Bangla Murder | ಶ್ರದ್ಧಾ ಕೇಸ್‌ ರೀತಿಯೇ ಬಾಂಗ್ಲಾದಲ್ಲೂ ಹಿಂದು ಯುವತಿಯ ದೇಹ ತುಂಡರಿಸಿದ ಮುಸ್ಲಿಂ ಪ್ರೇಮಿ - Vistara News

ಕ್ರೈಂ

Bangla Murder | ಶ್ರದ್ಧಾ ಕೇಸ್‌ ರೀತಿಯೇ ಬಾಂಗ್ಲಾದಲ್ಲೂ ಹಿಂದು ಯುವತಿಯ ದೇಹ ತುಂಡರಿಸಿದ ಮುಸ್ಲಿಂ ಪ್ರೇಮಿ

ದೆಹಲಿಯಲ್ಲಿ ಶ್ರದ್ಧಾ ವಾಳ್ಕರ್‌ ಪ್ರಕರಣದ ಮಾದರಿಯಲ್ಲಿಯೇ ಬಾಂಗ್ಲಾದೇಶದಲ್ಲಿ ಹಿಂದೂ ಯುವತಿಯ ದೇಹ ತುಂಡರಿಸಿ ಹತ್ಯೆ ಮಾಡಲಾಗಿದೆ. ಭೀಕರ ಹಂತಕ ಅಬು ಬಕ್ರ್‌ನನ್ನು ಪೊಲೀಸರು ಬಂಧಿಸಿದ್ದಾರೆ.

VISTARANEWS.COM


on

Hindu Girl Murder In Bangla
ಹಂತಕ ಅಬು ಬಕ್ರ್.
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಢಾಕಾ: ದೆಹಲಿಯಲ್ಲಿ ಲಿವ್‌ ಇನ್‌ ರಿಲೇಷನ್‌ಶಿಪ್‌ನಲ್ಲಿದ್ದ ಶ್ರದ್ಧಾ ವಾಳ್ಕರ್‌ಳನ್ನು (Shraddha Murder Case) ಆಕೆಯ ಪ್ರಿಯತಮನೇ 35 ಭಾಗಗಳಾಗಿ ಕತ್ತರಿಸಿ, ರಾಷ್ಟ್ರ ರಾಜಧಾನಿಯ ಹಲವೆಡೆ ಆಕೆಯ ದೇಹದ ಭಾಗಗಳನ್ನು ಎಸೆದ ಪ್ರಕರಣವು ದೇಶಾದ್ಯಂತ ಸುದ್ದಿಯಾಗಿದೆ. ಇದರ ಬೆನ್ನಲ್ಲೇ ಬಾಂಗ್ಲಾದೇಶದಲ್ಲೂ (Bangla Murder) ಹಿಂದು ಯುವತಿಯೊಬ್ಬಳನ್ನು ಪ್ರಿಯತಮನೇ (Abu Bakr) ತುಂಡು ತುಂಡಾಗಿ ಕತ್ತರಿಸಿ ಭೀಕರವಾಗಿ ಹತ್ಯೆಗೈದಿದ್ದಾನೆ.

ಅಬು ಬಕ್ರ್‌ ಎಂಬುವನು ಕವಿತಾ ರಾಣಿ (Kavita Rani) ಎಂಬುವರ ಜತೆ ಸಖ್ಯ ಬೆಳೆಸಿದ್ದ. ಗೊಬರ್ಚಕ ಎಂಬ ಪ್ರದೇಶದಲ್ಲಿ ವಾಸಿಸುತ್ತಿದ್ದ ಆತನ ಬಾಡಿಗೆ ಮನೆಗೆ ಕವಿತಾ ರಾಣಿ ಬಂದಿದ್ದಳು. ಆದರೆ, ಕಳೆದ ನವೆಂಬರ್‌ 6ರಂದು ಕೆಲಸಕ್ಕೂ ಹೋಗದೆ, ಮನೆಗೂ ಬಾರದೆ ಇದ್ದುದನ್ನು ಕಂಡ ಮನೆಯ ಮಾಲೀಕ ಅಬು ಬಕ್ರ್‌ ಇದ್ದ ಮನೆಗೆ ಬೇರೊಬ್ಬರನ್ನು ಕಳುಹಿಸಿದ್ದ. ಆಗ, ಪರಿಸ್ಥಿತಿಯು ಅನುಮಾನಾಸ್ಪದವಾಗಿ ಇದ್ದ ಕಾರಣ ಮನೆಯ ಮಾಲೀಕರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಕೂಡಲೇ ಪೊಲೀಸರು ಮನೆಗೆ ಬಂದು ಪರಿಶೀಲನೆ ನಡೆಸಿದಾಗ ಕೋಣೆಯ ಬಾಕ್ಸ್‌ವೊಂದರಲ್ಲಿ ರುಂಡವೇ ಇಲ್ಲದ, ಹೆಣ್ಣುಮಗಳ ದೇಹ ಪತ್ತೆಯಾಗಿದೆ. ಆಕೆಯ ರುಂಡವು ಮತ್ತೊಂದು ಕಡೆ ಇರಿಸಲಾಗಿದೆ. ದೇಹದಲ್ಲಿ ಎರಡೂ ಕೈಗಳು ಇರಲಿಲ್ಲ. ಇದಾದ ಬಳಿಕ ಪೊಲೀಸರು ತನಿಖೆ ನಡೆಸಿದ್ದು, ಕವಿತಾ ರಾಣಿ ಕೈಗಳು ಚರಂಡಿಯಲ್ಲಿ ಪತ್ತೆಯಾಗಿವೆ. ಹಾಗಾಗಿ, ಇಡೀ ಪ್ರಕರಣವು ದೇಶಾದ್ಯಂತ ಸುದ್ದಿಯಾಗಿದೆ.

ಬೇರೊಬ್ಬಳ ಜತೆ ಇದ್ದಾಗ ಸಿಕ್ಕಿಬಿದ್ದ ಅಬು ಬಕ್ರ್‌

ಕವಿತಾ ಜತೆ ಸಂಬಂಧ ಹೊಂದಿದ್ದ ಅಬು ಬಕ್ರ್‌, ಮತ್ತೊಬ್ಬ ಹಿಂದೂ ಯುವತಿ ಜತೆ ಬೇರೊಂದು ಪ್ರದೇಶದಲ್ಲಿದ್ದಾಗ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾನೆ. ಸಪ್ನಾ ಎಂಬ ಯುವತಿ ಜತೆ ನಾಲ್ಕು ವರ್ಷದಿಂದ ಅಬು ಬಕ್ರ್‌ ಲಿವ್‌ ಇನ್‌ ರಿಲೇಷನ್‌ಶಿಪ್‌ನಲ್ಲಿದ್ದು, ಪೊಲೀಸರು ಈತನನ್ನು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ಪ್ರಕರಣದಲ್ಲಿ ಲವ್ ಜಿಹಾದ್‌ ಕುರಿತು ಶಂಕೆಗಳು ವ್ಯಕ್ತವಾಗಿವೆ.

ಇದನ್ನೂ ಓದಿ | Shraddha Murder Case | 2 ವರ್ಷದಿಂದಲೂ ಶ್ರದ್ಧಾ ಮೇಲೆ ಅಫ್ತಾಬ್ ಸತತ ಹಲ್ಲೆ, ಆಕೆಯ ಗೆಳೆಯ ಹೇಳಿದ್ದೇನು?

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಪ್ರಮುಖ ಸುದ್ದಿ

Prajwal Revanna Case: ಪ್ರಜ್ವಲ್ ರೇವಣ್ಣಗೆ 14 ದಿನ ನ್ಯಾಯಾಂಗ ಬಂಧನ; ಪರಪ್ಪನ ಅಗ್ರಹಾರ ಜೈಲಿಗೆ ಶಿಫ್ಟ್‌

Prajwal Revanna Case: ಪ್ರಜ್ವಲ್‌ ರೇವಣ್ಣಗೆ 10 ದಿನ ಎಸ್‌ಐಟಿ ಕಸ್ಟಡಿ ಮುಗಿದ ಹಿನ್ನೆಲೆಯಲ್ಲಿ 14 ದಿನ ನ್ಯಾಯಾಂಗ ಬಂಧನ ವಿಧಿಸಲಾಗಿದೆ.

VISTARANEWS.COM


on

Prajwal Revanna Case
Koo

ಬೆಂಗಳೂರು: ಅತ್ಯಾಚಾರ ಮತ್ತು ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಮಾಜಿ ಸಂಸದ ಪ್ರಜ್ವಲ್‌ ರೇವಣ್ಣಗೆ (Prajwal Revanna Case) ಜೂನ್‌ 24ರವರೆಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. 10 ದಿನ ಎಸ್‌ಐಟಿ ಕಸ್ಟಡಿ ಮುಗಿದ ಹಿನ್ನೆಲೆಯಲ್ಲಿ 14 ದಿನ ನ್ಯಾಯಾಂಗ ಬಂಧನ ವಿಧಿಸಿ 42ನೇ ಎಸಿಎಂಎಂ ಕೋರ್ಟ್‌ ಆದೇಶ ಹೊರಡಿಸಿದೆ, ಹೀಗಾಗಿ ಪ್ರಜ್ವಲ್‌ ರೇವಣ್ಣನನ್ನು ಪರಪ್ಪನ ಅಗ್ರಹಾರ ಜೈಲಿಗೆ ಶಿಫ್ಟ್‌ ಮಾಡಲಾಗುತ್ತಿದೆ.

ಬಸವನಗುಡಿಯ ನಿವಾಸದಲ್ಲಿ ಸ್ಥಳ ಮಹಜರು ನಡೆಸಿದ ಬಳಿಕ ಪ್ರಜ್ವಲ್‌ನನ್ನು ಕೋರ್ಟ್‌ಗೆ ಹಾಜರುಪಡಿಸಲಾಗಿತ್ತು. ಪ್ರಕರಣದ ವಿಚಾರಣೆ ನಡೆಸಿದೆ ನ್ಯಾಯಾಧೀಶರು ಆರೋಪಿಗೆ 14 ನ್ಯಾಯಾಂಗ ಬಂಧನ ವಿಧಿಸಿದ್ದಾರೆ.

ವಿಚಾರಣೆ ವೇಳೆ ಪೊಲೀಸರಿಂದ ತೊಂದರೆ ಆಯ್ತಾ ಎಂದು ಪ್ರಜ್ವಲ್‌ಗೆ ಜಡ್ಜ್ ಪ್ರಶ್ನೆ ಕೇಳಿದ್ದು, ಇದಕ್ಕೆ ಏನೂ ತೊಂದರೆ ಆಗಿಲ್ಲ ಸ್ವಾಮಿ ಎಂದು ಉತ್ತರಿಸಿದ್ದಾರೆ. ನಂತರ ಎಸ್ಐಟಿಯಿಂದ ಮೆಡಿಕಲ್‌ ಟೆಸ್ಟ್ ಹಾಗೂ ಇನ್ನಿತರ ಮಾಹಿತಿ ಪಡೆದು ಪ್ರಜ್ವಲ್‌ಗೆ ನ್ಯಾಯಾಂಗ ಬಂಧನಕ್ಕೆ ನ್ಯಾಯಾಧೀಶರು ಸೂಚಿಸಿದ್ದಾರೆ.

ಇದನ್ನೂ ಓದಿ | ಮಾನಸಿಕ ಖಿನ್ನತೆಯಿಂದ ಕುದೂರು ಠಾಣೆಯ ಹೆಡ್‌ ಕಾನ್ಸ್‌ಟೇಬಲ್‌ ಆತ್ಮಹತ್ಯೆಗೆ ಶರಣು

ಎಸ್‌ಐಟಿಯಿಂದ ಪ್ರಜ್ವಲ್‌ ರೇವಣ್ಣ ಕೋಣೆ ತಲಾಶ್‌, ಭವಾನಿ ತುಳಸಿ ಪೂಜೆ!

bhavani revanna prajwal revanna case

ಬೆಂಗಳೂರು: ಲೈಂಗಿಕ ದೌರ್ಜನ್ಯ (Physical Abuse) ಪ್ರಕರಣದಲ್ಲಿ ಎಸ್‌ಐಟಿಯಿಂದ (SIT) ತನಿಖೆಗೆ ಒಳಗಾಗಿರುವ ಪ್ರಜ್ವಲ್‌ ರೇವಣ್ಣ (Prajwal Revanna Case) ಅವರ ಮನೆಯನ್ನು ಇಂದು ಮತ್ತೊಮ್ಮೆ ಮಹಜರು ಮಾಡಲಾಗಿದೆ. ಇದೇ ಸಂದರ್ಭದಲ್ಲಿ ತಾಯಿ ಭವಾನಿ ರೇವಣ್ಣ (Bhavani Revanna) ಅದೇ ಮನೆಯಲ್ಲೇ ಇದ್ದರೂ ಮಗನಿಗೆ ಮುಖಾಮುಖಿ ಆಗಲಿಲ್ಲ ಎಂದು ತಿಳಿದುಬಂದಿದೆ.

ಪ್ರಜ್ವಲ್ ರೇವಣ್ಣನನ್ನು ಎಸ್ಐಟಿ ಅಧಿಕಾರಿಗಳು ಇಂದು ಮಹಜರ್‌ಗೆ ಕರೆದೊಯ್ದರು. ಇಂದು ಪ್ರಜ್ವಲ್‌ನನ್ನು ನ್ಯಾಯಾಲಯಕ್ಕೆ ಹಾಜರು ಮಾಡುವ ಮುನ್ನ ಬೆಂಗಳೂರಿನ ಬಸವನಗುಡಿಯ ನಿವಾಸದಲ್ಲಿ ಮಹಜರ್ ಪ್ರಕ್ರಿಯೆ ನಡೆಸಿದರು. ಸ್ಥಳದಲ್ಲಿ ಬಿಗಿ ಭದ್ರತೆ ಒದಗಿಸಲಾಗಿತ್ತು. ಈ ಸಂದರ್ಭದಲ್ಲಿ ಪ್ರಜ್ವಲ್‌ ತಾಯಿ ಭವಾನಿ ರೇವಣ್ಣ ಅಸೌಖ್ಯದ ಕಾರಣ ಹೇಳಿ ಮನೆಯಲ್ಲೇ ಇದ್ದರು. ಆದರೆ ಪ್ರಜ್ವಲ್‌ಗೆ ಮುಖಾಮುಖಿಯಾಗಲಿಲ್ಲ.

ಈ ಮುನ್ನವೇ ಸ್ಥಳ ಮಹಜರು ಮಾಡುವ ವೇಳೆ ಅಡ್ಡಿಪಡಿಸದಂತೆ ಭವಾನಿ ಅವರಿಗೆ ಸೂಚನೆ ನೀಡಲಾಗಿತ್ತು ಎನ್ನಲಾಗಿದೆ. ಭವಾನಿ ಅವರು ಕೂಡ ಸಂತ್ರಸ್ತ ಮಹಿಳೆಯ ಕಿಡ್ನಾಪ್‌ ಕೇಸ್‌ನಲ್ಲಿ ಎಸ್‌ಐಟಿ ತನಿಖೆಗೆ ಒಳಗಾಗುತ್ತಿದ್ದಾರೆ. ಕೋರ್ಟ್‌ ಭವಾನಿಗೆ ಮಧ್ಯಂತರ ಜಾಮೀನು ನೀಡಿದ್ದು, ಸಂಜೆಯ ಒಳಗೆ ತನಿಖೆ ಮುಗಿಸಿ ಕಳಿಸುವಂತೆ ಎಸ್‌ಐಟಿಗೆ ನಿರ್ದೇಶನ ನೀಡಿದೆ.

ಪ್ರಜ್ವಲ್‌ ಮನೆಯಲ್ಲಿ ತನ್ನನ್ನು ಲೈಂಗಿಕವಾಗಿ ಕಿರುಕುಳಕ್ಕೆ ಒಳಪಡಿಸಲಾಗಿದೆ ಎಂದು ಸಂತ್ರಸ್ತೆ ತೋರಿಸಿದ ಕೊಠಡಿ ಮಹಜರು ಮಾಡಲಾಗಿದೆ. ಈ ಸಂದರ್ಭದಲ್ಲಿ ಭವಾನಿ ಅವರು ತುಳಸಿ ಕಟ್ಟೆಗೆ ಪೂಜೆ ಮಾಡುತ್ತಿರುವುದು ಕಂಡುಬಂತು. ಕೈಯಲ್ಲಿ ಊರುಗೋಲು ಹಿಡಿದುಕೊಂಡು ಬಂದ ಭವಾನಿ ರೇವಣ್ಣ, ಮೊದಲ ಮಹಡಿಯಲ್ಲಿರುವ ತುಳಸಿ‌ಕಟ್ಟೆಗೆ ಪೂಜೆ ಸಲ್ಲಿಸಿದರು. ಅನಾರೋಗ್ಯದ ಹಿನ್ನೆಲೆಯಲ್ಲಿ ಅವರು ವಾಕಿಂಗ್ ಸ್ಟಿಕ್ ಹಿಡಿದುಕೊಂಡು ಓಡಾಡುತ್ತಿದ್ದಾರೆ ಎನ್ನಲಾಗಿದೆ.

ಅಶ್ಲೀಲ ವಿಡಿಯೋದಲ್ಲಿ ತಾನಿರುವುದನ್ನು ಪ್ರಜ್ವಲ್‌ ಒಪ್ಪಿಕೊಂಡಿಲ್ಲ. ಹೀಗಾಗಿ, ಅಶ್ಲೀಲ ವಿಡಿಯೋದಲ್ಲಿ ಕಾಣಿಸುವ ಜಾಗಕ್ಕೂ ಬಸವನಗುಡಿ ಮನೆಯ ಕೋಣೆಗೂ ತಾಳೆ ಆಗ್ತಿದೆಯಾ ಎಂದು ಪರಿಶೀಲನೆ ನಡೆಸಲಾಗುತ್ತಿದೆ. ವೈರಲ್ ಆಗಿರುವ ವಿಡಿಯೋದಲ್ಲಿ ಎಲ್ಲೂ ಪ್ರಜ್ವಲ್ ಮುಖ ಕಾಣಿಸುತ್ತಿಲ್ಲ. ಹಾಗಾಗಿ ಮನೆಯ ಕೆಲ ಜಾಗಗಳನ್ನು ಎವಿಡೆನ್ಸ್ ಆಗಿ ಅಧಿಕಾರಿಗಳು ಪರಿಗಣಿಸಲಿದ್ದಾರೆ. ಸಂತ್ರಸ್ತೆ ದೂರಿನಲ್ಲಿ ಉಲ್ಲೇಖ ಮಾಡಿರುವ ಜಾಗ ಹಾಗೂ ಅಶ್ಲೀಲ ವಿಡಿಯೋದಲ್ಲಿರುವ ಜಾಗಗಳು ಮ್ಯಾಚ್‌ ಆದರೆ ಪ್ರಜ್ವಲ್‌ ಲಾಕ್‌ ಆದಂತೆಯೇ.

ಇನ್ನೊಂದೆಡೆ ವಿಡಿಯೋ ಮಾಡಿಕೊಂಡ ಮದರ್ ಡಿವೈಸ್‌ಗಾಗಿ ಎಸ್‌ಐಟಿ ಹುಡುಕಾಟ ನಡೆಸಿದೆ. ಈ ಮೂಲ ಮೊಬೈಲ್‌ ಕಳೆದುಹೋಗಿದೆ. ಒಂದು ವರ್ಷದ ಹಿಂದೆಯೇ ಈ ಬಗ್ಗೆ ಹೊಳೆನರಸೀಪುರ ಪೊಲೀಸ್‌ ಠಾಣೆಯಲ್ಲಿ ದೂರು ನೀಡಿರುವುದಾಗಿ ಪ್ರಜ್ವಲ್‌ ಹೇಳಿದ್ದಾರೆ.

Continue Reading

ರಾಯಚೂರು

Self Harming : ಮಾನಸಿಕ ಖಿನ್ನತೆ; ಮಗಳ ಜತೆ ನೇಣು ಬಿಗಿದುಕೊಂಡು ತಾಯಿ ಆತ್ಮಹತ್ಯೆ

Self Harming: ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಮಹಿಳೆಯೊಬ್ಬರು ಮಗಳೊಂದಿಗೆ ನೇಣು ಬಿಗಿದುಕೊಂಡು ಮೃತಪಟ್ಟಿದ್ದಾರೆ. ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದು, ತನಿಖೆಯನ್ನು ನಡೆಸುತ್ತಿದ್ದಾರೆ.

VISTARANEWS.COM


on

By

Self Harming
Koo

ರಾಯಚೂರು: ಮಗಳ ಜತೆ ತಾಯಿ ನೇಣು ಬಿಗಿದುಕೊಂಡು ಆತ್ಮಹತ್ಯೆ (Self Harming) ಮಾಡಿಕೊಂಡಿರುವ ಘಟನೆ ರಾಯಚೂರು ಜಿಲ್ಲೆಯ (Raichur News) ಲಿಂಗಸಗೂರು ತಾಲೂಕಿನ ಗುಡದನಾಳ ಗ್ರಾಮದಲ್ಲಿ ನಡೆದಿದೆ. ಲಕ್ಷೀ (46) ಮತ್ತು ಅಂಬಿಕಾ (13)ಆತ್ಮಹತ್ಯೆ ಮಾಡಿಕೊಂಡು ಮೃತಪಟ್ಟವರು.

ಮಾನಸಿಕ ಖಿನ್ನತೆಯಿಂದ ಆತ್ಮಹತ್ಯೆಗೆ ಶರಣಾಗಿರಬಹುದೆಂದು ಶಂಕಿಸಲಾಗಿದೆ. 14 ವರ್ಷಗಳ ಹಿಂದೆಯೇ ಪತಿಯಿಂದ ದೂರವಾಗಿದ್ದ ಲಕ್ಷ್ಮೀ ಬೆಂಗಳೂರಿನಲ್ಲಿ ಕೂಲಿ ಕೆಲಸ ಮಾಡುತ್ತಿದ್ದರು. 1 ತಿಂಗಳ ಹಿಂದಷ್ಟೇ ಗ್ರಾಮಕ್ಕೆ ತಾಯಿ-ಮಗಳು ಬಂದಿದ್ದರು. ಸುಮಾರು ವರ್ಷಗಳಿಂದ ಲಕ್ಷ್ಮಿ ಖಿನ್ನತೆಗೆ ಒಳಗಾಗಿದ್ದರು ಎನ್ನಲಾಗಿದೆ.

ಸೋಮವಾರ ಏಕಾಏಕಿ ಮನೆಯಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೃತ ಲಕ್ಷ್ಮೀಯ ಪುತ್ರ ಪಂಪನಗೌಡ ನೀಡಿದ ದೂರಿನ್ವಯ ಪ್ರಕರಣ ದಾಖಲಾಗಿದೆ. ಲಿಂಗಸಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಲಾಗಿದೆ.

ಇದನ್ನೂ ಓದಿ: Murder Case : ಮೈಸೂರಿನಲ್ಲಿ ಅನ್ನದಾನೇಶ್ವರ ಮಠದ ಹಿರಿಯ ಸ್ವಾಮೀಜಿಯ ಬರ್ಬರ ಕೊಲೆ

ನಗ್ನ ಫೋಟೋ ತೋರಿಸಿ ಬ್ಲ್ಯಾಕ್‌ಮೇಲ್‌; ಮರ್ಯಾದೆಗೆ ಅಂಜಿದ ತಂದೆ ಬಳಿಕ ಮಗಳು ಮೃತ್ಯು

ಮೈಸೂರು/ಚಾಮರಾಜನಗರ: ಮಲೆಮಹದೇಶ್ವರ ಬೆಟ್ಟದಲ್ಲಿ (MM Hills) ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ (Self Harming) ಯತ್ನಿಸಿದ ಪ್ರಕರಣಕ್ಕೆ (Physical Abuse) ಸಂಬಂಧಿಸಿದ್ದಂತೆ ಮೊನ್ನೆ ಶುಕ್ರವಾರ ತಂದೆ ಮಹಾದೇವನಾಯಕ (65) ಮೃತಪಟ್ಟಿದ್ದರು. ಇಂದು ಸೋಮವಾರ (ಜೂ.10) ಚಿಕಿತ್ಸೆ ಫಲಕಾರಿಯಾಗದೆ ಅವರ ಮಗಳು ಲೀಲಾವತಿ (45 ) ಮೃತಪಟ್ಟಿದ್ದಾರೆ. ಲೀಲಾವತಿಗೆ ಮೂರು ದಿನಗಳಿಂದ ಚಾಮರಾಜನಗರ ಸಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಕ್ರಿಮಿ ನಾಶಕ ಸೇವಿಸಿದ ತೀವ್ರತೆಗೆ ಮೃತಪಟ್ಟಿದ್ದಾರೆ.

ಲೀಲಾವತಿ ಅವರ ಮಗಳು ರಿಷೀತಾಳ ನಗ್ನ ಫೋಟೊ ತೋರಿಸಿ ಕಾಮುಕನೊಬ್ಬ ಬ್ಲ್ಯಾಕ್‌ಮೇಲ್‌ ಮಾಡುತ್ತಿದ್ದ. ಇದೇ ಕಾರಣಕ್ಕೆ ಮರ್ಯಾದೆಗೆ ಅಂಜಿ ಒಂದೇ ಕುಟುಂಬದ ನಾಲ್ವರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು. ಘಟನೆಯಲ್ಲಿ ತಂದೆ-ಮಗಳು ಮೃತಪಟ್ಟರೆ, ಅಜ್ಜಿ- ಮೊಮ್ಮಗಳ ಸ್ಥಿತಿ ಗಂಭೀರವಾಗಿದ್ದು, ಇಬ್ಬರಿಗೂ ಚಾಮರಾಜನಗರ ಸಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ.

ಸಂತ್ರಸ್ತೆಯ ದೂರು ಸ್ವೀಕರಿಸದ ಮೂವರು ಅಮಾನತು

ಒಂದೇ ಕುಟುಂಬದ ನಾಲ್ವರು ವಿಷ ಸೇವಿಸಿ, ಇಬ್ಬರು ಸಾವಿಗೀಡಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರಿನ ಕೆಆರ್‌ನಗರ ಠಾಣೆ ಇನ್ಸ್‌ಪೆಕ್ಟರ್, ಎಎಸ್‌ಐ ಹಾಗೂ ಮುಖ್ಯಪೇದೆ ಅಮಾನತು ಮಾಡಲಾಗಿದೆ. ಸಂತ್ರಸ್ತೆಯ ಪೋಷಕರ ದೂರು ಸ್ವೀಕರಿಸದ ಹಿನ್ನೆಲೆಯಲ್ಲಿ ಇನ್‌ಸ್ಪೆಕ್ಟರ್ ಪಿ.ಪಿ.ಸಂತೋಷ್, ಸಹಾಯಕ ಸಬ್‌ ಇನ್‌ಸ್ಪೆಕ್ಟರ್ ಗಿರೀಶ್ ಹಾಗೂ ಮುಖ್ಯಪೇದೆ ರಾಘವೇಂದ್ರ ಎಂಬುವವರನ್ನು ಅಮಾನತು ಮಾಡಲಾಗಿದೆ. ಅಮಾನತು ಮಾಡಿ ಜಿಲ್ಲಾ ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ನಂದಿನಿ ಆದೇಶಿಸಿದ್ದಾರೆ.

Physical Abuse
ಅಮಾನತುಗೊಂಡ ಅಧಿಕಾರಿಗಳು

ಅಪ್ರಾಪ್ತೆ ಕುಟುಂಬಸ್ಥರು ನೀಡಿದ ದೂರನ್ನು ಎಸ್.ಸಿ., ಎಸ್.ಟಿ. ದೌರ್ಜನ್ಯ ತಡೆ ಕಾಯ್ದೆ, ಪೋಕ್ಸೋ ಕಾಯ್ದೆ ಹಾಗೂ ಐಪಿಸಿ 370 ಸೆಕ್ಷನ್‌ನಡಿ ದಾಖಲು ಮಾಡಿಕೊಳ್ಳದೇ ಪೊಲೀಸರು ನಿರ್ಲಕ್ಷ್ಯ ವಹಿಸಿದ್ದರು. ಕೆಆರ್‌ನಗರ ತಾಲೂಕಿನ ಗ್ರಾಮವೊಂದರ ಲೋಕೇಶ್ ಎಂಬಾತ ಸಂತ್ರಸ್ತೆ ಬಾಲಕಿಯ ಖಾಸಗಿ ಫೋಟೋ, ವಿಡಿಯೋ ಮಾಡಿ ವೈರಲ್ ಮಾಡುವುದಾಗಿ ಬ್ಲಾಕ್‌ಮೇಲ್ ಮಾಡುತ್ತಿದ್ದ.

ಈ ಸಂಬಂಧ ಸಂತ್ರಸ್ತೆಯ ಪೋಷಕರು ಕೆ.ಆರ್.ನಗರ ಠಾಣೆಗೆ ದೂರು ನೀಡಲು ಮುಂದಾಗಿದ್ದರು. ಆದರೆ ದೂರು ದಾಖಲಿಸಿಕೊಳ್ಳದೆ ಪೊಲೀಸರು ನಿರ್ಲಕ್ಷ್ಯ ವಹಿಸಿದ್ದರು. ತಮಗೆ ನ್ಯಾಯ ಸಿಗುವ ಭರವಸೆ ಇಲ್ಲದೆ ಇಡೀ ಕುಟುಂಬ ಆತ್ಮಹತ್ಯೆ ಮಾಡಿಕೊಳ್ಳುವ ನಿರ್ಧಾರಕ್ಕೆ ಬಂದಿತ್ತು. ಅದರಂತೆ ಕಳೆದ ಶುಕ್ರವಾರ ಮಹದೇಶ್ವರ ಬೆಟ್ಟಕ್ಕೆ ತೆರಳಿ ದೇವರ ದರ್ಶನ ಪಡೆದು ವಾಪಸ್ ಬರುವಾಗ ತಾಳಬೆಟ್ಟದಲ್ಲಿ ಆತ್ಮಹತ್ಯೆ ಯತ್ನಿಸಿದ್ದರು. ಘಟನೆಯಲ್ಲಿ ಬಾಲಕಿ ರಿಷಿತಾಳ ತಾತ ಮೃತಪಟ್ಟಿದ್ದರು. ಅಸ್ವಸ್ಥಗೊಂಡಿದ್ದ ಅಜ್ಜಿ, ತಾಯಿ, ಮೊಮ್ಮಗಳನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಇದೀಗ ರಿಷಿತಾಳ ತಾಯಿ ಕೂಡ ಮೃತಪಟ್ಟಿದ್ದು, ಅಜ್ಜಿ, ಮೊಮ್ಮಗಳು ಸಾವು-ಬದುಕಿನ ಮಧ್ಯೆ ಹೋರಾಡುತ್ತಿದ್ದಾರೆ.

ಇದನ್ನೂ ಓದಿ: Self Harming : ಮಗಳ ನಗ್ನ ಫೋಟೊ ತೋರಿಸಿ ಪ್ರಿಯಕರ ಬ್ಲ್ಯಾಕ್‌ಮೇಲ್‌; ಮರ್ಯಾದೆಗೆ ಅಂಜಿ ವಿಷ ಸೇವಿಸಿದ ಕುಟುಂಬಸ್ಥರು

ಬಾಲಕಿಯ ಡೆತ್‌ನೋಟ್‌ ಪತ್ತೆ

ಮಹಾದೇವನಾಯಕ ಹಾಗೂ ಗೌರಮ್ಮ ದಂಪತಿಯ ಮಗಳು ಲೀಲಾವತಿ ಹಾಗೂ ಈಕೆ ಮಗಳು ರಿಷಿತಾ ಈ ನಾಲ್ವರು ಆತ್ಮಹತ್ಯೆಗೂ ಮುನ್ನ ಡೆತ್‌ನೋಟ್‌ ಬರೆದಿಟ್ಟಿದ್ದಾರೆ. ಕಾಮ ಕ್ರಿಮಿ ಲೋಕೇಶ್ ಕೊಟ್ಟ ಟಾರ್ಚರ್‌ಗೆ ಬೇಸತ್ತು ಇಡೀ ಕುಟುಂಬ ಕ್ರಿಮಿ ನಾಶಕ ಸೇವಿಸಿದ್ದರು. ಅಪ್ರಾಪ್ತೆ ಬರೆದಿಟ್ಟ ಡೆತ್‌ನೋಟ್ ವಿಸ್ತಾರ ನ್ಯೂಸ್‌ಗೆ ಲಭ್ಯವಾಗಿದೆ.

Physical abuse lokesh
ಆರೋಪಿ ಲೋಕೇಶ್‌

ಡೆತ್‌ನೋಟ್‌ನಲ್ಲಿ ಆರೋಪಿ ಲೋಕೇಶ್‌ ಕೊಟ್ಟ ಹಿಂಸೆಯನ್ನು ಎಳೆ ಎಳೆಯಾಗಿ ಬರೆದಿಟ್ಟಿದ್ದಾಳೆ. ಲೋಕೇಶ್ ಎಲ್ಲಾ ಹೆಣ್ಣು ಮಕ್ಕಳನ್ನು ಕೆಟ್ಟ ದೃಷ್ಠಿಯಿಂದ ನೋಡುತ್ತಾನೆ. ನನ್ನನ್ನು ಸಹ ಲೋಕೇಶ್ ಕೆಟ್ಟ ದೃಷ್ಠಿಯಿಂದ ನೋಡಿದ್ದ. ನಮ್ಮ ಕುಟುಂಬದ ಮಾನ ಮರ್ಯಾದೆ ಕಳೆದು ಹಾಕಿದ್ದಾನೆ. ಲೋಕೇಶ್‌ನನ್ನು ಸುಮ್ಮನೆ ಬಿಡಬೇಡಿ, ಆತನನ್ನ ಸುಮ್ಮನೆ ಬಿಟ್ಟರೆ ನನ್ನಂತ ಎಷ್ಟೋ ಹೆಣ್ಣು ಮಕ್ಕಳ ಜೀವ ಹಾಳಾಗುತ್ತೆ ಎಂದು ತನಗೆ ಆದ ಅಪಮಾನ ಹಾಗೂ ಮಾನಸಿಕ ಹಿಂಸೆಯ ಕುರಿತು ಬರೆದಿಟ್ಟಿದ್ದಾಳೆ.

ಶವವಿಟ್ಟು ಗ್ರಾಮಸ್ಥರ ಪ್ರತಿಭಟನೆ

ಈ ವಿಷಯ ತಿಳಿಯುತ್ತಿದ್ದ ಆಕ್ರೋಶಗೊಂಡ ಚಂದಗಾಲು ಗ್ರಾಮಸ್ಥರು ಮಹದೇವನಾಯಕರ ಮೃತದೇಹವನ್ನು ರಸ್ತೆಯಲ್ಲಿಟ್ಟು ಪ್ರತಿಭಟನೆ ನಡೆಸಿದರು. ಕೆ.ಆರ್.ನಗರ ಮುಖ್ಯರಸ್ತೆಯಲ್ಲಿ ಶವ ಇಟ್ಟು ಪ್ರತಿಭಟಿಸಿ, ಆರೋಪಿಗೆ ಉಗ್ರ ಶಿಕ್ಷೆ ಕೊಡಬೇಕೆಂದು ಆಗ್ರಹಿಸಿದರು. ನಿರ್ಲಕ್ಷ್ಯ ವಹಿಸಿದ ಪೊಲೀಸರ ಮೇಲೂ ಕಠಿಣ ಕ್ರಮ ಆಗಬೇಕೆಂದರು. ರಸ್ತೆ ತಡೆಯಿಂದಾಗಿ ಕೆಲಕಾಲ ಸಂಚಾರ ಅಸ್ತವ್ಯಸ್ತವಾಗಿತ್ತು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮೈಸೂರು

Murder Case : ಮೈಸೂರಿನಲ್ಲಿ ಅನ್ನದಾನೇಶ್ವರ ಮಠದ ಹಿರಿಯ ಸ್ವಾಮೀಜಿಯ ಬರ್ಬರ ಕೊಲೆ

Murder case : ಮೈಸೂರಿನಲ್ಲಿ ಅನ್ನದಾನೇಶ್ವರ ಮಠದ ಹಿರಿಯ ಸ್ವಾಮೀಜಿಯನ್ನು ಅವರ ಸಹಾಯಕನೇ ಬರ್ಬರವಾಗಿ ಕೊಂದಿದ್ದಾನೆ. ಕೊಲೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಸ್ಥಳಕ್ಕೆ ಪೊಲೀಸರು ದೌಡಾಯಿಸಿದ್ದು ಪರಿಶೀಲನೆ ನಡೆಸುತ್ತಿದ್ದಾರೆ.

VISTARANEWS.COM


on

By

murder case
Koo

ಮೈಸೂರು: ಮೈಸೂರಿನಲ್ಲಿ ಹಿರಿಯ ಸ್ವಾಮೀಜಿಯೊಬ್ಬರ ಬರ್ಬರ (Murder case) ಕೊಲೆಯಾಗಿದೆ. ಮೈಸೂರಿನ ಸಿದ್ದಾರ್ಥನಗರದಲ್ಲಿರುವ ಅನ್ನದಾನೇಶ್ವರ ಮಠದ ಶಿವಾನಂದ (90) ಸ್ವಾಮೀಜಿ ಕೊಲೆಯಾದವರು.

ಶಿವಾನಂದ ಸ್ವಾಮೀಜಿ ಅವರ ಸಹಾಯಕನಾಗಿದ್ದ ಭದ್ರತಾ ಸಿಬ್ಬಂದಿಯಿಂದಲೇ ಕೊಲೆ ನಡೆದಿದೆ. ರವಿ (60) ಎಂಬಾತನಿಂದ ಈ ಕೃತ್ಯ ನಡೆದಿದೆ. ಶಿವಾನಂದ ಸ್ವಾಮೀಜಿಯನ್ನು ಮಾರಕಾಸ್ತ್ರದಿಂದ ಚುಚ್ಚಿ ಕೊಲೆ ಮಾಡಲಾಗಿದೆ.

ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ನಜರ್‌ಬಾದ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹತ್ಯೆಗೆ ನಿಖರ ಕಾರಣವೇನು ಎಂಬುದು ತಿಳಿದು ಬಂದಿಲ್ಲ. ಮಂಚದ ಮೇಲೆ ಮಲಗಿದ್ದಲ್ಲೇ ಶಿವಾನಂದ ಸ್ವಾಮೀಜಿಗೆ ಮಾರಕಾಸ್ತ್ರದಿಂದ ಕೊಚ್ಚಿ ಕೊಲೆ ಮಾಡಲಾಗಿದೆ.

ಇದನ್ನೂ ಓದಿ: Physical Abuse : ಪಿಕ್‌ ಅಪ್, ಡ್ರಾಪ್ ನೆಪದಲ್ಲಿ ಸಲುಗೆ; ಅಂಕಲ್ ಗಾಳಕ್ಕೆ ಸಿಲುಕಿದ ಬಾಲಕಿಯ ನರಳಾಟ

ಹಾಸನದಲ್ಲಿ ಕಾರಿನಿಂದ ಗುದ್ದಿಸಿ ವ್ಯಕ್ತಿಯ ಕೊಲೆ

ಹಾಲಿನ ಡೈರಿ ವಿಚಾರದಲ್ಲಿ ಗಲಾಟೆ ಹಿನ್ನೆಲೆಯಲ್ಲಿ ಕಾರಿನಿಂದ ಗುದ್ದಿಸಿ ವ್ಯಕ್ತಿಯ ಬರ್ಬರ ಕೊಲೆ ಮಾಡಲಾಗಿದೆ. ಹಾಸನ ತಾಲೂಕಿನ ದುದ್ದ ಸಮೀಪದ ಮಾಯಸಮುದ್ರ ಗ್ರಾಮದ ಬಳಿ ಘಟನೆ ನಡೆದಿದೆ. ಉದ್ದೂರುಹಳ್ಳಿ ಗ್ರಾಮದ ನಿವಾಸಿ ಅಣ್ಣಪ್ಪ(64) ಸ್ಥಳದಲ್ಲೆ ಮೃತಪಟ್ಟರೆ, ಮಂಜುನಾಥ ಎಂಬುಬಬರಿಗೆ ಗಂಭೀರ ಗಾಯವಾಗಿದೆ.

ಉದ್ದೂರುಹಳ್ಳಿಯ ಧರ್ಮ ಹಾಗು ಆತನ ಸಂಬಂಧಿ ಚಿದಾನಂದ್ ಎಂಬಾತನಿಂದ ಕೊಲೆ ನಡೆದಿದೆ ಎನ್ನಲಾಗಿದೆ. ಹಾಲಿನ ಡೈರಿಯಲ್ಲಿ ಕೆಲಸ ಮಾಡುವ ವಿಚಾರಕ್ಕೆ ಧರ್ಮ ಹಾಗು ಮಂಜುನಾಥ ನಡುವೆ ಗಲಾಟೆ ನಡೆದಿತ್ತು. ಗಲಾಟೆಯನ್ನೇ ಮನಸ್ಸಿನಲ್ಲಿಟ್ಟುಕೊಂಡ ಆರೋಪಿಗಳು ಇನ್ನೋವಾ ಕಾರಿನಿಂದ ಗುದ್ದಿಸಿ ಕೊಂದಿದ್ದಾರೆ. ಅದೃಷ್ಟವಶಾತ್ ಅಪಾಯದಿಂದ ಮಂಜುನಾಥ ಪಾರಾಗಿದ್ದರೆ, ಅಣ್ಣಪ್ಪ ಮೃತಪಟ್ಟಿದ್ದಾರೆ.

ಹಂತಕರು ಕೊಲೆಗೈದು ಎಸ್ಕೇಪ್ ಆಗಿದ್ದು, ದುದ್ದ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಭಾನುವಾರ ರಾತ್ರಿ ಘಟನೆ ನಡೆದಿದೆ. ಗಾಯಾಳು ಮಂಜುನಾಥ್‌ನನ್ನು ಹಾಸನದ ವೈದ್ಯಕೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಆರೋಪಿಗಳ ಪತ್ತೆಗಾಗಿ ಪೊಲೀಸರು ಬಲೆ ಬೀಸಿದ್ದಾರೆ.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading

ಮೈಸೂರು

Physical Abuse : ಪಿಕ್‌ ಅಪ್, ಡ್ರಾಪ್ ನೆಪದಲ್ಲಿ ಸಲುಗೆ; ಅಂಕಲ್ ಗಾಳಕ್ಕೆ ಸಿಲುಕಿದ ಬಾಲಕಿಯ ನರಳಾಟ

Physical Abuse : ನಿನ್ನ ತಾತ ನನಗೆ ಪರಿಚಯ ಎಂದು ಹೇಳಿ ಆರೋಪಿ ಲೋಕೇಶ್‌ ಬಾಲಕಿಯ ಜತೆಗೆ ಸಲುಗೆ ಬೆಳೆಸಿದ್ದ ಎನ್ನಲಾಗಿದೆ. ಖಾಸಗಿ ವಿಡಿಯೋ ಮಾಡಿಕೊಂಡು ಬ್ಲ್ಯಾಕ್‌ಮೇಲ್ ಮಾಡಿ ಕರೆದಾಗ ಬರುವಂತೆ ಟಾರ್ಚರ್‌ ಕೊಟ್ಟಿದ್ದ ಎನ್ನಲಾಗಿದೆ.

VISTARANEWS.COM


on

By

Physical Abuse
ಬಾಲಕಿ ರಿಷಿತಾ ಹಾಗೂ ಆರೋಪಿ ಲೋಕೇಶ್‌
Koo

ಮೈಸೂರು: ಮರ್ಯಾದೆಗೆ ಅಂಜಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ (Self harming) ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಲೋಕೇಶ್‌ ಪಿಕ್‌ ಅಪ್‌ ಡ್ರಾಪ್‌ ಮಾಡುವ ನೆಪದಲ್ಲಿ ಪರಿಚಯ ಮಾಡಿಕೊಂಡಿದ್ದ ಎನ್ನಲಾಗಿದೆ. ಬೈಕ್‌ನಲ್ಲಿ ಬಂದ ಹೆಣ್ಣು ಬಾಕನ ಬಲೆಗೆ ಪಿಯುಸಿ ಓದುತ್ತಿದ್ದ ರಿಷಿತಾ ಬಿದ್ದಿದ್ದಳು. ಅಂಕಲ್ ಗಾಳಕ್ಕೆ ಸಿಲುಕಿದ (Physical Abuse) ಬಾಲಕಿಯ ಕುಟುಂಬವು ಮಾನ ಮರ್ಯಾದೆಗೆ ಹೆದರಿ ನಾಶವಾಗಿದೆ. ರಿಷಿತಾ ಕೆಆರ್‌ ನಗರದ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವ್ಯಾಸಂಗ ಮಾಡುತ್ತಿದ್ದಳು. ಕಾಲೇಜಿಗೆ ಹೋಗಿ ಬರುವಾಗ ಲೋಕೇಶ್‌ ಪರಿಚಯವಾಗಿದ್ದ. ರಿಷಿತಾಳಿಗೆ ನಿನ್ನ ತಾತ ನನಗೆ ಗೊತ್ತಿರುವವರು ಎಂದು ಪರಿಚಯ ಮಾಡಿಕೊಂಡು ಊರಿಗೆ ಡ್ರಾಪ್ ಮಾಡುತ್ತಲೇ ಸಲುಗೆ ಬೆಳೆಸಿಕೊಂಡಿದ್ದ.

ಈ ವೇಳೆ ಖಾಸಗಿ ವಿಡಿಯೋ ಮಾಡಿಕೊಂಡು ಬ್ಲ್ಯಾಕ್‌ಮೇಲ್ ಮಾಡಿ ಕರೆದಾಗ ಬರುವಂತೆ ಟಾರ್ಚರ್‌ ಕೊಟ್ಟಿದ್ದ ಎನ್ನಲಾಗಿದೆ. ಒಂದು ದಿನ ಕಾರಿನಲ್ಲಿ ಬಂದು ಅಡ್ಡಗಟ್ಟಿ ಬಾಲಕಿಗೆ ಬೆದರಿಕೆ ಹಾಕಿದ್ದ. ಈ ವೇಳೆ ಆರೋಪಿಯಿಂದ ಮೊಬೈಲ್ ಕಸಿದುಕೊಂಡು ಕಲ್ಲಿನಿಂದ ಜಜ್ಜಿ ಹಾಕಿದ್ದಳು.

ಬಳಿಕ ನಿನ್ನ ಮೊಮ್ಮಗಳು ನನ್ನ ಮೊಬೈಲ್ ಒಡೆದು ಹಾಕಿದ್ದಾಳೆ ಎಂದು ಮನೆ ಬಾಗಿಲಿಗೆ ಬಂದು ಆರೋಪಿ ಲೋಕೇಶ್‌ ಗಲಾಟೆ ಮಾಡಿದ್ದ. ಬಳಿಕ ಎಲ್ಲವನ್ನೂ ವಿಚಾರಿಸಿದಾಗ ಮನನೊಂದ ಕುಟುಂಬಸ್ಥರು ಪೊಲೀಸ್ ಠಾಣೆಗೆ ದೂರು ನೀಡಿದರು. ಆದರೆ ಪೊಲೀಸರು ಯಾವುದೇ ದೂರು ದಾಖಲಿಸಿಕೊಳ್ಳದೆ ನಿರ್ಲಕ್ಷ್ಯ ತೋರಿದ್ದಕ್ಕೆ ನ್ಯಾಯ ಸಿಗಲ್ಲ ಎಂದು ಭಾವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ.

ಇದನ್ನೂ ಓದಿ: Physical Abuse : ನಗ್ನ ಫೋಟೋ ತೋರಿಸಿ ಬ್ಲ್ಯಾಕ್‌ಮೇಲ್‌; ಮರ್ಯಾದೆಗೆ ಅಂಜಿದ ತಂದೆ ಬಳಿಕ ಮಗಳು ಮೃತ್ಯು, ಮತ್ತಿಬ್ಬರ ಸ್ಥಿತಿ ಗಂಭೀರ

ಮೃತರ ಕುಟುಂಬಸ್ಥರಿಗೆ ಮಾಜಿ ಸಚಿವ ಸಾ.ರಾ.ಮಹೇಶ್ ಸಾಂತ್ವನ

ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತರ ನಿವಾಸಕ್ಕೆ ಮಾಜಿ ಸಚಿವ ಸಾ.ರಾ.ಮಹೇಶ್ ಭೇಟಿ ನೀಡಿದರು. ಮೃತ ಕುಟುಂಬದ ಸದಸ್ಯರ ಜತೆ ಮಾತುಕತೆ ನಡೆಸಿದರು. ಮೃತ ಮಹದೇವನಾಯ್ಕ ಪುತ್ರ ಮಂಜುಗೆ ಸಾಂತ್ವನ ಹೇಳಿದರು.

ನಾಲ್ವರಲ್ಲಿ ಅಪ್ರಾಪ್ತೆಯ ತಾತ ಮತ್ತು ತಾಯಿ ಮೃತಪಟ್ಟರೆ, ಬಾಲಕಿ ಹಾಗೂ ಅಜ್ಜಿಗೆ ಚಿಕಿತ್ಸೆ ಮುಂದುವರಿದಿದೆ. ಇತ್ತ ಗ್ರಾಮಸ್ಥರು ಹಾಗೂ ಕುಟುಂಬಸ್ಥರು ಗ್ರಾಮದಲ್ಲೇ ಮೃತದೇಹ ಇಟ್ಟುಕೊಂಡಿದ್ದಾರೆ. ದೂರು ಕೊಟ್ಟರೂ ಪ್ರಕರಣ ದಾಖಲಿಸದ ಹಿನ್ನೆಲೆಯಲ್ಲಿ ಪೊಲೀಸರ ವಿರುದ್ಧ ಪ್ರಕರಣ ದಾಖಲಾಗಬೇಕು ಹಾಗೂ ಮೃತ ಕುಟುಂಬಸ್ಥರಿಗೆ ಸೂಕ್ತ ಪರಿಹಾರಕ್ಕೆ ಒತ್ತಾಯಿಸಿದರು. ಮೃತಪಟ್ಟು ಎರಡು ದಿನವಾದರೂ ಇನ್ನು ಅಂತ್ಯಕ್ರಿಯೆ ಮಾಡಿಲ್ಲ.

ತಂದೆ ಬಳಿಕ ಮಗಳು ಮೃತ್ಯು

ಮಲೆಮಹದೇಶ್ವರ ಬೆಟ್ಟದಲ್ಲಿ (MM Hills) ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ (Self Harming) ಯತ್ನಿಸಿದ ಪ್ರಕರಣಕ್ಕೆ (Physical Abuse) ಸಂಬಂಧಿಸಿದ್ದಂತೆ ಮೊನ್ನೆ ಶನಿವಾರ ತಂದೆ ಮಹಾದೇವನಾಯಕ (65) ಮೃತಪಟ್ಟಿದ್ದರು. ಇಂದು ಸೋಮವಾರ (ಜೂ.10) ಚಿಕಿತ್ಸೆ ಫಲಕಾರಿಯಾಗದೆ ಅವರ ಮಗಳು ಲೀಲಾವತಿ (45 ) ಮೃತಪಟ್ಟಿದ್ದಾರೆ. ಲೀಲಾವತಿಗೆ ಮೂರು ದಿನಗಳಿಂದ ಚಾಮರಾಜನಗರ ಸಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಕ್ರಿಮಿ ನಾಶಕ ಸೇವಿಸಿದ ತೀವ್ರತೆಗೆ ಮೃತಪಟ್ಟಿದ್ದಾರೆ.

ಲೀಲಾವತಿ ಅವರ ಮಗಳು ರಿಷೀತಾಳ ನಗ್ನ ಫೋಟೊ ತೋರಿಸಿ ಕಾಮುಕನೊಬ್ಬ ಬ್ಲ್ಯಾಕ್‌ಮೇಲ್‌ ಮಾಡುತ್ತಿದ್ದ. ಇದೇ ಕಾರಣಕ್ಕೆ ಮರ್ಯಾದೆಗೆ ಅಂಜಿ ಒಂದೇ ಕುಟುಂಬದ ನಾಲ್ವರು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದರು. ಘಟನೆಯಲ್ಲಿ ತಂದೆ-ಮಗಳು ಮೃತಪಟ್ಟರೆ, ಅಜ್ಜಿ- ಮೊಮ್ಮಗಳ ಸ್ಥಿತಿ ಗಂಭೀರವಾಗಿದ್ದು, ಇಬ್ಬರಿಗೂ ಚಾಮರಾಜನಗರ ಸಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ.

ಬಾಲಕಿಯ ಡೆತ್‌ನೋಟ್‌ ಪತ್ತೆ

ಮಹಾದೇವನಾಯಕ ಹಾಗೂ ಗೌರಮ್ಮ ದಂಪತಿಯ ಮಗಳು ಲೀಲಾವತಿ ಹಾಗೂ ಈಕೆ ಮಗಳು ರಿಷಿತಾ ಈ ನಾಲ್ವರು ಆತ್ಮಹತ್ಯೆಗೂ ಮುನ್ನ ಡೆತ್‌ನೋಟ್‌ ಬರೆದಿಟ್ಟಿದ್ದಾರೆ. ಕಾಮ ಕ್ರಿಮಿ ಲೋಕೇಶ್ ಕೊಟ್ಟ ಟಾರ್ಚರ್‌ಗೆ ಬೇಸತ್ತು ಇಡೀ ಕುಟುಂಬ ಕ್ರಿಮಿ ನಾಶಕ ಸೇವಿಸಿದ್ದರು. ಅಪ್ರಾಪ್ತೆ ಬರೆದಿಟ್ಟ ಡೆತ್‌ನೋಟ್ ವಿಸ್ತಾರ ನ್ಯೂಸ್‌ಗೆ ಲಭ್ಯವಾಗಿದೆ.

Physical abuse lokesh
ಆರೋಪಿ ಲೋಕೇಶ್‌

ಡೆತ್‌ನೋಟ್‌ನಲ್ಲಿ ಆರೋಪಿ ಲೋಕೇಶ್‌ ಕೊಟ್ಟ ಹಿಂಸೆಯನ್ನು ಎಳೆ ಎಳೆಯಾಗಿ ಬರೆದಿಟ್ಟಿದ್ದಾಳೆ. ಲೋಕೇಶ್ ಎಲ್ಲಾ ಹೆಣ್ಣು ಮಕ್ಕಳನ್ನು ಕೆಟ್ಟ ದೃಷ್ಠಿಯಿಂದ ನೋಡುತ್ತಾನೆ. ನನ್ನನ್ನು ಸಹ ಲೋಕೇಶ್ ಕೆಟ್ಟ ದೃಷ್ಠಿಯಿಂದ ನೋಡಿದ್ದ. ನಮ್ಮ ಕುಟುಂಬದ ಮಾನ ಮರ್ಯಾದೆ ಕಳೆದು ಹಾಕಿದ್ದಾನೆ. ಲೋಕೇಶ್‌ನನ್ನು ಸುಮ್ಮನೆ ಬಿಡಬೇಡಿ, ಆತನನ್ನ ಸುಮ್ಮನೆ ಬಿಟ್ಟರೆ ನನ್ನಂತ ಎಷ್ಟೋ ಹೆಣ್ಣು ಮಕ್ಕಳ ಜೀವ ಹಾಳಾಗುತ್ತೆ ಎಂದು ತನಗೆ ಆದ ಅಪಮಾನ ಹಾಗೂ ಮಾನಸಿಕ ಹಿಂಸೆಯ ಕುರಿತು ಬರೆದಿಟ್ಟಿದ್ದಾಳೆ.

ಶವವಿಟ್ಟು ಗ್ರಾಮಸ್ಥರ ಪ್ರತಿಭಟನೆ

ಈ ವಿಷಯ ತಿಳಿಯುತ್ತಿದ್ದ ಆಕ್ರೋಶಗೊಂಡ ಚಂದಗಾಲು ಗ್ರಾಮಸ್ಥರು ಮಹದೇವನಾಯಕರ ಮೃತದೇಹವನ್ನು ರಸ್ತೆಯಲ್ಲಿಟ್ಟು ಪ್ರತಿಭಟನೆ ನಡೆಸಿದರು. ಕೆ.ಆರ್.ನಗರ ಮುಖ್ಯರಸ್ತೆಯಲ್ಲಿ ಶವ ಇಟ್ಟು ಪ್ರತಿಭಟಿಸಿ, ಆರೋಪಿಗೆ ಉಗ್ರ ಶಿಕ್ಷೆ ಕೊಡಬೇಕೆಂದು ಆಗ್ರಹಿಸಿದರು. ನಿರ್ಲಕ್ಷ್ಯ ವಹಿಸಿದ ಪೊಲೀಸರ ಮೇಲೂ ಕಠಿಣ ಕ್ರಮ ಆಗಬೇಕೆಂದರು. ರಸ್ತೆ ತಡೆಯಿಂದಾಗಿ ಕೆಲಕಾಲ ಸಂಚಾರ ಅಸ್ತವ್ಯಸ್ತವಾಗಿತ್ತು.

ಈ ಸಂಗತಿಯ ಕುರಿತು ನಿಮ್ಮ ಅನಿಸಿಕೆ ಏನು? ಕಾಮೆಂಟ್ ಮೂಲಕ ತಿಳಿಸಿ

Continue Reading
Advertisement
Karnataka weather Forecast
ಮಳೆ11 mins ago

Karnataka Weather : ಭಾರಿ ಮಳೆಗೆ ಮನೆ ಗೋಡೆ ಕುಸಿದು ಎಮ್ಮೆಗಳು ಸಾವು; ಆಕಳಿನ ಜೀವ ತೆಗೆದ ವಿದ್ಯುತ್‌ ತಂತಿ

IND vs PAK
ಕ್ರೀಡೆ26 mins ago

IND vs PAK : ಭಾರತ ವಿರುದ್ಧ ಸೋಲುವುದಕ್ಕಾಗಿ ಮ್ಯಾಚ್ ಫಿಕ್ಸಿಂಗ್ ಮಾಡಿದ ಪಾಕ್​ ಆಟಗಾರ; ಆರೋಪ

Tshering Tobgay
ದೇಶ27 mins ago

Tshering Tobgay: ಮೋದಿ ನನ್ನ ಗುರು, ದೊಡ್ಡಣ್ಣ;‌ ಭೂತಾನ್‌ ಪ್ರಧಾನಿ ತ್ಶೆರಿಂಗ್‌ ತೋಬ್ಗೆ ಬಹುಪರಾಕ್!

Sambhavami Yuge Yuge in june 21st Release
ಸಿನಿಮಾ41 mins ago

Kannada New Movie: ಹಳ್ಳಿಗಳನ್ನು ಉಳಿಸುವ ಹುಡುಗರ ಕಥೆ ʻಸಂಭವಾಮಿ ಯುಗೇ ಯುಗೇʼ: ಇದೇ ಜೂನ್‌ 21ಕ್ಕೆ ತೆರೆಗೆ!

Prajwal Revanna Case
ಪ್ರಮುಖ ಸುದ್ದಿ54 mins ago

Prajwal Revanna Case: ಪ್ರಜ್ವಲ್ ರೇವಣ್ಣಗೆ 14 ದಿನ ನ್ಯಾಯಾಂಗ ಬಂಧನ; ಪರಪ್ಪನ ಅಗ್ರಹಾರ ಜೈಲಿಗೆ ಶಿಫ್ಟ್‌

Noor Malabika Das
ಸಿನಿಮಾ1 hour ago

Noor Malabika Das: ಕಾಜೋಲ್‌ ಜತೆ ನಟಿಸಿದ್ದ, ದಿ ಟ್ರಯಲ್‌ ಖ್ಯಾತಿಯ ಬಾಲಿವುಡ್‌ ನಟಿ ದಾಸ್‌ ಆತ್ಮಹತ್ಯೆ

Yuva Rajkumar divorce reaction by shiva Rajkumar
ಸ್ಯಾಂಡಲ್ ವುಡ್1 hour ago

Yuva Rajkumar: ಸತ್ಯವಾಗಿಯೂ ʻಯುವʼ ಡಿವೋರ್ಸ್‌ ವಿಚಾರ ನಮಗೆ ಗೊತ್ತಿಲ್ಲ ಎಂದ ಶಿವಣ್ಣ!

Self Harming
ರಾಯಚೂರು1 hour ago

Self Harming : ಮಾನಸಿಕ ಖಿನ್ನತೆ; ಮಗಳ ಜತೆ ನೇಣು ಬಿಗಿದುಕೊಂಡು ತಾಯಿ ಆತ್ಮಹತ್ಯೆ

Narendra Modi 3.20
ಪ್ರಮುಖ ಸುದ್ದಿ2 hours ago

Narendra Modi 3.0 : ಮೋದಿ ಅಧಿಕಾರಕ್ಕೆ ಬಾರದಿರಲಿ ಎಂದು ಕಾದು ಕೂತು, ಕೊನೆಗೂ ಅಭಿನಂದನೆ ತಿಳಿಸಿದ ಪಾಕಿಸ್ತಾನ!

Election Results 2024
ಕರ್ನಾಟಕ2 hours ago

Election Results 2024: ಟಾರ್ಗೆಟ್ 20 ರೀಚ್ ಆಗಲು ವಿಫಲ; ಎಐಸಿಸಿಯಿಂದ ಪರಾಮರ್ಶೆ ಸಮಿತಿ, ಸಚಿವರ ಮೇಲೆ ತೂಗುಗತ್ತಿ!

Sharmitha Gowda in bikini
ಕಿರುತೆರೆ8 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ8 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ8 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ6 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ6 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

Karnataka weather Forecast
ಮಳೆ11 mins ago

Karnataka Weather : ಭಾರಿ ಮಳೆಗೆ ಮನೆ ಗೋಡೆ ಕುಸಿದು ಎಮ್ಮೆಗಳು ಸಾವು; ಆಕಳಿನ ಜೀವ ತೆಗೆದ ವಿದ್ಯುತ್‌ ತಂತಿ

Karnataka weather Forecast
ಮಳೆ3 days ago

Karnataka weather : ಮಳೆಯಲ್ಲೆ ತಪಸ್ಸಿಗೆ ಕುಳಿತ ವೃದ್ಧ; ಇನ್ನೊಂದು ವಾರ ನಾನ್‌ ಸ್ಟಾಪ್‌ ವರುಣನ ಅಬ್ಬರ

Sigandur launch
ಶಿವಮೊಗ್ಗ3 days ago

Sigandur launch: ಸಿಗಂದೂರು ಲಾಂಚ್‌ನಲ್ಲಿ ಭಾರಿ ವಾಹನಗಳಿಗೆ ನಿರ್ಬಂಧ

Karnataka Rain
ಮಳೆ4 days ago

Karnataka Rain : ಭಾರಿ ಮಳೆಗೆ ಮರ ಬಿದ್ದು ಮೇಕೆಗಳು ಸಾವು; ಸಿಡಿಲಿಗೆ ಎಲೆಕ್ಟ್ರಿಕ್‌ ಅಂಗಡಿ ಸುಟ್ಟು ಭಸ್ಮ

Lok Sabha Election Result 2024 Live
ದೇಶ6 days ago

Lok Sabha Election Result 2024 Live: ಲೋಕಸಭೆ ಚುನಾವಣೆ ಫಲಿತಾಂಶದ ಲೈವ್‌ ಇಲ್ಲಿ ವೀಕ್ಷಿಸಿ

Karnataka Rain
ಮಳೆ1 week ago

Karnataka Rain : 133 ವರ್ಷದ ರೆಕಾರ್ಡ್ ಬ್ರೇಕ್ ಮಾಡಿದ ʻಬೆಂಗಳೂರು ಮಳೆʼ

Snake Rescue Snakes spotted in heavy rain
ಮಳೆ1 week ago

Snake Rescue: ಮಳೆ ನೀರಿನಲ್ಲಿ ಹರಿದು ಬಂದು ಬೈಕ್‌ನಲ್ಲಿ ಸೇರಿಕೊಂಡ ಹಾವು; ಮನೆಗಳಲ್ಲೂ ಪ್ರತ್ಯಕ್ಷ

Karnataka Rain
ಮಳೆ1 week ago

Karnataka Rain : ವೀಕೆಂಡ್‌ ಮೋಜಿಗೆ ವರುಣ ಅಡ್ಡಿ; ಭಾನುವಾರ ಸಂಜೆಗೆ ಮಳೆ ಕಾಟ

Liquor ban
ಬೆಂಗಳೂರು1 week ago

Liquor Ban : ಮುಂದಿನ ಏಳು ದಿನಗಳಲ್ಲಿ ನಾಲ್ಕೂವರೆ ದಿನ ಬಾರ್ ಕ್ಲೋಸ್; ಎಣ್ಣೆ ಸಿಗೋದು ಯಾವ ದಿನ?

Assault Case in Shivamogga
ಕ್ರೈಂ2 weeks ago

Assault Case : ಶಿವಮೊಗ್ಗದಲ್ಲಿ ಮತ್ತೆ ಬಾಲ ಬಿಚ್ಚಿದ ಪುಂಡರು; ಗಾಂಜಾ ನಶೆಯಲ್ಲಿ ವಾಹನಗಳು ಪೀಸ್‌ ಪೀಸ್‌

ಟ್ರೆಂಡಿಂಗ್‌