Gaming Industry jobs | ಗೇಮಿಂಗ್‌ ಇಂಡಸ್ಟ್ರಿಯಲ್ಲಿ 1 ಲಕ್ಷ ಹೊಸ ಉದ್ಯೋಗಾವಕಾಶ - Vistara News

ಉದ್ಯೋಗ

Gaming Industry jobs | ಗೇಮಿಂಗ್‌ ಇಂಡಸ್ಟ್ರಿಯಲ್ಲಿ 1 ಲಕ್ಷ ಹೊಸ ಉದ್ಯೋಗಾವಕಾಶ

ಗೇಮಿಂಗ್‌ ಬಳಕೆದಾರರ ಸಂಖ್ಯೆ ದಿನೇದಿನೆ ಹೆಚ್ಚುತ್ತಿರುವುದರಿಂದ ಇಂಡಸ್ಟ್ರಿಯಲ್ಲಿ ಹೊಸ ಉದ್ಯೋಗಾವಕಾಶಗಳೂ ಸೃಷ್ಟಿಯಾಗುತ್ತಿವೆ ಎಂದು ಟೀಮ್‌ಲೀಸ್‌ ವರದಿ ತಿಳಿಸಿದೆ. ( Gaming Industry jobs) ಈಗ 50,000 ಉದ್ಯೋಗಗಳು ಸೃಷ್ಟಿಯಾಗಿವೆ.

VISTARANEWS.COM


on

gaming
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವ ದೆಹಲಿ: ದೇಶದಲ್ಲಿ ಗೇಮಿಂಗ್‌ ಇಂಡಸ್ಟ್ರಿ 2022-23ರಲ್ಲಿ 1 ಲಕ್ಷ ಹೊಸ ಉದ್ಯೋಗಗಳನ್ನು (Gaming Industry jobs) ಸೃಷ್ಟಿಸಬಹುದು ಎಂದು ಟೀಮ್‌ಲೀಸ್‌ ಡಿಜಿಟಲ್‌ ತನ್ನ ವರದಿಯಲ್ಲಿ ತಿಳಿಸಿದೆ.

ಟೀಮ್‌ಲೀಸ್‌ ತನ್ನ Gaming: Tomorrow’s Blockbuster ವರದಿಯಲ್ಲಿ ಗೇಮಿಂಗ್‌, ಪ್ರೋಗ್ರಾಮಿಂಗ್‌, ಟೆಸ್ಟಿಂಗ್‌, ಆನಿಮೇಶನ್‌, ಡಿಸೈನ್‌ ವಲಯದಲ್ಲಿ ಒಂದು ಲಕ್ಷಕ್ಕೂ ಹೆಚ್ಚು ಉದ್ಯೋಗಾವಕಾಶಗಳು ಇವೆ ಎಂದು ತಿಳಿಸಿದೆ.

ಪ್ರಸ್ತುತ ಈ ವಲಯ ನೇರವಾಗಿ 50,000 ಮಂದಿಗೆ ಉದ್ಯೋಗ ನೀಡಿದೆ. ಇದರಲ್ಲಿ 30% ಮಂದಿ ಪ್ರೋಗ್ರಾಮರ್ಸ್‌ ಮತ್ತು ಡೆವಲಪರ್ಸ್‌ ಆಗಿದ್ದಾರೆ. ಮುಂದಿನ ವರ್ಷ ಗೇಮ್‌ ಡೆವಲಪರ್ಸ್‌, ಯುನಿಟಿ ಡೆವಲಪರ್ಸ್‌, ಟೆಸ್ಟಿಂಗ್‌, ಎಂಜಿನಿಯರಿಂಗ್‌, ಕ್ಯೂಎ ಲೀಡ್‌, ಮೋಶನ್‌ ಗ್ರಾಫಿಕ್‌ ಡಿಸೈನ್‌, ವರ್ಚುವಲ್‌ ರಿಯಾಲಿಟಿ ಡಿಸೈನ್‌, ಕಂಟೆಂಟ್‌ ರೈಟಿಂಗ್‌, ವೆಬ್‌ ಅನಾಲಿಸಿಸ್‌ ಇತ್ಯಾದಿ ವಿಭಾಗಗಳಲ್ಲಿ ಉದ್ಯೋಗಗಳು ಸೃಷ್ಟಿಯಾಗಲಿದೆ ಎಂದು ವರದಿ ತಿಳಿಸಿದೆ.

ಸಂಬಳ ಎಷ್ಟು?

ಗೇಮಿಂಗ್‌ ಇಂಡಸ್ಟ್ರಿಯಲ್ಲಿ ಗೇಮ್‌ ಪ್ರೊಡ್ಯೂಸರ್ಸ್‌ಗೆ (Game producers) ವಾರ್ಷಿಕ 10 ಲಕ್ಷ ರೂ. ವೇತನ ಲಭಿಸಲಿದೆ. ಗೇಮ್‌ ಡಿಸೈನರ್‌ಗಳಿಗೆ ವಾರ್ಷಿಕ 6.5 ಲಕ್ಷ ರೂ, ಸಾಫ್ಟ್‌ವೇರ್‌ ಎಂಜಿನಿಯರ್‌ಗಳಿಎ ವಾರ್ಷಿಕ 5.5 ಲಕ್ಷ ರೂ, ಗೇಮ್‌ ಡೆವಲಪರ್‌ಗಳಿಗೆ ವಾರ್ಷಿಕ 5.25 ಲಕ್ಷ ರೂ, ಕ್ಯೂಎ ಟೆಸ್ಟರ್‌ಗಳಿಗೆ ವಾರ್ಷಿಕ 5.11 ಲಕ್ಷ ರೂ. ವೇತನ ಇದೆ.

ಗೇಮಿಂಗ್‌ ಇಂಡಸ್ಟ್ರಿಯಲ್ಲಿ ಬಳಕೆದಾರರ ಸಂಖ್ಯೆ ದಿನೇದಿನೆ ಹೆಚ್ಚುತ್ತಿದೆ. ಇಲ್ಲಿ ವೈವಿಧ್ಯಮಯವಾದ ಉದ್ಯೋಗಗಳು ಸೃಷ್ಟಿಯಾಗುತ್ತಿದೆ ಎಂದು ಟೀಮ್‌ಲೀಸ್‌ ವರದಿ ತಿಳಿಸಿದೆ.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಉದ್ಯೋಗ

Job Alert: 10ನೇ ತರಗತಿ ಪಾಸಾದವರಿಗೆ ಸುವರ್ಣಾವಕಾಶ; ಕೋಸ್ಟ್‌ ಗಾರ್ಡ್‌ನಲ್ಲಿದೆ ಉದ್ಯೋಗಾವಕಾಶ

Job Alert: ಭಾರತೀಯ ಕೋಸ್ಟ್‌ ಗಾರ್ಡ್‌ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ಸುಮಾರು 320 ಹುದ್ದೆಗಳು ಖಾಲಿ ಇದ್ದು, 10 ಮತ್ತು 12ನೇ ತರಗತಿ ತೇರ್ಗಡೆಯಾದವರು ಅರ್ಜಿ ಸಲ್ಲಿಸಬಹುದು. ಉದ್ಯೋಗದ ಸ್ಥಳ: ಭಾರತಾದ್ಯಂತ. ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಕೆಗೆ ಕೊನೆಯ ದಿನ ಜುಲೈ 3. ನಾವಿಕ್‌ (ಜನರಲ್‌ ಡ್ಯೂಟಿ) – 260 ಮತ್ತು ಯಾಂತ್ರಿಕ್‌ – 60 ಹುದ್ದೆಗಳಿವೆ. ನಾವಿಕ್‌ (ಜನರಲ್‌ ಡ್ಯೂಟಿ) ಹುದ್ದೆಗೆ ಅರ್ಜಿ ಸಲ್ಲಿಸುವವರು ವಿಜ್ಞಾನ ವಿಭಾಗದಲ್ಲಿ 12ನೇ ತರಗತಿ ತೇರ್ಗಡೆಯಾಗಿರಬೇಕು. 10, 12ನೇ ತರಗತಿ, ಡಿಪ್ಲೋಮಾ ಪಾಸಾದವರು ಯಾಂತ್ರಿಕ್‌ ಹುದ್ದೆಗೆ ಅರ್ಜಿ ಸಲ್ಲಿಸಲು ಅರ್ಹರು.

VISTARANEWS.COM


on

Job alert
Koo

ಬೆಂಗಳೂರು: ಸರ್ಕಾರಿ ಉದ್ಯೋಗ ಹೊಂದಬೇಕು ಎನ್ನುವುದು ಬಹುತೇಕರ ಕನಸು. ಅಂತಹವರ ಕನಸು ನನಸಾಗಿಸುವ ಸುವರ್ಣಾವಕಾಶವೊಂದು ಒದಗಿ ಬಂದಿದೆ. ಭಾರತೀಯ ಕೋಸ್ಟ್‌ ಗಾರ್ಡ್‌ (Indian Coast Guard) ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ (Indian Coast Guard Recruitment 2024). ಸುಮಾರು 320 ಹುದ್ದೆಗಳು ಖಾಲಿ ಇದ್ದು, 10 ಮತ್ತು 12ನೇ ತರಗತಿ ತೇರ್ಗಡೆಯಾದವರು ಅರ್ಜಿ ಸಲ್ಲಿಸಬಹುದು. ಉದ್ಯೋಗದ ಸ್ಥಳ: ಭಾರತಾದ್ಯಂತ. ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಕೆಗೆ ಕೊನೆಯ ದಿನ ಜುಲೈ 3 (Job Alert).

ಹುದ್ದೆಗಳ ವಿವರ ಮತ್ತು ವಿದ್ಯಾರ್ಹತೆ

ನಾವಿಕ್‌ (ಜನರಲ್‌ ಡ್ಯೂಟಿ) – 260 ಮತ್ತು ಯಾಂತ್ರಿಕ್‌ – 60 ಹುದ್ದೆಗಳಿವೆ. ನಾವಿಕ್‌ (ಜನರಲ್‌ ಡ್ಯೂಟಿ) ಹುದ್ದೆಗೆ ಅರ್ಜಿ ಸಲ್ಲಿಸುವವರು ವಿಜ್ಞಾನ ವಿಭಾಗದಲ್ಲಿ 12ನೇ ತರಗತಿ ತೇರ್ಗಡೆಯಾಗಿರಬೇಕು. 10, 12ನೇ ತರಗತಿ, ಡಿಪ್ಲೋಮಾ ಪಾಸಾದವರು ಯಾಂತ್ರಿಕ್‌ ಹುದ್ದೆಗೆ ಅರ್ಜಿ ಸಲ್ಲಿಸಲು ಅರ್ಹರು. ಗಮನಿಸಿ ಪುರುಷ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಬೇಕು.

ವಯೋಮಿತಿ

Indian Coast Guard Recruitment 2024 ಅಧಿಸೂಚನೆ ಪ್ರಕಾರ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಕನಿಷ್ಠ ವಯಸ್ಸು 18 ವರ್ಷ ಮತ್ತು ಗರಿಷ್ಠ ವಯಸ್ಸು 22 ವರ್ಷ. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಲಭ್ಯ. ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ ಮತ್ತು ಎಸ್‌ಸಿ / ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷಗಳ ರಿಯಾಯಿತಿ ಇದೆ.

ಆಯ್ಕೆ ವಿಧಾನ, ಮಾಸಿಕ ವೇತನ ಮತ್ತು ಅರ್ಜಿ ಶುಲ್ಕ

ಕಂಪ್ಯೂಟರ್‌ ಆಧಾರಿತ ಪರೀಕ್ಷೆ, ಅಸ್ಸೆಸ್‌ಮೆಂಟ್‌ ಮತ್ತು ಅಡಾಟ್ಬೆಲಿಟಿ ಟೆಸ್ಟ್‌ (Assessment and Adaptability Test), ದೈಹಿಕ ಸಾಮರ್ಥ್ಯ ಪರೀಕ್ಷೆ, ಡಾಕ್ಯುಮೆಂಟ್‌ ಪರಿಶೀಲನೆ, ವೈದ್ಯಕೀಯ ಪರೀಕ್ಷೆಗಳ ಮೂಲಕ ಅಭ್ಯರ್ಥಿಗಳ ನೇಮಕ ನಡೆಯಲಿದೆ. ಆಯ್ಕೆಯಾದವರಿಗೆ 21,700 ರೂ. – 29,200 ರೂ. ಮಾಸಿಕ ವೇತನ ದೊರೆಯಲಿದೆ. ಎಸ್‌ಸಿ / ಎಸ್‌ಟಿ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕವಿಲ್ಲ. ಇನ್ನು ಉಳಿದ ಎಲ್ಲ ಅಭ್ಯರ್ಥಿಗಳು ಅರ್ಜಿ ಶುಲ್ಕವಾಗಿ 300 ರೂ. ಆನ್‌ಲೈನ್‌ ಮೂಲಕ ಪಾವತಿಸಬೇಕು.

Indian Coast Guard Recruitment 2024 ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್‌ ಮಾಡಿ.

ಅರ್ಜಿ ಸಲ್ಲಿಸುವ ವಿಧಾನ

  • ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್‌ ಮಾಡಿ. (https://cgept.cdac.in/icgreg/candidate/login)
  • ನಿಮ್ಮ ಇ-ಮೇಲ್‌ ವಿಳಾಸ ನಮೂದಿಸಿ ಹೆಸರು ನೋಂದಾಯಿಸಿ.
  • ಈಗ ಲಾಗಿನ್‌ ಆಗಿ ನಿಮ್ಮ ಹೆಸರು, ಸಂಪೂರ್ಣ ಮಾಹಿತಿ ನೀಡಿ ಅಪ್ಲಿಕೇಷನ್‌ ಫಾರಂ ಭರ್ತಿ ಮಾಡಿ.
  • ಅಗತ್ಯ ದಾಖಲೆ, ಫೋಟೊ, ಅರಿಯಾದ ಅಳತೆಯಲ್ಲಿ ಅಪ್‌ಲೋಡ್‌ ಮಾಡಿ.
  • ಅರ್ಜಿ ಶುಲ್ಕ ಪಾವತಿಸಿ (ಅಗತ್ಯವಿದ್ದರು ಮಾತ್ರ).
  • ವಿವರಗಳನ್ನು ಮತ್ತೊಮ್ಮೆ ಪರಿಶೀಲಿಸಿ ಎಲ್ಲವೂ ಸರಿ ಇದ್ದರೆ Submit ಬಟನ್‌ ಕ್ಲಿಕ್‌ ಮಾಡಿ.
  • ಅಪ್ಲಿಕೇಷನ್‌ ನಂಬರ್‌ ಅಥವಾ ರಿಕ್ವೆಸ್ಟ್‌ ನಂಬರ್‌ ನೋಟ್‌ ಮಾಡಿಟ್ಟುಕೊಳ್ಳಿ.

ಇದನ್ನೂ ಓದಿ: Job Alert: 10ನೇ ತರಗತಿ ಪಾಸಾದವರಿಗೆ ಗುಡ್‌ನ್ಯೂಸ್‌; SSCಯಿಂದ ಬರೋಬ್ಬರಿ 8,326 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

Continue Reading

ಉದ್ಯೋಗ

Job Alert: 10ನೇ ತರಗತಿ ಪಾಸಾದವರಿಗೆ ಗುಡ್‌ನ್ಯೂಸ್‌; SSCಯಿಂದ ಬರೋಬ್ಬರಿ 8,326 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

Job Alert: ಭಾರತ ಸರ್ಕಾರದ ಸ್ಟಾಫ್‌ ಸೆಲೆಕ್ಷನ್‌ ಕಮಿಷನ್‌ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ. ದೇಶಾದ್ಯಂತ ಖಾಲಿ ಇರುವ ಬರೋಬ್ಬರಿ 8,326 ಎಂಟಿಎಸ್‌, ಹವಾಲ್ದಾರ್‌ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದ್ದು, ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕು. ಕೊನೆಯ ದಿನ ಜುಲೈ 31. ಮಲ್ಟಿ ಟಾಸ್ಕಿಂಗ್‌ (ನಾನ್‌ ಟಿಕ್ನಿಕಲ್‌) ಸ್ಟಾಫ್‌ (ಎಂಟಿಎಸ್‌) – 4,887 ಮತ್ತು ಸಿಬಿಐಸಿ ಮತ್ತು ಸಿಬಿಎನ್‌ನಲ್ಲಿ ಹವಾಲ್ದಾರ್‌ – 3,439 ಹುದ್ದೆಗಳಿವೆ.

VISTARANEWS.COM


on

Job Alert
Koo

ನವದೆಹಲಿ: ಎಸ್ಸೆಸ್ಸೆಲ್ಸಿ ಮುಗಿಸಿ ಒಂದೊಳ್ಳೆ ಉದ್ಯೋಗಕ್ಕಾಗಿ ಹುಡುಕಾಡುತ್ತಿದ್ದೀರಾ? ಹಾಗಾದರೆ ಸುವರ್ಣಾವಕಾಶವೊಂದು ನಿಮ್ಮನ್ನು ಹುಡುಕಿಕೊಂಡು ಬಂದಿದೆ. ಭಾರತ ಸರ್ಕಾರದ ಸ್ಟಾಫ್‌ ಸೆಲೆಕ್ಷನ್‌ ಕಮಿಷನ್‌ (Staff Selection Commission) ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ (SSC Recruitment 2024). ದೇಶಾದ್ಯಂತ ಖಾಲಿ ಇರುವ ಬರೋಬ್ಬರಿ 8,326 ಎಂಟಿಎಸ್‌, ಹವಾಲ್ದಾರ್‌ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದ್ದು, ಆಸಕ್ತರು ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬೇಕು. ಕೊನೆಯ ದಿನ ಜುಲೈ 31 (Job Alert).

ಹುದ್ದೆಗಳ ವಿವರ ಮತ್ತು ವಿದ್ಯಾರ್ಹತೆ

ಮಲ್ಟಿ ಟಾಸ್ಕಿಂಗ್‌ (ನಾನ್‌ ಟಿಕ್ನಿಕಲ್‌) ಸ್ಟಾಫ್‌ (ಎಂಟಿಎಸ್‌) – 4,887 ಮತ್ತು ಸಿಬಿಐಸಿ ಮತ್ತು ಸಿಬಿಎನ್‌ನಲ್ಲಿ ಹವಾಲ್ದಾರ್‌ – 3,439 ಹುದ್ದೆಗಳಿವೆ. SSC Recruitment 2024 ಅಧಿಸೂಚನೆ ಪ್ರಕಾರ ಯಾವುದೇ ಅಂಗೀಕೃತ ಶಿಕ್ಷಣ ಮಂಡಳಿ, ವಿಶ್ವವಿದ್ಯಾನಿಯಯದಿಂದ ಎಸ್ಸೆಸ್ಸೆಲ್ಸಿ / 10ನೇ ತರಗತಿ ತೇರ್ಗಡೆಯಾದವರು ಅರ್ಜಿ ಸಲ್ಲಿಸಬಹುದು.

ವಯೋಮಿತಿ

ಮಲ್ಟಿ ಟಾಸ್ಕಿಂಗ್‌ (ನಾನ್‌ ಟಿಕ್ನಿಕಲ್‌) ಸ್ಟಾಫ್‌ (ಎಂಟಿಎಸ್‌) ಹುದ್ದೆಗೆ ಅರ್ಜಿ ಸಲ್ಲಿಸುವವರ ಕನಿಷ್ಠ ವಯಸ್ಸು 18 ವರ್ಷ ಮತ್ತು ಗರಿಷ್ಠ ವಯಸ್ಸು 25 ವರ್ಷ. ಇನ್ನು ಹವಾಲ್ದಾರ್‌ ಹುದ್ದೆಗೆ 18-27 ವಯಸ್ಸಿನವರು ಅಪ್ಲೈ ಮಾಡಬಹುದು. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಲಭ್ಯ. ಮೀಸಲಾತಿಗೆ ಅನುಗುಣವಾಗಿ ವಯೋಮಿತಿಯಲ್ಲಿ ಸಡಿಲಿಕೆ ಲಭ್ಯ. ಒಬಿಸಿ ವಿಭಾಗಕ್ಕೆ 3 ವರ್ಷ, ಎಸ್‌ಸಿ / ಎಸ್‌ಟಿ ವಿಭಾಗಕ್ಕೆ 5 ವರ್ಷ, ಪಿಡಬ್ಲ್ಯುಬಿಡಿ (ಸಾಮಾನ್ಯ) ವಿಭಾಗಕ್ಕೆ 10 ವರ್ಷ, ಪಿಡಬ್ಲ್ಯುಬಿಡಿ (ಒಬಿಸಿ) ವಿಭಾಗಕ್ಕೆ 1೦ ವರ್ಷ, ಪಿಡಬ್ಲ್ಯುಬಿಡಿ (ಎಸ್‌ಸಿ / ಎಸ್‌ಟಿ) ವಿಭಾಗಕ್ಕೆ 15 ವರ್ಷಗಳ ರಿಯಾಯಿತಿ ಇದೆ.

ಅರ್ಜಿ ಶುಲ್ಕ

ಎಸ್‌ಸಿ / ಎಸ್‌ಟಿ / ಪಿಡಬ್ಲ್ಯುಬಿಡಿ / ಮಹಿಳೆ / ಇಎಸ್‌ಎಂ ಅಭ್ಯರ್ಥಿಗಳಿಗೆ ಅರ್ಜಿ ಶುಲ್ಕವಿಲ್ಲ. ಸಾಮಾನ್ಯ / ಒಬಿಸಿ ಅಭ್ಯರ್ಥಿಗಳು ಆನ್‌ಲೈನ್‌ ಮೂಲಕ 100 ರೂ. ಅರ್ಜಿ ಶುಲ್ಕ ಪಾವತಿಸಬೇಕು.

ಆಯ್ಕೆ ವಿಧಾನ ಮತ್ತು ಮಾಸಿಕ ವೇತನ

ಲಿಖಿತ ಪರೀಕ್ಷೆ, ಪ್ರಾಥಮಿಕ ಅರ್ಹತಾ ಪರೀಕ್ಷೆ (Preliminary Eligibility Test), ಫಿಸಿಕಲ್‌ ಸ್ಟ್ಯಾಂಡರ್ಡ್‌ ಟೆಸ್ಟ್‌ (Physical Standard Test) ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ. ಆಯ್ಕೆಯಾದವರಿಗೆ 18,000 ರೂ. – 22,000 ರೂ. ಮಾಸಿಕ ವೇತನ ದೊರೆಯಲಿದೆ. ಕರ್ನಾಟಕದಲ್ಲಿ ಬೆಂಗಳೂರು, ಬೆಳಗಾವಿ, ಹುಬ್ಬಳ್ಳಿ, ಕಲಬುರಗಿ, ಮಂಗಳೂರು, ಮೈಸೂರು, ಶಿವಮೊಗ್ಗ, ಉಡುಪಿ ಮುಂತಾದೆಡೆ ಪರೀಕ್ಷಾ ಕೇಂದ್ರಗಳಿವೆ.

SSC Recruitment 2024 ಅಧಿಸೂಚನೆಗಾಗಿ ಇಲ್ಲಿ ಕ್ಲಿಕ್‌ ಮಾಡಿ.

ಅರ್ಜಿ ಸಲ್ಲಿಸಲುವ ವಿಧಾನ

  • ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್‌ ಮಾಡಿ.
  • ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್‌ ಮಾಡಿ (https://ssc.gov.in/login).
  • ವೈಯಕ್ತಿಕ ಮಾಹಿತಿ ನೀಡಿ ಹೆಸರು ನೋಂದಾಯಿಸಿ.
  • ಪಾಸ್‌ವರ್ಡ್‌ ಬಳಸಿ ಲಾಗಿನ್‌ ಆಗಿ.
  • ಅಗತ್ಯ ಮಾಹಿತಿ ನೀಡಿ ಅಪ್ಲಿಕೇಷನ್‌ ಫಾರಂ ಭರ್ತಿ ಮಾಡಿ.
  • ಅಗತ್ಯ ದಾಖಲೆ, ಫೋಟೊ ಅಪ್‌ಲೋಡ್‌ ಮಾಡಿ.
  • ಆನ್‌ಲೈನ್‌ ಮೂಲಕ ಅರ್ಜಿ ಶುಲ್ಕ ಪಾವತಿಸಿ (ಅಗತ್ಯವಿದ್ದರು ಮಾತ್ರ).
  • ಭರ್ತಿ ಮಾಡಿದ ವಿವರಗಳನ್ನು ಮತ್ತೊಮ್ಮೆ ಪರಿಶೀಲಿಸಿ ಎಲ್ಲವೂ ಸರಿ ಇದ್ದರೆ Submit ಬಟನ್‌ ಕ್ಲಿಕ್‌ ಮಾಡಿ.
  • ಅಪ್ಲಿಕೇಷನ್‌ ಪಾರಂ ಡೌನ್‌ಲೋಡ್‌ ಮಾಡಿ ಪ್ರಿಂಟ್‌ಔಟ್‌ ತೆಗೆದಿಡಿ.

ಹೆಚ್ಚಿನ ಮಾಹಿತಿಗಾಗಿ Help Desk (SSC-HQ) 1800 309 3063, SSC (KKR), Bengaluru 080 25502520, 09483862020 ನಂಬರ್‌ಗೆ ಕರೆ ಮಾಡಿ. ಅಥವಾ ಅಧಿಕೃತ ವೆಬ್‌ಸೈಟ್‌ ssc.gov.inಗೆ ಭೇಟಿ ನೀಡಿ.

ಇದನ್ನೂ ಓದಿ: Job Alert: ಬರೋಬ್ಬರಿ 17,727 ಹುದ್ದೆಗಳ ಭರ್ತಿಗೆ ಮುಂದಾದ SSC; ಇಂದೇ ಅಪ್ಲೈ ಮಾಡಿ

Continue Reading

ಉದ್ಯೋಗ

Job Alert: ಗಮನಿಸಿ: ಗ್ರಾಮೀಣ ಬ್ಯಾಂಕ್‌ನ 9,995 ಹುದ್ದೆಗಳ ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಣೆ; ನಾಳೆ ಕೊನೆಯ ದಿನ

Job Alert: ಬ್ಯಾಂಕ್ ಸಿಬ್ಬಂದಿ ನೇಮಕಾತಿ ಸಂಸ್ಥೆ ದೇಶದಾದ್ಯಂತ 43 ಗ್ರಾಮೀಣ ಬ್ಯಾಂಕ್‌​ಗಳಲ್ಲಿ ಖಾಲಿಯಿರುವ 9,995 ಆಫೀಸ್ ಅಸಿಸ್ಟೆಂಟ್ (ಮಲ್ಟಿ ಪರ್ಪಸ್) ಮತ್ತು ಆಫೀಸರ್ ಹುದ್ದೆಗಳ ನೇಮಕಕ್ಕೆ ಅಧಿಸೂಚನೆ ಹೊರಡಿಸಿದೆ. ಈ ಹಿಂದೆ ಅರ್ಜಿ ಸಲ್ಲಿಕೆಗೆ ಜೂನ್ 27 ಕೊನೆಯ ದಿನ ಎಂದು ಹೇಳಲಾಗಿತ್ತು. ಇದೀಗ ದಿನಾಂಕವನ್ನು ವಿಸ್ತರಿಸಲಾಗಿದ್ದು, ನಾಳೆ (ಜೂನ್‌ 30)ವರೆಗೆ ಅವಕಾಶ ಕಲ್ಪಿಸಲಾಗಿದೆ.

VISTARANEWS.COM


on

Job Alert
Koo

-ಆರ್.ಕೆ.ಬಾಲಚಂದ್ರ, ಬ್ಯಾಂಕಿಂಗ್ ಪರಿಣತರು
ಬೆಂಗಳೂರು: ಬ್ಯಾಂಕ್ ಸಿಬ್ಬಂದಿ ನೇಮಕಾತಿ ಸಂಸ್ಥೆ (IBPS​) ದೇಶದಾದ್ಯಂತ 43 ಗ್ರಾಮೀಣ ಬ್ಯಾಂಕ್‌​ಗಳಲ್ಲಿ (ಆರ್​ಆರ್​ಬಿ) ಖಾಲಿಯಿರುವ 9,995 ಆಫೀಸ್ ಅಸಿಸ್ಟೆಂಟ್ (ಮಲ್ಟಿ ಪರ್ಪಸ್) ಮತ್ತು ಆಫೀಸರ್ ಹುದ್ದೆಗಳ ನೇಮಕಕ್ಕೆ ಅಧಿಸೂಚನೆ ಹೊರಡಿಸಿದೆ. ಈ ಹಿಂದೆ ಅರ್ಜಿ ಸಲ್ಲಿಕೆಗೆ ಜೂನ್ 27 ಕೊನೆಯ ದಿನ ಎಂದು ಹೇಳಲಾಗಿತ್ತು. ಇದೀಗ ದಿನಾಂಕವನ್ನು ವಿಸ್ತರಿಸಲಾಗಿದ್ದು, ನಾಳೆ (ಜೂನ್‌ 30)ವರೆಗೆ ಅವಕಾಶ ಕಲ್ಪಿಸಲಾಗಿದೆ (Job Alert).

ರಾಜ್ಯದ ಅಭ್ಯರ್ಥಿಗಳಿಗೆ ಹಿಂದಿ ಅಥವಾ ಇಂಗ್ಲಿಷ್ ಜತೆಗೆ ಕಳೆದ ಬಾರಿಯಂತೆ ಆಫೀಸ್ ಅಸಿಸ್ಟೆಂಟ್ (ಮಲ್ಟಿ ಪರ್ಪಸ್) ಮತ್ತು ಆಫೀಸರ್ ಸ್ಟೇಲ್-1 ಹುದ್ದೆಗಳಿಗೆ ಕನ್ನಡ ಮತ್ತು ಕೊಂಕಣಿ ಭಾಷೆಯಲ್ಲೂ ಪರೀಕ್ಷೆ ಬರೆಯುವ ಅವಕಾಶವನ್ನು ಐಬಿಪಿಎಸ್ ನೀಡಿದೆ.

ಕಳೆದ ಬಾರಿ 8,622 ಹುದ್ದೆಗಳಿಗೆ ನೇಮಕ ನಡೆಸಿದ ಐಬಿಪಿಎಸ್ ಈ ಬಾರಿ 9,995 ಹುದ್ದೆಗಳಿಗೆ ನೇಮಕ ಮಾಡಿಕೊಳ್ಳುತ್ತಿದೆ. ರಾಜ್ಯದಲ್ಲಿ ಬಳ್ಳಾರಿಯ ಕರ್ನಾಟಕ ಗ್ರಾಮೀಣ ಬ್ಯಾಂಕ್ ಮತ್ತು ಧಾರವಾಡದ ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕ್ ಗಳಿಗೆ ಈ ಸ್ಪರ್ಧಾತ್ಮಕ ಪರೀಕ್ಷೆಯ ಮೂಲಕ ನೇಮಕ ನಡೆಯಲಿದೆ. ರಾಜ್ಯದ ಎರಡು ಬ್ಯಾಂಕುಗಳಲ್ಲಿ 586 ಹುದ್ದೆಗಳು ಖಾಲಿ ಇವೆ. ಇದರಲ್ಲಿ ಆಫೀಸ್ ಅಸಿಸ್ಟೆಂಟ್ (ಮಲ್ಟಿ ಪರ್ಪಸ್) ಒಟ್ಟು 200 ಹುದ್ದೆಗಳು ಮತ್ತು ಆಫೀಸರ್ ಸ್ಟೇಲ್-1-386 ಹುದ್ದೆಗಳಿವೆ. ಕಳೆದ ಬಾರಿ ರಾಜ್ಯದ ಈ ಎರಡೂ ಬ್ಯಾಂಕ್‌ಗಳಲ್ಲಿ 807 ಹುದ್ದೆಗಳಿಗೆ ನೇಮಕ ನಡೆದಿತ್ತು.

ಕರ್ನಾಟಕದ ಗ್ರಾಮೀಣ ಬ್ಯಾಂಕ್‌ಗಳಲ್ಲಿರುವ ಖಾಲಿ ಇರುವ ಹುದ್ದೆಗಳ ಮೀಸಲಾತಿ

ಆಫೀಸ್ ​ಅಸಿಸ್ಟೆಂಟ್ (ಮಲ್ಟಿಪರ್ಪಸ್)
ಬ್ಯಾಂಕ್ಎಸ್​ ಸಿ(SC)ಎಸ್​ಟಿ(ST)ಒಬಿಸಿ (NCL)*EWS*ಸಾಮಾನ್ಯTOTAL
ಕರ್ನಾಟಕ ಗ್ರಾಮೀಣ ಬ್ಯಾಂಕ್167271040100
ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕ್167271040100
ಆಫೀಸರ್ ಸ್ಕೇಲ್-I
ಕರ್ನಾಟಕ ಗ್ರಾಮೀಣ ಬ್ಯಾಂಕ್43217729116286
ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕ್157271041100
EWS-ಆರ್ಥಿಕ ವಾಗಿ ಹಿಂದುಳಿದ ವರ್ಗ   *NCL- ಕೆನೆ ಪದರ ಹೊರತಾದ

ಈಗ ನಿಗದಿಪಡಿಸಿರುವ ಹುದ್ದೆಗಳ ಸಂಖ್ಯೆಗಳು ಹೆಚ್ಚಾಗಲೂಬಹುದು. ಕರ್ನಾಟಕ ಸೇರಿದಂತೆ ವಿವಿಧ ರಾಜ್ಯಗಳಿಗೆ ಮೀಸಲಿಟ್ಟ ಹುದ್ದೆಗಳ ಸಂಖ್ಯೆ ಏರಿಕೆಯಾಗಲೂಬಹುದು. ಆದ್ದರಿಂದ ಹುದ್ದೆಗಳ ನಿರೀಕ್ಷೆಯಲ್ಲಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವಾಗ ನಿರಾಶರಾಗಬೇಕಾಗಿಲ್ಲ.

ಅರ್ಜಿ ಸಲ್ಲಿಸುವುದು ಹೇಗೆ?

ಜೂನ್ 7ರಿಂದ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದ್ದು, ಜೂನ್ 30 ಅರ್ಜಿ ಸಲ್ಲಿಕೆಗೆ ಕೊನೆ ದಿನವಾಗಿದೆ. ಆನ್​ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು.

ವಯೋಮಿತಿ

ಆಫೀಸ್ ​ಅಸಿಸ್ಟೆಂಟ್ (ಮಲ್ಟಿಪರ್ಪಸ್) ಹುದ್ದೆಗೆ 18 ರಿಂದ 28 ವರ್ಷಗಳು. ಆಫೀಸರ್ ಸ್ಕೇಲ್-I ಹುದ್ದೆಗೆ 18 ರಿಂದ 30 ವರ್ಷಗಳು.  ಎಸ್​.ಸಿ ಮತ್ತು ಎಸ್​.ಟಿ ಅಭ್ಯರ್ಥಿಗಳಿಗೆ 5 ವರ್ಷಗಳು, ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷಗಳು ಮತ್ತು ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿಯ ಸಡಿಲಿಕೆ ಇದೆ. 

ಶೈಕ್ಷಣಿಕ ಅರ್ಹತೆ ಮತ್ತು ಅನುಭವಗಳೇನಿರಬೇಕು?

Group“B”-ಆಫೀಸ್ ಅಸಿಸ್ಟೆಂಟ್​ ಹುದ್ದೆ: ಯಾವುದೇ ವಿಷಯದಲ್ಲಿ ಪದವಿ ಪಡೆದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಸ್ಥಳೀಯ ಭಾಷೆ ತಿಳಿದಿರುವುದು ಅವಶ್ಯಕ. ಕಂಪ್ಯೂಟರ್​ನಿರ್ವಹಣಾ ಜ್ಞಾನ ಹೊಂದಿರುವುದು ಕಡ್ಡಾಯ.

Group“A”-Officers-ಆಫೀಸರ್ ಸ್ಕೇಲ್-I (ಸಹಾಯಕ ವ್ಯವಸ್ಥಾಪಕ)

ಯಾವುದೇ ವಿಷಯದಲ್ಲಿ ಪದವಿ. ಕೃಷಿ, ತೋಟಗಾರಿಕೆ, ಅರಣ್ಯ, ಪಶುಸಂಗೋಪನೆ, ಪಶುವೈದ್ಯಕೀಯ ವಿಜ್ಞಾನ, ಕೃಷಿ ಎಂಜಿನಿಯರಿಂಗ್, ಮೀನುಗಾರಿಕೆ, ಕೃಷಿ ಮಾರುಕಟ್ಟೆ ಮತ್ತು ಸಹಕಾರ, ಮಾಹಿತಿ ತಂತ್ರಜ್ಞಾನ, ನಿರ್ವಹಣೆ, ಕಾನೂನು, ಅರ್ಥಶಾಸ್ತ್ರ ಅಥವಾ ಲೆಕ್ಕಶಾಸ್ತ್ರದಲ್ಲಿ ಪದವಿ ಹೊಂದಿರುವವರಿಗೆ ಆದ್ಯತೆ. ಆದರೆ ಸ್ಥಳೀಯ ಭಾಷೆ ತಿಳಿದಿರಬೇಕಾದುದು ಅವಶ್ಯಕ. ಕಂಪ್ಯೂಟರ್ ನಿರ್ವಹಣಾ ಜ್ಞಾನ ಕಡ್ಡಾಯ.

ಆಫೀಸ್ ಅಸಿಸ್ಟೆಂಟ್ ಮತ್ತು ಆಫೀಸರ್ ಸ್ಟೇಲ್-1ಕ್ಕೆ ಸ್ಥಳೀಯ ಭಾಷೆಯಲ್ಲಿ ಪ್ರಾವೀಣ್ಯ ಹೊಂದಿರುವುದು ಅವಶ್ಯ. 8ನೇ ತರಗತಿಯವರೆಗೆ ಅಥವಾ ಅದಕ್ಕೂ ಮೇಲ್ಪಟ್ಟು ಸ್ಥಳೀಯ ಭಾಷೆಯ ಮಾಧ್ಯಮದಲ್ಲಿ ಓದಿದವವರನ್ನು ಸ್ಥಳೀಯ ಭಾಷೆಯಲ್ಲಿ ಪ್ರಾವೀಣ್ಯ ಪಡೆದ ಅಭ್ಯರ್ಥಿ ಎಂದು ಪರಿಗಣಿಸಲಾಗುತ್ತದೆ. ಒಂದು ವೇಳೆ ಅಭ್ಯರ್ಥಿಯು ಸ್ಥಳೀಯ ಭಾಷೆಯನ್ನು ಸರಿಯಾಗಿ ತಿಳಿದಿಲ್ಲ ಎಂಬುದು ಆಯ್ಕೆಯ ಸಂದರ್ಭದಲ್ಲಿ ಗಮನಕ್ಕೆ ಬಂದಲ್ಲಿ, ಅಂತಹ ಅಭ್ಯರ್ಥಿಗಳಿಗೆ ಭಾಷೆಯನ್ನು ಕಲಿತುಕೊಳ್ಳಲು 6 ತಿಂಗಳ ಕಾಲಾವಕಾಶ ನೀಡಲಾಗುತ್ತದೆ.

ಇತ್ತ ಗಮನಿಸಿ

ನಿಗದಿತ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿ ಆಫೀಸ್ ಅಸಿಸ್ಟೆಂಟ್ ಮತ್ತು ಆಫೀಸರ್ ಹುದ್ದೆ, ಎರಡಕ್ಕೂ ಅರ್ಜಿ ಸಲ್ಲಿಸಬಹುದು.

ಕ್ರೆಡಿಟ್ ಇತಿಹಾಸ

  • ಅರ್ಜಿ ಸಲ್ಲಿಸುವ ಅಭ್ಯರ್ಥಿಯ ಬ್ಯಾಂಕ್ ​ಖಾತೆ ಹೊಂದಿದ್ದರೆ, ಅವರು ಆರೋಗ್ಯಕರ ಕ್ರೆಡಿಟ್ ಇತಿಹಾಸವನ್ನು ಹೊಂದಿರಬೇಕು ಮತ್ತು ಬ್ಯಾಂಕ್ ಹುದ್ದೆಗೆ ನೇಮಕವಾಗುವ ಸಮಯದಲ್ಲಿ ಕನಿಷ್ಠ CIBIL ಸ್ಕೋರ್  ಅಥವಾ ಅದಕ್ಕಿಂತ ಹೆಚ್ಚಿರುವುದನ್ನು ಖಚಿತಪಡಿಸಿ ಕೊಳ್ಳಬೇಕು.
  • ಸೇರುವ ದಿನಾಂಕದ ಮೊದಲು CIBIL ಸ್ಥಿತಿಯನ್ನು ನವೀಕರಿಸದಿದ್ದರೆ, ಮೊದಲು ನವೀಕರಿಸಬೇಕು ಅಥವಾ CIBIL ನಲ್ಲಿ ಪ್ರತಿಕೂಲವಾಗಿ ಪ್ರತಿಬಿಂಬಿತವಾಗಿರುವ ಖಾತೆಗಳಿಗೆ ಸಂಬಂಧಿಸಿದಂತೆ ಯಾವುದೇ ಬಾಕಿ ಉಳಿದಿಲ್ಲ ಎಂದು ಸಾಲದಾತರಿಂದ NOC ಗಳನ್ನು ಪಡೆಯಬೇಕು. ವಿಫಲವಾದರೆ ಆಫರ್ ಪತ್ರವನ್ನು ಹಿಂಪಡೆಯಲಾಗುತ್ತದೆ / ರದ್ದುಗೊಳಿಸಲಾಗುತ್ತದೆ.

ಅರ್ಜಿ ಶುಲ್ಕ

ಸಾಮಾನ್ಯ ಮತ್ತು ಇತರೆ ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ ₹850 ಹಾಗೂ ಎಸ್​ಸಿ/ಎಸ್​ಟಿ/ ಅಂಗವಿಕಲರು / ಮಾಜಿ ಸೈನಿಕ ಅಭ್ಯರ್ಥಿಗಳಿಗೆ ₹175 ಶುಲ್ಕ ನಿಗದಿಪಡಿಸಲಾಗಿದೆ. ಆನ್​ಲೈನ್ ಮೋಡ್ ಮೂಲಕ ಅಗತ್ಯವಾದ ಅರ್ಜಿ ಶುಲ್ಕವನ್ನು ಪಾವತಿಸಬೇಕಾಗುತ್ತದೆ.

ಪರೀಕ್ಷಾ ಪೂರ್ವ ತರಬೇತಿ(PRE-EXAMINATION TRAINING (PET)

ಎಸ್ಸಿ/ಎಸ್ಟಿ/ ಅಲ್ಪಸಂಖ್ಯಾತ ಅಭ್ಯರ್ಥಿಗಳು / ಮಾಜಿ ಸೈನಿಕರು / ವಿಶೇಷಚೇತನ ಅಭ್ಯರ್ಥಿಗಳಿಗೆ ಐಬಿಪಿಎಸ್ ಪರೀಕ್ಷಾ ಪೂರ್ವ ತರಬೇತಿ ನೀಡಲಿದೆ. ಆಫೀಸ್ ಅಸಿಸ್ಟೆಂಟ್ (ಮಲ್ಟಿಪರ್ಪಸ್) ಮತ್ತು ಆಫೀಸರ್ ಸ್ಟೇಲ್-1 ಹುದ್ದೆಗಳಿಗೆ ತರಬೇತಿ ಪಡೆಯಬಹುದು. ಈ ತರಬೇತಿ ಪಡೆಯುವ ಅಭ್ಯರ್ಥಿಗಳು ಆನ್ಲೈನ್ ಅರ್ಜಿ ಸಲ್ಲಿಸುವಾಗಲೇ ತರಬೇತಿ ಪಡೆಯುವ ಬಗ್ಗೆ ಅದಕ್ಕಾಗಿ ಮೀಸಲಿಟ್ಟ ಕಾಲಂನಲ್ಲಿ ನಮೂದಿಸಬೇಕು. ಇದರ ಖರ್ಚು ಮೆಚ್ಚಗಳನ್ನು ಅಭ್ಯರ್ಥಿಗಳೇ ಭರಿಸಬೇಕಾಗುತ್ತದೆ. ರಾಜ್ಯದಲ್ಲಿ ಧಾರವಾಡದಲ್ಲಿ ಮಾತ್ರ ತರಬೇತಿ ನೀಡಲಾಗುತ್ತದೆ.

ಪೂರ್ವಭಾವಿ ಪರೀಕ್ಷೆ

ಬೆಂಗಳೂರು, ಬೆಳಗಾವಿ, ದಾವಣಗೆರೆ, ಧಾರವಾಡ, ಕಲಬುರಗಿ, ಹುಬ್ಬಳ್ಳಿ, ಮಂಗಳೂರು,ಮೈಸೂರು, ಶಿವಮೊಗ್ಗ ಮತ್ತು ಉಡುಪಿ.

ಮುಖ್ಯ ಪರೀಕ್ಷೆ

ಬೆಂಗಳೂರು, ಬೆಳಗಾವಿ, ದಾವಣಗೆರೆ, ಧಾರವಾಡ, ಕಲಬುರಗಿ, ಹುಬ್ಬಳ್ಳಿ, ಮೈಸೂರು, ಶಿವಮೊಗ್ಗ ಮತ್ತು ಉಡುಪಿ(ಮಂಗಳೂರು ಹೊರತು ಪಡಿಸಿ)

ಈ ಬಾರಿಯ ಬದಲಾವಣೆಗಳೇನು?

ಈ ಬಾರಿ ಅರ್ಜಿ ಸಲ್ಲಿಸುವಾಗ ಪರೀಕ್ಷೆಗೆ ಅಭ್ಯರ್ಥಿಗಳು ತರುವ ಗುರುತಿನ ಪತ್ರದ (ಐಡಿ ಪ್ರೂಫ್​) ಸಂಖ್ಯೆ ನೀಡುವುದು ಕಡ್ಡಾಯ. ಆ ಸಂಖ್ಯೆ ಅಭ್ಯರ್ಥಿ ಸಲ್ಲಿಸಿದ ಅರ್ಜಿಯಲ್ಲಿರುವ ಹೆಸರಿನೊಂದಿಗೆ ಹೊಂದಾಣಿಕೆಯಾಗಬೇಕು. ಈ ಬಾರಿ ಪೂರ್ವಭಾವಿ ಪರೀಕ್ಷೆಯ ಪ್ರವೇಶ ಪತ್ರವನ್ನು ಪರೀಕ್ಷಾ ಸ್ಥಳದಲ್ಲಿ ಸಂಗ್ರಹಿಸಲಾಗುವುದಿಲ್ಲ. ಬದಲಿಗೆ, ಇದನ್ನು ಪರೀಕ್ಷಾ ಕೇಂದ್ರದ ಸಿಬ್ಬಂದಿಯಿಂದ ಧೃಡಪಡಿಸಿಕೊಳ್ಳಬೇಕು. ಮುಖ್ಯ ಪರೀಕ್ಷೆಗೆ ಅರ್ಹತೆ ಪಡೆದ ಅಭ್ಯರ್ಥಿಗಳು ಮುಖ್ಯ ಪರೀಕ್ಷೆಯ ಪ್ರವೇಶ ಪತ್ರದೊಂದಿಗೆ ಪ್ರಿಲಿಮ್ಸ್ ಪರೀಕ್ಷೆಯಲ್ಲಿ ದೃಢೀಕರಣಗೊಂಡ ಪ್ರವೇಶ ಪತ್ರವನ್ನೂ ಸಲ್ಲಿಸಬೇಕು.

ಅರ್ಜಿ ಸಲ್ಲಿಸುವಾಗ ಗಮನಿಸಬೇಕಾದ ಅಂಶಗಳು

  • ನಿಗದಿತ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಆಫೀಸ್ ಅಸಿಸ್ಟೆಂಟ್ ಮತ್ತು ಆಫೀಸರ್ ಹುದ್ದೆಎರಡಕ್ಕೂ ಅರ್ಜಿ ಸಲ್ಲಿಸಬಹುದು.ಆದರೆ ಆಫೀಸರ್ ಕೇಡರ್​ನಲ್ಲಿ ಯಾವುದಾದರೂ ಒಂದು ಹುದ್ದೆಯನ್ನು ಮಾತ್ರ ಆಯ್ಕೆ ಮಾಡಿಕೊಳ್ಳಬೇಕು.
  • ಅರ್ಜಿ ಸಲ್ಲಿಸುವಾಗ ಅಭ್ಯರ್ಥಿಯು ತನ್ನ ಕೈ ಬರಹದ ಪ್ರಮಾಣಪತ್ರವನ್ನು ಸ್ಕ್ಯಾನ್ ಮಾಡಿ   ಅರ್ಜಿಯೊಂದಿಗೆ ಅಪ್ ಲೋಡ್ ಮಾಡಬೇಕು. ಕ್ಯಾಪಿಟಲ್ ಲೆಟರ್ಸ್​ನಲ್ಲಿ ಬರೆದ ಡಿಕ್ಲರೇಷನ್ ಮತ್ತು ಸಹಿಯನ್ನು ಪರಿಗಣಿಸಲಾಗುವುದಿಲ್ಲ ಎಂದು ಅಧಿಸೂಚನೆಯಲ್ಲಿ ಸ್ಪಷ್ಟಪಡಿಸಲಾಗಿದೆ.
  • ಅರ್ಜಿ ಸಲ್ಲಿಕೆ, ಅಧಿಸೂಚನೆ ಕುರಿತ ಹೆಚ್ಚಿನ ಮಾಹಿತಿಗಾಗಿ www.ibps.in/ಜಾಲತಾಣಕ್ಕೆ ಭೇಟಿ ನೀಡಿ.
  • ನೀವು ಈ ಪರೀಕ್ಷೆಗೆ ಅರ್ಜಿ ಸಲ್ಲಿಸಬೇಕೆಂದಿದ್ದರೆ ಇ-ಮೇಲ್ ವಿಳಾಸ ಹಾಗೂ ಮೊಬೈಲ್ ಸಂಖ್ಯೆ ಹೊಂದಿರಬೇಕಾಗಿರುವುದು ಕಡ್ಡಾಯ. ಆದ್ದರಿಂದ ಇ-ಮೇಲ್ ಅಕೌಂಟ್ ಇಲ್ಲದಿದ್ದರೆ ಅರ್ಜಿ ಸಲ್ಲಿಸುವ ಮುನ್ನವೇ ಕ್ರಿಯೇಟ್ ಮಾಡಿಕೊಳ್ಳಿ. ಹಾಗೆಯೇ ಅರ್ಜಿಯಲ್ಲಿ ನಮೂದಿಸಿದ ಇ-ಮೇಲ್ ಐ.ಡಿ.ಯನ್ನು ಪರೀಕ್ಷಾ ಪ್ರಕ್ರಿಯೆ ಪೂರ್ಣಗೊಳ್ಳುವವರೆಗೂ ಚಾಲ್ತಿಯಲ್ಲಿರುವಂತೆ ನೋಡಿಕೊಳ್ಳಿ.
  • ಅರ್ಜಿ ಸಲ್ಲಿಸುವಾಗ ಒಂದೇ ಬಾರಿಗೆ ಎಲ್ಲ ಮಾಹಿತಿಯನ್ನು ತುಂಬಬೇಕೆಂಬ ನಿಯಮವೇನಿಲ್ಲ. ಡೇಟಾ ಸೇವ್ ಮಾಡಿ ಎಲ್ಲ ಮಾಹಿತಿಯನ್ನು ತುಂಬಿದ ನಂತರವೇ final submit ಬಟನ್ ಒತ್ತಿ.

ಇತ್ತ ಗಮನಿಸಿ

  • ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಜೂನ್ 27, 2024
  • ಪೂರ್ವಭಾವಿ ಪರೀಕ್ಷೆ ತರಬೇತಿಗೆ ಪ್ರವೇಶಪತ್ರ ಡೌನ್ಲೋಡ್ ಮಾಡಿಕೊಳ್ಳುವುದು: ಜುಲೈ
  • ಪೂರ್ವಭಾವಿ ಪರೀಕ್ಷೆಗೆ ತರಬೇತಿ: ಜುಲೈ 22-27
  • ಪೂರ್ವಭಾವಿ ಪರೀಕ್ಷೆಗೆ ಪ್ರವೇಶಪತ್ರ ಲಭ್ಯ ಜುಲೈ/ಆಗಸ್ಟ್ 2024
  • ಪೂರ್ವಭಾವಿ ಪರೀಕ್ಷೆ: ಆಗಸ್ಟ್, 2024
  • ಪೂರ್ವಭಾವಿ ಪರೀಕ್ಷೆಯ ಫಲಿತಾಂಶ ಆಗಸ್ಟ್/ಸೆಪ್ಟೆಂಬರ್, 2024
  • ಮುಖ್ಯ ಪರೀಕ್ಷೆ ನಡೆಯುವುದು ಸೆಪ್ಟೆಂಬರ್ / ಅಕ್ಟೋಬರ್, 2024
  • ಮುಖ್ಯ ಪರೀಕ್ಷೆಯ ಫಲಿತಾಂಶ ಅಕ್ಟೋಬರ್, 2024
  • ಸಂದರ್ಶನ ನಡೆಯುವುದು: ನವೆಂಬರ್, 2024
  • ನೇಮಕ ಶಿಫಾರಸು: ಜನವರಿ, 2025

ಆಯ್ಕೆ ಹೇಗೆ?

ಪ್ರಾದೇಶಿಕ ಗ್ರಾಮೀಣ ಬ್ಯಾಂಕ್ ​ಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗಾಗಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಮೂರು ಹಂತಗಳಲ್ಲಿ ಪರೀಕ್ಷೆ(ಪೂರ್ವ ಭಾವಿ/ ಮುಖ್ಯ ಪರೀಕ್ಷೆ/ ಸಂದರ್ಶನ-ಅಧಿಕಾರಿಗಳ ಹುದ್ದೆಗೆ ಮಾತ್ರ ಇದು ಅನ್ವಯಿಸುತ್ತದೆ) ನಡೆಸಲಾಗುತ್ತದೆ. ಪರೀಕ್ಷೆಯ ಸ್ವರೂಪ ಹೇಗಿರುತ್ತದೆ ಎಂಬ ವಿವರಣೆ ಇಲ್ಲಿದೆ.

ಆಫೀಸ್ ಅಸಿಸ್ಟೆಂಟ್ (ಮಲ್ಟಿಪರ್ಪ ಸ್ )/ ಸ್ಕೇಲ್–I ಅಧಿಕಾರಿ ಪೂರ್ವ ಭಾವಿ ಪರೀಕ್ಷೆ:

ಕ್ರ.ಸಂ.ಪರೀಕ್ಷೆಗಳ ಹೆಸರುಪರೀಕ್ಷೆಯ ಮಾಧ್ಯಮಪ್ರಶ್ನೆಗಳ ಸಂಖ್ಯೆಗರಿಷ್ಠ ಅಂಕಗಳುಅವಧಿ
1ತಾರ್ಕಿಕ  ಪರೀಕ್ಷೆ (Reasoning)    ಕನ್ನಡ, ಕೊಂಕಣಿ, ಇಂಗ್ಲಿಷ್ ಮತ್ತು ಹಿಂದಿ –ಇವುಗಳಲ್ಲಿ ಯಾವುದಾದರೊಂದು ಭಾಷೆಯ ಆಯ್ಕೆ4040      ಸಂಯೋಜಿತ ಸಮಯ;45 ನಿಮಿಷಗಳು
2ಸಂಖ್ಯಾತ್ಮಕ ಸಾಮರ್ಥ್ಯ  (Numerical Ability)/ ಕ್ವಾಂಟಿಟೇಟಿವ್ ಆಪ್ಟಿಟ್ಯೂಡ್ (Quantitative Aptitude)  40  40
 ಒಟ್ಟು 8080 

ಮುಖ್ಯ ಪರೀಕ್ಷೆ

(ಆಫೀಸ್ ಅಸಿಸ್ಟೆಂಟ್ (ಮಲ್ಟಿಪರ್ಪಸ್ )/ಸ್ಕೇಲ್–I ಅಧಿಕಾರಿ):

ಕ್ರ .ಸಂಪರೀಕ್ಷೆಗಳ ಹೆಸರುಪರೀಕ್ಷೆಯ ಮಾಧ್ಯಮಪ್ರಶ್ನೆಗಳ ಸಂಖ್ಯೆಗರಿಷ್ಠ ಅಂಕಗಳುಅವಧಿ  
1ತಾರ್ಕಿಕ ಪರೀಕ್ಷೆಕನ್ನಡ, ಕೊಂಕಣಿ, ಇಂಗ್ಲಿಷ್ ಮತ್ತು ಹಿಂದಿ4050    2 ಗಂಟೆಗಳ ಸಂಯೋಜಿತ ಸಮಯ
2ಕಂಪ್ಯೂಟರ್ ಜ್ಞಾನ4020
3ಸಾಮಾನ್ಯ ಅರಿವು (General Awareness)4040
4a*ಆಂಗ್ಲ ಭಾಷೆಇಂಗ್ಲಿಷ್4040
5b*ಹಿಂದಿ ಭಾಷೆಹಿಂದಿ4040
6ಸಂಖ್ಯಾತ್ಮಕ ಸಾಮರ್ಥ್ಯ/ ಕ್ವಾಂಟಿಟೇಟಿವ್ ಆಪ್ಟಿಟ್ಯೂಡ್ ಟೆಸ್ಟ್ಕನ್ನಡ, ಕೊಂಕಣಿ, ಇಂಗ್ಲಿಷ್ ಮತ್ತು ಹಿಂದಿ4050
 ಒಟ್ಟು 200200 
(*ಅಭ್ಯರ್ಥಿಗಳು 4 a ಅಥವಾ 4 b ಆಯ್ಕೆ ಮಾಡಬಹುದು)

ಕರ್ನಾಟಕದ ಅಭ್ಯರ್ಥಿಗಳು ಕನ್ನಡ, ಕೊಂಕಣಿ, ಇಂಗ್ಲಿಷ್ ಮತ್ತು ಹಿಂದಿ –ಇವುಗಳಲ್ಲಿ ಯಾವುದಾದ ರೊಂದು ಭಾಷೆಯ ಆಯ್ಕೆ ಮಾಡಿಕೊಳ್ಳಬಹುದು. ಆನ್ಲೈ ನ್ ನಲ್ಲಿ ಅರ್ಜಿ ಸಲ್ಲಿಸುವಾಗ ಭಾಷೆಯನ್ನು ಆಯ್ಕೆ ಮಾಡಿಕೊಂಡಿರಬೇಕು. ಅದೇ ಭಾಷೆಯಲ್ಲೇ ಪರೀಕ್ಷೆ ಬರೆಯಬೇಕು (ಪರೀಕ್ಷಾ ಸಂದರ್ಭದಲ್ಲಿ ಬದಲಾವಣೆಗೆ ಅವಕಾಶವಿಲ್ಲ).

ಗಮನಿಸಿ

ಆಫೀಸ್ ಅಸಿಸ್ಟೆಂಟ್ (ಮಲ್ಟಿಪರ್ಪಸ್ ) ಪರೀಕ್ಷೆ ಬರೆಯುವವರು ಗಣಿತಕ್ಕೆ ಸಂಬಂಧಿಸಿದಂತೆ ಸಂಖ್ಯಾತ್ಮಕ ಸಾಮರ್ಥ್ಯ ಪರೀಕ್ಷೆ ಬರೆಯಬೇಕು ಹಾಗೂ ಅಧಿಕಾರಿ ಸ್ಕೇಲ್-I ಹುದ್ದೆಗಾಗಿ ಪರೀಕ್ಷೆ ಬರೆಯುವವರು ಕ್ವಾಂಟಿಟೇಟಿವ್ ಆಪ್ಟಿಟ್ಯೂಡ್ ಪರೀಕ್ಷೆ ಬರೆಯಬೇಕು.

ಕ್ಲಿಷ್ಟತೆಯ ಮಟ್ಟ

ಸಂಖ್ಯಾತ್ಮಕ ಸಾಮರ್ಥ್ಯ ಪರೀಕ್ಷೆಯಲ್ಲಿ ಸರಳೀಕರಣ, ಸಂಖ್ಯಾ ಸರಣಿ, ಅಂಕಗಣಿತದ ಪ್ರಶ್ನೆಗಳು, ಬೀಜಗಣಿತದ ಪ್ರಶ್ನೆಗಳಿರುತ್ತವೆ. ಈ ಪರೀಕ್ಷೆ ಮೂಲಕ ಅಭ್ಯರ್ಥಿಗೆ ಸಂಖ್ಯೆಗಳೊಂದಿಗೆ ವ್ಯವಹರಿಸುವ ಸಾಮರ್ಥ್ಯವನ್ನು ಪರೀಕ್ಷಿಸಲಾಗುತ್ತದೆ. ಆ ಪ್ರಶ್ನೆಗಳಲ್ಲಿ ತಾರ್ಕಿಕ ಅಂಶವಿರುವುದಿಲ್ಲ.

ಕ್ವಾಂಟಿಟೇಟಿವ್ ಆಪ್ಟಿಟ್ಯೂಡ್ ವಿಷಯದಲ್ಲಿ ತಾರ್ಕಿಕ ಅರ್ಹತೆ ಮತ್ತು ಸಂಖ್ಯೆಗಳೊಂದಿಗೆ ವ್ಯವಹರಿಸುವ ಸಾಮರ್ಥ್ಯವನ್ನು ಪರೀಕ್ಷಿಸಲಾಗುತ್ತದೆ. ಇದು ಎರಡೂ ವಿಷಯಗಳ ಸಂಯೋಜನೆ. ಇದರಲ್ಲಿ ಪ್ರಶ್ನೆಗಳು ತುಂಬಾ ಕಠಿಣವಾಗಿರುವುದಿಲ್ಲ, ಆದರೆ ಇವುಗಳನ್ನು ಬಿಡಿಸಲು ಹೆಚ್ಚು ಅಭ್ಯಾಸ ಮಾಡಿರಬೇಕು. ಆದ್ದರಿಂದ ನೀವು ಪ್ರಶ್ನೆಗಳನ್ನು ಅರ್ಥ ಮಾಡಿಕೊಳ್ಳುವುದರ ಮೂಲಕ ಸಮಯವನ್ನು ಹೇಗೆ ನಿರ್ವಹಿಸಬಹುದು ಎಂಬುದನ್ನು ಅರಿಯುವಿರಿ. ಆದರೆ ಚಕ್ರ ಬಡ್ಡಿ(compound interest) ಕುರಿತ ಪ್ರಶ್ನೆಗಳು ಬಿಡಿಸಲು ಸ್ವಲ್ಪ ಸಮಯ ತೆಗೆದುಕೊಳ್ಳುವುದರಿಂದ ಅವುಗಳನ್ನು ವಿಭಾಗದ ಕೊನೆಯಲ್ಲಿ ಬಿಡಿಸಬೇಕು.

ಕ್ವಾಂಟಿಟೇಟಿವ್ ಆಪ್ಟಿಟ್ಯೂಡ್ ಪರೀಕ್ಷೆಯಲ್ಲಿ, ಸಂಭವನೀಯತೆ, ಕ್ರಮಪಲ್ಲಟನೆ ಮತ್ತು ಸಂಯೋಜನೆ, ಡೇಟಾ ಸಮರ್ಪಕತೆ ಸರಾಸರಿ, ಶೇಕಡಾವಾರು, ಗುಣಾಕಾರ, ಭಾಗಾಕಾರ, ವರ್ಗ ಮೂಲಗಳು, A.P, G.P ಸೇರಿದಂತೆ ಸಂಖ್ಯಾ ಲೆಕ್ಕಾಚಾರದ ಪ್ರಶ್ನೆಗಳ ವಿಷಯದ ಮೇಲೆ ಪ್ರಶ್ನೆಗಳಿರುತ್ತವೆ. ಸರಳ ಮತ್ತು ಚಕ್ರ ಬಡ್ಡಿ, ಲಾಭ/ನಷ್ಟ ಕುರಿತ ಪ್ರಶ್ನೆಗಳೂ ಇರುತ್ತವೆ. ಕೆಲಸದ ಸಮಯಕ್ಕೆ ಸಂಬಂಧಿಸಿದ ಪ್ರಶ್ನೆಗಳು ಉದಾ: 3 ಜನರು ಒಂದು ಕೆಲಸವನ್ನು 5 ದಿನಗಳಲ್ಲಿ ಮಾಡಿದರೆ 7 ಜನರು ಆ ಕೆಲಸವನ್ನು ಮಾಡಲು ಎಷ್ಟು ಸಮಯ ತೆಗೆದುಕೊಳ್ಳುತ್ತಾರೆ ಇಂಥವೂ ಇರುತ್ತವೆ.

ಇದನ್ನೂ ಓದಿ: Job Alert: ಈಶಾನ್ಯ ರೈಲ್ವೆ ವಿಭಾಗದಿಂದ 1,104 ಅಪ್ರೆಂಟಿಸ್‌ಗಳ ನೇಮಕ; ಐಟಿಐ ಪಾಸಾದವರು ಅಪ್ಲೈ ಮಾಡಿ

ಋಣಾತ್ಮಕ ಮೌಲ್ಯಮಾಪನ ಇದೆ

ವಸ್ತುನಿಷ್ಠ ಮಾದರಿಯ ಪರೀಕ್ಷೆಗಳಲ್ಲಿಋಣಾತ್ಮಕ ಮೌಲ್ಯಮಾಪನ ಇದೆ. ಒಂದು ತಪ್ಪು ಉತ್ತರಕ್ಕೆ, ಅದಕ್ಕೆ ನಿಗದಿಪಡಿಸಿದ ಅಂಕಗಳಲ್ಲಿ 0.25 ಅಂಕಗಳನ್ನು ಕಡಿತಗೊಳಿಸಲಾಗುತ್ತದೆ. ಪ್ರಶ್ನೆ ಖಾಲಿ ಬಿಟ್ಟರೆ, ಯಾವುದೇ ಅಂಕ ಕಳೆಯುವುದಿಲ್ಲ.ಎಲ್ಲ ಹಂತದ ಋಣಾತ್ಮಕ ಮೌಲ್ಯಮಾಪನದಲ್ಲೂ ಇದೇ ನಿಯಮ ಅನ್ವಯಿಸುತ್ತದೆ.

ಆಯ್ಕೆ ವಿಧಾನ

ಹುದ್ದೆಗಳಿಗೆ ಆಯ್ಕೆ ಮಾಡುವಾಗ ಮುಖ್ಯ ಪರೀಕ್ಷೆಯಲ್ಲಿ ಕನಿಷ್ಠ ಅಂಕ ಪಡೆದಿರಬೇಕು. ಪ್ರತಿ ರಾಜ್ಯದಲ್ಲಿರುವ ಖಾಲಿ ಹುದ್ದೆಗಳನ್ನು ಆಧರಿಸಿ, ಅಭ್ಯರ್ಥಿಗಳ ತಾತ್ಕಾಲಿಕ ಪಟ್ಟಿ ತಯಾರಿಸಲಾಗುತ್ತದೆ.

  • ಆಫೀಸ್ ಅಸಿಸ್ಟೆಂಟ್ (ಮಲ್ಟಿಪರ್ಪಸ್) ಹುದ್ದೆಗೆ-ಮುಖ್ಯ ಪರೀಕ್ಷೆಯಲ್ಲಿ ಪಡೆದ ಅಂಕ ಗಳನ್ನು ಮಾತ್ರ  ಅಂತಿಮ ಮೆರಿಟ್ ಪಟ್ಟಿಗಾಗಿ ಪರಿಗಣಿಸಲಾಗುತ್ತದೆ. ಈ ಹುದ್ದೆಯ ನೇಮಕ ಪ್ರಕ್ರಿಯೆಯಲ್ಲಿ ಸಂದರ್ಶನ ಇರುವುದಿಲ್ಲ.
  • ಅಧಿಕಾರಿಗಳ ಹುದ್ದೆಗೆ ಸ್ಕೇಲ್-I ಮುಖ್ಯ ಪರೀಕ್ಷೆಯಲ್ಲಿ ಪಡೆದ ಅಂಕ ಹಾಗೂ ಸಂದರ್ಶನದಲ್ಲಿ ಪಡೆದ ಅಂಕವನ್ನು ಪರಿಗಣಿಸಿ ಅಂತಿಮ ಆಯ್ಕೆ ಪಟ್ಟಿ ಪ್ರಕಟಿಸಲಾಗುತ್ತದೆ.

ಸಂದರ್ಶನ

ಅಧಿಕಾರಿಗಳ ಹುದ್ದೆಗೆ ಮಾತ್ರ ಇದು ಅನ್ವಯಿಸುತ್ತದೆ (ಸ್ಕೇಲ್ I) ಆಫೀಸರ್ಸ್ ಸ್ಕೇಲ್-I ಹುದ್ದೆಗೆ ಮುಖ್ಯ ಪರೀಕ್ಷೆಯಲ್ಲಿ ಶಾರ್ಟ್‌ಲಿಸ್ಟ್ ಮಾಡಿದ ಅಭ್ಯರ್ಥಿಗಳನ್ನು ಸಂದರ್ಶನಕ್ಕೆ ಕರೆಯಲಾಗುವುದು. ಸಂದರ್ಶನಕ್ಕೆ ನಿಗದಿಪಡಿಸಲಾದ ಒಟ್ಟು ಅಂಕಗಳು 100. ಸಂದರ್ಶನದಲ್ಲಿ ಕನಿಷ್ಠ ಅರ್ಹತಾ ಅಂಕಗಳು ಸಾಮಾನ್ಯ ವರ್ಗಕ್ಕೆ ಶೇ40. ಎಸ್.ಸಿ/ಎಸ್.ಟಿ/ಒಬಿಸಿ/ಅಂಗವಿಕಲ ಅಭ್ಯರ್ಥಿಗಳಿಗೆ ಶೇ 35.

ಇದನ್ನೂ ಓದಿ: Job Alert: ಕೆನರಾ ಬ್ಯಾಂಕ್ ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

Continue Reading

ಶಿಕ್ಷಣ

Top 5 Engineering Courses: ಇವು ಬಹು ಬೇಡಿಕೆಯ ಟಾಪ್ 5 ಎಂಜಿನಿಯರಿಂಗ್ ಕೋರ್ಸ್‌ಗಳು

ಜೆಇಇ ಮತ್ತು ಸಿಇಟಿ ಪರೀಕ್ಷೆ ತೇರ್ಗಡೆಯಾದ ಬಳಿಕ ಮುಂದೇನು ಎನ್ನುವ ಗೊಂದಲ ಕಾಡುವುದು ಸಹಜ. ಕೆಲವೊಂದು ಎಂಜಿನಿಯರಿಂಗ್ ಕೋರ್ಸ್ ಗಳು ನಿರಂತರ ಬೇಡಿಕೆಯಲ್ಲಿದ್ದು, ಹೆಚ್ಚಿನ ಉದ್ಯೋಗಾವಕಾಶಗಳನ್ನೂ ಹೊಂದಿದೆ. ವಿದ್ಯಾರ್ಥಿಗಳ ಭವಿಷ್ಯದ ದೃಷ್ಟಿಯಿಂದ ಉತ್ತಮ ವಿಷಯಗಳನ್ನು ಸರಿಯಾದ ಸಮಯದಲ್ಲಿ ಆಯ್ಕೆ ಮಾಡುವುದು ಬಹು ಮುಖ್ಯವಾಗಿದೆ. ಸಾಕಷ್ಟು ಎಂಜಿನಿಯರಿಂಗ್ ಕೋರ್ಸ್ ಗಳು ಲಭ್ಯವಿದ್ದರೂ ಭಾರತದಲ್ಲಿ ಬಹುಕಾಲದಿಂದ ಹೆಚ್ಚು ಬೇಡಿಕೆಯಲ್ಲಿರುವ ಐದು ಎಂಜಿನಿಯರಿಂಗ್ ಕೋರ್ಸ್ ಗಳ (Top 5 Engineering Courses) ಕುರಿತು ಮಾಹಿತಿ ಇಲ್ಲಿದೆ.

VISTARANEWS.COM


on

By

Top 5 Engineering Courses
Koo

ಸಿಇಟಿ ಕೌನ್ಸೆಲಿಂಗ್‌ ಇನ್ನು ಕೆಲವೇ ದಿನಗಳಲ್ಲಿ ಶುರುವಾಗಲಿದೆ. ವಿದ್ಯಾರ್ಥಿಗಳು ಯಾವ ಎಂಜಿನಿಯರಿಂಗ್‌ ಕೋರ್ಸ್‌ಗೆ ಪ್ರವೇಶ ಪಡೆಯಬೇಕು ಎಂಬ ಯೋಚನೆಯಲ್ಲಿ ತೊಡಗಿದ್ದಾರೆ. ಭಾರತದಲ್ಲಿ (india) ಬಹು ಬೇಡಿಕೆಯಲ್ಲಿರುವ ಅಗ್ರ ಐದು ಎಂಜಿನಿಯರಿಂಗ್ ಕೋರ್ಸ್‌ಗಳು (Top 5 Engineering Courses) ಮತ್ತು ಉದ್ಯೋಗಾವಕಾಶಗಳ ಕುರಿತು ಮಾಹಿತಿ ಇಲ್ಲಿದೆ.

ಕಂಪ್ಯೂಟರ್ ವಿಜ್ಞಾನ / ಮಾಹಿತಿ ತಂತ್ರಜ್ಞಾನ

ಕಂಪ್ಯೂಟರ್ ವಿಜ್ಞಾನ ಮತ್ತು ಮಾಹಿತಿ ತಂತ್ರಜ್ಞಾನ ಎಂಜಿನಿಯರಿಂಗ್ ಭಾರತದಲ್ಲಿ ಅತ್ಯಂತ ಜನಪ್ರಿಯ ಎಂಜಿನಿಯರಿಂಗ್ ಕೋರ್ಸ್ ಆಗಿದೆ. ಕಳೆದ ದಶಕದಲ್ಲಿ ಐಟಿ ಕ್ರಾಂತಿಯ ಆಗಮನದೊಂದಿಗೆ ಸಾಫ್ಟ್‌ವೇರ್ ಇಂಜಿನಿಯರ್‌ಗಳು ಮತ್ತು ಕಂಪ್ಯೂಟರ್ ಎಂಜಿನಿಯರ್‌ಗಳ ಬೇಡಿಕೆಯು ಭಾರತದಲ್ಲಿ ಸಾಕಷ್ಟು ಪ್ರಮಾಣದಲ್ಲಿ ಏರಿಕೆಯಾಗಿದೆ.


ಕಂಪ್ಯೂಟರ್ ವಿಜ್ಞಾನ ಮತ್ತು ಮಾಹಿತಿ ತಂತ್ರಜ್ಞಾನ ಕ್ಷೇತ್ರದಲ್ಲಿ ಬಿ.ಟೆಕ್ ನಂತಹ ಪದವಿ ಮಟ್ಟದ ಎಂಜಿನಿಯರಿಂಗ್ ಪ್ರೋಗ್ರಾಂ ಎಂಜಿನಿಯರ್‌ಗಳು ಕಂಪ್ಯೂಟರ್ ಹಾರ್ಡ್‌ವೇರ್ ಮತ್ತು ಸಾಫ್ಟ್‌ವೇರ್ ಸಂಶೋಧನೆ, ಅಭಿವೃದ್ಧಿ ಮತ್ತು ಉತ್ಪಾದನಾ ಪ್ರಕ್ರಿಯೆಯನ್ನು ನಿರ್ವಹಿಸಲು ಅಗತ್ಯವಾದ ತಾಂತ್ರಿಕ ಕೌಶಲಗಳನ್ನು ಪಡೆಯಬಹುದು. ಕಂಪ್ಯೂಟರ್ ಸೈನ್ಸ್‌ನಲ್ಲಿ ಬಿ.ಟೆಕ್ ಅಥವಾ ಐಟಿಯಲ್ಲಿ ಬಿ.ಟೆಕ್ ಲೀನಿಯರ್ ಸರ್ಕ್ಯೂಟ್ರಿ, ಡೇಟಾ ಸ್ಟ್ರಕ್ಚರ್‌ಗಳು ಮತ್ತು ಡಿಜಿಟಲ್ ಸಿಸ್ಟಮ್‌ಗಳಂತಹ ವೈವಿಧ್ಯಮಯ ವಿಷಯಗಳ ಜೊತೆಗೆ ಇಂಟರ್ನೆಟ್ ತಂತ್ರಜ್ಞಾನ ಮತ್ತು ಸಂಬಂಧಿತ ಕ್ಷೇತ್ರಗಳು, ಡಿಜಿಟಲ್ ಪ್ರೋಗ್ರಾಂ ವಿನ್ಯಾಸಗಳ ಮೇಲೆ ಕಲಿಯಬಹುದು.

ಕಂಪ್ಯೂಟರ್ ಎಂಜಿನಿಯರಿಂಗ್ ಮತ್ತು ಸಾಫ್ಟ್‌ವೇರ್ ಎಂಜಿನಿಯರ್‌ಗಳಿಗೆ ಉದ್ಯೋಗಗಳ ಕೊರತೆಯಿಲ್ಲ. ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಕ್ಯಾಂಪಸ್ ಪ್ಲೇಸ್ ಡ್ರೈವ್‌ಗಳಿಂದ ಐಬಿಎಂ, ಟಿಸಿಎಸ್, ವಿಪ್ರೋ, ಮೈಕ್ರೋಸಾಫ್ಟ್ ಮತ್ತು ಗೂಗಲ್ ನಂತಹ ಉನ್ನತ ತಂತ್ರಜ್ಞಾನದ ಮೇಜರ್‌ಗಳಿಂದ ವಿದ್ಯಾರ್ಥಿಗಳನ್ನು ನೇರವಾಗಿ ನೇಮಿಸಿಕೊಳ್ಳಲಾಗುತ್ತದೆ. ಇವರಿಗೆ ಆರಂಭದಲ್ಲೇ 4.5 ಲಕ್ಷ ರೂ.ನಿಂದ 6 ಲಕ್ಷ ರೂ.ಗಳವರೆಗೆ ವೇತನವನ್ನು ನಿರೀಕ್ಷಿಸಬಹುದು.


ಎಲೆಕ್ಟ್ರಿಕಲ್ / ಎಲೆಕ್ಟ್ರಾನಿಕ್ / ಕಮ್ಯುನಿಕೇಷನ್ ಎಂಜಿನಿಯರಿಂಗ್

ಎಲೆಕ್ಟ್ರಾನಿಕ್ / ಎಲೆಕ್ಟ್ರಿಕಲ್/ಕಮ್ಯುನಿಕೇಷನ್ ಎಂಜಿನಿಯರಿಂಗ್ ವೇಗವಾಗಿ ಅಭಿವೃದ್ಧಿ ಹೊಂದುತ್ತಿರುವ ಕ್ಷೇತ್ರವಾಗಿದೆ. ಉತ್ಪಾದನೆ, ಆರೋಗ್ಯ ರಕ್ಷಣೆ, ಯಾಂತ್ರೀಕೃತಗೊಂಡ ನಿರ್ವಹಣಾ ವ್ಯವಸ್ಥೆ, ವಿದ್ಯುತ್ ಉತ್ಪಾದನೆ ಮತ್ತು ವಿತರಣೆಯಂತಹ ವಿವಿಧ ಕೈಗಾರಿಕಾ ಉಪವಿಭಾಗಗಳಲ್ಲಿ ಎಲೆಕ್ಟ್ರಿಕಲ್ ಎಂಜಿನಿಯರಿಂಗ್ ಗಳಿಗೆ ಹೆಚ್ಚಿನ ಬೇಡಿಕೆ ಇದೆ.

ಭೌತಶಾಸ್ತ್ರ ಮತ್ತು ಲೆಕ್ಕದಲ್ಲಿ ತೀವ್ರ ಆಸಕ್ತಿ ಮತ್ತು ಅರ್ಹತೆ ಹೊಂದಿರುವ ವಿದ್ಯಾರ್ಥಿಗಳು ಈ ಕ್ಷೇತ್ರವನ್ನು ಆರಿಸಿಕೊಳ್ಳಬಹುದು. ಈ ಕ್ಷೇತ್ರವು ಎಲೆಕ್ಟ್ರಾನಿಕ್ ಸಂವೇದಕಗಳು, ಸೆಮಿಕಂಡಕ್ಟರ್‌ಗಳು, ರೋಬೋಟಿಕ್ಸ್‌ನ ರೇಖೀಯ ವ್ಯವಸ್ಥೆಗಳು, ವಿದ್ಯುತ್ಕಾಂತೀಯ ಮತ್ತು ಸರ್ಕ್ಯೂಟ್ರಿಯನ್ನು ಒಳಗೊಂಡಿದೆ. ಇದರ ಹೊರತಾಗಿ ಎಲೆಕ್ಟ್ರಾನಿಕ್ ಸಂವಹನದ ಹೊಸ ಕ್ಷೇತ್ರವು ದೂರಸಂಪರ್ಕ ಉದ್ಯಮ ಮತ್ತು ಮೊಬೈಲ್ ಅಭಿವೃದ್ಧಿ ಕ್ಷೇತ್ರದಲ್ಲಿ ಸಾಕಷ್ಟು ಪ್ರಗತಿ ಸಾಧಿಸುತ್ತಿದೆ.
ಎಲೆಕ್ಟ್ರಾನಿಕ್ ಕಮ್ಯುನಿಕೇಷನ್ಸ್‌ನಲ್ಲಿ ಪದವಿಪೂರ್ವ ಬಿಟೆಕ್ ಪ್ರೋಗ್ರಾಂ ಅನ್ನು ಆರಿಸಿದರೆ ಕಮ್ಯುನಿಕೇಷನ್‌ ಎಂಜಿನಿಯರಿಂಗ್, ವಿನ್ಯಾಸ, ಸಂಕೇತ ಮತ್ತು ವ್ಯವಸ್ಥೆಗಳ ಅಭಿವೃದ್ಧಿ, ಡಿಜಿಟಲ್ ಎಲೆಕ್ಟ್ರಾನಿಕ್ಸ್, ಇಂಟಿಗ್ರೇಟೆಡ್ ಸರ್ಕ್ಯೂಟ್‌ಗಳು ಮತ್ತು ವಿಎಲ್‌ಎಸ್‌ಐಗಳ ಮೇಲೆ ಅಧ್ಯಯನವನ್ನು ಕೇಂದ್ರೀಕರಿಸುತ್ತದೆ.

ಎಲೆಕ್ಟ್ರಿಕಲ್ ಎಂಜಿನಿಯರಿಂಗ್ ಬಹಳ ಕ್ರಿಯಾತ್ಮಕ ಕ್ಷೇತ್ರವಾಗಿದ್ದು ಹಲವಾರು ಕೈಗಾರಿಕೆಗಳು ಮತ್ತು ವ್ಯಾಪಾರ ಪ್ರಕ್ರಿಯೆಗಳಲ್ಲಿ ಉದ್ಯೋಗಾವಕಾಶಗಳನ್ನು ಒದಗಿಸುತ್ತದೆ. ಮಾರುಕಟ್ಟೆಯಲ್ಲಿ ಹೆಚ್ಚಿನ ಬೇಡಿಕೆಯಲ್ಲಿರುವ ದೂರಸಂಪರ್ಕಗಳಂತಹ ನವೀನ ಸಬ್‌-ಡೊಮೇನ್‌ಗಳ ಆಗಮನವು ವೃತ್ತಿಜೀವನವನ್ನು ನಿರ್ಮಿಸಲು ಅತ್ಯಂತ ಲಾಭದಾಯಕ ಎಂಜಿನಿಯರಿಂಗ್ ಶಾಖೆಗಳಲ್ಲಿ ಇದು ಒಂದಾಗಿದೆ.

ಎಲೆಕ್ಟ್ರಿಕಲ್ ಎಂಜಿನಿಯರ್‌ಗಳಿಗೆ ಉನ್ನತ ನೇಮಕಾತಿಗಳಲ್ಲಿ ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ (BEL)ನಂತಹ ಸಾರ್ವಜನಿಕ ವಲಯ ಘಟಕಗಳು ಸೇರಿವೆ. ಎಲೆಕ್ಟ್ರಾನಿಕ್ಸ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ (ECIL), ಖಾಸಗಿ ಗ್ರಾಹಕ ಎಲೆಕ್ಟ್ರಾನಿಕ್ಸ್ ದೈತ್ಯಗಳಾದ ಇಂಟೆಲ್, ಸೋನಿ, ತೊಷಿಬಾ, ಫಿಲಿಪ್ಸ್, ನೋಕಿಯಾ, ಎಲ್ ಜಿ, ಸ್ಯಾಮ್ ಸಂಗ್ ನಲ್ಲಿ ಸಾಕಷ್ಟು ಉದ್ಯೋಗಾವಕಾಶವನ್ನು ಒದಗಿಸುತ್ತದೆ. ಹೊಸಬರು ವರ್ಷಕ್ಕೆ 4ರಿಂದ 6 ಲಕ್ಷ ರೂ.ವರೆಗೆ ವೇತನವನ್ನು ನಿರೀಕ್ಷಿಸಬಹುದು.


ಮೆಕ್ಯಾನಿಕಲ್ ಎಂಜಿನಿಯರಿಂಗ್

ಮೆಕ್ಯಾನಿಕಲ್ ಎಂಜಿನಿಯರಿಂಗ್ ಅತ್ಯಂತ ಹಳೆಯ ಮತ್ತು ಇಂದಿಗೂ ಬಹು ಬೇಡಿಕೆಯಲ್ಲಿರುವ ಕೋರ್ಸ್. ಮೆಕ್ಯಾನಿಕಲ್ ಎಂಜಿನಿಯರ್ ಗಳು ಎಲ್ಲಾ ಪ್ರಮುಖ ಕೈಗಾರಿಕಾ ಪ್ರಕ್ರಿಯೆಗಳಿಗೂ ಅಗತ್ಯವಾಗಿರುತ್ತಾರೆ.

ಮೆಕ್ಯಾನಿಕಲ್ ಎಂಜಿನಿಯರಿಂಗ್ ವಸ್ತುಗಳ ಯಂತ್ರಶಾಸ್ತ್ರದ ಅಧ್ಯಯನವನ್ನು ಒಳಗೊಂಡಿರುತ್ತದೆ. ಅದು ವಿನ್ಯಾಸ, ನಿರ್ಮಾಣ, ವಾಸ್ತುಶಿಲ್ಪ, ತಂತ್ರಜ್ಞಾನ, ಯಾಂತ್ರೀಕೃತಗೊಂಡ ಮತ್ತು ಇತರ ಹಲವು ಪರಿಕಲ್ಪನೆಗಳ ವಿಷಯದ ಮೇಲೆ ಅಧ್ಯಯನವನ್ನು ಕೇಂದ್ರೀಕರಿಸುತ್ತದೆ. ಮೆಕ್ಯಾನಿಕಲ್ ಎಂಜಿನಿಯರ್‌ಗಳು ಯಂತ್ರಶಾಸ್ತ್ರದ ಮೂಲಕ ಚಲಿಸುವ ಯಾವುದನ್ನಾದರೂ ಮತ್ತು ಎಲ್ಲವನ್ನೂ ವಿನ್ಯಾಸಗೊಳಿಸಲು, ಅಭಿವೃದ್ಧಿಪಡಿಸಲು, ನಿರ್ಮಿಸಲು ಮತ್ತು ನಿರ್ವಹಿಸಲು ಸಾಧ್ಯವಾಗುವಂತೆ ತರಬೇತಿ ಪಡೆಯುತ್ತಾರೆ. ಭೌತಶಾಸ್ತ್ರ ಮತ್ತು ಗಣಿತಶಾಸ್ತ್ರದ ಸಂಕೀರ್ಣ ಸಂಯೋಜನೆಯನ್ನು ನಿಭಾಯಿಸಲು ತೀವ್ರ ಆಸಕ್ತಿ ಮತ್ತು ಸಾಮರ್ಥ್ಯವನ್ನು ಹೊಂದಿರುವ ವಿದ್ಯಾರ್ಥಿಗಳು ಈ ವಿಷಯವನ್ನು ಆಯ್ಕೆ ಮಾಡಿಕೊಳ್ಳಬಹುದು.

ಮೆಕ್ಯಾನಿಕಲ್ ಎಂಜಿನಿಯರಿಂಗ್‌ನಲ್ಲಿ ಬಿ.ಟೆಕ್ ಥರ್ಮೋಡೈನಾಮಿಕ್ಸ್, ಫ್ಲೂಯಿಡ್ ಮೆಕ್ಯಾನಿಕ್ಸ್, ಚಲನೆ ಮತ್ತು ಆವೇಗ, ರೊಬೊಟಿಕ್ಸ್, ಕಂಪ್ಯೂಟರ್ ಅಪ್ಲಿಕೇಶನ್‌ಗಳು, ದಹನ ಎಂಜಿನ್ ವಿನ್ಯಾಸ, ವಸ್ತು ಸೂಕ್ಷ್ಮ-ನಿರ್ಮಾಣ, ಕಂಪ್ಯೂಟರ್ ಸಿಸ್ಟಮ್ ವಿನ್ಯಾಸ, ಬಯೋಮೆಕಾನಿಕ್ಸ್ ಮತ್ತು ಇತರವುಗಳಂತಹ ವಿವಿಧ ಉಪ-ವಿಷಯಗಳನ್ನು ಇದು ಕಲಿಯಲು ಅವಕಾಶ ಕಲ್ಪಿಸುತ್ತದೆ.

ಮೆಕ್ಯಾನಿಕಲ್ ಎಂಜಿನಿಯರ್ ಆಗಿ ಉದ್ಯೋಗವನ್ನು ಹುಡುಕುವುದು ಕಠಿಣ ಕೆಲಸವಲ್ಲ. ಏಕೆಂದರೆ ವಿಷಯವು ಬಹುತೇಕ ಎಲ್ಲಾ ಪ್ರಮುಖ ಉತ್ಪಾದನೆ ಮತ್ತು ಸೇವಾ ಕ್ಷೇತ್ರಗಳಲ್ಲಿ ಅವಕಾಶವನ್ನು ಹೊಂದಿದೆ. ಭಾರತದಲ್ಲಿ ಮಹೀಂದ್ರ, ಜನರಲ್ ಮೋಟಾರ್ಸ್, ಫಿಯೆಟ್, ಅಶೋಕ ಲೇಲ್ಯಾಂಡ್ ಮತ್ತು ಟಾಟಾ ಮೋಟಾರ್ಸ್, ಎಬಿಬಿ, ಇಸ್ರೋ, ಡಿಆರ್ ಡಿಒ , ರಿಲಯನ್ಸ್ ಇಂಡಸ್ಟ್ರೀಸ್ ಮತ್ತು ರಿಲಯನ್ಸ್ ಪವರ್ ಲಿಮಿಟೆಡ್ ಸೇರಿದಂತೆ ಇನ್ನೂ ಹಲವಾರು ಸುಪ್ರಸಿದ್ದ ಕಂಪನಿಗಳಲ್ಲಿ ಹೆಚ್ಚಿನ ಅವಕಾಶವನ್ನು ಹೊಂದಿದೆ. ಮೆಕ್ಯಾನಿಕಲ್ ಎಂಜಿನಿಯರ್‌ಗಳು 1.3 ರಿಂದ 3.5 ಲಕ್ಷ ರೂ.ವರೆಗೆ ವೇತನವನ್ನು ನಿರೀಕ್ಷಿಸಬಹುದು.


ಸಿವಿಲ್ ಎಂಜಿನಿಯರಿಂಗ್

ಸಿವಿಲ್ ಎಂಜಿನಿಯರಿಂಗ್ ಕೂಡ ಹಳೆಯ ಎಂಜಿನಿಯರಿಂಗ್ ವಿಭಾಗವಾಗಿದೆ. ಸಿವಿಲ್ ಎಂಜಿನಿಯರಿಂಗ್‌ನಲ್ಲಿ ಕಲಿಯುವ ಸಾಕಷ್ಟು ವಿಷಯಗಳಿವೆ. ಸಿವಿಲ್ ಎಂಜಿನಿಯರಿಂಗ್ ಅತ್ಯಂತ ವೈವಿಧ್ಯಮಯ ಎಂಜಿನಿಯರಿಂಗ್ ಶಾಖೆಗಳಲ್ಲಿ ಒಂದಾಗಿದೆ. ಸಿವಿಲ್ ಎಂಜಿನಿಯರಿಂಗ್ ರಚನೆ ವಿನ್ಯಾಸ, ರಚನಾತ್ಮಕ ಯಂತ್ರಶಾಸ್ತ್ರ, ದ್ರವ ಯಂತ್ರಶಾಸ್ತ್ರ, ಮಣ್ಣಿನ ಯಂತ್ರಶಾಸ್ತ್ರ, ವಾಟರ್ ರಿಸೋರ್ಸ್ ಎಂಜಿನಿಯರಿಂಗ್ ಮತ್ತು ಹೈಡ್ರಾಲಿಕ್ಸ್‌ನಂತಹ ವಿವಿಧ ಪರಿಕಲ್ಪನೆಗಳು ಮತ್ತು ವಿಷಯಗಳನ್ನು ಒಳಗೊಂಡಿದೆ.

ಭಾರತದಲ್ಲಿ ಸಿವಿಲ್ ಎಂಜಿನಿಯರ್‌ಗಳಿಗೆ ಉದ್ಯೋಗವಕಾಶ ಸಾಕಷ್ಟಿದೆ. ವಸತಿ ಸೌಕರ್ಯಗಳಿಗೆ ಹೆಚ್ಚುತ್ತಿರುವ ಬೇಡಿಕೆ ಮತ್ತು ಆಧುನಿಕ ಮೂಲಸೌಕರ್ಯ ಯೋಜನೆಗಳಿಗೆ ಸರ್ಕಾರದ ಉತ್ತೇಜನದೊಂದಿಗೆ ಸಿವಿಲ್ ಎಂಜಿನಿಯರ್‌ಗಳಿಗೆ ಲಭ್ಯವಿರುವ ಉದ್ಯೋಗಾವಕಾಶಗಳಲ್ಲಿ ಗಮನಾರ್ಹ ಏರಿಕೆ ಕಂಡುಬಂದಿದೆ. ಭಾರತೀಯ ರೈಲ್ವೇ, ಲೋಕೋಪಯೋಗಿ ಇಲಾಖೆ, ಎಂಜಿನಿಯರ್ಸ್ ಇಂಡಿಯಾ ಲಿಮಿಟೆಡ್, ಡಿಆರ್ ಒಡಿ ಮತ್ತು ಇಸ್ರೋ ನಂತಹ ಸಾರ್ವಜನಿಕ ವಲಯದಲ್ಲಿ ಖಾಸಗಿ ವಲಯದ ಘಟಕಗಳಾದ ಲಾರ್ಸೆನ್ ಮತ್ತು ಟೂಬ್ರೊ, ಡಿಎಲ್‌ಎಫ್ ನಲ್ಲಿ ಹೆಚ್ಚಿನ ಬೇಡಿಕೆ ಇದೆ. ಸಿವಿಲ್ ಎಂಜಿನಿಯರಿಂಗ್ ಪದವೀಧರರು ಪ್ರಾರಂಭದಲ್ಲಿ ತಿಂಗಳಿಗೆ 20,000ರಿಂದ 30,000 ರೂ. ವರೆಗೆ ಸಂಬಳವನ್ನು ನಿರೀಕ್ಷಿಸಬಹುದು. ಭಾರತದಲ್ಲಿ ಈಗ ಅಭಿವೃದ್ಧಿ ಕಾಮಗಾರಿಗಳು ವೇಗವಾಗಿ ನಡೆಯುತ್ತಿರುವುದರಿಂದ ಸಿವಿಲ್‌ ಎಂಜಿನಿಯರ್‌ಗಳಿಗೆ ಭಾರಿ ಬೇಡಿಕೆ ಇದೆ. ಅನುಭವ ಗಳಿಸುತ್ತಿದ್ದಂತೆ ಮಾಸಿಕ ಲಕ್ಷಕ್ಕೂ ಹೆಚ್ಚಿನ ಸಂಬಳ ಪಡೆಯಬಹುದು.

ಇದನ್ನೂ ಓದಿ: ECE v/s CSE: ಕಂಪ್ಯೂಟರ್ ಸೈನ್ಸ್, ಎಲೆಕ್ಟ್ರಾನಿಕ್ಸ್ ಅಂಡ್‌ ಕಮ್ಯುನಿಕೇಷನ್; ಯಾವುದು ಉತ್ತಮ ಆಯ್ಕೆ?


ಕೆಮಿಕಲ್ ಎಂಜಿನಿಯರಿಂಗ್

ಕೆಮಿಕಲ್ ಎಂಜಿನಿಯರಿಂಗ್ ಭಾರತದಲ್ಲಿ ಬಹು ಬೇಡಿಕೆಯಲ್ಲಿರುವ ಅಗ್ರ 5 ಎಂಜಿನಿಯರಿಂಗ್ ಶಾಖೆಗಳಲ್ಲಿ ಒಂದಾಗಿದೆ. ಇದಕ್ಕೆ ಮುಖ್ಯ ಕಾರಣ ರಾಸಾಯನಿಕ, ಸಂಸ್ಕರಣೆ, ಆಹಾರ ಸಂಸ್ಕರಣೆ ಮತ್ತು ಔಷಧೀಯ ಕ್ಷೇತ್ರಗಳಂತಹ ಕೈಗಾರಿಕೆಗಳಲ್ಲಿ ರಾಸಾಯನಿಕ ಎಂಜಿನಿಯರ್‌ಗಳಿಗೆ ಬೇಡಿಕೆ ಹೆಚ್ಚಾಗಿರುವುದು.
ಕೆಮಿಕಲ್ ಎಂಜಿನಿಯರಿಂಗ್ ವಿಷಯದ ವ್ಯಾಪ್ತಿ ವಿಸ್ತಾರವಾಗಿದೆ. ಹಲವಾರು ವಲಯಗಳಲ್ಲಿ ಇದಕ್ಕೆ ಬೇಡಿಕೆ ಇದೆ. ರಾಸಾಯನಿಕ ಎಂಜಿನಿಯರಿಂಗ್‌ನಲ್ಲಿ ರಾಸಾಯನಿಕಗಳು, ಸಾವಯವ ಮತ್ತು ಅಜೈವಿಕ ರಸಾಯನಶಾಸ್ತ್ರ, ಪೆಟ್ರೋಲಿಯಂ ಯೋಜನೆಗಳು, ಔಷಧೀಯ ರಸಾಯನಶಾಸ್ತ್ರ, ರಾಸಾಯನಿಕ ಎಂಜಿನಿಯರಿಂಗ್ ಪ್ರಕ್ರಿಯೆ ಕುರಿತು ಅಧ್ಯಯನ ಮಾಡಬಹುದು.

ಅತ್ಯುತ್ತಮ ಉದ್ಯೋಗಾವಕಾಶಗಳನ್ನು ಹೊಂದಿರುವ ಕೆಮಿಕಲ್ ಎಂಜಿನಿಯರ್‌ ಪದವೀಧರರಿಗೆ ಒಎನ್‌ಜಿಸಿ, ಎಸ್ಸಾರ್ ಆಯಿಲ್ ಲಿಮಿಟೆಡ್, ಗುಜರಾತ್ ಗ್ಯಾಸ್ ಕಂಪೆನಿ ಲಿಮಿಟೆಡ್, ಇಂಡೋ ಗಲ್ಫ್ ಫರ್ಟಿಲೈಸರ್ಸ್ ಲಿಮಿಟೆಡ್, ರಿಲಯನ್ಸ್ ಇಂಡಸ್ಟ್ರೀಸ್, ಕೋರಮಂಡಲ್ ಫರ್ಟಿಲೈಸರ್ಸ್ ಲಿಮಿಟೆಡ್ ಮತ್ತು ಇತರ ಹಲವು ಕಂಪೆನಿಗಳಲ್ಲಿ ಉತ್ತಮ ಅವಕಾಶಗಳಿವೆ. ಕೆಮಿಕಲ್ ಎಂಜಿನಿಯರಿಂಗ್ ಪದವೀಧರರು ಪ್ರಾರಂಭದಲ್ಲಿ ತಿಂಗಳಿಗೆ 15,000 ರಿಂದ 25,000 ರೂ. ವೇತನವನ್ನು ನಿರೀಕ್ಷಿಸಬಹುದು. ಈ ಉದ್ಯಮ ವೇಗವಾಗಿ ಬೆಳೆಯುತ್ತಿರುವುದರಿಂದ ಸಾಕಷ್ಟು ಉತ್ತಮ ಸಂಬಳ ಪಡೆಯಬಹುದಾಗಿದೆ.

Continue Reading
Advertisement
Rain Tragedy
ಪ್ರಮುಖ ಸುದ್ದಿ4 hours ago

Rain Tragedy: ಪ್ರವಾಸಿಗರ ಕಣ್ಣಮುಂದೆಯೇ ಜಲಪಾತದಲ್ಲಿ ಕೊಚ್ಚಿ ಹೋದ ಒಂದೇ ಕುಟುಂಬದ 7 ಮಂದಿ; ಇಲ್ಲಿದೆ ವಿಡಿಯೊ

T20 World Cup 2024
ಪ್ರಮುಖ ಸುದ್ದಿ4 hours ago

T20 World Cup 2024 : ವೆಸ್ಟ್​ ಇಂಡೀಸ್​ನಲ್ಲಿ ಅಪಾಯಕಾರಿ ಚಂಡಮಾರುತದಲ್ಲಿ ಸಿಲುಕಿಕೊಂಡ ಚಾಂಪಿಯನ್ ಭಾರತ ತಂಡ

Rohit Sharma
ಪ್ರಮುಖ ಸುದ್ದಿ5 hours ago

Rohit Sharma : ತಲೆ ಪಕ್ಕದಲ್ಲೇ ಟ್ರೋಫಿ ಇಟ್ಟುಕೊಂಡು ನಿದ್ದೆ ಮಾಡಿದ ರೋಹಿತ್ ಶರ್ಮಾ

VSK Media Awards 2024
ಬೆಂಗಳೂರು6 hours ago

VSK Media Awards 2024: ಲೋಕಹಿತಕ್ಕಾಗಿ ಪತ್ರಿಕೋದ್ಯಮ ಶ್ರಮಿಸಬೇಕು: ಪ್ರಫುಲ್ಲ ಕೇತ್ಕರ್

NIA Raid
ದೇಶ6 hours ago

NIA Raid: ಹಿಜ್ಬು-ಉತ್‌-ತಹ್ರೀರ್‌ ಉಗ್ರ ಸಂಘಟನೆ ಜೊತೆ ನಂಟು-10 ಕಡೆಗಳಲ್ಲಿ NIA ರೇಡ್‌; ಶಂಕಿತ ಉಗ್ರರು ಅರೆಸ್ಟ್‌

Basavakalyan News
ಬೀದರ್‌6 hours ago

Basavakalyan News: ರಾತ್ರಿ ಮಣ್ಣಲ್ಲಿ ಹೂತಿದ್ದ ಮಗು ಬೆಳಗ್ಗೆ ಜೋಕಾಲಿಯಲ್ಲಿ ಪ್ರತ್ಯಕ್ಷ!

T20 World Cup
ಪ್ರಮುಖ ಸುದ್ದಿ7 hours ago

T20 World Cup 2024 : ವಿಶ್ವ ಚಾಂಪಿಯನ್ ಭಾರತ ತಂಡಕ್ಕೆ ಸಿಗಲಿದೆ ಪ್ರಧಾನಿ ಮೋದಿಯ ಭರ್ಜರಿ ಆತಿಥ್ಯ

Goldman of Bihar
ವೈರಲ್ ನ್ಯೂಸ್7 hours ago

Goldman of Bihar: ಈತ ಬಂಗಾರದ ಮನುಷ್ಯ! ಕೊರಳಲ್ಲಿದೆ 5 ಕೆಜಿ ಚಿನ್ನ! ಬೈಕ್‌ನಲ್ಲೂ ಇದೆ ಬಂಗಾರ!

Lacchi Poojarthi
ಕರ್ನಾಟಕ7 hours ago

Lacchi Poojarthi: ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರ ತಾಯಿ ನಿಧನ

T20 World Cup 2024
ಪ್ರಮುಖ ಸುದ್ದಿ7 hours ago

T20 World Cup 2024 : ವಿಶ್ವ ಕಪ್​ ಗೆದ್ದ ಭಾರತ ತಂಡಕ್ಕೆ ಬರೋಬ್ಬರಿ 125 ಕೋಟಿ ರೂ. ಬಹುಮಾನ ಘೋಷಿಸಿದ ಬಿಸಿಸಿಐ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Weather Forecast
ಮಳೆ9 hours ago

Karnataka Weather : ಬೆಂಗಳೂರು, ಕಲಬುರಗಿ ಸೇರಿದಂತೆ ಹಲವೆಡೆ ವರ್ಷಧಾರೆ; ನಾಳೆಗೂ ಮಳೆ ಅಲರ್ಟ್‌

Actor Darshan
ಬೆಂಗಳೂರು14 hours ago

Actor Darshan : ಖೈದಿ ನಂ.6106ಕ್ಕೆ ಡಿಮ್ಯಾಂಡ್‌! ದರ್ಶನ್‌ ಫ್ಯಾನ್ಸ್‌ಗೆ ಕಾನೂನು ಕಂಟಕ, ರೂಲ್ಸ್‌ ಬ್ರೇಕ್‌ ಮಾಡಿದ್ರೆ ಬೀಳುತ್ತೆ ಕೇಸ್‌‌!

karnataka weather Forecast
ಮಳೆ1 day ago

Karnataka Weather : ಮಳೆಗೆ ಸ್ಕಿಡ್‌ ಆಗಿ ಹೇಮಾವತಿ ನದಿಗೆ ಹಾರಿದ ಕಾರು; ಕರಾವಳಿಗೆ ಎಚ್ಚರಿಕೆ ಕೊಟ್ಟ ತಜ್ಞರು

karnataka Rain
ಮಳೆ2 days ago

Karnataka Rain: ಭಾರಿ ಮಳೆಗೆ ಮನೆಗಳ ಗೋಡೆ ಕುಸಿತ; ಕೂದಲೆಳೆ ಅಂತರದಲ್ಲಿ ವೃದ್ಧ ಪಾರು

karnataka Weather Forecast
ಮಳೆ2 days ago

Karnataka Weather : ಅಬ್ಬಬ್ಬಾ.. ಮುಲ್ಕಿಯಲ್ಲಿ 30 ಸೆಂ.ಮೀ ಮಳೆ ದಾಖಲು; ವಾರಾಂತ್ಯದಲ್ಲೂ ಭಾರಿ ವರ್ಷಧಾರೆ

karnataka Rain
ಮಳೆ3 days ago

Karnataka Rain : ಭಾರಿ ಮಳೆಗೆ ಪಾತಾಳ ಸೇರಿದ ಬಾವಿ; ಅಲೆಗಳ ಹೊಡೆತಕ್ಕೆ ಸಮುದ್ರಪಾಲಾದ ಮನೆ

Karnataka Weather Forecast
ಮಳೆ3 days ago

Karnataka Weather : ಭಾರಿ ಮಳೆ ಹಿನ್ನೆಲೆ ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್; ಶುಕ್ರವಾರವೂ ಶಾಲೆಗಳಿಗೆ ರಜೆ ಘೋಷಣೆ

karnataka Weather Forecast
ಮಳೆ3 days ago

Karnataka Weather : ಭಾರಿ ಮಳೆಗೆ ಸೇತುವೆಯಿಂದ ಹೊಳೆಗೆ ಬಿದ್ದ ಕಾರು; ಮರ ಹಿಡಿದು ಪ್ರಾಣ ಉಳಿಸಿಕೊಂಡ ಸವಾರರು

Heart Attack
ಕೊಡಗು3 days ago

Heart Attack : ಕೊಡಗಿನಲ್ಲಿ ಹೃದಯಾಘಾತಕ್ಕೆ ಯುವತಿ ಬಲಿ; ಹೆಚ್ಚಾಯ್ತು ಅಲ್ಪಾಯುಷ್ಯದ ಭಯ

karnataka Rains Effected
ಮಳೆ4 days ago

Karnataka Rain : ಧಾರಾಕಾರ ಮಳೆಗೆ ಸಡಿಲಗೊಂಡ ಗುಡ್ಡಗಳು; ಧರೆ ಕುಸಿದು ಮಣ್ಣಿನಡಿ ಸಿಲುಕಿದ ಇಬ್ಬರು ಮಕ್ಕಳು

ಟ್ರೆಂಡಿಂಗ್‌