ಯಾಕಾಶ ಕೇಂದ್ರದಿಂದ ಉಡಾವಣೆಯಾಗಲಿದೆ. ವಿಕ್ರಮ್‌ ಎಸ್‌ ದೇಶದ ಮೊದಲ ಖಾಸಗಿ ರಾಕೆಟ್‌ ಎನಿಸಿದ್ದು, ಸ್ಕೈರೂಟ್‌ ಏರೋಸ್ಪೇಸ್‌ ಕಂಪನಿಯು ಇದನ್ನು ಅಭಿವೃದ್ಧಿಪಡಿಸಲು ಎರಡು ವರ್ಷ ತೆಗೆದುಕೊಂಡಿದೆ. ಉಡಾವಣೆ ಯಶಸ್ವಿಯಾದರೆ ಬಾಹ್ಯಾಕಾಶ ಕ್ಷೇತ್ರದಲ್ಲಿ ಇಸ್ರೊ ಮತ್ತೊಂದು ಮೈಲುಗಲ್ಲು ಸಾಧಿಸಿದಂತಾಗಲಿದೆ.

ಏನಿದು ಯೋಜನೆ?

ಬಾಹ್ಯಾಕಾಶ ಕ್ಷೇತ್ರದಲ್ಲೂ ಖಾಸಗಿ ಸಹಭಾಗಿತ್ವ ಇರಬೇಕು ಎಂಬುದು ಕೇಂದ್ರ ಸರ್ಕಾರದ ಉದ್ದೇಶವಾಗಿದೆ. ಇದನ್ನು ಸಾಕಾರಗೊಳಿಸುವ ದಿಸೆಯಲ್ಲಿ ಮೊದಲ ಬಾರಿಗೆ ಇಸ್ರೊ ಹಾಗೂ ಸ್ಕೈರೂಟ್‌ ಏರೋಸ್ಪೇಸ್‌ ಕಂಪನಿಯು ಒಡಂಬಡಿಕೆಗೆ (MoU) ಸಹಿ ಹಾಕಿವೆ. ಒಡಂಬಡಿಕೆಯಂತೆ ಸ್ಕೈರೂಟ್‌ ಏರೋಸ್ಪೇಸ್‌ ಕಂಪನಿಯು ರಾಕೆಟ್‌ ಅಭಿವೃದ್ಧಿಪಡಿಸಿದ್ದು, ಭಾರತೀಯ ಬಾಹ್ಯಾಕಾಶ ವಿಜ್ಞಾನದ ಪಿತಾಮಹ ವಿಕ್ರಮ್‌ ಸಾರಾಭಾಯಿ ಅವರ ಹೆಸರನ್ನು ರಾಕೆಟ್‌ಗೆ ಇಟ್ಟಿದೆ. ಹಾಗೆಯೇ, ತನ್ನ ಮೊದಲ ಮಿಷನ್‌ಗೆ ‘ಪ್ರಾರಂಭ್’‌ ಎಂದು ಹೆಸರಿಸಿದೆ.

ಉಡಾವಣೆಗೆ ಸಜ್ಜಾಗಿರುವ ವಿಕ್ರಮ್‌ ಎಸ್‌ ರಾಕೆಟ್.

ವಿಕ್ರಮ್‌ ಎಸ್‌ ರಾಕೆಟ್‌ ಒಟ್ಟು 80 ಕೆಜಿ ತೂಕದ ಮೂರು ಪೇಲೋಡ್‌ಗಳನ್ನು ಹೊತ್ತು ನಭಕ್ಕೆ ಹಾರಲಿದೆ. ಮೂರರಲ್ಲಿ ಎರಡು ಪೇಲೋಡ್‌ ಭಾರತದ್ದಾದರೆ, ಇನ್ನೊಂದು ವಿದೇಶದ್ದಾಗಿದೆ. ಭೂಮಿಯ ಮೇಲ್ಮೈಯಿಂದ ಸುಮಾರು 120 ಕಿ.ಮೀ ಎತ್ತರಕ್ಕೆ ರಾಕೆಟ್‌ ಹಾರಲಿದೆ. ಕಾರ್ಬನ್‌ ಕಾಂಪೊಸಿಟ್‌ ಸ್ಟ್ರಕ್ಚರ್ಸ್‌ ಹಾಗೂ 3ಡಿ ಪ್ರಿಂಟೆಡ್‌ ಕಾಂಪೊನೆಂಟ್‌ಗಳನ್ನು ಬಳಸಿ ರಾಕೆಟ್‌ಅನ್ನು ಅಭಿವೃದ್ಧಿಪಡಿಸಲಾಗಿದ್ದು, ಇನ್ನೂ ವಿವಿಧ ತಂತ್ರಜ್ಞಾನವನ್ನು ಅಳವಡಿಸಿಕೊಳ್ಳಲಾಗಿದೆ. ನವೆಂಬರ್‌ 15ರಂದೇ ರಾಕೆಟ್‌ ಉಡಾವಣೆಯಾಗಬೇಕಿತ್ತು. ಆದರೆ, ಹವಾಮಾನ ವೈಪರೀತ್ಯದಿಂದಾಗಿ ನವೆಂಬರ್‌ 18ಕ್ಕೆ ಮುಂದೂಡಲಾಗಿತ್ತು.

ಭವಿಷ್ಯದ ಯೋಜನೆಗಳೇನು?

ಸ್ಕೈರೂಟ್‌ ಏರೋಸ್ಪೇಸ್‌ ಕಂಪನಿಯು ವಿಕ್ರಮ್‌ ಎಸ್‌ ರಾಕೆಟ್‌ ಉಡಾವಣೆ ಮಾಡುವ ಜತೆಗೆ ಭವಿಷ್ಯದಲ್ಲೂ ಹಲವು ಯೋಜನೆಗಳನ್ನು ಹೊಂದಿದೆ. ವಿಕ್ರಮ್‌ I, ವಿಕ್ರಮ್‌ II ಹಾಗೂ ವಿಕ್ರಮ್‌ III ಎಂಬ ಮಿಷನ್‌ಗಳ ಜಾರಿಗೆ ಸ್ಕೈರೂಟ್‌ ಯೋಜನೆ ರೂಪಿಸಿದೆ. ವಿಕ್ರಮ್‌ I ಮಿಷನ್‌ಅನ್ನು 2023ರ ದ್ವಿತೀಯಾರ್ಧದಲ್ಲಿ ಜಾರಿಗೊಳಿಸುವ ಯೋಜನೆ ಇದೆ. ಹಾಗೆಯೇ, ಒಂದು ದಶಕದಲ್ಲಿ ಸ್ಕೈರೂಟ್‌ ಏರೋಸ್ಪೇಸ್‌ ಕಂಪನಿಯು 20 ಸಾವಿರಕ್ಕೂ ಅಧಿಕ ಸಣ್ಣ ಉಪಗ್ರಹಗಳನ್ನು ಉಡಾವಣೆ ಮಾಡುವ ಗುರಿ ಹೊಂದಿದೆ.

ಇದನ್ನೂ ಓದಿ | ವಿಸ್ತಾರ Explainer | ಸ್ಕೈರೂಟ್ ಉಡಾಯಿಸಲಿದೆ ಭಾರತದ ಪ್ರಥಮ ಖಾಸಗಿ ಸ್ವದೇಶಿ ರಾಕೆಟ್

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ದೇಶ

Doctor’s Day: ಆರೋಗ್ಯ ಕ್ಷೇತ್ರದ ಮೂಲ ಸೌಕರ್ಯ ವೃದ್ಧಿಗೆ ಕ್ರಮ; ಪ್ರಧಾನಿ ಮೋದಿ ಭರವಸೆ

Doctor’s Day: ಇಂದು (ಜುಲೈ 1) ರಾಷ್ಟ್ರೀಯ ವೈದ್ಯರ ದಿನ. ಈ ಹಿನ್ನಲೆಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು, ಕೇಂದ್ರ ಸರ್ಕಾರ ಆರೋಗ್ಯ ಕ್ಷೇತ್ರದ ಮೂಲ ಸೌಕರ್ಯ ಸುಧಾರಿಸಲು ಕ್ರಮ ಕೈಗೊಳ್ಳಲಿದೆ, ವೈದ್ಯರಿಗೆ ಸೂಕ್ತ ರಕ್ಷಣೆ ಒದಗಿಸಲಿದೆ ಎಂದು ಭರವಸೆ ನೀಡಿದ್ದಾರೆ. ಜತೆಗೆ ಇಂದು ಚಾರ್ಟರ್ಡ್ ಅಕೌಂಟೆಂಟ್‌ ದಿನವಾಗಿರುವುದರಿಂದ ಅವರ ಸೇವೆಯನ್ನೂ ಪ್ರಧಾನಿ ಸ್ಮರಿಸಿದ್ದಾರೆ.

VISTARANEWS.COM


on

Doctor's Day
Koo

ನವದೆಹಲಿ: ಇಂದು (ಜುಲೈ 1) ರಾಷ್ಟ್ರೀಯ ವೈದ್ಯರ ದಿನ (Doctor’s Day). ಈ ಹಿನ್ನಲೆಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ (Narendra Modi) ಅವರು, ಕೇಂದ್ರ ಸರ್ಕಾರ ಆರೋಗ್ಯ ಕ್ಷೇತ್ರದ ಮೂಲ ಸೌಕರ್ಯ ಸುಧಾರಿಸಲು ಕ್ರಮ ಕೈಗೊಳ್ಳಲಿದೆ, ವೈದ್ಯರಿಗೆ ಸೂಕ್ತ ರಕ್ಷಣೆ ಒದಗಿಸಲಿದೆ ಎಂದು ಭರವಸೆ ನೀಡಿದ್ದಾರೆ.

ಡಾ. ಬಿಪಿನ್‌ ಚಂದ್ರ ರಾಯ್‌ ಅವರ ಸಂಸ್ಮರಣಾರ್ಥವಾಗಿ ಭಾರತ ಸರ್ಕಾರ ಪ್ರತಿವರ್ಷ ಜುಲೈ 1ರಂದು ವೈದ್ಯರ ದಿನವನ್ನಾಗಿ ಆಚರಿಸುತ್ತಿದೆ. 1991ರಲ್ಲಿ ರಾಷ್ಟ್ರೀಯ ವೈದ್ಯರ ದಿನವನ್ನು ಘೋಷಿಸಲಾಯಿತು. ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿಯಾಗಿದ್ದ ಡಾ. ಬಿಪಿನ್‌ ಚಂದ್ರ ರಾಯ್‌, ಖ್ಯಾತ ವೈದ್ಯರು ಮತ್ತು ಸ್ವಾತಂತ್ರ ಹೋರಾಟಗಾರರೂ ಆಗಿದ್ದರು. ಭಾರತೀಯ ವೈದ್ಯಕೀಯ ಸಂಘ, ಭಾರತೀಯ ವೈದ್ಯಕೀಯ ಮಂಡಳಿ ಸೇರಿದಂತೆ ಹಲವು ಪ್ರಮುಖ ಸಂಸ್ಥೆಗಳನ್ನು ಹುಟ್ಟುಹಾಕಿ, ವೈದ್ಯಕೀಯ ಕ್ಷೇತ್ರಕ್ಕೆ ಸಾಂಸ್ಥಿಕ ಬಲವನ್ನು ನೀಡುವಲ್ಲಿ ಡಾ. ರಾಯ್‌ ಪ್ರಮುಖರಾಗಿದ್ದರು. ತಾವೇ ಸ್ವತಃ ಒಳ್ಳೆಯ ವೈದ್ಯರಾಗಿ, ಬಹಳಷ್ಟು ಜೀವಗಳನ್ನು ಉಳಿಸಿದ್ದರು. ಸ್ವಾತಂತ್ರ ಹೋರಾಟದಲ್ಲೂ ಅವರು ಪಾಲ್ಗೊಂಡಿದ್ದರು. ದೇಶಕ್ಕೆ ಅವರು ನೀಡಿದ ಕೊಡುಗೆಗಾಗಿ, ಭಾರತದ ಅತ್ತ್ಯುನ್ನತ ನಾಗರಿಕ ಪ್ರಶಸ್ತಿ ʻಭಾರತ ರತ್ನʼ ಪುರಸ್ಕಾರವನ್ನು ನೀಡಿ ಗೌರವಿಸಲಾಗಿದೆ.

“ವೈದ್ಯರ ದಿನದ ಶುಭಾಶಯಗಳು. ಇದು ನಮ್ಮ ಆರೋಗ್ಯವನ್ನು ಕಾಪಾಡುವ ನಿಜವಾದ ಹೀರೋಗಳನ್ನು ಸ್ಮರಿಸುವ, ಗೌರವಿಸುವ ದಿನ. ವೈದ್ಯರು ಅತ್ಯಂತ ಸವಾಲಿನ ಸಂಕೀರ್ಣತೆಗಳನ್ನೂ ತಮ್ಮ ಕೌಶಲ್ಯದಿಂದ ನಿವಾರಿಸುತ್ತಾರೆ. ಭಾರತದಲ್ಲಿ ಆರೋಗ್ಯ ಕ್ಷೇತ್ರದ ಮೂಲ ಸೌಕರ್ಯವನ್ನು ಸುಧಾರಿಸಲು ಮತ್ತು ವೈದ್ಯರು ತಾವು ಅರ್ಹರಾದ ಗೌರವವನ್ನು ಪಡೆಯುವುದನ್ನು ಖಚಿತಪಡಿಸಿಕೊಳ್ಳಲು ನಮ್ಮ ಸರ್ಕಾರ ಬದ್ಧವಾಗಿದೆ” ಎಂದು ಮೋದಿ ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಬರೆದುಕೊಂಡಿದ್ದಾರೆ.

ಇಂದು ಚಾರ್ಟರ್ಡ್ ಅಕೌಂಟೆಂಟ್‌ ದಿನವಾಗಿರುವುದರಿಂದ ಅವರ ಸೇವೆಯನ್ನೂ ಪ್ರಧಾನಿ ಸ್ಮರಿಸಿದ್ದಾರೆ. ದೇಶದ ಆರ್ಥಿಕತೆಗೆ ಚಾರ್ಟರ್ಡ್ ಅಕೌಂಟೆಂಟ್‌ಗಳೂ ಮುಖ್ಯ ಪಾತ್ರ ವಹಿಸಿದ್ದಾರೆ ಎಂದು ಮತ್ತೊಂದು ಪೋಸ್ಟ್‌ನಲ್ಲಿ ಅವರು ಬರೆದುಕೊಂಡಿದ್ದಾರೆ. ʼʼಹ್ಯಾಪಿ ಚಾರ್ಟೆಡ್‌ ಅಕೌಂಟೆಂಟ್ಸ್‌ ಡೇ. ಸಿಎ ನಮ್ಮ ಆರ್ಥಿಕತೆಯಲ್ಲಿ ಮುಖ್ಯ ಪಾತ್ರವಹಿಸಿದ್ದಾರೆ. ಅವರ ಪರಿಣತಿ ಮತ್ತು ಕಾರ್ಯತಂತ್ರದ ಒಳನೋಟಗಳು ವ್ಯವಹಾರಗಳು ಮತ್ತು ವ್ಯಕ್ತಿಗಳಿಗೆ ಸಮಾನವಾಗಿ ಪ್ರಯೋಜನಕಾರಿಯಾಗಿವೆ. ಅವರು ಆರ್ಥಿಕ ಬೆಳವಣಿಗೆ ಮತ್ತು ಸ್ಥಿರತೆಗೆ ಗಮನಾರ್ಹ ಕೊಡುಗೆ ನೀಡುತ್ತಾರೆ. ಅವರು ನಮ್ಮ ಆರ್ಥಿಕ ಯೋಗಕ್ಷೇಮಕ್ಕೆ ಅತ್ಯಗತ್ಯʼʼ ಎಂದು ಶ್ಲಾಘಿಸಿದ್ದಾರೆ.

ಅಕೌಂಟೆಂಟ್ ದಿನದ ಹಿನ್ನೆಲೆ

ಸಿಎ ಕೋರ್ಸ್ ಮತ್ತು ಪರೀಕ್ಷೆ ನಡೆಸುವ ಹಾಗೂ ಸಿಎಗಳ ನೊಂದಣಿ ಇರುವ ಐಸಿಎಐ ಸಂಸ್ಥೆಯ ಸಂಸ್ಥಾಪನೆಯಾಗಿ 75 ವರ್ಷ ಆಗಿದೆ. 1949ರ ಜುಲೈ 1ಕ್ಕೆ ಇನ್ಸ್​ಟಿಟ್ಯೂಟ್ ಆಫ್ ಚಾರ್ಟರ್ಡ್ ಅಕೌಂಟೆಂಟ್ಸ್ ಆಫ್ ಇಂಡಿಯಾ ಸ್ಥಾಪನೆಯಾಗಿತ್ತು. ಹೀಗಾಗಿ ಈ ದಿನವನ್ನು ಪ್ರತೀ ವರ್ಷ ಚಾರ್ಟರ್ಡ್ ಅಕೌಂಟೆಂಟ್ ದಿನವಾಗಿ ಆಚರಿಸಲಾಗುತ್ತದೆ. ಭಾರತದಲ್ಲಿ ಸದ್ಯ ಇರುವ ಕಠಿಣ ಕೋರ್ಸ್​ಗಳಲ್ಲಿ ಚಾರ್ಟರ್ಡ್ ಅಕೌಂಟೆಂಟ್ ಕೋರ್ಸ್ ಕೂಡ ಒಂದು. ಇದರ ಪಾಸಿಂಗ್ ಪರ್ಸಂಟೇಜ್ ಕೇವಲ ಶೇ. 8ರಿಂದ 20. ಐಸಿಎಐನಿಂದ ನಡೆಸಲಾಗುವ ಸಿಎ ಪರೀಕ್ಷೆ ತೇರ್ಗಡೆಯಾದವರು ಮಾತ್ರವೇ ಕಂಪನಿಗಳ ಆಡಿಟಿಂಗ್ ಮಾಡಬಹುದು.

ಇದನ್ನೂ ಓದಿ: National Doctor’s Day: ಇಂದು ರಾಷ್ಟ್ರೀಯ ವೈದ್ಯರ ದಿನ; ಕಾಳಜಿಯ ಕೈಗಳಿಗೆ ಕೃತಜ್ಞತೆ ಹೇಳುವ ದಿನ

Continue Reading

ದೇಶ

NEET UG 2024 Re-Test Result: ನೀಟ್‌ ಮರುಪರೀಕ್ಷೆಯ ಫಲಿತಾಂಶ ಪ್ರಕಟ; ಹೀಗೆ ಚೆಕ್‌ ಮಾಡಿ

NEET UG 2024 Re-Test Result: ವೈದ್ಯಕೀಯ ಕೋರ್ಸ್‌ಗಳ ಪ್ರವೇಶಾತಿಗಾಗಿ ನಡೆದ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ ಮರು ಪರೀಕ್ಷೆ ಫಲಿತಾಂಶವನ್ನು ಸೋಮವಾರ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ಪ್ರಕಟಿಸಿದೆ. ಮೇಯಲ್ಲಿ ವೈದ್ಯಕೀಯ ಕೋರ್ಸ್‌ಗಳ ಪ್ರವೇಶಾತಿಗಾಗಿ ನಡೆದ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯಲ್ಲಿ ಕೃಪಾಂಕ ಪಡೆದ 1,563 ವಿದ್ಯಾರ್ಥಿಗಳಿಗೆ ಜೂನ್ 23ರಂದು ಮರುಪರೀಕ್ಷೆ ನಡೆಲಾಗಿತ್ತು.

VISTARANEWS.COM


on

NEET UG 2024 Re-Test Result
Koo

ನವದೆಹಲಿ: ವೈದ್ಯಕೀಯ ಕೋರ್ಸ್‌ಗಳ ಪ್ರವೇಶಾತಿಗಾಗಿ ನಡೆದ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ ಮರು ಪರೀಕ್ಷೆ (Re-Test) ಫಲಿತಾಂಶವನ್ನು ಸೋಮವಾರ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (NTA) ಪ್ರಕಟಿಸಿದೆ (NEET UG 2024 Re-Test Result). ಮೇಯಲ್ಲಿ ವೈದ್ಯಕೀಯ ಕೋರ್ಸ್‌ಗಳ ಪ್ರವೇಶಾತಿಗಾಗಿ ನಡೆದ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯಲ್ಲಿ ಕೃಪಾಂಕ ಪಡೆದ 1,563 ವಿದ್ಯಾರ್ಥಿಗಳಿಗೆ ಜೂನ್ 23ರಂದು ಮರುಪರೀಕ್ಷೆ ನಡೆಲಾಗಿತ್ತು. ಈ ಪೈಕಿ 813 ಅಭ್ಯರ್ಥಿಗಳು ಮಾತ್ರ ಹಾಜರಾಗಿದ್ದರು. ಶನಿವಾರ ಆನ್ಸರ್‌ ಕೀ ಪ್ರಕಟಿಸಲಾಗಿತ್ತು.

ಚಂಡೀಗಢ, ಗುಜರಾತ್‌, ಹರಿಯಾಣ, ಮೇಘಾಲಯ ಸೇರಿ ಆರು ರಾಜ್ಯಗಳ ನಗರಗಳಲ್ಲಿ ಮರು ಪರೀಕ್ಷೆ ನಡೆದಿತ್ತು. ಈ ಪೈಕಿ ಛತ್ತೀಸ್‌ಗಢದಲ್ಲಿ 602 ಅಭ್ಯರ್ಥಿಗಳ ಪೈಕಿ 291 ವಿದ್ಯಾರ್ಥಿಗಳು ಹಾಜರಾದರೆ, ಹರಿಯಾಣದಲ್ಲಿ 494 ಅಭ್ಯರ್ಥಿಗಳ ಪೈಕಿ 287, ಮೇಘಾಲಯದಲ್ಲಿ 464 ವಿದ್ಯಾರ್ಥಿಗಳ ಪೈಕಿ 234 ಅಭ್ಯರ್ಥಿಗಳು ಮಾತ್ರ ಹಾಜರಾಗಿದ್ದರು. ಗುಜರಾತ್‌ ಕೇಂದ್ರದಲ್ಲಿ ಒಬ್ಬ ವಿದ್ಯಾರ್ಥಿ ಮಾತ್ರ ಮರು ಪರೀಕ್ಷೆ ಬರೆದಿದ್ದರು.

“ಜೂನ್ 23ರಂದು ಮರು ಪರೀಕ್ಷೆಗೆ ಹಾಜರಾದ ನೀಟ್ (ಯುಜಿ) 2024ರ ಎಲ್ಲ ಅಭ್ಯರ್ಥಿಗಳ ಪರಿಷ್ಕೃತ ಸ್ಕೋರ್‌ ಕಾರ್ಡ್‌ಗಳನ್ನು ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದೆ. ಅಭ್ಯರ್ಥಿಗಳು ವೆಬ್‌ಸೈಟ್‌ಗೆ ಲಾಗಿನ್‌ ಆಗಿ ಪರಿಷ್ಕೃತ ಸ್ಕೋರ್‌ ಕಾರ್ಡ್‌ಗಳನ್ನು ಡೌನ್‌ಲೋಡ್‌ ಮಾಡಬಹುದು” ಎಂದು ಎನ್‌ಟಿಎ ತಿಳಿಸಿದೆ.

ಫಲಿತಾಂಶ ಹೀಗೆ ಚೆಕ್‌ ಮಾಡಿ

ನೀಟ್‌ ಪರೀಕ್ಷೆ ವೇಳೆ ಅಕ್ರಮ ನಡೆದಿದೆ ಎಂಬ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ರಾಷ್ಟ್ರೀಯ ಪರೀಕ್ಷಾ ಏಜೆನ್ಸಿ (NTA) ಮತ್ತು ಕೇಂದ್ರ ಶಿಕ್ಷಣ ಸಚಿವಾಲಯದ ಅಧಿಕಾರಿಗಳು ಹಾಜರಿದ್ದು, ಮರುಪರೀಕ್ಷೆಯ ಮೇಲ್ವಿಚಾರಣೆ ನಡೆಸಿದರು.

ಯಾಕಾಗಿ ಮರು ಪರೀಕ್ಷೆ?

2024ರ ಮೇ 5ರಂದು 14 ಅಂತಾರಾಷ್ಟ್ರೀಯ ಸ್ಥಳಗಳು ಸೇರಿದಂತೆ 571 ನಗರಗಳಲ್ಲಿ, 4,750 ಕೇಂದ್ರಗಳಲ್ಲಿ 24 ಲಕ್ಷ ವಿದ್ಯಾರ್ಥಿಗಳು ನೀಟ್ ಪರೀಕ್ಷೆಗೆ ಹಾಜರಾಗಿದ್ದರು. ಜೂನ್ 4ರಂದು ಫಲಿತಾಂಶವನ್ನು ಪ್ರಕಟಿಸಲಾಯಿತು. ಬಳಿಕ 1,563 ವಿದ್ಯಾರ್ಥಿಗಳಿಗೆ ಗ್ರೇಸ್ ಅಂಕಗಳು ದೊರೆತಿರುವುದು ಭಾರಿ ಸುದ್ದಿ ಆಯಿತು. ಸದ್ಯ ಪ್ರಕರಣ ಸುಪ್ರೀಂ ಕೋರ್ಟ್‌ ಮೆಟ್ಟಿಲೇರಿದೆ.

ಗ್ರೇಸ್ ಅಂಕದ ವಿವಾದ ದೇಶಾದ್ಯಂತ ಹರಡುತ್ತಿದ್ದಂತೆ ಕೇಂದ್ರ ಸರ್ಕಾರ ಗ್ರೇಸ್ ಅಂಕಗಳನ್ನು ಪಡೆದ 1,563 ವಿದ್ಯಾರ್ಥಿಗಳಿಗೆ ಮರುಪರೀಕ್ಷೆ ನಡೆಸುವುದಾಗಿ ಸುಪ್ರೀಂ ಕೋರ್ಟ್‌ಗೆ ಹೇಳಿತ್ತು. 1,563 ಅಭ್ಯರ್ಥಿಗಳಲ್ಲಿ ಯಾರಾದರೂ ಮರುಪರೀಕ್ಷೆಯಿಂದ ಹೊರಗುಳಿದಿದ್ದರೆ ಗ್ರೇಸ್ ಅಂಕಗಳಿಲ್ಲದ ಅವರ ಹಿಂದಿನ ಅಂಕಗಳನ್ನು ಫಲಿತಾಂಶಗಳಿಗಾಗಿ ಬಳಸಲಾಗುತ್ತದೆ ಎಂದೂ ಕೇಂದ್ರ ಕೋರ್ಟ್‌ಗೆ ತಿಳಿಸಿತ್ತು. ಅದರಂತೆ ಮರುಪರೀಕ್ಷೆ ನಡೆಸಲಾಗಿತ್ತು.

Continue Reading

ಉದ್ಯೋಗ

Job Alert: HCLನಲ್ಲಿ ಖಾಲಿ ಇರುವ 56 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ; ಮಾಸಿಕ ವೇತನ 1 ಲಕ್ಷ ರೂ.ವರೆಗೆ: ಇಂದೇ ಅಪ್ಲೈ ಮಾಡಿ

Job Alert: ಹಿಂದುಸ್ತಾನ್‌ ಕಾಪರ್‌ ಲಿಮಿಟೆಡ್‌ ತನ್ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಒಟ್ಟು 56 ಜೂನಿಯರ್‌ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದ್ದು, ಡಿಪ್ಲೋಮಾ, ಎಂಜಿನಿಯರಿಂಗ್‌ ಪದವಿ ಪಡೆದು ಕಾರ್ಯಾನುಭವ ಹೊಂದಿದವರು ಅರ್ಜಿ ಸಲ್ಲಿಸಬಹುದು. ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಜುಲೈ 21 ಕೊನೆಯ ದಿನ.

VISTARANEWS.COM


on

Job Alert
Koo

ನವದೆಹಲಿ: ಒಂದೊಳ್ಳೆ ಉದ್ಯೋಗ ಹೊಂದಬೇಕು ಎನ್ನುವ ಕನಸು ಕಾಣುವವರಿಗೆ ಇಲ್ಲಿದೆ ಗುಡ್‌ನ್ಯೂಸ್‌. ಹಿಂದುಸ್ತಾನ್‌ ಕಾಪರ್‌ ಲಿಮಿಟೆಡ್‌ (Hindustan Copper Limited) ತನ್ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ (Hindustan Copper Recruitment 2024). ಒಟ್ಟು 56 ಜೂನಿಯರ್‌ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದ್ದು, ಡಿಪ್ಲೋಮಾ, ಎಂಜಿನಿಯರಿಂಗ್‌ ಪದವಿ ಪಡೆದು ಕಾರ್ಯಾನುಭವ ಹೊಂದಿದವರು ಅರ್ಜಿ ಸಲ್ಲಿಸಬಹುದು. ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಜುಲೈ 21 ಕೊನೆಯ ದಿನ (Job Alert).

ಹುದ್ದೆಗಳ ವಿವರ

ಜೂನಿಯರ್ ಮ್ಯಾನೇಜರ್ (ಮೈನಿಂಗ್‌)- 46 ಹುದ್ದೆ, ವಿದ್ಯಾರ್ಹತೆ: ಡಿಪ್ಲೋಮಾ / ಮೈನಿಂಗ್ ಎಂಜಿನಿಯರಿಂಗ್‌ನಲ್ಲಿ ಪದವಿ
ಜೂನಿಯರ್ ಮ್ಯಾನೇಜರ್ (ಎಲೆಕ್ಟ್ರಿಕಲ್)- 6 ಹುದ್ದೆ, ವಿದ್ಯಾರ್ಹತೆ: ಡಿಪ್ಲೋಮಾ / ಎಲೆಕ್ಟ್ರಿಕಲ್ ಎಂಜಿನಿಯರಿಂಗ್‌ನಲ್ಲಿ ಪದವಿ
ಜೂನಿಯರ್ ಮ್ಯಾನೇಜರ್ (ಕಂಪನಿ ಸೆಕ್ರೆಟರಿ) 2 ಹುದ್ದೆ, ವಿದ್ಯಾರ್ಹತೆ: ಕಂಪನಿ ಸೆಕ್ರೆಟರಿ, ಪದವಿ
ಜೂನಿಯರ್ ಮ್ಯಾನೇಜರ್ (ಫೈನಾನ್ಸ್)- 1 ಹುದ್ದೆ, ವಿದ್ಯಾರ್ಹತೆ: ಸಿಎ, ಪದವಿ, ಸ್ನಾತಕೋತ್ತರ ಪದವಿ / ಡಿಪ್ಲೋಮಾ
ಜೂನಿಯರ್ ಮ್ಯಾನೇಜರ್ (ಎಚ್ಆರ್) 1 ಹುದ್ದೆ, ವಿದ್ಯಾರ್ಹತೆ: ಪದವಿ, ಸ್ನಾತಕೋತ್ತರ ಪದವಿ / ಡಿಪ್ಲೋಮಾ, ಎಂಬಿಎ

ವಯೋಮಿತಿ

ಗರಿಷ್ಠ ವಯೋಮಿತಿ 40 ವರ್ಷ. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಲಭ್ಯ. ಒಬಿಸಿ ವಿಭಾಗದ ಅಭ್ಯರ್ಥಿಗಳಿಗೆ 3 ವರ್ಷ, ಎಸ್‌ಸಿ / ಎಸ್‌ಟಿ ವಿಭಾಗದ ಅಭ್ಯರ್ಥಿಗಳಿಗೆ 5 ವರ್ಷ, ಪಿಡಬ್ಲ್ಯುಡಿ (ಸಾಮಾನ್ಯ / ಇಡಬ್ಲ್ಯುಎಸ್‌) ವಿಭಾಗದ ಅಭ್ಯರ್ಥಿಗಳಿಗೆ 10, ಪಿಡಬ್ಲ್ಯುಡಿ (ಒಬಿಸಿ) ವಿಭಾಗದ ಅಭ್ಯರ್ಥಿಗಳಿಗೆ 13 ವರ್ಷ ಮತ್ತು ಪಿಡಬ್ಲ್ಯುಡಿ (ಎಸ್‌ಸಿ / ಎಸ್‌ಟಿ) ವಿಭಾಗದ ಅಭ್ಯರ್ಥಿಗಳಿಗೆ 15 ವರ್ಷಗಳ ರಿಯಾಯಿತಿ ಇದೆ.

ಆಯ್ಕೆ ವಿಧಾನ ಮತ್ತು ಮಾಸಿಕ ವೇತನ

ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ. ಆಯ್ಕೆಯಾದವರಿಗೆ 30,000 ರೂ. – 1,20,000 ರೂ. ಮಾಸಿಕ ವೇತನ ದೊರೆಯಲಿದೆ.

ಅರ್ಜಿ ಶುಲ್ಕ

ಅರ್ಜಿ ಶುಲ್ಕವಾಗಿ ಸಾಮಾನ್ಯ, ಒಬಿಸಿ ಮತ್ತು ಇಡಬ್ಲ್ಯುಎಸ್‌ ವಿಭಾಗದ ಅಭ್ಯರ್ಥಿಗಳು 500 ರೂ. ಆನ್‌ಲೈನ್‌ ಮೂಲಕ ಪಾವತಿಸಬೇಕು. ಇತರ ವಿಭಾಗದ ಅಭ್ಯರ್ಥಿಗಳು ಅರ್ಜಿ ಶುಲ್ಕ ಪಾವತಿಸಬೇಕಾಗಿಲ್ಲ.

Hindustan Copper Recruitment 2024 ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್‌ ಮಾಡಿ.

ಅರ್ಜಿ ಸಲ್ಲಿಸುವ ವಿಧಾನ

  • ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್‌ ಮಾಡಿ (https://www.hindustancopper.com/RecruitmentNew/CandidateLogin/113).
  • ವೈಯಕ್ತಿಕ ಮಾಹಿತಿ ನೀಡಿ ಹೆಸರು ನೋಂದಾಯಿಸಿ.
  • ಪಾಸ್‌ವರ್ಡ್‌ ಬಳಸಿ ಲಾಗಿನ್‌ ಆಗಿ.
  • ಅಗತ್ಯ ಮಾಹಿತಿ ನೀಡಿ ಅಪ್ಲಿಕೇಷನ್‌ ಫಾರಂ ಭರ್ತಿ ಮಾಡಿ.
  • ಅಗತ್ಯ ದಾಖಲೆ, ಫೋಟೊ ಅಪ್‌ಲೋಡ್‌ ಮಾಡಿ.
  • ಆನ್‌ಲೈನ್‌ ಮೂಲಕ ಅರ್ಜಿ ಶುಲ್ಕ ಪಾವತಿಸಿ (ಅಗತ್ಯವಿದ್ದರು ಮಾತ್ರ).
  • ಭರ್ತಿ ಮಾಡಿದ ವಿವರಗಳನ್ನು ಮತ್ತೊಮ್ಮೆ ಪರಿಶೀಲಿಸಿ ಎಲ್ಲವೂ ಸರಿ ಇದ್ದರೆ Submit ಬಟನ್‌ ಕ್ಲಿಕ್‌ ಮಾಡಿ.
  • ಅಪ್ಲಿಕೇಷನ್‌ ಪಾರಂ ಡೌನ್‌ಲೋಡ್‌ ಮಾಡಿ ಪ್ರಿಂಟ್‌ಔಟ್‌ ತೆಗೆದಿಡಿ.

ಇದನ್ನೂ ಓದಿ: Job Alert: 10ನೇ ತರಗತಿ ಪಾಸಾದವರಿಗೆ ಗುಡ್‌ನ್ಯೂಸ್‌; SSCಯಿಂದ ಬರೋಬ್ಬರಿ 8,326 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

Continue Reading

ವೈರಲ್ ನ್ಯೂಸ್

Viral News: ನೀರ ಬಿಟ್ಟು ರಸ್ತೆಗೆ ಬಂದ ಮೊಸಳೆಗೆ ಇಲ್ಲೇನು ಕೆಲಸ? ಅಪರೂಪದ Video ಇಲ್ಲಿದೆ ನೋಡಿ

Viral News: ಮೊಸಳೆ ಯಾರಿಗೆ ಗೊತ್ತಿಲ್ಲ ಹೇಳಿ? ಚೂಪಾದ ಉಗುರು, ಹಲ್ಲು, ದೈತ್ಯ ದೇಹ ನೋಡಿದರೆ ಸಾಕು ಹಲವರು ಬೆಚ್ಚಿ ಬೀಳುತ್ತಾರೆ. ಅಂತಹ ಪ್ರಾಣಿ ಧುತ್ತನೆ ಕಣ್ಣೆದುರು ಬಂದರೆ ಹೇಗಾಗಬೇಡ? ಅದರಲ್ಲಿಯೂ ನೀರಿನಲ್ಲಿ ಇರುವ ಪ್ರಾಣಿ ರಸ್ತೆಗೆ ಬಂದರೆ ಓಡಾಡುವವರು ಬೆಚ್ಚಿ ಬೀಳದೆ ಇರುತ್ತಾರಾ? ಹೌದು ಇಂತಹದ್ದೊಂದು ಅಚ್ಚರಿಯ ಘಟನೆ ನಡೆದಿದೆ. ಈ ಅಪರೂಪದ ವಿಡಿಯೊ ಇಲ್ಲಿದೆ ನೋಡಿ.

VISTARANEWS.COM


on

Viral News
Koo

ಮುಂಬೈ: ಮೊಸಳೆ (Crocodile) ಜಲಚರ. ಸಾಮಾನ್ಯವಾಗಿ ನದಿಯಲ್ಲಿ, ದೊಡ್ಡ ದೊಡ್ಡ ಸರೋವರಗಳಲ್ಲಿ, ಸಮುದ್ರದಲ್ಲಿ ವಾಸಿಸುತ್ತವೆ. ಅಪರೂಪಕ್ಕೆ ದಡಕ್ಕೆ ಬಂದು ಸ್ವಲ್ಪ ಹೊತ್ತು ವಿಶ್ರಾಂತಿ ಪಡೆದು, ಮೈ ಬೆಚ್ಚಗೆ ಮಾಡಿಕೊಂಡು ಮತ್ತೆ ನೀರೊಳಗೆ ತೆರಳುತ್ತವೆ. ಇದೆಲ್ಲರಿಗೂ ಗೊತ್ತಿರುವ ವಿಷಯ. ಇದರಲ್ಲೇನು ವಿಶೇಷ ಎಂದು ನೀವು ಪ್ರಶ್ನಿಸಬಹುದು. ಇಲ್ಲಿದೆ ಟ್ವಿಸ್ಟ್‌. ನೀರಲ್ಲಿ ಇರುವ ಮೊಸಳೆ ನಗರಕ್ಕೆ ಅದರಲ್ಲಿಯೂ ಜನ ನಿಬಿಡ ರಸ್ತೆಗೆ ಬಂದರೆ ಹೇಗಾಗಬಹುದು? ಇದೆಲ್ಲ ಕಲ್ಪನೆ, ಸಿನಿಮಾದಲ್ಲಿ ನಡೆಯಬಹುದು ಎಂದುಕೊಂಡರೆ ನಿಮ್ಮ ಊಹೆ ತಪ್ಪು. ಹಾಗಾದರೆ ನಿಜವಾಗಿಯೂ ರಸ್ತೆಗೆ ಮೊಸಳೆ ಬಂದಿತ್ತೆ? ಎಲ್ಲಿ? ಯಾಕೆ? ಮುಂತಾದ ನಿಮ್ಮ ಪ್ರಶ್ನೆಗೆ ಈ ವೈರಲ್‌ ವಿಡಿಯೊದಲ್ಲಿ ಇದೆ ಉತ್ತರ (Viral News).

ಮಹಾರಾಷ್ಟ್ರದಲ್ಲಿ ಜೋರಾಗಿ ಮಳೆ ಸುರಿಯುತ್ತಿದೆ. ಈ ಮಳೆಗೆ ಬೇಗ ಬೇಗ ಮನೆ ಸೇರಿಕೊಂಡು ಬಿಡಬೇಕು ಎಂದು ಧಾವಂತದಲ್ಲಿ ಸಾಗುತ್ತಿದ್ದ ರತ್ನಗಿರಿ ಜಿಲ್ಲೆಯ ಜನರಿಗೆ ಕನಸಿನಲ್ಲಿಯೂ ಊಹಿಸದ ಅಚ್ಚರಿ ರಸ್ತೆ ಮಧ್ಯೆ ಎದುರಾಗಿತ್ತು. ತಮ್ಮ ಪಾಡಿಗೆ ತಾವು ಸಾಗುತ್ತಿದ್ದ ವಾಹನ ಚಾಲಕರು ಒಂದು ಕ್ಷಣ ದಂಗಾಗಿ ನಿಂತು ಅಪರೂಪದ ಅತಿಥಿಯನ್ನು ದಿಟ್ಟಿಸಿ ನೋಡತೊಡಗಿದರು. ಹೌದು, ಭಾರಿ ಮಳೆಯಿಂದಾಗಿ ಬೃಹತ್‌ ಗಾತ್ರದ ಮೊಸಳೆಯೊಂದು ನೀರಿನಲ್ಲಿ ಕೊಚ್ಚಿಕೊಂಡು ಬಂದಿತ್ತು. ಎತ್ತ ಹೋಗಬೇಕು ಎನ್ನುವುದು ತಿಳಿಯದೆ ಅದು ಜನ ನಿಬಿಡ ರಸ್ತೆಯಲ್ಲಿ ಹೆಜ್ಜೆ ಹಾಕುತ್ತಿರುವ ದೃಶ್ಯ ಸದ್ಯ ಸೋಷಿಯಲ್‌ ಮೀಡಿಯಾದಲ್ಲಿ ಸದ್ದು ಮಾಡುತ್ತಿದೆ.

ವಿಡಿಯೊದಲ್ಲಿ ಏನಿದೆ?

ರತ್ನಗಿರಿ ಜಿಲ್ಲೆಯ ಚಿಪ್ಲುನ್‌ ಎಂಬಲ್ಲಿ ಈ ಅಪರೂಪದ ದೃಶ್ಯ ಸೆರೆಯಾಗಿದೆ. ಚಿಪ್ಲುನ್‌ನಲ್ಲಿ ಹರಿಯುವ ಶಿವ ನದಿ ಅನೇಕ ಮೊಸಳೆಗಳಿಗೆ ಆಶ್ರಯತಾಣ. ಇಲ್ಲಿ ಜೋರಾಗಿ ಸುರಿದ ಮಳೆಗೆ ಬೃಹತ್‌ ಗಾತ್ರದ ಮೊಸಳೆಯೊಂದು ನೀರಿನಲ್ಲಿ ಕೊಚ್ಚಿಕೊಂಡು ಬಂದಿದೆ. ಅದು ರಸ್ತೆಯಲ್ಲಿ ಸಂಚರಿಸುವುದನ್ನು ಕಾರಿನಲ್ಲಿದ್ದ ಪ್ರಯಾಣಿಕರೊಬ್ಬರು ತಮ್ಮ ಮೊಬೈಲ್‌ನಲ್ಲಿ ಸೆರೆ ಹಿಡಿದಿದ್ದಾರೆ. ವಾಹನಗಳ ಬೆಳಕಿನಲ್ಲಿ ಮೊಸಳೆ ರಸ್ತೆಯಲ್ಲಿ ರಾಜಾರೋಷವಾಗಿ ಅಡ್ಡಾಡುತ್ತಿರುವುದು ಸ್ಪಷ್ಟವಾಗಿ ಕಂಡು ಬರುತ್ತಿದೆ.

ರತ್ನಗಿರಿ ಮೊಸಳೆಗಳಿಗೆ ಪ್ರಸಿದ್ಧ

ಭಾರತದ ಮೂರು ಮೊಸಳೆ ಪ್ರಭೇದಗಳಲ್ಲಿ ಒಂದಾದ ಮಗ್ಗರ್ ಮೊಸಳೆಗಳಿಗೆ ರತ್ನಗಿರಿ ಬಹಳ ಪ್ರಸಿದ್ಧ. ರತ್ನಗಿರಿ ಜಿಲ್ಲೆಯ ಚಿಪ್ಲುನ್ ಮತ್ತು ಇತರ ಸ್ಥಳಗಳಲ್ಲಿ ಕಳೆದ ಕೆಲವು ದಿನಗಳಿಂದ ನಿರಂತರ ಮಳೆಯಾಗುತ್ತಿದ್ದು, ಇದರಿಂದ ನದಿಗಳ ನೀರಿನ ಮಟ್ಟ ದಿನ ಕಳೆದಂತೆ ಹೆಚ್ಚಾಗುತ್ತಿದೆ. ಜುಲೈ 2ರ ತನಕ ಧಾರಾಕಾರ ಮಳೆಯಾಗುವ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇದನ್ನೂ ಓದಿ: Viral News: 10 ಅಡಿಯ ದೈತ್ಯ ಮೊಸಳೆಯಿಂದ ಕಬ್ಬಿಣದ ಗೇಟು ಹಾರಲು ಯತ್ನ; ಮೈ ಜುಮ್ಮೆನ್ನಿಸುವ ವಿಡಿಯೊ ಇಲ್ಲಿದೆ

ಸದ್ಯ ವಿಡಿಯೊ ನೋಡಿದರ ನೆಟ್ಟಿಗರು ಅಚ್ಚರಿ ವ್ಯಕ್ತಪಡಿಸುತ್ತಿದ್ದಾರೆ. ಮೊಸಳೆ ನೆಲದ ಮೇಲೆ ಇಷ್ಟು ಸರಾಗವಾಗಿ ನಡೆಯುತ್ತದೆ ಎನ್ನುವುದು ಗೊತ್ತೆ ಇರಲಿಲ್ಲ ಎಂದು ಅನೇಕರು ಕಮೆಂಟ್‌ ಮಾಡಿದ್ದಾರೆ. ಕಣ್ಣನ್ನು ನಂಬಲೇ ಸಾಧ್ಯವಾಗುತ್ತಿಲ್ಲ ಎಂದು ಇನ್ನೂ ಹಲವರು ಉದ್ಘರಿಸಿದ್ದಾರೆ. ಇನ್ನು ಈ ಕಣ್ಣಲ್ಲಿ ಏನೇನು ನೋಡಬೇಕೋ ಎಂದು ಕೆಲವರು ತಮಾಷೆಯಾಗಿ ಪ್ರತಿಕ್ರಿಯಿಸಿದ್ದಾರೆ. ನೀರು ಬಿಟ್ಟು ರಸ್ತೆಯಲ್ಲಿ ಮೊಸಳೆಗೆ ಏನು ಕೆಲಸ? ಎಂದು ನೆಟ್ಟಿಗರು ಕಾಲೆಳೆದಿದ್ದಾರೆ.

Continue Reading
Advertisement
Inspirational Story
ಬೆಂಗಳೂರು5 mins ago

Inspirational Story: ಕಣ್ಣೆದುರೆ ಸುಟ್ಟು ಕರಕಲಾದ ಮಗಳ ದುರಂತ ಅಂತ್ಯ; ಬಡಮಕ್ಕಳಿಗೆ ದಾರಿದೀಪವಾದ ಎಎಸ್‌ಐ

Doctor's Day
ದೇಶ25 mins ago

Doctor’s Day: ಆರೋಗ್ಯ ಕ್ಷೇತ್ರದ ಮೂಲ ಸೌಕರ್ಯ ವೃದ್ಧಿಗೆ ಕ್ರಮ; ಪ್ರಧಾನಿ ಮೋದಿ ಭರವಸೆ

Munawar Faruqui shares first pic with new wife
ಬಾಲಿವುಡ್36 mins ago

Munawar Faruqui: ಮೊದಲ ಬಾರಿಗೆ ಪತ್ನಿ ಜತೆ ಇರುವ ಫೋಟೊ ಹಂಚಿಕೊಂಡ  ʻಬಿಗ್ ಬಾಸ್ 17ʼರ ವಿಜೇತ  ಮುನಾವರ್ ಫಾರೂಕಿ!

Lok sabha Election 2024 DV Sadananda Gowda
ಪ್ರಮುಖ ಸುದ್ದಿ39 mins ago

DV Sadananda Gowda: ಬಿಜೆಪಿ ರಾಜ್ಯ ನಾಯಕರ ಮೇಲೆ ಸಿಡಿದೆದ್ದ ಸದಾನಂದ ಗೌಡ; ಪಕ್ಷವಿರೋಧಿಗಳಿಗೆ ಮಣೆ ಹಾಕಿದ್ದಕ್ಕೆ ಕಿಡಿ

Karave Protest
ಪ್ರಮುಖ ಸುದ್ದಿ53 mins ago

Karave Protest: ಕನ್ನಡಿಗರಿಗೆ ಉದ್ಯೋಗ ನೀಡಿ, ಇಲ್ಲವೇ ರಾಜ್ಯ ಬಿಟ್ಟು ತೊಲಗಿ: ಕರವೇ ಕಾರ್ಯಕರ್ತರ ಆಕ್ರೋಶ

Actor Darshan grandmother came running distant town to see and not punish him
ಸ್ಯಾಂಡಲ್ ವುಡ್1 hour ago

Actor Darshan: ದರ್ಶನ್‌ ತಪ್ಪು ಮಾಡಿದ್ದಾನೆ ಆದರೆ ಶಿಕ್ಷೆ ಕೊಡಬೇಡಿ ಎಂದು ದೂರದ ಊರಿಂದ ಓಡೋಡಿ ಬಂದ ಅಜ್ಜಿ!

ಚಿಕ್ಕಬಳ್ಳಾಪುರ1 hour ago

Dead Body Found : ಮರದಲ್ಲಿ ನೇತಾಡುತ್ತಿತ್ತು ಅಪರಿಚಿತನ ಶವ; ಸತ್ತವನ ಕೈ ಮೇಲಿತ್ತು ಲಕ್ಷ್ಮಿ ಹೆಸರಿನ ಹಚ್ಚೆ

Hurricane Beryl
ಪ್ರಮುಖ ಸುದ್ದಿ1 hour ago

Hurricane Beryl : ವೆಸ್ಟ್​ ಇಂಡೀಸ್​ನಲ್ಲಿ ಚಂಡಮಾರುತ, ಸಂಕಷ್ಟದಲ್ಲಿ ಸಿಲುಕಿದ ಚಾಂಪಿಯನ್ ಭಾರತ ತಂಡ

NEET UG 2024 Re-Test Result
ದೇಶ1 hour ago

NEET UG 2024 Re-Test Result: ನೀಟ್‌ ಮರುಪರೀಕ್ಷೆಯ ಫಲಿತಾಂಶ ಪ್ರಕಟ; ಹೀಗೆ ಚೆಕ್‌ ಮಾಡಿ

National Doctor’s Day
ಆರೋಗ್ಯ2 hours ago

National Doctor’s Day: ಇಂದು ರಾಷ್ಟ್ರೀಯ ವೈದ್ಯರ ದಿನ; ಕಾಳಜಿಯ ಕೈಗಳಿಗೆ ಕೃತಜ್ಞತೆ ಹೇಳುವ ದಿನ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Weather Forecast
ಮಳೆ20 hours ago

Karnataka Weather : ಬೆಂಗಳೂರು, ಕಲಬುರಗಿ ಸೇರಿದಂತೆ ಹಲವೆಡೆ ವರ್ಷಧಾರೆ; ನಾಳೆಗೂ ಮಳೆ ಅಲರ್ಟ್‌

Actor Darshan
ಬೆಂಗಳೂರು1 day ago

Actor Darshan : ಖೈದಿ ನಂ.6106ಕ್ಕೆ ಡಿಮ್ಯಾಂಡ್‌! ದರ್ಶನ್‌ ಫ್ಯಾನ್ಸ್‌ಗೆ ಕಾನೂನು ಕಂಟಕ, ರೂಲ್ಸ್‌ ಬ್ರೇಕ್‌ ಮಾಡಿದ್ರೆ ಬೀಳುತ್ತೆ ಕೇಸ್‌‌!

karnataka weather Forecast
ಮಳೆ2 days ago

Karnataka Weather : ಮಳೆಗೆ ಸ್ಕಿಡ್‌ ಆಗಿ ಹೇಮಾವತಿ ನದಿಗೆ ಹಾರಿದ ಕಾರು; ಕರಾವಳಿಗೆ ಎಚ್ಚರಿಕೆ ಕೊಟ್ಟ ತಜ್ಞರು

karnataka Rain
ಮಳೆ2 days ago

Karnataka Rain: ಭಾರಿ ಮಳೆಗೆ ಮನೆಗಳ ಗೋಡೆ ಕುಸಿತ; ಕೂದಲೆಳೆ ಅಂತರದಲ್ಲಿ ವೃದ್ಧ ಪಾರು

karnataka Weather Forecast
ಮಳೆ3 days ago

Karnataka Weather : ಅಬ್ಬಬ್ಬಾ.. ಮುಲ್ಕಿಯಲ್ಲಿ 30 ಸೆಂ.ಮೀ ಮಳೆ ದಾಖಲು; ವಾರಾಂತ್ಯದಲ್ಲೂ ಭಾರಿ ವರ್ಷಧಾರೆ

karnataka Rain
ಮಳೆ3 days ago

Karnataka Rain : ಭಾರಿ ಮಳೆಗೆ ಪಾತಾಳ ಸೇರಿದ ಬಾವಿ; ಅಲೆಗಳ ಹೊಡೆತಕ್ಕೆ ಸಮುದ್ರಪಾಲಾದ ಮನೆ

Karnataka Weather Forecast
ಮಳೆ4 days ago

Karnataka Weather : ಭಾರಿ ಮಳೆ ಹಿನ್ನೆಲೆ ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್; ಶುಕ್ರವಾರವೂ ಶಾಲೆಗಳಿಗೆ ರಜೆ ಘೋಷಣೆ

karnataka Weather Forecast
ಮಳೆ4 days ago

Karnataka Weather : ಭಾರಿ ಮಳೆಗೆ ಸೇತುವೆಯಿಂದ ಹೊಳೆಗೆ ಬಿದ್ದ ಕಾರು; ಮರ ಹಿಡಿದು ಪ್ರಾಣ ಉಳಿಸಿಕೊಂಡ ಸವಾರರು

Heart Attack
ಕೊಡಗು4 days ago

Heart Attack : ಕೊಡಗಿನಲ್ಲಿ ಹೃದಯಾಘಾತಕ್ಕೆ ಯುವತಿ ಬಲಿ; ಹೆಚ್ಚಾಯ್ತು ಅಲ್ಪಾಯುಷ್ಯದ ಭಯ

karnataka Rains Effected
ಮಳೆ4 days ago

Karnataka Rain : ಧಾರಾಕಾರ ಮಳೆಗೆ ಸಡಿಲಗೊಂಡ ಗುಡ್ಡಗಳು; ಧರೆ ಕುಸಿದು ಮಣ್ಣಿನಡಿ ಸಿಲುಕಿದ ಇಬ್ಬರು ಮಕ್ಕಳು

ಟ್ರೆಂಡಿಂಗ್‌