Urfi Javed | ಮೊಬೈಲ್‌ಗಳಿಂದ ಮಾನ ಮುಚ್ಚಿಕೊಂಡ ಉರ್ಫಿ: ʻಲ್ಯಾಪ್‌ಟಾಪ್‌ ಇನ್ಮುಂದೆ ಸ್ಕರ್ಟ್‌ʼ ಅಂದ್ರು ನೆಟ್ಟಿಗರು! - Vistara News

ಬಾಲಿವುಡ್

Urfi Javed | ಮೊಬೈಲ್‌ಗಳಿಂದ ಮಾನ ಮುಚ್ಚಿಕೊಂಡ ಉರ್ಫಿ: ʻಲ್ಯಾಪ್‌ಟಾಪ್‌ ಇನ್ಮುಂದೆ ಸ್ಕರ್ಟ್‌ʼ ಅಂದ್ರು ನೆಟ್ಟಿಗರು!

ಹೊಸ ವಿಡಿಯೊ ಒಂದನ್ನು ಉರ್ಫಿ (Urfi Javed)ಇನ್‌ಸ್ಟಾದಲ್ಲಿ ಶೇರ್‌ ಮಾಡಿದ್ದಾರೆ. ಇದೀಗ ನೆಟ್ಟಿಗರು ಉರ್ಫಿ ವಿರುದ್ಧ ಮನಬಂದಂತೆ ಕಮೆಂಟ್‌ ಮಾಡಿದ್ದಾರೆ.

VISTARANEWS.COM


on

Urfi Javed
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಬೆಂಗಳೂರು : ಬಾಲಿವುಡ್‌ನ ಕಾಂಟ್ರೋವರ್ಸಿಯಲ್ ಕ್ವೀನ್ ಹಾಗೂ ಹಿಂದಿ ಬಿಗ್ ಬಾಸ್ OTT ಸೀಸನ್ 1ರ ಸ್ಪರ್ಧಿ ಉರ್ಫಿ ಜಾವೇದ್ (Urfi Javed) ತಮ್ಮ ಉಡುಗೆಗಳಿಂದಲೇ ಸದ್ದು ಮಾಡುತ್ತಿರುತ್ತಾರೆ. ಈಗಾಗಲೇ ಉರ್ಫಿ ತುಂಡು ಬಟ್ಟೆಯ ವಿಚಾರಕ್ಕಾಗಿ ಮುಂಬೈ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಇದರ ಬೆನ್ನಲ್ಲೇ ಹೊಸ ವಿಡಿಯೊ ಒಂದನ್ನು ಉರ್ಫಿ ಇನ್‌ಸ್ಟಾದಲ್ಲಿ ಶೇರ್‌ ಮಾಡಿದ್ದು, ಚಾರ್ಜಿಂಗ್ ವೈರ್‌ಗಳೊಂದಿಗೆ ತೂಗಾಡುತ್ತಿರುವ ಮೊಬೈಲ್‌ಗಳನ್ನು ಒಳ ಉಡುಪಿನ ರೀತಿಯಲ್ಲಿ ಧರಿಸಿಕೊಂಡಿದ್ದಾರೆ.

ಇನ್‌ಸ್ಟಾದಲ್ಲಿ ಪೋಸ್ಟ್‌ ಹಂಚಿಕೊಂಡ ಉರ್ಫಿ ಜಾವೇದ್‌ ʻʻಮೊಬೈಲ್‌ ಸಂಪೂರ್ಣವಾಗಿ ಚಾರ್ಜ್‌ ಮಾಡಲಾಗಿದೆʼʼಎಂದು ಶೀರ್ಷಿಕೆ ನೀಡಿದ್ದಾರೆ. ಇದೀಗ ನೆಟ್ಟಿಗರು ಈ ಪೋಸ್ಟ್‌ಗೆ ತಮಾಷೆಯಾಗಿ ಕಮೆಂಟ್‌ ಮಾಡಿದ್ದು ಉರ್ಫಿ ಅವರ ಕಾಲೆಳೆದಿದ್ದಾರೆ. ಅದರಲ್ಲಿ ಒಬ್ಬರು ʻʻನನ್ನ ಮೊಬೈಲ್‌ ವಾಪಸ್‌ ಕೊಡಿʼʼಎಂದು ಬರೆದರೆ, ಇನ್ನೊಬ್ಬರು ʻʻಮೊಬೈಲ್‌ ನಂಬರ್‌ ಏನಿದೆ? ನಾನು ಯಾವ ನಂಬರ್‌ಗೆ ಕರೆ ಮಾಡಲಿ?ʼʼಎಂದು ಕಮೆಂಟ್‌ ಮಾಡಿದ್ದಾರೆ. ಮತ್ತೊಬ್ಬರು ʻʻಪ್ಯಾಂಟ್‌ ಯಾಕೆ ಧರಿಸಿದ್ದೀರಿ, ಲ್ಯಾಪ್‌ ಟಾಪ್‌ ಅನ್ನೇ ಸ್ಕರ್ಟ್‌ ತರಹ ಧರಿಸಬಹುದಿತ್ತುʼʼಎಂದು ಕಮೆಂಟ್‌ ಮಾಡಿದ್ದಾರೆ. ಹಾಗೇ ʻʻಮೊಬೈಲ್‌ ಚಾರ್ಜ್‌ ಆಗಿದೆ ಹೌದು, ವಾಲ್‌ಪೇಪರ್‌ ಕಾಣುತ್ತಿಲ್ಲʼʼ ಎಂದು ನೆಟ್ಟಿಗರು ಮನಬಂದಂತೆ ಕಮೆಂಟ್‌ ಮಾಡಿದ್ದಾರೆ.

ಇದನ್ನೂ ಓದಿ | Urfi Javed | ʻಅತ್ಯಾಚಾರಿಗಳ ಮೇಲೆ ದೂರು ನೀಡಿ, ನನ್ನ ಮೇಲಲ್ಲʼ: ಉರ್ಫಿ ಜಾವೇದ್ ಗರಂ ಆಗಿದ್ಯಾಕೆ?

ದೂರು ದಾಖಲಾದ್ರೂ ಬುದ್ಧಿ ಬರ್ತಿಲ್ಲ ಅಂದ್ರು ಟ್ರೋಲಿಗರು!
ಈಗಾಗಲೇ ಉರ್ಫಿ ತುಂಡು ಬಟ್ಟೆಯ ವಿಚಾರಕ್ಕಾಗಿ ಮುಂಬೈ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಇದರ ಬೆನ್ನಲ್ಲೇ ಯುಟ್ಯೂಬರ್‌, ಕಂಟೆಂಟ್ ಕ್ರಿಯೇಟರ್‌ ಆಗಿರುವ ಹಿಂದೂಸ್ತಾನಿ ಭಾವು ಅವರು ಉರ್ಫಿ ಜಾವೇದ್‌ ಬಗ್ಗೆ ಮಾತನಾಡಿದ್ದರು. ವಿಡಿಯೊದಲ್ಲಿ ಉರ್ಫಿ ಜಾವೇದ್‌ ಕುರಿತು ಹಿಂದೂಸ್ತಾನಿ ಭಾವು ʻʻಉರ್ಫಿ ತುಂಡು ಬಟ್ಟೆ ಹಾಕುವುದನ್ನು ನಿಲ್ಲಿಸಬೇಕು. ಇದು ಭಾರತದ ಸಂಸ್ಕೃತಿಗೆ ವಿರುದ್ಧವಾಗಿದೆ. ಅವರು ಸುಧಾರಿಸದೇ ಇದ್ದರೆ ಅಗತ್ಯ ಕ್ರಮ ಕೈಗೊಳ್ಳಲಾಗುವುದುʼʼ ಎಂದು ಹೇಳಿದ್ದರು. ಈ ಬಗ್ಗೆ ಉರ್ಫಿ ಜಾವೇದ್‌ ಗರಂ ಆಗಿಯೇ ಪ್ರತಿಕ್ರಿಯೆ ನೀಡಿದ್ದರು. ʻʻನೀವು ನಿಮ್ಮ ಬೈಗುಳದಿಂದ ಎಷ್ಟು ಜನರು ಸುಧಾರಿಸಿದ್ದಾರೆ? ನೀವು ನನಗೆ ಬಹಿರಂಗವಾಗಿ ಬೆದರಿಕೆ ಹಾಕಿದ್ದೀರಿ. ನಿಮ್ಮನ್ನು ನಾನು ಜೈಲಿಗೆ ಕಳುಹಿಸಬಲ್ಲೆʼʼಎಂದು ಉರ್ಫಿ ವಾರ್ನಿಂಗ್ ಕೊಟ್ಟಿದ್ದರು.

ಅತ್ಯಾಚಾರಿಗಳ ವಿರುದ್ಧ ದೂರು ನೀಡಿ!
ಈ ಹಿಂದೆ ಅಷ್ಟೇ ಉರ್ಫಿ ಜಾವೇದ್ ಮುಂಬೈ ಬೀದಿಯಲ್ಲಿ ಬಿಕಿನಿ ಧರಿಸಿ ಓಡಾಡಿದರು ಎನ್ನುವ ಕಾರಣಕ್ಕಾಗಿ ಮುಂಬೈ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಈ ವಿಷಯ ಗೊತ್ತಾಗುತ್ತಿದ್ದಂತೆ ಉರ್ಫಿ ಜಾವೇದ್ ಗರಂ ಆಗಿದ್ದರು. ʻನನ್ನ ದೇಹ, ನನ್ನ ಇಷ್ಟ. ಅತ್ಯಾಚಾರಿಗಳ ಮೇಲೆ ದೂರು ನೀಡಿ, ನನ್ನ ಮೇಲಲ್ಲʼ ಎಂದು ದೂರು ನೀಡಿದವರ ವಿರುದ್ಧ ಆಕ್ರೋಶ ಹೊರ ಹಾಕಿದ್ದರು.

ಇದನ್ನೂ ಓದಿ | Urfi Javed | ಜೈಲಿಗೆ ಕಳುಹಿಸಬಲ್ಲೆ: ಹಿಂದೂಸ್ತಾನಿ ಭಾವುಗೆ ಖಡಕ್‌ ವಾರ್ನಿಂಗ್‌ ಕೊಟ್ಟ ಉರ್ಫಿ ಜಾವೇದ್!

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಬಾಲಿವುಡ್

Yami Gautam: ನಟಿ ಯಾಮಿ ಗೌತಮ್‌ಗೆ ಗಂಡು ಮಗು; ಕಂದಮ್ಮನ ಹೆಸರೇನು?

Yami Gautam: ಉರಿ: ದಿ ಸರ್ಜಿಕಲ್ ಸ್ಟ್ರೈಕ್’ ಚಿತ್ರಕ್ಕೆ ಆದಿತ್ಯಾ ಧಾರ್ ಆಕ್ಷನ್ ಕಟ್ ಹೇಳಿದ್ದರು. ಚಿತ್ರದ ಮುಖ್ಯ ಪಾತ್ರದಲ್ಲಿ ಕೂಡ ಯಾಮಿ ಮಿಂಚಿದ್ದರು. ಕನ್ನಡದ ‘ಉಲ್ಲಾಸ ಉತ್ಸಾಹ’ ಆಕೆ ನಟಿಸಿದ ಮೊದಲ ಸಿನಿಮಾ. ಬಾಲಿವುಡ್‌ನಲ್ಲಿ ‘ವಿಕ್ಕಿ ಡೋನರ್’ ಚಿತ್ರದಲ್ಲಿ ಮೊದಲಿಗೆ ನಟಿಸಿದ್ದರು.

VISTARANEWS.COM


on

Yami Gautam welcome baby boy
Koo
ನಟಿ ಯಾಮಿ ಗೌತಮ್‌ (Yami Gautam) ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಮಗುವಿಗೆ ನಾಮಕರಣ ಮಾಡಿ ಈ ವಿಚಾರವನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ಅಕ್ಷಯ ತೃತೀಯ ದಿನವೇ(ಮೇ 10) ಮಗುವಿಗೆ ಜನ್ಮ ನೀಡಿದ್ದು ಇದೀಗ ಆ ವಿಚಾರ ಬಹಿರಂಗಪಡಿಸಿದ್ದಾರೆ.

ʻʻಪೋಷಕರಾಗಿ ಈ ಸುಂದರ ಪ್ರಯಾಣವನ್ನು ನಾವು ಪ್ರಾರಂಭಿಸಿದಾಗ, ನಮ್ಮ ಮಗನಿಗಾಗಿ ಕಾಯುತ್ತಿರುವ ಉಜ್ವಲ ಭವಿಷ್ಯವನ್ನು ನಾವು ಕುತೂಹಲದಿಂದ ನಿರೀಕ್ಷಿಸುತ್ತೇವೆ. ಅವನು ಸಾಧಿಸುವ ಪ್ರತಿ ಮೈಲುಗಲ್ಲು, ಅವರು ನಮ್ಮ ಇಡೀ ಕುಟುಂಬಕ್ಕೆ ಮತ್ತು ನಮ್ಮ ಪ್ರೀತಿಯ ರಾಷ್ಟ್ರಕ್ಕೆ ಹೆಮ್ಮೆಯ ದಾರಿದೀಪವಾಗಿ ಬೆಳೆಯುತ್ತಾನೆ ಎಂಬ ಭರವಸೆ ಮತ್ತು ನಂಬಿಕೆಯಿಂದ ನಾವಿದ್ದೇವೆʼʼ‌ ಎಂದು ಯಾಮಿ ಪೋಸ್ಟ್‌ ಹಂಚಿಕೊಂಡಿದ್ದಾರೆ. ಹಾಗೇ ಮಗನ ಹೆಸರನ್ನು ರಿವೀಲ್‌ ಮಾಡಿದ್ದಾರೆ.

ಇದನ್ನೂ ಓದಿ: Kamal Haasan: ಕಮಲ್‌ ಹಾಸನ್‌ ಅಭಿನಯದ ‘ಇಂಡಿಯನ್ 2′  ಸಿನಿಮಾ ರಿಲೀಸ್‌ ಡೇಟ್‌ ಅನೌನ್ಸ್‌!

‘ವೇದವಿದ್’ ಅಕ್ಷಯ ತೃತೀಯ ದಿನ ಹುಟ್ಟಿದ. ಅವನಿಗೆ ನಿಮ್ಮೆಲ್ಲರ ಪ್ರೀತಿ ಆಶೀರ್ವಾದ ಬೇಕು ಎಂದು ನಟಿ ಶೇರ್‌ ಮಾಡಿಕೊಂಡಿದ್ದಾರೆ.

Continue Reading

ಬಾಲಿವುಡ್

Salman Khan: ʻಅಲ್ಟಿಮೇಟ್ ಸೆಕ್ಸ್ ಸಿಂಬಲ್ʼ ನನ್ನ ಗಂಡ ಅಲ್ಲ, ಅದು ಸಲ್ಮಾನ್‌ ಖಾನ್‌ ಎಂದಳು ಖ್ಯಾತ ನಟಿ!

Salman Khan: ಅರ್ಹಾನ್ ಖಾನ್ ಮಲೈಕಾ ಅರೋರಾ ಮತ್ತು ಅರ್ಬಾಜ್ ಖಾನ್ ಅವರ ಏಕೈಕ ಪುತ್ರ, ಈತ 2002ರಲ್ಲಿ ಜನಿಸಿದನು. ಅರ್ಹಾನ್ ಖಾನ್ ಮಲೈಕಾ ಅರೋರಾ ಅವರು ವಿವಾಹವಾಗಿ 19 ವರ್ಷಗಳ ಕಾಲ ಜೊತೆಗಿದ್ದರು. ನಂತರ 2016ರಲ್ಲಿ ಬೇರ್ಪಟ್ಟು 2017ರಲ್ಲಿ ಅಧಿಕೃತವಾಗಿ ವಿಚ್ಛೇದನ ಪಡೆದುಕೊಂಡರು. ನಂತರ ಅರ್ಬಾಜ್ ಖಾನ್ ಮೇಕಪ್ ಆರ್ಟಿಸ್ಟ್ ಶುರಾ ಕಾನ್ ಅವರನ್ನು ಮದುವೆಯಾದರು. ಮಲೈಕಾ ಅರೋರಾ ಅವರು ಮಾತ್ರ ವರ್ಷಗಳಿಂದ ನಟ ಅರ್ಜುನ್ ಕಪೂರ್ ಜೊತೆ ಡೇಟಿಂಗ್ ಮಾಡುತ್ತಿದ್ದಾರೆ.

VISTARANEWS.COM


on

Salman Khan Ultimate Sex Symbol Says Malaika Arora
Koo

ಬೆಂಗಳೂರು: ಸಲ್ಮಾನ್ ಖಾನ್ (Salman Khan) ಅವರ ಮಾಜಿ ಅತ್ತಿಗೆ ಮಲೈಕಾ ಅರೋರಾ (Malaika Arora) ಅವರು ಬಾಲಿವುಡ್‌ನ ಹಾಟೆಸ್ಟ್ ಸ್ಟಾರ್‌ಗಳಲ್ಲಿ ಒಬ್ಬರೆಂದು ಪರಿಗಣಿಸಲಾಗಿದೆ. ಸಂದರ್ಶನವೊಂದರಲ್ಲಿ ʻʻಅರ್ಬಾಜ್ ಖಾನ್ ನನ್ನ ಪಾಲಿಗೆ ಪರ್ಮನೆಂಟ್ ಗಂಡ. ಆದರೆ ಸಲ್ಮಾನ್ ಖಾನ್ ಬಾಲಿವುಡ್‌ನಲ್ಲಿ ಅಲ್ಟಿಮೇಟ್ ಸೆಕ್ಸ್ ಸಿಂಬಲ್ʼʼಎಂದು ಹೇಳಿಕೊಂಡಿದ್ದಾರೆ.

ಇದೀಗ ಮಲೈಕಾ ಅವರ ಹಳೆಯ ಸಂದರ್ಶನದ ವಿಡಿಯೊ ವೈರಲ್‌ ಆಗುತ್ತಿದೆ. ʻʻಭಾರತದ ಪ್ರಮುಖ ಸೆಕ್ಸ್‌ ಸಿಂಬಾಲ್‌ ಪುರುಷ ಯಾರು?ʼʼ ಎಂಬ ಪ್ರಶ್ನೆಗೆ ಉತ್ತರಿಸಿದ ಮಲೈಕಾ, “ನಾನು ನಿಸ್ಸಂದೇಹವಾಗಿ ಸಲ್ಮಾನ್ ಖಾನ್ ಎಂದು ಭಾವಿಸುತ್ತೇನೆʼʼ ಎಂದು ಹೇಳಿದ್ದಾರೆ.

“ನನಗೆ, ಅರ್ಬಾಜ್ ನನ್ನ ಪಾಲಿಗೆ ಶಾಶ್ವತ ಗಂಡಸು (Arbaaz is my eternal man). ಇಲ್ಲಿಯವರೆಗೆ, ನಾವು ನಿಶ್ಚಿತಾರ್ಥ ಅಷ್ಟೇ ಮಾಡಿಕೊಂಡಿದ್ದೇವೆ ಎಂದು ಅನ್ನಿಸುತ್ತದೆ. ನಾವು ಮದುವೆಯಾಗಿದ್ದೇವೆ. ಮಗುವನ್ನು ಹೊಂದಿದ್ದೇವೆ ಎಂದು ನನಗೆ ಈಗಲೂ ಅನಿಸುವುದಿಲ್ಲ. ಆದರೆ ಸಲ್ಮಾನ್ ಖಾನ್ ಭಾರತದ ಅಲ್ಟಿಮೇಟ್ ಸೆಕ್ಸ್ ಸಿಂಬಲ್ ವ್ಯಕ್ತಿ ಎಂದು ನಾನು ಭಾವಿಸುತ್ತೇನೆʼʼ ಎಂದು ಹೇಳಿಕೊಂಡಿದ್ದಾರೆ.

ಇದನ್ನೂ ಓದಿ: Salman Khan: ಸಲ್ಮಾನ್‌ ಖಾನ್‌ ಮನೆ ಎದುರು ಫೈರಿಂಗ್‌ ಕೇಸ್‌; 6ನೇ ಆರೋಪಿಯ ಬಂಧನ

Malaika arora reveal male sex symbol in the country in old zoom tv interview
byu/Sea-Fix691 inBollyBlindsNGossip

ಅರ್ಹಾನ್ ಖಾನ್ ಮಲೈಕಾ ಅರೋರಾ ಮತ್ತು ಅರ್ಬಾಜ್ ಖಾನ್ ಅವರ ಏಕೈಕ ಪುತ್ರ, ಈತ 2002ರಲ್ಲಿ ಜನಿಸಿದ್ದ. ಅರ್ಬಾಜ್ ಖಾನ್ – ಮಲೈಕಾ ಅರೋರಾ ಅವರು ವಿವಾಹವಾಗಿ 19 ವರ್ಷಗಳ ಕಾಲ ಜೊತೆಗಿದ್ದರು. ನಂತರ 2016ರಲ್ಲಿ ಬೇರ್ಪಟ್ಟು 2017ರಲ್ಲಿ ಅಧಿಕೃತವಾಗಿ ವಿಚ್ಛೇದನ ಪಡೆದುಕೊಂಡರು. ನಂತರ ಅರ್ಬಾಜ್ ಖಾನ್ ಮೇಕಪ್ ಆರ್ಟಿಸ್ಟ್ ಶುರಾ ಖಾನ್ ಅವರನ್ನು ಮದುವೆಯಾದರು. ಮಲೈಕಾ ಅರೋರಾ ಅವರು ಮಾತ್ರ ವರ್ಷಗಳಿಂದ ತನಗಿಂತ ಕಿರಿಯ ನಟ ಅರ್ಜುನ್ ಕಪೂರ್ ಜೊತೆ ಡೇಟಿಂಗ್ ಮಾಡುತ್ತಿದ್ದಾರೆ.

ನಟಿ ಮಲೈಕಾ ಅರೋರಾ (Malaika Arora) ಮತ್ತು ಅವರ ಮಾಜಿ ಪತಿ ಅರ್ಬಾಜ್ ಖಾನ್ ( Arbaaz Khan) ಅವರ ಮಗ ಅರ್ಹಾನ್ ಖಾನ್ ಅವರ ʻಪಾಡ್‌ಕಾಸ್ಟ್ ದಮ್ ಬಿರಿಯಾನಿʼಯ (‘Dumb Biryani’) ಎರಡನೇ ಸಂಚಿಕೆಯಲ್ಲಿ ನಟಿ ಈ ಹಿಂದೆ ಮಾಜಿ ಪತಿ ಅರ್ಬಾಜ್ ಖಾನ್‌ರಿಂದ ತನ್ನ ಮಗ ಯಾವ ಗುಣಗಳನ್ನು ಅನುವಂಶಿಕವಾಗಿ ಪಡೆದಿದ್ದಾನೆ ಎಂಬುದನ್ನು ಮಲೈಕಾ ಅರೋರಾ ಹೇಳಿದ್ದರು. ಮೊದಲಿಗೆ ಅರ್ಹಾನ್ ಮಲೈಕಾಗೆ ತಂದೆ ಅರ್ಬಾಜ್‌ ಅವರ ಕೆಲವು ಗುಣಗಳ ಬಗ್ಗೆ ಕೇಳಿದರು. ಅದಕ್ಕೆ ಮಲೈಕಾ ಉತ್ತರಿಸಿ ʻʻನಿನ್ನ ಮ್ಯಾನರಿಸಂ ನಿನ್ನ ತಂದೆಯಂತೆಯೇ ಇದೆ. ಇಬ್ಬರೂ ನಡುವೆ ಹಲವು ವಿಚಾರಗಳಿಗೆ ಹೋಲಿಕೆ ಇದೆ. ಅರ್ಬಾಜ್ ಅವರ ಮ್ಯಾನರಿಸಂ ಅಷ್ಟಾಗಿ ಅಟ್ರ್ಯಾಕ್ಟಿವ್‌ ಆಗಿಲ್ಲʼʼ ಎಂದಿದ್ದರು.

ಮಲೈಕಾ ಮಾತು ಮುಂದುವರಿಸಿ ʻʻಅರ್ಬಾಜ್ ನ್ಯಾಯಯುತ ವ್ಯಕ್ತಿ. ಅವರು ಎಂದಿಗೂ ವಿಷಯಗಳ ಬಗ್ಗೆ ಅತಿಯಾಗಿ ಯೋಚಿಸಲು ಹೋಗುವುದಿಲ್ಲ, ಕೆಲವು ವಿಷಯಗಳ ಬಗ್ಗೆ ತುಂಬಾ ಸ್ಪಷ್ಟವಾಗಿರುತ್ತಾರೆ. ಆ ಗುಣ ನಿನ್ನಲ್ಲಿ ಕೂಡ ಇದೆʼʼ ಎಂದಿದ್ದರು.

Continue Reading

ಬಾಲಿವುಡ್

Lok Sabha Election 2024: ಭಾರತದಲ್ಲಿ ಮೊದಲ ಬಾರಿಗೆ ಮತದಾನ ಮಾಡಿದ ಅಕ್ಷಯ್‌ ಕುಮಾರ್‌!

Lok Sabha Election 2024: ಇನ್ನು ಮುಂಬೈನಲ್ಲಿ ಬಾಲಿವುಡ್‌ ನಟ ಅಕ್ಷಯ್‌ ಕುಮಾರ್‌, ಉದ್ಯಮಿ ಅನಿಲ್ ಅಂಬಾನಿ ಸೇರಿದಂತೆ ಅನೇಕ ಗಣ್ಯರು ಬೆಳಗ್ಗೆಯೇ ಮತಗಟ್ಟೆಗೆ ಬಂದು ಮತ ಚಲಾಯಿಸಿದರು.ಬಾಲಿವುಡ್ ಸೆಲೆಬ್ರಿಟಿಗಳಾದ ಅಮಿತಾಭ್‌ ಬಚ್ಚನ್, ಕರಣ್ ಜೋಹರ್, ಆಯುಷ್ಮಾನ್ ಖುರಾನಾ ಮತ್ತು ರಣವೀರ್ ಶೋರೆ ಮುಂತಾದವರು ಲೋಕಸಭೆ ಚುನಾವಣೆಯ ಐದನೇ ಹಂತದಲ್ಲಿ ಮತ ಚಲಾಯಿಸುವಂತೆ ಜನರಿಗೆ ಮನವಿ ಮಾಡಿದ್ದಾರೆ.

VISTARANEWS.COM


on

Lok Sabha Election 2024 Akshay Kumar casts vote for the first time
Koo

ಬೆಂಗಳೂರು: ಲೋಕಸಭೆ ಚುನಾವಣೆಯ (Lok Sabha Election 2024) ಐದನೇ ಹಂತದ ಮತದಾನ(Fifth Phase Voting) ಪ್ರಕ್ರಿಯೆ ಈಗಾಗಲೇ ಶುರುವಾಗಿದೆ. ಆರು ರಾಜ್ಯಗಳು ಹಾಗೂ ಎರಡು ಕೇಂದ್ರಾಡಳಿತ ಪ್ರದೇಶಗಳ 49 ಕ್ಷೇತ್ರಗಳಲ್ಲಿ ಸೋಮವಾರ ಬೆಳಗ್ಗೆ 7ಗಂಟೆಯಿಂದಲೇ ಮತದಾನ ಆರಂಭವಾಗಿದೆ.  ಬಾಲಿವುಡ್ ಸೆಲೆಬ್ರಿಟಿಗಳಾದ ಅಮಿತಾಭ್‌ ಬಚ್ಚನ್, ಕರಣ್ ಜೋಹರ್, ಆಯುಷ್ಮಾನ್ ಖುರಾನಾ ಮತ್ತು ರಣವೀರ್ ಶೋರೆ ಮುಂತಾದವರು ಲೋಕಸಭೆ ಚುನಾವಣೆಯ ಐದನೇ ಹಂತದಲ್ಲಿ ಮತ ಚಲಾಯಿಸುವಂತೆ ಜನರಿಗೆ ಮನವಿ ಮಾಡಿದ್ದಾರೆ. ಭಾರತೀಯ ಪೌರತ್ವ ಪಡೆದ ನಂತರ ಅಕ್ಷಯ್ ಕುಮಾರ್ ಮೊದಲ ಬಾರಿಗೆ ಮುಂಬೈನಲ್ಲಿ ಮತ ಚಲಾಯಿಸಿದರು. ನಟ ಈ ಹಿಂದೆ ಕೆನಡಾದ ಪೌರತ್ವವನ್ನು ಮಾತ್ರ ಹೊಂದಿದ್ದರು. 

ಇನ್ನು ಮುಂಬೈನಲ್ಲಿ ಬಾಲಿವುಡ್‌ ನಟ ಅಕ್ಷಯ್‌ ಕುಮಾರ್‌, ಉದ್ಯಮಿ ಅನಿಲ್ ಅಂಬಾನಿ ಸೇರಿದಂತೆ ಅನೇಕ ಗಣ್ಯರು ಬೆಳಗ್ಗೆಯೇ ಮತಗಟ್ಟೆಗೆ ಬಂದು ಮತ ಚಲಾಯಿಸಿದರು. ವೋಟ್‌ ಮಾಡಿದ ಬಳಿಕ ಅಕ್ಷಯ್‌ ಕುಮಾರ್‌ ಮಾತನಾಡಿ ʻʻನನ್ನ ಭಾರತ ಅಭಿವೃದ್ಧಿ ಮತ್ತು ಬಲಿಷ್ಠವಾಗಬೇಕೆಂದು ನಾನು ಬಯಸುತ್ತೇನೆ. ಅದನ್ನು ಗಮನದಲ್ಲಿಟ್ಟುಕೊಂಡು ಮತ ಹಾಕಿದ್ದೇನೆ. ಭಾರತವು ನನಗೆಸರಿ ಎನಿಸುವದಕ್ಕೆ ಮತ ಚಲಾಯಿಸಬೇಕುʼʼಎಂದರು.

ಇದನ್ನೂ ಓದಿ: Lok Sabha Election 2024: ಬಿಜೆಪಿ ಅಭ್ಯರ್ಥಿಗೆ ಒಬ್ಬನಿಂದಲೇ 8 ಬಾರಿ ವೋಟಿಂಗ್;‌ ವೈರಲಾಗ್ತಿದೆ ಶಾಕಿಂಗ್‌ ವಿಡಿಯೋ

ಇನ್ನು ಅಮಿತಾಭ್‌ ಕೂಡ ಮತ ಚಲಾಯಿಸುವಂತೆ ಸೋಷಿಯಲ್‌ ಮೀಡಿಯಾ ಮೂಲಕ ಮನವಿ ಮಾಡಿದ್ದಾರೆ. ʻʻಅಮಿತಾಭ್‌ ಅನಿಮೇಟೆಡ್ ವೀಡಿಯೊವನ್ನು ಹಂಚಿಕೊಂಡಿದ್ದಾರೆ, ಇದರಲ್ಲಿ ಕಾಡಿನಲ್ಲಿರುವ ಪ್ರಾಣಿಗಳು ಅಭಿ ತೋ ಪಾರ್ಟಿ ಶುರು ಹುಯಿ ಹೈ ಎಂಬ ಜನಪ್ರಿಯ ಹಾಡಿಗೆ ನೃತ್ಯ ಮಾಡುವುದು ಇದೆ. ಪೋಸ್ಟ್ ಅನ್ನು ಹಂಚಿಕೊಂಡ ಅವರು, “ನಾಳೆ ಮುಂಬೈ/ಮಹಾರಾಷ್ಟ್ರಕ್ಕೆ ನಿಮ್ಮ ದಿನ. ನಿಮ್ಮ ಹಕ್ಕನ್ನು ಚಲಾಯಿಸಿ..” ಎಂದರು.

ಆಯುಷ್ಮಾನ್ ಕೂಡ ವಿಡಿಯೊ ಮಾಡಿ, “ಸ್ನೇಹಿತರೇ, ಮತದಾನ ಮಾಡುವ ಸಮಯ ಬಂದಿದೆ. ಹೌದು, ಲೋಕಸಭೆ ಚುನಾವಣೆ ಹಂತ ಹಂತವಾಗಿ ನಡೆಯುತ್ತಿದೆ, ಮತ್ತು ಈಗ ಇದು ನಿಮ್ಮ ಸರದಿ. ಪ್ರತಿ ಮತವೂ ಮುಖ್ಯವಾಗಿದೆ ಏಕೆಂದರೆ ಯಾವ ನಾಯಕರು ದೇಶವನ್ನು ಮುನ್ನಡೆಸುತ್ತಾರೆ ಎಂಬುದನ್ನು ನೀವು ನಿರ್ಧರಿಸುತ್ತೀರಿ. ನಿಮ್ಮ ಮತವು ನಿಮ್ಮ ಧ್ವನಿಯಾಗಿದೆ, ಮತ್ತು ನಿಮ್ಮ ಧ್ವನಿಯನ್ನು ಎಣಿಕೆ ಮಾಡಿ, ಏಕೆಂದರೆ ನಾವು ನಮ್ಮ ದೇಶದ ಉಜ್ವಲ ಭವಿಷ್ಯವನ್ನು ರೂಪಿಸಬಹುದುʼʼಎಂದಿದ್ದಾರೆ. ರಣವೀರ್‌, ಕರಣ್‌ ಜೋಹರ್‌ ಸೇರಿದಂತೆ ಅನೇಕ ನಟರು ಮನವಿ ಮಾಡಿದರು.

ದೇಶದ ಜನರ ಗಮನ ಸೆಳೆದಿರುವ ರಾಯ್‌ಬರೇಲಿ, ಅಮೇಥಿಯಲ್ಲೂ ಇಂದು ಮತದಾನ ಶುರುವಾಗಿದ್ದು, ಸಂಜೆ 6ಗಂಟೆವರೆಗೆ ನಡೆಯಲಿದೆ.ಉತ್ತರ ಪ್ರದೇಶದ 14, ಮಹಾರಾಷ್ಟ್ರದ 13, ಪಶ್ಚಿಮ ಬಂಗಾಳ 7, ಬಿಹಾರ ಹಾಗೂ ಒಡಿಶಾದಲ್ಲಿ ತಲಾ 5, ಜಾರ್ಖಂಡ್‌ನಲ್ಲಿ 3, ಜಮ್ಮು ಕಾಶ್ಮೀರ ಮತ್ತು ಲಡಾಕ್‌ನ ತಲಾ 1 ಕ್ಷೇತ್ರಗಳಲ್ಲಿ ಮತದಾನ ಆರಂಭವಾಗಿದೆ. ಕೇಂದ್ರ ಸಚಿವರಾದ ರಾಜನಾಥ್‌ ಸಿಂಗ್‌ (ಲಖನೌ), ಸ್ಮೃತಿ ಇರಾನಿ (ಅಮೇಥಿ), ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ (ರಾಯ್‌ಬರೇಲಿ), ಜಮ್ಮು-ಕಾಶ್ಮೀರ ಮಾಜಿ ಸಿಎಂ ಒಮರ್‌ ಅಬ್ದುಲ್ಲಾ (ಬಾರಾಮುಲ್ಲಾ) ಸೇರಿ ಹಲವು ಗಣ್ಯರ ಭವಿಷ್ಯವು ಸೋಮವಾರ ಮತಯಂತ್ರಗಳಲ್ಲಿ ಭದ್ರವಾಗಲಿದೆ.

ದೇಶದಲ್ಲಿ ಈಗಾಗಲೇ ನಾಲ್ಕು ಹಂತಗಳಲ್ಲಿ 379 ಕ್ಷೇತ್ರಗಳಲ್ಲಿ ಮತದಾನ ನಡೆದಿದೆ. ಬಹುತೇಕ ಕಡೆಗಳಲ್ಲಿ ಶಾಂತಿಯುತವಾಗಿ ಮತದಾನ ನಡೆದಿದ್ದು, ಈಗ ಐದನೇ ಹಂತದ ಮತದಾನಕ್ಕೆ ಚುನಾವಣೆ ಆಯೋಗವು ಸಿದ್ಧಗೊಂಡಿದೆ. ಇನ್ನು ಸೋಮವಾರವೇ ಅಯೋಧ್ಯೆಯ ಜಿಲ್ಲೆಯನ್ನು ಒಳಗೊಂಡಿರುವ ಫೈಜಾಬಾದ್‌ ಲೋಕಸಭೆ ಕ್ಷೇತ್ರದಲ್ಲಿ ಮತದಾನ ನಡೆಯಲಿದ್ದು, ಬಿಜೆಪಿಯ ಹಾಲಿ ಸಂಸದ ಲಲ್ಲು ಸಿಂಗ್‌ ಅವರೇ ಮತ್ತೆ ಕಣಕ್ಕಿಳಿದಿದ್ದಾರೆ. ರಾಮಮಂದಿರ ಉದ್ಘಾಟನೆಯ ಹಿನ್ನೆಲೆಯಲ್ಲಿ ಇಲ್ಲಿಯು ಬಿಜೆಪಿ ಅಭ್ಯರ್ಥಿಯ ಗೆಲುವು ನಿಶ್ಚಿತ ಎಂದು ಹೇಳಲಾಗುತ್ತಿದೆ. 4.69 ಕೋಟಿ ಪುರುಷ, 4.26 ಕೋಟಿ ಮತ್ತು 5,409 ತೃತೀಯ ಲಿಂಗಿ ಮತದಾರರು ಸೇರಿದಂತೆ 8.95 ಕೋಟಿಗೂ ಅಧಿಕ ಮತದಾರರು ಇಂದು 695 ಅಭ್ಯರ್ಥಿಗಳ ಅದೃಷ್ಟ ನಿರ್ಧರಿಸಲಿದ್ದಾರೆ.

Continue Reading

ಬಾಲಿವುಡ್

Janhvi Kapoor: 12ನೇ ವಯಸ್ಸಿನಲ್ಲಿಯೇ ಅಶ್ಲೀಲ ವೆಬ್‌ಸೈಟ್‌ನಲ್ಲಿ ನನ್ನ ಫೋಟೊ ಅಪ್‌ಲೋಡ್‌ ಆಗಿತ್ತು ಎಂದ ಶ್ರೀದೇವಿ ಮಗಳು!

Janhvi Kapoor: ‘ಮಿಸ್ಟರ್ ಆ್ಯಂಡ್‌ ಮಿಸೆಸ್ ಮಹಿ’ 2024 ರ ಟಿ 20 ವಿಶ್ವಕಪ್ ಪ್ರಾರಂಭವಾಗುವ ಕೇವಲ 24 ಗಂಟೆಗಳ ಮೊದಲು ಮೇ 31 ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ. ಸಿನಿಮಾ ಪ್ರಚಾರದ ಸಂದರ್ಶನ ವೇಳೆ ನಟಿ 12 -13 ವರ್ಷ ವಯಸ್ಸಿನಲ್ಲಿರುವಾಗ ಸೋಷಿಯಲ್‌ ಮೀಡಿಯಾದಿಂದಾಗಿ ಲೈಂಗಿಕವಾಗಿ ನಾನು ಸಮಸ್ಯೆ ಎದುರಿಸಿದ್ದೆʼʼಎಂದು ಹೇಳಿಕೊಂಡಿದ್ದಾರೆ.

VISTARANEWS.COM


on

Janhvi Kapoor felt sexualised at the age of 12
Koo

ಬೆಂಗಳೂರು:  ಕ್ರಿಕೆಟ್ ಕತೆಯನ್ನೇ ಮೂಲವಾಗಿಟ್ಟುಕೊಂಡಿರುವ ‘ಮಿಸ್ಟರ್ ಆ್ಯಂಡ್ ಮಿಸೆಸ್ ಮಹಿ’ (Mr. & Mrs. Mahi) ಸಿನಿಮಾವೊಂದು ರೆಡಿಯಾಗುತ್ತಿದೆ. ಆ ಸಿನಿಮಾದಲ್ಲಿ ಬಾಲಿವುಡ್​ ಬ್ಯೂಟಿ ಜಾಹ್ನವಿ ಕಪೂರ್​ (Janhvi Kapoor) ಹಾಗೂ ಪ್ರತಿಭಾವಂತ ನಟ ರಾಜ್​ಕುಮಾರ್ ಕಾಣಿಸಿಕೊಳ್ಳಲಿದ್ದಾರೆ.  ‘ಮಿಸ್ಟರ್ ಆ್ಯಂಡ್‌ ಮಿಸೆಸ್ ಮಹಿ’ 2024 ರ ಟಿ 20 ವಿಶ್ವಕಪ್ ಪ್ರಾರಂಭವಾಗುವ ಕೇವಲ 24 ಗಂಟೆಗಳ ಮೊದಲು ಮೇ 31ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ. ಸಿನಿಮಾ ಪ್ರಚಾರದ ಸಂದರ್ಶನ ವೇಳೆ ನಟಿ 12 -13 ವರ್ಷ ವಯಸ್ಸಿನಲ್ಲಿರುವಾಗ ಸೋಷಿಯಲ್‌ ಮೀಡಿಯಾದಿಂದಾಗಿ ಲೈಂಗಿಕವಾಗಿ ನಾನು ಸಮಸ್ಯೆ ಎದುರಿಸಿದ್ದೆʼʼಎಂದು ಹೇಳಿಕೊಂಡಿದ್ದಾರೆ.

ನಟಿ ಮಾತನಾಡಿ ʻʻನಾನು ಮಾಧ್ಯಮಗಳಿಂದ ಮೊದಲ ಬಾರಿಗೆ ಲೈಂಗಿಕವಾಗಿ ಸಮಸ್ಯೆ ಎದುರಿಸಿದ್ದೆ. ಆಗ ನನಗೆ 12-13 ವರ್ಷ ವಯಸ್ಸು. ಒಮ್ಮೆ ನನ್ನ ತಾಯಿ ಮತ್ತು ತಂದೆಯೊಂದಿಗೆ ಈವೆಂಟ್‌ಗೆ ಹೋಗಿದ್ದೆ. ಆ ಚಿತ್ರಗಳು ಆನ್‌ಲೈನ್‌ನಲ್ಲಿ ವೈರಲ್‌ ಆಗಿದ್ದವು. ಮಾರ್ಫಿಂಗ್ ಮಾಡಿ ಪೋರ್ನ್ ವೆಬ್‌ಸೈಟ್‌ಗಳಲ್ಲಿ ಹಾಕಿದ್ದರು. ಆದರೆ ಇದು ಮಾರ್ಫ್‌ ಮಾಡಿದ ಚಿತ್ರಗಳು ಎಂದು ಹಲವರಿಗೆ ತಿಳಿದೇ ಇರಲಿಲ್ಲ. ನಿಜ ಎಂದು ನಂಬಿದ್ದರು. ಆ ಚಿಕ್ಕ ವಯಸ್ಸಿನಲ್ಲಿಯೇ ನನಗೆ ತುಂಬಾ ಆಘಾತವಾಗಿತ್ತು. ನನ್ನ ಫ್ರೆಂಡ್ಸ್‌ ಕೂಡ ಗೇಲಿ ಮಾಡುತ್ತಿದ್ದರು. ಆ ವಯಸ್ಸಿನಲ್ಲಿ ಏನಾಗುತ್ತಿದೆ ಎಂದು ನನಗೆ ತಿಳಿದೇ ಇರಲಿಲ್ಲʼ ಎಂದಿದ್ದಾರೆ.

ಇದನ್ನೂ ಓದಿ: Kannada New Movie: `ಅನರ್ಥ’ ಸಿನಿಮಾ ಟೀಸರ್‌ ಔಟ್‌!

ಮಿಸ್ಟರ್& ಮಿಸೆಸ್​ ಮಹಿ

ಭಾರತವು ಕ್ರಿಕೆಟ್ ಅನ್ನು ಆರಾಧಿಸುವ ರಾಷ್ಟ್ರವಾಗಿದೆ,. ಕ್ರೀಡಾ ಅಭಿಮಾನಿಗಳಿಗೆ ಕ್ರಿಕೆಟ್ ಧರ್ಮಕ್ಕಿಂತ ಹೆಚ್ಚು. ಎಲ್ಲಾ ವಯಸ್ಸಿನ ಜನರು ವ್ಯಾಪಕವಾಗಿ ಅನುಸರಿಸುವ ಮತ್ತು ಪ್ರೀತಿಸುವ ಕ್ರೀಡೆಯಾಗಿದೆ. ಹೀಗಾಗಿ ಸಿನಿಮಾ ನಿರ್ಮಾಕರು ಅದರ ಬಗ್ಗೆ ಹೆಚ್ಚು ಕಾಳಜಿ ವಹಿಸುತ್ತಾರೆ. ಅದೇ ರೀತಿ ಬಾಲಿವುಡ್ ನಿರ್ದೇಶಕ ಶರಣ್ ಶರ್ಮಾ ಅವರು ನಟರಾದ ಜಾನ್ವಿ ಕಪೂರ್ ಮತ್ತು ರಾಜ್ ಕುಮಾರ್ ರಾವ್ ಅಭಿನಯದ ಕ್ರಿಕೆಟ್ ಆಧಾರಿತ ಚಲನಚಿತ್ರವನ್ನು ನಿರ್ದೇಶಿಸಿದ್ದಾರೆ.

‘ಮಿಸ್ಟರ್ ಆ್ಯಂಡ್‌ ಮಿಸೆಸ್ ಮಹಿ’ ಎಂಬ ಶೀರ್ಷಿಕೆಯ ಈ ಚಲನಚಿತ್ರವು ಕ್ರಿಕೆಟ್ ಕ್ರೀಡೆಯ ಮೇಲಿನ ತಮ್ಮ ಪ್ರೀತಿಯನ್ನು ಅರಸುತ್ತಾ ಹಲವಾರು ಸವಾಲುಗಳು ಮತ್ತು ಅಡೆತಡೆಗಳ ಮೂಲಕ ಎದುರಿಸುವ ಸುಂದರ ಜೋಡಿಯೊಂದರ ಸುತ್ತ ಸುತ್ತುತ್ತದೆ.

ಚಿತ್ರದ ಟ್ರೈಲರ್ ಇನ್ನೂ ಬಿಡುಗಡೆಯಾಗದಿದ್ದರೂ, ಪ್ರಮುಖ ನಟಿ ಜಾಹ್ನವಿ ಕಪೂರ್ ತಮ್ಮ ಇನ್ಸ್ಟಾಗ್ರಾಮ್​​ನಲ್ಲಿ ಚಿತ್ರದ ಬಿಡುಗಡೆಯ ದಿನಾಂಕವನ್ನು ಅನಾವರಣಗೊಳಿಸಿದ್ದಾರೆ. ‘ಮಿಸ್ಟರ್ ಆ್ಯಂಡ್‌ ಮಿಸೆಸ್ ಮಹಿ’ 2024 ರ ಟಿ 20 ವಿಶ್ವಕಪ್ ಪ್ರಾರಂಭವಾಗುವ ಕೇವಲ 24 ಗಂಟೆಗಳ ಮೊದಲು ಮೇ 31 ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ.

ಅಂದ ಹಾಗೆ ಸಿನಿಮಾದ ಬಗ್ಗೆ ಯಾರಿಗೂ ಹೆಚ್ಚಿನ ಮಾಹಿತಿ ಇಲ್ಲ. ಈ ಸಿನಿಮಾ ಧೋನಿಯ ಕತೆಯನ್ನು ಆಧರಿಸಿದ್ದು ಎಂದು ಎಂದು ಹೇಳಲಾಗುತ್ತಿದೆ. ಹೆಸರನ್ನು ಹೇಳುವಾಗ ಮಹೇಂದ್ರ ಸಿಂಗ್ ಧೋನಿಗೆ ಸಂಬಂಧಿಸಿದ ಕತೆ ಎಂದು ಹೇಳಲಾಗುತ್ತಿದೆ. ಆದರೆ, ಅದರ ಬಗ್ಗೆ ಖಚಿತತೆ ಇಲ್ಲ. ಆದರೆ, ಕ್ರಿಕೆಟ್​ ಆಧಾರಿತ ಸಿನಿಮಾ ಎಂಬುದು ಖಾತರಿ. ಹೀಗಾಗಿ ಸಿನಿ ಪ್ರೇಮಿಗಳು ಹಾಗೂ ಕ್ರಿಕೆಟ್ ಪ್ರೇಮಿಗಳನ್ನು ಏಕಕಾಲಕ್ಕೆ ಸೆಳೆಯುವ ಉದ್ದೇಶವನ್ನು ನಿರ್ದೇಶಕರು ಹೊಂದಿದ್ದಾರೆ.

Continue Reading
Advertisement
IPL 2024
ಕ್ರೀಡೆ29 mins ago

IPL 2024: ಪ್ಲೇ ಆಫ್ ಪಂದ್ಯಗಳಿಗೆ ಮೀಸಲು ದಿನ ಇದೆಯೇ? ಮಳೆ ಬಂದರೆ ಫಲಿತಾಂಶ ನಿರ್ಧಾರ ಹೇಗೆ?

how many seats will the Congress have in the Lok Sabha elections CM Siddaramaiah statement
Lok Sabha Election 202448 mins ago

CM Siddaramaiah: ಲೋಕಸಭಾ ಚುನಾವಣೆಯಲ್ಲಿ ಸಿಎಂ ಸಿದ್ದರಾಮಯ್ಯ ಪ್ರಕಾರ ಕಾಂಗ್ರೆಸ್‌ಗೆ ಎಷ್ಟು ಸೀಟ್‌? ಸಂಪುಟ ಪುನಾರಚನೆ ಇಲ್ಲ!

Yami Gautam welcome baby boy
ಬಾಲಿವುಡ್54 mins ago

Yami Gautam: ನಟಿ ಯಾಮಿ ಗೌತಮ್‌ಗೆ ಗಂಡು ಮಗು; ಕಂದಮ್ಮನ ಹೆಸರೇನು?

Liquid Nitrogen Paan
ದೇಶ57 mins ago

Liquid Nitrogen Paan: ನೀವು ಲಿಕ್ವಿಡ್ ನೈಟ್ರೋಜನ್‌ ಪಾನ್‌ ಸೇವಿಸ್ತೀರಾ? ಹಾಗಿದ್ರೆ ಎಚ್ಚರ.. ಎಚ್ಚರ

road Accident in Mandya
ಮಂಡ್ಯ1 hour ago

Road Accident : ಬಸ್‌ ಗುದ್ದಿದ ರಭಸಕ್ಕೆ ಕಾರು ಛಿದ್ರ ಛಿದ್ರ; ಚಾಲಕ ಸ್ಪಾಟ್‌ ಡೆತ್‌, ನಾಲ್ವರಿಗೆ ಗಾಯ

CET result only after II PU 2nd exam Published on May 30 or 31
ಶಿಕ್ಷಣ1 hour ago

CET Result: ದ್ವಿತೀಯ ಪಿಯು 2ನೇ ಪರೀಕ್ಷೆ ಬಳಿಕವೇ ಸಿಇಟಿ ಫಲಿತಾಂಶ; ಮೇ 30 ಅಥವಾ 31ಕ್ಕೆ ಪ್ರಕಟ?

pretha maduve
ಧಾರ್ಮಿಕ1 hour ago

Pretha Maduve: ವಧುವಿನ ಆತ್ಮಕ್ಕೆ ದೊರೆತ ವರ, ಆಷಾಢದಲ್ಲಿ ʻಪ್ರೇತ ಮದುವೆ’ ಫಿಕ್ಸ್

Kannada New Movie Hondisi Bareyiri in youtube
ಸಿನಿಮಾ1 hour ago

Kannada New Movie: ಯೂಟ್ಯೂಬ್‌ನಲ್ಲಿ ಉಚಿತವಾಗಿ ನೋಡಬಹುದು ʻಹೊಂದಿಸಿ ಬರೆಯಿರಿʼ; ಆದರೆ ಇರಲಿದೆ ಬ್ಯಾಂಕ್ ಡಿಟೇಲ್ಸ್‌!

Prajwal should appear before SIT and face probe says Nikhil Kumaraswamy
ಕರ್ನಾಟಕ1 hour ago

Nikhil Kumaraswamy: ಪ್ರಜ್ವಲ್‌ ಎಸ್‌ಐಟಿ ಮುಂದೆ ಹಾಜರಾಗಿ ತನಿಖೆ ಎದುರಿಸುವುದೇ ಸೂಕ್ತ: ನಿಖಿಲ್‌ ಕುಮಾರಸ್ವಾಮಿ

Karnataka Rain
ಮಳೆ1 hour ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ7 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ8 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ6 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka Rain
ಮಳೆ1 hour ago

Karnataka Rain : ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

Karnataka Rain
ಮಳೆ23 hours ago

Karnataka Rain : ಒಂದೇ ಮಳೆಗೆ ಹೊಳೆಯಂತಾದ ಬೆಂಗಳೂರು ರಸ್ತೆಗಳು! ಕಳಸದಲ್ಲೂ ಮುಂದುವರಿದ ಅಬ್ಬರ

Karnataka rain
ಮಳೆ1 day ago

Karnataka Rain : ವಿಜಯನಗರದಲ್ಲಿ ಸಿಡಿಲಿಗೆ ಜಾನುವಾರು ಬಲಿ; ಬೆಂಗಳೂರು ಸೇರಿ ಹಲವೆಡೆ ಭಾರಿ ಮಳೆ

Karnataka Rain
ಮಳೆ1 day ago

Karnataka Rain: ಧಾರಾಕಾರ ಮಳೆಗೆ ಕಾಂಪೌಂಡ್ ಕುಸಿದು 4 ಬೈಕ್‌ಗಳು ಜಖಂ; ಮದುವೆ ಮಂಟಪಕ್ಕೆ ನುಗ್ಗಿದ ನೀರು‌

Prajwal Revanna Case JDS calls CD Shivakumar pen drive gang
ರಾಜಕೀಯ3 days ago

Prajwal Revanna Case: CD ಶಿವಕುಮಾರ್ ಪೆನ್ ಡ್ರೈವ್ ಗ್ಯಾಂಗ್ ಎಂದ ಕುಟುಕಿದ ಜೆಡಿಎಸ್‌!

Karnataka weather Forecast
ಮಳೆ3 days ago

Karnataka Weather : ಮೈಸೂರು, ಮಂಡ್ಯ ಸೇರಿ ಈ 7 ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಸಂಭವ

Dina Bhavishya
ಭವಿಷ್ಯ3 days ago

Dina Bhavishya : ಈ ರಾಶಿಯ ಪ್ರೇಮಿಗಳಿಗೆ ಮನೆಯಿಂದ ಸಿಗುತ್ತೆ ಗ್ರೀನ್‌ ಸಿಗ್ನಲ್‌

Karnataka Weather Forecast
ಮಳೆ4 days ago

Karnataka Weather : ಭಾರಿ ಮಳೆಗೆ ಕೊಟ್ಟೂರು ಬಸ್ ಸ್ಟ್ಯಾಂಡ್‌ ಜಲಾವೃತ; ‌ ತಾಯಿ-ಮಗ ಗ್ರೇಟ್‌ ಎಸ್ಕೇಪ್‌

Drowned in water
ಹಾಸನ4 days ago

Drowned in water : ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರುಪಾಲು; ಓರ್ವ ಬಾಲಕ ಪಾರು

Suspicious Case
ಬೆಂಗಳೂರು4 days ago

Suspicious Case : ಬಾತ್‌ ರೂಂನಲ್ಲಿತ್ತು ಕಾಲೇಜು ಹುಡುಗಿ ಡೆಡ್‌ ಬಾಡಿ; ಕುತ್ತಿಗೆ ಕೊಯ್ದು ಸಾಯಿಸಿದವರು ಯಾರು?

ಟ್ರೆಂಡಿಂಗ್‌