ದಿನವೂ ಸಾಯುವುದಕ್ಕಿಂತ ಒಮ್ಮೆಲೇ ಸಾಯೋದು ಒಳ್ಳೇದಲ್ವಾ? ಅಂತ ಸ್ಟೇಟಸ್‌ ಹಾಕಿದ್ದರು ಆ ಸಹೋದರಿಯರು - Vistara News

ಕ್ರೈಂ

ದಿನವೂ ಸಾಯುವುದಕ್ಕಿಂತ ಒಮ್ಮೆಲೇ ಸಾಯೋದು ಒಳ್ಳೇದಲ್ವಾ? ಅಂತ ಸ್ಟೇಟಸ್‌ ಹಾಕಿದ್ದರು ಆ ಸಹೋದರಿಯರು

ಅವರಿಗೆ ಬದುಕಿನ ಬಗ್ಗೆ ಹಲವು ಕನಸುಗಳಿದ್ದವು. ಆದರೆ, ಬಾಲ್ಯ ವಿವಾಹಕ್ಕೆ ಒಳಗಾಗಿ ಕಟುಕ ಗಂಡಂದಿರ ಕೈಯಲ್ಲಿ ನಲುಗಿ ಹೋದರು. ನಿತ್ಯವೂ ಹಿಂಸೆ ಅನುಭವಿಸಿದ ಅವರು ಕೊನೆಗೆ ಒಂದು ಜಂಟಿ ನಿರ್ಧಾರಕ್ಕೆ ಬಂದರು. ಆ ನಿರ್ಧಾರ ಮಾತ್ರ ಘೋರವಾಗಿತ್ತು.

VISTARANEWS.COM


on

ಸಾಯುವುದೇ ಮೇಲು
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಜೈಪುರ: ದಿನವೂ ಸಾಯುವುದಕ್ಕಿಂತ ಒಮ್ಮೆಲೇ ಸಾಯೋದು ಒಳ್ಳೆಯದಲ್ವಾ?- ಇದು ರಾಜಸ್ಥಾನದ ಜೈಪುರ ಜಿಲ್ಲೆಯ ಡುಡು ಪಟ್ಟಣದ ಬಾವಿಯೊಂದರಲ್ಲಿ ಹೆಣವಾಗಿ ಕಂಡುಬಂದ ಮೂವರು ಸಹೋದರಿಯರ ಪೈಕಿ ಒಬ್ಬಳ ವಾಟ್ಸ್‌ ಅಪ್‌ ಸ್ಟೇಟಸ್‌.
ಇನ್ನೂ ಸಣ್ಣ ವಯಸ್ಸಿನ ಈ ಹೆಣ್ಮಕ್ಕಳು ಒಂದೇ ಕುಟುಂಬದ ಮೂವರು ಅಣ್ಣ ತಮ್ಮಂದಿರನ್ನು ಮದುವೆಯಾಗಿದ್ದು ನಿತ್ಯವೂ ಅನುಭವಿಸಬೇಕಾದ ಕೌಟುಂಬಿಕ ದೌರ್ಜನ್ಯದಿಂದ ಬೇಸತ್ತು ಪ್ರಾಣ ಕಳೆದುಕೊಂಡಿದ್ದಾರೆ. ಅವರಲ್ಲಿ ಇಬ್ಬರು ತುಂಬು ಗರ್ಭಿಣಿಯರು. ಜತೆಗೆ ದೊಡ್ಡ ಅಕ್ಕನ ಇಬ್ಬರು ಪುಟಾಣಿ ಮಕ್ಕಳೂ ಜಲಸಮಾಧಿ ಹೊಂದಿದ್ದಾರೆ. ಮೃತರನ್ನು ಕಾಳೂ ದೇವಿ(27), ಮಮತಾ (23), ಕಮಲೇಶ್‌ (20) ಮತ್ತು ಕಾಳೂದೇವಿಯ ನಾಲ್ಕು ಮತ್ತು ಕೇವಲ 27 ದಿನದ ಪುಟಾಣಿ ಮಗು ಎಂದು ಗುರುತಿಸಲಾಗಿದೆ. ಮಮತಾ ಮತ್ತು ಕಮಲೇಶ್‌ ತುಂಬು ಗರ್ಭಿಣಿಯರು.

ಈ ಮೂವರೂ ಹೆಣ್ಮಕ್ಕಳು ಒಳ್ಳೆಯ ವಿದ್ಯಾಭ್ಯಾಸ ಪಡೆದು ಒಳ್ಳೆಯ ಉದ್ಯೋಗದ ಕನಸು ಹೊತ್ತಿದ್ದರು. ಆದರೆ, ಬದುಕಿನ ಅನಿವಾರ್ಯತೆಯಿಂದ ಅವರೆಲ್ಲರೂ ಒಂದೇ ಕುಟುಂಬದ ಮೂವರು ಅಣ್ಣ ತಮ್ಮಂದಿರನ್ನು (ನಾರ್ಸಿ, ಗೋರ್ಯೋ, ಮುಕೇಶ್) ಮದುವೆ ಆಗಬೇಕಾಗಿ ಬಂದಿತ್ತು. ಅಪ್ಪನ ಮಾತಿಗೆ ಮರು ಮಾತಿಲ್ಲದೆ ಮಾಂಗಲ್ಯಕ್ಕೆ ಕೊರಳೊಡ್ಡಿದ ಈ ಮೂವರು ಹೆಣ್ಮಕ್ಕಳ ಬದುಕು ವಸ್ತುಶಃ ನರಕವೇ ಆಗಿ ಹೋಯಿತು. ಮದುವೆ ಆದಾಗ ಈ ಹೆಣ್ಣು ಮಕ್ಕಳು ಇನ್ನೂ ಸಣ್ಣವರು. ಅದು ಬಾಲ್ಯ ವಿವಾಹವೇ ಆಗಿತ್ತು. ಇವರನ್ನು ಮನೆಗೆ ಕರೆತಂದು ಪ್ರೀತಿಯಿಂದ ನೋಡಿಕೊಳ್ಳಬೇಕಾದ ಬಲಿಷ್ಠ ಪುರುಷರು ಆರಂಭದಿಂದಲೇ ದೌರ್ಜನ್ಯ ಶುರು ಮಾಡಿದ್ದರು. ಪ್ರತಿದಿನವೂ ಕುಡಿತದ ಮತ್ತಿನಲ್ಲಿ ಬಂದು ದೈಹಿಕವಾಗಿ ಹಿಂಸಿಸುತ್ತಿದ್ದರು. ಕೇವಲ ಐದು, ಆರನೇ ಕ್ಲಾಸು ಕಲಿತಿದ್ದ ಗಂಡಸರಿಗೆ ಹೆಣ್ಣು ಮಕ್ಕಳ ಆಸೆ, ಆಕಾಂಕ್ಷೆಗಳು ಯಾವುದೂ ಅರ್ಥವಾಗುತ್ತಿರಲಿಲ್ಲ.‌ ಹೀಗಾಗಿ ನಿತ್ಯ ನರಕಯಾತನೆ ಎದುರಾಗಿತ್ತು.
ಹೀಗಿರುತ್ತಾ ಕಳೆದ ಬುಧವಾರ ಈ ಮೂವರು ಹೆಣ್ಮಕ್ಕಳು ಮತ್ತು ಇಬ್ಬರು ಮಕ್ಕಳು ಕಾಣೆಯಾಗಿಬಿಟ್ಟರು. ನಾಲ್ಕು ದಿನಗಳ ಬಳಿಕ ಅವರ ಹೆಣಗಳು ಮನೆಯಿಂದ ಎರಡು ಕಿಲೋಮೀಟರ್‌ ದೂರದ ಬಾವಿಯಲ್ಲಿ ತೇಲುತ್ತಿರುವುದು ಪತ್ತೆಯಾಯಿತು.

ಈ ಹಂತದಲ್ಲಿ ಅವರ ಮೊಬೈಲ್ ಸ್ಟೇಟಸ್‌ಗಳು ಅಕ್ಕಪಕ್ಕದವರ ಮಾತುಗಳು ಅವರು ಅನುಭವಿಸುತ್ತಿದ್ದ ಯಾತನೆಗೆ ಸಾಕ್ಷಿ ಹೇಳಿದವು. ಇದನ್ನು ಆಧರಿಸಿ ಮೂವರು ಸೋದರರನ್ನು ಬಂಧಿಸಲಾಗಿದೆ. ಇವರ ತಂದೆ ಕೆಲವು ವರ್ಷದ ಹಿಂದೆ ಆತ್ಮಹತ್ಯೆ ಮಾಡಿಕೊಂಡಿದ್ದರು.

ʻʻನಾವು ಹೋಗುತ್ತಿದ್ದೇವೆ. ಇನ್ನಾದರೂ ಎಲ್ಲವೂ ಒಳ್ಳೆಯದಾಗಲಿ. ನಮ್ಮ ಸಾವಿಗೆ ಕಾರಣ ನಮ್ಮ ಗಂಡಂದಿರು. ಪ್ರತಿ ದಿನವೂ ಸಾಯುವುದಕ್ಕಿಂತ ಒಮ್ಮೆಗೇ ಜತೆಯಾಗಿ ಸಾಯುವುದು ಮೇಲು ಎಂದು ತೀರ್ಮಾನಿಸಿದ್ದೇವೆ. ಓ ದೇವರೆ ಮುಂದಿನ ಜನ್ಮಾಂತ ಒಂದಿದ್ದರೆ ನಮ್ಮನ್ನು ಸೋದರಿಯರನ್ನಾಗಿಯೇ ಹುಟ್ಟಿಸು. ನಮ್ಮ ಕುಟುಂಬದವರಲ್ಲಿ ವಿನಂತಿ ಏನೆಂದರೆ, ಯಾರೂ ನಮ್ಮ ಬಗ್ಗೆ ಚಿಂತೆ ಮಾಡಬೇಡಿ,ʼʼ ಹೀಗೆಂದು ಕಮಲೇಶ್‌ ತನ್ನ ಸ್ಟೇಟಸ್‌ನಲ್ಲಿ ಬರೆದುಕೊಂಡಿದ್ದಳು

ವಿಪರೀತಕ್ಕೇರಿದ ಹಿಂಸೆ
ಈ ಹೆಣ್ಮಕ್ಕಳಿಗೆ ನಿತ್ಯ ಹಿಂಸೆ ಇತ್ತಾದರೂ ಇತ್ತೀಚೆಗೆ ವಿಪರೀತಕ್ಕೇರಿತ್ತು ಎಂದು ಪಕ್ಕದ ಮನೆಯವರು ಹೇಳಿದ್ದಾರೆ. ಅದರಲ್ಲೂ ಸ್ವಂತ ಉದ್ಯೋಗ ಪಡೆದು ತಮ್ಮ ಕಾಲ ಮೇಲೆ ನಿಲ್ಲಬೇಕು ಎನ್ನುವ ಅವರ ಬಯಕೆ ಗಂಡಂದಿರನ್ನು ಇನ್ನಷ್ಟು ವ್ಯಗ್ರರನ್ನಾಗಿಸಿತ್ತು. ಈ ನಡುವೆ ಮಮತಾ ಪೊಲೀಸ್‌ ಕಾನ್‌ಸ್ಟೇಬಲ್‌ ಪರೀಕ್ಷೆಗೆ ಅರ್ಜಿ ಹಾಕಿದ್ದರು. ಕಾಳೂ ದೇವಿ ಅಂತಿಮ ಬಿಎ ವಿದ್ಯಾಭ್ಯಾಸ ಮಾಡುತ್ತಿದ್ದರು. ಕೊನೆಯವಳಾದ ಕಮಲೇಶ್‌ ಕೂಡಾ ವಿವಿಯಲ್ಲಿ ಅಧ್ಯಯನಕ್ಕೆ ಮುಂದಾಗಿದ್ದಳು. ಆದರೆ, ಇದಕ್ಕೆ ಗಂಡಂದಿತ ಪ್ರಬಲ ವಿರೋದವಿತ್ತು. ಕಾಳೂ ದೇವಿಗಂತೂ ಇತ್ತೀಚೆಗೆ ಆಕೆಯ ಗಂಡ ಭೀಕರವಾಗಿ ಥಳಿಸಿದ್ದ. ಆಕೆಯ ಕಣ್ಣುಗಳಿಗೆ ಗಾಯವಾಗಿ ಹದಿನೈದು ದಿನ ಆಸ್ಪತ್ರೆ ಸೇರಿದ್ದರು. ಆಸ್ಪತ್ರೆಯಿಂದ ಕೆಲವೇ ದಿನದ ಹಿಂದಷ್ಟೇ ಬಂದಿದ್ದರು. ಕಿರಿಯಳಾದ ಕಮಲೇಶ್‌ ಯಾರ ಬಳಿಯೇ ಮೊಬೈಲ್‌ನಲ್ಲಿ ಮಾತನಾಡಿದ್ದಕ್ಕೆ ಸಿಕ್ಕಾಪಟ್ಟೆ ಹೊಡೆಯಲಾಗಿತ್ತು.

ದುಡ್ಡಿಗಾಗಿ ಅಲ್ಲ ಪ್ರತಿಷ್ಠೆಗಾಗಿ..
ಈ ಹೆಣ್ಮಕ್ಕಳ ಸಾವಿನ ಹಿಂದೆ ವರದಕ್ಷಿಣೆ ಕಿರುಕುಳವೂ ಇರಬಹುದೇ ಎಂದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಆದರೆ, ಸ್ಥಳೀಯರ ಪ್ರಕಾರ ಈ ಕುಟುಂಬಕ್ಕೆ ಹಣದ ಅವಶ್ಯಕತೆಯೇನೂ ಇಲ್ಲ. ಸಾಕಷ್ಟು ಸಿರಿವಂತಿಕೆ ಇದೆ. ಆದರೆ, ಹೆಣ್ಮಕ್ಕಳನ್ನು ಹೊರಗೆ ಕಳುಹಿಸಬಾರದು ಎನ್ನುವುದು ಅವರ ದೊಡ್ಡ ಹಠ. ಹೊರಗಿನವರ ಜತೆ ಮಾತನಾಡಬಾರದು ಎನ್ನುವುದು ತಾಕೀತು. ಕಮಲೇಶ್‌ ಇತ್ತೀಚೆಗೆ ವಿಶ್ವವಿದ್ಯಾಲಯ ಪ್ರವೇಶದ ವೇಳೆ ಪರಿಚಯವಾಗಿದ್ದ ಒಬ್ಬ ಯುವಕನೊಂದಿಗೆ ರಾತ್ರಿ ಒಂದು ಗಂಟೆ ಹೊತ್ತಿಗೆ ಮಾತನಾಡಿದ್ದೂ ಪರಿಸ್ಥಿತಿ ಭುಗಿಲೇಳಲು ಕಾರಣವಾಯಿತು ಎನ್ನಲಾಗಿದೆ. ಈ ನಡುವೆ, ಈ ಗಂಡಸರು ಸಿಕ್ಕಾಪಟ್ಟೆ ಕುಡುಕರಾಗಿದ್ದು, ಅತಿಯಾದ ಕ್ರೂರಿಗಳು ಎಂದು ಜನ ಒಪ್ಪಿಕೊಳ್ಳುತ್ತಾರೆ. ಇದನ್ನು ಪ್ರಶ್ನಿಸಿದರೆ ಹೆಂಡತಿಯರ ಮೇಲೆ ದೌರ್ಜನ್ಯ ನಡೆಸುತ್ತಿದ್ದರು ಎನ್ನಲಾಗಿದೆ.

ಅಂತಿಮವಾಗಿ ಇದೀಗ ಅವರೆಲ್ಲರೂ ಜತೆಯಾಗಿ ಪ್ರಾಣ ಕಳೆದುಕೊಂಡಿದ್ದಾರೆ. ಹೊಟ್ಟೆಯಲ್ಲಿರುವ ಇಬ್ಬರು ಮಕ್ಕಳು, ಜತೆಗೆ ನಾಲ್ಕು ವರ್ಷದ ಒಂದು ಮಗು, 27 ದಿನದ ಹಸುಗೂಸು ಅನ್ಯಾಯವಾಗಿ ಜೀವ ತೆರಬೇಕಾಗಿ ಬಂದಿದೆ. ತಪ್ಪಿತಸ್ಥರಿಗೆ ಶಿಕ್ಷೆ ಕೊಡಿಸಲು ಸರ್ವ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ| ಗೃಹಸಚಿವರ ಗ್ರಾಮದಲ್ಲಿ ಮಹಿಳೆಯನ್ನು ಬೆತ್ತಲೆಗೊಳಿಸಿ ಅತ್ಯಾಚಾರಕ್ಕೆ ಯತ್ನ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App

ಕ್ರೈಂ

Assault Case: ಜೋಡಿಗೆ ಥಳಿತ; ʼಇದು ಮುಸ್ಲಿಂ ರಾಷ್ಟ್ರ…ʼ ಎಂದ ತೃಣಮೂಲ ಶಾಸಕ

Assault Case: ಬಿದಿರಿನ ದೊಣ್ಣೆಗಳಿಂದ ಇಬ್ಬರನ್ನು ಥಳಿಸುತ್ತಿರುವ ವಿಡಿಯೋ ವೈರಲ್‌ ಆಗಿದೆ. ಈ ವ್ಯಕ್ತಿಯನ್ನು ತಜ್ಮುಲ್ ಅಲಿಯಾಸ್ “ಜೆಸಿಬಿ” ಎಂದು ಗುರುತಿಸಲಾಗಿದೆ. ಈತ ಉತ್ತರ ದಿನಾಜ್‌ಪುರ ಜಿಲ್ಲೆಯ ಚೋಪ್ರಾದ ಸ್ಥಳೀಯ ಟಿಎಂಸಿ ನಾಯಕ ಎಂದು ಹೇಳಲಾಗಿದೆ.

VISTARANEWS.COM


on

bengal assault case
Koo

ಕೋಲ್ಕತ್ತಾ: ಅನೈತಿಕ ಸಂಬಂಧದಲ್ಲಿ (Illicit relationship) ತೊಡಗಿದ್ದರು ಎನ್ನಲಾದ ಜೋಡಿಯೊಂಧರ ಮೇಲೆ ತೃಣಮೂಲ ಕಾಂಗ್ರೆಸ್ (‌Trinamoola Congress) ಕಾರ್ಯಕರ್ತರು ಅಮಾನುಷವಾಗಿ ಹಲ್ಲೆ (Assault Case) ನಡೆಸಿದ್ದು, ಇದರ ವಿಡಿಯೋ ಕ್ಲಿಪ್ ವೈರಲ್ (viral viedo) ಆದ ನಂತರ ಪಶ್ಚಿಮ ಬಂಗಾಳದ ಪ್ರತಿಪಕ್ಷಗಳು ಆಡಳಿತಾರೂಢ ತೃಣಮೂಲ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿವೆ. “ಮುಸ್ಲಿಂ ರಾಷ್ಟ್ರ ನೀತಿ ಸಂಹಿತೆ ಪ್ರಕಾರ ನಡೆದುಕೊಳ್ಳಲಾಗಿದೆ…” ಎಂದು ತೃಣಮೂಲ ಕಾಂಗ್ರೆಸ್‌ ಶಾಸಕನೊಬ್ಬ ಈ ಘಟನೆಯ ಬಗ್ಗೆ ಪ್ರತಿಕ್ರಿಯಿಸಿದ್ದಾನೆ.

ಬಿದಿರಿನ ದೊಣ್ಣೆಗಳಿಂದ ಇಬ್ಬರನ್ನು ಥಳಿಸುತ್ತಿರುವ ವಿಡಿಯೋ ವೈರಲ್‌ ಆಗಿದೆ. ಈ ವ್ಯಕ್ತಿಯನ್ನು ತಜ್ಮುಲ್ ಅಲಿಯಾಸ್ “ಜೆಸಿಬಿ” ಎಂದು ಗುರುತಿಸಲಾಗಿದೆ. ಈತ ಉತ್ತರ ದಿನಾಜ್‌ಪುರ ಜಿಲ್ಲೆಯ ಚೋಪ್ರಾದ ಸ್ಥಳೀಯ ಟಿಎಂಸಿ ನಾಯಕ ಎಂದು ಹೇಳಲಾಗಿದೆ. ಸ್ಥಳೀಯ ಪಂಚಾಯ್ತಿಯ ತೀರ್ಪಿನ ನಂತರ ಈ ಘಟನೆ ನಡೆದಿದೆ. ಘಟನೆಯ ಕುರಿತು ಪಶ್ಚಿಮ ಬಂಗಾಳ ಪೊಲೀಸರು ಭಾನುವಾರ ಪ್ರಕರಣ ದಾಖಲಿಸಿಕೊಂಡು ತಜ್ಮುಲ್‌ನನ್ನು ಬಂಧಿಸಿದ್ದಾರೆ.

ಚೋಪ್ರಾ ಶಾಸಕ ಹಮೀದುಲ್ ರಹಮಾನ್, ಟಿಎಂಸಿಗೆ ತಜ್ಮುಲ್ ಜೊತೆ ಯಾವುದೇ ಸಂಬಂಧವಿಲ್ಲ ಎಂದಿದ್ದಾರೆ. ʼಮಹಿಳೆಯ ಚಟುವಟಿಕೆಗಳು ಅನೈತಿಕವಾಗಿದ್ದವು. ಇದು ಹಳ್ಳಿಯ ವಿಷಯವಾಗಿದ್ದು, ಪಕ್ಷಕ್ಕೂ ಇದಕ್ಕೂ ಯಾವುದೇ ಸಂಬಂಧವಿಲ್ಲ. ನಾವು ಘಟನೆಯನ್ನು ಖಂಡಿಸುತ್ತೇವೆ. ಆದರೆ ಮಹಿಳೆಯೂ ತಪ್ಪು ಮಾಡಿದ್ದಾಳೆ. ಅವಳು ತನ್ನ ಗಂಡ, ಮಗ ಮತ್ತು ಮಗಳನ್ನು ತೊರೆದಿದ್ದಾಳೆ. ಮುಸ್ಲಿಂ ರಾಷ್ಟ್ರದ ಪ್ರಕಾರ ಕೆಲವು ನೀತಿ ಸಂಹಿತೆ ಮತ್ತು ನ್ಯಾಯವಿದೆ. ಈಗ ಈ ಪ್ರಕರಣದಲ್ಲಿ ಕಾನೂನು ಕ್ರಮ ಕೈಗೊಳ್ಳಲಾಗುವುದು’ ಎಂದು ತೃಣಮೂಲ ಶಾಸಕ ಸುದ್ದಿಗಾರರಿಗೆ ತಿಳಿಸಿದರು.

ಪ್ರತಿಪಕ್ಷ ಭಾರತೀಯ ಜನತಾ ಪಕ್ಷ, ಕಾಂಗ್ರೆಸ್ ಮತ್ತು ಸಿಪಿಐ(ಎಂ) ಈ ಘಟನೆಗೆ ಮಮತಾ ಬ್ಯಾನರ್ಜಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡರೆ, ಈ ಬಗ್ಗೆ ತನಿಖೆ ನಡೆಸಲಾಗುವುದು ಎಂದು ಟಿಎಂಸಿ ಹೇಳಿದೆ.

ಕೇಂದ್ರ ಸಚಿವ ಮತ್ತು ಬಂಗಾಳದ ಬಿಜೆಪಿ ಮುಖ್ಯಸ್ಥ ಸುಕಾಂತ ಮಜುಂದಾರ್ ಅವರು ಟಿಎಂಸಿಯ ಶಾಸಕನ “ಮುಸ್ಲಿಂ ರಾಷ್ಟ್ರ” ಉಲ್ಲೇಖದ ಬಗ್ಗೆ ಆತಂಕಪಟ್ಟಿದ್ದಾರೆ. “ಮುಸ್ಲಿಂ ರಾಷ್ಟ್ರ ಕೆಲವು ನಿಯಮಗಳ ಅಡಿಯಲ್ಲಿ ಶಿಕ್ಷೆಗಳನ್ನು ಚರ್ಚಿಸುವ ಹೇಳಿಕೆಗಳು ಕಳವಳ ಮೂಡಿಸುತ್ತವೆ. ಟಿಎಂಸಿ ಪಶ್ಚಿಮ ಬಂಗಾಳವನ್ನು ಷರಿಯಾ ಕಾನೂನನ್ನು ಅನ್ವಯಿಸುವ ರಾಜ್ಯವೆಂದು ಘೋಷಿಸುತ್ತಿದೆಯೇ?” ಎಂದು ಸುಕಾಂತ ಮಜುಂದಾರ್ ಅವರು X ನಲ್ಲಿ ಪೋಸ್ಟ್ ಮಾಡಿದ್ದಾರೆ.

ಬಂಗಾಳ ಪೊಲೀಸರು ಹೇಳಿದ್ದೇನು?

ಇಸ್ಲಾಂಪುರ ಪೊಲೀಸ್ ಹೇಳಿಕೆಯಲ್ಲಿ, “ಇಸ್ಲಾಂಪುರ ಪಿಡಿ ಅಡಿಯಲ್ಲಿ ಚೋಪ್ರಾ ಪಿಎಸ್‌ನಲ್ಲಿ ಮಹಿಳೆಯೊಬ್ಬರ ಮೇಲೆ ಸಾರ್ವಜನಿಕವಾಗಿ ಹಲ್ಲೆ ಮಾಡಿದ ಒಬ್ಬ ವ್ಯಕ್ತಿಯನ್ನು ಪೊಲೀಸರು ತಕ್ಷಣ ಗುರುತಿಸಿ ಬಂಧಿಸಿದ್ದಾರೆ. ಸಂತ್ರಸ್ತ ಜೋಡಿಗೆ ಪೊಲೀಸ್ ಭದ್ರತೆ ಒದಗಿಸಲಾಗಿದೆ” ಎಂದು ತಿಳಿಸಿದೆ. ಇಸ್ಲಾಂಪುರ ಪೊಲೀಸ್ ಅಧೀಕ್ಷಕ ಜೋಬಿ ಥಾಮಸ್ ಕೆ. ಪೊಲೀಸರು ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೊ ಕ್ಲಿಪ್ ಅನ್ನು ವೀಕ್ಷಿಸಿದ್ದಾರೆ ಮತ್ತು ಅದನ್ನು ಪರಿಶೀಲಿಸಿದ ನಂತರ ಪ್ರಕರಣ ದಾಖಲಿಸಿದ್ದಾರೆ ಎಂದಿದ್ದಾರೆ.

ಭಾರೀ ಸಂಖ್ಯೆಯ ಜನರು ನೋಡುತ್ತಿದ್ದಂತೆಯೇ ನೋವಿನಿಂದ ಅಳುತ್ತಿದ್ದ ಮಹಿಳೆಗೆ ಆರೋಪಿಗಳು ಥಳಿಸಿದ ದೃಶ್ಯ ವೈರಲ್ ಆಗಿದೆ. ಹಲ್ಲೆ ಮಾಡಿದಾತ ಆಕೆಯ ತಲೆಕೂದಲು ಎಳೆದು ಒದೆಯುವುದು ಕಂಡುಬಂದಿತು. ಆರೋಪಿಗಳು ವ್ಯಕ್ತಿಯೊಬ್ಬನಿಗೆ ದೊಣ್ಣೆಗಳಿಂದ ಥಳಿಸಿದ್ದಾರೆ.

ಇದನ್ನೂ ಓದಿ: Mamata Banerjee: ಬಾಂಗ್ಲಾದೇಶದೊಂದಿಗೆ ಜಲ ಹಂಚಿಕೆಯ ಮಾತುಕತೆ: ಮಮತಾ ಬ್ಯಾನರ್ಜಿ ವಿರೋಧ; ಪ್ರಧಾನಿಗೆ ಪತ್ರ

Continue Reading

ದೇಶ

NIA Raid: ಹಿಜ್ಬು-ಉತ್‌-ತಹ್ರೀರ್‌ ಉಗ್ರ ಸಂಘಟನೆ ಜೊತೆ ನಂಟು-10 ಕಡೆಗಳಲ್ಲಿ NIA ರೇಡ್‌; ಶಂಕಿತ ಉಗ್ರರು ಅರೆಸ್ಟ್‌

NIA Raid:ಬಂಧಿತ ಉಗ್ರರನ್ನು ಅಬ್ದುಲ್‌ ರೆಹಮಾನ್‌ ಮತ್ತು ಮುಜಿಬುಲ್‌ ರೆಹಮಾನ್‌ ಅಲಿಯಾಸ್‌ ಮುಜಿಬುಲ್‌ ರೆಹಮಾನ್‌ ಅಲ್ತಾಮ್‌ ಸಾಹೀಬ್‌ ಎಂದು ಗುರುತಿಸಲಾಗಿದೆ. ಇವರಿಬ್ಬರೂ ತಂಜಾವೂರ್‌ ಜಿಲ್ಲೆಯವರಾಗಿದ್ದು, ಇವರಿಬ್ಬರೂ ಯುವಕರನ್ನು ಉಗ್ರ ಸಂಘಟನೆಗೆ ಪ್ರೇರೇಪಿಸಲು ಗುಪ್ತವಾಗಿ ತರಗತಿಗಳನ್ನು ನಡೆಸುತ್ತಿದ್ದಾರೆ. ಭಾರತ ಈಗ ನಾಸ್ತಿಕ ರಾಷ್ಟ್ರವಾಗಿ ಬೆಳೆಯುತ್ತಿದೆ. ದೇಶದಲ್ಲಿ ಹಿಂಸಾತ್ಮಕ ಜಿಹಾದ್‌ ಮೂಲಕ ಇಸ್ಲಾಂ ಮೇಲಿನ ನಂಬಿಕೆಯನ್ನು ಮೂಡಿಸಬೇಕಿದೆ ಎಂಬುದನ್ನು ಯುವಕರಿಗೆ ಬೋಧಿಸುತ್ತಿದ್ದರು ಎಂದು ಎನ್‌ಐಎ ಹೇಳಿದೆ.

VISTARANEWS.COM


on

NIA Raid
Koo

ಚೆನ್ನೈ: ತಮಿಳುನಾಡಿನ ಹತ್ತು ಸ್ಥಳಗಳಲ್ಲಿ ಎನ್‌ಐಎ ರೇಡ್‌(NIA Raid) ನಡೆಸಿದ್ದು, ಭಯೋತ್ಪಾದನಾ(Terrorism activities) ಚಟುವಟಿಕೆಯಲ್ಲಿ ಭಾಗಿಯಾಗಿದ್ದ ಇಬ್ಬರನ್ನು ಅರೆಸ್ಟ್‌ ಮಾಡಿದೆ. ತಮಿಳುನಾಡಿನ ಐದು ಜಿಲ್ಲೆಗಳಲ್ಲಿ ಈ ರೇಡ್‌ ನಡೆದಿದ್ದು, ಅಂತಾರಾಷ್ಟ್ರೀಯ ಭಯೋತ್ಪಾದನಾ ಸಂಘಟನೆ ಹಿಜ್ಬು-ಉತ್‌-ತಹ್ರೀರ್‌ನ ಇಬ್ಬರನ್ನು ಬಂಧಿಸಿದೆ. ಈ ಸಂಘಟನೆಯ ಸ್ಥಾಪಕ ತಾಖಿ ಅಲ್‌ ದಿನ್‌ ಅಲ್‌ ಅಬ್ಬಾನಿ ಬರೆದ ಸಂವಿಧಾನವನ್ನು ಪ್ರಪಂಚಾದ್ಯಂತ ಪಸರಿಸಲು ಪ್ರಯತ್ನ ನಡೆಸುತ್ತಿದ್ದಾರೆ.

ಇನ್ನು ಬಂಧಿತ ಉಗ್ರರನ್ನು ಅಬ್ದುಲ್‌ ರೆಹಮಾನ್‌ ಮತ್ತು ಮುಜಿಬುಲ್‌ ರೆಹಮಾನ್‌ ಅಲಿಯಾಸ್‌ ಮುಜಿಬುಲ್‌ ರೆಹಮಾನ್‌ ಅಲ್ತಾಮ್‌ ಸಾಹೀಬ್‌ ಎಂದು ಗುರುತಿಸಲಾಗಿದೆ. ಇವರಿಬ್ಬರೂ ತಂಜಾವೂರ್‌ ಜಿಲ್ಲೆಯವರಾಗಿದ್ದು, ಇವರಿಬ್ಬರೂ ಯುವಕರನ್ನು ಉಗ್ರ ಸಂಘಟನೆಗೆ ಪ್ರೇರೇಪಿಸಲು ಗುಪ್ತವಾಗಿ ತರಗತಿಗಳನ್ನು ನಡೆಸುತ್ತಿದ್ದಾರೆ. ಭಾರತ ಈಗ ನಾಸ್ತಿಕ ರಾಷ್ಟ್ರವಾಗಿ ಬೆಳೆಯುತ್ತಿದೆ. ದೇಶದಲ್ಲಿ ಹಿಂಸಾತ್ಮಕ ಜಿಹಾದ್‌ ಮೂಲಕ ಇಸ್ಲಾಂ ಮೇಲಿನ ನಂಬಿಕೆಯನ್ನು ಮೂಡಿಸಬೇಕಿದೆ ಎಂಬುದನ್ನು ಯುವಕರಿಗೆ ಬೋಧಿಸುತ್ತಿದ್ದರು ಎಂದು ಎನ್‌ಐಎ ಹೇಳಿದೆ.

ಮೊಬೈಲ್ ಫೋನ್‌ಗಳು, ಲ್ಯಾಪ್‌ಟಾಪ್, ಸಿಮ್ ಮತ್ತು ಮೆಮೊರಿ ಕಾರ್ಡ್‌ಗಳು ಮತ್ತು ಹಿಜ್ಬ್-ಉತ್-ತಹ್ರೀರ್, ಖಿಲಾಫಾ, ಇಸ್ಲಾಮಿಕ್ ಸ್ಟೇಟ್‌ನ ಸಿದ್ಧಾಂತವನ್ನು ಒಳಗೊಂಡಿರುವ ಪುಸ್ತಕಗಳು ಮತ್ತು ಪ್ರಿಂಟ್‌ಔಟ್‌ಗಳು ಅನೇಕ ವಸ್ತುಗಳನ್ನು ಎನ್‌ಐಎ ವಶಪಡಿಸಿಕೊಂಡಿದೆ.

ಮತ್ತೊಂದೆಡೆ ಜಮ್ಮು-ಕಾಶ್ಮೀರದ ರಿಯಾಸಿ(Reasi Terror Attack) ಜಿಲ್ಲೆಯಲ್ಲಿ ಹಿಂದು ಯಾತ್ರಿಕರ ಮೇಲೆ ನಡೆದ ಉಗ್ರರ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಷ್ಟ್ರೀಯ ತನಿಖಾ ಸಂಸ್ಥೆ (NIA Raid) ವಿವಿಧ ಸ್ಥಳಗಳಲ್ಲಿ ರೇಡ್‌ ನಡೆಸಿದೆ. ಮಕ್ಕಳು ಸೇರಿದಂತೆ ಒಂಬತ್ತು ಮಂದಿಯನ್ನು ಉಗ್ರರ ದಾಳಿಯಲ್ಲಿ ಬಲಿಯಾಗಿದ್ದರು. ಇದಾದ ಕೆಲವೇ ದಿನಗಳಲ್ಲಿ ಕೇಂದ್ರ ಗೃಹ ಸಚಿವಾಲಯ ಪ್ರಕರಣವನ್ನು ಎನ್‌ಐಎ ತನಿಖೆಗೆ ಹಸ್ತಾಂತರಿಸಿತ್ತು.

ಇದೀಗ ತನಿಖಾ ಭಾಗವಾಗಿ ಜಮ್ಮು -ಕಾಶ್ಮೀರದ ವಿವಿಧ ಭಾಗಗಳಲ್ಲಿ ಎನ್‌ಐಎ ರೇಡ್‌ ನಡೆಸಿದೆ. ಉಗ್ರರಿಗೆ ಆಶ್ರಯ, ಸಹಾಯ ನೀಡಿದ ಶಂಕಿತರ ಮೇಲೆ ಈ ರೇಡ್‌ ನಡೆದಿದ್ದು, ಹಲವು ಮಹತ್ವದ ಮಾಹಿತಿಗಳನ್ನು ಕಳೆ ಹಾಕಿದ್ದಾರೆ. ಇತ್ತೀಚೆಗಷ್ಟೇ ರಿಯಾಸಿ ಉಗ್ರ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜೌರಿ ಜಿಲ್ಲೆಯಲ್ಲಿ ಹಕೀಮ್‌ ದಿನ್‌ ಎಂಬ ಶಂಕಿತನನ್ನು ಪೊಲೀಸರು ಬಂಧಿಸಿದ್ದಾರೆ. ಈತನೇ ದಾಳಿಯ ರೂವಾರಿ ಆಗದಿದ್ದರೂ, ಉಗ್ರರ ದಾಳಿಗೆ ಅಗತ್ಯ ವಸ್ತುಗಳನ್ನು ಪೂರೈಸಿದ್ದಾನೆ. ಇದರಿಂದ ಉಗ್ರರು ಸುಲಭವಾಗಿ ದಾಳಿ ಮಾಡಲು ಸಾಧ್ಯವಾಗಿದೆ. ಆರೋಪಿಯನ್ನು ಬಂಧಿಸಿರುವ ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ

ದೆಹಲಿ ರಾಜಸ್ಥಾನ ಹಾಗೂ ಉತ್ತರ ಪ್ರದೇಶದ ಹಿಂದು ಯಾತ್ರಿಕರು ಜೂನ್‌ 9ರಂದು ಬಸ್‌ನಲ್ಲಿ ವೈಷ್ಣೋದೇವಿ ಯಾತ್ರೆಗೆ ಹೊರಟಿದ್ದರು. ರಿಯಾಸಿ ಜಿಲ್ಲೆಯ ತೆರ್ಯಾತ್‌ ಗ್ರಾಮದ ಬಳಿಯ ಮಾರ್ಗವಾಗಿ ಬಸ್‌ ಚಲಿಸುತ್ತಿತ್ತು. ಆದರೆ, ಉಗ್ರರು ಬಸ್‌ ಅನ್ನು ಹಿಂಬಾಲಿಸಿಕೊಂಡು ಬಂದು ಗುಂಡಿನ ದಾಳಿ ನಡೆಸಿದ್ದರು. ಗುಂಡಿನ ದಾಳಿಯ ಹಿನ್ನೆಲೆಯಲ್ಲಿ ಬಸ್‌ ಕಣಿವೆಗೆ ಉರುಳಿತ್ತು. ಇದರಿಂದಾಗಿ 9 ಮಂದಿ ಮೃತಪಟ್ಟರೆ, 33 ಜನ ಗಾಯಗೊಂಡಿದ್ದರು. ದಾಳಿಯ ಹೊಣೆಯನ್ನು ಲಷ್ಕರೆ ತಯ್ಬಾ ಉಗ್ರ ಸಂಘಟನೆಯು ಹೊತ್ತುಕೊಂಡಿದೆ.

ಇದನ್ನೂ ಓದಿ:Indian Armed Forces: ಸಹಪಾಠಿಗಳು ಈ ಭಾರತೀಯ ಸೇನೆ ಮತ್ತು ನೌಕಾಪಡೆ ಮುಖ್ಯಸ್ಥರು; ಇದು ದೇಶದ ಇತಿಹಾಸದಲ್ಲೇ ಮೊದಲು!

Continue Reading

ಬೀದರ್‌

Basavakalyan News: ರಾತ್ರಿ ಮಣ್ಣಲ್ಲಿ ಹೂತಿದ್ದ ಮಗು ಬೆಳಗ್ಗೆ ಜೋಕಾಲಿಯಲ್ಲಿ ಪ್ರತ್ಯಕ್ಷ!

Basavakalyan News: ಬೀದರ್‌ ಜಿಲ್ಲೆಯ ಬಸವ ಕಲ್ಯಾಣ ತಾಲೂಕಿನ ಮಂಠಾಳ ಗ್ರಾಮದಲ್ಲಿ ಘಟನೆ ನಡೆದಿದೆ. ಅನಾರೋಗ್ಯದಿಂದ ಮೃತಪಟ್ಟಿದ್ದ ಮಗುವನ್ನು ಜಮೀನಿನಲ್ಲಿ ರಾತ್ರಿ ಅಂತ್ಯ ಸಂಸ್ಕಾರ ಮಾಡಲಾಗಿತ್ತು. ಅದರೆ, ಬೆಳಗ್ಗೆ ವೇಳೆಗೆ ಮಗು, ಮರಕ್ಕೆ ಕಟ್ಟಿದ ಜೋಕಾಲಿಯಲ್ಲಿ ಪ್ರತ್ಯಕ್ಷಗೊಂಡಿದೆ.

VISTARANEWS.COM


on

Basavakalyan News
Koo

ಬಸವಕಲ್ಯಾಣ(ಬೀದರ್): ರಾತ್ರಿ ವೇಳೆ ಮಣ್ಣಲ್ಲಿ ಹೂತಿದ್ದ ಮಗು ಬೆಳಗಾಗುವಷ್ಟರಲ್ಲಿ ಮರಕ್ಕೆ ಕಟ್ಟಿದ ಜೋಕಾಲಿಯಲ್ಲಿ ಪ್ರತ್ಯಕ್ಷಗೊಂಡ ಘಟನೆ ಬೀದರ್‌ ಜಿಲ್ಲೆಯ ಬಸವ ಕಲ್ಯಾಣ ತಾಲೂಕಿನ ಮಂಠಾಳ ಗ್ರಾಮದಲ್ಲಿ ಭಾನುವಾರ ಜರುಗಿದೆ. ಅಂತ್ಯ ಸಂಸ್ಕಾರ ಮಾಡಿದ್ದ ಮಗು, ಗುಂಡಿಯಿಂದ ಹೊರಗೆ ಪ್ರತ್ಯಕ್ಷವಾದ ಹಿನ್ನೆಲೆಯಲ್ಲಿ ಗ್ರಾಮಸ್ಥರು ಆತಂಕಗೊಂಡಿದ್ದಾರೆ.

ಮಂಠಾಳ ಗ್ರಾಮದ ನಿವಾಸಿ ಅಂಬಯ್ಯ ಸ್ವಾಮಿ ಅವರ ಒಂದೂವರೆ ವರ್ಷದ ಹೆಣ್ಣು ಮಗು ಶನಿವಾರ ಸಂಜೆ ಅನಾರೋಗ್ಯದಿಂದ ಮೃತಪಟ್ಟಿತ್ತು. ನಂತರ ತಡ ರಾತ್ರಿ 12ರ ಸುಮಾರಿಗೆ ಕುಟುಂಬಸ್ಥರು ಹಾಗೂ ಸಂಬಂಧಿಕರು ಕೂಡಿ ಮಗುವಿಗೆ ಗ್ರಾಮದ ಪಕ್ಕದ ಜಮೀನಿನಲ್ಲಿ ಅಂತ್ಯಸಂಸ್ಕಾರ ನೆರವೇರಿಸಿ ಮನೆಗೆ ತೆರಳಿದ್ದರು.

ಮಗು ಮಣ್ಣಲ್ಲಿ ಹೂತು ಮನೆಗೆ ಬಂದ ಪಾಲಕರು ಹಾಗೂ ಗ್ರಾಮಸ್ಥರಿಗೆ ಬೆಳಗಾಗುವಷ್ಟರಲ್ಲಿ ಆಶ್ಚರ್ಯ ಕಾದಿತ್ತು. ರಾತ್ರಿ ಸಮಯದಲ್ಲಿ ಮಣ್ಣಲ್ಲಿ ಹೂತಿದ್ದ ಮಗು, ಬೆಳಗ್ಗೆ ಮರಕ್ಕೆ ಬಟ್ಟೆಯಿಂದ ಕಟ್ಟಿದ ಜೋಕಾಲಿಯಲ್ಲಿ ಮಲಗಿದ ಸ್ಥಿತಿಯಲ್ಲಿ ಪ್ರತ್ಯಕ್ಷಗೊಂಡಿದೆ. ಮಣ್ಣಲ್ಲಿ ಹೂತಿದ್ದ ಮಗು ಬೆಳಗ್ಗೆ ಮರದಲ್ಲಿ ಕಂಡು ಆಶ್ಚರ್ಯಕ್ಕೆ ಒಳಗಾದ ಸ್ಥಳೀಯರು, ಮತ್ತೆ ಅದೇ ಸ್ಥಳದಲ್ಲಿ ಮತ್ತೆ ಅಂತ್ಯಸಂಸ್ಕಾರ ನೆರವೇರಿಸಿದ್ದಾರೆ.

ಮಾಟ ಮಂತ್ರ ಮಾಡುವ ಮಾಂತ್ರಿಕರು ಮಗುವನ್ನು ಮೇಲೆ ತೆಗೆದಿರಬಹುದು ಎಂದು ಕೆಲವರು ಹೇಳಿದರೆ, ಮಗುವಿನ ಮೇಲಿನ ಆಭರಣಗಳು ದೋಚುವ ಉದ್ದೇಶದಿಂದ ಕಿಡಿಗೆಡಿಗಳು ಈ ಕೃತ್ಯ ಎಸಗಿರಬಹುದು ಎಂದು ಕೆಲವರು ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿ | Drown In Water: ಭೀಕರ ದುರಂತ; ನಾಲ್ವರು ಮಕ್ಕಳು ಸೇರಿ ಐವರು ನೀರುಪಾಲು

ಚನ್ನರಾಯಪಟ್ಟಣದಲ್ಲಿ ಭೀಕರ ಅಪಘಾತ; ಬಸ್-ಕಾರು ಡಿಕ್ಕಿಯಾಗಿ ಇಬ್ಬರ ದುರ್ಮರಣ

Road Accident

ಹಾಸನ: ಕೆ‌ಎಸ್‌ಆರ್‌ಟಿಸಿ ಬಸ್ ಹಾಗೂ ಕಾರು ಮುಖಾಮುಖಿ ಡಿಕ್ಕಿಯಾಗಿ (Road Accident) ಸ್ಥಳದಲ್ಲೇ ಇಬ್ಬರು ದುರ್ಮರಣ ಹೊಂದಿರುವ ಘಟನೆ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಊಪಿನಹಳ್ಳಿ ಗೇಟ್ ಬಳಿ ಭಾನುವಾರ ನಡೆದಿದೆ. ಮಡಬ ಗ್ರಾಮದ ಮಂಜುನಾಥ್ (26) ಮೃತ ದುರ್ದೈವಿ, ಮತ್ತೋಬ್ಬರ ಗುರುತು ಪತ್ತೆಯಾಗಿಲ್ಲ.

ಚನ್ನರಾಯಪಟ್ಟಣದ‌ ಕಡೆಗೆ ಬರುತ್ತಿದ್ದ ಕಾರು ಹಾಗೂ ಶಿವಮೊಗ್ಗದ ಕಡೆಗೆ ತೆರಳುತ್ತಿದ್ದ KA-11-F-0511 ನಂಬರ್‌ನ ಸಾರಿಗೆ ಬಸ್ ಡಿಕ್ಕಿಯಾಗಿದ್ದು, ಡಿಕ್ಕಿ ರಭಸಕ್ಕೆ ಬಸ್ಸಿನಡಿ ಕಾರು ನುಗ್ಗಿದೆ. ಕಾರನ್ನು ಹೊರಗೆಳೆದು ಮೃತದೇಹಗಳನ್ನು ಹೊರ ತೆಗೆಯಲು ಪೊಲೀಸರು ಹರಸಾಹಸಪಡುತ್ತಿದ್ದಾರೆ. ಅಪಘಾತದಿಂದ ಕಾರಿನಲ್ಲಿದ್ದ ಇಬ್ಬರ ಮೃತದೇಹಗಳು ನಜ್ಜುಗುಜ್ಜಾಗಿವೆ.

ಈಜಲು ತೆರಳಿದ್ದ ಯುವಕ ನೀರು ಪಾಲು

ಕೊಡಗು: ಕೊಡಗಿನಲ್ಲಿ ಪ್ರವಾಸಿಗರ ಹುಚ್ಚಾಟ ಮುಂದುವರಿದಿದ್ದು, ನೀರಿನಲ್ಲಿ ಈಜಲು ಹೋಗಿ ಜೀವಕ್ಕೆ ಅಪಾಯ ತಂದುಕೊಳ್ಳುತ್ತಿದ್ದಾರೆ. ಜಿಲ್ಲೆಯ ಸುಂಟಿಕೊಪ್ಪ ಸಮೀಪದ ಹೇರೂರು ಗ್ರಾಮದಲ್ಲಿ ಈಜಲು ತೆರಳಿದ್ದ ಯುವಕ ನೀರು ಪಾಲಾಗಿದ್ದು, ಯುವಕನಿಗಾಗಿ ಮುಂದುವರೆದ ಶೋಧಕಾರ್ಯ ನಡೆಯುತ್ತಿದೆ.

Google Map: ತಪ್ಪು ದಾರಿ ತೋರಿಸಿದ ಗೂಗಲ್‌ ಮ್ಯಾಪ್‌; ನದಿಗೆ ಬಿದ್ದ ಕಾರು!

ಮೈಸೂರು ಮೂಲದ ಶಶಿ (30) ನೀರುಪಾಲಾದ ಯುವಕ. ಮೈಸೂರಿನಿಂದ ಕೊಡಗಿಗೆ ಪ್ರವಾಸಕ್ಕೆ ಯುವಕ-ಯುವತಿಯರ ತಂಡ ಬಂದಿತ್ತು. ಕುಶಾಲನಗರ ತಾಲ್ಲೂಕಿನ ಹೇರೂರು ಗ್ರಾಮದ ಬಳಿ ಈಜಲು ಹೋಗಿ ಯುವಕನೊಬ್ಬ ನೀರುಪಾಲಾಗಿದ್ದಾನೆ. ಸ್ಥಳಕ್ಕೆ ಸುಂಟಿಕೊಪ್ಪ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಪೊಲೀಸರು, ಸ್ಥಳೀಯರು ಹಾಗೂ ಅಗ್ನಿಶಾಮ‌ಕ ಸಿಬ್ಬಂದಿಯಿಂದ ಯುವಕನಿಗಾಗಿ ಶೋಧ ಕಾರ್ಯ ನಡೆಯುತ್ತಿದೆ.

Continue Reading

ಕರ್ನಾಟಕ

Road Accident: ಚನ್ನರಾಯಪಟ್ಟಣದಲ್ಲಿ ಭೀಕರ ಅಪಘಾತ; ಬಸ್-ಕಾರು ಡಿಕ್ಕಿಯಾಗಿ ಇಬ್ಬರ ದುರ್ಮರಣ

Road Accident: ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಊಪಿನಹಳ್ಳಿ ಗೇಟ್ ಬಳಿ ಭಾನುವಾರ ಭೀಕರ ಅಪಘಾತ ನಡೆದಿದೆ. ಅಪಘಾತದಿಂದ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

VISTARANEWS.COM


on

Road Accident
Koo

ಹಾಸನ: ಕೆ‌ಎಸ್‌ಆರ್‌ಟಿಸಿ ಬಸ್ ಹಾಗೂ ಕಾರು ಮುಖಾಮುಖಿ ಡಿಕ್ಕಿಯಾಗಿ (Road Accident) ಸ್ಥಳದಲ್ಲೇ ಇಬ್ಬರು ದುರ್ಮರಣ ಹೊಂದಿರುವ ಘಟನೆ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಊಪಿನಹಳ್ಳಿ ಗೇಟ್ ಬಳಿ ಭಾನುವಾರ ನಡೆದಿದೆ. ಮಡಬ ಗ್ರಾಮದ ಮಂಜುನಾಥ್ (26) ಮೃತ ದುರ್ದೈವಿ, ಮತ್ತೋಬ್ಬರ ಗುರುತು ಪತ್ತೆಯಾಗಿಲ್ಲ.

ಚನ್ನರಾಯಪಟ್ಟಣದ‌ ಕಡೆಗೆ ಬರುತ್ತಿದ್ದ ಕಾರು ಹಾಗೂ ಶಿವಮೊಗ್ಗದ ಕಡೆಗೆ ತೆರಳುತ್ತಿದ್ದ KA-11-F-0511 ನಂಬರ್‌ನ ಸಾರಿಗೆ ಬಸ್ ಡಿಕ್ಕಿಯಾಗಿದ್ದು, ಡಿಕ್ಕಿ ರಭಸಕ್ಕೆ ಬಸ್ಸಿನಡಿ ಕಾರು ನುಗ್ಗಿದೆ. ಕಾರನ್ನು ಹೊರಗೆಳೆದು ಮೃತದೇಹಗಳನ್ನು ಹೊರ ತೆಗೆಯಲು ಪೊಲೀಸರು ಹರಸಾಹಸಪಡುತ್ತಿದ್ದಾರೆ. ಅಪಘಾತದಿಂದ ಕಾರಿನಲ್ಲಿದ್ದ ಇಬ್ಬರ ಮೃತದೇಹಗಳು ನಜ್ಜುಗುಜ್ಜಾಗಿವೆ.

ಈಜಲು ತೆರಳಿದ್ದ ಯುವಕ ನೀರು ಪಾಲು

ಕೊಡಗು: ಕೊಡಗಿನಲ್ಲಿ ಪ್ರವಾಸಿಗರ ಹುಚ್ಚಾಟ ಮುಂದುವರಿದಿದ್ದು, ನೀರಿನಲ್ಲಿ ಈಜಲು ಹೋಗಿ ಜೀವಕ್ಕೆ ಅಪಾಯ ತಂದುಕೊಳ್ಳುತ್ತಿದ್ದಾರೆ. ಜಿಲ್ಲೆಯ ಸುಂಟಿಕೊಪ್ಪ ಸಮೀಪದ ಹೇರೂರು ಗ್ರಾಮದಲ್ಲಿ ಈಜಲು ತೆರಳಿದ್ದ ಯುವಕ ನೀರು ಪಾಲಾಗಿದ್ದು, ಯುವಕನಿಗಾಗಿ ಮುಂದುವರೆದ ಶೋಧಕಾರ್ಯ ನಡೆಯುತ್ತಿದೆ.

ಮೈಸೂರು ಮೂಲದ ಶಶಿ (30) ನೀರುಪಾಲಾದ ಯುವಕ. ಮೈಸೂರಿನಿಂದ ಕೊಡಗಿಗೆ ಪ್ರವಾಸಕ್ಕೆ ಯುವಕ-ಯುವತಿಯರ ತಂಡ ಬಂದಿತ್ತು. ಕುಶಾಲನಗರ ತಾಲ್ಲೂಕಿನ ಹೇರೂರು ಗ್ರಾಮದ ಬಳಿ ಈಜಲು ಹೋಗಿ ಯುವಕನೊಬ್ಬ ನೀರುಪಾಲಾಗಿದ್ದಾನೆ. ಸ್ಥಳಕ್ಕೆ ಸುಂಟಿಕೊಪ್ಪ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಪೊಲೀಸರು, ಸ್ಥಳೀಯರು ಹಾಗೂ ಅಗ್ನಿಶಾಮ‌ಕ ಸಿಬ್ಬಂದಿಯಿಂದ ಯುವಕನಿಗಾಗಿ ಶೋಧ ಕಾರ್ಯ ನಡೆಯುತ್ತಿದೆ.

ಬೈಕ್‌ಗೆ ಟಾಟಾ ಏಸ್‌ ಡಿಕ್ಕಿ; ಮಗನ ಕಣ್ಣೆದುರೇ ತಾಯಿ ಸಾವು

Road Accident

ಬೆಳಗಾವಿ: ಬೈಕ್‌ಗೆ ಟಾಟಾ ಏಸ್ ಡಿಕ್ಕಿ ಹೊಡೆದ (Road Accident) ಪರಿಣಾಮ ಮಹಿಳೆಯೊಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಚಿಂಚಿಣಿ ಟೋಲ್ ಬಳಿ ಘಟನೆ ನಡೆದಿದೆ. ನಿಪ್ಪಾಣಿ ಮಾಹಾಲಿಂಗಪುರ ರಾಜ್ಯ ಹೆದ್ದಾರಿಯಲ್ಲಿ ಟಾಟಾ ಏಸ್ ವಾಹನವೊಂದು ಬೈಕ್‌ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ರಭಸಕ್ಕೆ ಬೈಕ್‌ನಲ್ಲಿದ್ದ ಮಹಿಳೆ ಸ್ಥಳದಲ್ಲೇ ಮೃತಪಟ್ಟರೆ, ಯುವಕನೊಬ್ಬ ಗಂಭೀರ ಗಾಯಗೊಂಡಿದ್ದಾರೆ.

ಅಪಘಾತವಾಗುತ್ತಿದ್ದಂತೆ ಚಾಲಕ ಟಾಟಾ ಏಸ್ ವಾಹನದೊಂದಿಗೆ ಪರಾರಿ ಆಗಿದ್ದಾನೆ. ಅಪಘಾತದಲ್ಲಿ ಮಹಾದೇವಿ ಶಿರಗುಪ್ಪಿ (೫೪) ಮೃತಪಟ್ಟರೆ, ಮಗ ಮಹಾಂತೇಶ ಶಿರಗುಪ್ಪಿ (೨೯) ಗಂಭೀರ ಗಾಯಗೊಂಡಿದ್ದಾರೆ. ಸಿಸಿಟಿವಿಯಲ್ಲಿ ವಾಹನ ವಿಡಿಯೊ ಆಧರಿಸಿದ ಚಿಕ್ಕೋಡಿ ಪೊಲೀಸರು ವಾಹನಕ್ಕೆ ಹುಡುಕಾಟ ನಡೆಸಿದ್ದಾರೆ. ತಾಯಿ ಮಗ ಬೈಕ್‌ನಲ್ಲಿ ಬರುತ್ತಿದ್ದಾಗ ಈ ಅಪಘಾತ ಸಂಭವಿಸಿದೆ.

ಸ್ಥಳಕ್ಕೆ ಚಿಕ್ಕೋಡಿ ಸಿಪಿಐ ಮತ್ತು ಸಂಚಾರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಚಿಕ್ಕೋಡಿ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪರಾರಿ ಆಗಿರುವ ಚಾಲಕನಿಗಾಗಿ ಹುಡುಕಾಟ ನಡೆಸಿದ್ದಾರೆ.

Continue Reading
Advertisement
Healthy Foods For Kidney
ಆರೋಗ್ಯ5 mins ago

Healthy Foods For Kidney: ನಮ್ಮ ಕಿಡ್ನಿ ಆರೋಗ್ಯವಾಗಿರಲು ಈ ಆಹಾರ ಸೇವನೆ ಸೂಕ್ತ

bengal assault case
ಕ್ರೈಂ20 mins ago

Assault Case: ಜೋಡಿಗೆ ಥಳಿತ; ʼಇದು ಮುಸ್ಲಿಂ ರಾಷ್ಟ್ರ…ʼ ಎಂದ ತೃಣಮೂಲ ಶಾಸಕ

karnataka Weather Forecast
ಮಳೆ2 hours ago

Karnataka Weather : ಸಾಧಾರಣದಿಂದ ಭಾರಿ ಮಳೆ ಸಾಧ್ಯತೆ; ಕರಾವಳಿ-ಮಲೆನಾಡಿಗೆ ಎಚ್ಚರಿಕೆ

Vastu Tips
ಧಾರ್ಮಿಕ2 hours ago

Vastu Tips: ಮನೆಯ ದ್ವಾರದಲ್ಲಿ ಗಣೇಶನ ವಿಗ್ರಹ ಇಡುವುದು ಸರಿಯೇ?

Bengaluru-Mysuru highway
ಕರ್ನಾಟಕ3 hours ago

Bangalore–Mysore Expressway : ಇಂದಿನಿಂದ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಸ್ಮಾರ್ಟ್‌ ಟ್ರಾಫಿಕ್‌ ಸಿಸ್ಟಂ

New criminal law
ಪ್ರಮುಖ ಸುದ್ದಿ3 hours ago

New Criminal Laws : ಹೊಸ ಕ್ರಿಮಿನಲ್ ಕಾನೂನು ಇಂದಿನಿಂದ ಜಾರಿ; ಏನು ಬದಲಾವಣೆ? ಕಂಪ್ಲೀಟ್ ಡೀಟೆಲ್ಸ್​ ಇಲ್ಲಿದೆ!

dina Bhavishya
ಭವಿಷ್ಯ3 hours ago

Dina Bhavishya : ಯಾರನ್ನೂ ನಂಬಿ ಈ ರಾಶಿಯವರು ಹೂಡಿಕೆ ವ್ಯವಹಾರದಲ್ಲಿ ತೊಡಗಬೇಡಿ

Rain Tragedy
ಪ್ರಮುಖ ಸುದ್ದಿ9 hours ago

Rain Tragedy: ಪ್ರವಾಸಿಗರ ಕಣ್ಣಮುಂದೆಯೇ ಜಲಪಾತದಲ್ಲಿ ಕೊಚ್ಚಿ ಹೋದ ಒಂದೇ ಕುಟುಂಬದ 7 ಮಂದಿ; ಇಲ್ಲಿದೆ ವಿಡಿಯೊ

T20 World Cup 2024
ಪ್ರಮುಖ ಸುದ್ದಿ9 hours ago

T20 World Cup 2024 : ವೆಸ್ಟ್​ ಇಂಡೀಸ್​ನಲ್ಲಿ ಅಪಾಯಕಾರಿ ಚಂಡಮಾರುತದಲ್ಲಿ ಸಿಲುಕಿಕೊಂಡ ಚಾಂಪಿಯನ್ ಭಾರತ ತಂಡ

Rohit Sharma
ಪ್ರಮುಖ ಸುದ್ದಿ10 hours ago

Rohit Sharma : ತಲೆ ಪಕ್ಕದಲ್ಲೇ ಟ್ರೋಫಿ ಇಟ್ಟುಕೊಂಡು ನಿದ್ದೆ ಮಾಡಿದ ರೋಹಿತ್ ಶರ್ಮಾ

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ7 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Weather Forecast
ಮಳೆ14 hours ago

Karnataka Weather : ಬೆಂಗಳೂರು, ಕಲಬುರಗಿ ಸೇರಿದಂತೆ ಹಲವೆಡೆ ವರ್ಷಧಾರೆ; ನಾಳೆಗೂ ಮಳೆ ಅಲರ್ಟ್‌

Actor Darshan
ಬೆಂಗಳೂರು19 hours ago

Actor Darshan : ಖೈದಿ ನಂ.6106ಕ್ಕೆ ಡಿಮ್ಯಾಂಡ್‌! ದರ್ಶನ್‌ ಫ್ಯಾನ್ಸ್‌ಗೆ ಕಾನೂನು ಕಂಟಕ, ರೂಲ್ಸ್‌ ಬ್ರೇಕ್‌ ಮಾಡಿದ್ರೆ ಬೀಳುತ್ತೆ ಕೇಸ್‌‌!

karnataka weather Forecast
ಮಳೆ2 days ago

Karnataka Weather : ಮಳೆಗೆ ಸ್ಕಿಡ್‌ ಆಗಿ ಹೇಮಾವತಿ ನದಿಗೆ ಹಾರಿದ ಕಾರು; ಕರಾವಳಿಗೆ ಎಚ್ಚರಿಕೆ ಕೊಟ್ಟ ತಜ್ಞರು

karnataka Rain
ಮಳೆ2 days ago

Karnataka Rain: ಭಾರಿ ಮಳೆಗೆ ಮನೆಗಳ ಗೋಡೆ ಕುಸಿತ; ಕೂದಲೆಳೆ ಅಂತರದಲ್ಲಿ ವೃದ್ಧ ಪಾರು

karnataka Weather Forecast
ಮಳೆ3 days ago

Karnataka Weather : ಅಬ್ಬಬ್ಬಾ.. ಮುಲ್ಕಿಯಲ್ಲಿ 30 ಸೆಂ.ಮೀ ಮಳೆ ದಾಖಲು; ವಾರಾಂತ್ಯದಲ್ಲೂ ಭಾರಿ ವರ್ಷಧಾರೆ

karnataka Rain
ಮಳೆ3 days ago

Karnataka Rain : ಭಾರಿ ಮಳೆಗೆ ಪಾತಾಳ ಸೇರಿದ ಬಾವಿ; ಅಲೆಗಳ ಹೊಡೆತಕ್ಕೆ ಸಮುದ್ರಪಾಲಾದ ಮನೆ

Karnataka Weather Forecast
ಮಳೆ4 days ago

Karnataka Weather : ಭಾರಿ ಮಳೆ ಹಿನ್ನೆಲೆ ದಕ್ಷಿಣ ಕನ್ನಡಕ್ಕೆ ರೆಡ್ ಅಲರ್ಟ್; ಶುಕ್ರವಾರವೂ ಶಾಲೆಗಳಿಗೆ ರಜೆ ಘೋಷಣೆ

karnataka Weather Forecast
ಮಳೆ4 days ago

Karnataka Weather : ಭಾರಿ ಮಳೆಗೆ ಸೇತುವೆಯಿಂದ ಹೊಳೆಗೆ ಬಿದ್ದ ಕಾರು; ಮರ ಹಿಡಿದು ಪ್ರಾಣ ಉಳಿಸಿಕೊಂಡ ಸವಾರರು

Heart Attack
ಕೊಡಗು4 days ago

Heart Attack : ಕೊಡಗಿನಲ್ಲಿ ಹೃದಯಾಘಾತಕ್ಕೆ ಯುವತಿ ಬಲಿ; ಹೆಚ್ಚಾಯ್ತು ಅಲ್ಪಾಯುಷ್ಯದ ಭಯ

karnataka Rains Effected
ಮಳೆ4 days ago

Karnataka Rain : ಧಾರಾಕಾರ ಮಳೆಗೆ ಸಡಿಲಗೊಂಡ ಗುಡ್ಡಗಳು; ಧರೆ ಕುಸಿದು ಮಣ್ಣಿನಡಿ ಸಿಲುಕಿದ ಇಬ್ಬರು ಮಕ್ಕಳು

ಟ್ರೆಂಡಿಂಗ್‌