Upcoming Movies | ಈ ವಾರ ಬಿಡುಗಡೆಯಾಗುತ್ತಿರುವ ಸಿನಿಮಾಗಳಿವು! - Vistara News

ಸಿನಿಮಾ

Upcoming Movies | ಈ ವಾರ ಬಿಡುಗಡೆಯಾಗುತ್ತಿರುವ ಸಿನಿಮಾಗಳಿವು!

ಈ ವಾರ ಕನ್ನಡ, ತೆಲುಗು, ತಮಿಳಿನಲ್ಲಿ ಈ ವಾರ ಯಾವುದೇ ದೊಡ್ಡ ಸಿನಿಮಾ ತೆರೆಗೆ ಬರುತ್ತಿಲ್ಲ. ಇಲ್ಲಿವೆ ಬಿಡುಗಡೆಯಾಗುತ್ತಿರುವ ಸಿನಿಮಾಗಳ (Upcoming Movies) ಪಟ್ಟಿ!

VISTARANEWS.COM


on

Upcoming Movies
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು : ಈ ವಾರ ಕನ್ನಡದಲ್ಲಿ ಎಂಟು ಚಿತ್ರಗಳು ತೆರೆಗೆ (Upcoming Movies) ಅಪ್ಪಳಿಸಲಿವೆ. ‘ಆವರ್ಥ’, ‘ಅಬ್ಬರ’, ‘ಮಠ’, ‘ಖಾಸಗಿ ಪುಟಗಳು’, ‘ಧಮ್’, ‘ಭಾಗ್ಯವಂತರು’, ‘ದಿ ಫಿಲ್ಮ್ ಮೇಕರ್’, ‘ಕುಳ್ಳನ ಹೆಂಡತಿ’ ಹೀಗೆ ಒಟ್ಟು 8 ಸಿನಿಮಾಗಳು ಪ್ರೇಕ್ಷಕರ ಮುಂದೆ ಬರುತ್ತಿದೆ. ಈಗಾಗಲೇ ಥಿಯೇಟರ್‌ಗಳಲ್ಲಿ ‘ಕಾಂತಾರ’, ‘ಗಂಧದ ಗುಡಿ’ ಸೇರಿದಂತೆ ಸಾಕಷ್ಟು ಸಿನಿಮಾಗಳು ಭರ್ಜರಿ ಪ್ರದರ್ಶನ ಕಾಣುತ್ತಿವೆ. ಅದರ ಜತೆಗೆ ಈ ವಾರ ಮತ್ತಷ್ಟು ಸಿನಿಮಾಗಳು ಬೆಳ್ಳಿ ಪರದೆ ಮೇಲೆ ಅಪ್ಪಳಿಸುತ್ತಿವೆ.

ಪ್ರಜ್ವಲ್‌ ದೇವರಾಜ್‌ ನಟನೆಯ ʻಅಬ್ಬರʼ ಸಿನಿಮಾವನ್ನು ರಾಮ್‌ ನಾರಾಯಣ್‌ ನಿರ್ದೇಶನ ಮಾಡಿದ್ದಾರೆ. ಈ ವಾರ ವಿಶೇಷ ಅಂದರೆ ನಟ ಶಂಕರ್‌ ನಾಗ್‌ ಅಭಿನಯದ ʻಎಸ್‌.ಪಿ.ಸಾಗ್ಲಿಯಾನ-2ʼ ಚಿತ್ರ ರೀ ರೀಲಿಸ್‌ ಆಗುತ್ತಿದೆ. ಬಾಲಿವುಡ್‌ನಲ್ಲಿ ಸೂಪರ್‌ ಹಿಟ್‌ ʻದೃಶ್ಯಂ-2ʼ ಸೀಕ್ವೆಕ್‌ ಈ ವಾರ ತೆರೆಗೆ ಬರುತ್ತಿದೆ. ಅಜಯ್‌ ದೇವಗನ್‌ ಮುಖ್ಯ ಪಾತ್ರದಲ್ಲಿ ನಟಿಸುತ್ತಿದ್ದಾರೆ. ʻಮಿಸ್ಟರ್‌ ಮಮ್ಮಿʼ ಕೂಡ ಬಿಡುಗಡೆಗೊಳ್ಳುತ್ತಿದೆ.

ಇದನ್ನೂ ಓದಿ | Kantara Movie | ಕಟೀಲು ದೇಗುಲಕ್ಕೆ ಸಪ್ತಮಿ ಗೌಡ ಭೇಟಿ; ತುಳು ಸಿನಿಮಾದಲ್ಲಿ ನಟಿಸಲೂ ರೆಡಿ ಎಂದ ನಟಿ

Upcoming Movies

ಟಾಲಿವುಡ್‌ನಲ್ಲಿ ʻಗಾಲೋಡುʼ, ʻಮಸೂದʼ,ʻ ಅಲಿಪಿರಿಕಿ ಅಲ್ಲಂಟ ದೂರಂʼ, ʻಸೀತಾಪುರಂಲೋʼ, ʻಪ್ಲೇʼ, ʻಬೆಸ್ಟ್ ಕಪಲ್ʼ, ʻಭಾರತ ಪುತ್ರುಲುʼ, ʻಬಾದ್‌ಶಾʼ ಚಿತ್ರ ಬಿಡುಗಡೆಯಾಗುತ್ತಿವೆ. ತಮಿಳಿನಲ್ಲಿ ʻʻಕಳಗ ತಲೈವನ್‌, ಯುಗಿʼಹೀಗೆ ಹಲವು ಸಿನಿಮಾಗಳು ಬಿಡುಗಡೆಯಾಗುತ್ತಿವೆ. ಕನ್ನಡ, ತೆಲುಗು, ತಮಿಳಿನಲ್ಲಿ ಈ ವಾರ ಯಾವುದೇ ದೊಡ್ಡ ಸಿನಿಮಾ ತೆರೆಗೆ ಬರುತ್ತಿಲ್ಲ.

ಇದನ್ನೂ ಓದಿ | Kannada New Film | ಹೊಸ ಸಿನಿಮಾ ಅನೌನ್ಸ್‌ ಮಾಡಿದ ನಟ ರಿಷಿ: ಪ್ರಶಾಂತ್ ರಾಜಪ್ಪ ಆ್ಯಕ್ಷನ್‌ ಕಟ್‌!

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಸಿನಿಮಾ

Tharun Sudhir: ಸೋನಲ್ ಜತೆ `ತರುಣ್ ಸುಧೀರ್‌’ಗೆ ಕೂಡಿಬಂತು ಕಂಕಣಭಾಗ್ಯ?

Tharun Sudhir: ಎಕ್ಸ್‌ಕ್ಯೂಸ್‌ಮಿ’ ಚಿತ್ರದ ಸಣ್ಣ ಪಾತ್ರದಲ್ಲಿ ನಟಿಸಿದರು. ‘ರ್ಯಾಂಬೊ’ ಚಿತ್ರದ ಸಹ ನಿರ್ದೇಶಕರಾಗಿ ಕೆಲಸ ಮಾಡಿ ತರುಣ್ ‘ಚೌಕ’ ಚಿತ್ರದಿಂದ ನಿರ್ದೇಶಕರಾದರು. ‘ಚೌಕ’ ಚಿತ್ರದ ಮೂಲಕ ಡೈರೆಕ್ಟರ್ ಕ್ಯಾಪ್ ತೊಟ್ಟಿದ್ದ ತರುಣ್ ಮುಂದೆ ಒಂದರ ಹಿಂದೆಯಂತೆ ಎರಡು ಹಿಟ್ ಸಿನಿಮಾಗಳನ್ನು ಕೊಟ್ಟರು. ಇದೀಗ ತರುಣ್ 4ನೇ ಸಿನಿಮಾ ತಯಾರಿಯಲ್ಲಿದ್ದಾರೆ.’ಮಹಾನಟಿ’ ರಿಯಾಲಿಟಿ ಶೋನಲ್ಲಿ ತೀರ್ಪುಗಾರರಾಗಿ ಕೂಡ ಗುರುತಿಸಿಕೊಂಡಿರುವ ತರುಣ್ ಸುಧೀರ್ ಮದುವೆಗೆ (Tharun Sudhir) ಸಜ್ಜಾಗುತ್ತಿದ್ದಾರೆ ಎನ್ನಲಾಗಿದೆ.

VISTARANEWS.COM


on

Tharun Sudhir sonal monteiro will get marriage
Koo

ಬೆಂಗಳೂರು: ʻಕಾಟೇರʼ ಸಿನಿಮಾ (Kaatera Movie) ನಿರ್ದೇಶಕ, ‘ಮಹಾನಟಿ’ ರಿಯಾಲಿಟಿ ಶೋನಲ್ಲಿ ತೀರ್ಪುಗಾರರಾಗಿ ಕೂಡ ಗುರುತಿಸಿಕೊಂಡಿರುವ ತರುಣ್ ಸುಧೀರ್ ಮದುವೆಗೆ (Tharun Sudhir) ಸಜ್ಜಾಗುತ್ತಿದ್ದಾರೆ ಎನ್ನಲಾಗಿದೆ. ನಟಿ ಸೋನಾಲ್ ಮಂಥೆರೊ (sonal monteiro) ಕೈ ಹಿಡಿಯುತ್ತಾರೆ ಎಂದು ವರದಿಯಾಗಿದೆ. ತರುಣ್ ನಿರ್ದೇಶನದ ‘ರಾಬರ್ಟ್’ ಚಿತ್ರದಲ್ಲಿ ರಾಘವ ವಿನೋದ್ ಪ್ರಭಾಕರ್ ಜೋಡಿ ತನು ಆಗಿ ಸೋನಲ್ ಮಿಂಚಿದ್ದರು. ಮಂಗಳೂರಿನಲ್ಲಿ ಹುಟ್ಟಿ ಬೆಳೆದ ಸೋನಲ್ ಮೊದಲಿಗೆ ತುಳು ಸಿನಿಮಾಗಳಲ್ಲಿ ನಟಿಸಿದ್ದರು. ‘ಅಭಿಸಾರಿಕೆ’ ಸಿನಿಮಾ ಮೂಲಕ ಸ್ಯಾಂಡಲ್‌ವುಡ್ ಪ್ರವೇಶಿಸಿದರು. ಇದೀಗ ಈ ಜೋಡಿ ಸಪ್ತಪದಿ ತುಳಿಯಲಿದೆ ಎನ್ನಲಾಗಿದೆ. ತರುಣ್‌ ಹಾಗೂ ಸೋನಲ್‌ ಈ ಬಗ್ಗೆ ಯಾವುದೇ ಅಧಿಕೃತ ಮಾಹಿತಿ ಹಂಚಿಕೊಂಡಿಲ್ಲ.

‘ಚೌಕ’ ಚಿತ್ರದ ಮೂಲಕ ಡೈರೆಕ್ಟರ್ ಕ್ಯಾಪ್ ತೊಟ್ಟಿದ್ದ ತರುಣ್ ಮುಂದೆ ಒಂದರ ಹಿಂದೆಯಂತೆ ಎರಡು ಹಿಟ್ ಸಿನಿಮಾಗಳನ್ನು ಕೊಟ್ಟರು. ಇದೀಗ ತರುಣ್ 4ನೇ ಸಿನಿಮಾ ತಯಾರಿಯಲ್ಲಿದ್ದಾರೆ. ಖಳನಟ ಸುಧೀರ್ ಕಿರಿಯಪುತ್ರ ತರುಣ್ ಮದುವೆ ಬಗ್ಗೆ ಸಾಕಷ್ಟು ವದಂತಿಗಳು ಹಬ್ಬಿವೆ. ಈಗಾಗಲೇ ತರುಣ್‌ ಅವರ ಮದುವೆ ಫಿಕ್ಸ್‌ ಆಗಿದ್ದು, ಎರಡು ತಿಂಗಳಲ್ಲಿ ಮದುವೆ ಫಿಕ್ಸ್‌ ಎನ್ನುವ ವದಂತಿ ಹಬ್ಬಿದೆ.

‘ಎಕ್ಸ್‌ಕ್ಯೂಸ್‌ಮಿ’ ಚಿತ್ರದ ಸಣ್ಣ ಪಾತ್ರದಲ್ಲಿ ನಟಿಸಿದರು. ‘ರ್ಯಾಂಬೊ’ ಚಿತ್ರದ ಸಹ ನಿರ್ದೇಶಕರಾಗಿ ಕೆಲಸ ಮಾಡಿ ತರುಣ್ ‘ಚೌಕ’ ಚಿತ್ರದಿಂದ ನಿರ್ದೇಶಕರಾದರು. ತರುಣ್‌ ಹಾಗೂ ಸೋನಲ್‌ ಈ ಬಗ್ಗೆ ಯಾವುದೇ ಅಧಿಕೃತ ಮಾಹಿತಿ ಹಂಚಿಕೊಂಡಿಲ್ಲ. ಅಗಸ್ಟ್‌ 10ಕ್ಕೆ ತರುಣ್‌ ಅವರ ಮದುವೆ ಎನ್ನಲಾಗಿದೆ.

ಇದನ್ನೂ ಓದಿ: Duniya Vijay: ʻಭೀಮʼ ರಿಲೀಸ್‌ ಡೇಟ್‌ ಅನೌನ್ಸ್‌ ಮಾಡಿದ ದುನಿಯಾ ವಿಜಯ್‌; ಸ್ಟಾರ್‌ ಹಿರೋ ಸಿನಿಮಾ ಜತೆ ಕ್ಲ್ಯಾಶ್‌?

ಕೆಲವು ದಿನಗಳ ಹಿಂದೆ ನಿರ್ದೇಶಕ ತರುಣ್ ಕಿಶೋರ್ ಸುಧೀರ್ ಅವರು BMW X1 ಕಾರನ್ನು ಖರೀದಿ ಮಾಡಿದ್ದರು. ಕಳೆದ ಕೆಲ ದಿನಗಳ ಹಿಂದೆ ಈ ಕಾರನ್ನು ಅವರು ತೆಗೆದುಕೊಂಡಿದ್ದು, ಆ ವೇಳೆ ಅವರ ತಾಯಿ ಮಾಲತಿ ಸುಧೀರ್ ಕೂಡ ಜತೆಗೆ ಇದ್ದರು. ಅಂದಹಾಗೆ, ಈ BMW X1 ಕಾರಿನ ಬೆಲೆಯು 60 ಲಕ್ಷ ರೂಪಾಯಿಗಳಿಗೂ ಅಧಿಕ ಎಂದು ಹೇಳಲಾಗಿದೆ.

Continue Reading

ಪ್ರಮುಖ ಸುದ್ದಿ

Daali Dhananjay : ಯಾರೂ ಗುರುತಿಸದಂತೆ ಮಾಸ್ಕ್​ ಧರಿಸಿ ಮೆಟ್ರೊದಲ್ಲಿ ಪ್ರಯಾಣಿಸಿದ ನಟ ಡಾಲಿ ಧನಂಜಯ್​

Daali Dhananjay : ಡಾಲಿ ಧನಂಜಯರ್ ಅವರು ಕೆಂಗೇರಿಯಿಂದ ಕುಂದಲಹಳ್ಳಿಯ ತನಕ ಮೆಟ್ರೊದಲ್ಲಿ ಪ್ರಯಾಣ ಮಾಡಿದ್ದಾರೆ. ಮೆಟ್ರೊ ರೈಲಿನಲ್ಲಿ ಕುಳಿತಿದ್ದ ವೇಳೆ ಅವರು ಬಾಕ್ಸ್​ ಒಂದನ್ನು ಹಿಡಿದುಕೊಂಡಿದ್ದರು. ಕೆಂಗೇರಿಯಿಂದ ಕುಂದಲಹಳ್ಳಿಯವರೆಗೆ ಅವರು 36 ಕಿಲೋ ಮೀಟರ್ ಮೆಟ್ರೊ ಹಾದಿಯಲ್ಲಿ ಪ್ರಯಾಣಿಸಿದ್ದಾರೆ.

VISTARANEWS.COM


on

Dali Dhananjay
Koo

ಬೆಂಗಳೂರು: ‘ಕೋಟಿ’ ಸಿನಿಮಾದ ಯಶಸ್ಸಿನಲ್ಲಿರುವ ಪ್ರತಿಭಾವಂತ ನಟ ಡಾಲಿ ಧನಂಜಯ್ (Daali Dhananjay)​ ಶನಿವಾರ ಸಂಜೆ ತಮ್ಮ ಕಾರನ್ನು ಬಿಟ್ಟು ಮೆಟ್ರೊ ರೈಲಿನಲ್ಲಿ ಸಂಚರಿಸಿದರು. ಕನ್ನಡ ಸಿನಿಮಾ ಕ್ಷೇತ್ರದಲ್ಲಿ ಅವಕಾಶಗಳು ಹಾಗೂ ಯಶಸ್ಸಿನ ಮೂಲಕ ಮಿಂಚುತ್ತಿರುವ ಅವರು ಯಾವುದೇ ಹಮ್ಮು ಇಲ್ಲದೆ ಮೆಟ್ರೊ ರೈಲಿನಲ್ಲಿ ಸಂಚರಿಸಿದರು. ಡಾಲಿ ಧನಂಜಯ್ ಅವರು ಮೆಟ್ರೊ ರೈಲಿನಲ್ಲಿ ಪ್ರಯಾಣಿಸುವ ವೇಳೆ ಮಾಸ್ಕ್​ ಹಾಗೂ ಕನ್ನಡಕ ಧರಿಸಿಕೊಂಡಿದ್ದರು. ಹೀಗಾಗಿ ಬಹುತೇಕರಿಗೆ ಅವರು ಪರಿಚಯ ತಕ್ಷಣಕ್ಕೆ ಸಿಗಲಿಲ್ಲ.

ಡಾಲಿ ಧನಂಜಯರ್ ಅವರು ಕೆಂಗೇರಿಯಿಂದ ಕುಂದಲಹಳ್ಳಿಯ ತನಕ ಮೆಟ್ರೊದಲ್ಲಿ ಪ್ರಯಾಣ ಮಾಡಿದ್ದಾರೆ. ಮೆಟ್ರೊ ರೈಲಿನಲ್ಲಿ ಕುಳಿತಿದ್ದ ವೇಳೆ ಅವರು ಬಾಕ್ಸ್​ ಒಂದನ್ನು ಹಿಡಿದುಕೊಂಡಿದ್ದರು. ಕೆಂಗೇರಿಯಿಂದ ಕುಂದಲಹಳ್ಳಿಯವರೆಗೆ ಅವರು 36 ಕಿಲೋ ಮೀಟರ್ ಮೆಟ್ರೊ ಹಾದಿಯಲ್ಲಿ ಪ್ರಯಾಣಿಸಿದ್ದಾರೆ. ಸುಮಾರು ಒಂದೂವರೆ ಗಂಟೆ ಅವಧಿಯ ಪ್ರಯಾಣದ ವೇಳೆ ಅವರು ಮೊಬೈಲ್​ ವೀಕ್ಷಿಸುತ್ತಿದ್ದರು.

ಡಾಲಿ ಧನಂಜಯ್​ ಅವರು ಪರಮ್​ ನಿರ್ದೇಶನದ ಕೋಟಿ ಸಿನಿಮಾದ ಯಶಸ್ವಿನಲ್ಲಿದ್ದಾರೆ. ಮಧ್ಯಮ ವರ್ಗದ ಕುಟುಬದ ಕತೆಯನ್ನು ಹೊಂದಿರುವ ಈ ಸಿನಿಮಾವು ಚಿತ್ರಮಂದಿರಗಳಲ್ಲಿ ಭರ್ಜರಿಯಾಗಿ ತೆರೆ ಕಾಣುತ್ತಿದೆ. ಇದೇ ವೇಳೆ ಕೆಲವು ಸೆಲೆಬ್ರಿಟಿಗಳು ಸಿನಿಮಾವನ್ನು ನೋಡಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಡಾಲಿ ಧನಂಜರ್ ಅವರು ಪಾತ್ರಾಭಿನಯಕ್ಕೆ ಹೆಚ್ಚಿನ ಮಾರ್ಕ್​ಗಳನ್ನು ಕೊಟ್ಟಿದ್ದಾರೆ. ಜಿಯೋ ಸ್ಟುಡಿಯೋನಿರ್ಮಿಸಿರುವ ಸಿನಿಮಾದಲ್ಲಿ ಧನಂಜಯ್ ಅವರಲ್ಲದೆ, ಮೋಕ್ಷಾ ಕುಶಾಲ್, ರಮೇಶ್ ಇಂದಿರಾ, ತಾರಾ, ರಂಗಾಯಣ ರಘು, ಪೃಥ್ವಿ ಶಾಮನೂರು, ದುನಿಯಾ ವಿಜಯ್ ಮೊದಲಾದವರು ಇದ್ದಾರೆ.

ಇದನ್ನೂ ಓದಿ: Actor Darshan: ಜೈಲು ಸೇರಿದ ನಟ ದರ್ಶನ್ ಮುಂದೆ ಇರೋ ಆಯ್ಕೆಗಳೇನು?

`ನಾಡಪ್ರಭು ಕೆಂಪೇಗೌಡ’ ಪಾತ್ರದಲ್ಲಿ ಡಾಲಿ ಧನಂಜಯ್‌

ಬೆಂಗಳೂರು: ಕನ್ನಡ ಸಿನಿಮಾ ರಂಗದಲ್ಲಿ ʻನಾಡಪ್ರಭು ಕೆಂಪೇಗೌಡʼರ (nadaprabhu kempegowda) ಜೀವನವನ್ನು (Kannada New Movie) ಆಧರಿಸಿದ ಸಂಪೂರ್ಣ ಸಿನಿಮಾ ಬಾರದೇ ಇದ್ದರೂ, ಕೆಲವು ಚಿತ್ರಗಳಲ್ಲಿ ಇವರ ಝಲಕ್‌ಗಳು ಕಾಣಿಸಿಕೊಂಡಿವೆ. ಅಷ್ಟೇ ಅಲ್ಲ ಹಾಡುಗಳಲ್ಲೂ ಮಿಂಚಿದ್ದಾರೆ. ಅಲ್ಲದೇ, ಕೆಂಪೇಗೌಡರ ಪ್ರತಿಮೆಯನ್ನು ಹಿನ್ನೆಲೆಯಾಗಿ ಇಟ್ಟುಕೊಂಡು ಹೆಣೆದಿರುವ ಹಲವು ದೃಶ್ಯಗಳನ್ನೂ ಕಾಣಬಹುದಾಗಿದೆ. ಆದರೀಗ ಬೆಂಗಳೂರಿನ ನಿರ್ಮಾತೃ ನಾಡಪ್ರಭು ಕೆಂಪೇಗೌಡರವರ ಜೀವನ ಚರಿತ್ರೆ ಸಿನಿಮಾವಾಗುತ್ತಿದೆ. ʻಬೆಂದಕಾಳೂರುʼ ಕಟ್ಟಿದ ನಾಡಪ್ರಭುವಿನ‌ ಕಥೆಯನ್ನು ತೆರೆಗೆ ತರುವ ಕಾಲ ಕೂಡಿ ಬಂದಿದೆ. ಧರ್ಮಬೀರು ನಾಡಪ್ರಭು ಕೆಂಪೇಗೌಡ ಎಂಬ ಶೀರ್ಷಿಕೆಯಡಿ ಸಿನಿಮಾ ಘೋಷಣೆಯಾಗಿದೆ. ನಾಡಪ್ರಭು ಕೆಂಪೇಗೌಡರಾಗಿ ಡಾಲಿ ಧನಂಜಯ್ ಅಬ್ಬರಿಸಲಿದ್ದಾರೆ.

ಆ ಸಿನಿಮಾದಲ್ಲಿ ದರ್ಶನ್ ಅಥವಾ ಸುದೀಪ್ ನಟಿಸುತ್ತಾರಾ ಎಂಬ ಚರ್ಚೆಗಳು ಸಹ ನಡೆದಿದ್ದವು, ಆದರೆ ಈಗ ಡಾಲಿ ಧನಂಜಯ್ ಕೆಂಪೇಗೌಡರ ಪಾತ್ರದಲ್ಲಿ ಮಿಂಚಲಿದ್ದಾರೆ. ಈಗಾಗಲೇ ಪೋಸ್ಟರ್ ಬಿಡುಗಡೆ ಆಗಿದೆ. ನಿರ್ದೇಶಕ ಟಿಎಸ್ ನಾಗಾಭರಣ ನಿರ್ದೇಶನ ಮಾಡಲಿದ್ದಾರೆ. ಸಿನಿಮಾಕ್ಕೆ ಎಂಎನ್ ಶಿವರುದ್ರಪ್ಪ, ಶುಭಂ ಗುಂಡಾಲ ನಿರ್ಮಾಣ ಮಾಡುತ್ತಿದ್ದಾರೆ. ‘ಸಂತ ಶಿಷುನಾಳ ಶರೀಫ, ‘ನೀಲ’, ‘ಕಲ್ಲರಳಿ ಹೂವಾಗಿ’ ಇನ್ನೂ ಕೆಲವು ಪೀರಿಯಡ್ ಸಿನಿಮಾಗಳನ್ನು ನಾಗಾಭರಣ ನಿರ್ದೇಶಿಸಿದ್ದಾರೆ. ಈಗ ಕೆಂಪೇಗೌಡರ ಕತೆಯನ್ನು ಸಿನಿಮಾ ಮಾಡಲಿದ್ದಾರೆ.

.ಈ ಹಿಂದೆ ಅಲ್ಲಮನ ಕುರಿತಾದ ಸಿನಿಮಾದಲ್ಲಿ ಧನಂಜಯ್ ನಟಿಸಿದ್ದರು. ಧನಂಜಯ್ ಈ ಪಾತ್ರಕ್ಕಾಗಿ ವಿಶೇಷ ತಯಾರಿ ಮಾಡಿಕೊಳ್ಳಲಿದ್ದಾರೆ ಎನ್ನಲಾಗುತ್ತಿದೆ.

ಈ ಹಿಂದೆ ದಿನೇಶ್ ಬಾಬು ಅವರು ನಾಡಪ್ರಭು ಕೆಂಪೇಗೌಡರ ಸಿನಿಮಾ ಮಾಡುವುದಾಗಿ ಘೋಷಿಸಿದ್ದರು. ‘ನಾಗಾಭರಣ ನ್ಯಾಯಾಲಯದ ಮೂಲಕ ತಡೆ ತಂದರು.

ಇದೀಗ ಈ ‘ನಾಡಪ್ರಭು ಕೆಂಪೇಗೌಡ’ ಸಿನಿಮಾಕ್ಕೆ ನಾಗಾಭರಣ ಅವರೇ ಚಿತ್ರಕತೆ ಬರೆದಿದ್ದು, ಸಾಹಿತಿ ಪ್ರತಿಭಾ ನಂದಕುಮಾರ್ ಅವರು ಬರವಣಿಗೆಯಲ್ಲಿ ಸಹಾಯ ಮಾಡಲಿದ್ದಾರೆ. ನಾಗಾಭರಣ ಅವರ ಪುತ್ರ ನಿರ್ದೇಶಕ ಪನ್ನಗಾಭರಣ ಕಾರ್ಯಕಾರಿ ನಿರ್ಮಾಪಕರಾಗಿ ಕೆಲಸ ಮಾಡಲಿದ್ದಾರೆ. ವಾಸುಕಿ ವೈಭವ್ ಸಂಗೀತ ನೀಡಲಿದ್ದಾರೆ. ಶಶಿಧರ ಅಡಪ ಅವರು ಸಿನಿಮಾದ ಸೆಟ್ ನೋಡಿಕೊಳ್ಳುತ್ತಿದ್ದಾರೆ.

Continue Reading

ಬಾಲಿವುಡ್

The Lion King: ಆಲ್‌ ಟೈಮ್‌ ಫೇವರೇಟ್‌ ಕಾರ್ಟೂನ್‌ `ದಿ ಲಯನ್ ಕಿಂಗ್’ 30ನೇ ವಾರ್ಷಿಕೋತ್ಸವ

The Lion King: ನಟರು ಮತ್ತು ಅಭಿಮಾನಿಗಳು ʻದಿ ಲಯನ್ ಕಿಂಗ್ʼನಲ್ಲಿ ಕೆಲಸ ಮಾಡಿರುವಂತಹ ನೆನಪುಗಳು, ಮತ್ತು ಅನುಭವಗಳ ಬಗ್ಗೆ ಮಾತನಾಡಿದರು. 30 ವರ್ಷಗಳ ಹಿಂದೆ ಜೂನ್ 15 ರಂದು ಬಿಡುಗಡೆಯಾದ `ದಿ ಲಯನ್ ಕಿಂಗ್’ (1994) ಎಲ್ಲ ವಯೋಮಾನದವರನ್ನು ರಂಜಿಸಿತ್ತು. ಇಂದಿಗೂ ಈ ಕಾರ್ಟೂನ್‌ನಲ್ಲಿರುವ ಅದ್ಭುತ ಸನ್ನಿವೇಶಗಳನ್ನು ಹಲವರು ನೆನಪಿಸಿಕೊಳ್ಳುತ್ತಾರೆ.

VISTARANEWS.COM


on

The Lion King 30 years influence on fans and actors
Koo

ಬೆಂಗಳೂರು: ʻದಿ ಲಯನ್ ಕಿಂಗ್ʼ ತನ್ನ 30ನೇ ವಾರ್ಷಿಕೋತ್ಸವವನ್ನು ಆಚರಿಸಿಕೊಳ್ಳುತ್ತಿದೆ. ಅದರ ನಟರು ಮತ್ತು ಅಭಿಮಾನಿಗಳು ʻದಿ ಲಯನ್ ಕಿಂಗ್ʼನಲ್ಲಿ ಕೆಲಸ ಮಾಡಿರುವಂತಹ ನೆನಪುಗಳು, ಮತ್ತು ಅನುಭವಗಳ ಬಗ್ಗೆ ಮಾತನಾಡಿದರು. 30 ವರ್ಷಗಳ ಹಿಂದೆ ಜೂನ್ 15 ರಂದು ಬಿಡುಗಡೆಯಾದ `ದಿ ಲಯನ್ ಕಿಂಗ್’ (1994) ಎಲ್ಲ ವಯೋಮಾನದವರನ್ನು ರಂಜಿಸಿತ್ತು. ಇಂದಿಗೂ ಈ ಕಾರ್ಟೂನ್‌ನಲ್ಲಿರುವ ಅದ್ಭುತ ಸನ್ನಿವೇಶಗಳನ್ನು ಹಲವರು ನೆನಪಿಸಿಕೊಳ್ಳುತ್ತಾರೆ. 2019ರ ಫೋಟೊರಿಯಾಲಿಸ್ಟಿಕ್ ಆವೃತ್ತಿಯನ್ನು ಒಳಗೊಂಡಂತೆ ಹಲವಾರು ಬಾರಿ ರೀಮೇಕ್ ಮಾಡಲಾಗಿದೆ. ಲಯನ್ ಕಿಂಗ್ ಹಿಂದಿಯಲ್ಲಿ ಬಿಡುಗಡೆಯಾಯಿತು, ಇದರಲ್ಲಿ ಶಾರುಖ್ ಖಾನ್, ಆಶಿಶ್ ವಿದ್ಯಾರ್ಥಿ, ಅಸ್ರಾನಿ, ಶ್ರೇಯಸ್ ತಲ್ಪಾಡೆ ಮತ್ತು ಸಂಜಯ್ ಮಿಶ್ರಾ ಮುಂತಾದ ಹೆಸರುಗಳನ್ನು ಒಳಗೊಂಡ ಪಾತ್ರಗಳು ಇದ್ದವು. ಇದೀಗ `ದಿ ಲಯನ್ ಕಿಂಗ್‌ಗೆ 30 ವರ್ಷ ಸಂದಿದೆ.

ನಟ ಶ್ರೇಯಸ್ ತಲ್ಪಾಡೆ ಈ ಬಗ್ಗೆ ಮಾತನಾಡಿ ʻʻಹಿಂದಿ ಆವೃತ್ತಿಯಲ್ಲಿ ಶಾರುಖ್ ಖಾನ್, ಸಂಜಯ್ ಮಿಶ್ರಾ ಮತ್ತು ಆಶಿಶ್ ವಿದ್ಯಾರ್ಥಿ ಸೇರಿದಂತೆ ಪೌರಾಣಿಕ ನಟರು ಕೆಲಸ ಮಾಡಿದ್ದರು. ಲಯನ್‌ ಕಿಂಗ್ ಮಾಡಲು ಮುಖ್ಯ ಕಾರಣವೆಂದರೆ ನನ್ನ ಮಗಳು.ಅವಳ ತಂದೆ ಈ ಲಯನ್‌ ಕಿಂಗ್‌ ಆವೃತ್ತಿಗೆ ಧ್ವನಿ ನೀಡಿದ್ದಾರೆ ಎಂದರೆ ಖಷಿ ಪಡುತ್ತಿದ್ದಳುʼʼಎಂದರು.

ಇದನ್ನೂ ಓದಿ: Child Death : ಮಕ್ಕಳ ಮಾರಾಟ ಜಾಲದಲ್ಲಿ ರಕ್ಷಣೆಯಾಗಿದ್ದ ಮಗು ಮೃತ್ಯು; ಅಂತ್ಯ ಸಂಸ್ಕಾರ ನೆರವೇರಿಸಿದ ಪೊಲೀಸರು

ಲಯನ್ ಕಿಂಗ್ ಹಲವಾರು ಕಾರಣಗಳಿಗಾಗಿ ನೋಡುಗರನ್ನು ಮೆಚ್ಚಿಸಿದೆ. ತಾಂತ್ರಿಕ ಕಾರಂಣಗಳಿಂದಲೂ ಪ್ರೇಕ್ಷರನ್ನು ಮೆಚ್ಚಿಸಿತ್ತು. ಬಿಡುಗಡೆ ಕಂಡಾಗ ಈ ಸಿನಿಮಾ ವರ್ಷದ ಅತಿ ಹೆಚ್ಚು ಗಳಿಕೆಯ ಚಲನಚಿತ್ರವಾಗಿ ಹೊರಹೊಮ್ಮಿತ್ತು. ಅತ್ಯುತ್ತಮ ಮೂಲ ಸ್ಕೋರ್ ಮತ್ತು ಅತ್ಯುತ್ತಮ ಮೂಲ ಗೀತೆಗಾಗಿ ಎರಡು ಅಕಾಡೆಮಿ ಪ್ರಶಸ್ತಿಗಳನ್ನು ಗೆದ್ದಿತ್ತು.
ಲಯನ್ ಕಿಂಗ್ ಬಗ್ಗೆ ಜನರು ಹೆಚ್ಚು ನೆನಪಿಸಿಕೊಳ್ಳುವ ವಿಷಯವೆಂದರೆ ಅದರ ಸೊಗಸಾದ ಸಂಗೀತ. ಸಂಯೋಜಕ ಹ್ಯಾನ್ಸ್ ಝಿಮ್ಮರ್ ಈ ಹಿಂದೆ ಡಿಸ್ನಿ ಸಂಗೀತ ತಂಡದೊಂದಿಗೆ ಮಾತನಾಡುತ್ತಾ, ʻದಿ ಲಯನ್ ಕಿಂಗ್ ಹೃದಯದಲ್ಲಿ ವಿಶೇಷ ಸ್ಥಾನವನ್ನು ಪಡೆದಿದೆ. ಕೇವ ಸಂಗೀತವನ್ನು ಸಂಯೋಜಿಸಿದ ಮಾತ್ರಕ್ಕಲ್ಲʼʼ ಎಂದು ಹೇಳಿದರು.

ಅನೇಕ ಅಭಿಮಾನಿಗಳಿಗೆ, ಲಯನ್ ಕಿಂಗ್ ಅನ್ನು ವೀಕ್ಷಿಸುವುದು ಅವರ ಬಾಲ್ಯದ ಪ್ರಮುಖ ಭಾಗವಾಗಿತ್ತು.
ಚಿತ್ರದ ಹಿಂದಿ ಆವೃತ್ತಿಯಲ್ಲಿ ʻಸ್ಕಾರ್‌ʼ ಪಾತ್ರಕ್ಕೆ ಧ್ವನಿ ನೀಡಿದ ನಟ ಆಶಿಶ್ ವಿದ್ಯಾರ್ಥಿ, ಡಬ್ಬಿಂಗ್ ಸವಾಲುಗಳ ಬಗ್ಗೆ ಅದೆಷ್ಟೋ ಬಾರಿ ಹೇಳಿಕೊಂಡಿದ್ದರು.

“ಸ್ಕಾರ್ ಒಂದು ಒಳ್ಳೆಯ ಪಾತ್ರವಾಗಿದೆ, ಅದಕ್ಕೆ ನನ್ನ ಧ್ವನಿಯನ್ನು ನೀಡುವ ಅನುಭವವು ಅಸಾಧಾರಣವಾಗಿದೆ. ತುಂಬ ಸವಾಲಾಗಿತ್ತು. ಮೂಲ ಇಂಗ್ಲಿಷ್ ಆವೃತ್ತಿ ಆದರೂ ಹಿಂದಿಯಲ್ಲಿ ಪಾತ್ರದ ಡೈಲಾಗ್‌ ಕೂಡ ಚೆನ್ನಾಗಿ ಬರೆಯಲಾಗಿದೆ ಹಿಂದಿ ಆವೃತ್ತಿ ಕೂಡ ಚೆಂದವಾಗಿ ಮೂಡಿತ್ತು. ‘ಹೂನ್ ತಯಾರ್’ ಹಾಡನ್ನು ಹಾಡಲು ನನ್ನನ್ನು ಕರೆದರು. ಹಾಡುವಾಗ, ಸ್ಕಾರ್‌ಗಾಗಿ ಸಂಪೂರ್ಣ ಧ್ವನಿಯನ್ನು ಏಕೆ ಮಾಡಬಾರದು ಎಂದು ಸಲಹೆ ನೀಡಿದರು. ಅದರಂತೆ ಬಳಿಕ ಧ್ವನಿ ನೀಡಿದೆʼʼಎಂದು ಹೇಳಿದರು. ಬಿಡುಗಡೆಯಾಗಿ ಮೂವತ್ತು ವರ್ಷಗಳೇ ಕಳೆದರೂ ಚಿತ್ರ ಇನ್ನೂ ಔಟ್‌ ಡೇಟ್ ಆಗಿಲ್ಲ.

Continue Reading

ಟಾಲಿವುಡ್

Shobha Shetty: ಭಾವಿ ಪತಿಗೆ ಕಾರ್ ಗಿಫ್ಟ್ ನೀಡಿದ ‘ಅಗ್ನಿಸಾಕ್ಷಿ’ ಖ್ಯಾತಿಯ ನಟಿ!

Shobha Shetty: ಅಗ್ನಿಸಾಕ್ಷಿ’ ಧಾರಾವಾಹಿ ಮೂಲಕ ಗಮನ ಸೆಳೆದ ಶೋಭಾ ಶೆಟ್ಟಿ ವರ್ಷಗಳ ಹಿಂದೆ ಸ್ಟಾರ್ ಸುವರ್ಣ ವಾಹಿನಿಯಲ್ಲಿ ಪ್ರಸಾರ ಆಗುತ್ತಿರುವ ‘ರುಕ್ಕು’ ಧಾರಾವಾಹಿಯಲ್ಲಿ ನಟಿಸಿ, ಅದನ್ನೂ ಅರ್ಧಕ್ಕೆ ಬಿಟ್ಟಿದ್ದರು. ‘ಪಡುವಾರಹಳ್ಳಿ ಪಡ್ಡೆಗಳು’ ಧಾರಾವಾಹಿಯೊಂದಿಗೆ ಚಿತ್ರರಂಗಕ್ಕೆ ಕಾಲಿಟ್ಟ ಶೋಭಾ ಅವರು ಕನ್ನಡದ ಧಾರಾವಾಹಿಗಳಲ್ಲಿ ಪೋಷಕ ಪಾತ್ರಗಳಲ್ಲಿ ಹೆಚ್ಚು ಕಾಣಿಸಿಕೊಂಡರು. ಆ ನಂತರ ಮತ್ತೆ ಅವರು ತೆಲುಗಿನಲ್ಲಿಯೇ ಬ್ಯುಸಿ ಆದರು.

VISTARANEWS.COM


on

Shobha Shetty car gift to yashwanth birthday
Koo

‘ಅಗ್ನಿಸಾಕ್ಷಿ’ (Shobha Shetty) ಹಾಗೂ ‘ನಮ್ಮ ರುಕ್ಕು’ ಧಾರಾವಾಹಿಗಳಲ್ಲಿ ನಟಿಸಿದ ಶೋಭಾ ಶೆಟ್ಟಿ ಸದ್ಯ ತೆಲುಗು ವೀಕ್ಷಕರ ಮನ ಗೆದ್ದಿದ್ದಾರೆ.

ನಟ ಯಶ್ವಂತ್ ಎಂಬುವವರನ್ನು ಪ್ರೀತಿಸಿ ಮದುವೆ ಆಗಲು ಆಕೆ ಮುಂದಾಗಿದ್ದಾರೆ. ಈಗಾಗಲೇ ಇಬ್ಬರು ಮದುವೆ ನಿಶ್ಚಯವಾಗಿದೆ.

ಶೋಭಾ ಈಗಾಗಲೇ ಹೈದರಾಬಾದ್‌ನಲ್ಲಿ ಹೊಸ ಮನೆ ಖರೀದಿಸಿದ್ದಾರೆ. ಗೃಹ ಪ್ರವೇಶ ಕೂಡ ಆಗಿದ್ದು, ಮುಂದಿನ ತಿಂಗಳು ಆ ಮನೆಗೆ ಶಿಫ್ಟ್ ಆಗಲಿದ್ದಾರೆ. ಬೀಸ್ಟ್ ಎಕ್ಸ್‌ಯುವಿ 700 ಕಾರ್‌ ಅನ್ನು ಈ ವರ್ಷ ಯಶ್ವಂತ್ ಹುಟ್ಟುಹಬ್ಬಕ್ಕೆ ಸರ್‌ಪ್ರೈಸ್ ಆಗಿ ಕೊಟ್ಟಿದ್ದಾರೆ.

ಕನ್ನಡದಲ್ಲಿ ‘ಅಗ್ನಿಸಾಕ್ಷಿ’ ಧಾರಾವಾಹಿಯ ತನು ಪಾತ್ರ ಆಕೆಗೆ ಹೆಸರು ತಂದುಕೊಟ್ಟಿತ್ತು.

ಇದನ್ನೂ ಓದಿ: Duniya Vijay: ʻಭೀಮʼ ರಿಲೀಸ್‌ ಡೇಟ್‌ ಅನೌನ್ಸ್‌ ಮಾಡಿದ ದುನಿಯಾ ವಿಜಯ್‌; ಸ್ಟಾರ್‌ ಹಿರೋ ಸಿನಿಮಾ ಜತೆ ಕ್ಲ್ಯಾಶ್‌?

ಅಗ್ನಿಸಾಕ್ಷಿ’ ಧಾರಾವಾಹಿ ಮೂಲಕ ಗಮನ ಸೆಳೆದ ಶೋಭಾ ಶೆಟ್ಟಿ ವರ್ಷಗಳ ಹಿಂದೆ ಸ್ಟಾರ್ ಸುವರ್ಣ ವಾಹಿನಿಯಲ್ಲಿ ಪ್ರಸಾರ ಆಗುತ್ತಿರುವ ‘ರುಕ್ಕು’ ಧಾರಾವಾಹಿಯಲ್ಲಿ ನಟಿಸಿ, ಅದನ್ನೂ ಅರ್ಧಕ್ಕೆ ಬಿಟ್ಟಿದ್ದರು. ‘ಪಡುವಾರಹಳ್ಳಿ ಪಡ್ಡೆಗಳು’ ಧಾರಾವಾಹಿಯೊಂದಿಗೆ ಚಿತ್ರರಂಗಕ್ಕೆ ಕಾಲಿಟ್ಟ ಶೋಭಾ ಅವರು ಕನ್ನಡದ ಧಾರಾವಾಹಿಗಳಲ್ಲಿ ಪೋಷಕ ಪಾತ್ರಗಳಲ್ಲಿ ಹೆಚ್ಚು ಕಾಣಿಸಿಕೊಂಡರು. ಆ ನಂತರ ಮತ್ತೆ ಅವರು ತೆಲುಗಿನಲ್ಲಿಯೇ ಬ್ಯುಸಿ ಆದರು.

Continue Reading
Advertisement
Gully cricket vibes
ಕ್ರೀಡೆ4 mins ago

Gully Cricket Vibes: ಗಲ್ಲಿ ಕ್ರಿಕೆಟ್​ನಂತೆ ಚೆಂಡು ಹುಡುಕಾಡಿದ ವಿರಾಟ್​ ಕೊಹ್ಲಿ; ವಿಡಿಯೊ ವೈರಲ್​

Share Market Scam
ಕ್ರೈಂ14 mins ago

Share Market Scam: ಮುಖೇಶ್ ಅಂಬಾನಿ ಡೀಪ್ ಫೇಕ್‌! 7 ಲಕ್ಷ ರೂ. ಕಳೆದುಕೊಂಡ ವೈದ್ಯೆ

Tharun Sudhir sonal monteiro will get marriage
ಸಿನಿಮಾ16 mins ago

Tharun Sudhir: ಸೋನಲ್ ಜತೆ `ತರುಣ್ ಸುಧೀರ್‌’ಗೆ ಕೂಡಿಬಂತು ಕಂಕಣಭಾಗ್ಯ?

Rushikonda Palace Issue
ದೇಶ29 mins ago

Rushikonda Palace: 500 ಕೋಟಿಯ ಋಷಿಕೊಂಡ ಅರಮನೆ; 12 ಬೆಡ್‌ರೂಮ್‌, ವಾಶ್‌ರೂಮ್‌ ಒಂದು ಮನೆಯಷ್ಟು!

Sumit Nagal
ಕ್ರೀಡೆ36 mins ago

Paris Olympics 2024: ಅಧಿಕೃತವಾಗಿ ಪ್ಯಾರಿಸ್​ ಒಲಿಂಪಿಕ್ಸ್ ಟಿಕೆಟ್​ ಪಡೆದ ಸುಮಿತ್‌ ನಗಾಲ್‌

Suraj Revanna Case
ಕರ್ನಾಟಕ52 mins ago

Suraj Revanna Case: ಅಸಹಜ ಲೈಂಗಿಕ ದೌರ್ಜನ್ಯ ಕೇಸ್‌; ಎಂಎಲ್‌ಸಿ ಸೂರಜ್‌ ರೇವಣ್ಣ ಅರೆಸ್ಟ್‌

Doodle V3 E-Cycle
ಆಟೋಮೊಬೈಲ್59 mins ago

Doodle V3 E-Cycle: ‘ಕಲ್ಕಿ 2898 ಎಡಿ’ನಿಂದ ಪ್ರೇರಿತವಾದ ಇ-ಸೈಕಲ್ ಮಾರುಕಟ್ಟೆಗೆ

Suraj Revanna Case
ಕರ್ನಾಟಕ1 hour ago

Suraj Revanna Case:  ಸಲಿಂಗ ಕಾಮ ಆರೋಪ; ಸಂತ್ರಸ್ತನ ವೈದ್ಯಕೀಯ ಪರೀಕ್ಷೆ ಬಳಿಕ ಇಂದೇ ಅರೆಸ್ಟ್‌ ಆಗ್ತರಾ ಸೂರಜ್‌ ರೇವಣ್ಣ?

Empty Stomach Foods
ಆರೋಗ್ಯ2 hours ago

Empty Stomach Foods: ಬೆಳಗ್ಗೆ ಎದ್ದ ಕೂಡಲೇ ಖಾಲಿ ಹೊಟ್ಟೆಯಲ್ಲಿ ಈ ಆಹಾರಗಳನ್ನು ತಿನ್ನಬೇಡಿ!

karnataka weather Forecast
ಮಳೆ2 hours ago

Karnataka Weather : ಕರಾವಳಿ, ಮಲೆನಾಡಿಗೆ ಗುಡುಗು ಸಹಿತ ಭಾರಿ ಮಳೆ; 9 ಜಿಲ್ಲೆಗಳಿಗೆ ರೆಡ್‌ ಅಲರ್ಟ್‌

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka weather Forecast
ಮಳೆ2 days ago

Karnataka Weather : ರಭಸವಾಗಿ ಹರಿಯುವ ನೀರಲ್ಲಿ ಸಿಲುಕಿದ ಬೊಲೆರೋ; ಬಿರುಗಾಳಿ ಸಹಿತ ಮಳೆ ಎಚ್ಚರಿಕೆ

International Yoga Day 2024
ಕರ್ನಾಟಕ2 days ago

International Yoga Day 2024: ಎಲ್ಲೆಲ್ಲೂ ಯೋಗಾಯೋಗ‌ಕ್ಕೆ ಮಂಡಿಯೂರಿದ ಜನತೆ

Karnataka Weather Forecast
ಮಳೆ3 days ago

Karnataka Weather : ಬಾಗಲಕೋಟೆ, ಬೆಂಗಳೂರು ಸೇರಿ ಚಿಕ್ಕಮಗಳೂರಲ್ಲಿ ಸುರಿದ ಗಾಳಿ ಸಹಿತ ಮಳೆ

Actor Darshan
ಮೈಸೂರು6 days ago

Actor Darshan : ಕೊಲೆ ಕೇಸ್‌ ಬೆನ್ನಲ್ಲೇ ನಟ ದರ್ಶನ್‌ ಸೇರಿ ಪತ್ನಿ ವಿಜಯಲಕ್ಷ್ಮಿಗೆ ಬಾರ್ ಹೆಡೆಡ್ ಗೂಸ್ ಸಂಕಷ್ಟ!

Bakrid 2024
ಬೆಂಗಳೂರು6 days ago

Bakrid 2024 : ಮತ್ತೊಂದು ಧರ್ಮವನ್ನೂ ಪ್ರೀತಿಸಿ; ಬಕ್ರೀದ್‌ ಪ್ರಾರ್ಥನೆಯಲ್ಲಿ ಸಿಎಂ ಸಿದ್ದರಾಮಯ್ಯ ಕರೆ

Renukaswamy murder case The location of the accused is complete
ಸಿನಿಮಾ7 days ago

Renuka Swamy murder : ಭೀಕರವಾಗಿ ಕೊಂದರೂ ಆರೋಪಿಗಳಿಗೆ ಕಾಡುತ್ತಿಲ್ವಾ ಪಾಪಪ್ರಜ್ಞೆ? ನಗುತ್ತಲೇ ಹೊರಬಂದ ಪವಿತ್ರಾ ಗೌಡ, ಪವನ್‌

Renuka swamy murder
ಚಿತ್ರದುರ್ಗ7 days ago

Renuka swamy Murder : ರೇಣುಕಾಸ್ವಾಮಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಬಾಳೆಹೊನ್ನೂರು ಶ್ರೀಗಳು

Vijayanagara News
ವಿಜಯನಗರ7 days ago

Vijayanagara News : ಕೆಲಸಕ್ಕೆ ಚಕ್ಕರ್, ಸಂಬಳಕ್ಕೆ ಹಾಜರ್! ಹಾರಕನಾಳು ಗ್ರಾಪಂ ಪಿಡಿಓಗಾಗಿ ಗ್ರಾಮಸ್ಥರ ಹುಡುಕಾಟ

Actor Darshan
ಯಾದಗಿರಿ1 week ago

Actor Darshan : ಬಾಸ್‌ ಅಂತ ಯಾಕ್‌ ಬಕೆಟ್‌ ಹಿಡಿಯುತ್ತೀರಾ ಅಂದವನಿಗೆ ದರ್ಶನ್ ಅಭಿಮಾನಿಯಿಂದ ಜೀವ ಬೆದರಿಕೆ!

Karnataka Weather Forecast
ಮಳೆ1 week ago

Karnataka Weather : ಕರಾವಳಿ, ಉತ್ತರ ಒಳನಾಡಿನಲ್ಲಿ ವರುಣಾರ್ಭಟ; ನಾಳೆಯು ಹಲವೆಡೆ ಸಿಕ್ಕಾಪಟ್ಟೆ ಮಳೆ

ಟ್ರೆಂಡಿಂಗ್‌